ಒಟ್ಟು 110 ಕಡೆಗಳಲ್ಲಿ , 35 ದಾಸರು , 106 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವರ್ಣಿಸಲು ಸಾಧ್ಯವೇ ಧರೆಯೊಳಿನ್ನ ವರದೇಂದ್ರಗುರು ನಿನ್ನವರ ಮಹಿಮೆಯ ಪ ದಶಪ್ರಮತಿ ಸುಮತಾಖ್ಯ | ಬಿಸಜನಿಧಿಗೆ ಉಡುನಾಥ ವಸುಧಿ ಸುಮನಸವ್ರಾತ | ನಮಿತ ಖಾತ | ವಸುಧೀಂದ್ರ ಕರಜಾತ | ಸುಶರಣರ ಸುಖದಾತ | ವಸುಧೀಶ ಪಸರಿಸಿದ | ಅಸಮ ತವ ಚರಿತೆಯನು 1 ಸಾರ ಕನ್ನಡದಲಿ ನೀರಚಿಸುತಲಿ ತಂತ್ರ | ಸಾರ ಮಂತ್ರವ ಪರಮ ಕಾರುಣ್ಯದಿ || ಶ್ರೀರಂಗನೋಲಿಸಿದ ಧಾರುಣಿಪ ದಾಸರಿಗೆ ಸಾರಿ ಪೇಳಿದ ಪರಮೋಧಾರ ಜಿತಮಾರ 2 ಗುಣನಿಧಿ ಪ್ರಾಣೇಶದಾಸಾರ್ಯರ ಮನೆಯ ಹಿತ್ತಲದೊಳಗೆ ಬಣವಿ ಬುಡದಲಿ ಬಂದು ಘನ ತುಲಸಿ ರೂಪದಲಿ ಜನಕೆ ತೋರಿಸಿ ಚಿತ್ರ 3 ವಾದದಲಿ ರಾಮಾಖ್ಯ ವಾದಿಯಪ ಜಯ ಪೊಂದಿ ಗಜ ಭೂಷಣಾದಿಗಳನು || ಮೋದ ಬಡಿಸಿ ನಿನ್ನ ಔದಾರ್ಯ ಗುಣವ 4 ಶಾಮಸುಂದರ ಮೂಲ ರಾಮಚಂದ್ರನ ಚರಣ ತಾಮರಸ ಷಡ್ಜಪರಮ ಸುಗಣ ಧೀಮಂತ ಶ್ರೀಮಂತ್ರಧಾಮ ನಿಲಯರ ಪೂರ್ಣ ಪ್ರೆಮ ಸತ್ವಾತ್ರ ಮಮ ಸ್ವಾಮಿ ಸುಚರಿತ್ರ 5
--------------
ಶಾಮಸುಂದರ ವಿಠಲ
ವಾಯ ದೇವರ ಮಹಿಮಾ ವರ್ಣನೆ ಮೂರವತಾರ , ಷಟ್ಪದಿ ಶ್ರೀರಮೇಶ ವಿಧೀರ ವಿಪವೃತ್ರಾರಿ ವಿನುತ ಸರ್ವಾಧಾರ ನಿರುಪಮನೆ ಸ್ವತಂತ್ರಗುಣಾರ್ಣವ ಪ್ರಭುವೇ | ಪತಿ ಓಂಕಾರ ವ್ಯಾಹೃತಿ ವಾಚ್ಯ ಸರ್ವಪ್ರೇರಕ ಬಲಸುಭಾಸಕ ಹರಿಯೆ ವಾಗ್ರಸನೆ ನಮಿಪೆ 1 ಆಪ್ತನೆಂದರೆ ಪ್ರಾಣ ಸರಿ ಪರಮಾಪ್ತ ಹರಿಯ ಯಥಾರ್ಥಜ್ಞಾನ ಪ್ರಾಪ್ತಿ ಮಾಡಿಸಿ ವಿಷ್ಣು ಕರುಣವ ಕೊಡಿಸುವನು ತಾನು | ಆಪ್ತ ನೆನ್ನೆಯಥಾರ್ಥ ಪೇಳುವ ಮತ್ತೆ ನಿಶ್ಚಯ ಜ್ಞಾನವುಳ್ಳವ ಶಕ್ತ ಕರುಣ ಪಟುತ್ವಯುತನಿರ್ವಂಚನೆಗಳಿಂದ 2 ಶಿಷ್ಯ ವಾತ್ಸಲ್ಯ ಯುತ ಗುರುಸರಿ ವಿಶ್ವ ಜನಕನ ಪ್ರಥಮ ಭಕ್ತಶ್ವಾಸಗಿಂತಲು ಬೇರೆಯವನಿಲ್ಲ ಪವಮಾನನವ | ದೋಷ ಸಂಶಯ ರಹಿತ ಹರಿ ವಿಶ್ವಾಸ ಪಾತ್ರ ವಿಶೇಷ ಮಹಿಮಸುರಾಶ್ರಯ ನಿವನು ವಂಶನೆ ನಿಸುವ ಸೂತ್ರಗಾನಮಿಪೆ 3 ಯಾವ ಜ್ಞಾನ ಬಲ ಸ್ವರೂಪ ಸುದೇವ ಕ್ರೀಡಾದಿ ಗುಣಯುತ ಭವನಾವಿಕ ಪ್ರಭು ವಾಯುವಿನಗುಣ ಚರಿತೆ ವೃಂದಗಳ | ಪಾವನ ಬಳಿತ್ಥಾದಿ ಶೃತಿಗಳು ಸಾವಧಾನದಿ ಪೊಗಳುವವೊ ಆಭಾವಿ ಬ್ರಹ್ಮನ ಮೂಲ ರೂಪವುಜ್ಞಾನ ಬಲಮಯವು 4 ಮೂಲ ರಾಮಾಯಣ ವಿಶೇಷವ ಪೇಳುವ ಹನುಮನೇ ಪ್ರಥಮ ನಿಹಖೂಳ ದಿತಿ ಜನ ಸೈನ್ಯ ಮಾರಕ ಭೀಮ ನೆರಡೆನ್ನಿ | ಶೀಲ ಸಖಗಳ ನೀವ ಶಾಸ್ತ್ರವ ಪಾಲಿಸಿದ ಗುರು ಮಧ್ವರಾಯರೆ ಮೂಲ ಮುಖ್ಯ ಪ್ರಾಣ ದೇವನ ಮೂರನೆಯ ರೂಪ 5 ಪ್ರಾಣ ನೀತ್ರಯ ರೂಪಗಳು ಸಮವೆನ್ನುವದು ಸರ್ವ ವಿಷಯದಿ ಮುಕ್ಕಣ ಪ್ರಮುಖರ ಜ್ಞಾನ ದಾತೃವಿಗಿನ್ನು ಸಮವುಂಟೆ | ಜ್ಞಾನ ವಾಚಕ ಹನುಮ ಶಬ್ದವು ಪೂರ್ಣ ಹರಿ ಸಂದೇಶವೈದನು ಜಾನಕಿಗೆ ನಿರ್ದೋಷ ವಾಕ್ಯಗಳನ್ನು ಧೀಮಂತ 6 ಪಂಚರಾತ್ರಾಗಮ ಪುರಾಣ ವಿರಂಚಿ ಜನಕನ ತೋರ್ಪವೇದವು ವಂಚಿಸದ ಇತಿಹಾಸಗಳು ಕೂಡುತಲಿ ಸಪ್ತಗಳ | ಮಿಂಚಿಸುತ ಸುಜ್ಞಾನ ಪಾಪದ ಸಂಚಯ ತರಿವ ಕಾರಣದಿ ಬಲಿವಂಚಕನ ಭಕ್ತರು ಕರೆಯುವರು ಸಪ್ತಶಿವ ವೆಂದು7 ಶಾಸ್ತ್ರ ವಚನಕೆ ಮಾತೃ ವೆಂಬರು ಸಪ್ತ್ರ ಶಿವಕರ ಮಾತೃಗಳ ಧರಿಸಿಪ್ಪ ನಿವನೆಂದು | ಖ್ಯಾತನಾಗಿಹ ಭೀಮ ನಾಮದಿ ತೀರ್ಥವೆನ್ನಲು ಶಾಸ್ತ್ರವಿದಿತವು ಮತ್ತೆ ಮಧುವೆನೆ ಸುಖವು ಮುಕ್ತಿಯನೀವ ಶಾಸ್ತ್ರವನು 8 ಇತ್ತ ದೇವನೆ ಮಧ್ವನೆಂಬರು ಸುತ್ತುತೀತ್ರಯ ನಾಮದರ್ಥವ ನಿತ್ಯ ತಿಳಿಯುತ ಪಠಿಸಿ ಪಾಡಲುವಾಯು ದೇವನನು | ಭಕ್ತ ಬಾಂಧವನಾತ ವಲಿಯುತ ತತ್ವವೇತ್ತನ ಮಾಳ್ವ ನಿಶ್ಚಯ ಭೃತ್ಯನಾನೆಂತೆಂದು ಮಧ್ವರ ಸಾರಿ ಭಜಿಸುತಿರಿ9 ಪ್ರೌಢ ಮಧ್ವಗೆ ಪೂರ್ಣ ಪ್ರಜ್ಞನೆ ಈತ ಶ್ರುತಿ ಸಿದ್ದ | ಬೀಡು ಮಾಡಿಹ ವಿದ್ಯೆ ನೂಕುತ ತೊಂಡ ನೆಂದಿವರಡಿಗೆ ಬೀಳಲು ಪಾಂಡುರಂಗನ ಬಿಚ್ಚಿ ತೋರುವ ಗೋ ಸಮುದ್ರದಲಿ10 ಏನ ಪೇಳಲಿ ಏನಪೇಳಲಿ ಜ್ಞಾನನಿಧಿ ಸರ್ವಜ್ಞ ಗುರುವರ ತಾನು ಗೈದ ಮಹೋಪಕಾರವ ಮುಕ್ತಿಯೋಗ್ಯರಿಗೆ | ಜ್ಞಾನ ಬಾಹುದೆ ಬಿಟ್ಟರೀತನ ಶೂನ್ಯವೆ ಸರಿ ಎಲ್ಲ ಆತಗೆ ಮನ್ನಿಸುವನೆ ಅನನ್ಯವನು ಹರಿ ಶರಣು ಆಚಾರ್ಯ 11 ಈತನೇ ಆನಂದ ತೀರ್ಥನು ಈತನೇ ಆಚಾರ್ಯ ನಿಶ್ಚಯ ಈತನೇ ಸರಿಮಾತರಿಶ್ವನು ವಾಯುವಿನರೂಪ | ಈತ ಚರಿಸುವ ಶಾಸ್ತ್ರವ್ಯೂಹದಿ ದೈತ್ಯರಿಂದಾಚ್ಛಾದಿತ ಗುಣಯುತ ಆತ್ಮಪೂರ್ಣಾನಂದ ದೇವನ ಶಾಸ್ತ್ರಮಥಿಸುತಲಿ 12 ಸಾರ ವೃಂದಕ್ಕೆ ಚುಚ್ಚುವನು ದುರ್ವಾದಿ ಮತಗಳ ಕೆಚ್ಚೆದೆಯವನು ಗರ್ಜಿಸುತವೇದೋಕ್ತವಾಕ್ಯಗಳ | ಹೆಚ್ಚು ಹೆಚ್ಚೇ ಸರಿಯು ವಿಷ್ಣುವು ಸ್ವಚ್ಛ ಪೂರ್ಣಾನಂದ ಸುಖಮಯ ಪೃಚ್ಛ ಪರಿವಾರ ಸರಿ ವಿಧ್ಯಾದಿಗಳು ಹರಿಗೆಂದು 13 ಕಚ್ಚಿಲತೆಗಳ ಬಿಸುಡುವಂದದಿ ನುಚ್ಚು ಮಾಡುವ ಪ್ರಶ್ನೆನೀಕವ ಅಚ್ಚನಾರಾಯಣನೆ ಪ್ರೇರಕ ನಿವಗೆ ಜನಕನಿಹ | ಮೆಚ್ಚು ಮಗ ಶ್ರೀ ಲಕ್ಷೀ ದೇವಿಗೆ ರಚ್ಚೆತನುವನು ಕಿತ್ತುವೋಡಿಸಿ ಹೆಚ್ಚಿಸುವ ಸುಜ್ಞಾನ ದೀಪವ ಹರಿಯ ಪ್ರಧಮಾಂಗ14 ಕೊಟ್ಟು ಉಂಗುರ ಸುಟ್ಟುಲಂಕೆಯ ಬಿಟ್ಟು ಕಾಮವ ಮೆಟ್ಟಿಖಳರನು ಜಟ್ಟಿ ಹನುಮನು ಪಟ್ಟ ಪುತ್ರನ ಪದವಿ ಸಾಧಿಸಿದ | ಹುಟ್ಟಿ ಕುಂತಿಲಿ ಕುಟ್ಟಿ ಕುರುಕುಲ ಇಟ್ಟು ಮನದಲಿ ದಿಟ್ಟ ಕೃಷ್ಣನ ಅಟ್ಟಿ ಹಾಸದಿ ಮೆರೆದ ಭೀಮನು ಜ್ಞಾನ ಭಾಸ್ಕರನು15 ಹುಟ್ಟು ಸಾವಿನ ಕಟ್ಟು ಬಿಡಿಸಲು ಘಟ್ಟ ದಡಿಯಲಿ ಭಟ್ಟನೆನಿಸುತ ಬಟ್ಟೆ ತವಕದಿ ಭ್ರಷ್ಟದಸ್ಯುಗಳ | ಕೆಟ್ಟ ಮತಗಳ ಸುಟ್ಟು ವಾದದಿ ಸೂತ್ರ ಭಾಷ್ಯವ ನೆಟ್ಟ ಸಂತರ ಮನದಿ ವಿಷ್ಣುವ ಶ್ರೇಷ್ಠಗುರುಮಧ್ವ16 ಏಕೆ ಭಯ ನಮಗಿನ್ನು ನಿರಯದ ಏಕೆ ಸಂಶಯ ಮುಕ್ತಿ ವಿಷಯದಿ ಏಕೆ ಕಳವಳ ಮಧ್ವರಾಯರ ಶಾಸ್ತ್ರ ಪೀಯೂಷ | ಜೋಕೆಯಿಂ ಪ್ರತಿದಿನವು ಸೇವಿಸೆ ಶ್ರೀಕಳತ್ರನು ಕೈಯ ಬಿಡುವನೆ ನಾಕಪತಿಯಿಂಬಿಟ್ಟು ಸಲಹುವ ಶಾಸ್ತ್ರಸಿದ್ಧವಿದು 17 ಹೆಚ್ಚು ಮಾತೇಕಿನ್ನು ಹರಿಮನ ಮೆಚ್ಚುಯೆನಿಸಿಹ ಮಧ್ವರಾಯರು ಬಿಚ್ಚಿತೋರಿದ ತೆರದಿ ಶೃತಿಗಳ ಭಜಿಸಿಖಳ ಜನಕೆ | ಬಚ್ಚಿಡುತ ವಿಜ್ಞಾನ ಮರ್ಮವ ನುಚ್ಚು ನೂಕುತ ದುರ್ಮತಕಿಡಿರಿ ಕಿಚ್ಚು ಕಮಲೇಶ ನೊಲಿಮೆಗೆ ಬೇರೊಂದು ಪಥವಿಲ್ಲ 18 ನಮ್ಮಹಿರಿಯರ ಖಿನ್ನನುಡಿಗಳ ನೊಮ್ಮನದಿ ನೀವೆಲ್ಲ ಕೇಳಿರಿ ರಮ್ಮೆಯರಸಗೆ ಸಮ್ಮತದ ಸಚ್ಛಾಸ್ತ್ರದರ್ಪಣವ | ಹೆಮ್ಮೆಯಿಂದಲಿ ಕೊಟ್ಟು ಬಂದೆವು ಒಮ್ಮೆಯಾದರು ನೋಡುವರೆ ಈ ನಮ್ಮ ಸಂತತಿ ಹಾ ಹರಿ ಹರೀಯೆಂಬ ಕ್ರಾಂತಿಯುತ19 ಉಣ್ಣಿರುಣ್ಣಿರಿ ಮಧ್ವಕಂದರೆ ಭವ ಹುಣ್ಣುವಳಿಯಿರಿ ಅಣ್ಣ ಪ್ರಾಣನದಯವ ಯಾಚಿಸಿಘನ್ನ ಶಾಸ್ತ್ರಾನ್ನ | ಅನ್ನ ಶೃತಿಗಳು ವಿವಿಧ ಸ್ಮøತಿಪ ಕ್ವಾನ್ನ ಪಾಯಸ ಗೀತೆ ಭಕ್ಷ್ಯಗಳೆನ್ನಿ ಬಗೆ ಬಗೆ ಸರ್ವ ಮೂಲವ ಸೂತ್ರಗಳೆ ಸಾರು 20 