ಒಟ್ಟು 9962 ಕಡೆಗಳಲ್ಲಿ , 129 ದಾಸರು , 5006 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಮಾಡಿದರೇನು ನಾನಾ ಸಾಧನೆಗಳನು | ಜ್ಞಾನಿಗಳ ಕೂಡದನಕಾ ಮರುಳೇ ಪ ಸಕಲ ಸಾಮಗ್ರಿಯನು ತಂದಿರಲೇನು ಪಾ | ಕಕೆ ವಹ್ನಿ ಇಲ್ಲದನಕಾ ಮರುಳಾ 1 ಪ್ರಕಟವಾಗಿರಲು ನಯನಾದಿಂದ್ರಿಯಗಳಿಗೆ ಐಂ | ದ್ರಿಕ ಬೆಳಗವಿಲ್ಲದನಕಾ ಮರುಳೇ 2 ಹಸನ ಭೂಮಿಯ ಮಾಡಿ ಬೀಜ ಉಡಿಗಟ್ಟಿರಲು | ವಸೆದು ಮಳೆಯಾಗದನಕಾ ಮರುಳೇ 3 ಪ್ರಕಟಿಸಿದ ಅನ್ನ ಭಕ್ಷದಿ ಶಾಖಗಳಿರಲು | ಯಶವಾಜ್ಯ ಬಡಿಸದನಕಾ ಮರುಳೇ 4 ತುಂಬಿ ಕುಳಿತೇನು ದೊಡ್ಡವರೆಲ್ಲಾ ನಾವಿಯೊಳು | ಅಂಬಿಗನು ಬಾರದನಕಾ ಮರುಳೇ 5 ನಂಬಿ ಗುರು ಮಹಿಪತಿಸುತಸ್ವಾಮಿ ಶ್ರೀಚರಣ | ದಿಂಬವನು ಪಡೆಯದನಕಾ ಮರುಳೇ 6
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಮಾಯವೊ ಹರಿಯೆ ಶ್ರೀನಿವಾಸನೆ ನಿನ್ನ ಧ್ಯಾನಿಸುವವರನು ಪೊರೆವೆ ಸಾನುರಾಗದಲಿ ಪ ಜ್ಞಾನಿಗಳು ಹಗಲಿರುಳು ಮೌನದಿಂದಲಿ ಭಜಿಸಿ ದಾನವಾಂತಕ ನಿನ್ನ ಧ್ಯಾನ ಮಾಡುವರು ಅ.ಪ ಬಡತನದಿ ಬಹು ವ್ಯಥೆಯ ಪಡುತ ಸತಿಸುತರಿರಲು ನುಡಿಯೆ ಭಯ ಭಕ್ತಿಯಲಿ ಒಡೆಯರಿಲ್ಲೆಮಗೆ ಮೃಡಸಖನು ಇಹನೆನಲು ಹಿಡಿಯವಲಿಯ ಕೊಡಲು ಕೆಡದ ಸೌಭಾಗ್ಯವನು ಒಡನೆ ನೀಡಿದೆಯೊ 1 ಅಂದು ದುಶ್ಖಾಸನ ನೃಪನಂದನೆಯ ಬಾಧಿಸುತ ನಿಂದು ಸೀರೆಯ ಸೆಳೆಯೆನೊಂದು ದುಃಖಿಸುತ ಇಂದಿರಾಪತಿ ಕೃಷ್ಣ ಇಂದೆನಗೆ ನೀನೆ ಗತಿ ಎಂದೊಡಕ್ಷಯವಿತ್ತು ಅಂದು ಸಲಹಿದೆಯೊ 2 ಮಡುವಿನಲಿ ಗಜರಾಜ ಪಿಡಿದ ಮಕರಿಗೆ ಸಿಲುಕಿ ಮಡದಿ ಮಕ್ಕಳನಗಲಿ ಕಡೆಗೆ ಸೊಂಡಿಲಲಿ ಪಿಡಿದ ಕುಸುಮವನು ಜಗದೊಡೆಯಗರ್ಪಿತವೆನಲು ದಡದಡನೆ ಬಂದೆಯೊ ಮಡದಿಗ್ಹೇಳದಲೆ 3 ಅಂದು ದೂರ್ವಾಸಮುನಿ ಬಂದು ಶಿಷ್ಯರ ಸಹಿತ ಇಂದೆಮಗೆ ಹಸಿವೆನಲು ನೊಂದು ಶ್ರೀಹರಿಯೆ ತಂದೆ ನೀ ಸಲಹೆನಲು ಬಂದೆ ಬಹಳ್ಹಸಿವೆಯಲಿ ಒಂದು ಪತ್ರದ ಶಾಖ ಉಂಡು ಸಲಹಿದೆಯೊ 4 ಹಿಂದಜಾಮಿಳ ತನ್ನ ಬಂಧುಬಳಗವ ತ್ಯಜಿಸಿ ಅಂದು