ಒಟ್ಟು 1850 ಕಡೆಗಳಲ್ಲಿ , 114 ದಾಸರು , 1424 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೀಸಿದ ಗುಂಡಗೆ ಬುಕ್ಕಿದ್ದೇ ಲಾಭ ಬೇಸರವಿಲ್ಲದೆ ಪ ವಾಸುಕಿಶಯನನ ಲೇಶವು ಭಜಿಸದೆ ಅ.ಪ ಹಗಲು ಇರುಳು ವಿಷಯಗಳಲಿ ಮುಳುಗಿ ಪೊಗಳದಿರಲು ಹರಿ ನಾಮವನು ಜಗದೊಳೆನಗೆ ಸಮರಾರೆಂದೆನುತಲಿ ಬೊಗಳಿ ನರಕಕ್ಕುರುಳುವೆನೆಂದರಿಯದೆ 1 ಮೋಸದಿಂದ ಧನರಾಶಿಗಳಿಸಿ ಅತಿ ಹೇಸಿಗೆ ಭೋಗಗಳಾಶಿಸುವ ಈಶನಂತೆ ಬಲು ಮೆರೆಯುತ ಮದದಲಿ ಶ್ರೀಶ ಸಹಾಯವ ಬಯಸದ ತನಕ 2 ಗಂಗಾ ಶುಚಿಜಲ ದೊರಕುತಿರೆ ಹಲ ವಂಗವ ನೀರನು ಬಯಸುವರೇ ಮಂಗಳ ಕರ್ಮಗಳಾಚರಿಸದೆ ನೀ ಮಂಗನಂದದಲಿ ಕುಣಿಯುವ ತನಕ 3 ಕಂಗಳಿಲ್ಲದ ಕುರುಡನಿಗೆ ಬೆಳ ದಿಂಗಳ ಸೌಖ್ಯವು ತೋರುವುದೆ ರಂಗನ ಮಹಿಮೆಯನರಿಯದ ಮೂಢನು ತಂಗಳು ಭೋಗವ ಬಯಸುವ ತನಕ 4 ಕನ್ನಡಿಯೊಳಗಿನ ಗಂಟಿನಂತಿರುವುದು ನಿನ್ನ ನಶ್ವರದ ಭೋಗಗಳು ಇನ್ನಾದರು ನಿನ್ನ ಮೂಢತನವ ಬಿಟ್ಟು ಸಂತತ ಭಜಿಸೋ ಪ್ರಸನ್ನ ಶ್ರೀಹರಿಯ 5
--------------
ವಿದ್ಯಾಪ್ರಸನ್ನತೀರ್ಥರು
ಬುಗುರಿ ಆಡೋ ತಮ್ಮ ಬುಗುರಿ ಆಡೊ ಪ ಬಗೆ ಬಗೆ ಜನುಮದಿ ತಿರುಗಿ ತಿರುಗಿ ಬಂದೊದಗತನದನುಭವ ಪರಿಕಿಸಿ ನೋಡೊ ಅ.ಪ. ತನುವೆಂಬುದೆ ಕೊರಡಿನ ತುಂಡುದಿನದ ಕರ್ಮವೆ ಕೊನೇರು ದುಂಡುಮನವೆಂಬುವ ಮೊಳೆಯನು ಚುಚ್ಚಿಕೊಂಡುಘನ ಹರುಷದಿ ಕರದಲಿ ಕೊಂಡು 1 ಭವವೆಂಬುದೆ ನಿನ್ನ ಜಾಳಿಗೆ ನೋಡೋತವಕದಿ ಬಿಡದಲೆ ಬಿಗಿಗಿಸುತ್ತ್ಯಾಡೋಸವಿಯನುಂಡು ನೀ ಹರಿಯನು ಬೇಡೊಜವದಲಿ ಝಾಡಿಸಿ ಭರದಿ ಬೀಸಾಡೊ 2 ಧರೆಯ ಗದುಗಿನ ವೀರನಾರಾಯಣನಚರಣದಿ ಮೊಳೆಯೂರಿ ತಿರುಗುತಲಾಡೊಕರಣಗಳಳೆದು ಏಕ ಚಿತ್ತದಿಸ್ಮರಿಸುತ ನಿಂತು ನಿದ್ದೆಮಾಡೊ 3
--------------
ವೀರನಾರಾಯಣ
ಬುದ್ಧಿಯ ನಾನೇ ಹೇಳುವೆ ಎಲೆ ಎಂಗರವಟ್ಟೆಬುದ್ಧಿಯ ನಾನು ಹೇಳುವೆಬುದ್ಧಿಯ ನಾನು ಹೇಳುವೆ ಶುದ್ಧ ಬ್ರಹ್ಮನು ನೀನು ಎಲೆ ಎಂಗರವಟ್ಟೆ ಪ ಸತಿ ಎಲ್ಲಿ ಹಿಂದಣ ಸುತರೆಲ್ಲಿಹಿಂದಾದುದನು ಬಿಟ್ಟು ಇಂದಿದು ನನ್ನದೆಂಬೆ ಎಲೆ ಎಂಗರವಟ್ಟಿ 1 ಮುಂದಾವ ಜನ್ಮ ಭೋಗಿಪೆಯೋ ಎಲೆ ಎಂಗರವಟ್ಟೆಮುಂದಾರ ಮದುವೆಯಹೆ ಎಲೆ ಎಂಗರವಟ್ಟೆಮುಂದಣ ತಾಯಿ ಯಾರು ಮುಂದಣ ತಂದೆ ಯಾರುಮುಂದಣ ಹಿಂದಣದರಿಯೆ ಇಂದಿನದು ಎನ್ನದೆಂಬೆ ಎಲೆ ಎಂಗರವಟ್ಟಿ2 ಭಿಕ್ಷವ ಹಾಕಲಾರಿ ಎಲೆ ಎಂಗರವಟ್ಟೆ ಕುಕ್ಷಿಗೆ ತಿನ್ನಲಾರಿಲಕ್ಷ ಹೊನ್ನುಗಳನ್ನು ನೆತ್ತಿಗೆ ಇಟ್ಟುಕೊಂಬೆಯಾ ಎಲೆ ಎಂಗರವಟ್ಟೆ 3 ತನುವಿದು ತನ್ನದೆಂಬೆ ಎಲೆ ಎಂಗರವಟ್ಟೆ ತನುವನು ನೋಡಿಕೊಂಬೆನಿನ್ನ ಮುಂದೆಯೇ ತನು ತಾನು ಹೋಗುವುದುತನುವದು ನಿನಗಿಲ್ಲ ತನು ಸಂಬಂಧವೆಂತೋ ಎಲೆ ಎಂಗರವಟ್ಟೆ4 ಹಿಡಿಯೋ ಗುರುಪಾದವನು ಎಲೆ ಎಂಗರವಟ್ಟೆ ಪಡೆಯೋ ಕಟಾಕ್ಷವನುಸಡಿಲದೇ ದೃಷ್ಟಿಯನು ತಿರುಹಿ ನಿನ್ನೊಳಗಿಟ್ಟುಒಡೆಯ ಚಿದಾನಂದನು ನೀನಾಗಿ ನೀನಿರು 5
--------------
ಚಿದಾನಂದ ಅವಧೂತರು
ಬೆಳಗಾಗಲೆದ್ದೆ ನಾನೀಗ ಜಾಗ್ರದಲಿಮಲಗಿದ್ದು ನಿದ್ರೆ ತಿಳಿವನಕ ರಾತ್ರೆಯಲಿ ಪಬ್ರಹ್ಮ ತಾನೆಂದೆಂಬ ಭಾನು ಬಳಿಕಸ್ತ'ುಸೆಹಮ್ಮೆಂಬ ಸಂಜೆಗತ್ತಲೆಯಡರಲುಉಮ್ಮಳಿಪ 'ಷಯ ರೂಪದ ಮಾಯೆ ನಡು'ರುಳುಜುಮ್ಮೆನುತ ಮೈಮರೆದ 'ದ್ಯೆಯಲಿ ಮುಳುಗಿ 1ಕೃಷ್ಣಪಕ್ಷದ ಕಡೆಯ ದಿವಸ ನಡುರಾತ್ರಿಯಲಿದಟ್ಟ'ಪ ಮೇಘಮಂಡಲದ ತೆರದಿಇಟ್ಟೆಡೆಯ ಕಾಮದಲಿ ಮನಮುಳುಗಿ ಮತ್ತಲ್ಲಿಮುಟ್ಟಿ ಕರ್ಮವ ಮಾಡಲದು ಕಣ್ಣುಮುಚ್ಚಿರಲು2ಸತ್ಯ ಜಗವೆಂದೆಂಬ ವರುಷ ಋತು ದಾಟಿದುದುನಿತ್ಯವಲ್ಲದ ಮಾಯೆ ನಿಶಿ ತೆಗೆದುದುಪ್ರತ್ಯಗಾತ್ಮಜ್ಯೋತಿ ಸೂರ್ಯತಾನುದಿಸಿದನುಮುತ್ತೆರದಹಂಕಾರ ನಿದ್ರೆ ಲಯವಾಯ್ತು 3ಗುರು'ನಂಘ್ರಿಗೆ ನ'ುಸಿದರುಣ ತಾನುದಿಸುತಿರೆಗುರುತರದ ಮೋಹಾಂಧಕಾರ ಬಳಿಕಹರಿದು ಬೆಳಕಾವರಿಸಿ ಗುರು'ನುಪದೇಶರ'ಸ್ಫುರಿಸಿ ಸರ್ವತ್ರ ತಾ ನಿಬಿಡವಾಗಿರಲು 4ತಿರುಪತಿಯ ವೆಂಕಟನ ಚರಣಕಮಲವನೊಮ್ಮೆಕರಣದೊಳಗಪ್ಪಿ ಕನಸಿನ ಕಡೆಯಲಿಹರಿದುಹೋುತು ಕನಸು ಸ್ಥಿರತೆನಿಂತಿತು ನಿಜವುಮರಳಿ ಕನಸನು ಕಾಣದಂತಾುತೀಗ 5
--------------
ತಿಮ್ಮಪ್ಪದಾಸರು
ಬೆಳಗಾಗಲೆದ್ದೆ ನಾನೀಗ ಜಾಗ್ರದಲಿಮಲಗಿದ್ದು ನಿದ್ರೆ ತಿಳಿವನಕ ರಾತ್ರೆಯಲಿಪಬ್ರಹ್ಮ ತಾನೆಂದೆಂಬ ಭಾನು ಬಳಿಕಸ್ತ'ುಸೆಹಮ್ಮೆಂಬ ಸಂಜೆಗತ್ತಲೆಯಡರಲುಉಮ್ಮಳಿಪ 'ಷಯ ರೂಪದ ಮಾಯೆ ನಡು'ರುಳುಜುಮ್ಮೆನುತ ಮೈಮರೆದ 'ದ್ಯೆಯಲಿ ಮುಳುಗಿ1ಕೃಷ್ಣಪಕ್ಷದ ಕಡೆಯ ದಿವಸ ನಡುರಾತ್ರಿಯಲಿದಟ್ಟ'ಪ ಮೇಘಮಂಡಲದ ತೆರದಿಇಟ್ಟೆಡೆಯ ಕಾಮದಲಿ ಮನಮುಳುಗಿ ಮತ್ತಲ್ಲಿಮುಟ್ಟಿ ಕರ್ಮವ ಮಾಡಲದು ಕಣ್ಣುಮುಚ್ಚಿರಲು2ಸತ್ಯ ಜಗವೆಂದೆಂಬ ವರುಷ ಋತು ದಾಟಿದುದುನಿತ್ಯವಲ್ಲದ ಮಾಯೆ ನಿಶಿ ತೆಗೆದುದುಪ್ರತ್ಯಗಾತ್ಮಜ್ಯೋತಿ ಸೂರ್ಯತಾನುದಿಸಿದನುಮುತ್ತೆರದಹಂಕಾರ ನಿದ್ರೆ ಲಯವಾಯ್ತು3ಗುರು'ನಂಘ್ರಿಗೆ ನ'ುಸಿದರುಣ ತಾನುದಿಸುತಿರೆಗುರುತರದ ಮೋಹಾಂಧಕಾರ ಬಳಿಕಹರಿದು ಬೆಳಕಾವರಿಸಿ ಗುರು'ನುಪದೇಶರ'ಸ್ಫುರಿಸಿ ಸರ್ವತ್ರ ತಾ ನಿಬಿಡವಾಗಿರಲು4ತಿರುಪತಿಯ ವೆಂಕಟನ ಚರಣಕಮಲವನೊಮ್ಮೆಕರಣದೊಳಗಪ್ಪಿ ಕನಸಿನ ಕಡೆಯಲಿಹರಿದುಹೋುತು ಕನಸು ಸ್ಥಿರತೆನಿಂತಿತು ನಿಜವುಮರಳಿ ಕನಸನು ಕಾಣದಂತಾುತೀಗ5
