ಒಟ್ಟು 1042 ಕಡೆಗಳಲ್ಲಿ , 105 ದಾಸರು , 892 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಿಡಿಯಬ್ಯಾಡಿ ಮೌನ ಪಡೆದುಕೊಳ್ಳಿ ಖೂನ ಒಡೆದು ಹೇಳುತಾನೆ ನೋಡಿ ಸದ್ಗುರು ನಿಧಾನ 1 ಅಹಂಭಾವಬಿಟ್ಟು ಸೋಹ್ಯ ಕೇಳಿ ಗುಟ್ಟು ದೇಹ ಅಭಿಮಾನ ಸುಟ್ಟು ಜಯಸಿ ರತಿವಿಟ್ಟು 2 ಮಾಡಿ ಗುರುಭಕ್ತಿ ನೋಡಿ ಗತಿಮುಕ್ತಿ ಕೊಡುವ ಮಹಿಪತಿ ಸ್ವಾಮಿ ಸದ್ಗತಿ ಸುಯುಕ್ತಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹಿತದಿ ಜೀವಿಸು ಬಾಲೆ ಪತಿಯ ಪ ಸೇವಾನುಕೂಲೆ ಕ್ಷಿತಿಯೊಳಗೆ ಪತಿವ್ರತಾ ಧರ್ಮನಿರತಳೆನಿಸಿ ಬಹುಸುತರ ಪಡೆದು ಅ.ಪ ರತಿಪತಿಪಿತನಿಗೆ ಪ್ರತಿಮೆಗಳೆನಿಸುವ ಅತಿಥಿಗಳ ಸಂತತ ಸುಶೇವಾ- ರತಳು ಬಹು ಗುಣವತಿಯಳೆನಿಸುವ 1 ಗುರುಜನರಿಗೆ ಸದಾ ಶಿರಬಾಗಿ ನಡೆಯುತ ಹರುಷದಲಿ ಹರನರಸಿಯಳ ಪದ ಸರಸಿಜದಿ ಮನವಿರಿಸಿ ಪೂಜಿಸಿ 2 ಶರಣು ಜನಕೆ ಸುರತರುವೆನಿಪ ಕಾರ್ಪರ ಸಿರಿಮನೋಹರ ನರಹರಿಯ ಶುಭ ಚರಣಯುಗಲವ ಸ್ಮರಿಸುತನುದಿನ 3
--------------
ಕಾರ್ಪರ ನರಹರಿದಾಸರು
ಹುಚ್ಚು ಹಿಡಿಯಿತು ಎನಗೆ | ಹುಚ್ಚು ಹಿಡಿಯಿತು ಪ ಸ್ವಚ್ಛ ಭಾಗವತವ ಕೇಳಿ | ಅಚ್ಯುತನ್ನ ಮಹಿಮೆ ಎಂಬಮೆಚ್ಯಮದ್ದು ಶಿರಕೆ ಏರಿ | ಹುಚ್ಚು ಹಿಡಿಯಿತು ಅ.ಪ. ಶ್ರವಣ ಸ್ತವನ ಸ್ಮರಣೆ ಸೇವೆ | ಅವನ ಅರ್ಚನೆ ವಂದನೆ ಸಖ್ಯಅವ ದಾಸ್ಯ ಆತ್ಮ ಅರ್ಪಣ | ನವವು ವಿಧದ ಭಕ್ತಿಗಳಿಪ 1 ಸಪ್ತ ದಿನದ ಕ್ಲುಪ್ತಿಯಿಂದ | ಸರ್ಪಶಯನ ಮಹಿಮೆ ಶ್ರವಣಶೃತಿ ಬಧಿರ ವಾಯ್ತು ಆತ್ಮ | ರಿಕ್ತ ವಿಷಯ ಶ್ರವಣಕೆಲ್ಲ 2 ಸ್ತವನ ಮಾಳ್ಪ ಶುಕರ ದೇಹ | ಭವಣೆ ಮರೆತು ಕೀರ್ತಿಸಿದರುಅವರ ಕಂಡು ಲೋಕವಾರ್ತೆ | ಸ್ತವನ ಗೈವರ ದೂಡುವಂಥ 3 ಹರಿಯ ಸ್ಮರಿಸಿ ಪ್ರಹಲ್ಲಾದ | ಹರಿಯ ಕಂಡು ಭವವ ಗೆದ್ದಸ್ಮರಿಸಿ ಸ್ಮರಿಸಿ ಅದನ ನಾನು | ನರರ ನಡುವೆ ಮೂಕನಾಗ್ದ 4 ನಿತ್ಯ ಮಾಳ್ಪ ಹರಿಯ ಸೇವೆಅರ್ತುಸಂತರ ಸೇವೆ ವ್ಯತಿ | ರಿಕ್ತಕೆಲ್ಲ ಪ್ರತಿಯ ಭಟಿಪ 5 ಅಂಬೆ ರಮಣನರ್ಚಿಸೀದ | ಕುಂಬಾರ ಭೀಮನ ಕೇಳಿ ನಾನುಅಂಬುಜಾಕ್ಷನರ್ಚನೆಗಲ್ಲದ | ತುಂಬಿದ್ವ್ಯೊಭವ ಚೆಲ್ಲುವಂಥ 6 ಕೃಷ್ಣ ವಂದನ ಅಕ್ರೂರ ಗೈದು | ಸುಷ್ಠು ಹರಿಯ ರೂಪ ಕಂಡಜಿಷ್ಣು ಸಖನ ನಮಿಸದವರ | ಭ್ರಷ್ರ್ರರೆಂದು ಬೈಯ್ಯುವಂಥ 7 ನಿತ್ಯ ನೆನೆಯದವರ | ಕ್ಷಣವು ಅವರ ಸಂಗಜರಿವ 8 ಪಾರ್ಥ ಸಖ್ಯತನದಿ ಪರಮ | ಅರ್ಥ ಪಡೆದುದನ್ನ ಕೇಳಿನಿತ್ಯ ಸಖನ ಮರೆತ ಜನರು | ವ್ಯರ್ಥರೆಂದು ಅರ್ಥಿಲಿ ನಗುವ9 ಭೃತ್ಯ ಬಲಿಯು ತನ್ನನಿತ್ತಸತ್ಯ ವಾರ್ತೆ ಕೇಳಿ ಕೇಳಿ | ಪ್ರವೃತ್ತಿ ಗೈದಿನ್ಯತ ನೆದಿ 10 ನಿಚ್ಚ ಗುರು ಗೋವಿಂದ ವಿಠಲ11
--------------
ಗುರುಗೋವಿಂದವಿಠಲರು
ಹೊನ್ನು ಹೆಣ್ಣು ಮಣ್ಣು ಮಾಯೆಯದು ಮೂರು ರೂಪಗಳ ನಾನು ಪೇಳುವೆನು ಹೊನ್ನು ಹೆಣ್ಣು ಮಣ್ಣು ಎಂಬ ಮೂರವುಗಳ್ ಅವುಗಳನು ಹಂಬಲಿಸಿ ಕೆಡಬೇಡ ಮರುಳೆ ನೀನ್ ಅವುಗಳೇ ಮೃತ್ಯುವಿನ ಕಡೆಗೊಯ್ಯುವವುಗಳ್ 52 ಕಷ್ಟದಿಂ ಸೃಷ್ಟಿಯಲಿ ನಗ್ನತೆಯೆ ಸುಂದರವು ಕಷ್ಟದಿಂ ಮರಣದಲಿ ನಗ್ನತೆಯ ದೇಹ ಕಷ್ಟವಿಕ್ಕ್ಕೆಡೆಗಳಲಿ ನಾಸ್ತಿಸುಖ ಮಧ್ಯದಲಿ ಕನಕ ಕನಕವದೆಂದು ಹೊನ್ನ ಪೇಳುವರು53 ಮೋಹಿನಿಯು ತಾನಾಗಿ ದ್ಯೆತ್ಯರನು ವಂಚಿಸಿದ ಮೋಹಿನಿಯು ತಾನಾಗಿ ರುದ್ರ ವಂಚಿತನು ಮೋಹಿನಿಯು ತಾನಾಗಿ ಸುಂದೋಪಸುಂದ ವಧೆ ಮೋಹಿನಿಯು ಪೆಣ್ಣು ಮೋಸವದಲ್ತೆ ಮನುಜ? 54 ಮಣ್ಣಿನಿಂದಲೆ ಹರಿಯು ದೇಹವನು ಸೃಷ್ಟಿಸುವ ಮಣ್ಣೆ ಅನ್ನವದಾಗೆ ಪಾಲಿಸುವ ನಮ್ಮ ಮರಣಕಾಲದಲದುವೆ ಮಣ್ಣನಪ್ಪುವದು ತಿಳಿ ಮಣ್ಣಿಗಾಗಿಯೇ ನೀನು ಹಂಬಲಿಪೆಯೇಕೆ 55 ಪ್ರಾಣದೇವರೆ ನಿನ್ನ ಉಸಿರಾಟ ಕಾರಣರು ಪ್ರಾಣನುಸಿರಾಟವದು ಯಾರಿಂದಲಹದು? ಅವನೆ ಪರಮಾತ್ಮ ತಿಳಿ ದೇವಾಧಿದೇವನವ ನಿನ್ನ ಬಾಳಿಗೆ ಕಾರಣರು ಇಬ್ಬರಹರು56 ಸೂರ್ಯದೇವನು