ಒಟ್ಟು 446 ಕಡೆಗಳಲ್ಲಿ , 66 ದಾಸರು , 396 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣದಿ ಬಂದು ನಿನ್ನ ಚರಣ ಕಮಲವೆನ್ನ ಶಿರದ ಮೇಲಿಟ್ಟು ನೀ ಪೊರಿಯೊ ಕೃಪಾರಸ ಸುರಿಯೋ ಗರುಡಧ್ವಜ ನೀನು ಸ್ಮರಮಣ ನಿನ್ನ ಭಕುತರ ಸುರಧೇನೆಂದು ಕರೆವರು ನಿನ್ನನು ಪ ಸರಸಿಯೊಳ್ಕರಿರಾಜ ಭರದಿಂದ ತನ್ನವುದ್ಧರಿಸೆಂದು ಮೊರೆಯಿಡೆ ಪೊರೆದೆಯಲ್ಲೊ ಶಿರಿಯೊಳುನುಡಿಯದೋ ಶರಣಾಗತರನ್ನು ಪೊರೆವೆನೆಂಬ ನಿಜ ಬಿರಿದನು ಮೆರಿಸಿದಿ1 ಆಗಮವಂದಿತ ನಾಗಭೂಷಣ ತಾತ ಮೇಘವಾಹನ ಸುತನ ಬ್ಯಾಗ ರಕ್ಷಿಸಿದಿ ಜಾಗುಮಾಡದೆ ಎನ್ನ- ದಾಗಲು ರಕ್ಷಿಸೆಂದು ಬಾಗಿ ಬೇಡುವೆನು 2 ಕಾವನು ನೀನಲ್ಲದೆ ಯಾವ ದೇವರನು ನಾ ಆವಲ್ಯು ಕಾಣೆನು ಭಾವಜಜನಕನೆ ಶ್ರೀವಾಸುದೇವನ ಗೋವೃಂದ ರಕ್ಷಕನೆ ಪತಿ ಶ್ರೀವತ್ಸಾಂಕಿತನೆ 3
--------------
ಸಿರಿವತ್ಸಾಂಕಿತರು
ಕರುಣವೇಕೆ ಬಾರದಯ್ಯಾ ಕರಿವರದನೆ ಪ ಶರಣ ರಕ್ಷಕನೆಂದು ನಿನ್ನ ಮೊರೆಯ ಹೊಕ್ಕೆನೊ ಸರಸಿಜಾಕ್ಷ ಮರಣ ಕಾಲದಿ ಮಗನ ಕರೆದ ಪುರುಷ ಪುಣ್ಯ ಶರಧಿಯೇನೊ ಅ.ಪ. ತುತಿಸಸಲಿಲ್ಲವೆಂದು ಎನ್ನ ಹಿತವಗೈಯದೆ ಜರಿಪರೇನೊ ತುತಿಸಲಾಪವೇ ಶ್ರುತಿಗಳನ್ನು ಮಿತಿಗೆ ಸಿಲ್ಕದ ನಿನ್ನ ಮಹಿಮೆ 1 ಏನು ಸಾಧನವವÀ ಮಾಡಲಿಲ್ಲವೆಂದು ಕೈಬಿಡುವೆಯೇನೊ ನೀನು ದಯಮಾಡಿದಲ್ಲದೆ ಏನು ಸಾಧನ ಮಾಡಲಾಪೆನೊ 2 ಪಾಪಪುಣ್ಯ ಕರ್ಮಗಳಿಗೆ ನೀನೆ ಪ್ರೇರಕನಲ್ಲವೇನೊ ಶ್ರೀ ಪರಾತ್ಪರ ನೀ ಸ್ವತಂತ್ರ ನಾ ಪರಾಧೀನನಲ್ಲವೆ 3 ಪುಣ್ಯಗೈದವರಲಿ ಕರುಣವನು ಗೈವುದೇನು ಮಹಿಮೆ ಘನ್ನ ಪಾಪಿಗಳಲಿ ನೀ ಪ್ರಸನ್ನನಾಗಲು ಖ್ಯಾತಿಯಲ್ಲವೆ 4 ಪತಿತಪಾವನ ದೀನರಕ್ಷಕ ಶ್ರಿತ ಜನಮಂದಾರನೆಂಬ ವಿತತ ಬಿರುದು ಬರಿದೆ ಪೇಳೋ ಗತಿ ಪ್ರದಾಯಕನಲ್ಲವೇನೊ 5 ದುರಿತ ರಾಶಿ ನೋಡಿ ಬೆದರಿ ನಿಂತೆಯೇನೊ ನೀನು ದುರಿತ ದೂರನಲ್ಲವೇ ನಿನ್ನ ಸ್ಮರಣೆ ನೋಡದ ದುರಿತವಿಹುದಿ 6 ತರಳತನದ ಸಲಿಗೆಯಿಂದ ಪರಿಪರಿಯಲ್ಲಿ ನುಡಿದೆನಯ್ಯಾ ಪರಮ ತತ್ವವರಿಯೆ ನಾನು ಪೊರೆಯೊ ಎನ್ನ ಕರಿಗೀರೀಶ 7
