ಒಟ್ಟು 1442 ಕಡೆಗಳಲ್ಲಿ , 103 ದಾಸರು , 1216 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ವಿಜಯದಾಸರ ಪ್ರಾರ್ಥನೆ) ಜಯ ಜಯ ವಿಜಯೇಂದ್ರ ಜಿತಬುದ್ಧಿ ತಂದ್ರ ನಯ ನೀತ ಗುಣ ಸಾಂದ್ರ ನುತ ರಾಮಚಂದ್ರ ಪ. ಅಷ್ಟಮಹಾಸಿದ್ಧಿಯರಿತ ಗಂಭೀರ ಗಜ ಕುಂಭದಾರ ಕೃಷ್ಣಾರಾಧಕ ಚತು:ಷಷ್ಟಿಕಳಾಧಾರ ಇಷ್ಟ ಸಿದ್ಧಿಗಳ ಪಾಲಿಸು ಬೇಗ ಧೀರ 1 ಶೇಷಾದ್ರಿನಾಥನ ಕರುಣೈಕ ಪಾತ್ರ ವ್ಯಾಸ ಮುನೀಂದ್ರ ಕರಾಬ್ಜಜ ಪುತ್ರ ದೋಷವೆಣಿಸದೆ ಸ್ವೀಕರಿಪುದೇ ಸ್ತೋತ್ರನೀ ಸಲಹುವದಾರಾಧಿತ ಮಾಕಳತ್ರ 2
--------------
ತುಪಾಕಿ ವೆಂಕಟರಮಣಾಚಾರ್ಯ
(ಶೇಣಿಯ ಗೋಪಾಲಕೃಷ್ಣನನ್ನು ನೆನೆದು) ತಾಪವ ಬಿಡಿಸು ದಯಾಪರ ಶ್ರೀ ಗೋಪಾಲ ಕೃಷ್ಣ ನೀ ಕಾಪಾಡು ಸಂಸಾರ ಪ. ಲೋಕನಾಯಕ ನಿನ್ನ ಕರುಣವಂದಿದ್ದರೆ ಸಾಕೆಂಬೆ ಜ್ಞಾನಾನಂದಕರ ಪಾಕಶಾಸನ ಸುತಗೊಲಿದಾತನ ಭಂಡಿ ನೂಕಿ ನಡೆಸಿದ ಕೃಪಾಕರ ಮೂರುತಿ 1 ನಡೆವುದು ನುಡಿವುದು ಕೊಡುವುದು ಕೊಂಬುದು ಮಡದಿ ಮಂದಿರ ಮಮತಾಸ್ಪದದ ಒಡವೆ ವಸ್ತುವು ಮೊದಲಾದುದೆಲ್ಲವನು ಶ್ರೀ- ಮುಡಿಯ ಸಂವರಿಸುವ ಕರದಿ ಸಂಗ್ರಹಿಸುತ2 ನಿನ್ನಡಿಗಳ ನಂಬಿ ನಿಂದಿಹೆನಿಲ್ಲಿ ಪ್ರ- ಸನ್ನ ಮುಖಾಂಬುಜ ಪಾಲಿಸೆಂದು ಅನ್ಯರಿಗೆಂದೆಂದು ದೈನ್ಯ ತೋರಿಸಲಾರೆ ಪನ್ನಗಾಚಲವಾಸ ಪರಮ ದಯಾಳೊ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಶೇಷದೇವರ ಪ್ರಾರ್ಥನೆ) ಸುಕೃತ ಭಾಗ್ಯವಂತನೋ ಗುರುಶೇಷ ಯಂತು ಬಣ್ಣಿಸುವುದಿನ್ನು ಮಾಂತರಂಗದಿ ಪ್ರೇಮ ಪಾತ್ರನಾಗಿರುವದೀ ಪ. ಶ್ರೀನಿವಾಸಗೆ ಮೂರು ಸ್ಥಾನದಿ ಸರಿಯಾಗಿ ತಾನೆ ಶಯನ ಪೀಠ ಛತ್ರನಾಗಿ ಜ್ಞಾನಾನಂದನ ಪರಮಾನುರಾಗದಿ ನೋಡಿ ಮಾನವ ಪಡೆದು 1 ರಾಮರೂಪದಿ ನಿಂದ ಸ್ವಾಮಿಗೆ ನಿರವಧಿ ಪ್ರೇಮದನುಜನಾಗಿ ಪರಿಚಿರಿಸಿ ಸೋಮವಂಶದಿ ಬಲರಾಮನೆನಿಸಿ ಸತ್ಯ- ಭಾಮಾವರನ ಜೇಷ್ಠ ನಾಮವ ಪಡೆದು 2 ಹಲವು ವಿಧದ ಪುಣ್ಯ ಫಲವ ನೀಡಲು ಲಕ್ಷ್ಮಿ ಲಲನೆ ಪದ್ಮಜೆಯರ ಬಲಗೊಳ್ಳುತಾ ಕಲಿಯುಗದಲಿ ಬಂದು ನೆಲೆಯಗೊಳ್ಳಲು ಶೇಷಾ- ಚಲನೆಂದು ಹರಿಗೆ ನಿಶ್ಚಲವಾದ ನಿಲಯಾಗಿ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಶೇಷಶಾಯಿಯ ವರ್ಣನೆ) ಸ್ವರಮಣನೆನುತಲಿ ಮೊರೆಯಲು ಶ್ರುತಿಗಳು ಹೊರಳುವದೇನುಚಿತ ಅರೆ ನಿಮಿಷವು ನಿನ್ನುರವ ಬಿಟ್ಟಗಲದೆ ಇರುವಳು ರಮೆ ನಿರತ ಪ. ಕವಿಗಳು ಗುಣರಸ ಸವಿದು ಸುಖಭರದಿ ದಿವಿಜರ ಲೆಕ್ಕಿಸರೂ ಪವಿಧರ ಪಾಲಕ ರವಿ ಉದಿಸಿದ ಬಳಿ ಕವಿಕುಲ ಮಲಗುವರೆ 1 ಇಂದಿರೆ ನಿನ್ನನು ಹೊಂದುತ ಪರಮಾ- ನಂದದಿ ಮುಳುಗಿರಲು ಎಂದಿಗು ಮಲಗದ ಸುಂದರ ವಿಗ್ರಹ ಇಂದು ನೀ ಮಲಗುವರೆ 2 ದೋಷವಿದೂರ ಅಶೇಷ ಸುರಾರ್ಚಿತ ದಾಸ ಜನಾನಂದ ಶೇಷಗಿರಿ ವಿಶೇಷಾಸನ ಯಿ- ನ್ನೇಸು ಶಯನ ಚಂದ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಶ್ರೀ ಜಯತೀರ್ಥರು) ಜಯತೀರ್ಥರೇ ನಮ್ಮ ಸುಮತೋದ್ಧಾರಕರು ಮಳಖೇಡ ನಿಲಯರು ಪ ಪೂರ್ಣಪ್ರಜ್ಞರಲಿ ಪಶುರೂಪ ತಾಳಿ ಭಾಷ್ಯಗಳ ಪೇಳಿ ಜೀರ್ಣಮಲಿನ ಮೂಢಮತಗಳಿಗೆ ದಾಳಿ ಈ ಗ್ರಂಥಗಳ್ಹೇಳಿ ಪೂರ್ಣಬೋಧ ಗುರುಮತವಾರ್ವವ ಪೇಳಿ ಸುಜ್ಞರಾದರು ಮುದ ತಾಳಿ 1 ಇದೇ ದೇಶಪಾಂಡೆರೊಳುದ್ಭವಿಸೆ ನರಜನ್ಮ ವಹಿಸಿ ಪದಪಿನಿಂದ ಗೃಹಸ್ಥಾಶ್ರಮವನುಸರಿಸಿ ಸಂಸಾರದಿ ಬೆರಸಿ ಕುದರಿ ಏರಿ ಪೊಳೆ ನೀರಿಗೆ ಬಾಯಿ ಸರಿಸಿ ಬಹು ನೀರಡಿಸಿ ಸದಮಲಕ್ಷೋಭ್ಯರು ಪಶುವೆಂದುಚ್ಚರಿಸಿ ಪೂರ್ವ ಜನ್ಮ ಸ್ಮರಿಸಿ 2 ಕ್ಷಿಪ್ರದಿ ಯತ್ಯಾಶ್ರಮವೆ ತಾಳಿದರು ಟೀಕವ ಕೈಗೊಂಡರು ಸುಪ್ರಸಿದ್ಧ ಹರಿಮತವನುದ್ಧರಿಸಿದರು ವ್ರತಗಳ ಪೇಳಿದರು ವಿಪ್ರವರ್ಗಕೆ ಹರಿಮಾರ್ಗವ ತೋರಿದರು ಹರಿಮತ ತತ್ವಜ್ಞರು ಸುಪ್ರಸಿದ್ಧ ನರಸಿಂಹವಿಠಲತರು ಶತಪತ್ರ ಶೇಷಾಲಂಕೃತರು 3
--------------
ನರಸಿಂಹವಿಠಲರು