ನೇತ್ರತತ್ವಕ್ಕೆ ಒಡೆಯನವ ಸೂರ್ಯನದು ಕಣ್ಣು ಯಾರಿಂದ ತೋರುವುದು? ಅವನೆ ಪುರುಷೋತ್ತಮನು ಪರಮಾತ್ಮ ಹರಿಯವನು ಆ ವಿಶ್ವರೂಪಿಯೇ ವಿಶ್ವಧಾರಕನು57 ವಾಸದಿಂ ಬೆಳಗಿಸುವ ಕಾರಣದಿ ಭಗವಂತ ವಾಸುದೇವಾತ್ಮಕನು ಸೃಷ್ಟಿಮೂಲನವ ವಸುದೇವಪುತ್ರನಾಗವತರಿಸಿ ಸಿರಿವರನು ಉಡುಪಿಯಲಿ ಪೂಜೆಗೊಂಬನು ನಿಜವ ಪೇಳ್ವೆ 58 ಕೃತಯುಗದ ಭಾರ್ಗವನು ತ್ರೇತೆಯಲಿ ದಾಶರಥಿ ದ್ವಾರಪದ ಕೃಷ್ಣ ನೀನೇಯಿರುವೆ ದೇವಾ ಮಧ್ವವರದನು ನೀನು ಭಾರ್ಗವನ ನೋಡಲ್ಕೆ ಉಡುಪಿಗೇ ಬಂದಿರುವೆ ಪರಮಾತ್ಮ ನೀನು 59 ಪರಶುರಾಮ ಕ್ಷೇತ್ರ ಶ್ರೀಕೃಷ್ಣನ ಕ್ಷೇತ್ರ ಪದ್ಮನಾಭಕ್ಷೇತ್ರ ಶಂಕರಕ್ಷೇತ್ರ ಹಲವಾರು ದೇವತೆಗಳಿಲ್ಲಿ ನೆಲೆಗೊಳ್ಳುತ್ತ ಪಾವನವ ಗೈಯುವರು ಭೂಮಿಯನ್ನಿದನು 60 ತುಲೆಯಲ್ಲಿ ತೂಗಿದಾಗುತ್ತಮವದದರಿಂದ ತುಲು ದೇಶವಿದು ಜಗದಿ ವಿಖ್ಯಾತವಹುದು ತುಲು ಲಿಪಿಯೆ ಸರ್ವಮೂಲ ಗ್ರಂಥ ಲೇಖನಕೆ ವೇದಾದ್ರಿಯಾಯಿತಿದು ವೇದಾಂತಭೂಮಿ 61 ಮಧ್ಯಗೇಹದ ಭಟ್ಟರಿಂ ಸೇವೆಯ ಪಡೆದು ವಾಯುದೇವೋತ್ತಮನ ಮಗನಾಗಿ ಕೊಡಿಸಿ ಸಜ್ಜನರ ಹೃದಯದಲಿ ಮುಖ್ಯ ತತ್ವವ ತಿಳಿಸೆ ಸರ್ವಜ್ಞ ಮೂರ್ತಿಯನು ತಂದಿರುವೆ ದೇವಾ62 ಪರಶುರಾಮನ ರೂಪದಿಂ ನೀಂ ತಪಗೈದ ಪಾಜಕ ಕ್ಷೇತ್ರದಲಿ ಭಕುತನವತರಿಸೆ ಜ್ಞಾನರೂಪದ ನೀನು ಅವನ ಹೃದಯವ ಪೊಕ್ಕು ಮಧ್ವಮತವನು ನೀನು ಪಸರಿಸಿದೆ ಹರಿಯೆ 63
--------------
ನಿಡಂಬೂರು ರಾಮದಾಸ
ಹೋಗುತಾದೋ ಹೊತ್ತು ಹೋಗುತಾದೋ ಸಾಗಿ ಮುಂಚೆ ಮತ್ತೆ ತಿರುಗಿ ಬಾರದಂತೆ ಪ ಹಿಂದಿನ ಸುಕೃತದಿಂದ ಒದಗಿದಂಥ ಸುಂದರಮಾದ್ಹೊತ್ತು ಎಂದೆಂದು ಸಿಗದಂತೆ 1 ಅರ್ತುಕೊಂಡವರಿಗೆ ಸಾರ್ಥಕಗೊಳಿಸುತ್ತ ಮರ್ತಕರಿಗೆ ಮತ್ತೆ ಗುರ್ತು ತೋರದಂತೆ 2 ಎಷ್ಟೆಷ್ಟೋ ಯೋನಿಯೊಳ್ಹುಟ್ಟ್ಹುಟ್ಟಿ ಬಲಗೋ ಳಿಟ್ಟು ಪಡೆದ ಹೊತ್ತು ನಷ್ಟವಾಗುತ ವ್ಯರ್ಥ 3 ಅಘನಾಶಗೊಳಿಸಿ ಬಹು ಮಿಗಿಲಾದ ಪದವೀನ ಸಿಗದಂಥ ವಸ್ತಿದು ಅಗಲಿ ತಾ ಸುಮ್ಮನೆ 4 ನೇಮವಲ್ಲೆಲೋ ಮತ್ತೆ ಆ ಮಹ ಸಮಯವು ಪಡಿ 5
--------------
ರಾಮದಾಸರು
ಹ್ಯಾಗೆ ಉದ್ಧಾರ ಮಾಡುವನೋ ಹರಿ ಹೀಗೆ ದಿನಗಳ ಕಳೆಯುವರ ಪ. ಆದಿಮೂರುತಿ ಶ್ರೀ ದೇವ ಪದುಮನಾಭ ವೇದ ಉದ್ಧಾರನೆಂದನಲಿಲ್ಲ ಸಾದರದಲಿ ಹರಿ ಸಕಲರಿಗೊಡೆಯನೆಂ ದಾದರದಲಿ ನಾ ಪಾಡಲಿಲ್ಲ 1 ಮೃಚ್ಛಕೂರ್ಮಹರಿ ಸ್ವಚ್ಛÀವರಹನೆಂದು ಉಚ್ಚಧ್ವನಿಯಿಂದ ಕೂಗಲಿಲ್ಲ ತುಚ್ಛಕನ ಕೊಂದು ಅಚ್ಚ ಭಾಗವತಗೆ ಮೆಚ್ಚಿ ರಕ್ಷಿಸಿದನೆಂದೆನಲಿಲ್ಲ 2 ಚಲುವ ವಾಮನನಾಗಿ ಬಲಿಯ ದಾನವ ಬೇಡಿ ಮಲವನಳಿವ ಗಂಗೆ ಪಡೆದನೆಂದು ಕುಲವಳಿದು ಭೂಲಲನೆಯ ವಿಪ್ರರಿ ಗೊಲಿದು ಇತ್ತನೆಂದು ನೆನೆಯಲಿಲ್ಲ 3 ಸೀತೆಗಾಗಿ ಪಡೆಸವರುತ ಹರುಷದಿ ವಾತತನಯಗಜಪದವಿತ್ತನ ಈತನೆ ಪರದೈವನಾಥನು ಪರಕೆಂದು ಪ್ರೀತಿ ಭಕ್ತಿಯಲಿ ಮೈಮರೆಯಲಿಲ್ಲ 4 ಗೋಪಿಯರ ಕೂಡಿ ಗೋಪನ ಮನೆಯಲಿ ಶ್ರೀಪತಿ ಲೀಲೆಯ ತೋರ್ದನೆಂದು ಪಾಪದ ಕಾಷ್ಠಕೆ ಪಾವಕನಾಗಿಹ ತಾಪಹರನ ನಾ ನೆನೆಯಲಿಲ್ಲ 5 ಲಲನೇರ ವ್ರತವಳಿದು ಚಲುವ ಕುದುರೆ ಏರಿ ಕಲಿಮುಖರನು ಸದೆಬಡಿದನೆಂದು ಚಲುವ ಗೋಪಾಲನೆ ನೀನೇ ಗತಿ ಎಂದು ಹಲವು ಬಗೆಯಿಂದ ಪೊಗಳಲಿಲ್ಲ 6 ಗುರುಗಳು ಪೇಳಿದ ಪರಮ ರಹಸ್ಯವು ಅರಿವಾದರೂ ಅನುಭವ ಇಲ್ಲ ಪರಿಪರಿ ಮಹಿಮೆಯ ಉದಯಸ್ತ ಪರಿಯಂತ ಅರಿವು ಮನಕೆ ಎನಗಾಗಲಿಲ್ಲ 7 ದೇಹಸ್ತ ಹರಿ ಎಂದು ದೇಹವ್ಯಾಪ್ತನು ಎಂದು ದೇಹ ಗೇಹ ಜೀವ ಭಿನ್ನವೆಂದು ಶ್ರೀ ಹರಿ ಜೀವಾಂತರ್ಯಾಮಿಯಾಗಿಹನೆಂದು ಮೋಹವಳಿದು ಜ್ಞಾನ ಪುಟ್ಟಲಿಲ್ಲ 8 ತತ್ವಾಧಿಪತಿ ಹರಿ ತತ್ವಾಭಿಮಾನಿಗಳು ನಿತ್ಯ ಹರಿಮಾರ್ಗ ತೋರ್ವರೆಂದು ಸತ್ಯವಚನವನು ವಾಯು ಮತದಿ ನಂಬಿ ಭೃತ್ಯ ಭಾವವ ನಾ ವಹಿಸಲಿಲ್ಲ 9 ಎಷ್ಟು ಹೇಳಲಿ ಎನ್ನ ಅವಗುಣಗಳನೆಲ್ಲ ದೃಷ್ಟಿಯಿಂದಲಿ ನೋಡಿ ನೀನೆ ಸಲಹೋ ಬೆಟ್ಟದೊಡೆಯನಾಗಿ ಎಲ್ಲರ ಸಲಹುವ ಅಷ್ಟಭುಜ ಗೋಪಾಲಕೃಷ್ಣವಿಠಲ10
