ಒಟ್ಟು 177 ಕಡೆಗಳಲ್ಲಿ , 64 ದಾಸರು , 164 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಲ್ಲಣಿಸದಿರು ಕಂಡ್ಯ ತಾಳು ಮನವೆ ಪ ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ ಅ ಬೆಟ್ಟದಾ ತುದಿಯಲ್ಲಿ ಹುಟ್ಟಿದ ವೃಕ್ಷಕ್ಕೆಕಟ್ಟೆಯನು ಕಟ್ಟಿ ನೀರೆರೆದವರು ಯಾರೊಪುಟ್ಟಿಸಿದ ಸ್ವಾಮಿ ತಾ ಹೊಣೆಗಾರನಾಗಿರಲುಗಟ್ಯಾಗಿ ಸಲಹುವನು ಇದಕೆ ಸಂಶಯವಿಲ್ಲ 1 ಅಡವಿಯೊಳಗಾಡುವ ಮೃಗಪಕ್ಷಿಗಳಿಗೆಲ್ಲಅಡಿಗಡಿಗೆ ಆಹಾರವಿತ್ತವರು ಯಾರೊ ಪಡೆದ ಜನನಿಯ ತೆರದಿ ಸ್ವಾಮಿ ಹೊಣೆಗೀಡಾಗಿಬಿಡದೆ ರಕ್ಷಿಪನು ಇದಕೆ ಸಂಶಯವಿಲ್ಲ 2 ನವಿಲಿಗೆ ಚಿತ್ರ ಬರೆದವರು ಯಾರುಪವಳದ ಲತೆಗೆ ಕೆಂಪಿಟ್ಟವರು ಯಾರುಸವಿಮಾತಿನರಗಿಳಿಗೆ ಹಸುರು ಬರೆದವರು ಯಾರುಅವನೆ ಸಲಹುವನು ಇದಕೆ ಸಂಶಯವಿಲ್ಲ3 ಕಲ್ಲಿನಲಿ ಹುಟ್ಟಿ ಕೂಗುವ ಕಪ್ಪೆಗಳಿಗೆಲ್ಲಅಲ್ಲಲ್ಲಿಗಾಹಾರ ತಂದೀವರಾರುಬಲ್ಲಿದನು ಕಾಗಿನೆಲೆಯಾದಿಕೇಶವರಾಯಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ 4
--------------
ಕನಕದಾಸ
ತಿರುಪತಿಯ ಶ್ರೀ ವೆಂಕಟೇಶ ಕಮಲ ಪ ಹೇಮಮುಖದೀ ನದಿಯ ಕಂಡೇ ಗೋಮಿನೀ ಪದ್ಮಾವತಿ ಕಂಡೆಭೂಮಿಸುರರ ಮೇಳವ ಕಂಡೆ ಆ ಮಹಾ ಗಾಳಿಗೋಪುರ ಕಂಡೆ 1 ಸ್ವಾಮಿ ಪುಷ್ಕರಿಣೀಯ ಕಂಡೆ ಭೂಮಿ ವರಹಾ ದೇವರ ಕಂಡೆರಾಮದೂತನ ಪಾದವ ಕಂಡೆ ಸ್ವಾಮಿಯ ಮಹಾದ್ವಾರವ ಕಂಡೆ 2 ಹರಿಯು ಅಡಗಿದ ಹುತ್ತನು ಕಂಡೆ ಹರಿಯಧ್ವಜದ ಸ್ತಂಭವ ಕಂಡೆಪರಿಪರಿ ವೈಭವವನು ಕಂಡೆ ಪರಮಪುರುಷನಾ ಮೂರ್ತಿಯ ಕಂಡೆ 3 ಹರಿಹರಿ ಎನ್ನುವರನು ಕಂಡೆ ಹರಿದು ಒಳ ಪೋಗುವರನು ಕಂಡೆಹರಿಣಾಂಜನದ ತಾಡನ ಕಂಡೆ ಮಣಿಮಯಿಮುಕುಟವನು ಕಂಡೆ 4 ಹಣೆಯಲ್ಲಿಯ ನಾಮವ ಕಂಡೆ ಅನುಪಮಾದಂಗವನೂ ಕಂಡೆಕೊರಳ ಸರಗೀ ಸರಗಳ ಕಂಡೆ ಹರಳು ರತ್ನದಾಭರಣಗಳನು ಕಂಡೆ 5 ಉರದಿ ಶ್ರೀ ಭೂದೇವಿಯರ ಕಂಡೆ ಕರದಿ ಶುಭಶಂಖ ಚಕ್ರಗಳ ಕಂಡೆಗುರು ಶ್ರೀವಾದಿರಾಜರ್ಪಿಸಿದ ವರ ಶಾಲಿಗ್ರಾಮ ಹಾರವ ಕಂಡೆ 6 ಉದಗಿ ಪೀತಾಂಬರವ ಕಂಡೆ ನಡುವಿನೊಡ್ಯಾಣವನು ಕಂಡೆಜಡಿದ ಮಣಿಗಣ ಭೂಷಣನ ಕಂಡೆ ಜಡಜನಾಭನ ಮೂರ್ತಿಯ ಕಂಡೆ 7 ಅಂದದೀ ಕಾಲ್ಗಡಗವ ಕಂಡೆ ಸುಂದರ ಪಾದಗಳ ಕಂಡೆಮಂದಹಾಸ ಮುಖಾಬ್ಜ ಕಂಡೆ ಇಂದಿರೆಯ ರಮಣನ ಕಂಡೆ 8 ಆಗಮ ಶೃತಿ ಘೋಷವ ಕಂಡೆ ಭಾಗವತರಾ ಮೇಳವ ಕಂಡೆಬಾಗಿಲಾ ಬಲ ಹಸ್ತವ ಕಂಡೆ ಭಾಗೀರಥಿಯಾ ಪಿತನವ ಕಂಡೆ 9 ಚಿನ್ನದ ಕೂಪವನೂ ಕಂಡೆ ಅನ್ನಪೂರ್ಣಾದೇವಿಯ ಕಂಡೆರನ್ನದ ಹರಿವಾಣವ ಕಂಡೆ ಉಂಬುವ ವೈಭವವನು ಕಂಡೆ 10 ಕಪ್ಪದ ಕಣಜವನೂ ಕಂಡೆ ತಪ್ಪದೇಹಾರುವವರನು ಕಂಡೆಇಪ್ಪತ್ತು ದುಡ್ಡಿಗೆ ತೀರ್ಥ ಒಪ್ಪಿಲೇಮಾರುದನುರನು ಕಂಡೆ 11 ಸಾಸಿರ ನಾಮಗಳ ಒಡೆಯಾ ವಾಸುದೇವಾಚ್ಯುತನ ಕಂಡೆಕಾಸಿಗೆ ಕೈಚಾಚುವಂಥ ಕೇಸಕ್ಕ ತಿಮ್ಮಪ್ಪನ ಕಂಡೆ 12 ಆವ ಜನುಮದ ಸುಕೃತವೋ ಎನಗೆ ಭೂವೈಕುಂಠವನ್ನೇ ಕಂಡೆಶ್ರೀವಿಧಿಭವಾದಿ ವಂದ್ಯ ಐಹೊಳಿ ವೆಂಕಟೇಶನ ಕಂಡೆ 13 ಶುಭ ಮಂಗಲಂ ಸಿರಿಗೆಜಯ ಪುದವೀ ಪದ ಕೇಳಿ ಪೇಳಿದರೆ ಒಲಿದು ಫಲವೀವ ಕುಲಸ್ವಾಮಿ ಅವರೀಗೆ 14
--------------
ಐಹೊಳೆ ವೆಂಕಟೇಶ
ತುಳಸಿಯ ಸೇವಿಸಿ ಪ ಶ್ರೀ ತುಳಸಿಯಳ ಸೇವೆ ಪ್ರೀತಿಯಿಂದಲಿ ಮಾಡೆ ಗಾತರದ ಮಲವಳಿದು ಮಾತೆ ಯೆಂಬನಿತರೊಳು ಮಾಡುವಳು ಯಾತಕನುಮಾನವಯ್ಯ ಅ.ಪ. ಸುಧೆಗಡಲ ಮಥಿಸುವ ಸಮಯದಲಿ ವೈದ್ಯನಾಗಿ | ಪದುವನಾಭನು ತಾನು ಉದುಭವಿಸಿ ಬರಲಂದು | ಉದಕವುತ್ಸಹದಿಂದಲದೆ ತುಳಸಿ ನಾಮನಾಗೆ || ತ್ರಿದಶರೊಂದಿಸುತ ಮೋದದಿಂ ಕೊಂಡಾಡಿದರು | ಒದಗಿ ಸುಜನರು ತಮ್ಮ ಸದನದಲಿ ನಿತ್ಯ ತಿಳಿದು ವೃಂದಾವನ ರಚಿಸಿದರೈಯ1 ಮೂಲದಲಿ ಸರ್ವ ತೀರ್ಥಗಳುಂಟು ತನ್ಮದ್ಯೆ | ಕಾಲ ಮೀರದೆ ಸರ್ವ ನದನದಿಗಳಮರಗಣ | ಮೂರತಿಯು ವಾಲಯವಾಗಿಪ್ಪುದು || ಮೂರ್ಲೋಕಗಳ ಧರ್ಮ ವ್ರತಕೆ ಮಿಗಿಲೆನಿಸುವುದು | ನೀಲಮೇಘಶ್ಯಾಮಗರ್ಪಿಸಿದ ತುಳಸಿ ನಿ | ಧರಿಸಿದ ಮನುಜ ಕಾಲನಾಳಿಗೆ ಶೂಲನೊ2 ಉದಯದೊಳಗೆದ್ದು ನೀರೆರೆದು ಮಜ್ಜನಗೈದು | ತುದಿ ಬೆರಳಿನಿಂದ ಮೃತ್ತಿಕೆಯ ಫಣಿಯೊಳಗಿಟ್ಟು | ತದನಂತರದಲಿ ಭಜನೆ || ವದನದೊಳು ಗೈಯೆ ಧರೆಯೊಳಗಿದ್ದ ಸರ್ವವದ | ನದಿಗಳಿಗೆ ನೂರ್ಮಡಿ ಯಾತ್ರೆ ಮಾಡಿದ ಫಲ | ಜನ್ಮಗಳಘವ ತುದಿ ಮೊದಲು ದಹಿಪುದಯ್ಯ3 ಆವವನ ಮನೆಯಲ್ಲಿ ತುಳಸಿ ಸಾಲಿಗ್ರಾಮ | ಆವವನ ಮನೆಯಲ್ಲಿ ಹರಿದಾಸರಾ ಕೂಟ | ಪಾವಮಾನಿಯ ಮತದೊಳು || ಆವವನು ಕಾಂತ್ರಯವ ಕಳೆವ ನಾವಲ್ಲಿ | ವಾಸುದೇವ ಮುನಿ ದೇವಾದಿಗಣ ಸಹಿತ | ಭಾವಿಸಿರಿ ಭಾವಙ್ಞರು 4 ಕಂಡರೆ ದುರಿತಕ್ಕೆ ಕೆಂಡವನು ಬೀರುವುದು | ಕೊಂಡಾಡಿದರೆ ಪುಣ್ಯವ ಪರಿಮಿತವುಂಟು ಮೈ-| ಜನನವಿಲ್ಲ ಸಲೆ ದಂಡ ವಿಟ್ಟವ ಮುಕ್ತನೊ || ಚಂಡಾಲ ಕೇರಿಯೊಳು ಇರಲು ಹೀನಯವಲ್ಲ | ಪಾಂಡುರಂಗ ಕ್ಷೇತ್ರ ಸರಿಮಿಗಿಲು ಎನಿಸುವುದು | ಯೋಗ್ಯ ಫಲ ಕಂಡವರಿಗುಂಟೆ ಅಯ್ಯ5 ಚಿತ್ತ ಶುದ್ದನು ಆಗಿ ಮುಂಝಾನೆಯೊಳು ತುಳಸಿ | ಸ್ತೋತ್ರವನೆ ಮಾಡುತ್ತ ದಿವ್ಯಾವಾಗಿಹ ತ್ರಿದೊಳ | ತುಂಬಿ ವಿತ್ತಾದಿಯಲಿ ತಾರದೆ || ಮತ್ತೆ ವಸ್ತ್ರದಿ ಹಸ್ತ ಶಿಲೆಯರ್ಕ ಏರಂಡ | ಪತ್ರದಲಿ ತಾರದಲೆ ಭೂಮಿಯೊಳಗಿಡದೆ ಪೂ - | ತರಬೇಕು ಹೊತ್ತು ಮೀರಿಸಲಾಗದೊ6 ಕವಿ ಮಂಗಳವಾರ ವೈಥೃತಿ ವ್ಯತೀಪಾತ ರವಿ ಶಶಿಯ ಸಂಗಮ ಪರ್ವಣಿ ಪುಣ್ಯಕಾಲ ಇವುಗಳಲಿ ತೆಗೆಯಾದಿರಿ ನವವಸನ ಪೊದ್ದು ಊಟವ ಮಾಡಿ ತಾಂಬೂಲ- ಸವಿಯುತ್ತ ಮುಟ್ಟದಿರಿ ಯುವತಿ ಶೂದ್ರರಿಂ ತರಿ ಕೊಂಡಾಡುತಿರಿ ದಿವಸಗಳೊಳಯ್ಯ 7 ದಳವಿದ್ದರೇ ವಳಿತು ಇಲ್ಲದಿದ್ದರೆ ಕಾಷ್ಟ ಎಲೆ ಮೃತ್ತಿಕೆಗಳಿಂದ ಪೂಜೆ ಮಾಡಲಿಬಹುದು ತೊಳೆ ತೊಳೆದು ಏರಿಸಲಿಬಹುದು ತುಳಸಿ ಒಣಗಿದ್ದರೂ ಲೇಶದೋಷಗಳಲ್ಲಿ ತುಳಸಿ ವಿರಹಿತವಾದ ಪೂಜೆಯದು ಸಲ್ಲದು ಮಾಡಿ ಜಲಜಾಕ್ಷನರ್ಚಿಸಿರೈಯ್ಯ 8 ಸದನ ಹೊಲೆಮಾದಿಗರ ಸದನ ತುಳಸಿ ಇಲ್ಲದ ಬೀದಿ ನರಕಕೆಳಸುವ ಹಾದಿ ವ್ಯರ್ಥ ತುಳಸಿ ಬಲು ಪ್ರಾಧಾನ್ಯವೊ ತುಳಸಿ ಮಿಶ್ರಿತವಾದ ನೈವೇದ್ಯ ಗತಿಸಾದ್ಯ ತುಳಸಿ ಧರಿಸಿದ ದೇಹ ಪರಮ ಸಾರ್ಥಕವಯ್ಯ ನೆಲೆಯ ನಾ ಕಾಣೆನಯ್ಯ9 ಸತಿ ಪ್ರಹ್ಲಾದ ನಾರದ ವಿಭೀಷಣನು ಧ್ರುವ ಅಂಬರೀಷ ಶಶಿಬಿಂದು ರುಕ್ಮಾಂಗದನು ವಿವರವನು ತಿಳಿದರ್ಚಿಸಿ ತವಕದಿಂ ತಂತಮ್ಮ ಘನ ಪದವನೈದಿದರು ಭುವನದೊಳಗುಳ್ಳ ನಿರ್ಮಲ ಜನರು ಭಜಿಸಿದರು ನೀಗಿ ಭವದೊರರಾದರೈಯ 10 ಉದಯಕಾಲದೊಳೆದ್ದು ಆವನಾದರು ತನ್ನ ಹೃದಯ ನಿರ್ಮಲನಾಗಿ ಭಕುತಿಪೂರ್ವಕದಿಂದ ಸ್ತೋತ್ರಮಾಡಿದ ಕ್ಷಣಕೆ ಮದ ಗರ್ವ ಪರಿಹಾರವೊ ಇದೆ ತುಳಸಿ ಸೇವಿಸಲು ಪೂರ್ವದ ಕಾವೇರಿ ನದಿಯ ತೀರದಲೊಬ್ಬ ಭೂಸುರ ಪದಕೆÉ ವ್ಯೋವ ಸಿರಿ ಪ್ರಿಯಳಾದ ಮದನತೇಜಳ ಭಜಿಸಿರೈದು 11
--------------
ವಿಜಯದಾಸ
ದಶವಿಧ ಬ್ರಹ್ಮರ ಮನೆಯಲಿ ಭಿಕ್ಷವ ಕೊಳುತಿಹ ಅವಧೂತದಶವಿಧ ಬ್ರಹ್ಮರ ವಿವರವನೀಗಲೆ ಪೇಳುವೆ ಪ್ರಖ್ಯಾತ ಪ ಸತ್ಯವು ಶೌಚವು ಸಮಸ್ತ ಬ್ರಹ್ಮವು ಸರ್ವದಿ ದಯವಿಟ್ಟಿಹನುನಿತ್ಯವು ತತ್ವವು ಈತನು ಬ್ರಾಹ್ಮಣರೊಳಗೆ ಬ್ರಾಹ್ಮಣನು 1 ಮಾಯೆಯು ಇಲ್ಲವು ಸ್ನಾನಕರ್ಮದಲಿ ದೇವಗೋವು ಪ್ರಿಯನುಆಯುಧದಿಂ ರಣ ಜಯಿಸುವನೀತನು ಬ್ರಾಹ್ಮಣ ಕ್ಷತ್ರಿಯನು2 ಸಿದ್ಧವು ಕರ್ಮದಿ ದೇವಗೋವುಗಳ ಪೂಜಿಸುತಿಹನೀತಉದ್ದಿಮೆ ಮಾಡುವ ನಾನಾ ಬ್ರಹ್ಮರೊಳು ವೈಶ್ಯನೆ ಇವನೀತ 3 ಚಲ್ಲಣ ಹಾಕಿಯೆ ಮಿಣಿನೊಗ ಹೊತ್ತಿಹನೀತಎಲ್ಲ ಕೃಷಿಯ ವ್ಯವಹಾರವನು ಮಾಡುವ ಬ್ರಾಹ್ಮಣರೊಳು ಇವ ಶೂದ್ರ 4 ಹಲಬರು ಇಹೆವೆಂದು ಸ್ವಯಂಪಾಕಕೆತ್ತುವ ಮಾಡುತ ಬಹುಜಾಲಆಚಾರದ ಸೋಗಿನಲಿ ಹೊರಗುಂಬುವರು ಬ್ರಾಹ್ಮಣಮಾರ್ಜಾಲ 5 ಎಡಗೈ ಅರಿಯನು ಬಲಗೈ ಅರಿಯನು ನುಡಿವನು ಬಿರುಮಾತಉಡುವನು ಹಬ್ಬಕೆ ಧೋತ್ರವ ಬ್ರಾಹ್ಮಣರೊಳಿವನೀಗ ಕುರುಬ 6 ಚೋರರ ಕೂಡಿಯೆ ಪಾಲನೆಕೊಂಬನು ಮಾಡುತ ಬಲು ಘಾತಆರಾದರನು ಅರಿಯನು ಬ್ರಾಹ್ಮಣರೊಳವ ಕಿರಾತ 7 ಕಾಣನು ಭೇದವ ತಂದೆ-ತಾಯಿಯಲಿ ಜೀವರುಗಳ ನೋಡಪ್ರಾಣವ ಕೊಂಬನು ಬ್ರಹ್ಮೆಂತೆನ್ನದೆ ಬ್ರಾಹ್ಮಣರೊಳಿವ ಕಟುಕಾ 8 ಬಗೆ ಬಗೆ ನಾಮವು ನಿರಿವುಡಿಧೋತ್ರವು ಸಂಧ್ಯಾಧಿಗಳವ ದೃಶ್ಯಸೊಗಸನೆ ಮಾಡಿಯೆ ಕಣ್ಣನೆ ಹಾರಿಪ ಬ್ರಾಹ್ಮಣರೊಳಿವ ವೇಶ್ಯಾ9 ಸಹೋದರಿ ರಜಕೀಪರಿಭಾಳಾಮಾಯಾದಿ ಸ್ವಪಚಳ ಹೋಗುವ ಬ್ರಾಹ್ಮಣರೊಳಿವ ಚಂಡಾಲ10 ಪರಿ ದಶವಿಧ ಬ್ರಹ್ಮರುಗಳಲಿ ಭಿಕ್ಷೆಯ ಬೇಡುತಭೂಪ ಚಿದಾನಂದ ಅವಧೂತ ಸದ್ಗುರು ಮನವೊಪ್ಪಿಯೆ ಉಂಬ 11
