ಒಟ್ಟು 1703 ಕಡೆಗಳಲ್ಲಿ , 109 ದಾಸರು , 1221 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯದು ಕುಲಾಂಬುನಿಧಿ ಪೀಯೂಷಕ್ಷಕರ ಪಂಚಸಾಯಕಾನಂತ ಕಮನೀಯ ರೂಪಾ ಕಮಲಾಯತಾಕ್ಷನೆ ಬ್ರಹ್ಮ, ವಾಯು, ಸುರಮುನಿ ಮುಖ್ಯಧ್ಯೇಯ ವಿಷ್ಣೋ ಪ ಗೋತ್ರಾರಿ ಪುತ್ರನಿಜಮಿತ್ರ ಸುಪವಿತ್ರ ಚಾ ಕಳತ್ರ ಶುಭಗಾತ್ರಗತಿ ಸತ್ರತ್ರಿನೇತ್ರನುತ ಸಕಲಜಗ ಸೂತ್ರ ನೋಟಕ ತೋತ್ರವೇತ್ರ ಪಾಣೆ 1 ಭವ ಭವ ಭಂಗ ವರಗೋಪಾಂಗನಾ ಅಂಗ ಸಂಗಲೀಲಾರತ ಭುಜಂಗ ಪರಿಯಂಕ ಸುರ ತುಂಗ ಗಂಗಾಜನಕ ಸರ್ವಾಂತರಂಗ ಹರಿ ಮಂಗಳಾತ್ಮಕ ತಿರುವೆಂಗಳೇಶಾ 2 ನಂದಕಂದ ಶ್ರೀ ಮುಕುಂದ ದುರಿತಾಂಧ ಅರ ವಿಂದಭಾಂಧವ ದಿತಿ- ಜವೃಂದ ವ್ಯಾಳಖಗೇಂದ್ರ ತಂದೆ ಮಹಿಪತಿ ನಂದನ ಪ್ರಿಯ ಗೋವಿಂದ ಆ ನಂದ ಕಂದನೆ ಸಿಂಧುಶಯನ ದೇವಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಯಾಕ ಸ್ಮರಸದೀ ಮನಸಿಗೇ ಪ ಯಾಕ ಸ್ಮರಸದೀ ಮನಸಿಗೆ | ಲೋಕದೊಳು ತನ್ನ ಸುಖಗೆ | ಮಾಕಾಂತ ನಡಿಗಳ ಮರೆಹೊಕ್ಕು | ವಿ ವೇಕ ಸೌಖ್ಯ ಪಡಿಯದೀಗ 1 ಉತ್ತಮ ಸಂಗವ ನೆರೆಮಾಡಿ ತನ್ನ | ಚಿತ್ತದ ಚಂಚಲ ನೀಡ್ಯಾಡೀ | ನಿತ್ಯದಿ ಗುರು ಹಿರಿಯರ ಶೇವೆಯಲಿ| ಹೊತ್ತು ಸಾರ್ಥಕ ಕಳಿಯದು ನೋಡು 2 ಸಣ್ಣ ದೊಡ್ಡವರಿಂದ ಭಲರೇಯಾ ಯಂದು | ಮನ್ನಿಸಿಕೊಳ್ಳದೇ ಅವರ ಕೈಯ್ಯಾ | ಕುನ್ನಿಯ ಛೀ ಸುಡು ಸುಡು ಯಂದು | ನಿನ್ನ ಜನ್ಮಕೆನಿಸುವದು ಬಲು ಕುಂದು 3 ವಿಹಿತವೇ ಅಹಿತವೆಂದು ಬಗೆವದು ತನ್ನ | ಸ್ವಹಿತವೇ ಅಹಿತೆಂದಾಚರಿಸುವುದು | ಇಹಪರ ಲೋಕಕ ಸಲ್ಲದು ಆಗಿ | ಕುಹಕ ಬುದ್ಧಿಯಿಂದಲೇ ಬಾಳುದು 4 ಜನಲಜ್ಜಾ ಮನಲಜ್ಜಾ ವೆರಡಿಲ್ಲಾ ಇದ | ಕೇನೋ ಮುಂದಣಗತಿ ಶಿವಬಲ್ಲಾ | ಅನುಮಾನ ವಿಲ್ಲಿದರೊಳು ಕಂಡು ಕೇಳಿ | ಘನಗುರು ಮಹಿಪತಿ ಜನ ಸೊಲ್ಲಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಯಾಕಣ್ಣಾ ಏನು ಬೇಕಣ್ಣಾ ಬಿಡು ಝೋಕಣ್ಣಾ ಜಗ ಸಾಕಣ್ಣಾ ಪ ಆಕಣ್ಣಿನೊಳಗೇನು ಠೀಕಣ್ಣಾ ಇದು ಪಾರ್ವತಿಗುಸುರಿದ ಮೂಕಣ್ಣಾಅ.ಪ ಅಂತವನುತ್ತು ಎಡೆಯಾಡು ನಿ ಶ್ಚಿಂತೆಯೊಳಿಹ ಸತ್ಯಗುರಿನೋಡು ಪಂಥವು ಮಾಡುವ ಯೆಂಟಾರುಮಂದಿಗ ಳಂತೆ ನೀ ಹೊಗದೆ ಚಿಂತಾಮಣಿಯಾಗೂ 1 ಮಂಗಳಪುರಿವಾಸನಾಗುವೆ ನಿಜ ರಂಗಮಂಟಪಕೆ ನೀಹೋಗುವೆ ಜಂಗಮ ಗುರುಜಾಣಾಲಿಂಗ ತುಲಶೀರಾಮಾ ಮಂಗಳಮೂರುತಿ ಹಿಮಗಿರಿವರನಿಹ 2