--------------
ವರಾವಾಣಿರಾಮರಾಯದಾಸರು
ಕರುಣಿಸು ಕಮಲೇಶ ಸರ್ವೇಶ ಕರುಣಿಸು ಕಮಲೇಶ ಪ. ಶರಣಾಗತ ರಕ್ಷಕ ವೆಂಕಟೇಶ ನಿರುತದಿ ಪ್ರಾರ್ಥಿಪೆ ಲಕ್ಷ್ಮೀಶ ಅ.ಪ. ವೇದ ಶಾಸ್ತ್ರ ಪುರಾಣವನರಿಯೆ ಆದಿ ಮೂರುತಿ ಪ್ರಹ್ಲಾದವರದನೆ ಆದರದಲಿ ನಿನ್ನ ಸ್ತುತಿಸುವೆ ದೇವ ಮೋದದಿಂದಲಿ ಕಾಯೋ ಪಾದಸೇವಕರಾ 1 ಜಪವ ನಾನರಿಯೆ ತಪವ ನಾನರಿಯೆ ಉಪವಾಸ ವ್ರತಮೊದಲರಿಯೆ ದೇವಾ ಅಪರಿಮಿತ ಪಾಪ ಗಳಿಶಿಹೆನೋ ಸುಪವಿತ್ರನನು ಮಾಡೊ ಅಪಾರ ಮಹಿಮಾ 2 ನಿನ್ನ ನಂಬಿಹೆನೊ ಅನ್ಯರನರಿಯೆನೊ ಎನ್ನಪರಾಧವ ಮನ್ನಿಸೊ ದೊರೆಯೆ ಚೆನ್ನಿಗ ಶ್ರೀ ಶ್ರೀನಿವಾಸನ ಸ್ತುತಿಪೆನೊ ಇನ್ನು ಸಂಶಯವ್ಯಾಕೊ ಪನ್ನಗಾದ್ರಿವಾಸ 3
--------------
ಸರಸ್ವತಿ ಬಾಯಿ
ಕರುಣಿಸೊ ಕರುಣಿಸೊ ಗುರುವೆಂಕಟೇಶ ಕರುಣಿಸೆನ್ನ ನೀ ನೋಡೊ ಪರಮ ಪುರುಷ ಧ್ರುವ ಬಿನ್ನಹವ ಪಾಲಿಸೊ ಚಿನುಮಯ ರೂಪ ಉನ್ನತ ಮಹಿಮ ನೀ ಘನ್ನ ಗುರು ಕೃಪ 1 ಅನಾಥ ಬಂಧು ನೀ ಶರಣ ರಕ್ಷಕ ಅನಂತ ಕೋಟಿ ಬ್ರಹ್ಮಾಂಡ ನಾಯಕ 2 ವಾಸುದೇವ ಚಿದ್ರೂಪ ದೇಶಿಕರದೇವ ಭಾಸಿ ಪಾಲಿಪ 3 ವಂದಿತ ತ್ರೈಲೋಕ್ಯ ವೇದಾಂತ ಮಹಿಮ ಇಂದಿರಾಪತಿ ಘನಗುರುಬ್ರಹ್ಮ 4 ಶ್ರೀನಾಥ ನೀನಲ್ಲದೆ ನನಗಾರು ಇಲ್ಲ ನೀನೆ ಸಕಲಪೂರ್ಣ ಭಕ್ತವತ್ಸಲ 5 ಮತಿಹೀನನವಗುಣ ನೋಡದಿರೆನ್ನ ಕ್ಷಿತಿಯೊಳು ಸದ್ಗೈಸೊ ಪತಿತಪಾವನ 6 ದೀನನಾಥ ನೀ ಬಂದು ಮನದೊಳು ನಿಂದು ಮನ್ನಿಸಿ ದಯಬೀರೊ ಘನಕೃಪಾಸಿಂಧು7 ವಿಶ್ವವ್ಯಾಪಕ ಸಾಧುಹೃದಯನಿವಾಸ ದಾಸ ಮಹಿಪತಿ ಪ್ರಾಣ ಹೊರಿಯೊ ಪ್ರಾಣೇಶ 8
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕರುಣಿಸೊ ಗುರು ತಾರಿಸೊ ಶರಣರಕ್ಷಕ ನಮ್ಮ ಕರುಣಾಕರ ದೇವ ಧ್ರುವ ¨Àವಜನ್ಮದಲಿ ಬಂದು ಬಹುಬಳಲಿದೆ ನಾನು ಅವಿದ್ಯದಾಟಕೆ ಐವರು ಕೂಡಿ ತಾ ಜೀವನ ಮುಕ್ತಿಗಾಣಿಸಗೊಡದಿಹರು 1 ಮೂರೊಂದು ಮಂದಿಯು ಸೇರಗೊಡದೆ ಪಥ ಆರುಮಂದಿಯ ಕೂಡಿ ಕಾಡುತಲಿ ಆರು ಮತ್ತೆರಡುಮಂಡೆಯ ಕಾವಲಿಗೆ ನಾನು ಆರೆನಯ್ಯ ಶ್ರೀಗುರುಶಿರೋಮಣಿಯೆ 2 ಹತ್ತು