ಇಹಸುಖದಿ ಆನಂದ ಪಡುತಿರಲು ಬಂದರಾಗ ಯಮಭಟರು ನಿಂದು ಬಾಧಿಸುತಿರಲು ಕಂದನಾರಗನೆನಲು ಅಂದು ಸಲಹಿದೆಯೊ 5 ಚಿಕ್ಕವನು ಪ್ರಹ್ಲಾದ ಮಕ್ಕಳಾಟದ ಧ್ರುವನು ರಕ್ಕಸಾಂತಕನ ಮೊರೆ ಇಕ್ಕಿ ಪ್ರಾರ್ಥಿಸಲು ತಕ್ಕವರಗಳನಿತ್ತು ತಕ್ಕೈಸಿ ಅಣುಗನನು ಮಿಕ್ಕಭಕುತರ ಪೊರೆದೆ ಲಕ್ಕುಮಿಯ ರಮಣ 6 ಈ ಪರಿಯಲಿ ಬಹುಭಕುತರಾಪತ್ತುಗಳ ಹರಿಸಿ ಶ್ರೀಪತಿಯ ರಕ್ಷಿಸಿದಿ ಆಪನ್ನಜನರ ಗೋಪತಿ ಕೃಷ್ಣ ಜಗದ್ವ್ಯಾಪಕನೆ ನೀ ಸಲಹಿ ತಾಪಸರ ಒಡೆಯ ಹೃದ್ವ್ಯಾಕುಲವ ಕಳೆವೆ 7 ಕಾಳಿ ಮಡುವನೆ ಧುಮುಕಿ ಕಾಳಿಂಗನ್ಹೆಡೆ ತುಳಿದೆ ಕಾಳದೇವಿಯರಮಣ ಕಾಲಿಗೆರುಗುವೆನು ಕಾಳಯುಕ್ತಿನಾಮ ಸಂವತ್ಸರದಿ ಸುಜನರಿಗೆ ಭಾಳ ಸುಖಹರುಷಗಳ ಲೀಲೆ ತೋರಿಸುವ 8 ಭ್ರಮಿಸಿ ಇಹ ಸುಖದಿ ಮನ ಶ್ರಮ ಪಡುತಲಿರೆ ದೇವ ರಮೆಯ ರಮಣನೆ ಪೊರೆಯೊ ಮಮತೆಯನು ಬಿಡದೆ ಕಮಲಸಂಭವಜನಕ ಕಮಲನಾಭ ವಿಠ್ಠಲ ಸುಮನಸರ ಒಡೆಯ ಹೃತ್ಕಮಲದಲಿ ಪೊಳೆವ 9
--------------
ನಿಡಗುರುಕಿ ಜೀವೂಬಾಯಿ
ಏನು ವರ್ಣಿಸಿದ ಕವೀಶ್ವರ ನಾರಿಯಜ್ಞಾನಕೆ ಹಾನಿಯ ಮುಕ್ತಿಗೆ ಮೃತ್ಯುವಕಾನನ ರೂಪು ನರಕ ಕುಂಡವೆಂಬಳತಾನು ಕೆಡಲು ಸುಳ್ಳು ಸ್ತುತಿ ಮಾಡಿದ ಪ ಗುದ್ದಲಿ ಮೂಗನು ಸಂಪಿಗೆ ನನೆ ಎಂದಬುದ್ದಲಿ ಮುಖವನು ಪದ್ಮಮುಖವೆಂದಇದ್ದಲಿ ತನುವನು ಇಂದ್ರನೀಲವೆಂದಹದ್ದಿನ ಕೈಯನು ಹರಿ ಸುಂಡಲೆಂದ 1 ಬೆಳ್ಳುಳ್ಳಿ ಹಲ್ಲನು ದಾಳಿಂಬ ಬಿತ್ತವೆಂದಹುಲ್ಲೆಗಣ್ಣೆಂದನು ಸುಳಿಗಣ್ಣಮಲ್ಲಿಗೆ ಮೊಳೆಯೆಂದನು ಮುರುಕಿ ಮಾತುಗಳನ್ನುಜೊಲ್ಲು ಸುರಿವುದಕೆ ಅಮೃತವೆಂದನು 2 ಕುಂಭ ಕುಚವೆಂದನು ಮಾಂಸದ ಮುದ್ದೆಯಬಿಂಬಾಧರವೆಂದನು ಹಂದಿಯ ತುಟಿಯಕಂಬ ಬಾಳೆ ಎಂದನು ಕೊರಡು ತೊಡೆಯನುಬಿಂಬ ಕನ್ನಡಿ ಎಂದನು ಕುಣಿಗಲ್ಲವ 3 ಕಲಹಂಸ ನಡಿಗೆಯೆಂದ ಕೋಣನ ನಡಿಗೆಯಅಳಿಕುಂತಳವೆಂದ ಮುರುಟು ಕೂದಲನುಬಲು ಸಿಂಹನಡುವೆಂದ ಮೊಸಳೆ ನಡುವನ್ನುಹೊಳೆವ ಬೊಂಬೆಯೆಂದ ಕೊಳಕು ಮೈಯನ್ನು 4 ಹೊಲಸು ಮೂಳಿಗೆ ನಾನಾ ಹೋಲಿಕೆಗಳನಿಟ್ಟುತಿಳಿದಂತೆ ಕವಿತಾನು ವರ್ಣಿಸಿದ ಕೊಂಡಾಡಿಸುಲಭ ಚಿದಾನಂದ ಸುಪಥವ ಕಾಣದಲೆಕಳಕೊಂಡ ಕವಿತಾನು ಬಹು ಪುಣ್ಯ ಪಥವ 5
--------------
ಚಿದಾನಂದ ಅವಧೂತರು
ಏನು ಸಾಧಿಸುವದೇನರಿದು ಙÁ್ಞನಗಮ್ಯ ಗುರುಮಾರ್ಗದೊರೆಯಲರಿಯದು ಧ್ರುವ ನೀತಿಶಾಸ್ತ್ರವನೋದಿ ಪಂಡಿತನಾಗಲಿಬಹುದು ಶ್ರುತಿ ಸ್ಮøತಿಗಳ ತಿಳಿದು ತರ್ಕಸ್ಯಾಡಲಿಬಹುದು ಅತಿ ಬಲ್ಲತನದಿ ಯತಿಯನಿಸಿಕೊಳ್ಳಲಿಬಹುದು ಕ್ಷಿತಿಯೊಳು ಮೆರೆಯಲಿಬಹುದು ಸುತತ್ವ ಜ್ಞಾನಖೂನ ದೊರೆಯಲರಿಯದು 1 ಗೃಹತ್ಯಾಗಮಾಡಿ ಸಂನ್ಯಾಸಿ ಅಗಲಿಬಹುದು ದೇಹ ದಂಡಿಸಿ ವನವಾಸಿಯಾಗಲಿಬಹುದು ಗುಹ್ಯಗೊಪೆಯಲಿ ಸೇರಿ ತಪಸಿಯೆನಿಸಲಿಬಹುದು ಬಾಹ್ಯನಿಷ್ಠೆಯದೋರಬಹುದು ಸೋಹ್ಯ ಸದ್ಗುರುಮಾರ್ಗ ದೊರೆಯಲರಿಯದು 2 ಹಲವು ಕುಟಿಲದ ವಿದ್ಯವನು ಸಾಧಿಸಲಿಬಹುದು ಜಲದೊಳಗೆ ಮುಳಗಿ ಮಂತ್ರವನು ಜಪಿಸಲಿಬಹುದು ಸೀಲಿ ಸಾಲ್ವಳಿಯ ಸುಶಕುನ ಪೇಳಲಿಬಹುದು ಮ್ಯಾಲೆ ಜನರಂಜಿಸಲಿಬಹುದು ಮೂಲ ಮುಕ್ತಿ ಕೀಲ ತಿಳಿಯಲರಿಯದು 3 ಪೃಥ್ವಿಯನೆ ತಿರುಗಿ ಬಹುಭಾಷೆಯಾಡಲಿಬಹುದು ಮತಿವಂತನಾಗಿ ಕವಿತ್ವಮಾಡಲಿಬಹುದು ಗೀತರಾಗವು ಜಂತ್ರದೊಳು ನುಡಿಸಲಿಬಹುದು ಚದುರಂಗ ಪಗಡ್ಯಾಡಿ ಗೆಲಬಹುದು ಮತ್ತ ಮನ ಬೆರೆವ ಘನಸುಖವು ದೊರೆಯಲರಿಯದು 4 ಶೂರತನದಲಿ ಪರಾಕ್ರಮ ಹಿಡಿಯಲಿಬಹುದು ಧೀರಗುಣದಲಿ ಮಹಾಧೀರನೆನಿಸಲಿಬಹುದು ನೂರ್ಬಲದ ಪೌರುಷಲಿ ರಾಜ್ಯನಾಳಲಿಬಹುದು ಸಿರಿಸೌಖ್ಯದೊಳಿರಲಿಬಹುದು ಸಾರ ಸುಜ್ಞಾನಸುಖ ದೊರೆಯಲರಿಯದು 5 ಪರ್ವತಾಗ್ರದಲೇರಿ ಧರೆಗೆರಗಲಿಬಹುದು ಹರಿವ ನದಿಯನೆ ಹಾರಿ ಹೋಗಲಿಬಹುದು ಮೊರೆವುತಿಹ್ಯ ಸರ್ಪದಾ ವಿಷವು ಧರಿಸಲಿಬಹುದು ಕ್ರೂರ ಮೃಗದೊಳು ತಿರುಗ್ಯಾಡಬಹುದು ಪಥ ದೊರೆಯಲರಿಯದು 6 ಪೊಡವಿಯೊಳು ಹವಲು ವಿದ್ಯವ ಸಾಧಿಸಲುಬಹುದು ಬಡದ ಬವಣಿಯ ಬಟ್ಟು ನಾಡ ಶೋಧಿಸಬಹುದು ಗೂಢ ವಿದ್ಯದ ಮಾತು ಆಡಿ ತೋರಿಸಬಹುದು ಹಿಡಿದು ಮೌನವ ಕೂಡಬಹುದು ಮೂಢಮಹಿಪತಿ ಒಡಿಯನ ಕೃಪೆ ಪಡೆವದೆ ದುರ್ಲಭವು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನು ಸುಕೃತದ ಫಲವೋ ಶ್ರೀನಿವಾಸನೆ ಹೇಳು ಹಾನಿಯಾಗಿಯೆ ಅವಮಾನ ತೋರುತಿದೆ ಪ ವಾಸುದೇವನೆ ಎನ್ನ ಈಸು ದಿನ ಪರಿಯಂತ ಬೇಸರಿಲ್ಲದೆ ಕಾಯ್ದೆ ಲೇಸ ಕರುಣಿಸಿದೆ ಈಸಾಡಿದೆನು ನಾನು ಈ ಗೃಹದೊಳೀಗೇನು- ದಾಸಿನವು ನಿನಗಾಯಿತು ಮೋಸ ಯೋಚಿಪರೆ 1 ಹಗಲುಗತ್ತಲೆಯಾಗಿ ಮೊಗವು ಕಾಣದೆ ಎನಗೆ ಜಗದುದರ ನಿನ್ನಾಣೆ ನಗೆಯಾಯ್ತು ಜಗಕೆ ಹಗಯ ಮಧ್ಯದಿ ಸಿಲುಕಿ ಮೃಗವು ಬಾಯ್ಬಿಟ್ಟಂತೆ ಮಿಗ ಕ್ಲೇಶಬಟ್ಟು ನರಮೃಗವು ತಾನಾದೆ 2 ಆರು ಹಿತವರು ಇಲ್ಲ ಧಾರುಣಿಯ ಬಲವಿಲ್ಲ ಪಾರಾಗಿ ನಾಚಿಕೆಯು ಬೇರೂರಿತು ಘೋರ ಅಡವಿಯೊಳಗೆ ಗಾರುಗತ್ತಲೆ ಸುತ್ತಿ ಮಾರಿದೆಯ ಚೋರರಿಗೆ ದಾರಿಗಾಣಿಸದೆ 3 ದೊರೆಯು ಮನ್ನಿಸಿ ಕೊಡಲು ನೆರೆಹೊರೆಯ ಕರೆಕರೆಯು ಹರದಿಯೊಳು ನಂಬಿಗೆಯು ಕಿರಿದಾಯಿತು ನೆರವಾಗಿ ತೋರುತಿದೆ ಬರಿಯ ವೃಕ್ಷದ ತೆರದಿ ಮರುಳು ಕಣ್ಣಿಗೆ ಇರುವೆ ಕರಿಯ ತೆರನಂತೆ 4 ಇನ್ನು ಬಂಧಿಸಬೇಡ ಎನ್ನಿಂದ ಅಳವಲ್ಲ ಬನ್ನಬಡುವುದು ಎಲ್ಲ ನಿನ್ನ ಮನಕರುಹು ಕರ್ಮ ಬೆನ್ನು ಬಿಡುವಂದದಲಿ ಪನ್ನಗಾದ್ರಿನಿವಾಸ ಪಾಲಿಸೈ ಲೇಸ 5 ದಾಸ ಬಳಲಿದನೆಂಬ ಹೇಸಿಕೆಯ ಮಾತುಗಳ ಕಾಸಕೊಟ್ಟೇಕೆ ನಿರಾಸೆ ಮಾಡುವಿಯೊ ಬೇಸರಾಗದೆ ಪಂಥವಾಸಿಯಿಲ್ಲವೆ ನಿನಗೆ ಸಾಸಿರಾಕ್ಷನೆ ಎನಗೆ ಲೇಸಿತ್ತು ಸಲಹೊ 6 ಪಡೆದ ತಂದೆಯು ನೀನೆ ಕೊಡುವ ಒಡೆಯನು ನೀನೆ ಕಡೆಗೆ ಕೈವಿಡಿದು ಎನ್ನ ರಕ್ಷಿಪನು ನೀನೆ ಮಡದಿ ಮಕ್ಕಳನೆಲ್ಲ ಬಿಡದೆ ಸಲಹುವ ನೀನೆ ಪೊಡವಿಗಧಿಪತಿಯಾದ ವರಾಹತಿಮ್ಮಪ್ಪ 7
--------------
ವರಹತಿಮ್ಮಪ್ಪ
ಏನು ಸುಖವಯ್ಯ ಪ ಇನ್ನೇನು ಪರಗತಿಯಹುದು ಮುಂದೆಅ.ಪ ನಾನಾವಿಧ ದುಃಖಗಳಲಿ ಜ್ಞಾನಶೂನ್ಯನಾಗುತ ವಿಷ- ಯಾನುಭವದಿ ವ್ಯಥೆ ಪಡುವವಗೆ 1 ಮಾಳಿಗೆ ಮೇಲೋಡಾಟವು ನಾಳೆಬಹುದು ಕಷ್ಟವು ಎಂ- ಕೇಳದೆ ಗರ್ವಿಸಿ ಮೆರೆವವಗೆ 2 ಭದ್ರವು ತನಗೆಂದು ತಿಳಿದು ಕ್ಷುದ್ರ ಮಾರ್ಗದಲಿ ತಿರುಗಿದ ದ- ರಿದ್ರದಿ ಹಂಬಲಿಸುವವಗೆ 3 ಮಡದಿ ಮಕ್ಕಳೆಂತೆಂಬುವ ತೊಡರೊಳು ಬಾಯ್ಬಿಡುತಿರುವವಗೆ 4 ಹರಿಕೊಟ್ಟ ಮಹಾಭಾಗ್ಯದಿ ಪರಮತೃಪ್ತನಾಗಿರದಲೆ ಗುರುರಾಮವಿಠಲನ ಮರೆದು ಇರುಳು ಹಗಲು ಚಪಲ ಪಡುವಗೆ 5
--------------
ಗುರುರಾಮವಿಠಲ
ಏನು ಹೇಳಲಿ ಕೂಸಿನ ಚರ್ಯಮಾನಿನಿ ಉಳಿದದ್ದ ಆಶ್ಚರ್ಯ ಪ ಪುಟ್ಟಿದೇಳನೆಯ ದಿನವೆ ಬಾಲಗ್ರಹ ಬಂದುಎಷ್ಟು ಕಾಡಿದಳು ನಮ್ಮಪ್ಪನಸೃಷ್ಟಿಪಾಲಕ ಸಿರಿವಿಷ್ಣು ದಯದಿಂದಕಷ್ಟ ಕಳೆದು ನಮ್ಮ ಕೂಸು ಉಳಿದಿತೇ 1 ಒಂದು ಮಾಸದ ಕೂಸು ಅಂದು ಬಂಡಿಯ ಕೆಳಗೆಹೊಂದಿಸಿ ಮಲಗಿಸಿದ್ದೆನೇ ನಾನುಅಂದು ಹಸಿದು ಮುಖದಿಂದ ಬೆರಳನೆ ಚೀಪಿಬಂಧ ಕಳೆದು ಹೀಂಗೆ ಬದುಕಿತೇ 2 ದುಷ್ಟತನವು ಬಹಳ ಎಂದು ಒರಳಿಗೆಕಟ್ಟಿಹಾಕಿದೆ ಇವನ ಒಂದಿನಾಬೆಟ್ಟದಂತೆರಡು ಮರಗಳು ಬೀಳಲು ಮಧ್ಯ ಪುಟ್ಟ ನಮ್ಮಪ್ಪ ಹ್ಯಾಂಗೆ ಬದುಕಿತೆ 3 ಅಂಗಳದೊಳಗೆ ಆಡುತ ಕುಳಿತಿದ್ದ ಕೂಸಿನಾ-ಮಂಗಳಾ ಘಾಳಿ ಬಂದೊಯಿತೆಅಂಗನೇರೆಲ್ಲರೂ ಅಳುತ ಕೂತೇವಲ್ಲೆ ನರ-ಸಿಂಗನಾ ಕರುಣದಿಂದುಳಿದಿತೆ 4 ನೀರು ಕುಡಿದು ಯಮುನೆ ಮೇಲೆ ಆಡಲು ಕೂಸುಘೋರ ಪಕ್ಷಿಯು ಬಂದು ನುಂಗಿತೆಪೋರರೆಲ್ಲರು ನೋಡಿ ಗಾಬರಿಯಾಗಲು ಮತ್ತೆಕಾರಿತವನ ಬಕ ಸೋಜಿಗವೆ 5 ಕತ್ತೆಗಳನು ಕೊಂದು ತಾಳಫಲವು ಗೋಪ-ಪುತ್ರರಿಗೆ ಉಣ್ಣ ಕೊಟ್ಟಿಹನಂತೆಚಿತ್ರಚರಿತನ ನಂದಬಾಲನ ಚರಿತೆ ಏಕಾವೃತದಿಂದಲಿ ಪೇಳಲಳವೇನೆ 6 ಕರುಗಳ ಕಾಯುತಿರಲು ವತ್ಸವೇಷದಿದುರುಳನೊಬ್ಬನು ಬಂದಿಹನಂತೆಅರಿಯದಾ ಕೂಸಿನಾ ಕಾಲ್ಪಿಡಿದುಬೆರಳ ಮರದ ಮೇಲಕ್ಕೆ ತೂರಿದನಂತೆ 7 ಏಳೇ ವರ್ಷದವ ಕೇಳೆ ಗೋವರ್ಧನಏಳು ದಿವಸ ಎತ್ತಿದನಂತೆಬಾಳುವ ಗೋಪಿಯರ ಪಾಲನೆ ಮಾಡಿದನೀಲವರ್ಣನ ಎಷ್ಟು ವರ್ಣಿಸಲೆ 8 ಬಾಲನಾದರು ನಿನ್ನ ಹಾಳು ದೈತ್ಯನ ಕೊಂದು ಬ-ಹಳ ಕುತ್ತುಗಳಿವೆ ಕೇಳಿದೇನೆಬಾಲಕರಿಬ್ಬರು ಲೋಲರಿಬ್ಬರು ನಮ್ಮ ಬಾಲಕರೇನೇ ಸ್ವರ್ಗಪಾಲನು ಇಳೆಯೊಳು ಉದಯಿಸಿದನೇ 9 ಮಂದಗಮನೆ ಎನ್ನ ಕಂದನಾಟಗಳನ್ನುಮಂದಿಯ ದೃಷ್ಟಿಯ ಭಯದಿಂದ ನಾನುಒಂದೂ ಹೇಳದೆ ಹೀಗಾನಂದ ಬಡುವೆನು ನಾನುಚಂದ್ರವದನೆ ರೋಹಿಣಿ ಕೇಳೆ 10 ಗೋಪಿ ಸುಖಿಸುತಿಹಳು 11
