ಒಟ್ಟು 1590 ಕಡೆಗಳಲ್ಲಿ , 104 ದಾಸರು , 1254 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮೃಡ ಫಣೀಂದ್ರವೀಂದ್ರ ವಂದ್ಯ ಕಡಲಶಯನ ಶ್ರೀನಿವಾಸ ಒಡೆಯನಾಜ್ಞೆಯಿಂದಲೆನಗೆ ಪ. ಜೀವಗಣಪತೆ ಸರ್ವದೇವತಾಗತೆ ಪಾವನಾತ್ಮ ಪದ್ಮ ಸಮಕರಾವಲಂಬಿತ್ತು ಬೇಗ 1 ಮೂರು ತಾಪವಾ ಹತ್ರ ಸೇರದಂದದಿ ಅದರ ಬೇರ ಕಡಿದು ಭಕ್ತಿಸಾರ ಧಾರದಿಂದ ದೃಢವ ಮಾಡಿ 2 ಕೈಟಭಾರಿಯ ಪುರದ ಭಾಟದಾರಿಯ ಬೇಟ ಜಲಟ ಕುಕ್ಕುಟಗಳ ನೋಟಾಪಾಟದೊಡನೆ ತೋರಿ 3 ಹರಿಯ ದೊರೆತನ ಕರುಣಿಕಾಗ್ರಣಿ ಕಮಲ ಕರವ ಎನ್ನ ಶಿರದೊಳಿಕ್ಕಿ 4 ನಿನ್ನ ಕರುಣವು ನಿಯತವಾಗಲು ಪನ್ನಗಾಚಲೇಂದ್ರ ದಯದಿ ತನ್ನ ದಾಸನೆಂದು ಕಾವ 5
--------------
ತುಪಾಕಿ ವೆಂಕಟರಮಣಾಚಾರ್ಯ
ಮೃತ್ಯುಂಜಯನೇ ಶರಣು ಶಂಕರನೆ ಶರಣು ಶರಣು ಪ ವಾಸವೇ ಕೈಲಾಸ ವಸನವೇ ದಿಕ್ಕುಗಳು ಪೂಸಿಹುದು ಸರ್ವಾಂಗವೆಲ್ಲ ಭಸ್ಮ ನೇಸರಿನ ತೇಜ ಶಶಿಜೂಟ ಗಂಗಾಧರನ ಪಾಸಟಿಯು ನಿನಗೊಬ್ಬರಿಲ್ಲ ಗೌರೀಶ 1 ಪಂಚ ವಿಂಶತಿ ತತ್ವದೂರ ವಿಶ್ವಾಧಾರ ಪಂಚ ಶರಹರ ವಿರಂಚ್ಯಾದಿ ಸಂಸ್ತುತಾ ನಿತ್ಯ ಪ್ರ ಪಂಚ ಮಯನಾದ ಗಿರಿಜೇಶ ವಿಶ್ವೇಶ 2 ಪರಮ ಪುರುಷ ಪರೇಶ ಪರಮ ಗುಣಗಣ ನಿಲಯ ಶರಣ ಜನ ಸುರಧೇನು ವಿಶ್ವವಂದ್ಯಾ ಭವ ಪೂಜ್ಯಸೂರ್ಯ ಕೋಟಿಪ್ರಕಾಶ ಉರಗ ಭೂಷಣ ವೃಷಭಾರೂಢ ಗೌರೀಶ 3 ಭೂತಪತಿ ಭುವನೇಶ ಪ್ರೇತ ನಿಲಯ ನಿವಾಸ ನೂತನದ ಗಜಚರ್ಮ ನಿನಗೆ ವಿಖ್ಯಾತ ಗೀತ ನೃತ್ಯ ವಿಲಾಸ ಮಾತುಳಾಧ್ವರನಾಶ ಭಾತಿ ಕಂಠದಿ ವಿಷವು ಗೌರೀಶ 4 ಧರೆಯೊಳಧಿಕತರ ವರದ ಮೂಲನಿವಾಸ ಕರಿವದನ ನಂದೀಶ ಶಕ್ತಿ ಉಮೆ ಸಹಿತ ಭರದಿಂದ ನೆಲಸಿ ಸೊಪ್ಪಿನ ಸುಬ್ಬಗೆವರವಿತ್ತೆ ದುರಿತವನು ಪರಿಹರಿಸೋ ಶಂಭುಲಿಂಗೇಶ 5
--------------
ಕವಿ ಪರಮದೇವದಾಸರು
ಮೆಚ್ಚಿದೆ ಯಾಕಮ್ಮ ಲಕ್ಕುಮಿದೇವಿ ಸಚ್ಚಿದಾನಂದಾತ್ಮ ಹರಿಯೆಂದರಿಯದಲೆ ಪ ರಕ್ಕಸಾಂತಕ ಹರಿಗೆ ಸೊಗಸಿನ ತಕ್ಕ ವಾಹನವಿಲ್ಲದಿದ್ದೊಡೆ ಹಕ್ಕಿಯ ಹೆಗಲೇರಿ ತಿರುಗುವ ಚಿಕ್ಕ ಬುದ್ಧಿಯ ಚಲುವ ಕೃಷ್ಣಗೆಅ.ಪ ನೀರೊಳು ಮುಳುಗಿ ಭಾರವಪೊತ್ತು ಧರಣಿಯ ಕೋರೆದಾಡೆಲಿ ತಂದ ಕ್ರೂರ ರೂಪನಿಗೆ ಮೂರಡಿ ಭೂಮಿಯ ಬೇಡಿ ಕ್ಷಿತಿಪರ ಕೊಂದು ನಾರು ವಸ್ತ್ರಗಳುಟ್ಟು ಸೀರೆ ಕದ್ದವಗೆ ಶೂರತನದಲಿ ತ್ರಿಪುರರಗೆದ್ದು ವಿ- ಹಾರ ಮಾಡ್ಡ ಏರ್ದ ಕುದುರೆಯ ಮಾರಪಿತ ಮಧುಸೂಧನನ ವ್ಯಾ- ಪಾರ ತಿಳಿಯದೆ ವಾರಿಜಾಕ್ಷಿ 1 ಹಾಸಿಕಿಲ್ಲದೆ ಹಾವಿನ ಮೇಲೆ ಮಲಗುವ ಹೇಸಿಕಿಲ್ಲದೆ ಎಂಜಲ್ಹಣ್ಣನೆ ಮೆಲುವ ದೋಷಕಂಜದೆ ಮಾವನ ಕೊಂದು ಮಧುರೆಲಿ ದಾಸಿ ಕುಬ್ಜೆಯ ಡೊಂಕು ತಿದ್ದಿ ಪರಿಮಳ ಪೂಸಿ ಸೋಸಿನಿಂದಲಿ ಕರಡಿ ಮಗಳನು ಯೋಚಿಸದೆ ಕೈಪಿಡಿದು ಸೌಳ- ಸಾಸಿರದ ಸತಿಯರನು ಕೂಡಿದ ವಾಸುದೇವನ ಮೋಸವರಿಯದೆ 2 ಮೋಸದಿಂದಲಿ ಬಂದು ಶಿಶುವನೆತ್ತಿದ ದೈತ್ಯ ದಾಸಿಯ ಕೊಂದ ಉದಾಸೀನದಿಂದ ಗ್ರಾಸಕಿಲ್ಲದೆ ಗೋಪೇರ ಮನೆಗಳ ಪೊಕ್ಕು ಮೀಸಲು ಬೆಣ್ಣೆ ಪಾಲ್ಮೊಸರನೆ ಸವಿದು ರಾಸಕ್ರೀಡೆಯ ವನಿತೆಯರ ಮನ ದಾಸೆ ಪೂರೈಸಿ ರಾತ್ರಿ ವೇಳದಿ ವಾಸುದೇವನು ಓರ್ವ ಸತಿಯೊಳು ಕ್ಲೇಶಪಡಿಸದೆ ಮೋಸವರಿಯದೆ3 ಅಖಿಳ ಮಹಿಮನೆನೆ ಊಳಿಗ ಮಾಡಬಹುದೆ ಚಂಡನಾಡುವ ನೆವದಿಂದ ಕಾಳಿಂಗನ ಮಂಡೆಯ ತುಳಿದು ನಾಟ್ಯವನಾಡಬಹುದೆ ಗಂಡುಗಲಿ ಅರ್ಜುನನು ರಥಕೆ ಬಂಡಿಬೋವನ ಮಾಡಬಹುದೆ ಪುಂಡಲೀಕನು ಇಟ್ಟೆಗೆಯ ಮೇ- ಲ್ಪಾಂಡುರಂಗ ನಿಲಿಸಬಹುದೆ4 ಕಮಲಾಕ್ಷ ಯಾಗಶಾಲೆಗೆ ಗೋಪರನು ಕಳುಹಿ ರಮೆಯರಸಗೆ ಬಹಳ್ಹಸಿವೆನುತಿರಲು ಕಮಲಾಕ್ಷನ ನುಡಿ ಗಮನಿಸದೆ ರುಷಿವರರಿಗೆ ಕಮಲ ಮುಖಿಯರೆಲ್ಲ ಪರಮ ಸಂಭ್ರಮದಿಂದ ಕಮಲನೇತ್ರಗೆ ವಿವಿಧ ಭಕ್ಷಗ- ಘೃತ ಪರಮಾನ್ನಗಳನು ಕಮಲನಾಭ ವಿಠ್ಠಲಗೆ ಅರ್ಪಿಸಿ ಶ್ರಮವ ಕಳೆದೈದಿದರು ಮುಕ್ತಿಯ 5 ಯಾಕೆ ಮೆಚ್ಚಿದೆಯಮ್ಮ ಲೋಕ ಸುಂದರಿಯೆಶ್ರೀ ಕಮಲಜಪಿತ ಲೋಕ ಮೋಹಕನ
--------------
ನಿಡಗುರುಕಿ ಜೀವೂಬಾಯಿ
ಮೇಲುಕೋಟೆ ಯದುಗಿರಿವಾಸ ನಾರಾಯಣ ಯದುಗಿರಿವಾಸ ಪ ಯದುಗಿರಿವಾಸನೆ ಬುಧಜನಪೋಷನೆ ಮದಮುಖಶಿಕ್ಷನೆ ಪದುಮದಳಾಕ್ಷನೆ ಅ.ಪ ವೇದವ ತಂದು ಅಜನಿಗಿತ್ತು ಭಾರವ ಪೊತ್ತು ಕೃತಯುಗದೊಳಗೆ ವೇದಾದ್ರಿಯೆಂದೆನಿಸಿದೆ ಚತುರ್ಮುಖನಲಿ ಪೂಜೆ ಗ್ರಹಿಸಿದ ನಾರಾಯಣ 1 ನಿಗಮವ ತಂದು ಮನುವಿಗಿತ್ತು ಕಂಬದಿಂ ಬಂದು ತ್ರೇತಾಯುಗದಲ್ಲಿ ನಾರಾಯಣಗಿರಿಯೆನಿಸಿದೆ ಸನಕಾದಿಗಳ ಪೂಜೆ ಗ್ರಹಿಸಿದ ನಾರಾಯಣ 2 ದಾನವ ಬೇಡಿ ಕ್ಷತ್ರಿಯರ ಕುಲವನೀಡಾಡಿ ದ್ವಾಪರಯುಗದಲ್ಲಿ ಯದುಗಿರಿಯೆನಿಸಿದೆ ರಾಮ ಕೃಷ್ಣರ ಪೂಜೆ ಗ್ರಹಿಸಿದ ನಾರಾಯಣ 3 ಜಾನಕಿಯ ತಂದು ಅತಿದುರುಳ ಕಂಸನ ಕೊಂದು ಕಲಿಯುಗದೊಳಗೆ ಶ್ರೀ ಯತಿಶೈಲವೆನಿಸಿದೆ ಯತಿರಾಜರಿಗೆ ಒಲಿದ ಪತಿತಪಾವನ ಸ್ವಾಮಿ 4 ಹಯವನುಹತ್ತಿ ನಾರಯಣ ದುಷ್ಟಕಲಿಯ ನೀನೊತ್ತಿ ಸಪ್ತದ್ವೀಪವನೆಲ್ಲ ಸುತ್ತಿ ಬಂದೆಯೊ ಎನ್ನಪ್ಪ ನಿನ್ನೆಣೆಕಾಣೆ ಕಂದರ್ಪನಪಿತ ಚೆಲ್ವಯದುಗಿರಿವಾಸ 5
--------------
ಯದುಗಿರಿಯಮ್ಮ
ಮೊದಲೆ ಪಾಲಿಸೆನ್ನ ಮೊದಲಗಟ್ಟಿ ಹನುಮನೆ ಮುದದಿ ಜಾನಕಿಗೆ ಮುದ್ರೆಯಿಟ್ಟ ವಾನರನೆ ಪ ದಶರಥಾತ್ಮಜನ ಬಳಿಗೆ ವಾರಿಧಿನ್ಹಾರಿ ವಸುಧೆ ಕುಶಲವಾರ್ತೆ ತಂದಸುರನ ದಶಶಿರಗಳ ಧ್ವಂಸಮಾಡಿದ 1 ದುರುಳ ದುರ್ಯೋಧನರ ಭಾರತೀಶ ಭಾಳ ದಯವನಿಟ್ಟು 2 ವಂದಿಸುವೆನು ಶ್ರೀಮದಾನಂದತೀರ್ಥರಾಗಿ ನಂದನ ಕಂದ ಭೀಮೇಶ ಕೃಷ್ಣನರವಿಂದ ಪಾದಕ್ವಂದಿಸುವನೆ 3
--------------
ಹರಪನಹಳ್ಳಿಭೀಮವ್ವ
ಮೋದ ವಿಠಲ | ಪೊರೆ ಇವಳಾ ಪ ದಾನವಾಂತಕ ಕೃಷ್ಣ | ದೀನರುದ್ಧಾರೀ ಅ.ಪ. ದುರಿತಗಳ ಅಟ್ಟಳಿಯ | ಪರಿಹರಿಸಿ ಸಲಹಯ್ಯಕರುಣಾಳು ನರಹರಿಯೆ | ಮರು ತಂತರಾತ್ಮಶರಣಜನ ವತ್ಸಲನೆ | ಅರಿಗಳನೆ ಪರಿಹರಿಸಿಪೊರೆಯ ಬೇಕೀ ಶಿಶುವೆ | ಕಾರುಣ್ಯ ನಿಧಿಯೇ 1 ಪತಿ ಪ್ರಿಯ ಹರಿಯೆಹದ್ದುವಾಹನದೇವ | ಮಧ್ವಾಂತರಾತ್ಮ 2 ಭಾವಶುದ್ದದಿ ನಾಮ | ಓವಿಭಜಿಸುವಂಥಭಾವಭಕ್ತಿಯನಿತ್ತು | ಕಾಯೊ ಶ್ರೀ ಹರಿಯೇಶ್ರೀ ವರನೆ ಸರ್ವತ್ರ | ತವಸ್ಮರಣೆ ಇತ್ತಿವಳನೀವೊಲಿಯ ಬೇಕಯ್ಯ | ದೇವ ಹಯವದನಾ 3 ಬೋಧ ಮೋದ ಮೋದ ನರಹರಿಯೇ 4 ಭಾರ ನಿನದಿಹುದಯ್ಯಗುರ್ವಂತರಾತ್ಮ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಮೋಸಗೊಳ್ಳದಿರು ಮನವೆ ಹೇಸಿಕೆಯಲಿ ದೋಷವನ್ನು ತಿಳಿಯದೆ ಕೀಳಾಸೆ ಕೆಲಸ ಮಡುವಿನಲ್ಲಿ ಪ. ಫುಲ್ಲ ಪದ್ಮದಂತೆ ಪೊಳೆವ ಚೆಲ್ವ ಮುಖವೆಂಬೀ ಸುರಿವ ಜೊಲ್ವಿ ಶೀಗೆಬೀಜ ಪೋಲ್ವ ಹಲ್ಲ ಸಾಲನೆಲ್ಲಿ ಮರತಿ 1 ಗೆಜ್ಜೆ ಕಾಲುಂಗುರಗಳಿಟ್ಟು ಲಜ್ಜೆ ತೋರಿ ನಗುತ ಬರಲು ಹೆಜ್ಜೆಯನ್ನೆ ನೋಳ್ಪೆ ಹೊಲಸು ಖಜ್ಜಿಯ ಕಲೆಯ ಮರೆತಿ 2 ವಿಟರ ನೋಡುತ ಘಟ ಘಟನೆ ಬರುವಾಕೆಯ ಘಟನೆ ಬಯಸಿ ದುಸ್ಸಂ- ಕಟಗೊಂಬದ್ಯಾಕೆ ಮರೆತಿ 3 ಅಕ್ಷಿಯನ್ನು ತಿರುಹುತ್ತ ಸೂಕ್ಷ್ಮ ವಸ್ತ್ರ ಸುತ್ತಿ ವೇಶ್ಯಾ ಲಕ್ಷಣವ ಕಂಡು ಶುಂಭ ಮಕ್ಷಿಕಾ ವಿಹಾರ ಬಲದಿ 4 ವರನಾರಿಯೆಂಬುದೊಂದೆ ಮರುಳು ಭಾವನೆ ಮೋಹ ಕರವಲ್ಲದೆ ಬೇರೊಂದು ಸರಸತನವಿಲ್ಲಿಂದು 5 ಈಶನಿತ್ತದುಂಡು ನಿತ್ಯ ತೋಷಗೊಳ್ಳದಹೋರಾತ್ರಿ ಘಾಸಿ ಮಾಡದಿರು ಭಾರ- ತೀಶನ ಪದವ ಸೇರು 6 ಬೇಡ ಬೇಡವಿನ್ನು ಭ್ರಾಂತಿ ಮಾಡು ಮೋಹಾಗ್ನಿಗೆ ಶಾಂತಿ ಬೇಡು ಶೇಷಾದ್ರೀಶನಡಿಯ ಕೊಡುವಾಭೀಷ್ಟ ನಮ್ಮೊಡೆಯ7
--------------
ತುಪಾಕಿ ವೆಂಕಟರಮಣಾಚಾರ್ಯ
ಮೋಹನ ಕೃಷ್ಣವಿಠಲ | ಸಲಹ ಬೇಕಿವಳಾ ಪ ದೇಹ ಮಮತೆಯ ಕಳೆದು | ವೈರಾಗ್ಯವಿತ್ತೂ ಅ.ಪ. ವನಧಿ ಉತ್ತರಿಪ | ನವಪೋತ ಹರಿಯಾ |ಸ್ತವನ ಗೈಯುವ ಭಕ್ತಿ | ಪ್ರವಹ ಕೊಟ್ಟಿವಳಿಗೆಹವಣಿಸೋ ಸಾಧನವ | ಶ್ರೀವರನೆ ಕೃಷ್ಣಾ 1 ಭಾರತೀ ಪತಿಯಾದ | ಮಾರುತದ ಮತದಲ್ಲಿಸಾರತತ್ವವ ತಿಳಿಸಿ | ತೋರೋ ಸುಜ್ಞಾನ |ಮಾರುತಾಂತಾರ್ಗತನೆ | ಧೀರ ಸುಜನರ ಸಂಘಸಾರುವಂತೆಸಗೊ ಹರಿ | ಕಾರುಣ್ಯ ಮೂರ್ತೇ 2 ಪತಿಸುತರು ಹಿತರಲ್ಲಿ | ವ್ಯಾಪ್ತ ಶ್ರೀ ಹರಿಯೆಂಬಗುಪ್ತ ಮಹಿಮೆಯ ತಿಳಿದು | ಸೇವೆ ಸಲ್ಲಿಸುತಾ |ಅತಿಶಯದ ಆನಂದ | ಗತಿಯ ಸೇರುವ ಹವಣೆಕೃತಿಪತಿಯ ತೋರೆಂದು | ಪ್ರಾರ್ಥಿಸುವೆ ಹರಿಯೇ 3 ಗುರುಕರುಣವಿಲ್ಲದಲೆ | ಹರಿಯೊಲಿಯನೆಂದೆಂಬವರತತ್ವ ಸಾರವನೆ | ಕರುಣಿಸುತ ಹರಿಯೇ |ಹರಿಗುರು ಸೇವೆಯನು | ಕರಣತ್ರಯದಲಿ ಮಾಳ್ದವರಮತಿಯ ಪಾಲಿಸುತ | ಪೊರೆಯ ಬೇಕಿವಳಾ 4 ಸೃಷ್ಠಿ ಸ್ಥಿತಿ ಲಯ ಕರ್ತ | ವಿಷ್ಣು ಲೀಲಾಮೃತವಸುಷ್ಟುಸಂತತ ಸವಿವ | ಶ್ರೇಷ್ಠ ಸಾಧನವಾಕೊಟ್ಟು ಪಾಲಿಪುದೆಂಬ | ಇಷ್ಟವನೆ ಸಲಿಸೆಂದುಕೃಷ್ಣ ಗುರು ಗೋವಿಂದ | ವಿಠಲ ಪ್ರಾರ್ಥಿಸುವೇ 5
--------------
ಗುರುಗೋವಿಂದವಿಠಲರು
ಮೋಹನಾರ್ಯನೆ ಯೆನ್ನಾ | ಪೀಡಿಸುವ ಭವಮೋಹಕಳೆವುದು ಮುನ್ನಾ | ಹರಿಯಂಘ್ರಿ ಭಜನೆಯಈಹ ಕೊಡುವುದು ಇನ್ನಾ | ಭೂಸುರವರೇಣ್ಯಾ ಪ ದೇಹ ಮಮತೆಯ ದಾಶೆಯಲಿ ಸುಖ | ವಾಹಿನಿಗಳನುಭವಿಸೆ ಬಲುದುರ್‍ದೇಹ ಪೋಷಣೆಗೈದು ಹರಿಪದ | ಈಹಿಸದೆ ಬಲುನೊಂದೆ ಭವದಲಿ ಅ.ಪ. ಜಯದಲುದಿಸುತಲಂದೂ | ತಾರುಣ್ಯವನುನಿರ್‍ಭಯದಿ ಕಳೆದಿಹೆ ಬಂಧೂ | ವಿದ್ವೇಷದೊಳಗ್ಹರಿಹಯನನುಜ ವರ್ತಿಗಳಂದೂ | ಸಲಹಿದರು ಎನ್ನಯ ಭಯ ನಿವಾರಿಸುತಂದೂ | ಕಾರುಣ್ಯ ಸಿಂಧೂ ||ಹಯಮುಖನ ಪದ ಸತ್ಸರೋಜಗಳ್ | ದ್ವಯಭಜಿಪ ಮನವಿರದೆ ವಿಷಯದಹುಯಿಲಿನಲಿ ಬೆಂಡಾಗಿ ತಾಪದ | ತ್ರಯದಿ ಬಲು ಬಳಲಿರುವೆನಯ್ಯ |ಜಯದ ಸಂವತ್ಸರವು ಮರಳಿ | ಬಯಲು ಆಗದ ಮುನ್ನ ಹರಿಪದದ್ವಯಗಳನು ಕಾಂಬಂಥ ಹದನವ | ದಯದಿ ತೋರುತ ಸಲಹೊ ಬಂಧು 1 ಕಾಮಮದ ಮಾತ್ಸರ್ಯಾ | ಅರಿಗಳನಮನನೇಮನಿಷ್ಟಯ ಚರ್ಯಾ | ಕುಂದಿಸುತ ವಿಷಯಸ್ತೋಮ ಕಳೆಯುವರಯ್ಯ | ಈ ಪರಿಯ ಪರಿಭವಸೀಮೆ ಮೀರುವ ಚರ್ಯಾ | ಪರಿಹರಿಸೊ ಜೀಯ ||ಭ್ರಾಮಕತ್ರಯ ಮಾರಿಗೆನ್ನ ಸು | ಹೋಮಿಸುವ ದುರುಳನನು ಸದೆವತಾಮರಸಭವ ಪದಕೆ ಬರುತಿಹ | ಆ ಮಹಾ ಮಾರುತ ನೊಳಿರುವ |ರಾಮ ಚಂದ್ರ ಪದಾರವಿಂದವ |ಕಾಮಿಸುತ ತನ್ಮಹಿಮೆಗಳ ಸನ್‍ನಾಮ ಕೀರ್ತನೆಗೈದು ಮೋದಿಪ | ಪ್ರೇಮಮನವಿತ್ತೆನ್ನ ಸಲಹೋ 2 ನೀರೊಳಾಡುತ ಬಂದಾ | ಬೆನ್ನಿನಲಿ ಬಹುಭಾರ ಪೊತ್ತುದೆ ಛಂದಾ | ಅವನಿಯನು ತನಕೋರೆದಾಡೆಗಳಿಂದಾ | ತರಳನನು ಬಹುಘೋರರೂಪದಲಿಂದಾ | ಸಲಹಿದುದೆ ಛಂದಾ ||ಮೂರು ಪಾದವ ಬೇಡಿ ಬಲಿಯನು | ಭಾರಿ ಕೊಡಲಿಯ ಪೆತ್ತು ಪೆಗಲೋಳು |ಘೋರ ಅಟವಿಯ ತಿರುಗಿ ತಿರುಗಿ | ನಾರೆರೊಲುಮೆಗೆ ಸಿಲ್ಕಿ ತ್ರಿಪುರದನಾರಿಯರ ವ್ರತಗೆಡಿಸಿ ಹಯವನು | ಏರ್ದ ಗುರುಗೋವಿಂದ ವಿಠ್ಠಲಕಾರಣನು ಜಗಕೆಂಬ ಮತಿಯನು | ಧೀರಗುರು ಮೋಹನ್ನ ಕರುಣಿಸು 3
--------------
ಗುರುಗೋವಿಂದವಿಠಲರು
ಯಕ್ಷಿಣೀ ಸರ್ವಲಕ್ಷ್ಮಿಣೀ ರಕ್ಷಿಸು ಮಗನ ಅಪೇಕ್ಷವ ಪೂರೈಸಿ ಪ ಕಂಟಕ ಸಕಲಪೂರ್ಣ ಕರುಣವಿಟ್ಟು ಮಾಡು ಸಫಲ ತ್ರಾಣಿ ಕರುಣದಿ ಬಡತನವಖಿಲ ಜಾಣೆ ಪರಿಹರಿಸಿ ಕೊಡು ಎನಗೆ ಸುಫಲನ ಆಹ ಮೊರೆಯಿಟ್ಟು ಬೇಡುವೆ ಪರಮಪಾವನೆ ಎನ್ನ ಇರವ ತೀರಿಸು ತಾಯಿ ಸರುವ ಸಿದ್ಧಾಂತಳೆ 1 ಮನುಮುನಿಗಳಿಗಾದಿ ಒಲುಮೆ ನೀನು ಘನ ಸಿದ್ಧಿನಿತ್ತು ಸದ್ಧರ್ಮಿ ಜಾಣ ರೆನಿಸಿದಿ ದಯದಿ ಸುಪ್ರೇಮಿ ಮಾಣ ದನುಪಮಮತಿ ನಿಜಮಹಿಮೆ ಆಹ ವನರುಹ ಬ್ರಹ್ಮಾಂಡ ಘನ ಘನ ಎನುವಂಥ ಅನುಪಮಪದದೆನ್ನ ಕನಿಕರದಿಂ ಕಾಯೆ 2 ಸರುವ ಸಿಧ್ದಿಯ ನೀಡಿ ಕರುಣಿ ಎನ್ನ ಸರುವ ಶುದ್ಧವೆನಿಸೆ ಜನನೀ ಪೂರ್ಣೆ ಸರ್ವಜ್ಞೆ ಪಾಲಿಸೆ ನಿಪುಣೆ ವಾಣಿ ಸರ್ವಮಂಗಲಿ ಸುಪ್ರವೀಣೆ ಆಹ ಸರ್ವಶಕ್ತ ಜಗದಾರ್ಯ ಶ್ರೀರಾಮನ ಭಾರ್ಯೆ ಸಕಲ ಐಶ್ಚರ್ಯದಿಂ ಪೊರೆಯೆನ್ನ 3
--------------
ರಾಮದಾಸರು
ಯಚ್ಚರಿಕೆ ಯಚ್ಚರಿಕೆ ಶ್ರೀ ಸೋದೆಪುರಯಚ್ಚರಿಕೆ ಯಚ್ಚರಿಕೆ ಶ್ರೀ ಸೋದೆಪುರವಾಸಿ ಗುರುಪಾದ ಯಚ್ಚರಿಕೆ ಯಚ್ಚರಿಕೆ ಪ ಶ್ರೀ ತ್ರಿವಿಕ್ರಮ ಲೋಕನಾಥನ ತಂದೆ ಶ್ರೀಪಾದಯಚ್ಚರಿಕೆ ಯಚ್ಚರಿಕೆ ಅ.ಪ. ಗುರುಹಯವದನ ಮನಮುಟ್ಟಿ ಸ್ಮರಿಸಿ ಪೂಜಿಪಶ್ರೀ ಗುರುಪಾದ ಯಚ್ಚರಿಕೆ ಯಚ್ಚರಿಕೆ 1 ಶತಷಣ್ಣವತಿ ಸಪ್ತ ಬ್ರಹ್ಮ ಕಲ್ಪಗಳಲ್ಲಿ ಶ್ರೀಹರಿಯೆ ಮಹ ಮಾರೆತವ ಚರಿಸಿದ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 2 ತಪಚರಿನಿಯರ ಡೃವತ್ತೂ ಷಣ್ಣವತಿ ಲಿಷ್ಟನೇ ಕಲ್ಪದ-ಲಿಲಾತವ್ಯ ವಾಯುಸಾಧನ ಮಾಡುವಾನಂದ ಜ್ಞಾನ ಯೋಗ ಸಿದ್ಧಿಸಿ ಕೊಡುವ ಉದಾರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 3 ಪ್ರಧಾನ ವಾಯು ಪದ ಸ್ವೀಕರಿಪ ಹಂಸವಾಹನ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ4 ಹಿಂದೆ ವಿರಜಸ್ನಾನದಿ ಅಜ್ಞಾನಾತ್ಮಕ ಲಿಂಗದೋಷನಿಶ್ಶೇಷ ಹೊಂದಿದ ಗುರುವಿರಾಜರ ವಾದದ್ವಯ ಯಚ್ಚರಿಕೆ ಯಚ್ಚರಿಕೆ 5 ನಿರ್ಜೀವ ನಿಷ್ಕ್ರಿಯಾ ದಗ್ಧಪಟದಪ್ಪಂತಿರುವ ದೇಹ ಲಿಂಗವ ನಿಮಿತ್ತ ಮಾತ್ರಕೆ ಹರಿಯಿಭಯಿಂ ಧರಿಸಿರುವ ಲಾತವ್ಯ ಗುರುಪಾದ ಯಚ್ಚರಿಕೆ ಯಚ್ಚರಿಕೆ6 ಮುಕ್ತ ಅಮುಕ್ತಿ ಭೇದ ತೋರ್ಪದಕೆ ಶಿರಿಯಿಂದನದಿ ಶಾಲ್ಮಲ ವಾಸಿಯ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 7 ದ್ವಸ್ತ ದುರಾಗಮಿ ಶ್ರೀರಾಜಗುರು ಪಾದಕೆಚ್ಚರಿಕೆ 8 ಅಜ್ಞಾನ ಅಹಂಕಾರ ಭಯ ಮೋಹ ವಿಸ್ಮøತಿ ದುಃಖಾದಿಬಂಧನ ಕಳೆವ ಪ್ರಭುವಾದಕೆಚ್ಚರಿಕೆ 9 ಪತಿ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 10 ತ್ರಿವಿಧ ಜೀವರ ಚತುರ್ವಿಧಶರೀರದಿಯಿದ್ದವರ ಸಾಧನವಾ ಮಾಡಿಸಿ ಜೀವರ ಸುಖದುಃಖಗಳಿಂತಾ ಬದ್ಧರಾಗದೆ ಪೂರ್ಣ ನಿರ್ಲಿಪ್ತರಾಗಿರುವಶ್ರೀಪಾದ ಯಚ್ಚರಿಕೆ ಯಚ್ಚರಿಕೆ11 ತ್ರಿವಾರ ವಿರಜ ಸ್ನಾನವ ಮಾಡ್ವ ಸೌಭಾಗ್ಯ ಪ್ರಾರಬ್ಧಪೊಂದಿರುವ ಗುರು ವಾದಿರಾಜರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 12 ಸತ್ವ ಜೀವರ ಮೋಕ್ಷ ಪ್ರಾಪ್ತಿಗೆ ವಿರಜ ನದಿಯಲಿಸ್ನಾನ ಮಾಡಿಸಿ ಜೀವಸತ್ವರ ಮೋಕ್ಷಕ್ಕಿಡುವ ನಿವ್ರ್ಯಾಜ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 13 ಸುಜೀವರ ಅನಾದಿ ಲಿಂಗ ಅಜ್ಞಾನ ಸ್ವರೂಪ ದೇಹ-ಭಂಗಿಸುವ ಶ್ರೀರಮಾತ್ಮಕ ವಿರಜ ನದಿಯಲಿ ಸ್ನಾನ-ಮಾಡಿ ಸ್ವಲಿಂಗ ವಿಶಿಷ್ಟವಾದ ಅಜ್ಞಾನದಿಂ-ವಿರಹಿತರಾದವರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 14 ಆನಂದವ ವೃಷಭಾವಿ ಆನಂದ ತೀರ್ಥ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 15 ತ್ರಿವಿಧ ಜೀವರಲಿಯಿದ್ದು ತ್ರಿವಿಧಸಾಧನ ಮಾಡಿಸುವ ಭಾವಿ ವಾಯುನಾಮಕ ನತ್ತಾ ಪ್ರದ ಲಾತವ್ಯವಾಯು ವಾದಿರಾಜ ಮಧ್ವ ಮುನಿ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 16 ಆಯಾಯರ ಜೀವರ ಚಲನವಲನಾದಿ ವ್ಯಾಪಾರ ಮಾಡಿಸುವ ಭಾವಿ ಪ್ರಾಣನಾಮಕ ಭೀಷ್ಟಾಪ್ರದ ವಾದಿರಾಜಗುರುಪಾದಯಚ್ಚರಿಕೆ ಯಚ್ಚರಿಕೆ 17 ಚತುರ್ವಿದ ಶರೀರಗಳಲಿದ್ದು ಸಂರಕ್ಷಿಸುವ ಭಾವಿ ಧರ್ಮನಾಯಕಧಾರಣಪ್ರದ ಶ್ರೀ ಗುರುರಾಜರಶ್ರೀಪಾದ ಯಚ್ಚರಿಕೆ ಯಚ್ಚರಿಕೆ 18 ಪ್ರಭುತ್ವವಾರ್ತೈಸಿಜೀರರ ಅವರವರ ಸ್ವರೂಪಯೋಗ್ಯಗತಿ ಕೊಡುವ ಭಕ್ತಿ ಮುಕ್ತಿ ಪ್ರದ ಭಾವಿ ಭಾರತೀ ರಮಣ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 19 ದೇವೋತ್ತಮ ಲಾತ ವಾಯುಸ್ವನಾಮಕೆ ಭಗವಂತಗೇ ನಿತ್ಯನ್ವ ಭಕ್ತರ ಪಾಪ ಮನ್ನಿಸುವಂತೆ ಪ್ರಾರ್ಥಿಸಿ ತಾವು ಮನ್ನಿಸಿ ಕ್ಷಮಿಸುವಲ್ಲಿ ಕ್ಷಮಾ ಸಮುದ್ರರಾದ ಶ್ರೀಗುರುಪಾದಯಚ್ಚರಿಕೆ ಯಚ್ಚರಿಕೆ 20 ಪುಣ್ಯ ಪ್ರದಾನ ಮಾಡುವಲ್ಲಿ ಜೀವರಿಗೆ ಪರಮ ದಯಾಳು ಆರ್ತರಿಗೆ ದಯತೋರುವ ಕೃಪಾನಿಧಿ ಸಜ್ಜನರ ದೋಷ ವಿಚಾರದಿ ಮಹಾ ಸಹಿಷ್ಣುಗಳಾದವರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 21 ಶಿಖಾಮಣಿ ಸಕಲ ತಾತ್ವಿಕ ದೇವತಾ ರಂಜಕ ಆಹ್ಲಾದಕರ ದಾನವ ಭಂಜಕ ಸಂಹಾರ ಕರ್ತರಾದ ಕಾರಣ ಭಾವಿ ಪ್ರಭಂಜನ ವರವಾಜ್ಯರಾದವರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 22 ಸರ್ವದಾ ಅನ್ಯ ಜೀವರು ಕಾಣದಾ ಅಸಾಧಾರಣ ಗುಣ ಕ್ರಿಯಾ ಸ್ವರೂಪರಾದ ವೇದ ಪ್ರತಿಪಾದ್ಯರಾದುದರಿಂದ ಮಹಂತರೆಂದು ಕರೆಸುವ ಭಾವಿ ವಾಯುವಿನ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ23 ಅವರವರ ಸಾಧನಗಳ ಪೂರೈಸಿ ಕೊನೆಗವರ ನಿಜಗತಿ ಪ್ರವರಾದ ಸರ್ವ ಜೀವರಂತರ್ಯಾಮಿ ಸಕಲ ಗುಣ ಸದ್ಧಾಮ ಭಾವಿ ಮರುತ ಗುರುವಾದಿರಾಜರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 24 ಬರುವ ಜಗತ್ತಿನ ಸರ್ವ ಜೀವರಿಗೆಲ್ಲ ಜೀವನ ಪ್ರಾಣ- ವಾಗಿರುವ ಜೀವೋತ್ತಮ ಶ್ರೀ ಭಾವಿ ಬ್ರಹ್ಮ ಮರುತ ವಾದಿರಾಜರ ಶ್ರೀಪಾದದ್ವಯ ಯಚ್ಚರಿಕೆ ಯಚ್ಚರಿಕೆ 25 ಸಕಲ ಜೀವರ ಸಂಜೀವರಾದ ಯಲ್ಲ ಜೀವರ ಜೀವ ಯಲ್ಲಪ್ರಾಣಿಗಳ ಪ್ರಾಣರಾಗಿ ಪ್ರಾಣೆಂದು ಕರೆಸುವ ಭಾವಿ ಮುಖ್ಯ ಪ್ರಾಣ ವಾದಿರಾಜರ ಗುರುಪಾದಕೆಚ್ಚರಿಕೆ 26 ಸದಾಸರ್ವತ್ರ ಭಗವದ್ರಷ್ಟøಗಳಾದ ಬ್ರಹ್ಮದೇವರ ಭೃತ್ಯಣ ಜೀವ ಪರ್ಯಂತ ವ್ಯಾಪ್ತರಾದ ಆಯಾ ಸ್ಥಳದಿದ್ದು ಆಯಾ ಜೀವರ ತಕ್ಕ ವ್ಯಾಪಾರ ಮಾಡುವ ಭಾವಿ ಪೂರ್ಣಪ್ರಜ್ಞರೆನಿಸಿರುವ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 27 ಸಾಕ್ಷಾತ್ರ್ಪತಿಬಿಂಬರಾದ ಕಾರಣ ಭಾವಿ ಮುಖ್ಯ ಪ್ರತಿಬಿಂಬ-ರೆಂದೆನಿಸಿಕೊಂಡ ಗುರುವಾದಿರಾಜ ವಿಭುಪಾದಕೆಯಚ್ಚರಿಕೆ ಯಚ್ಚರಿಕೆ 28 ನಿತ್ಯ ಸಾಯುಜ್ಯ ಸಹ ಭೋಜನದ ಭೋಗ ಹೊಂದುವ ಭಾವಿ ಮರುತ ಶ್ರೀಲಾತವ್ಯ ವಾಯು ಗುರು ಮಧ್ವ ಮುನಿಯ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 29 ಸದನ ಪೂರ್ಣ ಚಂದ್ರವದನರು ಮೋಕ್ಷ ಸಾಮ್ರಾಜ್ಯ ನಿರ್ದುಷ್ಟ ಆನಂದ ಸುಖಸ್ವರೂಪರು ಪರಮ ಪುರುಷಾರ್ಥ ಪಾತ್ರಗಳು ಪುಣ್ಯ ಸ್ವರೂಪ ಪಂಚ ರೂಪಾತ್ಮಕ ಹರಿಯೆ ಪಂಚ ವೃಂದಾವನ ಸ್ವರೂಪದಿಯಿರುವ ರಂಜಪುಣ್ಯ ವೃಂದಾವನದಿ ವಿರಾಜಿಸಿ ಪಂಚ ಪುಣ್ಯ ಧಾರೆಯೆರೆವ ಪಂಚಪ್ರಾಣರಾದ ವಾದಿಗಳ ಪಲ್ಮುರಿವ ವಾದಿರಾಜಮಧ್ವ ಮುನಿಯ ಶ್ರೀ ಭಾವೀ ಭಾರತೀದೇವಿ ತನ್ನ ಮೃದು ಕೋಮಲ ತೊಡೆಯ ಮೇಲೆ ಪತಿಯ ಶ್ರೀಪಾದಪದ್ಮದ್ವಯವಿಟ್ಟು ವತ್ತೂವ ಅಜ್ಞಾನ ತಿಮಿರಕೆ ಮಾರ್ತಾಂಡ ವಾದ ಜ್ಞಾನಾನಂದ ದಾಯಕ ಶ್ರೀಗುರುಪಾದ ಯಚ್ಚರಿಕೆ ಯಚ್ಚರಿಕೆ30 ಜಗಜ್ಜೀವನಗಳಿಗೆ ಮುಖ್ಯ ಕಾರಣ ಪ್ರಾಣ ಆ ಪ್ರಾಣವಿಲ್ಲದಿರೆ ಸ್ವತಃ ಚಲಿಸಲು ಅಸಮರ್ಥ ಸರ್ವ ಜಗತ್ತಿಗೆ ಪ್ರಾಣ ವಿಜ್ಞಾನ ಪ್ರಾಣಾಗ್ನಿ ಶಬ್ದವಾಜ್ಯ ಈ ಭಾವಿಮುಖ್ಯ ಪ್ರಾಣ ಜಗಜ್ಜೀವನಗಳಿಗೆ ತಾನೇ ಮುಖ್ಯ ಪ್ರಾಣರೂಪ ಹೀಗೆಂದು ಬಳಿತ್ಥಾ ಸೂಕ್ತ ಅಗ್ನಿ ಸೂಕ್ತದಲಿ ಉಕ್ತ ಈ ಸೂಕ್ತಿಗಳಿಂದ ಪ್ರತಿಪಾದ್ಯರಾದ ಜಗನ್ನೇತ್ರಜಗಜ್ಜೀವನರಾದ ಪಂಚಪ್ರಾಣ-ರೂಪಾತ್ಮಕ ಶ್ವಾಸನಿಯಾಮಕ ಸೋದೆಪುರವಾಸಿ ಭೂತರಾಜರ ಹೃನ್ಮಂದಿರ ವೇದ್ಯ ವೇದ್ಯನುತ ಅಹಿಪ ಖಗಪ ಉಮೇಶಾದಿ ಸುರರಿಗೆ ಚಿಂತಿಸಲು ಅಳವಲ್ಲದ ಅಗಮ್ಯ ಮಹಿಮ ಶ್ರೀ ಪ್ರಭು-ವಾದಿರಾಜರ ನಿರ್ದೋಷ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 31 ಜಿತಣಮ ಸರ್ವಜ್ಞ ಅಶೇಕ್ಷ ಸಂಪದ್ವಿಶಿಷ್ಟ ಸದ್ಗುಣ ಭರಿತ ಪೂರ್ಣ ತೃಪ್ತ ನಿಶ್ಚಲ ಭಕ್ತ ದೃಢವ್ಯೆರಾಗ್ಯಶಾಲಿಚಿರಂಜೀವಿ ಶ್ರೀ ಗುರುವಾದಿರಾಜರ ಶ್ರೀಪಾದ ಪದ್ಮ ನಖರೇಣುಗಳಿಗೆ ಯಚ್ಚರಿಕೆ ಯಚ್ಚರಿಕೆ 32 ಪರಿ ಪರಿ ಕ್ರೀಡೆ-ರಮಿಸಿ ಆ ಆನಂದ ಶ್ರೀ ಹರಿಗೆ ಅರ್ಪಿಪ ಗುರುವಾದಿರಾಜಶ್ರೀಪಾದಂಗಳ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 33 ನಿತ್ಯ ನಿತ್ಯ ಶ್ರೀವರ ಮಾಲೇಶೆಗೆ ಅರ್ಪಿಪ ಭಾವಿಲಾಳೂರ ಶ್ರೀ ಗುರುರಾಜರ ಪಾದಕೆ ಯಚ್ಚರಿಕೆ ಯಚ್ಚರಿಕೆ34 ತನ್ನ ಶ್ರೀಪಾದ ರಜ ಧೆಣಿಯಲಿ ಧರಿಸಿ ಜೀವಿವರ ಹಯವದನ ಪಾದಕರ್ಪಿಸುವೆನೆಂದು ಪಣತೊಟ್ಟು ಜೀವನ್ಮುಕ್ತರನು ಮಾಡಿ ಪರಿಪಾಲಿಪೆನೆಂದು ಧೀರ ವೃಂದಾವನದಿ ಮೆರೆವ ಶ್ರೀಗುರು-ವಾದಿರಾಜರ ಶ್ರೀಪಾದಕೆ ಯಚ್ಚರಿಕೆ ಯಚ್ಚರಿಕೆ 35 ಶ್ರೀ ತ್ರಿವಿಕ್ರಮನ ರಥೋತ್ಸವಕೆ ಬಂದವರಲಿ ಒಂದೊಂದಂಶ ಸುರರ ಪ್ರವೇಶಿಸಿ ಅವರಲ್ಲಿ ತನ್ನೊಂದಂಶದಿಂದ ಸುರರ ಸಾಧನ ಮಾಡಿ ಸುರನರರ ಕೃತ ಕೃತ್ಯರೆನಿಸಿ ಶಿರಿ ಹಯ-ವದನನ ಕಾಣ್ವ ಜ್ಞಾನ ಭಕುತಿ ವೈರಾಗ್ಯ ನಿಷ್ಠಿಯನಿತ್ತು ಬ್ರಹ್ಮ ನಿಷ್ಯ್ಠೆ ಕರೆನು ಮಾಳ್ವ ಶ್ರೀ ಗುರು ಶ್ರೀಪಾದಕೆಯಚ್ಚರಿಕೆ ಯಚ್ಚರಿಕೆ 36 ಶ್ರೀ ಧವಳ ಗಂಗೆಯ ಸ್ನಾನ ಮಾಡುವ ಜ್ಞಾನವೀವ ಶ್ರೀ ಗುರು-ಪಾದಕೆ ಯಚ್ಚರಿಕೆ ಯಚ್ಚರಿಕೆ 37 ವಾಸುದೇವ ಪರಿ ಸ್ತೋತ್ರ ಮಾಡಿರೈ ಜ್ಞಾನಿ-ಗಳಾದವರೆಲ್ಲ ಶ್ರೀ ಗುರುಪಾದದೆಚ್ಚರಿಕೆಯಲಿ ತಂದೆವರದಗೋಪಾಲವಿಠಲ 38
