ಒಟ್ಟು 10968 ಕಡೆಗಳಲ್ಲಿ , 138 ದಾಸರು , 6102 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂಥ ಟವಳಿಗಾರನಮ್ಮ ಪ ನಂದ ಗೋಪ್ಯಮ್ಮ ಕೇಳೆ - ನಿನ್ನ ಮಗ ಎಂಥ ಟವಳಿಗಾರನಮ್ಮ ಅ ಹಣವ ಕೊಟ್ಟೇನೆಂದುಗುಣದಿಂದ ಎನ್ನ ತಂದಹಣವ ಕೇಳಿದರಲ್ಲಿ - ಹಣವೆ ?ತಡೆಯಲಾರದ ತಲ್ಲಣವೆ ?ಕುದುರೆ ಮೇಲಿನ ಪಲ್ಲಣವೆ ?ಇಲ್ಲ, ಬಾಯಿಗಿಟ್ಟ ಬೊಕ್ಕಣವೆ ? - ಹೋಗೆನುತಾನೆ 1 ಕೊಪ್ಪಾನೆ ಕೊಟ್ಟೇನೆಂದುಒಪ್ಪಿಸಿ ಎನ್ನ ತಂದಕೊಪ್ಪಾನ ಕೇಳಿದರಲ್ಲಿ - ಕೊಪ್ಪ ?ಊರಮುಂದಿನ ತಿಪ್ಪ ?ಕೇರಿಯೊಳಗಿನ ಕೆಪ್ಪ ?ಕೆರೆಯೊಳಗಿನ ಹುಳಿಸೊಪ್ಪ ? - ಹೋಗೆನುತಾನೆ2 ಬಳೆಯ ಕೊಟ್ಟೇನೆಂದುಬಲು ಮಾತಿನಲಿ ತಂದಬಳೆಯ ಕೇಳಿದರಲ್ಲಿ - ಬಳೆಯೆ ?ಊರ ಮುಂದಿನ ಗಳೆಯೆ ?ಗದ್ದೆಯೊಳಗಿನ ಕಳೆಯೆ ?ಕೈಕಾಲ ಹಿಡಿದು ಸೆಳೆಯೆ ? - ಹೋಗೆನುತಾನೆ 3 ವಾಲೆ ?ಕನ್ನಡಿಯ ಕಪೋಲೆ ?ಹೇಳು ಸುವ್ವಿ ಸುವ್ವಾಲೆ ?ನಿನ್ನ ಕಾಲಿಗೆ ಸಂಕೋಲೆ ? - ಹೋಗೆನುತಾನೆ 4 ಕಡಗವ ಕೊಟ್ಟೇನೆಂದುಸಡಗರದಿಂದ ತಂದಕಡಗ ಕೇಳಿದರಲ್ಲಿ - ಕಡಗ ?ಅಂಬರದ ಗುಡುಗ ?ಮುಂಗೈ ಮೇಲಿನ ಗಿಡುಗ ?ಎತ್ತಿನ ಮ್ಯಾಲಿನ ಧಡಗ ? - ಹೋಗೆನುತಾನೆ 5 ಬುಗುಡಿಯ ಕೊಟ್ಟೇನೆಂದುರಗಡು ಕಿವಿಹಿಂಡಿ ತಂದಬುಗುಡಿ ಕೇಳಿದರಲ್ಲಿ - ಬುಗುಡಿ ?ಪಾಂಡವರಾಡಿದ ಪಗಡಿ ?ಮೂಗಿಂದ ಸುರಿವ ನೆಗಡಿ ?ಛಿ ! ನೀನೆಂಥ ಧಗಡಿ ? - ಹೋಗೆನುತಾನೆ 6 ಆದಿಕೇಶವನ ಮೇಲೆಆಣೆಯಿಟ್ಟು ಕರೆತಂದಆಣಿ ಎಲ್ಲಹುದೆಂದು ತೋರ್ದಆನಂದದಿಂದಲಿ ಬೆರೆದಬೀದಿಗೆ ಬಂದು ಕರೆದಹೀಂಗೆ ಧರೆಯೊಳು ಮೆರೆದ - ಶ್ರೀ ಕೃಷ್ಣರಾಯ 7
--------------
ಕನಕದಾಸ