--------------
ಚಿದಾನಂದ ಅವಧೂತರು
ದಾಸರ ಮೊರೆ ಲಾಲಿಸೋ ವೆಂಕಟಾಚಲ ವಾಸ ಬಿನ್ನಪ ಲಾಲಿಸೊ ಪ ಲೇಸು ಭಕುತಿಯು ಮಾಡದಲೆ ಬಲು ಘಾಸಿಯಾಗುತ ಮನದಿ ನೊಂದು ದಾಸನಾಗದೆ ಕ್ಲೇಶಪಟ್ಟೆನೊ ಈಸುದಿನಗಳ ಕಳೆದೆನೊ ವೃಥಾ1 ತಳಿರು ಪೋಲುವ ನಿನ್ನಯ ಪಾದ- ಕ್ಕೆರಗದೆನ್ನಯ ಸಿರವು ದಣಿಯನೋಡದೆ ನಿನ್ನನು ಮಹಾಪಾಪ ಗಳನೆ ಮಾಡುತ ನೊಂದೆನು 2 ಅನಿಮಿಷೇಶನೆ ನಿನ್ನ ಮಹಿಮೆಯ ಕ್ಷಣಬಿಡದೆ ಧ್ಯಾನವನೆ ಮಾಡುವ ಅನಲಸಖತನಯನಿಗೆ ನಮಿಸುವೆ ಕ್ಷಣ ಬಿಡದೆ ಎನ್ನ ಪೊರೆವ ಕರುಣಿ3 ಕಟಿಯ ಕಾಂಜಿಯ ದಾಮವು ನವರತ್ನದ ಸ್ಫ್ಪಟಿಕ ಮುತ್ತಿನ ಹಾರವು ಲಕುಮಿ ಧರಿಸಿದ ವಕ್ಷ ಕೌಸ್ತುಭಹಾರ ಸ್ಫುಟದಿ ಶೋಭಿಪ ಉರವು 4 ವಟುವಿನಂದದಿ ಪ್ರಕಟನಾಗುತ ಕುಟಿಲ ದಿತಿಜರಿಗಖಿಳ ವಿಧ ಸಂ- ಕಟಗಳನೆ ಸಂಘಟನೆ ಮಾಡುವ ನಟನ ತೆರ ವಟಪತ್ರಶಾಯಿ 5 ನೊಸಲ ಕಸ್ತೂರಿ ತಿಲಕ ರಂಜಿಸುವ ಚಂ- ಪಕವ ಪೋಲುವ ನಾಸಿಕ ಎಸೆದು ಶೋಭಿಪ ಮೌಕ್ತಿಕ ಪೋಲುವ ದಂತ ನಸುನಗುತಿಹ ಹಸನ್ಮುಖ6 ಶಶಿಯ ಧರಿಸಿದ ಅಸಮ ಭಕುತನು ನಿಶಿಹಗಲು ತನ್ನ ಸತಿಗೆ ಬೆಸಸಿದ ಅತಿಶಯದ ಮಹಿಮೆಯನೆ ಕೇಳುವ ಮತಿಯ ಕೊಡು ಮನ್ಮಥನ ಪಿತನೆ 7 ಚಿತ್ತದೊಳಗೆ ನಿನ್ನಯ ಪಾದಾಂಬುಜ ಭಕ್ತಿಯಿಂದಲಿ ಕಾಂಬುವ ಭಕ್ತಜನರ ವೃಂದವ ಕರುಣದಿ ಕಾಯ್ವ ವಿಷ್ಣು ಮೂರುತಿ ಕೇಶವ 8 ಎತ್ತನೋಡಿದರಿಲ್ಲ ನಿನ್ನ ಸಮ ಉತ್ತಮರ ಕಾಣುವುದೆ ಮಿಥ್ಯವೊ ಸತ್ಯವಿದು ಪುರುಷೋತ್ತಮನೆ ಎನ್ನ ಚಿತ್ತದಲಿ ನಲಿನಲಿದು ಶ್ರೀಶ 9 ಕಮಲಸಂಭವ ಪಿತನೆ ಪ್ರಾರ್ಥಿಸುವೆ ಶ್ರೀ- ರಮೆಧರೆಯರಿಂ ಸೇವ್ಯನೆ ಕ್ಷಣಬಿಡದಲೆ ನಿನ್ನನೆ ಚಿಂತನೆ ಮಾಳ್ಪ ಸುಜನರಿಗೊಲಿಯುವನೆ 10 ಶ್ರವಣ ಮನನಕೆ ಒಲಿವ ದೇವನೆ ದಿನದಿನದಿ ನಿನ್ನ ಮಹಿಮೆ ತೋರು ಶ್ರೀ- ಕಮಲನಾಭ ವಿಠ್ಠಲನೆ ಕರುಣದಿ ಶ್ರಮವ ಹರಿಸುಸುಧಾಮ ಸಖನೆ11
--------------
ನಿಡಗುರುಕಿ ಜೀವೂಬಾಯಿ
ದೇವಿ ಲಕ್ಷಣೆ ಎಮ್ಮ ಸಲಹ ಬೇಕಮ್ಮಭಾವದಲಿ ನೀನಿದ್ದು ಭಾವನಯ್ಯನ ತೋರೀ ಪ ಪಿತನು ಬೃಹತ್ಸೇನ ನಿನಗಾಗಿ ಸ್ವಯಂವರವಹಿತದಿಂದಲೆಸಗುತ್ತ ಲಕ್ಷ್ಯವನೆ ಬಿಗಿದೂ |ಅತಿಶಯದ ಧನುವಿಗೆ ಸಜ್ಜಿಸುತ ಬಾಣವನುಚತುರತೆಲಿ ಭೇದಿಪಗೆ ಸುತೆಯ ಪಣವೆಂದ1 ಮತ್ಸ್ಯ ಯಂತ್ರವಿದಲ್ಲಔಪಚಾರಿಕವೆಲ್ಲ ಸರ್ವವಿಧ ಛನ್ನಾ |ವೈಪರೀತ್ಯದಿ ದ್ವಾರ ಉಪರಿ ಇರುವುದು ಕೇಳಿಕಾಪುರುಷಗಿದು ಕಾಂಬ ಮಾರ್ಗವೇ ಇಲ್ಲ 2 ಸೂತನುತ ಮಾಗಧನು ಕೌತುಕದ ಕೌರವರುಪಾರ್ಥನೂ ಅವನಣ್ಣ ಭೀಮಸೇನಾ |ಆತು ಧನುವನು ಲಕ್ಷ್ಯ ಭೇದಿಸಲೆ ಬೇಕೆಂದುಪೃಥಿವಿಪರು ಮತ್ತಿತರು ಬಂದು ಸೇರಿದರು 3 ಸಜ್ಜುಗೈಯಲು 5ನುವ ಆರಿಂದಲಾಗದಿರೆಲಜ್ಯೆಯಿಂದಲಿ ಮರಳಿ 5ೀಗುವರೆ ಬಹಳ |ಅರ್ಜುನನು ತಾನೊಬ್ಬ ಲಕ್ಷ್ಯವೀಕ್ಷಣ ಶಕ್ತಅರ್ಜುನಾಗ್ರಜ ಹರಿಗೆ ಅಪರಾಧವೆನೆ ಸರಿದ 4 ನೆರೆದ ಸಭೆಯಲ್ಲಿ ಪುಷ್ಪಹಾರವನೆ ಪಿಡಿಯುತ್ತಬರುತ ವೈಯ್ಯಾರದಲಿ ಶಿರಿ ಕೃಷ್ಣ ಕಂಠದಲ್ಲಿ |ಇರಿಸಿ ಪರಮಾನಂದ ಭರಿತಳಾಗಲು ಹರಿಯುಕರಪಿಡಿದು ಹೊರವಂಟ ತನ್ನ ದ್ವಾರಕಿಗೇ 5 ಪರಿ ಪರಿ ಪುಷ್ಪ ವೃಷ್ಟಿಗಳ ಗರೆಯೇ |ದುರುಳರೆದುರಾಗಿ ಸಂಗರಕೆ ಬರುತಿರಲುಹರಿ ಭೀಮರೆದುರಿಸದೆ ದುರುಳರೋಡಿದರು 6 ಮೋದ ಬಡುವಂಥ |ಧೀವರರ ಮನೋಭೀಷ್ಟ ಪೂರ್ಣವನೆ ಗೈಯ್ಯುವನುದೇವ ಗುರು ಗೋವಿಂದ ವಿಠಲ ಕೃಪೆಯಿಂದ 7
--------------
ಗುರುಗೋವಿಂದವಿಠಲರು
ದ್ಯಾವಿ ನಮ್ಮ ದ್ಯಾವರು ಬಂದರು ಬನ್ನೀರೆ, ನೋಡ ಬನ್ನಿರೆ ಪ ಕೆಂಗಣ್ಣ ಮೀನನಾಗಿ ನಮ ರಂಗಗುಂಗಾಡು ಸೋಮನ ಕೊಂದಾನ್ಮ್ಯಾಗುಂಗಾಡು ಸೋಮನ ಕೊಂದು ವೇದವನುಬಂಗಾರದೊಡಲನಿಗಿತ್ತಾನ್ಮ್ಯಾ1 ದೊಡ್ಡ ಮಡುವಿನೊಳಗೆ ನಮ ರಂಗಗುಡ್ಡವ ಹೊತ್ಕೊಂಡು ನಿಂತಾನ್ಮ್ಯಾಗುಡ್ಡವ ಹೊತ್ಕೊಂಡು ನಿಂತು ಸುರರನುದೊಡ್ಡವರನ್ನ ಮಾಡ್ಯಾನ್ಮ್ಯಾ 2 ಚೆನ್ನ ಕಾಡಿನ ಹಂದಿಯಾಗಿ ನಮ ರಂಗಚಿನ್ನದ ಕಣ್ಣನ ಕೊಂದಾನ್ಮ್ಯಾಚಿನ್ನದ ಕಣ್ಣನ ಕೊಂದು ಭೂಮಿಯವನಜಸಂಭವಗಿತ್ತಾನ್ಮ್ಯಾ 3 ಸಿಟ್ಟಿಂದ ಸಿಂಹನಾಗಿ ನಮ ರಂಗಹೊಟ್ಟೆಯ ಕರುಳ ಬಗೆದಾನ್ಮ್ಯಾಹೊಟ್ಟೆಯ ಕರುಳ ಹಾರವ ಮಾಡಿ ಪುಟ್ಟಗೆ ವರವ ಕೊಟ್ಟಾನ್ಮ್ಯಾ4 ಹುಡುಗ ಹಾರುವನಾಗಿ ನಮ ರಂಗಬೆಡಗಲಿ ಮುಗಿಲಿಗೆ ಬೆಳೆದಾನ್ಮ್ಯಾಬೆಡಗಲಿ ಮುಗಿಲಿಗೆ ಬೆಳೆದು ಬಲಿಯನ್ನಅಡಿಯಿಂದ ಪಾತಾಳಕೊತ್ತ್ಯಾನ್ಮ್ಯಾ 5 ತಾಯ ಮಾತನು ಕೇಳಿ ಸಾಸಿರ ತೋಳಿನಆವಿನ ಕಳ್ಳನ ಕೊಂದಾನ್ಮ್ಯಾಆವಿನ ಕಳ್ಳನ ಕೊಂದು ಭೂಮಿಯಅವನಿಸುರರಿಗೆ ಇತ್ತಾನ್ಮ್ಯಾ 6 ಪಿಂಗಳ ಕಣ್ಣಿನ ಕೊಂಗಗಳ ಕೂಡಿಛಂಗನೆ ಲಂಕೆಗೆ ಪೋದಾನ್ಮ್ಯಾಛಂಗನೆ ಲಂಕೆಗೆ ಪೋಗಿ ನಮ ರಂಗಹೆಂಗಸುಗಳ್ಳನ ಕೊಂದಾನ್ಮ್ಯಾ7 ಕರಿಯ ಹೊಳೆಯ ಬಳಿ ತುರುಗಳ ಕಾಯುತಉರಗನ ಮಡುವ ಧುಮುಕ್ಯಾನ್ಮ್ಯಾಉರಗನ ಹೆಡೆ ಮೇಲೆ ಹಾರ್ಹಾರಿ ಕುಣಿವಾಗವರವ ನಾರೇರ್ಗೆ ಕೊಟ್ಟಾನ್ಮ್ಯಾ 8 ಭಂಡನಂದದಿ ಕುಂಡೆಯ ಬಿಟುಗೊಂಡುಕಂಡ ಕಂಡಲ್ಲಿಗೆ ತಿರುಗ್ಯಾನ್ಮ್ಯಾಕಂಡ ಕಂಡಲ್ಲಿಗೆ ತಿರುಗಿ ತ್ರಿಪುರರಹೆಂಡಿರನೆಲ್ಲ ಕೆಡಿಸ್ಯಾನ್ಮ್ಯಾ 9 ಚೆಲುವ ಹೆಂಡತಿಯ ಕುದುರೆಯ ಮಾಡಿಒಳ್ಳೆ ರಾಹುತನಾದಾನ್ಮ್ಯಾಒಳ್ಳೆ ರಾಹುತನಾಗಿ ಮ್ಲೇಚ್ಛರಡೊಳ್ಳು ಹೊಟ್ಟೆಯ ಮ್ಯಾಲೊದ್ದಾನ್ಮ್ಯಾ 10 ಡೊಳ್ಳಿನ ಮ್ಯಾಲ್ ಕೈ ಭರಮಪ್ಪ ಹಾಕ್ಯಾನುತಾಳವ ಶಿವನಪ್ಪ ತಟ್ಟಾನ್ಮ್ಯಾಒಳ್ಳೊಳ್ಳೆ ಪದಗಳ ಹನುಮಪ್ಪ ಹಾಡ್ಯಾನುಚೆಲುವ ಕನಕಪ್ಪ ಕುಣಿದಾನ್ಮ್ಯಾ11
--------------
ಕನಕದಾಸ
ಧನ್ಯರಾದರು ಗುರುಗಳನು ಪೂಜಿಸುತ ಇನ್ನಿವರ ಪಾತಕವು ತೊಲಗಿತು ಜಗದಿ ಪ. ತಂದೆ ಮುದ್ದುಮೋಹನದಾಸ ರಾಯರನು ಚಂದದಿಂ ಸತಿಸಹಿತ ಕರೆತಂದು ಮನೆಗೆ ಮಂದರೋದ್ಧರನ ಪದಸೇವೆ ಇದು ಎಂದರಿತು ಮಂದಹಾಸದಲಿ ನಸುನಗುತ ಸದ್ಭಕ್ತರು 1 ಮಂಗಳೋದಕದಿಂದ ಮಜ್ಜನವಗೈಸುತಲಿ ಅಂಗಗಳನೊರೆಸುತಲಿ ನಾಮಗಳನ್ಹಚ್ಚಿ ರಂಗನಾಥನಿಗರ್ಪಿಸುತ ಪುಷ್ಪಹಾರವನ್ಹಾಕಿ ಶೃಂಗಾರವನೆಗೈದು ಶ್ರೀ ಗುರುಗಳನ್ನು 2 ಪಚ್ಚೆಕರ್ಪೂರ ಕೇಸರಿಯಿಂದ ಕೂಡಿದ ಅಚ್ಚ ಗಂಧವನ್ಹಚ್ಚಿ ಅಕ್ಷತೆಯನಿಟ್ಟು ಮಚ್ಛರೂಪಿಯ ನೆನೆದು ಪಾದಕಮಲವ ತೊಳೆದು ನಿಚ್ಚಳದ ಭಕ್ತಿಯಲಿ ನಿಜ ಭಕ್ತರೆಲ್ಲ 3 ಸತಿಸಹಿತ ಕುಳ್ಳಿರಿಸಿ ಗುರುಗಳನು ಪೀಠದಲ್ಲಿ ಅತಿಶಯದಿ ಕುಡಿಬಾಳೆ ಎಲೆಗಳನೆ ಹಾಕಿ ಮತಿಯಿಂದ ರಂಗೋಲೆಗಳನ್ಹಾಕಿ ಲವಣ ಸ- ಪರಿಯಂತ ಬಡಿಸುತಲಿ 4 ಅನ್ನಾದಿ ಸಕಲ ಷಡ್ರಸಗಳನೆ ಬಡಿಸುತ್ತ ಘನ್ನ ಮಹಿಮರಿಗೆ ಭಕ್ಷಾದಿಗಳ ಬಡಿಸಿ ಸನ್ನುತಿಸುತಲಿ ತೀರ್ಥ ಆಪೋಷನವನ್ಹಾಕಿ ಪನ್ನಗಶಯನನಿಗೆ ಅರ್ಪಿಸುತ ಮುದದಿ 5 ಘೃತಶರ್ಕರಾದಿಗಳನಡಿಗಡಿಗೆ ಬಡಿಸುತಲಿ ನುತಿಸಿ ಗಾನಗಳಿಂದ ಗುರುಮಹಿಮೆಯ ದಧಿ ಕ್ಷೀರದನ್ನಗಳನುಣಿಸುತಲಿ ಘೃತ ಕ್ಷೀರದಿಂದ ಕೈ ತೊಳೆದು ಸಂಭ್ರಮದಿ 6 ಯಾಲಕ್ಕಿ ಕರ್ಪೂರ ಮಿಳಿತ ವೀಳೆಯವನಿತ್ತು ವೇಳೆವೇಳೆಗೆ ತಪ್ಪು ಕ್ಷಮೆಯ ಬೇಡುತಲಿ ವ್ಯಾಳಶಯನಗರ್ಪಿಸುತ ಉಡಿಗೆ ತೊಡಿಗೆಗಳನಿತ್ತು ಮಾಲೆಹಾಕುತ ಆರತಿಯನೆತ್ತಿ ಮುದದಿ 7 ಹರಿಪ್ರೀತನಾಗುವನು ಗುರು ಹೃದಯದಲಿ ನಿಂತು ಕರ್ಮ ತೊಡಕುಗಳು ಸರಸಿಜಾಕ್ಷನು ತಾನು ಹರುಷಪಡುವನು ದಯದಿ ಕರಕರೆಯ ಸಂಸಾರ ಕಡಿದು ಗತಿ ಈವ 8 ಗುರುದ್ವಾರ ಒಲಿಯುವನು ಹರಿಯು ಮೋಕ್ಷಾರ್ಥಿಗಳ ಅರಘಳಿಗೆಯಗಲದಲೆ ಕಾಯುವನು ಸತತ ಗುರು ಅಂತರ್ಯಾಮಿ ಶ್ರೀ ಗೋಪಾಲಕೃಷ್ಣವಿಠ್ಠಲ ತ್ವರಿತದಿಂ ಹೃದಯದಲಿ ತೋರ್ವನು ತನ್ನ9
--------------
ಅಂಬಾಬಾಯಿ
