ಒಟ್ಟು 1703 ಕಡೆಗಳಲ್ಲಿ , 109 ದಾಸರು , 1221 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾರ ಭಯವೇನಿಹುದು ಶ್ರೀವೇಂಕಟೇಶ ನೀನೆ ದಯವಾದ ಮೇಲ್ಯಾರ ಹಂಗೇನು ಪ ಪೊಡವಿಯಾಳುವ ದೊರೆಯು ಒಡವೆವೊಯ್ದರೆಯೇನು ಅಡವಿಯೊಳು ಮೃಗಬಂದು ತಡೆದರೇನು ತೊಡೆಯನೇರುವ ಮಗನ ಅಡವಿಗಟ್ಟಿದರೇನು ನೆಗಳು ಕಾಲ್ಪಿಡಿದರೇನು 1 ವ್ಯಾಳ ಬಹುರೋಷದಲಿ ಕಾಲು ಸುತ್ತಿದರೇನು ಕಾಳ ರಾಕ್ಷಸ ಕೈಯ ಪಿಡಿದರೇನು ಜ್ವಾಲೆ ನಾಲ್ದೆಸೆಯಿಂದ ಮೇಲೆ ಮುಸುಕಿದರೇನು ಹಗೆ ತನಗೆ ವಿಷವಿಕ್ಕಲೇನು 2 ಯಾಗಕೋಸುಗ ಮೃಗವ ಹೋಗಿ ತರುವೆನುಯೆಂದು ರಾಗದೊಳು ಬಲವಂತ ಕರೆಯಲಾಗಿ ಮೃಗ ಬಂದು ಬಾಗಿಲೊಳು ಕಾಲ್ಪಿಡಿಯೆ ಆಗ ಬಿಡಿಸಿದವರಾರು ನಾಗಗಿರಿವಾಸ 3 ಕಡುಗಲಿಯು ದ್ರೌಪದಿಯ ಉಡಿಮಡಿಯ ಸೆಳೆವಂದು ಒಡೆಯ ರಕ್ಷಿಸುಯೆಂದು ನಡುಗುತಿರಲು ಮಡದಿಗಕ್ಷಯವಿತ್ತು ನುಡಿದ ಭಾಷೆಯ ಸಲಿಸಿ ಕೊಡಲಿಲ್ಲವೆ ನೀನು ಒಡೆಯ ಗಿರಿವಾಸ 4 ಕೆಡೆನುಡಿದು ಬಾಲಕನ ಅಡವಿಗಟ್ಟಲು ಪಿತನು ಸಡಗರದ ಮಡದಿಯಳ ಮಾತ ಕೇಳಿ ಒಡೆಯ ನೀನೆಯೆಂದು ಕಡುತಪವನರ್ಚಿಸಲು ಉಡುಗಣಕೆ ಮೇಲಾದ ಪದವ ತೋರಿದೆಲಾ 5 ಮೃಗ ಜಲದ ಹೊಂಡದೊಳಗಾಡುತಿರೆ ಕಂಡು ಕಡು ರೋಷದಲಿ ಕಾಲ್ಪಿಡಿಯಲು ಪುಂಡರಿಕಾಕ್ಷನನು ಭಯಗೊಂಡು ಕರೆದರೆ ತುಂಡಿಸಿದೆ ಚಕ್ರದೊಳು ನೆಗಳ ಗಂಟಲನು 6 ಒಬ್ಬನೆ ಪಥದೊಳಗೆ ಸರ್ಬಬಲನೈದುತಿರೆ ಹೆಬ್ಬಾವು ಆತನನು ಮೈಸುತ್ತಲು ಗರ್ಭದೊಳು ನಡುನಡುಗಿ ಉಬ್ಬಸವ ಬಿಡುತಿರಲು ಎಬ್ಬಿಸಿದರಾರಲ್ಲಿ ನಿರ್ಭಯವ ತೋರಿ 7 ದುರುಳ ದೈತ್ಯನು ತನ್ನ ಕುವರನನು ಕೊಲುವುತಿರೆ ಭರದಿಂದ ಕಂಬದೊಳು ಹೊರಟು ಬಂದು ನರಹರಿಯ ರೂಪದಲಿ ಕರುಳ ಮಾಲೆಯ ಧರಿಸಿ ತರಳನನು ಕಾಯಿದವರಾರು ಶ್ರೀಹರಿಯೆ 8 ಉರಿಯ ಮನೆಯಂದರಿಯದರಸರೈವರ ಹೊಗಲು ಇರಿಸಿರ್ದ ಬಾಗಿಲೊಳು ಉರಿ ಮುಸುಕಲು ಬೆರಸಿರ್ದ ನಿದ್ರೆಯೊಳು ಇರಿಸಿ ಕಾಯಿದವರಾರು ಕರೆಸಿ ದ್ರೌಪದಿಯನ್ನು