ಒಟ್ಟು 885 ಕಡೆಗಳಲ್ಲಿ , 89 ದಾಸರು , 776 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸುವ್ವಿ ಸುವ್ವಾಲಿ |ಸುವ್ವಿ ಸಾಧ್ವಿಯರು ರಾಘವೇಂದ್ರರ ಪಾಡಿ ಪಅಂದಿನ ಕಾಲದ ಮಧ್ವಶಾಸ್ತ್ರವ ಮನಕೆ ತಂದು |ಅಂದದಿ ಟಿಪ್ಪಣಿ ಮಾಡಿದ ದೇವರಾರು | ಸುವ್ವಿ ||ಅಂದು ವಾದಿಸುವ ಜನರನ್ನು ಬಾಯಿ ಮುಚ್ಚಿಸಿದ |ಚಂದಿರ ವದನೆ ಈತನಮ್ಮ ಗುರುವು | ಸುವ್ವಿ 1ಇವರ ಚರಿತೆಯನ್ನು ತೋರಿದಷ್ಟು ತುತಿಸುವೆ |ಕಿವಿಗೊಟ್ಟು ಕೇಳುವದುಬುಧಜನರು | ಸುವ್ವಿ ||ಪವನಾಂಶರಿವರು ಕವಲಿಲ್ಲ ಖ್ಯಾತರಾಗಿ |ಅವನಿಯ ಸುರರಿಂದರ್ಚನೆಗೊಂಗುವರು | ಸುವ್ವಿ 2ಅಷ್ಟಾಕ್ಷರ ಮಂತ್ರವನು ತಪ್ಪದಲೆ ನಿತ್ಯವಾಗಿ |ನಿಷ್ಠೆಯಿಂದ ಭಜಿಸಲು ಭೂತ ಭಯವು | ಸುವ್ವಿ ||ಕುಷ್ಠರೋಗ ಕ್ಷಯ ಪಾಂಡು ಜ್ವರ ಸನ್ನಿ ಮೊದಲಾದ |ಅಷ್ಟುಪದ್ರವಾಕ್ಷಣ ಬಿಟ್ಟು ಓಡುವುದು | ಸುವ್ವಿ 3ಮೃತ್ತಿಕೆಮಾಲೆಅಂಗಾರದಿವ್ಯ ಮಂತ್ರಾಕ್ಷತೆಯು |ಹತ್ತಿರವಿರಲು ಕ್ಲೇಶವ ಲೇಶ ಕಾಣರು | ಸುವ್ವಿ ||ಎತ್ತ ಹೋದರು ಜನರಿಗೆ ಜಯಪ್ರದ ತೋರುವದು |ಕತ್ತಲಿಲ್ಲ ಶತಸಿದ್ಧ ಮತ್ತೇನುಕೇಳಿ| ಸುವ್ವಿ 4ಪಂಡಿತರು ಮೊದಲಾಗಿಹಸ್ತಿಉಷ್ಟ್ರ ಕುದುರೆಯ |ಹಿಂಡುಗಳು ತೃಷೆಯಿಂದ ಬಳಲುತಿರೆ | ಸುವ್ವಿ ||ದಂಡ ಜಗತಿಗೂರಿ ತೋಯ ತೆಗಿಸಿಯವನೀ |ಮಂಡಲದೊಳಗೆ ಪೆಸರಾದರಿವರು | ಸುವ್ವಿ 5ಕಟ್ಟಲಿಯ ಭತ್ತದೊಳು ಭೂಪದಳಯುಕ್ತ ಬರ |ಲಿಟ್ಟುಕೊಂಡು ಉಣಿಸಿ ಉತ್ತಮ ವರವ | ಸುವ್ವಿ ||ಕೊಟ್ಟು ಕಳಿಸಿದ ಮೇಲೆ ಆವು ಕೊಂಚಿಯಾಗಲಿಲ್ಲ |ಗಟ್ಟಿ ಸಂಕಲ್ಪರಿವರು ಮುನಿವರರು | ಸುವ್ವಿ 6ವಿಪ್ರರೆಲ್ಲರು ಹೇಳಿಸಿ ಕಟ್ಟಿಸಿದ ಸದನವ |ಥಟ್ಟನೆ ಕೆಡಿಸಿ ಭೂಪ ಮೆಚ್ಚುವಂದದಿ | ಸುವ್ವಿ ||ನೆಪ್ಪು ಧರೆಗಾಗಲೆಂದುಗುರುಸುಧೀಂದ್ರ ಕುಮಾರ |ಸರ್ಪನ ತೋರಿಸಿ ಸುಪ್ರಖ್ಯಾತರಾದರು | ಸುವ್ವಿ 7ದ್ವಿಜರ ಸ್ತೋಮವು