ತುಪ್ಪವೆನ್ನಿರಿ ನ್ಯಾಯ ಸುಧೆಯನು ಗೊಪ್ಪರಾಜರ ಗ್ರಂಥ ಹಲ್ಪವು ಅಪ್ಪರಾಯರ ವಾಣಿ ಕ್ಷೀರವು ದಾಸ ಸಾಹಿತ್ಯ | ತಪ್ಪದೆಲೆ ತಿಂಬಂಥ ತಿಂಡಿಯು ಚಪ್ಪರಿಸಿ ಭಾರತದ ಕೂಟನು ವಪ್ಪುವನು ಶ್ರೀ ಕೃಷ್ಣ ದೇವನು ಭಕ್ತ ನುಣ್ಣಲಿವ 21 ಎಂತು ಪೊಗಳಲಿ ನಿಮ್ಮ ಗುರುವರ ಹಂತ ಸುರಗಣ ವೆಲ್ಲ ನಿಮ್ಮಡಿ ನಿಂತು ಪಡೆದರು ಜ್ಞಾನ ಪ್ರಾತರ್ನಾಮಕನೆಶರಣು | ಕಂತೆ ಮತಗಳ ನಾಶಗೈದನ ನಂತ ಮಹಿಮನೆ ದೀನ ನಾನಿಹೆ ಕುಂತಿ ನಂದನ ನೀನೆ ತಿಳಸೈ ಸಕಲ ಶಾಸ್ತ್ರಾರ್ಥ 22 ಮೂರ್ತಳೆನಿಸುವ ಚಂದ್ರಮಾನಿನಿನಾಥ ಸೂರ್ಯ ನೊಳ್ ಆದಿತ್ಯ ನಾಮದಿ ನಿಂತು ದಿಕ್ಪತಿಗಳಿಗೆ ಶಕ್ತಿಗಳ | ಇತ್ತು ಸೃಷ್ಠಿಯ ಕಾರ್ಯ ವೆಸಗುವೆ ಉತ್ತರಾಯಣ ಪಗಲು ಮಾನಿಯೆ- ನಿತ್ಯ ಪ್ರೇರಿತ ನೀಪ್ರಜಾಪತಿನಾಮ ಹರಿಯಿಂದ 23 ಖ್ಯಾತ ಮೂರ್ತಾ ಮೂರ್ತ ಧಾರಕೆ ತತ್ವಪತಿಗಳ ಪೋಷತನುವಲಿ ಮೃತ್ಯುಹಾಗಶನಾಪಿಪಾಸಾಪಾನ ನಾಮಗಳ | ಎತ್ತಿ ನಡಿಸುವೆ ದೇಹ ಕಾರ್ಯವ್ರಾತ ಬಿಡಲೇನೊಂದು ನಡೆಯದು ಮಾತರಿಶ್ವನೆ ನಿಧಿಗು ಆರ್ಯುರ್ದಾತ ನೆನಿಸಿರ್ಪೆ 24 ಅನ್ನ ವಿಧಿಯಿಂ ಕೊಂಬೆ ಸಮಸರಿ ಯನ್ನ ಬ್ರಹ್ಮಗೆ ಜೀವ ಗಣತಾವುಣ್ಣಲಾರರು ನಿನ್ನ ಬಿಡೆ ಪ್ರಾಣದಿ ಪಂಚಕನೆ | ಸ್ವಪ್ನ ನಿದ್ರಾ ಸಮಯದೊಳ್ ಹರಿಯನ್ನು ಕೂಡಿರೆ ಕರಣಪರು ಘನಯಜ್ಞ ನಡಿಸಿ ಸರ್ಮರ್ಪಿಸುವೆ ನೀನೊಬ್ಬ ದೇವನಿಗೆ 25 ನಿನ್ನ ನಂಬಿದ ಭಕ್ತನಿಗೆ ಭವ ಹುಣ್ಣು ಮುಟ್ಟದು ವಿಷ್ಣು ವಲಿಯುತ ಮನ್ನಿಸುವ ಹರಿಯಾಜ್ಞೆಯಿಂಮುಕ್ತಿದನು ನೀ ಹೌದು | ವಿಶ್ವ ವಂಶನೆ ನಿನ್ನ ಮಹಿಮೆಯಗಣ್ಯ ಸಿದ್ಧವು ನಿನ್ನ ಧೊರೆ ಹರಿ ಒಬ್ಬ ಜೀವೋತ್ತುಮನೆ ಅಶರೀರ26 ಜ್ಞಾನ ಬಲ ಐಶ್ವರ್ಯಗಳು ಪರಿಪೂರ್ಣ ಸರಿ ವೈರಾಗ್ಯ ಹಾಗೆಯೆ ಪ್ರಾಣನಿನ್ನಲಿ ಕರಿಸುವೆಯೊ ಆಧ್ಯರ್ಧ ನಾಮದಲಿ | ಮಾನ್ಯ ವಿಷ್ಣುಸಹಾಯ ನಿನಗೈನ್ಯೂನ ವಿಲ್ಲವು ಯಾವ ತೆರದಲುಕಾಣೆ ಅಪಜಯ ಜೀವ ಸಾಧನೆಯೆಲ್ಲ ನಿನ್ನಿಂದ 27 ಶೇಷಗಸದಳ ನಿನ್ನ ಪೊಗಳಲು ಶೇಷ ಸರಿ ಬಡದಾಸನಹೆ ವಿಶ್ವಾಸದಿಂ ಸಂವತ್ಸರನೆ ನೀಕಾಯಬೇಕೆಂಬೆ | ಏಸು ಜನ್ಮಗಳನ್ನು ಕೊಟ್ಟರು ಶ್ವಾಸ ಪತಿತವ ಮತದಿ ಪುಟ್ಟಿಸಿ ದಾಸ ಭಾಗ್ಯವ ನೀಡು ಹರಿಯೊಳ್ ಶುದ್ಧ ಭಕ್ತಿಯುತ28 ಎರಡು ಸಹ ಮೂವತ್ತು ಲಕ್ಷಣ ವಿರುತಿಹ ಜಗದ್ಗುರುವೆ ವಿಷ್ಣುವಿಗೆರಡು ಎರಡು ಸರಿಯೆಂತೆಂದು ಸ್ಥಾಪಿಸಿ ಎರಡು ವಿದ್ಯೆಗಳಿರವು ತೊರುವ ಲೆರಡು ಸುಖಗಳ ಪಡೆಯೆಸಾಧನ ಮಾರ್ಗ ನೀಡ್ವೆಬತ 29 ಸರ್ವ ಶಕ್ತನೆ ಶರ್ವ ವಿನುತನೆ ಸರ್ವ ಸರ್ವಗ ಹಿರಿಯ ತನಯನೆ ಸರ್ವ ಜಗದಾಧಾರ ಪೋಷಕ ಸರ್ವ ತೋವರನೆ | ಸರ್ವ ಕಾಲದಿ ಸರ್ವ ದೇಶದಿ ಸರ್ವ ಗುಣದಿಂ ಹರಿಯ ಯಜಿಸುವ ಸರ್ವ ಸದ್ಗುಣ ಪೂರ್ಣ ದೋಷವಿದೂರ ಸರ್ವಜ್ಞ 30 ಹಿಂದೆ ಪೂರ್ವಜರೆಲ್ಲ ಕೂಡುತಲೊಂದು ಪಾಯವಗೈದು ಮೃತ್ಯುವತಂದು ದಿವಿಜ ವೃಂದಕೆ ಕುಂದು ವದಗಿಸಲು | ಕಂದುತಳಿಯಲ್ ನಿಖಿಲ ಸುರಗಣ ಕುಂದು ಮೃತ್ಯುವ ಗೈದು ಪುಡಿಪುಡಿ ವಂದನಾರ್ಹನು ಒಬ್ಬನೀನೇ ಯೆಂದು ಸ್ಥಾಪಿಸಿದೆ 31 ಪಾಹಿ ಅಮ ಶುಚಿ ಯೊಗ ಕ್ಷೇಮನೆ ಪಾಹಿ ಅಮರಲಲಾಮ ಅನಿಲನೆ ನಿರವದ್ಯ | ಪಾಹಿ ಸತ್ಯ ವಿಶುದ್ಧ ಸತ್ವನೆ ಪಾಹಿ ಲಕ್ಷ್ಮೀ ಪುತ್ರ ಭೃತ್ಯನೆ ಪಾಹಿ ಜೀವಗ ಬಾದರಾಯಣಪ್ರೀಯ ಮಹರಾಯ 32 ಪಾಹಿ ಹನುಮನೆ ಭೀಮ ಮಧ್ವನೆ ಪಾಹಿ ದುರ್ಮತ ಧ್ವಾಂತ ಸೂರ್ಯನೆ ಪಾಹಿ ನತಜನ ಪಾಲ ಪ್ರಾಣನೆ ಪಾಹಿ ಶ್ರೀಸುತನೆ | ಪಾಹಿ ಜಗದಾಧಾರ ಸೂತ್ರನೆ ಪಾಹಿ ಸಾಮನೆವಂಶ ದೂರನೆ ಪಾಹಿ ಹರಿಯಚ್ಛಿನ್ನ ಭಕ್ತನೆ ಪಾಹಿ ವಿಜ್ಞಾನ 33 ಪಾಹಿ ಋಜುಪತಿ ವಾಯುಕೂರ್ಮನೆ ಪಾಹಿ ಜೀವ ಲಲಾಮ ಗುಣನಿಧಿ ಪಾಹಿ ಶುಚಿ ಸರ್ವಜ್ಞ ಸಾಮಗಭಾವಿ ಶತಮೋದ | ಪಾಹಿ ಸತ್ಯನೆ ಕಲಿವಿದಾರಣ ಪಾಹಿ ಗುರು ಗೋವತ್ಸ ರೂಪಿಯೆ ಪಾಹಿ ಮಿಷ್ಣು ಪದಾಬ್ಜಮಧುಕರ ಭಾರತೀ ಕಾಂತ 34 ಪಾಹಿ ಅಮೃತನೆ ವಿಶ್ವರಜ್ಜುವೆ ಪಾಹಿ ಬೃಹತೀ ಛಂದ ಮಾನಿಯೆ ಪಾಹಿ ಹಂಸೋಪಾಸಕ ಪ್ರಭು ಆಖಣಾಶ್ಮಸಮ | ಪಾಹಿ ಸಾಯಂಖ್ಯಾತ ಜೀವಗ ಪಾಹಿ ಜಗಚೇಷ್ಠಾ ಪ್ರವರ್ತಕ ಪಾಹಿ ಅನಿಲನೆ ಶೇಷವಿಪಶಿವ ವಂದಿತಾಂಘ್ರಿಯುಗ 35 ಪಾಹಿ ಪರಿಸರ ಪಂಚ ಕೋಶಗ ಪಾಹಿ ಗುಣನಿಧಿ ಕೊವಿದೋತ್ತಮ ಪಾಹಿ ನಮಿಸುವೆ ಅಣುಮಹದ್ಘನ ರೂಪ ವಿಖ್ಯಾತ | ಪಾಹಿ ವಿಶ್ವಗ ವ್ಯಸನ ವರ್ಜಿತ ಪಾಹಿ ಹರಿಯನು ನಿತ್ಯನೋಳ್ಪನೆ ಪಾಹಿ ವಿಷ್ಣುದ್ವಾರ ಶರಣೈ ಪಾಹಿ ಹರಿ ಸಚಿವ 36 ಜಯ ಜಯವು ಶ್ರೀ ಹನುಮ ಭೀಮಗೆ ಜಯ ಜಯವು ಶ್ರೀ ಮಧ್ವರಾಯಗೆ ಜಯ ಜಯವು ತತ್ವೇಶರರಸಗೆ ಮುಖ್ಯಪ್ರಾಣನಿಗೆ | ಜಯ ಜಯವು ಜಯತೀರ್ಥ ಹೃಸ್ಥಗೆ
--------------
ಕೃಷ್ಣವಿಠಲದಾಸರು
ವೇದವನಿದನವಧರಿಸು ಮಂತ್ರಭೇದವಾದರು ಮತ ಬೇರಲ್ಲವೆನಿಸು ಪಆದಿಯೊಳ್ ಋಗ್ವೇದದಲ್ಲಿ ಅಗ್ನಿಯಾದನು ದೇವತೆಯಾ ಯಜ್ಞದಲ್ಲಿಈದೇವ ಋತ್ವಿಕ್ಕಿನಲ್ಲಿ ಹೊಂದಲಾದರಿಸುತಲಾಗ ಹೊಗಳ್ವರೆಂಬಲ್ಲಿ 1ಹೋತೃತ್ವದಲ್ಲಿಯು ನಿಂದು ಸ್ವರ್ಣಧಾತುವು ತಾನಾದ ದಕ್ಷಿಣೆಗೆಂದುಈ ತೆರದಲಿ ದೇವ ಬಂದು ವಿಪ್ರವ್ರಾತಸ್ತೋತ್ರಕೆ ುೀತ ನೋಡಲಾದನೆಂದು 2ಸುರರಿಗೀತನು ಮುಖ್ಯ ಸಖನು ದ್ವಿಜವರರ್ಕೊಟ್ಟಾಹುತಿಯವರ್ಗಿತ್ತು ವ್ಟೃಯನುಬರಿಸುವನೆಂದೀತನನ್ನು ನೀನೆಇರಿಸಿದೆ ತಿರುಪತಿಯಾಳ್ವ ವೆಂಕಟನು 3ಓಂ ಮುಚುಕುಂದಪ್ರಸಾದಕಾಯ ನಮಃ
--------------
ತಿಮ್ಮಪ್ಪದಾಸರು
ಶರಣು ಶರಣು ಕೃಷ್ಣಕೃಷ್ಣ ಶರಣು ಶರಣು ರಾಮ ರಾಮ ಶರಣು ಶರಣು ಶ್ರೀನಿವಾಸ ಶರಣು ಶರಣು ಶ್ರೀ ಹರೇ ಪ ಗುರುಸು ಭಕ್ತಿ ನೀಡಿ ಎನಗೆ ವರಿಸಿ ಶುದ್ಧ ದಾಸನೆಂದು ಕರುಣ ತೋರೊ ಕೇಶವ ಅನಂತ ರೂಪಿಯೇ ಅ.ಪ ಲೇಸಿನಿಂದ ಬ್ರಹ್ಮಶಿವರ ಪ್ರೇರಿಸುತ್ತ ಜಗವ ಪೊರೆವೆ ದಾಸನೆಂದು ಮೊರೆಯ ಹೊಕ್ಕೆ ಕಾಯೊ ಕೇಶವಾ 1 ವಾರಿನಿಲಯ ದೋಷದೂರ ಪೂರ್ಣಕಾಮ ಮುಕ್ತರೀಶ ಶರಧಿ ನಾರಾಯಣ 2 ವೇದಮಾತೆ ಶೃತಿ ಸುಗೀತೆ ವೇದಮಾನಿ ಲಕ್ಷಿರಮಣ ಶೂನ್ಯ ಮಾಧವ 3 ವಿನುತ ಸಾರ ವೇದಬಲ್ಲ ಸಾಧು ಪ್ರಾಪ್ಯ ವೇದಪಾಲ ಶರಣು ಗೋವಿಂದ 4 ವಿಶ್ವಜನಕ ವಿಶ್ವಪಾಲ ವಿಶ್ವವ್ಯಾಪ್ತ ವಿಶ್ವಭೋಕ್ತ ವಿಶ್ವಜೂತಿ ವಿಶ್ವಬಲನೆ ಶರಣು ವಿಷ್ಣುವೆ 5 ಆದಿ ದೈತ್ಯರನ್ನು ಕೊಂದು ಮೇದಿನೀಯ ಪೊರೆದ ದೇವ ಬಾಧೆ ಹರಿಸು ಮೂರು ವಿಧಧ ಮಧುಸೂದನ 6 ಲೋಕತ್ರಯವ ನಳೆದ ನೇಕ ಏಕನಿನಗೆ ಸಾಟಿಯಾರು ಜೋಕೆಯಿಂದ ಸಾಕಬೇಕು ತ್ರಿ-ವಿಕ್ರಮ 7 ಸೋಮ ಹಳಿದ ಕಾಂತಿಧಾಮ ನೇಮದಿಂದ ಬಲಿಯ ಕಾಯ್ದೆ ಹೇಮ ಜ್ಯೋತಿ ಪೂರ್ಣ ಸುಖಿಯೆ ಶರಣು ವಾಮನ 8 ಬೊಮ್ಮಶಿವರ ಕುಣಿಸಿ ಆಳ್ವ ಅಮ್ಮ ಪ್ರಕೃತಿಯನ್ನು ಧರಿಸಿ ಸುಮ್ಮಗೇನೆ ಜಗವ ಕಾವೆ ಶರಣು ಶ್ರೀಧರ 9 ಕರಣ ವ್ರಾತದಲ್ಲಿ ನಿಂತು ಕರಣಕಾರ್ಯಗಳನು ನಡಿಸಿ ಕರಣ ಪತಿಗಳನ್ನು ಪೊರೆವೆ ಹೃಷಿಕೇಶನೆ 10 ಉದರದಲ್ಲಿ ಜಗವ ಪೊತ್ತು