ಕೊಡಿಸಿದವರಾರು 9 ಚಂದ್ರಹಾಸನು ವಿಷವ ತಿಂದು ಸಾಯಲಿಯೆಂದು ತಂದೆ ಬರೆದಿಹ ಲಿಖಿತ ನಂದನನು ನೋಡಿ ಮಂದಗಮನೆಯ ಕೊಟ್ಟು ಚಂದ್ರಹಾಸನ ನಿಲಿಸಾ ನಂದಳಿದ ಮಾಯವೇನೆಂದು ಹೇಳಯ್ಯ 10 ಕಾಯ ಭಯ ಹೊರತಾಗಿ ಮೀರಿದಾಪತ್ತಿನಲಿ ಕಡೆ ಸೇರಿಸೊ ಭೂರಮಣ ವರಾಹತಿಮ್ಮಪ್ಪ ಚರಣವನು ಕುಲಿಶ ನೀನಾಗು 11
--------------
ವರಹತಿಮ್ಮಪ್ಪ
ಯಾರಿಗುಸರಲೇನು ದುರಿತಾರಿ ನೀನೆ ರಕ್ಷಿಸು ಕಂ- ಸಾರಿ ನೀನೆ ರಕ್ಷಿಸು ಮುರಾರಿ ನೀನೆ ರಕ್ಷಿಸು ಪ. ಭಾರಿ ಭಾರಿ ನಿನ್ನ ಪದವ ಸೇರಿದವರ ಕಾಯ್ದ ದೊರೆಯೆ ಅ.ಪ. ಪತಿಗಳೈವರಿದಿರೆ ಪತಿವ್ರತೆಯ ಖಳನು ಸೆಳೆಯೆ ಲಕ್ಷ್ಮೀ- ಪತಿಯೆ ನೀನೆ ಕಾಯ್ದೆಯಲ್ಲದೆ ಗತಿಯದಾರು ತೋರ್ದರಯ್ಯ 1 ಪಿತನ ತೊಡೆಯೊಳಿದ್ದ ಸುತನ ಸತಿಯು ಕಾಲಿನಿಂದೊದೆಯೆ ಖತಿಯೊಳೈದಿ ಭಜಿಸೆ ಅತಿಶಯದ ವರವನಿತ್ತೆ 2 ದನುಜ ಕೋಪದಿಂದ ತನ್ನ ತನುಜನನ್ನು ಬಾಧೆಗೊಳಿಸೆ ಮನುಜ ಸಿಂಹನಾಗಿ ಭಕ್ತಗನುಪಮಾದ ಹರುಷವಿತ್ತೆ 3 ಮಕರ ಬಾಧೆಯಿಂದ ಕರಿಯು ಸಕಲಕರ್ತನೆನುತಲೊದರೆ ಅಖಿಳ ದೈವಂಗಳಿರಲು ಬಕವಿರೋಧಿ ನೀನೆ ಪೊರೆದೆ 4 ಕೂರ್ಮ ಕ್ರೋಢ ಸಿಂಹ ಬ್ರಾಹ್ಮಣೇಂದ್ರ ರಾಮಕೃಷ್ಣ ಬುದ್ಧ ಕಲ್ಕಿ ದಾನವಾರಿ ಸಲಹೊ ಎನ್ನ 5 ಸರ್ವಲೋಕ ಜನಕ ನಿನ್ನ ಸರ್ವಕಾಲದಲ್ಲಿ ನೆನೆವೆ ವಿನುತ ಸರ್ವಸೌಖ್ಯ ನೀಡು ಹರಿಯೆ 6 ಕಂಜಜೇಶ ಪನ್ನಗೇಶ ನಿರ್ಜರೇಶ ಮುಖ್ಯ ದಾಸವರದ ಶೇಷ ಭೂಧರೇಶ ಎನ್ನ ಸಲಹೊ ಬೇಗ 7
--------------
ತುಪಾಕಿ ವೆಂಕಟರಮಣಾಚಾರ್ಯ
ಯಾರಿರಬಹುದೀತ ಗೆಳತೀ ಯಾರಿರಬಹುದೀತ ಪ ಯಾರೆಂದರಿಯದೆ ಪೋಗದೆ ಕೊರತೆ ಯಾರಿರಬಹುದೀತ ಅ.ಪ ಸಾವಿರ ಸಂಖ್ಯೆಯ ಗೋವಳರಿದ್ದರೂ ಯಾವನಿಗೀ ವಿಧ ಠೀವಿಯಿರುವುದೇ ಹಾವಭಾವಗಳ ನೋಡಲು ಈತನ ಗೋವಳ ವೇಷವದಾವ ಕಾರಣವೋ 1 ನಮಗೇತಕೆ ಈತನ ಗೋಜೆಂದರು ಕಮನೀಯನ ನೋಡುತ ನೋಡುತ ಬಲು ಮಮತೆಯು ಮನದಲಿ ಏರುತಲಿರುವುದು ಕಮಲನಯನೆ ನಾ ನಮಿಸುವೆ ಪೇಳೆ 2 ಸರಳನೋ ದುರುಳನೋ ಅರಿಯುವುದೆಂತೇ ಕರೆಯದೆ ಹೋದರೆ ಜರಿಯಲುಬಹುದೇ ಮುರಳಿಯ ನಾದದ ಕರೆ ಬಂದರೆ ನಾ ಬರವೆನೆಂದರು ಹೇ ಸರಸ ಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು
ಯಾರೇನು ಮಾಡುವರೋ ಹರಿಯೇ ಯಾರಿಂದಲೇನಹುದು ಪ ವಾರಿಜಾಂಬಕ ಮಾರಜನಕ ಕೌಸ್ತುಭ ವಕ್ಷ ಶ್ರೀಶಾ ಅ.ಪ. ಅಜ ಈ ಜಗ ಸೃಜಿಸಿದನೆ ಶ್ರೀದೇವಿಯು ನಿಜಗುಣ ನೆಲೆಗಂಡಳೆ ಭುಜಗಭೂಷಣ ಆಯಕರ್ತನಾದರೆ ಭಜಕನಾ ಬಯಕೆ ಬಾಯಬಿಡುವದೆ 1 ಸುರಪ ಸುರರೊಡೆಯನೆ ಧರಣಿ ಈ ಉರಗೇಂದ್ರ ಪೊತ್ತಿದನೆ ದುರುಳನ ಭಯಕೆ ಪುರವ ಬಿಟ್ಟೋಡಿದ ಧರಣಿಯ ದುರುಳನೊಯ್ಯೆ ವರಾಹರೂಪದಿ ತಂದೆ ನೀ ತಂದೆ ಹರಿಯೇ 2 ಶ್ರೀಪತಿ ಸುರತತಿಯ ಸೃಜಿಸಿ ಈಪ್ಸಿತಾರ್ಥಗಳನೆಲ್ಲಾ ಅವರಿಗೆ ಸ್ವಾಪ್ನಜಾಗೃತಿಯಲಿ ಪರಿಪಾಲಿಸೆ ಮಹಾನಿಧಿವಿಠಲ ನೀನಲ್ಲದಿನ್ಯಾರೋ 3
--------------
ಮಹಾನಿಥಿವಿಠಲ
ಯಾವ ದಾರಿಯೆನಗೇ ಮುರಾರಿಯಿ- ನ್ನಾವ ಗತಿಯು ತನಗೇ | ದೇವರ ದೇವನೆ ನೀ ವಂಚಿಸಿದರೆ | ಕಾವರೊಬ್ಬರನು ಕಾಣೆ ನಾ ದಿಟವಿದು ಪ ವಾಸುಕಿಶಯನನೆ 1 ಮೋಕ್ಷವಿತ್ತೆನ್ನನು | ರಕ್ಷಿಸದಿರ್ದಡೆ 2 ಕಂದನ ಸಲಹೆನ್ನ | ತಂದೆ ಸದಾನಂದ 3
--------------
ಸದಾನಂದರು
ಯೆಂದು ಪಿಡಿಯುವಿ ಕೈಯ್ಯ ಇಂದಿರೇಶ ಚಲುವ ಕೃಷ್ಣನೆ ಪ ಮುಂದೆ ಹೋಗಲು ಬಂಧಮಾಡುತ ಕುಂದು ಅಳಿಯುತ ತಂದೆ ದಯೆತೊರಿ ಅ.ಪ ಮಂದ ನಾನಯ್ಯ ಕಂದಿ ಕುಂದಿದೆ ಭವದಿ ಕೇಳಯ್ಯ ಬಂಧು ಬಳಗವು ಯಾರು ಇಲ್ಲಯ್ಯ ನಿಂದು ಮುಂದಿನ ದಾರಿ ನಡೆಸಯ್ಯ ಜೀಯಾ ಅಂದು ಸಭೆಯೊಳು ಮಂದಗಮನೆಯ ಒಂದು ನೊಡದೆ ಬಂದು ಸಲಹಿದ ಸಿಂಧು ಶಯನಾನಂದ ಮೂರುತಿ ನಂದನಂದನ ಶ್ಯಾಮಸುಂದರ ಬಂಧು ಸರ್ವರ ಬಂಧಮೋಚಕ ಮಂದರಾದ್ರಿ ಧರನೆ ಯದುಕುಲ ಚಂದ್ರ ಶೋಭಾಸಾಂದ್ರ ಕೃಷ್ಣನೆ ಬಂದು ಚಂದದಿ ಸಲಹಿ ಎನ್ನನು 1 ಬಾಲತನದಲ್ಲಿ ಲೀಲೆಗೋಷ್ಠಿಲಿ ಮೆರೆದೆ ನಾನಲ್ಲಿ ಮೇಲೆ ಯೌವನ ಒಡನೆ ಬಂತಲ್ಲಿ ಲಲನೆ ಕೇಳಿಲಿ ಮುಳುಗಿ ಹೋದೆನು ಅಲ್ಲಿ ಮೆಲ್ಲಮೆಲ್ಲನೆ ಮುಪ್ಪು ಬಂತಲ್ಲಿ ಕಾಲಕಳೆದೆನು ಪಗಡೆ ಜೂಜಿನಲಿ ಮಲ್ಲಮರ್ದನ ಮಾತುಲಾಂತಕ ಚಲ್ವಸೂಕರ ಪುಲ್ಲಲೊಚನ ಪುಲ್ಲನಾಭನೆನಲ್ಲ ಸರ್ವರ ಬಿಂಬರೂಪನೆ ಎಲ್ಲ ಕಾಲದಿ ಎಲ್ಲಮಾಡುತ ನಿಲ್ಲದೆಜಗ ಸಾರ ಶ್ರೀ ನಲ್ಲ ನಿನ್ನಯ ಎಲ್ಲ ಬಲ್ಲವರಿಲ್ಲ ಎಲ್ಲಿಯೂ ಬುದ್ಧ ಕಲ್ಕಿಯೆ ಸೊಲ್ಲು ಲಾಲಿಸಿ ಒಲಿದು ಬಂದ ನಾರಸಿಂಹನೆ ಇಲ್ಲ ಸಮರು ಅಧಿಕರೈಯ್ಯ ಪೂರ್ಣದೇವನೆ2 ಮೂರು ತಾಪವ ಹರಿಪ ಬಗೆಯೇನೋ ವೈರಿ ಆರರ ಭರದಿ ತರಿ ನೀನೂ ಮೂರು ಋಣಗಳು ಉಳಿಯೆಗತಿಯೇನು ಮೂರು ಕರ್ಮದಿ ಬಿಡಿಸಿ ಹೊರೆಯನ್ನು ಭಕ್ತಸುರಧೇನು ಸಾರಸಜ್ಜನ ಪ್ರಾಪ್ಯ ಶುಭಗುಣ ಸಾರ ಕರುಣಾ ಪೂರ್ಣವಾರಿಧಿ ಮಾರಜನಕನೇ ಋಷಭಮಹಿದಾಸ ತೋರು ಜ್ಞಾನವ ಬಾದರಾಯಣ ಮೀರಲಾರೆನು ವಿಷಯವಾಸನೆ ಭಾರತೀಶನ ಒಡೆಯ ಕೃಷ್ಣನೆ ಭಾರ ನಿನ್ನದು ಎನ್ನ ಪೊರೆವದು ಮತ್ಸ್ಯ ವಾಮನ ಧೀರ ಧೃವನಾ ಪೊರೆದ ವರದನೆ ಬೀರಿ ಭಕ್ತಿ ಜ್ಞಾನ ವೈರಾಗ್ಯ 3 ಎನ್ನ ಯೋಗ್ಯತೆ ನೋಡಿ ಫಲವೇನು ನಿನ್ನ ಘನತೆ ತೋರಿ ಪೊರೆ ನೀನು ನಿನ್ನ ದಾಸನ ಮಾಡು ಎನ್ನನ್ನು ಅನ್ಯಹಾದಿಯ ಕಾಣೆ ನಾ ನಿನ್ನು ಬೆನ್ನು ಬಿದ್ದೆನು ಇನ್ನೂಮುನ್ನೂ ಮಾಧವ ವಿಶ್ವ ತೈಜಸ ಪ್ರಾಜ್ಞತುರಿಯ ಹಂಸ ವಿಷ್ಣುವೇ ಜ್ಞಾನ ಭೋಧಕ ಸನತ್ಕುಮಾರನೇ ಮೌನಿ ದತ್ತಾತ್ರೇಯ ಹಯಮುಖ ದೀನವತ್ಸಲ ಯಜ್ಞ ಧನ್ವಂತ್ರಿ ಶ್ರೀನಿವಾಸ ರಾಮ ಕಪಿಲನೆ ಜ್ಞಾನ ನಿಧಿ ಮುನಿ ನಾರಾಯಣನೆ ನೀನೆ ಅನಿರುದ್ಧಾದಿ ರೂಪನು ಧ್ಯಾನಗೊಚರ ಶಿಂಶುಮಾರನೆ ಸಾನುಕೂಲದಿ ನೀನೆ ವಲಿಯುತ ಕರ್ಮ ಸಂಚಯ4 ಆದಪೊದ ಮಾತು ಏಕ್ಕಯ್ಯ ಮಧ್ವರಾಯರ ಪ್ರೀಯ ಶೃತಿಗೇಯ ಮೋದದಾಯಕ ಮುಂದೆ ಸಲಹೈಯ್ಯ ಪಾದಪದ್ಮದಿ ಶರಣು ಅಲ್ಲದೆ ಏನು ಮಾಡಲಿ ಜೀಯ ಅಯ್ಯ ತಿದ್ದಿ ಮನವನು ಕದ್ದು ಅಘವನು ಒದ್ದು ಲಿಂಗವ ಶುದ್ಧಜ್ಞಾನದ ಸಾಧು ಜಯಮುನಿ ವಾಯುವಂತರ ಮಾಧವ ಶ್ರೀ ಕೃಷ್ಣವಿಠಲನೆ ಪಾದ ಮಧುಪರ ವೃಂದ ಮಧ್ಯದಿ ವೇದ ಸಮ್ಮತ ಗಾನ ಸುಧೆಯನು ಶುದ್ಧಭಕ್ತಿ ಜ್ಞಾನದೊಡಗೂಡಿ ಮೆದ್ದು ಪಾಡುತ ಕುಣಿವ ಭಾಗ್ಯವ ಮುದ್ದು ಕೃಷ್ಣನೆ ನೀನೆ ಎನಗಿತ್ತು 5
