ಒಟ್ಟು 1149 ಕಡೆಗಳಲ್ಲಿ , 97 ದಾಸರು , 869 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏಳಿ ಮೊಸರ ಕಡೆಯಿರೇಳಿ-ಗೋ-|ಪಾಲ ಚೂಡಾಮಣಿ ಏಳದ ಮುನ್ನ ಪಇಂದುಮುಖಿಯರೆದ್ದು ಮುಖವನೆ ತೊಳೆದು ಶ್ರೀ-|ಗಂಧ-ಕಸ್ತೂರಿ-ಕುಂಕುಮಗಳಿಟ್ಟು ||ಚಂದ್ರಗಾವಿಯ ಸೀರೆಯ ನೀರಿವಿಟ್ಟು ಮು-|ಕುಂದನ ಪಾಡುತ ಚದುರೆಯರೆಲ್ಲ 1ಹೊಂಗೊಡ ಬೆಳಗಿಟ್ಟು ಪೊಸಮೊಸರನೆತುಂಬಿ|ರಂಗನೀಲದ ಕಡೆಗೋಲನಿಟ್ಟು ||ಶೃಂಗಾರವಾದ ರೇಶಿಮೆಯ ನೇಣನೆ ಹಿಡಿದು |ರಂಗನ ಪಾಡುತ ಚದುರೆಯರೆಲ್ಲ 2ಬಡನಡು ಬಳುಕುತ ಕುಚಗಳಲ್ಲಾಡುತ |ಕಡಗ-ಕಂಕಣ ಝಣಝಣರೆನ್ನುತ ||ಮುಡಿದ ಮಲ್ಲಿಗೆ ಹೂವು ಎಡಬಲಕುದುರೆ ಪಾ-|ಲ್ಗಡಲೊಡೆಯನ ಪಾಡುತ ಚದುರೆಯರು 3ಹುಸಿನಿದ್ದೆಯಲಿ ಶ್ರೀಕೃಷ್ಣನು ಮಲಗಿರೆ |ಹಸಿದು ಆಕಳಿಸಿ ಬಾಯಾರುತಲಿ ||ಮುಸುಕಿನೊಳಿದ್ದು ಬೆಣ್ಣೆಯ ಬೇಡುತಲಿರೆ |ಶಶಿವದನನಿಗೆ ಬೆಣ್ಣೆಯ ನೀಡಲೋಸುಗ 4ಏಣಾಂಕಮುಖಿಯರು ಹೊಸ ಬೆಣ್ಣೆಯನು ತೆಗೆದು |ಪ್ರಾಣಪದಕ ಕೃಷ್ಣನಿಗೆ ಕೊಡಲು ||ಚಾಣೂರ ಮಲ್ಲನ ಗೆಲಿದು ಬಾರೆನುತಲಿ ||ಜಾಣ ಪುರಂದರವಿಠಲನಪ್ಪಲುಗೋಪಿ5ದೃಷ್ಟಿಯು ತಾಗೀತೆಂದಿಟ್ಟು ಅಂಗಾರವ |ತಟ್ಟೆಯೊಳಾರತಿಗಳ ಬೆಳಗಿ ||ಥಟ್ಟನೆ ಉಪ್ಪು-ಬೇವುಗಳನಿವಾಳಿಸಿ|ತೊಟ್ಟಿಲೊಳಿಟ್ಟು ಮುದ್ದಾಡುವಳೊ 6ನಮ್ಮಪ್ಪ ರಂಗಯ್ಯ ಅಳಬೇಡವೊ ದೊಡ್ಡ |ಗುಮ್ಮ ಬಂದಿದೆ ಸುಮ್ಮನಿರು ಎನುತ ||ಅಮ್ಮಿಯನೀಯುತ ಅಮರರನಾಳ್ದನ |ರಮ್ಮಿಸಿ ರಮ್ಮಿಸಿ ಮುದ್ದಾಡುವಳೊ 7ಏಸೊ ಬೊಮ್ಮಾಂಡವ ರೋಮದೊಳಿರಿಸಿದ |ವಾಸುದೇವನನೆತ್ತಿ ಕೊಂಬುವಳೊ ||ನಾಶರಹಿತನಾಯುಷ್ಯ ಹೆಚ್ಚಲೆಂದು |ರಾಶಿದೈವಕೆ ತಾ ಬೇಡಿಕೊಂಬುವಳೊ 8ಮಾಧವಬಾ ಮದುಸೂದನ ಬಾ ಬ್ರ-|ಹ್ಮಾದಿವಂದಿತಹರಿಬಾ ಯೆನುತ ||ಆದಿ ಮೂರುತಿ ಶ್ರೀ ಪುರಂದರವಿಠಲನ |ಆದರದಲಿ ಮುದ್ದಾಡುವಳೊ 9
--------------
ಪುರಂದರದಾಸರು
ಏಳು ನಾರಾಯಣ ಏಳು ಲಕ್ಷ್ಮೀರಮಣಏಳು ಶ್ರೀಗಿರಿಯೊಡಯ ಶ್ರೀವೆಂಕಟೇಶ ಪಕಾಸಿದ್ದ ಹಾಲನ್ನು ಕಾವಡಿಯೊಳ್ ಹೆಪ್ಪಿಟ್ಟುಲೇಸಾಗಿ ಕಡೆದು ಹೊಸ ಬೆಣ್ಣೆ ಕೊಡುವೆಶೇಷಶಯನನೆ ಏಳು ಸಮುದ್ರ ಮಥನವಮಾಡುದೇಶ ಕೆಂಪಾಯಿತು ಏಳಯ್ಯ ಹರಿಯೇ 1ಅರುಳು ಮಲ್ಲಿಗೆ ಜಾಜಿ ಪರಿಮಳದ ಪುಷ್ಪಗಳಸುರರುತಂದಿದ್ದಾರೆ ಬಲು ಭಕುತಿಯಿಂದಅರವಿಂದನಾಭ ಸಿರಿವಿಧಿಭವಾದಿಗಳೊಡೆಯಪಿರಿದಾಗಿ ಕೋಳಿ ಕೂಗಿತೇಳಯ್ಯ ಹರಿಯೇ 2ದಾಸರೆಲ್ಲರು ಬಂದು ಧೂಳಿದರ್ಶನಕೊಂಡುಲೇಸಾಗಿ ತಾಳ ದಂಡಿಗೆಯ ಪಿಡಿದುಶ್ರೀಶಪುರಂದರವಿಠಲರಾಯ ನಿಮ್ಮ ಪಾದವನುಲೇಸಾಗಿ ಪೊಗಳುವರು ಹರಿಯೇ
