ಒಟ್ಟು 13659 ಕಡೆಗಳಲ್ಲಿ , 138 ದಾಸರು , 6755 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉಪಕಾರವ ನೋಡೋ ಮಾಡಿದ ಪ ಕೃಪೆ ಬೇಡುವುದತಿಶಯವೇ ಪೇಳೊ ಅ.ಪ ಪಾಲಕ ನೀ ಹದಿನಾಲ್ಕು ಜಗಂಗಳಿಗೆ ಮೂಲೆಯ ಗ್ರಾಮದಲಡಗಿ ಬೇಸರದಿ ಕಾಲಕಳೆಯುವುದ ನೋಡಿ ಮರುಕದಲಿ ಬಾಲ ಮೂರುತಿಯ ಜಗಕೆ ತೋರಿಸಿದ 1 ಅಡಕು ಮಣೆಗಳಲಿ ಪೂಜೆಯಗೊಳ್ಳುತ ಒಡಕು ತೊಗರಿ ಹುಳಿಯನ್ನವ ಮೆಲ್ಲುತ ಬಡತನದಲಿ ಜೀವನ ಕಳೆಯುತಿರೆ ಪೊಡವೀಶನ ಭೋಗಗಳನು ಉಣಿಸಿದ 2 ಮಣಿ ಮಂದಿರ ವಿಧ ವಿಧ ಅಂದದ ಮುತ್ತಿನ ಹಾರ ಪದಕಗಳು ತಂದೆ ಪ್ರಸನ್ನನೇ ಸಾಸಿರ ಸಾಸಿರ ಮಂದಿಗಳಿಗೆ ವೈಭವಗಳ ತೋರಿದ 3
--------------
ವಿದ್ಯಾಪ್ರಸನ್ನತೀರ್ಥರು
ಉಪಕಾರವೇನಾ ಹೇಳಲಿ | ಮಾಯಾದೇವಿಯಾ || ಅಪರ ಮಾತನ ರೂಪಕೆ ಮರೆಯಾಗಿ | ಅನುದಿನ ಜನರಿಗೆ | ಅಪರಾಧ ದಾರಿಗೆ ದೂರವಿಟ್ಟಳು ಪ ಸೂರಿಯ ನಾರಾಯಣೆಂಬರು | ಶರಣೆಂದು ಬಾಗರು ತಲೆಯನು ಒಬ್ಬರು || ಪರಿ | ಧರೆಯೊಳುದಾಸೀನ ಮಾಡುವರೈಯಾ1 ಅಗ್ನಿದೇವರ ಮುಖವೆಂದು | ಸುಜ್ಞಾನಿಗಳಿದು ಹೇಳುತಲಿಹಲು || ಅಜ್ಞಾನಿಗಳು ಅಲ್ಲೆ ಕಾಲವ ಕಾಸುತ | ವಜ್ಞೆಯ ಮಾಡುವ ಉಗುಳುತಿಹರು2 ಎಂದೆಂದು ನಿಲುಕದ ಚಿದ್ರೂಪ ಘನವಾದ | ತಂದೆ ಮಹೀಪತಿ ನಂದನ ಪ್ರಾಣನ || ಛಂದದಿ ಭಕ್ತಿಯ ಮಾರ್ಗದಿ ನಡೆಸುತ | ಇಂದೆನ್ನ ಹರಿಮೆಚ್ಚು ಮಾಡಿದಳೈಯ್ಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಉಪಟಳ ಬಿಡಿಸುವರೇ ಇಂಥಾ ಪರತಳ ಭೋಜನವೆಂದಿಗೂ ಮಾಡಬಾರ್ದು ಪ ಇಲಿಗಂಜಿ ನಿಜಗೃಹ ತ್ಯಜಿಸುವರೆ ತನ್ನ ಸಲಹೊ ದೇವನು ಬೆಂಬಲನಾಗಿಹನು 1 ಭವಕಂಜಿ ಭುವನವ ತೊಲಗುವರೆ ಲಕ್ಷ್ಮೀ ಧವನನ ಭಜಿಸುತ ಬಾಳ್ವೆಯ ಮಾಡುವದು 2 ಹರಿಗಂಜಿ ಶರಣರು ಓಡುವರೆ ಇಂಥಾ ನರಸಿಂಹವಿಠಲನೆಂದಿಗು ಬಿಡಬÁರದು 3
--------------
ನರಸಿಂಹವಿಠಲರು
ಉಪಾಧಿ ಬೇಡಆತ್ಮನೆಂಬುದೇ ಕಾಂಬುದು ನಿಮ್ಮ ಮಹಾತ್ಮರಾದವರು ಪ ಕುಂಭಗಳು ಇರುತಲಿರೆ ಅಂಬರದ ಚಂದ್ರನುಕುಂಭಗಳೊಳಗೆ ಹಲವಾಗಿ ಬಿಂಬಿಸುವ ತೆರದಿಅಂಬುಜಾಸನ ಮೊದಲು ಜೀವ ಕಂಬದೊಳು ದೃಷ್ಟಿಯಿಟ್ಟು ಇಂಬಾಗಿ ಇರುವನೊಬ್ಬ ಚೇತನಾತ್ಮಕನು1 ಕನ್ನಡಿ ಪಳುಕಿನ ಗೃಹದಿ ಸನ್ನಿಧಿಯಲೊಂದು ದೀಪವಿಡೆಕನ್ನಡಿಯೊಳಗೆ ದೀಪ ಹಲವಾದ ತೆರದಿಉನ್ನತ ಜೀವರಾಶಿಯ ತನ್ನ ಛಾಯೆ ಹೊಳೆ ಹೊಳೆದುತನ್ನ ತಾನೇ ಇರುವನೊಬ್ಬ ಚೇತನಾತ್ಮಕನು2 ಒಬ್ಬನಾ ಕಾಂತಿಯಿಂ ಹಬ್ಬಿಕೊಂಡಿದೆ ಲೋಕಒಬ್ಬನೆಂದೇ ತಿಳಿದಡೆ ತಾನೊಬ್ಬನೇ ಇಹನೀಹರನುಒಬ್ಬನನೊಯ್ದು ನೀವು ಹಾಗಿಬ್ಬರ ಮಾಡಲಾಗದುಒಬ್ಬನೇ ಚಿದಾನಂದನು ಚೇತನಾತ್ಮಕನು3
--------------
ಚಿದಾನಂದ ಅವಧೂತರು
