ಒಟ್ಟು 1021 ಕಡೆಗಳಲ್ಲಿ , 96 ದಾಸರು , 868 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೆತ್ತ ತಾಯಿಗಿಂತ ಅತ್ಯಧಿಕ ಮಾಯವುಂಟೆಉತ್ತಮ ಅಶ್ವವ ಕತ್ತೆ ಹೋಲುವುದುಂಟೆ ಪ ವಿತ್ತವುಳ್ಳವನ ಕುಲ ಎಣಿಸುವುದುಂಟೆಸ್ವಾರ್ಥಕೆ ನ್ಯಾಯ ಎಂದಾದರೂ ಉಂಟೆ 1 ಅತ್ತೆಮನೆ ಸೇರುವಗೆ ಅಭಿಮಾನವುಂಟೆಬತ್ತಲೆ ತಿರುಗುವಗೆ ಭಯವು ಇನ್ನುಂಟೆ2 ಪೃಥ್ವಿಯೊಳಗೆ ಕಾಗಿನೆಲೆಯಾದಿಕೇಶವಗೆಮತ್ರ್ಯದೊಳನ್ಯ ದೇವರು ಸರಿಯುಂಟೆ 3
--------------
ಕನಕದಾಸ
ಹೊಂದದಿರುವಿ ಯಾಕೆ ಮನವೆ ಇಂದಿರೇಶನ ಹಿಂದೆ ಮುಂದೆ ಸುಖವನೀವ ಮಂದರಾದ್ರಿಧರನ ಬೇಗ ಪ. ಸುತ್ತಿ ಬರುವಿ ನೀ ಮತ್ತೆ ವಿಷಯದಿ ಎತ್ತಲಾದರೀಶನಂಥ ವೃತ್ತಿ ದೊರೆವುದುಂಟೆ ನಿನಗೆ 1 ತೋಷಗೊಳುವೆನೆಂಬಾಸ್ಥೆ ತಾಳುವಿ ದೋಷಗಳಲಿ ಸಿಲುಕಿ ಬಹಳ ಘಾಸಿಯಾಗಿ ನೊಂದುಕೊಳುವಿ 2 ಅರಿಯದಾದಿ ನೀ ಹರಿಯ ಗುಣಗಳ ಚರಣಪದ್ಮ ಮಧುರ ರಸವ ಸುರಿವ ಸುಖವನೆಂದು ತಿಳಿವಿ 3 ಕೇಳು ನುಡಿಯನು ಕರುಣಾಳು ಒಡೆಯನು ತಾಳ ತನ್ನ ನಂಬಿದವರ ಗೋಳ ಬಿಡಿಸಿ ಸಲಹುತಿಹನು 4 ಭ್ರಾಂತಿಗೊಳದಿರು ಶ್ರೀಕಾಂತನಲ್ಲಿರುಕಂತುಜನಕ ವೆಂಕಟೇಶ ಚಿಂತಿತಾರ್ಥವಿತ್ತು ಕಾವ 5
--------------
ತುಪಾಕಿ ವೆಂಕಟರಮಣಾಚಾರ್ಯ
ಹೊನ್ನ ತಾ ಗುಬ್ಬಿ ಹೊನ್ನ ತಾ ಚೆನ್ನ ಗೋಪಾಲ ಚೆಲುವ ಕೃಷ್ಣನ ಕೈಗೆ ಪ. ಆಗಮವನು ತಂದು ಅಜಗಿತ್ತ ಕೈಗೆ ಸಾಗರವನೊತ್ತಿಕ್ಕಿ ಸುಧೆಯಿತ್ತ ಕೈಗೆ ನಾಗಶಯನ ನರಸಿಂಹನ ಕೈಗೆ 1 ಬಲಿಯ ದಾನವ ಬೇಡಿ ಬಂದಂಥ ಕೈಗೆ ಛಲದಿಂದ ಕ್ಷತ್ರಿಯರ ಕೊಂದಂಥ ಕೈಗೆ ಕಲಿ ವಿಭೀಷಣಗಭಯವಿತ್ತಂಥ ಕೈಗೆ ಬಲುಗಿರಿಯ ಬೆರಳಲ್ಲಿ ಆತಂಥ ಕೈಗೆ 2 ಪತಿವ್ರತೆಯರ ವ್ರತವಳಿದಂಥ ಕೈಗೆ ಹಿತವಾಜಿಯನೇರಿ ದುರುಳಮರ್ದನ ಕೈಗೆ ಸತಿ ಶಿರೋಮಣಿ ಲಕ್ಷ್ಮೀಕಾಂತನ ಕೈಗೆ ಚತುರ ಹೆಳವನಕಟ್ಟೆÉ ರಂಗನ ಕೈಗೆ 3
--------------
ಹೆಳವನಕಟ್ಟೆ ಗಿರಿಯಮ್ಮ
ಹ್ಯಾಗೆ ಉದ್ಧಾರ ಮಾಡುವನೋ ಹರಿ ಹೀಗೆ ದಿನಗಳ ಕಳೆಯುವರ ಪ. ಆದಿಮೂರುತಿ ಶ್ರೀ ದೇವ ಪದುಮನಾಭ ವೇದ ಉದ್ಧಾರನೆಂದನಲಿಲ್ಲ ಸಾದರದಲಿ ಹರಿ ಸಕಲರಿಗೊಡೆಯನೆಂ ದಾದರದಲಿ ನಾ ಪಾಡಲಿಲ್ಲ 1 ಮೃಚ್ಛಕೂರ್ಮಹರಿ ಸ್ವಚ್ಛÀವರಹನೆಂದು ಉಚ್ಚಧ್ವನಿಯಿಂದ ಕೂಗಲಿಲ್ಲ ತುಚ್ಛಕನ ಕೊಂದು ಅಚ್ಚ ಭಾಗವತಗೆ ಮೆಚ್ಚಿ ರಕ್ಷಿಸಿದನೆಂದೆನಲಿಲ್ಲ 2 ಚಲುವ ವಾಮನನಾಗಿ ಬಲಿಯ ದಾನವ ಬೇಡಿ ಮಲವನಳಿವ ಗಂಗೆ ಪಡೆದನೆಂದು ಕುಲವಳಿದು ಭೂಲಲನೆಯ ವಿಪ್ರರಿ ಗೊಲಿದು ಇತ್ತನೆಂದು ನೆನೆಯಲಿಲ್ಲ 3 ಸೀತೆಗಾಗಿ ಪಡೆಸವರುತ ಹರುಷದಿ ವಾತತನಯಗಜಪದವಿತ್ತನ ಈತನೆ ಪರದೈವನಾಥನು ಪರಕೆಂದು ಪ್ರೀತಿ ಭಕ್ತಿಯಲಿ ಮೈಮರೆಯಲಿಲ್ಲ 4 ಗೋಪಿಯರ ಕೂಡಿ ಗೋಪನ ಮನೆಯಲಿ ಶ್ರೀಪತಿ ಲೀಲೆಯ ತೋರ್ದನೆಂದು ಪಾಪದ ಕಾಷ್ಠಕೆ ಪಾವಕನಾಗಿಹ ತಾಪಹರನ ನಾ ನೆನೆಯಲಿಲ್ಲ 5 ಲಲನೇರ ವ್ರತವಳಿದು ಚಲುವ ಕುದುರೆ ಏರಿ ಕಲಿಮುಖರನು ಸದೆಬಡಿದನೆಂದು ಚಲುವ ಗೋಪಾಲನೆ ನೀನೇ ಗತಿ ಎಂದು ಹಲವು ಬಗೆಯಿಂದ ಪೊಗಳಲಿಲ್ಲ 6 ಗುರುಗಳು ಪೇಳಿದ ಪರಮ ರಹಸ್ಯವು ಅರಿವಾದರೂ ಅನುಭವ ಇಲ್ಲ ಪರಿಪರಿ ಮಹಿಮೆಯ ಉದಯಸ್ತ ಪರಿಯಂತ ಅರಿವು ಮನಕೆ ಎನಗಾಗಲಿಲ್ಲ 7 ದೇಹಸ್ತ ಹರಿ ಎಂದು ದೇಹವ್ಯಾಪ್ತನು ಎಂದು ದೇಹ ಗೇಹ ಜೀವ ಭಿನ್ನವೆಂದು ಶ್ರೀ ಹರಿ ಜೀವಾಂತರ್ಯಾಮಿಯಾಗಿಹನೆಂದು ಮೋಹವಳಿದು ಜ್ಞಾನ ಪುಟ್ಟಲಿಲ್ಲ 8 ತತ್ವಾಧಿಪತಿ ಹರಿ ತತ್ವಾಭಿಮಾನಿಗಳು ನಿತ್ಯ ಹರಿಮಾರ್ಗ ತೋರ್ವರೆಂದು ಸತ್ಯವಚನವನು ವಾಯು ಮತದಿ ನಂಬಿ ಭೃತ್ಯ ಭಾವವ ನಾ ವಹಿಸಲಿಲ್ಲ 9 ಎಷ್ಟು ಹೇಳಲಿ ಎನ್ನ ಅವಗುಣಗಳನೆಲ್ಲ ದೃಷ್ಟಿಯಿಂದಲಿ ನೋಡಿ ನೀನೆ ಸಲಹೋ ಬೆಟ್ಟದೊಡೆಯನಾಗಿ ಎಲ್ಲರ ಸಲಹುವ ಅಷ್ಟಭುಜ ಗೋಪಾಲಕೃಷ್ಣವಿಠಲ10
--------------
ಅಂಬಾಬಾಯಿ
(ಈ) ಶಾಂತಭಾವ81ಆವ ನರನ ಬಂಡಿಯ ಬೋವನುದೇವ ಬಿಡದೆ ನಮ್ಮನು ಕಾವನು ಪ.ನಾಕಪತಿಯ ಮುದವಳಿಯಲು ಕೋಪದಿನಾಕು ಮೂರುದಿನ ಮಳೆಗರೆಯಲುಆ ಕಮಲಾಕ್ಷ ಕರುಣದಿ ಗಿರಿಯನೆತ್ತಿಗೋಕುಲವಿಸರ ಭಯವ ಕಳೆದಹರಿ1ದುಷ್ಟ ಸುಯೋಧನನನುಜ ಸಭೆಯೊಳು ಯುಧಿಷ್ಠಿರ ಸತಿಯ ಲಜ್ಜೆಯಕೆಡಿಸೆಕಷ್ಟಿಸಿ ದ್ವಾರಕೆಕೃಷ್ಣ ಪೊರೆಯೆನಲುಶಿಷ್ಟಳಿಗಂಬರವಿತ್ತಭಿಮಾನಿ 2ಅಹ:ಪತಿಯ ಸುತ ಬವರದೊಳಗೆ ಸಿತವಾಹನನ ಶಿರ ಕೆಡೆಯೆಸೆಯೆಮಹಾಮಹಿಮ ರಥವಿಳೆಗೊತ್ತಿ ಭಕ್ತನಸ್ನೇಹದಿ ತಲೆಯನುಳುಹಿದ ದಯಾನಿಧಿ 3ಕಲಶಜಭವ ವೈರಾಟೆಯ ಬಸುರಿಗೆನಳಿನಭವಾಸ್ತ್ತ್ರವ ಬಿಡೆ ಕಂಡುಅಳುಕದವೋಲರಿಯಿಂದ ನಿವಾರಿಸಿಸುಲಭದಿ ಮಗುವ ಸಲಹಿದ ಸರ್ವೋತ್ತಮ 4ತನ್ನ ನಂಬಿದರಿಗಿನಿತು ಕುಂದಾದರೆತನ್ನದೆಂದರಿದಾವ ಕಾಲದಲಿಮನ್ನಿಸಿ ಪೊರೆಉರಗಾದ್ರಿಯೊಳೆಸೆವ ಪ್ರಸನ್ನ ವೆಂಕಟ ಭೂವರಾಹಾನಂತರೂಪ 5
--------------
ಪ್ರಸನ್ನವೆಂಕಟದಾಸರು
(ಮಂಗಳೂರಿನ ಪ್ರಾಣದೇವರನ್ನು ನೆನೆದು)ಪಾಲಿಸೆನ್ನಪಾವಮಾನಿಪಾವನಾತ್ಮ ಸುಜ್ಞಾನಿಪ.ಮೂರ್ಲೋಕದ ಸಚರಾಚರಜಾಲದಂತರಂಗ ಕರುಣಿ ಅ.ಪ.ಮೂರವತಾರವ ಗೈದು ಮುರಾರಿಯ ಪೂಜಿಸಿದೆಪಾರಮೇಷ್ಠಿಪದ ಪೊಂದಿದೆ ಭಾರತಿಮನೋಹರ 1ಪಾರಗಾಣರು ನಿನ್ನ ಮಹಿಮೆ ಫಾಲನಯನಾದಿಗಳುಕ್ರೂರಕರ್ಮಿಗಳೇನರಿವರು ಶ್ರೀರಾಮಶರಣ್ಯ 2ಪುರಹೂತಾದ್ಯಮರಾರ್ಚಿತ ಪೂರ್ವಮಧ್ವಂಸಅರಿವರ್ಗಗಳತಿಕ್ರಮವ ಧಿಕ್ಕರಿಸೈ ಸುಜ್ಞಾನವಿತ್ತು 3ಸರ್ವಾಪರಾಧಗಳನು ಸಾಧುವರದ ಕ್ಷಮಿಸುಗರ್ವಹಂಕಾರವೀಯದೆ ಗಜವರದನ ಭಕ್ತಿಯಿತ್ತು 4ಕರಣೀಕಾಗ್ರಣಿ ಮಂಗಲಪುರವರ ಪ್ರಾಣೇಶವರಲಕ್ಷ್ಮೀನಾರಾಯಣ ಶರಣಾಗತರೀಶ5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
139-8ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಮಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಪ್ರಾಣೇಶ ಶ್ರೀಶವಿಠ್ಠಲ ದಾಸರುಗಳಿಗೆಇನ್ನು ಅನೇಕರಿಗೆ ಶಿಷ್ಯತ್ವ ಇತ್ತುಪುನಃ ಶಿಷ್ಯರ ಸಹ ಕ್ಷೇತ್ರಾಟನ ಮಾಡಿಸ್ವರ್ಣಪುರಿಯೈದಿದರು ಸತ್ಯಬೋಧರಲಿ 1ಕರ್ಜಗೀ ದಾಸಪ್ಪಗೆ ಶ್ರೀದಾಂಕಿತ ಕೊಟ್ಟುಶ್ರೀಜಗನ್ನಾಥದಾಸರು ಮುಂದು ಹೊರಟುಕರ್ಜಗೀ ಸಮೀಪದಲಿ ವರದಾತೀರದಲಿತ್ರಿಜಗಖ್ಯಾತ ಧೀರೇಂದ್ರರ ನಮಿಸಿದರು 2ಹರಿಹರ ಕ್ಷೇತ್ರವು ಮದ್ದೂರು ಅಬ್ಬೂರುಪುರುಷೋತ್ತಮ ಬ್ರಹ್ಮಣ್ಯರ ವಂದಿಸಿಶ್ರೀರಂಗಪಟ್ಟಣದಿ ರಂಗನ್ನ ಸೇವಿಸಿಗರಳುಂಡೇಶ್ವರನÀ ದರ್ಶನ ಮಾಡಿದರು 4ಮಂಡಲೇಶ್ವರರೇನು ರಾಜಪ್ರಮುಖರು ಏನುಪಂಡಿತೋತ್ತಮರೇನು ದಿವಾನುಗಳು ಏನುಅಂಡಕೋಟಿನಾಯಕಹರಿಯ ದಾಸರಿವರನ್ನಕೊಂಡಾಡಿ ಮರ್ಯಾದೆ ಮಾಡಿದರು ಎಲ್ಲೂ 5ಉಡುಗೊರೆಗಳು ಕನಕರತ್ನಾಭರಣಗಳುನಡೆಯಬಾರದು ಎಂದು ಪಲ್ಲಕ್ಕಿ ವಾಹನವುಈಡುಂಟೆ ಜಗನ್ನಾಥದಾಸರಿಗೆ ಮೈಸೂರುಮಾಡಿದ ಮರ್ಯಾದೆ ರಂಗನ ಅನುಗ್ರಹವು 6ಮೈಸೂರು ಕೊಂಗು ಕೇರಳ ಚೋಳ ಪಾಂಡ್ಯದೇಶಗಳಿಗೆ ಪೋಗಿಉಡುಪಿಕಂಚಿಶ್ರೀ ಶ್ರೀನಿವಾಸನ ಕ್ಷೇತ್ರ ಘಟಿಕಾಚಲವುಈಶಾನುಗ್ರಹವು