ಹೊಳಿಯು ಸುತ್ತ ಅಡ್ಡಗಟ್ಟಿಹುದು ಪಥ ನಡಲೀಸದೆ ಇಂತಿವ ತಾರಿಸಿ ಮೂಢsÀಮಹಿಪತಿಯ ಸಂತತ ಸದ್ಗತಿಸುಖ ಈವುದೆನಗಿನ್ನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕರುಣಿಸೋ ಗುರು ತಾರಿಸೋ ಶರಣರಕ್ಷಕ ನಮ್ಮ ಕರುಣಾಕರ ದೇವ ಧ್ರುವ ಭವ ಜನ್ಮದಲಿ ಬಂದು ಬಹು ಬಳಲಿದೆ ನಾನು ಮೂವಿಧ ಬಲೆಯಲಿ ಸಿಲುಕಿ ಜೀವನವು ಅವಿದ್ಯ ದಾಟಕ ಐವರು ಕೂಡಿ ತಾಂ ಜೀವನ ಮುಕ್ತಿಗಾಣಿಸಗುಡದಿಹರು 1 ಮೂರೊಂದು ಮಂದಿಯ ಸೇರುಗುಡದೆ ಪಥ ಅರುಮಂದಿಯು ಕೂಡಿ ಕಾಡುತಲಿ ಆರುಮತ್ಯೆರಡು ಮಂದಿಯ ಕಾವಲಿಗೆ ನಾನು ಆರಯ್ಯ ಶ್ರೀಗುರು ಶಿರೋಮಣಿಯ 2 ಹತ್ತು ಹೊಳೆಯ ಸುತ್ತ ಅಡ್ಡಗಟ್ಟಿಹುದು ಪಥ ನಡಲೀಸದೆ ಇಂತವತಾರಿಸಿ ಮೂಢ ಮಹಿಪತಿಯ ಸಂತತಸದ್ಗತಿ ಸುಖ ಈವ ಘನಗಿನ್ನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಣದೆ ನಿಲ್ಲಲಾರೆ, ಕಮನೀಯ ಮೂರುತಿಯಪ್ರಾಣೇಶನ ತೋರೆ ಗಿಣಿಯೆ ಪ ಮಾಣಿಕ್ಯ ಪದಕವ ಮನ್ನಿಸಿ ನಿನಗೀವೆಜಾಣೆ ಕೃಷ್ಣನ ತೋರೆ ಗಿಣಿಯೆ ಅ.ಪ. ಮಕರಕುಂಡಲಧರನ ಮಕರಧ್ವಜನ ಪಿತನಮಕುಟ ಭೂಷಣನ ತೋರೆ ಗಿಣಿಯೆಮಕರಾಕ್ಷ ಸಂಹರನ ಮಕರಾರಿ ರಕ್ಷಕನಮಕರ ಶಿಕ್ಷಕನ ತೋರೆ ಗಿಣಿಯೆ 1 ಇಂದು ರವಿಲೋಚನನಇಂದು ನೀ ಕರೆತಾರೆ ಗಿಣಿಯೆಇಂದುಶೇಖರನುತನ ಇಂದಿರೆಯರಸನತಂದು ತೋರೆ ಮುದ್ದುಗಿಣಿಯೆ2 ಒಂದು ನಿಮಿಷವೊಂದು ಯುಗವಾಗಿ ತೋರಿತೆಸೌಂದರ್ಯನ ತೋರೆ ಗಿಣಿಯೆಮಂದಮಾರುತ ಸೋಕೆ ಮರುಳುಗೊಂಡೆನೆ ಎನ್ನಮಂದಿರಕೆ ಕರೆತಾರೆ ಗಿಣಿಯೆ 3 ಕಾಯಜನ ಬಾಣದಲಿ ಕಾಯವೆಲ್ಲವು ಬಹಳಘಾಯವಾಯಿತು ನೋಡೆ ಗಿಣಿಯೆಮಾಯೆಗಳ ಮಾಡದೆ ಮಮತೆಯಿಂದಲಿ ಎನ್ನನಾಯಕನ ಕರೆತಾರೆ ಗಿಣಿಯೆ 4 ಪಂಕಜೋದ್ಭವ ಪಿತನ ಪಂಕಜನಯನನಪಂಕಜನಾಭನ ತೋರೆ ಗಿಣಿಯೆಪಂಕಜಾಕ್ಷ ಸಿರಿಕೃಷ್ಣನ ಪದಪದ್ಮಶಂಕೆಯಿಲ್ಲದೆ ತೋರೆ ಗಿಣಿಯೆ 5
--------------
ವ್ಯಾಸರಾಯರು