ಉಪೇಂದ್ರ ಹರಿ ವಿಠಲ ಕೃಪೆಯಲಿಂದಲಿ ಇವನಕಾಪಾಡ ಬೇಕೆಂದು ಪ್ರಾರ್ಥಿಸುವೆ ಹರಿಯೇ ಅ.ಪ. ಹರಿಗುರೂ ಭಕ್ತಿಯುತ | ತರಳ ನಿರುವನು ಹರಿಯೆಸುರರಾಜ ಭೋಗಗಳ | ಕರುಣಿಸುತ ಇವಗೇ |ಒರೆದು ತತ್ವ ಜ್ಞಾನ | ಮರಳಿ ಭಕ್ತ್ಯಭಿವೃದ್ಧಿಕರುಣಿಸುತ ಕಾಪಾಡೊ | ಕರಿವರದ ಹರಿಯೆ 1 ವಿಯದಧಿಪ ಸುತನಿಗೆ | ಭಯವ ಪರಿಹರಗೈದುದಯದಿಂದ ಪೊರೆದಂತೆ | ಕಾಯಬೇಕೋಹಯವೇರಿ ಇಂದ್ರಿಯದ | ಜಯಸೂಚಿ ಸ್ವಪ್ನದಲಿಭಯಕೃತೂ ಭಯನಾಶ | ಅಭಯನೀಯೋ2 ಪಿತೃ ಮಾತೃ ಸೇವೆಯಲಿ | ರತನನ್ನ ಮಾಡುತಲಿಹಿತ ಆಹಿತ ವೆರಡನ್ನು | ಸಮತೆಯಲಿ ಉಂಬಾಮತಿಯನ್ನೆ ಕರುಣಿಸುತ | ಕೃತಕಾರ್ಯನೆಂದೆನಿಸಿಸತತ ತವ ಸಂಸ್ಕøತಿಯ | ಇತ್ತು ಪೊರೆ ಇವನಾ 3 ಕಾಕು ಪಾದ | ಪಂಕಜವ ತೋರೋ 4 ಪಾವಮಾನಿಯ ಪ್ರೀಯ | ಶ್ರೀವರನೆ ಈಶಿಯವಕೋವಿದನ ಗೈಯ್ಯತ್ತ | ಭುವಿಯೊಳಗೆ ಮೆರೆಸೋಗೋವಿದಾಂಪತಿಯೆ ಗುರು | ಗೋವಿಂದ ವಿಠ್ಠಲನೆನೀ ವೊಲಿಯದಿನ್ನಾರು | ಕಾವರನು ಕಾಣೇ 5
--------------
ಗುರುಗೋವಿಂದವಿಠಲರು
ಉಪ್ಪವಡಿಸಯ್ಯ ಉಡುಪಿನ ಕೃಷ್ಣ ಚೆಲ್ವಕಂ-ದÀರ್ಪನಪ್ಪನೆ ಕಣ್ದೆರೆ ಪ. ಸರ್ಪನಂಗದಲಿ ರುಕ್ಮಿಣಿ ಸತ್ಯಭಾಮೆಯರಅಪ್ಪಿಕೊಂಡಿಪ್ಪ ಬಲು ಸುಪ್ರಸಿದ್ಧಅಪ್ರತಿಮ ಗುಣಗಣಾಂಬುಧಿ ಕರುಣಾನಿಧಿಯೆಸುಪ್ರೇಮದಿಂದ ನೋಡಾ ದೇವ 1 ದೇಹಿಗಳ ನಿದ್ರೆಯನು ತಿಳುಹಿಸುವರಾರು ನಿ-ರ್ವಾಹಕನು ನೀನು ನಿದ್ರೆಯ ಕೈಕೊಳೆಆಹುತಿಗಳನುವಾದ ಅನಲಮುಖದಲಿ ನಿನಗೆಶ್ರೀಹರಿಯೆ ದುರಿತಾರಿಯೆ ದೇವ 2 ನಿದ್ರೆಯಂ ತೊರೆದು ಸಿದ್ಧಾಸನದಿ ಕುಳ್ಳಿರ್ದುಸಿದ್ಧರೆಲ್ಲರು ತಮ್ಮ ಹೃದಯಕಮಲಸದ್ಮವನು ಬೆಳಗಿ ನಿನ್ನನೆ ಅರಸುತೈದಾರೆಮುದ್ದುಮೊಗವನು ತೋರಿಸಾ ದೇವ 3 ತುಂಬಿ ಕರೆಯಕಳುಹಿದ ನಿನ್ನಮನೆಯ ಬಾಗಿಲೊಳರಸುತ್ತ ದೇವ 4 ಕಮಲಕೊಬ್ಬಿತು ಸೂರ್ಯನತಿ ಪೆರ್ಮೆಯಂ ಪೊತ್ತಕ್ರಮದಿಂದ ನಿನ್ನ ಪೂರ್ವಜಸೋಮನೊಭ್ರಮೆಗೊಂಡವನ ಪರಿವಾರಕಾಯಿತು ಸೋಲುಸುಮುಖಚಂದ್ರನೆ ಬೆಳಗಿಸಾ ದೇವ 5 ಅಮಲಜಲದಲ್ಲಿ ಮಜ್ಜನವ ಮಾಡುವೆನೆಂದುಕ್ರಮದಿಂದ ತೀರ್ಥಗಳು ಕರೆದು ನಿನ್ನ ರಮಣೀಯ ಮೂರುತಿಯ ಮನದಲ್ಲಿ ನಿಲಿಸುವಶ್ರಮವ ಸಾರ್ಥಕ ಮಾಡೊ ದೇವ 6 ಅತಿಶೀತ ಹರುಷದಿಂ ಪುಳಕ ಶೋಭಿತರಾಗಿಪ್ರತಿಕ್ಷಣದಿ ನಿನ್ನನೇ ನೆನೆದು ನೆನೆದುವ್ರತದಿಂದ ಪೇಳುವ ಶ್ರುತಿ ಪುರಾಣದೊಳಿಪ್ಪಸ್ತುತಿಯನಾಲೈಸಿ ಕೇಳಾ ದೇವ 7 ತನುವ ರಂಜಿಸಿ ಶಂಖ ಚಕ್ರೋಧ್ರ್ವಪುಂಡÀ್ರದಿಂಪ್ರಣಮಮಂ ಪೇಳಿ ಮಂತ್ರಿತ ವಾರಿಯಘನ ಮಹಿಮ ನಿನ್ನ ಹಸ್ತದಲಿ ತರ್ಪಣ ಮಾಡಲನುವಾದರಯ್ಯ ಬುಧರು 8 ಎನಲುಪ್ಪವಡಿಸಿ ಶ್ರೀಕೃಷ್ಣ ಹಯವದನ ತಂ-ಪಿನ ನಾಗಭೋಗ ವಿಸ್ತರದಿ ಕುಳಿತುವನಜಸಂಭವಸಹಿತ ವಿಬುಧರೊಡ್ಡೋಲಗದಿಮುನಿಗಳರ್ಚಿಸಿ ಮೆಚ್ಚಿಸೆ ದೇವ9
--------------
ವಾದಿರಾಜ
