ಒಟ್ಟು 1432 ಕಡೆಗಳಲ್ಲಿ , 103 ದಾಸರು , 1184 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಂದಿಸುವೆ ಸುಂದರಾಂಗ ನಿಜಸೌಂದರ್ಯಜಿತಾನಂಗ ಬೃಂದಾರಕಾದಿ ಮುನಿ ಬೃಂದವಂದಿತ ಮುಕುಂದ ಗೋವಿಂದ ನಂದ ಮೂರುತಿ ಹರೆ ಪ ದೇವಾದಿ ಜೀವ ಸುಪ್ರಭಾವ ಭಾಸಿತ ಮುಖ ದೇವಕೀ ವಸುದೇವ ಭಾವನಾ ಗೋಚರ 1 ಹಾರಕುಂಡಲ ಮನ ಮಾಲಾವಿರಾಜಿತ ಕ್ಷೀರಾಬ್ದಿ ಕನ್ಯಕಾ ಲೋಲಾ ಮುರಾಂತಕ2 ಧೇನುನಗರ ಪರಿಪಾಲಕ ವೇಂಕಟೇಶ ಸಾನುರಾಗದಿ ಪೊರೆ ಗಾನವಿನೋದ ಹರೆ 3
--------------
ಬೇಟೆರಾಯ ದೀಕ್ಷಿತರು
ವಂದಿಸುವೆನು ನಾ ನರನಾರಯಣ ಭಕ್ತ ಪ- ರಾಧೀನ ನಾನಾರೂಪಿಯೆ ಪ ಈ ಜಗವನೆ ಎತ್ತಿದೆ ವರಾಹನಾಗಿ ಮೂಜಗವನೆ ಅಳೆದ ವಾಮನಮೂರ್ತಿ ಯಾಜಿಪರನು ಕಾಯೋ ಪ್ರಹ್ಲಾದ ಧ್ರುವರೊಲು ಹೇ ಜಗದೋದ್ಧಾರ ಭಕ್ತವತ್ಸಲ 1 ದೇವ ಶ್ರೀಪತಿಯಾಗಿ ಅಸುರರ ಕೊಂದೆ ದೇವಕಿಸುತನಾಗಿ ಕಂಸನ ವಧಿಸಿದೆ ದೇವಜರ ಮೈದುನನಾಗಿ ದೌರ್ಜನ್ಯ ಮುರಿದೆ ದೇವ ಜಾಜಿಪುರೀಶ ದಾಸೋತ್ತಮನೇ 2
--------------
ನಾರಾಯಣಶರ್ಮರು
ವನಜನಾಭನ ಅಡಿಯು ಮನುಜಾನೀಪತಿಯು ಪ ಅನುದಿನದೊಳೈತಂದು ಘನಸಿಂಧುಶಯನನು ಮಿಂದು ದ್ವಾದಶಿಯೊಳಿಂದು ಸನುಮತದಿಯರ್ಪಿಸಿದ ಎಡೆಯನು ಘನತರದ ಸಂಭ್ರಮದಿ ಭುಂಜಿಸಿ ಜನಿಸಿ ಭಕುತಿಯನೆನ್ನ ಮನದಿ ಪ್ರ- ಸನ್ನನಾದನು ಎನಿತು ಪೇಳಲಿ 1 ರಕ್ಕಸರಿಗತಿ ವೈರಿ ಮಿಕ್ಕಾನತರ ಸಹಕಾರಿ ಶ್ರೀಹರಿ ಮುರಾರಿ ತಕ್ಕ ವಿಜಯಗೆ ಸಾರಥ್ಯಾಗಿ ಇಕ್ಕರಿಸಿ ಕುರುಪತೀಯನನ್ವಯ ಅಕ್ಕರದಿ ದ್ರುಪದಸುತೆಯ ಸಲಹಿ ರುಕ್ಮಿಣೀಶನು ರಕ್ಷಿಪನು ಸಲೆ 2 ಕರಿವರದ ಶಿರಿಲೋಲಾ ಪರಮಾತ್ಮ ಶ್ರೀಘನಲೀಲಾ ಜರರಹಿತ ವಿಮಲಾ ನಿರುತದೀಪರಿ ಸ್ಮರಿಪ ನರನಿಗೆ ಕರುಣಸಾಗರನಾಗಿ ಸುರವರ ತ್ವರಿತದೀವನು ಹರಸಿ ವರಗಳ ಹರಗೊಲಿದ ನರಸಿಂಹವಿಠಲಾ 3
