ಒಟ್ಟು 4142 ಕಡೆಗಳಲ್ಲಿ , 122 ದಾಸರು , 2736 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಾಮರಸ ಇನ್ನು ಕಾಂಬುವದೆಂದುಪನ್ನಗಾತನ ವಾಹನಾ ಪ ಕಣ್ಣು ಕಾಣದ ಹೀನ ಮಾನವನು ನಾನಾದೆಉನ್ನಂತ ಗುಣ ಪೂರ್ಣ ಕಾಯೋ ಯೆನ್ನ ಅ.ಪ. ಕರಿ ಮಕರಿ ಸೆಣಸ್ಯಾಡಿಹರುಷ ಕುಗ್ಗುತ ಮರುಕದೀ |ಹರಿ ಹರಿ ಹರಿ ಎಂದು | ಕರಿರಾಜ ಮೊರೆಯಿಡಲುತ್ವರದಿಂದ ನೀಯವನ | ಎಡರ ಹರಿಸಿದೆ ದೇವ 1 ಕುರುರಾಜ ಸಭೆಯಲಿ | ತರುಳೆ ದ್ರೌಪದಿ ಸೀರೆಕೌರವಾನುಜ ಸೆಳೆಯಲೂ |ನಾರಿಮಣಿ ನಿಜಪತಿಗಳೈ | ವರಲಿ ಮನ ತಿಳಿದುಹಿರಿಯ ಸಭಿಕರಿಗರುಹಲೂ | ವರ ವೃದ್ಧ ಭೀಷ್ಮಾದಿ |ಬಹುಮಂದಿ ಇರುತ ಕಾಲವ ಕಳೆಯಲು |ಆರಾದರೂ ಬಂದು ಪಾರು ಮಾಡಿದರೇನೊಶೌರಿ ನಿನ್ನನು ಕರೆಯೆ | ಪಾರು ಮಾಡಿದ ದೇವ 2 ಪಾರುಗಾಣಿಸೊ ಎನ್ನ | ಮೂರು ವಿಧ ತಾಪಗಳಮಾರ ಜನಕನೆ ಪ್ರಾರ್ಥಿಪೇ ದೂರ ಮಾಡಿಸೊ ಹರಿಯೆ | ಮೂರು ಗುಣದಿಂದೆನ್ನಬಾರಿ ಬಾರಿಗು ಬೇಡುವೆ |ದುರುಳ ತತ್ವರ ಕಾರ್ಯ | ಕಡೆಗೈಸಿ ಶ್ರೀ ಹರಿಯೆಸುರರ ಸಹಕಾರ ನೀಡೊ |ಗುರುಗಳಂತರ್ಯಾಮಿ | ಗುರು ಗೋವಿಂದ ವಿಠಲನೆಕರುಣದಲಿ ತವ ಚರಣ | ಸರಸಿಜವ ತೋರೋ 3
--------------
ಗುರುಗೋವಿಂದವಿಠಲರು
ತಾಮರಸ ನೆರೆನಂಬಿದೆ ಪೊರೆಯೆನ್ನನು ಪ ಜನನ ಮರಣವಿದೂರ ನೀನಾಜನಪತಿಯ ತನುಜಾತನೆ ಅನಿಮಿಷೇಶರಿಗೊಡೆಯನೆನಿಸಿದೆ 1 ಶ್ರೀರಮಣಿಯನಾದಿಕಾಲದಿ ನಾರಿಯನಿಪಳು ನಿನ್ನಗೆ ಮಾರಹರಶರಮುರಿದು ಹರುಷದಿ ವಾರಿಜಾಕ್ಷೆಯ ವರಿಸಿದೆ 2 ಮೂಜಗತ್ಪತಿಯಂದಿಗೆಂದಿಗು ರಾಜ್ಯತೊಲಗಿದನೆನಿಸಿದೆ ಈ ಜಗದೊಳಿಹ ಅಜ್ಞ್ಞಜನರಿಗೆ ಸೋಜಿಗವ ನೀತೋರಿದೆ 3 ಶ್ರೀಲಕುಮಿ ಪತೆ ನಿನ್ನ ಮಹಿಮಾ ಜಾಲದಿವಿಜರು ತಿಳಿಯರು ನೀಲಮೇಘಶ್ಯಾಮ ಶಿಲೆಬಾಲೆ ಮಾಡಿದು ಚೋದ್ಯವೆ 4 ಮುತ್ತುರತ್ನ ಕಿರೀಟ ಶಿರದಲಿ ಇತ್ತಿಹ್ಯರ್ಕಶತÀಪ್ರಭಾ ನೆತ್ತಿಯಲಿ ಜಡೆಧರಿಸಿ ವಲ್ಕಲ ಪೊತ್ತು ತಿರುಗುವುದುಚಿತವೇ 5 ಕುಜಭವ ಭವರರ್ಪಿಸಿದ ಎಡೆ ಭುಂಜಿಪುದು ನೀವಿರÀಲವೋ ಅಂಜಿಕಿಲ್ಲದೆ ಭಿಲ್ಲಹೆಂಗಳೆಯಂಜಲವ ನೀ ಮೆದ್ದಿಯಾ 6 ಮಂಗಳಾಂಘ್ರಿಯ ಭಜಿಪಯೋಗಿ ಜನಂಗಳಿಗೆ ನೀನಿಲುಕದೆ ಮಂಗಗಳಿಗೆ ನೀನೊಲಿದಿಯಾ 7 ಹಾಟಕಾಂಬರ ತಾಟಕಾರಿ ವಿರಾಟ ಮೂರುತಿ ಎನ್ನಯ ಕೋಟಲೆಯ ಕಡುತಾಪದಿಂಕಡೆದಾಟಿಸೆನ್ನನು ಜವದಲಿ 8 ಭಾರವಿಲ್ಲದೆ ಅಖಿಲಜಗಸಂಹಾರ ಮಾಡುವಿಯನುದಿನ ಕ್ರೂರರಾವಣ ಮುಖ್ಯದನುಜರಹೀರಿ ಬಿಸುಟಿದು ಜೋದ್ಯವೆ 9 ಶಾಂತಿಯ ಪೆÇಂದಿದ ಹರನ ಪೂಜಿಯಗೈದಿಯಾ 10 ವಾರಿಜಾಭವ ಮುಖ್ಯದಿವಿಜರು ಪಾರುಗಾಣದೆ ಮಹಿಮನೆ ಸಾರಿ ಭಜಿಸುವ ಭಕ್ತರಿಗೆ ಕೈವಾರಿಯಂದದಿ ತೋರುವಿ 11 ತಾಮಸರ ಸಂಗದಲಿ ನೊಂದೆನು ಕಾಮಕ್ರೋಧದಿ ಬೆಂದೆನು ಈ ಮಹಿಗೆ ನಾಭಾರವಾದೆನು ಪ್ರೇಮದಿಂದಲಿ ಪಾಲಿಸು 12 ನಿನ್ನಧ್ಯಾನವ ತೊರೆದು ನಾಬಲು ಅನ್ಯವಿಷಯದಿ ರಮಿಸಿದೆ ಎನ್ನ ದೋಷಗಳೆಣಿಸದಲೆ ಕಾರುಣ್ಯಸಾಗರ ಕರುಣಿಸು 13 ಹೀನ ವಿಷಯಾಪೇಕ್ಷೆ ಬಿಡಿಸಜ್ಞಾನತಿಮಿರವ ನೋಡಿಸು ಮೌನಿ ಮಧ್ವಾರ್ಯರ ಮತದ ವಿಜ್ಞಾನ ತತ್ವವ ಬೋಧಿಸು 14 ಸಾಮಗಾನವಿಲೋಲ ರಘುಜನೆ ನೇಮದಿಂದಲಿನೀಯನ್ನ ನಾಮವನೆ ಪಾಲಿಪುದು ಸಚಿದ್ಧಾಮ ವರದೇಶ ವಿಠಲನೆ15
--------------
ವರದೇಶವಿಠಲ
ತಾಯಿ ಲಕುಮಿ ತಂದೆ ನಾರಾಯಣ ನಿ- ಮ್ಮ ನೆಚ್ಚಿನ ಮಗನಾನಣ್ಣ ಪ ಪಕ್ಕ ದಾಯಿಗರು ಎನಗೆ ಇಬ್ಬರಿಹರು ರಕ್ಕಸರು ಇಹರು ನಾಲ್ಕು ಮಂದಿ ಮಿಕ್ಕವರ ಬಲವುಂಟು ಬಹು ಮಂದಿ ಯಾ- ತಕ್ಕೆ ಇರುವನೆನಗೊಬ್ಬನೆ ಮಾರುತಿ1 ಮಾರುತಿಯ ನಂಬಿದರೆ ಮಹಾಬಲವುಂಟಣ್ಣ ಊರ ಹರಿಭಕ್ತರಿಗೆ ಸರಿ-ಸಾಟಿಯಾರಣ್ಣ ಆರಿಹ-ಪರಗಳಲ್ಲೂ ವಿರೋಧಿಗಳಿರರಣ್ಣ ಶ್ರೀರಾಮಸಖ ಭಾಗ್ಯ ಇಂತಿದೆ ನೋಡಣ್ಣ 2 ನಿನ್ನನೆ ಹಾಡುವೆ ನಿನ್ನನೆ ಹೊಗಳುವೆ ನಿನ್ನನೆ ಬೇಡಿ ಕಾಡಿಸುವೆನಯ್ಯ ನಿನ್ನ ಪಾದದಲಿ ತಲೆ ಇಡುವೆ ರಂಗಯ್ಯ ನಿನ್ನ ಬಲವೊಂದಿರೆ ಅಂಜೆನು ಅಳುಕೆನಯ್ಯ 3 ನಿನ್ನಂತೆ ಸಾಕುವರ ನಂಬಿದರೆ ಕಾಪಾಡುವರ ನಿನ್ನಾಣೆ ನಾಕಾಣೆ ಜಾಜಿಪುರೀಶ ವಿಠಲರಾಯ 4
--------------
ನಾರಾಯಣಶರ್ಮರು
ತಾಯಿತಂದೆಯರಿಗೆ ನಮನ (ವಾರ್ಧಕ ಷಟ್ಪದಿ) ಆನಮಿಪೆ ಮಾತೆ ಪಿತರರ್ಗೆ ಪ ಆನಮಿಸಿ ಈರ್ವರಿಗೆ | ಜ್ಞಾನ ಸಾಧನ ದೇಹದಾನ ಮಾಡ್ದದಕವರ | ಧೇನಿಸುತ ಪದವನಜಗಾನ ಮಾಡುವೆ ವಂಶದ ಅಕ್ಷೀಣ ವಾರ್ತೆಗಳ ಕೇಳ ಬಯಸುವರಾಲಿಸಿ ಅ.ಪ. ವಿಸ್ತರದ ಕೀರ್ತಿಯುತ | ಚಿತ್ತೂರು ಕೃಷ್ಣಾಖ್ಯರಿತ್ತ ಮಹಿ ಶೂರೊಳಗೆ | ನೆಲೆಸುತ್ತ ತಮ ಧರ್ಮಪತ್ನಿಯಲಿ ಚತುರ ಕುವ | ರರ ಪಡೆದು ಚತುರರಂಗೆಅಯ್ಯುತಿರೆ ವಿಧಿವಶದಲಿ |ಪೆತ್ತ ಪಿತ ಪರಪುರಕಡರೆ ಮಾತೆ ಕಡೆ ಕುವರಗೆತ್ತಣದು ವಿದ್ಯೆ ಎಂ | ದೆನ್ನಿಸದೆ ಸಲಹುತ್ತಉತ್ತಮರು ಬಕ್ಷಿತಿರು | ಮಲರ ವಂಶೋದ್ಭೂತ ಸುಬ್ಬರಾಯರ ಕುವರಿಯ 1 ಕಾಲ ಕಳೆಯುತಿರಲು 2 ಪತಿ ವಿಯೋಗವು ಆಯ್ತುಮಾರಿ ಕೋಪದ್ರವದಿ | ಮಾರಿ ಕಣಿವೆಲಿ ಪ್ರಥಮ ಅಪಮೃತ್ಯು ಸಂಭವಿಸಲು |ತಾರುಣ್ಯ ಉರುತರ | ವ್ಯಸನದಿಂ ನೂಕುತ್ತಪೋರನಭಿವೃದ್ಧಿಗಿ | ನ್ನೇನುಗತಿ ಎಂದೆನುತನಾರಾಯಣ ಸ್ಮರಣೆ | ಪರಿಪರಿಯಗೈಯ್ಸುತ್ತ ನಿಟ್ಟುಸಿರ ಬಿಡುತ್ತಿದ್ದಳು 3 ನಾಲ್ಕಾರು ವರುಷಗಳು | ದಾಯಾದ್ಯರೊಳು ದುಡಿದುನಾಲ್ಕೆಂಟು ಕಡುಕ್ರೂರ | ವಾಕ್ಕುಗಳ ಸಹಿಸುತ್ತಪ್ರಾಕ್ಕು ಕರ್ಮದ ಫಲವ | ಮುಕ್ಕಲೇಬೇಕೆಂಬ ವಾಕ್ಕುಗಳ ಮನ್ನಿಸುತಲಿ ||ನೂಕುತಿರೆ ಕೆಲಕಾಲ | ತೋಕಗಾಯ್ತುಪನಯನಕಾಕು ಮಾತುಗಳಾಡಿ | ನೂಕಲೂ ಗೃಹದಿಂದಆ ಕುಮಾರ ಧೃವನ | ನೂಕಿದಾಪರಿಯಾಯ್ತು ಎಂದೆನುತ ಹೊರ ಹೊರಡಲು 4 ಭವ ತರಣ | ಧವಣೆಯಲಿ ಕುವರಂಗೆ ವೈವಾಹ ತಾವಿರಚಿಸಿ 5 ಭಾಗವತ ವತ್ಸರ ವಸಿತ ದ್ವಿತಿಯ ತೃತಿಯ ತಿಥಿ ಹರಿ ಸ್ಮøತಿಲಿತನು ವಪ್ಪಿಸಿದಳು 6 ಭಾರತೀಶ ಪ್ರಿಯಗಭಿನ್ನಾತ್ಮನಮೊ ಗುರು ಗೋವಿಂದ ವಿಠ್ಠಲನ ದಾಸ ದಾಸಿಯರಿಗೇ ನಮೊ ಎಂಬೆನು 7