ಮರ್ಯಾದೆ ಎಲ್ಲೆಲ್ಲೂ 7ಜಯಜಯ ಜಗತ್ರಾಣ ಮಧ್ವ ನಾಮಾಭಿದಪದ್ಯಾವಳಿಯು ಶ್ರೀಪಾದರಾಜರದುದಿವ್ಯ ಫಲಶ್ರುತಿ ಇದಕೆ ಜಗನ್ನಾಥದಾಸಆರ್ಯರು ಬರೆದಿಹರು ಸಜ್ಜನರು ಪಠಿಸಿ 8ತೀರ್ಥಾಭಿಮಾನಿಗಳ ತದಂತಸ್ಥ ಹರಿರೂಪಕ್ಷೇತ್ರ ವಾರ್ತೆಗಳನ್ನು ತತ್ವ ಬೋಧಿಸುವಕೀರ್ತನೆಗಳ ಮಾಡಿ ಹರಿಗರ್ಪಿಸಿದರುಓದಿದರೆ ಕೇಳಿದರೆ ಇಹಪರದಿ ಸುಖವು 9ಹರಿವಾಯು ಸುರವೃಂದ ಗುರುವೃಂದ ಪ್ರೀತಿಕರಭಾರಿಶುಭಫಲಪ್ರದವು ತತ್ವ ಸುವ್ವಾಲೆಹರಿಕಥಾಮೃತಸಾರ ವರ್ಣಿಸಲಶಕ್ಯವುಉರುಮಹಾಸೌಭಾಗ್ಯಾಕಾಂಕ್ಷಿಗಳು ಓದಿ 10ಹರಿಸಮೀರರು ತಾವೇ ಶ್ರೀಪಾದರಾಜರಲುಶಿರಿವ್ಯಾಸರಾಜ ಶ್ರೀವಾದಿರಾಜರಲುಪುರುಂದರದಾಸರಲು ನಿಂತು ಸ್ವಪ್ನದಿ ಪ್ರೇರಿಸೆಹರಿಕಥಾಮೃತಸಾರ ಬರೆದ ದಾಸಾರ್ಯ 11ಪ್ರಾರಂಭ ಹರಿಕಥಾಮೃತಸಾರ ಸ್ವಾದಿಯಲಿಶಿರಿವ್ಯಾಸವಾದಿರಾಜ ವೇದವೇದ್ಯರ ಮುಂದೆವರಚಿಪ್ಪಗಿರಿಯಲ್ಲಿ ವಿಜಯದಾಸರ ಮತ್ತುಶಿರಿಕೃಷ್ಣ ಸನ್ನಿಧಿಯಲಿ ಸುಶುಭಮಂಗಳವು 12ಗುರುಶ್ರೀಶವಿಠಲ ದಾಸಾರ್ಯರು ಕುಂಟೋಜಿರಾಯರೆಂಬುವ ಸೂರಿಕುಲ ತಿಲಕಾಗ್ರಣಿಯುಹರಿಕಥಾಮೃತಸಾರ ಮಂಗಳವ ಚಿಪ್ಪಗಿರಿಯಲ್ಲಿ ಮಾಡಿಹರು ನಮೋ ನಮೋ ಇವರ್ಗೆ 13ಹರಿಕಥಾಮೃತಸಾರ ಫಲಶ್ರುತಿ ಅನೇಕವುಸೂರಿವರ್ಯರು ಹರಿದಾಸರು ಹಾಡಿಹರುಭರಿತ ರಚನೆಗಳ ಗ್ರಂಥ ಪದ್ಯಂಗಳಬರೆದಿಹರು ಜಗನ್ನಾಥದಾಸಾರ್ಯಸೂರಿ 14ಶ್ರೀ ದಪ್ರಾಣೇಶಾದಿ ದಾಸಶಿಷ್ಯರ ಕೂಡಿಮೋದಮಯ ನರಹರಿ ಹನುಮಗುರುವೃಂದಆರಾಧಿಸಿ ಬರುವವರ ಉದ್ಧರಿಸುತ್ತಮುದದಿಂ ಕುಳಿತರು ಮಾನವೀಯಲ್ಲಿ 15ವರುಷ ಎಂಭತ್ತೆರಡು ತಿಂಗಳು ಒಂದುಆರುದಿನ ಮೂವತ್ತೇಳು ಘಟಿಕ ಅರ್ಧಧರೆಯಲ್ಲಿಹರಿಇಚ್ಛಾ ಸೇವಾರತರಾಗಿತೆರಳಿದರು ಜಗನ್ನಾಥದಾಸ ಹರಿಪುರಕೆ 16ಶಾಲಿಶಕ ಹದಿನೇಳು ನೂರಮೂವತ್ತೊಂದುಶುಕ್ಲ ಸಂವತ್ಸರ ಭಾದ್ರಪದ ಶುದ್ಧಮೂಲಾನಕ್ಷತ್ರ ರವಿವಾರ ನವಮಿಯಲ್ಲಿಮಾಲೋಲ ಸಹ ಜ್ವಲಿಸುತ್ತ ತೆರಳಿದರು 17ಅಮೃತ ಸೈಷಸೇತುಃ ನರಸಿಂಹ ಸ್ತಂಭದಲಿಇರುತಿಹನು ಅಲ್ಲೊಂದು ಅಂಶದಿ ಇಹರುಶ್ರೀ ರಾಘವೇಂದ್ರ ವೃಂದಾವನ ಶ್ರೀ ಸತ್ಯಬೋಧರ ಸಾನ್ನಿಧ್ಯ ಸ್ತಂಭದ ಮುಂದೆ 18&ಟಜquo;ಜ&ಡಿಜquo; ಯೆನಲು ಜಯ ಸಂಸಾರ ಭಯಹರವು&ಟಜquo;ಗ&ಡಿಜquo; ಯೆನಲು ಸರ್ವಪೀಡೆ ಪರಿಹಾರ&ಟಜquo;ನ್ನಾ&ಡಿಜquo; ಯೆನ್ನೆ ಸರ್ವೋತ್ತಮಸ್ವಾಮಿ ಸುಖವೀವ&ಟಜquo;ಥ&ಡಿಜquo; ಎನಲು ಅನ್ನಧನವಿತ್ತು ರಕ್ಷಿಸುವ 19ಜಯಜಯತು ಶ್ರೀ ಹಂಸವಿಧಿ ಮಧ್ವ ವ್ಯಾಸಮುನಿಜಯಜಯತುಪುರಂದರವಿಜಯದಾಸಾರ್ಯಜಯಜಯತು ಗೋಪಾಲದಾಸಾರ್ಯ ಜಯಜಯತುಜಯಜಗನ್ನಾಥ ದಾಸಾರ್ಯ ಜಯಜಯತು 20ವಾರಿಜಾಸನ ಪಿತನು ಪೂರ್ಣಪ್ರಜÕರ ಹೃತ್‍ಸ್ಥಶಿರಿಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥದಾಸಾರ್ಯ ಶರಣು 21- ನವಮ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
93ಅಕ್ಕಟಕ್ಕಟೆಂನಗಂಡ ವೈಷ್ಣವನಾದ ಕಾರಣ |ರಕ್ಕಸಾಂತಕನ ಭಜಿಸಿರಚ್ಚೆ ಗೋಡಾಯಿತೆಂನ ಬದುಕು |ಅಕ್ಕಟಕ್ಕಟರೆಂನಗಂಡಪ.ಅಡ್ಡಗಂಧ ಹಚ್ಚುವಾಗ ರುದ್ರದೇವರ ಭಜಿಸಿಲಾಗಿ |ಬಡ್ಡಿವಾಸಿಂರೊಳಗೆ ನಾಉ ಸುಖದೊಳಿದ್ದೆವು | ಅಡ್ಡಗಂಧವನು ಬಿಟ್ಟು ಶ್ರೀ ಮುದ್ರೆಯನು ಧರಿಸಲಾಗಿ |ಬಡ್ಡಿವಾಸಿಯಲ್ಲ ಹೋಗಿ ಬಾಯೊಳ್ಗೆ ಬಿದ್ದಿಂತಾಯಿತವ್ವ, ಅಕ್ಕಟ 1ಹೇಡಿಗೆ ತುಂಬ ದೇವರು ನಮ್ಮ ಮನೆಯೊಳಿರುವಕಾಲದಲ್ಲಿ | ವಡವೆ ವಸ್ತು ಸೌಭಾಗ್ಯ ಸುಖದೊಳಿದ್ದೆವುಹಾದಿಯ ತುಂಬ ಕರಿದು ಬಿಳಿದು ಸಾಲಿಗ್ರಾಮಭಜಿಸಲಾಗಿ | ವಡವೆ ವಸ್ತು ಎಲ್ಲ ಹೋಗಿ ಬಾಯೊಳ್ಹುಡಿಯುಬಿದ್ದಂತಾಯಿತವ್ವ | ಅಕ್ಕಟ | 2ಕಾಲಿಝಂಣಕಾಲದಲ್ಲಿ ಮೂಲಂಗಿ ಬೊಳ್ಳಳ್ಳಿಗೆಡ್ಡೆ ತಂದುಕೊಟ್ಟರೆ ದೇವಸುಖವ ಕೊಡುವನೂ |ವೀರವಿಷ್ಣುವಿಗೆ ಕೊಟ್ಟುತ್ರಾಹಿ ತ್ರಾಹಿ ಎನ್ನಲಾಗಿಪಚ್ಚೆ ಕರ್ಪೂರದಂತ ಬದುಕು ನಿಸ್ತುತವಾಗಿಹೋಯಿತವ್ವ | ಅಕ್ಕಟ3ಅತ್ತೆ ಕೇಳೆ ಹಿಂದೆನಂಮ ಮದುವೆ ಮುಂಜಿಕಾಲದಲ್ಲಿ | ಆರ್ತಿಗಾದರು ಒಮ್ಮೆ ಕಚ್ಚೆಕಟ್ಟಿದ್ದೇವೊಅರ್ಥಿಕಚ್ಚೆಯಂನು ಬಿಟ್ಟುನಿತ್ಯ ಕಚ್ಚೆ ಉಡೆಯಲಾಗಿವಿತ್ತಬದುಕುಯೆಲ್ಲ ಹೋಗಿ ವ್ಯರ್ಥವಾಗಿಹೋಯಿತವ್ವ | ಅಕ್ಕಟ4ಅತ್ತೆ ಮಾವ ಸತ್ತ ದಿವಸ ಪಿತ್ರುಕಾರ್ಯನಡಸಲಾಗಿ | ಕತ್ತೆ ನಾಯಿಹೊರಳಿದಂತೆ ನಂಟುನಂಟರಿಷ್ಟರೂ | ಶ್ರೀ ಪುರಂದರವಿಠಲನಭಜಿಸಲಾಗಿ | ತುತ್ತ ಗೊಂಬುದೊಂದು ಕೂಳುಬೆಲ್ಲದಹಾಗೆ ಆಯಿತವ್ವ5
--------------
ಪುರಂದರದಾಸರು