--------------
ಪುರಂದರದಾಸರು
ಒಳ್ಳೆವೀರನೆಂಬೊ ಮಾತು ಸುಳ್ಳು ಕೃಷ್ಣರಾಯಮೈಗಳ್ಳನೆಂದು ಕರೆಯೋರಲ್ಲೊ ಅಜರ್ಂುನರಾಯ ಪ.ವೀರಮಾಗಧಯುದ್ಧಕ್ಕೆ ಬಾರೆಂದು ಕರೆಯಲು ಅಂಜಿನೀರೊಳಗೆ ಹೋಗಿ ಅಡಗಿದೆಯಲ್ಲೊ ಶ್ರೀಕೃಷ್ಣರಾಯ 1ಯುದ್ಧ ಮಾಡುವೆನೆಂದು ಸನ್ನದ್ದನಾಗಿ ಬಂದು ಅಂಜಿಗುದ್ದುಹೊಕ್ಕೆಯಲ್ಲೊ ನೀನು ಅರ್ಜುನರಾಯ2ಜರಿಯ ಸುತನು ಯುದ್ದದಲ್ಲಿ ಕರಿಯೆ ಅಂಜಿಕೊಂಡು ನೀನುಗಿರಿಯಮರೆಯಲ್ಲಡಗಿದೆಲ್ಲೊ ಶ್ರೀ ಕೃಷ್ಣರಾಯ 3ಬಿಂಕದಿಂದ ಬಾಣ ಧರಿಸಿ ಶಂಕಿಸದೆ ಅಂಜಿ ಬಂದುಮಂಕು ಮನುಜರಂತೆ ನಿಂತ್ಯೊ ಅರ್ಜುನರಾಯ 4ದೊರೆಯು ಮಾಗದ ಯುದ್ದಕ್ಕೆ ಬಾರÉಂದು ಕರೆದರೆ ಅಂಜಿವರಾಹನಾಗಿ ಓಡಿದೆಲ್ಲೊ ಶ್ರೀ ಕೃಷ್ಣರಾಯ 5ಪೊಡವಿರಾಯರೆಲ್ಲ ಒಂದಾಗಿ ಬಿಡದೆ ಯುದ್ಧಮಾಡೆನೆಂಬೊಬಡಿವಾರವು ಎಷ್ಟು ನಿನಗೆ ಅರ್ಜುನರಾಯ 6ಬಿಲ್ಲು ಧರಿಸಿ ಮಾಗಧನು ಬಿಲ್ಲಿಗೆ ಬಾ ಎಂದು ಕರಿಯೆಹಲ್ಲು ತೆರೆದು ಹೆದರಿಕೊಂಡ್ಯೊ ಶ್ರೀಕೃಷ್ಣರಾಯ 7ಸಿಟ್ಟಿನಿಂದಕರ್ಣಬಾಣ ಬಿಟ್ಟನಯ್ಯ ನಿನ್ನ ಮ್ಯಾಲೆಕೊಟ್ಟಿಯಲ್ಲೊ ಮುಕುಟವನ್ನು ಅರ್ಜುನರಾಯ 8ಹಲವುರಾಯರೆಲ್ಲ ನಿನ್ನ ನೆಲಿಯುಗಾಣದಂತೆÀ ಮಾಡೆಬಲಿಯ ಹೋಗಿ ಬೇಡಿದೆಲ್ಲೊ ಶ್ರೀ ಕೃಷ್ಣರಾಯ 9ಕರ್ಣನ ಬಾಣವು ನಿನ್ನಹರಣಮಾಡಲೆಂದು ಬರಲುಮರಣ ತಪ್ಪಿಸಿದೆನಲ್ಲೊ ನಾನು ಅರ್ಜುನರಾಯ 10ನಡವಕಟ್ಟಿ ವೈರಿಗಳ ಹೊಡೆಯಲಿಕ್ಕೆ ಅರಿವೊ ಕೃಷ್ಣಕಡಿಯಲಿಕ್ಕೆ ಜಾಣನಯ್ಯ ಶ್ರೀ ಕೃಷ್ಣರಾಯ 11ಎಷ್ಟು ಗರ್ವದಿಂದ ದ್ವಿಜಗೆಕೊಟ್ಟೊ ಭಾಷೆ ಶಪಥ ಮಾಡಿನಷ್ಟವಾಯಿತಲ್ಲೊ ವಚನ ಅರ್ಜುನರಾಯ 12ಎಲ್ಲ ವ್ಯಾಪ್ತಿ ಎಂಬೊ ಮಾತು ಎಲ್ಲಿದೆಯೊ ಈಗನಿನ್ನವಲ್ಲಭೆಯ ಒಯ್ದನ್ಹ್ಯಾಂಗೊ ಶ್ರೀಕೃಷ್ಣರಾಯ 13ಧೀರಾಧೀರರೆಲ್ಲ ಕೂಡಿ ವೀರನೆಂದು ಪೊಗಳಲುನಾರಿಯ ಸೀರೆಯ ಹ್ಯಾಂಗ ಸೆಳಿದಾನಯ್ಯ ಅರ್ಜುನರಾಯ 14ಶಂಭರಾರಿ ಪಿತನೆ ನಿನ್ನಜಂಬವೆಷ್ಟು ಕದ್ದುಕೊಂಡುತಿಂಬೋದಕ್ಕೆ ಜಾಣನಯ್ಯ ಶ್ರೀಕೃಷ್ಣರಾಯ 15ಎಷ್ಟುಗರುವ ನಿಮ್ಮೆಲ್ಲರ ಅಷ್ಟಗುಣವ ನಾನ ಬಲ್ಲೆಹೊಟ್ಟೆಬಾಕ ಭೀಮನಯ್ಯ ಅರ್ಜುನರಾಯ 16ಬತ್ತಲೆಂದು ನಗಲು ಜನರು ಮತ್ತೆನಾಚಿ ಕುದುರೆಯನ್ನುಹತ್ತಿಕೊಂಡು ಓಡಿದೆಲ್ಲೊ ಶ್ರೀ ಕೃಷ್ಣರಾಯ 17ವ್ಯರ್ಥಕೈಪ ಧರಿಸಿ ಕನ್ಯೆ ಎತ್ತಿಕೊಂಡು ಒಯ್ದಮ್ಯಾಲೆಹತ್ತು ಜನರು ನಕ್ಕರಲ್ಲೊ ಅರ್ಜುನರಾಯ 18ಕೃಷ್ಣಾರ್ಜುನರ ಈ ಸಂವಾದ ಸಂತುಷ್ಟನಾಗಿ ರಮಿ ಅರಸುಇಷ್ಟಾರ್ಥವ ಕೊಡಲಿ ನಮಗೆ ಶ್ರೀ ಕೃಷ್ಣರಾಯ 19
--------------
ಗಲಗಲಿಅವ್ವನವರು
ಔತುಕೊಂಡಿ ಯಾಕೊ ನರಹರಿಪ್ರಾರ್ಥನೆಯನ್ನು ಕೇಳೊ ಸ್ವಾಮಿ ಪವೇದ ತಂದುಭಾರಪೊತ್ತುಕೋರೆ ತೋರಿ ಕರುಳ ಬಗೆದುಬೇಡಿ ಭೂಮಿ ದೂಡಿನೃಪರಸಾಗರವ ಬಂಧಿಸಿದ ಭಯವೋ 1ಕದ್ದು ಬೆಣ್ಣೆ ಕಳ್ಳನೆನಿಸಿವದ್ದು ತ್ರಿಪುರಾಸುರರ ಸದೆದುಹದ್ದನೇರುವುದನೆ ಬಿಟ್ಟುಹಯವನೇರಿದ ಭಯವೋ ಸ್ವಾಮಿ 2ತರಳಗೊಲಿದು ಬರಲು ನಿನ್ನಇರಿಸಿ ಸ್ನಾನಕೆನುತ ಪೋಗಿತ್ವರದಿ ಬಂದು ನೋಡಲು ಅದ್ಭುತದಿ ಬೆಳೆದ ಭಯವೋ ದೇವ 3ನಿಲುಕದಿರಲು ನಿನ್ನವದನಯುವಕ ನೋಡಿ ಮೊರೆಯನಿಡಲುತವಕಿಸುವಿ ಬಾಲಕನೆ ನಿನ್ನಸಮಕೆ ಎನ್ನ ಮಾಡಿಕೊ ಎಂದು 4ಸಿರದಿ ಕರವನಿಡುತ ತನ್ನಸಮಕೆ ಬರುವ ತೆರದಿ ನಿನ್ನಸಿರವ ಪಿಡಿದು ಬಿತ್ತಿ ಸ್ತುತಿಸೆಕುಳಿತೆ ಕೂಡಲಿಯ ತೀರದಲಿ 5ಭಕ್ತರೆಲ್ಲ ನೆರೆದು ನಿನ್ನಭಕ್ತಿಪಾಶದಿಂದ ಬಿಗಿದುಇಚ್ಛೆ ಬಂದ ತೆರದಿ ಕುಣಿಸೆಮೆಚ್ಚಿಅವರಪೊರೆವೆÀ ದೇವ6ಬಂದ ಜನರು ಛಂದದಿಂದತುಂಗಭದ್ರೆ ಸಂಗಮದಲಿಮಿಂದು ನಿನ್ನ ವಂದಿಸುವರೊತಂದೆ ಕಮಲನಾಭವಿಠ್ಠಲ 7
--------------
ನಿಡಗುರುಕಿ ಜೀವೂಬಾಯಿ
ಔಪಾಸನವಮಾಡುದಾಸ ನಾನೆಂದುಶ್ರೀಪತಿದಾನ ಧರ್ಮವೆ ಮೋಕ್ಷವೆಂತೆಂದೂ ಪ.ವನಿತೆ ಲಕುಮಿಯು ದಾಸಿ ಮುಕ್ತಾಮುಕ್ತಗಣವೆಲ್ಲ ಹರಿದಾಸರುಹನುಮತ್ ಸ್ವಾಮಿಯು ರಾಮದಾಸತ್ವದ ಭಾಗ್ಯವನು ಹೊಂದಿವಿರಿಂಚಿಪದವಿಯ ಪಡೆದನು1ಅನಾದ್ಯನಂತಕಾಲಸಂಸೃತಿಯಲ್ಲಿಆನಂದವು ಮುಕ್ತಿಲಿನೀನೆಂದಿಗು ಸ್ವಾಮಿ ನಾನು ಭೃತ್ಯರಭೃತ್ಯಅನಿಮಿಷರೆಲ್ಲ ನಿನ್ನೂಳಿಗದವರೆಂದು 2ದಾರಾಪತ್ಯಾದಿ ಬಳಗ ದಾಸಿ ದಾಸರುನಾರಾಯಣ ದೇವನವರವರ ಯೋಗ್ಯತೆಸಾರಸಂಬಳ ಸೇವೆಮೀರದೀವ ದೀನೋದ್ಧಾರ ಕೃಷ್ಣನೆಂದು 3ಕರಣತ್ರಯಗಳಿಂದ ನಿರಂತರಮರೆಯೂಳಿಗವ ಮಾಡಿಸಿರಿದಾರಿದ್ರ್ರ್ಯತೆಗಳಿಗ್ಹಿಗ್ಗಿ ಕುಗ್ಗದೆಪರಮಭಕುತಿ ಭಾಗ್ಯ ದೊರಕಿದುಲ್ಲಾಸದಿ4ದುರಿತಕೋಟಿಗಂಜದೆ ಸಾಧುನಿಕರಹರಿಯ ಸೇವೆಯ ಬಿಡದೆವರವಿರತಿ ಜ್ಞಾನ ಭಕ್ತಿಲಿ ಪ್ರಸನ್ವೆಂಕಟಹರಿಕೊಟ್ಟಷ್ಟೆ ಪರಮಸಂಬಳ ಸಾಕೆಂದು5