ಎಂಥ ದಯವಂತನೋ | ಮಂತ್ರ ಮುನಿನಾಥನೊ ಸಂತಸದಿ ತನ್ನನು | ಚಿಂತಿಪರಿಗೆ ಸುರಧೇನು ಪ ವರ ಪ್ರಹ್ಲಾದನು | ಮರಳಿ ಬಾಹ್ಲೀಕನು | ಶ್ರೀ ಗುರುವ್ಯಾಸರಾಯನೊ | ಪರಿಮಳಾಚಾರ್ಯನೊ 1 ಇರುವ ತುಂಗಾತಟದಲ್ಲಿ | ಬರುವ ತಾನು ಕರೆದಲ್ಲಿ ಕರಪಿಡಿದು ಪೊರೆವಲ್ಲಿ ಸರಿಗಾಣೆ ಧರೆಯಲ್ಲಿ 2 ದುರಿತ ಕಳೆವ ಶಕ್ತನು ತರಣಿ ನಿಭಗಾತ್ರನು | ಪರಮಸುಚರಿತ್ರನು 3 ಶಿಶುವಿಗವುಗರೆದನು | ವಸುಧಿ ಸುರರ ಪೊರೆವನು ಅಸಮ ಮಹಿಮನೊ | ಸುಶೀಲೇಂದ್ರ ವರದನೊ 4 ಭೂಮಿಯೊಳು ಖ್ಯಾತನು | ಶಾಮಸುಂದರ ಪ್ರೀತನು ಕಾಮಿತಾರ್ಥದಾತನು | ಸ್ವಾಮಿ ನಮಗೆ ಈತನು 5
--------------
ಶಾಮಸುಂದರ ವಿಠಲ
ಎಂಥ ಧರ್ಮರಾಯ ಸಂತೋಷ ಬಡಿಸುವ ಅನಂತ ಪ್ರಜರಿಗೆಲ್ಲ ಚಿಂತಾಮಣಿಯು ತಾಎಂಥ ಧರ್ಮರಾಯ ಇಂದಿವರಾಕ್ಷಿ ಪ. ಒಡಹುಟ್ಟಿದವರೆಲ್ಲ ಬಿಡದೆ ಸೇವಿಸುವರು ಕಡುಭಕ್ತಿಯಿಂದಲೆ ನಡೆನುಡಿ ಬಿಡದೆ 1 ಹರದೆಯರು ರಾಯಗೆ ಪರಿಪರಿ ಸೇವಿಸಿ ಎರಗೋರು ಕಾಲಕಾಲಕೆ ಪರಮ ಭಕ್ತಿಯಲಿ2 ಭೃತ್ಯರು ರಾಯಗೆ ಅತ್ಯಂತ ಸೇವಿಸಿ ಚಿತ್ತವ ಹಿಡಿಯಲು ಉತ್ತಮನೆಂದು 3 ದಾಸರು ರಾಯಗೆ ಸೋಸಿಲೆ ಸೇವಿಸಿಏಸೇಸು ಕಾಲಕ್ಕೆ ಈ ಸ್ವಾಮಿ ಬಯಸೋರು4 ವಿಪ್ರರು ರಾಯಗೆ ಒಪ್ಪೋದು ದೊರೆತನ ತಪ್ಪದೆ ಇರಲೆಂದು ಗೌಪ್ಯದಿ ಜಪಿಸೋರು 5 ಮಿಕ್ಕ ಜನರಿಗೆ ಸಕ್ಕರೆ ಹೇರಮ್ಮಲಕ್ಷ್ಮಿ ರಮಣಗೆ ಸಖ್ಯನು ರಾಯ 6 ಎಲ್ಲ ಜನಕೆ ರಾಯಬೆಲ್ಲದ ಹೇರಮ್ಮಚಲ್ವ ರಾಮೇಶನ ನಲಿವಿನ ಮುಂದೆ 7
--------------
ಗಲಗಲಿಅವ್ವನವರು
ಎಂಥ ಪಾಪವನು ಮಾಡಿರುವೆನೋ ಶ್ರೀಹರಿಯೇಇಂಥ ದುರ್ದೆಸೆಗೆನ್ನ ಎಳೆತಂದು ಬಿಡಲಿಕ್ಕೆ ಪ ಉದಯ ಕಾಲದೊಳೆದ್ದು ಉದರ ಪೋಷಣೆಗಾಗಿಹದವನರಿಯದೆ ಬಳಲಿ ಅಂತಿಂತು ಬಡೆದಾಡಿಬದುಕು ತಂದೊಡಲ ಹೊರಕೊಂಡು ಸಲೆನನ್ನಪದವ ನೆನೆಯಲು ಸ್ವಲ್ಪ ಸಹ ವೇಳೆ ಸಿಗದಂತೆ 1 ಹಿಡಿದ ಕಾರ್ಯಗಳೆಲ್ಲ ಬಿಡದೆ ನಿಷ್ಫಲವಾಗಿಒಡವೆ ಇಲ್ಲದ ಬರಿಯ ಒಡೆತನಕೆ ಅಣಿಮಾಡಿಮಡದಿ ಮಕ್ಕಳ ಬಿರುಸು ನುಡಿಗೇಳಿ ಮನನೊಂದುಸುಡುಬಾಳ್ವೆ ಇದನೆಂದು ಮುಡುಕುವಂದದು ಗೈಸಿ 2 ನಂಬಿದವರನು ಹರಿಯು ಬೆಂಬಿಡನು ಎಂದೆಂದುಎಂಬ ಬಿರುದನು ತೊರೆದು ಇಂಬುಗೊಡದಿರಲಿಕ್ಕೆಅಂಬುಜಾಕ್ಷನೆ ನಿನಗೆ ಸಂಬಂಧವಿರದೇನುಹಂಬಲಿಪ ದುಃಸ್ಥಿತಿಗೆ ತುಂಬ ತಂದಿಡಲಿಕ್ಕೆ 3 ಅಣುಗರಿಗೆ ಉಣಿಸಲಿಕೆ ಹಣವೆತ್ತ ಗಳಿಸಲಿಫಣಿಶಯನ ನಿನಗಿನ್ನು ಗುಣವೆತ್ತ ತೋರಿಸಲಿಮಣಿಗಳನು ಎಣಿಸುತ್ತ ಪ್ರಣವೆತ್ತ ಧೇನಿಸಲಿಹಣಿವ ಭವದೊಳು ಸಿಲುಕಿ ಕ್ಷಣವು ಸಹ ಸಿಗದಾಯ್ತು 4 ಬಾಳಿನೊಳು ಸೌಖ್ಯವೇ ಆಳವೈಶ್ವರ್ಯವೆತೋಳಿನೊಳು ದಾಢ್ರ್ಯವೆ ಚಿತ್ತದೊಳು ಸ್ಥೈರ್ಯವೆಹೇಳು ಗದುಗಿನ ವೀರನಾರಾಯಣನೆ ಮಣಿವೆ 5
--------------
ವೀರನಾರಾಯಣ
ಎಂಥ ಮಾತನಾಡಿದಿ ಎಲಾ ನೀನು | ಛೀ | ಸಂತನಾದ ಮೇಲೆ ಮುಂಚಿನದೇನೊ ಪ ಊರ ಮುಂದಿನ ಕೆರೆ ಭಾವಿಯ ನೀರು |ಊರೆಲ್ಲ ಬಳಕಿಗೆ ತಾವು ತರುವರು | ಪಾರಮಾರ್ಥಿಕರ ಪಾದೋದಕ ಮಾಡಲು | ನೀರೆಂದು ಅದಕಿನ್ನು ದಾರಾಡುವರು ? 1 ಕಲ್ಲಲ್ಲಿ ಲಿಂಗವ ಮಾಡಿದರೇನೊ | ಲಿಂಗವಲ್ಲದೆ ಕಲ್ಲು ಎಂಬುವರೇನೊ | ಬಲ್ಲ ಸತ್ಪುರುಷರ ಬಗೆಯನರಿತು | ತನ್ನಲ್ಲಿ ಬ್ರಹ್ಮವ ಕಂಡವನೀಗ ನರನೇನೊ 2 ಕಾಮರ ಅಡವಿಯೊಳಿರುವದಾ ತಂದು | ಕಾಮಿಸಿ ಪಾದುಕ ಮಾಡಲು ಎಂದು | ಸ್ವಾಮಿ ಸದ್ಗುರು ಭವತಾರಕ ಮೆಟ್ಟಲು | ಭೂಮಿ ಜನರಡ್ಡ ಬೀಳ್ವರಿದೇನೋ 3
--------------
ಭಾವತರಕರು
ಎಂಥ ಸುಂದರವಾದ ವೃಂದಾವನಾನಿಂತು ನೋಡಲು ಮನಕೆ ಸಂತೋಷವಾಗುವದು ಪಶ್ರೀ ರಾಘವೇಂದ್ರ ಗುರುಸಾರ್ವಭೌಮರ ದಿವ್ಯಧೀರ ಗಂಭೀರ ಸುಮನೋಹರ ಸುಮೂರ್ತಿರಾರಾಜಿಸುತಿಹುದು ಮುಗಳುನಗೆ ಮುಖದಿಂದಾಶರಣಾಗತರಿಗೆಲ್ಲ ಅಭಯ ಹಸ್ತವ ನೀಡಿ 1ಪ್ರೇರಕರು ತಾವಾಗಿ ಪ್ರೇರ್ಯರೊಬ್ಬನ ಮಾಡಿಕಾರಾಗಿರನ ಕನಸು ಮನಸಿನಲಿ ಪೋಗಿಇರಬೇಕು 'ೀಗೆಂಬ ವೃಂದಾವನದಿ ಚಿತ್ರತೋರಿಸುತ ಅಂತರಂಗದಿ ನಿಂದು ಮಾಡಿಸಿದ 2ಅಡಿಗಡಿಗೆ ಮ'ಮೆಯನು ತೋರಿಸುತ ಗಲಗಲಿಗೆನಡೆತಂದು ಶ್ರೀ ಮಠವ ಹ'್ಮುಕೊಂಡಿಹರುಸಡಗರದಿ ಭಕುತರಿಂ ಸೇವೆಕೊಳ್ಳುತಲಿಹರುಬಡವರಿಗೆ ಭಾಗ್ಯ ನಿಧಿಯು ಬಂದಂತೆ ಆಯ್ತು 3ಅಲ್ಲಿ ಮಂತ್ರಾಲಯವು ಇಲ್ಲಿ ಗಾಲವಕ್ಷೇತ್ರಅಲ್ಲಿ ತುಂಗಾ ಇಲ್ಲಿ ಕೃಷ್ಣವೇಣಿಅಲ್ಲಿ ಪ್ರಹ್ಲಾದರಾಜ ಯೋಗ ಮಾಡಿದನು ಇಲ್ಲಿತಪವ ಗೈದಿಹರು ಗಾಲವ ಮರ್ಹಗಳು 4ಅಲ್ಲಿ ರಾಯರಬಂಡಿ ಇಲ್ಲಿ ಋಗಳ ಬಂಡಿಅಲ್ಲಿ ಮಂಚಾಲೆಮ್ಮಾ ಇಲ್ಲಿ ಜಗದಂಬಾಅಲ್ಲಿ ಹೊಳೆದಾಟಿದರೆ ಪಂಚಮುಖಿಪ್ರಾಣೇಶಇಲ್ಲಿ ಹೊಳೆ ದಾಟಿದರೆ ಸಂಜೀವ ಪ್ರಾಣೇಶ 5ಕಲಿಯುಗದ ಸುರಧೇನು ಕಲ್ಪತರು ಗುರುರಾಯಗಲಗಲಿಯ ಭಾಗ್ಯ'ದು ಬಂದು ನಿಲಿಸಿಹನುಕಲುಷವರ್ಜಿತರಾಗಿ ದರುಶನವ ಮಾಡಿದರೆಕರೆದು ಈಪ್ಸಿತವ ಕೊಡುವ ಪರಮ ಕರುಣಾಳು 6ಪಾಪಿ ಕೋಪಿಷ್ಠರಿಗೆ ಸೇವೆ ದಕ್ಕುವದಿಲ್ಲಮಾಂ ಪಾ' ಪಾ' ಎಂಬುವ ಭಕುತರಾತಾಪತ್ರಯವ ಕಳೆದು ಸುಪ'ತ್ರರನು ಮಾಡಿಭೂಪತಿ'ಠ್ಠಲನ ಅಪರೋಕ್ಷ ಮಾಡಿಸುವ 7
--------------
ಭೂಪತಿ ವಿಠಲರು
ಎಂಥವ ನಿವನಮ್ಮಾ ಬಾಲಕನಂತಿಹ ಗೋಪೆಮ್ಮಾ ಎಂಥವನಿವ ತನ್ನಂತತ ನ್ನಂತದೋರ ಗುಡದ ನಂತ ಮಹಿಮ ನರಕಾಂತಕ ದೇವಾ ಪ ವಾರಿಯೊಳಗ ಮನವಾರಿ ಕ್ರೀಡಿಸುತಿರೆ ಘೋರ ಪ್ರವಾಹದಿ ತೀರದಲೆಮ್ಮಾ ಆರು ಅರಿಯದಂತೆ ಸೀರೆನೆಗೆದು ಕೊಂಡು ಗಾರು ಮಾಡಿದ ಮರ ಸೇರಿದ ಕಾಣಮ್ಮಾ ನಾರೇರೆಲ್ಲರು ಕೂಡಿ ಸೀರೆ ಬೇಡಲು ಬಿಟ್ಟು ನೀರ ಮುಗಿದು ಕೈಯ್ಯದೋರೆರಡೆನವಾ 1 ಪುಣ್ಯ ಚರಣೆಸಳ ಗಣ್ಣ ಜಲಧರದ ಬಣ್ಣದ ಲೋಪ್ಪವ ಸಣ್ಣಪನೆಂದು ಬಣ್ಣಿಸಿ ಕರುವುತ ಹೆಣ್ಣೆಂದೊಪ್ಪುವ ತಿಣ್ಣ ಮೊಲೆಗಳನು ಉಣ್ಣೆಂದೂಡಿದಾ ಸಣ್ಣಿಸಿ ಕಳೆದ ಮುಕ್ಕಣ್ಣನ ಸಹಿನು2 ಇಂದು ವದನೆಯರು ಮುಂದಕ ಕದವನು ತಂದಿಕ್ಕಿ ಪೋಗೆರೆ ಮಂದಿರದಿಂದಾ ಸಂದಿಸ್ಯಾಗಳೆ ಆಂದದಿ ಗೋವಳ ವೃಂದ ನೆರಹಿಕೊಂಡು ಬಂದು ನೋಡಮ್ಮಾ ಛಂದದಿ ಬೆಣ್ಣೆಯನಿಂದು ಸೇವಿಸುತಿಹ ತಂದೆ ಮಹಿಪತಿ ನಂದನೋಡಿಯನು3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂಥಾ ಜಾಣೆಯೋ ಸುಪ್ರವೀಣೆಯೋ ಮುನ್ನಾಕೆಎಂಥಾ ನೋಂಪಿಯನೋಂತ ಫಲವೋಕಾಂತನ ಪರಕೀಯ ಕಾಂತೆಯೆಡೆಗ ಬಿಡ-ದಂತೆ ಸಂತಸದೊಳೇಕಾಂತ ಸುಖದೊಳಿರ್ಪ ಪ ನುತ ಹಂಸತೂಲತಲ್ಪದೊಳು ನಾನಾ ಬಂಧಗತಿಯಲಿ ಕಾಮಕೇಳಿಯನೆಸಗಿರತಿಸುಖಪಾರವಶ್ಯದೊಳೊಂದು ವರುಷದಮಿತಿಯನು ತೃಟಿಕಾಲವೆಂದುಸುರುವಳು ತಾ 1 ಹೆಣ್ಣು ಜನ್ಮದಿ ಹುಟ್ಟಿದುದಕೆ ಫಲವದುಕನ್ನೆಯರೊಳಗೆ ಕಟ್ಟಾಣಿಯಾಕೆಮುನ್ನೆಷ್ಟುಗಾಲ ತಪವ ಮಾಡಿ ತಾನಿಂಥಾಪುಣ್ಯವ ಪಡೆದಳಾಕೆಯ ಜನ್ಮ ಸಫಲವೋ2 ವರುಷವಾಗಲಿ ಒಂದು ದಿನವಾದರಾಗಲಾತರುಣಿಯ ಭೋಗದಂತಿರಬೇಡವೆಇರುಳು ಹಗಲು ಕಾಣದಂತೆ ಶ್ರೀ ಕೆಳದಿಯಪುರದ ರಾಮೇಶನೊಳ್ಪರಸದೊಳಿರುವಳಿಂ 3
--------------
ಕೆಳದಿ ವೆಂಕಣ್ಣ ಕವಿ
ಎಂಥಾ ದಯವಂತ ನೀತನೊ | ಭಾರತಿ ಕಾಂತಅಂತರ್ಬಹಿ ವ್ಯಾಪ್ತನೋ ಪ ಸಂತತ ಶ್ವಾಸೋಚ್ಛ್ವಾಸ | ಮಂತ್ರ ತಾ ಜಪಿಸುತ ಶಾಂತೀಶ ಪಾದದಲ್ಲಿ | ಕ್ರಾಂತನಾಗಿಹ ನೀತ ಅ.ಪ. ಸೂರ್ಯ ಕೋಟಿ ಸಂಕಾಶದಿ ಪರಿಕಿಪ 1 ಪ್ರಾಣಾ - ಅಪಾನ - ಸಮಾನ | ಮತ್ತೆರಡು | ವ್ಯಾನಾ ಉದಾನರಲ್ಲಿರುತಾ ||ಪ್ರಾಣಿಗಳೊಳಗಿದ್ದು | ಜಾಣ ತನದಿ ತಾನುನಾನಾ ಕರ್ಮವ ಮುಖ್ಯ | ಪ್ರಾಣಾ ತಾನೇವೆ ಮಾಳ್ಪ ||ಪ್ರಾಣನ ಮಹಿಮಾನಂತವೆ | ವಾಣಿ ಮುಖಾದ್ಯರು ಎಣಿಸಲಸು ಅಳವೇ ನಾನಾ ರೂಪದಿ ಶ್ರೀನಿವಾಸ ಪದಧ್ಯಾನಾರಾಧಕ ನೆನಿಸುತ ಮೆರೆವಾ 2 ಸುರರಾ ಮೊರೆಯ ಕೇಳುತ | ಪರಿಸರ | ಹರಿಯ ಮತವ ಸಾರಿದ ||ಗುರು ಗೋವಿಂದ ವಿಠಲ | ಸರ್ವಾಧಿಕನು ಎಂದುಸರ್ವ ಶಾಸ್ತ್ರವ ನಿರ್ಣ | ಯವ ಮಾಡಿದ ನೀತ ||ಸರ್ವನಾಮಾಭಿಧ | ಸರ್ವ ನಿಯಾಮಕ | ಸರ್ವ ವ್ಯಾಪ್ತಹರಿ | ಕರುಣವಿಲ್ಲದಲೆಹರಿ ಚರಣಾಂಬುಜ | ದೊರಕದೆಂದನುತಲಿಸರ್ವಾಗಮಗಳ | ಸಾರವ ನ್ವೊರೆದ 3
--------------
ಗುರುಗೋವಿಂದವಿಠಲರು