--------------
ಕೃಷ್ಣವಿಠಲದಾಸರು
ಯೇನು ನೆಲೆ ಯೆನುತಿಹೆ ಮನುಜಾ ನಿ ಧಾನಿಸು ಗತಿಯಚ್ಯುತನಲ್ಲದುಂಟೇ ಪ ಹುಲ್ಲುಹನಿಯು ಗಾಳಿಗಿಟ್ಟ ಸೊಡರು ನೀರ ಗುಳ್ಳೆಗಳದು ತಾ ಸ್ಥಿರವೆನಿಪಾ ಜಳ್ಳು ಜವ್ವನವ ನಿಶ್ಚಯವೆಂದು ಕಾಲನ ಭಲ್ಲೆಯಕೆದೆಯನೊಡ್ಡುವೆಯಾತಕೆ ನೀ 1 ಮಿಂಚಿನ ಬಲೆಯ ರಕ್ಷೆಯ ಮನ ಸುದತಿಯಾ ಚಂಚಲತೆಯ ಜೀವರ ಗೆಲಿದೂ ಪ್ರ ಪಂಚಿನ ಸಿರಿಯ ನಿಶ್ಚಯವೆಂದು ಬಗೆದು ನೀ ಮುಂಚುವೆಯೇಕೆ ನರಕಪತಿ ಕರೆಗೇ 2 ಸುರಚಾಪವೋಲೀ ದೇಹದ ಸಂ ಗರದಿ ಸೋಲುವ ಶರೀರವ ನಂಬೀ ನರಕಕೂಪಕ್ಕಿಳಿಯದೇ ವೇಲಾಪುರ ದರಸ ವೈಕುಂಠ [ಕೇಶವ] ಶರಣೆನ್ನೇ 3
--------------
ಬೇಲೂರು ವೈಕುಂಠದಾಸರು
ಯೋಗಿ ವೇಷ ನೀಚನಾಯಿ ನಿನಗ್ಯಾತಕೆ ತತ್ವ ಭಾಷಾ ಹುಚ್ಚನಾಯಿ ನಿನಗೇತಕೆ ವಸ್ತ್ರ ಕಾಷಾ ಮುರುಕುನಾಯಿ ನಿನಗೇತಕೆ ಗುರುಪಾದವಾಸ ಹೊಲಸ ಪ ಕೊರಳಿಗೆ ಕಪನಿ ತೊಟ್ಟು ಜಪಸರವನೆ ಮುಂಗೈಯಲಿಟ್ಟು ತತ್ವಬರಿನುಡಿ ಸಾಲು ಸಾಲಿಟ್ಟು ಕಾಲಕೆರವನೆ ಇವನ ಬಾಯೊಳಗೆ ವಷಟ್ಟು ಭ್ರಷ್ಟಾ1 ನೀರೊಳಗೆ ನೆರಳನೆ ನೋಡಿ ಹಣೆಗೆಗೀರುವೆ ಗಂಧವ ತೀಡಿ ಪೋರಪೋರರ ಜೋಡನೆ ಕೂಡಿ ನಿನ್ನಮೋರೆಯ ಮೇಲೆ ಹುಯ್ಯಬೇಕು ಕಸ ಪುಡಿಕೆ ಕಡುಗ 2 ಅತ್ತ ಸಂಸಾರ ಕೆಟ್ಟುಮತ್ತಿತ್ತ ಗುರುಪಾದವ ಬಿಟ್ಟು ನೀನತ್ತತ್ತ ಉಭಯ ಭ್ರಷ್ಟಾ ನಿನಗೆಸತ್ತಿಹರು ಅರಮನೆಯ ಗೌಡೆಯರೆಷ್ಟು ಜಾಣ3 ಕಂಡ ಕಂಡಲ್ಲಿಯೇ ಉಂಡುದೊಡ್ಡ ಹೊಟ್ಟೆಯ ಬೆಳೆಸಿಕೊಂಡುಬಾಡದಂಡೆಯ ಮನೆಗಂಟಿಕೊಂಡು ನಿನ್ನಮಂಡೆಯ ಹೊಡಿಬೇಕು ಪಾಪಾರಿಕೊಂಡು ಹೊಲೆಯ 4 ಇಂದು ಕೆಟ್ಟಾ5
--------------
ಚಿದಾನಂದ ಅವಧೂತರು