--------------
ಪ್ರಸನ್ನವೆಂಕಟದಾಸರು
ಕಣ್ಣು ಮುಚ್ಚೆನ್ನಾ ಆಡಿಸೆಸಣ್ಣವರನ್ನು ಹೊರಗಡಗಿಸೆ ಪಗಟ್ಟಿ ಹುಡುಗರು ಅವರೆಲ್ಲಮಟ್ಟ ಮಾಯಾಗಿ ಹೋದರು ||ಥಟ್ಟನೆದ್ದು ಯನ್ನ ಕೈಯವರಮುಟ್ಟಿಸದಿರೆ ಬಿಡೆ ನಿನ್ನ 1ಪಾಯಿಸ ಹೋಳಿಗೆ ಮಾಡಿಬಾಯಿಗೆ ಕೈದೋರೆಗೋಪಿ||ನಾಯೆರುವಿನೆ ನಿನ್ನ ತಲೆಗೆನೀ ಯೆರಕೊಳ್ಳ ಒಲ್ಲೆನೆನ್ನೆ 2ಅಣ್ಣನ ರಂಬಿಸಿ ಕರೆದುಹಣ್ಣುಗಳವಗೆ ಕೊಡಬೇಡೆ ||ಚಿನ್ನದ ಗೊಂಬೆ ಬಾ ಎಂದುಬಣ್ಣ ಬಣ್ಣದಲೆನ್ನ ಕರೆಯ 3ನೀ ಹಾರ ಮಗನೆಂದುಕೇಳಿಮೇದಿನಿಯೊಳು ನಾ ಹೆಚ್ಚೆನ್ನೆ ||ಹೋದಬಾರಿಹೊಟ್ಟಿಗೆಮಾರಿಹೋದಳೂ ನಿಮ್ಮಮ್ಮನೆನೆ 4ಯನಗೆ ಪಾಪ ನೀನಾಗಿತಿನಲಿಕ್ಕಪ್ಪಚ್ಚಿ ಬೇಡೇ ||ಮಣಿಗುಂಡೆನಗೆ ಕೊಡುಯೆಂದುಮುನಸುಗುಟ್ಟೆನ್ನನು ಕಾಡೇ 5ದೃಷ್ಟಿ ತಾಕಿತು ಮಗಗೆಂದುಕಟ್ಟಿಸೆ ಯಂತ್ರ ಇನ್ನೊಮ್ಮೆ ||ಕೊಟ್ಟು ಅಮ್ಮಿಯ ರಂಬಿಸಿತೊಟ್ಟಿಲೊಳಗಿಟ್ಟು ತೂಗೇ 6ಏನು ಪುಣ್ಯ ಮಾಡಿದೆನೋಕ್ಷೋಣಿಗೆ ಹತಾರ್ಥವಾಗಿ ||ಪ್ರಾಣೇಶ ವಿಠಲನು ನಿನ್ನತಾನೇ ಕೊಟ್ಟನು ಯನಗೆನ್ನ 7
--------------
ಪ್ರಾಣೇಶದಾಸರು
ಕಂದ ಹಾಲ ಕುಡಿಯೊ-ನಮ್ಮ ಗೋ-|ವಿಂದ ಹಾಲ ಕುಡಿಯೊ ಪವೃಂದಾವನದೊಳು ಬಳಲಿ ಬಂದೆಯೊ ರಂಗ ಅ.ಪಶೃಂಗಾರವಾದ ಗೋವಿಂದ-ಚೆಲುವ |ಪೊಂಗೊಳಲೂದುವ ಚೆಂದ ||ಅಂಗನೆಯರ ಒಲುಮೆಯಿಂದ-ನಮ್ಮ |ಮಂಗಳಮೂರತಿಯ ಮೋರೆ ಬಾಡಿತಯ್ಯ 1ಆಕಳೊಡನೆ ಹರಿದಾಡಿ-ನಮ್ಮ |ಶ್ರೀಕಾಂತ ಗೆಳೆಯರ ಕೂಡಿ ||ಲೋಕವಈರಡಿಮಾಡಿ-ನಮ್ಮ |ಸಾಕುವ ಪಾದವು ಬಳಲಿದುವಯ್ಯ 2ಸದಮಲ ಯೋಗಿಗಳೆಲ್ಲ-ನಿನ್ನ |ಪದವ ಬಣ್ಣಿಸುತಿಪ್ಪರೆಲ್ಲ ||ಯದುಕುಲ ಚೌಪಟ ಮಲ್ಲ-ಹಾಲ |ಹದನು ವಿೂರಿತಯ್ಯ ಪುರಂದರವಿಠಲ 3
--------------
ಪುರಂದರದಾಸರು