--------------
ಇಂದಿರೇಶರು
ಏನು ಹೇಳಲಿ ನಾ ಧೇನುಪಾಲಕನಆನನವ ತೋರಿ ಧ್ಯಾನ ಹಚ್ಚೆಹನು ಪ ಸುತ್ತ ತಿರುಗುವಾಗ ಹತ್ತಿರಕೆ ಬಂದುಚಿತ್ತ ಸುಖಿಸಿ ಪೋದ ಮುತ್ತಿನಂಥ ಬಾಲ 1 ಸಣ್ಣ ಕಂದನೆಂದು ಚಿನ್ನಾಭರಣನಿಟ್ಟುಬೆನ್ನಿನ್ಹಿಂದೇ ಬಂದು ತನ್ನ ತೋರಿದನು 2 ನಂದಬಾಲಕನ ಎಂದು ಕಾಂಬೆನೆಂದುನಂದು ಮನಸ್ಸು ಹರಿವುದು ಇಂದಿರೇಶ ಕೃಷ್ಣ3
--------------
ಇಂದಿರೇಶರು
ಏನು ಹೇಳಿದರೇನು ಪಾಮರ ಜ್ಞಾನಿಯಾಗಬಲ್ಲನೇ | ನಡೆವ ಮನುಜಗೆ ಪ ಎತ್ತಿಗುತ್ತಮ ಲಿಂಗ ಮುದ್ರೆಯನ್ನೊತ್ತಿದ್ದರೆ ಬಸವನೆಂಬರು | ಕತ್ತೆಯನು ಹಿಡಿ ತಂದು ವತ್ತಲು ಕತ್ತೆಯಲ್ಲದೆ ಬಸವನಪ್ಪುದೆ 1 ಚಿನ್ನ ಬಿಳುಪಿರೆ ಪುಟವನಿಕ್ಕಲು ಬಣ್ಣ ಹೆಚ್ಚುತ ಬಾಹುದು | ಬಿಟ್ಟುದೋರುದೆ 2 ಸ್ವಾತಿ ಜಲಬಿಂದುದುರೆ ಸಿಂಪಿನೊಳಿಂತು ಮೌಕ್ತಿಕವಾಹುದು | ಅಂತ ಘಲ್ಲಿಯೊಳಹದೆ ಜಗದೋಳು ತಾತ ಮಹಿಪತಿ ಕಂದ ಸಾರಿದ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಹೇಳಿದರೇನು ಹೀನ ಮನಕ | ತಾನು ಎಚ್ಚರ ಹಿಡಿಯ ದನಕಾ ಪ ಬೂದಿಯೊಳಗ ಹೋಮ ಮಾಡಿದಂತೆ | ಬೋಧಾನುಗೃಹ ಕಳವದು ಮರೆತಕೆ 1 ಹರಿ ಕೀರ್ತನೆ ಇರಲಿಲ್ಲಾ | ಬರಡು ಮಾತಿಗೆ ಸುಖ ಪಡುದಲ್ಲಾ 2 ಒಮ್ಮೆಯಾದರೂ ಹರಿ ಹರಿಯಂದು | ಝಮ್ಮೆನೆವೆ ಪಶ್ಚಾತಾಪ ಬಾರದೆಂದು 3 ಗಾಳಿಯಂತೆ ಓಡಾಡುವದು ನೋಡಿ | ಕಾಲೂರಿ ನಿಲ್ಲದು ಮತಿಗೇಡಿ 4 ತಂದೆ ಮಹಿಪತಿ ದಯವಾಗದನಕ | ಒಂದು ಹಿಡಿಯದು ಸ್ವಹಿತ ವಿವೇಕಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನುಂಟೇನಿಲ್ಲ ಗುರುಕೃಪೆಯಿಂದ ತನುಮನಿಟ್ಟದೇ ಪಡಕೊಂಬುದು ಚಂದ ಧ್ರುವ ಸುಖ ಸುರುತದೆ ನೋಡಿ ಬಲುಬ್ರಹ್ಮಾನಂದ ಪ್ರಕಟಸಲಿಕ್ಕೆ ಬಾರದು ಮುಖದಿಂದ ಸಕಲವೆಲ್ಲಕೆ ಮೇಲು ತಿಳಿಯಬೇಕಿದೊಂದೆ ಶುಕಾದಿ ಮುನಿಗಳದಾರಿದರಿಂದೆ 1 ಸಿದ್ಧ ಬುದ್ಧ್ದರಿಗೆ ಸಾದ್ಯವದೆ ಸಿದ್ಧ ನೋಡಿ ಬುದ್ಧಿವಂತರಿಗೆ ಒಲಿದುಬಾಹುದು ಕೈಗೂಡಿ ಸನ್ಮಾರ್ಗ ಸುಪಥವಿದೆ ಸದ್ಗುರು