ಒಟ್ಟು 1522 ಕಡೆಗಳಲ್ಲಿ , 97 ದಾಸರು , 1368 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೆಳಗಾಯಿ ತೇಳಿರಯ್ಯಾ ಪ ಕರ ಪುಷ್ಕರದ ನೆಲೆಯ ಲೊಗದು | ಬಲಿದ ವೈರಾಗ್ಯ ವೈರಾಗ್ಯ ಮುಂಬೆಳಗ ಸುಖ ತಂಗಾಳಿ | ರವಿ ಉದಯಿಸಿದ 1 ನ್ಮತ್ತದುರ್ವಾದಿ ನಕ್ಷತ್ರದೆಡೆಗೆ | ಭವ ದ್ವಿಜ ರಿಂದ ಸುತ್ತುಗಟ್ಟಿ ಭಜಿಸುತಿದೆ 2 ನೆರೆಭಾವ ಭಕುತಿ ರಥ ಚಕ್ರನೆರೆಯೆ | ದುರಿತೌಘ ಮಂಜು ಮುಸುಕು ದೆರಿಯೇ | ಸಂಚಿತ ಮೊದಲ | ಹಂಸನು ಮೆರಿಯೆ 3 ಸಾಲ ಸ-ಚ್ಚಾಸ್ತ್ರಾ ದೇಳಿಗೆಗೆವಿದ್ವಜ್ಜ | ನಾಳಿ ಝೇಂಕರಿಸುತಲಿ ಮ್ಯಾಲನಲಿಯಿ | ಮೂಲ ರಘು ಪತಿಯ ದೇವಾಲಯದ ವಾದ್ಯಗಳು | ಘೇಳೆನಿಪ ನಿಜ ವೇದ ಘೋಷ ಕೇಳ ಬರುತಿದೆ ಜನಕೆ4 ಘನ ಪುಣ್ಯ ಪೂರ್ವಾದ್ರಿ ಕೊನಿಗೆ ಅರುಣಾಂಬರದಿ | ವಿನುತ ಜ್ಞಾನದ ಕಿರಣವನೆ ಪಸರಿಸಿ | ಜನದ ವಿದ್ಯದ ನಿದ್ರೆಯನೇ - ಜಾರಿಸಿ ಹೋದ | ಮಹಿಪತಿ ನಂದನ ನುಭಿವದಿ ಕೀರ್ತಿ ಪಾಡಿದನು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬೆಳಗಿರೇ ಆರತಿಯ ಮುತ್ತೈದೆರೆಲ್ಲರೂ ಕೂಡಿಬೆಳಗಿರೇಆರತಿಯ ಪ ಶ್ರೀ ಗುರು ಗಣಪತಿ ಚರಣಾರವಿಂದಕೆ ಬಾಗಿ ಮಣಿದು ಶಾರದಾಂಬಿಕೆ ಅಮ್ಮನ ಆಗಮೋಕ್ತದಿ ಪೂಜಿಸುವೆ ಚರಿತವನೀಗಳು ಕರುಣಿಸುತಿಹ ವಿಘ್ನರಾಜಗೆ ಮೊದಲ ಆರತಿಯ ಬೆಳಗಿರೆ 1 ಸರಸಿಜೋದ್ಭವನ ರಾಣಿ ಕಲ್ಯಾಣಿ ವಿದ್ಯೆಗಧಿಕಾರಿ ಸುರವಂದ್ಯೆ ಸುಪ್ರದಾಯಕಿ ಶಾರದಾಂಬಿಕೆಗೆ 2 ಶಾರದಾಂಬಿಕೆಗೆ ಹರಳಿನಾರತಿಯ ಬೆಳಗಿರೆ 3 ಬಿರು ಮುಗುಳಿನ ಚಂಪಕದಂತೆ ನಾಸಿಕ ಕದಪು ಕನ್ನಡಿಯವೇಲ್ ಲೋಕಮಾತೆಗೆ ಪರಿಮಳ ದಾರತಿ ಬೆಳಗಿರೆ 4 ಮರೆಯಲು ಗರಳಸ್ವರವು ಕೋಗಿಲೆಯಂತೆ ನಳಿದೋಳೆರಡು ಬೆರಳು ಸಂಪಿಗೆಯ ಸರಳಿರುವಂತೆ ಮೆರೆವ ಈ ಶಾರದಾಂಬಿಕೆಗೆ ಹವಳದಾರತಿ ಬೆಳಗಿರೆ 5 ಕಿರುಬಸುರಿನ ಸುಳಿನಾಭಿ ಇಟ್ಟ ವೋಲೆ ತ್ರಿವಳಿಯ ಹರಿಮಧ್ಯ ನಡುವಿಗೆ ಉಟ್ಟ ಪೀತಾಂಬರದ ಶ್ರೀ ಶಾರದಾಂಬಿಕೆಗೆ ಬಟ್ಟಲಾರತಿ ಬೆಳಗಿರೆ 6 ಮಂದಗಮನೆ ಜಗದ್ವಂದ್ಯೆಗೆರಗಿ ನಾ ಮುಂದೆ ಪೇಳುವ ಪರಿಪರಿ ವಸ್ತ್ರ ಭೂಷಣದಿಂದ ಮೆರೆವ ಮಣಿ ಮಕುಟ ಫಣಿಗೆ ಶ್ರೀಗಂಧ ಕುಂಕುಮವಿಟ್ಟ ಶಾರದಾಂಬಿಕೆಗೆ ಕುಂದಣ ದಾರತಿ ಬೆಳಗಿರೆ 7 ಪುತ್ಥಳಿ ಹಾರಹೀರಾವಳಿ ಮುತ್ತಿನಸರ ಚಿನ್ನದಸರ ಚಕ್ರಸರ ಜ್ವಲಿಸುತ್ತಲಿರುವ ಮೆರೆವ ಶ್ರೀ ಶಾರದಾಂಬಿಕೆಗೆ ಮುತ್ತಿನಾರತಿ ಬೆಳಗಿರೆ 8 ರತ್ನದಸರ ಪದಕದಸರವು ಏಕಾವಳಿಸರ ಕೊರಳೊಳಗಳ ನಳಿನ ದಾರತಿ ಬೆಳಗಿರೆ 9 ಹರಳು ಮೌಕ್ತಿಕದಿಂದ ಮೆರೆವ ಮೂಗುತಿ ಚಂದ್ರನ ಹರಳು ಚೌಲಿಯ ತುಂಬುಪರಿಮಳಿಸುವ ಪೂವು ಕರಿ ಮಣಿ ಹರಳಿನಾರತಿ ಬೆಳಗಿರೆ 10 ಮೆರೆವಚೂಡವು ಕೈ ಚಳಕಿಗೆ ಕೆತ್ತಿದ ಹರಳಿನ ವಡ್ಯಾಣ ನಡುವಿಗೆ ಅಳವಟ್ಟು ರೂಢಿಸಿ ಬಕುತರ ಪಾಲಿಪ ಶಾರದಾ ದೇವಿಗೆ ಆರತಿ ಬೆಳಗಿರೆ 11 ಥರಥರ ನವರತ್ನ ಖಚಿತದಿಂದೊಪ್ಪುವ ಕರವೆರಡರ ಭುಜ ಕೀರ್ತಿ ವಜ್ರದೊಳ್ ಬಿರಿದ ತೋಳ್ ಬಳೆವಾಲೆ ಶಾರದಾದೇವಿಗಾರತಿ ಬೆಳಗಿರೆ 12 ಚಿನ್ನದ ಕಿರುಗೆಜ್ಜೆ ಅಂದಿಗೆ ಗಿಲಿಗಿಲಿರೆನ್ನಲು ಹಾರ ಹೊಯ್ದೊಡರು ಬಿರಿಚೊಕ್ಕ ಚಿನ್ನದ ಸರಪಳಿ ಭಾರಿಗಳ ನೆಳೆವ ಸುಪ್ರಸಂಗನೆಗಾರತಿಯ ಬೆಳಗಿರೆ 13 ಪಿಲ್ಲಿಯುಕಿರು ಬೆರಳಲಿ ಮಿಂಚಿನಂತಿಹುದಿಲ್ಲಹರಳು ಮಂಚಿಕೆ ಕೊಡೆ ಹೊಳೆಯುವ ಚೆಲುವ ಕಾಲುಂಗರ ವರ ವೀರ ಮುದ್ರಿಕೆಯಲಿ ಒಪ್ಪುತಲಿಹ ಶಾರದಾಂಬಿಕೆಗೆ ಮಲ್ಲಿಗೆ ಯಾರತಿಯ ಬೆಳಗಿರೆ 14 ಭಾರಕೆ ಶಾರದೆ ಒಲಿಯುತ ದೇಹದ ಕಾಂತಿ ಯಿಂದ ದಿಕ್ಕನು ಮುತ್ತೀನಾರತಿಯ ಬೆಳಗಿರೆ 15 ಕರುಣಾಂಬೆ ಕಾಶ್ಮೀರ ಪುರವರಧೀಶ್ವರಿ ಪರಮಹಂಸವರ್ಯ ಪರಿ ಪರಿ ರುದ್ರನ ಪೋಲ್ವ ನಿಶದದುತಿ ಮೂರ್ತಿ ಪರಿಪರಿ ಆರತಿಯ ಬೆಳಗಿರೆ 16 ಪುಷ್ಪ ಧೂಪ ದೀಪಗಳಿಂದ ಸಡಗgದಿಂದಲಿ ಸಮರ್ಪಿಸಿ ಜಯ ಜಗದರೂಪೆ ರಕ್ಷಿಸು