ಒಟ್ಟು 1420 ಕಡೆಗಳಲ್ಲಿ , 104 ದಾಸರು , 1171 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವರಗಡದಿನ್ನೀಶೇಷ ವಿಠಲ ಪೊರೆ ಇವನ ಪ ನಿರುತ ತವ ಚರಿತೆಗಳ | ಸ್ಮರಿಸುತ್ತ ಭಕ್ತಿಯಲಿಮರುತಾಂತರಾತ್ಮ ತವ | ಚರಣಕರ್ಪಿಪನ ಅ.ಪ. ಭವ | ಬಂಧದೊಳು ಸಿಲ್ಕಿ ಬಹುನೊಂದವಗೆ ಕರುಣದಲಿ | ಕುಂದನೆಣೆಸದಲೇಮಂದ ಹಾಸವ ಬೀರಿ | ಸಂಧಿಸೋ ಸಂತೋಷಇಂದಿರಾರಾಧ್ಯ ಪದ | ಮಂದರೋದ್ಧಾರೀ 1 ಉತ್ತಮ ಸುಸಂಸ್ಕøತಿಯ | ಪೊತ್ತು ಜನಿಸಿಹನಿವನುಮತ್ತೆ ದಾಸರ ಕರುಣ | ಪಾತ್ರನಿರುವಾಅರ್ಥಿಯಲಿ ದಾಸತ್ವ | ಪ್ರಾರ್ಥಿಸುತ್ತಿಹಗೆ ನಾ-ನಿತ್ತಿಹೆನೊ ಅಂಕಿತವ | ಸುಪ್ತೀಶನಾಜ್ಞಾ2 ಮೋದ ತೀರ್ಥರ ತತ್ವ | ವಾದಾನುವರ್ತಿ ಇವಭೋಧಿಸೀ ಪರತಮವ | ಭೇದ ಪಂಚಕನಆದರದಿ ಕೈ ಪಿಡಿದು | ಉದ್ಧರಿಸ ಬೇಕೆಂದುವೇದ ವೇದ್ಯನೆ ನಿನ್ನ | ಪ್ರಾರ್ಥಿಸುವೆ ಹರಿಯೇ 3 ಶ್ರವಣ ಮನಕಾನಂದ | ಭುವನ ಪಾವನವೆನಿಪತವಮಹಿಮೆ ಪೊಗಳಲ್ಕೆ | ಕವನ ಶಕ್ತಿಯನೂನೀವೊಲಿದು ಅಭಿವೃದ್ಧಿ | ಗೈವುದಿವನಲಿಯೆಂದುಪವನಾಂತರಾತ್ಮ ಬಿ | ನ್ನವಿಪೆನೋ ದೇವಾ4 ಭಾವಕ್ರಿಯೆ ದ್ರವ್ಯದೊಳು | ಅದ್ವಿತಿಯ ನೀನೆಂಬಭಾವದನುಭವವಿತ್ತು | ನೀ ವೊಲಿಯೊ ಇವಗೇಕಾವರನ್ಯರ ಕಾಣೆ | ಗೋವರ್ಧನೋದ್ಧರನೆಕೋವಿದರ ಒಡೆಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವರದೇಂದ್ರ ಯತಿ ಚಕ್ರವರ್ತಿ ನಿರಂತರ ವರಣಿಸುವೆ ನಿಮ್ಮ ಕೀರ್ತಿ ಪರಮ ಕರುಣಿ ನಿಮ್ಮ ಚರಣಕಮಲಯುಗ ಕ್ಕೆರಗಿ ಬೇಡುವೆ ವರವಾ ಎಮ್ಮನು ಪೊರೆವಾ ಪ ನತಜನಬಂಧು ನೀನೆಂದೂ | ತಿಳಿದು ನತಿಸಿದೆ ಗುಣಗಣಸಿಂಧು ಪ್ರತಿಗಾಣೆ ನಿಮಗೆ ಸುವ್ರತಿ ವರ ಪ್ರಣತ ಕಾ ಮಿತ ಕಲ್ಪತರುವೆ ನಿರ್ಜಿತಮಾರಮಾರ್ಗಣ ಕ್ಷಿತಿಪರಿಗೆ ಪ್ರತಿದಿನದಿ ಪರಮಾದ್ಭುತವೆನಿಸುವುದು ನಿಮ್ಮದಾನ ಪ್ರತತಿ ಸಾಂಪ್ರತ ಮಧುರವಚನಾ ಶಾಸ್ತ್ರ ಪ್ರವಚನಾ1 ಮರುತ ಮತಾಂಬುಧಿ ಚಂದ್ರಾ | ಚಾಮಿ ಕರವರ್ಣಸರಸ ರವೀಂದ್ರ ಪರವಾದಿತಿಮಿರ ಭಾಸ್ಕರ ವಸುಧೀಂದ್ರ ಸ ದ್ಗುರು ಕರಸಂಜಾತ ನಿರುಪಮ ನಿರ್ಭೀತಾ ಖರಮಥನ ಪದಕೋನದ ಮಧುಕರ ಕೃಪಾಕರ ಕರವ ಪಿಡಿದುದ್ಧರಿಸುವುದು ಭೂ ಸುರ ಕುಲೋತ್ತಂಸಾ ನಮೋ ಪರಮಹಂಸಾ 2 ಕಲಿತ ಸುಂದರ ಮಂದಹಾಸಾ ಹೇ ನಿ ಷ್ಕಲುಷ ಸುತತ್ವ ವಿಲಾಸಾ ಗಳಿತಾ ಘಸಂಘನಿಶ್ಚಲ ಜಗನ್ನಾಥ ವಿ ಠಲನೊಲಿಮೆಯ ಪಡೆದಿಳಿಯೊಳು ಚರಿಸುವ ಭಳಿರೆ ಪ್ರತಿಯೋಗಿಗಳೆನಿಪ ಕಂ ಕಲಭಕೇಸರಿ ನಿಮ್ಮ ದಾಸರೊಳೊಲಿದು ಪಾಲಿಪುದನವರತ ಎನ್ನ ನಂಬಿದೆನೋ ನಿನ್ನ 3
--------------
ಜಗನ್ನಾಥದಾಸರು
ವರದೇಶವಿಠಲರ ಹಾಡು ದಾಸರಾಯರ ದಿವ್ಯ ಚರಣ ಭಜಿಸಿ |ಶ್ರೀಶ ಪ್ರಾಣೇಶ ದಾಸಾರ್ಯ ಗುರುವರ್ಯ ಪ ಪಾದ ಭಜಿಪ ಸದ್ಭಕ್ತರ |ಏಸು ಜನ್ಮದ ಪಾಪರಾಶಿ ಪರಿಹರ ವೋ ||ಶ್ರೀಶನಲಿ ಸದ್ಭಕ್ತಿ ಲೇಸಾಗಿ ಪುಟ್ಟುವದು |ಲೇಶ ಸಂಶಯವಿಲ್ಲ ಆಲಸವು ಸಲ್ಲ 1 ಮರುತ ಮತ ತತ್ವಗಳ ಥೆರೆಗಳಿಂಸೂಸುತ |ಧರಣಿ ದ್ವಿಜರಿಗೆ ರಾಮನಾಮ ಮೃತ ||ನಿರುತ ಭಜಿಸಲು ಜ್ಞಾನ ವೈರಾಗ್ಯ ತರಮಣಿಯ |ಹರಿಭಕುತಿ ಧೇನುವಂ ನೀಡ್ವ ಪಾಲ್ಗಡಲೆನಿಪ 2 ಸುಜ್ಞಾನವೆಂಬಂಥ ಕಿರಣಗಳ ಪಸರಿಸುವ |ಅಜ್ಞಾನ ತಿಮಿರವನು ದೂರೋಡಿಪ |ಸೂಜ್ಞರೆಂಬುವ ತಾವರೆಗಳರಳಿಸುವಂಥ |ಅಜ್ಞ ಕುಮುದಗಳ ಬಾಡಿಸುವ ಭಾಸ್ಕರ ನೆನಿಪ 3 ನಮಿತ ಜನ ಭವತಾಪ ಕಳೆದು ಸದ್ಭಕ್ತಿಯಿಂ |ಬಮಿತ ಆಹ್ಲಾದವನು ಬೀರುವಂಥ ||ಶಮದಮಾದಿಗಳ ಚಂದ್ರಿಕೆಯಿಂದ ಶೋಭಿಸುವ |ವಿಮಲ ಹರಿಜನ ಚಕೋರಕೆ ಚಂದ್ರನೆಂದೆನಿಪ 4 ದಾಸ ಕುಲತಿಲಕ ಪ್ರಾಣೇಶರಾಯರ ಕವನ |ಶ್ರೀಶ ಕಥೆಗಳ ರಾಶಿ ಮೀಸಲಾಗಿರಲು |ಆಸು ಭಕ್ತರಿಗೆ ಸಂತೋಷಗೊಳಿಸಲು ಸರ್ವ |ದೇಶದಲಿ ಮೆರಿಸಿ ಸತ್‍ಕೀರ್ತಿಯನು ಪಡೆದಂಥ 5 ಈ ಗುರುಗಳ ಪಾದಕ್ಕೆರಗಿದ್ದ ಶಿರಧನ್ಯ |ಈ ಗುರುಗಳೀಕ್ಷಿಸಿದ ನೇತ್ರ ಧನ್ಯ ||ಈ ಗುರುಗಳ ವಾಣಿ ಕೇಳಿದ ಕಿವಿಧನ್ಯ |ಈ ಗುರುಗಳನು ಮನದಿ ನೆನೆವ ನರಧನ್ಯ 6 ರಾಗ ದ್ವೇಷಾದಿಗಳ ಗೆದ್ದು ಸದ್ಭಕ್ತಿಯಂ |ಶ್ರೀಗುರು ಪ್ರಾಣೇಶ ಭಜಕರೆನಿಪ |ನಾಗ ಪರ್ಯಂಕ ವರದೇಶ ವಿಠಲನ ಪ್ರಿಯಯೋಗಿ ವರದೇಂದ್ರ ಮುನಿಗಳ ಪಾದಭೃಂಗ 7
--------------
ಶ್ರೀಶಪ್ರಾಣೇಶವಿಠಲರು
ವರಾಹ | ವಿಠಲ ಪೊರೆ ಇವನ ಪ ಮೋದ ಮುನಿ ಸನ್ನುತನೆ | ಆದಿ ಮೂರುತಿಯೇ ಅ.ಪ. ಸ್ವೋಚಿತಸು ಕರ್ಮದಲಿ | ಊಚ ದೀಕ್ಷೆಯನಿತ್ತುನೀಚೋಚ್ಚತರತಮವ | ವಾಚಿಸಿವನಲ್ಲೀಪ್ರಾಚೀನ ದುಷ್ಕರ್ಮ | ಮೋಚನೆಯಗೈಸವ್ಯಸಾಚೀ ಸಖನೆ ಹರಿಯೆ | ಕೀಚಕಾರಿ ಪ್ರೀಯಾ 1 ಸತಿ ಸುತರು ಬಂಧುಗಳು | ಹಿತ ಅಹಿತರಿವರಲ್ಲಿವ್ಯಾಪ್ತ ಶ್ರೀ ಹರಿಯೆಂಬ | ಮತಿಯ ಕೊಟ್ಟವಗೇ ||ಸತತ ತವನಾಮಾ | ಮೃತದ ಸವಿದೋರೋವಿತತ ಮಹಿಮೋ ಪೇತ | ಪ್ರತಿ ರಹಿತ ದೇವಾ2 ಪಥ ಚಾರು ಭವ ಕೂಪಾರ | ಪಾರು ಮಾಡಯ್ಯಾ3 ಸಾರ | ವಾರವಾರಕೆ ಉಣಿಸಿದಾರಿ ದೀಪಕನಾಗೊ | ಮಾರಮಣನೆ ದೇವಾತಾರಕನು ನಿನ್ಹೊರತು | ಆರು ಇಲ್ಲವುಯೆಂದುಪ್ರಾರ್ಥಿಸುವೆ ನಿನ್ನಡಿಗೆ | ವೀರರಘು ಪತೆಯೇ4 ಪತಿ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವಾಜಿವದನಾರ್ಚಕ ಶ್ರೀ ವಾದಿರಾಜ ಪ ರಾಜೀವನಯನ ಶ್ರೀ ಕೃಷ್ಣನಲಿ ಬಿಡು ಎನ್ನ ಅ.ಪ. ದೇವದೇವೇಶನ ಪರಮ ಒಲುಮೆಗೆ ಪಾತ್ರ ಪಾವನ್ನತಮಚರಿಯ ಪತಿತಪಾಲ ಸಾವಧಾನದಿ ಎನ್ನ ಆದಿರೋಗವನಳಿದು ಕೇವಲ ಸದ್ಭಕ್ತಿ ಶೀಲನ ಮಾಡಯ್ಯ 1 ಭಾರತೀಪತಿ ಪದವನೈದುವ ಮಹಾತ್ಮ ಮಾರಾರಿಸುರ ಪೂಜ್ಯ ಕರುಣಿಸಿ ಕಾಯೊ ಸಾರಿದೆನು ತವ ಚರಣ ಸರಸಿಜಯುಗ್ಮಗಳ ದೂರ ಮಾಡದೆ ಹರಿಯ ಕರುಣಪಾತ್ರನ ಮಾಡು 2 ಭಾಗವತ ಶಿರೋರತುನರಿಂದರ್ಚಿತನೆ ಶಿರಿ ವೇಣುಗೋಪಾಲ ವೇದ ವೇದ್ಯ ಜಯೇಶವಿಠಲನ ಮನದಲ್ಲಿ ಬಿಡದಿಪ್ಪ ಪರಮಕೃಪೆ ಬೇಡುವೆನು ಕರುಣಾಬ್ಧಿ ಕೃಪೆ ಮಾಡು 3
--------------
ಜಯೇಶವಿಠಲ