--------------
ಅಂಬಾಬಾಯಿ
ಹ್ಯಾಂಗೆ ಉದ್ಧಾರ ಮಾಡ್ಯಾನೋ ಶ್ರೀಹರಿ ಹೀಗೆ ದಿನಗಳಿವಂಗನಿಗೆ ಪ ಬ್ಯಾಗ ಪತಿಗೆ ತಾ ಬಾಗದನುಕೂಲವಾಗಿರದೆ ತಿಳಿದ್ಹಾಗೆ ನಡೆವಳ ಅ.ಪ. ಉದಯದಲೆದ್ದತಿ ಸಜಮಲಳಾಗಿ ತಾ ಮುದದಿ ಪತಿಗೆ ನಮಿಸದವಳಿಗೆ ಪದುಮಾಕ್ಷಿ ತುಳಸಿಯ ಪೂಜಿಸಿ ಮನದಿ ಮಾಧವನ ಭಕ್ತಿಲಿ ಸ್ತುತಿಸದವಳಿಗೆ ಪದುಮನಾಭನೇ ಸರ್ವಪರನೆಂದು ಅರಿಯದೆ ಅಧಮ ಶಾಸ್ತ್ರವ ಕೇಳಿ ಅದರಂತೆ ನಡೆವಳ 1 ಹರಿದಿನದಲಿ ಉಂಡು ಹರಿಯನ್ನದಲೇ ಊರ ತಿರುಗಿ ಹೊತ್ತು ಕಳೆವಳಿಗೆ ಸರಸದಿ ನರಹರಿ ನಾಮ ಸಂಕೀರ್ತನೇ ಇರುಳು ಜ್ಯಾಗರ ಮಾಡದವಳಿಗೆ ದೊರಕಿದಷ್ಟರಲೇ ತಾ ಹರುಷ ಪಡೆದೇ ಧನ ಪತಿ ಹೊರಗ್ಹಾಕ್ವಳ 3 ಗುರು ಹಿರಿಯರ ಅತ್ತೆಮಾವರ ಜರಿದು ತಾ ಹಿರಿಯಳು ಮನಿಗೆ ನಾನೆನುತಿರ್ಪಳು ಪರರ ನಿಂದಿಸಿ ಭೂಸುರರು ಬಂದರೆ ಅನ್ನ ದೊರಕದೆನುತ ಹೇಳಿ ಕಳಹುವಳ ಸರಸ ಮೃಷ್ಟಾನ್ನವ ಹರುಷದಿ ಪತಿದ್ವಾರಾ ಹರಿಗರ್ಪಿಸದಲೇ ತ್ವರದಿ ತಾ ತಿನ್ವಳ 3 ಪತಿ ಅಂತರ್ಯಾಮಿ ಶ್ರೀ ಪತಿಯನರಿದು ತನ್ನ ಪತಿಯ ಸೇವೆ ಮಾಡದಿರುವಳಿಗೆ ಪತಿ ಮುಕ್ತಿ ಪಥವೆಂದು ಪತಿಹಿತದವನೆಂದು ಅರಿಯದೇ ಪತಿ ನೋಡ್ವಳಿಗೆ ಪತಿಯಿಂದಲಂಕೃತವಾಗಿಹ ಮಂಗಳಸೂತ್ರವೇ ಸಕಲ ಭೂಷಣವೆಂದರಿಯದವಳಿಗ್ಹಾಂಗೆ 4 ಪರಮ ಅತ್ತೆಯ ಮಾತು ಶಿರದಿ ಸ್ವೀಕರಿಸಿ ಐವರ ಕೂಡ ಧಾರೆಯರೆಸಿಕೊಂಡಾ ಪರಮ ಪಾವನಳಾದ ಭಾರತೀ ದೇವೇರ ಸ್ಮರಿಸದೇ ಅದರಂತಾಚರಿಸದೆ ಇರುವಳಿಗ್ಹ್ಯಾಂಗೆ 5 ವನವಾಸದಲಿ ಪಾಂಡು ತನಯರ ಕೂಡ ತಾ ಧನ ಸುಖ ಬೇಡದೆÀ ಪೋದವಳು ಘನ ಹಸಿವುತೃಷೆಯಿಂದ ಅನ್ನ ಬೇಡಿದ ದುರ್ವಾಸಾದಿಗಳನು ಆದರಿಸಿದವಳಾ ಆಜನನಿ ದೃಪವ ನಂದನಿಯ ಕೃತ್ಯಗಳನ್ನು ನೆನೆದು ತನ್ನಯ ಮನವನ್ನು ತೊಳೆಯದವಳು 6 ಮರುತಂತರ್ಗತ ಸ್ವಾಮಿ ಸಲಹೆನ್ನದೇ ಪರರಿಗೊಂದೆಡೆ ಇಕ್ಕಿ ಪಂಕ್ತಿ ಭೇದವ ಮಾಡಿ ಕರ್ಮ ಮಾಡ್ವಳಿಗೆ ಪರಮ ಪಾವನನಾದ ಹನುಮೇಶವಿಠಲನ ನೆರೆ ನಂಬದಲೇ ದೇಹ ಸ್ಥಿರವೆಂದು ತಿಳಿವಳಿಗ್ಹ್ಯಾಂಗ 7
--------------
ಹನುಮೇಶವಿಠಲ
(ಅ) ಶ್ರೀಹರಿಸ್ತುತಿ87ಎಷ್ಟು ಆನಂದವೊ ಶ್ರೀಹರಿಯ ಭಜನೆ ಪದುಷ್ಟತರ ದೋಷಗಳು ಬಳಲುವಕಷ್ಟಗಳ ಪರಿಹರಿಸಿ ಸರ್ವೋತ್ಕøಷ್ಟ ಪದವಿಯ ಕೊಡುವ ಲಕ್ಷ್ಮೀಇಷ್ಟನಾರಾಯಣನ ಭಜನೆ 1ಪದ್ಮದಳನಯನ ಪ್ರತಿಷ್ಠೆಯಪದ್ಮಶಾಲಿಯ ಭಕ್ತರೆಲ್ಲರುಪದ್ಮನಾಭನ ಪ್ರೀತಿಮಾಡಿ ಸುಭದ್ರಸಂಪದ್ಯುಕ್ತರಾದರು 2ಮಂದಿರವು ಕಟ್ಟಿಸಿಯು ಪರಮಾನಂದದಿಂ ಉತ್ಸವವು ನಡಿಸಿದರೆಂದು ಕೇಳಿದ ಭಾಗ್ಯಶಾಲಿಗಳುಇಂದಿರೇಶನ ಕೃಪೆಯ ಪಡೆದರು 3ಅಂಬುಜೋದರದಾಸರೆಲ್ಲರುತಂಬುರೆಯು ಕರತಾಳವಾದ್ಯವಿಜೃಂಭಿಸಿ ಹರಿಸ್ಮರಣೆಯ ಮಾಡುತಸಂಭ್ರಮದಿ ಬಂದವರು ನೋಡಲು 4ವಾಸುಕೀನಗರೇಶ ದಾಸರದಾಸರಾಗಿಯು ತುಲಸಿರಾಮದಾಸ ಪರಮೋಲ್ಲಾಸದಿಂ ಶ್ರೀವಾಸುದೇವನ ಚರಣನಂಬಿದೆ 5
--------------
ತುಳಸೀರಾಮದಾಸರು
(ಕೇಶವಾಯ ನಮಃ ದಿಂದ ಆರಂಭವಾಗುವ ಆಚಮನ ಸ್ತುತಿ)ಶ್ರೀನಿವಾಸಾಯ ನಮೋ ಪ.ಶ್ರೀನಿವಾಸಾಯ ಶತಭಾನುಪ್ರಕಾಶಾಯಶ್ರೀನಿವಾಸಾಯ ನಿಜ ಭಕ್ತಜನಪೋಷಾಯಶ್ರೀನಿವಾಸಾಯ ಪರಮಾನಂದಘೋಷಾಯ ಅ.ಪ.ದೋಷಗಂಧವಿದೂರ ಕೇಶಿಮುಖದಾನವ ವಿ-ನಾಶವಿಧಿಭವಸುಖನಿವಾಸ ವಾಸುಕಿಶಯನವಾಸವಾದ್ಯಮರಗಣಪೋಷ ಪಾವನವೇಷ ಶ್ರೀಶ ನಿರ್ಗತವಿಶೇಷದಾಸಜನಹೃದಯಾಬ್ಧಿಭೇಶ ಕೌಸ್ತುಭಮಣಿವಿ-ಭೂಷ ಭೂತಾತ್ಮ ಭವಪಾಶಹರ ಪರತರ ದ-ಯಾ ಸಮುದ್ರ ವಿನಿದ್ರ ಭೂಶಯನ ಭೂರಿಪ್ರದಕೇಶವಾಯ ನಮೋನಮಃ 1ಕ್ಷೀರಸಾಗರವಾಸ ಶ್ರೀರಮಾಪ್ರಾಣೇಶಸಾರಭೋಕ್ತøಸ್ವತಂತ್ರ ಚಾರುಷಡ್ಗುಣಭರಿತನಾರದಾದಿಮುನೀಂದ್ರವಾರಸನ್ನುತಪಾದನೀರರುಹದ್ವಂದ್ವನೆವಾರಿಜಾಸನಮುಖ್ಯಸುರರುತಿಳಿಯರು ನಿನ್ನಭೂರಿಮಹಿಮೆಗಳ ಸಾಕಾರವನು ಬಣ್ಣಿಸುವಧೀರನಾವನು ಮಹಾ ವೀರ ವಿಶ್ವಾಧಾರನಾರಾಯಣಾಯ ನಮೋ 2ವೇದವೇದ್ಯನೆ ದುರಿತಶೋಧನೆ ದೈತ್ಯಗಣ-ಛೇದಕನೆ ಸುರಸುಪ್ರಸಾದಕನೆ ಭಕ್ತಜನ-ಮೋದದಾಯಕ ಸ್ವಗತ ಭೇದವರ್ಜಿತಸಮಾನಾಧಿಕ್ಯರಹಿತ ಸತತಆದಿತ್ಯ ಶತಕೋಟಿತೇಜೋವಿರಾಜ ಮಹ-ದಾದಿಕಾರಣ ಮಧುವಿರೋಧಿ ಮಂಗಲಸುಖಾಂ-ಬೋಧಿ ಪದ್ಮಾಲಯವಿನೋದಿ ರಾಧಾರಮಣಮಾಧವಾಯ ನಮೋನಮಃ 3ಇಂದಿರಾಹೃದಯಾಬ್ಧಿ ಚಂದ್ರ ಚಾರ್ವಂಗ ಮುಚು-ಕುಂದಾಪ್ತ ಸರ್ವಶ್ರುತಿವೃಂದಪ್ರತಿಪಾದ್ಯ ಸಾ-ನಂದ ಭರಿತ ಕಾಳಿಂದೀರಮಣ ರಾಮಚಂದ್ರಸನ್ನುತಮಹೇಂದ್ರವಂದಾರುಜನತ್ರಿದಶಮಂದಾರ ಕೋಮಲಿತವೃಂದಾವನವಿಹಾರ ಕಂದರ್ಪಜನಕ ಬಾ-ಳೇಂದುಶೇಖರಸಖ ಸನಂದನಾರ್ಚಿತ ಶ್ರೀಗೋವಿಂದಾಯತುಭ್ಯಂ ನಮಃ 4ಜಿಷ್ಣುರಥಸಾರಥಿ ತ್ರಿವಿಷ್ಟಪಸಭಾಧ್ಯಕ್ಷಮುಷ್ಟಿಕಾಸುರವೈರಿ ಮುನಿಜನಮನೋಹಾರಿಮುಟ್ಟಿ ಭಜಿಪರ ಮನೋಭೀಷ್ಟವ ಸಲ್ಲಿಸುವ ಶ್ರೇಷ್ಠ ಪೂರ್ಣಬ್ರಹ್ಮನೇಭ್ರಷ್ಟಸಂಸಾರದೊಳು ನಷ್ಟ ಬುದ್ಧಿಗಳಿಂಗೆತುಷ್ಟಿಯನು ನೀನಿತ್ತು ಸಲಹೊ ಸಾಮಜವರದಬೆಟ್ಟದೊಡೆಯನೆ ಕೃಪಾದೃಷ್ಟಿಯಿಂದಲಿನೋಡುವಿಷ್ಣವೇತುಭ್ಯಂ ನಮೋ 5ವಿಧಿಭವಾದಿ ಸಮಸ್ತ ತ್ರಿದಶಜನಸುಖದಾತಬುಧಜನಪ್ರಿಯ ಭೂತಭಾವನ ಜಗನ್ನಾಥಪದುಮಾಕ್ಷ ಪಾಂಡವಪ್ರತಿಷ್ಠಾಪನಾಚಾರ್ಯಮದನಕೋಟಿಸ್ವರೂಪವಿದುರನಾಲಯದಲ್ಲಿ ಪಾಲುಂಡ ಬ್ರಹ್ಮಾಂಡ-ಕಧಿಪತಿ ಕಲಿಮಲನಾಶ ಕವಿಜನಮನೋಲ್ಲಾಸವಿಧುಮಂಡಲಸ್ಥ ಸದ್‍ಹೃದಯಪಂಕಜವಾಸಮಧುಸೂದನಾಯ ನಮೋ 6ಅಕ್ರೂರವರದ ಸದತಿಕ್ರಮರ ಗೆಲಿದ ಹಯ-ವಕ್ತ್ರವೈಕುಂಠಾಖ್ಯ ಪುರವಾಸ ಜಗದೀಶಶುಕ್ರ ಶಿಷ್ಯರನೆಲ್ಲ ಪರಿಹರಿಸಿ ಪಾಲಿಸಿದೆ ಶಕ್ರಾದಿಸುರಗಣವನುಚಕ್ರ ಶಂಖ ಗದಾಬ್ಜಧರ ಚತುರ್ಭುಜ ದೇವ-ಚಕ್ರವರ್ತಿಯನಂತಕೀರ್ತಿ ಪಾವನಮೂರ್ತಿನಕ್ರಮದಹರನಾದ ಬ್ರಹ್ಮ ಗಂಗಾಪಿತತ್ರಿವಿಕ್ರಮಾಯ ನಮೋನಮಃ 7ರಾಮಣೀಯಕ ವಪು ನಿರಾಮಯ ನಿರಾಶ್ರಯ ಸು-ದಾಮಸಖ ಪರಿಪೂರ್ಣಕಾಮ ಕೈರವದಳ-ಶ್ಯಾಮ ಕಲ್ಯಾಣ ನಿಸ್ಸೀಮ ಮಹಿಮನೆಸುಜನಸ್ತೋಮಸುರಕಾಮಧೇನುಗೋಮಿನೀಪತಿ ಗೋಗಣಾನ್ವಿತನೆ ಗೋಪೀಲ-ಲಾಮ ಗೋವರ್ಧನೋದ್ಧಾರ ಗೋವಿದಾಂಪತಿ ವಿ-ರಾಮ ವಿಷ್ವಕ್ಸೇನ ವಿಶ್ವತೈಜಸಪ್ರಾಜÕವಾಮನಾಯ ನಮೋನಮಃ8ಆದಿಮಧ್ಯಾಂತವಿರಹಿತ ನಿಖಿಲಸಾರ್ಚಿತ ವಿ-ರಾಧಭಂಜನ ಭವಾಂಬೋಧಿಕುಂಭಜ ಭಜಕ-ರಾದವರನುದ್ಧರಿಪ ಬೋಧರೂಪನೆಚತುಷ್ಟಾದ ಪಾವನಚರಿತನೆಗಾಧಿಜಾಧ್ವರಪಾಲ ಗರುಡಧ್ವಜ ದಯಾಳುನಾದಬಿಂದು ಕಲಾತೀತ ರುಕ್ಮಿಣಿನಾಥಬಾದರಾಯಣನೆ ನಿರುಪಾಧಿ ಮಾಯಾತೀತಶ್ರೀಧರಾಯ ನಮೋನಮಃ 9ಪಾಶಧರನುತ ವೆಂಕಟೇಶ ಸರ್ವೇಂದ್ರಿಯಪ್ರ-ಕಾಶ ಪಾಲಿತನಿಖಿಳಭೂಸುರವ್ರಜ ಮಂದ-ಹಾಸಮುಖ ನವಕುಂದಭಾಸರದನವಿರಾಜದೂಷಣಾದ್ಯ ಸುರಹರನೆಈಶಪತಿಸೇವ್ಯಾಂಬರೀಶನೃಪವರದ ಪರ-ಮೇಶ ಕೋವಳಪೀತವಾಸ ಕರ್ದಮಶುಕಪ-ರಾಶರಾದ್ಯಮಿತಯೋಗೀಶರಕ್ಷಕಹೃಷೀಕೇಶಾಯ ತುಭ್ಯಂ ನಮೋ 10ಶುದ್ಧ ತ್ರಿಗುಣಾತೀತ ತ್ರಿವ್ರತ ತ್ರಿಜಗತ್ಪಾಲಪ್ರದ್ಯುಮ್ನ ಪ್ರಥಮಾಂಗದೊಡೆಯ ಪರಮಾತ್ಮ ಸುರ-ಸಿದ್ಧ ಪೂಜ್ಯ ಪುಂಡರೀಕದಳಾಕ್ಷಬುದ್ಧಬುಧಜನಸುಲಭಮಧ್ವವಲ್ಲಭ ಮಂತ್ರಮೂರ್ತಿ ಕ್ಷೀರಾಬ್ಧಿ ಶ್ವೇತದ್ವೀಪವೈಕುಂಠಮಂದಿರತ್ರಯ ಸಾಧು-ಹೃದ್ಯ ಭಕ್ತದ್ವೇಷಭಿದ್ಯ ನಿತ್ಯಾತ್ಮ ಶ್ರೀಪದ್ಮನಾಭಾಯ ನಮಃ11ಸಾಮಗಾನವಿನೋದ ಸಾಧುಜನಸುಖಬೋಧಕಾಮಿತಾರ್ಥಪ್ರದಾತ ಕಪಿಲಋಷಿ ಪ್ರಖ್ಯಾತವ್ಯೋಮಯಾನವರೂಥ ಓಂಕಾರಭರಿತ ರಘುರಾಮಸಮರಂಗ ಭೀಮನಾಮಧಾರಕರ ಪರಿಣಾಮರೂಪಕ ಸುಜನ-ಕ್ಷೇಮಪ್ರಾಪಕ ನೀಲಜೀಮೂತನಿಭವರ್ಣಭೌಮಪುರುಷೋತ್ತಮ ನಿಯಾಮಕನೆ ರಕ್ಷಿಸೈದಾಮೋದರಾಯ ನಮೋ 12ಶಂಕರಾಂತರ್ಯಾಮಿ ಶಾಙ್ರ್ಗಪಾಣಿ ಶರಣ್ಯವೆಂಕಟಾಚಲಸದಾಲಂಕಾರ ಶೇಷಪರಿ-ಯಂಕ ಪ್ರವಿತತನಿಷ್ಕಳಂಕಚಾರಿತ್ರ ಸುಸಂಕುಲಾರ್ಚಿತ ಪದಯುಗಲಂಕಾಧಿಪತ್ಯವ ವಿಭೀಷಣನಿಗೊಲಿದಿತ್ತಓಂಕಾರನಿಧನ ಸಾಮಕಭಕ್ತರಾನೇಕಸಂಕಟವ ಪರಿಹರಿಪ ಸತ್ಯ ಸಂಕಲ್ಪ ಶ್ರೀಸಂಕರ್ಷಣಾಯ ನಮೋ13ಈ ಸಮಸ್ತ ಜಗತ್ತು ನಿನ್ನುದರದೊಳಗಿಹುದುಈ ಸಕಲಜೀವರೊಳಗಿಹ ನಿತ್ಯನಿರ್ಮುಖ್ಯಸೂಸಿಬಹ ಸಂಸಾರಸಾಗರದಿ ಮುಳುಗಿದೆನುನೀ ಸಲಹೊ ದೇವದೇವಭೂಸಲಿಲಪಾವಕಾಕಾಶಾದಿ ಭೂತಾಧಿ-ವಾಸ ರಾಕ್ಷಸವನಹುತಾಶ ನಾನಾ ರೂಪ-ವೇಷಧಾರಕ ನರಾವೇಶ ಪಾಲಿಸು ಎನ್ನವಾಸುದೇವಾಯ ನಮೋ 14ಅದ್ವಿತೀಯನೆಯಮಿತವಿಕ್ರಮನೆ ಗುಣಕಾಲವಿದ್ಯಾಪ್ರವರ್ತಕನೆ ವಿಶ್ವಾದಿ ಸಾಹಸ್ರಸಿದ್ಧನಾಮ ನರನಾರಾಯಣಪರಾಯಣನೆ ಬುದ್ಧಿಪ್ರೇರಕಪ್ರೇರ್ಯನರುದ್ರರೂಪಪ್ರತಾಪ ಋಗ್ಯಜುಸ್ಸಾಮಶ್ರುತಿ-ವೇದ್ಯ ಬ್ರಹ್ಮಾಂಡಕೋಟಿಗಳ ಸಲೆ-ಬದ್ಧಕಮನೀಯರೂಪಸುತಪದುರಾಪಪ್ರದ್ಯುಮ್ನಾಯ ತುಭ್ಯಂ ನಮಃ 15ಉದ್ಧವಾದಿ ಸಮಸ್ತ ಭಾಗವತಜನಕಮಲ-ಮಧ್ಯಚರರಾಜಹಂಸಾಯ ಮಾನಸದಶ್ರದ್ಧೆಯಂ ಕೊಟ್ಟು ರಕ್ಷಿಸು ಧೊರೆಯೆಶ್ರೀಹರಿಯೆ ವೈದ್ಯನಾಥವಿಧಾತನೆಬದ್ಧನಾದೆನು ಕರ್ಮಪಾಶದಿಂದ ದೊರೆ ಸಿಕ್ಕಿ-ಬಿದ್ದೆ ಕೈಪಿಡಿದೆಬ್ಬಿಸೆನ್ನನೆಲೆದೇವ ಮರೆಹೊದ್ದಿದೆನು ಮೈದೋರು ಚಿನುಮಯಾತ್ಮಕನೆಅನಿರುದ್ಧಾಯ ತುಭ್ಯಂ ನಮಃ 16ಕ್ಷರ ಪುರುಷರೆಲ್ಲ ಬ್ರಹ್ಮಾದಿ ಜೀವರು ರಮಾಕ್ಷರಪುರುಷಳೆನಿಸುವಳು ನೀನೆ ಉತ್ತಮ ಪರುಷಪರತರಾವ್ಯಯಲೋಕಭರಿತಮಂಗಲರಿತ ಗುರುತಮ ಗುಣಧ್ಯಕ್ಷನೆಶರಧಿಸೇತುನಿಬದ್ಧ ಶಬರಿ ಹಣ್ಣನು ಮೆದ್ದಶರಭಂಗಮುನಿಪಾಲ ಶಮಿತದಾನವಜಾಲಧುರವಿಜಯ ವಿಜಯಮೈದುನ ಕೃಷ್ಣ ರಕ್ಷಿಸೈಪುರುಷೋತ್ತಮಾಯನ್ನಮೋ 17ಅಕ್ಷಯಾತ್ಮನೆ ವಿಶ್ವರಕ್ಷಕನೆ ವಿಶ್ವಭುಗ್-ವಿಶ್ವತೋಮುಖ ವಿಶ್ವತೋಬಾಹು ಕರುಣಾಕ-ಟಾಕ್ಷದಿಂ ನೋಡೆನ್ನಮ್ಯಾಲೆದಯಮಾಡು ಶ್ರೀವಕ್ಷಸ್ಥಲನಿವಾಸನೆಲಕ್ಷ್ಮಣಾಗ್ರಜನೆ ಸುವಿಲಕ್ಷಣನೆ ಸುಜ್ಞಾನ-ಮೋಕ್ಷದಾಯಕ ಯಜÕಮೂರ್ತಿ ರೂಪತ್ರಯ ಮ-ಹೋಕ್ಷಧ್ವಜನಂ ಮೋಹಿಸಿದ ಮೋಹಕಲ್ಪಅಧೋಕ್ಷಜಾಯ ನಮೋನಮಃ 18ಕ್ರೂರಕರ್ಮಿ ಹಿರಣ್ಯಕಶಿಪುವಂ ಕೊಂದ ದು-ರ್ವಾರದುರಿತಾಬ್ಧಿಬಾಡಬ ಭಕ್ತವತ್ಸಲ ಮ-ಹಾರವಕುಲಿಶ ಶತಕೋಟಿಸದೃಶನಶಿರಪ್ರಕರಧೀರ ಪ್ರಹ್ಲಾದಾಭಿವರದಭೂರೀಕರರೂಪ ಭೂಮಕೀರ್ತಿಕಲಾಪಸಾರವಜ್ರಸ್ತಂಭದಿಂ ಬಂದ ನಂದ ಸುಕು-ಮಾರಮಾರ್ಕಾಂಡೇಯವರದ ಲೋಕಶರಣ್ಯನಾರಸಿಂಹಾಯ ನಮೋ 19ನಿಶ್ಚಲಾತ್ಮ ನಿರೀಹ ನಿರ್ವಿಕಾರಾನಂತಪ್ರೋಚ್ಛ ಸರ್ವಗ ಸದಾನಂದ ಪರಿಪೂರ್ಣ ತ-ನ್ನಿಚ್ಛೆಯಿಂದಲಿ ಜಗವ ಪಾಲಿಸುವನಿರ್ಮಿಸುವ ಆಶ್ಚರ್ಯಕೃತಸಲೀಲಮುಚ್ಚುಮರೆ ಯಾಕಿನ್ನು ಮುಗಿದು ಬೇಡುವೆ ಕೈಯಸ್ವಚ್ಛತರ ಭಕ್ತಿಭಾಗ್ಯವನಿತ್ತು ಸಲಹೊ ಮಹ-ಕಚ್ಛಪನೆ ಕಾಳೀಯಮರ್ದನಮಹಿತಶ್ರೀಮದಚ್ಯುತಾಯ ನಮೋನಮಃ 20ಚೈದ್ಯಮಥನ ಮನೋಜÕಶುದ್ಧಾತ್ಮ ಸರ್ವಜÕಯುದ್ಧದಲಿ ಸೈಂಧವನ ಶಿರವ ಕೆಡಹಿಸಿ ಜಯವಹೊದ್ದಿಸಿದ ಪಾರ್ಥನಿಂಗೆಇದ್ದು ನೀ ಹೃದಯದೊಳು ತಿದ್ದೆನ್ನ ಮತಿಯ ಸ್ಮರ-ವಿದ್ದ ಮಾನಸವ ಪಾದದ್ವಯದೊಳಿರಿಸೈ ದ-ಯಾದ್ರ್ರಚಿತ್ತ ಸ್ವಭಕ್ತಸಂಸಾರಿ ಕಾಯೆಜನಾರ್ದನಾಯ ನಮೋನಮಃ 21ಮಂದಾಕಿನಿಯ ಪಡೆದ ಮಾತೆಯ ಶಿರವ ಕಡಿದನಂದಗೋಪನ ಕಂದನೆನಿಸಿ ಬಾಲಕತನದಚಂದಮಂ ತೋರಿಸಿದ ಕುಬುಜೆಗಂಧಕೆ ಒಲಿದಸುಂದರೀರಮಣ ಜಯತುತಂದೆತಾಯಿಯು ಸರ್ವ ಜೀವರ್ಗೆ ನೀನೆ ನಿಜ-ವೆಂದು ತಿಳಿಯದೆ ಮಾಯೆಯಿಂದ ಮಮಕರಿಸಿ ಪರ-ನಿಂದಾದಿ ದೋಷಗಳ ಮಾಡಿ ಬಳಲುತ್ತಿಹರ್ಉಪೇಂದ್ರಾಯ ತುಭ್ಯಂ ನಮಃ 22ಸ್ಥಿರಚರಾತ್ಮಕ ಧೇನುಚರ ದೇವಕೀಜಠರ-ಶರಧಿಗುರುರಾಜ ಭಾಸ್ಕರಮಂಡಲಾಂತಸ್ಥಪರಮತೇಜೋಮಯ ಪುರಾಣಪುರುಷೇಶ್ವರನೆದುರಿತದೂರ ಗಭೀರನೆನಿರತಿಶಯನಿಜನಿರ್ವಿಕಲ್ಪ ಕಲ್ಪಾಂತಸಾ-ಗರದಿ ವಟಪತ್ರಪುಟಶಯನ ಪುಣ್ಯಶ್ರವಣಪುರುಷನಾಮಕ ಪುಷ್ಕರಾಕ್ಷ ಶ್ರೀಕರನೆ ಜಯಹರಯೇ ನಮೋನಮಸ್ತೇ 23ವೃಷ್ಟಿಕುಲತಿಲಕ ಸರ್ವೇಷ್ಟದಾಯಕ ನಿಮಿತ-ಶಿಷ್ಟಜನಪರಿಪಾಲ ಶಿವಗೌರೀ ಗಣಪಗುಹ-ಸೃಷ್ಟಿಶಕ್ತಿಯನೀವ ಗೋವರ್ಧನಾಚಲವ ಬೆಟ್ಟಿನಿಂದೆತ್ತಿದ ಮಹಾದುಷ್ಟ ನರಕಾದಿದಾನವರ ಮರ್ದಿಸಿದ ಜಗ-ಜಟ್ಟಿ ಜನಿಮೃತಿಭಯವಿದೂರ ವಿಷಮಯಸರ್ಪ-ಶ್ರೇಷ್ಠನಂ ಘಾತಿಸಿದ ರಾಮಾನುಜನೆಹರೇ ಕೃಷ್ಣಾಯ ತುಭ್ಯಂ ನಮಃ 24ಅಕ್ಷೀಣ ಬಲಶಾಲಿಯಾಂಜನೇಯನಿಗಿತ್ತೆಅಕ್ಷಯದ ಬ್ರಹ್ಮಪದವಿಯ ಲೋಕದೊಳಗ್ಯಾವ-ದಕ್ಷಮರ್ದನ ನಿನಗೆ ಸರ್ವತಂತ್ರಸ್ವತಂತ್ರ ಪಕ್ಷೀಂದ್ರಭುಜವಿರಾಜಸಾಕ್ಷಿಚೈತನ್ಯರೂಪನೆ ಕಮಲನಾಭನೆ ಮು-ಮುಕ್ಷುಜನಧ್ಯಾನಗಮ್ಯನೆ ಗದಾಧರ ದನುಜ-ಶಿಕ್ಷಕ ಪರೀಕ್ಷಕನೆ ಪವನವಾಹನಲಕ್ಷ್ಮೀನಾರಾಯಣಾಯ ನಮೋ25
