ಒಟ್ಟು 1120 ಕಡೆಗಳಲ್ಲಿ , 91 ದಾಸರು , 794 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂಡೆಬಾಗಿಕರವಮುಗಿವೆ ಕಾಯೊ ಹರಿಹರಿ |ಪುಂಡರೀಕನಯನ ಮರೆಯಬೇಡವೊ ಹರಿಹರಿ ಪಕರಿವರದನೆ ಸರ್ವಾಂತರ್ಯಾಮಿ ಹರಿಹರಿ |ಕರುಣಾಸಾಂದ್ರ ತರುಣಿ ಮಾನಕಾಯ್ದ ಹರಿಹರಿ ||ಶರಧಿಸುತೆಯ ರಮಣ ದೀನಬಂಧು ಹರಿಹರಿ |ಅರಿಯೆ ನಿನ್ನನುಳಿದು ಕಾಯ್ವರನ್ನು ಹರಿಹರಿ 1ಮೀನನಾಗಿ ವೇದಗಳನು ತಂದೆಹರಿಹರಿ|ಆ ನಗವನು ಪೊತ್ತು ಅಮೃತವೆರೆದೆಹರಿಹರಿ||ನೀನೇ ವರಾಹನಾಗಿಯವನಿಯ ತಂದೆಹರಿಹರಿ|ದಾನವನುದರವ ಬಗೆದು ಅಂದುಹರಿಹರಿ 2ಚಿಕ್ಕ ರೂಪದಿಂದ ಬಲಿಯ ತುಳಿದೆಹರಿಹರಿ|ಸೊಕ್ಕಿದರಸುಗಳನು ಸವರಿಬಿಟ್ಟೆಹರಿಹರಿ||ರಕ್ಕಸರನು ಕೊಂದು ಸತಿಯ ತಂದೆಹರಿಹರಿ|ಅಕ್ಕರದಲಿ ಪಾರಿಜಾತ ತಂದೆಹರಿಹರಿ3ಅಂಬರವನು ತೊರೆದೆ ಬೌದ್ಧನಾಗಿ ಹರಿಹರಿ |ಕುಂಭಿಣಿಯೊಳು ಕುದುರೆಯೇರಿ ಮೆರೆದೆಹರಿಹರಿ||ಶಂಬರಾಂ ಜನಕ ಧರ್ಮತನಯಹರಿಹರಿ|ಅಂಬುಜಾಸನಾದಿ ದಿವಿಜವಂದ್ಯಹರಿಹರಿ4ಶೌರಿರಘುಜ ಮುನಿಜ ಪ್ರಾಣೇಶ ವಿಠಲಹರಿಹರಿ|ಸಾರಿದ ಶರಣರಿಗೆ ಕಲ್ಪತರುವೆಹರಿಹರಿ||ಘೋರದುರಿತವನಕೆ ಧನಂಜಯನೆ ಹರಿಹರಿ |ಭಾರನಿನ್ನದೆವೆ ಹೇಳಲ್ಯಾಕೆಹರಿಹರಿ 5
--------------
ಪ್ರಾಣೇಶದಾಸರು
ಮಹಾದಾದಿದೇವ ನಮೋ ಮಹಾಮಹಿಮನೆ ನಮೋಪ್ರಹಲ್ಲಾದವರದ ಅಹೋಬಲ ನರಸಿಂಹ ಪ.ತರಣಿಗುಬ್ಬಸವಾಗೆ ತಾರಾಪತಿಯು ನಡುಗೆಸುರರು ಕಂಗೆಟ್ಟೋಡೆ ನಭವ ಬಿಟ್ಟು ||ತರುಗಿರಿಗಳಲ್ಲಾಡೆ ಶರಧಿಗಳು ಕುದಿದುಕ್ಕೆಉರಿಯನುಗುಳುತ ಉದ್ಭವಿಸಿದೆಯೊ ನರಸಿಂಹ 1ಸಿಡಿಲಂತೆ ಗರ್ಜಿಸುತೆ ಕುಡಿಯ ನಾಲಗೆ ಚಾಚಿಅಡಿಗಡಿಗೆ ಹುಂಕರಿಸಿ ಕಡುಕೋಪದಿಂದ ||ಮುಡಿವಿಡಿದು ರಕ್ಕಸನ ಕೆಡವಿ ನಖದಿಂದೊತ್ತಿಬಿಡದೊಡಲ ಬಗೆದ ಕಡುಗಲಿ ನಾರಸಿಂಹ 2ಸರಸಿಜೋದ್ಭವ ಹರ ಪುರಂದರಾದಿ ಸಮಸ್ತಸುರರು ಅಂಬರದಿ ಪೂಮಳೆಗರೆಯಲುಸಿರಿಸಹಿತ ಗರುಡಾದ್ರಿಯಲಿ ನಿಂತು ಭಕುತರನುಕರುಣಿಸುವ ಪುರಂದರವಿಠಲ ನಾರಸಿಂಹ 3
--------------
ಪುರಂದರದಾಸರು