ವಾದಿರಾಜ ಅಸ್ಮದ್ಗುರು ವಾದಿರಾಜ ಪ ವಾದಿರಾಜ ತವ ಪಾದಕಮಲಕಭಿ ವಾದನ ಮಾಳ್ಪೆ ಸಮೋದವಿತ್ತು ಕಾಯೊ 1 ಸಾರಿದರಿಗೆ ಕಲ್ಪ ಭೂರುಹ ದಂತೆ ಮ ನೋರಥ ಸಲಿಸುವ ಸೂರಿಗಳರಸೇ 2 ಭೇದ ಪಂಚಕವನು ಸಾಧಿಸಿ ಕುಮತಕು ವಾದಿಗರ್ವಾದ್ರಿ ವಿಭೇದನ ಗೈದೆ 3 ದೇಶಿಕವರ್ಯ ವಾಗೀಶ ಕುವರನೆ ಕ್ಲೇಶ ಹರಿಸು ಅಘನಾಶ ಗೈದು 4 ಸಿರಿ ಜಗನ್ನಾಥವಿಠಲನ ಸುಗುಣಗಳನುದಿನ ಪೊಗಳಿ ಹಿಗ್ಗುವೊ 5
--------------
ಜಗನ್ನಾಥದಾಸರು
ವಾಯ ದೇವರ ಮಹಿಮಾ ವರ್ಣನೆ ಮೂರವತಾರ , ಷಟ್ಪದಿ ಶ್ರೀರಮೇಶ ವಿಧೀರ ವಿಪವೃತ್ರಾರಿ ವಿನುತ ಸರ್ವಾಧಾರ ನಿರುಪಮನೆ ಸ್ವತಂತ್ರಗುಣಾರ್ಣವ ಪ್ರಭುವೇ | ಪತಿ ಓಂಕಾರ ವ್ಯಾಹೃತಿ ವಾಚ್ಯ ಸರ್ವಪ್ರೇರಕ ಬಲಸುಭಾಸಕ ಹರಿಯೆ ವಾಗ್ರಸನೆ ನಮಿಪೆ 1 ಆಪ್ತನೆಂದರೆ ಪ್ರಾಣ ಸರಿ ಪರಮಾಪ್ತ ಹರಿಯ ಯಥಾರ್ಥಜ್ಞಾನ ಪ್ರಾಪ್ತಿ ಮಾಡಿಸಿ ವಿಷ್ಣು ಕರುಣವ ಕೊಡಿಸುವನು ತಾನು | ಆಪ್ತ ನೆನ್ನೆಯಥಾರ್ಥ ಪೇಳುವ ಮತ್ತೆ ನಿಶ್ಚಯ ಜ್ಞಾನವುಳ್ಳವ ಶಕ್ತ ಕರುಣ ಪಟುತ್ವಯುತನಿರ್ವಂಚನೆಗಳಿಂದ 2 ಶಿಷ್ಯ ವಾತ್ಸಲ್ಯ ಯುತ ಗುರುಸರಿ ವಿಶ್ವ ಜನಕನ ಪ್ರಥಮ ಭಕ್ತಶ್ವಾಸಗಿಂತಲು ಬೇರೆಯವನಿಲ್ಲ ಪವಮಾನನವ | ದೋಷ ಸಂಶಯ ರಹಿತ ಹರಿ ವಿಶ್ವಾಸ ಪಾತ್ರ ವಿಶೇಷ ಮಹಿಮಸುರಾಶ್ರಯ ನಿವನು ವಂಶನೆ ನಿಸುವ ಸೂತ್ರಗಾನಮಿಪೆ 3 ಯಾವ ಜ್ಞಾನ ಬಲ ಸ್ವರೂಪ ಸುದೇವ ಕ್ರೀಡಾದಿ ಗುಣಯುತ ಭವನಾವಿಕ ಪ್ರಭು ವಾಯುವಿನಗುಣ ಚರಿತೆ ವೃಂದಗಳ | ಪಾವನ ಬಳಿತ್ಥಾದಿ ಶೃತಿಗಳು ಸಾವಧಾನದಿ ಪೊಗಳುವವೊ ಆಭಾವಿ ಬ್ರಹ್ಮನ ಮೂಲ ರೂಪವುಜ್ಞಾನ ಬಲಮಯವು 4 ಮೂಲ ರಾಮಾಯಣ ವಿಶೇಷವ ಪೇಳುವ ಹನುಮನೇ ಪ್ರಥಮ ನಿಹಖೂಳ ದಿತಿ ಜನ ಸೈನ್ಯ ಮಾರಕ ಭೀಮ ನೆರಡೆನ್ನಿ | ಶೀಲ ಸಖಗಳ ನೀವ ಶಾಸ್ತ್ರವ ಪಾಲಿಸಿದ ಗುರು ಮಧ್ವರಾಯರೆ ಮೂಲ ಮುಖ್ಯ ಪ್ರಾಣ ದೇವನ ಮೂರನೆಯ ರೂಪ 5 ಪ್ರಾಣ ನೀತ್ರಯ ರೂಪಗಳು ಸಮವೆನ್ನುವದು ಸರ್ವ ವಿಷಯದಿ ಮುಕ್ಕಣ ಪ್ರಮುಖರ ಜ್ಞಾನ ದಾತೃವಿಗಿನ್ನು ಸಮವುಂಟೆ | ಜ್ಞಾನ ವಾಚಕ ಹನುಮ ಶಬ್ದವು ಪೂರ್ಣ ಹರಿ ಸಂದೇಶವೈದನು ಜಾನಕಿಗೆ ನಿರ್ದೋಷ ವಾಕ್ಯಗಳನ್ನು ಧೀಮಂತ 6 ಪಂಚರಾತ್ರಾಗಮ ಪುರಾಣ ವಿರಂಚಿ ಜನಕನ ತೋರ್ಪವೇದವು ವಂಚಿಸದ ಇತಿಹಾಸಗಳು ಕೂಡುತಲಿ ಸಪ್ತಗಳ | ಮಿಂಚಿಸುತ ಸುಜ್ಞಾನ ಪಾಪದ ಸಂಚಯ ತರಿವ ಕಾರಣದಿ ಬಲಿವಂಚಕನ ಭಕ್ತರು ಕರೆಯುವರು ಸಪ್ತಶಿವ ವೆಂದು7 ಶಾಸ್ತ್ರ ವಚನಕೆ ಮಾತೃ ವೆಂಬರು ಸಪ್ತ್ರ ಶಿವಕರ ಮಾತೃಗಳ ಧರಿಸಿಪ್ಪ ನಿವನೆಂದು | ಖ್ಯಾತನಾಗಿಹ ಭೀಮ ನಾಮದಿ ತೀರ್ಥವೆನ್ನಲು ಶಾಸ್ತ್ರವಿದಿತವು ಮತ್ತೆ ಮಧುವೆನೆ ಸುಖವು ಮುಕ್ತಿಯನೀವ ಶಾಸ್ತ್ರವನು 8 ಇತ್ತ ದೇವನೆ ಮಧ್ವನೆಂಬರು ಸುತ್ತುತೀತ್ರಯ ನಾಮದರ್ಥವ ನಿತ್ಯ ತಿಳಿಯುತ ಪಠಿಸಿ ಪಾಡಲುವಾಯು ದೇವನನು | ಭಕ್ತ ಬಾಂಧವನಾತ ವಲಿಯುತ ತತ್ವವೇತ್ತನ ಮಾಳ್ವ ನಿಶ್ಚಯ ಭೃತ್ಯನಾನೆಂತೆಂದು ಮಧ್ವರ ಸಾರಿ ಭಜಿಸುತಿರಿ9 ಪ್ರೌಢ ಮಧ್ವಗೆ ಪೂರ್ಣ ಪ್ರಜ್ಞನೆ ಈತ ಶ್ರುತಿ ಸಿದ್ದ | ಬೀಡು ಮಾಡಿಹ ವಿದ್ಯೆ ನೂಕುತ ತೊಂಡ ನೆಂದಿವರಡಿಗೆ ಬೀಳಲು ಪಾಂಡುರಂಗನ ಬಿಚ್ಚಿ ತೋರುವ ಗೋ ಸಮುದ್ರದಲಿ10 ಏನ ಪೇಳಲಿ ಏನಪೇಳಲಿ ಜ್ಞಾನನಿಧಿ ಸರ್ವಜ್ಞ ಗುರುವರ ತಾನು ಗೈದ ಮಹೋಪಕಾರವ ಮುಕ್ತಿಯೋಗ್ಯರಿಗೆ | ಜ್ಞಾನ ಬಾಹುದೆ ಬಿಟ್ಟರೀತನ ಶೂನ್ಯವೆ ಸರಿ ಎಲ್ಲ ಆತಗೆ ಮನ್ನಿಸುವನೆ ಅನನ್ಯವನು ಹರಿ ಶರಣು ಆಚಾರ್ಯ 11 ಈತನೇ ಆನಂದ ತೀರ್ಥನು ಈತನೇ ಆಚಾರ್ಯ ನಿಶ್ಚಯ ಈತನೇ ಸರಿಮಾತರಿಶ್ವನು ವಾಯುವಿನರೂಪ | ಈತ ಚರಿಸುವ ಶಾಸ್ತ್ರವ್ಯೂಹದಿ ದೈತ್ಯರಿಂದಾಚ್ಛಾದಿತ ಗುಣಯುತ ಆತ್ಮಪೂರ್ಣಾನಂದ ದೇವನ ಶಾಸ್ತ್ರಮಥಿಸುತಲಿ 12 ಸಾರ ವೃಂದಕ್ಕೆ ಚುಚ್ಚುವನು ದುರ್ವಾದಿ ಮತಗಳ ಕೆಚ್ಚೆದೆಯವನು ಗರ್ಜಿಸುತವೇದೋಕ್ತವಾಕ್ಯಗಳ | ಹೆಚ್ಚು ಹೆಚ್ಚೇ ಸರಿಯು ವಿಷ್ಣುವು ಸ್ವಚ್ಛ ಪೂರ್ಣಾನಂದ ಸುಖಮಯ ಪೃಚ್ಛ ಪರಿವಾರ ಸರಿ ವಿಧ್ಯಾದಿಗಳು ಹರಿಗೆಂದು 13 ಕಚ್ಚಿಲತೆಗಳ ಬಿಸುಡುವಂದದಿ ನುಚ್ಚು ಮಾಡುವ ಪ್ರಶ್ನೆನೀಕವ ಅಚ್ಚನಾರಾಯಣನೆ ಪ್ರೇರಕ ನಿವಗೆ ಜನಕನಿಹ | ಮೆಚ್ಚು ಮಗ ಶ್ರೀ ಲಕ್ಷೀ ದೇವಿಗೆ ರಚ್ಚೆತನುವನು ಕಿತ್ತುವೋಡಿಸಿ ಹೆಚ್ಚಿಸುವ ಸುಜ್ಞಾನ ದೀಪವ ಹರಿಯ ಪ್ರಧಮಾಂಗ14 ಕೊಟ್ಟು ಉಂಗುರ ಸುಟ್ಟುಲಂಕೆಯ ಬಿಟ್ಟು ಕಾಮವ ಮೆಟ್ಟಿಖಳರನು ಜಟ್ಟಿ ಹನುಮನು ಪಟ್ಟ ಪುತ್ರನ ಪದವಿ ಸಾಧಿಸಿದ | ಹುಟ್ಟಿ ಕುಂತಿಲಿ ಕುಟ್ಟಿ ಕುರುಕುಲ ಇಟ್ಟು ಮನದಲಿ ದಿಟ್ಟ ಕೃಷ್ಣನ ಅಟ್ಟಿ ಹಾಸದಿ ಮೆರೆದ ಭೀಮನು ಜ್ಞಾನ ಭಾಸ್ಕರನು15 ಹುಟ್ಟು ಸಾವಿನ ಕಟ್ಟು ಬಿಡಿಸಲು ಘಟ್ಟ ದಡಿಯಲಿ ಭಟ್ಟನೆನಿಸುತ ಬಟ್ಟೆ ತವಕದಿ ಭ್ರಷ್ಟದಸ್ಯುಗಳ | ಕೆಟ್ಟ ಮತಗಳ ಸುಟ್ಟು ವಾದದಿ ಸೂತ್ರ ಭಾಷ್ಯವ ನೆಟ್ಟ ಸಂತರ ಮನದಿ ವಿಷ್ಣುವ ಶ್ರೇಷ್ಠಗುರುಮಧ್ವ16 ಏಕೆ ಭಯ ನಮಗಿನ್ನು ನಿರಯದ ಏಕೆ ಸಂಶಯ ಮುಕ್ತಿ ವಿಷಯದಿ ಏಕೆ ಕಳವಳ ಮಧ್ವರಾಯರ ಶಾಸ್ತ್ರ ಪೀಯೂಷ | ಜೋಕೆಯಿಂ ಪ್ರತಿದಿನವು ಸೇವಿಸೆ ಶ್ರೀಕಳತ್ರನು ಕೈಯ ಬಿಡುವನೆ ನಾಕಪತಿಯಿಂಬಿಟ್ಟು ಸಲಹುವ ಶಾಸ್ತ್ರಸಿದ್ಧವಿದು 17 ಹೆಚ್ಚು ಮಾತೇಕಿನ್ನು ಹರಿಮನ ಮೆಚ್ಚುಯೆನಿಸಿಹ ಮಧ್ವರಾಯರು ಬಿಚ್ಚಿತೋರಿದ ತೆರದಿ ಶೃತಿಗಳ ಭಜಿಸಿಖಳ ಜನಕೆ | ಬಚ್ಚಿಡುತ ವಿಜ್ಞಾನ ಮರ್ಮವ ನುಚ್ಚು ನೂಕುತ ದುರ್ಮತಕಿಡಿರಿ ಕಿಚ್ಚು ಕಮಲೇಶ ನೊಲಿಮೆಗೆ ಬೇರೊಂದು ಪಥವಿಲ್ಲ 18 ನಮ್ಮಹಿರಿಯರ ಖಿನ್ನನುಡಿಗಳ ನೊಮ್ಮನದಿ ನೀವೆಲ್ಲ ಕೇಳಿರಿ ರಮ್ಮೆಯರಸಗೆ ಸಮ್ಮತದ ಸಚ್ಛಾಸ್ತ್ರದರ್ಪಣವ | ಹೆಮ್ಮೆಯಿಂದಲಿ ಕೊಟ್ಟು ಬಂದೆವು ಒಮ್ಮೆಯಾದರು ನೋಡುವರೆ ಈ ನಮ್ಮ ಸಂತತಿ ಹಾ ಹರಿ ಹರೀಯೆಂಬ ಕ್ರಾಂತಿಯುತ19 ಉಣ್ಣಿರುಣ್ಣಿರಿ ಮಧ್ವಕಂದರೆ ಭವ ಹುಣ್ಣುವಳಿಯಿರಿ ಅಣ್ಣ ಪ್ರಾಣನದಯವ ಯಾಚಿಸಿಘನ್ನ ಶಾಸ್ತ್ರಾನ್ನ | ಅನ್ನ ಶೃತಿಗಳು ವಿವಿಧ ಸ್ಮøತಿಪ ಕ್ವಾನ್ನ ಪಾಯಸ ಗೀತೆ ಭಕ್ಷ್ಯಗಳೆನ್ನಿ ಬಗೆ ಬಗೆ ಸರ್ವ ಮೂಲವ ಸೂತ್ರಗಳೆ ಸಾರು 20 ತುಪ್ಪವೆನ್ನಿರಿ ನ್ಯಾಯ ಸುಧೆಯನು ಗೊಪ್ಪರಾಜರ ಗ್ರಂಥ ಹಲ್ಪವು ಅಪ್ಪರಾಯರ ವಾಣಿ ಕ್ಷೀರವು ದಾಸ ಸಾಹಿತ್ಯ | ತಪ್ಪದೆಲೆ ತಿಂಬಂಥ ತಿಂಡಿಯು ಚಪ್ಪರಿಸಿ ಭಾರತದ ಕೂಟನು ವಪ್ಪುವನು ಶ್ರೀ ಕೃಷ್ಣ ದೇವನು ಭಕ್ತ ನುಣ್ಣಲಿವ 21 ಎಂತು ಪೊಗಳಲಿ ನಿಮ್ಮ ಗುರುವರ ಹಂತ ಸುರಗಣ ವೆಲ್ಲ ನಿಮ್ಮಡಿ ನಿಂತು ಪಡೆದರು ಜ್ಞಾನ ಪ್ರಾತರ್ನಾಮಕನೆಶರಣು | ಕಂತೆ ಮತಗಳ ನಾಶಗೈದನ ನಂತ ಮಹಿಮನೆ ದೀನ ನಾನಿಹೆ ಕುಂತಿ ನಂದನ ನೀನೆ ತಿಳಸೈ ಸಕಲ ಶಾಸ್ತ್ರಾರ್ಥ 22 ಮೂರ್ತಳೆನಿಸುವ ಚಂದ್ರಮಾನಿನಿನಾಥ ಸೂರ್ಯ ನೊಳ್ ಆದಿತ್ಯ ನಾಮದಿ ನಿಂತು ದಿಕ್ಪತಿಗಳಿಗೆ ಶಕ್ತಿಗಳ | ಇತ್ತು ಸೃಷ್ಠಿಯ ಕಾರ್ಯ ವೆಸಗುವೆ ಉತ್ತರಾಯಣ ಪಗಲು ಮಾನಿಯೆ- ನಿತ್ಯ ಪ್ರೇರಿತ ನೀಪ್ರಜಾಪತಿನಾಮ ಹರಿಯಿಂದ 23 ಖ್ಯಾತ ಮೂರ್ತಾ ಮೂರ್ತ ಧಾರಕೆ ತತ್ವಪತಿಗಳ ಪೋಷತನುವಲಿ ಮೃತ್ಯುಹಾಗಶನಾಪಿಪಾಸಾಪಾನ ನಾಮಗಳ | ಎತ್ತಿ ನಡಿಸುವೆ ದೇಹ ಕಾರ್ಯವ್ರಾತ ಬಿಡಲೇನೊಂದು ನಡೆಯದು ಮಾತರಿಶ್ವನೆ ನಿಧಿಗು ಆರ್ಯುರ್ದಾತ ನೆನಿಸಿರ್ಪೆ 24 ಅನ್ನ ವಿಧಿಯಿಂ ಕೊಂಬೆ ಸಮಸರಿ ಯನ್ನ ಬ್ರಹ್ಮಗೆ ಜೀವ ಗಣತಾವುಣ್ಣಲಾರರು ನಿನ್ನ ಬಿಡೆ ಪ್ರಾಣದಿ ಪಂಚಕನೆ | ಸ್ವಪ್ನ ನಿದ್ರಾ ಸಮಯದೊಳ್ ಹರಿಯನ್ನು ಕೂಡಿರೆ ಕರಣಪರು ಘನಯಜ್ಞ ನಡಿಸಿ ಸರ್ಮರ್ಪಿಸುವೆ ನೀನೊಬ್ಬ ದೇವನಿಗೆ 25 ನಿನ್ನ ನಂಬಿದ ಭಕ್ತನಿಗೆ ಭವ ಹುಣ್ಣು ಮುಟ್ಟದು ವಿಷ್ಣು ವಲಿಯುತ ಮನ್ನಿಸುವ ಹರಿಯಾಜ್ಞೆಯಿಂಮುಕ್ತಿದನು ನೀ ಹೌದು | ವಿಶ್ವ ವಂಶನೆ ನಿನ್ನ ಮಹಿಮೆಯಗಣ್ಯ ಸಿದ್ಧವು ನಿನ್ನ ಧೊರೆ ಹರಿ ಒಬ್ಬ ಜೀವೋತ್ತುಮನೆ ಅಶರೀರ26 ಜ್ಞಾನ ಬಲ ಐಶ್ವರ್ಯಗಳು ಪರಿಪೂರ್ಣ ಸರಿ ವೈರಾಗ್ಯ ಹಾಗೆಯೆ ಪ್ರಾಣನಿನ್ನಲಿ ಕರಿಸುವೆಯೊ ಆಧ್ಯರ್ಧ ನಾಮದಲಿ | ಮಾನ್ಯ ವಿಷ್ಣುಸಹಾಯ ನಿನಗೈನ್ಯೂನ ವಿಲ್ಲವು ಯಾವ ತೆರದಲುಕಾಣೆ ಅಪಜಯ ಜೀವ ಸಾಧನೆಯೆಲ್ಲ ನಿನ್ನಿಂದ 27 ಶೇಷಗಸದಳ ನಿನ್ನ ಪೊಗಳಲು ಶೇಷ ಸರಿ ಬಡದಾಸನಹೆ ವಿಶ್ವಾಸದಿಂ ಸಂವತ್ಸರನೆ ನೀಕಾಯಬೇಕೆಂಬೆ | ಏಸು ಜನ್ಮಗಳನ್ನು ಕೊಟ್ಟರು ಶ್ವಾಸ ಪತಿತವ ಮತದಿ ಪುಟ್ಟಿಸಿ ದಾಸ ಭಾಗ್ಯವ ನೀಡು ಹರಿಯೊಳ್ ಶುದ್ಧ ಭಕ್ತಿಯುತ28 ಎರಡು ಸಹ ಮೂವತ್ತು ಲಕ್ಷಣ ವಿರುತಿಹ ಜಗದ್ಗುರುವೆ ವಿಷ್ಣುವಿಗೆರಡು ಎರಡು ಸರಿಯೆಂತೆಂದು ಸ್ಥಾಪಿಸಿ ಎರಡು ವಿದ್ಯೆಗಳಿರವು ತೊರುವ ಲೆರಡು ಸುಖಗಳ ಪಡೆಯೆಸಾಧನ ಮಾರ್ಗ ನೀಡ್ವೆಬತ 29 ಸರ್ವ ಶಕ್ತನೆ ಶರ್ವ ವಿನುತನೆ ಸರ್ವ ಸರ್ವಗ ಹಿರಿಯ ತನಯನೆ ಸರ್ವ ಜಗದಾಧಾರ ಪೋಷಕ ಸರ್ವ ತೋವರನೆ | ಸರ್ವ ಕಾಲದಿ ಸರ್ವ ದೇಶದಿ ಸರ್ವ ಗುಣದಿಂ ಹರಿಯ ಯಜಿಸುವ ಸರ್ವ ಸದ್ಗುಣ ಪೂರ್ಣ ದೋಷವಿದೂರ ಸರ್ವಜ್ಞ 30 ಹಿಂದೆ ಪೂರ್ವಜರೆಲ್ಲ ಕೂಡುತಲೊಂದು ಪಾಯವಗೈದು ಮೃತ್ಯುವತಂದು ದಿವಿಜ ವೃಂದಕೆ ಕುಂದು ವದಗಿಸಲು | ಕಂದುತಳಿಯಲ್ ನಿಖಿಲ ಸುರಗಣ ಕುಂದು ಮೃತ್ಯುವ ಗೈದು ಪುಡಿಪುಡಿ ವಂದನಾರ್ಹನು ಒಬ್ಬನೀನೇ ಯೆಂದು ಸ್ಥಾಪಿಸಿದೆ 31 ಪಾಹಿ ಅಮ ಶುಚಿ ಯೊಗ ಕ್ಷೇಮನೆ ಪಾಹಿ ಅಮರಲಲಾಮ ಅನಿಲನೆ ನಿರವದ್ಯ | ಪಾಹಿ ಸತ್ಯ ವಿಶುದ್ಧ ಸತ್ವನೆ ಪಾಹಿ ಲಕ್ಷ್ಮೀ ಪುತ್ರ ಭೃತ್ಯನೆ ಪಾಹಿ ಜೀವಗ ಬಾದರಾಯಣಪ್ರೀಯ ಮಹರಾಯ 32 ಪಾಹಿ ಹನುಮನೆ ಭೀಮ ಮಧ್ವನೆ ಪಾಹಿ ದುರ್ಮತ ಧ್ವಾಂತ ಸೂರ್ಯನೆ ಪಾಹಿ ನತಜನ ಪಾಲ ಪ್ರಾಣನೆ ಪಾಹಿ ಶ್ರೀಸುತನೆ | ಪಾಹಿ ಜಗದಾಧಾರ ಸೂತ್ರನೆ ಪಾಹಿ ಸಾಮನೆವಂಶ ದೂರನೆ ಪಾಹಿ ಹರಿಯಚ್ಛಿನ್ನ ಭಕ್ತನೆ ಪಾಹಿ ವಿಜ್ಞಾನ 33 ಪಾಹಿ ಋಜುಪತಿ ವಾಯುಕೂರ್ಮನೆ ಪಾಹಿ ಜೀವ ಲಲಾಮ ಗುಣನಿಧಿ ಪಾಹಿ ಶುಚಿ ಸರ್ವಜ್ಞ ಸಾಮಗಭಾವಿ ಶತಮೋದ | ಪಾಹಿ ಸತ್ಯನೆ ಕಲಿವಿದಾರಣ ಪಾಹಿ ಗುರು ಗೋವತ್ಸ ರೂಪಿಯೆ ಪಾಹಿ ಮಿಷ್ಣು ಪದಾಬ್ಜಮಧುಕರ ಭಾರತೀ ಕಾಂತ 34 ಪಾಹಿ ಅಮೃತನೆ ವಿಶ್ವರಜ್ಜುವೆ ಪಾಹಿ ಬೃಹತೀ ಛಂದ ಮಾನಿಯೆ ಪಾಹಿ ಹಂಸೋಪಾಸಕ ಪ್ರಭು ಆಖಣಾಶ್ಮಸಮ | ಪಾಹಿ ಸಾಯಂಖ್ಯಾತ ಜೀವಗ ಪಾಹಿ ಜಗಚೇಷ್ಠಾ ಪ್ರವರ್ತಕ ಪಾಹಿ ಅನಿಲನೆ ಶೇಷವಿಪಶಿವ ವಂದಿತಾಂಘ್ರಿಯುಗ 35 ಪಾಹಿ ಪರಿಸರ ಪಂಚ ಕೋಶಗ ಪಾಹಿ ಗುಣನಿಧಿ ಕೊವಿದೋತ್ತಮ ಪಾಹಿ ನಮಿಸುವೆ ಅಣುಮಹದ್ಘನ ರೂಪ ವಿಖ್ಯಾತ | ಪಾಹಿ ವಿಶ್ವಗ ವ್ಯಸನ ವರ್ಜಿತ ಪಾಹಿ ಹರಿಯನು ನಿತ್ಯನೋಳ್ಪನೆ ಪಾಹಿ ವಿಷ್ಣುದ್ವಾರ ಶರಣೈ ಪಾಹಿ ಹರಿ ಸಚಿವ 36 ಜಯ ಜಯವು ಶ್ರೀ ಹನುಮ ಭೀಮಗೆ ಜಯ ಜಯವು ಶ್ರೀ ಮಧ್ವರಾಯಗೆ ಜಯ ಜಯವು ತತ್ವೇಶರರಸಗೆ ಮುಖ್ಯಪ್ರಾಣನಿಗೆ | ಜಯ ಜಯವು ಜಯತೀರ್ಥ ಹೃಸ್ಥಗೆ
--------------
ಕೃಷ್ಣವಿಠಲದಾಸರು
ವಾಯುದೇವರು ಇದು ಏನು ಕೌತುಕವೊ ಹನುಮರಾಯ ಪದುಮನಾಭನ ದಯಾಪಾತ್ರ ಶುಭಕಾಯ ಪ. ಅಂಜನೆಯ ಸುತನಾಗಿ ಅಂದು ಶ್ರೀ ರಾಮರಡಿ ಕಂಜಗಳ ಸೇವಿಸುತ ಮುದ್ರಿಕೆಯನು ಕಂಜಾಕ್ಷಿಗಿತ್ತು ಕ್ಷೇಮವನರುಹಿ ಬಂದಾಗ ಸಂಜೀವ ನಿನಗಿಷ್ಟು ತೊಡಿಗೆ ಕೊಟ್ಟಳೆ ದೇವಿ 1 ಮರುವಾರ್ತೆ ತಂದು ರಾಮಗರುಹಿ ಸೇತುವೆಯ ಗಿರಿಯಿಂದ ಕಟ್ಟಿ ಕಾರ್ಯವ ಸಾಧಿಸೆ ಸಿರಿಸಹಿತ ಶ್ರೀ ರಾಮ ರಾಜ್ಯಕೆ ಬಂದಾಗ ಮರುತ ನಿನಗಿಷ್ಟು ಆಭರಣ ಕೊಟ್ಟನೆ ಪೇಳು 2 ಎಲ್ಲೆಲ್ಲಿ ನಿನ್ನ ಕೀರ್ತಿಯ ಕೇಳೆ ಕೌಪೀನ ವಲ್ಲದಲೆ ಮತ್ತೊಂದರ್ಹಂಬಲಿಲ್ಲ ಮಲ್ಲ ವೈರಾಗ್ಯದಲಿ ಎಂಬುದನು ಕೇಳಿದೆನು ಇಲ್ಲಿ ನೋಡಲು ಇಷ್ಟು ವೈಭವವ ಪಡುತಿರುವೆ 3 ರಾತ್ರೆಯಲಿ ಕೀಚಕನ ಕೊಲ್ಲಲೋಸುಗ ಅಂದು ಮಿತ್ರೆ ರೂಪವ ಧರಿಸಿ ಶೃಂಗರಿಸಿಕೊಂಡು ಕತ್ತಲೊಳು ನೋಡಿಕೊಳ್ಳಲು ಆಗಲಿಲ್ಲೆಂದು ಹಸ್ತ ಕಡಗ ಹರಡಿ ಇಟ್ಟು ಮೆರೆಯುವೆಯೊ 4 ಹುಟ್ಟುತಲೆ ಸಂನ್ಯಾಸ ತೊಟ್ಟು ಬ್ಯಾಸತ್ತೊ ನಡು ಪಟ್ಟಿ ಉಡುದಾರ ಉಡುಗೆಜ್ಜೆ ಕಾಲ್ಗಡಗ ಇಟ್ಟು ನಾನಾ ಬಗೆ ಕದರುಂಡಲಿಯಲಿ ನೆಲಸಿ ಶ್ರೇಷ್ಠ ಗೋಪಾಲಕೃಷ್ಣವಿಠ್ಠಲನ ಪ್ರಿಯನಾದಿ 5
--------------