ಯೋಗಿ ಭಾವ್ಯ ಪದ್ಮಮುಖದಿವ್ಯ ಲಕ್ಷಣಾಂಚಿತ ಪದಯುಗಳ 1ಚಂದ್ರ ಕುಲಾವತಂಸ ದ'ುತ ಕಂಸಪರಮಹಂಸ ಚಿದಾವರ್ಣ'ತೇಂದ್ರಮುಖ್ಯ 'ಹಗೇಂದ್ರ ವಾಹನೋಪೇಂದ್ರಕಾಳಿಯೋರಗ ಮದಹರಣ 2ಕಂಜದಳನಿಭಾಕ್ಷ ಸುಜನರಕ್ಷದನುಜಶಿಕ್ಷಾ ಪ್ರ'ೀಣ ಧನಂಜಯಾರ್ತಿಹರಮಂಜುಭಾಷಣ ನಿರಂಜನಾಗಣಿತನಿರುಪಮಲೀಲಾ 3ನಂದಕ ಪ್ರಹರಣ ಭೂರಿಕರಣಾವಾಲ್ಯಶರಣಾ ಗತಾವನನಂದನಂದನ ಸನಂದನಾದಿ ಮುನಿ ಬೃಂದವಂದ್ಯ ಸಕಲಜನ ಶರಣ್ಯಾ 4ದಂತಿರಾಜವರದಾ ರಾತ್ರಿ ಚರದಾವಾಗ್ನಿ ಶರದವ್ರಜಶ್ರೀಕಾಂತ ಮೌನಿಘನ ಚಿಂತನೀಯವೇದಾಂತವೇದ್ಯಕೋಸಲಪುರ ನಿಲಯಾ 5
--------------
ತಿಮ್ಮಪ್ಪದಾಸರು
ರಕ್ಷಮಾಂ ರಂಗೇಶ ಪ ರಕ್ಷಮಾಂ ರಂಗೇಶ ರವಿಕೋಟಿಸಂಕಾಶಪಕ್ಷಿವಾಹನ ಶ್ರೀಶ ಭವ್ಯಗುಣಕೋಶಅಕ್ಷರಾದಿ ಪಿಪೀಲಿಕಾಂತ ಸಂ-ರಕ್ಷಕಾಮಯಹರಣ ಸರ್ವಲಕ್ಷಣ ಪರಿಪೂರ್ಣ ಪರಮೇಶ ದಕ್ಷಿಣಾಧೀಶ ಅ.ಪ. ಕಮಲದಳ ನೇತ್ರ ಕಮಲಾರಿ ಸಮವಕ್ತ್ರಕಮಲಾವಿರಚಿತ ಸ್ತೋತ್ರ ಕರಧೃತ ಗೋತ್ರಕಮಲಜ ನುತಿಪಾತ್ರ ಕರಿರಾಜಯಾತ್ರಕಮಲಧರ ಕರಕಮಲ ಸಮಪದಕಮಲ ಸಂನಿಭವಿನುತ ಕಂಧರಕಮಲ ಸಂನಿಭ ಸುಗಾತ್ರ-ಕಮಲಾಕಳತ್ರ 1 ಅನಿಮಿಷ ಸುಪ್ರೀತಾಖಿಳ ದೋಷ ನಿರ್ಧೂತಸನಕಾದಿ ಶೃತಿಗೀತ ಅರ್ಜುನಸೂತದಿನಮಣಿಕುಲಜಾತ ದೇವಕೀ ಪೋತಕನಕವಸನ ಕೀರೀಟಧರ ಕೋ-ಕನದ ಹಿತ ಕಮಲಾಪ್ತ ನಯನವನದವಾಹನವೈರಿಕುಲಘಾತ ವನಜಭವ ತಾತ2 ಅಂಗನಾಂಬರಹರಣಾನುಪಮ ಸಪ್ತಾವರಣಮಂಗಳ ಕರಚರಣ ಭಕ್ತ ಸಂರಕ್ಷಣಗಾಂಗೇಯಕೃತಸ್ಮರಣ ಕರುಣಾಭರಣರಂಗವಿಠಲ ಭುಜಂಗಶಯನ ತು-ರಂಗಧರ ಕಾವೇರಿ ತೀರ ಶ್ರೀ-ರಂಗನಿಲಯ ತುರಂಗ ಸಂಚರಣ-ಗಂಗಾಚರಣ3
--------------
ಶ್ರೀಪಾದರಾಜರು
ರಕ್ಷಿಸೋಯನ್ನ ರಕ್ಷಿಸೋ ರಕ್ಷಿಸೋ ಬೇಗ ಉಪೇಕ್ಷಿಸದಲೆ ಜಲ ಜಾಕ್ಷ ಯನ್ನ ಮೊರೆ ಪಕ್ಷಿವಾಹನ ದೊರೆ ಪ ವಾರಿಧಿ ಮತ್ಸ್ಯಾವತಾರದಿ ಧರಿಸಿ ಪೊಕ್ಕು ಘೋರದೈತ್ಯನ ಕೊಂದು ಇನ್ನು ಚಾರು ಚರಿತ ವಿಸ್ತಾರ ಶೃತಿಗಳನು ವಾರಿಜಾಸನಗಿತ್ತ ವರದ ಜಗನ್ನಾಥ 1 ವರಕೂರ್ಮನಾಗಿ ಮಂದರಗಿರಿ ಪೊತ್ತು ನಿರ್ಜರರಿಗೆ ಸುಧೆಯನುಣಿಸಿ ಹರುಷದಲಿ ಕರುಣಿಸೋಯಂದರೆ ಕಠಿಣತ್ವ ವಹಿಸುವರೇ ಪರಮ ಪುರುಷ ನೀನು ಭಜಕರ ಕಾಮಧೇನು 2 ಧರೆಯ ಕದ್ದು ಒಯ್ದವನ ಕೋಪದಿ ಘನತರ ಕೋರೆಯಲಿ ಸೆಳದೆ ದನುಜಹರ ವರಾಹನಾದ ಶ್ರೀ ವತ್ಸಲಾಂಛನ ದೇವ ಶರಣಜನ ಮಂದಾರ ಶರನಿಧಿ ಗಂಭೀರ 3 ಗರುಡಗಮನ ಶ್ರೀ ಹರಿ ಸರ್ವೋತ್ತಮನೆಂಬ ತರುಳನ ತಂದೆಯ ತಾಮಸದಿ ಪರಿಪರಿಹಿಂಸೆಯ ಪಡಿಸುತಿರಲು ನರಹರಿ ರೂಪತೋರಿ ಪ್ರಹ್ಲಾದಗೊಲಿದ ಧೊರೆ 4 ಬಲಿಯದಾನವು ಬೇಡಿ ಬ್ರಹ್ಮಾಂಡ ಭಾಂಡವು ಅಳೆದು ಮೂರು ಪಾದದೊಳಗೆ ಮಾಡಿ ತುಳಿದವನ ಪಾತಾಳಕಿಳಿಯಲು ವಾಮನ ಬಲಭೇದಿ ಸನ್ನತ ಪಾಲಿಸೋ ಪ್ರಖ್ಯಾತ 5 ಪರಶುರಾಮ ಬಾಹು ಬಲದಿ ಸಕಲ ರಾಜರನೆಲ್ಲ ಗೆದ್ದು ಸುಸ್ಥಿರ ಮೂರ್ತಿ ಧುರದಿಂದ ಭೂಮಿ ಭೂಸುರರಿಗೇ ಧಾರೆಯ ನೆರೆದ ಶ್ರೀಮದನಂತ ನಿರತದಿ ಭಗವಂತ 6 ಅನಿಮಿಷರೊಡೆಯ ಶರಣು ಶರಣೆನುತ ರಾವಣನನು ಜನು ವಿಭೀಷಣನು ಬರಲು ಘನದಿ ಪಂಕ್ತಿ ಕಂಧರನ ಜಯಿಸಿ ಲಂ- ಇನಕುಲ ಪಾವನ 7 ಬಲದು:ಶಾಸನ ಸೀರಿಸೆಳಿಯೇ ದ್ರೌಪದಿ ಮನದಲಿ ಕಾಮಿತಾರ್ಥ ಫಲದಾಯಕ ಮಾನವ ರಕ್ಷಿಸೆಂದು ಸ್ತುತಿಸಲು ಪೊರೆದೆ ಹಲಧರಾನುಜ ಮುದದಿ 8 ಅಂಗಜ ಪಿತ ತ್ರಿಪುರಾಂಗನೆಯರ ವ್ರತ ಭಂಗಮಾಡಿದೆ ಹಿಂಗದಲೇ ಮಂಗಳಮಹಿಮ ಕೃಪಾಂಗ ಗಂಗೆಯನು ಪಾದ 9 ಚಲುವ ಕುದುರೆಯನೇರಿ ಕಲ್ಕಿಕಯ್ಯೊಳು ಖಂಡೆಯ ಪಿಡಿದು ಝಳಪಿಸುತ ಕಲುಷಾತ್ಮರೆಲ್ಲರ ಖಂಡಿಸಿ ಧರ್ಮವು ಪರಿಪಾಲನೆಮಾಳ್ಪ ಶ್ರೀ ಭೂದುರ್ಗಾಧಿಪಾ 10 ಪಾವನಚರಿತ ಕೃಪಾವನ ರಾಶಿ ಶ್ರೀ ದೇವಕೀಸುತ `ಹೆನ್ನೆಪುರೀಶ’ ದೀನ ದೇವೋತ್ತಮ ದೀನ ಬಾಂಧವ ವೃಂದಾವನ ನಿಲಯಾನಂದ ಸುಂದರಕಾಯಾ 11
--------------
ಹೆನ್ನೆರಂಗದಾಸರು
ರಂಗ ಬಂದಾ ನಮ್ಮ ಭಂಗಿಸಿ ಕಾಳಿಯ ಫಣಿಯಲಿಂದು ಪ ವಿಷಧರನುರಿಯಿಂದ ನಿಸಿದಿನಿ ಕುದಿಯುತಿಹ | ವಿಷಮಡುವನೆ ಪೊಕ್ಕು ಕುಶಲದಿಂದಲಿ ರಂಗ ಬಂದಾ 1 ಉರಗೇಂದ್ರ ಬಂದನದಿ ಶರೀರ ಬೆಳಿಸಿ ತನ್ನ | ಬಿರಿವಂತವನತನು ಹರಿಸಿ ಮದವಾ2 ನೂರೊಂದು ಹೆಡೆಗಳ ಚರಣದಲೊತ್ತಿ ತುಳಿದು | ಸುರರಾ ಗೀತದಿ ನೃತ್ಯ ಚರಿತವ ದೋರಿ 