ಸದರದಿಂದ ಒಪ್ಪಿಕೊಂಡೆ ಉದರದಲ್ಲಿ ರಜ್ಜುಭಂಧ ದಾಮೋದರ 11 ಚೊಕ್ಕವಿಧಿಯ ಹಾಗೆ ಜಗವ ಕುಕ್ಷಿಯಲ್ಲಿ ಪಡೆದ ದೇವ ಶರಧಿ ಶಯನ ಪದ್ಮನಾಭನೆ12 ಭಕ್ತಜನರ ಪಾಪಸೆಳೆವ ಶಕ್ತ ಪ್ರಲಯ ಸ್ತುತಿಗೈವ ದೇವ ಮುಕ್ತಿದಾತ ವಿಶ್ವಕುಕ್ಷಿ ವಾಸುದೇವನೆ 14 ಮೇರೆಯಿರದ ಕಾಂತಿಮಯನೆ ಸೇರಿ ಭಾಸ ಕೊಡುವೆ ರವಿಗೆ ಬೀರಿ ಜ್ಞಾನ ಭ್ರಾಂತಿ ಹರಿಸು ಪ್ರ-ದುಮ್ನನೆ 15 ನೀ ನಿರೋಧ ಕಾಣೆ ಎಂದು ನೀನೆ ಸಿಗುವೆ ಭಕ್ತಿ ಬಲೆಗೆ ಕೃಪಣ ಕ್ಷಮಿಸು ಅನಿ-ರುಧ್ಧನೆ 16 ಕ್ಷರರು ಜೀವ ರಾಶಿ ಎಲ್ಲಕ್ಷರ ವಿರುಧ್ಧ ಲಕ್ಷ್ಮಿತಾನು ವರನು ಭಿನ್ನ ಉಭಯರಿಂದ ಪುರುಷೋತ್ತಮ 17 ಕರಣಗಳಿಗೆ ಸಿಗುವನಲ್ಲ ಕರಣಗಳಲಿ ಭೇದವಿಲ್ಲ ಕರಣಜಯವ ಸಿಧ್ಧಿಸೆನಗೆ ಅ-ಧೋಕ್ಷಜ18 ದೋಶರಹಿತ ಮುಕ್ತರೀಶ ನಾಶರಹಿತ ಲಕ್ಷ್ಮಿರಮಣ ಈಶಬಿಂಬ ಜೀವ ಹೃಸ್ಥ ನಾರಸಿಂಹನೆ 19 ಜೀವರೊಡನೆ ವಿತತ(ಇರುವೆ) ಅಚ್ಯುತ 20 ಇಂದ್ರನನುಜ-ನಿಜಮಹೇಂದ್ರ ತಂದೆ ಸುಖವ-ದಿವಿಜಣಕೆ ವಂದ್ಯ ವಂದ್ಯ-ವಂದಿಸುವೆನು ಶ್ರೀ- ಉಪೇಂದ್ರನೆ 21 ಸೃಷ್ಠಿಗೈದು ಜಗವ ಲಯಿಪೆ ದುಷ್ಟದಮನ ಶಿಷ್ಟವರದ ಹುಟ್ಟು ಸಾವು ಕಟ್ಟು ಬಿಡಿಸೊ ಶ್ರೀ ಜನಾರ್ದನ 22 ಯಜ್ಞಭೋಕ್ತ ಮನುವ ಪೊರೆದೆ ಭಗ್ನಗೈಸಿ ದೋಷವೆನ್ನ ಜ್ಞಾನ ನೀಡೋ ಸುಜ್ಞನೆನಿಸು ವಾಜಿವದನ ಶರಣು ಶ್ರೀಹರೇ 23 ವಿಭವ ಮೂರ್ತಿ ಭಕ್ತಮನವ ಪಾಪ ಸೆಳಿವೆ ರಿಕ್ತನಾನು ಸರ್ವವಿಧಧಿ ಕಾಯೊ ಶ್ರೀಕೃಷ್ಣ 24 ಸರ್ವ ಶಬ್ದವಾಚ್ಯ “ಶ್ರೀಕೃಷ್ಣವಿಠಲ”ನನ್ನು ನೆನೆಯೆ ಸರ್ವಸುಖಗಳಿತ್ತುಕಾವ ಜಿಷ್ಣು ತೆರದಿ ಸತ್ಯಹೋ 25
--------------
ಕೃಷ್ಣವಿಠಲದಾಸರು
ಶಾರದೆ ಪೊರೆಯೆನ್ನಾ - ಮಾತೆಯೆತೋರಿಸಿ ತವ ಚರಣಾ ಪ ಶಾರದೆ ತವ ಪದ | ಸಾರಿ ಭಜಿಸುವೆನುದೊರಗೈವುದೆನ್ನ | ಭಾರಿ ಅಜ್ಞಾನವ ಅ.ಪ. ವೀತ ದುರಿತೆ ಖ್ಯಾತೇ | ಶಿವಮಾತೆಯೆ ಸದ್ಗುಣ ಗಣ ವ್ರಾತೇ ||ಶಾತಕುಂಭೋಧರ | ಪ್ರೀತಿ ವಿಷಯ ಜಗನ್‍ಮಾತೆಯೆ ಹರಿಗುಣ | ಗಾಥೆಯ ಗೀತೆಯೆ 1 ಹಯಾಸ್ಯ ಪದದಲಿ 2 ಈಶಾಹಿ ವಿಹಗೇಂದ್ರಾ | ಸ್ವರ್ಗಾಧೀಶಾಧಿಪರು ಛಂದಾ ||ಮೀಸಲು ಮನದಲಿ | ಕ್ಲೇಶಗಳಿಲ್ಲದೆತಾಸು ತಾಸಿಗೆ ನಿನ್ನೆ | ಸೂಸಿ ಭಜಿಸುವರು 3 ನರಹರಿ ಗುರುಭಕ್ತೀ | ಬ್ರಾಹ್ಮೀಸರಸ್ವತಿ ಗಾಯಿತ್ರೀ ||ಅರ ವಿದೂರ ನರ | ಹರಿಯನು ಭಜಿಸುವಸುರ ಚಿರ ವಾಣಿಯ | ಕರುಣಿಸು ವಾಣೀ 4 ಪರ ಬೊಮ್ಮಾ |ಭಾವಜ ಪಿತ ಗುರು | ಗೋವಿಂದ ವಿಠಲನಓವಿ ಭಜಿಸುವಂಥ | ಭಾವವ ನೀಯೇ 5
--------------
ಗುರುಗೋವಿಂದವಿಠಲರು
ಶ್ರೀ ಕಮಲನೇತುರ | ಪುಣ್ಯಗಾತುರ | ಸಾಕಾರ ಕ್ಷಣ ಮಾತುರ | ನೀ ಕರುಣದಿಂದ | ವಾಕು ಲಾಲಿಸು | ಬೇಕು ವೇಗದಲಿ | ಗೋಕುಲಾಂಬುಧಿ ರಾಕಾಂಬುಜ ಲಾ | ವಕರ ತೊಲಗಿಸಿ | ಸಾಕುವುದೆನ್ನ ನಿ | ಜಕರ ವಿಡಿದೂ ಪ ನಿತ್ಯ ಅಜಾತಾ | ಕುಂಭ ಮಕುಟನೀತಾ | ಮಾವ ಮರ್ದನ ನಿರ್ಭೀತಾ || ದೇವಮರರ ಕಾ | ವ ಭಕ್ತರ | ಜೀವನೆ ವರ | ವೀವನನುದಿನ | ಆವು ಕಾವುತ ಪೋಗಿ | ದಾ ವಿಷ ಬಿಡಿಸದೆ || ಶ್ರೀ ವಲ್ಲಭ ನಿನಗಾವವನೆಣೆ ತ್ರಿ | ಭುವನದೊಳಗತಿ | ಸೇವಕ ಜನರಿಗೆ ಕೈವಲ್ಯವನು ಕೊಡುವಾ 1 ಪೂತನಿ ಪ್ರಾಣಾಪಹಾರಾ | ಪರಮ ಸುಂದರಾ | ಪರಿಹಾರಾ | ಮರಣಜರ ವಿದೂರಾ | ಭೂತಿ ಉಳ್ಳಿಂದ್ರ ಕುಮಾರಾ | ಸೂತ ನೀನಾಗಿ ಭೂತಳದೊಳು | ವ್ರಾತ ಯಮುನೆಯ | ಭ್ರಾತನ್ನ ನಗರಿಯ | ಯಾತನಿಗಟ್ಟಿದೆ | ಪೂತುರೆ ನಿನ್ನ ಮಾ | ಯಾತನಕೇನೆಂಬೆ | ಖ್ಯಾತಿ ಮೂರುತಿ ಬೆನ್ನಾತು ಕಾಯೊ ಪಾರಿ | ಜಾತವ ತಂದ | ಮಿತ ಮಹಿಮ ಜಗ | ತಾತಾ ಬೊಮ್ಮಾದಿ ವಿನುತಾ 2 ತೋಷ ಗೋಪಾಲ ಮಾನಿಸಾ ವೇಷ | ಆ ಪಾರ ರತುನ ಭೂಷಾ | ನಂತಪ್ರಕಾಳಾ | ತಾಪಸಿಗಳ ವಿಲಾಸಾ || ಕೋಪ ಮೊದಲಾದ ತಾಪತ್ರಯಗಳ | ನೀ ಪೋಗಾಡು ಉ | ಡುಪಿ ಸದನನೆ ಪಾಪರಹಿತ ಮಧ್ವಪತಿ ಕರದಿಂ | ದ ಪೂಜೆಗೊಂಡ ಪ್ರತಾಪನೆ ಜ್ಞಾನದ | ದೀಪ ಬೆಳಗಲಿ | ರೂಪವ ತೋರಿಸು ಯದುಪಾ ಎನ್ನ ಸಮೀಪಾ 3
--------------
ವಿಜಯದಾಸ
ಶ್ರೀ ಕಲ್ಯಾಣಿ ಸುಗುಣಮಣಿ ಗಿರಿಜೆ ಪ-ರಾಕೆ ಬಾಗಿಲ ತೆಗೆಯೆಸಾಕು ನೀನಾರು ನಿನ್ನಯ ನಾಮವನು ಪ-ರಾಕು ಮಾಡದೆ ಪೇಳಯ್ಯ 1 ಕಾಮಿನಿಯರೊಳು ಕಟ್ಟಾಣಿ ಪಾರ್ವತಿ ಕೇಳೆಕೌಮಾರಿ ಕಾಣೆ ಜಾಣೆಕೌಮಾರಿಯಾದರೊಳ್ಳಿತು ನಡೆ ಋಷಿಗಳಸ್ತೋಮದ ವನಕಾಗಿ 2 ಕಾಳ ಪನ್ನಗವೇಣಿ ಕಲಕೀರವಾಣಿಕೇಳೆ ಶೂಲಿ ಕಾಣೆಲೆ ಕೋಮಲೆಶೂಲಿ ನೀನಾದರೊಳ್ಳಿತು ನಡೆ ವೈದ್ಯರಜಾಲವಿದ್ದೆಡೆಗಾಗಿ3 ನೀಲಕುಂತಳೆ ನಿಗಮಾಗಮನುತೆ ಕೇಳೆನೀಲಕಂಠನು ಕಾಣೆನೀಲಕಂಠನು ನೀನಾದರೆ ತರುಗಳ ಮೇಲೆಕುಳ್ಳಿರು ಪೋಗಯ್ಯ4 ಸೋನೆ ಕೋಕಿಲಗಾನೆಸ್ಥಾಣು ನಾನೆಲೆ ಜಾಣೆನೀನಾದರೊಳ್ಳಿತು ನಡೆ ವಿಪಿನಸ್ಥಾಣದೊಳಿರು ಪೋಗಯ್ಯ5 ಎಸಳುಗಂಗಳ ಬಾಲೆ ಎಸವ ಮೋಹನಮಾಲೆಪಶುಪತಿ ಕಾಣೆ ಕೋಮಲೆಪಶುಪತಿಯಾದರೊಳ್ಳಿತು ನಡೆಗೋಗಳವಿಸರವ ಕಾವುದಕೆ 6 ಜಾತಿನಾಯಕಿ ಕೇಳೆ ನೂತನವೇತಕೆಭೂತೇಶ ಕಾಣೆ ಜಾಣೆಭೂತೇಶನಾದರೊಳ್ಳಿತು ನಡೆ ಭೂತವ್ರಾತದ ವನಕಾಗಿ7 ಮಿಂಚಿನ ಗೊಂಚಲ ಮುಂಚಿ ಪಳಂಚುವಚಂಚಲನೇತ್ರಯುಗೆಅಂಚಿತಮಾದ ವಿಪಂಚಿಯ ಸ್ವರವ ಪಳಂಚುವಿಂಚರದಬಲೆ 8 ಕರಗಿಸಿ ಕರುವಿಟ್ಟೆರದ ಚಿನ್ನದ ಬೊಂಬೆಸುರುಚಿಕರ ಸುನಿತಂಬೆಪರಿಪೂರ್ಣ ಶರದಿಂದುವದನೆ ಕುಂದರದನೆವರಸುಗುಣಾವಲಂಬೆ 9 ಕುಂಕುಮರೇಖಾಲಂಕೃತೆ ಪರತರೆಪಂಕಜಸಮಪಾಣಿಶಂಕರಿ ಪಾಪಭಯಂಕರಿ ಸರ್ವವಶಂಕರಿ ಶುಭವಾಣಿ10 ಚಂಡಮುಂಡಾಸುರಖಂಡನ ಪಂಡಿತೆಮಂಡಲತ್ರಯನಿಲಯೆಮಂಡಿತ ನವರತ್ನಖಚಿತ ಮಹೋಜ್ವಲಕುಂಡಲೆ ಮಣಿವಲಯೆ 11 ವರದಾನದಿಯ ತೀರವಾಸ ಶ್ರೀ ಕೆಳದಿಯಪುರದ ರಾಮೇಶ ಕಾಣೆಪುರದ ರಾಮೇಶನಾದರೆ ನೆರೆಬಾಯೆಂದುಕರೆದಳು ಗಿರಿಜಾತೆ12 ಗಿರಿಜಾ ಶಂಕರರ ಸಂವಾದದ ಪದಗಳಬರೆದೋದಿ ಕೇಳ್ದರಿಗೆಪರಮ ಸೌಭಾಗ್ಯ ಸಂತಾನಗಳನು ಕೊಟ್ಟುಪೊರೆವನು ರಾಮೇಶ13
--------------
ಕೆಳದಿ ವೆಂಕಣ್ಣ ಕವಿ
ಶ್ರೀ ನರಸಿಂಹದೇವ ಶರಣ ರಕ್ಷಕನೆ ದಾನವಾರಿ ಸುಭಕ್ತಾಧೀನ ಮೂರುತಿಯೆ ಪ. ಹರಿ ತನ್ನ ದೈವವೆಂದು ಸ್ಮರಿಸುತಿರಲು ಬಾಲ ನಿರವ ಕಾಣದೆ ದುಷ್ಟಹಿರಣ್ಯಕಾಸುರನು ಪರಿ ಹಿಂಸಿಸೆ ಮೊರೆದು ಕೋಪದೊಳೆದ್ದು ತರಳಗೊಲಿದೆ ಬಹು ಕರುಣಾನಿಧಿಯೆ 1 ಛಿಟಿ ಛಿಟಿಲೆಂದಾರ್ಭಟಿಸಿ ಕಂಬವು ಸಿಡಿಯೆ ಕಟಿ ಮಸಿದಗ್ನಿ ನಿಟ್ಟುಸಿರಿನಿಂ ಹಲ್ಗಳ ಕಟಿ ಕಡಿವುತುಬ್ಬಸ ತೋರಿ ನಿಂದ ಕಠಿಣ ಮೂರುತಿಯೆ 2 ಕೊಬ್ಬಿದ ಹಿರಣ್ಯಕನುಬ್ಬ ಮುರಿವೆನೆಂದು ಹೆಬ್ಬಾಗಿಲೊಳು ಸಂಜೆ ಮಬ್ಬಿನಲಿ ಧನುಜನ ಗರ್ಭವ ನಖದಿಂದ ಇಬ್ಭಾಗವನು ಮಾಡಿ ಹಬ್ಬಿದ ಕರುಳನು ಹರುಷದಿ ಧರಿಸಿದೆ 3 ಭೀತರಾದ ಸುರವ್ರಾತ ಪ್ರಾರ್ಥಿಸೆ ಬಹು ಶಾಂತನಾಗಿ ಸಂತೋಷಪಡಿಸಿದ ಅ- ನಾಥ ರಕ್ಷಕನೆ ಕಾತರವಳಿದೆ 4 ಖಳನ ಮರ್ದಿಸಿ ಬಹು ಇಳೆಯ ಪಾಲಿಸಿದೆ ನಳಿನ ಸಂಭವಗೆ ಬಲು ಹರುಷವನಿತ್ತೆ ಹೆಳವನಕಟ್ಟೆ ಶ್ರೀ ರಂಗ ದಾಗಿನಕಟ್ಟೆನೆಲೆವಾಸ ಕಂಬದ ನರಸಿಂಹದೇವ 5