ಕಾಯಯ್ಯ ರಘುರಾಮ ದೀನಜನೋದ್ದಾರಿ ರಘುರಾಮ ಧ್ರುವ ಕೈವಲ್ಯಾವನ ಮೂರುತಿ ನೀನು ಕೇವಲ ಘನ ಅಪರಾಧಿಯುನಾನು ದೇವನೆ ಕರುಣಾಸಾಗರ ನೀನು 1 ಭಾವ ಭಕುತಿಕೀಲವ ನಾನರಿಯೆ ವಿವೇಕಾಮೃತ ನೀಡುವ ದೊರೆಯೆ ಅವಾಗ ವಿಷಯಾಸಕ್ತನು ಹರಿಯೆ ಕಾವ ದೈವ ನೀನೆ ಶ್ರೀ ಹರಿಯೆ 2 ಚರಣವೆ ಗತಿಯೆಂದಾತನ ತಂದೆ ತರಳನ ಕುಂದನಾರಿಸದಿರು ತಂದೆ ತರಳ ಮಹಿಪತಿ ಪ್ರಭು ನಮೋ ಎಂದೆ ಶರಣ ರಕ್ಷಕ ನೀನಿಹುದೆಂದೆ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಕರುಣಾಕರನೆ ನೀಯನ್ನಾ ಕಾಯೋ ಆನಾಥರಕ್ಷಕ ದಯಾಸಿಂಧೂ ಪ. ಕಾಯೊಯನ್ನನು ಕರವಿಡಿದು ಕೃಪೆಯಿಂದ ನೀಯನ್ನಾ ಕಾಯೊದೇವರದೇವ ಶ್ರೀ ವೆಂಕಟೇಶ್ವರನೆ ಕಾಯೊ ಅ.ಪ. ನೀನಲ್ಲದೆ ಅನ್ಯತ್ರ ತಾಯಿ ತಂದೆಗಳಿಲ್ಲಾ ನೀನಲ್ಲದೆ ಬಂಧುಬಳಗವೆನಗಿಲ್ಲಾ ನೀ ಯನ್ನ ಕಾಯೊ ಶ್ರೀ ವೆಂಕಟೇಶ್ವರನೆ 1 ತರುಳ ಕರಿಯಲು ಕಂಭದಿ ಬಂದು ಹಿರಣ್ಯಾಕ್ಷಕನ ಕರುಳ ತೆಗದು ವನಮಾಲೆ ಹಾಕಿ ನಿಂದೀ ನರಮೃಗರೂಪಿನಲಿ ಪ್ರಹ್ಲಾದಗೆ ವರವಿತ್ತೆ ನೀಯನ್ನ ಕಾಯೊ ಶ್ರೀ ವೆಂಕಟೇಶ್ವರನೆ 2 ಜಲದೊಳಗೆ ನೆಗಳೆಯು ಹಿಡಿದು ಎಳೆಯುತ್ತಿರೆ ಬಹುಬಾಧೆಬಡಿಸೆ ನಿಮ್ಮ ನೆನೆಯಲು ನಿಲ್ಲದೆ ಬಂದೊದಗಿನೆಗಳೆಯನು ಶೀಳ್ದು ಕರಿರಾಜಗೊಲಿದು ರಕ್ಷಿಸಿದೊ ಶ್ರೀ ವೆಂಕಟೇಶ್ವರನೆ 3 ದುರುಳದುಶ್ಯಾಸ ದ್ರೌಪತಿ ಸೀರೆಯನು ಸೆಳೆಯೆ ಹರಿಣಾಕ್ಷಿ ಸಭೆಯೊಳಗೆ ಕೃಷ್ಣಾಯೆಂದುವದರೆ ಪರಿಪರಿ ವಸ್ತ್ರವನು ಕೊಟ್ಟೆ ಅಭಿಮಾನವನು ಕಾಯ್ದೊ ದೇವರದೇವ ಶ್ರೀ ವೆಂಕಟೇಶ್ವರನೆ 4 ಶಂಖಚಕ್ರಧರ ನಿನ್ನ ಚರಣವನು ನಂಬಿದೆ ಪಕ್ಷಿವಾಹನಸ್ವಾಮಿ ಕರುಣಾನಿಧೆ ಹೆಳವನಕಟ್ಟೆಯೊಳು ನಿಂದು ಭಕ್ತರನ್ನೆಲ್ಲಾ ಕಾಯ್ದ ದೇವರದೇವ ಶ್ರೀ ವೆಂಕಟೇಶ್ವರನೆ 5
--------------
ಹೆಳವನಕಟ್ಟೆ ಗಿರಿಯಮ್ಮ
ಕಾಯೊ ಸುಗುಣ ಮಣಿಯೆ ಪ ಪ್ರೀಯ ಮುರಾರಿ ವಿನಾಯಕ ಸೋದರ ||ಅ|| ಅಘ ಪಾವನಮೂರ್ತಿ ಶರಣರ ರಕ್ಷಕ 1 ಕುಂದ ಕುಂದಕುಟ್ಮಲಪದನಾನಂದಿಧ್ವಜ ಸುತ ಸುಂದರ ಮೂರುತಿ | ಇಂದುವದನ ಮುನಿವೃಂದ ವಂದಿತ ಗುಹ 2 ಮಯೂರ ಧ್ವಜಾ | ಕ್ಲೇಶದಿ ನರಳುವ ದಾಸರ ರಕ್ಷ ಸ-ರ್ವೇಶಕರಜ ನಿರ್ದೋಷಿ ಸುಬ್ರಹ್ಮಣ್ಯ 3
--------------