ಕದ್ದು ಕಳ್ಳಿಯ್ಹಾಂಗ ಮುಯ್ಯಮಧ್ಯರಾತ್ರಿಲೆ ತಂದ ಮ್ಯಾಲೆ ಬುದ್ಧಿವಂತಳೆಸುಭದ್ರಾ ಬುದ್ದಿವಂತಳ ಪ.ಮೂರುಸಂಜಿಯಲಿ ತರುವ ಮುಯ್ಯಘೋರರಾತ್ರಿಯಲೆ ತಂದಮ್ಯಾಲೆಚೋರಳೆಂದು ನಿನಗೆ ನಮ್ಮಊರ ಜನರು ನಗತಾರಲ್ಲ 1ಒಳ್ಳೆ ಮಾನವಂತಿ ಆದ ನೀನುಕಳ್ಳರ ಕಾಲದಿ ಬಾಹೋರೇನತಳ್ಳಿಕೋರಳೆಂದು ನಮ್ಮಪಳ್ಳಿ ಜನರು ನಗತಾರಲ್ಲ 2ಬಹಳೆ ಜಾಣಳು ಆದರೆ ನೀನುಕಾಳರಾತ್ರಿಲಿ ಬಾಹೋರೇನತಾಳ ತಾಳನಿನ್ನ ಕುಶಲಹೇಳಲಿನ್ನ ಹುರುಳು ಇಲ್ಲ 3ಕತ್ತಲಲಿ ಒಬ್ಬ ದೈತ್ಯಎತ್ತಿ ಒಯ್ದರೇನು ಮಾಡುವಿಪಾರ್ಥ ರಾಯನ ಧರ್ಮದಿಂದಮಿತ್ರಿಮಾನವಉಳಿಸಿಕೊಂಡಿ4ಗಾಢ ರಾತ್ರಿಲೆ ಒಬ್ಬ ದೈತ್ಯ ಓಡಿಸಿಒಯ್ದರೇನು ಮಾಡುವಿಮಾಡೋರೇನ ಮೂರ್ಖತನವಮೂಢಳೆಂದು ಜನರು ನಗರೆ 5ಸಂಧ್ಯಾಕಾಲದಿ ಮುಯ್ಯತಂದುನಿಂತೇವ ನಿನ್ನ ದ್ವಾರದಲ್ಲಿಬಂದುನಮ್ಮನ ಕರೆಯಲಿಲ್ಲಸಂದಿ ಹೋಗಿ ಸೇರುªರೇನ 6ನೀಲವರ್ಣನ ತಂಗಿಯರಿಗೆಚಾಲವರಿದು ಕರೆದೆವಲ್ಲಮೇಲುದಯದಿ ಬಂದರೆ ನೀನುಮೂಲೆಗ್ಹೋಗಿ ಸೇರೋರೇನ 7ಭಾಮೆ ರುಕ್ಮಿಣಿ ದೇವಿಯರಿಗೆಕಾಲಿಗೆರಗಿ ಕಲೆಯೋರೆಲ್ಲಆಲಯಕೆ ಬಂದರೆ ನೀನುವ್ಯಾಲನಂತೆ ಅಡಗೋರೇನ 8ಕೃಷ್ಣರಾಯನ ತಂಗಿಯರೆಂಬೋದೆಷ್ಟಗರುವಬಿಡಿಸಲುಬಂದೆವುಪಟ್ಟು ಮಾಡಿ ಬಿಡತೇವೀಗಧಿಟ್ಟ ರಾಮೇಶ ನೋಡುವಿಯಂತೆ 9
--------------
ಗಲಗಲಿಅವ್ವನವರು
ಕೃಷ್ಣ ತನ್ನರೂಪಇಟ್ಟಉತ್ಕøಷ್ಟ ಭಕ್ತರ ಮನೆ ಬಿಟ್ಟು ಹೋಗಲಾರದೆ ಪ.ಮಿತಿಯಿಲ್ಲದೆ ರೂಪದಿಂದ ಕುಂತಿ ಸುತರಭಕ್ತಿಗೆ ಲಕ್ಷ್ಮೀಪತಿ ಅಲ್ಲೆ ನಿಂತಮಿತರೂಪ ದ್ವಾರಕೆಗೆ ಬಂದಇಂಥ ಅತಿಶಯ ಶಕ್ತಿ ನೋಡುವದೆಂಥ ಚಂದ 1ಚೆಲ್ವನ ನೋಡುವರು ಜನರುಮನೆ ಒಲ್ಲದೆ ಜರಿದಾತನಲ್ಲೆ ಇದ್ದರುಫುಲ್ಲನಾಭನರೂಪಚಾರುಇದಕೆಲ್ಲರೂ ನಗಲುಹೃದಯದಂಬರದಲ್ಲಿ ತುಂಬಿದರು 2ಧಿಟ್ಟ ಬೊಮ್ಮಾದಿಗಳೆ ಸಾಕ್ಷಿಇದನಷ್ಟು ಬಲ್ಲಂಥ ಶಿವನೊಬ್ಬ ಸಾಕ್ಷಿಅಷ್ಟ ದಿಕ್‍ಪಾಲಕರೆ ಸಾಕ್ಷಿಮತ್ತಷ್ಟು ವೈಭವದ ಸುರರೆಲ್ಲ ಸಾಕ್ಷಿ 3ಭಕ್ತ ಪ್ರಲ್ಹಾದನೆ ಸಾಕ್ಷಿಇಂಥ ಉತ್ತುಮನೆನಿಸುವ ಧ್ರುವನೊಬ್ಬ ಸಾಕ್ಷಿಸತ್ಯ ಅಜಮಿಳನೊಬ್ಬ ಸಾಕ್ಷಿನಮ್ಮ ಮಿತ್ರಿ ದ್ರೌಪತಾದೇವಿ ಅತ್ಯಂತ ಸಾಕ್ಷಿ 4ಪಂಡಿತಬಲಿಯೊಬ್ಬ ಸಾಕ್ಷಿಜಲದಿ ಕಂಡ ಅಕ್ರೂರ ಅವನೊಬ್ಬ ಸಾಕ್ಷಿಪುಂಡರೀಕನೊಬ್ಬ ಸಾಕ್ಷಿರಮಿಗಂಡ ಭಕ್ತರ ಕಾದು ಕೊಂಡಿಹ ನಿಜ 5
--------------
ಗಲಗಲಿಅವ್ವನವರು
ಕೇಳೆಗೋಪಿಗೋಪಾಲ ಮಾಡಿದ ಬಲು |ದಾಳಿಯ ಗೋಕುಲದಿ ಪತಾಳೆಲಾರೆವೆ ತವಕದಲಿ ಕಂದಗೆ ಬುದ್ಧಿ |ಹೇಳೆ ಕೃಷ್ಣವ ಕರೆದು ಅ.ಪಸರಿರಾತ್ರಿಯೊಳು ಸರಸರನೆ ಮನೆಗೆ ಬಂದು |ಸುರಿದು ಪಾಲ್ಪೆಣ್ಣೆಗಳ ||ಉರೋಜಗಳಿಗೆಕರಸರಿಸಿ ಕಣ್ಗಳನು |ತೆರೆದು ನೋಡುವನೆ ನಮ್ಮ 1ಗಂಡನು ಮನೆಯೊಳಗಿರಲು ಬಂದು ಕೃಷ್ಣ |ಭಂಡ ಮಾತುಗಳ ಬಹು ||ತುಂಟತನದಲಾಡಿಉದ್ದಂಡಕಠಿಣಕಾಯ |ದುಂಡುಕುಚವ ಪಿಡಿದ 2_______ವದ ಮೇಲಿರಲು ತಾ |ಸೀರೆಯ ಸೆಳೆವ ನೋಡೆ ||ಆರಿವರೆಂದು ವಿಚಾರಿಸಿ ನೋಡಲು |ಮೋರೆಯ ಬಾಗಿದನೆ 3ಕೇರಿಯೊಳಗೆದಧಿಮಾರುತಿರಲು ಕೃಷ್ಣ |ಸಾರಿ ಬಂದು ಮೊಸರ ||ಸೂರೆಗೊಂಡು ಪರನಾರಿಯರ ನೆರೆದು ತಾ |ಘೋರರೂಪದಿ ಮೆರೆದ 4ಆಡಲೇತಕೆ ನಮ್ಮ ಬಾಗಿಲಂಗಳದೊಳು |ಬೇಡುವ ಜಲ ದೈನ್ಯದಿ ||ನೀಡುವೆ ಜಲ ಜಲಜಾಕ್ಷ ಬಾಬಾ ಎನೆ |ಮಾಡುವರತಿಎಂಬನೆ5ಹುಡುಗನೆಂದು ಕೈಯ ಪಿಡಿಯ ಪೋಗಲು ನಮ್ಮ |ಉಡೆಮುಡಿ ಪಿಡಿದ ನೋಡೆ ||ಪಡೆದವಳಿಗೆ ಪೇಳುವೆ ನಡೆ ಎನೆ ಮಚ್ಚ |ಕೊಡಲಿ ತೋರುವನೆಗೋಪಿ6ಮಡದಿಯರೆಲ್ಲರು ಮಿಯುತಲಿರೆ ಮೈ |ಉಡುಗೆಯ ತೆಗೆದುಕೊಂಡು ||ಸಡಗರದಲಿ ಬೇಡಿಕೊಳ್ಳೆ ವಸ್ತ್ರಗಳನು |ಕೊಡದೆ ಅಡವಿಗೆ ನಡೆದ 7ಬೆಣ್ಣೆಯ ತಿಂದು ತಮ್ಮಣ್ಣಗೆ ತಾ ಕೊಟ್ಟು |ಚಿಣ್ಣರ ಬಡಿವ ನೋಡೆ ||ಬಣ್ಣಿಸಿ ನಮ್ಮ ಬಾಯಿಗೆ ಬೆಣ್ಣೆ ತೊಡೆಯುತ |ಬೆಣ್ಣೆಯ ತಿಂದಿರೆಂಬ 8ಏಣಲೋಚನೆ ಸರ್ಪವೇಣಿ ನಮ್ಮ ಮನೆ |ಓಣಿಯೊಳಗೆ ಪೋಗುತ ||ಕಾಣದಂತೆ ಚಕ್ರಪಾಣಿ ನಮ್ಮೊಳು ತನ್ನ |ತ್ರಾಣವ ತೋರಿದನೆ 9ಪದುಮನಾಭನು ಪುರದ ಚದುರಿಯರಿಗೆ ತಾನು |ಮದನಶಾಸ್ತ್ರವ ಪೇಳುತ ||ಮುದದೊಳಗಿರಲವರೊಡೆಯ ಬರಲು ಕೃಷ್ಣ |ಕುದುರೆಯ ನೇರಿದನೆ 10ಎಷ್ಟುಪದ್ರವ ಕೊಟ್ಟರು ಗೋಕುಲದೊಳು |ಬಿಟ್ಟವನಿರಲಾರೆವೆ ||ಸೃಷ್ಠಿಯೊಳಗೆ ಸರ್ವಾಭಿಷ್ಟದ ಪುರಂದರ-|ವಿಠಲ ಸಲಹುವನೆ 11
--------------
ಪುರಂದರದಾಸರು
ಕೋಲಕೋಲೆಂದು ಕೋಮಲೆಯರೆಲ್ಲರಕಾಲುಗೆಜ್ಜೆಯು ಘಿಲ್ಲು ಘಿಲುಕೆಂದು ಇಲ್ಲೆ ಪ.ಸಿಂಧುಶಯನನ ಚಂದದಲೆ ನೋಡಿಆನಂದ ಭಾಷ್ಪದ ಬಿಂದು ಉದುರುತ ಪಾಡಿಮಂದಹಾಸದಿ ಮನೆಗೆ ಬಾರೆನಲುಕೂಡಿಕೊಂಡು ಕೃಷ್ಣನ ಸಭೆಯ ಪ್ರವೇಶಮಾಡಿ 1ಕರಲಾಘವ ಧರ್ಮ ಕೊಟ್ಟನು ರಾಜ ಶ್ರೇಷ್ಠನು ಮನನರಹರಿಯಲ್ಲಿಟ್ಟಿಹನು ವರಸಿಂಹಾಸನ ಏರಿದಶ್ರೇಷ್ಠ ತೋರಿದ ಬಲುಹರುಷ ಬೀರಿದರಾಜಗೋಪಾಲನ ನೋಡುವ ವರವ ಬೇಡುವ 