ಒಟ್ಟು 1392 ಕಡೆಗಳಲ್ಲಿ , 91 ದಾಸರು , 1035 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸರಸಿಜನಾಭ ಪ. ಉಡುಪಿಯ ಕೃಷ್ಣನೇ ಅ.ಪ. ಏನು ಕಾರಣವನ್ನು ತೋರಿದ್ಪೊ ಶ್ರೀನಿವಾಸನೆ ನಿನ್ನ ಮಹಿಮೆಯ ಪೊಗಳಲು ನಾ ಶಕ್ತಳಲ್ಲಾ ಭಕ್ತವತ್ಸಲಾ 1 ನಿನ್ನ ನೋಡಿ ಧನ್ಯಳಾದೆನೊ ಸನ್ನುತಾಂಗನೇ ಎನ್ನ ಮೇಲೆ ಕರುಣವ ತೋರಿ ನಿನ್ನ ದರುಶನವಿತ್ಯೋ ದೇವಾ 2 ಮಾಡಿಸೊ ಧ್ವಂದ್ವಕಾರ್ಯ ನಿನ್ನದೆಂಬ ಸೊಲ್ಲ ಪಾಲಿಸು 3 ನಿನ್ನ ನಾಮದ ಸ್ಮರಣೆಯನ್ನು ಮರಿಯದೆ ನುಡಿಸೆನೆಗೆ ಕರುಣಾನಿಧಿಯೇ4 ನಿನ್ನ ಪಾದದ ಧ್ಯಾನವು ನಿರಂತರವಿರಲೆನೆಗೆ ನಿನ್ನ ಕಡೆಯಾಕಣ್ಣಲಿ ನೋಡೊ ರಮಾವಲ್ಲಭವಿಠಲನೆ ಕರುಣದಿ5
--------------
ಸರಸಾಬಾಯಿ
ಸರಸಿಜನಾಭಾ ದಕ್ಷಿಣ ಶರಧಿನಿವಾಸಾ ಪ ಹಿರಣ್ಯಕಶ್ಯಪು ತಾ ಪ್ರಹ್ಲಾದನಾ ಬಾಧಿಸಲು ಪರಿಯ ದೈವವೆ ಮೊರೆಯೋಗಲೂ ಹಿರಿದಾಗಿ ಕೇಳಿ ಹಿತದಲಿ ಬಂದು ಬೊಬ್ಬಿಡಲು ಹಿರಣ್ಯಗರ್ಭಾದಿಗಳು ಹಿರಿದು ಚಿಂತಿಸಲೂ 1 ಭುಗಿಲೆನೆ ಧಿಗಿಲೆನೆ ದಿಕ್ಕಿನೆಲಿ ಪ್ರತಿ ಶಬ್ದ ಪುಟ್ಟಿತಿರೆ ಝಗಝಗಿಪ ಬೆಳಗು ಕವಿದದು ಮೂರು ಲೋಕಕ್ಕೆ ಉಗುರು ಕೊನೆ ಪೊಗಳಿ ವೇದಗಳು ಬೆರಗಾಗಿ 2 ರಕ್ಕಸ ನೋಡಲು ಬಗೆದು ಕರುಳು ಕೊರಳಿಗೆ ಮಾಲೆ ಇಕ್ಕಿ ಭಕ್ತಗೆ ಮೆಚ್ಚಿ ವರವನಿತ್ತಾ ಕಕ್ಕಸದ ದೈವ ಅನಂತ ಪದುಮನಾಭ ಮುಕ್ತಿದಾಯಕ ವಿಜಯವಿಠ್ಠಲ ಮಹದಾ3
--------------
ವಿಜಯದಾಸ