ಬಾಯಿ ಬಿಡುತಿರೆ ದಯದಿಂದ |ನಿಜಕಾಷ್ಟವಿಳೆಗೆ ನಿಲ್ಲಿಸಿ ಮರವ | ಸುವ್ವಿ ||ಸೃಜಿಸಿ ಪಲ್ಲವ ಫಲಯುಕ್ತವಾಗಿ ತೋರಿಸಿದ |ಭಜಿಸಿರಿವರನ್ನು ಮಕ್ಕಳು ಬೇಡುವವರು | ಸುವ್ವಿ 8ಮುತ್ತಿನ ಮಾಲಿಕೆನೃಪಭಕ್ತಿಯಿಂದ ಕೊಡಲಾಗಿ |ಸಪ್ತಜಿಹ್ವಗುಣಿಸಿದ ಸರ್ವರು ನೋಡಿ | ಸುವ್ವಿ ||ಮತ್ತೆ ಬೇಡಲು ಪಾವಕನಿಗೆ ಪ್ರಾರ್ಥನೆಯ ಮಾಡಿ |ಮತ್ರ್ಯಪಗೆ ಇತ್ತರು ಮೊದಲಂತೆಯೆ ತಂದು | ಸುವ್ವಿ 9ಹಿಂದೆ ಮಾಡಿದ ದುಷ್ಕರ್ಮ ತೀರ ಬಂದದನು ನೋಡಿ |ಬಂದಾಕ್ಷಣದಲ್ಲಿ ಅವನ ವಿಚಾರಿಸಿ | ಸುವ್ವಿ ||ಇಂದಿರೇಶನ ಕಾರುಣ್ಯ ಬಲದಿಂದ ಜನನೋಡೆ |ಸಂದೇಹವಿಲ್ಲದೆ ಸುಲೋಕವನಿತ್ತರು | ಸುವ್ವಿ 10ತುಂಗಾತೀರ ಮಂತ್ರಾಲಯದಲ್ಲಿಶ್ರಾವಣಬಹುಳ |ಮಂಗಳ ಬಿದಿಗಿಯಲ್ಲಿ ನಿವಾಸವಾದರು | ಸುವ್ವಿ ||ಶೃಂಗಾರ ವೃಂದಾವನ ದ್ವಾದಶನಾಮ ಶ್ರೀ ಮುದ್ರೆಯು |ಕಂಗಳುಸಾಲವು ನೋಡ ಹೊದ್ದ ಶಾಠಿಯ | ಸುವ್ವಿ 11ಅಂಧಕಬಧಿರಕುಂಟ ನಾನಾ ರೋಗಿಗಳು ಮತ್ತೆ |ಕಂದ ವಜ್ರ್ಯ ಮೊದಲಾದವರಿಗೆಕಾಮ್ಯ| ಸುವ್ವಿ ||ತಂದುಕೊಡುವರು ಬೇಗ ಇತರ ಸಂಶಯವಿಲ್ಲ |ಮಂದಭಾಗ್ಯರಿಗೆ ಇವರ ಸೇವೆ ದೊರೆಯದೇ || ಸುವ್ವಿ 12ಕೌತುಕವೇನೆನ್ನಲಿ ಮುಂಜಿ ವಿವಾಹ ಮಾಡಿಸುವರು |ಚಾತುರ್ಮಾಸದೊಳಗೆ ಗ್ರಹಗಳಸ್ತವಾಗೆ | ಸುವ್ವಿ ||ಧಾತಾ ಪಿತ ನಿಲಯವಿದೇನೋಯೆಂದು ತೋರುವದು |ಪ್ರೀತಿಯುಳ್ಳ ಭಕ್ತರಿಗೆ ಅಧಮರಿಗಲ್ಲ | ಸುವ್ವಿ 13ಪಾಡ್ಯ ಪೂರ್ವಾರಾಧನೆ ಉತ್ತರಾರಾಧನೆಗೆ |ಒಡ್ಡಿಬರುವುದು ಎಂಟು ದಿಕ್ಕುಗಳಿಂದ ಜನವು | ಸುವ್ವಿ ||ಕಡ್ಡಿಹಿಡಿಯದಂಥ ಸಂದಣಿಯೊಳು ಸನ್ಮುಹೂರ್ತದಿ |ದೊಡ್ಡ ರಥವೇರಿ ಮಠವ ಸುತ್ತುವರು | ಸುವ್ವಿ 14ಇಷ್ಟೇಯೆನ್ನಲು ವಶವಲ್ಲ ಮಹಿಮೆಗಳಿನ್ನೂ ಉಂಟು |ನಷ್ಟ ಮಾಡುವರು ದುರ್ಮತ ದಾರಿದ್ರ್ಯವ | ಸುವ್ವಿ ||ಸೃಷ್ಟಿಗೊಡೆಯ ಪ್ರಾಣೇಶ ವಿಠ್ಠಲನೆಂದು ಪೇಳ್ವರು |ಎಷ್ಟು ಪೇಳಿದರೂ ಎನ್ನಿಂದಲಿ ತೀರದು | ಸುವ್ವಿ 15
--------------
ಪ್ರಾಣೇಶದಾಸರು
ಸುಳಾದಿಧ್ರುವತಾಳಬಾಲ ಸೂರ್ಯನಿಭಮಣ್ಯಾಂಕಮೌಳಿಹೀಲಿಯ ಪಿಂಛಪ್ರವಾಳಗುಚ್ಛಮ್ಯಾಲಲರದಂಡೆ ಝೇಂಕರಿಪಾಳಿಬಾಲರಯ್ಯನ ಮೊಗದ ಶೋಭೆಭ್ರೂಲತೆ ವಿಲಾಸ ನೋಟದಿಮಕರಕುಂಡಲವಿಶಾಲೇರಿ ಸಿರಿವತ್ಸಕೌಸ್ತುಭನೀಲಮಾಣಿಕ ವಜ್ರವಲಯ ವೈಜಂತಿವನಮಾಲೆ ತುಲಸಿ ಗಂಧ ಮೌಕ್ತಿಕ ಸರಗಳನೀಲನದ ರತುನದಾಮಪೊನ್ನಚೇಲನೂಪುರ ಕಿರುಗೆಜ್ಜೆಯ ಗೋಪಾಲ ಪರಸನ್ನವೆಂಕಟ ಕೃಷ್ಣ ಶಾಮಲಕಾಯ 1ಮಠ್ಯತಾಳನಂದವ್ರಜದ ಗೋವರ ವೃಂದಾಂಬುಧಿಗೆ ಪೂರ್ಣೇಂದು ನÀಂದಸೂನು ಲಾಸ್ಯವಾಡೆಒಂದೊಂದು ಲಯದಗತಿಹೊಂದ್ಯಮರದುಂದುಭಿಗಳ್ದಂ ಧಳಧಂ ಧಂದಳೆನ್ನೆಗಂಧರ್ವ ತುಂಬುರರು ನಾರಂದ ಮಹತೀಗೀತ ಪ್ರಬಂಧ ಹೇಳೆ ನಂದರಸದಿಂದಾಡುತಿರೆ ಗೋವಿಂದ ದಂದಂ ದಂದಂ ಧಿಮಿಕೆನ್ನಲಂದದಿ ಮದ್ದಳೆ ತಾಳಬಂದಿಮೊಗ ? ತುತ್ತುರಿ ಕಹಳೆ ಕಂಬುವೇಣುಗೂಡಿಅಂದಾಡಿದ ಪ್ರಸನ್ವೆಂಕಟ ಕೃಷ್ಣ ನಲವಿಂದ 2ತ್ರಿವಿಡಿ ತಾಳಶ್ರೀಕಮಲ ಭಭೂರ್ವಪಿನಾಕಿವಿಪಾಹಿಪನಾಕಜಾದ್ಯರ ಚೇಷ್ಟಕಶ್ರೀಕರ ಪ್ರಸನ್ನವೆಂಕಟ ಕೃಷ್ಣಆಕಳಕಾವರ ವಶಗ ಹಾಹಾ 3ಅಟ್ಟತಾಳಅನಂತನಿಗಮನಿಕರಕೆ ನಿಲುಕದಅನಂತಾನಂತ ಗುಣಪರಿಪೂರ್ಣಗೆಧÉೀನುಕಾವರ ಪಳ್ಳಿ ಗೋಟಲೆತೀಯಂ ತೀಯಂ ವೈಯ್ಯ ಅಯ್ಯಾಧೇನುಕಾವರ ಪಳ್ಳಿ ಗೋಟಲೆಜ್ಞಾನಿಜನಕೆಮೋದಹಾನಿ ಖಳರ್ಗೀವಜ್ಞಾನಾನಂದ ಬಾಲ ಪ್ರಸನ್ನವೆಂಕಟ ಕೃಷ್ಣಗೆ 4ಏಕತಾಳವೈಕುಂಠ ವಾರಿಜಾಕ್ಷ ಲೋಕರಕ್ಷತೋಕವೇಷಧರಮುರಹರಶ್ರೀಧರಶ್ರೀಕರ ಗುಣನಿಧೆ ಪುರಾಣಪುರುಷ ಹರೇ ಹರೇಗೋಕುಲಪತೆ ಗೋವರ್ಧನಧರಪಾಕಹ ಮದನಿಕಾರಕರ ಪ್ರಸನ್ವೆಂಕಟ ಕೃಷ್ಣನೆಲೊ ಭಕ್ತವತ್ಸಲ 5ಜತೆಶುಭಕೀರ್ತನೆ ಜಿಹ್ವೆಗೆ ಶುಭಕಥೆ ಕಿವಿಗಳಿಗೆಶುಭಮೂರ್ತಿ ಕಣ್ಗೀಯಯ್ಯ ಪ್ರಸನ್ವೆಂಕಟಕೃಷ್ಣಯ್ಯ
--------------
ಪ್ರಸನ್ನವೆಂಕಟದಾಸರು