--------------
ನರಸಿಂಹವಿಠಲರು
ವನಜಾಕ್ಷ ನೀನೀಗ ಘನ ಕನಿಕರದಿ ಕಾಯಭವ ಘನತರದ ಗುಣ ಎನ್ನೊಳಿನಿತಿಲ್ಲ ದೇವ ಪ ಮನ ತುಸು ಗಟ್ಟಿಲ್ಲ ತನುಮೋಹ ಸುಟ್ಟಿಲ್ಲ ಧನದಾಸೆ ಬಿಟ್ಟಿಲ್ಲ ಬಿನುಗುಗುಣಟ್ಟಿಲ್ಲ 1 ಪರಮಮದ ಮುರಿದಿಲ್ಲ ಪರನಿಂದೆ ತೊರೆದಿಲ್ಲ ಶರಣರಿಗೆ ಎರಗಿಲ್ಲ ಹರಿಪಾದವದರಿವಿಲ್ಲ 2 ಏನು ಅಪರಾಧವಿರೆ ನೀನೆ ಕ್ಷಮಿಸೆನಗೆ ಜ್ಞಾನದಿಂ ಸಲಹಯ್ಯ ಪ್ರಾಣೇಶ ಶ್ರೀರಾಮ 3
--------------
ರಾಮದಾಸರು
ವರ್ಣಿಸಲಳವೆ ಸುಗುಣಸಾಂದ್ರನ ಪ ಕರ್ಣಜನಕಕೋಟಿ ತೇಜಶ್ರೀಶ ಭಜಕ ಜಯ ಮುನೀಂದ್ರನ ಅ.ಪ ಸೂತ್ರ ನೇತ್ರದಿಂದಬದ್ಧಮಾಡಿ ಪಿಡಿದು ಕಡೆದುಶುದ್ಧ ಯುಕುತಿ ಸುಧೆಯ ತೆಗೆದನ ಶಿಷ್ಯ ಜನಕೆಶ್ರದ್ಧೆಯಿಂದಲದನು ಎರೆದನ ಕ್ರೋಧದಿಂದಕೃದ್ಧವಾದಿಗಳನು ಗೆಲಿದನ-ಜಯ ಮುನೀಂದ್ರನ 1 ಮಾನನೀಯ ಶೀಲರಾದಮಾನವರನು ಕರೆದು ಹರಿಯಧ್ಯಾನದಲ್ಲಿ ನಿಲಿಸಿ ಒಲಿಸಿಹಾನಿಯಿಲ್ಲದ ಮುಕುತಿ ಪಡೆದಜ್ಞಾನಮತವ ಜನಕೆ ಸಾರ್ದನ, ಶಿಷ್ಯಜನಕೆಸಾನುರಾಗದಿ ತತ್ವಪೇಳ್ದನಜಯ ಮುನೀಂದ್ರನ2 ಸರಸದಿಂದ ಮೂರ್ಯೋಳುವಿರಸ ದುಷ್ಟ ಭಾಷ್ಯಗಳನುಮುರಿದಕ್ಷೋಭ್ಯ ತೀರ್ಥಯತಿಪಕರಸಂಜಾತ ರಮ್ಯಚರಿತಶರಣ ಜನರ ಪೊರೆವ ಯತಿಪನ, ಶಿಷ್ಯಜನರಮರುಳ ಮೋಹತಿಮಿರ ದಿನಪನ, ನಮ್ಮ ಪರಮಗುರು ಶ್ರೀಕೃಷ್ಣ ಪಾದಭಜಕನಜಯ ಮುನೀಂದ್ರನ3
--------------
ವ್ಯಾಸರಾಯರು
ವಶವಲ್ಲದೀ ಮನದ ದೆಸೆಯಿಂದೆ ನಾ ಬಲು ದೆಸೆಗೆಟ್ಟು ಬಳಲುವೆ ಕುಸುಮಾಕ್ಷ ಕಣ್ದೆರೆಯೊ ಪ ನಶಿಪ ಪ್ರಪಂಚ ಭ್ರಮಿಸಿ ಹಸಗೆಡಿಸಿ ನಿಜಧ್ಯಾನ ಪಶುವಿನಂತೆನ್ನನು ದಿಸೆದಿಸೆಗೆಳಿಪುದು ಅ.