--------------
ಚನ್ನಪಟ್ಟಣದ ಅಹೋಬಲದಾಸರು
ಯಾಕೆ ಇಂಥ ದುಡುಕು ಕೃಷ್ಣಯ್ಯ ನಿನಗೇಕೆ ಇಂಥ ದುಡುಕು ಪಾಕಶಾಸನಮಧ್ಯ ಪೋಕತನಗಳನ್ನುಸಾಕುಸಾಕಯ್ಯ ಕೃಷ್ಣ ಪ ಗೊಲ್ಲ ಬಾಲಕರು ನೀವೆಲ್ಲರು ಕೂಡಿಕೊಂಡುಗುಲ್ಲ ಮಾಡದೆ ಮೊಸರೆಲ್ಲ ಸವಿದೆಯಂತೆ ಕೃಷ್ಣ 1 ಪೂತನಿ ಮೊಲೆಯನ್ನು ಭೀತಿಯಿಲ್ಲದೆ ಉಂಡುಘಾತವ ಮಾಡಿದೆ ಮಾತನಾಡಯ್ಯ ಕೃಷ್ಣ2 ದುಷ್ಟ ಕಂಸನ ನೀನು ಕಷ್ಟವಿಲ್ಲದೆ ಮಡುಹಿಮುಷ್ಟಿಕನ ಕೊಂದೆ ದೃಷ್ಟಿ ತಾಕೀತಂದು 3 ಸಾರಥಿ 4 ಅಂಗಿಟೊಪ್ಪಿಗೆ ಉಂಗುರ ಉಡಿದಾರಶೃಂಗರಿಸಿಕೊಂಡು ರಂಗವಿಠಲ ಬಾರೋ 5
--------------
ಶ್ರೀಪಾದರಾಜರು
ಯಾಕೆ ಈ ದಾಸನನು ಸಲಹಲೊಲ್ಲೆ ಶ್ರೀಕಾಂತ ಭಕ್ತನನು ಕಾಯಲೊಲ್ಲೆ ಪ ತರಳತನದಲಿ ನಾನು ಪಾಪಗಳ ಮಾಡಿದರೆ ಪರಮಾತ್ಮ ಸದ್ಗುರುವೆ ತಿಳಿದು ಮಾಡಿದನೇ ನಿರುತ ಯೌವನದಲ್ಲಿ ಪಾಪಗಳ ಮಾಡಿದರೆ ಅರಿತು ಮಾಡಿದೆನೆಂದು ಬಗೆದೆಯಾ ಹರಿಯೇ 1 ಈಗ ವಾರ್ಧಿಕ್ಯದಲಿ ಪಾಪಮಾಡಿದೆನೆಂದು ನಾಗೇಶಶಯನನೇ ಮುನಿದೆಯಾ ಹರಿಯೇ ಜಾಗುಮಾಡದೆ ನೀನು ಅಜಮಿಳಗೆ ವಲಿದಂತೆ ಬೇಗನೇ ಸಲಹಯ್ಯ ನಾಮಸ್ಮರಿಸುವೆನೊ2 ಹರಿಸೇವೆಯನ್ನು ನಾ ಭಕ್ತಿಯಲಿ ಗೈವೇ ಹರುಷದಿಂ ಹರಿಯೆಂನ ಪಾಪಗಳ ಕ್ಷಮಿಸುತ್ತ ಸಿರಿ ಚನ್ನಕೇಶವನೆ ಮುನಿಯದಿರು ತಂದೆ 3
--------------
ಕರ್ಕಿ ಕೇಶವದಾಸ
ಯಾಕೆ ನಿರ್ದಯ ಮಾಡಿದೆ ರಂಗಯ್ಯ ನೀನ್ಯಾಕೆ ನಿರ್ದಯ ಮಾಡಿದೆ ಪ ವ್ಯಾಕುಲ ಪಡಲಾರೆ ನಿಮ್ಮ ಲೋಕವ ಸೇರಿಸು ಅ.ಪ ದುಷ್ಟರ ಮಧ್ಯದಲ್ಲಿ ನಾನಿರಲಾರೆ ಸೃಷ್ಟಿಗೀಶ್ವರನೆ ಕೇಳು ಮುಟ್ಟಿ ಭಜಸಿ ನಿಮ್ಮ ಪಾದಪದ್ಮದ ಭಕ್ತಿಯಿಟ್ಟೇನೆಂದರೆ ದುಷ್ಟ ಇಂದ್ರಿಯ ಬಿಡದೆನ್ನ 1 ಪಂಚೇಂದ್ರಿಯಗಳೆನ್ನ ಬಹುಬೇಗ ವಂಚನೆ ಮಾಡುತಿದೆ ಪಂಚಬಾಣನ ಪಿತ ಪರಮಪುರುಷ ರಂಗ ಅ ಕಿಂಚನಾದೆ ನಿನ್ನಂಘ್ರಿಯ ಸೇರಿಸು 2 ಸಂಸಾರವೆಂಬ ಸರ್ಪ ಕಚ್ಚಿ ವಿಷ ಕ್ಷಣದಲ್ಲಿ ತಲೆಗೇರಿತು ಪರಮ ಹಂಸರ ಸಂಗದೊಳಗೆಯಿರಿಸಿ ಎನಗೆ ಭರದಿಂದೇರಿದ ವಿಷ ತಿರುಗೆಸೋ ಶ್ರೀಹರಿ 3 ಸರ್ಪ ತುಂಬಿದ ಕೂಪದಿ ಬಿದ್ದಿಹೆನು ಎನ್ನಪ್ಪ ರಕ್ಷಿಸೊ ಬೇಗದಿ ಸರ್ಪಶಯನ ಶ್ರೀಅಪ್ರಮೇಯ ರಂಗ ಇನ್ನು ಕ್ಷಿಪ್ರದಿಂ ಮುಕ್ತಿಯ ಒಲಿದು ಪಾಲಿಸು ರಂಗ 4 ಅಮ್ಬುಜನಾಭನೆ ನಿಮ್ಮ ಪಾದದಧ್ಯಾನ ಒಂದು ನಿಮಿಷವಾದರು ಮಾಡಲೀಸದು 5 ಹಿಂದಿನ ಕರ್ಮಂಗಳು ಇಂದಿರೇಶ ನಿಂದಕರ ವಶವಾಯಿತು ಇಂದು ಧರ್ಮದಲಿರ್ದೆ ಬಂಧುಗಳ ವಶವಾಯ್ತು ಇನ್ನು ಬಂಧನವೇನಯ್ಯ ಮುಕ್ತ್ಯಾನಂದ ತೋರುವುದಕ್ಕೆ 6 ಎಂದಿಗಾದರೂ ಮುಕ್ತಿಯ ಕೊಡುವೆಯೆಂದಾನಂದ ಇಂದು ಈ ಸಂಸಾರ ಬಂಧನದೊಳಗೆ ನಾ ಒಂದು ನಿಮಿಷ ಜೀವಿಸಲಾರೆನು ರಂಗ 7 ಅಂದು ದ್ರೌಪದಿ ಧ್ರುವÀ ಗಜೇಂದ್ರನ ರಕ್ಷಿಸಲಿಲ್ಲವೆ ಬಂದು ಅಂಬರೀಷ ಅಜಾಮಿಳರ ಪ್ರಹ್ಲಾದನ ಕಂಬದಿಂದಲೆ ಬಂದು ಕಾಯ್ದ ಗೋವಿಂದ 8 ಭಕ್ತವತ್ಸಲನೆಂತೆಂಬೊ ಬಿರುದು ಈಗ ವ್ಯರ್ಥವಾಯಿತೆ ಶ್ರೀರಂಗ ಉತ್ತಮ ಗುರುಗಳು ಶ್ರೇಯೋನಿಧಿಗಳ ವಾಕ್ಯ ಸತ್ಯವ ಮಾಡಿ ಮುಕ್ತ್ಯಾನಂದ ಪಾಲಿಸು 9 ರಂಗನಾಥ ನೀ ಕೈ ಬಿಟ್ಟರೆ ಎನ್ನ ಲೋಕಮಾತೆ ಬಿಡುವಳೆ ಬೇಗ ಮುಕ್ತಿಪಥವ ಪಾಲಿಸುವಳು 10 ಮಾಡಬಾರದ ಮಾಡಿದೆ ಈ ಸಂಸಾರದೆ ನೋಡಬಾರದ ನೋಡಿದೆ ಆಡಬಾರದ ವಾರ್ತೆಗಳನಾಡಿದೆ ಇನ್ನು ಗಾಡನೆ ಮುಕ್ತಿಯ ನೀಡೊ ವೆಂಕಟರಮಣ 11
--------------
ಯದುಗಿರಿಯಮ್ಮ
ಯಾಕೆ ಪುಟ್ಟಿಸಿದಿ ನೀ ಸಾಕಲಾರದೆ ಜಗ-ದೇಕ ಕಾರಣಪುರುಷನೆ ಕೃಷ್ಣ ಪ ವಾಕು ಚಿಂತಿಸೆ ಇಂಥಕಾಕು ಮಾಡುವುದುಚಿತವೆ ಕೃಷ್ಣ ಅ.ಪ. ಒಡಲಿಗನ್ನವ ಕಾಣೆ ಉಡಲು ಅರಿವೆಯ ಕಾಣೆಗಡಗಡನೆ ನಡುಗುತಿಹೆನೋ ಕೃಷ್ಣಮಡದಿ ಮಾತೆಯರ ಬಿಟ್ಟು ಒಡಹುಟ್ಟಿದವರ ಬಿ -ಟ್ಟಡವಿ ಪಾಲಾದೆನಲ್ಲೋ ಕೃಷ್ಣಕುಡುತೆ ಕೊಡುವವರಿಲ್ಲ ನುಡಿಯ ಕೇಳುವರಿಲ್ಲಬಡತನವು ಕಂಗೆಡಿಸಿತೋ ಕೃಷ್ಣಕಡೆ ಹಾಯಿಸುವರ ಕಾಣೆ ನಡುಮಡುವಿನೊಳು ಕೈ ಬಿಡದೆ ದಡವನು ಸೇರಿಸೋ ಕೃಷ್ಣ 1 ಕೊಟ್ಟವರ ಸಾಲವನು ಕೊಟ್ಟು ತೀರಿಸದವರಪೊಟ್ಟೆಯೊಳು ಪುಟ್ಟಲಾಯ್ತೋ ಕೃಷ್ಣಎಷ್ಟು ಜನುಮದಿ ಮನಮುಟ್ಟಿ ಮಾಡಿದ ಕರ್ಮಕಟ್ಟೀಗ ಉಣಿಸುತಿಹುದೋ ಕೃಷ್ಣಸೃಷ್ಟಿಯೊಳಗೆನ್ನಂಥ ಕೆಟ್ಟ ಪಾಪಿಷ್ಠ ಜನಘಟ್ಟಿಸಲಿಲ್ಲವೇನೋ ಕೃಷ್ಣವಿಠ್ಠಲನೆ ನಿನ್ನ ಮನಮುಟ್ಟಿ ಭಜಿಸಿ ಹಿಂದೆಎಷ್ಟು ಜನ ಬದುಕಲಿಲ್ಲೋ ಕೃಷ್ಣ 2 ಆಳು