ಮಾತಾಯೆ ಕರುಣಿಸು ಎಂದು ಕಡು ಬೆಡಗಿನ ಆರತಿಯ ಬೆಳಗಿರೆ 17 ಕಡುಬು ಕಜ್ಜಾಯ ಪಾಯಸಕ್ಷೀರ ದಧಿಘೃತತಡೆಯಿಲ್ಲ ತುಂಬಿ ದೇವಿಗೆ ಕರಿಯ ಕಬ್ಬಿನ ಕೋಲು ಆರತಿಯ ಬೆಳಗಿರೆ 18 ಹರಿವಾಣ ನೇವೇದ್ಯಜಗನ್ಮಾತೆ ತಾಬೂಲವನಿತ್ತು ಶರಣೆಂದು ನೂತರದಾರತಿಯ ಬೆಳಗಿರೆ 19 ತಮ್ಮಟೆ ಭೇರಿ ಬುರುಗು ಶಂಖ ಮೃದಂಗವು ನೀಲದಾರತಿಯ ಬೆಳಗಿರೆ 20 ಭೋರಿಡುವವಾದ್ಯವು ಉಡುಕು ಕೊಳಲು ತಂಬೂರಿ ತಾಳಗಳಿಂದ ಸ್ವರವೆತ್ತಿಪಾಡಿ ಆರತಿಯ ಎತ್ತಿರೆ 21 ಬೇಡುತ ಪೂಮಳೆಗರೆಯುತ ಹೊಡೆದು ಕೊಂಡಾಡಿ ವಂದಿಸಿದರು ಶಾರದಾಂಬಿಕೆಗೆ ಹೂವಿನಾರತಿಯ ಎತ್ತಿರೆ 22 ವರದಾಂಬೆ ಶಾರದಾಂಬಿಕೆಯನು ಪೂಜಿಸಿದವರಿಗೆ ಪರಿಪರಿ ವಿದ್ಯವ ಕರುಣಿಸೆ ನರರಿಗೆ ಇಷ್ಟಾರ್ಥದ ವರವಿತ್ತು ಕೊಡುವಳು ಮರಕತದಾರತಿ ಬೆಳಗಿರೆ 23 ಹಿರಿಯಮಗನ ರಾಣಿ ಶಾರದಾಂಬಿಕೆಯ ಸುರಮುನಿ ಜನರಿಗಿಷ್ಟಾರ್ಥವ ವರವಿತ್ತು ಮಂಗಳಾರತಿಯ ಬೆಳಗಿರೆ 24
--------------
ಕವಿ ಪರಮದೇವದಾಸರು
ಬೆಳಗೋಣು ಹರಿಗೆ ಆರುತಿಯ | ಸಂಗೀತಹಾಡಿ ಪಾಡಿ ನಲುವಿಂದ ಬೇಗ ಬಾರೆ ನಳಿನಾಕ್ಷಿ ಬಾ ಪ ಬಾಲೆ ಶೀಲೆ ದ್ರೌಪದಿ ಭಕುತಿಲಿ ಧ್ಯಾನಿಸಿ ಧೇನಿಸಿ ಕೇಳಿ ಅಕ್ಷಯಶಾಲಿ ಗರೆದ ದೇವ ದೇವಗೆ || ಶೈಲವನೆತ್ತಿದಾತಗೆ | ಗೋಪಗೆ | ಬಹುರೂಪನಿಗೆ | ಶೃಂಗಾರ ಸುಗುಣಾಂಬುಧಿಗೆ ಜಯಶುಭ ಮಂಗಳೆಂದು 1 ದೀನೋದ್ಧಾರಿ ಧೇನುಕ ಮಾತುವೈರಿಗೆ | ಶೌರಿಗೆ | ವೇಣುನೂದುತ ಗೋವ್ಗಳ ಸಲುಹಿದಾತಗೆ ನಾಥಗೆ | ಮಂದರ ಕರುಣಾತರಗೆ 2 ಭಾಸುರ ಶಾಮಸುಂದರವಿಠಲ ಸ್ವಾಮಿಗೆ | ಪ್ರೇಮಿಗೆ | ವಾಸವಾತ್ಮಜಗೆ ಒಲಿದು ಧುರದೊಳು ಕಾಯ್ದಗೆ ಶ್ರೀದಗೆ || ವಾಸುಕಿತಲ್ವಶಾಯಿಗೆ | ಗೋಪಗೆ | ಬಹುರೂಪನಿಗೆ | ದಾಸರ ಒಡನಾಡುವಗೆ | ಜಯಶುಭ ಮಂಗಳೆಂದು 3
--------------
ಶಾಮಸುಂದರ ವಿಠಲ