--------------
ತಿಮ್ಮಪ್ಪದಾಸರು
ಬೆಳಗುವಿರಿ ನೋಡೆ ದೇವಕುವರರಂತಿಹಿರಿ ಧೀರ ಗಂಭೀರತರ ಭಾವ ತೋರ್ಪುದು ಮುಖದಿ ನಾರು ವಸ್ತ್ರವ ಧರಿಸಿ ತಿರುಗುವಿರಿ ವನದಿ 1 ಕಂದರ್ಪನನು ಪೋಲ್ವ ಕಮನೀಯ ವಿಗ್ರಹರು ವೈರಿ ನಿಗ್ರಹರು | ಪುಟಕ್ಕಿಟ್ಟ ಚಿನ್ನದಂತೆ ಕಾಂತಿರಂಜಿತರು ಪಟುತರಂಗರು ಗಹನವಿಟದಿ ಪರಿವ್ರಾಜಕರು 2 ಆಜಾನುಬಾಹುಗಳು ಆಜಾನು ಜಂಘಗಳು ಆ ಜಟ ಮಂಡಲವು ರಾಜಿಸುತಲಿಹವು ದೃಢವಾದ ನಿಮ್ಮಡಿಗಳಿಡುವ ಧ್ವನಿಗಳ ಕೇಳಿ ಅಡವಿಯೊಡತನ ಪಡೆದ ಸಿಂಹಗಳು ನಡುಗುವುವು 3 ಧರೆಗಿಳಿದು ಬಂದಿರ್ಪ ರವಿ ಚಂದ್ರರಂದದಲಿ ನೆರೆ ಪ್ರಕಾಶಿಕರಾಗಿ ಕಂಗೊಳಿಸುತಿಹಿರಿ ಗುರುತರದ ಕಾರ್ಯತತ್ಪರರಾಗಿ ಬಂದಿರುವ ನರೆÉಭಾವ ತೋರುವುದು ಕರಿಗಿರೀಶನ ದಯದಿ 4
--------------
ವರಾವಾಣಿರಾಮರಾಯದಾಸರು
ಬೇಗದಿ ಮುಕುಂದ ಪ. ಮಾಡುವ ಭಾಗ್ಯ ಕರುಣಿಸೊ ಕೃಪೆಯಿಂದ ಅ.ಪ. ನಿರುತ ನಿನ್ನೊಳಗಿಹವು ಸರಸಿಜ ಭವಮುಖರು ನಿನ್ನಪಾಂಗಮಸ್ಮರಣೆಯಿಂದಲಿ ಬಾಳ್ವರು ಪೀತಾಂಬರದಿಸರಿರವ ರೂಪಿಯಾಗಿ ಹೊಂದಿರುವಳು ನಗುತ 1 ನಿತ್ಯ ಸಂತೃಪ್ತರೂಪ ಸಕಲ ಲೋಕ ವ್ಯಾಪ್ತನಾಗಿರುವ ಭೂಪ ಜ್ಞಪ್ತಿ ಮಾತ್ರದಿ ಎನಗೆ ಒಲಿವ ಪರಮಾಪ್ತ ನೀನಿರುತಿರಲು ನೆನೆದು ಮರುಳಾದೆನು ವಿಲಿಪ್ತಿಯ ಸಲಿಸು 2 ತೋರದೊ ವರದ ನಿನ್ನನು ಮರೆದ ಕಾಯುವರ ಕಾಣೆ ನಿನ್ನಾಣೆ ಸಲಹೊ ಪುರಂದರಗೊಲಿದ 3 ಧರ್ಮಮಾರ್ಗವ ತೊರೆದು ಶೃತ್ಯದಿತ ಸತ್ಕರ್ಮಗಳ ಮರೆದು ನಿರ್ಮಲರನು ಜರಿದು ನೀಚರನೆಲ್ಲ ಭರ್ಮಗೋಸುಗ ತರಿದು ಸುಖವ ನೀಗಿ ನಾ ಬಾಗಿ ಕೂರ್ಮನಂತಿರುವೆ 4 ಆಸೆಯೆಂಬುದು ಎನ್ನನು ನಾನಾವಿಧ ಕ್ಷೇಶಬಡಿಸುವುದಿನ್ನು ಘಾಸಿಗೆ ಒಳಗಾದೆನು ಕೈಯಲಿ ಒಂದು ಕಾಸಿಲ್ಲದವನಾದೆನು ಶ್ರೀಶ ನೀ ಕರುಣಿಸಿನ್ನು ಸದ್ಗತಿಯನ್ನು ಸುಜನಪಹಾಸಗೊಳಿಸದೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ಬೇಡವೀಗ ಬಾಲೆ ಸಂಗ ಕೆಟ್ಟುಹೋಗುವೆ ಇದುಪಾಡಲ್ಲ ಭಂಗವನು ಅನುಭವಿಸುತಕಾಡ ಹಿಡಿಯುವೇ ಹುಟ್ಟುಗೆಡುವೆಯಲ್ಲೊ ಪ ಸತ್ಯವದು ನಾರಿದೋಷ ಮೃತ್ಯುವಲ್ಲೋ ಯಮನಿತ್ಯದಲಿ ಎತ್ತಿರುವ ಕತ್ತಿಯಲ್ಲೋ ಆತ್ಮ-ಹತ್ಯವಲ್ಲೋ ಅಪಥ್ಯವಲ್ಲೋ 1 ಸರಕು ಎಲ್ಲೋ 2 ಶಿಷ್ಟಾಶಿಷ್ಟರೆಂಬವರು ಕೆಟ್ಟರಲ್ಲೋ ಬಲುಗಟ್ಟಿ ತವಸಿಗಳು ಮತಿಗೆಟ್ಟರಲ್ಲೊ ಕಂ-ಗೆಟ್ಟರಲ್ಲೋ ಘಾಸಿಪಟ್ಟರಲ್ಲೋ 3 ಧಾರಣೆಯು ಧ್ಯಾನಮೌನ ಹಾರಿತೆಲ್ಲೋ ಕಾಮಕೂರ್ಗಣೆಗಳು ಮೊನೆದೋರಿತಲ್ಲೋ ಮನೆಹಾರಿತಲ್ಲೋ ಧೈರ್ಯತೂರಿತೆಲ್ಲೋ 4 ನಾರಿಯವಳು ನಿನ್ನ ಗತಿಗೆ ಮಾರಿಯಲ್ಲೋ ಗುರುವೀರ ಚಿದಾನಂದನನ್ನು ಸೇರು ಎಲ್ಲೋಪರಿಹಾರವೆಲ್ಲೊಲ್ಲೋ ಮುಕ್ತಿ ಸಾರೆ ಎಲ್ಲೋ 5
--------------
ಚಿದಾನಂದ ಅವಧೂತರು
ಬೇಡಿಕೊಂಬೆಗೋಪಾಲ ಬೇಡುವೆನೈ ದಯ ಪ ಮಾಡಿ ಎನ್ನೊಳು ಬೇಗ ಗಾಢ ಮಹಿಮ ವರ ನೀಡೋ ಕೃಪಾಂಬುಧೇ ಅ.ಪ ಮರುಳನಾಗಿ ನಾನು ತಿರುಗುವೆ ಧರೆಯೊಳು ಸಿರಿವರ ನಿಮ್ಮಯ ಚರಣವ ಸ್ಮರಿಸದೆ ಪರಿ ನರಕಕ್ಕೆ ಗುರಿಯಾದೆ ಮುರಹರ ಕರುಣದಿಂ ಮನ್ನಿಸಿ ಪೊರೆ ಸುರವರ 1 ದೀನದಯಾಪರ ಜಾನಕೀ ಮನೋಹರ ನೀನೆ ಗತಿಯೆಂದು ಧ್ಯಾನಿಸಿ ಬೇಡುವೆ ಹೀನನ ಮಾಡದೆ ಧ್ಯಾನಿಪ ಭಕ್ತನಂ ಮಾನದಿಂ ರಕ್ಷಿಸು ವೇಣುಧರಹರಿ2 ಸುರುಪರೀಶ ಹರಿ ಚರಣದಾಸರ ಮೊರೆ ಕರುಣದಿ ಆಲಿಸಿ ಕರಪಿಡಿದು ಪೊರೆ ನೆರೆನಂಬಿದೆ ನಿಮ್ಮ ಚರಣವ ಪರಿಪರಿ ಪರಮಪಾವನ ಮಾಡು ಸಿರಿವರ ಶ್ರೀರಾಮ 3
--------------
ರಾಮದಾಸರು
ಬೇಡಿಕೊಂಬೆನೊ ಗೋಪಾಲ ನಿನ್ನ ಬೇಡಿಕೊಂಬೆ ಕರಗಳೆರೆಡ ಪ ಜೋಡಿಸಿ ನಿನ್ನೊಳು ಸುದೃಢ ಭಕುತಿ ಮಾಡಿ ಸತತ ಭಜಿಸುವಂಥ ರೂಢಿ ಎನಗೆ ಕೊಡು ನೀನೆಂದು ಅ.ಪ ಕ್ಲೇಶಪಡಿಸದೆ ಸಲಹೆನ್ನ ಜಗಂಗಧೀಶ ಮರೆಯದೆ ಬಾರದ್ಯಾಕೊ ಕರುಣ ಲೇಶಗುಣನಿಧೆ ಆಶಾಪಾಶ ಬದ್ಧನಾಗಿ ದೇಶ ದೇಶ ತಿರುಗಿ ಕರುಣ ದುರುಳ ವಸುಮತೀಶರೊಳ್ ಬೇಡಿಸದಂತೆ 1 ಇಂದುವzನÀನೆ ಮುನಿವರ್ಯಹೃದರ ವಿಂದಸದನೆ ವರಗೋಪಯುವತಿ ಬೃಂದಮದನನೆ ಇಂದಿರೇಶ ನಿನ್ನ ಪಾದಾರವೃಂದಗಳನು ಹೃದಯವೆಂಬೊ ಮಂದಿರದೊಳಗೆ ನಿಲ್ಲಿಸಿ ಚಿದಾ- ನಂದಮೂರ್ತಿಯ ಪೂಜಿಪೆನೆಂದು 2 ಧೀರ ಚರಣನೆ ಮುರಾರಿ ಧರಣಿ ಭಾರಹರಣನೆ ಭುಜಗೇಶಫಣಿ ವಿದಾರಿ ಚರಣನೆ ಮಾರಜನಕ ನೀರಜಾಕ್ಷ ನಾರಸಿಹ್ಮ ನಾಮಗಿರೀಶ ಸಾರ ಎನಗೆ ತಿಳಿಬೇಕೆಂದು 3
--------------
ವಿದ್ಯಾರತ್ನಾಕರತೀರ್ಥರು
ಬೇಡುವೆನು ಉಡಿಯೊಡ್ಡಿ ನಾ ನಿನ್ನ ಭಜಿಸಿ ಮಾಡುದಯ ನಿನ್ನವರ ಒಡನಾಡ ಹರಿಯೆ ಪ ಇಡುವ್ಯೋ ಸಂಸಾರದಿ ಕೊಡು ಬಿಡದೆ ನಿರ್ಮೋಹ ನಡೆಸುವೆಯೊ ಹಿರೇತನದಿ ನುಡಿಸದಿರು ಪಕ್ಷ ಬಡತನದಿ ಇಡುವೆಯೋ ಕಡುಧೈರ್ಯ ಕೃಪೆಮಾಡು ಸಡಗರದ ಸಿರಿಕೊಡುವ್ಯೋ ಕಡುಶಾಂತಿ ನೀಡು 1 ಬೇನೆಯೊಳು ನೂಕುವೆಯೋ ತ್ರಾಣಕೊಡು ತಡೆವ ಬಹು ಮಾನ ಕೊಡುವೆಯೋ ಮೊದಲು ನಾನೆಂಬುದ್ಹರಿಸು ಕಾನನದಿ ತಿರುಗಿಸುವಿಯೋ ಜ್ಞಾನಪಾಲಿಸು ಅಪ ಮಾನವಿತ್ತರೆ ನಿನ್ನ ಧ್ಯಾನದೊಳಗಿರಿಸು 2 ತಿರಿದುಣಿಸಿ ಬದುಕಿಸುವ್ಯೋ ತೋರಿಸು ಜಗದಭಿಮಾನ ಪರಿಪಕ್ವಾನ್ನುಣಿಸುವೆಯೋ ಪರಪಂಕ್ತಿ ಬಿಡಿಸು ದೊರೆತನವ ಕರುಣಿಸುವ್ಯೋ ಕರುಣಗುಣ ವರ ನೀಡು ನರರೊಳಗೆ ಆಡಿಸುವ್ಯೋ ಮರೆಸು ಅನೃತವ 3 ಶರಣರ್ವರ್ತನದೆನ್ನ ನಿರಿಸುವೆಯೊ ಅನುಗಾಲ ನಿರುತು ಧರ್ಮಗಲದ ಸ್ಥಿರಬುದ್ಧಿ ನೀಡು ಮರೆವೆ ಮಾಯವ ತರಿದು ಅರಿವಿನೊಳಿರಿಸುವೆಯೊ ಹರಿಶರಣರಹುದೆನುವ ವರ್ತನವ ನೀಡು 4 ಹರಣಪೋದರು ನಿಮ್ಮ ಚರಣಕ್ಕೆರಗಿದ ಶಿರವ ಪರರಿಗೆರಗಿಸದಿರು ಶರಣಾಗತಪ್ರೇಮಿ ಜರಾಮರಣ ಪರಿಹರಿಸಿ ವರಮುಕ್ತಿ ಪಾಲಿಸಿ ವರದ ಶ್ರೀರಾಮ ನಿಮ್ಮ ಚರಣದಾಸೆನಿಸು 5
--------------
ರಾಮದಾಸರು
ಬೋಧಾ ಜ್ಞಾನದಾ ಬೋಧ ಮೋದಾ ಶಾಂತಿಯಾ ಸ್ವಾದಾ ಪ ಸ್ವರೂಪದಾ ಸುಖಸ್ಪದಾ ಪ್ರಶಾಂತ ಗುರುಬೋಧಾ ಬೋಧ ಅ.ಪ. ಸುಲಭಸಾಧ್ಯ ಸುವಿಚಾರಾ ವೇದಾಂತಶಾಸ್ತ್ರದ ಸಾರಾ ತಾನೇ ಪರಮಾತ್ಮನು ಎನುವಾ ಸ್ವಾನುಭವಾಮೃತಜಲಧಾರಾ ಘೋರಾ ಸಂಸ್ಕøತಿಯ ಪಾರಾ 1 ಜೀವಭಾವವ ಮರೆಯಿಸುತಿರುವಾ ಸಾವ ನೀಗುವಾ ಮಂತ್ರವಾ ಸಾರಿ ಪೇಳ್ವ ಶಂಕರಾರ್ಯ ಮೋದಾ ಶಾಂತಿಯಾ ಸ್ವಾದಾ 2
--------------
ಶಂಕರಭಟ್ಟ ಅಗ್ನಿಹೋತ್ರಿ
ಬ್ರಹ್ಮಕೊರವಂಜಿ ಸುರರು ಕಿನ್ನರರು ಸ್ಮರಣೆ ಮಾಡುವ ಪಾದ ಕುರುಪತಿಯ ಗರ್ವವನು ಪರಿಹರಿಸುವ ಪಾದ ಪರಮ ಯೋಗಿಗಳ ಹೃತ್ಕಮಲದಲ್ಲಿಹ ಪಾದ ಪಾದ ಪದ್ಮವನು ನೆನೆವೆ ನಾನು 1 ದಾನವಾರಿಯ ಚೆಲ್ವ ಜಾನು ಜಂಘೆಗಳೆಸೆವ ಮೀನ ಖಂಡಗಳ ಪೆರ್ದೊಡೆಯ ಸೊಬಗಿನ ಭಾನುಕೋಟಿ ಪ್ರಕಾಶದಂತೆ ವರಕಾಂತಿಯಲಿ ಆನಂದದಿಂದಲಿ ಮೆರೆವ ಮೂರುತಿಯ ನೆನೆವೆÀ ನಾನು 2 ಮಿಸುನಿ ಒಡ್ಯಾಣ ಕಾಂಚಿಯದಾಮ ತೆಳ್ವಸುರ ಬಿಸಜನಾಭನ ಬಾಹುಪುರಿಯ ಸೊಬಗಿನ ಎಸೆವ ಗದೆ ಶಂಕಚಕ್ರವು ಪದ್ಮಕರದಿ ಶೋ ಭಿಸುತಿರುವ ಕಂಬುಕಂಧರದ ಮೂರುತಿಯ ನೆನೆವೆ ನಾನು 3 ಕದಪು ಕಂಗಳು ಎಸೆಯೆ ಕರ್ಣಕುಂಡಲದ ಸಂಪಿಗೆಯ ನಾಸಿಕದ ರನ್ನ ತುಟಿ ಝಗಝಗಿಸೆ ಕುಡಿಹುಬ್ಬುಗಳು ಎಳೆಯ ಮನ್ಮಥನ ಚಾಪದಂತೆಸೆವ ಮೂರುತಿಯ ನೆನೆವೆÀ ನಾನು 4 ಅರೆದಿಂಗಳಂತೆಸೆವ ನೊಸಲ ಕಸ್ತೂರಿತಿಲಕ ಹೊಳೆÀವ ಕಿರೀಟ ಮಸ್ತಕದಿ ಢಾಳಿಸುವ ಅಲಸದೀರೇಳ್ಜಗವ ಕರುಣದಲಿ ರಕ್ಷಿಸುವ ಹೆಳವನಕಟ್ಟೆ ಶ್ರೀ ವೆಂಕಟೇಶ್ವರನ ನೆನೆವೆ ನಾನು 5 ಕಂಸಾಸುರನಿಟ್ಟ ಸೆರೆಯ ಮನೆಯೊಳು ಕಷ್ಟಪಡುತಲಿ ದೇವಕಿನಿ- ಮಿಷ ಯುಗವಾಗಿ ಕಳೆಯುತಿದ್ದಳು ನಿತ್ಯಾನಂದನ ನೆನೆಯುತಾ ಕಂಸರಿಪು ನಾರಾಯಣನು ಜನಿಸುವನೆಂದು ಅರುಹುವೆನೆನುತಲಿ ಧರಿಸಿದ ಆದನೆ ಕೊರವಿ 6 ಮಲ್ಲಿಗೆಯ ವನಮಾಲೆಯ ಚಂದ್ರಗಾವಿಯನುಟ್ಟು ಪಣೆಯೊಳು ತಿದ್ದಿತಿಲಕವನಿಟ್ಟನು ಗಂಧ ಕಸ್ತೂರಿ ಪರಿಮಳವನು ಲೇಪಿಸಿ ಸರ್ವಾಂಗದಿ ಭಾಸ್ಕರನಂದದಿ ಆದನೆ ಕೊರವಿ 7 ಗುಂಜಿಯ ದಂಡೆಯು ತೋಳಭಾಪುರಿ ಗಲ್ಲಕೊತ್ತಿದ ವೀಳ್ಯವು ಮಂಜಾಡಿಯಸರ ಹವಳ ಸರ ಹತ್ತೆಸರವಾ ಕೊರಳಲಿ ಹೊಳೆಯಲು ಅಂಜನವನಿಟ್ಟು ಅಲರಗಣ್ಣಿಗೆ ಅತಿಹರುಷದಿಂದ ಬೇಗದಿ ಆದನೆ ಕೊರವಿ 8 ಮುತ್ತು ಮಾಣಿಕ ಹೊನ್ನಗೂಡೆಯ ಪಿಡಿದು ಉತ್ತಮ ಶಿಶುವ ಬೆನ್ನಲಿ ಕಟ್ಟಿ ಚಿತ್ತದೊಳಗೆ ನರಹರಿ ಶರಣೆನುತ ಸತ್ಯಲೋಕದಿಂದಿಳಿದಳೆ ಕೊರವಿ 9 ಮಧುರಾ ಪಟ್ಟಣಕಾಗಿ ಬಂದಳೆ ಕೊರವಿ ಹದಿನಾರು ಬಾಗಿಲ ದಾಟಿ ನಡೆದಳು ಮದಗಜದಂತೆ ಮೆಲ್ಲಡಿಗಳನಿಡುತ ಬೆದರದೆ ಕೇರಿಕೇರಿಯಲಿ ಸ್ವರಗೈದು 10 ಮನೆಮನೆ ಬಾಗಿಲಗಳ ಮುಂದೆ ನಿಂತು ವನದ ಕೋಗಿಲೆಯಂತೆ ಯವ್ವಾ ಯವ್ವಾ ಎನುತ ವಿನಯದಿ ಸ್ವರಗೈವ ಕೊರವಿಯ ಕಂಡು ವನಿತೆ ದೇವಕಿ ಸನ್ನೆಮಾಡಿ ಕರೆದಳು 11 ಸನ್ನೆಮಾಡಿ ಕರದರೆ ಚೆನ್ನಕೊರವಂಜಿ ಬಂದು ಎನ್ನವ್ವ ಎನ್ನಕ್ಕ ಎನ್ನ ತಂದೆಯ ಹೆತ್ತವ್ವ ನಿನ್ನ ಮನದಾಯತವ ಹೇಳೇನು ಬಾರವ್ವ ಎನ್ನ ಕೂಸಿಗೆ ಒಂದಿಷ್ಟನ್ನವನಿಕ್ಕವ್ವ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 12 ಮಲೆಯಾಳ ಕೊಂಕಣದೇಶ ಮಹಾರಾಷ್ಟ್ರ ಗುಜ್ಜರದೇಶ ಚೆಲುವ ಕಾಶ್ಮೀರ ಕಳಿಂಗ ಕರ್ನಾಟಕದೇಶ ತುಳುವ ತಿಲುಗ ದೇಶವನ್ನು ತಿರುಗಿ ಸೊಲ್ಲ ಹೇಳಿ ಬಂದೆ ಒಲುಮೆಯ ಕೊರವಂಜಿ ನಾನಲ್ಲವೆಯಮ್ಮ ಸೊಲ್ಲ ಕೇಳೆ ಸೊಲ್ಲ ಕೇಳೆ ಸಿರಿವಂತೆ ಬಾರೆ13 ಛಪ್ಪನ್ನ ದೇಶವನೆಲ್ಲ ಸುತ್ತಿ ಸೊಲ್ಲ ಹೇಳಿಬಂದೆ ತಪ್ಪ ಹೇಳುವ ಕೊರವಿ ನಾನಲ್ಲವೆಯಮ್ಮ ಕರ್ಪೂರ ವೀಳ್ಯವ ತಾರೆ ಕಾಂತೆ ನಿನ್ನ ಕೈಯ ತೋರೆ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 14 ವಚನ :ಇತ್ತಿತ್ತ ಬಾರವ್ವ ವಿವರಿಸಿ ಹೇಳೇನು ಮುತ್ತಿನ ಮುಡಿಯವ್ವ ಮುದ್ದುಮುಖವ ತೋರೆ ಮತ್ತಗಜಗಮನೆ ಮಂದಹಾಸವದನೆ ರತ್ನದ ಸೆಳೆಗೋಲ ಪಿಡಿಯೆ ರಾಜೀವನೇತ್ರೆ ನಿನ್ನ ಚಿತ್ತದೊಳಗಣ ಮಾತ ಛಂದವಾಗಿ ಹೇಳ್ವೆನು ಕೇಳೆ ಅಮ್ಮಯ್ಯ ಬರಿಯ ಡಂಬಕದ ಕೊರವಿ ನಾನಲ್ಲ ಅರುಹುವೆನು ಮುಂದಣ ಕಥಾಂತ್ರವೆಲ್ಲವ ಮೊರದ ತುಂಬ ಮುತ್ತು ತಾರೆ ಮಾನಿನಿರನ್ನಳೆ ಕುರುಹ ಹೇಳೇನು ಇಲ್ಲಿ ಕುಳ್ಳಿರು ಬಾರೆಯವ್ವ15 ಎಂದ ಮಾತ ಕೇಳಿ ಹರುಷದಿಂದ ದೇವಕಿ ಮಿಂದು ಮಡಿಯನುಟ್ಟು ಕಾಂತೆ ಬಂದು ಕುಳಿತಳು ಇಂದುಮುಖಿಯು ಮೊರನ ತುಂಬ ಮುತ್ತನಿಟ್ಟಳು ತಂದು ಕೈಯತುಂಬ ಹೊನ್ನ ಕಾಣಿಕಿಟ್ಟಳು 16 ಗುಣಿಸಿ ಮುತ್ತಿನ ಅಕ್ಷತೆಯಿಟ್ಟು ಗುಪಿತದಿಂದಲಿ ನೆನೆದಳು ಮನದಭೀಷ್ಟವೀವ ಕೃಷ್ಣನ ಜನಿಸಿದೆನು ಮಧುರಾಪುರದ ಅರಸನುದರದಿ ಎನ್ನ ಸೋದರನೆಂಬ ಪಾಪಿ ಸೆರೆಯೊಳಿಟ್ಟನು17 ಎನ್ನ ಸುತನು ತನ್ನ ಕೊಲುವನೆಂಬ ಮಾತಿಗೆ ಎನ್ನ ಅಗ್ರಜ ಎನ್ನ ಮೇಲೆ ಖಡ್ಗವೆತ್ತಲು ಎನ್ನ ಪತಿಯು ಎನ್ನ ಮೇಲಣ ಮಮತೆಯಿಂದಲಿ ತನ್ನ ಸುತರ ಕೊಡುವೆನೆಂದು ಕೊಲೆಯನುಳುಹಿದ18 ಒಡನೆ ಹುಟ್ಟಿದ ಅಣ್ಣ ಎನಗೆ ವೈರಿಯಾದನು ಪಡೆದ ಪಡೆದ ಸುತರನರೆಯಲಪ್ಪಳಿಸಿದನು ಒಡೆಯ ಕೃಷ್ಣಸಲಹೊ ಎಂದು ಸ್ತುತಿಸಿ ದೇವಕಿ ಗಡಣದಿಂದ ಕೊರವಿ ತಾನು ಹೇಳ ಕುಳಿತಳು 19 ವಚನ :ತಿರುಪತಿ ತಿಮ್ಮಪ್ಪ ಚಳ್ಳಪಿಳ್ಳೆರಾಯ ಸುರಪುರವಾಸ ಲಕ್ಷ್ಮೀವರ ಕರುಣವಾಗು ವಂದನೆ ಸೊಲ್ಲ ಚಂದಾಗಿ ಹೇಳೇನು ಕೇಳೆಯಮ್ಮಯ್ಯಾ ಉರ್ಬಿಯೊಳತಿ ದಿಟ್ಟನಮ್ಮ ನಿಮ್ಮ ಮಗನು ಗರ್ಭದೊಳಿಹನು ಕಾಣಮ್ಮ ಕೊಬ್ಬಿದ ಕಂಸನ ಹಮ್ಮ ಮುರಿದು ನಿಮ್ಮ ನಿರ್ಬಂಧ ಬಿಡಿಸುವನಮ್ಮ 20 ಎಂಟನೆ ಗರ್ಭವಿದಮ್ಮ ನಿಮ್ಮುದರದಿ ಅಂಟಿಹ ಮಗನು ಕಾಣಮ್ಮ ಗಂಟಲ ಮುರಿವ ಕಾಣಮ್ಮ 21 ನಿಷ್ಕರುಣಿ ನಿಮ್ಮಣ್ಣನಮ್ಮ ನೀ ಪಡೆದಂಥ ಮಕ್ಕಳ ಕೊಲ್ಲುವ ಕಾಣಮ್ಮ ಚಕ್ರಧರನ ಕೈಯೊಳಮ್ಮ ಈ ಕಂಸನು ಸಿಕ್ಕುವುದು ತಡವಿಲ್ಲವಮ್ಮ 22 ವಚನ : ಈ ಮಾತು ಪುಸಿಯಲ್ಲ ಸ್ವಾಮಿಯ ಕರುಣ ಉಂಟು ಕೈಗೂಡಿತು ಕೇಳೆಯಮ್ಮಯ್ಯಾ ಕೈಯ ತೋರೆ ಕೈಯ ತೋರೆ ಕೈಯ ತೋರೆ ಅಮ್ಮಯ್ಯ ಕೈಯ ತೋರೆ ನಿನ್ನ ಮನದ ಕುರುಹ ಹೇಳುವೆ ಸೈಯೆನಿಸಿಕೊಂಬೆ ನಿನಗೆ ಸುಖವಾಕ್ಯವನು ಹೇಳಿ ಭಯ ಬೇಡವೇ ಅಮ್ಮಯ್ಯ ನಿನಗೆ ಭಾಷೆಯ ಕೊಡುವೆ 23 ಸಟೆಯ ಮಾತುಗಳಾಡಿ ಸೆಳೆದುಕೊಂಡು ಹೋಗಿ ಹೊಟ್ಟೆಯ ಹೊರೆವ ಕೊರವಿ ನಾನಲ್ಲವಮ್ಮ ನೆಟ್ಟನೆ ಸದಾಶಿವನ ತಟ್ಟಿ ಬಂದ ಕೊರವಿಯ ಮಾತ ದಿಟ್ಟವೆಂದು ಸೆರಗ ಗಂಟಿಕ್ಕಿಕೊಳ್ಳಮ್ಮ 24 ಅಂಗನೆ ನಿನ್ನ ಮನದ ಆಯಿತವ ಹೇಳೇನು ಮಾನಿನಿ ರನ್ನೆ ಬಂಗಾರದ ಕೈಯ ತೋರೆ ಬೊಗಸೆಗಂಗಳ ನೀರೆ ಹಿಂಗುವದು ನಿನ್ನ ಕಷ್ಟ ಹುಸಿಯಲ್ಲವಮ್ಮ 25 ವಚನ :ಚಂದ್ರವದನೆಯ ಚೆಲ್ವ ವಾಮಹಸ್ತವ ಚಂದದಿಂದಲಿ ಕೊರವಿ ವಿವರಿಸಿ ಹೇಳಿದಳು ಹಿಂದಣ ಕಷ್ಟವೆಲ್ಲ ಪರಿಹಾರವಾಯಿತು ಶುಭ ಶ್ರಾವಣ ಬಹುಳಾಷ್ಟಮಿ ರಾತ್ರೆಯ ನಡುವಿರುಳು ರೋಹಿಣಿ ನಕ್ಷತ್ರದಲ್ಲಿ ನಿಮ್ಮುದರದಿ ಕೃಷ್ಣ ಜನಿಸುವನು ಕಾಣೆ ಕೇಳಮ್ಮಯ್ಯ 26 ಪಂಕಜ ಪೀತಾಂಬರ ಅ- ಲಂಕಾರ ಮೂರುತಿಯಾಗಿ ಪುಟ್ಟುವ ಕೃಷ್ಣ ಶಂಕೆಯಗೊಳದಿರೆ ಕೇಳಮ್ಮಯ್ಯ 27 ಅಮ್ಮಾ ನಿಮ್ಮುದರದಿ ಬ್ರಹ್ಮನಪಿತ ಬಂದು ನಿಮ್ಮ ನಿರ್ಬಂಧವ ಬಿಡಿಸುವನು ಕಾಣೆ ಉಮ್ಮಯಗೊಳಬೇಡವೆ ಕೇಳಮ್ಮಯ್ಯ 