ಬೆಳ್ಳೆ ದಾಸಪ್ಪಯ್ಯ
ಕಾಯೋ ದಯದಿಂದೆನ್ನ ಕಾರುಣ್ಯ ನಿಧಿಯೇ | ಯದು ನಾಯಕನೇ ದೇವ ದೇವಾ ಪ ಪುಷ್ಯರಾಗದಿ ನವರತ್ನ ಪದಕಧರ | ಘನಶ್ಯಾಮ ಉರಗಶಯನಾ | ಕಶ್ಯಪ ವಸಿಷ್ಠಾದಿ ಸ್ಮರಣೆ ಮಾಳ್ವವರಿಂಗೆ | ದೃಶ್ಯನಾಗಿಹ ಮುರಾರಿ ಶೌರಿ1 ನಂದಸುಕುಮಾರ ಸಿರಿನಾರಿಯ | ಸದ್ಬಕ್ತವೃಂದ ರಕ್ಷಕ ಭೂಧರಾ | ಇಂದಿರಾ ಭಾವನೆಯೂ ಪೂರಿತಿಕೇಳು | ಜಗವಂದ್ಯ ಮುಕುಂದ ಗರುಡರೂಢಾ2 ಚಕ್ರಕರ ಕಮಲಾಕ್ಷ ಚತುರಾಸ್ಯ ಜನಕ ಬಲಿ | ಚಕ್ರವರ್ತಿಗೆ ವರದನಾ | ಶಕ್ರನುತ ಮಹಿಪತಿ ಸ್ವಾಮಿ ಸುತ ಪ್ರೀಯಾ | ತ್ರಿವಿಕ್ರಮನೆ ಕೋಮಲಾಂಗಾ ರಂಗಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾರಣಾತ್ಮಕ ಭಕ್ತವತ್ಸಲ | ಪೊರೆವುದೆನ್ನನು || ಕರುಣಾರ್ಣವನೆ ಪ ಭವ | ಕಷ್ಟ ಕಳೆದು ಸಂ | ತುಷ್ಟಿ ಗೈಸೆನ್ನ 1 ಪಕ್ಷಿವಾಹನ | ಅಕ್ಷರೇಡ್ಯ ಸು | ಪಕ್ಷಪಾತಿಯ | ಲಕ್ಷ್ಮೀವಕ್ಷನೆ ||ಇಕ್ಷುಶರ ಪಿತ | ಲಕ್ಷಣಾಗ್ರಜ | ರಾಕ್ಷಸರ ಬಹು ಶಿಕ್ಷಕ | ಜಗ ರಕ್ಷಕ 2 ಭವ | ನೋವ ಕಳೆವುದು | ಶ್ರೀ ವರನೆ ಗುರು | ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ಕಾಲು ತೊಳೆದವನೊಬ್ಬ ತೊಳೆಸಿಕೊಂಡವನೊಬ್ಬ ಮೌಳಿ ಮೇಲಾಜಲವ ಸತತ ಧರಿಸಿದನೊಬ್ಬ ಪಾಲಿಸುವ ಪ್ರಭುವೊಬ್ಬ ಕೊಲುವ ತಳವಾರನೊಬ್ಬ ಮೂರ್ಲೋಕವರಿಯೆ ಪುಟ್ಟಿಸಿದ ಪಿತನೊಬ್ಬ ಆಲೋಚನೆಯ ಬಲ್ಲವಗೆ ಸಂಶಯ ಸಲ್ಲ ಮಾಲೆಯನು ಮಹಲಕ್ಷುಮಿ ಹಯವದನಗಿತ್ತಳಾಗಿ 1 ರಾವಣನ ಕೊಂದ ಪಾಪವ ಕಳೆಯಬೇಕೆಂದು ದೇವ ರಘುಪತಿ ಸದಾಶಿವನ ಪೂಜಿಸಿದ ಗಡಾ ಆ ವಿಧಿಯ ಒಂದು ತಲೆಯನು ಕಡಿದ ಮಾತ್ರದಿಂದ ಆವಾಗ ಕರದಲ್ಲಿ ಇಹ ಕಪಾಲವ ಕಾಣನೆ ದಾವಘದೊಳು ಪೊರಳುವನ ದಾವಾತ ಭಜಿಸುವನು ಜೀವರಿಗೆ ಉಳ್ಳಷ್ಟು ವಿವೇಕ ಹಯವದನಗಿಲ್ಲವೆ 2 ರಾಮಾಯಣದ ಕತೆಯು ಮಹಾಪುಣ್ಯ ಕಥೆಯು ಗಡಾ ರಾಮ ರಾವಣನ ಕೊಂದದ್ದು ಮಹಾಪಾಪ ಗಡಾ ಆ ಮನುಮುನಿಗಳೆಲ್ಲ ಪಾಪಕಂಗೀಕರಿಸಿದರೆ ಸ್ವಾಮಿಯು ಲಯದಿ ಬೊಮ್ಮನ ಮೊದಲು ಕೊಲಿಸದೆ ಧೀಮಂತ ಹಯವದನ ಕೊಂದ ಹಿರಣ್ಯಕ ಮುಖ್ಯ ತಾಮಸ ದಿತಿಜರು ಕಶ್ಯಪ ಋಷಿ ಸುತರಲ್ಲವೆ3 ಶ್ರುತಿಯಿವ ಕರ್ಮಣಾನೋಕನೀಯ ಎಂದು ತುತಿಸುತಿರೆ ನಿಮ್ಮ ನಿರ್ಗುಣ ಬೊಮ್ಮಗೆ ಕರ್ಮವುಂಟೆ ಕ್ಷಿತಿಯೊಳಗೆ ರಾವಣನ ವಧೆಯ ಮಾಡಿದ ಸೇತುಪತಿಯ ಪಾವನನೆನಲು ಅವನ ಕೊಂದವನ ಪತಿತಪಾವನನೆಂಬುದೆ ಕುಚಿತ್ತಯುಕುತಿಯು ಸತತ ಹಯವದನನೊಬ್ಬನೆ ಶುದ್ಧ ಕಾಣಿರೊ 4 ಒಂದು ಕಡೆಯಲಿ ವಿಭೀಷಣನ ಪ್ರತಿಷ್ಠಿಸಿದನು ಮ- ತ್ತೊಂದು ಕಡೆಯಲಿ ಸದಾಶಿವನ ಪೂಜಿಸಿದ ಇಂ- ತೆಂದು ಪುರಾಣಗಳು ಕೂಗುತಿವೆ ತ್ರಾಸಿನೊಳು ಹೊಂದಿಸಿ ಸಮನೆಂದು ತೂಗಿ ತೋರು ಮದದಲಿ ಸಂದೇಹ ಸಲ್ಲ ಹಯವದನ ರಘುಪತಿಗಿಬ್ಬರು ಸಂದ ಭಕುತರೆಂಬುದು ಸಲೆ ಸುಪ್ರಸಿದ್ಧ 5 ಸೇತುವೆಯ ಕಂಡ ನರರಿಗೆ ಬ್ರಹ್ಮಹತ್ಯಾದಿ ಪಾತಕವು ಬಿಡುವುದೆಂಬ ಶ್ರುತಿಯ ಮನ್ನಿಸಲು ಖ್ಯಾತ ಬೊಮ್ಮನ ತಲೆಯ ಕಡಿಯೆ ಕರದಲಿಕೊಟ್ಟ ತಾ- ಸುಕೃತ ಸೇತುಮುಖದಿಂದ ಸೀತೆಯರಸನು ಶಿವನ ನಿಲ್ಲಿಸಿ ಪ್ರತಿಷ್ಠಾಪಿಸಿದ ಜಗನ್ನಾಥ ಹಯವದನ ಭಕ್ತರಬಂಧು ಕಾಣಿರೊ 6 ರಾಮ ಶ್ರೀರಾಮರಾಮೇತಿ ರಮೆಯೆಂಬ ಆ ಮಹಾದೇವ ಭಗವದ್ಭಕ್ತನಲ್ಲವೆ ಸ್ವಾಮಿ ತನ್ನ ಭಕ್ತರÀನು ಪ್ರತಿಷ್ಠಿಸಿದ ನಿ- ಸ್ಸೀಮ ಕರುಣಾಂಬುಧಿ ಮಹಾಮಹಿಮನೆಂಬರು ಭ್ರಾಮಕದ ನುಡಿಗೆ ಮರುಳಾಗದಿರು ಹಯವದನ ರಾಮಚಂದ್ರನೆ ಕಾಶಿಯ ತಾರಕಬೊಮ್ಮ ಕಾಣಿರೊ 7 ಕಾಶಿಯಲಿ ರಾಮಮಂತ್ರೋಪದೇಶವ ಮಾಳ್ಪ ಈಶ ಜಾಣರ ಮತದಿ ಜಗಕೆ ಗುರುವೆಂತೆಂಬ ಆ ಶಿವನ ಮಂತ್ರದೇವತೆ ತಾರಕಬೊಮ್ಮಯೆನಿಪ ವಾಸುದೇವನೆ ಜಗಕೆ ಪರದೈವ ಕಾಣಿರೊ ಈ ಸುತತ್ವÀವ ಪೇಳ್ವ ಹರಗೆ ನಮ್ಮ ಹಯವದನ ಏಸುಮನ್ನಣೆ ಮಾಡಿದರುಚಿತ ಕಾಣಿರೊ 8 ಕರವ ಶಿರದ ಮೇಲೆ ಇರಿಸಬಂದ ಖಳಗಂಜಿ ಹರ ಸಕಲ ಸುರೇಶ್ವರರ ಅರಮನೆಗಳಿಗೆ ಪೋಗಿ ಪರಿಹರವ ಕಾಣದೆ ನಮ್ಮ ಸಿರಿವರನ ಮರೆಹೊಗಲು ಪÀರಿಣಾಮವನು ಪೊರೆದ ಗಡಾ ಶರಣರಕ್ಷಕನೆಂಬ ಬಿರುದುಳ್ಳ ಹಯವದನ ಹರಿಯಲ್ಲದೆ ಪಿರಿದೊಂದು ಪರದೈವವಿಲ್ಲವಯ್ಯ 9 ರೋಮಕೋಟಿಲಿಂಗನೆನಿಸಿದ ಹನುಮನೊಂದು ರೋಮಕೆ ಕೋಟಿ ಶಿವರ ಮಾಡುವ ಶಕ್ತ ಕಾಣಿರೊ ಆ ಮಹಾತ್ಮನ ತನ್ನ ಆಳುಮಾಡಿ ನಡೆಸಿಕೊಂಡ ರಾಮಚಂದ್ರನೆ ಜಗಕ್ಕೆ ಪರದೈವ ಕಾಣಿರೊ ಸ್ವಾಮಿ ಹಯವದನ ವೇದವ ತಂದು ಕಮಲಜನ ಕಾಮಿತವನಿತ್ತನಾಗಿ ಅವನೆ ಜಗದೊಡೆಯ 10 ನೂರು ರುದ್ರರು ಪೇಳೆ ಕಾರ್ಯವಾದರೇನವರು ಈರೇಳು ಜಗವ ಸಂಹರಿಸಲರಿಯರು ಗಡಾ ಕಾರ್ಯವಿಲ್ಲದ ಶಿವರ ಪೇಳಲದ್ವೈತಮತ ಹಾರಿಹೋಗದೆ ಬರಿದೆ ಹಲವು ಹಂಬಲಿಸದೆ ಶ್ರೀರಮಣ ಹಯವದನನೊಡಂಬಟ್ಟನಿ ಬರನು ದೂರ ಕಳಚಿದನೆಂದು ಪೂರ್ವದವರನೆ ನಂಬು 11 ಯಾತ್ರೆಯ ಮಾಡಿಸಿಕೊಂಡು ಹರ ಹಿರಿಯ ತಾನಾಗಿ ಯುಕ್ತಿ ಬಾಧಕವಾಯಿತ್ತು ಹರಿಹರರೊಳೈಕ್ಯ ಚಿತ್ರ ನಿನ್ನ ಮತಕೆ ನೀನೆ ಶತ್ರುವಾದೆ ಪ್ರತ್ಯುತ್ತರವ ಪೇಳೆ ಪರಾಜಯ ಬಾರದಿಹುದೆ ಮತ್ತೆ ನೆನೆಯೊ ಶ್ರೀಹಯವದನಗಿದು ಲೀಲೆಯಾದರೆ ಸತ್ವ ಹೆಚ್ಚಿತು ಸರ್ವೋತ್ತಮನೆಂಬ ಶ್ರುತಿಗೆ 12 ವಂದ್ಯಮಾನಂ ಪಿತಾನಾಂ ಪ್ರತಿ ಪ್ರಮಾಣಂ ಎಂದು ರುದ್ರನ ಕೂಡೆ ಶ್ರುತಿ ಪೇಳಿತಾಗಿ ತಂದೆ ಮಕ್ಕಳ ಮನೆಗೆ ಪೋದಂತೆ ಪೋಗಿ ಮು- ಕುಂದ ಮೊಮ್ಮಗನಿಗೆ ಹಿರಿತನವ ಕೊಡಲೆಂದು ಮುಂದೆ ಜನಿಸುವ ಕಿರಿಯ ಕುವರರೊಳು ತನ್ನ ಕಂದನ ಸೃಜಿಸಿದ ಹಯವದನ ಚತುರನಲ್ಲವೆ 13 ಸುರರು ದ್ವಾರಕಾಪುರ ಯಾತ್ರೆಯಲಿ ಪಾಲಸಾಗರಯಾತ್ರೆ ಗರ್ಭಯಾತ್ರೆ ಕಳೆಯೆ ಶೂಲಧರ ಖಳಗಂಜಿ ಭುವನವೆಲ್ಲವ ಸುತ್ತಿ ಶ್ರೀ- ಲೋಲನಿಹ ವೈಕುಂಠಯಾತ್ರೆಯಿಂದ ಬದುಕನೆ ಭೂಲೋಕದಲಿ ಪುಟ್ಟಿ ಹಯವದನ ಕೃಷ್ಣ ಮಾಡಿದ ಕೈಲಾಸಯಾತ್ರೆ ಕೈವಲ್ಯಪತಿಗೆ ಲೀಲೆ 14 ಹರನಾರು ಪುರಾಣಗಳು ವಿರಿಂಚನಾರು ಪುರಾಣಗಳು ಹರ ವಿರಿಂಚರವಲ್ಲವೆಂದು ಹಿರಿಯರೆ ಮನ್ನಿಸಲಾಗಿ ಪರಮ ಸಿದ್ಧಾಂತಕೋವಿದರೆನಿಪ ಬುಧರಿಗೆ ಪುರಾಣಗಳ ಮ್ಯಾಲೆ ಮಾಡುವ ಪರಮಾದÀರ ಸಲ್ಲದಯ್ಯ ದುರಾಗ್ರಹವ ಮಾಡಬ್ಯಾಡ ಗುರುಮತವ ಬಿಡಬ್ಯಾಡ ಸಿರಿ ಹಯವದನನಾರುಪುರಾಣಗಳ ನೋಡಿರೊ 15 ಒಂದು ಬೊಮ್ಮಚಿತ್ತು ಒಂದು ಜೀವಚಿತ್ತು ಇಂ- ತೆಂದು ಶ್ರುತಿಸ್ಕಂಧÀ ಚೇತವೆಲ್ಲ ಗ್ರಂಥ[ಆ]ಸ್ಯ ದಿಂದ [ಒರೆಯೆ] ಹರಿಜಡನೋ ಹರಜಡನೋ ಮಂದಹಾಸದಿಂದ ಜಡರು ಮನುಮುನಿಗಳೆಲ್ಲ ಇಂಥ ಶಿವನ ವಹಿಸಿಕೊಂಡು ವಾದಿಸುವರು ಹಿಂದು ಮುಂದರಿಯರೆಂದು ಹಯವದನ ನಗನೆ 16 ಯಂ ಬ್ರಹ್ಮವೇದಾಹಂ ಬ್ರಹ್ಮ ವೇದಶ್ರುತಿಶಬ್ದ ಬ್ರಹ್ಮ- ವೆಂಬ ವೇದ ಬೋಧಿಸಿತಾಗಿ ಇಂಥ ಮನುಜರಿಗೆಲ್ಲ ಭಾವಾಭಾವ ಪೇಳ್ವ ಹೊಂದಿಬದುಕು ಹಯವದನನ ಚರಣವ ಹೊಂದಿಬದುಕೊ ಜೀವ ಹರಿಯೆ ನಾನೆನ್ನಬ್ಯಾಡ 17