ಮಹಾಲಕ್ಷ್ಮಿ50ದಯಮಾಡಮ್ಮ ದಯಮಾಡಮ್ಮಹಯವದನನ ಪ್ರಿಯೆ ಪವಿನಯದಿಂದ ಬೇಡುವೆನೆ ಕಮಲನೇತ್ರೆಯೆ ಅ.ಪಶಂಬರಾರಿಪಿತನ ರಾಣಿ ನಂಬಿಸ್ತುತಿಸುವೆಅಂಬುಜನಾಭನ ಧ್ಯಾನಸಂಭ್ರಮಎನಗೀಯೆ1ಗೆಜ್ಜೆಪಾದ ಧ್ವನಿಗಳಿಂದ ಮೂರ್ಜಗ ಮೋಹಿಸುತ್ತಸಜ್ಜನರ ಸೇವೆಗೊಳ್ಳುತ ಜನಾರ್ದನನ ಪ್ರೀತೆ 2ತ್ರಿಗುಣಾಭಿಮಾನಿಯೆ ನಿನ್ನ ಪೊಗಳುವ ಭಕ್ತರಬಗೆ ಬಗೆ ತಾಪತ್ರಯಗಳ ಕಳೆದುಮಿಗೆ ಸೌಖ್ಯವ ನೀಯೆ 3ಪದ್ಮಾಕ್ಷಿಯೆ ಪದ್ಮಸದನೆ ಪದ್ಮಪಾಣಿಯೆಪದ್ಮನಾಭನಗೂಡುತಲಿ ಹೃತ್ಪದ್ಮದಲಿ ಪೊಳೆಯೆ 4ಕನಕಾಭರಣಗಳಿಂದಲಿ ಪೊಳೆಯುವ ಕಮಲನೇತ್ರೆಯೆಕಮಲನಾಭವಿಠ್ಠಲನ ಕೂಡಿಕರುಣದಿ ಬಾರೆತಾಯೆ 5
--------------
ನಿಡಗುರುಕಿ ಜೀವೂಬಾಯಿ
ಮಾಡುತಿಹ ಸಂಸಾರ ಮಲಿನ ಹೊದ್ದೆದೆಯೋಗಿಆಡಲೇನವ ಆನಂದವಿಹ ಸುಖವಪಬಾಲ ಶಿಶುಲೇಲೆಗಳ ಬಗೆ ಬಗೆಯ ಲಾಲಿಸುತಶೂಲಧರಸುತರೀಗ ಬಂದರೆನುತ್ತಕಾಲು ಕೈ ಮೋರೆಗಳ ತೊಳೆದುಣಿಸಿ ರಕ್ಷಿಸುತಮೂಲೋಕಕೆನ್ನ ಭಾಗ್ಯ ಮಿಗಿಲು ಮಿಗಿಲೆನುತ1ಸತಿವಿನೋದವ ಮಾಡೆ ಸರಸವನೆ ಮಾಡುತ್ತಅತಿ ಆದಿವಸ್ತು ತಾನೀಕೆಯನುತಾಮತಿಭ್ರಾಂತನಾಗದಲೆ ಮಂಗಳನು ತಾನೆನುತಮತಿಯಾಟ ಬ್ರಹ್ಮವಿದು ಇದುವೆ ಎನ್ನುತ್ತ2ಬಡತನವು ಬಂದು ಕಾಡುತ್ತಲಿರೆ ನೋಡುತ್ತದೃಢಬುದ್ಧಿಯಾಗಿ ತಾನೀಗಲಿರುತಬಿಡದೆ ರಕ್ಷಿಪ ವಿಶ್ವಕುಟುಂಬಿಯಹನೆನುತಪಡದೆ ಆಯಾಸ ಸುಖವಾಸಿಯಾಗಿರುತ3ಬಡಿದಾಡುತಿಹ ಗೃಹದ ಜನರುಗಳ ನೋಡುತ್ತಬಿಡು ನಿನ್ನ ಬುದ್ಧಿಯನು ಎಂದು ಹೇಳುತ್ತಕಡೆಗಣಿಸಿದವರ ಅತ್ತಿತ್ತ ಮಾಡುತ್ತಕಡಹನಿಶ್ಚಲದಿಂದ ಮತಿಶಾಂತವಿರುತ4ನಿಂದ್ಯದೂರಪವಾದವನು ಕೇಳುತ್ತಮಂದಶ್ರವಣನೋ ಎಂಬ ತರದಲಿರುತನಿಂದುದೃಢ ಚಿತ್ತದಲಿ ನಿರ್ಲೇಪ ತಾನೆನುತಬಂಧಹರ ಚಿದಾನಂದ ತಾನಾದಗೆನುತ5
--------------
ಚಿದಾನಂದ ಅವಧೂತರು
ಮಾಯೆಯು ಎಂತಿಹುದೆಂಬೆಯ ಮಗನೆಮಾಯೆಯು ಸ್ತ್ರೀಯೇಮಾಯೆಮಾಯೆಯಗುರುಕರುಣದಿ ತಾಗೆ ಅದರೆಮಾಯೆಯೆಲ್ಲವೂ ನಿರ್ಮಾಯೆಪಎಸಳಿನ ಕಂಗಳ ಓರೆನೋಟಕೆಎದೆಗುಂದುವುದೇಮಾಯೆಮುಸುಕನೇ ಹಾಕಿ ಹಲ್ಲನು ತೆರೆಯಲುಮುಂದುಗೆಡಿದುವುದೇಮಾಯೆಕುಸುಮದ ಸೂಡಿದ ಮುಡಿಯಾಭಾವಕೆಕುಸಿಯುತಲಿಹುದೇಮಾಯೆಮುಸಿ ಮುಸಿ ನಗುತ ಮುದ್ದು ಮಾತಾಡಲುಮರುಳಾಗುವುದೇಮಾಯೆ1ಚೆಳ್ಳು ಪುಳ್ಳು ಎಂದೆಂಬ ಅಂದುಗೆಗೆಚಿತ್ತುಡುಗುವುದದೇಮಾಯೆಬಳ್ಳಿಯ ತೆರದಲಿ ಬಳುಕುವ ತನುವಿಗೆಬಾಯಿ ಬಿಡುವುದೇಮಾಯೆಮೆಲ್ಲನೆ ಹೆಜ್ಜೆಗೆ ಜಗ್ಗುವ ನಡಿಗೆಗೆಮರುಗುತಲಿಹುದೇಮಾಯೆಗಲ್ಲದ ನುಣುಪಿಗೆ ಚಿಬುಕದ ಸಿರಿಗೆವಶವಾಗುವುದೇಮಾಯೆ2ಮೋರೆಯ ಮುರುಕಿಸೆ ಹುಬ್ಬನು ಏರಿಸೆಮುಳುಗಿಹೋಗುವುದೇಮಾಯೆತೋರ ಹರಡಿಯ ತಿರುಹುವ ಬಗೆಗೆದೃಢಗೆಡುವುದೆಮಾಯೆಸೀರೆ ಸಿಂಗಾರಕೆ ಒಲವು ಒಯ್ಯಾರಕೆಸಿಕ್ಕಿಹೋಗುವುದೇಮಾಯೆಹಾರವ ಎತ್ತಿ ಎದೆ ಬದಿ ತೋರಿಸೆಹುಚ್ಚನಾಗುವುದೇಮಾಯೆ3ಕಂಚುಕಿ ತೆರೆದು ನಡುವನು ಸಡಿಲಿಸೆಕಾಲುಡುಗುವುದೇಮಾಯೆಚಂಚಲ ದೃಷ್ಟಿಯ ಆಲಿಯ ಹೊರಳಿಸೆಚೇತನಗುಂದುವುದುಮಾಯೆಗೊಂಚಲ ನಾಗೋತ್ತರ ಚಳತುಂಬಿಗೆ ಮಾರುಹೋಗುವುನೇಮಾಯೆಮಿಂಚುವ ಮೋರೆಯ ಮೀಟಿನ ಬಣ್ಣಕೆಮುಳುಗಿಯಾಡುವುದೇಮಾಯೆ4ಸತಿಯಿಂದಲಿಸುತ ಸುತನಿಂದಲಿ ಸೊಸೆಸರಗೊಳಿಸುವುದೇಮಾಯೆಮಿತಿಯಿಲ್ಲದೆ ವಾಸನೆಯಲಿ ಜನ್ಮವಮುಂದುವರಿಸುವುದೇಮಾಯೆಪಥಗಾಣದೆ ಅನಂತ ಯೋನಿಯಲಿಪುಡಿಯಾಗುವುದೇಮಾಯೆಚಿದಾನಂದನ ತಿಳುವಿಗೆ ಮುಳುಗಿಸಿಪಸರಿಸಿ ಇಹುದೆಮಾಯೆ5
--------------
ಚಿದಾನಂದ ಅವಧೂತರು
ಮುಕ್ಕೋಟ ದ್ವಾದಶಿಯ ದಿವಸ(ಮಾರ್ಗಶಿರ ಶುದ್ಧ ದ್ವಾದಶಿಯ ಉತ್ಸವ)ವ್ರತತಿಯಧಿಪನಂತೆ ನೀರೆ ತೋರ್ಪಅತಿಶಯಾಗಮ ಬಗೆ ಬ್ಯಾರೆ ರತ್ನದ್ಯುತಿಯಾಭರಣವ ಶೃಂಗಾರ ಆಹಾಶ್ರುತಗೊಲಿಸೆನಗೆ ಆಶ್ರಿತ ರಕ್ಷಾರ್ಥಿತನ ಸಂ-ಗತಿಸ್ಮøತಿತತಿಗಳ ಮತಿಗಗೋಚರನಂತೆ1ಲೋಲಲೋಚನನ ನಾಟಕ ಸತ್ಕಥನವಮೇಲಾಗಿ ಜಗದಿ ಶೋಭಿಪ ಶೇಷಾದ್ರಿಯಲಿಬಾಲಾರ್ಕಸದೃಶನೀತನು ಇರ್ಪನಲ್ಲಿನೀಲನಿಭಾಂಗನು ನೆನೆವರ ಪಾಪವಘೋಲುಘಡಿಸಲೆಂದೆನುತಲಿಭಾರ್ಗವಕೋಲಿಂದೆಸಗಿದ ಧರಣಿಗೆ ಬಂದು ಸ-ಲೀಲೆಗಳೆಸಗುವ ಜಾಲವಿದೆಲ್ಲ 2ಸರಸಿಜಗಂಧಿ ಕೇಳ್ ದಿಟದಿ ತನ್ನಅರಮನೆಯಿಂದ ಸದ್ವಿಧದಿ ಈರ್ವ-ರರಸಿಯರ್ ಸಹಿತ ಮಿನಿಯದಿ ಅತಿಭರದಿಂದ ಸೂರ್ಯನುದಯದಿ ಆಹಾಉರುತರ ಹೇಮಪಲ್ಲಂಕಿಯೊಳಡರಿತ್ವರಿತದಿ ಪೋಗುವ ಭರವಿದೆಲ್ಲಿಗೆ ಪೇಳೆ 3ಬದ್ಧನೀ ಪೇಳ್ದ ಮನದ ಶಂಕಾವ್ರಾತತಿದ್ದಿಪೆ ಕೇಳು ಮಾರ್ಗಶಿರ ಮಾಸದೊಳುಶುದ್ಧ ದ್ವಾದಶಿಸೂರ್ಯಉದಯ ಕಾಲದೊಳುಭದ್ರಭವನವನು ಪೊರಟು ವಿನೋದದಿಅದ್ರಿಧರನು ಸಜ್ಜನರೊಡಗೂಡಿ ಉ-ಪದ್ರಿತ ಪಾಪವ ಛಿದ್ರಿಪ ಸ್ನಾನಕೆರೌದ್ರಿತ ರಾಮಸಮುದ್ರದ ಬಳಿಗೆ 4ರಂಭೆ : ಆರರೆ ಆಶ್ಚರ್ಯವಾಯ್ತೆನಗೆ ಅತಿಪರಮಮಹಿಮೆನೆಂದ ಮೇರೆಗೆ ಘನ-ತರ ಸ್ನಾನವೇನಿದು ಕಡೆಗೆ ವೃತದಿರವೋ ಉತ್ಸವವೋ ಪೇಳೆನಗೆ ಆಹಾತರುಣಿ ರನ್ನಳೆ ನಿನ್ನ ಚರಣಕ್ಕೆ ನಮಿಪೆ ಈಪರಿಗಳ ಸಾಂಗದಿಂದರುಹಬೇಕೆನಗಿನ್ನು 5ಸಕಲಾಂತರ್ಯಾತ್ಮನೀತನು ಸತ್ಯಶೀಲೆ-ಪ್ರಕಟ ವ್ರತವಿದಲ್ಲ ಅಂಜನಾದ್ರಿಯಲಿಭಕುತವತ್ಸಲನು ಉತ್ಸವಿಸುವನಲ್ಲಿವಿಕಳಹೃದಯ ನರನಿಕರಕಸಾಧ್ಯವೆಂದ್ಯುಕುತದಿ ಈ ಧರೆಯಲ್ಲಿ ಪ್ರತ್ಯೇಕದಿಅಖಿಳೋತ್ಸವ ಮಸ್ತಕಕಿದುವೆಗ್ಗಳಮುಕುಟೋತ್ಸವವೆಂದೆನುತಲಿ ರಚಿಸುವ 6ರಂಭೆ : ನಳಿನಾಕ್ಷಿ ಲಾಲಿಪುದಿನ್ನು ಸ್ನಾನವೊಲವಿಂದ ಗೈದ ಮೇಲಿವನು ತನ್ನರಮಣಿಯರ್ಸಹಿತಂದಣವನು ಏರಿನಿಲುನಿಲುತ್ಯಾಕೆ ಬರುವನು ಆಹಾಪೊಳಲೊಳಗಿಹ ಜನನಿಳಯದ ದ್ವಾರದಿಕಳಕಳವೇನಿದ ತಿಳುಪೆನಗೀ ಹದ 7ಮಿಂದು ತೋಷದಿ ಅಂದಣವನ್ನೇರಿ ತಾನುಇಂದೀ ಪುರದೊಳಿರ್ಪ ಜನರ ದೋಷಗಳಕುಂದಿಸಲೆಂದವರವರ ದ್ವಾರದೊಳುನಿಂದಿರುತಲ್ಲಿಯದಲ್ಲಿ ಆರತಿಗಳಚಂದದಿ ಕೊಳುತೊಲವಿಂದಕಾಣಿಕೆಜನ-ವೃಂದದಿ ಕೊಡುತಾನಂದ ಸೌಭಾಗ್ಯವಒಂದಕನಂತವ ಹೊಂದಿಸಿ ಕೊಡುವ 8ರಂಭೆ : ಸರಸಿಜಾನನೆ ಮತ್ತೇನಿದನು ತನ್ನಅರಮನೆಯಲ್ಲಿ ಭೂದ್ವಿಜನರನು ಸರ್ವಪುರಜನ ಸಹಿತೊಳಗಿವನು ನಾನಾತರದಿ ಮೆರೆವ ಭೋಜನವನು ಆಹಾ-ಕರಿಸಿ ಆಮೇಲೆ ರಾತ್ರಿಯಲಿ ಸಾಲಿನಲಿ ವಿ-ಸ್ತರದ ಲಾಜದ ರಾಸಿಗಿರದೆ ಪೂಜಿಪುದ್ಯಾಕೆ 9ಗಂಗಾಜನಕತನ್ನ ಗೃಹದಿ ವಿಪ್ರರನುಹಿಂಗದೆ ಕರೆಸಿ ವಿಪ್ರರನೆಲ್ಲ ಬರಿಸಿಸಂಗಾತದಲಿ ಆರೋಗಣೆ ಗೈದು ಮೆರೆಸಿಅಂಗಣದಲಿ ರಾತ್ರೆಯಲಿ ವಿನೋದದಿಕಂಗೊಳಿಸುವ ಉರಿದರಳ ಸಮೂಹಕೆರಂಗಪೂಜೆಯನುತ್ತಂಗವಿಸುವ ನಿಗ-ಮಂಗಳೊಡೆಯನು ವಿಹಂಗಮಾರೂಢ 10ರಂಭೆ : ಅಮಮ ಮತ್ತೇನಿದ ಪೇಳು ಶ್ವೇತ-ಕುಮುದಾಪ್ತ ಠಾವಿನ ವೋಲು ಬಂದುಆದರಿಸಲಿದರ ಮಧ್ಯದೊಳು ತನ್ನರಮಣಿಯರ್ ಸಹಿತ ತೋಷದೊಳು ಆಹಾವಿಮಲವನ್ನೇರಿನ್ನೆಲ್ಲಿಗೈದುವನೆಂಬಾ-ಗಮವ ಪೇಳೆನೆಗೆ ನೀ ನಮಿಪೆ ನಿನ್ನಂಘ್ರಿಯ 11ಶ್ರೀ ರಮಾರಮಣ ಪೂಜೆಯಗೊಂಡಾ ಮೇಲೆಚಾರುಈ ಹೂವಿನ ತೇರನೇರುತಲಿಕೇರಿ ಕೇರಿಯೊಳಾರತಿಗೊಳ್ಳುತಲಿಭೋರಿಡುತಿಹ ವಾದ್ಯಧ್ವನಿ ಘನತರಭೇರಿಮೃದಂಗಾದ್ಯಖಿಳ ವಿನೋದದಿಸ್ವಾರಿಗೆ ತೆರಳುವ ಕ್ರೂರ ನರರ ಆ-ಘೋರಪಾಪ ಜರ್ಝರಿಸಲೆಂದು12ರಂಭೆ : ಅರವಿಂದಾಕ್ಷಿಯೆ ಮತ್ತೇನಿದನು ತನ್ನಅರಮನೆಯಿದಿರು ರಥವನು ತಾನುಭರದೊಳಗಿಳಿದಂದಣವನು ಏರಿಮೆರೆವಾಲಯದ ಸುತ್ತುಗಳನು ಆಹಾತಿರುಗುವನ್ಯಾಕೆ ಭೂದ್ವಿಜರ ಘೋಷದಿ ವಾದ್ಯ-ಭರಿತ ಗಾಯನಭೇರಿಧ್ವನಿಗಳೇನಿದ ಪೇಳೆ13ದುಷ್ಟಮರ್ದನ ರಥವಿಳಿವುತ್ತಲಾಗೇಅಷ್ಟದಿಗ್ಭಾಗದಿ ಗೃಹಸುತ್ತಿನೊಳಗೆಅಷ್ಟಾವಧಾನವ ರಚಿಸುತ್ತ ಕಡೆಗೆಶ್ರೇಷ್ಠನು ರತ್ನಾಸನದಿ ಗ್ರಹದಿಪರಮೇಷ್ಟಜನಕೆ ಸಂತೋಷಾನಂದದಿಸೃಷ್ಟಿಯ ಜನರ ಅನಿಷ್ಟವ ತ್ಯಜಿಸುತಇಷ್ಟವನೀವ ಯಥೇಷ್ಟ ದಯಾಬ್ಧ 14ರಂಭೆ : ಅರಿತೆನಾ ಸ್ವಚ್ಛ ಚಿತ್ತದಲಿ ಇನ್ನುಹರಿಏಕರೂಪನೆನ್ನುತಲಿ ಲಕ್ಷ್ಮೀಕರವೆನಿಸುವ ಕಾರ್ಕಳದಲಿ ಭಾಗ್ಯೋ-ದಯ ದೇವಾಲಯದ ಮಧ್ಯದಲಿ ಆಹಾತ್ವರಿತದಿ ನುತಿಸಿರೊಗುರುನಾರಸಿಂಹ ಶ್ರೀ-ಕರವೆಂಕಟೇಶನ ಚರಣಕಮಲಗಳ15