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
139-3ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಹರಿದಾಸ ಶ್ರೇಷ್ಠವರ ಕರುಣಿ ಪುರಂದರಾರ್ಯಗುರುಮಹಂತರು ಕೃಪಾನಿಧಿಯು ವಿಜಯಾರ್ಯಈರ್ವರನು ಸಂಸ್ಮರಿಸಿ ಗೋಪಾಲದಾಸರುಪರಮದಯ ತೋರಿದರು ಆಚಾರ್ಯರಲ್ಲಿ1ಹರಿದಾಸ ಪಂಥದಲಿ ಆಚಾರ್ಯರು ಸೇರಿಹರಿವಾಯು ಸೇವೆಯು ಸಜ್ಜನೋದ್ಧಾರಧರೆಯಲ್ಲಿ ಮಹತ್ಕಾರ್ಯ ಆಗುವುದು ಎಂದುಅರಿವರು ಗೋಪಾಲದಾಸರು ಮೊದಲೇ 2ಹರಿದಾಸಗೋಷ್ಠಿಯು ವೆಂಕಟಾಚಲ ಯಾತ್ರೆಚರಿಸೆ ವೆಂಕಟ ರಮಣನಾಲಯದಲ್ಲಿಶ್ರೀ ಶ್ರೀನಿವಾಸನು ಈ ಆಚಾರ್ಯಗೆನೇರವಾಗಿ ತಾನೆ ಕೊಟ್ಟಿಹ ಪ್ರಸಾದ 3ನೆನೆದರು ಈಗ ಗೋಪಾಲದಾಸಾರ್ಯರುತನ್ನ ರೂಪದಿ ಅಂದುಬಂದು ವಾತ್ಸಲ್ಯದಿಅನ್ನ ನಾಮಾವೆಂಕಟಕೃಷ್ಣ ಜಗದೀಶಅನ್ನ ಕೊಟ್ಟು ಒಲಿದಿಹನು ಆಚಾರ್ಯಗೆ 4ಪುರಂದರದಾಸಾರ್ಯರು ಒಲಿದು ದಯದಿ ತಾನೆಯಾರಿಗೆ ತಿಮ್ಮಣ್ಣಾರ್ಯರದ್ವಾರ ಉಪದೇಶಅನುಗ್ರಹ ನಾಮಾಂಕಿತವ ಇತ್ತರೋ ಆನರಸಿಂಹ ದಾಸಾರ್ಯರ ಪುತ್ರರು ಇವರು 5ಹರಿದಾಸರ ಪುತ್ರರಿವರು ಯೋಗ್ಯರು ಎಂದುಹರಿದಾಸಪದ್ಧತಿ ಆರಾಧನಾಕ್ರಮಶಾಸ್ತ್ರ ಜಿಜ್ಞಾಸೆಅನುಸಂಧಾನರೀತಿಯೂಅರುಪಿದರು ಆಚಾರ್ಯರಿಗೆ ದಾಸಾರ್ಯ 6ನೆರೆದಿದ್ದರೂ ಗೋಪಾಲದಾಸಾರ್ಯರಪರಮಪ್ರೀತಿ ಪಾತ್ರ ಈಮಹಂತರುವರದ ಗೋಪಾಲರು ತಂದೆ ಗೋಪಾಲರುಗುರುಗೋಪಾಲದಾಸಾದಿಸೂರಿಗಳು7ಭಾರತೀಪತಿ ಅಂತರ್ಗತಹರಿಶ್ರೀಶಗುರುಗಳ ಒಳಗಿದ್ದು ಜ್ಞಾನೋಪದೇಶಹರಿದಾಸತ್ವದ ವರನಾಮಾಂಕಿತವಕಾರುಣ್ಯದಿಈವಅಧಿಕಾರಿಗಳಿಗೆ8ವನರುಹೇಕ್ಷಣ ಯಜÕನಧಿಷ್ಠಾನ ಯಜÕನವನಜಪಾದ ದ್ವಯವು ಮನವಾಕ್ಕಿಲಿಹುದುಅನಿಲ ಸೋಕಿದ ತೂಲರಾಶಿಯಂದದಲಿಏನು ಮೈಲಿಗೆಯಾದರು ಸುಟ್ಟು ಪೋಪುವು 9ತುಳಸಿದಳ ನಿರ್ಮಾಲ್ಯ ಹರಿಗೆ ಅರ್ಪಿತವಾದ್ದುಜಲಸ್ನಾನ ತರುವಾಯ ಧ್ಯಾನ ಸ್ನಾನಜಲಜನಾಭನ ದಿವ್ಯನಾಮ ಸಂಕೀರ್ತನೆಎಲ್ಲ ಮೈಲಿಗೆ ದೋಷ ಪರಿಹರಿಸುವುವು 10ಶೀಲ ತನುಮನದಿಂದಗುರುಪರಮಗುರುದ್ವಾರಮಾಲೋಲ ಪ್ರಿಯತಮ ಜಗದೇಕ ಗುರುವೆಂದುಗಾಳಿದೇವನು ಮಧ್ವ ಭಾವಿಬ್ರಹ್ಮನ ಸ್ಮರಿಸಿಕಾಲಿಗೆ ಎರಗಿ ಶ್ರೀಹರಿಯ ಚಿಂತಿಪುದು 11ವಾಯುದೇವನ ಒಲಸಿಕೊಳ್ಳದ ಜನರಿಗೆಭಯಬಂಧ ನಿವೃತ್ತಿಯು ಸದ್ಗತಿಯು ಇಲ್ಲಮಾಯಾಜಯೇಶನಪರಮಪ್ರಸಾದವುವಾಯು ಒಲಿದರೆ ಉಂಟು ಅನ್ಯಥಾ ಇಲ್ಲ 12ಬಲಜ್ಞಾನಾದಿಗಳಲ್ಲಿ ಹ್ರಾಸ ಇಲ್ಲವು ಇವಗೆಎಲ್ಲ ಅವತಾರಗಳು ಸಮವು ಅನ್ಯೂನಶುಕ್ಲಶೋಣಿತಸಂಬಂಧವು ಇಲ್ಲವೇ ಇಲ್ಲಇಳೆಯಲಿ ಜನಿಸಿಹ ಹನುಮ ಭೀಮ ಮಧ್ವ 13ಮಾತರಿಶ್ವಸೂತ್ರಪವಮಾನ ಮುಖ್ಯ ಪ್ರಾಣತ್ರೇತೆಯಲಿ ಹನುಮ, ದ್ವಾಪರದಲಿ ಭೀಮಈತನೇ ಕಲಿಯುಗದೆ ಮಧ್ವಾಭಿದಾನದಿಬಂದಿಹನು ಸಜ್ಜನರ ಉದ್ಧಾರಕಾಗಿ 14ರಥನಾಭಿಯಲಿ ಅರವೋಲ್ ಪ್ರಾಣನಲಿ ಸರ್ವವೂಪ್ರತಿಷ್ಠಿತವು ಜೀವರ ದೇಹಕಾಧಾರತತ್ವದೇವಾದಿಗಳ ವರಿಷ್ಟ ಚೇಷ್ಟಕನುಈ ವಾಯುವೇ ಬ್ರಹ್ಮಧಾಮನಾಗಿಹನು 15ಬ್ರಹ್ಮಧಾಮನುಜೀವೋತ್ತಮವಾಯು ಆದುದರಿಂದಬ್ರಹ್ಮ ಸುಗುಣಾರ್ಣವ ಸರ್ವೋತ್ತಮ ವಿಷ್ಣೂನಅಹರ್ನಿಶಿಸ್ಮರಿಪುದು ಈ ಬ್ರಹ್ಮಧಾಮನಲಿಬ್ರಹ್ಮಪ್ರಸಾದ ಆಕಾಂಕ್ಷಿ ಅಧಿಕಾರಿ 16ಬ್ರಹ್ಮಗುಣಪೂರ್ಣಹರಿಗೋಪಾಲ ವೆಂಕಟನೆಬ್ರಹ್ಮಾಂಡ ಸರ್ವವ ಪಾಲಿಸುವ ಪ್ರಭುವುಅಹೋರಾತ್ರಿ ಏಳುದಿನ ಗಿರಿ ಎತ್ತಿ ಮಳೆ ತಡೆದಮಹಾದ್ರಿಧೃಕ್ ಅನ್ನಾದ ಅನ್ನದ ಜಗನ್ನಾಥ 17ಗೋವರ್ಧನಗಿರಿ ಎತ್ತಿ ಜನ ಪಶು ಕಾಯ್ದಶ್ರೀವರ ಗೋಪಾಲ ವಿಠ್ಠಲ ರುಕ್ಮಿಣೀಶದಿವ್ಯ ಮಂದಿರದಲ್ಲಿ ಭೀಮರತಿಯ ತೀರದಲಿದೇವ ನಿಂತಿಹ ಶ್ರೀನಿವಾಸ ಜಗನ್ನಾಥ 18ಶ್ರೀನಿವಾಸ ವೆಂಕಟನೆ ಗೋಪಾಲ ವಿಠ್ಠಲನುತನ್ನ ಭಕ್ತನಿಗೊಲಿದು ಪಂಢರೀಪುರದಿತಾನೆ ಬಂದು ಅಲ್ಲೇ ನಿಂತು ಭಕ್ತರು ಮಾಳ್ಪಗಾನ ಸೇವಾ ಕೇಳುತ ಪಾಲಿಸುತಿಹನು 19ಸರ್ವಕ್ಷರ ಉತ್ತಮನು