ಸ್ವಾಮಿ ನರಸಿಂಹ ಶರಣುಶ್ರೀಮಹಾ ಅಹೋಬಲನಿಲಯ ದೇವ ಶರಣು ಪ.ಭವನಾಶಿನಿಯ ಕೂಲಭವನ ಭಟಪ್ರತಿಪಾಲಭವಸಹಸ್ರಾಂಬಕರ ಭಯವಿದೂರಭುವನಕದ್ಭುತಗಾತ್ರಭಜಕಜನತಾಪತ್ರಭವಕರ್ದಮ ಶೋಷ ಬುಧರ ಪರಿತೋಷ 1ಅಣುರೇಣು ತೃಣ ವ್ಯಾಪ್ತ ಅಖಿಳರೊಳು ನಿರ್ಲಿಪ್ತದನುಜಹಿರಣ್ಯಕಹರ್ತ ದೀನನಾಥಕನಕಜಠರನ ಜನಕ ಕರುಣಾಂಕ ಕ್ರೂರಮುಖಪುನೀತಶುಭಚಾರಿತ್ರ ಪ್ರಹ್ಲಾದಮಿತ್ರ2ಪದುಮದೇವಿಯ ರಮಣ ಪ್ರದ್ವಿಷಾನ್ವಯದ ಮನಮುದಶಾಂತ ಪರಿಪೂರ್ಣಮೂರ್ತಿ ಪುಣ್ಯಪ್ರದನಾಮ ನವರೂಪ ಪತಂಗಾನಂತಪ್ರದೀಪ ನಿನ್ನಪದವೆಗತಿಹೊರೆಯೆನ್ನ ಪ್ರಸನ್ವೆಂಕಟರನ್ನ3
--------------
ಪ್ರಸನ್ನವೆಂಕಟದಾಸರು
ಸ್ವಾಮಿ ಸತ್ಯಾಧಿರಾಜ ಮುನಿಗೆಣೆಗಾಣೆ ನಾಭೂಮಿಯ ಮೇಲೆ ಚತುರನಸಾಮಥ್ರ್ಯ ನೋಡಿರಿ ಭಕುತಿಯನರಿಯದಪಾಮರನನು ಬಾಗಿಸುವನ ಪ.ಗುರುಸತ್ಯಾಭಿನವರಾಯನ ಪಟ್ಟದಾನೆಯುಧÀರೆಯ ಮೇಲೋಡಾಡುವಂತೆಚರಿಸುತ ಖಳರನಂಜಿಸಿ ತಪ್ಪ ಕೈಕೊಂಡುಗುರುಪಾದಕೊಪ್ಪಿಸಿ ನಿಂತ 1ಕಲ್ಲು ಕರಗುವುದು ಕೆಚ್ಚು ಮಣಿವುದು ಇದೆಲ್ಲಿಯ ಗಾದೆಯೆಂದೆನಲುಕಲ್ಲೆದೆ ಮಾನಿಸರ ದ್ರವಿಸುವ ಕೆಚ್ಚೆದೆಕ್ಷುಲ್ಲರ ಮಣಿಸುವಕೇಳಿ2ಆಲಸ್ಯವೆ ಮೋಕ್ಷೋಪಾಯ ದಹನೆಂದುಕಾಲವ ಕಳೆಯನು ವ್ಯರ್ಥಮೂಲ ರಘುಪತಿ ಪಾದಾರವಿಂದವ ಮೇಲೆಮೇಲರ್ಚಿಪ ಸಮರ್ಥ 3ಜ್ಞಾನ ಭಕುತಿ ವೈರಾಗ್ಯಪ್ರಣವಜಪಧ್ಯಾನ ಮೌನ ಪರಿಪೂರ್ಣಆನಂದತೀರ್ಥ ಶಾಸ್ತ್ರಾಂಬುಧಿ ತಿಮಿಂಗಿಲದೀನರಸುರತರುಜಾಣ4ತಂದೆ ಸತ್ಯಾಭಿನವ ತೀರ್ಥ ಕರಜಾತಎಂದೆಂದು ಸುಜನರ ಪ್ರಿಯಇಂದಿರೆರಮಣ ಪ್ರಸನ್ವೆಂಕಟೇಶನಹೊಂದಿದ ಸದ್ಗುಣಗೇಹ5
--------------
ಪ್ರಸನ್ನವೆಂಕಟದಾಸರು
ಹರಹರಪುರಹರಗಿರಿಜಾಮನೋಹರಸುರವರ ಕರುಣಾಕರನೆ ನಮೋ ನಮೋಶರಣರಸುರತರುವರಪಂಪಾಪತಿವಿರೂಪಾಂಬಕ ಹೊರೆ ಶುಭದಿ ಪ.ಮದನಮಥನಪಂಚವದನಕೈಲಾಸದಸದನಸದಾಶಿವ ನಮೋ ನಮೋಹದಿನಾಲ್ಕು ಭುವನದಹದನಬಲ್ಲರಿಜಿತಕದನಕಲುಷಹರ ನಮೋ ನಮೋ1ತಾರಕಪತಿಧರ ಭೂರಿಕೃಪಾಂಬುಧಿತಾರಕಹರಪಿತ ಜಯ ಜಯತಾರಕಉಪದೇಶಕಾರಕ ಘನಭವತಾರಕಮೃತ್ಯುಂಜಯಜಯ2ಶೇಷಾಭರಣವಿಭೂಷಾಭವ ವಿಶೇಷಭಕುತಪ್ರಿಯ ವಿಭೋ ವಿಭೋಶೇಷಭೂಭೃತ್ ಪೋಷ ಪ್ರಸನ್ವೆಂಕಟೇಶ ಭಜನಶೀಲ ವಿಭೋ ವಿಭೋ 3
--------------
ಪ್ರಸನ್ನವೆಂಕಟದಾಸರು
ಹರಿಕಥಾ ಶ್ರವಣ ಸಾಧನವೆ ಮುಕುತಿ ಇದಕೆಸರಿ ಧರ್ಮವಿಲ್ಲೆಂದು ಪೇಳ್ವವು ಶ್ರುತಿತತಿ ಪ.ಶ್ರವಣದಿಂದಲಿ ಸಕಲ ಸದ್ಧರ್ಮ ಸಾಧನವುಭುವಿಯಲ್ಲಿ ಪೂಜ್ಯರಾಹೋರು ಸುಜನರುಸವೆಯದಾನಂದಮಯ ಭಕುತಿಸಿರಿದೊರಕುವುದುಅವರೇವೆ ಸೂಜÕರಾಗ್ವರು ಹರಿಯ ದಯದಿ 1ಅನವರತಶ್ರವಣವೆ ಮನನ ಮೂಲವು ಗಡಮನನದಲಿ ಹರಿಧ್ಯಾನ ಖಚಿತಾಹುದುಘನಪರಾತ್ಪರ ತತ್ವ ತಿಳುಹಿ ವಿರಕುತಿ ಭಾಗ್ಯವನು ಕೊಟ್ಟು ಶ್ರೀ ವಿಷ್ಣು ತೋರ್ವಗತಿಈವ2ಶ್ರವಣದಲಿ ನಾರದಗೆ ಗತಕಲ್ಪದ್ಯಪರೋಕ್ಷಸವಿಯಾದ ಸಾಮ್ರಾಜ್ಯ ಲೆಕ್ಕಿಸದ ಪ್ರಿಯವ್ರತಅವನಿಪರುವನಪೊಕ್ಕು ಹರಿಯನಾಶ್ರಯಸಿದರುದಿವಸೇಳರಲಿ ವಿಷ್ಣುರತನಿಗೆ ಮೋಕ್ಷ 3ದಿವಿಜಋಷಿ ಗಂಧರ್ವ ನೃಪರು ಮನುಜೋತ್ತಮರುವಿವಿಧ ತಿರ್ಯಗ್ಜಾತಿ ಸಜ್ಜೀವರುಶ್ರವಣಮಾತ್ರದಲಿ ಕಂಡರು ಸದ್ಗತಿಯನವರುದಿವಸಗಳೆಯದಲೆ ಆದರದಿಂದ ಬುಧರು 4ಹರಿಕಥಾಶ್ರೋತರಿಗೆ ಕರತಲವು ಮೋಕ್ಷ ಗಡಗುರುದ್ವಾರದಲಿಹರಿದೊರಕುವನು ಸತ್ಯಗುರುಮಧ್ವವರದ ಶ್ರೀಪ್ರಸನ್ವೆಂಕಟ ಕೃಷ್ಣಕರವಿಡಿದು ಪೊರೆವ ಸದ್ಗುರು ಪ್ರಿಯಜನಕೆ 5
--------------
ಪ್ರಸನ್ನವೆಂಕಟದಾಸರು
ಹರಿಯ ನೆನೆಯದ - ನರಜನ್ಮವೇಕೆ ? ಶ್ರೀಹರಿಯ ಕೊಂಡಾಡದ ನಾಲಿಗೆಯಿನ್ನೇಕೆ ಪ.ಸತ್ಯ - ಶೌಚವಿಲ್ಲದ ಆಚಾರವೇಕೆ ?ಚಿತ್ತ ಶುದ್ಧಿಯಿಲ್ಲದ ಜ್ಞಾನವೇಕೆ ?ಭಕ್ತಿ - ಭಾನವಿಲ್ಲದ ದೇವಪೂಜೆ ಏಕೆ ?ಉತ್ತಮರಿಲ್ಲದ ಸಭೆಯು ಇನ್ನೇಕೆ ? 1ಕ್ರೋಧವ ಬಿಡದಿಹ ಸಂನ್ಯಾಸವೇಕೆ ?ಆದರವಿಲ್ಲದ ಅಮೃತಾನ್ನವೇಕೆ ?||ವೇದ - ಶಾಸ್ತ್ರವಿಲ್ಲದ ವಿಪ್ರತನವೇಕೆಕಾದಲಂಜುವನಿಗೆ ಕ್ಷಾತ್ರ ತಾನೇಕೆ ? 2ಸಾಲದಟ್ಟುಳಿಯೆಂಬ ಸಂಸಾರವೇಕೆ ?