ಅಂಕಿತ ಪದ (ಶ್ರೀ ಪ್ರಸನ್ನ ಭೂವರಾಹ)142ಶ್ರೀಶ ಪ್ರಸನ್ನ ಭೂವರಾಹ ಚಿನ್ಮಯದೇವ -ಬಿಸಜಜ ಸಮೀರಾದಿ ಸುರವೃಂದ ವಂದ್ಯ -ಬಿಸಜಜಾಂಡದ ದೊರೆ ಸಹಸ್ರನಾಮನೆ ದಯ -ದಿಂಸಲಹೋ ಜ್ಞಾನಾದಿ ಧನವಿತ್ತು ಇವನ ಪಶ್ರೀಧರನೆ ಸುಖಮಯನೆ ಭೂಧರನೆ ಭೀತಿಹರವೇಧಮನುವಿಗೆ ಒಲಿದ ಶ್ವೇತವರಾಹ ||ದಿತಿಜಹರ ವಸೂಮತೀಯ ಉದ್ಧರಿಸಿ ಕಾಯ್ದಿಯೋನೀದಯದಿ ಸುಮತಿಯನು ಇತ್ತು ಪಾಲಿಪುದು 1ಕಾಲಗುಣಕರ್ಮನಿಮಿತ್ತ ಬಂದಿಹ ಇವನಬಲವಂತ ಕಷ್ಟಗಳ ಉಪಶಮಿಸಿ ಇವನಿಂ ||ಒಳ್ಳೇಸಾಧನ ಮಾಡಿಸುವದು ನೀಕೃಪೆಯಿಂದ |ಬಾಲೇಂದುಧರವಿನುತಭಕ್ತವತ್ಸಲ2ಭೂಮ ಉರುಗುಣ ಪೂರ್ಣನಿರ್ದೋಷಶ್ರೀರಮಣಶ್ಯಾಮ ವರ್ಣನೆ ಚಕ್ರ ಶಂಖ ಭೂಧರನೆ ||ಕಾಮಪಿತ ವೇಧಪಿತ ಭೂವರಾಹ ನಮೋ |ನಮೋ ಶ್ರೀ ಪ್ರಸನ್ನ ಶ್ರೀನಿವಾಸ ಸಲಹೆಮ್ಮ
--------------
ಪ್ರಸನ್ನ ಶ್ರೀನಿವಾಸದಾಸರು
ಅಗ್ರಪೂಜೆಯ ಮಾಡಿದಾ ಧರ್ಮಜ ತಾನುಅಗ್ರಪೂಜೆಯ ಮಾಡಿದಾ ಪರಾಜರಾಜರಗೂಡಿ ರಾಜಸೂಯದಿ ಧರ್ಮ-ರಾಜನು ಹರಿಗೆ ರಾಜರ ಸಭೆಯೊಳು ಅ.ಪಶುದ್ಧಾಚಮನ ಸಂಕಲ್ಪದಿಪಾದತೊಳೆದಿತ್ತಸದ್ಭಕ್ತಿಯಲಿ ಗಂಧಾಕ್ಷತೆ ವೇದವೇದ್ಯಗೆ 1ವಸನಾಭರಣದಿವ್ಯಕುಸುಮಧೂಪವು ದೀಪತೃಷೆನೈವೇದ್ಯವನಿತ್ತು ಕ್ಲೇಶನಾಶನಿಗಂದು 2ಕ್ರಮುಕವರ್ಪಿಸಿ ನೀಲಾಂಜನವೆತ್ತಿ ಧ್ಯಾನಿಸಿಸುಮವಿತ್ತು ಬಲವಂದು ಚಕ್ರವಿಕ್ರಮಗೆ 3ಪೊಡಮಟ್ಟಘ್ರ್ಯವ ಬಿಟ್ಟು ಒಡನೆ ಯಜ್ಞಾಂತದಿಬಿಡೆ ಬ್ರಹ್ಮಾರ್ಪಣ UÉೂೀವಿಂದನ ಪಾದದ್ವಂದ್ವಕೆ 4
--------------
ಗೋವಿಂದದಾಸ
ಅಂಜನಾಸಂಜಾತ ಮುಖ್ಯ -ಪ್ರಾಣನೇ ಹನುಮಂತನೇ ಪ್ರಾಣನೇ ಹನುಮಂತನೇಪ್ರಾಣನೇ ಹನುಮಂತನೇ ಬಹು ಬಲವಂತನೇಪರಾಘವನಾಜೆÕಯ ತಾಳ್ದು ಸಾಗರವ ದಾಟಿದನೇ |ಸಾಗರವ ದಾಟಿದನೇ ಬೇಗ ಲಂಕಿಣಿ ಗೆಲ್ದನೇಚಬೇಗ ಲಂಕಿಣಿ ಗೆಲ್ದನೇ |ಪೋಗಿ ಲಂಕೆಯೊಳ್ ತಿರಿದನೇ1ಧರಣಿಸುತೆಯನು ಹುಡುಕಿ ಕಾಣದೆ |ಪುರವನೊಯ್ಯುವೆನೆಂದನೆ |ಪುರವನೊಯ್ಯುವೆನೆಂದನೆ |ಮರಳಿ ಸೀತೆಯ ಕಂಡನೇ |ಮರಳಿ ಸೀತೆಯ ಕಂಡನೇ |ಯೆರಗಿ ಉಂಗುರವಿತ್ತನೇ2ಚೂಡಕವ ಕೈಗೊಂಡು ಬರಲಾ |ನೋಡಿ ಬನವನು ಮುರಿದನೇ |ನೋಡಿ ಬನವನು ಮುರಿದನೇಖೋಡಿದೈತ್ಯರ ಗೆಲಿದನೇ |ಖೋಡಿದೈತ್ಯರ ಗೆಲಿದನೇ |ಕೈಗೂಡಿ ಸುಮ್ಮನೆ ಕುಳಿತನೆ3ಪುರವನೆಲ್ಲವ ಸುಟ್ಟು ದಹಿಸುತ |ತಿರುಗಿ ರಾಮನ ಕಂಡನೇ |ತಿರುಗಿ ರಾಮನ ಕಂಡನೇ |ಚೂಡಕವ ಕೈಗಿತ್ತನೇ |ಚೂಡಕವ ಕೈಗಿತ್ತನೇ |ಗೋವಿಂದ ದಾಸನ ಪೊರೆವನೆ4