ಸರ್ವೇಶಸರ್ವ ಐಶ್ವಯಾದಿ ಸಚ್ಛಕ್ತಿ ಪೂರ್ಣಶಿವ ಸುರಪುರಿಗೆ ಸುಖಜ್ಞಾನಾದಿಗಳನೀವದೇವಿ ಶ್ರೀ ಲಕ್ಷ್ಮೀಶ ಠಲಕ ವಿಠ್ಠಲನು 20ಜಡಭವ ಅಂಡದ ಸೃಷ್ಟ್ಯಾದಿ ಕರ್ತನಿವತಟಿತ್ಕೋಟಿಅಮಿತ ಸ್ವಕಾಂತಿಯಲಿ ಜ್ವಲಿಪಜಡಜ ಭವಪಿತ ಡರಕ ಜಗನ್ನಾಥ ವಿಠ್ಠಲನುನೋಡಲಿಕೆ ಕಾಣುವ ಅವನಿಚ್ಛೆ ದಯದಿ 21ಜಲದಲ್ಲಿ ಜಲರೂಪ ಜಲಜೇಕ್ಷಣನಿಹನುಜಲದಲ್ಲಿ ನೀ ಮುಳುಗಿ ಮೇಲೇಳುವಾಗಜ್ವಲಿಸುವ ಶಿರೋಪರಿ ಜಗನ್ನಾಥ ವಿಠ್ಠಲನುಒಳನಿಲುವ ಹೊರಕಾಂಬ ಎಲ್ಲರ ಸ್ವಾಮಿ 22ಇಂಥಾಸುವಾಕ್ಯ ಧಾರಾನುಗ್ರಹವಹಿತದಿ ಗೋಪಾಲದಾಸಾರ್ಯರು ಎರೆಯೆಮುದಬಾಷ್ಪ ಸುರಿಸುತ್ತ ಶ್ರೀನಿವಾಸಾಚಾರ್ಯಭಕ್ತಿಯಲಿ ನಮಿಸಿದರು ಗುರುಚರಣಗಳಿಗೆ 23ವಾಸುದೇವನ ಒಲಿಸಿಕೊಂಡ ಐಜೀಯವರುಈಶಾನುಗ್ರಹ ಪಡೆದ ದಾಸಾರ್ಯರುಗಳುಆ ಸಭೆಯಲಿ ಇದ್ದ ಹರಿಭಕ್ತ ಭೂಸುರರುಆಶೀರ್ವದಿಸಿದರು ಆಚಾರ್ಯರನ್ನು 24ಉತ್ಕøಷ್ಟ ನಿಗಮಘೋಷಗಳು ಮಂಗಳಧ್ವನಿಹರಿನಾಮ ಕೀರ್ತನ ಸುಸ್ವರ ಸಂಗೀತದಾರಿಯಲಿ ಎದುರ್ಗೊಂಡ ಶುಭಕರ ಶಕುನವುಹೊರಟರಾಚಾರ್ಯ ವಿಠ್ಠಲ ದರ್ಶನಕೆ 25ವಾರಿಜಾಸನ ಪಿತನು ಪೂರ್ಣಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರುಪುರಂದರವಿಜಯಗೋಪಾಲ ದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 26- ಚತುರ್ಥ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಆಗಮವ ತಮನೊಯ್ಯೆ | ಅವನ ಪಾತಾಳದಲಿ |ತಾಗಿದಲೆವರಿದು ವೇದಾವಳಿಗಳಾ |ಆಗ ತಂದ್ದತ್ತ ಮಚ್ಛಾಮಾರನೆ ವುದಯವಾಗುತಿದೆವುಪ್ಪುವಡಿಸೊ ಪಹರಿಯ ಭಾಗೀರಥಿ ಪಿತನೆ |ಭಾಗವತ ಜನಪ್ರಿಯನೆ |ಯೊಗಧೆಯ ವಪ್ಪುವಡಿಸೊ ಹರಿಯೆ | ಭಾಗೀರಥಿ ಪಿತನೆ 1ದೇವಾಸುರರು ಶಿಂದ್ಧು | ಮಥನದಲಿ ಗಿರಿ ಮುಳುಗೆ |ದೆವಾ ರಾಕ್ಷಿಸುತಾ ಕ್ಷಿಶನ ಉಳಿದೂ |ಆನೊಯಲು ವಾಗಿರಿಯ | ನಂತ ಕೂರ್ಮನೆ ವುದಯವಾಗುತಿದೆವಪ್ಪುವಡಿಸೊ ಹರಿಯೆ 2ಭೂತಳವ ಕಾದ್ದೊಯಿದ | ಹರಂಣ್ಯಕ್ಷನೆಂಬ ನರಪಾತಳದ |ಲೊರಶಿನಿಲಿಶಿದ ಜಗಂಗಳಾ | ಖ್ಯಾತಿ ಪಡೆದ ಪ್ರತಿಮ |ವರಹಾರೂಶಪನೆ ಸುಪ್ರಭಾತದಲಿವುಪ್ಪವಡಿಸೊ ಹರಿಯೇ 3ಭೂದೇವದೆವರನು | ಭಾಜಿಸುವ ಶಿವುವ ಪ್ರಹ್ಲಾದಗಾ | ಗಾಹವನುಕವಲುಗಿಶಿ ಉಗದೆ | ತೂದ ಕರುಳಿನಮಾಲೆ |ಯಪ್ಪನರಶಿಂಹ ಕಾರುಣೋದಯದೊ ವಪ್ಪವಡಿಸೊ ಹರಿಯೆ 4ಬರಿ ಭಕತಿಯಿಂದ ಮೊರಡಿನೆಲನ ಮಾತು ಕೂಡೆ |ನೆಲ ನಭನೆ ನೀರಡಿಯ ಮಾಡಿ ಬೆಳೆದೆ |ನಳಿನ ಜಾಂಡವನೊಡದೆ | ವಾಮನ ತ್ರಿವಿಕ್ರಮನೆಬೆಳಗಾಯಿತುಪ್ಪವಡಿಸೋಹರಿಯೆ 5ಕಾತ್ರ್ತವಿಯ್ರ್ಯಾರ್ಜುನನ ಕಡಿದು ಕ್ಷತ್ರಿಯ ಕುಮುದು |ಮಾತ್ರ್ತಂಡನಾದೆ ಮಾತೆಯ ಮಾತಿಗೆ ಆತ್ರ್ತಜನಬಂಧುವೆ | ಪರಶುರಾಮನೆ ಬ್ರಾಹ್ಮಿ ಮೂಹೋರ್ತದಲ್ಲಿವುಪ್ಪವಡಿಸೊ ಹರಿಯೆ 6ಪಂಪಾದಿಪನವರದ | ಅಮರಪತಿಯಾದ ಷ್ಕಂಪ್ಪರಾವಣನಗೆಲಿದವನನುಜಗೆ ಸಂತ್ಪಾರಂಪರೆಯಯಿತ್ತರಘುರಾಮದೆಶೆ | ಕೆಂಪಾಯಿತುಪ್ಪ ವಡಿಸೊಹರಿಯೆ 7ಯಿಂದು ರವಿಕುಲಗಳಲಿ | ಜನಿಶಿದಮಜರಾಜ| ಬೃಂದಾರಿಯಾಗಿಭೂಭರವಿಳಿಪಿದೆ | ನಂದನಂದನ ಕೃಷ್ಣ |ಆಂಗಯಗರಗಾಣ ಬಂದವಿದವುಪ್ಪ ವಡಿಸೊ ಹರಿಯೇ 8ತ್ರಿಪುರದಮಕಾರಿಗಳ | ಸತಿಯರಿಗೆವುಪಸತಿಗಳುಪದೆಶಗಳ ತೊಟ್ಟುಭ್ರಮಗೊಳಿಶಿದುತ್ರಿಪುರ ಹತಗಂಬಾದೆ |ತ್ರಿಪುರ ಸಾಧಕ ಜಾದ್ಕ ತಪ ನವಿದೆವುಪ್ಪವಡಿಸೊ ಹರಿಯೆ9ಆಶಿ ಖಾಡವಿಡಿದಾಶ್ವವೇರಿ ಕೋಪದಿ ವಿಷ್ಣು |ಯಶಶಿನಲಿ ಕಲ್ಕ್ಯಾವ | ತಾರನಾದೆ |ಕುಶಿರಿದರಿದಶಸುವೇಪದಶ್ಯೂಗಳಗೆಲಿದೆ | ಬಿಶಿಲಾಯಿತುಪ್ಪವಡಿಸೊ ಹರಿಯೆ 10ಯಿಂದ ಚಂದ್ದ್ರ್ಯಾದಿಗಳ್ ಬ್ರಹ್ಮ ರುದ್ದ್ರಾದಿಗಳುಪೇಂದ್ರಜಯ |ಜಯಯೆನುತ ಬಂದೈಧರೆ | ವೀಂದ್ದ್ರವಾಹನ ಪುರಂದರವಿಠಲಸೌಭಾಗ್ಯ ಸಾಂದ್ದ್ರನಿಧಿ ವುಪ್ಪವಡಿಸೊ ಹರಿಯೆ 11
--------------
ಪುರಂದರದಾಸರು