ಬೇಗ ಬಾರೊ ಕರುಣಾವಾರಿಧೆ ಕೃಪೆ ದೋರೊ ನಿನ್ನನು ಸೇರಿದೆ ಪ. ಜನಕನ ವಲಿಸಿದ ಜಾನಕಿ ವರದ ಕನಕ ವಿಭೂಷಣ ಕಲ್ಮಷಹರ ಬೇಗ 1 ಭಂಜನ ದೈವತರಂಜನ ನಿರಂಜನ 2 ಅರಿಗಣ ಕರ್ಷಣ ಅದ್ಭುತ ದರ್ಶನ ಪರಮ ಪುರುಷ ಶೇಷಗಿರಿಯ ಭೀಮರ್ಶನ 3
--------------
ತುಪಾಕಿ ವೆಂಕಟರಮಣಾಚಾರ್ಯ
ಬೇಗನೆ ದಯಮಾಡೊ ಸಾಗರ ನಿಲಯ ನಾಗಶಯನ ನೀನು ಹ್ಯಾಗೆ ಮಹ ಕರುಣಾಳು ಪ ಭಕ್ತರ ದುರ್ಭವ ಕತ್ತರಿಸದೆ ಇಡೀ ಭಕ್ತರ ಬೆಂಬಲೆಂಬೋಕ್ತಿ ಸತ್ಯವೇನು 1 ಪಾದ ನುತಿಸಲು ಕಾಯದಾದಿ ನುತ ಪೋಷನೆಂಬ ಮಹ ಸ್ಮøತಿವಾಕ್ಯ ಸರಿಯೇನೋ 2 ಶ್ರೀಶ ಶ್ರೀರಾಮ ನಿನ್ನದಾಸರ ನೊರೆದಿಹಿ ದಾಸರ ಪ್ರಾಣನೆಂಬುವಾಚ ಲೇಸೇನೆಲೋ 3
--------------
ರಾಮದಾಸರು
ಬೇಗನೆ ಬಾರೊ ದೇವ ಜಾಗೂ ಮಾಡದೆ ಪ ಬೇಗನೆ ಬಾರೊ ನೀನು ನಾಗಶÀಯನ ಕೃಷ್ಣ ಯೋಗಿ ಜನರು ಕಂಡು ಪೋಗಲೀಸರೆ ನಿನ್ನ ಅ.ಪ. ಹತ್ತಾವತಾರವಾಯ್ತು ಮತ್ತಗಜವ ಪೊರೆದೆ ಉತ್ತಮಪದ ಧ್ರುವಗಿತ್ತೆ ಮತ್ತೇನು ಕಾರ್ಯವೈಯ್ಯ 1 ತರಳ ಪ್ರಹ್ಲಾದನ ಕರುಣಾದಿ ಸಲಹಿದೆ ದುರುಳರ ಸದೆದ ಪರಿಯೆಲ್ಲವಾಯಿತು2 ಪರಿ ರೂಪವ ಧರಿಸಿದ ಎನ್ನದೇವ ಸಿರಿರಂಗೇಶವಿಠಲನೆ ಕರವೆತ್ತಿ ಮುಗಿಯುವೆ 3
--------------
ರಂಗೇಶವಿಠಲದಾಸರು
ಬೊಮ್ಮಗಟ್ಟಿರಾಯ ಪಾಲಿಸೋ ನಮ್ಮ ನೀ ಮಾರಾಯ ಧರ್ಮ ಕಾಮ್ಯಾರ್ಥ ಕೊಡುವೊ ಕರುಣಾಂಬುಧಿ ಪ ನಿಗ್ರ(ಹ) ಮಾಡುತ ಪರಮಾಗ್ರ(ಹ) ದಲಿ ಸೀಗ್ರ (ಶೀಘ್ರ?) ದಿಂದಲಿ ದಶಗ್ರೀವನ ಲಂಕ- ದುರ್ಗದಲ್ಲಾಡಿದ್ಯಗ್ನಿಯ ಒಡಗೂಡಿ 1 ರಾಮಪಾದಾಂಬುಜ ಸೇವಕ ಸೇತುವೆ ಪ್ರೇಮದಿ ಕಟ್ಟಿ ನಿಂತನು ರಣದಿ ನೇಮದಿಂದಲಿ ಸಂಜೀವನ ತಂದಾತ ವಾಹನನಾದ ತ್ರಿಧಾಮದೊಡೆಯಗೆ 2 ವಾತಾತ್ಮಜ ರಘುನಾಥಗೆ ನೀ ನಿಜ- ದೂತನೆನಿಸಿ ಬಹು ಪ್ರೀತಿಯಲಿ ಭೂತಳದೊಳು ಪ್ರಖ್ಯಾತಿಯ ಪಡೆದೆ ನಿ- ರ್ಭೀತನಾದ ಭೀಮೇಶಕೃಷ್ಣನ ಪ್ರಿಯ 3
--------------
ಹರಪನಹಳ್ಳಿಭೀಮವ್ವ