ಉಪ್ಪವಡಿಸಯ್ಯ ತ್ರಿವಿಕ್ರಮ ನಿನ್ನ ಪುರದೊಳಗೆ ಇಪ್ಪ ಮುಕುತರಿಗೆ ಸಲ್ಲದು ನಿದ್ರೆ ನಿನಗಿಲ್ಲ ಕಲ್ಪಾಂತದಲಿ ನಿತ್ಯವಾದ ವೇದವ ನೆನೆವ ಸುಪ್ರಭಾವನಿಗೇಕೆ ಹೀನಮನುಜರ ಸಾಮ್ಯ ಪ. ಹರಿನಾಲ್ಕು ಮನ್ವಂತ್ರಗಳನು ಹಗಲನು ಮಾಳ್ಪ ವಿಧಿ ನಿನ್ನ ಕುವರನೆ ನಿದ್ರೆಗೊಪ್ಪದೆ ಬಂದ ಇದು ಸರ್ವಸೊಪನ ಅನಿಮಿಷರೆಂಬ ಬಿರುದಿನವ ರಿದಕೆ ಕೋಪಿಸಿ ಬಂದರು ವಿಧಿ ತನ್ನ ಹಗಲ ನಡೆಸುತ ನಿನಗೆ ಈ ತೆರನ ಮದನಪಿತ ತಾಳದೆ ಇಳೆಗೆ ನಡೆತಂದ ಸದುಬುಧರು ತಮ್ಮ ವಿಷಯವ ನೆನೆವ ಜಂತುಗಳು ಇದು ತಾಳೆವೆನುತ ಬಾಗಿಲೊಳು ಬಂದೈದಾರೆ 1 ನಿದ್ರೆಗೈವರ ಹೃದಯದಲ್ಲಿ ಭೂಭೂಯೆಂಬ ಎದ್ದು ಬಹ ಶ್ವಾಸದಭಿಮಾನಿ ಮುಖ್ಯಪ್ರಾಣ ಕ್ಷುದ್ರಗತಿ ತನ್ನಾಳ್ದಗಿದು ಪುಸಿಯೆನುತ ಬಂದ ಮಧ್ವಸದ್ಭಾಷ್ಯಕಾರ ಹೊದ್ದಿ ಕರಗಳ ಮುಗಿದು ಜೀವರಿಗು ನಿನಗು ಪ್ರ- ಬುದ್ಧಜನೆನುತ ಬಂದ ವೇದಾಂತದೇವಿಯರು ನಿರ್ದೋಷ ನೀನೆತ್ತ ನಿದ್ರೆಯೆತ್ತೆನುತ ಪಾದ- ಪದ್ಮಗಳ ಪಿಡಿದು ಪಾಡುವ ಸಾಮಗಳ ಸವಿದು 2 ಅಪ್ರಾಕೃತನೆ ನಿನಗೆ ಈ ಪ್ರಕೃತಿಗುಣಗಳಿಂ- ದಿಪ್ಪ ಯುಕ್ತಿಗಳ ಸುಪ್ತಿಗಳು ಸಲ್ಲವು ದೇವ ಅಪ್ರಬುದ್ಧರ ಮುಂದೆ ಆಡುವಾಟಗಳು ಈ ಸುಪ್ರಬುದ್ಧರ ಸಭೆಯಲಿ ಸರ್ಪತÀಲ್ಪನೆ ತೋರಿದಯ್ಯ ಸಾಕೈನಟನೆ ಸುಪ್ರಭಾತವು ಬಂತು ಹಯವದನ ದಿನದಿನದಿ ತಪ್ಪದೆ ಮಾಡುವಘ್ರ್ಯದಿ ಸತ್ಕರ್ಮಗಳ ಒಪ್ಪುಗೊಳು ಅಪ್ರತಿಮಮಹಿಮ ತ್ರಿವಿಕ್ರಮರಾಯ 3
--------------
ವಾದಿರಾಜ
ಉಂಬುವ ಬನ್ನಿರೋ ನೀಟ ಅನುಭವದೂಟ ಧ್ರುವ ಎಡಿಯು ಬಡಿಸಿಪೂರ್ಣ ಗೂಡಿನೊಳಿಟ್ಟಿದೆ ಖೂನ ನೋಡಿ ನಿಮ್ಮೊಳು ನಿಧಾನ ಮಾಡಿ ಭೋಜನ 1 ತುತ್ತುಕೊಂಬುದು ಬ್ಯಾಗೆ ಸತ್ಸಂಗದಲಿ ನೀವೀಗ ಅತಿಶಯಾನಂದ ಭೋಗ ಉತ್ತಮ ಯೋಗ 2 ಕಲ್ಪನೆಂಬುದು ನೊಣ ಬೀಳಗೊಡದೆ ಜತನ ಬಳೆದುಕೊಂಡುಂಬುವ ಜಾಣ ಕಳೆದನುಮಾನ 3 ಸವಿಸವಿಮಾಡಿಕೊಂಡು ಸೇವಿಸುವದು ಮನಗಂಡು ಪಾವನಾಗಬೇಕು ಉಂಡು ಸವಿಸೂರೆಗೊಂಡು 4 ಉಂಡು ಮಹಿಪತಿ ನೋಡಿ ಕೊಂಡಾದಿಡಾನಂದಗೂಡಿ ಮಂಡಲದೊಳಿದೇ ಮಾಡಿ ಬಿಡದೆ ಸೂರ್ಯಾಡಿ5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಉಮಾ ಹಿಮಗಿರಿ ಸಮಸ್ತ ಸಮಾನ ಸುಗುಣವಂದ್ಯೆ ಪ ಕಮಲಾಕ್ಷನÀ ಭಗಿನಿಯೆನ್ನಮಲನ ಮಾಡಿ ವಿಮ¯ ಮನಸು ಶಮದಮಗಳ ನೀಡಮ್ಮ ಅ.ಪ. ತ್ರಿಪುರ ಸುಂದರಿ ನಿನ್ನ ಅಪಾರ ರೂಪಕೆ ತ್ರಿಪುರಾರಿ ಮರುಳಾದನಮ್ಮ ಶಫರಾಕ್ಷಿ ಕೇಳೆನ್ನ ಬಿನ್ನಪವನು ಮನ ಚಪಲಾಕೆರಗದಂತೆ ಕೃಪೆ ಮಾಡಬೇಕಮ್ಮ 1 ಜಪವ ನಾನರಿಯೆನು ತಪವ ನಾನರಿಯೆನು ಎ ನ್ನಪರ ಬುದ್ಧಿಯ ಬಿಡಿಸಮ್ಮ ಕೃಪಣ ವತ್ಸಲೆ ಎನ್ನ ಕುಪಥಾವ ತಪ್ಪಿಸಿ ಅಪವರ್ಗ ಸೇರುವ ಸುಪಥವ ತೋರಮ್ಮ 2 ಅಪ್ಪ ರಂಗೇಶವಿಠಲ ಒಪ್ಪುವ ರೀತಿಲಿ ತಪ್ಪದೆ ಮತಿ ಪ್ರೇರಿಸಮ್ಮ ತಪ್ಪು ಒಪ್ಪುಗಳೆಲ್ಲ ಸರ್ಪಶಯನಗೆಅರ್ಪಿಸಿ ಎನ್ನ ನಿರ್ಲಿಪ್ತನ ಮಾಡಿಸಮ್ಮ 3
--------------
ರಂಗೇಶವಿಠಲದಾಸರು