--------------
ಗೋವಿಂದದಾಸ
ಅಂತರಂಗದಲಿ ಹರಿಯ ಕಾಣದವ ತಾ ಹುಟ್ಟುಗುರುಡನೊಸಂತತ ಶ್ರೀ ಕೃಷ್ಣಚರಿತೆ ಕೇಳದವ ಜಡಮತಿಯೆ ಕಿವುಡನೊ ಎಂದೆಂದಿಗೂ ಪ.ಹರುಷದಿಂದಲಿ ಮುರಹರನ ಪೂಜೆಯ ಮಾಡದವನೆ ಕೈ ಮುರಿದವನೊಕುರುವೀರ ಸೂತನ ಮುಂದೆ ಕೃಷ್ಣ ಎಂದುಕುಣಿಯದವನೆ ಕುಂಟನೊ ||ನರಹರಿ ಪಾದೋದಕ ಧರಿಸದ ಶಿರ ನಾಯುಂಡ ಹಂಚು ಕಾಣೊಸುರವರ ಕೃಷ್ಣ ಪ್ರಸಾದವಿಲ್ಲದ ಊಟಸೂಕರಭೋಜನವೋ1ಅಮರೇಶ ಕೃಷ್ಣಗರ್ಪಿತವಲ್ಲದಕರ್ಮ ಅಸತಿಯ ವ್ರತನೇಮವೊರಮೆಯರಸಗೆ ಪ್ರೀತಿಯಿಲ್ಲದ ವಿತ್ತವು ರಂಡೆ ಕೊರಳಸೂತ್ರಕಮಲನಾಭನ ಪೊಗಳದಸಾರ ಸಂಗೀತ ಗಾರ್ದಭರೋದನವೊಮಮತೆಯಿಂದಲಿ ಕೇಶವಗೆ ನಮಸ್ಕಾರ ಮಾಡದವನೆ ಮೃಗವೊ 2ಜರೆ ಹುಟ್ಟು ಮರಣವ ತಡೆವ ಸುದ್ದಿಯ ಬಿಟ್ಟುಸುರೆಯ ಸುರಿಯ ಬೇಡವೊಸುರಧೇನು ಇರಲಾಗಿ ಶ್ವಾನನ ಮೊಲೆಹಾಲಕರೆದು ಕುಡಿಯಬೇಡವೊಕರಿ ರಥ ತುರಗವೇರಲು ಇದ್ದು ಕೆಡಹುವ ಕತ್ತೆ ಏರಲಿಬೇಡವೊಪರಮ ಪುರುಷ ಪುರಂದರವಿಠಲನಿರಲು ನರರ ಭಜಿಸಬೇಡವೊ 3
--------------
ಪುರಂದರದಾಸರು
ಅರಿಯರು ಮನುಜರು ಅರಿತೂ ಅರಿಯರುಧರೆಗೆ ಒಡೆಯ ಶ್ರೀ ಹರಿಯಲ್ಲದಿಲ್ಲವೆಂದು ಪಶಿವಬಲ್ಲ ಧ್ರುವಬಲ್ಲ ದ್ರೌಪದಿ ಬಲ್ಲಳುಅವನಿ ಪಾಲಿಪ ಜನಕನೃಪ ಬಲ್ಲನು ||ಯುವತಿಗೆ ಶಾಪವಿತ್ತ ಗೌತಮ ಬಲ್ಲನುಭವರೋಗ ವೈದ್ಯ ಶ್ರೀಹರಿಯಲ್ಲದಿಲ್ಲವೆಂದು 1ನಾರದ ಮುನಿ ಬಲ್ಲವಾರಿಜೋದ್ಭವ ಬಲ್ಲಪಾರಾಶರನು ಬಲ್ಲ ಮನು ಬಲ್ಲನು ||ಧೀರ ಭೀಷ್ಮನು ಬಲ್ಲ ಪಾರ್ವತಿ ಬಲ್ಲಳುಕಾರಣಕರ್ತ ಶ್ರೀಹರಿಯಲ್ಲದಿಲ್ಲವೆಂದು 2ದಿಟ್ಟ ಪ್ರಹ್ಲಾದ ಮೊರೆಯಿಟ್ಟ ಗಜೇಂದ್ರ ಬಲ್ಲದೃಷ್ಟಾಂತ ಕಂಡ ಭೃಗುಮುನಿ ಬಲ್ಲನು ||ಕೊಟ್ಟ ಬಲಿಯು ಬಲ್ಲ ಕೆಟ್ಟಜಾಮಿಳ ಬಲ್ಲಸೃಷ್ಟಿಗೆ ಪುರಂದರವಿಠಲನಲ್ಲದಿಲ್ಲವೆಂದು 3
--------------
ಪುರಂದರದಾಸರು
ಆಣಿಮುತ್ತಿನ ದುಂಡುಮಕರಕುಂಡಲನ |ಬಾನುಪ್ರಭೆಯ ಭುಜಕೀರ್ತಿಯೊಪ್ಪುವನ ||ಕಮಲಾಮನೋಹರ ಕಮಲಜ ಪಿತನ |ರಮಣಿಗೆ ಪಾರಿಜಾತವನೇ ತಂದವನ ||ಕ್ರಮದಿಂದ ಭಸ್ಮಾಸುರನ ಕೊಂದವನ |ರಮೆಯಾಣ್ಮನೆನ್ನಲು ಇಹಪರವೀವನ 3ಶುಕ್ರವಾರ ಪುಲಕು ಪೂಜೆಗೊಂಬವನ |ಸಕ್ಕರೆ-ಹಾಲು-ಬೆಣ್ಣೆಯ ಮೆಲ್ಲುವವನ ||ಗಕ್ಕನೆ ಸುರರಿಗೆ ಅಮೃತವಿತ್ತವನ |ರಕ್ಕಸದಲ್ಲಣ ರಾವಣಾಂತಕನ 4ಪಾಪವಿನಶಾದಿ ಸ್ನಾನವ ಮಾಡಿ |ಪಾಪಗಳೆಲ್ಲ ಬೇಗನೆ ಬಿಟ್ಟು ಓಡಿ ||ಈ ಪರಿಯಿಂದಲಿ ಮೂರುತಿ ನೋಡಿ |ಶ್ರೀಪತಿ ಪುರಂದರವಿಠಲನ ಪಾಡಿ 5