ಸೇವೆಮಾಡಿ ಸದ್ಭ್ಬಾವದಿಂದಲಿ ಸ್ವಸುಖವೆ ಸೂರ್ಯಾಡಿ 2 ಭಾಸ್ಕರ ಗುರುದಯದವಗಿನ್ನೇನು ಭಾಸುತೀಹ್ಯದಾವಗಿನ್ನು ನಿಜಕಾಮಧೇನು ವಿಶ್ವದೊಳಗವನೊಬ್ಬ ಸಿದ್ಧತಾನು ದಾಸಮಹಿಪತಿಗಿದೇ ಅಭಿನವಧೇನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನುಮಾಡಿದಿ ಬಂದು ಈ ನರದೇಹದಿ | ಜ್ಞಾನ ಸಾಧನ ಹೇಳು ಪ ಭವ | ಕಾನನವಿಡಿದೆಲ್ಲೋ ಅ.ಪ ಮಾನವ ಜನುಮದಿ | ನಿನ್ನ ತಂದನಲ್ಲೋ ಪ್ರಾಣೀ | ಪನ್ನಗಶಯನನ ಘನ್ನ ವಿಶ್ವಾಸದ | ಲಿನ್ನು ವಿರಹಿತಾದೆಲ್ಲೋ ಪ್ರಾಣಿ 1 ಕಂಡಪಥಕ ಹರಿದಂಡಲೆಯದೆನೆಲೆ | ಗೊಂಡವರೊಳು ಕೂಡೋ ಪ್ರಾಣಿ | ಖಂಡಿಸಿ ಸಂಶಯ ಪುಂಡರೀಕಾಕ್ಷನ | ಕೊಂಡಾಡುತ ಬಾಳೋ ಪ್ರಾಣಿ 2 ಹಿಂದಿನ ಮರವಿಗೆ ಇಂದಿಗೆ ನೀರೆರಿ | ಮುಂದ ಸ್ವಹಿತ ನೋಡೋ ಪ್ರಾಣಿ | ತಂದೆ ಮಹಿಪತಿ ನಂದನ ಪ್ರಭುದಯ | ದಿಂದ ಸಾರ್ಥಕ ಮಾಡೋ ಪ್ರಾಣಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನೂ ತೋಚದೋ ಮುಂದೇನು ಗತಿಯೋ ದೇವಾ ಅಪ್ರಮೇಯ ಸದಾ ಪ ನಾನು ನನ್ನದು ಎಂಬಭಿಮಾನದಿಂದನುದಿನ ಹೀನಕರ್ಮದ ಸುಳಿಯೊಳು ನಾ ನೊಂದು ನಿಂದೆನೊ ಅ.ಪ ಬೋಧೆ ಇಲ್ಲದೆ ನಾನು ಬಾಧೆಪಡುವೆ ಪೂರ್ಣ ಬೋಧರ ಮತತತ್ತ್ವ ಸಾಧಿಸಲಿಲ್ಲವೋ ಸಾಧುಸಜ್ಜನರೆಂದು ಆದರಿಸಲರಿಯೆನೋ ಆಧಾರನಾಗೋ ನಿರಾಧಾರನಾಗಿಹೆ ಬಾಧಿಪರೋ ಬಂಧುಗಳು ಪ್ರತಿದಿನ ನಿಂದಿಪರೋ ಮನಬಂದ ತೆರದಲಿ ಊರೊಳಿತರಜನ ಉದಯಾಸ್ತ ಪರಿಯಂತರದಿ ಎನಗೆ ಉದರದ ಯೋಚನೆ ಆದುದೀಪರಿ ಎನ್ನ ಜೀವನ ಇದಕೆ ಸಾಧನಮಾಡಿ ಮೋಹದ ಮುದದಿ ಮೈಮರೆದೆನನುದಿನ ಪದುಮನಾಭನೆ ಮೊರೆಯಿಡುವೆ ಮುಂದೇನು ಗತಿ ಪಥವಾವುದೋ ದೇವಾ 1 ಯುಕುತಿಯಿಂದಲಿ ಕರ್ಮಮಾಡಿ ಬೆಂಡಾದೆ ಭಕುತಿಮಾತ್ರವು ಏನ್ನೊಳಿನಿತಿಲ್ಲವೋ ಶಕುತಿಯುಕುತಿಗಳೊಳು ನೀನಿದ್ದು ನಡೆಸುವೆ ಭಕುತಿ ಕೊಡದಿರುವೆಯಾ ಮುಕುತರೊಡೆಯಾ ಮಾಕಳತ್ರನೆ ನಿನ್ನ ದಯವೊಂದನವರತ ಇರಲಿ ಅಕುಟಿಲಾಂತಃಕರಣ ಭಕ್ತರ ಸಂಗವೆನಗಿರಲಿ ನಿಖಿಲಗುಣಗಣಪೂರ್ಣ ನಿನ್ನಯ ಸ್ಮರಣೆಯೊಂದಿರಲಿ ಸಾಕು ಇದಕಾನೇನು ಮಾಡಲಿ ವಾಕುಮನಸಿಗೆ ಸಿ- ಲುಕದವ ನಿನ್ನ ಕಾಕುಮನುಜ ನಾನೆಂತು ತಿಳಿಯಲಿ ನೀ ಕರುಣಿಸದಲಿರೆ ಇನ್ನು ಅವಿ- ವೇಕಿ ನಾನಿನ್ನೆಂತುಗೈಯಲಿ 2 ನರಜನುಮದಿ ಬಂದು ಬರಿದೆ ಆಯುವ ಕಳೆದೆ ಹರಿಯೆ ನಿನ್ನಯ ಕರುಣ ದೊರೆಯಲಿಲ್ಲಾ ಕರೆಕರೆಪಡುತಲಿ ಜರೆಯೊಳಾಡುತಿಹೆ ದುರಿತ ಹರೇ ದಾರಿ ಎನಗೇನಿಹುದೋ ಇನ್ನು ಮುಂದೆ ಕ್ಲೇಶ ಕೊಡದಲೆ ಪಾರುಗಾಣಿಸೋ ತಂದೆ ಶರಣಜನರಿಗನವರತ ಸುರಧೇನು ನೀನೆಂದೇ ಅರಿಯದವ ನಾ ನೀ ಪೊರೆಯಲರಿದೇ ಕರುಣಾಶರಧಿಯೇ ನಿನ್ನ ಕೃಪೆಯೊಂದಿರಲು ಉರುತರ ಸಾಧನವು ಅದು ತರವರಿತು ಧೃಢಭಕ್ತಿ ಪಾಲಿಸೊ ಉರಗಗಿರಿ ಶ್ರೀ ವೇಂಕಟೇಶನೆ3
--------------
ಉರಗಾದ್ರಿವಾಸವಿಠಲದಾಸರು
ಏನೆ ನಾರಿ ಕನಸುತೋರಿ ಹಾರಿತಲ್ಲೆ ಪ ಫೋರ ಪಾತಕವ ಕೊಂದೂ ಒಳ್ಳೆ ತಾರೆಬೆಳಕಿನ ಚಂದಾ ಅ.ಪ ಇಂದಿರಾಪತಿ ತಾ ಮಂದಹಾಸದೊಳು ಕುಂದರದನೆಯ ಕೂಡಿ ನನ್ನ ನಿಂದೆ ತಂದ ಸರಿಮಾಡಿ ಕಳ್ಳ ಬಂದು ಪೋದ ಕರತಂದು ತೋರೆಮತ್ತೆ ನಿಂದು ಭಜನೆಯ ಮಾಡಿ 1 ಬಾರೊ ಧೀರ ಅಂದ್ರೆ ನೀರ ಆಟದೊಳು ತೋರಿ ಮಾಡಿದನು ಮೋಸಾ ಭವ ದೂರನಾದ ವೆಂಕಟೇಶಾ ರಂಗ ದಾರಿಕಾಣೆ ಕಂಡು ತೋರೋ ನಿನ್ನ ಪಾದ ಗುರುವು ತುಲಸಿ ರಾಮದಾಸ 2
--------------
ಚನ್ನಪಟ್ಟಣದ ಅಹೋಬಲದಾಸರು
ಏನೆಂದರಿಬೇಕೀ ಆಟಾ ಘನಗುರು ಮಾಡಿದ ಮಾಟ ಅನುಮಾನಳಿಸಿದ ನೋಟ ಅನುಭವಕಾಯಿತು ನೀಟ ಧ್ರುವ ರಂಜಕ ಬಲುಕೊಂಡಿತು ನೋಡಿ ಅಂಜಿಕಿ ಭವಭಯ ಈಡ್ಯಾಡಿ ಪ್ರಾಂಜಲ ಸದ್ಗುರು ದಯಮಾಡಿ ಅಂಜನ ಹಚ್ಚಿದ ದುವುಡಿ 1 ಕಾಣದ ಕಂಡೆವು ಕಣ್ಣಿಲಿ ಖೂನಕ ಬಾರದು ಘನಲೀಲೆ ಜಾಣರು ಬಲ್ಲರು ಮನದಲಿ ನೆನದರು ತಾಂ ವರಿಕಿಲೆ 2 ಆಶ್ವರ್ಯವು ತಾನಾಗ್ಯದೆ ನಿಶ್ಚಯದೋರುತಲ್ಯದೆ ಪಶ್ಚಿಮಕೆ ಭಾಸುತದೆ ಸ್ವಚ್ಛವು ನೋಡಿದರದೆ 3 ರಚ್ಚಿಗೆ ತಾಂ ಬಾಹುದೆಲ್ಲ ಮುಚ್ಚಿಟ್ಟಡೆÉ ಬಾಳು ಸವಿಬೆಲ್ಲ ಅಚ್ಚಳಿಯದ ಭಕ್ತನೆ ಬಲ್ಲ ನೆಚ್ಚಿದ ಮಹಿಪತಿ ಸೊಲ್ಲ4
--------------
ಕಾಖಂಡಕಿ ಶ್ರೀ ಮಹಿಪತಿರಾಯರು