ಉಯ್ಯಾಲೆ ಉತ್ಸವಗೀತೆ ಜೊ ಜೊ ಜೊ ಜೊ ಶ್ರೀರಂಗನಾಥ ಜೊ ಜೊ ರಂಗನಾಯಕಿರಮಣನೆ ಭೂಮಿಕಾಂತ ಪ. ಮಂಟಪವನು ಶೃಂಗರಿಸಿದರಂದು ಎಂಟುದಿಕ್ಕಿಗೆ ಪುಷ್ಪಗಳಲಂಕರಿಸಿ ವೈ ಕುಂಠವಾಸನ ಉಯ್ಯಾಲೆಮಂಟಪವನ್ನು ಭಂಟರು ಬಂದು ಶೃಂಗಾರ ಮಾಡಿದರು 1 ಆಶ್ವೀಜ ಮಾಸದ ಶುಕ್ಲಪಕ್ಷದಲ್ಲಿ ಆ ತುಲಾ ಮಾಸದ ಆರುದಿವಸದಲ್ಲಿ ವಾರಿಜಮುಖಿಯರ ಒಡಗೊಂಡು ರಂಗ ವೈ ಯ್ಯಾರದಿಂದಲೆ ಬಂದನು ಮಂಟಪಕೆ 2 ಮತ್ತೆ ಮರುದಿನದೊಳಗಚ್ಚುತನಂತ ಕುತ್ತನಿಅಂಗಿ ಕುಲಾವಿ ಧರಿಸಿ ರತ್ನದ ಪಾನುಪಟ್ಟಿಯು ಅರಳೆಲೆ ಕಟ್ಟಿ ಭಕ್ತವತ್ಸಲನಾಡಿದನುಯ್ಯಾಲೆ 3 ಮೂರುದಿವಸದಲಿ ಮುರವೈರಿ ತಾನು ಭಾರಿ ವಜ್ರದ ಮಕರಕಂಠಿಯಾ ಧರಿಸಿ ನೀರಜನೇತ್ರನು ನಿಗಮಗೋಚರನು ವೈ ಯ್ಯಾರದಿಂದಲಿ ಆಡಿದನುಯ್ಯಾಲೆ 4 ನಾಲ್ಕು ದಿವಸದಲಿ ನಂದನಕಂದ ನವ ರತ್ನದ ಮಕರಕಂಠಿಯಧರಿಸಿ ಧರಿಸಿ ನಾಗಶಯನನಾಡಿದನುಯ್ಯಾಲೆ 5 ಐದು ದಿವಸದಲಿ ಅಕ್ರೂರವರದಗೆ ಕರಿ ದಾದ ಕುಲಾವಿ ಕಲ್ಕಿಯ ತುರಾಯಿ ಗಂಡಭೇರುಂಡಪಕ್ಷಿಯ ಪದಕವನಿಟ್ಟು ಪುಂಡರಿಕಾಕ್ಪನಾಡಿದನುಯ್ಯಾಲೆ 6 ಆರು ದಿವಸದಲಿ ಅಂಗಜನಯ್ಯಗೆ ಕೂರೆ ಕುಲಾವಿ ವೈಯಾರದಿಂಧರಿಸಿ ಹಾರ ಮಾಣಿಕ ರತ್ನ ಸರಗಳಳವಡಿಸಿ ನೀರಜನೇತ್ರನಾಡಿದನುಯ್ಯಾಲೆ 7 ಸಪ್ತದಿವಸದಲಿ ರತ್ನ ಮೌಳಿಯ ಧರಿಸಿ ಹಸ್ತದಿ ರತ್ನಹಾರ ಗಂಧವಿರಿಸಿ ಅರ್ತಿಯಿಂದಲೆ ತನ್ನ ಮಿತ್ರರು ಸಹಿತಲೆ ಬತ್ತವಳಿಸಿ ಬಂದ ಭಕ್ತವತ್ಸಲನು 8 ಓರೆಗೊಂಡೆಯ ವೈಯಾರದಿಂ ಧರಿಸಿ ನಾರಿಯರೆಡಬಲದಲಿ ಕುಳ್ಳಿರಿಸಿ ವಾರಿಜನೇತ್ರನು ನಡುವೆ ಕುಳ್ಳಿರಲು ವಾರಾಂಗನೆಯರೆಲ್ಲ ಪಾಡುತಿರಲು 9 ಅಷ್ಟಮ ದಿವಸದಿ ಅರ್ತಿಯಿಂದಲೆ ಕೃಷ್ಣಮೂರುತಿಗೆ ರಾಜಮುಡಿಯನು ಧರಿಸಿ ಹಿಂದಿನ ತೋಳಿಗೆ ಬಂದಿ ತಾಯಿತನಿಟ್ಟು ಇಂದಿರೆ ರಮಣನಾಡಿದನುಯ್ಯಾಲೆ 10 ಎಡಬಲದಲಿ ಭಕ್ತರು ನಿಂತಿರಲು ಪಿಡಿದು ಚಾಮರ ವ್ಯಜನವ ಬೀಸುತಿರಲು ಬೆಡಗಿನಿಮ್ಮ[ಡಕೆ]ಲೆ ಕರ್ಪೂರದ ಗುಳಿಗೆಯ ಎ ನ್ನೊಡೆಯಗೆ ಭಕ್ತರು ಪಿಡಿದು ನಿಂದಿರಲು 11 ದಾಸರಿಸಂದವು ಧಗಧಗನುರಿಯೆ ಸಹ ಸ್ರ ಸೂರ್ಯನಂತೆ ಪದಕಗಳೊಳೆಯೆ ಲೇಸಾದ ರತ್ನದ ಪಾದುಕೆಯನು ಧರಿಸಿ ವಾಸುದೇವನು ಆಡಿದನುಯ್ಯಾಲೆ 12 ಇಂದಿರೆ ರಮಣ ಒಂಭತ್ತು ದಿನದೊಳು ಚಂದ್ರ ಪುಷ್ಕರಣೀಲಿ ತೀರ್ಥವನ್ನಿತ್ತು ಬಂದು ಮಜ್ಜನವನ್ನು ಮಾಡಿ ವೆಂಕಟರಂಗ ಇಂದಿರೆಸಹಿತಲೆ ನಿಂದ ಹರುಷದಲಿ 13
--------------
ಯದುಗಿರಿಯಮ್ಮ
ಉರಮಂದಿರೆಯ ಇಂದಿರೆಯೆ ಪರಿಪಾಲಿಸನುದಿನ ಪ ನಿತ್ಯಪ್ರಕೃತಿಯ ಕೃತ್ಯನಡೆಸಿ ನಿರ್ಲಿಪ್ತಳಾಗಿಹೆ ನಿತ್ಯಮುಕ್ತಳೆ 1 ಮೊಕ್ಷದನ ಗುಣ ಈಕ್ಷಿಪಳೆ ಜಗರಕ್ಷಕಳೆ ಕಮಲಾಕ್ಷನಾ ಪ್ರಿಯೆ 2 ಭರದಿ ಕರವೀರಪುರದಿ ನಿಂದೆ ಉರಗಗಿರಿ ಶ್ರೀ ವೆಂಕಟೇಶನ ಪರಮಪ್ರೀಯೆ ನಿತ್ಯಾವಿಯೋಗಿನಿ ಪದುಮಸರೋನಿವಾಸಿನಿ 3 ಮುಕ್ತನಾಥಗೆ ಪ್ರೀಯೆ-ನೀ ಅವ್ಯಕ್ತತತ್ವಾಭಿಮಾನಿಯೇ | ವ್ಯಕ್ತಗೊಳಿಸೆನ್ನ ಚಿತ್ತದಲಿ ವೇದೋಕ್ತನ ನೀ ನಿತ್ಯದಲ್ಲಿ 4 ಪುರುಷಸೂಕ್ತಸುಮೇಯ ಶ್ರೀ ಉರಗಾದ್ರಿವಾಸವಿಠಲನ ಹರುಷದಲಿ ನಲಿದಾಡಿ ಸುಖಿಸುವ 5
--------------
ಉರಗಾದ್ರಿವಾಸವಿಠಲದಾಸರು