ಅಂಬಾಬಾಯಿ
ವಾಯುದೇವರು ನಿನ್ನ ನಂಬಿ ಬಂದೆ ಪಂಚಮುಖಿ ಪ್ರಾಣ ಅನ್ಯ ಹಂಬಲ ಬಿಡಿಸಿ ಬಿಂಬ ಮೂರುತಿ ತೋರೋ ಪ ಹಿಂದೆ ತ್ರೇತಾಯುಗದಿ ರಾಮನಾಜ್ಞೆಯ ಹೊಂದಿ ಸಿಂಧು ದಾಟಿ ಸೀತೆಗೆರಗಿ ನಿಂದು ಸುಂದರ ರಾಮ ಮುದ್ರಿಕೆಯಿತ್ತು ಲೀಲೆಯಲಿ ಕೊಂದ ರಕ್ಕಸ ಪುರವನನಲಗೆ ಇತ್ತೆ 1 ಬಂಡಿ ಅನ್ನವನುಂಡು ಭಂಡ ಬಕನಾ ಕೊಂದು ಹಿಂಡು ನೃಪರಾ ಜರಿದು ಕೊಂಡು ದ್ರೌಪದಿಯಾ ಮಂದಮತಿಗಳನಳಿದು ತಂದಿ ಸೌಂಗಂಧಿಕವ ಪುಂಡ ಕೀಚಕರಳಿದ ಪಾಂಡವಪ್ರಿಯದೂತ 2 ಮೋದತೀರ್ಥರೆನಿಸಿ ವಾದಿಗಳ ನಿಗ್ರಹಿಸಿ ಬೋಧಿಸಿ ಸುಜನರಿಗೆ ಮಾಧವನ ಗುಣವ ಸಾಧು ವಂದಿತ ಬಾದರಾಯಣರು ಇರುತಿರುವ ಬದರಿಯಲ್ಲಿರುವಿ ಶ್ರೀ ನರಹರಿಯ ತೋರೋ 3
--------------
ಪ್ರದ್ಯುಮ್ನತೀರ್ಥರು
ವಾಯುದೇವರು ಶಾಂತ ಜನರಿಗೀಶಾ ರವಿಕುಲ ಕಾಂತನ ನಿಜದಾಸ ಪ ಭ್ರಾಂತಿ ಬಿಡಿಸಿ ನಿಶ್ಚಿಂತ ಮನದಿ ವೇ- ದಾಂತವೇದ್ಯನಲಿ ಸಂತಸ ಕೊಡುವನ ಅ.ಪ. ಕಡಲ ದಾಟಿ ಬಂದೂ ಒಡೆಯನ ಮಡದಿಗುಂಗುರ ತಂದೂ ಸಡಗರದಲಿ ತುಡುಗ ದೈತ್ಯವ ಕೊಂದು ಅಡಿಯಿಡೆ ಲಂಕೆ ಸುಟ್ಟು ಸುಡುಭುಗಿ ಮಾಡಿದೆ 1 ಏಕಚಕ್ರದಲ್ಲೀ ಬಕಗೆಂ- ದ್ಹಾಕಿದ ಗ್ರಾಸದಲೀ ಶಾಖಡಿಸಲಬಿಡದೇಕತುತ್ತು ಮಾಡಿ ಭೀಕರ ದೈತ್ಯನವಲೋಕಿಸದ್ಹೊಡದೆಲೋ 2 ವಾಯು ಹನುಮ ಭೀಮ ಮಧ್ವಾ ಕಾಯೋ ಪೂರ್ಣಕಾಮಾ ಸಾಯ ಬಡಿದೀ ನೀ ಮಾಯಿಗಳೆಲ್ಲರ ರಾಯ ಶ್ರೀನಿಧಿವಿಠಲಾಯಗೆ ತಿಳಿಸಿದೆ ಎಲೆಲೋ 3
--------------
ಶ್ರೀನಿಧಿವಿಠಲರು
ವಾಸುದೇವ | ಸಂಕಟ ಹರಣ ಶಂಖ ಚಕ್ರಧಾರಿ ಹರಿ | ವೆಂಕಟಾಚಲಾಧೀಶಾ ಪ ಪಾಹಿ ಪರಮ ಹಂಸವಿನುತ | ಪಾಹಿ ಪರಮ ವೇದಚರಿತ ಪಾಹಿ ಕಮಲಜಾತ ನಮಿತ | ಪಾಹಿಮಾಂ ಹರೇ ಪಾಹಿ ಪರಮ ಕರುಣದಿಂ ಪಾಹಿ ಮಾಂಗಿರಿವಾಸ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಾಸುದೇವ ಶ್ರೀ ಗೋವಿಂದ ವರದ ಶ್ರೀ ಗೋವಿಂದ 1 ಪಾಲಕ ಗೋವಿಂದ ಸಾಗರಗೃಹ ಶರಣಾಗತವಾಂಛಿತ ಭಾಗವತಪ್ರಿಯ ಗೋವಿಂದ 2 ಮಾಧವ ಗೋವಿಂದ ಪ್ರೇರಣ ಕರ್ತುವಿಚಾರಣ ಭಕ್ತೋದ್ಧಾರಣ ಶ್ರೀಹರಿ ಗೋವಿಂದ 3 ಭೂಮಂಡಲನಾಯಕ ಗೋವಿಂದ ಕರದಂಡದಳಾಕ್ಷ ಶ್ರೀ ಗೋವಿಂದ 4 ನಮೋ ನಮೋ ಗೋವಿಂದ ಮತಂಗವರದ ಶ್ರೀ ಗೋವಿಂದ 5 ಶಕ್ರಾರ್ಚಿತ ವಟುವಾಕೃತಿಧರ ಕರಚಕ್ರಾಂಕಿತ ಹರಿ ಗೋವಿಂದ ಅಕ್ರೂರವರದ ಅಖಿಳಪ್ರದ ತ್ರಿವಿಕ್ರಮರಾಯ ಶ್ರೀ ಗೋವಿಂದ 6 ಶ್ರೀ ಭಾರ್ಗವರಾಮ ಶ್ರೀ ಗೋವಿಂದ ಅಗ್ರಗಣ್ಯ ಶುಭವಿಗ್ರಹ ನೃಪಕುಲವರ್ಗವಿದಾರಣ ಗೋವಿಂದ 7 ನೂತನ ಲೀಲ ಶ್ರೀ ಗೋವಿಂದ ವಾತಜವರದ ಸಾಕೇತಾಧಿಕ ನಿರ್ಭೀತ ಶ್ರೀ ರಾಮ ಗೋವಿಂದ 8 ಕರುಣಾಲಯದೇವ ಶ್ರೀ ಗೋವಿಂದ ಕುಚೇಲವರದ ಶ್ರೀ ಗೋವಿಂದ 9 ಬುದ್ಧಾಕೃತಿಧರ ಗೋವಿಂದ ಶುದ್ಧಾತ್ಮಕ ಭವವೈದ್ಯ ವಿಬುಧಾರಾದ್ಯಚರಣ ಶ್ರೀ ಗೋವಿಂದ 10 ಸುರರಾಜಾಧಿರಾಜ ಶ್ರೀ ಗೋವಿಂದ ಪ್ರೌಢ ಶ್ರೀ ಗೋವಿಂದ 11 ಶ್ರೀ ಕಪ್ಪುಗೊರಳಪ್ರಿಯ ಗೋವಿಂದ ಸರ್ಪಾಚಲದಿಂದೊಪ್ಪಿಲ್ಲಿಯೆ ನೆಲಸಿಪ್ಪ ತಿಮ್ಮಪ್ಪ ಶ್ರೀ ಗೋವಿಂದ 12 ತಾನೆ ಭಕ್ತರ ಸನ್ಮಾನದಿ ಸಲಹಲು ತಾನೆತಂದ ಶ್ರೀ ಗೋವಿಂದ ಲಕ್ಷ್ಮೀನಾರಾಯಣ ಹರಿ ಗೋವಿಂದ 13