ಎಂಥಾ ದಯಾ ನಿಧಿಯೇ | ಸಂತತ ಭಕ್ತಿ ವಿಶ್ರಾಂತಿಯ ದೋರಿದ ಪ ಜ್ಞಾನಾಂಜ ನುಡಿದಾ | ಕಾಣಿಸಿ ಇದರ್ಹಿಡಿದಾ 1 ಮೂಲ ಮಂತ್ರದಳುದಿಂದಾ | ಹೇಳಲಿನ್ನೇನದ ಸ್ವಾನುಭವದ ಘೋಷಾ | ಫೇಳಗುಡಿಸಿ ನೋಡಿದಾ2 ಮುಂದತಿಯೊಳು ನೀಡಿದಾ | ಇಂದು ಧನ್ಯನ ಮಾಡಿದಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂಥಾ ಪಾವನ ಪಾದವೋ ಕೃಷ್ಣಯ್ಯಾ ಇ-ನ್ನೆಂಥಾ ಚೆಲುವ ಪಾದವೊ ಪ. ಪಾದ ಇಂತು ಜಗದಿ ಕೇಳುಪಂಥದೊಳಿದ್ದ ಕುರುಪತಿಯ ಉರುಳಿಸಿದಅ.ಪ. ಹಲವು ಕಾಲಗಳಿಂದಲಿ ಮಾರ್ಗದಿಶಿಲೆ ಶಾಪ ಪಡೆದಿರಲುಒಲಿದು ರಜದಿ ಪಾವನಗೈದು ಕರುಣದಿಂದಬಲೆಯ ಮಾಡಿ ಸಲಹಿದ ಶ್ರೀಹರಿಯ 1 ಬಲಿಯ ದಾನವ ಬೇಡಿ ತ್ರೈಲೋಕವನಳೆದು ಏಕಾಂಘ್ರಿಯಲಿಬೆಳೆದು ಭೇಧಿಸಲಾಗ ನಳಿನಜಾಂಡವ ಸೋಕಿಚೆಲುವ ಗಂಗೆಯ ಪೆತ್ತ ಜಲಜಾಸನಾರ್ಚಿತ 2 ಚೆÉಂಡು ತರುವ ನೆವದಿ ಕಾಳಿಂಗನು-ದ್ದಂಡ ಮಡುವ ಧುಮುಕಿಚಂಡ ಕಾಳಿಂಗನ ಮಂಡೆಯೊಳು ಪಾದಪುಂಡರೀಕವನಿಟ್ಟು ತಾಂಡವನಾಡಿದ 3 ಸಂತತ ಸೌಖ್ಯವೀವ ಕಾವೇರಿಯಅಂತರಂಗದಿ ನೆಲೆಸಿಸಂತೋಷದಿಂದ ಅನಂತನ ಮ್ಯಾಲೆ ನಿಶ್ಚಿಂತೆಯೊಳು ಲಕುಮಿ ಭೂಕಾಂತೇರ ಸೇವಿಪ 4 ಒಲಿದು ಗಯಾಸುರನ ಶಿರದೊಳಿಟ್ಟುಹಲವು ಭಕ್ತರ ಪೊರೆದೆನೆಲೆಸಿ ಉಡುಪಿಲಿ ಎನ್ನ ಹೃದಯಕಮಲದಲಿತೊಲಗದೇ ಇರುತಿಪ್ಪ ಸುಲಭ ಹಯವದನ5 ನ್ನೆಂಥಾ ಚೆಲುವ ಪಾದವೊ ಪ. ಪಾದ ಇಂತು ಜಗದಿ ಕೇಳುಪಂಥದೊಳಿದ್ದ ಕುರುಪತಿಯ ಉರುಳಿಸಿದಅ.ಪ. ಹಲವು ಕಾಲಗಳಿಂದಲಿ ಮಾರ್ಗದಿಶಿಲೆ ಶಾಪ ಪಡೆದಿರಲುಒಲಿದು ರಜದಿ ಪಾವನಗೈದು ಕರುಣದಿಂದಬಲೆಯ ಮಾಡಿ ಸಲಹಿದ ಶ್ರೀಹರಿಯ 1 ಬಲಿಯ ದಾನವ ಬೇಡಿ ತ್ರೈಲೋಕವನಳೆದು ಏಕಾಂಘ್ರಿಯಲಿಬೆಳೆದು ಭೇಧಿಸಲಾಗ ನಳಿನಜಾಂಡವ ಸೋಕಿಚೆಲುವ ಗಂಗೆಯ ಪೆತ್ತ ಜಲಜಾಸನಾರ್ಚಿತ 2 ಚೆÉಂಡು ತರುವ ನೆವದಿ ಕಾಳಿಂಗನು-ದ್ದಂಡ ಮಡುವ ಧುಮುಕಿಚಂಡ ಕಾಳಿಂಗನ ಮಂಡೆಯೊಳು ಪಾದಪುಂಡರೀಕವನಿಟ್ಟು ತಾಂಡವನಾಡಿದ3 ಸಂತತ ಸೌಖ್ಯವೀವ ಕಾವೇರಿಯಅಂತರಂಗದಿ ನೆಲೆಸಿಸಂತೋಷದಿಂದ ಅನಂತನ ಮ್ಯಾಲೆ ನಿಶ್ಚಿಂತೆಯೊಳು ಲಕುಮಿ ಭೂಕಾಂತೇರ ಸೇವಿಪ 4 ಒಲಿದು ಗಯಾಸುರನ ಶಿರದೊಳಿಟ್ಟುಹಲವು ಭಕ್ತರ ಪೊರೆದೆನೆಲೆಸಿ ಉಡುಪಿಲಿ ಎನ್ನ ಹೃದಯಕಮಲದಲಿತೊಲಗದೇ ಇರುತಿಪ್ಪ ಸುಲಭ ಹಯವದನ 5