3 ಸತಿಯರ ಮೊರೆಕೇಳಿ ಪತಿದಾನವನೆ ಕೊಟ್ಟು | ಕ್ಷಿತಿಯೊಳು ಗೋಕುಲದುನ್ನತ ಭಾಗ್ಯದಲಿ 4 ತಂದೆ ಮಹಿಪತಿ ನಂದನ ಪ್ರಭು ಸ್ವಾ | ನಂದವ ಸುರನರ ವೃಂದಕ ಬೀರಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ರಂಗಬಾರನ್ಯಾತಕೆ ಸಖಿಯೆ ಮುದ್ದು ಪ ಶರಧಿಯ ಪೊಕ್ಕನೇನೆ ಸುರರೆಲ್ಲರು ಕೂಡಿ ಗಿರಿಯ ಬೆನ್ನಾಲಿ ಅವರು ಪೊರಿಸಿದರೇನೆ 1 ಧರೆಯನೆತ್ತಲು ಪೋಗಿ ನರಹರಿಯಾದನೇನೇ ಗರುವರಹಿತ ಬ್ರಹ್ಮಚಾರಿಯಾದನೇನು 2 ಪರಶುಪಿಡಿದು ಕ್ಷತ್ರಿಯರ ಸವರುವೆನೆಂದು ಗಿರಿವನಗಳಲಿ ತಾನು ಚರಿಸುತಲಿಹನೇನೇ 3 ಸ್ಮರನ ಪಿತನು ತಾನು ನಾರಿ ಪಾಂಚಾಲೆಯ ಮೊರೆಯ ಕೇಳುತ ಭರದಿ ಸಾರಿದನೇನೆ 4 ಮಾನವ ತಾ ಸೂರೆಗೊಳ್ಳಲು ತೇಜಿ ಏರಿ ಪೋದನೇನೆ ಶ್ರೀ ರಂಗೇಶವಿಠಲ 5
--------------
ರಂಗೇಶವಿಠಲದಾಸರು
ರಂಗಯ್ಯ ರಂಗ ಬಾರೋ ಬರುತೀಯ ನಮ್ಮನಿಗೆ ಬಾರೋ ಪ ಬಂದರೆ ಬುಗುರೀ ಚಂಡುಗಳನೆ ಕೊಟ್ಟು ಬಗೆ ಬಗೆ ಆಟವÀ ಕಲಿಸಿ ವಲಿಸುವೇ1 ಬಂದರೆ ರಸಾ ರಸಾಯನಗಳನುಣಿಸೀ ಮುಸುಕಿನೊಳಗೆ ಬಚ್ಚಿಟ್ಟುಕೊಂಬೆನು ಬಾರೊ 2 ಬಂದರೆ ಶ್ರೀದವಿಠ್ಠಲ ನಿನಗೇ ಸುಂದರೆ ಸವಿಮಾತಾ ಹೇಳುªರೊಂದು 3
--------------
ಶ್ರೀದವಿಠಲರು
ರಂಗವೊಲಿದ ದಾಸರಾಯ | ಸತ್ಕವಿಜನಗೇಯ ಪ ಮಂಗಳಕರ ಕುಲಿಶಾಂಗ ಮತಾಂಬುಧಿ ಮಾನವ ಸಿಂಗಾರ್ಯರ ಸುತ ಅ.ಪ ಶರಣು ಮಂದಾರ ಪರಮೋದಾರ ಪರಿಪಾಲಿಸು ಧೀರ ಮಣಿ ಸುಹಾರ ಶೋಭಿತ ಕಂಧರ ಸಾರ ಸು ರಸಗ್ರಂಥ ಕೃತ ಕರುಣಾನಿಧೆ ಗುರು 1 ಜ್ಞಾನಿಕುಲನಾಥ ಭಾನುಜಸೂತ ಭವವಾರಿಧಿ ಪೋತ ಕ್ಷೋಣಿ ಸುರವ್ರಾತ ನಮಿತ ಸುಖ್ಯಾತ ವರದಾನಿ ಪುನೀತ | ಧೇನುಪಾಲ ದಾಸಾರ್ಯರ ಪದಯುಗ ಧ್ಯಾನಿತ ಮಾನಿತ ಮಾನವಿ ನಿಲಯ 2 ದುರಿತ ವಿದೂರ ಸನ್ಮಹಿಮಾಪಾರ ಪಾಮರ ಹೇಮಶಯ್ಯ ಕುಮಾರ ಕುಮತಾಬ್ಧಿ ಸಮೀರ ಕೋಮಲಾಂಗ ಮಮಸ್ವಾಮಿ ಸೋಮನುತ ಶಾಮಸುಂದರ ಸುಧಾಮ ಪ್ರೇಮ ಸಖ 3
--------------
ಶಾಮಸುಂದರ ವಿಠಲ