28 ಆದಿಮೂರುತಿ ನಿಮ್ಮುದರದೊಳವತರಿಸಿ ಮೇದಿನಿ ಭಾರವನಿಳುಹಲು ಕಂಸನ ಭೇದಿಸುವನು ಕಾಣೆ ಕೇಳುಮ್ಮಯ್ಯ 29 ಏಳು ಮಕ್ಕಳ ಕಂಸ ಅರೆಯಲಪ್ಪಳಿಸಿದನೆ ಚಳ್ಳೆ ಬೀಜದಂತೆ ನುಣಿಚಿ ತಪ್ಪಿಸಿಕೊಂಬ ಕಳ್ಳಮಗನು ಪುಟ್ಟುವ ಕೇಳಮ್ಮಯ್ಯ 30 ವಚನ : ಇಂಥಾ ಮಗನು ನಿಮ್ಮುದರದಿ ಜನಿಸಲು ಕಾಂತ ವಸುದೇವರು ಗೋಕುಲಕೆ ಒಯ್ಯಲು ಸಂತೋಷದಿಂದಲ್ಲಿ ಬೆಳೆವನೆ ಕೃಷ್ಣ ಕೇಳಮ್ಮಯ್ಯ ಗೋಕುಲದೊಳಗೆ ಶ್ರೀ ಕೃಷ್ಣನನಿಟ್ಟು ದುರ್ಗೆಯ ಈ ಕಡೆಗೆ ಕೊಂಡುಬಹ ನಿಮ್ಮ ಪತಿಯು ಕಾಕು ಕಂಸಾಸುರನು ಆಕೆಯ ಪಿಡಿಯೆ ಗಗ- ನಾಕೆ ಹಾರಿ ಹೋಗುವಳು ಮಾಯಾಕಾರಿಯು 31 ಕ್ರೂರ ರಕ್ಕಸ ಎನ್ನ ಕೊಲ್ಲುವದೇತಕೋ ನಿನ್ನ ವೈರಿ ಕೃಷ್ಣ ಹೋಗಿ ಗೋಕುಲದೊಳಗೆ ಧೀರನಾಗಿ ಬೆಳೆದು ಸಂಹಾರವ ಮಾಡುವನೆಂದು ಸಾರಿ ಹಾರಿ ಹೋಗುವಳಂಬರಕೆ ದುರ್ಗಿ 32 ನಂದನ ಗೋಕುಲದಿ ಆನಂದದಿ ಬೆಳೆದಾನು ಕೃಷ್ಣ ಸಂದೇಹ ಬೇಡವವ್ವ ನಿಮ್ಮ ಮನದೊಳಗೆ ಬಂದು ಮz
--------------
ಹೆಳವನಕಟ್ಟೆ ಗಿರಿಯಮ್ಮ
ಬ್ರಹ್ಮಜ್ಞಾನ | ಬಿಡು ಬಿಡು ಬಿಡು ನೀ ಸಂಸಾರ ಧ್ಯಾನ |ಕಡೆಯಲ್ಲಿ ನಿನ್ನ ಕಳಹುವರಲ್ಲಿಗೆ | ಬಿಡದಿರು ಸದ್ಗುರುವಿನ ಧ್ಯಾನ ಪ ಯಾತಕೆ ಕಲಿತ್ಯೋ ಬಹು ಯುಕ್ತಿಗಳ | ಬರಿ ಮಾತಿಲಿ ಆಗದು ನಿಜ ಮುಕ್ತಿ | ನೀತಿಯಿಂದ ನೀ ಅರಿತು ನೋಡಲು | ಸ್ವಾತ್ಮದ ಜ್ಞಾನವು ಆಗುವದಿದಕೆ1 ಸತಿ ಸುತರಾ ನೀ ನೋಡಿ ಹಿಗ್ಗುತಿ | ಮಿತಿಯಿಲ್ಲದೆ ಅವರಿಗೆ ತಗ್ಗುತಿ | ಗತಿಯ ಕೊಡುವ ಸಂತರು ಬಂದರೆ | ಮೋತಿಯ ತಿರುವಿ ವ್ಯಸನಕೆ ತಗ್ಗುತಿ 2 ಸಾಧು ಪುರುಷರ ಸಂಗವ ಹಿಡಿಯೊ | ಬೋಧಾಮೃತವನು ನೀ ಕುಡಿಯೊ | ಆದಿಯಲಿ ಭವತಾರಕ ಭಜಕರು | ಹೋದ ಹಾದಿಯ ನೀ ಹಿಡಿಯೊ 3
--------------
ಭಾವತರಕರು
ಬ್ರಹ್ಮಜ್ಞಾನಿಗಳ ನೋಡಿರೊ ಇಹ್ಹಿಹ್ಹಿಬ್ರಹ್ಮಜ್ಞಾನಿಗಳ ನೋಡಿರೋ ಪ ಜ್ಞಾನಿಗಳು ತಾವು ಅಂತೆ ತಾವೇ ಪರಬ್ರಹ್ಮರಂತೆಏನೋನೋ ಹುಚ್ಚುಮಾತು ಕೇಳಿರಯ್ಯ ಅಹ್ಹಹ್ಹ 1 ಜೊಂಡು ಹುಲ್ಲಿನಂತೆ ಮಂಡೆಗಳ ಬೆಳೆಸಿಕೊಂಡುಕಂಡ ಕಂಡಂತೆ ತಿರುಗುವವರ ನೋಡಿರಯ್ಯ ಅಹ್ಹಹ್ಹ 2 ಸಂಧ್ಯವಿಲ್ಲ ಸ್ನಾನವಿಲ್ಲ ಮುಂದೆ ಹೋಮ ತರ್ಪಣವಿಲ್ಲಅಂದು ತಾವೇ ಬ್ರಹ್ಮವಂತೆ ಕಂಡಿರೇನೋ ಅಹ್ಹಹ್ಹ3 ಕಾವಿ ಕೌಪವುಟ್ಟುಕೊಂಡು ಕಮಂಡಲು ಹಿಡಿದುಕೊಂಡುದೈವ ತಾನೇ ಎಂಬ ದೈವಗಳ ನೋಡಿರೋ ಅಹ್ಹಹ್ಹ4 ಇಂತು ಚಿದಾನಂದ ಗುರು ಭಕ್ತರಗಳ ನಿಂದ್ಯಮಾಡಿಅಂತು ಕಾಲನ ಅರಮನೆಯ ಕುರಿಗಳಾದರಹ್ಹಹ್ಹ 5
--------------
ಚಿದಾನಂದ ಅವಧೂತರು