ಧೇನಿಸೊ ಶ್ರೀಹರಿಯ ಮಹಿಮೆಯ ಪ ಧೇನಿಸು ಲಯದ ವಿಸ್ತಾರ ಚತುರಾ ನಾನಕಲ್ಪದ ವಿವರಾ ||ಆಹಾ|| ಧೇನಿಸು ಶತಾನಂದಗೆ ಶತ- ಮಾನಕಾಲದಲ್ಲಿ ಇದ್ದು ನಡೆಸುವ ಹರಿಕಾರ್ಯ ಅ.ಪ ಮೊದಲರ್ಧ ಶತಮಾನ ಸೂಕ್ಷ್ಮ ಸೃಷ್ಟಿ ಪದುಮನ ತೋರಿದ ಮಹಾಮಹಿಮ ಆಗ ಅದೆ ಪ್ರಥಮ ಪರಾರ್ಧವು ನೇಮ ಮೇಲೆ ದ್ವಿತೀಯ ಭಾಗಕ್ಕೆಲ್ಲ ಬ್ರಹ್ಮ ||ಆಹಾ|| ಅದರೊಳು ತ್ರಿದಶ ಏಳರ್ಧ ವರ್ಷವು ಪದುಮಜನಿಂದ ರಾಜ್ಯವನಾಳಿಸಿದ ಪರಿಯನು 1 ದ್ವಾದಶಾರ್ಧವರುಷ ತಾ ಉಳಿಯೆ ಆಗ ತೋರ್ದ ಅದುಭೂತವಾದ ಮಹಾಪ್ರಳಯ ಸೂಚ- ನಾದಿ ಕಾರ್ಯವು ತಾ ಮೆರೆಯೆ ಶತ ಅಬ್ದ ಅನಾವೃಷ್ಟಿ ತೋರಿರೆ ಆಹಾ|| ಉದಧಿ ಶೋಷಣೆಯಿಂದ ಸರ್ವಸಂಹಾರವು 2 ಮೇರುಪರ್ವತ ಸ್ಥಳದಲ್ಲಿ ಇದ್ದ ವಿ- ಧಿರುದ್ರಾದಿಗಳೆಲ್ಲರಲ್ಲಿ ಮಹ ತೋರುತ್ತ ಕುಣಿದಾಡುತ್ತಲಿ ||ಆಹಾ|| ಸುರರವಯವಗಳ ತಾನಲಂಕರಿಸಿದನ 3 ನರಹರಿ ನರ್ತನ ಮಾಡಿ ತನ್ನ ಕರದಿ ತ್ರಿಶೂಲವನ್ನು ನೀಡಿ ದಿ- ಕ್ಕರಿಗಳ ಪೋಣಿಸಿ ಆಡಿ ಸರ್ವರಉ- ದರದೋಳಿಟ್ಟು ಕೂಡಿ ||ಆಹಾ|| ಗ್ರಾಸ ತ್ವರಿತದಿ ತಾ ಮಾಡಿ ಕ್ರೀಡಿಸುತಿರ್ಪನ್ನ 4 ವಾಯುದೇವರ ಗದಾಪ್ರಹಾರದಿಂದ ಭಯ ಹುಂಕಾರದಿಂದ ಜೀವರ ಲಿಂಗ ಆಯತ ಸ್ಥಳದಲ್ಲಿಟ್ಟವರಾ ||ಆಹಾ|| ಲಯಕಾಲದಿ ಸಂಕರುಷಣ ಮುಖದಿಂದ ಲಯವಾಗಲು ಅಗ್ನಿ ಪೊರಟು ದಹಿಪುದಾ 5 ಕರಿಯ ಸೊಂಡಿಲಿನಂತೆ ಮಳೆಯ ಧಾರೆ ನಿರುತ ಶತವರ್ಷಗರೆಯೆ ನೋಡೆ ಸರ್ವತ್ರ ಜಲಮಯವಾಗೆ ಆಗ ನೀರಜಾಂಡವೆಲ್ಲ ಕರಗೆ ||ಆಹಾ|| ಗರುಡ ಶೇಷ ಮಾರ್ಗವರಿತು ಬರುತಿರ್ಪ ಸರ್ವಜೀವರ ತನ್ನ ಉದರದೊಳಿಟ್ಟನ್ನಾ 6 ಅರಿಯೋ ನೀ ಶೇಷಮಾರ್ಗವನ್ನೂ ಇಲ್ಲಿ ಸುರರು ಕುಬೇರನೊಳಿನ್ನು ಆತ ವರುಣನಲ್ಲಿ ಲಯವನ್ನೂ ಚಂದ್ರ ಹರಿಪಾರ್ಷಧರನಿರುದ್ಧನನ್ನು ಆಹಾ ಅನಿರುದ್ಧ ಸನತ್ಕುಮಾರನ್ನ ತಾವು ಪೊಂದಿ ಮಾರ ವಾರುಣಿಯು ಹರಿಮಡದಿಯರಲ್ಲಿ ಲಯವಾ 7 ಸುರರು ಮೊದಲು ಅಗ್ನಿಯೊಳ್ ಲಯವನ್ನೈದುವರು ಆ ಅಗ್ನಿ ತಾ ಸೂರ್ಯನ್ನ ಸೇರುವನು ಸೂರ್ಯ ತಾ ಗುರುವನ್ನ ಸೇರುವನು ||ಆಹಾ|| ಆಗಲೇ ಸರ್ವಮನುಜರು ಪಿತೃಗಳು ನಿರುಋತಿಯೊಳು ಪೊಕ್ಕು ತಾ ಯಮನಲ್ಲಿ ಸೇರುವಾ 8 ಯಮ ಪ್ರಿಯವ್ರತರಾಯರೆಲ್ಲ ಲಯ ತಮ್ಮ ಸ್ವಾಯಂಭು ಮನುವಿನಲ್ಲಿ ಮತ್ತೆ ಮ- ಹಿಮ ಭೃಗುವು ದಕ್ಷನಲ್ಲಿ ಲಯವು ಆ ಮಹಾದಕ್ಷ ಸ್ವಾಯಂಭು ಇಂದ್ರನಲ್ಲೀ-ಆಹಾ ಅಮರಪತಿಯು ತಾ ಸೌಪರಣಿಯನು ಪೊಂದಿ ಈ ಮಾರ್ಗದಿ ತಾನು ಗರುಡನ್ನ ಸೇರುವುದು 9 ಶೇಷಗರುಡರೊಡಗೂಡಿ ಆಗ ಸರಸ್ವತಿಯನ್ನೆ ಪೊಂದುವರು ಮತ್ತೆ ಆಸುವಿರಂಚಿ ವಾಯುಗಳು ತಾವು ಸರಸ್ವತಿಯನ್ನೆ ಪೊಂದುವರು ಆಹಾ ಈ ಸೂಕ್ಷ್ಮಲಯವನ್ನೆ ಕ್ರಮವರಿತು ನೀನೀಗ 10 ಸೂತ್ರನಾಮಕ ವಾಯುದೇವ ರುದ್ರ ಉಮೆಪ್ರದ್ಯುಮ್ನದ್ವಾರ ತ್ರಾತ ಸಂಕುರುಷಣನಾ ದಯದಿ ಜಗ- ನ್ಮಾತೆ ಲಕ್ಷ್ಮಿಯೊಳು ಸೇರುವರು ||ಆಹಾ|| ಚತುರಾಸ್ಯ ಜೀವರ ತನ್ನುದರದೊಳಿಟ್ಟು ಅತಿಮೋದದಿಂದ ವಿರಾಟನ್ನೈದುವುದು11 ವಿರಾಟ್ ಬ್ರಹ್ಮನು ತಾನೆಲ್ಲಾ ತನ್ನ ಆ ವರಣದಲ್ಲಿ ಇಪ್ಪಂಥ ತನ್ನ ಧರೆಯಲ್ಲಿ ಲೀನವಾಗುವ ಆಗ ಪರಿಪರಿಯಿಂದ ತನ್ಮಾತÀ್ರ ಆಹಾ ಅರಿತು ಶಬ್ದಸ್ಪರ್ಶರೂಪರಸಗಂಧ ಪರಿಪರಿಯಿಂದಲಿ ಲಯವನ್ನೈದುವುದಾ12 ಗಂಧದ್ವಾರ ಲಯತನ್ನ ಬಿಲದಿ ಜಾತ ವೇದದಲ್ಲಿ ರಸ ಲಯವು ರೂಪ ದ್ವಾರ ಲಯ ಆಕಾಶದೊಳು-ಆಹಾ- ಶಬ್ದದ್ವಾರ ಲಯತಮ ಅಹಂಕಾರಾದಿ ತದಾಂತರ್ಗತÀ ಭಗವದ್ರೂಪದಲ್ಲ್ಯೆಕ್ಯವಾ 13 ಅಹಂಕಾರತ್ರಯದಲಿ ಬಂದಾ ತತ್ತ ್ವ ದೇಹಸೂರರೆಲ್ಲರ ಲಯವು ಇಹ ತತ್ವಾಂತರ್ಗತ ಭಗವದ್ರೂಪಕೆ ||ಆಗ|| ಅಲ್ಲಲ್ಲಿ ತನ್ನೊಳೈಕ್ಯವೂ-ಆಹಾ ಅಹಂಕಾರತ್ರಯ ಮಹತ್ತತ್ವದಲ್ಲಿ ಲಯ ಮಹತ್ತತ್ತ ್ವವು ಮೂಲಪ್ರಕೃತಿಯಲ್ಲಿ ಲಯವು 14 ವಾಸುದೇವಾದಿ ಚತುರ ರೂಪ ಮತ್ಸ್ಯ ಶ್ರೀಶನನಂತಾದಿರೂಪ ಮತ್ತು ಶ್ರೀಶನಷ್ಟೋತ್ತರ ರೂಪ ||ಆಹಾ|| ತಾ ಸಕಲರೂಪಗಳು ಮೂಲರೂಪದೊಳೈಕ್ಯ ಶಾಶ್ವತನಾದ ಶ್ರೀ ಸಚ್ಚಿದಾನಂದನ್ನಾ 15 ಗುಣಮಾನಿ ಶ್ರೀ ಭೂ ದುರ್ಗಾ ಅಂ- ಭ್ರಣಿ ರೂಪವನ್ನೆ ತಾ ಧರಿಸೀ ಸಂ- ಪೂರ್ಣನ್ನ ಸಾಮೀಪ್ಯ ಸೇರಿ ಪೂರ್ಣ ಕಾಮನ್ನ ಎಡಬಿಡದೆ ನೋಡೀ ||ಆಹಾ|| ಕ್ಷಣ ಬಿಡದೊಡೆಯನ ಅಗಣಿತಗುಣಗಳ ಕಡೆಗಾಣದೆ ನೋಳ್ಪ ನಿತ್ಯಮುಕ್ತಳ ಸಹಿತಾ16 ಏಕೋ ನಾರಾಯಣ ಆಸೀತ ಅ- ನೇಕ ಜನರ ಸಲಹಲಿನ್ನು ತಾನೆ ಸಾಕಾರದಲಿ ನಿಂದಿಹನು ಇಂತು ವೇಂಕಟಾಚಲದಿ ಇನ್ನು ಮುನ್ನು ||ಆಹಾ|| ಏಕಮನಸಿನಿಂದ ಭಜಿಪ ಭಕ್ತರನ ತಾ ನಿ- ನಿತ್ಯ 17