ಉರುಟಣೆ ಪದ ಜಯ ಜಯ ರಾಮ ಜಯಜಯ ಜಯ ನಮ್ಮ ಜಾನಕೀ ರಮಣಗೇ ಪ ಇಂದಿರಾದೇವಿ ರಮಣಿ ಶರಣ್ಯಮಂದರ ಗಿರಿಧರ ಶರಣ್ಯಕಂದನ ನುಡಿ ಕೇಳಿ ಕಂಬದಿಂದಲಿ ಬಂದಸಿಂಧು ಶಯನ ಸಲಹುವಾದೆನ್ನ 1 ಗುರು ವಿಜಯದಾಸರ ಚರಣಾಸರಸಿರುಹವ ಮನದೊಳಾಗಿರಿಸಿಹರಿ ಸರ್ವೋತ್ತಮ ಮಂಗಳ ಚರಿತೆಯವಿರಚಿಸುವೆನು ಸುಜನರು ಕೇಳಿ 2 ಮುತ್ತೈದೆರೆಲ್ಲಾ ಬೇಗಾದಿ ಬಂದುಅರ್ತಿಯಿಂದಲಿ ಶೃಂಗಾರವಾಗಿಚಿತ್ತಜನಯ್ಯನ ಉರುಟಣೆ ಎನುತಾಲಿಮತ್ತ ಗಮನೇರು ಬಂದರಾಗಾ 3 ಸರಸ್ವತಿ ಭಾರತಿ ಮೊದಲಾದಸರಸಿಜ ಮುಖಿಯರೆಲ್ಲಾರು ನೆರೆದುಸರಸ ಉರುಟಣಿಯ ಮೊಡಬೇಕೆನುತಾಲಿಕರೆಸಿದರಾಗ ಮುತ್ತೈದೆರಾಗ 4 ಹೇಮಮಯದ ಮಂಟಪದೊಳಗೆಪ್ರೇಮದಿಂದಲಿ ಹಾಸಿಕೆ ಹಾಕಿಸೋಮವದನನ ಗುಣವ ಕೊಂಡಾಡುತಕಾಮಿನಿಯರು ಕರೆದಾರು ಹಸೆಗೇ 5 ಕೌಸಲ್ಯಾದೇವಿ ತನಯಾನೆ ಕೇಳುಹರ್ಷದಾಯಕ ರಕ್ಷಕನೇಳುಹಂಸವಾಹನನಯ್ಯನೆ ಹಸೆಗೆ ಏಳೇಳೆಂದುಹಂಸಗಮನೆಯರು ಕರೆದರು ಹಸೆಗೆ 6 ನಿಗಮವ ತಂದಾ ಮಚ್ಚ್ಯಾನೇಳುನಗವ ಬೆನ್ನಿಲಿ ಪೊತ್ತ ಕೂರ್ಮನೇಳುಜಗವನುದ್ಧರಿಸಿದ ವರಹ ಮೂರುತಿ ಏಳುಮೃಗ ನರ ರೂಪ ಹರಿಗೇಳೆಂದಾರು 7 ಸುರನದಿಯ ಪಡೆದ ವಾಮನನೇಳುಪರಶುರಾಮ ಮೂರುತಿ ಏಳುಶರಧಿಯ ದಾಟಿ ಸೀತೆಯ ತಂದಶಿರಿ ರಾಮಕೃಷ್ಣ ಹಸೆಗೇಳೆಂದರು 8 ವ್ರತವನಳಿದ ಬೌದ್ಧನೇಳುಅತಿಬಲ ರಾಹುತನೇಳುಪೃಥಿವಿಗೊಡೆಯ ರಾಮನೇಳೆಂದುಅತಿ ಚಮತ್ಕಾರದಿ ಕರೆದರಾಗ 9 ಇಂತು ಬಗೆಯಾಲಿ ತುತಿಸಿ ಕರೆಯೇಕಂತುಜನಕನು ಹರುಷದಾಲೆದ್ದುಕಾಂತೆ ಕೈ ಪಿಡಿದು ನಡೆ ತರಲಾಗಲುನಿಂತಾರು ನಾರಿಯರೆಲ್ಲರಾಗ 10 ಎತ್ತಿಕೊಂಬುವದು ರಾಘವ ನಿಮ್ಮಪತ್ನಿಯ ನಡೆಸಲಾಗದು ಕೇಳಿನೀ ಪೃಥ್ವೀಶನಾದರೆ ನಮಗೇನೆನುತಾಲಿಸುತ್ತು ಕಟ್ಟಿದರು ವಾಮಾಕ್ಷಿಯರು 11 ಮಂಗಳಾಂಗಿಯನು ಎತ್ತಿಕೊಂಡು ರಾಮಹಿಂಗಾದೆ ದ್ವಾರದಲ್ಲಿಗೆ ಬರಲುಮಂಗಳದೇವಿಯ ಹೆಸರು ಹೇಳೆನುತಾಲಿಅಂಗನೆಯರು ಅಡ್ಡಗಟ್ಟಿದರಾಗಾ 12 ನಾಳೆ ಹೇಳುವೆನು ಇವಳ ಹೆಸರುತಾಳಲಾರೆನು ಭಾರವು ಎನಲುಶ್ರೀ ಲಕ್ಷ್ಮೀದೇವಿಯ ಹೆಸರು ಹೇಳಿದೆ ಬಿಡೆವೆಂದುಬಾಲೆಯರೆಲ್ಲಾರು ಇಟ್ಟರು ಕದವಾ 13 ಪುತ್ಥಳಿ ಗೊಂಬೆ ಹೆಸರು ಹೇಳೆನೆ ರಘು-ನಾಥಾನು ಎಂದಾಳು ಜಾನಕೀ 14 ಅಂಗಜನಯ್ಯಾ ಸತಿಯು ಸೀತೆಯ ಸಹಿತರಂಗು ಮಾಣಿಕದ ಹಾಸಿಕೆಯ ಮೇಲೆಶೃಂಗಾರದಿಂದಾಲಿ ಬಂದು ಕುಳ್ಳಿರಲಾಗಸುರರೆಲ್ಲಾ ಹಿಗ್ಗಿ ಕರೆದರು ಪೂ ಮಳೆಯಾ 15 ಸಾಸಿರ ನಾಮದ ಒಡೆಯ ಬಂದಾಶೇಷಶಯನಾ ಮೂರುತಿ ಬಂದಾಭಾಸುರಾಂಗನೆ ಸೀತೆ ಆಳಿದಾ ರವಿಕುಲಾ-ಧೀಶ ಬಂದಾನು ಎಂದಾರು ಕೇಳೆ 16 ವಾನರಾಧೀಶನೊಡೆಯಾ ಬಂದಾದಾನವಾಂತಕ ರಾಘವ ಬಂದಾ ಶ್ರೀ-ಜಾನಕೀದೇವಿ ಪ್ರಾಣದೊಲ್ಲಭ ಜಗ-ತ್ರಾಣ ಬಂದಾನು ಎಂದಾರು ಕೇಳೆ 17 ಸತ್ಯ ಸಂಕಲ್ಪ ಶ್ರೀ ಹರಿಯು ಬಂದಾಭೃತ್ಯ ಪಾಲಕ ದೊರೆಯು ಬಂದಾಮಿತ್ರೆ ಜಾನಕಿದೇವಿ ಪ್ರಾಣದೊಲ್ಲಭ ಸ-ರ್ವೋತ್ತಮ ಬಂದನೆಂದಾರು ಕೇಳೇ 18 ಸುಗ್ರೀವನ ಪರಿಪಾಲಕ ಬಂದಾ ಕ-ರಿಗ್ರಾಹ ಸಂಹಾರಿಕ ಬಂದಾವ್ಯಾಘ್ರ ಚರ್ಮಾಂಬರ ಸಖ ಸುಂದರವಿಗ್ರಹ ಬಂದಾ ಎಂದಾರು ಕೇಳೇ 19 ಇಂದ್ರನ್ನ ಪರಿಪಾಲಕ ಬಂದಾಚಂದ್ರನ್ನ ಪ್ರಭೆಯಾ ಸೋಲಿಪ ಬಂದಾಇಂದುವದನೆ ಸೀತೆ ಪ್ರಾಣದೊಲ್ಲಭ ರಾಮ-ಚಂದ್ರ ಬಂದನೆಂದಾರು ಕೇಳೇ 20 ಚಂದನ ಗಂಧೆಯರು ಎಲ್ಲಾರು ಕೂಡಿಗಂಧ ಕುಂಕುಮ ಅರಿಷಿಣ ಕಲಿಸಿಇಂದುವದನೆ ಸೀತೆಯ ಕೈ ಒಳಗಿಟ್ಟು ಶ್ರೀರಾಮ-ಚಂದ್ರಗೆ ಹಚ್ಚಿಸಿರೆಂದರಾಗ 21 ವಾರಿಜೋದ್ಭವ ಮೊದಲಾದವರುತಾರತಮ್ಯದಿಂದಾಲಿ ಕುಳಿತುವಾರಿಜಾಮುಖಿ ಸೀತೆ ನುಡಿಯೆಂದೆನುತಾಲಿಸಾರಿದರಾಗ ಸಂದಣಿಯರೆಲ್ಲಾ 22 ವಾಕು ಕೇಳಬೇಕೆಂದುಜಲಜ ಸಂಭವನು ನುಡಿದಾನು ನಗುತಾ 23 ಕಂಜವದನೆ ಜಾನಕೀದೇವಿಅಂಜಲಾಗ ನಿಮ್ಮ ಪುರುಷಾರಿಗೆಕುಂಜರ ವರದಾ ದಾಕ್ಷಿಣ್ಯ ಬ್ಯಾಡೆಂದುಅಂಜಾದೆ ನುಡಿದಾರು ನಸುನಗುತಾ 24 ದೋಷ ವರ್ಜಿತನೇ ಹರಿ ನಿಮ್ಮದೂಷಣೆ ಮಾಡಿದಳೆನ ಬ್ಯಾಡಿಮೋಸದಿಂದಲಿ ಬಲು ದೈತ್ಯರ ಕೊಂದ ಜಗ-ದೀಶ ನಿಮ್ಮ ಮುಖವಾ ತೋರೆಂದಾಳು 25 ದೇವಿ ಹಸ್ತದೊಳು ಅರಿಶಿನವ ಪಿಡಿದುಭಾವಜನಯ್ಯನ ನುಡಿದಾರಾಗದೇವರ ದೇವೋತ್ತಮ ಶಿಖಾಮಣಿದೇವಾ ನಿಮ್ಮಯ ಮುಖವಾ ತೋರೆಂದಾಳು 26 ಭಸ್ಮಾಸುರನ ಕೊಂದಾ ಬಹು ಶೂರನಾರಿಕಂಸನಳಿದಾ ಧೀರ ಅಸುರ ಹಿರಣ್ಯಕನಅಸುವ ಹೀರಿದ ದೊಡ್ಡಅಸುರಾಂತಕ ಮುಖವಾ ತೋರೆಂದಾಳು 27 ವಾಲಿಯ ಸಿಟ್ಟಿನಿಂದಾಲಿ ಕೊಂದುಕಾಲ ಯಮನಾನಸುವ ಯುಕ್ತಿಯಿಂದಾಭಳಿರೆ ಮಧುಕೈಟಭರ ಕೊಂದಾಕಾಲಾಂತಕ ಮುಖವ ತೋರೆಂದಾಳು 28 ಶ್ರೀನಾಥ ದ್ವಾರಕಾಪುರ ಮಾಡಿಆ ನಂದಿ ಗೋಮಂತಾ ಗಿರಿಗೊಲಿದೆವಾನರಾಧೀಶನಾ ಬಲು ಕೊಂಡಾಡುತ್ತದಾನವಾಂತಕಾ ಮುಖವಾ ತೋರೆಂದಾಳು 29 ಅರಿಶಿನವಾನು ಹಚ್ಚಿದಳು ಸೀತೆಅರಸನ ಫಣೆಗೆ ಕುಂಕುಮವಾ ಹಚ್ಚಿಸರಸದಿ ವದನಕ್ಕೆ ಗಂಧವಾ ಹಚ್ಚಲುಸುರರೆಲ್ಲಾ ನಕ್ಕಾರು ಕೈ ಹೊಡೆದು 30 ಪತಿ ಮೊದಲಾಗಿ ಚಪ್ಪಾಳೆನಿಟ್ಟುಹರಸಿದರಾಗ ಜಾನಕಿದೇವಿಶಿರಿಯು ಗೆದ್ದಳು ಅಯೋಧ್ಯದಅರಸು ಸೋತನೆಂದು ನಗುತೆ 31 ಬಾಹುಗಳಿಗೆ ಗಂಧವಾ ಹಚ್ಚಿಸಿಮ್ಯಾಲೆ ಪರಿಮಳಾ ಪೂಸಿದಳುಶ್ರೀ ಹರಿಯ ಚರಣಾವ ಪಾಲಿಸಬೇಕೆನುತಲಿಸರಸಾದಿಂದಾಲಿ ನುಡಿದಾಳು ಜಾನಕೀ 32 ಪಾಷಾಣ ಪೆಣ್ಣಾ ಮಾಡಿದಾ ಚರಣಶೇಷನಾ ಮ್ಯಾಲೆ ಮಲಗಿದ ಚರಣಭಾಸುರಾಂಗಿ ನಿನ್ನ ಲೀಲೆಯಾ ತೋರಿದಾಶೇಷಶಯನ ಚರಣಾ ಪಾಲಿಸೆಂದಾಳು 33 ಆಕಾಶಗಂಗೆಯ ಪಡೆದಾ ಚರಣಾಶಕಟನ ಮುರಿದೊಟ್ಟಿದ ಚರಣಾಭಕುತ ಜನರ ಸೇವೆ ಕೊಂಬ ಚರಣರಕ್ಕಸ ದಲ್ಲಣ ಚರಣಾವ ಪಾಲಿಸೆಂದಾಳು 34 ಅಂಕುಶದೊಜ್ರ ರೇಖೆಯ ಚರಣಾಕುಂಕುಮಾಂಕಿತ ರಾಶಿಯ ಚರಣಾಬಿಂಕದಿಂದ ಕುರುಪತಿಯ ಕೆಡಹಿದ ಬಿರು-ದಾಂಕ ನಿನ್ನಯ ಚರಣಾ ಪಾಲಿಸೆಂದಾಳು 36 ನಸುನಗುತ ಹರಿ ಚರಣ ವೀಕ್ಷಿಸಿಶಶಿಮುಖಿ ಸೀತೆ ಆನಂದದಿಂದಾಮಿಸಣಿಯಂತೊಪ್ಪುವ ಅರಿಶಿನೆಣ್ಣೆಯಾಎಸೆವ ಪಾದಕ್ಕೆ ಹಚ್ಚಿದಳಾಗ 37 ಪಾದ ಪದ್ಮಕ್ಕೆ ಎರಗಿಪಾಲಿಸಬೇಕೆಂದಾಳು ಅಂಗನೆ 38 ಕರಗಳ ಪಿಡಿದೆತ್ತಿದನು ರಾಮಾಹರಸಿದ ಮುತ್ತೈದಾಗೆಂದುಪರಮ ಪತಿವ್ರತೆಯೆನಿಸು ಎನುತಾಲಿಹರಿ ಹರಸೀದಾನು ಹರುಷದಲ್ಲಾಗ 39 ಅಂಡಜವಾಹ ಭಗವಂತನುಹೆಂಡತಿಯ ಮುಖವ ನೋಡೆನುತಲಿಗಂಡು ಮಕ್ಕಳ ಘನವಾಗಿ ಪಡೆಯೆಂದುಪುಂಡರೀಕಾಕ್ಷ ಹರಸಿದನಾಗ 40 ಮಂದಗಮನಿಯ ಕುಳ್ಳಿರಿಸಿಇಂದಿರೇಶ ಮುಂಗುರಳಾ ತಿದ್ದಿಎಂದೆಂದಿಗೆ ಅಗಲದಿರೆಂದು ರಾಮ-ಚಂದ್ರಾನು ಹರಸಿದನಾಗ 41 ಭೂಲೋಕದೊಡೆಯ ರಾಘವರಾಯನಶ್ರೀಲತಾಂಗಿಯ ಕುಳ್ಳಿರಿಸಿದನುಬಾಲಕಿಯರೆಲ್ಲಾರು ಗಲಿಬಿಲಿ ಮಾಡಾದಿರೆಂದುಫಾಲಾಲೋಚಾನು ನುಡಿದನು ನಗುತ 42 ಕಂತುಜನಕ ರಾಘವಾ ನಿಮ್ಮಾಪಂಥ ಸಲ್ಲಾದು ಜಾನಕಿಯೊಡನೆಯಂತ್ರವಾಹಕ ಶ್ರೀರಾಮ ಏಳೇಳೆಂದುಕಾಂತೆಯರೆಲ್ಲರು ನುಡಿದಾರು ನಗುತಾ 43 ಭಾಗೀರಥಿ ಪಾರ್ವತಿದೇವಿಬೇಗದಿ ಅರಿಷಿನ ಕೈಲಿ ಕಲಿಸಿಸಾಗರ ಶಯ್ಯನ ಕೈಯೊಳಗಿಟ್ಟುಬಾಗಿ ಸೀತೆಯ ಮುಖಕೆ ಹಚ್ಚೆಂದಾರು 44 ನಿಂದಲ್ಲಿ ನಿಲ್ಲಾದೆ ಚಂಚಳೆ ಲಕ್ಷ್ಮೀಬಂಧು ಬಳಗವನಗಲಿಸುವ ತರಳೆತಂದೆ ಮಕ್ಕಳೊಳಗೆ ಕದನವ ನಿಡುವಂಥಮಂದಹಾಸೆ ಮುಖವ ತೋರೆಂದಾನು ರಾಮಾ 45 ಅಣ್ಣನ ವಂಚಿಸಿ ಬೇಡಿದವಳೇಮನ್ನೆ ಮನ್ನೆಯರಾ ಕಳಿಸಿದವಳೇಚೆನ್ನಾಗಿ ಮನೆಯೋಳಿದ್ದು ಪೋಗುತಚೆನ್ನಾಯಿತೆ ಮುಖವ ತೋರೆಂದಾನು 46 ಭಾಷೆಯನು ಕೊಟ್ಟು ತಪ್ಪಿಸುವಳೆಕಾಸುವೀಸಾಕೆ ವತ್ತಿ ಬೀಳುವಳೆಹೇಸಿಕಿಲ್ಲದೆ ಕುಲಹೀನನ ಮನೆಯೊಳುವಾಸವಾಗಿರುವಾ ಮುಖವ ತೋರೆಂದಾನು 47 ರಾಮಚಂದ್ರಾನು ಅರಿಶಿನ ಗಂಧವಭೂಮಿಜಳಿಗೆ ಹಚ್ಚಿದನಾಗಾಸಾಮಜಗಮನೆಯ ಹಣೆಗೆ ಕುಂಕುಮ ಹಚ್ಚಿಪ್ರೇಮದಿ ಪರಿಮಳ ಪೂಸಿದಾನು 48 ಕುಸುಮ ದಂಡೆಯ ಮಾಡಿದರುಬಾಸಿಂಗವನು ಕಟ್ಟಿದಾರುಭೂಸುರರೆಲ್ಲರು ಮಂತ್ರಾಕ್ಷತೆ ತಳಿದು ನಿ-ರ್ದೋಷನಾಗೆಂದು ಹರಸಿದರು 49 ಇಂದುಮುಖಿಯರೆಲ್ಲಾರು ಕೂಡಿನಂದದಿ ಜಾನಕಿಗೆ ವೀಳ್ಯವನಿತ್ತುಅಂದಮಾಣಿಕದ ಅಕ್ಷತೆಗಳ ತಳಿದುಮಂದರೋದ್ಧರನ ಹರಿಸಿದರು 50 ದೇವಿಯನ್ನೆತ್ತಿಕೊಂಡು ರಾಮದೇವರ ಮನೆಗೆ ಬಾಹೋದು ಕಂಡುಭಾವುಕರೆಲ್ಲಾ ಹೆಸರು ಪೇಳೆಂದೆನುತದೇವಿ ರಘುನಾಥನೆಂದು ಪೇಳಿದಳಾಗ 51 ಇಂದುಮುಖಿಯರೆಲ್ಲಾರು ಕೂಡಿಇಂದಿರೇಶಾನೆ ಹೆಸರು ಪೇಳೆನಲುಎಂದಾ ಮೇಲೆ ಜಾನಕಿಯೆಂತೆಂದುಮಂದರಧರನು ನುಡಿದನಾಗ 52 ಸತಿಪತಿಯರಿಬ್ಬರು ಕೂಡಿಅತಿಶಯದಲಿ ನಮಸ್ಕರಿಸಿದಾರುಕ್ಷಿತಿಯ ಸುರರಿಗೆ ಲೀಲೆಯ ತೋರಿದ ದೇವಾಪತಿತ ಪಾವನ್ನ ಎನ್ನ ಸಲಹು ಎಂದಾನು 53 ಈ ಕಥೆಯನು ಆದರದಿಂದಾ ಬರೆದು ಹೇ-ಳಿ ಕೇಳುವ ಜನರಾಶ್ರೀಕಾಂತನೊಲಿದು ಕರುಣಿಸುವ ತಾ ಸಿದ್ಧನೇಮದಿಂದಾ ಪಾಡಿರಿ ಜನರು 54 ಕುರುಡಾನು ಈ ಕಥೆಯಾನು ಕೇಳಿದರೆಕರುಣದಿಂದಾಲಿ ಕಂಗಳ ಬರಿಸುವಶರಣವತ್ಸಲ ತನ್ನ ಶರಣರೊಳಿಟ್ಟುಪರಿಪಾಲಿಸುವನು ಶತಸಿದ್ಧ 55 ಸಿರಿ ಒದಗುವದುದಾರ ಇಲ್ಲದ ಬ್ರಹ್ಮಚಾರಿ ತಾ ಕೇಳಲುನಾರಿಯ ಸಹಿತೆ ವಾಸಿಸುವನು 56 ಉದ್ಯೋಗ ಇಲ್ಲದವನು ಕೇಳಿದರೆಸದ್ಯ ಐಶ್ವರ್ಯ ಒದಗುವದು ಸಿದ್ಧಮುದ್ದು ಸುತರಿಲ್ಲದ ಸ್ತ್ರೀಯು ಕೇಳಲುಬುದ್ಧಿವಂತ ಸುತರಾಗುವರು ಸಿದ್ಧ 57 ಮೂರ್ತಿ 58 ಕಮಲ ಧರಿಸಿಪ್ಪಪಾವನ ಮೂರುತಿ ಹೃದಯಾದಲ್ಲಿದೇವಿ ಸಹಿತವಾಗಿ ಕಾವನು ಕರುಣಾದಿನೀವೆಲ್ಲಾರು ತಿಳಿರಿ ಜನರು 59 ಜಾಹ್ನವಿ ಜನಕನುಜಯ ಜಯವೆಂದು ಮಂಗಳವ ಪಾಡೇ 60