--------------
ಗುರುಗೋವಿಂದವಿಠಲರು
ತಾರಿಸಬೇಕೋ ಎನ್ನಾ|ಯಾದವ ರನ್ನಾ ಪ ತಾರಿಸಬೇಕೋ ಎನ್ನಾ | ಯಾದವ ರನ್ನಾ| ಸಾರಿದೆ ನಾನು ನಿನ್ನಾ|ಘೋರ ಭವಾಂಬುಧಿಯಾ| ಪಾರಗಾಣೆನೋ ಜೀಯಾ | ವಾರೆ ಕಂಗಳೆನ್ನಾ ನೋಡಿ| ದಯಮಾಡಿ ಒಡಮೂಡಿ ಅಭಯವ ನೀಡಿ1 ತಾನಾರೆಂಬುದು ನೋಡದೇ ತನುವಿನೊಳು| ನಾ ನನ್ನದೆಂದು ಪಾಡಿದೇ| ಶ್ರೀನಾಥ ನಿನ್ನ ನಾಮಾ|ನೆನೆಯದೆ ಮನದೊಳೊಮ್ಮಾ| ನಾನಾ ವಿಷಯದೊಳು ಬೆರೆದು|ಮೈಮುರಿದು| ಹಿತಜರಿದು ಕೆಡುವಾದೇನರಿದು 2 ಶರಣರಾ ಸಂಗದೋರಿಸಿ|ಸ್ವರೂಪವಾ| ಮರೆದ ವಿಭ್ರಮ ಹಾರಿಸೀ| ಗುರುಮೂರ್ತಿ ಪ್ರಭು|ಅರಹು ನೀಡೋ ಭಕ್ತಿಯಾ| ಸುರಸಾ ಸಾರಾಯದ|ಸುಖನುಂಬೆ|ಬಲಗೊಂಬೆ| ನಮೋಯೆಂಬೆ ಎನ್ನಿಂಬ ಬಿಂಬವೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಾರೆ ಆರುತಿ ಸಾರಸಾಂಬಕಿ ಭಾರತೀವರಗೆ ಬೆಳಗುವೆನು ಪ ನರಸಿಂಹಾರ್ಯ ಶೇವಿತಗೆ ಅ.ಪ ನೂರುಯೋಜನ ವಾರಿನಿಧಿಯನು ಹಾರಿ ಜಾನಕಿಗೆ ಚಾರು ಮುದ್ರಿಕೆಯನಿತ್ತು ಪುರದಿಭಯ ತೋರಿರಾಕ್ಷಸಗೆ ನಾರಿಮಣಿಯ ಶುಭವಾರುತಿಯ ರಘುವೀರಗರುಹಿದ ಮಾರುತಾತ್ಮಜಗೆ 1 ಇಂದು ಕುಲದಲಿ ಬಂದು ಕುಂತಿಯ ಕಂದನೆಂದೆನಿಸಿ ನಿಂದು ರಣದಿ ಖಳವೃಂದ ಸಹಿತ ಕುರುವೃಂದವನು ಮಥಿಸಿ ಛಂದದಲಿ ಪಡೆದಂಥ ಭೀಮಗೆ 2 ಭೂತಳದಿ ಸುಖತೀರ್ಥರೆನಿಸಿ ಸಚ್ಛಾಸ್ತ್ರವನು ರಚಿಸಿ ಭೀತಿ ಪುಟ್ಟಿಸುತ ಖ್ಯಾತಮಾಯ್ಗಳ ವ್ರಾತವನು ಜಯಿಸಿ ಪೂತ ಕಾರ್ಪರ ಕ್ಷೇತ್ರ ನರ ಮೃಗನಾಥನ ಪರಮಪ್ರೀತಿ ಪಾತ್ರನಿಗೆ 3
--------------
ಕಾರ್ಪರ ನರಹರಿದಾಸರು
ತಾಳು ತಾಳೆಲೊ ಕೋಪ ಜಾಲಮಾಡದೆ ಭೂಪ ಕೇಳಿಕೊಂಬೆನು ನಿನ್ನ ಕಾಲಪಿಡಿವೆನೊ ಪ. ಫಾಲಲೋಚನನುತ ಶ್ರೀಲೋಲ ನಿನ್ನನೇ ಕೇಳಿಕೊಂಬೆನು ಮಾತಕೇಳೋ ಕಾಳುಮಾಡದೆ ಮಾತ 1 ದುರುಳತನದಲಿ ನಿನ್ನ ತೆರೆದಕಣ್ಣಳನೆಂದು ಜರಿದು ಪೇಳಿದೆನೋ ತಿರುಗಿ ನಾ ನಿನ್ನ ಗಿರಿಯ ಬೆನ್ನೊಳು ಪೊತ್ತು ಮೆರೆಯುವ ದಡ್ಡನೆಂದೊರೆದ ಕಾರಣದಿಂದ 2 ಕೋರೆಯೊಳ್ ಕೊರೆದು ಕೊನ್ನಾರಿಗೆಡ್ಡೆಯ ತಿಂದು ಳೀರಡಿ ಮಾಡಿದೆ ಘೋರವಿಕ್ರಮನೆಂದು ದೂರಿದೆನದರಿಂದ3 ಹೆತ್ತತಾಯಿಯ ಕೊಂದು ಮತ್ತೆ ಕಪಿಗಳ ಕೂಡಿ ಚಿತ್ತವಸೆರೆಗೈದ ಮತ್ತನೆಂದೆನಲಾಗಿ 4 ಉತ್ತಮಸತಿಯರ ಚಿತ್ತವ ಕಲಕಿದ ಮತ್ತನೆಂದಾಡಿದೆನೋ ಮತ್ತೆ ಕುದುರೆಯನೇರಿ ಕತ್ತಿಯ ಪಿಡಿದೆತ್ತಿ ಸುತ್ತುವನಿವನುನ್ಮತ್ತನೆಂದುದರಿಂದ 5 ಪಿತ್ತವು ತಲೆಗೇರಿ ಮತ್ತೆ ಮತ್ತೆ ನಾನಿನ್ನ ಒತ್ತೊತ್ತಿಜರಿದೆನೊ ಚಿತ್ತಜಪಿತನೆ ಮತ್ತೊಮ್ಮೆ ಬೇಡುವೆ ಗತಿನೀನೆ ನಮಗೆಂದು ಪತಿಕರಿಸೆನ್ನಪರಾಧವ ಮನ್ನಿಸಿ 6 ಕಂದನಿವಗೈದ ಕುಂದುಗಳೆಣಿಸದೆ ತಂದೆ ಸಲಹಯ್ಯ ಶ್ರೀ ಶೇಷಗಿರಿವರ 7
--------------
ನಂಜನಗೂಡು ತಿರುಮಲಾಂಬಾ
ತಿರುಪತಿ ಶೇಷಾದ್ರಿವಾಸ ಶ್ರೀನಿವಾಸ ಪ ಶೇಷಾದ್ರಿವಾಸ ವಾಸುಕಿಶಯನನೆ ಕೇಶಿಸಂಹಾರಕನೆ ಕ್ಲೇಶಭವದೂರನೆ ಅ.ಪ ಭಾಭರಣನೇ ಕರುಣಾಸಾಗರನೆ 1 ಪಾಂಡವಪಕ್ಷ ಶ್ರೀನಿವಾಸ ದೈತ್ಯಕುಲಶಿಕ್ಷ ಯಾದವರಕ್ಷ ಯದುಕುಲಪಕ್ಷನೆ ಸಜ್ಜನ ರಕ್ಷನೆ ಕರುಣಾಕಟಾಕ್ಷನೆ 2 ಭವಭಯಭಂಗ ಶ್ರೀನಿವಾಸ ಕರುಣಾಪಾಂಗ ಗರುಡತುರಂಗನೆ ನೀಲಮೇಘಾಂಗನೆ ಸುಗ್ರೀವಸಂಗನೆ ವಾಲಿ ವಿಭಂಗನೆ 3 ಕ್ಷೀರಾಬ್ಧಿಯಿಂದ ನಾರಾಯಣ ಭರದಿ ತಾ ಬಂದ ಕಮಲದೊಳಗೆ ಬಂದ ರಮಣೀಸಹಿತ ತಾ ನಿಂದ ಭಕ್ತರ ಪೊರೆಯುತ ನಿಂದ ಗೋವಿಂದ 4 ಗರುಡವಾಹನನೆ ಶ್ರೀನಿವಾಸ ಪರಮಪಾವನನೆ ಪಂಕಜನಯನನೆ ಪದ್ಮಿನೀ ಅರಸನೆ ಶ್ರೀನಿವಾಸನೆ ಎನ್ನ ರಕ್ಷಿಸೊ ನೀನು 5
--------------
ಯದುಗಿರಿಯಮ್ಮ