ದೇಹವು ಗೇಣು ಕೀಳಾಗಿ ಪಲ್ಕಿರಿದುಖೂಳ ಜನರ ಮನೆಗೆ ಕೃಷ್ಣಹಾಳು ಒಡಲಿಗೆ ತುತ್ತು ಕೂಳಿಗೆ ಹೋಗಿ ಅವರವಾಲೈಸಲಾರೆನಲ್ಲೋ ಕೃಷ್ಣಬಾಳು ಈ ಪರಿಯಾದ ಮ್ಯಾಲೆ ಭೂಮಿಯಲಿ ಬಹುಕಾಲ ಕಳೆಯುವುದುಚಿತವೆ ಕೃಷ್ಣಆಲಸ್ಯ ಮಾಡದಲೆ ಈ ವ್ಯಾಳ್ಯದಲಿ ಅರಿತುಪಾಲಿಸಲು ಬಹು ಕೀರ್ತಿಯೋ ಕೃಷ್ಣ 3 ಸಿರಿ ಅರಸನೆಂದು ಶ್ರುತಿ ಸಾರುತಿದೆಬಂದುದೀಗೇನು ಸಿರಿಯೋ ಕೃಷ್ಣಒಂದೊಂದು ನಿಮಿಷ ಯುಗಕಿಂತಧಿಕವಾಗುತಿದೆಮುಂದೋರದ್ಹಾಂಗಾಯಿತೋ ಕೃಷ್ಣಸಂದೇಹವಿಲ್ಲ ಗೋವಿಂದ ಶ್ರೀಪದದಾಣೆತಂದೆ ನೀ ರಕ್ಷಿಸದಿರೆ ಕೃಷ್ಣಮುಂದೆ ಭಜಿಸುವರು ಹೀಗೆಂದು ವಾರುತೆ ಕೇಳಿಬಂದುದಪಕೀರ್ತಿ ಮಾತು ಕೃಷ್ಣ 4 ವತ್ಸರ ಈರೀತಿ ಕಾಲಕಳೆದೆನೋ ಕೃಷ್ಣವ್ಯರ್ಥವಾಯಿತು ಜನುಮ ಸಾರ್ಥಕಾಗದು ಕಣ್ಣುಕತ್ತಲೆಗವಿಸಿತಲ್ಲೋ ಕೃಷ್ಣಇತ್ತ ಬಾರೆಂತೆಂದು ಹತ್ತಿಲಿಗೆ ಕರೆದೊಂದುತುತ್ತು ಕೊಡುವರ ಕಾಣೆನೋ ಕೃಷ್ಣವಿಸ್ತರಿಸಲಾರೆ ಇನ್ನೆತ್ತ ಪೋಗಲೊ ನಿನ್ನಚಿತ್ತವ್ಯಾತಕೆ ಕರಗದೋ ಕೃಷ್ಣ 5 ಆರು ಗತಿ ನಿನಗಧಿಕರಾರು ಧಾರುಣಿಯೊಳಗೆತೋರಿಸೈ ಕರುಣನಿಧಿಯೆ ಕೃಷ್ಣಈರೇಳು ಲೋಕಕಾಧಾರವಾದವಗೆ ಬಲುಭಾರವಾದವನೆ ನಾನು ಕೃಷ್ಣಮೀರಿ ನುಡಿಯಲು ಹದಿನಾರೆರಡು ಪಲ್ಗಳುಬೇರು ಕಳಕಳಯಿತೋ ಕೃಷ್ಣತೋರು ಬಂಕಾಪುರದ ಧಾರುಣಿಪುರವಾಸವೀರ ನರಸಿಂಹದೇವ ಕೃಷ್ಣ 6 ಹರಿಯಾತ್ರೆ ಮಾಡಲಿಲ್ಲ ಹರಿಮೂರ್ತಿ ನೋಡಲಿಲ್ಲಹರಿದಾಸ ಸÀಂಗವಿಲ್ಲ ಕೃಷ್ಣಹರಿಸ್ಮರಣೆ ಮಾಡಲಿಲ್ಲ ಸುರನದಿಯ ಮೀಯಲಿಲ್ಲಧರಣಿ ಸಂಚರಿಸಲಿಲ್ಲ ಕೃಷ್ಣಅರಿತರಿತು ಮನ ವಿಷಯಕೆರಗಿ ಹರುಷವ ತಾಳಿಬರಿದಾಯಿತಾಯುವೆಲ್ಲ ಕೃಷ್ಣಮರುತಾಂತರ್ಗತ ಸಿರಿಯರಸ ಹರಿಯೆಂದುಹರುಷಾಬ್ದಿ ಮಗ್ನನಲ್ಲ ಕೃಷ್ಣ7 ಹರಿನಾರಾಯಣನೆಂದು ಕರವೆತ್ತಿ ಮುಗಿದೊಮ್ಮೆ ಮೈ ಮರೆದು ನಟಿಸಲಿಲ್ಲ ಕೃಷ್ಣಹರಿಸ್ಮರಣೆ ಸ್ಮರಿಸಿ ಸಿರಿತುಳಸಿ ಪುಷ್ಪವನುಕರವೆತ್ತಿ ನೀಡಲಿಲ್ಲ ಕೃಷ್ಣಸರ್ವಜ್ಞರಾಯರು ವಿರಚಿಸಿದ ಗ್ರಂಥವನುದರುಶನವೆ ಮಾಡಲಿಲ್ಲ ಕೃಷ್ಣಸ್ಮರಿಸಲಾರದ ಪಾಪ ಸ್ಮರಣೆಪೂರ್ವಕ ಮಾಡಿಸ್ಥಿರಭಾರನಾದೆನಲ್ಲೋ ಕೃಷ್ಣ 8 ದುರುಳಜನರೊಡನಾಡಿ ಹರಿಣಾಕ್ಷಿಯರ ಕೂಡಿಸರಿ ಯಾರು ಎಂದು ತಿರುಗಿ ಕೃಷ್ಣನಿರುತ ಕ್ಷುದ್ರವ ನೆನೆಸಿ ನೆರೆದೂರ ಮಾರಿ ಹೆಗ್ಗೆರೆಗೋಣನಂತೆ ತಿರುಗಿ ಕೃಷ್ಣಪರರ ಅನ್ನವ ಬಯಸಿ ಶರೀರವನೆ ಪೋಷಿಸಿಶಿರ ಒಲಿದು ಶಿಲೆಗೆ ಹಾಯಿದು ಕೃಷ್ಣಶರಣವತ್ಸಲನೆಂಬೊ ಬಿರುದು ಪಸರಿಸುವಂಥಕರುಣ ಇನ್ನೆಂದಿಗಾಹುದೊ ಕೃಷ್ಣ 9 ಉರಗ ಫಣಿ ತುಳಿಯಲೊಎರಡೊಂದು ಶೂಲಕ್ಹಾಯಲೊ ಕೃಷ್ಣಕೊರಳಿಗ್ಹಗ್ಗವ ಹಾಕಿ ಮರವೇರಿ ಕರಬಿಡಲೋಗರಗಸದಿ ಶಿರಗೊಯ್ಯಲೋ ಕೃಷ್ಣಕರುಣವಾರಿಧಿ ಎನ್ನ ಕರಪಿಡಿದು ಸಲಹದಿರೆಧರೆಯೊಳುದ್ಧರಿಪರ್ಯಾರೋ ಕೃಷ್ಣ 10 ಎಷ್ಟು ಹೇಳಲಿ ಎನ್ನ ಕಷ್ಟ ಕೋಟಿಗಳನ್ನುಸುಟ್ಟೀಗ ಬೇಯ್ಯುತಿಹವೋ ಕೃಷ್ಣಕಷ್ಟಬಟ್ಟ ಮಗನೆಂದು ದೃಷ್ಟಿ ನೀರೊರೆಸೆನ್ನಪೊಟ್ಟೆಯೊಳ್ಪಿಡಿವರ್ಯಾರೊ ಕೃಷ್ಣಕೃಷ್ಣನಾಮ ವಜ್ರಕ್ಕೆ ಬೆಟ್ಟ ದುರಿತವು ನೀಗಿಥಟ್ಟನೆ ಬಂದು ನೀನು ಕೃಷ್ಣಇಷ್ಟವನು ಸಲಿಸಿ ಗುಟ್ಟ್ಟಲಿ ಶ್ರೀರಂಗವಿಠಲ ಎನ್ನ ಕಾಯೋ ಕೃಷ್ಣ 11
--------------
ಶ್ರೀಪಾದರಾಜರು
ಯಾಕೆ ಮರುಳಾದೆ ಹೀಂಗೆ ಎಲೆ ಮನವೆ ಕಾಕು ಬುದ್ಧಿಯ ಬಿಡು ಬಿಡು ಸುಮ್ಮನೆ ಪ. ಧನದಾಸೆಯನು ಮರಿ ಮನುಮಥನ ಬಾಣಕಳುಕದಿರು ತೊಳಲದಿರು ನೆಲದಾಸೆಗೆ ನೀನದರ ಅನುವರಿತು ಹರಿಯ ಸ್ಮರಿಸು ಮನವೆ 1 ಅನ್ಯರಾಗುಣ ದೋಷಯಣಿಸದಲೆ ನಿನ್ನಿರವ ನೋಡು ಕಂಡ್ಯಾ ಮನವೆ ಬಂಣಗಾರಿಕೆಯು ಬರಿದೆ ಔದಂಬ್ರ- ಹಣ್ಣಿನಂತೀ ಕಾಯವು ಮನವೆ 2 ತಮ್ಮ ಬುದ್ದಿ ತಲೆಗೆ ಸುತ್ತಿ ಸಂಸಾರ ಭ್ರಮೆಗೊಂಡು ಬಳಲಾದಿರೋ ಕಮಲಪತ್ರಕ್ಕೆ ಒಳಗಿನ ಜಲದಂತೆ ನೆಲಕೆ ನಿರ್ಲೇಪನಾಗೋ ಮನವೆ 3 ಈ ದೇಹ ಸ್ಥಿರವಲ್ಲವೊ ಕಾಲನಾ ಬಾಧೆಗೋಳಗಾಗದಿರೋ ಮನವೆ ಭೇದ ದುರ್ಗುಣವ ತ್ಯಜಿಸು ನೀ ಗೇರುಬೀಜದಂದದಿ ತಿಳಿಯೊ ಮನವೆ 4 ಮಾಡು ಹರಿಸೇವೆಯನ್ನು ಮನದಣಿಯೆ ಬೇಡು ಹರಿಭಕ್ತಿಯನ್ನು ಕೂಡು ಹೆಳವನಕಟ್ಟೆಯ ವೆಂಕಟನ ಬೇಡಿ ಮುಕ್ತಿಯನು ಪಡೆಯೊ ಮನವೆ 5
--------------
ಹೆಳವನಕಟ್ಟೆ ಗಿರಿಯಮ್ಮ
ಯಾಕೆ ಮರುಳಾದೆಮ್ಮ ಎಲೆ ಭಾರತೀ |ಸಾಕಲಾರದೆ ವಿವಿಧ ರೂಪ ತಾಳ್ದನಿಗೇ ಪ ಕಂಜಾಕ್ಷಿ ಸೀತೆಯನು | ಅರಸಲ್ಕೆ ಅಬ್ಧಿಯನುಅಂಜದಲೆ ಉತ್ತರಿಸಿ | ಶತ್ರು ಮಧ್ಯಾ |ಸಂಜೆಯಲಿ ಕಂಡು | ಕಂಜಾಕ್ಷಿ ಗುಂಗುರವಅಂಜದಲೆ ಇತ್ತಿಹ ಪ್ರ | ಭಂಜನಗೆ ನೀನು 1 ವಿಷದ ಲಡ್ಡಿಗೆಯನ್ನು | ಹಸನಾಗಿ ತಿಂದವನುವಿಷಧಿಯೊಳು ಮುಳುಗಿರಲು | ವಿಷಗಣವು ಕಡಿಯೇ |ವಿಷಗಣವು ಪಲ್ಮುರಿದು | ಅಸುವ ನೀಗಲು ಕ್ಷಣದಿವಿಷ ಮರೆದೆ ಕಲಕುತಲಿ | ವಸುಧೆಯಾಳ್ದನಿಗೇ 2 ವಿಪಿನ | ಪ್ರಧ್ವಂಸಕಾನಳಗೇ 3 ಖೇಚರನು ತಾನು ನೀ | ಶಾಚರರ ಸಂಹರಿಸಿಪಾಚಕನು ಮತ್ತಾಗಿ | ಕೀಚಕರ ಸವರೀ |ಯಾಚಿಸುತ ಭಿಕ್ಷಾನ್ನ | ವಾಚಿಸುತ ಸಚ್ಛಾಸ್ತ್ರಮೋಚಕನು ಆದವಗೆ | ಯೋಚಿಸಿಯು ಕೈಪಿಡಿದೇ4 ಎಂಜಲೆಡೆಯನು ಕೊಂಡು | ಅಂಜದಲೆ ಮರಕ್ಹಾರಿಸಂಜೆ ಚರಳೆರ ಕೊಂದಧ | ನಂಜಯ ನಿ ಗೊಲಿದ |ಕಂಜಾಕ್ಷನಾದ ಗುರು | ಗೋವಿಂದ ವಿಠಲ ಪದಕಂಜ ಭಜಿಸುವ ಭಾವಿ | ಕಂಜ ಸಂಭವಗೇ 5
--------------
ಗುರುಗೋವಿಂದವಿಠಲರು
ಯಾಕೆ ಸುಮ್ಮನೆ ಪೇರಿ ಹೊಡೆಯುವಿ ಕಾಕು ದುರ್ಭವ ಚಕ್ರದಿ ಪ ಲೋಕದಿರುವು ನಿನಗೇನು ಸ್ಥಿರವೆಲೋ ಕಾಕುಜೀವ ವಿಚಾರ ಮಾಡದೆ ಅ.ಪ ಕಾಕುಸಿರಿಗೆ ಕೈಹಾಕಿ ಬಲು ಬಲು ಶೋಕದಬ್ಧಿಲಿ ಮುಳುಗಿದ್ಯೊ ನೂಕಿ ಯಮನರೊದೆದು ಎಳೆವಾಗ ಲೋಕಸಂಪದ ನಿನ್ನ್ಹಿಂದೆ ಬರುವುದೆ 1 ನಾನು ಯಾರೆಂದೆಂಬ ಖೂನ ಸು ಜ್ಞಾನ ವಿಡಿದು ತಿಳಿಯದೆ ಶ್ವಾನಸೂಕನಂದದಿ ಮಹ ಹೀನ ಬವಣೆಯೊಳ್ಬೀಳುತ 2 ಗೋತಗೋಜಲಕುಣಿ ಈ ಸಂಸಾರ ರೋತಿ ಹೊಲಸಿಕ್ಕಿ ನಾರುವ ನೀತಿಗೆಟ್ಟದರೊಳಗೆ ಬಿದ್ದೆಮ ಭೀತಿಯಿಂ ಬಳಲುವುದೇನೆಲೊ 3 ಪೂರ್ವಪುಣ್ಯದಿಂ ಸಿಕ್ಕ ಈ ಮಹ ಪರ್ವಕಾಲ ಸಮಯರಿಯದೆ ದುರ್ವಿಕಾರದಿಂ ಸರ್ವ ಕಳೆಯಲು ದೊರೆವುದೇ ಪುನ:ಬಯಸಲು 4 ತೋರಿ ಇಂದ್ರಜಾಲದಂದದಿ ಹಾರಿಹೋಗುವ ಮಾಯ ನೆಚ್ಚಿ ಸಾರತರ ಮೋಕ್ಷವನು ಕರುಣಿಪ ಶ್ರೀರಾಮನ ನಂಬದೆ 5
--------------
ರಾಮದಾಸರು
ಯಾಕೆನ್ನ ಎದುರಲಿ ನಿಲ್ಲುವುದಿಲ್ಲೋ ಯಾಕೆನ್ನಯ ಕರೆ ಕೇಳುವುದಿಲ್ಲೋ ಪ ಯಾಕೆನ್ನ ಅರ್ಚನೆಗೊಲಿಯುವುದಿಲ್ಲೋ ಯಾಕೆನ್ನೊಳು ದಯಮಾಡುವುದಿಲ್ಲೋ ಅ.ಪ ತರಳ ಧೃವನ ಮೊರೆ ಕೇಳಿಸಿತಲ್ಲ ಕರಿ ಎತ್ತಿದ ಸುಮ ಕಾಣಿಸಿತಲ್ಲ ಅರಿ ಅನುಜನ ಸೇವೆ ಹಿರಿದಾಯ್ತಲ್ಲಾ ಕರುಣ ಎನ್ನೊಳಗೇಕೆ ಬರದೋ ಕೃಷ್ಣಯ್ಯ 1 ಅಗಣಿತ ಗೋಪಿಯರೆಡೆಯಲಿ ನಲಿದೆ ನಗಧರನಾಗಿ ಗೋಪಾಲರ ಪೊರೆದೆ ಖಗನಿದ್ದೆಡೆಗೇ ಭರದಲಿ ನಡೆದೆ ನಗುಮೊಗದರಸ ಮಾಂಗಿರಿಯ ರಂಗಯ್ಯ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಯಾಕೆನ್ನನಿಲ್ಲಿಗೆ ಎಳೆ ತಂದ್ಯೊ ಹರಿ ತಪ್ಪೇನನೆಸಿಗಿದೆನೊ ಪ. ಜೋಕೆಯಿಂದಲಿ ಎನ್ನ ಕಾಯಬೇಕಲ್ಲದೆ ನೂಕಿದರೆನ್ನನು ಸಾಕುವರ್ಯಾರೊ ದೊರಿ ಅ.ಪ. ಯಾರಿಗೇನೆಸಗಿದೆ ಆರ ನಾ ದೂಷಿಸಿದೆ ಆರ ನಾ ನಿಂದಿಸಿದೆನೊ ಕಾರದಿ ನೋಡಿದೆನೊ ಈ ರೀತಿ ನೊಂದೆನು 1 ವಿಧಿ ಬರಹದೊಳಿನ್ನು ವಿಧಿಪಿತ ನಿನ್ನ ಕಾಣಲಿಲ್ಲ ಮದಗರ್ವ ಬಿಡಿಸೆನ್ನ ಸದಮಲ ಹೃದಯದಿ ಪದ ಪದುಮವ ತೋರಿ ಉದ್ಧರಿಸೆನ್ನನು 2 ಸೃಷ್ಟಿಕರ್ತನೆ ಕೇಳೊ ಕಷ್ಟವಪಡಲಾರೆ ದೃಷ್ಟಿಲಿ ನೋಡಿ ಕಾಯೊ ಎಷ್ಟು ಬೇಡಲೊ ನಾನು ಬೆಟ್ಟದೊಡೆಯ ಹರಿ ವೃಷ್ಣೀಶ ಗೋಪಾಲಕೃಷ್ಣವಿಠ್ಠಲ ದೊರಿ3
--------------
ಅಂಬಾಬಾಯಿ
ಯಾಕೆನ್ನೊಳಿಂತು ನಿರ್ದಯವೆಲೊ ದೇವ ನೀ ಕರುಣದಿ ನೋಡದಿರಲು ಮತ್ತಾವ ಕಾವ ಪ ಗಜರಾಜನ ನೀ ಸಲಹಲಿಲ್ಲೇ ಅಂದು ನಿಜಭಕ್ತ ಪ್ರಹ್ಲಾದನ ಪೊರೆಯಲಿಲ್ಲೇ ಪರಿ ಎಲ್ಲ ಬಲ್ಲೆ ನಿನ್ನ ಭಜನೆಯೊಳಿಹ ಎನ್ನನೇಕೆ ನೋಡಲೊಲ್ಲೆ 1 ದ್ರೌಪದಿ ಕರೆಯಲಕ್ಷಯ ವಸ್ತ್ರವ ಕೊಟ್ಟೆ ನೀನು ಶಾಪದ ಶಿಲೆಯ ಕುಲಕೆ ತರಲಡಿಯಿಟ್ಟೆ ಪಾಪಿ ಅಜಮಿಳನ ಅಘಗಳ ಸುಟ್ಟೆ ಸ್ವಾಮಿ ಶ್ರೀಪದಗ್ರಸ್ತನಾದೆನ್ನ ನೀ ಕೈಬಿಟ್ಟೆ 2 ಬಿಡಬೇಡೆನ್ನ ಕೈಯ ಶ್ರೀನಿವಾಸ ಬಹು ಬಡವ ನಾನಹುದು ಮಧ್ವಗೃಹವಾಸ ಕಡುಪಾಪಿ ನಾನಲ್ಲವೊ ರಂಗೇಶವಿಠಲ ದೃಢವಾಗಿ ನಂಬಿಹೆನೊ ನಿನ್ನ ಸರ್ವೇಶ 3
--------------
ರಂಗೇಶವಿಠಲದಾಸರು
ಯಾತಕೆ ಮರೆತೆನ್ನ ಯತಿಕುಲ ತಿಲಕನೆ ಪ್ರೀತಿಯ ಬಯಸುತ ಬಂದೆ ಪ ವಾತಸುತಗತಿಪ್ರಿಯ ದೂತನೆ ನಾಥನೀನೆಂತೆಂದು ನಂಬಿದೆ ಖ್ಯಾತಗುರು ಶ್ರೀ ರಾಘವೇಂದ್ರನೆ ಅ.ಪ. ದೇಶದೇಶದಿ ಬರುವ ದಾಸಜನರÀಘ ನಾಶಗೈಸಿ ಪೊರೆವೊ ದಾಶರಥಿ ಕಿಂಕರಾ ಶೇಷಶಯನನ ದೋಷ ಜ್ಞಾನ ವಿಶೇಷದಿಂದಲಿ ನ್ಯಾಸಮಾಡಿದೆ ಭೂಸುರೋತ್ತಮ 1 ಛಲದಿ ಭಕ್ತಿಯ ಮಾಡಿ ಒಲಿಸಿ ಹರಿಯ ಪಾದ ಲಲಿತಕೀರ್ತಿಲಿ ಮೆರೆದೆ ಭಳಿರೆ ಭಳಿರೆ ಗುರುವೇ ಗೊಲ್ಲಕೃಷ್ಣನ ಚೆಲ್ವ ನಾಟ್ಯದಿ ನಿಲ್ಲಿಸಿದ ನಿನಗೆಲ್ಲಿ ಸರಿಯೈ ನಲ್ಲ ಯತಿವರ ಕಾಲಿಗೆರಗುವೆ ಶೀಲಭಕುತಿಯ ಪಾಲಿಸೀಗಲೆ 2 ವ್ಯಾಸಮುನಿಯು ಎನಿಸಿ ಶ್ವಾಸಮತವ ಮೆರೆಸಿ ದೋಷ ಹರಿಸಿ ಧೊರೆಗೆ ದಾಸ ದೀಕ್ಷೆಯ ತೋರ್ದೆ ಈಶದಾಸರ ಭೇದ ವಾದವ ಆಶುಕವಿತದಿ ವಿಶದಪಡಿಸಿದೆ ಶ್ರೀಶಶಯನನಾವೇಶ ಸಂಯುತ ಭೇಶಕಾಂತಿ ವಿಶಾಲಕರುಣಿಯೆ 3 ದಾತ ಈತನೆಂಬ ಖ್ಯಾತಿ ಬಿರುದು ನಿನಗೆ ಪ್ರೀತಿಯಿಲ್ಲವೇ ಗುರುವೇ ಜೋತು ಬಂದೆ ಅಡಿಗೇ ಬೋಧೆಯ ನೀತಿ ಪೇಳಿದೆ ಏತಕೀತಡ ಮಾತಲಾಲಿಸು ದೂತನಿನ್ನವ ಪೂತಕಾಯನೆ4 ಪರಮ ಭಕ್ತರ ವೃಂದ ನಿರುತ ನಮಿಪ ಚೆಂದ ಅರಿಯೆ ವರ್ಣನೆ ಎಂದ ಸುರಿಸು ಭಕ್ತಿಯ ಗಂಧ ಸೂರಿ ಬೀರಿಕರುಣವ ಭಾರತೀಶನ ಸಾರಶಾಸ್ತ್ರದಿ ತೋರು ತತ್ವಾರ್ಥ 5 ಲೋಕ ಹರಕೆ ನೀಡಿ ಸಾಕಿ ಸಲಹೆ ಹೆಜ್ಜೆ ನೂಕಿ ದುರಿತರಾಶಿ ಸಾಕುಹರಿಯ ತೋರಿ ಶ್ರೀಕರಾರ್ಚಿತ ಪಾದಪಲ್ಲವ ಪಾಕನಾಶನ ಏಕ ವೀರನ ನಾಕ ಋಷಿಗತಿಪ್ರಿಯ ಶಿಷ್ಯನೆ 6 ಪಾಹಿ ಜ್ಞಾನದ ಖಣಿಯೆ ಪಾಹಿ ಭಕ್ತರ ನಿಧಿಯೆ ಪಾಹಿ ಮತಿಮತಸ್ಥಂಭ ಪಾಹಿ ಶ್ರೀ ಹರಿಯ ದೂತ ಪಾಹಿಸುಗುಣೋದಾರ ಮಹಿಮನೆ ಪಾಹಿನತಜನ ಭಾರವಹಿಪನೆ ಪಾಹಿಜಯಮುನಿ ವಾಯುವಂತರ ಗೇಹ ಸಿರಿಕೃಷ್ಣವಿಠಲ ಭಜಕ 7
--------------
ಕೃಷ್ಣವಿಠಲದಾಸರು
ಯಾದವರಾಯ ಮಾರಬೇಕು ಮೊಸರಾಬಾರೆ ಗೊಲ್ಲ ಮೊಸರು ಮೊಸರೆನುತಲಿ ಮೇಲು-ಗೇರಿಗೆ ಬರುತಿರೆ ಕಂಡು ನೀಲವರ್ಣದ ಗೋವಳಸೆರಗು ಪಿಡಿದು ಲತಾಂಗಿಯ ತಡೆದಾ 1 ಮೊಸರ ಮಾರಬಂದವಳಲಿ ಸೆಣಸದಿರುಶಶಿನೀರೆ ಎಲ್ಲೆಂದಡತನವೆ ಬೇಡ ಈವಸುಧೆಯೊಳರಸಿಲ್ಲವೆ ನೀ ದೂರಸಾರಲೋಪಶುಗಾಹಿ ಬಿಡು ಎನ್ನ 2 ಲಂಡತನವು ನಮ್ಮೊಡನೆ ಕೊಳ್ಳವು ಹೋಗುಕಂಡ ಕಂಡವರಿಗಂಜುವುದ ಬಿಟ್ಟು ನನ್ನದಂಡೆಯ ಪಿಡಿಯದಿರೋ ನಾ ಸಸಾರಲ್ಲೊಗಂಡನುಳ್ಳವಳು ಕಾಣೋ 3 ಉಟ್ಟ ಸೀರೆಯ ಪಿಡಿದೆಳೆಯದಿರೆಲವೋಪಟ್ಟಣ ಕೊಡೆಯರಿಲ್ಲವೆ ಹೇಳಾಪಟ್ಟಗಟ್ಟಿತೆ ನಿನಗೆ ನಾ ಹೇಳುವೆಕಟ್ಟೆಯ ತಳವಾರಗೆ 4 ಶಂಕಶೂರರುಹನ ಪಂಕಜಗಜನಿಮ್ಮಡೊಂಕ ದುರುಬಿಗೆ ಅಂಜುವಳಲ್ಲಬೋಂಕನೆ ಒಳಗಾದರೆ ಕಡೆಗೆ ನಮ್ಮಮಂಕುಮಾಡಿತು ಗೋವಳಾ 5 ಇತ್ತಿತ್ತ ಬಾರೆಲೆ ಸಖಿಮುತ್ತಿನ ಹಾರವನೀವೆ ಎನ್ನಒತ್ತಾರೆ ಕುಳಿತರೆ ಪದಕವನೀವೆ ಎನ್ನಅರ್ತಿಯ ಸಲಿಸಿದರೆ ನಾ ನಿನಗೆಮುತ್ತಿನೋಲೆಯನೀವೆನೆ6 ಅಣಿ ಮುತ್ತಿನ ಕಂಠಮಾಲೆಯ ನಿನಗೀವೆಜಾಣಿಗೊಲ್ಲತಿ ಬಾಲೆ ಎಲೆ ಬಾಲೆ ನಿನ್ನಜಾಣ ಜಡೆ ಲಕ್ಷ್ಮೀನಾರಾಯಣನ ನೆನೆವುತ7
--------------
ಕೆಳದಿ ವೆಂಕಣ್ಣ ಕವಿ