ಬೋಧ ಭಾನು ಬರುತೈದನೆ ನಾದ ವಿನೋದವೆಂಬ ಈಕೋಳಿಯು ಕೂಗುತೈತವರನೀಕ್ಷಿಸೆ ಸತ್ಕರುಣಾ ಕಟಾಕ್ಷದಿಂಏಳಯ್ಯ ಗುರುವರ್ಯ ಏಳಯ್ಯ ಗುರುವರ್ಯ ಯತಿಜನಾಲಂಕಾರಪಏಳು ಭಕ್ತಾಧಾರ ಯಮನಿಯಮ ಸಂಚಾರಏಳು ವಿದ್ವದ್ವರ್ಯ ಪರಮಹಂಸಾಚಾರ್ಯ ಏಳು ಗೋಪಾಲ ಯತಿವರ್ಯಾ ಸ್ವಾಮಿಅ.ಪಆಧಾರ ಮಣಿಪೂರ ಹೃದಯ ಕಮಲಗಳಲ್ಲಿನಾದ ಬಿಂದು ಕಲೆಗಳೆಂಬರುಣನುದುಸಿದಬೋಧೆಯೆಂಬರ್ಕನಾವಿರ್ಭವಿಸಿದನು ಸಹಸ್ರಾರ ಕಮಲದ ತುದಿಯಲಿವೇದವೇದ್ಯಾನಂತಮಹಿಮ ಚಿನ್ಮಯರೂಪನಾದಸೌಖ್ಯಾಕಾರ ಕಲಿ ಕಲ್ಮಷವಿದೂರಆದಿಮಧ್ಯಾಂತರಹಿತಾನಂದ ನಿತ್ಯನಿಜಬೋಧನೊಲಿದುಪ್ಪವಡಿಸಾ ಸ್ವಾಮೀ1ನಿತ್ಯವೆ ನಿಮ್ಮ ಪದವೆಂದಜಾಂಡವನಿದನನಿತ್ಯವೆಂದಖಿಳ ವಿಷಯಗಳಲಿ ವಿರತರಾಗಿಅತ್ಯಂತ ಶಮ ದಮಾದಿಗಳೆಂಬ ಸಾಧನದಿ ಮುಕ್ತಿ ಸುಖವನು ಬಯಸುತಾಪ್ರತ್ಯಕ್ಷರ ಬ್ರಹ್ಮರೈಕ್ಯವರಿಯದೆ ವಿದುಗಳತ್ಯಂತ ತ್ವರೆುಂದ ನಿಮ್ಮ ಮುಖಕಮಲದಿಂತತ್ವಮಸಿ ವಾಕ್ಯದರ್ಥವ ತಿಳಿಯಬೇಕೆಂದು ನೃತ್ಯವನು ಮಾಡುತಿಹರೂ ಸ್ವಾಮಿ 2ದೇಹೇಂದ್ರಿಯಾಂತರಂಗವನೇತಿಗಳಿದು ಸಂದೇಹದಲಿ ಕೂಟಸ್ಥ ನೀನೆಂಬುದರಿಯದೆಮಹಾ ವಿಚಾರಿಸಿ ಭಕ್ತ ಸುಲಭನೆ ದಾಟಿಸೈ ಮೋಹಸಾಗರವನೆನುತಾಪಾಹಿ ನೊಂದೆವು ಸಂಸ್ಕøತಿಯ ಬಂಧದಲಿ ನಮ್ಮಬೇಹುದೈಪಾಲಿಸಲು ಯೋಗನಿದ್ರೆಯ ಬಿಟ್ಟುದಾಹರಿಸು ವೇದಾಂತಗೋಪ್ಯವನೆನುತ ನತಸಮೂಹ ಕಾದಿದೆ ಕೃಪಾಳು ಸ್ವಾಮಿ 3ಕೇಳಿ ಭಕುತರ ದೈನ್ಯ ಸಲ್ಲಾಪಗಳನಿಂತುಲೀಲಾವತಾರ ಗುರುರಾಯನೊಲಿದೆದ್ದವರಲಾಲಿಸುತ ಧನ್ಯರಾದಿರಿ ಸನ್ಮತಿಯೊಳಿಂತು ಮೇಳಾಪವಾುತೆನುತಾಬಾಲರಿರ ನಿಮ್ಮನಂತಃಕರಣದ ಧ್ಯಾನಜಾಲಸುತ್ತಿರಲಾಗಿ ನಿಮ್ಮ ನಿಜವನು ಮರೆದುಕಾಲಕರ್ಮಾಧೀನವಾಗಿ ನೊಂದಿರಸತ್ಯವೀ ಲೋಕವೆಂದರಿಯದೆ ಎನಲು ಗುರುವೇ 4ಜೀವೇಶ್ವರರ ವಾಚ್ಯ ಲಕ್ಷ್ಯಾರ್ಥವನು ನಿಚ್ಚ ಭಾವಿಸುತ ಬ್ರಹ್ಮ ಕೂಟಸ್ಥರೆಂದವರಿಗೆ ಸ್ವಭಾವದಿಂ ಭೇದವಿಲ್ಲೌಪಾಧಿಕವಿದೆಂದು ಸಾವಧಾನದಲಿ ತಿಳಿದೂನಾವೆ ಪರಿಪೂರ್ಣಾತ್ಮರೆಂದು ಬೋಧಾಮೃತವಸೇವಿಸಿದಡನುದಿನಂ ಕೃತಕೃತ್ಯರಹಿರೆನಲ್‍ದೇವ ಕೃತಕೃತ್ಯರಾದೆವು ನಮೋ ಎನುತ ಸ್ವಭಾವ ಪದದಲಿನಿಂದರೂ ಸ್ವಾಮೀ 5