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮುಟ್ಟು ಚಟ್ಟೆಂದು ನಗುವಯ್ಯನಿನ್ನ ತಿಳಿಯಯ್ಯಮುಟ್ಟು ಚಟ್ಟೆಂಬುದು ನಗುವಯ್ಯಮುಟ್ಟಿದು ಆದುದು ನಿನ್ನಿಂದಲೆಮುಟ್ಟಿಗೆ ಸಾಕ್ಷಿಯು ನೀಪರವಸ್ತುಪತಿಂಗಳು ತಿಂಗಳು ರಕ್ತಕಲಕು ಘಟ್ಟಾಗಿ ಬಲಿತುಇಂಗಾ ಇಂಗಡದ ವಯವ ಜಿಗಿತುಅಂಗಾಯಿತು ತೆರದಅಂಗವ ಮುಟ್ಟಿರಿ ಮುಟ್ಟಿರಿ ಎಂದುಮಂಗನ ತೆರದಲಿ ಕುಣಿವುದು ಮುಟ್ಟು1ಮೃಗಜಲದಂತೆಮಾಯೆಮುಟ್ಟುಆದುದು ಯಥೇಷ್ಟಬಗೆಬಗೆ ರೂಪಳವಟ್ಟುತೋರಿದವದುರಿಟ್ಟುನಗಸಾಗರನದಿ ನರಸುರ ಕ್ರಿಮಿಪಶುನಗಧರಹರವಿಧಿ ಲೋಕವೆ ಮುಟ್ಟು2ಮುಟ್ಟು ಭಟ್ಟರು ಹೇಳುವಂತಿಲ್ಲಬೆಳಗಿದುದು ಎಲ್ಲಅಷ್ಟಾಗಿ ಕಳೆಥಳಿಥಳಿಪುದೆಲ್ಲತನ್ನರಿದವ ಬಲ್ಲಶಿಷ್ಟ ಚಿದಾನಂದ ನೀನೆಂದು ಕಾಣಲುಮುಟ್ಟಿಗೆ ಜಾಗವಿಲ್ಲ ನೀಚರ ವಸ್ತು ನಿಜ ಬ್ರಹ್ಮ3
--------------
ಚಿದಾನಂದ ಅವಧೂತರು
ಮೂರ್ಖರಾದರು ಇವರು ಲೋಕದೊಳಗೆಏಕದೈವವ ಬಿಟ್ಟು ಕಾಕುದೈವವ ಭಜಿಸಿ ಪ.ಒಂಟಿಯಲಿ ಹೆಂಡತಿಯ ಬಿಡುವಾತನೇ ಮೂರ್ಖಗಂಟನೊಬ್ಬನ ಕೈಯಲಿಡುವವನೆ ಮೂರ್ಖನಂಟರಿಗೆ ಸಾಲವನು ಕೊಡುವಾತ ಮೂರ್ಖ - ಜಗಕಂಟಕನಾದವನು ಕಡು ಮೂರ್ಖನಯ್ಯಾ 1ಮುಪ್ಪಿನಲಿ ಹೆಂಡತಿಯ ಮಾಡಿಕೊಂಬವ ಮೂರ್ಖಸರ್ಪನಲಿ ಗಾರುಡವ ನಡಸುವನೆ ಮೂರ್ಖಇಪ್ಪತ್ತು ಒಂದು ಕುಲ ಉದ್ಧರಿಸದವ ಮೂರ್ಖಅಪ್ಪ ರಂಗಯ್ಯನನು ನೆನೆಯದವ ಮೂರ್ಖ 2ಸತ್ತ ಕರುವಿನ ತಾಯ ಹಾಲು ಕರೆವವ ಮೂರ್ಖಒತ್ತೆಯಿಲ್ಲದೆ ಸಾಲ ಕೊಡುವವನೆ ಮೂರ್ಖಹತ್ತೆಂಟು ಬಗೆಯಲಿ ಹಂಬಲಿಸುವವ ಮೂರ್ಖಹೆತ್ತ ತಾಯ್ ಬೈವವನು ಕಡು ಮೂರ್ಖನಯ್ಯ 3ಪಡೆದ ಮಗಳನುಮಾರಿ ಒಡಲಹೊರೆವವ ಮೂರ್ಖಮಡದಿ ಹುಟ್ಟಿದ ಮನೆಯೊಳಿರುವವನೆ ಮೂರ್ಖಬಡತನವು ಬಂದರೆ ಬಯಸಿಕೊಂಬವ ಮೂರ್ಖದೃಡಬುದ್ಧಿಯಿಲ್ಲದವ ಕಡು ಮೂರ್ಖನಯ್ಯ 4ರಾಮನಾಮವ ಸ್ಮರಿಸದಿದ್ಧಾತನೇ ಮೂರ್ಖಹೇಮವನು ಗಳಿಸಿ ಉಣದಿದ್ದವನೆ ಮೂರ್ಖನೇಮದಲಿ ಹಿರಿಯರನು ನೋಡದವ ಮೂರ್ಖ ದುರ್ನಾಮವನು ಕೊಂಬಾತ ಕಡು ಮೂರ್ಖನಯ್ಯ 5ಕಾಶಿಯಲಿ ದೇಹವನು ತೊಳೆಯದಿದ್ದವ ಮೂರ್ಖಭೂಸೂರರಿಗನ್ನವನು ಕೊಡದವನೆ ಮೂರ್ಖಶೇಷಪತಿ ಕೃಷ್ಣನ ನೆನೆಯದವ ಮೂರ್ಖಹರಿದಾಸನಾಗಿರದವನು ಕಡು ಮೂರ್ಖನಯ್ಯ 6ಉಂಡ ಮನೆಗೆರಡನ್ನು ಬಗೆವಾತನೇ ಮೂರ್ಖಕೊಂಡೆಯವ ಪೇಳಿ ತಿರುಗುವವ ಮೂರ್ಖಪುಂಡರೀಕಾಕ್ಷ ಶ್ರೀ ಪುರಂದರವಿಠಲನಕೊಂಡು ಭಜಿಸದ ಮನುಜ ಕಡು ಮೂರ್ಖನಯ್ಯ 7