--------------
ಹೆಳವನಕಟ್ಟೆ ಗಿರಿಯಮ್ಮ
ಶ್ರೀ ರಘುಕಾಂತ ತೀರ್ಥರ ಸ್ತೋತ್ರ ಪದಕಂಜಸಾರಿಭಜಿಪ ಭಕ್ತರ ದೂರವೋಡಿಸುವ ಶಕ್ತ ವಿರಕ್ತ ಪ ದಿನಕರ ಕುಲಜಾತ ವನಜಾರಾಧ್ಯಸು - ಮನಸವ್ರಾತ ಸನ್ನುತ ಇನಕೋಟಿಪ್ರಭೆಗಾತ್ರ ಮನಸಿಜ ಪಿತಸ - ನ್ಮುನಿಗಣನುತ ರಾಮಚಂದ್ರ ಪಾದಭೃಂಗ 1 ಯತಿಕುಲ ರತುನ ಭಕುತಸುರತರುವೆ ಸ - ದ್ಗತಿ ದಾತಾ ಜಿತಮದನ ಪತಿತಪಾವನ ಮುನಿ ಯತಿ ರಘುದಾಂತತೀ ಪಾದ ಪಂಕೇಜ 2 ಕಾಮಿತಫಲದ ನಿಸ್ಸೀಮ ಮಹಿಮ ಭಕ್ತ ಪ್ರೇಮ ಪಾವನ ಚರಿತ ಸಾಮಜವರದ ಶ್ರೀ ವರದೇಶವಿಠಲನ ಪ್ರೇಮ ಪಾತ್ರ ಮಹಾ ಮಹಿಮ ನಿಷ್ಕಾಮ3
--------------
ವರದೇಶವಿಠಲ
ಶ್ರೀ ಲಕ್ಷ್ಮೀನೃಸಿಂಹ ಪ್ರಾದುರ್ಭಾವ ದಂಡಕ ಶ್ರೀರಮಾ ಮಾನಿನೀ ಮಾನಸೇಂದೀವರೋತ್ಫುಲ್ಲ ಸಂಫುಲ್ಲ ಚಂದ್ರಾ ಚಿದಾನಂದ ಸಾಂದ್ರಾ ಸದಾ ಸನ್ನುತೇಂದ್ರಾ ನಮೋಪೇಂದ್ರ ನಿಸ್ತಂದ್ರ ನೀ ಕೇಳು, ಆ ರೀತಿ ಪ್ರಹ್ಲಾದನಲ್‍ಸಜ್ಜನಾಹ್ಲಾದನಲ್ ದೈತ್ಯ ಸತ್ಪುತ್ರರಾವೇಳೆ ಶ್ರೀಕಾಂತನ ಜ್ಞಾನ ಭಕ್ತಿ ಕ್ರಿಯಾಗಾಧೆಗಳ್ ಬೋಧೆಗಳ್ ಕೇಳಿ ತಾವೆಲ್ಲರಾಮಾರ್ಗದಲ್ಲೇ ಸುನಿರ್ದಿಷ್ಟ ಸನ್ಮಾರ್ಗದಲ್ಲೇ ಪರಾಭೂತ ಷಡ್ವರ್ಗದಲ್ಲೇ ಮನಸ್ಸಿತ್ತು ಧರ್ಮಾರ್ಥ ಕಾಮಸ್ಪøಹ ಗ್ರಂಥಗಳ್ 10 ಸಿದ್ಧ ಸಂಸಾರ ಸಂಬಂಧಗಳ ಹತ್ತುವೂದಾಗದೇ ದಾನವಾಚಾರ್ಯರಾಶ್ಚರ್ಯದಿಂದಾಗ ತಾವೇಸುರೀತಿಂದಲಾಯಾಸುರೀವಿದ್ಯೆಗಳ ಗದ್ಯಗಳ್ ಪದ್ಯಗಳ್ ಪಾಠ ಪೇಳ್ತಿದ್ದರಾ ಪಾಠಗಳ್ ಒಪ್ಪದೇ ತಪ್ಪದೇನಿಂತು ಮಾರಾಟಗಳ್ ಮಾಡುತಾ ವಿಷ್ಣುಭಕ್ತಿ ಕ್ರಿಯಾಪಾಠಗಳ್ ಪಾಡುತಾ ಎಲ್ಲರೊಂದಾಗೆ ತಾವ್‍ನೋಡಿ ಅಂಜ್ಯಾಡಿ ಇನ್ನೇನು ಈಸೂನುಗಳ ದೈತ್ಯರಾಟ್ ಸೂನನಲ್ ಬುದ್ಧಿ ಭೇದೈಸಿ ದುರ್ಬೋಧಗಳ್ ಕೇಳಿ ದುಸ್ಸಾಧ್ಯರಂ 20 ಕರ್ಣ ಕಾಠೋರ್ಯ ಬಾಣಾಳಿಗಳ್ ರೀತಿ ಅಪ್ರೀತಿಯಾಸೂತಿ ದುರ್ನೀತಿ ತಾ ಸೈಸದೇ ಕೋಪಸಂದೀಪನಾವೇಶದಿಂದಲ್ ಚಲದ್ಗಾತ್ರನಾಗೆದ್ದು ಪ್ರೋದ್ಯದ್ದಯಾಪಾತ್ರನಂತಿಪ್ಪ ತತ್ಪುತ್ರ ಸಂಹಾರದಲ್ ಚಿತ್ತವಂ ಪೆತ್ತವಂ ಪಾಪÀಸಂವೃತ್ತನೇತ್ರ ಪ್ರಮಾಕ್ಷೇಕ್ಷನಾಗಲ್ ಸಮ 30 ಕ್ಷೈಸಿ ದುಷ್ಟೋಕ್ತಿಗಳ್ ಬಾಗುತಾ ಕೂಗುತಾಸಾಧು ಸಧ್ಭಕ್ತಿಯಿಂದಲ್ ಮಹದ್ಭಕ್ತಿಯಿಂದಲ್ಲಿ ತನ್ನಲ್ಲಿ ಚೆನ್ನಲ್ಲಿ ಬದ್ಧಾಂಜಲಿಯಾಗಿ ಸಿದ್ಧಾಂತ ಸದ್ಭಕ್ತಿಯಿಂದಲ್ಲಿ ನಿಂದಿದ್ದ ಪ್ರಹ್ಲಾದ ಧೀಮಂತಗೇ ನಿರ್ಮಲಸ್ವಾಂತಗಾವೇಳೆ ಪಾದಾಹತವ್ಯಾಳಿಯಂತೇ ಭುಜಶ್ವಾಸಗಳ್ ಬೇಸಿಗಳ್ ಬೀಸುತಾಕಂದಗಾ ತಂದೆ ಸುಭಾಷಿಪಂ. ಹೋಯೆಲೋ ದುರ್ವಿನೀತಾಯೆಲೋ ಮಂದಬುದ್ಧೇಯೆಲೋಇಂತು ನೀ ಸ್ತಬ್ಧನಾದೇತಕೋ ವಂಶಘಾ40 ತೀಯೆಲೋ ಪಾಪಜಾತೀಯೆ ನೀ ಹೀಗೆ ಮಚ್ಛಾಸನಾತೀನಾಗಪ್ಪೊಡೇ ನಿನ್ನ ನಿನ್ನಾ ಯಮದ್ವಾರಕೇ ಕಳುಹುವೆಂ ನೋಡೆಲಾನಾನು ಕೋಪಿಷ್ಠನಾಗಿಪ್ಪೊಡೇ ಅಂಜಿ ಮೂರ್ಲೋಕಗಳ್ ಲೋಕಪಾನೀಕಗಳ್ ಕಂಪ ಕಾಣುತ್ತವಿಂಥಾ ಬಲಿಷ್ಠನ್ನ ನೀನೆನ್ನ ಸಂಪದ್ಬಲ ಶ್ರೀಯನಾಶ್ರೈಸದೇ ಬಿಟ್ಟರಿನ್ನಾವನಲ್ ನೀಂ ಬಲಶ್ರೀಯನಾಶ್ರೈಸುವೇಯೋ ಎಲಾ ಏಕೆ ಮಚ್ಛಾಸನಾತೀತನಾಗೂವಿಯೋ ಕಂದ ಪೇಳೆಂದರೇ, ತಂದೆಗಾ 50 ತಂದೆ ಕೇಳಯ್ಯ ಬ್ರಹ್ಮಾದಿ ಆಸ್ತಂಭಪರ್ಯಂತವುಂ ಜಂಗಮಸ್ಥಾವರಾತ್ಮ ಪ್ರಪಂಚೋಚ್ಚ ನೀಚ ಪ್ರಜಾನೀಕ ಯಾವತ್ತದಾವಾತನಾಧೀನದಲ್ಲಿಪ್ಪುದೋ ಆತನೇ ಎನ್ನಗೇ ನಿನ್ನಗೇಇನ್ನು ಮಿಕ್ಕಾದ ಚೈತನ್ಯಕೆಲ್ಲಾ ಬಲಶ್ರೀಯು ತಾನಾದನೇ ಕಾದನೇ ಕಾಲರೂಪೀಶ್ವರೋರುಕ್ರಮಾಕಾರನೆಂಬಾತನೇಆತನೇ ಆತನೇ ತೇಜ ಓಜಸ್ಸಹಾಸತ್ವ ಸಂಪದ್ಬಲ ಶ್ರೀಂದ್ರಿಯಾತ್ಮನ್ ಸ್ವಯಂ60 ಸ್ವಾಂತ ನೀನಿತ್ತು ಸರ್ವತ್ರ ಸಮಚಿತ್ತನಾಗಯ್ಯ ಎನ್ನಯ್ಯನೇ ನಿನ್ನಗಾಮೇಲೆ ವಿದ್ವೇಷ ಮಾಡೂವರಾರಿಲ್ಲವಂತಸ್ಸಿನಲ್ಲಿಪ್ಪ ಕಾಮಾದಿ ಷಡ್ವರ್ಗವೆಂಬಾ ಮಹಾವೈರಿಗಳ್ ಕಳ್ಳರಂತೆಲ್ಲರುಂ 70 ದೇಹವೆಂಬೋ ಮಹಾರಾಜಧಾನೀ ವೃಥಾಹಾನಿ ಮಾಡೂವರಂಥಾವರಂ ಗೆಲ್ಲದೇಕೆಲ್ವರೀ ದಿಕ್ಕುಗಳ್ ಸರ್ವವಂ ಗೆದ್ದವೆಂತೆಂದು ಹಿಗ್ಗೂವರಂತಸ್ಸಿನಲ್ಲಿಪ್ಪ ಕಾಮಾದಿ ಷಡ್ವರ್ಗ ಗೆದ್ದಾತಗೇ ಜ್ಞಾನಸಂಪೂತಗೇ ಸಾಧು ಸಂಭೂತ ಸರ್ವಂಸಮಂಚೇತಗಾಮೇಲೆ ತನ್ಮೋಹ ಸಂಜಾತವೆಂತಪ್ಪುದೋ ಶಾತ್ರವವ್ರಾತವೆಲ್ಲಿಪ್ಪುದಯ್ಯಾ ಸದಯ್ಯಾತ್ಮನೇ ತಿಳಿದು ನೋಡೆಂದು ತಾನಿಂದು ಮಾತಾಡಲು, ಶತ್ರುವಂತಿಪ್ಪ ಪು 80 ಇಂದು ನಾವೊಂದು ಪೇಳುತ್ತಿರುತ್ತಿದ್ದರೊಂದಕ್ಕೆ ಹತ್ತಾಗಿ ನೀನೇವನೋ ವಿಷ್ಣುವೆಂಬಾತ ಬೇರೊಬ್ಬ ತಾನಿಪ್ಪನೆಂದೂಹಿಸೂವೇಯ ಹೋ ಹೋಯೆಲಾಸಾವಿಗೀ ಬುದ್ಧಿ ನೀ ಸಿದ್ಧ ಮಾಡೀದಿ ಎಂಬೋದಿದಂ ವ್ಯಕ್ತವಂತೆಲ್ಲ ನಾಂ ಬಲ್ಲೆ ಇಂ 90 ತಲ್ಲದೇ ನಿನ್ನಗೀರೀತಿ ದುರ್ಬುದ್ಧಿ ಪುಟ್ಟೂವುದೇ ಮೃತ್ಯುಸಿದ್ಧರ್ಗೆ ವಿಷ್ಣುತ್ವ ಸಂಭಾಷೆಯಲ್ಲಿಚ್ಛೆ ಬೇಕಾಗಿ ಹೋದಲ್ಲದೇಬಲ್ಲೆನೆಲ್ಲಾ ಎಲೋ ಮಂದನೇ ಮಂದಭಾಗ್ಯೋಕ್ತಿಗಳ್ ಏಕೆ ನೀನಾಡುವೇ ಅಕ್ಕಟಾಎನ್ನಗಿನ್ನಾ ಜಗನ್ನಾಥನಿನ್ನಾವನೋಆತನೆಲ್ಲಿಪ್ಪ, ಸರ್ವತ್ರದಲ್ಲಿಪ್ಪ ನೀನೆಂದಡೇ ಡಿಂಭಕಾಡಂಭಕಾಡೋಣಗಳ್‍ಸಾಕು ಮಾಡಿನ್ನು ಮೇಲೀ ಸಭಾಸ್ತಂಭದಲ್‍ಶೀಘ್ರ ಸಂರಂಭದಲ್ ತೋರು ನೀ ತೋರದೇ 100 ಪೋದೆಯಾ ಇನ್ನು ನೀ ಮಾರುಮಾತಾಡದ್ಹಾಗೇ ಶಿರಚ್ಛೇದ ಮಾಡೂವೆನೋ ನಿನ್ನಗೀವೇಳೆಯಲ್ ವಿಷ್ಣುವೆಂತೆಂದದಾವಾತ ತಾನಡ್ಡ ಬಂದಾನೋ ನಾ ನೋಡುವೆಂ ವಿಷ್ಣುವೇಬೇಡಬೇಕಾದ ದಿಕ್ಕಾಗಿ ನಿನಗಿಪ್ಪಡೇಬೇಡಿಕೋ ಮೂರ್ಖನೇ ಎಂದು ಕ್ರೋಧಾಗ್ನಿಯಿಂದುರ್ಪಿ ದುರ್ಭಾಷೆಯಲ್ ತನ್ನ ಪುತ್ರನ್ನ ತಾದೂರುತಾ ಹಾರುತಾ ಕೈಲಿ ಖಟ್ ಪೆಟ್ಕವಂಖಡ್ಗವಂ ಕೊಂಡು ದುಷ್ಟಂ ಮಹಾದೋರ್ಬಲಿಷ್ಠಂ ಸ್ವಯಂ ಮುಷ್ಟಿಯಿಂದಲ್ಲಿ ಪೆಟ್ಟಿತ್ತನು. 110 ಆ ಭೀಕರಧ್ವಾನ ಸಂಭಿನ್ನ ದುಷ್ಟಾಸುರೀಗರ್ಭಸಂರಂಭವುಂ ಶುಂಭದಂಭೋದ ವೀಥೀ ಸಮಾರಂಭಿತೋ ಜೃಂಭವುಂ ವೈಷ್ಣವೋತ್ಕøಷ್ಟ ವಿಶ್ರಂಭವುಂ ಶಾತಕುಂಭೊಲ್ಲಸದ್ರತ್ನಚಿತ್ರಪ್ರಭಾಗುಂಭವುಂ ತತ್ಸಭಾಸ್ತಂಭವಂ ಆಗಲೇ ಬೇಗಲೇ ಘಳಾಘಳಾರಾವ ಉದ್ಭೂತವಾಗೆದ್ದು ಬ್ರಹ್ಮಾಂಡವೆಲ್ಲಾ ಪರಿಸ್ಫೋಟವಂ ಮಾಡುವಂತೊಪ್ಪೆ ಬ್ರಹ್ಮಾದಿಗಳ್ ತಮ್ಮ ಧಾಮಕ್ಕೆ ವ್ಯಾಘಾತವೇನಾದರುಂ ಬಾಹೋದೇನೋ ಇದೇನೆಂದು ವಿ 120 ಭ್ರಾಂತ ಚೇತಸ್ಕರಾಗಿಪ್ಪರಂತೇ ದುರಂತೇಕ್ಷಣಂಗಳ ಕುವರಾಗ್ರನಲ್ ತುಂಬುತಾಕತ್ತಿ ಕೈಹತ್ತಿ ಪುತ್ರನ್ನ ತಾ ಚಿತ್ರಹಿಂಸಿತ್ತು ಕೊಲ್ಲೂವೆನೆಂದಾಗ್ರಹೋಗ್ರ ಗ್ರಹಗ್ರಸ್ತನಾಗೇನು ಮೈತಿಳಿಯದೇ ಕೂಡಿಓಡ್ಯಾಡಿ ಬಾಹೋ ಹಿರಣ್ಯಾಖ್ಯಗಾ ವೇಳೆ ಕಾಲಾಡದದ್ಹಾಗೇ ಸಭಾಸ್ತಂಭದಲ್ ತನ್ಮಹಾರಾವ ತಾನಡ್ಡಕಟ್ಟಿಪ್ಪದಂತಾ ಮಹಾಧ್ವಾನ ಕೇಳುತ್ತಲೇ ನಿಂತನಾ ಹೇತುವಂ ಕಾಣದೇ ಆಗ ಆಯಾಸುರೀ ಹಿಂಡುಗಳ್ 130 ತುಂಬಿ ಕಾಳ್ಗಿಚ್ಚುಗಳ್ ಚೆಂದದಿಂಜಂತು ಸಂಘಕ್ಕೆ ಸಂತಾಪಗೈಸೇ ಛಿಟಾಛಿಟ್ ಛಿಟಾಂಗಾರಗಳ್ ಬೀಸೆ ಇದೇವುದೋಭೂತ ಉದ್ಭೂತವಾಗೊಪ್ಪಿತೆಂದಾಗ ಮೂರ್ಲೋಕವೆಲ್ಲಾ ಸಮುಲ್ಲೋಕವಾಗಿಪ್ಪುದಾವೇಳೆ ತದ್ಭøತ್ಯವಾಕ್ ಸತ್ಯವಂ ಮಾಡಬೇ 140 ಕಾಗಿ ಸರ್ವತ್ರ ತಾನ್ ತನ್ನ ವ್ಯಾಪ್ತತ್ವವಂಪಥ್ಯವಾಗಿಪ್ಪವೋಲ್ ಅದ್ಭುತಾಕಾರ ಪೊತ್ತಂ ಜಗದ್ಭರ್ತ ತಾನೊಂದೆ ಸಿಂಹಾಕೃತೀಯಾಗದೇ ಮತ್ರ್ಯಮೂತ್ರ್ಯಲ್ಲದೇ ತತ್ಸಭಾಸ್ತಂಭದಲ್ ಡಿಂಬ ಸಂಭಾವನಕ್ಕಾಗಿ ಸಂಭೂತನಾದಂ.