ಬಾಲಕರಿಲ್ಲದ ಭಾಗ್ಯವಿನ್ನೇಕೆ ?ವೇಳೆಗೆ ಒದಗದ ನೆಂಟರಿನ್ನೇಕೆ ? ಅನುಕೂಲವಿಲ್ಲದ - ಸತಿಯ ಸಂಗವೇಕೆ 3ಮಾತೆ - ಪಿತರ ತೊರೆದ ಮಕ್ಕಳಿನ್ನೇಕೆ ?ಮಾತು ಕೇಳದ ಮಗನಗೊಡವೆ ಇನ್ನೇಕೆ ||ನೀತಿ ತಪ್ಪಿದ ದೊರೆಯ ಸೇವೆ ಇನ್ನೇಕೆ ? ಅನಾಥನಾಗಿರುವಗೆ ಕೋಪವಿನ್ನೇಕೆ ? 4ಅಳಿದುಳಿದಿಹ ಮಕ್ಕಳುಗಳಿನ್ನೇಕೆ ?ತಿಳಿದು ಬುಧ್ಧಿಯ ಹೇಳಿದ ಗುರುತನವೇಕೆ ?ನಳಿನನಾಭ ಶ್ರೀ ಪುರಂದರವಿಠಲನಚೆಲುವ ಮೂರುತಿಯ ಕಾಣದ ಕಂಗಳೇಕೆ 5
--------------
ಪುರಂದರದಾಸರು
ಹಸೆಗೆ ಬಾರೊ ಕುಸುಮನಯನ ಕುಶಲದಿಂದಲಿ ಬೇಗನೆಶಶಿಮುಖಿಯರ್ ಕರೆವರು ನಿನ್ನ ವಸುಧೆಪಾಲ ರಾಮನೊಪಅಸಮ ವೀರನನೆ ಗೆಲಿದು ಪಶುಪತಿಯ ಬಿಲ್ಲಮುರಿದುಕುಸುಮಬಾಲೆ ಕೊರಳೊಳ್ ಧರಿಸಿವಸುಧೆಸುತೆಯಕರವಪಿಡಿದು1ಕುಶಲದೀ ನಗುನಗುತಾ ಪಸರಿಸುವಿ ಮಂಟಪಕೆ ಹಸೆಗೆಧರಣಿ ಪಾಲರ್ ಲಜ್ಜೆವೆರಸಿ ಮೆರೆವ ಕೀರ್ತಿ ವಿಬುಧರೊಲಿಸೆದುರುಳದೈತ್ಯ ಕ್ರೋಧವರಿಸಿ ಸುರರುರಗದಲ್ಲಿನಿಂದುಹರುಷದಿ ಸುಮ ವರ್ಷವನ್ನು ಕರೆಯುವರೈ ಸರಸದೀ2ಜನಕರಾಯ ಹರುಷದಿಂದ ಜನಕೆ ಓಲೆ ಬರೆಯೆ ಕಂಡುಘನದಿ ದಿಬ್ಬಣ ಕೂಡಿ ಬಂದ ಜನಕ ಜನನಿಯರಿಗೆ ನಮಿಸಿಅನುನಯದಿಂ ಮನ ಓಲೈಸಿ ದನುಜಾಂತಕ ಗೋವಿಂದನೇ3<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ
ಹಿಂದಿನ ಪುಣ್ಯ ಫಲವೆಂತೊಇಂದಿರೇಶಾನಂದದ ಲೀಲೆ ಅರುಹಿದ ಪ.ಚಿತ್ರವಿಚಿತ್ರ ಮಹಿಮೆಯ ತೋರುತಖಳದೈತ್ಯರನೆಲ್ಲ ಮಡುಹಿದದೈತ್ಯರನೆಲ್ಲ ಮಡುಹಿ ಬಳಲ್ದನೆಂದುಕಸ್ತೂರಿ ತೈಲವೆರಸಿ ತಂದು 1ಶಂಕಿನಿ ಪದ್ಮಿನಿಯರೊಂದಾಗಿ ಕೃಷ್ಣನಪಂಕಜಾಸನದಲಿ ಕುಳ್ಳಿರಿಸಿಪಂಕಜಾಸನದಲಿ ಕುಳ್ಳಿರಿಸಿ ತಮ್ಮ ಒಲ್ವಕಂಕಣಗೈಯ ಮೌಳಿಯೊಳಿಟ್ಟು 2ಈರೇಳು ಲೋಕದ ದೊರೆಯಾಗು ಭಕುತರಸಿರಿಯಾಗು ದಿತಿಜರರಿಯಾಗುಸಿರಿಯಾಗು ಭಕ್ತರ ದಿತಿಜಾರಿಯಾಗೆನುತಹರಸಿದರರ್ಥಿ ಮಿಗಿಲಾಗಿ 3ಕುಂಭಕುಚದ ಕಾಮಿನಿಯರು ಹರುಷದಿಅಂಬುಜಾಕ್ಷನ ಪೂಸಿ ಕಿರುಬೆಮರಿಅಂಬುಜಾಕ್ಷನ ಪೂಸಿ ಕಿರುಬೆಮರಿ ದಣಿಯದೆ ಕದಂಬ ಕಡಿದಟಕಾಳಿಯ ತಂದು 4ವಿಕ್ರಮಾನ್ವಿವತವಾದವ್ಯಾಕೃತ ಗಾತ್ರಕೆಅಕ್ಕರಿಂದೆ ತೈಲನಾಶನವಅಕ್ಕರಿಂದಲಿ ತೈಲನಾಶನವ ಪೂಸಿ ಜಗುಳಲುಘಕ್ಕನಂಬರವ ಬಿಗಿದುಟ್ಟ 5ಹದವಾದ ಬಿಸಿನೀರ ಪೊಂಬಂಡೆಯೊಳುತುಂಬಿಪದುಮಗಂಧೆಯರು ನೀರೆರೆದರುಪದುಮಗಂಧೆಯರು ನೀರೆರೆವ ಸಂಭ್ರಮಕ್ಕೆಮುದದಿಸುರರುಹೂಮಳೆಗರೆದರು6ಮುಂಬರಿಯುತ ಬಾಲೆಯರುತಕದಿಂದಅಂಬುಧಾರೆಯ ನಿಲ್ಲಗುಡದೆರೆದುಅಂಬುಧಾರೆಯ ನಿಲ್ಲಗುಡದೆರೆದುಜಾಂಬೂನದಾಂಬರವುಡಿಸಿ ಕರೆತಂದು 7ಚಿತ್ರಮಂಟಪಕೆ ನವರತ್ನ ತೆತ್ತಿಸಿದ ಕಂಭಕಸ್ತೂರಿ ಕಾರಣೆ ರಚನೆಯಕಸ್ತೂರಿ ಕಾರಣೆ ರಚನೆಯ ಮಧ್ಯದಿಮುತ್ತಿನ ಹಸೆಯೊಳು ಕುಳ್ಳಿರಿಸಿ 8ನೀಲಮಾಣಿಕಮೋಘದಿಂದಲೊಪ್ಪುವ ಪದಕಲೋಲನೇತ್ರೆಯರಳವಡಿಸಿದರುಲೋಲನೇತ್ರೆಯರು ಅಳವಡಿಸಿ ಅಂಗುಲಿಗೆಲ್ಲ ಮುದ್ರಿಕೆನಿಟ್ಟು ನಲಿದರು 9ಮುಕುಟಕೌಸ್ತುಭಮಣಿಯುಕುತ ಭೂಷಣವಿಟ್ಟುರುಕುಮಿಣಿ ಸತ್ಯರೆಡಬಲದಿರುಕುಮಿಣಿ ಸತ್ಯರೆಡಬಲದಿ ಕುಳ್ಳಿರೆನಿತ್ಯಮುಕುತಗಾರತಿಯ ಬೆಳಗಲು 10ಚಿನ್ನದ ಹರಿವಾಣದಿ ರನ್ನದಾರತಿಯಿಟ್ಟುಕನ್ನೇರು ಕಿರುನಗೆ ಬೀರಿದರುಕನ್ನೇರು ಕಿರುನಗೆ ಬಿರಿಯುತ ಪಣೆಯೊಳುಪೊನ್ನಿನಾಕ್ಷತೆಯಿಟ್ಟು ಲಲಿತವ 11ಜಯ ರಾಮ ತ್ರೈಧಾಮ ಜಯ ಜೀಮೂತಶಾಮಜಯ ಪೂರ್ಣಕಾಮ ಸಾಸಿರನಾಮಜಯ ಪೂರ್ಣಕಾಮ ಸಾಸಿರನಾಮನೆಂದುಭಯರಹಿತಗಾರತಿಯ ಬೆಳಗಿದರು 12ಚಿತ್ತಜನಯ್ಯಗೆ ಚಿನುಮಯ ದೇಹಗೆಉತ್ತಮಗುಣಗಣ ಭರಿತಗೆಉತ್ತಮಗುಣಗಣ ಭರಿತಗೆ ಪರಮಪವಿತ್ರೇರಾರತಿಯ ಬೆಳಗಿದರು 13ಪನ್ನಗಾದ್ರಿವಾಸ ಪ್ರಸನ್ನವೆಂಕಟೇಶಕನ್ನೆ ಲಕ್ಷ್ಮಿಯ ಕೂಡಿ ಆರೋಗಣೆಯಕನ್ನೆ ಲಕ್ಷ್ಮಿಯ ಕೂಡ ಆರೋಗಣೆಯ ಮಾಡಿತನ್ನ ಭಕ್ತರಿಗೆಲ್ಲ ಸುಖಪ್ರೀತ 14
--------------
ಪ್ರಸನ್ನವೆಂಕಟದಾಸರು
ಹೇ ದಯಾಬ್ಧೇ ಪಾಲಿಸೆನ್ನನು | ಶ್ರೀದ ಹನುಮಂತ ಪಭೂಧವಜ ನದಿಯಲ್ಲಿ ನಿಂತಾ ಕಾಳೀಕಾಂತ ವೀತಚಿಂತಾ ಅ.ಪ.ರಾವಣಾನುಜನಂತೆ ಮತ್ತಾ ಶೈಲಸುತನಂತೆ |ದೇವತೆಗಳೀಶನಂತೆ ದೇವತೆಗಳಂತೆ ||ಆವವಿಕ್ರಮಪಾರ್ಥನಂತೆ ಕಾದಿ ಬಿದ್ದಾ ಕಪಿಕುಲದಂತೆ |ತಾವರೆಯಸಖಸೂರ್ಯನಂತೆ ತತ್ಸುತ ಸುಗ್ರೀವನಂತೆ 1ಭೂವರಾಧಿಪ ಧರ್ಮನಂತೆ ದ್ರೌಪದಿಯಂತೆ |ಭೂವಿ ಬುಧಸುತನಂತೆ ರಾಕ್ಷಸಿಯಂತೆ ಫಣಿಯಂತೆ ||ಆ ವಿರಾಟರಾಯನಂತೆ ಪಾರ್ವತಿಯ ನಾಥನಂತೆ |ನೀ ವಿಜಯನಾಗಲು ಸಹಿಸದಲೆ ಕೋಪಿಸಿದ ಧೃತರಾಷ್ಟ್ರನಂತೆ ||ಮೋದದಿಂದ ನಿನ್ನ ಪಡೆದಾ ಮಧ್ಯಗೃಹನಂತೆ |ಆದರದಿ ಹರಿಪೂಜೆ ಮಾಳ್ಪಾಸೂರಿಜನರಂತೆ ||ಆ ದಿನ ಕಡಲಲ್ಲಿ ಮುಳುಗಿ ಪೋಗುತ್ತಿದ್ದಾ ನಾವೆಯಂತೆ |ಪಾದಹಿಡಿದಾ ಕಾಳೀಸರ್ಪನ ಕಾಯ್ದ ಪ್ರಾಣೇಶ ವಿಠ್ಠಲನಂತೆ 3
--------------
ಪ್ರಾಣೇಶದಾಸರು
ಹೇಳೆಕಾಮಿನಿರಂಗಗೆ ಬುದ್ಧಿಯಹೇಳೆಕಾಮಿನಿರಂಗಗೆಪ.ಹೇಳಿದಂದದಿಕೇಳಿಕಾಲಿಗೆರಗುವಳಮ್ಯಾಲೆ ಕೋಪಿಸಿಕೊಂಡು ಬಾಲೇರ ನೆರೆವಂಗೆ ಅ.ಪ.ತನ್ನ ಮೈಗಂಪು ಕಸ್ತೂರಿಗಿಂದಧಿಕ ಕಂಡೆತನ್ನಧರದ ರಸಾಮೃತಗಿಂತ ಸವಿದುಂಡೆತನ್ನ ದಂತದ ಘಾಯಕೆ ಅಂಜದೆಕರಜನ್ನಟ್ಟಿಸಲು ಕುಚಕ್ಕೆ ಸುಂದರಿಯರನ್ನು ಮೆಚ್ಚಿದ ದಾನಕ್ಕೆ ಇನಿಯಳಿರೆಅನ್ಯರ ಮೋಹಿಪಗೆ ಕಲಿಮಾನವಗೆ 1ಸ್ನೇಹ ನೋಟಕೆ ಮೆಚ್ಚಿ ಸುಖಭಾರ ತನಗಿತ್ತೆಬಾ ಹೆಣ್ಣೆ ಎನಲು ಭಾಗ್ಯಾಂಬುಧಿಗೊಶವಾದೆತಾ ಹೊನ್ನಾಸೆಗೆ ಮಂಚದಿ ಘಾತಿಸಿದರೆನೇಹಿಯ ಬೆರದೆಕೆಲದಿಕರಾಳ ಚೇಷ್ಟೆಗೆನೇಹದಾರದಲೊಪ್ಪಿದೆ ಎನ್ನನು ಬಿಟ್ಟುಬಾಹು ಜೋರಿನಬುದ್ಧವಾಜಿಯಲ್ಲೇರ2ಚಪಲತೆಯಲ್ಲಿಕಪಟವಿದ್ಯದಲಿ ಭೂಪಕುಪಿತಾಶಾಯಿಲ್ಲ ಹೆಜ್ಜೆ ಹೆಜ್ಜೆಗೆ ಕಥೆಯಿಲ್ಲನೃಪಕೃಷ್ಣ ಸಲಹೆಂದರೆ ಎನ್ನಿಂದಾದಅಪರಾಧ ಕ್ಷಮಿಸೆಂದರೆ ಪ್ರಸನ್ವೆಂಕಟಕೃಪಿ ಧರ್ಮಿಯೆಂದರೆ ಇದಕೆ ತಾವಿಪರೀತ ತಿಳುಹನಂತೆ ಹಾಗಲ್ಲಂತೆ 3
--------------
ಪ್ರಸನ್ನವೆಂಕಟದಾಸರು