--------------
ಪುರಂದರದಾಸರು
ಯಮದೂತರು ನರನನು ಎಳೆದೊಯ್ದುದನುಎಲ್ಲರಿಗೆ ಹೇಳುವೆನುಕುಮತಿಯಲಿ ಸದ್ಗುರು ಚರಣವ ಹೊಂದದಕೇಡಿಗಾಗುವ ಫಲಗಳನುಪಮುರಿದ ಮೀಸೆಯಲಿ ಮಸಿದೇಹದಲಿಉರಿಹೊಗೆ ಹೊರಡುವ ಉಸುರಿನಲಿಕರುಳು ಮಾಲೆಯಲಿ ಕೋರೆದಾಡೆಯಲಿಜರೆಮೈ ಹಸಿದೊಗಲುಡುಗೆಯಲಿ1ಝಡಿವ ಖಡುಗದಲಿ ಹೂಂಕಾರದಲಿಕಡಿದವಡೆಯಲಿ ಹುರಿಮೀಸೆಯಲಿಬಿಡಿಗೂದಲಲಿ ಕರದ ಪಾಶದಲಿಸಿಡಿಲ ತೆರೆದ ಬಿಡುಗಣ್ಣಿನಲಿ2ಮಿಡುಕುತ ಸತಿಸುತರನು ಆಪ್ತರನುಹಿಡಿದೊಪ್ಪಿಸುತಿಹ ವೇಳೆಯಲಿಕಡಿಯಿರಿ ಹೊಡಿಯಿರಿ ತಿನ್ನಿರಿ ಎನುತಲಿ ಧುಮುಕಲುಬಿಡುವನು ಪ್ರಾಣವ ಕಾಣುತಲಿ3ಯಾತನೆ ದೇಹವ ನಿರ್ಮಿಸಿ ಅದರೊಳುಪಾತಕಮನುಜನ ಹೊಗಿಸುತಲಿಘಾತಿಸುವ ನಾನಾಬಗೆ ಕೊಲೆಯಲಿಘನನುಚ್ಚು ಕಲ್ಲೊಳಗೆ ಎಳೆಯುತಲಿ4ಈ ತೆರವೈ ಈ ಧರ್ಮ ಶಾಸ್ತ್ರವನೀತಿಯ ತೆರದಲಿ ಮಾಡುತಲಿಪಾತಕವನು ಬಹುಪರಿ ಶಿಕ್ಷಿಪರುದಾತಚಿದಾನಂದನಾಜೆÕಯಲಿ5
--------------
ಚಿದಾನಂದ ಅವಧೂತರು
ಯಾದವ ನೀ ಬಾ ಯದುಕುಲನಂದನಮಾಧವಮಧುಸೂದನ ಬಾರೋಪಸೋದರ ಮಾವನ ಮಥುರಿಲಿ ಮಡುಹಿದ ಯಶೋದೆಯ ನಂದನ ನೀ ಬಾರೋ ಅ.ಪಕಣಕಾಲಂದುಗೆ ಗಣಗಣಕೆನುತಲಿತನನನವೇಣುನಾದದಲಿ ||ಚಿಣಿಕೋಲು ಚಂಡು ಬುಗುರಿಯನಾಡುತಸಣ್ಣ ಸಣ್ಣ ಗೋವಳರೊಡಗೂಡಿ 1ಶಂಖ ಚಕ್ರವು ತೋಳಲಿ ಹೊಳೆಯುತಬಿಂಕದ ಗೋವಳ ನೀ ಬಾರೋ ಅಕ- ||ಳಂಕ ಮಹಿಮನೆ ಆದಿನಾರಾಯಣಬೇಕೆಂಬ ಭಕ್ತರಿಗೊಲಿಬಾರೋ 2ಖಗವಾಹನನೆ ಬಗೆ ಬಗೆ ರೂಪನೆ |ನಗೆ ಮೊಗದರಸನೆ ನೀ ಬಾರೋ ||ಜಗದೊಳು ನಿನ್ನಯ ಮಹಿಮೆಯ ಪೊಗಳುವೆ |ಪುರಂದರವಿಠಲ ನೀ ಬಾರೋ3
--------------
ಪುರಂದರದಾಸರು
ಯೋಗಿಯ ಭಾವವು ಆರಿಗು ತಿಳಿಯದುಯೋಗಿಯೆಂದೆನಿಪುದು ಸುಖವೋ ದುಃಖವೋಪನಾದವ ಸಾಧಿಸಿ ನಾದವ ಭೇದಿಸಿನಾದಾನಂದದಲಿ ಮುಳುಗಿರ್ದುನಾದಾಮೃತವನು ಸವಿಸವಿದುಂಬುವನಾದ ಮೂರುತಿಯವ ನರನೋ ಹರನೋ1ಅಂತರ್ಲಕ್ಷ್ಯ ಬಹಿರ್ಲಕ್ಷ್ಯವನೊಂದನು ತರಿಸಿದೆ ಸಮನಿಸುತಿರ್ದುಸಂತತ ಪೂರ್ಣಾನಂದದಿ ಮುಳುಗಿ ನಿ-ರಂತರ ಸುಖಿಪುದು ಉರಿಯೋ ಸಿರಿಯೋ2ಬಯಲಾಟವ ನೋಡಿ ಬಯಲೆಲ್ಲವ ಮಾಡಿಬಯಲ ಬಗೆಗೆ ತಾ ಓಲಾಡಿಬಯಲಿಗೆ ಬಯಲು ಬಯಲಾಗಿರುತಿಹಬಯಲಾನಂದವು ಭಯವೋ ಜಯವೋ3ಮೂರವಸ್ಥೆಯ ಮೂವರಿಗೊಪ್ಪಿಸಿಬೇರೆ ಸಾಕ್ಷ್ಯಗೆ ತಾನಿರುತಿದ್ದುತೋರುವುದೆಲ್ಲ ತನ್ನತನವೆಂದರಿತುಶೂರನಾಗಿರುವುದು ಗೆಲುವೋ ಒಲವೋ4ಗುರುಕೀಲನೆ ನೋಡಿ ಗುರುವೆಲ್ಲವ ಮಾಡಿಗುರುಲೀಲೆ ಯಂತಿರುತಿದ್ದುಗುರುಚಿದಾನಂದ ಮೂರುತಿಯ ಕೂಡಿರುತಿಹಗುರುತರ ತಾನದು ದೊರೆಯೋ ಚರಿಯೋ5
--------------
ಚಿದಾನಂದ ಅವಧೂತರು
ರಕ್ಷಿಸೆವರ ಮಹಲಕ್ಷ್ಮೀಅಕ್ಷಯಗುಣಪೂರ್ಣೆ ಪಪಕ್ಷಿವಾಹನನ ವಕ್ಷಸ್ಥಳದಿರಕ್ಷಿತಳಾದೆ ಸುಲಕ್ಷಣದೇವಿ ಅ.ಪನಿಗಮವೇದ್ಯನ ಗುಣಗಳ ಪೊಗಳುತಲಿಮಿಗೆ ಸಂತೋಷದಲಿಅಗಣಿತಾಶ್ಚರ್ಯನ ಕೊಂಡಾಡುತಲಿಬಗೆ ಬಗೆ ರೂಪದಲಿಖಗವರವಾಹನನಗಧರನಿಗೆ ಪ-ನ್ನಗ ವೇಣಿಯು ಬಗೆ ಬಗೆಯಿಂದರ್ಚಿಸಿಹಗಲಿರುಳೆಡೆ ಬಿಡದಲೆ ಹರಿಯನು ಬಹುಬಗೆಯಲಿ ಸೇವಿಪಭಾಗ್ಯದ ನಿಧಿಯೆ 1ಇಂದಿರೆಶ್ರೀ ಭೂದುರ್ಗಾಂಬ್ರಣಿಯೇ ಸು-ಗಂಧ ಸುಂದರಿಯೆಇಂದುಶೇಖರ ಮೋಹಿಪ ಮೋಹಿನಿಯಸುಂದರವನೆ ಕಂಡುಚಂದಿರಮುಖ ಮುದದಿಂದಲಿ ಶ್ರೀಗೋ-ವಿಂದನು ತಾಳಿದ ಮೋಹಿನಿ ರೂಪವನೆಂದು ಮನದಿ ಆನಂದ ಪಡಲು ಸುರವೃಂದವ ಸ್ತುತಿಸೆ ಮುಕುಂದನ ರಮಣಿಯೆ 2ಕಮಲಾನನೆಕಮಲಾಲಯೆಕಮಲಾಕ್ಷಿಕಮಲೋದ್ಭವೆ ಕಮಲೆಕಮಲಾಸನಪಿತನ ಸತಿಯೆ ಭಾರ್ಗವಿಯೆಕಮಲಾಂಬಿಕೆ ಪಿಡಿದಿಹಕಮಲಪುಷ್ಪಮಾಲೆಯು ಹರುಷದಿ ಶ್ರೀ-ಕಮಲನಾಭ ವಿಠ್ಠಲಗರ್ಪಿಸುತಲಿಕಮಲಪತ್ರದಳಾಕ್ಷಗೆ ನಮಿಸಿ ಸ್ವ-ರಮಣನ ಕರುಣಕೆ ಪಾತ್ರಳೆ ಸುಂದರಿ 3
--------------
ನಿಡಗುರುಕಿ ಜೀವೂಬಾಯಿ
ರಂಗನಮ್ಮನೆಗೆ ತಾ ಬಂದಮತ್ತೇನು ತಂದ ಪ.ಜಗದೋದ್ದಾರ ಸಭೆಗೆ ಬಂದನಗುವ ಪರಿಯ ಹೇಳಿದ್ದು ತಂದಬಗೆ ಬಗೆ ವಸ್ತ್ರ ಕೊಳ್ಳಿರೆಂದಪಗಡಿ ಧರ್ಮಗೆ ತರಲಿಲ್ಲೆಂದ 1ವಾಣಿ ಮಾವ ಮನೆಗೆ ಬಂದಜಾಣತನವ ಹೇಳಿದ್ದು ತಂದಮಾಣಿಕ ಮುತ್ತು ಕೊಳ್ಳಿರೆಂದಕ್ವಾಣನ ಧರ್ಮಗೆ ತರಲಿಲ್ಲೆಂದ 2ಕೃಷ್ಣರಾಯಸಭೆಗೆ ಬಂದಎಷ್ಟು ಜಂಬ ಹೇಳಿದ್ದು ತಂದಪಟ್ಟಾವಳಿಕೊಳ್ಳಿರೆಂದಹುಟ್ಟು ಭೀಮಗೆತರಲಿಲ್ಲೆಂದ 3ನಳಿನಾಕ್ಷ ಸಭೆಯೊಳು ಬಂದಹೊಳೆವೊ ಎಷ್ಟು ಹೇಳಿದ್ದು ತಂದಝಳಿಸೋವಸ್ತ್ರ ಕೊಳ್ಳಿರೆಂದಬಳೆಯ ಪಾರ್ಥಗೆ ತರಲಿಲ್ಲೆಂದ 4ರಾಜ್ಯ ಲಕ್ಷಣ ನಿನಗಿಲ್ಲೆಂದಮಾಜುದಾ ಕುಲ ಧರ್ಮಕುಂದತೇಜಿ ಮುಂದೆ ಓಡಿದ್ದು ಚಂದಸೋಜಿಗವಲ್ಲ ನಕುಲನೆಂದ 5ಸುಮನಸರು ನಗುವೊರೆಂದಭ್ರಮೆಯ ಕಳೆದ್ಯೊ ಸಹದೇವ ಎಂದಅಮಿತ ದನವ ಕಾಯ್ದ್ಯೊಛಂದರಮಿಯ ಅರಸು ನಗುವ ನೆಂದ 6ಅಂದ ಮಾತಿಗೆ ಬಲರಾಮ ಹೀಗೆಂದಚಂದ ವಾಯಿತು ಕುಶಲವೆಂದನಿಂದ್ಯವ ನೀ ಮಾಡಿಕೊ ಎಂದಇಂದಿರೇಶಗೆ ತಿಳಿಸಿರೆಂದ 7