ತಿರುಮಣಿ ಧರಿಸಿದ ತೀರ್ಥರ ಕಂಡರೆ ತಿರುವಡಿಗಳಿಗೇ ಮಣಿಯುವುದು ಪ ಗುರುತರ ಶ್ರೀಪಾದತೀರ್ಥಸೇವನ ದುರಿತ ಹರವು ತಾ ಪಾವನವು ಅ.ಪ ದೇವರ ಕಡೆಯವರಿವರೆಂದೆನ್ನುತ ಕಾವನ ಕತೆಗಳ ಕೇಳುವುದು ಭಾವಿಸಿ ಭಾಗವತರ ಸಹವಾಸವು ಶ್ರೀವರನೊಲಿಯುವ ಕಾರಣವು1 ಇವರ ದರ್ಶನವು ಪುಣ್ಯಪ್ರದವು ಪವಿತ್ರರಿರುವೆಡೆ ವೈಕುಂಠ ಭುವಿಸುರಪೂಜನ ಹರಿಗಾನಂದವು ಸುವಿಮಲ ಚರಿತರು ಶುಭಕರರು 2 ಶಂಖ ಚಕ್ರಗಳ ಭುಜದಲಿ ಧರಿಸಿ ಪಂಕಜ ತುಳಸೀಮಣಿ ಕೊರಳೊಳ್ ವೇಂಕಟ ಶ್ರೀರಂಗ ವರದ ನಾರಾಯಣ ಕಿಂಕರರೈ ಜಾಜೀಶನಿಗೆ 3
--------------
ಶಾಮಶರ್ಮರು
ತಿರುಮಲೇಶನೆ ನಿನ್ನ ಚರಣ ಪಂಕಜಯುಗಲ ನೆರೆನಂಬಿದವ ಧನ್ಯನೋ ಪ ಗುರು ಮೂಲ ಪುರುಷ ನಾರಪ್ಪಯ್ಯ ಮುನಿಗೊಲಿದು ಕುರಿಕಿಹಳ್ಳಿಯಲಿ ಬಂದಾ ನಿಂದಾ ಅ.ಪ ವರಋಷಿಯ ಪೂರ್ವದಲಿ ತಿರುಪತಿಯ ಮುಟ್ಟಿ ಮಲ- ಗಿರಲು ಸ್ವಪ್ನವ ಕಾಣುತ ತುರುರೂಪದಲಿ ನಾನೆ ಬರುವೆ ಕಾ- ರ್ಪರ ವನಕೆ ದರುಶನವÀÀ ಕೊಡುವೆ ನಿರುತ ಬರುತ ಬರುತಲಿ ವಿಪ್ರ ತಿರುಗಿ ನೋಡಲು ಪದದಿ ಕಿರುಗಜ್ಜೆಗಳ ನುಡಿಸುತಾ ಕುರಿಕಿ ಹಳ್ಳಿಯ ಸುಮಂದಿರನೆನಿಸಿ ಸಿರಿಸಹಿತ ವರಶಿಲೆಯ ಮೇಲೆ ಪಾ ಲ್ಗರಿದು ನೆಲೆಸಿರುವಂಥ 1 ತೋಂಡಮಾನಕ್ಷಿತಿಪ ಪುಂಡಲೀಕಾದಿ ಬಹು ತೋಂಡರಿಗೆ ಒಲಿದು ದೇವಾ ಕುಂಡಲಿ ಪರ್ವತದಿ ತಂಡತಂಡದಿ ಭಕುತ ಮಂಡಲಿಗೆ ಫಲವ ಕೊಡುವ ದುಂಡುಮುತ್ತಿನಹಾರ ಮುಕುಟ ರತ್ನಾಭರಣ ಮಂಡಿತನಾಗಿ ಮೆರೆವ ಕಂಡೆನಾನಿಮ್ಮ ಪದ ಪುಂಡಲೀಕವನು ಈ ಗುಂಡಿನಾ ತಿಮ್ಮಯ್ಯನೆಂದು ಕರೆಸಿಕೊಳುವಿ 2 ಕರಮುಗಿವೆ ಮನ್ಮನದಿ ಕರುಣದಲಿ ತೋರೋತವ ಪರಮ ಸುಂದರ ಚರಣವ ನಿರುತ ಸ್ಮರಿಸುವ ಜನರ ದುರಿತ ತಿಮಿರಕೆ ದಿವಾ ಕರನೆನಿಸಿ ಸುಖವಗರಿವಾ ಸೇವ್ಯ ಕಾರ್ಪರನಿಲಯನೆನಿಸೆ ಬಹು ಶರಣು ಜನರನು ಪೊರಿಯುವಾ ವರಕೃಷ್ಣ ಗರ್ಭದಲಿ ಒಪ್ಪುವ ಪಿಪ್ಪಲಸ್ಥಶ್ರೀ ನರಹರಿಯ ಬಳಿಯಲಿರುವಾಮೆರೆವಾ 3
--------------
ಕಾರ್ಪರ ನರಹರಿದಾಸರು
