ಕರಗತನಾಗಿರಲು ಶ್ರೀಕೃಷ್ಣನು ಪ
ಪುರಜನಗಳಿಗಿನ್ನು ಕೊರತೆಗಳುಂಟೆ ಅ.ಪ
ಪರಮದಯದಿ ತನ್ನ ನೆರಳಿನೊಳೆಲ್ಲರ
ಪೊರೆಯುತಿರುವ ನಮ್ಮ ಸಿರಿವಲ್ಲಭನು 1
ನಾಡಿನ ಭಕುತರ ಕೂಡಿಸಿ ಮುದದಲಿ
ಬೇಡಿದ ವರಗಳ ನೀಡುವ ದೊರೆಯು 2
ಬಿಡಿಬಿಡಿ ನಿಮ್ಮಯ ಕಡು ಕ್ಲೇಶಗಳೆಂದು
ಗಡಗಡ ದುಂದುಭಿ ಹೊಡೆಸುವ ಧೀರನು 3
ಪತಿತ ಪಾವನೆಂದು ಪ್ರಥೆಯನು ಪೊಂದಿಹ
ಕ್ಷಿತಿಸುರರೊಡೆಯನು ಅತಿಸುಲಭದಿಲಿರೆ 4
ಎನ್ನನು ಸೇವಿಸಿ ಧನ್ಯರಾಗಿ ಎಂದು
ಸನ್ನೆಯನೀವ ಪ್ರಸನ್ನ ಶ್ರೀಮಾಧವ 5