ಒಟ್ಟು 121 ಕಡೆಗಳಲ್ಲಿ , 42 ದಾಸರು , 116 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಲಿಸೋ ಶ್ರೀ ಗುರುರಾಯಾ ಪ ಕಾಯ - ಭವ ಜಾಲ ತಪ್ಪಿಸೊ ಮಹರಾಯ - ಆಹಾ ಪಾಲಗು ಜನರ ಸು - ಪಾಲಕ ಹರಿಪಾದ ಭವ - ತೂಲಕಾನಲನೆ ಅ.ಪ ಶೇಷಾಂಶ ಪ್ರಹ್ಲಾದ ವ್ಯಾಸಾ - ಮುನಿ ವೇಷ ತಾಳಿದೆಯೊ ಯತೀಶಾ - ಜಾಗು ಪೋಷಣೆ ಗೈಯ್ಯೊ ಮನೀಷಾ - ಎನ್ನಾ - ಶೇಷ ಕ್ಲೇಶವಳಿದೀಶಾ - ಆಹಾ ಭವ ನಿ - ಸ್ಸೇಷ ಮಾಡಿ ಎನ್ನ ಪೋಷಿಸೊ ನಿರುತ ಧೃ - ತಾಷಾಢ ಗುರುವರ 1 ಕಾಮಧೇನು ಕಲ್ಪವೃಕ್ಷಾ - ನಿನ್ನ ಈ ಮಹಮಹಿಮೆ ನಿರೀಕ್ಷಾ - ಮಾಡಿ ಈ ಮಹಿ ಯಾಕೆಂದುಪೇಕ್ಷಾ - ಮಾಡಿ ಧಾಮ ಸೇರಿದವೊ ಭಕ್ತಪಕ್ಷಾ - ಆಹಾ ಸಾಮಜನಾಥನ ಪ್ರೇಮ ಪಾತ್ರನೆ ನಿನ್ನ ಈ ಮಹ ಮಹಿಮೆಗೆ ನಾಮಾಳ್ಪೆ ನಮೊ ನಮೊ 2 ಆಸೇತು ಹಿಮಾದ್ರಿ ತನಕಾ - ನಿನ್ನ ಆಸೆಯ ಮಾಳ್ಪರನೇಕಾ - ಅಂಥ ದಾಸಜನರಿಗೆ ಅನೇಕಾ - ಫಲ ರಾಶಿಯ ಕೊಡುವಿ ಮಜ್ಜನಕಾ - ಆಹಾ ಮಾನವ ಜನ್ಮ ಈಸೆ ಸಾಕೆಲೊ ಸ್ವಾಮಿ ಎಸು ಪೇಳಲಿ ನಿನ್ನ ದಾಸರ ದಾಸನೋ 3 ಎಲ್ಲಿ ಪೋದರು ಕಾಯ್ವರಿಲ್ಲ - ಜಗ - ದ್ವಲ್ಲಭ ಬಲ್ಲಿ ನಿನೆಲ್ಲಾ - ಬಹು ಬಲ್ಲಿದನೆಂಬುವರೆಲ್ಲಾ - ಜನ ಸೊಲ್ಲು ಕೇಳಿಬಂದೆನಲ್ಲಾ - ಆಹಾ ಪುಲ್ಲಲೋಚನ ನೀ - ನಲ್ಲದೆ ಎನ ಭವ ಣೆಲ್ಲ ಮಾತ್ರವು ಕಳೆಯೊ - ರಿಲ್ಲವೊ ಎನ್ನಜೀಯಾ 4 ನಾಥ ನಿನ್ನೊಳು ಜಗಕೆಲ್ಲ - ಮಹ ಪ್ರೀತಿಯು ಇರುತಿಹುದಲ್ಲ - ಸದ - ತಾತ ನೀನಾಗಿ ಜಗಕೆಲ್ಲಾ - ಮತ್ತೆ ಪೂತ ಫಲ ಕೊಡುವಿಯಲ್ಲಾ - ಆಹಾ ದಾತ ಗುರುಜಗ - ನ್ನಾಥವಿಠಲ ಸದಾ ಪ್ರೀತಿಂದ ಇರುವೊನು5
--------------
ಗುರುಜಗನ್ನಾಥದಾಸರು
ಪಾಹಿ ಶ್ರೀ ಉರಗಾದ್ರಿವಾಸವಿಠಲನೇ ಮದ್ಹøಯರಾಂತರಾತ್ಮ ವಿಠಲನೇ ಸಲಹೊ 1 ದೇಹದಲಿ ನಲಿವ ತಾಂಡವ ಕೃಷ್ಣವಿಠಲನೆ ನಿನ್ನಿಷ್ಟ ಭಕುತರ ಮನೋಭೀಘ್ಟವನೆ ಸಲಿಸಯ್ಯ 2 ವಂದಿಪೆ ತಂದೆ ವೇಂಕಟೇಶ ವಿಠಲ ಬಂದು ದಯವೀಯೋ ಜಯಾಪತಿವಿಠಲ ಬಂಧ ಮೋಚಕ ಶಾಂತೀಶ ವಿಠಲನೆ ನಿನ್ನ ಸಂದ ಭಕುತರ ಕಾಯ್ವ ಗಜವರದವಿಠಲ3 ಶೇಷ ಶಯನ ವಿಠಲ ದೋಷರಾಶಿಯ ಕಳೆದು ಮನದಾಶಯ ಸಲಿಸಯ್ಯ ಹರಿವಿಠಲ ಶೈಶವದಿ ಕಾಯ್ದಂತೆ ಧೃವತವರದವಿಠಲನೆ ಈಸಮಯದಲ್ಲೆ ಗುರುವಾಸುದೇವ ವಿಠಲ 4 ವರದ ಲಕ್ಷ್ಮೀ ರಮಣವಿಠಲನೆ ಎನ್ನ ಅವಿದ್ಯೆಯನೆ ಹರಿಸೊ ಪ್ರದ್ಯುಮ್ನವಿಠಲ ಪರಮಪುರುಷಾ ವರದ ವೇಂಕಟೇಶ ವಿಠಲನೆ ಪರಮ ಸಾಧನ ನೀಡೋ ಸುಜ್ಞಾನವಿಠಲ 5 ಶ್ರೀನಾಥವಿಠಲನು ತೈಜಸನು ನೀನೆ ದೀನರಕ್ಷಕ ಭಾರತೀಶಪ್ರಿಯ ವಿಠಲ ಪರಮಪಾವನ ಕಾಯೊ ವರಹವಿಠಲ ಮೂರ್ತೆ ವರಮತಿಯ ನೀಡೊ ಆನಂದಮಯವಿಠಲ 6 ವಿಜ್ಞಾನಮಯ ಮನದ ಅಜ್ಞಾನವನು ಹರಿಸೊ ಸ- ರ್ವಜ್ಞ ನೀನೇ ಶ್ರೀ ಪ್ರಾಜ್ಞವಿಠಲನೆ ಯಜ್ಞ ಭುಗ್ಯಜ್ಞ ಸಾಧಕನು ನೀ ಜಗದ್ಭರಿತ ವಿಠಲ ನೀನೆನ್ನ ಸಲಹೊ 7 ಶುಧ್ದ ಮೂರುತಿ ಶ್ರೀ ವಿಜ್ಞಾನಮಯ ವಿಠಲ ಸರ್ವಕಾರ್ಯದಿ ಮನಶುದ್ಧಿಯ ನೀಡೋ ಮಧ್ವಗುರು ಶ್ರೀಕೃಷ್ಣ ದ್ವೈಪಾಯನ ವಿಠಲ ಮದ್ಭಾರ ನಿಳುಹಿ ನೀ ಉದ್ಧ್ದಾರ ಮಾಡೊ8 ರಕ್ಷಿಸೊ ಲಕ್ಷ್ಮೀಶ ವಿಠಲನೆ ಎನ್ನ ಮನ ದಕ್ಷಿಯೊಳು ನೆಲೆಸೊ ಶ್ರೀ ವೇಂಕಟೇಶವಿಠಲ ಕುಕ್ಷಿಯೊಳು ಬ್ರಹ್ಮಾಂಡ ರಕ್ಷಿಪ ಶ್ರೀರಮಣ ವಿಠಲ ನಿನ್ನದಾಸದಾಸ್ಯವÀ ದೇಹಿ 9 ಶರಣ ಜನ ಪ್ರೀಯ ಶ್ರೀವರದ ವಿಠಲ ದೇವಾ ದುರಿತಾರಿ ಪನ್ನಂಗಶಯನ ವಿಠಲ ಗುರೋರ್ಗುರುಗೋವಿಂದವಿಠಲ ಪಾಹಿ 10 ವರ ತಂದೆ ಮುದ್ದು ಮೋಹನ ವಿಠಲಾತ್ಮಕ ಶ್ರೀ ಉರಗಾದ್ರಿ ವಾಸವಿಠಲ ಸ್ವಾಮಿ ಶರಣರಿಗೆ ಆಯುe್ಞರ್Áನ ಸಂಪತ್ ಭಕ್ತಿಸಾಧನೆಗಳಿತ್ತು ಸಲಹೊ11
--------------
ಉರಗಾದ್ರಿವಾಸವಿಠಲದಾಸರು
ಬಂದನೇಳೆ ದೇವಿ ರಂಗ ಮನೆಗೇ| ಇಂದು ಮುಖಿ ನಿನ್ನ ಮನದಾ ನಂದ ಕೊಡಲು ಪ ಭಾಗವತ ರೊಡಗೂಡಿ| ಭಕ್ತಿರಂಗದೊಳಾಡಿ ಸುಖವ ಸೂರ್ಯಾಡಿ 1 ಗರುಡವಾಹನ ಪರಾಕೆಂಬ ಶೃತಿ ಭಟರು| ಮೂರಾರು ಸಾಲ ಪಂಜಿನ ಬೆಳಗಿನಿಂದ 2 ಸಕಲ ಸುಂದರ ರಾಶಿಯೆ ಎನಿಪ ಮೋಹನರೂಪ| ಅಕಳಂತಕ ಬ್ರಹ್ಮಾದಿ ಸುರರೊಡೆಯಾ 3 ದುರಿತ ಹರನೆಂಬ| ಬಿರದ ಜಾಂಗಟೆ ಶಂಖ ಕೌಸಾಳರವದಿ 4 ತನ್ನ ಭೃತ್ಯರ, ಭೃತ ಭೃತ್ಯನ ಕರೆದು| ಮನ್ನಿಸುವ ಮಹಿಪತಿ ಸುತಪ್ರಾಣ ಪದಕಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬನ್ನಿರಿ ಬನ್ನಿರಿ ಪುರಜನರೆಲ್ಲರು ಕೃಷ್ಣನ ದರುಶನಕೆ ಪೋಗುವ ಪ ಕೃಷ್ಣನು ಜನಿಸಿದ ಈ ದಿನ ಇಷ್ಟವ ಪ್ರಾರ್ಥಿಸಲು ಪೋಗುವಅ.ಪ ದುಂದುಭಿ ನಾದವು ಕೇಳುತಿದೆ ಬಲು ಮಂದಿಯ ತಂಡವು ಹೋಗುತಿದೆ ಕಂದನ ರೂಪದಿ ಬಂದಿಹ ಆನಕ ದುಂದುಭಿ ಕುವರನ ಸಂಭ್ರಮ ನೋಡಲು 1 ಪೇಳಿರಿ ನಿಮ್ಮಯ ಕೊರತೆಗಳೆÀಲ್ಲವ ಕೇಳಿರಿ ವರಗಳ ಧೈರ್ಯದಲಿ ಬಾಲನು ಸುಲಭದಿ ಒಲಿಯುವ ಒಳ್ಳೆಯ ಕಾಲವಿದೆಲ್ಲರಿಗೆ ಬೇಗನೆ 2 ಜನುಮ ಜನುಮಗಳ ಪುಣ್ಯದ ರಾಶಿಯು ಜನುಮಾಷ್ಟಮಿ ದಿನದಿ ಲೋಕಕೆ ಜನುಮಾದ್ಯಷ್ಟಕದಾತನ ದರುಶನ ಮನಕೆ ಪ್ರಸನ್ನತೆ ಕೊಡುವುದು ಪೋಗುವ 3