ತಿಳಿದು ಕೊಳ್ಳಿರಿ ಜಾಣರೆಲ್ಲಾ ಅಹಂ ಅಳಿದು ನಿಂತಿರುವಂತ ಸತ್ಯಾತ್ಮ ಬಲ್ಲಾ ಪ ಆದ್ಯಂತ ವಿಸ್ತಾರಮೆಲ್ಲಾ ಇದನು ಕೇ ಳೀದರ್ಜುನÀಗೇಳಿದ ಕಳ್ಳಗೊಲ್ಲ ಅ.ಪ ಎಂಟಾರುಗಳ ನೀನು ಕಂಡೂ ಅಲ್ಲಿ ಟಂಟಣಿಸುವದೇನನುಭವದಿ ನೀನುಂಡೂ ತುಂಟರೈವರಕಡೆಗೊಂಡು ಜ್ಞಾನ ಮಂಟಪದೊಳಗೆ ಆಡುವ ಬಾರೊ ಚೆಂಡೂ 1 ನಾರದಾದಿಗಳೆಲ್ಲ ಬಂದೂ ಆಹ ಮೀರಿದ ಶ್ರೀರಂಗಧಾಮನೊಳು ನಿಂದೂ ಸಾರಿದರು ನಿಜನಾಮವೆಂದೂ ಇದನು ಯಾರಾದರು ಭಜಿಸಿ ಗೋಪ್ಯದೊಳಗೆಂದು 2 ಪರದೊಳಗೆ ನೀ ಬೆರೆದಾಡೊ ಸತ್ಯ ಶರಣರಿಗೊಲಿವ ಹರಿಯಹುದಿದು ನೋಡೋ ನರಹರಿ ಭಜನೆಯ ಮಾಡು ನನ್ನ ಗುರುವೆ ತುಲಸಿ ನಿನ್ನೊಳಿಹುದೈನೆ ನೋಡೋ 3
--------------
ಚನ್ನಪಟ್ಟಣದ ಅಹೋಬಲದಾಸರು
ತಿಳಿಯದು ಅಟಾ ಶ್ರೀಹರಿ ನಿನ್ನಾ| ನಳಿನ ಸಂಭವ ಮೊದಲಾದ ನಿರ್ಜರರಿಗೆ ಪ ಮೊತ್ತವೆನಿಪ ಕ್ಷೀರ ಸಾಗರ ಮಧ್ಯಲಿ| ಉತ್ತಂಗವಾದ ಶೇಷನ ಮಂಚದ ಮ್ಯಾಲೆ| ಸುತ್ತಸನಕಾದಿ ಭಾಗವತರ ಸಂಗ| ನಿತ್ಯವೆರಸಿ ಕ್ರೀಡಿಸುವದ ಬಿಟ್ಟು| ಮತ್ತೆ ವನದೊಳಾಡುವರೇ ತೃಣಗಳ| ಕಿತ್ತಿ ಹಾಸಿಕೆ ಮಾಡುವರೇ ಕಪಿಸಂಗ ಅತ್ಯಂತ ದಲ್ಹಿಡುರೇ ಕುಬ್ಸಿಯಾ| ವತ್ತಿನೀ ಅಳುವರೇ1 ಗಂಭೀರವಾದ ಸುರವರದಿಂದ ನಾರದ| ತುಂಬುರ ಮಾಳ ಗೀತವ ಕೈಕೊಂಡು| ಕೌಸ್ತುಭ ಮಾಲೆಯ ಹಾಕಿ| ವಾಹನ ಬಿಟ್ಟು| ಕೊಂಬು ಕೊಳನ ನೂದುರೇ ಗುಂಜಿಯಾ ವಣಿ ಬಿಂಬಸರವ ಹಾಕುತೀ ಕಲಿಯಾದಾ| ಕಂಬಳಿ ಯನುರೆ ಪೊದ್ದು ವಸ್ತ್ರದಿ ಮರ| ಸಂಭ್ರಮ ವೇಸರೇ 2 ಸುಜನ ಸಮರ್ಪಿಪ ಊಟವ| ದಯದಿಂದ ಕೈಕೊಂಡು ತೃಪ್ತನಾಗಿ| ಶ್ರೀಯಾ ಕುಚ ಕೊಡಮ್ಯಾಲ ಕರವನಿಟ್ಟು| ಜಯವಿಜಯ ವೆಂಬದ್ವಾರ ಪಾಲರಿರೆ| ಗೋವಲ್ಲರೆಂಜಲ ತಿಂಬುದೇ ಸರಗಹಗ| ಕೈಯ್ಯಲಿಂದ ತೊಳೆವರೇ ಮುದದಿ| ಬಲಿಯ ಬಾಗಿಲ ಕಾವುರೇ ಮಹಿಪತಿ ನಂದನ ಜೀವನ-ನೋ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಿಳಿಯದೋ ನಿನ್ನಾಟ ತಿರುಪತಿಯ ವೆಂಕಟ ಪ ಪೊಳೆವ ನೀರೊಳು ಗೆಲುವ ಮೋರೆಯನೆಲವ ನೋಡುವ ಸುಳಿವ ಕಂಬದಿ |ಇಳೆಯನಳೆಯುವ ಭಳಿರೆ ಭಾರ್ಗವ ಖಳನ ಛೇದಿಸಿ ಕೊಳಲ ಧ್ವನಿಗೆ ||ನಳಿನಮುಖಿಯರ ನಾಚಿಸುವ ಬಲು ಹಯದಳದ ಬಹು ಹವಣಿಗಾರನೆ ಅ .