--------------
ಪುರಂದರದಾಸರು
ಆವ ಪುಣ್ಯವೊ ಗೋಪಿಗಾವ ಪುಣ್ಯವೊ ಪ.ಆವ ಪರಬೊಮ್ಮನಾವಾವ ಪರಿಯಲಾಡಿಸುವ ಅ.ಪ.ಮಾರನನ್ನ ಪೆತ್ತನ ಕುಮಾರನೆಂದು ಕರೆದು ತನ್ನಮಾರಬೀಸಿ ಬಿಗಿದಪ್ಪಿ ಮೋರೆ ನೋಡಿ ಮೊಲೆಯ ಕೊಡುವ1ಕಾಲನಾಗಿ ಜಗವ ತತ್ಕಾಲದಲ್ಲಿ ನುಂಗುವಂಗೆಕಾಲಮೇಲೆ ಮಲಗಿಸಿ ತ್ರಿಕಾಲದಲ್ಲಿ ಹಾಲನೆರೆವ2ನೀತ ಪ್ರಭು ವಿಶ್ವಕೆ ವಿನೀತನಾಗಿ ಕೈಯ ಒಡ್ಡೆನೀತಿ ಹೇಳಿ ನವನವನೀತವಿತ್ತು ರಂಜಿಸುವ 3ಆನೆಗೊಲಿದು ಎಂಟುದಿಕ್ಕಿನಾನೆಯಾಳ್ದ ಅಪ್ರತಿಮ ದಯಾನಿಧಿಯ ಕುಳ್ಳಿರಿಸಿ ಆನೆ ಬಂತಂತಾನೆಯೆಂಬ 4ತೋಳನೋಡುಧೈರ್ಯದೀರ್ಹತ್ತು ತೋಳಿನವನ ಹೋರುವ ನಳಿತೋಳವಿಡಿದು ವಾರಂವಾರ ತೋಳನ್ನಾಡೊ ಮಗನೆ ಎಂಬ 5ತಾರಕೋಪದೇಶಕಗೆತಾರಕರಂಗನಳಲುತಾರಕಪತಿಯ ತೋರಿ ತಾರಕ್ಕ ಬಿಂದಿಗೆಯೆಂಬ 6ದಟ್ಟವಾದ ಜೀವಜಾಲದಅಟ್ಟುಳಿನಿವಾರಣಂಗೆದಟ್ಟು ದಟ್ಟು ಎಂದು ರಂಗನ ದಟ್ಟ ಸಾಲನಿಕ್ಕಿಸುವ 7ಚಿನ್ಮಯಾತ್ಮ ಮುಕ್ತಾಮುಕ್ತ ಚಿನ್ನರನಾಡಿಸುವಂಗೆಚಿನ್ನ ತಾ ಹೊನ್ನ ಗುಬ್ಬಿ ಚಿನ್ನ ಗುಬ್ಬಿಯಾಡಿಸುವ 8ದೃಷ್ಟಾದೃಷ್ಟದೇಹಿಗಳದೃಷ್ಟ ನಿಯಾಮಕಂಗೆದೃಷ್ಟಿ ತಾಕಿತೆಂದು ತೆಗೆದು ದೃಷ್ಟಿ ದಣಿಯೆತುಷ್ಟಿಬಡುವ9ಅನ್ನಮಯನು ಬ್ರಹ್ಮಾದ್ಯರಿಗೆ ಅನ್ನಕಲ್ಪತರುಪರಮಾನ್ನ ಚಿನ್ನಿಪಾಲಿನಿಂದ ಅನ್ನಪ್ರಾಶನ ಮಾಡಿಸುವ 10ನಿತ್ಯತೃಪ್ತ ನಿತ್ಯಾನಂದ ನಿತ್ಯಭೋಗಿ ನಿತ್ಯತಂತ್ರನಿತ್ಯಕರ್ಮನ್ನೆತ್ತಿಕೊಂಡುನೆತ್ತಿಮೂಸಿ ಮುದ್ದಿಸುವ11ಆ ಲಯದಲ್ಲಾಲದೆಲೆ ಆಲಯಗೆ ತೊಟ್ಟಿಲು ಉಯ್ಯಾಲೆಯಿಟ್ಟು ಮುದ್ದು ಮಾತನಾಲಿಸಿ ಜೋಗುಳವ ಪಾಡುವ 12ಅಂಜಲಿಪುಟದಿ ಸುರರಂಜಿಕೆಯ ಬಿಡಿಸುವ ನಿರÀಂಜನಗಭ್ಯಂಜನಿಸಿ ಅಂಜನಿಟ್ಟುಅಮ್ಮೆಕೊಡುವ13ಸಪ್ತ ಸಪ್ತಭುವನಜನಕೆಸುಪ್ತಿಎಚ್ಚರೀವನಿಗೆಸುಪ್ತಿಕಾಲವೆಂದು ತಾನು ಸುಪ್ತಳಾಗಿ ಸ್ತನವ ಕೊಡುವ14ತನ್ನ ಮಗನ ನಡೆಯ ನುಡಿಯ ತನ್ನ ಪತಿಗೆ ಹೇಳಿ ಹಿಗ್ಗಿತನ್ನ ಭಾಗ್ಯ ಲಕ್ಷ್ಮೀಶ ಪ್ರಸನ್ನವೆಂಕಟ ಕೃಷ್ಣಯೆಂಬ 15
--------------
ಪ್ರಸನ್ನವೆಂಕಟದಾಸರು