ಸರಸ್ವತಿ ಬ್ರಹ್ಮನರಸಿ ವಾಣೀ ನಿನ್ನ ಸ್ಮರಿಸೆ ವೇದಮರ್ಮ ತಿಳಿಸಿ ಪರಬ್ರಹ್ಮನ ತೋರಿಸೆ ಪ ಆನನ ತೂಗುತಶ್ರೀನಿವಾಸನ ಗುಣಗಾನ ಮಾಡುವಿಯೆ 1 ಮಣಿ ಭೂಷ ವೃಂದ ಶೋಭಿತ ಕರಇಂದುವದನೆ ಮಯೂರೇಂದ್ರ ವಾಹನಳೆ2 ಈಸು ಪುಸ್ತಕದೊಳು ವಾಸಮಾಡುತಇಂದಿರೇಶನ ಸೊಸೆ ಭಕ್ತರಾಶಿಗೆ ಪೊಳೆಯೆ 3
--------------
ಇಂದಿರೇಶರು
ಸರಸ್ವತಿದೇವಿ ಫಣಿ ವೇಣಿ ನಮಿಪೆ ನಿನ್ನ ಮನಶುಕವಾಣಿ ಸುಮನಸರೊಡೆಯನ ಗಮನದೊಳಿಡುತೆ ಪವನ ಮತದಲಿಡು ತಾಯೆ ಕಾಯೆ ಪ. ವಾಣಿ ಬ್ರಹ್ಮನ ರಾಣಿಯೆನೀ ಗಾಣಿಸು ಮನದಿ ಸುವಾಣಿಯನು ಮಾಣದೆ ಜಪಸರ ಕಲ್ಯಾಣಿಯು ನೀನು ಸತಿ ಜಾಣೆ ಭಾರತಿಯೆ 1 ವಾರಿಜಭವ ಸತಿಮತಿ ತೋರುತ ಮನದಿ ನೀರೆ ಎನ್ನ ಮನ ಸೂರೆಗೊಳುತಲಿ ಸಾರುತ ಹರಿನಾಮಾಮೃತವನು ಕೊಡು ಮಾರಮಣ ಸ್ತುತಿ ಮಾಡಿಸುತ 2 ಅಸುರ ಮರ್ದನ ಹರಿ ನಿನವಶದಲ್ಲಿಹನೆ ಸುಸ್ವರದ ಮಧುರದಿ ಪಾಡುತಲಿರುವೆ ವಶವಲ್ಲದಲಾನಂದದಿಂದ ಶ್ರೀ ಶ್ರೀನಿವಾಸನ ಕುಸುಮಶರನಪಿತನ್ವಶದಲಿ ನಿಲಿಸೆ 3
--------------
ಸರಸ್ವತಿ ಬಾಯಿ
ಸರಸ್ವತಿಮಾತೆ ಪರತರಚರಿತೆ ವರ ಪುಣ್ಯನಾಮಳೆ ಪ ಕರುಣಿಸಿವರವ ಕರುಣಾಕರಳೆ ಕರುಣದಿ ಕಾಯೆ ಅ.ಪ ಪದುಮಾಸನನ ಸುವದನ ನಿವಾಸೇ ತ್ರಿಭುವನಾರ್ಚಿತೆ ಸತತವಾಗಿ ಸುದಯೆ ಹೃದಯೆ ಸ್ಥಿರ ಸದುಮತಿ ಪಾಲಿಸೆ ಪರಮದಯದಿ ಪದುಳಂಗೆ ದಯದಿ 1 ವೀಣಾಧರಿ ಸುವಾಣಿ ಕಲ್ಯಾಣಿ ಮಾನಿನಿ ಬ್ರಹ್ಮನ ಜನನಿಯೆ ಜಗದಜಾಣೆ ಸುತ್ರಾಣೆ ನಿಜ ಜ್ಞಾನಾಧಿಕಾರಿ ಜ್ಞಾನವ ನೀಡೆ ಮಾಣದೆ ಎನಗೆ 2 ಪಾಮರತನ ನಿವಾರಣೆಗೊಳಿಸೆ ಪ್ರೇಮದೆನಗೆ ಸುಜಾಣೆ ನುಡಿಗಲಿಸಿ ವಿಮಲೆ ಅಮಲಸುಖ ಗಮಕದಿ ನೀಡ್ವೆ ಭುವಿಜಪತಿ ಶ್ರೀರಾಮನ ಸೊಸೆಯೆ 3