ದಿತೀಪುತ್ರನಾ ರೂಪವಂಕಂಡಿದೇನೋ ಮಹಾ ಚಿತ್ರವಾಗಿಪ್ಪುದೇಸಿಂಹದಂತಲ್ಲದೇ ಮತ್ರ್ಯನಂತಲ್ಲದೇಯಾವುದೀ ಭೂತವೆಂತೆಂದು ಮೀಮಾಂಸಮಾನಾತ್ಮನಾದಂ.ಜಗತ್ಸ್ಯಾಮಿ ತಾನಾಗಲೇ 150 ತಪ್ತಭಾಂಗಾರ ಶೃಂಗಾರವಲ್ಯಂತೆ ಕಂಗಳ್ ಸಮುದ್ಯತ್ಸಟಾ ಕೇಸರಂಗಳ್‍ವಿಜೃಂಭತ್ಕರಾಳಾಸ್ಪದಂ ಉಗ್ರನಾಸಾಸಮುಚ್ಚಾಸ್ವ ನಿಶ್ವಾಸಗಳ್ ಸಂಚಲದ್ವಸ್ತವ್ಯಾಳ ಕ್ಷುರಾಂತೋಗ್ರ ಜಿಹ್ವಾಗ್ರ ಲೇಲೀಹನಂಗಳ್ ಭ್ರಮದ್ಭ್ರೂಲ್ಪಲಂಗಳ್ ಹನೊರೋಷಭೀಷ್ಣಂಗಳುಂ ಊಧ್ರ್ವಕರ್ಣಂಗಳುಂ ಭೂಮಿ ಭೃ ತ್ಕಂದರಾಶ್ಚರ್ಯವವ್ಯಾತ ಘೋರಾಸ್ಯನಾಸಾಪುಟಂಗಳ್ ಅದೀರ್ಘೊನ್ನತಗ್ರೀವವುಂದೀರ್ಘದಂತೊಪ್ಪುವೋ ದೇಹವಂ ವಿಸ್ತøತೋ160 ಶುಂಡಾಲ ಶುಂಡಪ್ರಕಾಂ170 ಡ ಪ್ರಚಂಡೋಲ್ಲಸದ್ದೋಹ ಸಾಹಸ್ರ ದೀಪ್ತಾಯುಧಾಭೋ ನಖಾನೀಕವುಂ ಚಕ್ರ ಶಂಖಾದಿ ನಾನಾಯುಧ ಶ್ರೇಷ್ಠ ವಿದ್ರಾವಿತಾsಭದ್ರ ರಕ್ಷಃ ಪಿಶಾಚಾಸುರೋದ್ರೇಕವುಂಪ್ರೋನ್ನಿತಂಬೋರು ಸತ್ಸಾನು ಜಂಘಪ್ರದೇಶಾವೃತ ಪ್ರೋಲ್ಲಸತ್ಪೀತ ಕೌಶೇಯವುಂಬದ್ಧಕಾಂಚೀಕಟಿಸ್ಥಾನವುಂ ಮಂಜುಮಂಜೀರ ಸಂಚಿನ್ನನಾದಾಂಘ್ರಿಕಂಜಾತ ವಿನ್ಯಾಸವುಂ ಕೋಟಿ ಮಾರ್ತಾಂಡ ಸಂಕಾಶವುಂಪೋಲ್ವುದಂಥಾ ದುರಾಲೋಕವಂತಿಪ್ಪ ಜ್ವಾ180 ಲಾ ನೃಸಿಂಹಾಕೃತಿ ಸ್ವಾಮಿನಂ ನೋಡುತಾದೃಷ್ಟಿಗಳ್ ಬಾಗೆ ತಾ ನಿಂತು ನನ್ನ ವರಜಾರಾತಿಯಾದ ಸ್ವಯಂ ಜ್ಯೋತಿ ಈ ರೀತಿ ತಾನಿಂದಿಗೇ ನಾರಸಿಂಹಾಕೃತೀಯಾಗಿ ನಾಂಪುತ್ರಂ ಸಂಹಾರಕುದ್ಯುಕ್ತನಾಗಿಪ್ಪೊಡೇಎನ್ನ ಸಂಹಾರಕಾಗಿಲ್ಲಿಗೇ ಬಂದನೋಇನ್ನು ಮೇಲೀತನಿಂದೆನ್ನಗೇ ಮೃತ್ಯು ತಾಸಿದ್ಧವಾಂತಿಪ್ಪುದೇನೋ ಪುರಾಣ ಪ್ರಸಿದ್ಧೋಕ್ತ್ಯಭಿವ್ಯಕ್ತಿಗೈತೇನಹೋ ಎಂದು ಮಾತಾಡುತಾ ನಿಂತು ಉದ್ಯದ್ಗದಾಧಾರಿ ತ 190 ಪೂರ್ವದಲ್‍ಅಸ್ಯತೇಜೋಂಶದಿಂದಲ್ ಜಗಧ್ವಾಂತ ಯಾವತ್ತುಮಿಂ ತಾ ಸ್ವಯಂ ಪಾನಮಾಡಿಪ್ಪ ಸತ್ಯಾತ್ಮಗೀ ನಾರಸಿಂಹಾತ್ಮಗೇ ಈ ಹಿರಣ್ಯಾಸುರ ಶ್ರೇಷ್ಠ ಸಂಹಾರ ಹೆಚ್ಚಲ್ಲವಂತಾದರುಂ ಲೋಕದೃಷ್ಟ್ಯಾನುಸಾರ ಕ್ರಿಯಾಕಾರಿಯಾಗಿಪ್ಪ ನೃಸಿಂಹನುದ್ಯದ್ಗದಾಧಾರಿ ತಾನಾಗಿ ಸದ್ವಿದ್ಯುದಾಭ್ಯೋದ್ಯದು 200 ದ್ವೇಗವೇಗೋರು ಸಂಪದ್ಗದಾ ದಂಡವಂಕೊಂಡು ಯುದ್ಧಕ್ಕೆ ಬಾಹೋ ಮಹಾದೈತ್ಯವರ್ಯನ್ನ ತಾ ನೋಡಿ ರೋಷೋಜ್ವಲ ಜ್ವಾಲೆಗಳ್‍ಲೇಲಿಹಾನೋಲ್ಲ್ಲಸಜ್ಜಿಹ್ವೆಯಿಂದಲ್ ಪ್ರಕಾಶೈಸುತಾ ಚೀರುತಾಗಾಟ್ಟಹಾಸಕ್ರಮನ್ಯಾಸದಿ ಹಾರುತಾ ಕೋಟಿ ಸೂರ್ಯಪ್ರಭಾಬೀರುತಾ ಆ ಗರುತ್ಮಂತ ಕಾಳಾಹಿಂಪಿಡಿವನಂತೊಪ್ಪಿ ತಾನಾ ದಿತೀಪುತ್ರನಲ್‍ನೂಕಿದಂ ಶೀಘ್ರದಲ್ ಪಿಡಿದನಾ ದೈತ್ಯರಾಜೇಂದ್ರನಾವೇಳೆ ತದ್ಧಸ್ತದೋಳ್ ಸಿಕ್ಕದೇ 210 ಸುಕ್ಕದೇ ಘಕ್ಕನೇ ಬಿಡಿಸಿಕೊಂಡಾ ಗದಾದಂಡವಂ ಕೊಂಡು ಸನ್ನದ್ಧ ಸದ್ಯುದ್ಧವಂಮಾಡುವೋನಂತೆ ಯಾವಾಗ ನೃಸಿಂಹನಲ್‍ಸಿಕ್ಕಿ ಮತ್ತೇಬಿಡೂವಾದನಾ ವೇಳೆಯಲ್‍ಶರ್ವ ಶಕ್ರಾದಿ ದಿಕ್ಪಾಲಕಾನೀಕವುಂಸೂರ್ಯಚಂದ್ರಾದಿ ಸರ್ವಗ್ರಹಕ್ರ್ಷಾವಳೀಲೋಕವುಂ ಮೇಘಸಂತಾನದೋಳ್ ಲೀನವಾಗಿದ್ದು ಇನ್ನೇನು ಈ ದೇವತಾರಾತಿ ಈನಾರಸಿಂಹಾತ್ಮನಲ್ ಸಿಕ್ಕದೇ ದಕ್ಕದಂತಿಪ್ಪನೇ ಈತನೀ ದುಷ್ಟ ದೈತ್ಯನ್ನ ಗೆ 220 ಲ್ಲಾರನೋ ಗೆಲ್ವನೋ ಎಂದು ತದ್ವೀರ್ಯವಂತಿಳಿಯದೇ ಭ್ರಾಂತಚಿಂತಾಂತರಂಗೋದ್ಯದುದ್ವೇಗದಿಂ ಕಾಂಬಂತಿಪ್ಪುದು.ಆಮೇಲೆ ಢಾಲ್ ಕತ್ತಿ ಕೈಗೊಂಡು ಆಯಾಸದಿಂದಲ್ಲಿ ಆ ದೈತ್ಯನಾನಾರಸಿಂಹಾತ್ಮನಲ್ ಸಂಗರ ಶ್ರಾಂತಿ ಮತ್ತೇನು ತಾ ಕಾಣದೇ ದೂಕಿದಂ ತಾಕಿದಂಸೋಕಿದಂ ಅಂಘ್ರಿವಿನ್ಯಾಸಗಳ್ ಕೂಡಿ ತಾಮೇಲೆಯುಂ ಕೆಳಗೆಯುಂ ಶ್ಯೇನಪಕ್ಷಂತೆ ಸುತ್ತಾಡುತಾ ಛಿದ್ರವಂ ಕಾಣದೇ ತನ್ನನೇಪಿಡಿವುದಕ್ಕಾತನಂತೋಡುತಾ ಬಾಹೊ ಬ 230 ಲ್ಲಿಷ್ಠನಾ ಅಟ್ಟಹಾಸೈಸಿಯುಕ್ಕೇಸರಂಗಳ್ ಪ್ರಸಾದೈಸಿ ಕ್ರೂರಾಹಿತಾನಂದಘಗ್ರಾಹಿಯಂತೇ ಸ್ವಭಾ ಸಾಸಿರಂ ಸೂಸಿ ಜಂಘಾಲ ಲೀಲಾ ಸಮುಲ್ಲಂಘನಾ ಗೋಪದಿಂಹಾರಿಯಾ ನಾರಹರ್ಯಕ್ಷನಾ ದೈತ್ಯದಕ್ಷನ್ಪಿಡಿರ್ದಂ ಫಟಾಫಟ್ ತಲಾಘಾತವಂಗೈಲ್ಬಡಿರ್ದಂ ಥಟಾಥಟ್ ಪದಾಘಾತದಿಂ ದಲ್ ಹೊಡೆರ್ದಂ ಗದಾಘಾತದಿಂದಲ್ ಮಹೋರಸ್ಕಿಡಿರ್ದಂ ಸಭಾದ್ವಾರದಲ್ ಹಾಕಿ ಭಾಸ್ವನ್ನಖ ಶ್ರೇಣಿಯಿಂದಲ್ ಫಟಾಫಟ್ ಗುರು240 ತ್ಮಂತಕಾಲಾಹಿನಂ ಸೀಳುವೋ ರೀತಿ ಜಂಭಾರಿದಂಭೋಳಿಯಂತಾಗಲುಂ ಸೀಳುತಿರ್ದಾಮಹಾದೇವನ್ನಾ ಹಗಲ್ ರಾತ್ರಿಯೊಂದಲ್ಲದ್ಹಾಗೇ ದಿವಾಸಂಧಿಯಲ್ ಸೀಳಿದಂ.ಘೋರ ಸಂರಂಭ ದಂಷ್ಟ್ರೇಕ್ಷವ್ಯಾವೃತ್ಕರಾಳಾಕ್ಷನಾಗಿ ಸ್ವಜಿಹ್ಪಾಗ್ರದಿಂದಲ್ ಲಸದ್ವ್ಯಾತ್ತ ವಕ್ತ್ರಾಂತ ಶೋಣಿಯ ಮಾನಾಧರಾದ್ಯಂತವಂ ಲೇಲಿಹಾನೋಗ್ರವಂ ತೋರುತಾರಾಕ್ಷಸ ಶ್ರೇಷ್ಠನಂ ಪಿಡಿದು ವಕ್ಷೋನ್ನತಸ್ಥಾನವಂ ತೋಡಿ ಕಾಸಾರವಂ ಮಾಡುತಾ 250 ತುಂಬಿ ಶುಂಡಾಲ ಸಂಹಾರದಲ್ ಮುಂಚುವೋ ಘೋರ ಪಂಚಾನನೋದಾರ ಲೀಲೆಂಗಳಂ ಬೀರುತಾ ರಾಕ್ಷಸಾಧ್ಯಕ್ಷ ವಕ್ಷಸ್ಸಿನೋಳ್ ಕಿತ್ತುತಾ ಹಾರಗಳ್‍ಮಾಡಿಕೊಂಡೊಪ್ಪಿ ತದ್ರಕ್ತ ಸಿಕ್ತಾನನೋದ್ಯಚ್ಛಟಾ ಕೇಸರಂಗಳ್ ಪ್ರಕಾಶೈಸುತಾ 260 ದೈತ್ಯರಾಜೇಂದ್ರನಾ ಪ್ರಾಣಗಳ್‍ಗೊಂಡನಾಮೇಲೆ ಸುತ್ತಿದ್ದ ತದ್ಭಂಧು ಸಂದೋಹದಲ್ಲಿದ್ದನೇಕಾಸುರೀನೀಕವಂ ಸಾಯುಧೋದ್ರೇಕವಂ ಅಲ್ಲಕಲ್ಲೋಲವಂ ಮಾಡಿ ಚಂಚನ್ನಖಶ್ರೇಣಿಯಿಂ ಸಂಹರಂ ಮಾಡಿದಂ.