--------------
ಗೋಪಾಲಾರ್ಯರು
ಭಕುತಿಯ ಪಾಲಿಸು ಜೀಯಾ ಮುಂದೆ ಮುಕುತಿಗೊಡವೆ ಯಾಕೆ ನೀನೊಲಿದ ಮೇಲೆ ಪ ತನುವೆ ನಿನ್ನಾಧೀನವೆನಿಸು ಇದು ಅನುದಿನ ಕೊಡು ಏಕಪ್ರಕಾರ ಮನಸು ಧನ ವಡವೆಯ ಕಂಡ ಕನಸು ಎಂದು ನಿತ್ಯ ನಿನ್ನಂಘ್ರಿ ನೆನಸು 1 ತತ್ವದ ಮತದೊಳಗಿರುಸು ಪುಶಿ ಉತ್ತರ ಮತವೆಂಬ ಮಾರ್ಗವ ಮೆರೆಸು ಉತ್ತಮರೊಳಗೆನ್ನನಿರಿಸು ಭವ ವತ್ತುವ ನಿನ್ನ ನಾಮಮೃತ ಸುರಿಸು 2 ಶ್ರವಣ ಮನನ ಧ್ಯಾನವೀಯೋ ಎನ್ನ ಅವಗುಣವೆಣಿಸದೆ ಕರುಣಾಳು ಕಾಯೊ ಅವಸಾನದಲಿ ನೀನೆ ಗತಿಯೊ ತ್ರೈ ಭುವನೇಶ ವಿಜಯವಿಠ್ಠಲ ನೀ ದೊರೆಯೋ 3
--------------
ವಿಜಯದಾಸ
ಭಕ್ತ ಮಂದಾರಿಣಿ ಭವಭಯನಿವಾರಿಣಿ ಭಕ್ತಿಮುಕ್ತಿ ಪ್ರದಾಯಿನಿ ತ್ರಿಭುವನೈಕ ಜನನಿ ಪ. ಭುವನತ್ರಯಮೋಹಿನಿ ಭಾನುಕೋಟಿಪ್ರಕಾಶಿನಿ ಭೂರಿಭೂಭುಜ ಸೌಭಾಗ್ಯದಾಯಿನಿ ಪಾಹಿಮಾಂ ಜನನಿ ಅ.ಪ. ಸಾಮಜಾಧಿಪಗಾಮಿನಿ ಕಾಮಿತಾರ್ಥಪ್ರದಾಯಿನಿ ರಾಮಣೀಯ ಸ್ವರೂಪಿಣಿ ಕಾಮಜನನಿ ಕಲುಷವಿಭಂಜಿನಿ 1 ಕನಕವಸನೆ ಕವಿಮನೊಲ್ಲಾಸಿನಿ ಸುಮನಸವರ ಪರಿತೋಷಿಣಿ ಕೋಮಲತರ ಕೋಕಿಲ ಮೃದುಭಾಷಿಣಿ 2 ಕಮಲ ಬಾಂಧವ ವಂಶ ಸಂಭವ ರಾಮಚಂದ್ರ ಸುಪ್ರೇಮಾಕಾಂಕ್ಷಿಣಿ 3 ವನಜ ಸಂಭವ ಸನ್ನುತೆ ಕನಕಭೂಷಣ ಭೂಷಿತೆ ಅನಿಲನಂದನ ಸೇವಿತೇ ಘನಕರುಣಾರಸಾನ್ವಿತೇ 4 ಅನಘ ಸದ್ಗುಣಭೂಷಿತೆ ಅನಿಮಿಷಾಧಿಪ ಪೂಜಿತೆ ಜನಕ ಭೂಪತಿ ಪೋಷಿತೇ ಘನಶೇಷಾದ್ರೀಶ ದಯಿತೆ5
--------------
ನಂಜನಗೂಡು ತಿರುಮಲಾಂಬಾ