2ಜಳಕುಜಳಕುರಂಗ ಜಳಜಳಿಸುತ ಬರಲುಬೆಳಕು ತುಂಬಿತು ಬಹಳೆಮಂದಿರದಲಿಥಳಕು ಥಳಕನೆ ಹೊಳೆವ ಸಿಂಹಾಸನದÀಲಿಕುಳಿತ ಕೃಷ್ಣನು ಅಣಕಿಸಿ ಸೂರ್ಯನ 3ಭೇರಿತುತ್ತೂರಿನಾನಾಪರಿವಾದÀ್ಯವಸಾರಿ ಕುಳಿತ ಧೀರ ಮುರಾರಿಚಾರುಮಲ್ಲಿಗೆ ಮಳೆಗರೆದ ಸುಖಸುರಿವರರಾಯರು ಏನು ಧನ್ಯರೆÉ ರಾಜಗೋಪಾಲನ್ನ ನೋಡುವ 4ಹಲವು ರಾಯರು ಹಲವು ಯಾದವರುಬಲುಸೊಗಸಿಲೆ ಬಂದು ಕುಳಿತಾರೆ ಅವರುಹಲಧರನ ಹತ್ತಿರೆ ರಾಮೇಶನವರುಜಲಜಾಕ್ಷನ ನೋಡುತಲೊಪ್ಪುತಿಹರು 5ಕಡು ಚಲ್ವ ರಾಮೇಶನ ಮಡದಿಯರುಉಡುರಾಜಮುಖಿಯರು ನಡೆದು ದ್ರೌಪತಿಸುಭದ್ರೆಯರ ಮಾನÀ ಶುದ್ಧೆಯರಹರಿಯ ಅಡಿಗೆರಗುವ ರಾಜಗೋಪಾಲನ ನೋಡುವ 6
--------------
ಗಲಗಲಿಅವ್ವನವರು
ಕೋಲೆಂದು ಪಾಡಿರೆಕೋಮಲೆಯರೆಲ್ಲಗೋಪಾಲರಾಯನಮಡದಿಯರುಕೋಲಪ.ಶ್ರೀದೇವಿಯರ ಕೂಡ ವಾದ ಸರಸವೆಆದರದಿ ಪಾದಕ್ಕೆರಗಿಕೋಲಮಾಧವನರಸಿಯರ ಮೋದದಿಕರೆಯೆ ವಿನೋದವ ನುಡಿದಾನುರಾಯ 1ಸರಿಯ ರಾಣಿಯರ ಕೂಡ ತರವೇನು ಸರಸವುಕರವಜೋಡಿಸಿ ಕಮಲಾಕ್ಷಿಕೋಲಎರಗಿ ದೇವಿಯರಿಗೆ ಕರಿಯೆ ಬ್ಯಾಗಎಂದುಹರದೆಯರಿಗೆ ನುಡಿದ ಭೀಮನು ಕೋಲ 2ಕೀರ್ತಿವಂತರ ಕೂಡ ಯಾತಕ್ಕೆ ಸರಸವುಮಾತಿನ ಸುಖದ ವಾಣಿಯರಕೋಲಸ್ತೋತ್ರವ ಮಾಡುತ ಪ್ರೀತಿಲೆ ಕರೆಯೆಂದುಪಾರ್ಥ ಮಾತಾಡಿದ ಸತಿಗೆ ಕೋಲ 3ಸಕಲ ಗುಣಾಢ್ಯರ ಸಖಳೆಂದು ಕರೆಸಿಕೊನಕಲಿ ಮಾತಾಡಬ್ಯಾಡಕೋಲಮುಖವ ನೋಡುತ ಅತಿ ಸುಖವ ಪಡಿರೆಂದುನಕುಲಮಾತಾಡಿದ ಸತಿಗೆಕೋಲ4ಇಂತು ರಾಮೇಶನ ಕಾಂತೆಯರ ಕರೆಯೆವೇದಾಂತ ವೇದ್ಯಳೆ ದ್ರೌಪತಿಕೋಲಪಂಥವ ಬಿಟ್ಟು ಸಂತೋಷದಿ ಕರೆಯೆಂದುಕಾಂತೆಗೆ ನುಡಿದ ಸಹದೇವ 5
--------------
ಗಲಗಲಿಅವ್ವನವರು
ಗುಜ್ಜಿರುಕ್ಮಿಣಿಗೆ ನಾಚಿ ಲಜ್ಜವಗೈಯ್ಯುತಲೆಮುಂದಕ್ಕೆ ಹೆಜ್ಜೆ ಹಾಕಲೊಲ್ಲಿ ಯಾಕೆಅರ್ಜುನನ ರಾಣಿ ಮುದ್ದು ಅರ್ಜುನನ ರಾಣಿ ಪ.ಒಬ್ಬರಿಗಿಂತ ಒಬ್ಬರ ಚಲ್ವಿಕೆಗೆ ಉಬ್ಬಿಹಳುಐವರ ನಿರ್ಭಯದಿ ನಾಚಿಕೆಯ ಬಿಟ್ಟುಒಬ್ಬಳೆ ಬೆರೆದಾಳು ದ್ರೌಪತಿಒಬ್ಬಳೆ ಬೆರೆದಾಳು 1ತರುಳ ರೈವರ ಚಲ್ವಿಕೆಗೆ ಮರುಳುಗೊಂಡಳುಸಭೆಯೊಳು ಅರಳು ಮಲ್ಲಿಗೆಯ ಮಾಲೆಯನುಕೊರಳಿಗೆ ಹಾಕಿದಳುಐವರ ಕೊರಳಿಗೆ ಹಾಕಿದಳು 2ಪಂಚ ಪಾಂಡವರ ನೋಡಿ ಚಂಚಲಾಗಿಹಳುನಾಚಿ ಹಂಚಿಕೆ ಹಾಕುವಾಗಜಾಣಿ ಮಂಚದಲ್ಲಿಹಳುದ್ರೌಪತಿ ಮಂಚದಲ್ಲಿಹಳು 3ಸರಿಕ ಸರಿಕ ನಾರಿಯರೆಲ್ಲಕರವಹೊಯ್ದರುಹೊರಗೆ ಬರಲ್ಹಾಂಗೆಂದು ಹೋಗಿಒಳಗೆ ಸೇರಿದಳು ದ್ರೌಪತಿಒಳಗೆ ಸೇರಿದಳು 4ಇಂದುರಾಮೇಶನ ಮಡದಿಯರುಬಿದ್ದು ನಗುವಂತೆನಾಚಿಸೆಂದು ಸೇರಿದಳೆ ಹೋಗಿಚಂದಾಗಿ ಆಕಾಂತೆ 5