--------------
ರಾಮದಾಸರು
ಸರುವದ ಪಠಿಸಿರೊ ಚತುರವಿಂಶತಿನಾಮ ಸಿರಿವಿರಿಂಚಾದಿಗಳಿಗೇ ಪ್ರಿಯಕರ ನಾಮ ಪ ಮಾಧವ ಗೋವಿಂದನ ಶ್ರೀಶ ವಿಷ್ಣು ಮಧುಸೂಧನ ತ್ರಿವಿಕ್ರಮನ 1 ವಾಮನ ಶ್ರೀಧರ ಹೃಷಿಕೇಶ ಪದುಮನಾಭ ದಾಮೋದರ ಸಂಕರುಷಣ ವಾಸುದೇವನ 2 ಅನಿರುದ್ಧ ಪುರುಷೋತ್ತಮ ದೇವನ ಅಧೋಕ್ಷಜ ನಾರಸಿಂಹ ಅಚ್ಯುತರಾಯನ 3 ಜನಾರ್ಧನ ಉಪೇಂದ್ರ ಹರಿ ಶ್ರೀ ಕೃಷ್ಣಸ್ವಾಮಿಯ ಜನನ ಮರಣ ರಹಿತನಾದ ಶ್ರೀನಿವಾಸನ 4 ಈ ಮಹಾನಾಮಂಗಳ ಪ್ರೇಮದಿಂ ಪಾಡಲು ಕಾಮಿತಾರ್ಥವೀವ ಶ್ರೀ ರಂಗೇಶವಿಠಲ 5
--------------
ರಂಗೇಶವಿಠಲದಾಸರು
ಸರೋಜಜಾತೆ ಜಗನ್ಮಾತೆ ಪಾಲಿಸು ಜನಕಸುತೆ ಜನನಮರಣರಹಿತೆ ಪ ಬನ್ನಬಡಿಸುವುದೇ ನಮ್ಮ ಸೀತಮ್ಮ ಅ.ಪ ಪತಿಹೃದಯನಿವಾಸಿನಿ ಸುವಾಸಿನಿ ಭ- ವತ್ಪಾದಾಂಬುಜ ಭಜಿಸುವ ಜನರು ಸತತವಿಹಪರದಿ ಸೌಖ್ಯ ಪಡುವರೆಂದು ಸಾ- ರುತಿಹವು ಶೃತಿ ಸ್ಮøತಿ ಪುರಾಣ 1 ಭವ್ಯ ಚರಿತರಾದ ಬ್ರಹ್ಮಾದಿಗಳಿಗಳವೆ ನಿನ್ನ ದಿವ್ಯಾಂಘ್ರಿ ದರ್ಶನವಾಗುವುದು ಸೇವ್ಯನಾದ ಪತಿಚಿತ್ತಾನುಸಾರದಿ ಜೀವನಿಕರವ ಕರುಣದಿ ನೋಡುವ 2 ಕೃತಿ ಶಾಂತಿ ರುಕ್ಮಿಣಿ ಲಕುಮಿ ನಿರುತವು ನೆನೆವರ ದುರಿತಗಳ ಕಳೆದು ಗುರುರಾಮವಿಠಲನ ಚರಣವ ತೋರಿಸೆ 3
--------------
ಗುರುರಾಮವಿಠಲ
ಸರ್ವ ವಿಪತ್ ಪರಿಹಾರ ಸ್ತುತಿ ಕರ್ಮ ಫಲದಾತನು ಶೂನ್ಯ ಪ ವಾಹನ ಪತನ ಉಕ್ಕಿ ಪ್ರವಹಿಸುವ ನದಿ ಮೊದಲಾದ್ದರಿಂದ ಏಕ ಕಾಲದಿ ಸಂಗ ಮರಣ ಸಂಭವಿಸುವುದು ಏಕೆಂದು ಶಂಕಿಸುತಿ ಕೇಳು ಶ್ರದ್ಧಾಳು 1 ಏಕ ಕಾಲದಿ ನಾನಾ ಜನರು ಸಂಗದಿ ಕೂಡಿ ಮಂದ ಮಾರುತ ಪುಷ್ಪವನದಿ ಶ್ರೀಕರ ಕಥಾ ಶ್ರವಣ ನಾಟಕ ಕೇಳಿಕೆಯು ಹೀಗೆ ಜನ ಸಂಘದಲಿ ನಾನಾ ಸಂಭವವು 2 ಒಂದೊಂದು ಮನುಜನಿಗು ಇಂಥಾ ಕಾಲದಿ ಇಂಥಾ ರೀತಿಯಲಿ ಇಂಥಾ ಸ್ಥಳದಲ್ಲಿ ಇಂಥಾ ಹಿತಕರವೊ ಅಹಿತವೊ ಕರ್ಮಗತಿ ಸಂಭವವು ಶ್ರೀದ ನಿಯಮಿಸುವ ವೈಷಮ್ಯವಿಲ್ಲದಲೆ 3 ಮಳೆ ಬಿಸಿಲುಭೂಕಂಪ ಚಂಡಮಾರುತ ಸುಳಿಸುಳಿದು ಪ್ರವಹಿಸುವ ನದಿ ಹರಡುವ ದಾವಾಗ್ನಿ ಎಲ್ಲ ಇಂಥಾ ಅಹಿತ ಸಂಭವದಿ ಸಿಲುಕುವರು ಅಲ್ಲಲ್ಲಿ ಬಹುಜನರು ಕರ್ಮಗತಿಯಲ್ಲಿ 4 ಘೋರ ಭೂಕಂಪದ ಪೀಡೆಗೆ ಯೋಗ್ಯರು ಯಾರು ಯಾರೊ ಒಳ್ಳೆವರೋ ಕೆಟ್ಟವರೊ ಹರಿಯು ಆ ಜನರನ್ನು ಕಂಪನಕೆ ಒಳಮಾಡಿ ಮರಣಾಂಗ ಹೀನತೆಯು ರಕ್ಷಣೆಯು ಈವ 5 ಭಿನ್ನ ಜೀವರು ಭಿನ್ನ ಕರ್ಮಗತಿ ಉಳ್ಳವರು ಭಿನ್ನ ಫಲಯೋಗ್ಯರು ಆದ ಕಾರಣದಿ ಕ್ಷೋಣಿ ಕಂಪನದಲ್ಲಿ ಮರಣ ಕೆಲವರಿಗೆ ಅಂಗ ಹೀನತೆ ಕೆಲವರಿಗೆ ರಕ್ಷಣೆ ಕೆಲವರಿಗೆ 6 ಘೃಣಿ ಹರಿಯು ಭೂಕಂಪ ಆಗುವ ಪೂರ್ವದಲೆ ಜನರು ಕೆಲವರನ್ನು ಬೇರೆ ಊರಿಗೆ ಕಳುಹಿ ಹಾನಿಗೊಳಿಸುವ ಕಂಪನಕೆ ಸಿಲುಕದಂತೆ ಇನ್ನು ಕೆಲವರನ್ನು ಅಲ್ಲಿ ಬಾರದೇ ಮಾಳ್ಪ 7 ಸಿಂಧು ವಿಜ್ಞಾನಂದ ಹರಿಯೇ ಕರ್ಮಾಧ್ಯಕ್ಷನು ಕರ್ಮಫಲದಾತ ಕರ್ಮ ಕೊಡದು ಫಲ ಕರ್ಮಾಧ್ಯಕ್ಷ ಶ್ರೀಹರಿಯೇ ಫಲದಾತ 8 ಸಂಘ ದುಃಖ ಪ್ರಾಪ್ತಿಯು ಹಾಗೆ ಭವಿಸುವುದು ಐಹಿಕ ವಿಷಯಜವು ಉದಾನಿಸಿ ಅಘದೂರ ಗುರುಗ ಶ್ರೀ ಹರಿಯ ಸ್ಮರಿಸು 9 ನರಜನ್ಮ ಹೊಂದಿದವ ಹರಿನಾಮ ಸರ್ವದಾ ಸ್ಮರಿಸುವುದು ಕರ್ತವ್ಯ ದೊರಕಿದ ಸ್ಥಳದಿ ಹರಿನಾಮ ಭಕ್ತಿ ಪೂರ್ವಕದಿ ನುಡಿಯಲೇ ಬೇಕು ನರಪಶÀು ಜಡಮತಿ ಮೂಢನು ನುಡಿಯ 10 ಹರಿಯೇ ಸರ್ವೋತ್ತಮನು ಮುಖ್ಯಕಾರಣ ವಿಷ್ಣು ಶ್ರೀರಮಾಪತಿಯೇ ಸ್ವತಂತ್ರ ಜಗನ್ನಾಥ ಸರಸಿಜೋದ್ಭವ ಶಿವ ಶಕ್ರಾದಿ ಸರ್ವರಿಗೂ ಪ್ರೇರಕನು ಸ್ವಾಮಿಯು ಚಿತ್ ಅಚಿತ್ ನಿಯಂತ 11 ವಿಹಿತ ಸಾಧನಕ್ಕೊದಗೆ ನ್ಯಗ್ರೋಧೋದುಂಬರ ಹರಿ ದೇಹ ಬೆಳಸುವ ಪೋಷಿಸುವ ರಕ್ಷಿಸುವನು ಅಹರ್ನಿಶಿ ಪಾಲಿಸುವ ಭಕ್ತವಾತ್ಯಲ್ಯದಿ ಮಹಾರ್ಹರ ರಕ್ಷಿಸಿದ ಪ್ರಹ್ಲಾದ ಗಜಪತಿಯ 12 ಹರಿಯ ಪಾದಕೆ ಅಭಿಷೇಕ ಮಾಡಿದ ಬ್ರಹ್ಮ ಹರನು ಕೈಲಾಸ ವಾಸನು ಆ ತೀರ್ಥ ಸಹಸ್ರನಾಮ ಬೃಹತೀ ಸಹಸ್ರ ಸಹ ಪಠಿಸುತ್ತಾ ಸತಿ ಪಾರ್ವತಿಗೆ ಎರೆದ 13 ಹರಿನಾಮ ಸಂಸ್ಮರಣೆ ಪೂರ್ವಕದಿ ಈ ನುಡಿಯ ಬರೆಯುವ ಪಠಿಸುವ ಕೇಳುವ ಭಕ್ತರನ್ನು ಶ್ರೀರಮಾಯುತ ಹರಿ ಸುರವೃಂದ ಸಹ ಬಂದು ಸಂರಕ್ಷಿಸುವ ಸರ್ವವಿಪತ್ ದೂರ ಮಾಡಿ 14 ವರಾಹ ನರಸಿಂಹ ಭೂತಿದ ದಯಾಬ್ಧಿ ಶ್ರೀ ಪ್ರಸನ್ನ ಶ್ರೀನಿವಾಸ ನಮೋ ಸದಾ ಶರಣು ಮಾಂಪಾಹಿ ಸಜ್ಜನರ 15
--------------
ಪ್ರಸನ್ನ ಶ್ರೀನಿವಾಸದಾಸರು
ಸರ್ವಾಂತರ್ಯಾಮಿ ಸಲಹೊ ಎನ್ನ ಸರ್ವಕಾಲದಲಿ ಭಕ್ತರ ಅಂತರಂಗದಿ ನಲಿವೆ ಪ ಭಕ್ತರನು ತೋಷಿಸಲು ಹತ್ತವತಾರದಿ ಯುಕ್ತಿಯಲಿ ಖಳರ ವಧಿಸಿದೆಯಲ್ಲವೆ ಭಕ್ತವತ್ಸಲನೆಂಬೊ ಬಿರುದು ಹೊತ್ತಿಹೆ ದೇವ ಭಕ್ತರಾಧೀನ ನಾನೆಂದು ನಿನ್ನ ಭಕ್ತರೊಳು ನಲಿವೆ 1 ಅಂತ್ಯದೊಳು ಅಜಮಿಳನ ಅಂತರಂಗದಿ ಪೊಕ್ಕು ಸಂತ ಆತ್ಮಜನ ಸಾರಗನೆಂದು ನುಡಿಶಿ ನಿನ್ನ ಸ್ವಂತ ಲೋಕಕೆ ಕಳಿಸಿ ಅಜಭವಾದಿಗಳಿಂದ ಅ ತ್ಯಂತ ಹೆಚ್ಚಿನ ಸ್ತುತ್ಯನಾದೆ ಗೋವಿಂದ 2 ಆವಾವ ಕಾಲದೊಳು ಆವಪರಿ ಕಷ್ಟದೊಳು ಕಾವ ನಿನ್ನಯ ನಾಮ ಮರೆಯದಂತೆ ದೇವ ಶ್ರೀ ಶ್ರೀನಿವಾಸ ಝಾಮಝಾಮದಿ ನುಡಿಸೊ ಶ್ರೀವರ ನೀನಲ್ಲದೆ ಮತ್ತಾರಿಹರೊ ದೇವ 3
--------------
ಸರಸ್ವತಿ ಬಾಯಿ
ಸರ್ವೇಶ್ವರ ಕಾಶೀನಿವಾಸ ವಿಶ್ವನಾಥ ಪ ಅನ್ನಪೂರ್ಣದೇವಿ ರಮಣ ವಿಶ್ವನಾಥ ದಿ ವ್ಯಾನ್ನ ಕೊಟ್ಟುಯನ್ನು ಪಾಲಿಸು ವಿಶ್ವನಾಥ 1 ತಾರಕೋಪದೇಶವನ್ನು ವಿಶ್ವನಾಥ | ನಿ ನ್ನಾರಾಧಕರಿಗೆ ಈವೆ ವಿಶ್ವನಾಥ 2 ಪಾಮರ ನಾನೈಯ್ಯ ಕೇಳು ವಿಶ್ವನಾಥ ಗುರು ರಾಮ ವಿಠಲನ ಚರಣವ ತೋರಿಸು ವಿಶ್ವನಾಥ 3
--------------
ಗುರುರಾಮವಿಠಲ
ಸಲಹೊ ಶ್ರೀನಿವಾಸ-ಸುದ್ಗುಣ-ನಿಲಯವೆಂಕಟೇಶ ಜಲಜಾಂಬಕ ನೀನಲಸದೆ ಯೆನ್ನನು ಪ ವಾತವುಮಿತಿಮೀರಿ ಪಿತ್ತವ್ರಾತದೊಡನೆ ಸೇರಿ ಹೆಚ್ಚಿದ ಹೇತುವನೋಡಿ1 ಶ್ವಾಸನಿರೋಧದಲಿ ಸೇರಿದ-ಕಾಸಗಳುದರದಲಿ ಹೆಚ್ಚಿ ಬಲು ಘಾಸಿಪಡಿಸುತಿದೆ 2 ಕಾಯದ ಬಲವೆಲ್ಲಾ-ಕದಲುತ-ಮಾಯವಾದವಲ್ಲ ದಾಯತಪ್ಪಿ ದುರ್ವಾಯುವಿಂದ ತಲೆನೋಯುತ ದೇಹದೊಳಾಯಸ ಹೆಚ್ಚಿತು 3 ನಿದ್ರೆ ಬಾರದಯ್ಯಾ-ನಿಶಿಯೊಳ-ಗೆದ್ದಿರಬೇಕಯ್ಯಾ ಬಿದ್ದಾದ್ದಾಡಿಸುತಿದೆ 4 ಅನ್ನವರೊಚಕವು ಆಪ್ತರೊಳನ್ಯತೆಗೊಚರವು ಮುನ್ನವೈದ್ಯರುಗಳನ್ನು ಕಾಣೆ ನೀ ಕಣ್ಣತೆರದುನೊಡೆನ್ನ ಕಟಾಕ್ಷದಿ5 ರೋಗವುಘನವಯ್ಯಾ-ರೋದನೆ-ಯಾಗಿಹುದೆನಗಯ್ಯಾ ನೀನೇ ಗತಿಯೆಂದಿಗು 6 ಪರಮ ಪುರುಷ ನಿನ್ನ-ಚರಣವ ಮರಹೊಕ್ಕಿಹೆಮುನ್ನ ವರದ ವಿಠಲ ದೊರೆ ವರದಯಾನಿಧೇ 7
--------------