ಆಗ ತದ್ಭೀಕರಾಕಾರವಂ ಕಾಂಬ ಶಕ್ತ್ಯಾವುದಂ ಕಾಣದೇ ತತ್ಸಟಾ ಕೇಸರೋದ್ಭೂತ ಸಂಘಾತಗಳ್ ಘೋರ ಜೀಮೂತಗಳ್‍ಸರ್ವವಂ ನೋಡುತಾ ಮತ್ರ್ಯಸಿಂಹೋಗ್ರದೃಷ್ಟಿಜ್ವಲಜ್ವಾಲೆಗಳ್ ಸೈಸದೇ ಸೂರ್ಯಚಂ270 ಪಾದ ಸಂಘಟ್ಟದಿಂದಲ್ ಧರಾಚಕ್ರವಲ್ಲಾಡಿತಾಘೋರ ತೇಜಸ್ಸಿಗವಕಾಶಂಗಳಾಕಾಶವೂಬಾಡಿತಾ ಶಾಕಿನೀ ಡಾಕಿನೀ ಮುಖ್ಯ ದು 280 ಷ್ಟಗ್ರಹಾನೀಕವುಂ ಭೀತಿಗೊಂಡೋಡಿತಾಮೇಲೆ ಉದ್ಯತ್ಸಭಾ ಮಧ್ಯೆ ದೈತ್ಯೇಂದ್ರ ಸಿಂಹಾಸನಸ್ಥಾನದಲ್ ನಾರಸಿಂಹಂ ಸಮಾಸೀನನಾಗಿಪ್ಪನಾ ತೇಜ ಓಜ ಪ್ರಭಾಪುಂಜರಂಜನ್ನ ಭಾಸ್ವತ್ಕರಾಳೋಗ್ರ ಜಿಹ್ವ ಸ್ಫುರದ್ದಂಷ್ಟ್ರ ವಕ್ತ್ರನ್ನ ಬಿಭ್ರಲ್ಲಸದ್ಭ್ರೂತನಂ ಆ ಮಹಾಕೋಪ ಸಂರಂಭ ಗಂಭೀರ ನೇತ್ರನ್ನ ಕಣ್ಣೆತ್ತಿ ಕಾಂಬೋದರಲ್‍ಬ್ರಹ್ಮ ರುದ್ರಾದಿಗಳ ಶಕ್ತಿಯುಂ ಸಾಲದೇದೂರದಲ್ ಪಾಶ್ರ್ವ ಭಾಗಸ್ಥರಾಗಿಪ್ಪರಂತೇ.290 ಆಗ ಮೂರ್ಲೋಕ ಸಂತಾಪಿಯಾಗಿಪ್ಪ ದೈತ್ಯನ್ನ ನಾರಾಯಣಂ ನಾರಸಿಂಹಾಕೃತೀಯಾಗಿ ಸಂಹಾರವಂ ಮಾಡಿದಂ ಎಂಬುದಾವಾರ್ತೆ ಕೇಳುತ್ತಲೇ ದೇವನಾರೀಜನಂಗಳ್ ಪ್ರಹರ್ಷಾನನೋತ್ಪುಲ್ಲರುಲ್ಲಾಸದಿಂವಾಸಿತಾಮೋದ ಮಂದಾರ ಕುಂದಾರವಿಂದಾದಿ ಸತ್ಪುಷ್ಟ ಸಂತಾನ ವರ್ಷÀಂಗಳಂವರ್ಷಿಸುತ್ತಿಪ್ಪರಾಕಾಲಾವಾಕಾಶದಲ್‍ನಿಂತು ಕಾಣೂವರಾ ದೇವದೇವೀ ಸಮೂಹಂಗಳಾಯಾವಿಮಾನಂಗಳೆಲ್ಲಾ ಮಹಾ 300 ಸಂಕುಲೀ ಭೂತವಾಗಿಪ್ಪವಾ ದೇವತಾದುಂದುಭಿಧ್ವಾನ ಇಂಬಾಗಿ ತಾ ದೇವಗಂಧರ್ವ ಸಂಗೀತ ನಾಟ್ಯಂಗಳಿಂದಪ್ಸರಾಕಾಮಿನೀ ತಾನ ಗಾನಂಗಳಿಂದಾಗ ಆಕಾಶವುಂ ತುಂಬಿತಾ ಬ್ರಹ್ಮರುದ್ರೇಂದ್ರ ಮುಖ್ಯಾಮರ ಶ್ರೇಣೀಗಳ್ ಪಿತೃಗಳ ಮನ್ವುಗಳ್‍ಸಿದ್ಧ ವಿದ್ಯಾಧರಾನೀಕಗಳ್À ಅಪ್ಸರಾ ಕಾಮಿನೇರಾ ಪ್ರಜಾಪಾಲ ಗಂಧರ್ವರಾಯಕ್ಷ ಕಿಂಪುರುಷರಾ ಚಾರಣಾನೀಕವಾಕಿನ್ನರಸ್ತೋಮ ನಂದಾ ಸುನಂದಾದಿ ತ 310 ತ್ಪಾರ್ಷದಾನೀಕವೆಲ್ಲಾ ಶಿರೋಭಾಗದಲ್‍ಪಾಣಿಗಳ್ ಜೋಡಿಸೀತೆಲ್ಲ ಮುನ್ನಾತಿ ದೂರಸ್ಥರಾಗಿದ್ದು ನಿಂತಾಮೃಗೇಂದ್ರಾಸನಾಸೀನನಾಗಿಪ್ಪ ಅತ್ಯುಗ್ರ ತೇಜಸ್ವಿನಂಮೆಲ್ಲನೇ ಬೇರೆ ಬೇರಾಗಿ ಕೊಂಡಾಡುತಾನಿಂತರಾವೇಳೆಯಲ್ ಬ್ರಹ್ಮ ತಾ ಭಾಷಿಪಂನಿನಗೆ ವಂದೀಸುವೆಂ ತಂದೆ ನೀನೆ ಅನಂತಂ ದುರಂತ್ಯೋರು ಶಕ್ತ್ಯುಳ್ಳವಂ ಲೋಕಪಾವಿತ್ರ್ಯ ಕಮ್ರ್ಯಂ ಮಹಾಶ್ಚರ್ಯ ವೀರ್ಯ ಜಗತ್ಸøಷ್ಟಿ ಸಂರಕ್ಷ ಸಂಹಾರಗಳ್ ಲೀಲೆಯಿಂ320 ದಲ್ ಸದಾ ಮಾಳ್ಪೆಯೋ ಅವ್ಯಯಾತ್ಮನ್ನೆ ನೀ ನೆಂದನು.ಈಶ ತಾ ಬಂದೆಲೋ ತಾತನೇನಿನ್ನಗೀ ಕೋಪ ಬಾಹೋದಕಿಂದಾ ಯುಗಾಂತಾಖ್ಯ ವೇಳ್ಯಲ್ಲವೋ ಕ್ಷುಲ್ಲನೀ ದೈತ್ಯನೀವೇಳೆ ನಿನ್ನಿಂದ ತಾನ್ ಮೃತ್ಯುಪಾಲಾದನಂತಿನ್ನುಮೇಲ್ ಕೋಪ ಸಂಕ್ಷೇಪ ಮಾಡಯ್ಯ ಈದೈತ್ಯ ಪುತ್ರನ್ನ ಪ್ರಹ್ಲಾದನಂ ಸರ್ವದಾನಿನ್ನ ಭಕ್ತನ್ನ ಸಂರಕ್ಷಿಸೋ ಭಕ್ತವಾತ್ಸಲ್ಯದಿಂದೆಂದನು.ಇಂದ್ರ ತಾ ನಿಂತೆಲೋ ಸ್ವಾಮಿಯೇ ಅಣ್ಣತಮ್ಮಂದ್ರ ದೀಟಾಗಿ ನೀನೇ ಸದಾ ನಮ್ಮ ಸಂ330 ರಕ್ಷಿಸೂವೇಯೊ ನಿನ್ನಿಂದಲಾ ಯಜ್ಞ ಭಾಗಂಗಳುಂ ನಮ್ಮಗೇ ಮತ್ತೆ ಉಂಟಾದವಯ್ಯಾ ಹಿರಣ್ಯಾಸುರಂಗಾದುದೀಗೆಮ್ಮ ಸುಸ್ವಾಂತಗಳ್ ನಿನ್ನಗಾವಾಸಯೋಗ್ಯತ್ವ ಪೊಂದಿಪ್ಪುವಂತೆ ವಿಕಾಸ್ಯೆಸಿತೋ ನಿನ್ನ ಶುಶ್ರೂಷೆ ಬೇಕೆಂಬ ಲೋಕಾಳಿಗೇ ಕಾಲಸಂಗ್ರಸ್ತವಂತಿಪ್ಪ ಲೋಕಾಳಿಯಲ್ ಯಾವದೂಲಕ್ಷ್ಯವಿಲ್ಲಂತೆ ಮುಕ್ತ್ಯಾದರುಂ ಹೆಚ್ಚು ನಿಶ್ಬೈಸುವಂತೇ ನೃಹರ್ಯಾತ್ಮನೇ ಮಿಕ್ಕ ಸಂಭೂತಿಯಿಂದಾಗಬೇಕಾದುದೇ ನಿಪ್ಪುದೆಂದಂ.340 ಬೊಮ್ಮ ನೀನೆಮ್ಮ ಶ್ರೇಯಸ್ಸಿಗೆ ಮುನ್ನ ನಿನ್ನ ಸ್ವತೇಜಾಂಶವನ್ನೇ ತಪೋಯೋಗವಂ ನಮ್ಮಗೇಕೊಟ್ಟೆಯೊ ಆ ತಪಸ್ಸಿಂದ ನಿನ್ನಲ್ಲಿಹೋವಿಶ್ವವೆಲ್ಲಾ ಬಹೀರಂಗ ಮಾಡೀದೆಯೋನಮ್ಮದಂಥಾ ತಪಸ್ಸಂ ಹಿರಣ್ಯಾಸುರಶ್ರೇಷ್ಠತಾ ಕದ್ದನಂತಿದ್ದನೇ ಈಗ ನೀನೀ ಜಗದ್ರಕ್ಷಣಕ್ಕಾಗಿಯೇ ಭಕ್ತ ಸಂರಕ್ಷನೇ ನಾರಹರ್ಯಕ್ಷನಾಗಿನ್ನು ರಕ್ಷೋಗಣಾಧ್ಯಕ್ಷ ವಕ್ಷಸ್ಕವಂ ಸೀಳಿ ನೀ 350 ನಮ್ಮಗೆಲ್ಲಾ ತಪೋಯೋಗವಂ ಮತ್ತೆ ತಂದಿತ್ತೆಯಂತೆಂದರು.ಪಿತೃಗಳ್ ನಿಂತೆಲೋಧರ್ಮರೂಪೀಯೆ ಇಂಥಾ ಕ್ರಿಯಾಲಾಪಗಳ್‍ಪುತ್ರರಿಂದಲ್ ತಿಲೋದಂಗಳಿಂದಲ್ ಮಹಾಪುಣ್ಯ ತೀರ್ಥಂಗಳಲ್ ಕ್ಷೇತ್ರ ಪಾತ್ರಂಗಳಲ್‍ನಮ್ಮ ನಮ್ಮಲ್ಲಿ ಇಂತಿತ್ತ ಶ್ರಾದ್ಧಂಗಳಂತನ್ನ ಪ್ರೀತ್ಯರ್ಥವೆಂತಿರ್ದನೈ ನಾಥ ಸಂಪೂರ್ಣ ಸೌಭಾಗ್ಯ ಸಂಸ್ಥಾನಿಯೋ ನೀನು ಭಾಸ್ವನ್ನಖ ಶ್ರೇಣಿಯಿಂದಲ್ ಮಹಾ ದೈತ್ಯವಕ್ಷಸ್ಕವಂ ಸೀಳಿ ಇತ್ತಾವ ಪಾಂತ್ರಾತ್ಮಿಕಾ 360 ಶ್ರಾದ್ಧ ನಮ್ಮಲ್ಲಿ ತಾ ಸೇರಿತೈ ನಾರಹರ್ಯಾತ್ಮನೇ ನಿನ್ನಗೇ ನಾವು ಸಾಷ್ಟಾಂಗ ಪ್ರಣಾಮಗಳ ಮಾಡುವೇವೆಂದರು.ಸಿದ್ದರೆಲ್ಲಾಂಜಲೀಬದ್ಧರಾಗೆದ್ದೆಲೋಅಷ್ಟಸಿದ್ಧಾತ್ಮನೇ ನಮ್ಮಲಿದ್ದಾ ಮಹಾಯೋಗ ಸಿದ್ಧಿಂಗಳೆಲ್ಲಾ ತಪೋಯೋಗಸಾಮರ್ಥ್ಯದಿಂ ಕದ್ದನೇ ಗೆದ್ದೆನೆಂತಿದ್ದ ದೈತ್ಯ ಪ್ರಬುದ್ಧನ್ನ ವಕ್ಷಸ್ಕ ಸಂಭಿನ್ನವಂಮಾಡಿಯಾ ನಮ್ಮಗಾಧಾರವಾಗಿದ್ದ ಸದ್ಯೋಗ ಸಿದ್ಧಿಂಗಳಂ ಮತ್ತೆ ನೀನಿತ್ತೆಯೋ 370 ನಾರಸಿಂಹಾತ್ಮ ನಾವೆಲ್ಲರುಂ ನಿನ್ನಗೇವಂದನಂಗಳ್À ಸಮರ್ಪೀಂಸುವೇವೆಂದರು.ಆಮೇಲೆ ವಿದ್ಯಾಧರಾನೀಕಗಳ್ ನಿಂತೆಲೋಸರ್ವ ವಿದ್ಯಾತ್ಮನೇ ನಮ್ಮಲಿದ್ದಾ ಪೃಥಕ್‍ಧಾರಣಾಯೋಗ ಸಂಪಾದ್ಯಗಳ್ ವಿದ್ಯೆಗಳ್‍ನಷ್ಟಗೈಸಿದ್ದನತ್ಯಂತ ದರ್ಪಿಷ್ಠನೀಅಜ್ಞ ದೈತ್ಯೇಂದ್ರನಾ ಯಜ್ಞದೋಳ್‍ಬದ್ಧ ಪಶ್ವಂತೆ ತಾನಿಂದು ನಿನ್ನಿಂದಲಾ ಮೃತ್ಯುಪಾಲಾದನೇ ನಮ್ಮ ಸದ್ವಿದ್ಯೆಗಳ ಮತ್ತೆ ನಮ್ಮಲ್ಲೆ ಬಂದಿಪ್ಪುದಯ್ಯಾ ನೃಹರ್ಯಾತ್ಮ ತು 380 ನಾಗರಾವೇಳೆಲೋsನಂತನೇ ನಮ್ಮಲಿದ್ದಾ ಮಹಾರತ್ನಗಳ್‍ಮಾನಿನೀ ರತ್ನಗಳ್ ತಾ ಬಲಾತ್ಕಾರದಿಂಗೊಂಡನೀ ಪಾಪಿ ದೈತ್ಯನ್ನ ವಕ್ಷಸ್ಕವಂಸೇದಿ ಈ ರತ್ನಗಳ್ ಮತ್ತೆ ನೀ ನಮ್ಮಗೇಸೇರುವಂತೇ ದಯಾಮಾಡಿದೀಯೈ ನಮಸ್ತೇ ನಮೋ ಎಂದರು.ಮನ್ವುಗಳ್‍ನಿಂತೆಲೋಧರ್ಮ ಸಂರಕ್ಷನೇ ನಾವು ನಿನ್ನಾಜ್ಞೆಯಿಂದೀ ಪ್ರಜಾನೀಕಕೇರ್ಪಾಟು ಮಾಡಿದ್ದ ಮರ್ಯಾದೆಗಳ್ ಸರ್ವವೀ ದೈತ್ಯ ತಾ ಕೆಡಿಸಿ ಕ390 ಲ್ಲೋಲವಂ ಮಾಡಿ ನಿನ್ನಿಂದಲೀ ಈಗ ಸಂಹಾರಿಸಲ್ಪಟ್ಟನೇ ಇನ್ನು ಮೇಲ್ ನಾವು ನಿಮ್ಮುಟ್ಟಕ್ತಿಗಳ್ ನಡೆಸುವೇವೆಮ್ಮಗಾಜ್ಞಾಪಿಸೋನಾವು ತ್ವದ್ದಾಸ್ಯವಂ ಬಯಸಿದೇವೆಂದರು.ಆ ಪ್ರಜೇಶ್ಯಾಳಿಗಳ್À ನಿಂತು ಕೇಳೋ ``ಪ್ರಜೇಶಾ ವಯಂ ತೇ ಪರೇಶಾಭಿಸೃಷ್ಟಾ ನ ಯೇನ ಪ್ರಜಾ ವೈ ಸೃಜಾಮೋ ನಿಷಿದ್ಧಾಃ ಸ ಯೇಷ ತ್ವಯಾ ಭಿನ್ನವÀಕ್ಷಾನು ಶೇತೇ ಜಗನ್ಮಂಗಲಂ ಸತ್ವಮೂರ್ತೇವತಾರಃ’’ ಪ್ರಭೋಎಂದರು. ಆಗ ಗಂಧರ್ವರೆಲ್ಲಾ ಎಲೋ 400 ಸ್ವಾಮಿಯೇ ನಾವು ನಿಮ್ಮ ಪ್ರಸನ್ನಾವತಾರೈಕ ಲೀಲಾ ಕಥಾಸೂಕ್ತಿಗಳ್ ನಾಟ್ಯ ಶೃಂಗಾರ ಚೇಷ್ಟಾ ಕಳಾದರ್ಶನಾದ್ಯಭಿನಯಾವ್ಯಕ್ತಿಗಳ್ ತಾನ ಗಾನಾನುಸಂಧಾನ ಸಮ್ಮೋಹಿನೀ ಶಕ್ತಿಗಳ್ ಕೂಡಿ ಆಶ್ರಾಂತವುಂನಿನ್ನ ಕೊಂಡಾಡುತಾ ಗಾಯಕಶ್ರೇಷ್ಠರಂತಿಪ್ಪೆವೇ ತನ್ನ ಸದ್ವೀರ್ಯ ತೇಜೋಬಲೋಜಸ್ಕದಿಂದಲ್ ಪ್ರಭೋ ನಮ್ಮ ಸಾಮಥ್ರ್ಯಗಳ್‍ತನ್ನಗಾಧೀನ ಮಾಡಿಟ್ಟುಕೊಂಡಿದ್ದನೀದೈತ್ಯನೀ ವೇಳೆ ನಿನ್ನಿಂದ ಪಂಚತ್ವವಂ 410 ಆ ಯಕ್ಷರೆಲ್ಲಾ ಎಲೋ- 420 ಧ್ಯಕ್ಷನೇ ತ್ವನ್ಮನೋಭಿಜ್ಞ ಕರ್ಮಂಗಳಿಂದಲ್ ಸದಾ ನಿನ್ನಗೇ ಭೃತ್ಯರಾಗಿಪ್ಪ ನಾವೆಲ್ಲರುಂ ದೈತ್ಯಗೇ ಪಾಲಕೀ ಹೊರ್ವರಂತಾದೆವೇ ನಮ್ಮ ಸಂತಾಪಗಳ್ ಬಲ್ಲ ನಿನ್ನಿಂದಲೀ ದೈತ್ಯನೀ ವೇಳೆ ಪಂಚತ್ವವಂಹೊಂದಿದಂ ನಾವು ಸಂತೋಷವಂ ಕಂಡೆವಯ್ಯಾ ನೃಪಂಚಾಸ್ಯನೇ ಪಂಚವಿಂಶಾಖ್ಯ ನೀ ನೆಂದರು. ಆಮೇಲೆ ಕಿಂಪೂರುಷಾನೀಕವುಂಬಂದೆಲೋ ಪುರುಷನೇ ನಾವು ಕಿಂಪೂರುಷರ್‍ನೀಂ ಮಹಾಪೂರುಷಂ ಈಶ್ವರಂ ನಿನ್ನ ಕೈ 430 ನಿತ್ಯ ಕೊಂಡಾಡುತಾಭೂರಿಯೂಟಂಗಳಂ ಉಣ್ಣುತಾಲಿದ್ದೆವೇತಾನಿವೆಲ್ಲಾ ಪರಿಗ್ರಾಹಿಸೀ ದೈತ್ಯ ನಿನ್ನಿಂದ ಪೆಟ್ಟಾಂತು ತಾ ಪೋದನೇ ದೈವದಿಂ440 ಕಿನ್ನರ ಪ್ರಾಣಿಗಳ್‍ಪೂರ್ವದಲ್ ನಿನ್ನ ದಾಸಾನುದಾಸರ್ಗಳಾಗಿಪ್ಪೆವೀ ದೈತ್ಯ ನಮ್ಮಿಂದ ತಾ ಬಿಟ್ಟಿಕಾರ್ಯಂಗಳೆಲ್ಲಾ ಸದಾ ಮಾಡಿಸೂವಂ ವiಹಾದು:ಖಗೋಣಿಸುವಂ ಇಂಥ ಪಾಪಿಷ್ಠ ದೈತ್ಯನ್ನ ಸಂಹಾರ ವಂ ಮಾಡಿದೀ ಇನ್ನು ನೀನಮ್ಮಗೆಲ್ಲಾ ಸಮುಲ್ಲಾಸಗಳ ಶ್ರೇಯಗಳಕೊಟ್ಟು ಸಂರಕ್ಷಿಸೋ ನಾರಹರ್ಯಕ್ಷನೇ ಎಂದರು. 450 ಅಚ್ಯುತದ್ವಾರಪಾಲಾಳುಗಳ್‍ನಿಂತೆಲೋ ಭೂಮನೇ ಕಂಡೆವೋ ಇಂದಿಗೇನಾರಹರ್ಯದ್ಭುತಾಕಾರವಂ ಲೋಕಕೆಲ್ಲಾ ಸುಖಾನಂದವಂ ನಮ್ಮಗಾಧಾರ ನೀನಲ್ಲದಿನ್ನಿಲ್ಲವೋ ಈಗ ವೈಕುಂಠದಲ್‍ನಿನ್ನ ದ್ವಾರಸ್ಥನಾಗಿಪ್ಪನಾ ವಿಪ್ರರಿಂದಲ್ ಮಹಾದೈತ್ಯಜನ್ಮಕ್ಕೆ ತಾ ಬಂದನೇ ಬಂದನಂತಿಂದಿಗೇ ವೈರಮಾರ್ಗಕ್ಕೆ ನೀನಿಂದು ಗೈದಂಥ ಈ ದೈತ್ಯಸಂಹಾರ ವ್ಯಾಪಾರವೆಮ್ಮಲ್ ಮಹಾನುಗ್ರಹಕ್ಕಾಗಿ ನೀ ಬಂದೆ ನಾವ್ 460 ಸ್ವಾಂತ ಸಂತೋಷ ಮಾಡೆಂದು ಬಿನ್ನಾಹಗಳ ಮಾಳ್ಪರು.ಆಮೇಲೆ ಆ ಬಾಲೆ ಸಾಕ್ಷಾಜ್ಜಗನ್ಮೋಹಿನೀ ಲೀಲೆಗಳ್ ಮಿಂಚುತಾ 470 ಪೂಂಚುತಾ ಬಂದು ಸಿಂಹಾಸನಸ್ಥಾನದಲ್‍ಉಗ್ರನಂತಿಪ್ಪನೃಸಿಂಹ ಮೂತ್ರ್ಯುಗ್ರವಂಕಂಡತಿವ್ಯಗ್ರಳಂತಾಗಿ ಆ ತಾಯಿ ಹಿಂದಕ್ಕೆ ತಾ ಬಂದಳಮ್ಮಮ್ಮ ಏಂ ಗುಮ್ಮನಂತಪ್ಪÀನೇ ಸ್ವಾಮಿ ಮುನ್ನಿಂತು ಆಶ್ಚರ್ಯವಂಈಸು ವಿಕ್ರಮ್ಯವಂ ಎಂದಿಗಾನೆಲ್ಲಿ ಕಂಡಿಲ್ಲವಲ್ಲಾ ಕಿವಿಲ್ಯಾದರುಂ ಕೇಳಲೇ ಇಲ್ಲವಲ್ಲಾ ಇದೇನೋ ವಿಚಿತ್ರಾಕÀೃತೀಯಂತೆ ತೋರೂವನೆಂದಂಜಿಕೇಗೊಂಡ ರೀತಿಂದ ತಾ ಹೆಜ್ಜೆ ಕಾಲ್ಗೆಜ್ಜೆಗಳ್ ಸಪ್ಪುಳಂ480 ಮಾಡದೇ ಮೆಲ್ಲನೇ ಪಾಶ್ರ್ವದಲ್ ನಿಂತಳುಆಮೇಲೆ ಪ್ರಹ್ಲಾದನಂ ಕಂಡು ಸಂಭಾಷಿಪಂಬ್ರಹ್ಮ ಬಾರೈ ಎಲೋ ವತ್ಸ ನೀನೀ ನೃಸಿಂಹಾತ್ಮನಲ್ ಮೆಲ್ಲನೇ ಸೇರಿ ನಿಮ್ಮಪ್ಪಗಾ ಗಿಂದು ನಮ್ಮಪ್ಪನಲ್ಲಿಪ್ಪ ತತ್ಕೋಪ ಸಂಕ್ಷೇಪ ಗೈಸೆನ್ನೆ ತದ್ವಾಣಿಗಳ ಕೇಳುತಾಮೆಲ್ಲನೇ ಪಿಲ್ಲೆ ಪ್ರಹ್ಲಾದನಾಹ್ಲಾದದಲ್‍ವೈಷ್ಣವಶ್ರೇಷ್ಠ ತಾನಾಗ ಬಂದಂ ಮಹಾಭಕ್ತಿಯಿಂದಲ್ ಮಹೀಮಂಡಲೀ ಮೇಲೆ ಸಾಷ್ಟಾಂಗ ಬಿದ್ದಂ ನಮೋ ಎಂದು ದಂಡಪ್ರಣಾ 490 ಮಂಗಳಂ ಮಾಡುವೋ ವೇಳೆ ತನ್ನಂಘ್ರಿಕಂಜಾತದಲ್ ಬಿದ್ದ ಬಾಲನ್ನ ಬಾಳಾ ಸುಶೀಲನ್ನ ಕಂದನ್ನ ದೃಷ್ಟಿಂದ ತಾ ಕಾಣುತಾಚಕ್ರ ಶಂಖಾಂಕಿತಾ ಶ್ರೀಲಸದ್ಬಾಹುಗಳ್‍ಚಾಚಿ ಭಕ್ತನ್ನ ತಾನೆತ್ತಿ ತನ್ಮಸ್ತಕಸ್ಥಾನದಲ್ ಪೋಕಲಾಗಿನ್ನು ಸಂಸ್ರಸ್ತ ಚೇತೋಭಯಧ್ವಸ್ಥವಂ ಸ್ವಸ್ತಿದಾನ ಕ್ರಿಯಾಭ್ಯಸ್ತವಂ ಶ್ರೀ ಸತೀ ಸ್ತಂಬಕವಿನ್ಯಸ್ತವಂಹಸ್ತವನ್ನಿತ್ತನವ್ಯಾಹತ ಸ್ಪರ್ಶದಿಂದಲ್ ವಿಧೂತಾ ಶುಭವ್ರಾತನಾಗೀಯಭಿ 500 ವ್ಯಕ್ತ ಲಕ್ಷ್ಮೀವಿಲಾಸಾತ್ಮ ಸಂದರ್ಶನೈಶ್ವರ್ಯವಂ ಕೂಡಿ ತತ್ಪಾದ ಪದ್ಮಂಗಳಂಚಿತ್ತದಿಂದಿತ್ತನಾನಂದದಿಂದಲ್ ಪ್ರಹೃಷ್ಯತ್ತನು ಕ್ಲಿನ್ನ ಚಿತ್ತಾಶ್ರುನೇತ್ರಾಬ್ಜನಾಗಿದ್ದು ಪ್ರಹ್ಲಾದನುಂ ನಾರಸಿಂಹಾತ್ಮನಲ್‍ನಿಂತು ಸಂಸ್ತೋತ್ರಗಾರಂಭಿಪಂ. ಶ್ರೀರಮಾದೇವಿ ತಾನಾಗ ಸಮ್ಮೋಹಿನೀ ಸಂಪುಗಳ್‍ಕೂಡಿ ಬಂದಾ ನೃಸಿಂಹಾಂಕದಲ್ ನಿಂತಳಾಬ್ರಹ್ಮನಾವೇಳೆಯಲ್ ನಾರಸಿಂಹಾತ್ಮನಲ್‍ಸೇರಿ ಸುಕ್ಷೀರ ನೀರಾಭಿಷೇಕಂಗಳಂ 510 ಚೀನಿ ಚೀನಾಂಬರಂಗಳ್ ಮಹಾನಘ್ರ್ಯ ರತ್ನಾವಳೀ ಭೂಷಣಂಗಳ್ ಲಸನ್ಮೌಕ್ತಿಕಾಹೀರ ಹಾರಂಗಳಂ ಗಂಧ ಕಸ್ತೂರಿಕಾಲೇಪಗಳ್ ಶ್ರೀ ತುಳಸ್ಯಾಪ್ತ ಶಾಮಂತಿಕಾ
--------------
ಶ್ರೀಪಾದರಾಜರು
ಶ್ರೀ ವಾದಿರಾಜರು ಗುರುವರ ದಯಮಾಡೈ ಹಯಮುಖ ಪದಯುಗ ನಿಜ ಭಕ್ತಾಗ್ರಣೀ ಪ ಚರಣವ ನಂಬಿದೆ ಮುಂದಿನ ಪರಿಸರ ಸರಸರ ಸುರಿಸುತ ವರಗಳ ಕರುಣದಿ ಅ.ಪ ನಿನ್ನನೆ ನಂಬಿದ ಅನ್ಯರವಲ್ಲದ ಚಿಣ್ಣರ ಬಿಡುವರೆ ಘನ್ನಗುಣಾರ್ಣವ ಸಣ್ಣವರೆನ್ನೆದೆ ಮನ್ನಿಸಿ ಕೈಪಿಡಿ ಚಿನ್ಮಯ ನಂದನ ಅನ್ಯರ ಪೋಷಕನೆ 1 ದಾಸರ ದೋಷವಿನಾಶಗೈವುದು ಕ್ಲೇಶವ ಭಾವೀಶ್ವಾಸ ನಿಯಾಮಕಗೆ ವಾಸವ ಗುರುಶಿವ ಶೇಷಸುವಂದಿತ ವಾಸಿಸಿ ಹೃದಯದಿ ಭಾಸಿಸು ಹರಿದಾರಿ 2 ಆರ್ರ್ತಿವಿದೂರ ಪರಾರ್ಥಕೆ ನೆಲಸಿಹ ಖ್ಯಾತ ಕವೀಂದ್ರನೆ ಪ್ರೀತಿಯ ಬೇಡುವೆನು ಮಾತೆಯ ತೆರಮುರವ್ರಾತವ ನೋಡದೆ ನಾಥನೆ ನೀಡಿಸು ಆತ್ಮವಿಕಾಸವನು 3 ವಿಜ್ಞಾನಾಸಿಯ ದಾನವ ಗೈಯುತ ದೀನನ ಮೌಢ್ಯದಿ ಶೂನ್ಯವಗೈಯುತ ಪ್ರಾಜ್ಜನ ಮಾಡೈ ಪ್ರಾಜ್ಞಲಲಾಮನೆ ಆಜ್ಞಾಧಾರಕ ನಿನ್ನ ಜನುಮ ಜನುಮದಲಿ4 ವೇದವ್ಯಾಸರ ಪಾದಾರಾಧಕ ಮೋದಮುನೀಂದ್ರರ ಪ್ರೇಮವ ಪಡೆದಿಹನೆ ವೇದವ್ಯಾಸರ ಸೇವಿಪ ಭಾಗ್ಯವ ಸಾದರದಿಂ ಕೊಡು ಕಾಮಿತ ಕೊಡುವವನೆ5 ಹಿರಿಯರ ಕರುಣದಿ ಕಿರಿಯರ ಸಾಧನೆ ಶರಣನ ಭಾರವು ಸೇರಿದೆ ನಿಮ್ಮಡಿ ಹರಣವ ವಪ್ಪಿಸಿ ಚರಣವ ಪಿಡಿದಿಹೆ ಪೊರೆಯೈ ಮನತರ ಕುರುಡನು ನಾನಿಹೆ 6 ಮಿಥ್ಯಾಮತ ವಿಧ್ವಂಸನೆ ಗೈಯುವ ಸದ್ಗ್ರಂಥಂಗಳದಾತನೆ ಬಾಗುವೆನು ಪಾರ್ಥನಸಖ “ಶ್ರೀಕೃಷ್ಣವಿಠಲ”ನ ಭಕ್ತಿತರಂಗವ ನೀಡುತ ಕಾಯುತ 7
--------------
ಕೃಷ್ಣವಿಠಲದಾಸರು
ಶ್ರೀನಿಕೇತನ ಲಕ್ಷ್ಮೀ ಕಾಂತನ ಪದಪದ್ಮ ಧ್ಯಾನ ಮಾಡುತ ಎನ್ನ ಸ್ಥಿತಿಯ ದೀನಭಾವನೆಯಿಂದಲೊರೆವೆನು ಗುರುಪವ ಮಾನ ಪಾಲಿಸಲಿ ಸನ್ಮತಿಯ ಪ. ತಾನು ತನ್ನದೆಂಬ ಹೀನ ಭಾವನೆಯಿಂದ ನಾನಾ ಯೋನಿಗಳಲ್ಲಿ ಚರಿಸಿ ಮಾನವ ಜನ್ಮವನೆತ್ತಲು ಮುಂದಾದ- ದೇನೆಂಬೆ ಗರ್ಭದೊಳುದಿಸಿ 1 ಮಾತಾಪಿತರುಗಳು ಮೋಹದಿ ರಮಿಸಲು ಕೇತ ತತಿಗೆ ಸರಿಯಾಗಿ ಆತು ಬಂದಿಹೆನು ಗರ್ಭದಿ ಮೆಲು ನರ ವ್ರಾತ ಬಂಧಕೆ ಗುರಿಯಾಗಿ 2 ಸೇರಿದ ಕ್ರಿಮಿ ಪರಿವಾರ ಕಚ್ಚುತಲಿರೆ ಚೀರಲಾದರು ಶಕ್ತಿಯಿರದೆ ಭಾರ ವಸ್ತುವು ಕಣ್ಣಸಾರವು ತಡೆಯದೆ ಗಾರುಗೊಂಡೆನು ಗರ್ಭದೊಳಗೆ 3 ಮೂರರಾ ಮೇಲೆ ಮತ್ತಾರುಮಾಸಗಳಿಂತು ಭಾರಿ ಭವಣೆಗೊಂಡು ಕಡೆಗೆ ಭೋರನೆ ಭೂಮಿಗೆ ದೂರಿ ಬಂದೆನು ಮಲ ಧಾರೆಯಾ ಕೂಡಿ ಮೈಯೊಳಗೆ 4 ಹೇಸಿಗೆ ಮಲಮೂತ್ರ ರಾಶಿಯ ಒಳಗೆ ದು- ರ್ವಾಸನೆ ಬರುವ ಗೆರಸಿಯ ಹಾಸಿಗೆ ಒಳಗೆ ಹಾಕಿರುತಿರೆ ದೇಹದ ಲೇಶ ಸ್ವಾತಂತ್ರ್ಯವೇನಿರದೆ 5 ಮೂಸಿ ಮುತ್ತುವ ನುಸಿಮುತ್ಕುಣ ಬಾಧೆಗೆ ಘಾಸಿಗೊಳುತ ಬಾಯ ತೆರದೆ ದೋಷ ಶಂಕಿಸಿ ಮೈಯೊಳಿಕ್ಕಿದ ಬರೆಗಳ ಬಾಸಲೆಯುನು ತಾಳ್ದೆ ಬರಿದೆ 6 ನಾಲ್ಕು ಕಾಲುಗಳಿಂದ ನಾಯಿಗೆ ಪರಿಯಾಗಿ ಸೋಕಿದೆ ಸರ್ವತ್ರ ತಿರುಗಿ ಸಾಕುವ ಜನರೆಡಬಲಗಾಲ ತುದಿಯಿಂದ ದೂಕಿದರಲ್ಲಿಯೆ ಸುಳಿದೆ 7 ವಾಕುಗಳೆಂಬ ಕೂರಂಬನು ಸಹಿಸಿ ಪ- ರಾಕೆಂದು ಪರರ ಸೇವಿಸಿದೆ ಮಾಕಳತ್ರನೆ ನಿನ್ನ ಕೃಪೆಯಾದ ಬಳಿಕ ಮೋ- ಹಾಕಾರ ಮಡುವಿನೊಳಿಳಿದೆ 8 ಈಗಲಾದರು ದೇಹ ಭೋಗವೆ ಬಯಸುತ ನೀಗಿದೆ ವ್ರತ ನೇಮಾದಿಗಳ ಸಾಗದ ಫಲ ತನಗಾಗಬೇಕೆಂಬ ಮ- ನೋಗತಿಯಿಂದ ಕರ್ಮಗಳ 9 ಮೂಗಭಾವನೆಯನ್ನು ನೀಗದೆನಿಸಿ ಮುಂ- ದಾಗಿಯಾಡುವೆ ಮಥನಗಳ ಕಾಗೆಯು ಕುಂಭದ ಜಲ ಕುಕ್ಕುವಂತೆ ಬೆಂ- ಡಾಗಿ ಕೊಂಡೆನು ಝಗಳಗಳ 10 ಕಂತುಜನಕ ಕಂಜನಾಭ ವೆಂಕಟರಾಜ ಚಿಂತಾಮಣಿ ಸುರತರುವೆ ಎಂತಾದರು ನಿನ್ನ ದಾಸ್ಯ ಸೇರಿದ ಮೇಲೆ ಇಂತುಪೇಕ್ಷಿಸುವುದು ಥರವೆ 11 ಭ್ರಾಂತಿ ಎಂಬುದ ಬಿಡಿಸಿನ್ನಾದರು ಲಕ್ಷ್ಮೀ ಕಾಂತ ಕಾರುಣ್ಯ ವಾರುಧಿಯೆ ಚಿಂತಿತದಾಯಿ ಎನ್ನಂತರಂಗದಿ ಬೇಗ ನಿತ್ಯ ವಿಧಿಯೆ 12
--------------
ತುಪಾಕಿ ವೆಂಕಟರಮಣಾಚಾರ್ಯ
ಷಟ್ಪದಿ ಭೃಂಗ ದಿವಿಜ ಲಲಾಮ ಶುಭಗುಣ ಸಾಂದ್ರ ಗುರುವರನೇಸೇರಿಹೆನು ತವಶಿಷ್ಯ ಕೋಟಿಲಿ ಬೀರಿ ಕರುಣಾ ದೃಷ್ಟಿ ಶ್ರುತಿ ಭಂಡಾರ ಸೂರೆಯ ಮಾಡ್ವ ಹಾ ಹಾ ಕಾರದಿಂ ತಪಿಪ 1 ಬಾಲ ನೆನ್ನಯ ಶಿರವ ನಿಮ್ಮಯ ಶೀಲಕರದಿಂ ಭೂಷಿಸುತ ಕವಿತಾ ಲತಾಂಗಿಯ ತಾಂಡವಾಡಿಸಿ ಚಂದ್ರಮೌಳಿನುತಕಾಳಿಮನಕುಮುದೇಂದು ಜಗಸಂ ಚಾಲಕ ಪ್ರಭು ಮುಖ್ಯ ಪ್ರಾಣಗುಪಾಲಿಸುತ ಸತ್ತಾದಿ ಸಕಲವ ಪೊರೆದು ಮೆರವಂಥಾ 2 ಪತಿ ಮಾ ವಂದ್ಯ ನಿರುಪಮ ನಾರಸಿಂಹನುಅಂದು ನಿಮ್ಮನು ಕಾಯ್ದ ತೆರಪೊರೆ ಶ್ರೀ ಸುಧೀಂದ್ರ ಸುತ 3 ಏನಿದೇನಿದು ನಿಮ್ಮ ಮಹಿಮೆಯಮಾನವರಿಯಲು ಸುರರಿಗಾಗದುಮಾನವರ ಪಾಡೇನು ಶಿರತೂ ಗುತಿಹ ಫಣಿರಾಜಮಾನ್ಯ ಸುರ ಋಷಿ ಕರುಣ ಬಲವೋಮೇಣ್ಪರಿಸರನ ಕೃಪೆಯೊ ಕಾಣೆನುದಾನಿ ನರಹರಿ ವರದ ಫಲವೋ ಮೊತ್ತವೇ ಯೆಂಬೆ 4 ಜಂಭಾರಿ ಮೇಣಾಬಾಲ ಸುಬ್ರಹ್ಮಣ್ಯನೋ ಶಂಕಿಪುದು ಸುರನೀಕಾ 5ಸೂಕ್ಷ್ಮಮತಿಗಳೆ ಪೇಳಿ ಸರ್ವಾಧ್ಯಕ್ಷನವತಾರವನು ಯಾವ ಸುಲಕ್ಷಣ ಭಕುತಗೇನೆ ಮಾಡಿಹ ನಮ್ಮಗುರುವ ಬಿಡೆಪಕ್ಷ ವಹಿಸದೆ ಪೇಳಿ ಯಾವನು ಲಕ್ಷ್ಯ ಮಾಡದೆ ಕಷ್ಟ ಮಾತೆಯಕುಷಿಯಂ ಬಂದಿಹನು ಮುಮ್ಮುಡಿ ನಮ್ಮ ನುದ್ಧರಿಸೆ 6 ವ್ಯಾಜ ವಿಲ್ಲದಲೆದೈತ್ಯ ಪಿತತಾನಿತ್ತ ಬಾಧೆಗೆ ನಾಥ ನರಹರಿ ಬಂದುದಚ್ಚರಿಯಂತೆ ಭಾವಿಸೆ ಭಕ್ತವತ್ಸಲ ಬಿರುದು ಪೊಳ್ಳೆಬಿಡೆ 7 ಸತಿ ಸಂಹಾರ ಕಾಟವು ಮತ್ತೆ ಯತಿ ಯಂತಾಗೆ ಹಾಗೆಯೆನಿಂತಿರಲು ವೃಂದಾವನದಿ ಕಾಡುವರು ಶಿಷ್ಯಗಣಾ 8 ಸತಿಯ ಬೇಕೆಂದೊಬ್ಬ ನೀಡೈ ಸುತನ ದಂಪತಿ ವ್ಯಾಜ್ಯ ಹರಿಸಿರಿಜತನ ಮಾಡಿಸಿ ವೇತನವ ಹರಿಸಿನ್ನು ವ್ಯಾಧಿಗಳಪಥನ ವಾಯಿತು ಕೂಳುಕೊಡಿಸೈ ಸತತ ವೀತೆರ ಬಯಕೆ ವ್ರಾತದಿಸುತಪ ನೀನೆಂತಾಗೆ ಕುಪಿತನು ಬಲ್ಲ ಬತ ಹರಿಯೇ 9 ತಿರುಗುತಲಿಹರು ತಮ್ಮಯ ಹೀನ ನಡತೆಗಳಿಂದ ಸ್ತ್ರೀಯರು ವಿಧಿಯ ನಡೆಸುವರು ಚೆನ್ನ ಔಷಧ ವಿಹುದು ನಿನ್ನಲಿ ಹಣ್ಣಿನಾಶಯ ತೋರಿನೀ ಭವ ಹುಣ್ಣುವಳಿಯುವೆ ಎಷ್ಟು ಕರುಣಿಯೊ ಗುರುವೆ ಶರಣೆಂಬೆ 1 ಕಳತ್ರ ವೆಲ್ಲವನೆಂತೆನಲು ಬಲು ಹುಚ್ಚುತನವ ರ್ಣಿಸಲು ಮಿಕ್ಕುದುದಾಉಕ್ತಿ ಭಜಿಸುವಗೇನು ಪೇಳ್ವುದು ಮುಕ್ತಿಕರಗತ ವೇಕೆ ಸಂಶಯ ಶಾಸ್ತ್ರ ಭಾಗ್ಯವೆ ಸಾಕು ಕರುಣಿಸಿ ನಮಿಪೆ ಭೂಯಿಷ್ಠ 11 ಸೂತ್ರ ಖರೆ 12 ಪ್ರೀತಿತಮ ಇವನಂಥ ದಾತನ ಗ್ರಂಧ ನಿಚಯವ ಭೋಜ್ಯ ಕಿಡುತಲಿ ಸುತ್ತಿಗೆದ್ದಲು ಹುಳಕೆ ಮೆಚ್ಚುವ ನೇನು ಪಯ ಸುರಿಯೆಪುತ್ರರಿಗೆ ಮದ್ದಿಕ್ಕಿ ಪಿತನಿಗೆ ಮತ್ತೆ ಭೋಜನ ವಿಕ್ಕೆ ಬಹುಸುಪ್ರೀತಿ ಯಾದಂತಾಯ್ತು ಹರಿಹರೀ ಪಾಹಿಮಾಂ ಪಾಹೀ 13 ಶುಂಠನಾದರು ಪಠಿಸೆ ನಮ್ಮಯ ಕಂಠದಿಂ ಬಂದಂಧ ನುಡಿವೈಕುಂಠ ರಮಣನ ಕಾಂಬ ಪಂಡಿತ ನೆನೆಸಿ ಧರೆಯೊಳಗೆಕಂಟಕವ ನಿರಿದು ಭವದಲಿ ವಿಷ ಕಂಠ ಗಾತಪ್ರಿಯ ತನ್ನಯಭಂಟನನು ಮಾಡಿಕೊಳಲೆಂತೆಂದೆನ್ನ ಹರಿಸಿ ಪೊರೆ 14 ಏಳಿರೇಳಿರಿ ಸಂತ ಮಿತ್ರರೆ ಕೇಳಿ ಕೇಳಿದುದೆಲ್ಲ ನೀಡುವಪಾಲಕನು ಶ್ರೀ ರಾಘವೇಂದ್ರನು ಇಲ್ಲ ಮೆರೆಯುತಿರೆಕೇಳಿ ಭವಸುಖ ಮತ್ತೆ ಭವದಲಿ ಬೀಳುವರೆ ವಿಜ್ಞಾನ ಯಾಚಿಸಿಕೊಲ್ಲಿರೀ ಸಂಸಾರ ಬೀಜವ ಕಲಿಯು ಎಷ್ಠರವ15ನಾಲ್ಕುಶತ ಐವತ್ತು ವರುಷವೆ ವೋಲಗವ ಕೈಕೊಂಬ ಮುಂದಿವಅಲಸವ ಮಾಡಿದೆಡೆ ಸುರತರು ಬಿಟ್ಟತೆರವೇನೆಜಾಲ ಮಾತುಗಳೇಕೆ ಮುಂದಿನ ಶೀಲ ಮಾರ್ಗವ ನೋಡ್ವ ಜಾಣನುಪಾಲಿಸೈಧೋರೆ ಕೆಟ್ಟೆ ಕೆಟ್ಟೆನು ಎನ್ನ ಕೈ ಕೊಡುವ 16 ಏಕೆ ಭಯ ನಮಗಿನ್ನು ನರಕದ ಏಕೆ ಕಳವಳ ಅಶನ ವಸನÀಕೆಏಕೆ ಸಂಶಯ ಜ್ಞಾನ ವಿಶಯದಿ ಪಿಡಿಯೆ ಗುರುವರನೆನೂಕಿ ವಿಷಯದಿ ಬಯಕೆ ಬೇಗನೆ ಬೇಕು ಎನ್ನುತ ಜ್ಞಾನ ನಿಧಿಗಳಹಾಕಿ ದಂಡವ ಪಾಹಿ ಗುರುವರ ಪಾಹಿ ಯೆಂತೆನ್ನ 17 ಭುಕ್ತಿ ಹಾಗೆ ವಿರಕ್ತ ಭಕ್ತಿಯು ಭಕ್ತ ವೃಂದಕೆ ಭ್ರಷ್ಟ ಬಿಟ್ಟವನು 18 ಜಯ ಜಯವು ಗುರುಸಾರ್ವಭೌಮಗೆಜಯ ಜಯವು ಮಂತ್ರಾಲಯಸ್ಥಗೆಜಯ ಜಯವು ವಿಜಯೀಂದ್ರ ಪೌತ್ರಗೆ ವ್ಯಾಸರಾಜನಿಗೆಜಯ ಜಯ ಪರಿಮಳಾ ಪ್ರದಾತಗೆ ಜಯಜಯವು ಖಂಡಾರ್ಥ ನೀಡ್ದಗೆಜಯ ಜಯವು ಸಶರೀರ ಬೃಂದಾ ವನದಿ ಸೇರ್ದವಗೇ 19 ಜಯ ಜಯವು ಬಾಹ್ಲೀಕ ರಾಯಗೆ ಜಯ ಜಯವು ಶ್ರೀ ಸತ್ಯಸಂಧಗೆಜಯ ಜಯವು ಪ್ರಹ್ಲಾದರಾಜಗೆ ಶಿಷ್ಯ ವತ್ಸಲ್ಯಗೆಜಯ ಜಯವು ಶ್ರೀ ರಾಘವೇಂದ್ರಗೆಜಯ ಜಯವು ಮಂಗಳವ ಸುರಿಪಗೆಜಯ ಜಯವು ಜಯ ಮುನಿಯ ಪ್ರೀಯಗೆ ನಮ್ಮ ಗುರುವರಗೆ 20 ಮಾನನಿಧಿ ಜಯತೀರ್ಥ ರಾಯರಘನ್ನ ಹೃದಯಗ ವಾಯು ವಂತರಶ್ರೀ ನಿಲಯ ಶ್ರೀ ಕೃಷ್ಣವಿಠಲ ಪ್ರೀಯ ಗುರುರಾಜನಾನು ಪಾಮರ ಬಾಲ ನುಡಿಗಳ ನೀನೆ ತಿದ್ದುತ ಮನ್ನಿಪುದು ನಾನಿನ್ನ ದಾಸರ ದಾಸನೆಂದು ಸ್ವೀಕರಿಸು ಶರಣು 21
--------------
ಕೃಷ್ಣವಿಠಲದಾಸರು
ಸಜ್ಜನರ ಸಂತಾಪ-ಕುಲಕೆ ಮೃತ್ಯುವುಕಂಡ್ಯ-ಮನವೇ ಪ ನಿರ್ಜರೇಶಗು ಹಾನಿ-ತಪ್ಪದೈ ಇದರಿಂದ ಅ.ಪ. ಅಂದು ದುರ್ಯೋಧನನು ಸಂದ ಸಭೆಯೊಳು ಪಾಂಡು ನಂದನರ ಸತಿಮಾನ ಕಂದಿಸಲೆತ್ನಗೈಯೆ ತಾಪ ಬಂದು ಬಡಿಯಲು ಖಳಗೆ ಬಂಧು ಬಳಗವುಸಹಿತ ಪೊಂದಿದನೆ ಯಮಸದನ 1 ತ್ರೇತೆಯಲಿ ರಾವಣನು ನೀತಿಮರೆತವನಾಗಿ ಖ್ಯಾತ ನಂದಿಯ ನೋಡಿ ಕೋತಿ ಚೇಷ್ಟೆಯನಡಿಸೆ ಸೀತೆ ದ್ರೋಹದಿ ಹಾಗೆ ವ್ರಾತ್ಯ ಕುಲಸಹಿತ ಖರೆ 2 ಇಂದ್ರ ನೆನಿಸಿದ ನಹುಷ ಪೊಂದಿದನು ಸರ್ಪತ್ವ ಕುಂದದಾ ಯಾದವರು ಪೊಂದಿದರು ಕುಲನಾಶ ಚಂದ್ರಮೌಳಿಯ ಅಂಶ ಚಂಡಮುನಿ ದೂರ್ವಾಸ ನೊಂದು ಧಾವಿಸಿ ಜಗದಿ ಬಂದು ನಿಂತುದನರಿಯ 3 ಶರಧಿ ಧುಮುಕಲಿಬಹುದು ಉರಿಯ ನುಂಗಲಿ ಬಹುದು ಉರಗವನು ಪಿಡಿಯಬಹುದು ಹರಿಯ ಶರಣರ ದ್ರೋಹ ತಿರುಗಿದರು ಮುರ್ಲೋಕ ಹರಿಸಲಾಗದು ಅವರೆ ಕರುಣಗೈಯದೆ ಮತ್ತೆ 4 ಭಕ್ತವತ್ಸಲ ಹರಿಯು ಭಕ್ತತಾಪವ ಸಹಿಸ ಶಕ್ತಿಸಾಹಸ ಜರಿದು ಉಕ್ತಿಲಾಲಿಸಿ ಬೇಗ ಕರ್ತೃ ಹರಿಯೆಂದರಿತು ಭಕ್ತರನು ಸೇವಿಸುತ ನಿತ್ಯದೊರೆ “ಶ್ರೀಕೃಷ್ಣವಿಠಲ” ಕರುಣವ ಘಳಿಸು 5
--------------
ಕೃಷ್ಣವಿಠಲದಾಸರು
ಸರ್ವಾಂತರ್ಯಾಮಿ ನಿನಗೆ ಪ ದೇವತಿರ್ಯಗ್ ಮನುಷ್ಯಾದಿ ಜಂತುಗಳಲ್ಲಿ ದಿವಿಭುವಿ ಪಾತಾಳದೊಳ ಹೊರಗಿರುವಗೆ ಅ.ಪ ಪ್ರಾಣ ಪ್ರತಿಷ್ಟೆಗೋಳಕತ್ರಯ ಚಿಂತನೆ ನೀನೆ ಕರುಣದಿ ಮನ್ಮಾನಸದೊಳು ಪೊಳ- ದೇನೇನು ಮಾಡಿಸಲದು ನಿನಗರ್ಪಿತ 1 ಅಣುವಿನೊಳಣುವಾಗಿ ಮಹತ್ತಿನೊಳ್ಮಹತ್ತಾಗಿ ಎಣÉಸಲೆನ್ನಳವೆ ನಿನ್ನಯ ಮಹಾಮಹಿಮೆಯ ವಿನುತಿಸುವುದು ಕೊನೆಗಾಣದೆ ಶೃತಿ ತತಿ 2 ಶ್ವೇತದ್ವೀಪಾನಂತಾಸನ ವೈಕುಂಠ ಆ- ಪ್ರೀತಿಯಿಂದಲಿ ನಿನ್ನ ಭಜಿಸುತಿರುವ ಭಕ್ತ- ವ್ರಾತವ ಸಲಹುವ ಗುರುರಾಮವಿಠಲನೆ 3
--------------
ಗುರುರಾಮವಿಠಲ