--------------
ಮೋಹನದಾಸರು
ಉರುಟಣೆ ಹಾಡು ಪದ್ಮಾವತಿ ನಿಂತು ಮುದ್ದು ಪದ್ಮನಾಭನಿಗೆ ಪದ್ಧತಿಯಲಿ ಉರುಟಾಣಿಯನು ಮಾಡಿದಳೊ ಪ. ಪದ್ಮಾಕ್ಷ ನಿನ್ನಯ ಪಾದಪದ್ಮವನೆ ತೋರೀಗ ಪದ್ಮರೇಖೆಯ ಪಾದಕರಿಶಿಣವ ಹಚ್ಚುವೆನು ಪದ್ಮ ಸಂಭವನ ಪಿತ ವೆಂಕಟೇಶ ಶ್ರೀಶ ಅ.ಪ. ಪಣೆ ತೋರು ವರ ಕುಂಕುಮದ ತಿಲಕ ತಿದ್ದುವೇನು ಕೃಷ್ಣ ಕೊರಳ ತೋರೆಲೊ ದೇವ ಶ್ರೀ ವತ್ಸದಾಮೇಲೆ ಮೆರೆವ ತೆರ ಹಾರಹಾಕುವೆನೀಗ ಶ್ರೀಶಾ ಸುರವಂದ್ಯನೆ ದೇವ ಶ್ರೀನಿವಾಸ 1 ವೇದಾಭಿಮಾನಿಯೆ ವೇದದಿಂದಮುತ್ರವನು ಆದರದಿ ಭಕ್ತರಿಗೆ ಕೊಟ್ಟಿ ಕರಕೆ ಮೋದದಿಂದ ಗಂಧವನು ಹಚ್ಚುವೆನು ಎಲೊ ದೇವ ಸಾಧಿಸಿ ಭೂಮಿಯ ತಂದ ವರಹ ಕಂಠವ ತೋರೋ ಆದರದಿ ಹಚ್ಚುವೆನು ದೇವ ದೇವ 2 ಕಂದನಾ ನುಡಿಕೇಳಿ ಕಂಬದಿಂ ಬಂದವನೆ ಅಂದದಿಂ ಬ್ರಹ್ಮಚಾರಿಯಾಗಿ ಮೆರೆವ ದೇವ ಸುಂದರ ಪರಶುರಾಮ ಅಂದದ ದಶರಥಸುತನೆ ಮಂದರೋದ್ಧರ ಕೃಷ್ಣ ಸುಂದರ ಬೌದ್ಧ ಕಲ್ಕಿ ನಿನ್ನ ಮಂದಗಮನೆಯ ವೀಳ್ಯ ಸ್ವೀಕರಿಸೊ ಶ್ರೀ ಶ್ರೀನಿವಾಸಾ 3
--------------
ಸರಸ್ವತಿ ಬಾಯಿ
ಉರುಟಣೆಯ ಹಾಡು ಜಯಜಯ ಸಾರಸನಯನ ಜಯಜಯ ವಾರಿಧಿಶಯನ ಜಯಜಯ ಲಕ್ಷ್ಮೀರಮಣ ಜಯ ಭಕ್ತಾಭರಣ ಪ. ಸ್ಮರತಾತಾ ಶ್ರೀಕಾಂತ ವರದಾತಾ ರಘುನಾಥ ವರಕÀಪೋಲವ ತಾರೈ ಅರಿಸಿನ ಹಚ್ಚುವೆನು 1 ಶೌರಿ ಸುರರಿಪುಸಂಕುಲ ವೈರಿ ಕರಪಲ್ಲವತೋರೈ ಅರಿಸಿನ ಪೂಸುವೆನು2 ಪಾದಾಪ ಹೃತಶಾಪ ಪರಮಪಾವನರೂಪ ಪಾದಪದ್ಮವ ತಾರೈ ಪೂಜಿಪೆ ನಾನೊಲವಿಂ3 ಖಲದೈತ್ಯಕುಲಕಾಲ ಬಾಲೇಂದು ನಿಭಫಾಲ ಸ್ಥಳದೊಳುಮಿಗೆ ಪೊಳೆವ ತಿಲಕವ ತಿದ್ದುವೆನು 4 ಶಂಭುಸನ್ನುತನಾಮ ಜಂಭಾರಿನುತರಾಮ ಕಂಬುಕಂಧರ ತೋರೈ ಗಂಧವ ಹಚ್ಚುವೆನು 5 ಕಮನೀಯ ಮೃದುಲಾಂಗ ಕಮಲಾಕ್ಷ ಶ್ರೀರಂಗ ನಳವಡಿಪೆ ನಿನ್ನೀಕೊರಳೊಳು ಕಮಲಮಾಲೆಯ 6 ವರಶೇಷಾಚಲವಾಸ ಶರದಿಂದುನಿಭಹಾಸ ಕರುಣಿಸುನೀಂಹೃದಯೇಶ ತರಣಿಕುಲಾವತಂಸ 7
--------------
ನಂಜನಗೂಡು ತಿರುಮಲಾಂಬಾ
ಊ. ಆತ್ಮನಿವೇದನೆ ಇಂದು ನಿನಗಿಷ್ಟ ವಂದಿಸಿ ಬಾಯ್ತೆರದು ಬೇಡಿದೆ ಪ ಮುಂದೆ ನೀ ಮನ ಬಂದಂತ್ಯದ ಮಾಳ್ಪುದು ಕಂದು ಕಂಠನ ಪದ ತೀವ್ರಗಮನ ಬಾಲಾ ಅ.ಪ. ಆರು ಅರಿಯದೆ ಇದು ಒಂದು ಬಾರಿ ಸೇವೆಮಾಡಲು ನಿನ್ನ ಘೋರ ದಾರಿಯಲಿಂದ ಪಾರುಗಾಣಿಸುವಾ 1 ಹಿಂದೆ ಪೇಳಿದನು ಕಳುಹಿ ಪೂರ್ಣಾನಂದ ಪಡಿಸೊ ಇಂದುಧರ ಪಿತನಾಣೆ ಸುಖ ಸಿಂಧುವಿನೊಳಗಿಟ್ಟು ಪೊರೆವಾ 2 ಪುಸಿಯಲ್ಲ ಪುಶಿಯಲ್ಲ ಈಶನಾಣೆ ಮಧ್ವದಾಸನೆ ಕೇಳು ತಂದೆವರದಗೋಪಾಲವಿಠಲನಾಣೆ 3
--------------
ತಂದೆವರದಗೋಪಾಲವಿಠಲರು