--------------
ಉರಗಾದ್ರಿವಾಸವಿಠಲದಾಸರು
ನವವಿಧ ಭಕ್ತಿ ಶ್ರವಣ ಪಾವನವಾದ ಹರಿಕಥೆ ಪುರಾಣ ಮೊದ ಲಾದುದನು ಕೇಳುತ್ತಿ ಪರಮಾತ್ಮನನ್ನು ಹೃದಯ ಪೀಠದಲಿರಿಸಿ ಪೂಜಿಸುವ ಭಕ್ತನೇ ಶ್ರವಣ ಫಲ ಹೊಂದಿದವ ಶ್ರವಣಭಕ್ತಿಯಿದು 64 ದಾಸಕೂಟದ ಭಕ್ತರಿಂ ರಚಿತವಾದ ಸು ಶ್ರಾವ್ಯ ಹಾಡುಗಳನ್ನು ಪಾಡಿ ಕುಣಿಯುತ್ತ ದೇವರನು ನೆನೆನೆನೆದು ಧ್ಯಾನಿಸುವ ಭಕ್ತರೇ ಕೀರ್ತನದ ಭಕ್ತರೆಂದರಿ ಮನುಜ ನೀನು 65 ವ್ಯಾಸ ದಾಸರ ಕೂಟದಿಂದರಿತ ದೇವರನು ಮಾನಸದ ಮಂಟಪದಲ್ಲಿರಿಸಿ ಪೂಜಿಸುತ ಅದನೆ ಪೌನಃಪುನ್ಯದಿಂದ ಮೆಲುಕಾಡುವದು ಸ್ಮರಣಭಕ್ತಿಯಿದೆಂದು ತಿಳಿ ಮನುಜ ನೀನು 66 ಅವತಾರ ರೂಪಗಳ ಮೂರ್ತಿಗಳ ರಚಿಸುತಲಿ ನಿನ್ನ ಚಿತ್ತದ ದೇವರನ್ನಲ್ಲಿಯಿರಿಸಿ ಅವನ ಗುಣಗಳ ನೆನೆದು ಪಾದಸೇವೆಯ ಮಾಡೆ ಪಾದಸೇವನಭಕ್ತಿಯೆಂದು ತಿಳಿ ಮನುಜ 67 ಹೂ ತುಳಸಿ ಮೊದಲಾದ ವಸ್ತುಗಳ ಶೇಖರಿಸಿ ದೇವ ಮೂರ್ತಿಗಳನ್ನು ಇದಿರಲ್ಲಿಯಿರಿಸಿ ಷೋಡಶದ ಉಪಚಾರ ಪೂಜೆಗಳ ನಿತ್ಯದಲಿ ಮಾಡುವುದೆ ಅರ್ಚನದ ಭಕ್ತಿಯಿದು ತಿಳಿಯೈ 68 ಎದೆ ಶಿರಸು ಕಣ್ಣು ಮನ ಕೈಕಾಲು ಮೊಣಕಾಲು ವಾಗೆಂಬುದೆಂಟಂಗಗಳನು ಪಾದದೆಡೆಯೀಡಾಡಿ ನಮಿಸುವುದೇ ವಂದನವು ಸಾಷ್ಟಾಂಗನಮನವಿದು ತಿಳಿಯೈ 69 ದಾಸೋಹವೆಂಬುದನು ತಿಳಿದು ನೀನನವರತ ಫಲದ ಬಯಕೆಯ ತೊರೆದು ಸೇವೆಯನು ಮಾಡೆ ಸೇವಕನ ನಿನ್ನನ್ನು ತನ್ನ ಬಳಿಗೊಯ್ಯುವನು ಭವಬಂಧ ತೊರೆಯಿಸುತ ಪಾಲಿಸುವನವನು 70 ಸಚ್ಚಿದಾನಂದ ಸ್ವರೂಪದವ ಪರಮಾತ್ಮ ತನ್ನ ಗುಣಗಳನ್ನೆಲ್ಲ ಭಕ್ತರಿಗೆ ಕೊಡುವ ನೀರು ಹಾಲನು ನಂಬಿದಂತೆ ನಂಬುವನನ್ನು ಭಕ್ತರಕ್ಷಕನವನು ಮುಕ್ತಿದಾಯಕನು 71 ಕೃಷ್ಣನು ಪರಬ್ರಹ್ಮ ಕೃಷ್ಣನನು ವಂದಿಸುವೆ ಕೃಷ್ಣನಿಂದಲೆ ಸಕಲ ವಿಶ್ವಗಳ ಸೃಷ್ಟಿ ಸುಕೃತ ದುಷ್ಕøತವೆಲ್ಲ ಕೃಷ್ಣನಡಿಯಲಿ ಮುಡಿಯು ಕೃಷ್ಣನಲಿ ಮನವು 72 ಕಾಮಹತಕನು ರುದ್ರದೇವನಿಲ್ಲಿಯೆ ಇದ್ದು ಅಷ್ಟಯತಿಗಳ ಶುದ್ಧಮಾನಸರ ಮಾಡಿ ಬಾಲಯತಿಗಳ ಮೂಲಕವೆ ಪೂಜೆಯನು ಪಡೆದು ರಾರಾಜಿಸುವೆ ದೇವ ಕೃಷ್ಣರೂಪದಲಿ 73 ಭಾರ್ಗವೀಪತಿಯಾದ ಸಿರಿವರನು ಮಾಧವನು ಭಾರ್ಗವೀರೂಪವನು ಶುಕ್ರವಾರದಲಿ ತಾಳ್ದು ಭಕುತರ ಹೃದಯವನ್ನರಳಿಸುವೆ ನೀನು ಮೋಹಿನೀರೂಪವದು ಮೋಹಕವದಲ್ತೆ 74 ಬಲ್ಲಾಳ ವಂಶಜರು ಉಡುಪ ಕುಲದವರೆಂದು ಭಕುತ ಗುರುವಾದಿರಾಜರ ಹಸ್ತದಿಂದ ಮೂರು ಅವತಾರ ಚಿಹ್ನೆಯ ತಾಳ್ದ ಮಾರುತಿಯ ಆರಾಧ್ಯ ಭೂವರಾಹರ ಕೊಡಿಸಿ ಪೊರೆದೆ 75 ದುಷ್ಟ ಜನಮರ್ದನ ಜನಾರ್ದನನು ನೀನಿರುವೆ ನಿನ್ನ ರೂಪವೆ ಪಕ್ಷನಾಥ ಸೇವಿತವು ಚಕ್ರ ಶಂಖಾಸಿ ಪಾನದ ಪಾತ್ರೆಗಳ ಧರಿಸಿ ದುಷ್ಟ ಶಿಕ್ಷಣಕಾಗಿ ಕಾಳಿ ಸೇವಿಪಳು 76 ಜಮದಗ್ನಿಪುತ್ರನಾಗವತರಿಸಿ ನೀನೊಮ್ಮೆ ಕೊಡಲಿಯಿಂ ಕಡಿಕಡಿದು ದುಷ್ಟರಾಜರನು ನಕ್ಷತ್ರ ಮಂಡಲವ ಭೂ ಮಂಡಲವ ಮಾಡಿ ಪರಶುರಾಮನು ಎಂಬ ಪೆಸರನ್ನು ಪಡೆದೆ 77 ಪರಶುರಾಮನು ರಾಮ ಪರಶುರಾಮನು ಕೃಷ್ಣ ಒಬ್ಬನೇ ಹಲವಾರು ರೂಪಗಳ ತಾಳಿ ಸಾಸಿರದ ನಾಮದಿಂ ಸ್ತುತಿಸಿಕೊಳ್ಳುವೆ ಹರಿಯೆ ನಿನ್ನ ಮಾಯಾರೂಪ ತಿಳಿದವರು ಯಾರು? 