ಭಕ್ತವತ್ಸಲ ಭಾರಕರ್ತಾ | ಕರುಣವಂತ ನಿತ್ಯ ನಿರ್ಮಲ ಸರ್ವ ಶಕ್ತ | ಶಾಂತಾತ್ಮಕ ಪ. ಸುತ್ತ ವಿರಜೆ ಉನ್ಮತ್ತ ಮುಕ್ತರ ನೃತ್ಯ ಗೀತೆ ವೈಚಿತ್ರದೋಲಗವು ಇತ್ತಂಡದಿ ಮೈಹತ್ತಿ ಕುಳಿತ ಸತಿಯ ರೆತ್ತಲಿತ್ತ ಬಂದ ಚಿತ್ರ ಮಹಿಮ ಹೇ ಅ.ಪ. ವಿಹಂಗ ಗಮನ ತು- ರಂಗರೂಪನೆ ಅಂತರಂಗದಿ ನೆಲಸಿ ಸು- ಸಂಗದಿಂದಲಿ ಲಿಂಗ ಭಂಗಗೈಸುತ ಜ- ನ್ಮಂಗಳ ಕಡೆ ಮಾಡು ರಂಗ ಕರುಣಾಪಾಂಗ ಇಂಗಡಲಳಿಯನೆ ತುಂಗ ಮಹಿಮ ನರ- ಸಿಂಗ ನಿನ್ನಯ ಚರಣಂಗಳ ತೋರಿಸೋ ಭಂಗಪಡುವೆ ಭವಹಿಂಗಿಸಿ ಪೊರೆ ಕಾ- ಳಿಂಗ ಮಥನ ಯದುಪುಂಗವ ಕರುಣಿ 1 ಗತಿ ನೀನೆ ಎಂದು ಶ್ರೀಪತಿ ನಿನ್ನ ಮೊರೆಹೊಕ್ಕೆ ಹಿತದಿಂದ ಕಾಯೊ ದ್ರೌಪದಿಯ ಕಾಯ್ದಂಥ ದೈವ ಚ್ಯುತದೂರ ಮುಕ್ತರ ಸ್ತುತಿಪ್ರಿಯ ಶ್ರೀ ವಾಯು- ಪಾದ ಪ್ರತಿ ಕಾಣೆ ನಿನಗೆಣೆ ಕರ್ಮ ಸು- ಪಥ ಕಾಣೆನು ಗತಿಯಿಲ್ಲದೆ ಶ್ರೀ- ಪತಿ ಕೃಪೆ ಮಾಡುತ ತತುವ ಮಾನಿಗಳ ಕೃತಿ ತಿಳಿಸುತ ನಿನ ತುತಿಸುವ ಮತಿಕೊಡು 2 ಗೋಪಿಕಂದನೆ ಬಾಲರೂಪಧಾರಕ ಮಧ್ವ- ರಪಾರ ಸ್ತುತಿ ಕೇಳಿ ಗೋಪೀಚಂದನದಿ ಬಂದು ಪರಿ ನಿಂತ ದೇವಪತಿ ಜನಗಳ ಪೊರೆದು ಕಾಪಾಡುವ ಕರ್ತ ಗೋಪಾಲಕೃಷ್ಣವಿಠ್ಠಲ ಶ್ರೀಪದ್ಮಜಮುಖ ಸುರಾಪ ಧರೇಂದ್ರರು ತಾಪಸಿಗಳೂ ನಿನ್ನ ವ್ಯಾಪಾರ ತಿಳಿಯದೆ ಗೋಪ್ಯಾದಿ ನುತಿಸಿ ಸ್ವರೂಪ ಯೋಗ್ಯತೆಯಂತೆ ವ್ಯಾಪಕ ನಿನ್ನಯ ರೂಪವ ಕಾಂಬರು 3
--------------
ಅಂಬಾಬಾಯಿ
ಭಕ್ತವತ್ಸಲನೆಂಬ ಬಿರುದು ನಿನಗಿರಲು ಭಕ್ತಜನಾಪತ್ತಿಗ್ಯಾಕೆ ನೀ ಬರದಿರುವಿ ಪ ಮುಕ್ತಿದಾಯಕನೆಂಬ ಯುಕ್ತ ಬಿರದ್ಹೊತ್ತಿರುವಿ ಚಿತ್ತಜಪಿತ ಭಕ್ತರ್ಹೊತ್ತಿಗ್ಯಾಕಿಲ್ಲೋ ನಿತ್ಯ ಬಿಡದ್ಹೊಗಳುವ ಸತ್ಯ ವೇದೋಕ್ತಿಗಳು ವ್ಯರ್ಥವೇನಯ್ಯಾ 1 ದೋಷನಾಶನೆ ನಿನ್ನ ಸಾಸಿರನಾಮಗಳಿಂ ಘೋಷಿಪರು ಮನುಮುನಿ ಬೇಸರಿಲ್ಲದಲೆ ದಾಸಜನರಾಶಕ್ಕೆ ಬೇಸತ್ತ ಬಳಿಕ ನಿನ ಗೀಸು ಬಿರುದುಗಳಿರ್ದು ಲೇಶವೇನಯ್ಯಾ 2 ಪರಮ ಕರುಣಾಕರ ಶರಣಜನಮಂದಾರ ಚರಣಸ್ಮರಿಪರ ಘೋರದುರಿತಪರಿಹಾರ ಖರೆಯಿರ್ದರಿಗೆನ್ನ ದುರಿತಮಂ ಪರಿಹರಿಸಿ ಕರುಣದಿಂ ರಕ್ಷಿಸೈ ಧರೆಗಧಿಕ ಶ್ರೀರಾಮ 3
--------------
ರಾಮದಾಸರು