ಪ. ಬೊಮ್ಮ ಭಾರ ಬೆನ್ನಿಲಿಕೋರೆ ದಾಡೆಯ ನಾರಸಿಂಹನೆ |ಧರೆಯ ಬೇಡಿದ ಧೀರ ಪುರುಷನೆವಾರಿ ಬಂಧನ ಮಾರಜನಕನೆ ||ನಾರಿಯರ ವ್ರತವಳಿದು ಕುದುರೆಯನೇರಿ ಮೆರೆಯುವ ಸುಂದರಾಂಗನೆ 1 ಅಖಿಳ ಭೂಮಿಯ ತಂದ ನರಹರಿ |ಯುಕುತಿಯಲಿ ನೆಲನಳೆದ ಭಾರ್ಗವಮುಕುತಿಗೋಸುಗ ಫಲವ ಸವಿದನೆ ||ರುಕುಮನನುಜೆಯ ರಮಣ ಬೌದ್ಧನೆಲಕುಮಿ ರಮಣನೆ ಕಲ್ಕಿರೂಪಿಯೆ 2 ಬನ್ನ ಬಡುಕನೆ ||ಹೆಣ್ಣುಗಳ ವ್ರತ ಕೆಡಿಸಿ ತೇಜಿಯಬೆನ್ನನೇರಿದ ವ್ಯಾಸ ವಿಠ್ಠಲ* 3
--------------
ವ್ಯಾಸವಿಠ್ಠಲರು
ತಿಳಿಯಲೋ ರನ್ನಾ ನಿನ್ನೊಳು ನಿನ್ನ ಪ ಅನ್ನವ ನೀಡು ತುಪ್ಪವ ಕೊಡುಚೆನ್ನಾಗಿ ಉಣ್ಣುವವನಾರೋ ಅವನಾರೋ 1 ಹೋಳಿಗೆ ಹಿಸುಕಿ ಹಾಲೊಳು ಕುಸುಕಿಹೋಳಿಗೆ ಉಂಬವನ್ಹೆಸರೇನೋ ಹೆಸರೇನೋ2 ಜಡಕೆಯು ಇಲ್ಲಾ ಇದೆಲ್ಲಾಮೃಢ ಚಿದಾನಂದ ನೀನೆನ್ನು ನೀನೆನ್ನು 3
--------------
ಚಿದಾನಂದ ಅವಧೂತರು
ತಿಳಿಯಿರೋ ಸಮ್ಮಿಂದ ಹೇಳುವೆ ಸುಧಾನಂದ ಪ ಉಂಬವ ತಾನಾರು ಉಣಬಲ್ಲವನಾರುಸಂಭವಿಸುವನಾರು ಸಮನಿಸಿ ಇಂಬಾಗಿಹನಾರು 1 ಕಣ್ಣಿಂದಲೆ ನೋಡಿ ನೋಡುವ ಕಣ್ಣು ಕಾಂಬುದೆ ಖೋಡಿಕಣ್ಣೊಳಗದೆ ನೋಡಿ ಕಂಡಾ ಕಣ್ಣಹುದೆಂದಾಡಿ 2 ಕಿವಿಯಿಂದಲೆ ಕೇಳಿ ಕಿವಿಯನು ಕಿವಿಯೆ ಗಯ್ಯಾಳಿಕಿವಿಯೆ ದಿವಾಳಿ ಕಿವಿಗಾ ಕಿವಿಗರಿವಹುದ್ದೇಳಿ 3 ನಾಲಗೆ ನುಡಿಯಿರಲಿ ನುಡಿವುದೆ ನಾಲಗೆ ಬರಿ ತೊಗಲುನಾಲಗೆಯೊಳಗಿರಲು ಮೂಲದ ನಾಲಗೆಯಲಿ ಬರಲು 4 ಮೂಗಿನ ಮೂಲಕ ಪ್ರಾಣ ಅರಿವಡೆ ಮೂಗು ಬಲ್ಲುದೆ ಕೋಣಮೂಗರಿದವ ಜಾಣ ಮೂಗದು ನಿರ್ವಾಣ5 ತನುವಿನ ಒಳಗಿರ್ದು ಚೇತನ ಜನಿಸುತಲಿರುತಿರ್ದುಇನಿತಾದಲಿರ್ದು ಬೆಳಗುವ ತಾನೆ ತಾನಿರ್ದು 6 ರೂಪಕೆ ವಿರಹಿತನೆ ತೋರ್ಪಾ ರೂಪವೇ ತಾನಿಹನಾಲೇಪಕೆ ದೂರಿಹನಾ ಚಿದಾನಂದಪತಿ ಗುರುವವನಾ7
--------------
ಚಿದಾನಂದ ಅವಧೂತರು