78 ಮೇಘದೆಡೆಯಿರುವ ಮಿಂಚಿನ ಹಾಗೆ ನೀನೆಂದು ತಿಳಿಸಲ್ಕೆ ನೀನು ಮೇಘದ ವರ್ಣದವನು ನೀಲತೋಯದ ಮಧ್ಯದಲ್ಲಿರುವ ವಿದ್ಯುತ್ತಿನಂತಿರುವಿ ಯೆಂದು ಶ್ರುತಿ ಹೇಳುವುದು ತಿಳಿಯೈ79 ಪುರುಷೋತ್ತಮನೆ ನಿನ್ನ ಪುರವೆಯೆನ್ನಯ ದೇಹ ಉತ್ತಮನು ನೀನಿರುವೆ ಅಧಮ ನಾನಿರುವೆ ಅಜ್ಞಾನದಾಚ್ಛಾದಿಕೆಯನೆನಗೆ ಹಾಕುತಲಿ ಬಿಂಬರೂಪದಲಿದ್ದು ಬೆಳಗಿಸುವೆ ನನ್ನ 80 ಶ್ರವಣಮನನಾದಿ ಸಾಧನದ ಬಲದಿಂದ ನಾ ನನ್ನ ಮುಸುಕನು ತೆಗೆದರೂ ನೀನು ಎನ್ನ ಬಳಿಯಲ್ಲಿದ್ದು ಕಾಣದಿಹೆ ಪರಮಾತ್ಮ ನಿನ್ನ ಪರಮಾಚ್ಛಾದಿಕೆಯ ತೆಗೆದು ತೋರು 81 ಗೋವರ್ಧನೋದ್ಧಾರಿ ಸಿರಿವರನೆ ನೀನೊಮ್ಮೆ ನಾಭಿರಾಜನ ಪುತ್ರನಾಗಿಯವತರಿಸಿ ಅಜನಾಭವೆಂಬ ಮೋಡವನು ಸೃಷ್ಟಿಸಿ ನೀನು ಲೋಕದ ಕ್ಷಾಮವನು ಹೋಗಲಾಡಿಸಿದೆ 82 ನೀನೊಮ್ಮೆ ದಕ್ಷಿಣದ ಕರ್ಣಾಟಕಕೆ ಬಂದು ಅಜಗರದ ವೃತ್ತಿಯಲಿ ದೇಹವನು ತೊರೆದು ನಿರ್ವಾಣ ಬೌದ್ಧಮತ ಜೈನಾದಿ ಮತಗಳಿಗೆ ಮೂಲಪುರುಷನದಾಗಿ ಮೆರೆದೆ ಪರಮಾತ್ಮ 83 ಸತ್ವ ರಜ ತಮವೆಂಬ ಮೂರು ಗುಣ ಪ್ರಕೃತಿಯದು ಪ್ರಾಕೃತದ ದೇಹವನು ಹೊಂದಿದಾ ಜನರು ಹುಟ್ಟುಗುಣ ಮೂರರಿಂ ಕರ್ಮವನು ಮಾಡುತ್ತ ಸುಖ ದುಃಖವನು ಹೊಂದಿ ಜೀವಿಸುವರವರು 84 ಸತ್ಯಾತ್ಮಕನು ನೀನು ಚ್ಯುತಿಯಿಲ್ಲ ಸತ್ಯಕ್ಕೆ ಅಚ್ಯುತನ ನಾಮದಿಂ ಪಾಪ ಪರಿಹರಿಪೆ ಅಂತವಿಲ್ಲದುದಾತ್ಮ ಆತ್ಮರಕ್ಷಕನಾಗಿ ನಾಮದಲನಂತನೆನಿಸಿರುವೆ ಶ್ರೀಹರಿಯೇ 85 ವೇದರಕ್ಷಕನಾಗಿ ಗೋವುಗಳ ರಕ್ಷಿಸುತ ಗೋವಿಂದನಾಮವನು ಧರಿಸುತಲಿ ನೀನು ನಾಮತ್ರಯಗಳಿವನು ಕರ್ಮಾಂತದಲಿ ಪಠಿಸೆ ಕರ್ಮದೋಷದ ಪಾಪ ಪರಿಹಾರವಹುದು 86 ಸಚ್ಚಿದಾನಂದಸ್ವರೂಪ ಹರಿ ನೀನಿರುವೆ ನಿನ್ನ ರೂಪಗಳೆಲ್ಲ ಪೂರ್ಣವಾಗಿಹವು ಜ್ಞಾನವಾನೆಂದವನು ಹೆರವರ್ಗೆ ತಿಳಿಸುತಿರೆ ನಮ್ಮಲ್ಲಿ ಹೆಚ್ಚುವವು ಅದರಿಂದ ಪೂರ್ಣ 87 ಹರದಾರಿ ಸಾವಿರಾರಿದ್ದರೂ ನಾದವನು ಚಣದೊಳಗೆಯಾಕಾಶವಾಣಿ ಕೇಳಿಸುವದು ಕಾಣದಿಹ ವಿದ್ಯುತ್ತುರೂಪವನು ತಾಳಿದವ ದೇವನಲ್ಲದೆ ಬೇರೆ ಯಾರ ಮಾಯೆಯಿದು 88
--------------
ನಿಡಂಬೂರು ರಾಮದಾಸ
ನಿತ್ಯ ಸಲಹೆ ಜನರನು ಅನ್ನಪೂರ್ಣೆ ಪ ಉಲ್ಲಾಸದಿಂದಲಿ ಪಲ್ಲಕ್ಕಿಯ ಮೇಲೆ ನೀ ಕುಳ್ಳಿರ್ದು ಛತ್ರ ಚಾಮರ ವ್ಯಜನಗಳಿಂದ ಅಲ್ಲಿ ಗಲ್ಲಿಗೆ ನೃತ್ಯಗೀತ ವಾದ್ಯುಪಚಾರ ದಲ್ಲಿ ಉತ್ಸವದಿ ಬರುವ ಸಂಭ್ರಮವಕಂಡೆ 1 ಹಾಡಿ ಪಾಡಿಸಿ ಕೊಳುತ ಚತುರ್ವಿಧ ಗೂಡಿದ ಮಂತ್ರ ಸ್ತುತಿಗಳಿಂದಲಿ ಕೂಡಿದ ಜನರ ಸಂದಣಿಯಲ್ಲಿ ಮನೆಯಲ್ಲಿ ಬೇಡಿದ ಜನರಿಂಗಿಷ್ಟಾರ್ಥವ ನೀವುದ ಕಂಡೆ 2 ಮೂರು ಮೂರುತಿ ನೀನೆ ನಿರ್ಮಿಸಿ ಮತ್ತೆ ಮೂರು ಗುಣಂಗಳ ಧರಿಸಿ ತಾರಣ ರೂಪೆ ಸೃಷ್ಟಿಸ್ಥಿತಿಗಳನು ಸಂಹಾರವ ಮಾಳ್ಪ ಚೈತನ್ಯ ರೂಪೆಯಕಂಡೆ 3 ಬಿಂಕವ ಮುರಿದೆ ಜನರ ಸಾಕಿನ್ನು ಭಯಂಕರವನು ಬೀರದಿರು ತಾಯೆ ಎನ್ನ ಮಾಡಲ ಮನೆಯೊಳು ನೆಲಸಿ ಭಕುತರನು ಶಂಕರಿ ಸಲಹೆ ದಯದೊಳನ್ನಪೂರ್ಣೆ 4 ಎಲ್ಲ ಜೀವರಿಗು ಜೀವಳು ನೀನು ಇಲ್ಲಿನ್ನು ನಿನಗಿಂತ ಬಲ್ಲಿದರು ಇಲ್ಲಮ್ಮ ವಿಜಯದಶಮಿಯೊಳು ನೀ ಬಂದು ಕೊಲ್ಲೂರ ಮೂಕಾಂಬೆಯೊಳಿರ್ದುದ ಕಂಡೆ 5
--------------
ಕವಿ ಪರಮದೇವದಾಸರು
ನೀರಜ ಯುಗ ಮನೋ - ವಾರಿಜದಲಿ ನಾ ಭಜಿಸುವೆನು ಪ ಸಾರಿದ ಜನರ‌ಘದೂರದಿ ಓಡಿಸಿ ಧಾರುಣಿಯೊಳು ಸುರಸೌರಭಿ ಎನಿಸಿಹ ಅ.ಪ ಅವರ ಪದಜಲ ಈ ಭುವನತ್ರಯ ಪಾವನ ತರವೆಂದೆನಿಸುವದೋ ಅವರ ಪದಯುಗ ಕೋವಿದಜನರು ಭಾವದಿ ದಿನದಿನ ಸೇವಿಪರೋ ಅವರ ಹೃದಯದಿ ನಾರಾಯಣ ಚ - ಕ್ರಾವತಾರವ ಧರಿಸಿಹನೊ ಶ್ರೀವರ ಹರಿ ಕರುಣಾವಲೋಕನದಿ ದೇವಸ್ವಭಾವವ ನೈದಿಹರೋ 1 ಆವ ಮಾನವನಿವರಚರಣ ಸೇವಕತೆರನೆಂದೆನಿಸುವನ್ನೋ ಕೋವಿದ ಜನರೆಲ್ಲರು ಆವನ ದೇವೋತ್ತುಮನೆಂದೆನಿಸುವನು ಪಾವನಿ ಮುಖ ದೇವೋತ್ತುಮರೆಲ್ಲರು ಈ ವಿಧ ಮಹಿಮೆಯ ತೀವ್ರದಿ ತೋರುವ 2 ಅವರು ಅವನೀ ದೇವತೆಗಳಿಗೆ ಜೀವನವಿತ್ತು ಪೊರೆದಿಹರೋ ಪಾವಕಘಾಕಿದ ಹಾರವ ಮತ್ತೆ ಭೂವರನಿಗೆ ತಂದಿತ್ತಿಹರೋ ಮಾವಿನ ರಸದಲಿ ಬಿದ್ದಿಹ ಶಿಶುವಿಗೆ ಜೀವನವಿತ್ತು ಕಾಯ್ದಿಹರೋ ಶೈವನ ನಿಜಶೈವವ ಬಿಡಿಸೀ ತಮ್ಮ ಸೇವೆಯನಿತ್ತು ಕಾಯ್ದಿಹರೋ 3 ಸಲಿಲವ ತಂದಿರುತಿಹ ನರನಿಗೆ ಸುಲಲಿತ ಮುಕ್ತಿಯನಿತ್ತಿಹರೋ ಚಲುವ ತನಯನಾ ಪುಲಿನದಿ ಪಡೆದಿಹ ಲಲನೆಯ ಚೈಲದಿ ಕಾದಿಹರೋ ಸಲಿಲವು ಇಲ್ಲದೆ ಬಳಲಿದ ಜನಕೆ ಸಲಿಲವನಿತ್ತು ಸಲಹಿದರೋ ಇಳೆಯೊಳು ಯತಿಕುಲತಿಲಕರೆಂದೆನಿಸಿ ಸಲಿದಂಥದು ತಾವು ಸಲಿಸಿಹರೋ 4 ಅನುದಿನದಲಿ ತಮ್ಮ ಪದಕಮಲವನು ಮನದಲಿ ಬಿಡದೆ ಭಜಿಸುವರಾ ಜನರಿಗೆ ನಿಜಘನಸುಖವನು ಕೊಟ್ಟವ - ರನುಸರಿಸೀ ಇರುತಿಹರಾ ಮನೋ ವಾಕ್ಕಾಯದಿ ನಂಬಿದ ಜನಕೆ ಜನುಮವನ್ನುನೀಡರು ಇವರ ಘನಗುಣ ನಿಧಿ ಗುರುಜಗನ್ನಾಥ ವಿಠಲ - ನಣುಗಾಗ್ರೇಸರೆರೆನಿಸಿಹರಾ 5