--------------
ವಿದ್ಯಾಪ್ರಸನ್ನತೀರ್ಥರು
ಬಲ್ಲವನಾದರೀ ತಳ್ಳಿಬೇಡ ಅಲ್ಲದ ಪಥವಿದರಾಸೆಯ ಬಿಡು ನೀನು ಪ ಸರ್ಪನ ಪಣೆಯೊಳು ಜೇನುತುಪ್ಪವ ಕಂಡು ಅಪ್ಪನೆ ತಾರೆಂದು ಅಳುತಿರಲು ತುಪ್ಪದ ಸವಿಯನು ಜನರುಂಡು ತೀರಲು ಮುಪ್ಪಾಗಿಯಿರುವುದ ಕಂಡು ಮೂದಲಿಸುವ 1 ನಂಬಿದ ಮನುಜರ ಹಂಬಲ ಮರವದು ಡೊಂಬಿಯವರು ಕಂಡು ತಡೆಯಲಾಗಿ ಅಂಬರವನು ಕಂಡು ನಗುತಿಪ್ಪ ಮನುಜನ 2 ಅಂಬರವಡಗಿಯೆ ಕುಂಭಿನಿ ಜಾರಿಯೆ ನಂಬಿದ ಮನುಜರು ನಡೆವೆಡೆಯ ಕುಂಭದ ನೀರನು ಚೆಲ್ಲುತ್ತ ಮಗುಳಲ್ಲಿ ಕಂಭದ ಹಾಗೆಲ್ಲ ನಿಂತಿಹ ಜನರನು 3 ಕಟ್ಟಿದ್ದು ಕರಗಿಯೆ ಸೆಟ್ಟೆಲೆ ಒಣಗಿಯೆ ದುಷ್ಟನೊಬ್ಬನು ಬಂದು ನಿಂತಿಹನು ಇಟ್ಟಿಹ ಬಾಗಿಲ ಕಾಣದೆ ತಾ ಬಂದು ಹೊಟ್ಟೆಯ ಬಗಿದಲ್ಲಿ ಹೊರವಂಟ ವೇಳೆ 4 ಕಡಹದ ಪಲ್ಲಕ್ಕಿ ಬೆಡಗನ್ನು ಕಾಣುತ್ತ ಮೃಗ ಬಂದು ಕುಳಿತಿರ್ದುದ ಒಡನೆ ಕಟ್ಟಿದ ವಾಹಕರ್ಹದಿನಾರು ಮಂದಿಯು ಕಡಿಮೆಯ ಸಂಬಳ ಕಡವಿಡುವವರನ್ನು 5 ಅಕ್ಕಿಯ ರಾಶಿಯು ತೀರಲು ಕೊಳಗವು ಬೆಕ್ಕನೆ ಬೆರಗಾಗಿ ಕುಳಿತಿಪ್ಪುದು ಬಿಕ್ಕಿದ ಅಕ್ಕಿಯ ಹಕ್ಕಿಯು ಹೆಕ್ಕಿಯೆ ಗಕ್ಕನೆ ಹಾರುವ ಪಕ್ಷಿಯ ನೋಡುತ್ತ 6 ರವಿಶಶಿಯೊಂದಾಗಿ ಇರುತಿಹ ಗಣಿತದಿ ಧರೆಯೊಳು ಸಾವಿರಯೆಲೆ ಬೀಳ್ವುದು ಎರವಿನಾಭರಣವ ಅವರವರೊಯ್ಯಲು ವರಾಹತಿಮ್ಮಪ್ಪನ ಮರೆ ಬೀಳು ಕಂಡ್ಯ 7
--------------
ವರಹತಿಮ್ಮಪ್ಪ
ಬಾರೋ ಬಾರೋ ಶರಣೆಂಬೆನು ದೇವ ಪ ಪಂಕಜ ವದನದ ಶಂಕರಸುತ ಗುಹ ಬಾರೋ1 ಕಂದರ್ಪಾನ್ವಿತಗುಣ ವೃಂದ ನಿತ್ಯಾನಂದ ಬಾರೋ 2 ದಾಸರ ಭವದಘ ರಾಶಿಯ ತರಿಯುತ್ತಾ ಬಾರೋ 3
--------------
ಬೆಳ್ಳೆ ದಾಸಪ್ಪಯ್ಯ
ಬಿಟ್ಟನೋ ಆತಂಕಗಳನು ನಾ ಕೃಷ್ಣ ನಿನ್ನ ಕರುಣಾ ನಂಬಿ ಪ ಸೃಷ್ಟಿ ಸ್ಥಿತಿ ಲಯಾದಿ ಕರ್ತ ಅಷ್ಟವಿಭವಪೂರ್ಣ ನಿನ್ನ ಇಷ್ಟದಂತೆ ನಡೆಯುವುದೇ ಶ್ರೇಷ್ಠವೆಂಬೊ ಬುದ್ಧಿ ಬಂದು 1 ಬೆಟ್ಟದಂತೆ ಇದ್ದುದಲ್ಲಿ ಘಟ್ಟಿಮಂಜಿನಂತೆ ಕರಗಿ ಕಷ್ಟರಾಶಿಯೆಲ್ಲಾ ಸ್ವಪ್ನ ದೃಷ್ಟದಂತೆ ಆದಮೇಲೆ 2 ತಲೆಯಮೇಲೆ ಕೈಯ್ಯನಿಟ್ಟು ಇಳೆಯ ಮೋರೆ ಮಾಡಿ ನೊಂದು ನೆಲವ ಕಚ್ಚಿ ಬಿದ್ದರೇನು ಫಲವೊ ಧೀರಜನ ಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು
ಬ್ರಹ್ಮಾಸ್ತ್ರದ ನಿಜವನು ನಾ ಪೇಳುವೆಬ್ರಹ್ಮಾಸ್ತ್ರವೇ ಬ್ರಹ್ಮವುಬ್ರಹ್ಮಾಸ್ತ್ರ ತಾನೆಂದು ಭಜಿಸುವಾತನುಬ್ರಹ್ಮಾಸ್ತ್ರವೇ ಆತನು ಬ್ರಹ್ಮಾಸ್ತ್ರ ಪ ಪೀತಾಂಬರದುಡಿಗೆ ರಾಶಿಯು ಹಾಕಿದ ಎದೆಕಟ್ಟುಪೀತವಾಗಿಹುದೇ ಬ್ರಹ್ಮಾಸ್ತ್ರಪೀತವರಣ ಪೀತ ಪುಷ್ಟ ಗಂಧಾನುಲೇಪನಪೀತದಿಂದಿಹುದೇ ಬ್ರಹ್ಮಾಸ್ತ್ರ ಪ್ರೀತಸರ್ವವು ಆಗಿಪ್ರೀತ ಪ್ರೀತೆಯೆ ಆಗಿ ಪೀತಾವರಣವೆ ಬ್ರಹ್ಮಾಸ್ತ್ರ 1 ಬಿಗಿದ ಬತ್ತಳಿಕೆಯು ಎಡಹಸ್ತ ಶಾರ್ಙದಿಝಗಿ ಝಗಿಸುವುದೇ ಬ್ರಹ್ಮಾಸ್ತ್ರತೆಗೆದು ಕೆನ್ನೆಗೆ ಶರವನೆಳೆದು ರೌದ್ರದಿನಿಗಿನಿಗಿನಿಗಿಸುವುದೇ ಬ್ರಹ್ಮಾಸ್ತ್ರ 2 ವೀರ ಮಂಡಿಯ ಹಾಕಿ ಖಡ್ಗವ ಸೆಳೆದುತೂರತಲಿಹುದೇ ಬ್ರಹ್ಮಾಸ್ತ್ರಕಾರುವ ಕಿಡಿಗಳ ಕ್ರೂರ ದೃಷ್ಟಿಯಲಿಘೋರವಾಗಿಹುದೇ ಬ್ರಹ್ಮಾಸ್ತ್ರಬಾರಿಬಾರಿಗೆ ಹೂಂಕಾರಗೈಯುತ ಅವಡುಗಚ್ಚಿಮಾರಿಯಾಗಿಹುದೇ ಬ್ರಹ್ಮಾಸ್ತ್ರಸಾರ ಕಿಚ್ಚಿನ ಜ್ವಾಲೆ ಭುಗುಭುಗು ಛಟಛಟಎನುತಲಿಹುದದೇ ಬ್ರಹ್ಮಾಸ್ತ್ರ3 ದಿಸೆಗಳು ಮುಳುಗಿವೆ ಉರಿಯ ಕಾಂತಿಯಲಿರವಿಶತ ಕೋಟೆಯ ರಶ್ಮಿ ಚೆಲ್ಲುವುದೇ ಬ್ರಹ್ಮಾಸ್ತ್ರಪಸರಿಸಿ ಇಹ ಬ್ರಹ್ಮಾಂಡವನಂತವಭಸ್ಮ ಮಾಡುವುದೇ ಬ್ರಹ್ಮಾಸ್ತ್ರನುಸಿಗಳು ಅಸಂಖ್ಯಾದಿ ಬಹ್ಮರುದ್ರಾದ್ಯರಅಸುವ ಕೊಂಬುದೇ ಬ್ರಹ್ಮಾಸ್ತ್ರ 4
--------------
ಚಿದಾನಂದ ಅವಧೂತರು
ಭರಬರನೆ ಬಾಜಾರಕೆ ನಾ ಬಂದೆನಯ್ಯ ಚಿದಾನಂದನ ಮರೆಯಲಿಕೆ ಪ ಐವರು ಗೌಡರು ಕಟ್ಟಿದ ಪೇಟೆ ಆ ಪೇಟೆಗೆಐದು ನಾಲ್ಕು ಬಾಗಿಲುಗಳುಐದು ಮಂದಿ ಸೆಟ್ಟರು ಸೇರಿಹರು ಆವರಲ್ಲಿಯೆಐದು ಮಂದಿ ಚಲವಾದಿಗಳು1 ಭಾರ ನೇಮಲ್ಲಿದೆ 2 ತಡುಗರೆಂಬವಾಲೆ ಶೆಟ್ಟಿಗಳೆ ಅಲ್ಲಿಗಲ್ಲಿಗೆಪಡುವಲ ಕೋರಿ ಶೆಟ್ಟಿಗಳೇಕಡುಕರ್ಮಿ ಕೋಮಟಿ ಶೆಟ್ಟಿಗಳೇ ಬಾಯಿ ಘನವಾಗೆಬಡಬಡಿಪ ಪಟ್ಟಣ ಶೆಟ್ಟಿ 3 ಪಾಪವೆಂಬ ವಸ್ತ್ರದಂಗಡಿಯೇ ನಾ ನೋಡಲಾಗಿತಾಪವೆಂಬ ಜವಳಿ ಅಂಗಡಿಯೆಕೋಪವೆಂಬ ಕುಪ್ಪಸ ದಂಗಡಿಯೇಒಪ್ಪುತಲಿರೆ ಕಾಪಥವೆಂಬ ಸಕಲಾತ್ಮಂಗಡಿಯೇ 4 ಚಿ, ಛೀ ಎಂಬ ಚಿಕ್ಕ ತಕ್ಕಡ ಗಂಡಿಯೆ ನಾ ಬರುತಿರೆನಾಚಿಕೆಯಿಲ್ಲದ ಕಂಚಿನಂಗಡಿಯೇಚು ಛೂ ಎಂಬ ಚೀನಿಯಂಗಡಿಯೇ ಯಡಬಲದಲ್ಲಿಕೋಚು ಮಾಡೋ ಉದ್ದಿನಂಗಡಿಯೇ 5 ತನು ವ್ಯಸನವೆಂಬ ತಾಡಪತ್ರಿ ತೋರಲಾಗಿಮನವ್ಯಸನವೆಂಬ ಕಿಂಕಾಪುಧನವ್ಯಸನವೆಂಬೋ ಮಖಮಲ್ಲು ನಾ ಬೆರಗಾಗೆಜನ ವ್ಯಸನವೆಂಬೋ ಜರತಾರಿಯೇ6 ನಾನಾ ವಿಷಯ ವೆಂಬೋ ಉತ್ತತ್ತಿ ಅಲ್ಲಿದ್ದಾವೆಜ್ಞಾನಶೂನ್ಯ ಜಾಜಿಕಾಯಿಮಾನ ಹಾನಿಯೆಂಬೋ ಜಾಪತ್ರಿನಾನು ನನ್ನದು ಎಂಬ ಭಂಗಿ ಸೊಪ್ಪು7 ಜೀವನೆಂಬ ಹೊಗೆಯ ತೊಪ್ಪಲೇ ಹಿರಿಯವಾದನೋವು ಕಷ್ಟಗಳೆಂಬ ಗಾಂಜಿಯೇಸಾವು ಬದುಕು ಎಂದೆಂಬ ಮಾಲೆಗಳೇ ಮಾರುತಲಿತ್ತೋನಾನು ನೀನು ಎಂಬ ಚಿಲುಮೆಗಳೋ 8 ಭೇದವೆಂಬ ನಿಲುವುಗನ್ನಡಿಯೆ ಒಳಗಿದ್ದಾವೆ ವಾದವೆಂಬವಜ್ರದಹರಳೇ ಹಾದಿ ಕಾಣೆನೆಂಬ ಹವಳದ ರಾಶಿಯೇ ಹರಡಿದ್ದಾವೆಗಾದೆ ಎಂಬ ಸೂಜಿದಬ್ಬಣವೇ 9 ಪ್ರಾರಬ್ಧವೆಂಬೋ ಉಂಬತಳಿಗೆಯೇ ಪಸರಿಸುತಿರುವಘೋರ ತಾಪತ್ರಯದ ತಟ್ಟೆಯೇನಾರಿ ನೋಟೆಂಬ ಕಠಾರಿಯೇ ನಿಲಿಸಿದ್ದಾವೆಸೂರಿಯ ಸುಕೃತವೆಂಬೋ ತುಬಾಕಿಯೇ10 ಪರಿಣಾಮಿಲ್ಲದ ಪಡವಲಕಾಯಿ ದಾರಿಯಲಿದಾರಿಯಿಲ್ಲದ ದೊಡ್ಡಿಲಕಾಯಿಅರಿವಿಲ್ಲದ ಕುಂಬಳಕಾಯಿ ಹಾಗಿದ್ದಾವೆಮರುಳು ಎಂಬ ಮಾವಿನಕಾಯಿ11 ಮಂಠ ಎಂಬೋ ಮೆಂತ್ಯ ಪಲ್ಲಯೇ ಮಾಸಲವಿತ್ತೆಕಂಟಕ ಎಂಬೋ ಹರಿವೆ ಪಲ್ಲೆಯೇಕೊಂಟೆಯೆಂಬೊ ಬಸಲೆ ಪಲ್ಲೆಯೇ ತೀವ್ರದಲಿತ್ತೆಶುಂಠವೆಂಬೋ ಬೆರಕೆ ಪಲ್ಲೆಯೇ 12 ಬಂಗಾರವೆಂಬೋ ಬಿಳಿಯ ಜೋಳವೇ ಬೆಡಗಿಲಿರೇರಂಗು ಎಂಬೋ ರಾಗಿ ರಾಶಿಯೇಸಂಗವೆಂಬೋ ಸಣ್ಣಕ್ಕಿಯೇ ಸಾರಿದ್ದಾವೆಹಿಂಗದೀಪರಿ ದಿವಾರಾತ್ರಿಯೇ 13 ಸಂಕಲ್ಪೆಂಬೋ ಧಾರಣೆ ಹಚ್ಚಿರೋ ಸಂಗಾತಲೆವಿಕಲ್ಪೆಂಬೋ ಧಾರಣೆಯಿಳಿವುದೇಸುಖದುಃಖವೆಂಬೋ ಮಾರಾಟವೇ ಸಾಗಿರಲಾಗಿಕಾಕಧಾವಂತರ ಸಂಧಾನವೇ 14 ಕಾಮಕ್ರೋಧಗಳೆಂಬ ಕಳ್ಳರೇ ಕಾವಲಿರ್ದುರಾಮನೆಂಬ ಸ್ಮರಣೆ ಕದ್ದಿಹರೋಕಾಮುಕರೆ ತಿರುಗಾಡುವರೆಲ್ಲ ಕಾಣದ ಹಾಗೆಆ ಮಹಾಜ್ಞಾನವ ಸುಲಿದಿಹರೋ15 ಬರಬಾರದ ನಾನು ಬಂದೆನೇ ಬಾಜಾರ ಬಿಟ್ಟುಹೊರಡುವ ತೆರನ ಕಾಣೆನೇಕರುಣಿಯಾಗಿ ಕೈ ವಿಡಿವರಾರೋಕರುಣಾಕರ ಹರ ವಿಶ್ವೇಶನೇ ಬಲ್ಲ 16 ಚಿಂತೆ ನಾನು ಮಾಡುತಿರಲಾಗಿ ಚಿದಾನಂದಚಿಂತೆ ಬೇಡೆಂದು ಮುಂದೆ ನಿಂದಿಹನುಚಿಂತೆ ಬಿಡು ಕಾವಲಿಹೆನೆಂದು ಚಿದ್ರೂಪ ತೋರಿಎಂತು ಪೇಳಲಿ ಎನ್ನೆದುರು ನಿಂದಿಹನೆ17
--------------
ಚಿದಾನಂದ ಅವಧೂತರು
ಭವ ಬಂಧವೂ ಪಗಂಗಾಜನಕ ಖಗೊತ್ತುಂಗ ತುರಗನೆ ದೇವ ರಂಗಾಪುರಾಗಾರನೆ ಸ್ವಾ'ು ಅ.