--------------
ತುಪಾಕಿ ವೆಂಕಟರಮಣಾಚಾರ್ಯ
ವಾಸುದೇವ ಶ್ರೀ ಗೋವಿಂದ ವರದ ಶ್ರೀ ಗೋವಿಂದ 1 ಪಾಲಕ ಗೋವಿಂದ ಸಾಗರಗೃಹ ಶರಣಾಗತವಾಂಛಿತ ಭಾಗವತಪ್ರಿಯ ಗೋವಿಂದ 2 ಮಾಧವ ಗೋವಿಂದ ಪ್ರೇರಣ ಕರ್ತುವಿಚಾರಣ ಭಕ್ತೋದ್ಧಾರಣ ಶ್ರೀಹರಿ ಗೋವಿಂದ3 ಭೂಮಂಡಲನಾಯಕ ಗೋವಿಂದ ಕರದಂಡದಳಾಕ್ಷ ಶ್ರೀ ಗೋವಿಂದ4 ನಮೋ ನಮೋ ಗೋವಿಂದ ಮತಂಗವರದ ಶ್ರೀ ಗೋವಿಂದ 5 ಶಕ್ರಾರ್ಚಿತ ವಟುವಾಕೃತಿಧರ ಕರಚಕ್ರಾಂಕಿತ ಹರಿ ಗೋವಿಂದ ಅಕ್ರೂರವರದ ಅಖಿಳಪ್ರದ ತ್ರಿವಿಕ್ರಮರಾಯ ಶ್ರೀ ಗೋವಿಂದ 6 ಉಗ್ರಕುಠಾರ ನೃಪಾಗ್ರಣಿವಿಪಿ£ ಶ್ರೀ ಭಾರ್ಗವರಾಮ ಶ್ರೀ ಗೋವಿಂದ ಅಗ್ರಗಣ್ಯ ಶುಭವಿಗ್ರಹ ನೃಪಕುಲವರ್ಗವಿದಾರಣ ಗೋವಿಂದ7 ನೂತನ ಲೀಲ ಶ್ರೀ ಗೋವಿಂದ ವಾತಜವರದ ಸಾಕೇತಾಧಿಕ ನಿರ್ಭೀತ ಶ್ರೀ ರಾಮ ಗೋವಿಂದ 8 ಕರುಣಾಲಯದೇವ ಶ್ರೀ ಗೋವಿಂದ ಕುಚೇಲವರದ ಶ್ರೀ ಗೋವಿಂದ9 ಬುದ್ಧಾಕೃತಿಧರ ಗೋವಿಂದ ಶುದ್ಧಾತ್ಮಕ ಭವವೈದ್ಯ ವಿಬುಧಾರಾದ್ಯಚರಣ ಶ್ರೀ ಗೋವಿಂದ 10 ಸುರರಾಜಾಧಿರಾಜ ಶ್ರೀ ಗೋವಿಂದ ಪ್ರೌಢ ಶ್ರೀ ಗೋವಿಂದ11 ಶ್ರೀ ಕಪ್ಪುಗೊರಳಪ್ರಿಯ ಗೋವಿಂದ ಸರ್ಪಾಚಲದಿಂದೊಪ್ಪಿಲ್ಲಿಯೆ ನೆಲಸಿಪ್ಪ ತಿಮ್ಮಪ್ಪ ಶ್ರೀ ಗೋವಿಂದ 12 ತಾನೆ ಭಕ್ತರ ಸನ್ಮಾನದಿ ಸಲಹಲು ತಾನೆತಂದ ಶ್ರೀ ಗೋವಿಂದ ಲಕ್ಷ್ಮೀನಾರಾಯಣ ಹರಿ ಗೋವಿಂದ13
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ವಾಸುದೇವ ತೇ ನಮೋ ನಮೋ ವಾಸವ ವಂದಿತ ನಮೋ ನಮೋ ಪ ಮಾಧವ ಕೃಷ್ಣ ದಾಮೋದರ ಶ್ರೀಶ ಪರೇಶ ವಿಷ್ಣು ಪೀತಾಂಬರ ಈಶ ಮುಕುಂದ ವೈಕುಂಠ ಪರಾತ್ಪರ ಕೌಶಿಕ ಗೌತಮ ಮೌನಿ ಶುಭಂಕರ 1 ಶೌರಿ ಚತುರ್ಭುಜ ಚಕ್ರಧರಾಚ್ಯುತ ವೈರಿ ಭಯಂಕರ ಸಕಲಾಗಮನುತ ಸಾರಸನಾಭ ನೀರೇಜ ಭವಾನತ ಮಾರಜನಕ ರಘುವೀರ ಶಿವಾರ್ಚಿತ 2 ಶ್ರೀಮಹಿತಾಂಗಾ ರಂಗಾ ನಮೋ ನಮೋ ಶ್ರೀಮಣಿಹಾರಾ ರಂಗಾ ನಮೋ ನಮೋ ಶ್ರೀಮುಕುಂದಾ ಶ್ರೀರಂಗಾ ನಮೋ ನಮೋ ಶ್ರೀಮಾಂಗಿರಿ ವರರಂಗಾ ನಮೋ ನಮೋ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಾಸುದೇವ ಸಾಮಾನ್ಯ ನೀನಲ್ಲವೊ ಪ ನವನೀತ ಇಷ್ಟು ತಿನ್ನುವಿ ಭೂತಗಳಿರುವುವೇನೊ ಉದರದೊಳು 1 ಕುದಿಯುವ ಪಾಲನು ಮುದದಿಂದ ಕುಡಿಯುವೆ ಉದಕದ ರಾಶಿ ಜಿಹ್ವೆಯೊಳಿಹುದೇನೊ 2 ರಾತ್ರಿ ವೇಳೆಯಲಿ ನೀ ಸುತ್ತುವಿ ಮನೆ ಮನೆ ನೇತ್ರದೊಳ್ ಸೂರ್ಯಚಂದ್ರರು ಇಹರೇನೊ 3 ಶಿಕ್ಷೆಮಾಡಲು ಬೆನ್ನು ಪಾಶ್ರ್ವದಲ್ಲಿಹ ನಮ್ಮ ಈಕ್ಷಿಸುವುದಕೆ ವಿಶ್ವತ ಚಕ್ಷುವೇನೊ 4 ನಿನ್ನ ಚರಿತೆ ಎಮಗೆ ಚೆನ್ನಾಗಿ ತಿಳಿಸಿ ಪ್ರ ಸನ್ನನಾಗದಿರೆ ಮನ್ನಿಸೆವೋ ನಿನ್ನ 5
--------------
ವಿದ್ಯಾಪ್ರಸನ್ನತೀರ್ಥರು