--------------
ಗುರುಜಗನ್ನಾಥದಾಸರು
ನೆರೆ ಪ್ರಚಂಡ ಬರತಕದ ನಿರಗೊಡದ ಮನ್ಮಥನ ಪರಿಯನೆಲ್ಲ ಕೇಳು ಕೆಳದಿ ಸುರಪುರದ ಕರಿವರದ ಗರುಹಿದಡೆ ಮುತ್ತಿನ ಸರದ ಹಾರವ ನೀವೆ ಕೆಳದೀ ಪ ಸಸಿ ಬಿಂಬ ದೆಸೆ ತುಂಬಿ ಪಸರಿಸಿತೆಂಬುದನು ಪಿಕ ಕುಸುಮಾಂಬರಗೆ ಪೇಳೆ ಕೆಳದೀ ಮಸರೆಳೆಯದಸು ಬಿಳಿ ಯೆಸಳು ಕೇದಗೆಯಲರ ಹಸಮಾಡಿದನು ನಲಿದು ಕೇಳದಿ 1 ಅಸಿನನೆಯ ಹೊಸಮನೆಯ ಬಿಸುಗಣೆಯೆಂದಳೆಸೆಯೆಮಣಿಸಲುತರಹರಿಸುವುದುಕೆಳದಿ ಬಿಸಜಾಕ್ಷನ ನುಶಿಕ್ಷಣದಿ ತನು ಉಚ್ಚಿಕಡುಸುಡುತಲಿದೆ ನೀ ಸಾಕ್ಷಿ ಕೆಳದೀ 2 ತಂಬೆಲರ ಮುಂಬೆಲರ ಪಂಬೆಲರನುಳಿದು ಮರಿ- ದುಂಬಿಗಳ ಸಂಭ್ರಮದಿ ಕೇಳದ ಕೆಳದೀ ಬೆಂಬಿಡದೆ ಇಂಬುಗೊಂಡಂಬುಜಾಸ್ತ್ರವ ತುಡುಕಿ 3 ಪೊಂಬಲಕೆ ಕೊಳಗಾದೆ ಕೆಳದೀ ಪಣೆ ಯೆಂಬುವಗೆ ಕುಂಬಿನಿಯೊಳೇ ಮಣಿಹ- ದೆಂಬುದನು ಕೊಡಬಹುದೆ ಕೆಳದೀ 4 ನಂಬಿದಳು ಕಂಬನಿಯ ತುಂಬಿರಲು ಸಖಿಯರೊಳು ಗಾಂಭೀರ್ಯತನವಹುದೇ ಕೆಳದಿ ಕಂತುಶರವಂತಿರದೆಂತೊರೆಯಬಹುದೆನಗೆ ಚಿಂತೆ ತಲ್ಲಣ ಕೆಳದೀ 5 ದಂತಿ ನಡೆಯಂತೆ ಬೆಡಗಿಂತವಳ ಕಾಣೆ ಗುಣ ವಂತೆ ವಿಧಾನ್ಯಾಯದಲಿ ಸಂತೈಸಿ ಯೆನ್ನ ನೆರೆವಂತೆ ಸುರಪುರದ ಲಕ್ಷ್ಮೀ ಕಾಂತನಿಗೆ ಬಿನ್ನಯಿಸು ಕೆಳದೀ 6
--------------
ಕವಿ ಲಕ್ಷ್ಮೀಶ
ಪರಮ ಪಾವನಕಾಯ ಗುರುರಾಯ ಜೀಯ ವರ ಭಾಗವತರ ಪ್ರಿಯ ಸುರರ ಸಹಾಯ ಪ. ಶ್ರೀ ತಂದೆ ಮುದ್ದುಮೋಹನ ದಾಸರೆಂದೆನಿಸಿ ವಾತ ಜನಕನ ಒಲಿಸಿ ವೈರಾಗ್ಯ ಧರಿಸಿ ಖ್ಯಾತಿಯನು ಪಡೆದ ಅನಾಥ ರಕ್ಷಕ ಸ್ವಾಮಿ ನೀತ ಗುರು ನಿಮ್ಮ ಪದಕೆ ನಾ ತುತಿಸಿ ನಮಿಪೆ 1 ಘನ ಅಂಶದಲಿ ನೆಲಸಿ ಅನವರತ ಸಲಹುವೊ ಮನವ ಮಾಡಿರಬಲೆ ಅಂಜಿ ಬೆದರೆ ಘನ ಜ್ಯೋತಿ ಸ್ವೀಕರಿಸಿ ತನುವಿಗಭಯ ತೋರಿ ಮನದಿ ಪದವನೆ ನಂಬೆ ರಕ್ಷಿಸಿದ ಗುರುವೆ 2 ಅಪಮೃತ್ಯು ಬಂದು ಬಹು ಅಪರಿಮಿತ ಭಯಪಡಿಸಿ ಸುಪಥ ಕಾಣದೆ ನಿಮ್ಮ ಪದವ ನಂಬಿರಲು ಸ್ವಪ್ನದಲಿ ನಿಜರೂಪ ಗುಪ್ತದಿಂದಲಿ ತೋರಿ ಆಪತ್ತು ಪರಿಹರಿಪೆನೆಂದಭಯವಿತ್ತ 3 ಪರಿಪರಿ ಅಪಮೃತ್ಯು ಪರಿಹಾರವನೆಗೈದು ಪರಮ ಹರುಷದಿ ಕಾಯ್ದು ಆಯುವನೆ ಇತ್ತು ಕರಕರೆಯ ಬಿಡಿಸಿ ಕಾಯ್ದಂಥ ಘನ ಚರಿತೆಯನು ಅರಿತು ವರ್ಣಿಸಲರಿಯೆ ಪರಮ ಪ್ರಿಯ ದೊರೆಯೆ 4 ಆಪನ್ನ ರಕ್ಷಕರೆ ಶ್ರೀ ಪತಿಯ ತೋರುವ ಘನಶಕ್ತರೆ ಕಾಪಾಡುವೋ ಕರ್ತರೆಂದು ನಾ ನಂಬಿರುವೆ ಗೋಪಾಲಕೃಷ್ಣವಿಠ್ಠಲನ ನಿಜ ಪ್ರಿಯರೆ 5
--------------
ಅಂಬಾಬಾಯಿ
ಪಾದ | ಸೋಕಿದ ಕೊನೆಧೂಳಿ ಪ ತಾಕಿದ ಮನುಜರಿಗೆ ಕಾಕುಬುದ್ಧಿಗಳೆಲ್ಲ ಪರಿಹಾರವಾಗುವವೊ | ಬೇಕಾದ ಪದವಿಯ ಕೊಡುವನು ಶ್ರೀ ಹರಿ ಅ.ಪ ಮಧ್ವಮತವೆಂಬ ಅಬ್ಧಿಯೊಳಗೆ ಪೂರ್ಣ | ಉದ್ಭವಿಸಿದ ಚಂದ್ರನಾ ಗುಣಪೂರ್ಣನಾ || ಅದ್ವೈತಮತÀ ತಮನಿಧಿ ನಿಶಿಕುಠಾರ | ವಿದ್ಯಾರಣ್ಯವ ಗರುವಕೆ ಪರಿಹಾರ 1 ತತ್ವ ವಾರಿಧಿಗಳ ತತ್ವಸುಧೆಯ ಭಾಷ್ಯ | ವಿಸ್ತರಿಸಿ ಇರಲು ಬೇಗದಲಿ || ಚಿತ್ರವಲ್ಲಭನÀ ಸೇವೆಯ ಮಾಡಿ ಟೀಕಂಗಳ || ಸುತ್ತೇಳು ಲೋಕಕ್ಕೆ ಪ್ರಕಟಿಸಿ ಮೆರೆವರ 2 ಎಂದಿಗಾದರು ಒಮ್ಮೆ ಕೊನೆ ನಾಲಿಗೆಯಿಂದ | ಬಿಂದು ಮಾತ್ರದಿ ನೆನೆಯೆ || ಮಂದ ಮತಿಯಾದರೂ ಅಜ್ಞಾನನಾಶವು | ಸುಂದೇಹÀವಿಲ್ಲವು ಅವಾವ ಕಾಲಕ್ಕೆ 3 ಜ ಎಂದು ಪೊಗಳಲು ಜಯಶೀಲನಾಗುವ | ಯ ಎನ್ನೆ ಯುಮರಾಯನಂಜುವನು || ತೀ ಎಂದು ಪೊಗಳಲು ತೀವ್ರ ಪದವಿ ಉಂಟು | ರ್ಥ ಎಂದು ಪೊಗಳಲು ತಾಪತ್ರಯುಪಶಮನ 4 ಯೋಗಿ ಅಕ್ಷೋಭ್ಯತೀರ್ಥರ ಕರಕಮಲಸಂಜಾತ | ಭಾಗವತರ ಸುಪ್ರೇಮ || ಕಾಗಿಣಿ ತೀರದ ಮಳಖೇಡ ನಿವಾಸಾ | ಶ್ರೀ ಗುರು ವಿಜಯವಿಠ್ಠಲ ಸೇವಕ ಭಕ್ತಾ 5
--------------
ವಿಜಯದಾಸ