ಸರಗೂರು ವೆಂಕಟವರದಾರ್ಯರು
ಸಲಹೋ ಶ್ರೀನಿವಾಸ ಸದ್ಗುಣನಿಲಯ ವೆಂಕಟೇಶ ಪ ಜಲಜಾಂಬ ನೀನಲಸದೆ ಎನ್ನನು ಅ.ಪ ವಾತವು ಮಿತಿಮೀರಿ ಪಿತ್ತವ್ರಾತದೊಡನೆ ಸೇರಿ ಘಾತವು ಹೆಚ್ಚಿದ ಸೇರುವ ನೋಡಿ 1 ಶ್ವಾಸ ನಿರೋಧದಲಿ ಸೇರಿದ ಕಾಸುಗಳುದರದಲಿ ಕೇಶರಂಧ್ರವಕಾಶದೊಳೂಧ್ರ್ವ ಬಲು ಶ್ವಾಸ ಹೆಚ್ಚಿ ಘಾಸಿಪಡಿಸುತಿದೆ 2 ಕಾಯದಬಲವೆಲ್ಲಾ ಕದಲುತ ಮಾಯವಾದವಲ್ಲ ನೋಯುತ ದೇಹದೊಳಾಯಾಸ ಹೆಚ್ಚಿತು 3 ನಿದ್ರೆಬಾರದಯ್ಯ ನಿಶೆಯೊಳಗೆದ್ದಿರಬೇಕಯ್ಯಾ ಗುದ್ದಿಕೊಂಡು ಬಿದ್ದೊದ್ದಾಡಿಸುತಿದೆ4 ಅನ್ನವರೋಚಕವು ಅಪ್ತರೊಳನ್ಯತೆಗೋಚರವು ಕಾಣಿ ಕಣ್ಣತೆರೆದು ನೋಡೆನ್ನ ಕಟಾಕ್ಷದಿ5 ರೋಗವು ಘನವಯ್ಯಾರೋದನೆಯಾಗಿಹುದೆನಗಯ್ಯಾ ಭವ ರೋಗ ವೈದ್ಯ ನೀನೇಗತಿಯೆಂದಿಗು 6 ಪರಮಪುರುಷ ನಿನ್ನ ಚರಣವ ಮೆರೆಹೊಕ್ಕಿಹೆ ಮುನ್ನ ವರದವಿಠಲದೊರೆ ವರದದಯಾನಿಧೆ7
--------------
ವೆಂಕಟವರದಾರ್ಯರು
ಸಲಹೋ ಸಲಹೋ ಕರುಣಾಂಬುಧಿಯೇ ಕೋಲಜಾತಾ ತೀರ ನಿವಾಸಾ ಪ ವೃಂದಾವನದಿ ನಿಂದ ಮುನೀಂದ್ರ ಮಂದಜನನೌ‌ಘಕೆ ಕಲ್ಪ ಸಂಭೂಷಣ 1 ದೇವಸ್ವಭಾವ ಭೂದೇವವರೇಣ್ಯ ಕಾಯ 2 ಶ್ರೀಮಹಿವಲ್ಲಭ ಶಾಮ ಸುಂದರ ಪ್ರೇಮ ಪಡೆದ ನಿಷ್ಕಾಮಿ ಪ್ರಹ್ಲಾದನೆ 3
--------------
ಶಾಮಸುಂದರ ವಿಠಲ
ಸಂಸಾರದೊಳ್ ಪ ನಾನುನನ್ನದೆಂದು ವೃಥಾ ನರಳಿಬಳಲುವೆ ಅ.ಪ ತಂದೆ ತಾಯಿಯು ಬಂಧು ಬಳಗವು ಸಂ ಬಂಧಿಗಳೆಲ್ಲರು ಸತಿಸುತರೂ ಎಂದಿಗು ರಕ್ಷಕರೆಂದು ನೀ ತಿಳಿದು ಮಂದಮತಿಯೆ ಮುಂದೇ ಕೆಡುವೆಯೊ 1 ದುರ್ವಿದಗ್ಧ ವಿಜ್ಞಾನನಾಗಿ ಗರ್ವಪಡಲೂ ಸುಪರ್ವರ್ ನಗರೇ 2 ಸತ್ಯವೆಂಬುವದು ಮಾತೃ ಪಿತನು ಸ- ರ್ವೋತ್ತಮ ಜ್ಞಾನವು ಭೂತದಯೆಯು ಸ- ನ್ಮಿತ್ರಧರ್ಮವು ಭ್ರಾತೃಗಳ್ ಶಾಂತಿಯು ಪತ್ನೀ ಕ್ಷಮೆಯೂ ಪುತ್ರರ್ ನಿತ್ಯರಿವರು 3 ನಡೆವುದು ಯಾತ್ರೆಯು ನುಡಿವುದು ಮಂತ್ರ ನಡೆಸುವನು ಎಂದು ಧೃಡವಾಗಿ ನಂಬದೆ4 ಧ್ಯಾನನದೀಯೊಳು ಸ್ನಾನಮಾಡಿಸು- ಶ್ರೀನಿವಾಸನ ಸೇವೆಯಿದೆನ್ನದೆ 5 ಮೂರು ವಿಧವಾದ ಜೀವ ಕೋಟಿಯೊ- ಳಾರು ನಾನೆಂದು ದೂರದೃಷ್ಟಿಯಿಂ ಧೀರ ನಾಗಿದರ ಪರವ ಗಾಣದೆ 6 ನೀಮನವಲಿದು ವ್ಯರ್ಥನಾದೆ ನಾಮಾ ಜಪಿಸೀ ಕಾಮಿತ ಪಡಿಯದೆ 7
--------------
ಗುರುರಾಮವಿಠಲ
ಸಾಕು ಜನ್ಮದ ಸುಖವು ಸಾಕಿನ್ನು ಹರಿಯೇ ಪ ಅನೇಕ ಜನ್ಮದ ಸುಖ ಬೇಡ ಹರಿಯೇ ಅ.ಪ ಹದಿನೆಂಟು ಸಾಸಿರ ವಿಧವಿಧ ಜನ್ಮವ ಮೊದಲು ಕಳೆಯುತಲೀಗ ನರನಾಗಿ ಜನಿಸೀ ಕ್ರೋಧ ಲೋಭಗಳಿಂದ ಮದ ಮಾತ್ಸರ್ಯಗಳಿಂದ ಅಧಿಕ ಮೋಹಿತನಾದೆ ಪದುಮಾಕ್ಷ ಪರಂಧಾಮಾ 1 ನರಜನ್ಮ ಹಿರಿದೆಂದು ಅರಿತವÀರು ಪೇಳ್ವರು ಹರಿ ನಿನ್ನ ನುತಿಸಿ ಪಾಡುವ ಭಕ್ತ ಜನಕೆ ಪರಮಪಾತಕ ಗೈದು ನರಕಕೆ ಪೋಪೆನ್ನ ಮರಳಿ ಕಳುಹಲಿಬೇಡ ಧರಣಿಗೆ ದೇವ ದೇವ 2 ನರಕದೆ ಸುಖವುಂಟು ಧರೆಯಲ್ಲಿ ಸುಖವಿಲ್ಲ ಕರುಣಾಕರ ದೇವ ಸಿರಿಕಾಂತನೇ ಧರೆಯೊಳು ನಾನಿಹೆ ಅರೆಘಳಿಗೇ ನಿನ್ನ ಪರಮನಾಮಾವಳಿಯ ಸ್ಮರಣೆಯ ಕೊಡುಸಾಕು 3 ಗಂಗೆಯ ಜನಕನೆ ಮಂಗಳ ಮೂರುತಿ ಮಾಂಗಿರಿವರವಾಸ ಶ್ರೀಶ್ರೀನಿವಾಸ ಅಂಗಜಾತನ ತಾತ ಶೃಂಗಾರ ಪೂರಿತ ಭಂಗ ಮಾಡಿಸಬೇಡ ರಂಗೇಶ ಭವಬೇಡ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್