--------------
ಗುರುತಂದೆವರದಗೋಪಾಲವಿಠಲರು
ಯತಿವೃಂದ ಜಯತೀರ್ಥ ಜಯತೀರ್ಥ ಪ ಭವ | ಭಯಹರ ಗುರುವರ ಅ.ಪ ಕಾಗಿಣಿ ತಟ ಸ್ಥಿತ | ಮೇಘನಾಥಪುರ ಆಗರವೆನಿಸಿದ ಯೋಗಿವರೇಣ್ಯ 1 ತತ್ವಗಳರ್ಥವ | ಪುಸ್ತಕ ಭಾರವ ಎತ್ತಿನ ರೂಪದಿ | ಪೊತ್ತ ಮಹಾತ್ಮ 2 ಮರುತ ಸುಶಾಸ್ತ್ರಕೆ | ವಿರಚಿಸಿ ಟೀಕೆಯ ಮುರಿದು ಕುಭಾಷ್ಯವ | ಮೆರೆದ ಮಹಂತ 3 ನೆರೆನಂಬಿದೆ ಶ್ರೀ | ಹರಿನಾಮವ ನಿರುತಗರಿದು ಪೊರಿ | ನರನವತಾರಿ 4 ಭೀಮ ಭವಾಟವಿ | ಧೂಮ ಶ್ರೀ ಶಾಮಸುಂದರ ಪ್ರೇಮದ ದಾಸ 5
--------------
ಶಾಮಸುಂದರ ವಿಠಲ
ಯಾಕೆ ದಯ ಬಾರದೋ | ಕೃಷ್ಣಾ | ಯಾಕೆ ದಯಾ ಬಾರದೋ || ಪ ಕಾಕು ಜನರ ಸಂಗ ಕಳೆದು | ವ್ಯಾಕುಲ ನೀಗುವುದಕ್ಕೆ ಅ.ಪ. ಮಾನ ಅಪಮಾನವೆಲ್ಲ | ಮಾನ ನಿಧಿಯಾಧೀನವೆಂದುಸಾನುರಾಗದಿ ಧೇನಿಸುವನ | ಧೀನನ ಪರಿಪಾಲಿಸಲೂ 1 ಭಾರ | ಸತತ ನಿನಗಲ್ಲದಲೇ2 ಪರರಿಗೆ ಶಿರವ ಬಾಗಿ | ಕರವನೊಡ್ದಿಸದಲೇಶರಣರ ಸಲಹೊ ಗುರು | ಗೋವಿಂದ ವಿಠಲನೆ 3
--------------
ಗುರುಗೋವಿಂದವಿಠಲರು
ಯಾಕೆ ದಯಬಾರದೊ ಕಾಂತೇಶ ಪ್ರಾಣೇಶ ಸಾಕಲಾರದೆ ಪೋದೆಯಾ ಎನ್ನನು ಪ. ಏಕಚಿತ್ತದಿ ನಿನ್ನ ಚರಣ ನಂಬಿ ಬರಲು ಭಾರತೀಶ ಅ.ಪ. ತೊಳಲಿ ಬಳಲಿ ಸುಖ ಸುಳಿವೆಂಬೋದರಿಯದೆ ನಳಿನಾಕ್ಷನ ದಾಸ ನಿನ್ನ ಕೀರ್ತಿ ಇಳೆಯೆಲ್ಲ ಪೊಗಳಲು ಸಲಹುವನೆಂತೆಂದು ಬಳಿಗೆ ಬರಲು ಮನಕರಗದೆ ತಂದೆ 1 ಅಂದು ಕನಸಿನಲ್ಲಿ ಶಿರದಲ್ಲಿ ಕರವಿಟ್ಟೆ ಇಂದೆಲ್ಲಿ ಪೋಯಿತೊ ಆ ಕರುಣ ತಂದೆ ಮುದ್ದುಮೋಹನ ಗುರುಗಳ ವಚನವ ಇಂದು ಒಲಿದೆನ್ನ ಕಾಯೊ2 ವಿೂಸಲ ದಾಸ್ಯಕೆ ಆಶೆ ಮಾಡಿದೆನೆಂದು ದೋಷವೆಣಿಸುವರೆ ಎನ್ನಲಿ ನೀ ಶೇಷಶಯನನೆ ಬಲ್ಲೆನೊ ಇದರ ಮರ್ಮ ಘಾಸಿಗೊಳಿಸದೆ ನೀ ಅಭಯವನೀಯೊ 3 ರಾಮದಾಸ್ಯವ ಬಯಸಿ ನೇಮದಿಂದಲಿ ಇದ್ದು ರಾಮನಾಗಮ ಕಂಡು ಎರಗಿ ನಿಂದು ಪತಿ ಪಾದ ದಾಸ ಸಿದ್ಧಿಯ ಪಡೆದು ಭೂಮಿಯೊಳು ಖ್ಯಾತನಾದೆಯೊ ಆಂಜನೇಯ 4 ಚಿತ್ತಿದಿ ಕೃಷ್ಣನ ದಾಸತ್ವ ಸಾಧಿಸಿ ಮತ್ತೆ ಮುನಿಯಾಗಿ ಗ್ರಂಥವ ರಚಿಸಿ ಚಿತ್ತದಿ ಗೋಪಾಲಕೃಷ್ಣವಿಠ್ಠಲನ ಪಾದ ನಿತ್ಯದಿ ಭಜಿಪೆ ನೀ ಮತ್ತೆನ್ನ ಕಾಯೊ 5
--------------
ಅಂಬಾಬಾಯಿ
ಯಾಕೆ ಪುಟ್ಟಿಸಿದಿ ನೀ ಸಾಕಲಾರದೆ ಜಗ-ದೇಕ ಕಾರಣಪುರುಷನೆ ಕೃಷ್ಣ ಪ ವಾಕು ಚಿಂತಿಸೆ ಇಂಥಕಾಕು ಮಾಡುವುದುಚಿತವೆ ಕೃಷ್ಣ ಅ.ಪ. ಒಡಲಿಗನ್ನವ ಕಾಣೆ ಉಡಲು ಅರಿವೆಯ ಕಾಣೆಗಡಗಡನೆ ನಡುಗುತಿಹೆನೋ ಕೃಷ್ಣಮಡದಿ ಮಾತೆಯರ ಬಿಟ್ಟು ಒಡಹುಟ್ಟಿದವರ ಬಿ -ಟ್ಟಡವಿ ಪಾಲಾದೆನಲ್ಲೋ ಕೃಷ್ಣಕುಡುತೆ ಕೊಡುವವರಿಲ್ಲ ನುಡಿಯ ಕೇಳುವರಿಲ್ಲಬಡತನವು ಕಂಗೆಡಿಸಿತೋ ಕೃಷ್ಣಕಡೆ ಹಾಯಿಸುವರ ಕಾಣೆ ನಡುಮಡುವಿನೊಳು ಕೈ ಬಿಡದೆ ದಡವನು ಸೇರಿಸೋ ಕೃಷ್ಣ 1 ಕೊಟ್ಟವರ ಸಾಲವನು ಕೊಟ್ಟು ತೀರಿಸದವರಪೊಟ್ಟೆಯೊಳು ಪುಟ್ಟಲಾಯ್ತೋ ಕೃಷ್ಣಎಷ್ಟು ಜನುಮದಿ ಮನಮುಟ್ಟಿ ಮಾಡಿದ ಕರ್ಮಕಟ್ಟೀಗ ಉಣಿಸುತಿಹುದೋ ಕೃಷ್ಣಸೃಷ್ಟಿಯೊಳಗೆನ್ನಂಥ ಕೆಟ್ಟ ಪಾಪಿಷ್ಠ ಜನಘಟ್ಟಿಸಲಿಲ್ಲವೇನೋ ಕೃಷ್ಣವಿಠ್ಠಲನೆ ನಿನ್ನ ಮನಮುಟ್ಟಿ ಭಜಿಸಿ ಹಿಂದೆಎಷ್ಟು ಜನ ಬದುಕಲಿಲ್ಲೋ ಕೃಷ್ಣ 2 ಆಳು ದೇಹವು ಗೇಣು ಕೀಳಾಗಿ ಪಲ್ಕಿರಿದುಖೂಳ ಜನರ ಮನೆಗೆ ಕೃಷ್ಣಹಾಳು ಒಡಲಿಗೆ ತುತ್ತು ಕೂಳಿಗೆ ಹೋಗಿ ಅವರವಾಲೈಸಲಾರೆನಲ್ಲೋ ಕೃಷ್ಣಬಾಳು ಈ ಪರಿಯಾದ ಮ್ಯಾಲೆ ಭೂಮಿಯಲಿ ಬಹುಕಾಲ ಕಳೆಯುವುದುಚಿತವೆ ಕೃಷ್ಣಆಲಸ್ಯ ಮಾಡದಲೆ ಈ ವ್ಯಾಳ್ಯದಲಿ ಅರಿತುಪಾಲಿಸಲು ಬಹು ಕೀರ್ತಿಯೋ ಕೃಷ್ಣ 3 ಸಿರಿ ಅರಸನೆಂದು ಶ್ರುತಿ ಸಾರುತಿದೆಬಂದುದೀಗೇನು ಸಿರಿಯೋ ಕೃಷ್ಣಒಂದೊಂದು ನಿಮಿಷ ಯುಗಕಿಂತಧಿಕವಾಗುತಿದೆಮುಂದೋರದ್ಹಾಂಗಾಯಿತೋ ಕೃಷ್ಣಸಂದೇಹವಿಲ್ಲ ಗೋವಿಂದ ಶ್ರೀಪದದಾಣೆತಂದೆ ನೀ ರಕ್ಷಿಸದಿರೆ ಕೃಷ್ಣಮುಂದೆ ಭಜಿಸುವರು ಹೀಗೆಂದು ವಾರುತೆ ಕೇಳಿಬಂದುದಪಕೀರ್ತಿ ಮಾತು ಕೃಷ್ಣ 4 ವತ್ಸರ ಈರೀತಿ ಕಾಲಕಳೆದೆನೋ ಕೃಷ್ಣವ್ಯರ್ಥವಾಯಿತು ಜನುಮ ಸಾರ್ಥಕಾಗದು ಕಣ್ಣುಕತ್ತಲೆಗವಿಸಿತಲ್ಲೋ ಕೃಷ್ಣಇತ್ತ ಬಾರೆಂತೆಂದು ಹತ್ತಿಲಿಗೆ ಕರೆದೊಂದುತುತ್ತು ಕೊಡುವರ ಕಾಣೆನೋ ಕೃಷ್ಣವಿಸ್ತರಿಸಲಾರೆ ಇನ್ನೆತ್ತ ಪೋಗಲೊ ನಿನ್ನಚಿತ್ತವ್ಯಾತಕೆ ಕರಗದೋ ಕೃಷ್ಣ 5 ಆರು ಗತಿ ನಿನಗಧಿಕರಾರು ಧಾರುಣಿಯೊಳಗೆತೋರಿಸೈ ಕರುಣನಿಧಿಯೆ ಕೃಷ್ಣಈರೇಳು ಲೋಕಕಾಧಾರವಾದವಗೆ ಬಲುಭಾರವಾದವನೆ ನಾನು ಕೃಷ್ಣಮೀರಿ ನುಡಿಯಲು ಹದಿನಾರೆರಡು ಪಲ್ಗಳುಬೇರು ಕಳಕಳಯಿತೋ ಕೃಷ್ಣತೋರು ಬಂಕಾಪುರದ ಧಾರುಣಿಪುರವಾಸವೀರ ನರಸಿಂಹದೇವ ಕೃಷ್ಣ 6 ಹರಿಯಾತ್ರೆ ಮಾಡಲಿಲ್ಲ ಹರಿಮೂರ್ತಿ ನೋಡಲಿಲ್ಲಹರಿದಾಸ ಸÀಂಗವಿಲ್ಲ ಕೃಷ್ಣಹರಿಸ್ಮರಣೆ ಮಾಡಲಿಲ್ಲ ಸುರನದಿಯ ಮೀಯಲಿಲ್ಲಧರಣಿ ಸಂಚರಿಸಲಿಲ್ಲ ಕೃಷ್ಣಅರಿತರಿತು ಮನ ವಿಷಯಕೆರಗಿ ಹರುಷವ ತಾಳಿಬರಿದಾಯಿತಾಯುವೆಲ್ಲ ಕೃಷ್ಣಮರುತಾಂತರ್ಗತ ಸಿರಿಯರಸ ಹರಿಯೆಂದುಹರುಷಾಬ್ದಿ ಮಗ್ನನಲ್ಲ ಕೃಷ್ಣ7 ಹರಿನಾರಾಯಣನೆಂದು ಕರವೆತ್ತಿ ಮುಗಿದೊಮ್ಮೆ ಮೈ ಮರೆದು ನಟಿಸಲಿಲ್ಲ ಕೃಷ್ಣಹರಿಸ್ಮರಣೆ ಸ್ಮರಿಸಿ ಸಿರಿತುಳಸಿ ಪುಷ್ಪವನುಕರವೆತ್ತಿ ನೀಡಲಿಲ್ಲ ಕೃಷ್ಣಸರ್ವಜ್ಞರಾಯರು ವಿರಚಿಸಿದ ಗ್ರಂಥವನುದರುಶನವೆ ಮಾಡಲಿಲ್ಲ ಕೃಷ್ಣಸ್ಮರಿಸಲಾರದ ಪಾಪ ಸ್ಮರಣೆಪೂರ್ವಕ ಮಾಡಿಸ್ಥಿರಭಾರನಾದೆನಲ್ಲೋ ಕೃಷ್ಣ 8 ದುರುಳಜನರೊಡನಾಡಿ ಹರಿಣಾಕ್ಷಿಯರ ಕೂಡಿಸರಿ ಯಾರು ಎಂದು ತಿರುಗಿ ಕೃಷ್ಣನಿರುತ ಕ್ಷುದ್ರವ ನೆನೆಸಿ ನೆರೆದೂರ ಮಾರಿ ಹೆಗ್ಗೆರೆಗೋಣನಂತೆ ತಿರುಗಿ ಕೃಷ್ಣಪರರ ಅನ್ನವ ಬಯಸಿ ಶರೀರವನೆ ಪೋಷಿಸಿಶಿರ ಒಲಿದು ಶಿಲೆಗೆ ಹಾಯಿದು ಕೃಷ್ಣಶರಣವತ್ಸಲನೆಂಬೊ ಬಿರುದು ಪಸರಿಸುವಂಥಕರುಣ ಇನ್ನೆಂದಿಗಾಹುದೊ ಕೃಷ್ಣ 9 ಉರಗ ಫಣಿ ತುಳಿಯಲೊಎರಡೊಂದು ಶೂಲಕ್ಹಾಯಲೊ ಕೃಷ್ಣಕೊರಳಿಗ್ಹಗ್ಗವ ಹಾಕಿ ಮರವೇರಿ ಕರಬಿಡಲೋಗರಗಸದಿ ಶಿರಗೊಯ್ಯಲೋ ಕೃಷ್ಣಕರುಣವಾರಿಧಿ ಎನ್ನ ಕರಪಿಡಿದು ಸಲಹದಿರೆಧರೆಯೊಳುದ್ಧರಿಪರ್ಯಾರೋ ಕೃಷ್ಣ 10 ಎಷ್ಟು ಹೇಳಲಿ ಎನ್ನ ಕಷ್ಟ ಕೋಟಿಗಳನ್ನುಸುಟ್ಟೀಗ ಬೇಯ್ಯುತಿಹವೋ ಕೃಷ್ಣಕಷ್ಟಬಟ್ಟ ಮಗನೆಂದು ದೃಷ್ಟಿ ನೀರೊರೆಸೆನ್ನಪೊಟ್ಟೆಯೊಳ್ಪಿಡಿವರ್ಯಾರೊ ಕೃಷ್ಣಕೃಷ್ಣನಾಮ ವಜ್ರಕ್ಕೆ ಬೆಟ್ಟ ದುರಿತವು ನೀಗಿಥಟ್ಟನೆ ಬಂದು ನೀನು ಕೃಷ್ಣಇಷ್ಟವನು ಸಲಿಸಿ ಗುಟ್ಟ್ಟಲಿ ಶ್ರೀರಂಗವಿಠಲ ಎನ್ನ ಕಾಯೋ ಕೃಷ್ಣ 11
--------------
ಶ್ರೀಪಾದರಾಜರು