--------------
ಗಲಗಲಿಅವ್ವನವರು
ಶಿರಿರಮಣ ದಯದಿಂದ ಮಂತ್ರಾಘ್ರ್ಯ ಕೊಡುವ ಬಗೆ |ಪರಮೇಷ್ಠಿಗೊಲಿದು ಪೇಳಿದನು ಇಂತೂ ಪಅಷ್ಟಾಕ್ಷರದಿ ಮಂತ್ರಾಘ್ರ್ಯ ಸಾಲಗ್ರಾಮ |ವಿಟ್ಟು ಸದ್ ಭಕ್ತಿಯಲಿ ಶಂಖದಿಂದಾ ||ಕೊಟ್ಟವಗೆ ಸಂತುಷ್ಟನಾಗಿ ಎನ್ನಯ ಸದನದೋ- |ಳಿಟ್ಟು ಸಂತೈಸುವೆನು ಬ್ರಹ್ಮ ಕೇಳೂ 1ಸತ್ಯಭಾಮಾದಿ ಮಿಕ್ಕಾದ ಮಂತ್ರಾಘ್ರ್ಯವನು |ಮತ್ಪಾದ ಜಲದಿಂದ ಪಾತ್ರಿಯಲ್ಲೀ ||ಹಸ್ತದಿಂ ಕೊಡಬೇಕು ಎನ್ನ ಪ್ರೀತಿ ಎಲೊ ಇದು |ಸತ್ಯಲೋಕಾಧಿಪನೆ ಕೇಳು ಮುದದೀ 2ಎನ್ನ ಮಂತ್ರಾಘ್ರ್ಯ ಹಸ್ತದಲಿ ಪಾತ್ರಿಯೊಳೀಯೆ |ಅನ್ಯಾಯವೆಷ್ಟೆಂದು ಪೇಳಲೀಗಾ ||ವನ್ನಜಾಸನ ಎನಗರಕ್ತವೆರದಂತಹದೊ |ಮುನ್ನವರ ಕ್ಲೇಶಕ್ಕೆಎಣಿಕೆಇಲ್ಲಾ 3ಅದರಿಂದ ತಿಳಿದು ಸಾಲಗ್ರಾಮವಿಟ್ಟು ಶಂ- |ಖದಲಿ ಕೊಡಬೇಕು ಎನ್ನಘ್ರ್ನಗಳನೂ ||ವಿಧಿಕಾಷ್ಟಗತವಹ್ನಿಮಥಿಸೆ ತೋರ್ವಂತೆ ಸ- |ರ್ವದ ತೋರ್ವೆ ನಾನು ಸಾಲಗ್ರಾಮದೀ 4ಶ್ರೀ ನಾರಿ ಪ್ರಮುಖ ಮಂತ್ರಾಘ್ರ್ಯ ಶಂಖದಲಿ ಕೊಡೆ |ನಾನೊಪ್ಪೆನವರ ಭಂಗವ ಬಡಿಸುವೇ ||ವಾಣೀಶ ತಿಳಿಯಂದು ಸ್ಮಿತ ವದನದಿಂದ ಶ್ರೀ |ಪ್ರಾಣೇಶ ವಿಠಲ ನಿರೂಪಿಸಿದನೂ 5
--------------
ಪ್ರಾಣೇಶದಾಸರು
ಶಿವ ಸತ್ತ ಎಂಥ ಆಶ್ಚರ್ಯವು ಇದು ನೋಡಿ |ಕವಿಗಳು ಮನಕ ತಂದು ||ಭುವನತ್ರಯಗಳಲ್ಲಿ ಪ್ರಖ್ಯಾತವಾಗಿದೆ |ಅವಿವೇಕಿಗಳ ಮಾತಲ್ಲಾ ಪಅಧಮರು ಬಹು ಬಗೆಯಿಂದಲ್ಲಿ ಘಳಿಸೀದಾ |ಬದುಕು ವ್ಯರ್ಥವಾಹದು ||ಬುಧರ ಪದಾರ್ಥವು ಸಾರ್ಥಕವಾಹದೆಂಬು |ದಿದೆ ಸಾಕ್ಷಿ ಎನಬಹುದೂ 1ಭೂಭುಜರಿಗೆ ಭೂಷಣಾದವು ಆಯುಧ |ಈ ಭೂಮಿ ಪೊತ್ತ ವ್ಯಾಳಾ ||ಆ ಭಿಕ್ಷುಕನ ಕುಟುಂಬವ ರಕ್ಷಿಸುತಿಹ್ಯದು |ಶೋಭಿಸುತಿಹ್ಯ ಕಪಾಲಾ 2ಮಂದೀಯ ನಂಜಿಸುತಿಪ್ಪದು | ಆತನಹಿಂದೆ ಮುಂದಿರುವ ಗಣಾ ||ನಂದೀ ಪಿತೃಗಳಿಗೆ ಕೈವಲ್ಲ್ಯಾ ತೋರಿತು |ಸಂದೇಹವಿನಿತಿಲ್ಲವೂ 3ಸೋಮಕಂಣಾದ ಜಗತ್ತೆಕ್ಕ ದಿಕ್ಕಿಗೆ |ಸ್ವಾಮಿ ಎನಿಸಿದ ವನ್ಹೀ ||ಧೀಮಂತರಾತನ ಮಡದೀಯ ಪೂಜಿಸಿ |ಶ್ರೀಮಂತರಾಗೂವರೂ 4ಮೌನಿಗಳಿಗೆ ಚರ್ಮ ವೈಷ್ಣವರಿಗೆ ಭಸ್ಮ |ತಾನು ಪ್ರೀಯಕರಾದೀತು ||ಪ್ರಾಣೇಶ ವಿಠಲಾನೊಳರ್ಧಾಂಗ ವಾಗಭಿ |ಮಾನಿಯೊಳರ್ಧವಿಟ್ಟಾ 5
--------------
ಪ್ರಾಣೇಶದಾಸರು