--------------
ಗಲಗಲಿಅವ್ವನವರು
ಗುರುರಾಯರ ನಂಬಿರೋ-ಮಾರುತಿಯೆಂಬ ಪಗುರುರಾಯರ ನಂಬಿ ಬಿಡದೆ ಯಾವಾಗಲು |ದುರಿತವ ಕಳೆದು ಸದ್ಗತಿಯ ಪಡೆವರೆಲ್ಲ ಅ.ಪವನಧಿಯ ಮನೋವೇಗದಿಂದ ಲಂಘಿಸಿ ಮಹಿ-ತನುಜೆಯ ಶೋಕತಾಪವ ಕಳೆದು ||ವನವ ಬೇರೊಡನೆ ಕಿತ್ತೀಡಾಡಿ ಎದುರಾದದನುಜರ ಸದೆದು ಲಂಕೆಯ ತನ್ನ ಸಖಗಿತ್ತ 1ಕೌರವ ಬಕ ಹಿಡಿಂಬಕ ಕೀಚಕರೆಂಬ |ಕ್ರೊರಸಂತತಿಯೆಲ್ಲ ನುಗ್ಗಲೊತ್ತಿ ||ಘೋರಪಾತಕಿದುಶ್ಯಾಸನ ರಕುತವಹೀರಿ ಮುದದಿ ಮುರವೈರಿಯ ಭಜಿಸಿದ 2ಜೀವೇಶರೊಂದೆಂಬ ದುರ್ವಾದಿಗಳ ಕು-ಭಾವಶಾಸ್ರ್ತಗಳೆಲ್ಲ ತರಿದೋಡಿಸಿ ||ಕೋವಿದರಿಗೆ ಸದ್ಛಾಷ್ಯ ಸುಧೆಯನಿತ್ತುದೇವ ಪುರಂದರವಿಠಲ ಸೇವಕನಾದ 3
--------------
ಪುರಂದರದಾಸರು
ಗೋಕುಲದೊಳಗಿರಲಾರೆವಮ್ಮ-ಗೋಪಮ್ಮ ಕೇಳೆ |ಗೋಕುಲದೊಳಗಿರಲಾರೆವಮ್ಮ ಪಸಾಕು ಸಾಕು ನಮಗೇಕೆ ರಚ್ಚೆಗಳು |ಆ ಕೃಷ್ಣನಪರಿನೀ ಕೇಳಮ್ಮಅ.ಪಹಾಲು-ಮೊಸರು ಕದ್ದರೆ ಕಳಲಿ-ಗೋಪಮ್ಮ ಕೇಳೆ |ಮೇಲಿಟ್ಟ ಬೆಣ್ಣೆ ಮೆದ್ದರೆ ಮೆಲಲಿ-ಗೋಪಮ್ಮ ಕೇಳೀ ||ರೇಳು ಭುವನದೊಳಾಡುತಲಿರಲಿ |ಆಲದೆಲೆಯ ನಮ್ಮಾಲಯವನೆ ಪೊಕ್ಕು-|ಬಾಲೆಯರೆಲ್ಲರ ಬತ್ತಲೆ ಮಾಡಿ ||ಶಾಲೆಗಳೆಲ್ಲ ಮೇಲಕೆ ಹಾರಿಸಿ |ಆಲಂಗಿಸಿಕೊಂಡು ಬರುವನಮ್ಮ 1ತಾನಾಗಿ ಮನೆಗೆ ಬಂದರೆ ಬರಲಿ-ಬಾಹೊ ವೇಳೆಯಲಿ |ಅಣುಗರ ಕೂಡಿಕೊಂಡು ಬರಲಿ-ಕರೆತಂದರೆ ತರಲಿ |ಅನುಬಂಧನಾಗಿ ಇದ್ದರೆ ಇರಲಿ ||ಅನುವು ಕಂಡುಕೊಂಡಾವೇಳೆಯಲಿ |ಉಣಬಿಟ್ಟಾಕಳ ಕರುಗಳನುಣಿಸಿ ||ಮನೆಯವರೆಲ್ಲರನೆಬ್ಬಿಸಿ ತಾನೇ |ಮನೆಯೆಲ್ಲವ ಸೂರಾಡಿದನಮ್ಮ 2ಬಾರಿಬಾರಿಗೆ ಮುನಿದ ಕಳ್ಳ-ಪತಿಯಂತೆ ತಾನು |ನೂರಾರು ಹೆಣ್ಣ ಕೂಡಿದನಲ್ಲ-ಗೋಪಮ್ಮ ಕೇಳೆ |ಯಾರ ಮುಂದೆ ಹೇಳಲಿ ಸೊಲ್ಲ? ||ಓರಗೆಯಲಿ ಸಂಸಾರ ಮಾಡುವ |ನಾರಿಯರೆಲ್ಲರ ರಂಬಿಸಿಕರೆದು ವಿ-|ಕಾರ ಮಾಡದಂತೆ ಪುರಂದರವಿಠಲಗೆ |ಸಾರಿಸಾರಿ ನೀ ಬುದ್ಧಿ ಹೇಳಮ್ಮ 3
--------------
ಪುರಂದರದಾಸರು