--------------
ವಾದಿರಾಜ
ಕೃಪೆಯಿಲ್ಲ ವ್ಯಾಕೊ ಎನ್ನ ಮ್ಯಾಲೆ ಕೃಷ್ಣಮೂರುತೀ ಅಪರಾಧವೆಲ್ಲ ಕ್ಷಮಿಸಿ ಸಲಹೊ ಪಾರ್ಥಸಾರಥಿ ಪ ನೀನಲ್ಲದನ್ಯರಿಲ್ಲವೆಂದು ನಿಖಿಲ ನಿಗಮವು ನಾನಾ ಪರಿಯಲಿ ಸಾರುವದು ಸಕಲಶಾಸ್ತ್ರವು 1 ಮನಾದಿಗಳಿಗಗೋಚರನೆಂದೆಲ್ಲ ಪೇಳ್ವರು 2 ಅನಾಥ ರಕ್ಷಕಾಪ್ರಮೇಯ ಆದಿಪುರುಷನೇ ಸನಂದನಾದಿ ಸಕಲಯೋಗಿ ವಂದ್ಯ ಚರಣನೇ 3 ನಿರಪರಾಧಿಗಳನು ಪೊರೆಯಲೇಕೆ ಸಂಶಯ ಸುರೇಶರುದ್ರ ಬ್ರಹ್ಮಜನಕ ನೀನೆ ನಿಶ್ಚಯ 4 ಕರುಣದಿ ನೀನೆ ಕಾಯಬೇಕು ಮರೆಯದೆನ್ನನು ಗುರುರಾಮ ವಿಠಲ ಬಿಡದಿರುಕೈದಾಸದಾಸನು 5
--------------
ಗುರುರಾಮವಿಠಲ
ಕೃಷ್ಣ ಕೃಪಾಳೋ ಕೃಷ್ಣ ಕೃಪಾಳೋವ್ಣೃ ಕುಲೋದ್ಭವ ಕೃಷ್ಣ ಕೃಪಾಳೋ ಪವಸುದೇವ ನಂದನ ವರ ರತ್ನ ಭೂಷಣಕುಶಲಕರೇಕ್ಷಣ ಕೃಷ್ಣ ಕೃಪಾಳೋ 1ಭುವನತ್ರಯಾಧಾರ ಬಹುಗೋಪಿಕಾ ಜಾರನವನೀತ ದಧಿ ಚೋರ ಕೃಷ್ಣ ಕೃಪಾಳೋ 2ಮುರಳೀನಾದ ವಿನೋದ ವಿಶ್ವಾತ್ಮಕವಿರಳೀಕೃತಲೀಲ ಕೃಷ್ಣ ಕೃಪಾಳೋ 3ಗುಂಜಾಭರಣ ಸುರಂಜಿತ ಮಣಿಮಯಮಂಜೀರ ಪದಪದ್ಮ ಕೃಷ್ಣ ಕೃಪಾಳೋ 4ರಾಗಾದಿ ದೋಷ ಕಲುಷಮನಸೋ ಮೇಕಾಗತಿರಧುನಾ ಕೃಷ್ಣ ಕೃಪಾಳೋ 5ಆರ್ತಸಂರಕ್ಷಕ ಪಾರ್ಥಸಹಾಯಕಕೀರ್ತಿವಿಧಾಯಕ ಕೃಷ್ಣ ಕೃಪಾಳೋ 6ಕಾಮಸಂಪುಟದಿವ್ಯನಾಮಜಪನಶೀಲಕಾಮಿತಾರ್ಥಪ್ರದ ಕೃಷ್ಣ ಕೃಪಾಳೋ 7ಕಾಳೀಯ ಫಣ ಮಾಣಿಕ್ಯ ರಂಜಿತ ಪಾದಕಾಳಿಂದೀ ಪಾವನ ಕೃಷ್ಣ ಕೃಪಾಳೋ 8ಮಾಮವಲೋಕಯ ಮಾಧವ ಮುರಹರತಾಮಸಮಪಹರ ಕೃಷ್ಣ ಕೃಪಾಳೋ 9ತವ ಸತ್ಕಥಾ ಶ್ರವಣೇ ಕೀರ್ತನೇ ಮಮಶಿವಸುಧಿಯಂ ದೇಹಿ ಕೃಷ್ಣ ಕೃಪಾಳೋ 10ತಿರುಪತಿ ಕ್ಷೇತ್ರನಿಲಯ ಕರುಣಾಲಯವರದ ಶ್ರೀ ವೆಂಕಟಕೃಷ್ಣ ಕೃಪಾಳೋ 11 ಓಂ ಕೃಷ್ಣಾವ್ಯಸನಕರ್ಷಕಾಯ ನಮಃ
--------------
ತಿಮ್ಮಪ್ಪದಾಸರು