(ಶ್ರೀ ವಾದಿರಾಜರು) ದಿಟ್ಟದಿ ನಿನ್ನಯ ಪದಪದ್ಮವನ್ನು ಮನಮುಟ್ಟಿ ಭಜಿಸುವೆ ಕೃಷ್ಣರಾಯ ಪ ಸೃಷ್ಟಿ ನಿನ್ನಂಥ ಇಷ್ಟ ಪುಷ್ಟನ ಕಾಣೆ ಶ್ರೀ ಕೃಷ್ಣರಾಯ ಅ.ಪ ಇಷ್ಟನು ದುಷ್ಟ ಪಾಪಿಷ್ಠನಾಗುವುದುಚಿತವೇ ಕೃಷ್ಣರಾಯಾ ನಿನ್ನ ದೃಷ್ಟೀಲಿ ನೋಡೆನ್ನ ಶ್ರೇಷ್ಠ ಶ್ರೀಷ್ಮಿಪನಿಷ್ಟ ಕೃಷ್ಣರಾಯಾ 1 ಪಾಲನ ಪಾಲಿಪನನಿಲ್ಲಿಸಿದೇ ಕೃಷ್ಣರಾಯಾ 2 ಗರಳ ಸೇವಿಸಲು ಕಂಡುತ್ಯಜಿಸಿದೆ ಕೃಷ್ಣರಾಯಾತರಳೆಗೆ ನೀ ನಿನ್ನ ಸುಧಿಮಳೆಗರೆಯುತ ಅರಳಿಸೊ ಕೃಷ್ಣರಾಯಾ3 ವಡವುಟ್ಟಿದವರಂತೆ ದುಷ್ಟ ಪಾಪಿಷ್ಟ ಬೆನ್ನಟ್ಟುವನೋ ಕೃಷ್ಣರಾಯಾಗುಟ್ಟದಿ ನಿನ್ನಯ ದೃಷ್ಟಿಲಿ ನೋಡಿ ಆ ದುಷ್ಟನ ಸುಟ್ಟು ಹಾಕೊ ಕೃಷ್ಣರಾಯಾ4 ಮಧ್ಯಾನ್ಹ ಸಮಯದಿ ಮಧ್ವದಾಸನ ಭೂಷಿಪ ಶೇಷನ ವೈರಿಯ ಕೃಷ್ಣರಾಯಾದಾನವ ಗೈದು ದೂತಿಯ ಕರದಿಂದ ದೋಷಿಯೆಂದೆನಿಸಾದೆಸಲಹಿದೊ ಕೃಷ್ಣರಾಯಾ 5 ಅರಿಯದೆ ಪೋಗಿ ನಾಥಾ ತ್ರಿನಾಮನ ಕೂಡ ಭುಂಜಿಸಿದೆ ಕೃಷ್ಣರಾಯಾಅರಿಯು ನೀನಲ್ಲದೆ ಅನ್ಯರ ನಾಕಾಣೆ ಮೈಗಣ್ಣ ಕೃಷ್ಣರಾಯಾ 6 ಎನ್ನ ತನುಮನ ಧನಧಾನ್ಯ ಮನೆಯ ಮಕ್ಕಳೆಲ್ಲಾ ನಿನ್ನ ಚರಣಾಲಯವೋ ಕೃಷ್ಣರಾಯಾನಿನ್ನ ಗುಣಗಣಗಳೆಲ್ಲಾ ಅಗಣಿತವೋ ಅನ್ನಪೂರ್ಣೆಗೆಕೃಷ್ಣರಾಯಾ7 ಆದಿ ಅನಾದಿ ಅನೇಕನಾದಿ ಜನುಮದಿ ಎನ್ನಲ್ಲಿದ್ಯೋ ಕೃಷ್ಣರಾಯಾ ದೇವ ದೇವೇಶ ನೀನೆಂದು ದಯದಿಂದ ತೋರೋಕೃಷ್ಣರಾಯಾ 8 ಚರಣದ ಚರ್ಮಲ ಚಂದಸುವಸನ ತೋದ್ರ್ಯೋ ಕೃಷ್ಣರಾಯಾ ಆಲಸ್ಯ ಮಾಡುತ ತಾಳದೆ ನಿನ್ನ ಬಲಿನ ತೋದ್ರ್ಯೋಕೃಷ್ಣರಾಯಾ 9 ನಾರಂಗಿ ಫಲವನ್ನು ತಿಂದು ನೀ ನವರಸ ಭರಿತದಿ ನಿಂತ್ಯೋ ಕೃಷ್ಣರಾಯಾ ನಾರಿಯ ಮನವ ನೀನರಿತು ನಿನ್ನ ಮನವನಿತ್ತೆ ಕೃಷ್ಣರಾಯಾ 10 ಮೂರಾರು ಎರಡೊಂದು ನಿಂದಿಪ ಮತವನ್ನು ಛಂದದಿಖಂಡಿಸಿದೊ ಕೃಷ್ಣರಾಯಾಗಂಗಾದಿ ಕ್ಷೇತ್ರವು ಹಾಗದೇ ಚರಿಸಿ ತುಂಗದಿ ಬಂದು ಮೈಗಂಧ ತೋದ್ರ್ಯೋ ಕೃಷ್ಣರಾಯಾ 11 ಅಂಗದಿದ್ದುಕೊಂಡು ಪಂಚಭೇದವ ನರುಹಿದೆ ಕೃಷ್ಣರಾಯಾ ತಾರತಮ್ಯವನಿತ್ತು ನಿರುತದಿ ಸ್ಮರಿಸೆಂದು ತರುಳರಿಗುಪದೇಶಿಸಿದೆ ಕೃಷ್ಣರಾಯಾ 12 ಅರ್ಥಿಯಿಂದಲಿ ವೇದ ವೇದ್ಯತೀರ್ಥರ ಪ್ರಬಂಧ ತೀರ್ಥವ ತೋರಿ ನೀ ಕೃತಾರ್ಥನ ಮಾಡಿದೋ ಕೃಷ್ಣರಾಯಾಸತಿಸುತ ಜನನಿ ವಡಗೂಡಿ ವಿರೋಧಿಸೆ ಶಾಪವನಿತ್ತೆಕೃಷ್ಣರಾಯಾ 13 ಸತಿಜಾರನರಿತು ಮನದಲ್ಲಿ ಯೋಚಿಸಿ ಚೋರನಂದದಿ ಜರಿದು ಚರಿಸಿದಿ ಕೃಷ್ಣರಾಯಾಚರಿಸುತ ಧರೆಯೊಳು ಚೋರ ಜಾರನ ಪೊರೆದೆ ಕೃಷ್ಣರಾಯಾ14 ಅಂಗದಿ ಅಂಗಿತೊಟ್ಟು ಭಂಗವಿಲ್ಲದೆ ಕೂಡಲಗಿರಿಯಲಿ ಭುಂಜಿಸಿದೆ ಕೃಷ್ಣರಾಯಾತೀರ್ಥಗಿಂಡಿಯ ಮುಟ್ಟೆಂದು ಅಂಧಕರಾಯನು ಪೇಳಲು ಮುಟ್ಟಲಂಜದೆ ಗಾಡಿ ಧರಿಸಿದೆ ಕೃಷ್ಣರಾಯಾ 15 ತಂಡುಲವಿಲ್ಲದೆ ಪವಾಡತನದಿ ಕೂತುದ್ದಂಡ ಭೀಮನ ಸ್ಮರಿಸಿದೊ ಕೃಷ್ಣರಾಯಾ ತೊಂಡನ ಸತಿಯ ಕೈಗೊಂಡು ಪುಂಡ ಕಂಸಾರಿಯ ಸ್ಮರಿಸಿದೊ ಕೃಷ್ಣರಾಯಾ16 ಸ್ವಾದಿ ಕ್ಷೇತ್ರದಿ ಪೋಗಿ ಛತ್ರದಿ ಅರ್ಚಿಸಿಕೊಂಡ್ಯೋ ಕೃಷ್ಣರಾಯಾ ಮನವನ ಚರಿಸುತ ತಪವನೆಗೈಯುತ ಕಪಿಯನ್ನೇ ಪುಡುಕಿದ್ಯೊ ಕೃಷ್ಣರಾಯಾ 17 ಚಿಕ್ಕ ಬದಿರಲಿ ಪೋಗಿ ಬಲು ಅಕ್ಕರದಿ ನಿನ್ನ ಪಡೆದನ ಕಪ್ಪುಗೊರಳನ ರೂಪದಿ ಕಂಡ್ಯೋ ಕೃಷ್ಣರಾಯಾ ಸ್ವಪ್ನದಿ ಸರ್ವರ ಕಾಣುತ ಸ್ವಪದವಿಯನೇರಿದ್ಯೋಕೃಷ್ಣರಾಯಾ 18 ತಾಮಸ ಜೀವನು ಜವನಂತೆ ಜೂಜಿಸೆ ಜೀವನವರಿಸಿದ್ಯೋ ಕೃಷ್ಣರಾಯಾಲೇಖವು ಬರೆಯಲು ಲೋಕಾವಧರಿಸಿದ ವಾರುಣೀಶನಂತೆ ಪೌರುಷ ತೋರಿ ಫಣಿರೋಗ ನಿತ್ಯೋ ಕೃಷ್ಣರಾಯಾ 19 ಎನ್ನ ಜನ್ಮವಾದ ದಿನದಲ್ಲಿ ಜೀವೇಶರಾಯನ ಪೂಜಿಸಿದ್ಯೋ ಕೃಷ್ಣರಾಯಾಪೂಜಾದಿ ಪೂಜಿಸಿ ಪೂರ್ಣ ಆಯುವಿತ್ತು ಜೀವನುದ್ಧರಿಸಿ ಜೋಕೆಯೋ ಕೃಷ್ಣರಾಯಾ 20 ಅಕ್ಕನ ಕೈಯಲ್ಲಿ ದಿಕ್ಕಿಲ್ಲದವರಂತೆ ಸಿಕ್ಕು ಸುಖಬಟ್ಯೋ ಕೃಷ್ಣರಾಯಾ ದಿಟ್ಟದಿ ನಿನ್ನಯ ಗುಟ್ಟು ತಿಳಿಸಿ ಬೆಟ್ಟದೊಡೆಯ ತಂದೆವರದಗೋಪಾಲವಿಠಲನಪದಪದ್ಮಗಳನ್ನೆ ಮುಟ್ಟಿ ಭಜಿಸುವಂತೆ ದಿಟ್ಟನ ಮಾಡುಶ್ರೀ ಗುರು ಕೃಷ್ಣರಾಯಾ 21
--------------
ತಂದೆವರದಗೋಪಾಲವಿಠಲರು