ಪದುರಿತ ಕೋಟಿಗಳ ಪರಿಹರಿಸಿ ರಕ್ಷಿಪ ನಿನ್ನ ಬರಿನಾಮಸ್ಮರಣೆಯೊಂದುಪರಿಪರಿಯ ಭವದ ಕೋಟಲೆಯ ಬಿಡಿಸುವ ನಿನ್ನ ಚರಿತೆಯ ಶ್ರವಣವೊಂದುಅರಿತರಿಯದೆಸಗಿದಘರಾಶಿಯ ದ'ಸಿ ನಿನ್ನ ಶರಣಜನ ಸಂಗವೊಂದುಇರಲಿವನು ಬಯಸಿ ಬೇಡುವೆನೆಂದು ನಿನ್ನ ಸಿರಿಚರಣದೆಡೆಗೈದಿ ಸಂತಸದಳೆದುನಿಂದೂ 1ಆವಜನ್ಮಾರ್ಜಿತದ ಸುಕೃತ ಪರಿಪಾಕವೊ ದೇವ ನಿನ್ನಯ ಕರುಣವೋಸಾವಧಾನದಿ ನಿನ್ನ ನೆನೆದು ಪೂಜಿಸಿ ನುತಿಪ ಸೇವಕರ ಪ್ರೇಮದೊಲವೋಜೀವರಾಶಿಗಳೊಳುದುಸಿ ಮಡಿಯೆ ಪುಟ'ಟ್ಟ ಭಾವಬಂದೀ ಬಣ್ಣವೋಆವುದನು ತಿಳಿಯದಜ್ಞನನು ನಿನ್ನವರೊಯ್ದು ಪಾವನಕ್ಷೇತ್ರವನು ಪೊಗಿಸಿದತಿಶಯವೋ 2ಗುರು ವಾಸುದೇವಾರ್ಯನಾಗಿ ಚಿಕನಾಗಾಖ್ಯಪುರದಿ ಮ'ಮೆಯ ತೋರ್ದೆಯೈಕರೆದಜ್ಞರಜ್ಞತೆಯ ಪರಿದು ಸುಜ್ಞಾನ ಸುಧೆಯೆರೆದು ನೀನೆ ಪೊರೆದೆಯೈಪರದೇಸಿ ವೇಷದಿಂ ಮೂಢ ಜನರಿಗೆ ಭಕ್ತಿುರವ ಕೈಸಾರಿಸಿದೆಯೈಮರೆಯೊಕ್ಕೆ ನಾನು ತಿಮ್ಮದಾಸ ದೇವ ಪರಾಕು ಕರ'ಡಿದು ಕಾಯಬೇಕೆನ್ನ ವೆಂಕಟರಮಣ 3
--------------
ತಿಮ್ಮಪ್ಪದಾಸರು
ಮಂಗಳ ಜಯ ಜಯ ಮಂಗಳ ತುಳಸಿಗೆ ಮಂಗಳ ಜಯ ಜಯ ರಂಗನಾಯಕಗೆ ಪ ವಾರಿಧಿ ಮಥÀನದಿ ವಾರಿಜನಾಭನ ವಾರಿಜನೇತ್ರನ ವಾರಿಗಳಿಂದ ತೋರಿದ ತುಳಸಿಯು ಸೇರಿದಳೆಲ್ಲ ಶ- ರೀರವ ಪಾವನ ಮಾಡಬೇಕೆನುತ 1 ತುಳಸಿಯ ನಾಮವ ಬೆಳೆಸಿಯೆ ಲೋಕವ ಬಳಸಿಕೊಂಡಿರುವೆನು ಎನುತಲೆ ಬಂದು ಕಳಸಿದ ಮನುಜರ ಉಳಿಸಬೇಕೆನುತಲೆ ಕಳಸದ ತೆರನಂತೆ ಉದಿಸಿದಳು ತುಳಸಿ 2 ಸಾಲಿಗ್ರಾಮವು ಇಲ್ಲದಾತನ ಮನೆಯೊಳು ಕಾಲೂರಿ ನಿಲ್ಲಳು ಹರುಷದೊಳಿವಳು ಪಾಲಿಪ ಹರಿಶಿಲೆಯಿರುವಂಥ ಸ್ಥಳದೊಳು ಓಲಗವಾಗಿಯೆ ತೋರುತ್ತಲಿಹಳು3 ಎಲ್ಲಿಯು ತುಳಸಿಯು ಅಲ್ಲಿಯೆ ಶ್ರೀಹರಿ ವಲ್ಲಭೆ ಸಹವಾಗಿ ಇರುತಿಪ್ಪ ಬಿಡದೆ ಫುಲ್ಲನಾಭನು ಕೃಷ್ಣ ಆಡಿದ ಪರಿಯನು ಗೊಲ್ಲತಿಯರು ಕಂಡು ನಾಚಿ ಹಿಗ್ಗಿದರು 4 ಬಂದಳು ಭಕ್ತರ ಮಂದಿರದೆಡಗೆ ಗೋ- ವಿಂದನ ಕಂಡಿರೆ ಎಂದು ಕೇಳಿದಳು ವೃಂದಾವನದೊಳು ನಿಂದಳು ತುಳಸಿಯು ಚಂದವು ನಿಮ್ಮಯ ಭವನದೊಳೆನುತ 5 ಗೋವಿನ ತುಪ್ಪದಿ ದೀವಿಗೆಯಿರಿಸಿಯೆ ಭಾವ ಶುದ್ಧತ್ವದಿ ಬಲವಂದರವಳು ಕಾವಲು ಪೋಗಿಯೆ ಕರ್ಣದ ಒಳಗಿದ್ದು ಜೀವಿತ ಮುಕ್ತಿಯ ತೋರುವೆನೆನುತ 6 ಸರ್ವತೀರ್ಥಗಳನ್ನು ಮೂಲದಿ ಧರಿಸಿಯೆ ಸರ್ವ ದೇವರ್ಕಳ ಮಧ್ಯದೊಳಿರಿಸಿ ಸರ್ವ ವೇದಂಗಳ ಶಿರದೊಳು ಧರಿಸಿಯೆ ಸರ್ವವ ಕಾಲಗೆ ನಿರ್ವಹಿಸುತಿಹಳು 7 ಅಂಗಳದೊಳಗಿಹ ಮಂಗಳ ಮಹಿಮಗೆ ರಂಗುವಲ್ಲಿಯನಿಕ್ಕಿ ಶೃಂಗಾರವಾಗಿ ಸಾಂಗ್ಯದೊಳಿಹ ಒಂದು ಮಂಗಳ ಬರೆದರೆ ಬಂಗಾರ ಮನೆಯನ್ನು ತೋರುವಳಿವಳು 8 ಮೂಲದ ಮೃತ್ತಿಕೆ ಮೂಲ ಪಣೆಯೊಳಿಟ್ಟು ಕಾಲದಿ ಸ್ನಾನವ ಮಾಡಿದ ನರರು ಭಾಳವಾಗಿಹ ಅಘರಾಶಿಯನೆಲ್ಲವ ಚಾಳಿಸಿ ಕಳೆವರು ಕಾಲನ ಗೆಲಿದು 9 ತನ್ನ ಕಾಷ್ಟವ ತಂದು ಚಿನ್ನದಿ ಸುತ್ತಿಸಿ ಕರ್ಣದಿ ಧರಿಸಿದ ಮನುಜರಿಗೆಲ್ಲ ಉನ್ನತ ಪದವಿಯ ತೋರುವೆನೆನುತಲೆ ಪನ್ನಗಶಯನಗೆ ಪ್ರೀತಿಯಾಗಿಹಳು 10 ಉತ್ತಮವಾಗಿಹ ಕಾರ್ತಿಕ ಮಾಸದಿ ಅರ್ತಿಯಿಂದಲೆ ನಲಿನಲಿಯುತ್ತ ದೇವಿಯ ಕರ್ತನ ಕೀರ್ತನೆ ರಚಿಸುವ ಮನದಿ 11 ಬ್ರಾಹ್ಮಿ ಮುಹೂರ್ತದಿ ಸ್ನಾನ ತರ್ಪಣವನ್ನು ನಿರ್ಮಲ ತೀರದಿ ತಿದ್ದಿಯೆ ಕೊಂಡು ಧರ್ಮಕ್ಕೆ ಯೋಗ್ಯಳ ಪೂಜೆಯ ಮಾಡಲು ಕರ್ಮ ಬಂಧಗಳೆಲ್ಲ ಕಡಿದುಕೊಳುವುದು 12 ಸಾಯಂಕಾಲದಿ ದೀವಿಗೆ ಹಚ್ಚಲು ಮಾಯಗಳೆಲ್ಲವು ಮರುಗಿ ಪೋಗವುವು ದಾಯವಾಗಿಯೆ ಸುರರಾಯನೊಳರ್ಥವ ಬೇವಿನವರು ಕಂಡು ಹೊರಸಾರುತಿಹರು 13 ಸರ್ವದಾನಗಳನ್ನು ಸರ್ವಪೂಜೆಗಳನ್ನು ಸರ್ವರು ಋಷಿ ಪಿತೃ ತರ್ಪಣಗಳನು ಸರ್ವಥಾ ತುಳಸಿಯ ತಪ್ಪಿಸಬೇಡೆಂದು ನಿರ್ವಾಹವಾಗಿಯೆ ಶ್ರುತಿಯು ಪೇಳಿದುದು 14 ಅಂಗದೊಳಗಿಹ ಮಂಗಳ ಮಹಿಮಗೆ ಸಾಂಗ್ಯದೊಳಿದನು ಪಠಿಸಿ ಪೇಳಿದರೆ ಗಂಗೆ ಗೋದಾವರಿ ತುಂಗಭದ್ರೆಯ ಮಿಂದು ರಂಗನ ಕ್ಷೇತ್ರವ ನೋಡಿದ ಫಲವು 15 ಅಂಗಳ ತುಳಸಿಯ ದಿನ ದಿನದಿ ತಾವೆದ್ದು ಹಿಂಗದೆ ನೋಳ್ಸ ಶ್ರೀರಂಗನ ಭಕ್ತರಿಗೆ ಬಂಗಾರಗಿರಿವಾಸ ವರಾಹತಿಮ್ಮಪ್ಪನ ಮಂಗಳಮೂರ್ತಿಯ ನೋಡಿದ ಫಲವು 16
--------------
ವರಹತಿಮ್ಮಪ್ಪ
ಮಂಡೆ ತುರಿಸುವಭಂಡನಂತೆ ಉದ್ದಂಡನಾಗದಿರು ಪ. ಬಂಟ ಬಾಳನೆ ಕ-ಳಾಸವ ಕೊಂಡು ಸೂಳೆಉಣಳೆ ಈಸತಿ ಸಂತರ್ಗಾಗಿ ಕುಣಿಯದೆಕೇಶವ ಹೃಷಿಕೇಶ ಎನ್ನುಭಾಸುರ ಹರಿಮೂರ್ತಿಯ ನೆನೆಸಾಸಯೆಂದೆನಿಸಿಕೊಳ್ಳದೆಏಸುಬಂದರೈಸರೊಳಿರು 1 ಆಶೆಯೆಂಬ ಪಾಶವ ಬಿಡು ಈಸಂಸಾರವಾರಾಶಿಯನೆನೀಸಲಾರದೆ ಕಾಸಿಗಾಗಿವೇಷವ ತೋರಿ ಘಾಸಿಯಾಗದೆದಾಸರೊಳಾಡುವ ಸರ್ವೇಶ ನಿ-ರಾಶೆನಲ್ಲದೆ ಲೇಸ ಕೊಡನುರೋಷಬೇಡ ಸಂತೋಷದಲಿರುಆಸರು ಬೇಸರಿಗಂಜಬೇಡ 2 ಕ್ಲೇಶ ಉಂಬೆಭಾಸಕೆ ನೀನೊಳಗಾಗದೆಶೇಷಶಾಯಿ ಹಯವದನನ ನೆನೆ3
--------------
ವಾದಿರಾಜ
ಮಂದ ಹಾಸನಾ | ತಂದು ತೋರೇ ಮಂದಹಾಸನಾ ನಂದ ಕಂದ ಶ್ರೀ ಮುಕುಂದ | ವಂದಿತಾ ಮುರೆಂದ್ರ ವೃಂದಾನ ಕಾಮಿನಿ ಪ ಹರನ ಹೊದಿಯ ಅರಿಯ ಶಾಪದಿ | ಹರಿಯರಾದ ರೊಡೆಯನಿಂದ ಭರದಿಯಜ್ಞ ಕಾಯ್ಸಿ ಕೊಂಡನಾ ||ಕೋಪಕ || ವರವನಿತ್ತು ಗುರು ಮೊಮ್ಮನು | ದರಲಿ ಬಂದ ಮಾತೆ ಮಗನಿ ಶರದ ಭರಕ ಪಣಿ ಲಿ ತಾಳ್ದನಾ 1 ಸರಳ ಮಂಚದವನ ತಲಿಗೆ | ಸರಳದಿಂಬು ಕೊಟ್ಟನವನ| ಸರಳದಿಂದ ಪ್ರಾಣ ತೊರೆದನಾ || ಪ್ರೀತಿಯಾ || ಸರಳಕಾತು ಆಳಿದ ನೈಯ್ಯನ | ಸರಳಗದೆಯ ಕೈಯ್ಯಲಿಂದ | ಸರಳ ತೃಯನ ಕೊಲಿಸಿ ದಾತನಾ2 ವಾಹನ | ಸಖನ ಉರಬಕಾಗಿ ನಿಲದೇ | ಅಖಿಲ ದೊಳಗನು ಸಳಿತೀಹನಾ ||ರಾಶಿಯಾ || ಸುಖವ ನಲಿದ ನರಿಯ ಸುತರ | ಕ್ಷೇತ್ರ ಮಹಿಪತಿನಂದನ | ಮುಖದಿ ತನ್ನ ಚರಿತ ನುಡಿಪನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಧ್ವನುದಿಸಿದನು ಭೂತಳದಲಿ ಪ ವದ್ದು ದುರ್ಮತ ತಿದ್ಧಿ ಸುಜನರ ಪದ್ಮನಾಭನ ಪಾದಸೇವಿಸೆ ಅ.ಪ ಕುಣಿದು ಕುಣಿಯೇ ಖೇದ ಉಕ್ಕಿಹರಿಯೆ ಸರ್ವಲಕ್ಷಣದಿಂದ ಶೊಭಿಪ ಸರ್ವತೆರದಲಿ ಪೂರ್ಣಕಾಯದಿ ಸರ್ವಜೀವರ ನಾಥನಾಯಕ ಸರ್ವರೀಶನ ಆಜ್ಞೆಧರಿಸುತ 1 ವಾಸುದೇವನಲ್ಲೆ ರತನು ವಾಸುದೇವನ ತೋರಿ ಪೊರೆವಾ ದೋಷವಿಲ್ಲದ ಮಹಾಮಹಿಮಾ ನಾಶವಿಲ್ಲದ ಜ್ಞಾನಸ್ವರೂಪಾ ವಾಸುದೇವ ಸುನಾಮಗೊಳ್ಳುತ ನಾಶಮಾಡುತ ದೋಷಜ್ಞಾನವ ಭಾಸಬೀರಲು ವೇದರಾಶಿಯ 2 ವನಜಜಾಂಡವ ಪೊತ್ತಿಹಧೀರ ವನಜನಾಭವ ಮುಖ್ಯದೂತ ಅನಿಲ ದೇವನ ತೃತೀಯ ರೂಪ ವನಜಸಂಭವ ಪದಕೆ ಬರುವ “ಶ್ರೀಕೃಷ್ಣವಿಠಲ” ದಣಿವು ಕಾಣದೆ ವೇದವತಿಯಲಿ 3
--------------
ಕೃಷ್ಣವಿಠಲದಾಸರು
ಮರೆಯದಿರೆಲೊ ಮನುಜಾ ಮಾಧವನನ್ನು ಮರೆಯದಿರೆಲೋ ಶುದ್ಧ ಮರುಳೆ ಮಾತನು ಕೇಳು ಪರಿಪರಿಯಲಿ ನಮ್ಮ ಪೊರೆವ ಕಾರುಣಿಕನ ಪ. ತನ್ನ ಸೇವೆಗೆ ಸಾಧನವಾಗಿಹ ದೇಹ- ವನ್ನು ಪಾಲಿಸಿದವನ ಯಿನ್ನು ನೀ ತಿಳಿಯದೆ ಅನ್ಯ ದೈವಗಳನ್ನು ಮನ್ನಿಸಿ ಮನದಣಿದನ್ನ ನಾಯಕನನ್ನು 1 ಹಸ್ತ ಪಾದಾದಿಗಳ ಕೊಟ್ಟದರಿಂದ ವಿಸ್ತರಿಸಿರುವಾನಂದ ತೋರುವ ಸುರ ಮಸ್ತಕ ಮಣಿಯನು ಮರೆತು ಮೂಢರ ಸೇರಿ ಬಸ್ತಕನಂತೆ ನಿರಸ್ತನಾಗದೆಯೆಂದು 2 ಮನೆಯಲಿ ನಿಲಿಸಿರುವ ವಾಕ್ಕಾಯಕರ್ಮ ಮನದಲಿ ತುಂಬಿರುವ ನಮ್ಮಯ ಸರ್ವ ವನು ತನಮನ ತಾನೆ ನೆನೆದು ಪಾಲನೆ ಗೈವ ವನಜನಯನ ಲಕ್ಷ್ಮಿಯಿನಿಯನ ಮಹಿಮೆಯ 3 ದುರಿತರಾಶಿಯನರದು ದುರ್ ಹೃದಯರ ತರಿದು ಕಾಲಿಂದಲೊದೆದು ಸಿರಿ ಸಹಿತವಾಗಿ ನಮ್ಮಲ್ಲಿರುವನ ಸರ್ವಾಮಯ ಹರ ಪದದಲ್ಲಿ ಭಾರವಿರಿಸು ವಿಚಾರಿಸು 4 ಬಿಡು ಬಿಡು ಭ್ರಾಂತಿಯನು ಮುರಾಂತಕನ- ಲ್ಲಿಡು ನಿನ್ನ ಚಿಂತೆಯನು ಕಡಿವನು ವೈರಿಗಳ ಕೊಡುವನು ಶುಭಗಳ ಒಡೆಯ ವೆಂಕಟಪತಿ ತಡಿಯ ತೋರುವನೆಂದು 5
--------------
ತುಪಾಕಿ ವೆಂಕಟರಮಣಾಚಾರ್ಯ