ಭಕ್ತಾರ್ತಿ ಹರ ವಿಠಲ | ತೆತ್ತಿಗನ ಪಾಲಿಸೋ ಪ ಮುಕ್ತೀಶ ಕರುಣಾಳು | ಪ್ರಾರ್ಥಿಸುವೆ ನಿನ್ನಾ ಅ.ಪ. ಕರ ಪಿಡಿದು ಸಲಹೋ 1 ಭವ ತಾಪ | ಕಾರುಣ್ಯನಿಧಿಯೇ 2 ಯತಿಗಳ ಕಾರುಣ್ಯ | ಪಾತ್ರನಿರುವನುಯೀತಅತಿಶಯದ ಸೇವೆಗೆ | ಕಾತುರನು ಇರುವಾಮತಿಯಿತ್ತುಸತ್ಪಥಾ | ಪಥರಲ್ಲಿ ನಡಿಸಿವನರತಿಯು ಶ್ರೀ ಹರಿದಾಸ | ಶತ ಪತ್ರದೊಳಗೆ 3 ಪಾದ | ಅದ್ದೂರಿಯಲಿ ಭಜಿಪಶುದ್ಧ ಬುದ್ಧಿಯನಿತ್ತು | ಉದ್ಧರಿಸೊ ಹರಿಯೇ |ಅದ್ವೈತ ತ್ರಯದರಿಪು | ಬುದ್ಧಿಗೇ ಸಿಲುಕಲೀಶ್ರದ್ಧಾಳುವಿನ ಸಲಹೋ | ಶಬ್ಧ ಗೋಚರನೇ 4 ಕಾಮದಾನತಜನವ | ಶ್ರೀ ವರನೆ ಸರ್ವೇಶ ನೀವೊಲಿಯದಿನ್ನಿಲ್ಲ | ಪಾವನ್ನ ಮೂರ್ತೇಭಾವ ಕೋವಿಯುವ ದೇವ | ಭಾವದಲಿ ಮೈದೊಲೊಗೋವಿಂದಾಂಪತಿ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಭಕ್ತಿಯೆಂಬ ಹೆಣ್ಣ ಶಕ್ತಿಯನ್ನು ನೋಡಿ ಮುಕ್ತಾಶ್ರಯ ಲಕ್ಷ್ಮೀಪತಿಯನ್ನು ಪಾಡಿ ಪ. ಸ್ವಾನಂದ ಪರಿಪೂರ್ಣ ಪರಮ ಮಂಗಲಮೂರ್ತಿ ಶ್ರೀನಿವಾಸಗೆ ಸರ್ವ ಸಂಗವ ಬಿಡಿಸಿ ತಾನಿರುವಲ್ಲಿಗೆ ಹಿಡಿದೆಳತರಿಸಿ ಸಾನುರಾಗದಿ ತನ್ನ ಸಂಗಡಲಿರಿಸಿ 1 ಅಣುರೇಣು ತೃಣಕಾಷ್ಠ ಪರಿಪೂರ್ಣ ಸರ್ವೇಶ ಗಣನೆಯಿಲ್ಲದ ದಿವ್ಯ ಗುಣಗಳುಳ್ಳವನು ಎಣಿಸಲು ಇವಳ ಜನರ ದೋಷಗಳನು ಕ್ಷಣ ಬಿಟ್ಟಗಲದೆ ಇವಳ ಕೂಡಿಹನು 2 ಭೂಧರ ಗಿರಿವರ ಶೋಭಿತ ಮೂರ್ತಿ ಮಾಧವ ಪರಿಹರಿಸುವನು ಭವಾರ್ತಿ ಪಾದ ಪಲ್ಲವಗಳ ನಂಬಿದವರಿಗರ್ಥಿ ಸಾಧಿಪ ಕರುಣಾಳು ಹರಿಯ ಶ್ರೀಕೀರ್ತಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಭಜತಿ ಭುಜಗಶಯನಂ ಸದಾಹೃದಿ ಪ ಶಿಖರಾಲಯಮನಿಶಂಅ.ಪ ಕರುಣಾಯಾತ್ರಾಗತಮೀಶ 1 ಮಕಳಂಕ ಚರಿತ್ರಂ 2 ಪುಂಡರೀಕ ದಿವ್ಯಾದ್ರಿವಿಹಾರಂ 3 ಮಂಡಜಾತಾವರವಾಹನ ಗಮನಂ 4 ವರದ ವಿಠಲ ಮನುಚಿಂತಯದಾದ್ಯಂ 5
--------------
ಸರಗೂರು ವೆಂಕಟವರದಾರ್ಯರು