(ಶ್ರೀ ವೇದವ್ಯಾಸರನ್ನು ನೆನೆದು) ವ್ಯಾಸರೂಪಿಯಾದ ಶ್ರೀನಿವಾಸನ ನಂಬಿ ಪ. ದ್ವಾಪರಾಂತದಿ ದೈತ್ಯಜನರ ಪ್ರತಾಪದಿಂದಲಿ ಜ್ಞಾನತತ್ವ ಪ್ರ- ದೀಪ ಮಾಲಿನ್ಯವನು ಪೊಂದಿರಲು ಕ್ಷೀರಾಬ್ಧಿ ತಡಿಯಲಿ ಅಜ ಬಂದು ಸ್ತುತಿಸಲು ತಾಪ ಶಮಿಸುವೆನೆಂಬಭಯವಿತ್ತಾಪರಾಶಗೊಲಿದು ಕರುಣಿಸಿ ಕೃಪಾಪಯೋನಿಧಿರೂಪ ತೋರಿದ 1 ಮಹಾಭಾರತಾಮೃತ ಸಹಿತ ವಿರಚಿಸಿ ತೋರ್ಪಂತೆ ಬಹು ಗಂ- ಭೀರ ಸಾರವನಿಟ್ಟು ಪರಿಜನವಾ ತತ್ವೋಕ್ತಿಯಿಂದ ಪ- ರೋರು ಭಾವವ ತಿಳಿಸಿ ದೈತ್ಯರ ಗಾರಗೊಳಿಸುತ ಅನವರತ ಸಂ- ಸಾರ ಚಕ್ರದಿ ತಿರುಗುವವರ ವಿಚಾರ ಭ್ರಮೆಗೊಂಬಂತೆ ತಿಳಿಸಿದ 2 ಶುದ್ಧ ಸಾತ್ವಿಕರಾದ ಜೀವರನುದ್ಧರಿಸಬೇಕೆಂದು ಶ್ರುತಿಗಣ ಬದ್ಧ ಸೂತ್ರವ ನಿರ್ಮಿಸುತ್ತದನು ಸಿದ್ಧಾಂತ ಮಾಡಲು ಮಧ್ವಮುನಿವರಗಿತ್ತು ನಿಯಮವನು ನಿರ್ನೈಸಿ ತಿಳಿಸುತ ಪಾತಾಳಕೆ ಸುರೋತ್ತಮ ಸಿದ್ಧ ಸೇವಿತ ಶೇಷಗಿರಿಯೊಳಗಿದ್ದು ಭಜಕರನುದ್ಧರಿಸುತಿಹ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಶ್ರೀಹರಿಯ ಮೋಹಿನಿ ರೂಪ) ನೋಡಿರೊ ಸ್ತ್ರೀರೂಪವ ನೋಡಿರೋ ಪ. ನೋಡಿರೊ ಹರಿಯ ಸ್ತ್ರೀರೂಪ ಸ್ತುತಿ ಮಾಡಿರೊ ಮಹಿತಾ ಪ್ರತಾಪ ಅಹ ಜೋಡಾದ ಸತಿಯರ ನೋಡಿ ನಗುತ ನಲಿ- ದಾಡುವ ಶ್ರೀಕೃಷ್ಣ ಪ್ರಹುಡೆಯಾಗಿರುವುದ ಅ.ಪ. ಭಾರ್ಗವ ವಾಸರದಲ್ಲಿ ಯತಿ ವರ್ಗವೆಲ್ಲವು ಸೇರುತಿಲ್ಲಿ ಪಂಚ ಮಾರ್ಗಣಪಿತನಿದಿರಲ್ಲಿ ಅಷ್ಟವರ್ಗೋಪಚಾರಗಳಲ್ಲಿ ವಿಧಿ ಭರ್ಗ ವಂದ್ಯ ಪ್ರಭು ದುರ್ಗಾರಮಣ ಸತ್ವ ಸರ್ಗಪಾಲನ ಸನ್ಮಾರ್ಗದಿ ಸ್ತುತಿಪುದ 1 ಧೀರಮರಾಸುರರಂದು ಕ್ಷೀರವಾರಿಧಿ ತಡಿಯಲ್ಲಿ ಬಂದು ಬಹು ಮಂದರ ಕಟ್ಟಿ ನಿಂದು ಸುಧ ಸಾರವ ತೆಗೆಯಲು ಕಾರುಣ್ಯದಲಿ ದಾನ ವಾರಿಗಳಿಗೆ ಕೊಟ್ಟ ನಾರಾಯಣಿಯನ್ನು 2 ನಾಯಕ ಧೀರ ಕಂಜ ನಿವಹ ರಕ್ಷಿಸು ಗಂಭೀರಾ ಅಹ ಪವನಾವತಾರನ ಸ್ತವನಕೊಲಿದು ಬಂದ ಕವಿ ಶೇಷಗಿರಿವಾಸ ಭವಭಯಹಾರಿಯ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಸಂತತಿ ಪ್ರಯುಕ್ತ ಪ್ರಾರ್ಥನೆ) ಪರಮ ಪಾವನ ರೂಪ ಪಾಲಿಸು ಕುಲದೀಪ ಪರಿಹರಿಸಖಿಳತಾಪ ದುರಿತರಾಶಿಗಳೆಲ್ಲ ತರಿದು ತ್ವತ್ಪದ ಸೇವಾ- ದರವಿತ್ತು ಸಲಹುವ ಕರುಣಿ ವೆಂಕಟಭೂಪ ಪ. ಮಾತಾ ಪಿತರು ನೀನೆ ಮಹದೇವಿಯರಸನೆ ಪಾತಕ ಪರಿಹಾರನೆ ಭೂತ ಭಾವನ ಭುವನೈಕಾಧಿಪತಿ ಜಗ- ನ್ನಾಥದಾಸರು ತೋರ್ದ ರೀತಿಯ ತಿಳಿಸುವೆ 1 ನಿನ್ನ ಪಾದಾಂಬುಜ ಸೇರಿದ ದಾಸರ ಇನ್ನು ನೀ ಬಿಡಲಾರದೆ ಉನ್ನತ ಸುಖಗಳ ತನ್ನಂತೆ ಪಾಲಿಪ ಘನತೆ ತೋರ್ಪ ಪ್ರಸನ್ನ ವರದರಾಜ 2 ಮಾಧವ ಮನೆ ಮೊದಲಾದುದೆಲ್ಲವು ನಿನ್ನ ಪಾದಕರ್ಪಿಸಿದೆನಿಂದು ನೀ ದಯಾಂಬುಧಿಶೇಷ ಭೂಧರಪತಿ ಮಂಗ ಳೋದಯಕರ ಸಂಪದಾದಿ ಪೂರಣಗೈವ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಸರಸ್ವತೀ ಪ್ರಾರ್ಥನೆ) ಏನೇ ಸರಸ್ವತಿಯಮ್ಮಾ ಬಹು ಮಾನದಿ ಪಾಲಿಸು ನಮ್ಮಾ ಆ ನಳಿನಜ ಚತುರಾನನನೊಲಿಸಿದ ಶ್ರೀನಿವಾಸನ ಪರಮಾನುರಾಗದ ಸೊಸೆ ಪ. ಮೂಢತನವನೆಲ್ಲ ಕಳಿಯೆ ದಯ ಮಾಡಿ ನೀ ಮನಸಿಗೆ ಹೊಳಿಯೆ ಬಾಡದ ಪದ್ಮದ ಕಳೆಯೆ ಮನೋ ರೂಢ ಮಲವ ಬೇಗ ತೊಳಿಯೆ ಆಡುವ ಮಾತುಗಳೆಲ್ಲವು ಕೃಷ್ಣನ ಪಾಡಿ ಪೊಗಳುವಂತೆ ರೂಢಿಗೊಳಿಸು ದೇವಿ 1 ರಾಜಿಕಲೌಕಿಕವಾದ ಬಹು ಸೋಜಿಗಕರಿಪೂರ್ಣಮೋದ ಈ ಜಗದೊಳು ಮುಖ್ಯವಾದ ಸುಗು- ಣೋಜೊಧಾರಣ ಕಲ್ಪಭೂಜ ಮಂದ ವೈರಿಗಳ ಸ- ಮಾಜವ ಗೆಲಿಸುತ ರಾಜಿಸು ಮನದಲಿ 2 ಕರಣಾಭಿಮಾನಿಗಳನ್ನು ಉಪ ಕರಣರ ಮಾಡುವದನ್ನು ಕರುಣೀ ನೀ ಬಲ್ಲಿನ್ನು ಮುನ್ನ ಮನ ವರತು ರಕ್ಷಿಸು ಬೇಗೆನ್ನನು ಸರಸಿಜಾಕ್ಷ ಶೇಷಗಿರಿ ವರಪದಕಂಜ ಸ್ಮರಣೆ ಮಾಡುವಂತೆ ಕರುಣಿಸೆನ್ನನು 3
--------------
ತುಪಾಕಿ ವೆಂಕಟರಮಣಾಚಾರ್ಯ
(ಸುಬ್ರಹ್ಮಣ್ಯ ಸ್ತೋತ್ರ) ಬ್ರಹ್ಮಣ್ಯ ಪುಂಜವನ್ನು ಕಾವಾ ಮೊರೆಯ ಕೋಳೂ ಸು- ಬ್ರಹ್ಮಣ್ಯಕ್ಷೇತ್ರಪಾಲದೇವಾ ಪ. ಶ್ರೀಶನ ಕರುಣ ಪೂರ್ಣಪಾತ್ರ ಷಡ್ವಕ್ತಪಾರ್ವ ತೀಶಸಂಪ್ರೀತಿಕಾರಿಪತ್ರ ಸುರನಿಕರ ಭಯತ್ರ ಸೂಸುತ ದೇಹದಿ ವಾಸವಾಗಿಹ ತ್ವ- ಗ್ದೋಷವ ತರಿವ ಮಹಾಸುರ ದಾರಿ1 ಸಾಂಬಾಸನತ್ಕುಮಾರನೆನಿಸಿ ಸಾಂಖ್ಯಾಯೋಗಗಳ ನಂಬಿದ ಭಕ್ತ ಜನಕೆ ಸಲಿಸಿ ದೈತ್ಯರ ಜವಗೆಡಿಸಿ ಜಾಂಬವತೀವದನಾಂಬುಜ ವಿಕಸನ ಕುಂಬುಜನಾಭ ಕುಟುಂಬಾಭರಣೀ 2 ಶೇಷಾದ್ರಿವಾಸಲಕ್ಷ್ಮೀಪತಿಯ ಪೂರ್ಣಾನುಗ್ರಹದಿ ವಾಸುಕಿಗೊಲಿದು ವಿಪ್ರತತಿಯ ಸಲಹುವ ಭೂಪತಿಯ ದೋಷವಾರಿ ಧಾರಾತೀರದಲಿ ನಿವಾಸಗೊಂಡ ನಿನ್ನಾಶ್ರಯ ಕರುಣಿಸು 3
--------------
ತುಪಾಕಿ ವೆಂಕಟರಮಣಾಚಾರ್ಯ
(ಹಯವದನ ಪ್ರಾರ್ಥನೆ) ಹಾರುತ ಬಂದಿಹ ಹಯಮುಖ ಮೂರುತಿಯನು ನೋಡಿ ಮಾರುತ ವಂದಿತ ಮಹಿಮೆಯ ತೋರುವ ಕಾಪಾಡಿ ಪ. ವೇದವ ಕದ್ದ್ಯೊದಸುರನ ಹಾದಿಯೊಳಡ್ಡಗಟ್ಟಿ ಮೇದಿನಿಗೊರಗಿಸಿ ಶ್ರುತಿಯನು ಕಾದನು ಜಗಜಟ್ಟಿ ವೇಧಗೆ ಪರತತ್ವಂಗಳ ಬೋಧಿಸಿ ಮನಮುಟ್ಟಿ ಶ್ರೀಧರ ದುರ್ಜನರೆದೆಗಳ ಭೇದಿಸುವನು ಮೆಟ್ಟಿ1 ವಾದಿನೃಪ ಯತೀಂದ್ರ ಮನೋಲ್ಲಾಸದಿ ಪದಾಂಭೋಜ ಸಾಧಿಸುವನು ಸಕಲಾರ್ಥನ ಸ್ವಜನಕೆ ಸುರರಾಜ ಸ್ವೋದರಗತ ವಿಶ್ವಂಭರ ಶಮಿತದುರಿತ ಬೀಜ ವ್ಯಾಧಿಯ ಹರಸುವ ವಿಭವಾಸಾದಿತ ಗಜರಾಜ 2 ಹೇಷಾ ನಿಭೃತಾಶಾನತ ಕೋಶಾಸ್ಪದ ರೂಪ ದೋಷಾಂಬುಧಿಶೋಷಾದ್ಭುತ ವೇಷಾಸುರ ತಾಪ ವೀಶಾಹಿ ಗಣೇಶಾದ್ಯಮರೇಶಾರ್ಚಿತ ಪಾದ ಶೇಷಾಚಲ ಭೂಷಾಗಮ ಭಾಷಾಮಿತವಾದ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಹಿರಿಯಡ್ಕದ ವೀರಭದ್ರ ಸ್ತೋತ್ರ) ದಕ್ಷಯಜ್ಞ ಭಂಜನ ನಿರಂಜನ ಪ. ಪ್ರಮಥ ಭೂತ ನಾಯಕ ಪ್ರಣತ ಸಿದ್ಧಿದಾಯಕ ಮಣಿದು ಸ್ತುತಿಪೆ ನಿನ್ನನು ಮಾನ ಪೊಂದಿಸೆನ್ನನು 1 ಸಂದಿಗೊಂದಿವೇರಿದಾ ಸರ್ವದಾಪ್ರಕಾರದಾ ವೈರಿ ಸ್ತೋಮವಾ ಮಾನಿಸೊ ನಿರ್ನಾಮವಾ 2 ಶಿವಜಟಾಗ್ರ ಜಾತನ ಶೇಷ ಗಿರೀಶ ದಾಸನೆ ಭವನ ಬೇಗ ತೋರಿಸೊ ಭಯವ ದಾರಿ ಹಾರಿಸೊ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಹೆಬ್ಬುರಿ ಶ್ರೀ ಅನಂತಪದ್ಮನಾಭ) ಹೆಬ್ಬುರಿ ಪದ್ಮನಾಭಾ ನಂಬಿದೆನು ಪದಾಬ್ಜವ ಪೂರ್ವಶೋಭಾ ಕೊಬ್ಬಿದ ಶತ್ರು ಪುಂಜಗಳನ್ನು ದೂರದಿ ದಬ್ಬಿ ದಯಾರಸ ಉಬ್ಬಿಪಾಲಿಸು ದೇವಾ ಪ. ಯೋಗಿ ಹೃನ್ಮಂಡಲದಿ ನಿತ್ತಂದದಿ ಸಾಗಿ ಬಂದಿರುವಿಯಲ್ಲಿ ನಾಗಶಯನ ನಿನ್ನ ನೆಲೆಯರಿಯದ ತಪ್ಪ ನೀ ಪಾಲಿಪುದೆಂದು ಬಾಗಿ ಬೇಡುವೆ ನಿಂದು 1 ಈ ಕ್ಷಮೆ ಮೇಲಿಲ್ಲದಾ ಲೋಕೋತ್ತರ- ದಾಶ್ಚರ್ಯ ತೋರುವುದು ಪಕ್ಷಿಧ್ವಜ ನಿನ್ನ ಪಾದಪದ್ಮಗಳಲ್ಲಿ ನಕ್ಷತ್ರ ಮಾಲೆಗಳುರುಳುವದೇನಿದು 2 ಪಾಂಡವ ಸಾರಥಿಯೆ ನಿನ್ನಯ ಮೂರ್ತಿ ಕಂಡೆನು ಶ್ರೀಪತಿಯೆ ಕೌಂಡಿಣ್ಯ ಮುನಿಯನು ಕಾಪಾಡಿದಖಿಳ ಬ್ರ- ಹ್ಮಾಂಡ ನಾಯಕ ನಿನ್ನ ದಾಸ್ಯವ ದಯಮಾಡು 3 ಹೆಬ್ಬುಲಿಯಂತಿರುವ ಹೂಣ ಭೂಪ ನಬ್ಬರವಡಗಿಸುತ ಭಾರ ನಿನ್ನದಯ್ಯ ವಾರಿಧಿ ಕೃಷ್ಣ 4 ನೀನೆ ಸದ್ಗತಿಯೆಂಬರ ಕಾವುದಕನು- ಮಾನವ್ಯಾತಕೊ ಭೂವರ ದೀನ ಬಂಧು ಶೇಷಗಿರಿನಾಥ ದಯದಿಂದ ಮಾನಸ ಫಲವ ಪೂರಣಗೈಸು ಗೋವಿಂದ 5
--------------
ತುಪಾಕಿ ವೆಂಕಟರಮಣಾಚಾರ್ಯ
(ಹೋಳಿ ಪದ) ಧುಮ್ಮಿಶಾಲೆನ್ನಿ ನಮ್ಮ ರಮ್ಮೆಯರಸ ಕೃಷ್ಣನಡಿಯ ಒಮ್ಮನದಿ ನೆನೆದು ಸಕಲ ಕರ್ಮಕಲುಷವ ಕಳಿಯಿಸಿ ಪ. ನಿಗಮ ಸ್ಮøತಿ ಗಣೋಕ್ತ ಕರ್ಮಕರಣ ಭವಿ ಷ್ಯೋತ್ತರ ಪುರಾಣವಚನವೆತ್ತಿ ಜಗಕೆ ತಿಳಿಸಿದಾ ಒತ್ತಿ ಬರುವ ವಿಘ್ನಗಣವ ಕತ್ತರಿಸುವ ಹೋಳಿಯೆಂಬ ಉತ್ತಮದ ವ್ರತವು ಜಗವ ಸುತ್ತಿಕೊಂಡು ಮೆರೆವುದು 1 ವಿಧಿಯ ಸ್ತುತಿಗೆ ಮೆಚ್ಚಿ ಕರುಣಾಸುಧೆಯ ಸುರರ ಮೇಲೆ ಕರದು ಮಧುರೆಯಲ್ಲಿ ಜನಿಸಿ ಬಂದ ಮಧುಮುರಾರಿ ಮರ್ದನ ಯದುಕುಲೇಶ ಕೃಷ್ಣಗೋಪ ಚದುರೆಯರನು ಒಲಿವೆನೆಂದು ಮದನನು ಹುಣ್ಣಿವೆಯ ಹಬ್ಬ ಸದರದಿಂದ ರಚಿಸಿದ 2 ಮೇಲು ಬೆಲೆಗಳುಳ್ಳ ಬಿಳಿಯ ಶಾಲೆಗಳನು ಧರಿಸುತ ಗು ಲಾಲ ಪುಡಿಯ ಸುರಿವ ಗೋಪ ಬಾಲಜನರ ಕೂಡುತ ಗಜ ಮೇಲಾಳುತನವ ನಡೆಸುತಿರಲು ಶ್ರೀ ಲಲಾಮ ವಾರನಾರಿ ಜಾಲವನ್ನು ಕರೆಸಿದ 3 ಸಿರಿಯ ಮುಡಿಯ ಮೇಲೆ ನವಿಲಗರಿಯ ಗೊಂಚಲಿರಿಸಿ ನಾನಾ ಪರಿಯ ಪುಷ್ಪ ಮಾಲೆಗಳನು ಧರಿಸಿ ಕಂಠ ಮಧ್ಯ ಪೋಕ ಥರವ ತೋರ್ಪ ಪದವ ಸಪ್ತ ಸ್ವರದಿ ಕೂಡಿ ವಾಡಿ ಬೀದಿ ತಿರುಗಿ ಬಂದ ಕೃಷ್ಣನು 4 ಶಿಷ್ಟ ಸಂಗ್ರಹೀತ ಕಾರ್ಯ ಶ್ರೇಷ್ಠವಾಗಿ ತಿಳಿಯಿರೆಂದು ದಮನ ನರನೊಳೆಂದ ಸ್ಪಷ್ಟ ಗೀತ ವಚನವ ಶಿಷ್ಟ ಜನರು ಗ್ರಹಿಸಿ ನಡದರಷ್ಟ ಭಾಗ್ಯವಿತ್ತು ಶೇಷ ಬೆಟ್ಟದೊಡೆಯ ಹರಿಯು ಕರುಣಾ ದೃಷ್ಟಿಯಿಂದ ಪೊರೆವನು 5
--------------
ತುಪಾಕಿ ವೆಂಕಟರಮಣಾಚಾರ್ಯ