--------------
ವಾದಿರಾಜ
ಎಂಥಾ ಮಹಿಮನಿವನೆ ಗೋಪಾಲಕೃಷ್ಣ ಎಂಥ ಮಹಿಮನಿವನೆ ಪ. ಎಂಥಾ ಮಹಿಮನಿವನಂತ ಕಂಡವರಿಲ್ಲ ಕಂತು ಜನಕ ಸರ್ವರಂತರಂಗದೊಳಿಪ್ಪ ಅ.ಪ. ಕರಚರಣಗಳಿಲ್ಲದೆ ಇದ್ದರು | ಮುದುರಿ ಘುರುಘುರುಗುಟ್ಟುತಿಹುದೆ ವರಕಂಬೋದ್ಭವ ವಟು ಪರಿಶು | ಧರಿಸಿರುವನ ಚರಿಸಿ ಮಾವನ ಕೊಂದ ನಿರ್ವಾಣ ಹಯವೇರಿ ಶರಧಿಯೊಳಾಡಿ ಗಿರಿಯಡಿ ಓಡಿ ಧರೆಯನು ತೋಡಿ ಕರಳೀಡ್ಯಾಡಿ ಕರವ ನೀಡಿ ಭಾರ್ಗವ ದಶರಥ ಸುತ ಅಂಬರ ತೊರೆದ ರಾವುತ 1 ಮಂದರ | ಬೆಂಡಂತೆ ಧರಿಸಿ ವನಿತೆಯ ತಂದನೀ ಧೀರ ಘನ‌ಘರ್ಜನೆಯು ಗಂಗಾಜನಕ | ಜಮದಗ್ನಿಸುತ ವನಚಾರಿ ತುರುಪಾಲ ವನಿತೆರೊಂಚಕ ಕಲ್ಕಿ ಜನಿಸಿ ಜಲದಿ ಬೆನ್ನಲಿ ಗಿರಿಕೋರೆ ಘನ ಹೊಸಲಾಸನ ತಿರಿದನುಜನ ತರಿದ ಮಾತೆ ಕಪಿವೆರಸಿ ವೃಂದಾವನ ಚರಿಸಿ ದಿಗಂಬರ ಹರಿ ಏರಿದನೆ 2 ಸುತನಿಗಾಗಮವಿತ್ತನೆ | ಕ್ಷಿತಿಧರಧಾರಿ ಸುತನ ಮೂಗಿನೊಳ್ ಬಂದನೆ ಸುತವಾಕ್ಯ ಸತ್ಯವೆನಿಸಿ ಅತಿ ಕುಬ್ಜ ಕ್ಷಿತಿಯನಿತ್ತು ವ್ರತಧಾರಿ ವಸನ ಚೋರ ವ್ರತಭಂಗ ಏರಿ ತುರಂಗ ಸತಿಯನೆ ಪೊರೆದ ಸತಿಯಂತಾದ ಸತಿಯಳ ಸಂಗ ಸತಿಗರಿದಂಗ ಸತಿಯ ಬೇಡಿ ನೀಡಿ ಸತಿಯ ಕೂಡಿ ಜಾರ ಸತಿ ಹೆಗಲೇರಿದ 3 ವಾಸ ಜಲದಿ ಮೈ ಚಿಪ್ಪು | ಯಜ್ಞ ಸ್ವರೂಪ ಮಾನವ ಮೃಗರೂಪು ಆಸೆಬಡಕ ಮಾತೆ ದ್ವೇಷ ವನದಿ ವಾಸ ಪೋಷ ಪಾಂಡವ ಜಿನ ಮೋಸ ವಾಜಿ ಮೇಲ್ವಾಸ ನಾಸಿಕ ಶೃಂಗ ನಗಪೋತ್ತಂಗÀ ಮಾನವ ಸಿಂಗ ನೃಪರ ದ್ವೇಷ ಪೋಷಿ ಯಜ್ಞವೃಂದ ವಾಸಿ ಘಾಸಿವ್ರತ ಕಲಿಮುಖ ದ್ವೇಷಿ 4 ಅಮೃತ ಭೂಸತಿಯ ಪೊರೆದು ಪಾಪಿ ಕರುಳ್ಬಗೆದ ಜಲಪಿತ ಭೂಪರ ಕಾಡಿ ರಘುಭೂಪ ಸೋದರತಾಪ ಗೋಪ್ಯಕಲ್ಯಂತಕಾಲ ಗೋಪಾಲಕೃಷ್ಣವಿಠ್ಠಲ ಆಪಜವಾಸ ಆ ಪೃಥ್ವೀಶ ಆ ಪುತ್ರಪೋಷ ಆ ಪದ ಸರಿತ ಕೋಪಿ ಲಂಕೆ ಪುರತಾಪಿ ಗೋಪಿಕಾ ವ್ಯಾಪಿ ಮಾನಹೀನ ಘೋಟಕವಹನ 5
--------------
ಅಂಬಾಬಾಯಿ