ಆಚರಸ ನೀ ಬಾಚರಸ ನೀ ಈಚಿಯೊಳುಕಟ್ಟಿರುವ ಪೆಸರಿದ ನೆರೆದು ಸುವಾಚ್ಯ ಸಂಪನ್ನಸತ್ಕೀರ್ತಿಕರನೆನಿಪ ಲಿಂಗರಸ ಪೂರ್ಣ ಪುರುಷ |ಶ್ರೀಚಂದ್ರಮೌಳಿಪದಾಂಬುಜಮಧುಪ........... ದೇ ನಾಮ ಗುಜಾಯಿ ಗರ್ಭಜ......... ಸಪ್ತ ಋಷಿಗಳವತಾರನೆಂಬ ತೇಜೆನಿಸಿದ ರಾಶಿಗೆ1xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'(ಹಿರಿಯ) ಮಗ ಮುದ್ದಣ ಖೊಬ್ಬರಸ ಕಮಲರಸ.............ಹಿ ರಮಣ ಮೋಬರಸ ಬಾಲರಸ ತಿಪ್ಪರಸಸಿರಿವಂತರಿವರು ಪೂರ್ವಜ ಲಿಂಗರಸನಸತಿಗುಜಾಯಿಕುವರರೆನಿಸಿ | ಮೆರೆವ ಸಿಂಧಾಪುರದಿ ಕರಣಿಕಿರ್ಪಪ್ರತಿಸೃಷ್ಟಿ ಕರ್ತಾ ವಿಶ್ವಾಮಿತ್ರ ಗೋತ್ರಜ ಸಂಗಮೇಶ್ವರನ ಕೃಪಾಪಡೆದಹರ್ನಿಶಿ ಭಕ್ತರೆನಿಸಿಹನರಲೋಕದಿ2
--------------
ಜಕ್ಕಪ್ಪಯ್ಯನವರು
ಆರು ಒಲಿದರೇನು ನಮಗಿನ್ನಾರು ಮುನಿದರೇನುಕ್ಷೀರಸಾಗರ ಶೇಷಶಯನನ ಒಲುಮೆಯುಳ್ಳ ಹರಿದಾಸರಿಗೆಪ.ಪಡೆದ ತಾಯಿ - ತಂದೆ ನಮ್ಮೊಳು ಅಹಿತವ ಮಾಡಿದರೇನುಮಡದಿ ಮಕ್ಕಳು ನೆಂಟರಿಷ್ಟರುಮುನಿಸು ಮಾಡಿದರೇನುಒಡೆನೆ ತಿರುಗುವ ಗೆಳೆಯರು ನಮ್ಮೊಳು ವೈರವ ಬೆಳಸಿದರೇನುಕಡಲ ಶಯನನ ಕರುಣಾಂಬುಧಿಯ ಒಲುಮೆಯುಳ್ಳ ಹರಿದಾಸರಿಗೆ 1ಊರನಾಳುವ ದೊರೆಗಳು ನಮ್ಮನು ಹೊರಗೆ ನೂಕಿದರೇನುಮಾರಿಯಹಿಂಡು ಮುಸಲರ ದಂಡು ಮೈಗೆ ಮುತ್ತಿದರೇನು ||ಅರಣ್ಯದಿ ಹರಿದಾಡುವ ಮೃಗಗಳು ಅಡ್ಡಗಟ್ಟಿದರೇನುವಾರಿಜನಾಭನ ವಸುದೇವಸುತನ ಒಲುಮೆಯುಳ್ಳ ಹರಿದಾಸರಿಗೆ 2ಕಾನನದೊಳು ಹರಿದಾಡುವ ಸರ್ಪವು ಕಾಲಿಗೆ ಸುತ್ತಿದರೇನುಜೇನಿನಂದದಿ ಕ್ರೀಮಿಕೀಟಂಗಳು ಚರ್ಮಕೆ ಮುತ್ತಿದರೇನು ||ಭಾನು ಮಂಗಳಬುಧ ಶುಕ್ರಂಗಳ ಬಲುವು ತಪ್ಪಿದರೇನುಮಾಣದೆ ಭಜಿಸುವ ಪುರಂದರವಿಠಲನಒಲುಮೆಯುಳ್ಳ ಹರಿದಾಸರಿಗೆ 3
--------------
ಪುರಂದರದಾಸರು
ಆರು ಒಲಿದರೇನು ನಮಗಿನ್ನಾರು ಮುನಿದರೇನುಕ್ಷೀರಸಾಗರ ಶೇಷಶಯನನ ಒಲುಮೆಯುಳ್ಳ ಹರಿದಾಸರಿಗೆಪ.ಪಡೆದ ತಾಯಿ - ತಂದೆ ನಮ್ಮೊಳು ಅಹಿತವ ಮಾಡಿದರೇನುಮಡದಿ ಮಕ್ಕಳು ನೆಂಟರಿಷ್ಟರುಮುನಿಸು ಮಾಡಿದರೇನುಒಡೆನೆ ತಿರುಗುವ ಗೆಳೆಯರು ನಮ್ಮೊಳು ವೈರವ ಬೆಳಸಿದರೇನುಕಡಲ ಶಯನನ ಕರುಣಾಂಬುಧಿಯ ಒಲುಮೆಯುಳ್ಳ ಹರಿದಾಸರಿಗೆ 1ಊರನಾಳುವ ದೊರೆಗಳು ನಮ್ಮನು ಹೊರಗೆ ನೂಕಿದರೇನುಮಾರಿಯಹಿಂಡು ಮುಸಲರ ದಂಡು ಮೈಗೆ ಮುತ್ತಿದರೇನು ||ಅರಣ್ಯದಿ ಹರಿದಾಡುವ ಮೃಗಗಳು ಅಡ್ಡಗಟ್ಟಿದರೇನುವಾರಿಜನಾಭನ ವಸುದೇವಸುತನ ಒಲುಮೆಯುಳ್ಳ ಹರಿದಾಸರಿಗೆ 2ಕಾನನದೊಳು ಹರಿದಾಡುವ ಸರ್ಪವು ಕಾಲಿಗೆ ಸುತ್ತಿದರೇನುಜೇನಿನಂದದಿ ಕ್ರೀಮಿಕೀಟಂಗಳು ಚರ್ಮಕೆ ಮುತ್ತಿದರೇನು ||ಭಾನು ಮಂಗಳಬುಧ ಶುಕ್ರಂಗಳ ಬಲುವು ತಪ್ಪಿದರೇನುಮಾಣದೆಭಜಿಸುವ ಪುರಂದರವಿಠಲನ ಒಲುಮೆಯುಳ್ಳ ಹರಿದಾಸರಿಗೆ3
--------------
ಪುರಂದರದಾಸರು
ಆರು ಬಾರರು ಸಂಗಡಲೊಬ್ಬರು |ನಾರಾಯಣನ ದಿವ್ಯನಾಮ ಒಂದಲ್ಲದೆ ಪಹೊತ್ತು ನವಮಾಸಪರಿಯಂತಗರ್ಭದಲಿ |ಅತ್ಯಂತ ನೋವು ಬೇನೆಗಳ ತಿಂದು ||ತುತ್ತು ಬುತ್ತಿಯ ಕೊಟ್ಟು ಸಲಹಿದ ತಾಯಿಯು |ಅತ್ತು ಕಳುಹುವಳಲ್ಲದೆ ಸಂಗಡ ಬಾಹಳೆ 1ನೆರೆದಿದ್ದ ಪುರಜನ ವಿಪ್ರರಗ್ನಿಯ ಸಾಕ್ಷಿ |ಕರವಿಡಿದು ಕೈಧಾರೆ ಎರಸಿಕೊಂಡ ||ತರುಣಿ ತನ್ನಯ ಗಂಡನನು ಮುಟ್ಟಲಮ್ಮದೆ |ನೆರೆಏನುಗತಿತನಗೆ ಹೇಳಲಮ್ಮಳಲ್ಲದೆ2ಮನೆ-ಮಕ್ಕಳಿವರೆನ್ನ ತನುವು ಒಡವೆ ಎರಡು |ಘನವಾಗಿ ನಂಬಿರೆ ನನ್ನವೆಂದು |ಅನುಮಾನವೇತಕೆ ಜೀವ ಹೋದಬಳಿಕ |ಘನಹೊತ್ತು ಮನೆಯಲಿ ಇರಿಸಿಕೊಳ್ಳರೊ ದೇವ 3ಆತ್ಮ ಬಳಲಿದಾಗ ಬಂಧುಗಳು ಬಂದು |ಹೊತ್ತು ಹೊರಗೆ ಹಾಕು ಎಂತೆಂಬರು ||ಹೊತ್ತುಕೊಂಡು ಹೋಗಿ ಅಗ್ನಿಯಲ್ಲಿ ಬಿಸುಟು |ಮತ್ತೆ ಬೆನ್ನನು ತಿರುಗದಲೆ ಬಾಹೋರಲ್ಲದೆ 4ಹರಣಹೋಗದ ಮುನ್ನ ಹರಿಯ ಸೇವೆ ಮಾಡಿ |ಪರಲೋಕಸಾಯುಜ್ಯಪಡೆದುಕೊಂಡು |ಕರುಣಿ ಕೃಪಾಳು ಶ್ರೀ ಪುರಂದರವಿಠಲನ |ನೆರೆನಂಬಿ ಭಜಿಸಿ ನೀ ಸುಖಿಯಾಗೊ ಮನುಜಾ 5
--------------
ಪುರಂದರದಾಸರು