ಎಂಥಾ ಮೋಹನನೇ ನೋಡಮ್ಮಯ್ಯಾ| ಸಂತತ ತೃಪ್ತನು ಬಾಲಕನಾದಾ|ಅ- ನಂತ ಚರಿತೆಯಾ ದೋರುವ ಕೃಷ್ಣ ಪ ಮೂಡಣ ದೇಶಕೆ ಪಡರಲು ಗೋಪಿಯು| ತಡೆಯದೆ ದುಮುಧುಮು ಧುಮುಕೆನುತ| ಕಡೆಯಲು ಧುಡು ಧುಡು ಧುಡುನಡೆಯುತ ಬಂದು| ಪಿಡಿದೆನ್ನ ಸೆರಗ ಬೆಣ್ಣೆ ಬೇಡುವಾ ಕೃಷ್ಣ 1 ಸಮಗೆಳೆಯರ ಸಂಗಡ ಧ್ವನಿವೇಣಿಯ| ಉಮಟೆಸುತಲಿ ಧಿಗಿಧಿಗಿಲೆನುತಾ| ಧಿಮಿಕಿಟ ಧಿರಕಿಟ ತಿರುಕಿಟವೆಂಬೋ| ಕ್ರಮದಿ ವಾದ್ಯವ ಬಾರಿಸುವಾ ಕೃಷ್ಣ 2 ಗುರು ಮಹೀಪತಿ ಪ್ರಭುವಿನ ಪದರಜ| ದೊರಕದು ಅಜಭವ ಮುಖ್ಯರಿಗೆ! ಹರುಷದಿ ತೋಳ್‍ದೊಡೆ ಮೇಲೆ ಓಡಾಡುವಾ| ಧರೆಯೊಳು ಯಶೋಧೆ ಸುಕೃತವೆಂತೋ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂಥಾತ ಎಂಥಾತನೋ ನಮ್ಮಯ ರಂಗ ಎಂಥಾತ ಎಂಥಾತನೋ ಪ ಎಂಥಾತ ಎಂಥಾತ ಚಿಂತಾಯಕ ಭಕ್ತ ರಂತರಾತ್ಮಕ ಲಕ್ಷ್ಮೀಕಾಂತ ತ್ರಿಲೋಕ ಕರ್ತ ಅ.ಪ ದಿವನಿಶಿಯಾಗಿಹ್ಯನೋ ತಾನೆ ತ್ರಿ ಭುವನವ ಬೆಳಗುವನೋ ಸವಿಯದ ಮಹಿಮರಲವಬಿಡದ್ವೇದ ಒಂದೇ ಸಮನೆ ಪೊಗಳುತಿರೆ ಇವನು ಕಾಣದಲಿಹ್ಯ 1 ತಿಥಿ ವಾರ ಪಕ್ಷ ತಾನೇ ತಾನೆ ಮಾಸ ನಿತ್ಯ ತಾನೇ ಶ್ರುತಿತತಿ ಯತಿಗಳು ಸತತ ಪೊಗಳುತಿರೆ ಮತಿಗೆ ನಿಲುಕದಂಥ ಅತಿ ಚರಿತ್ರನಿವ 2 ನಗುವಳುವರಲಿ ಈತನೇ ನಿಂತುಕೊಂಡು ಸಿಗಿವ ಬಗಿವರಲೀತನೇ ನಿಗಮಾತೀತನ ಮಹಿಮದ್ಹಗರಣ ತಿಳಿಯದು ಸುಗುಣ ಸಂತರೊಶ ಜಗದಯ್ಯ ಶ್ರೀರಾಮ 3
--------------
ರಾಮದಾಸರು
ಎಂಥಾತ ಗುರುರಾಯನು ಜಗ - ದಂತರ್ನಿಯಾಮಕನು ಪ ಸಂತೋಷದಿಂದಲಿ ಅಂತೇವಾಸಿಗಳ ನಿಂತು ಪಾಲಿಸುತಿಹನು ಅ.ಪ ಚಿಂತೆಯು ಯಾಕೆಂದನು ನಿ - ಶ್ಚಿಂತಿ ಮಾರ್ಗವಿದೆಂದನು ಅಂತರದೊಳು ಶಿರಿಕಾಂತನ ಪದವೇಕಾಂತದಿ ಭಜಿಸೆಂದನು 1 ಯಾತಕೆ ಶ್ರಮವೆಂದನು ನಿನಗೆ ಪಾತಕÀವಿಲ್ಲೆಂದನು ಶಿರಿ ನಾಥನ ಭಜಿಸೆಂದನು 2 ಮಾತು ಮೀರದಿರೆಂದಾನು ಮಾತು ಲಾಲಿಪÀನೆಂದನು 3
--------------
ಗುರುಜಗನ್ನಾಥದಾಸರು