ಪ ಭುವಿಪರನೊಲಿಸರೆಲವದಿ ಭೂಮಿಯ ಪಡೆದೆ ಸವ ಜೋಡಿ ನೂಕಿತ್ತು ಜವದಿ ಕಟ್ಟುವುದು ಬುವಿಯೊಳು ಮಿಗಿಲೆನಿಸುವ ತೆರೆ ಮೇಲ್ಮಾಡಿ ಭವನ ರಚಿಸಿ ಕೋಟಿದ್ರವ್ಯಗಳಿಗಳುವುದು 1 ಮದುವ್ಯಾಗಿ ಪದ್ಮಿನಿಯ ವದನದೊಳ್ವದನಿಕ್ಕಿ ಮದನಕದನದಿ ಸುಖಿಸುವುದೊಂದು ಫ¼ಗಿ ಸದನ ಮುರಿದು ಸಂ ಪದವೆಲ್ಲ ತನ್ನಗೆ ಒದಗಿಬರಲೆನ್ನುವುದು 2 ತಡೆಯದೆ ವೈರಿಗಳ ಕಡುಕೋಪದಿಂ ತಂದು ಪಿಡಿದು ಕಂಬಕೆ ಕಟ್ಟಿ ಸುಡಿಸುವುದೊಡನೆ ಕಡುಗಲಿತನದಿಂದ ಪೊಡವಿಪರ ಸದೆಬಡಿದು ಪೊಡವಿ ಗೆಲಿದು ಒಂದೇ ಕೊಡೆಯಿಂದಾಳುವುದು 3 ಯಾತ್ರೆ ಮಾಡುವುದೊಮ್ಮೆ ಕ್ಷೇತ್ರದೊಳಗೆ ಕೂತು ನೇತ್ರಮಂ ಬಂಧಿಸಿ ಸ್ತೋತ್ರ ಮಾಡುವುದು ಮೂತ್ರದ್ವಾರದೆ ಬಂದ ಸೂತ್ರದ ಕಾಯಕ್ಕೆ ಧಾತ್ರಿ ಸೊನ್ನೆಂದೊಮ್ಮೆ ಖಾತ್ರಿ ಮಾಡುವುದು 4 ಯಾತರ್ಹಲವು ಪರಿಮಿತಿಯಿಲ್ಲದ್ಯೋಚಿಸಿ ಖತಿ ತಾಳಲಾರೆ ಅತಿಭ್ರಷ್ಟಮನದ ದುರ್ಮತಿ ನಿವಾರಿಸು ಗತಿ ನೀಡೆನಗೆ ಕೃಪೆಯಿಂ ಹಿತಭಕ್ತ ಶ್ರೀರಾಮ 5
--------------
ರಾಮದಾಸರು
ವಸುದೇವ ಸುತನೆ ಬಾರೋ ವಸುಧೆಪಾಲಾ ಪ. ಶಿಸುತನದಲಿ ಕಡು ವಿಷದ ಮೊಲೆಯನುಂಡುಅಸುವನೆ ಹೀರಿದ ಶಿಸುಗಳರಸ ರಂಗಾ 1 ಗೊಲ್ಲತೆಯರ ಮನೆ ಮೆಲ್ಲಮೆಲ್ಲನೆ ಪೊಕ್ಕುಗುಲ್ಲುಮಾಡುತ ಪಾಲ್ ಮೊಸರು ಬೆಣ್ಣೆಯ ಕದ್ದು 2 ವೇಣುವನೂದುತ ಗಾನವ ಮಾಡುತಜಾಣೆಯನೊಲಿಸಿದ ಜಾಣ ಶ್ರೀಕೃಷ್ಣ 3 ತುರುವು ಕಾಯಲು ಪೋಗೆ ವರುಷವ ಸುರಿಸಲುಬೆರಳಲಿ ಬೆಟ್ಟವ ನಿರಿಸಿ ಗೋವ್ಗಳ ಕಾಯ್ದ 4 ಕಾಳೀಯ ಮೆಟ್ಟುತ ನಲಿನಲಿದಾಡುತಲೀಲೆಯ ತೋರಿದ ಬಾಲಾಗೋಪಾಲಾ 5 ಬಿಲ್ಲನೆ ಮುರಿಯುತ ಮಲ್ಲರ ಗೆದೆಯುತಖುಲ್ಲ ಕಂಸನ ಕೊಂದ ಪುಲ್ಲನಾಭಗೊಲ್ಲ 6 ಶೌರಿ 7
--------------
ಸಿರಿಗುರುತಂದೆವರದವಿಠಲರು
ವಾದಿರಾಜರು ಸಾಗಿಬಾರಯ್ಯ ಗುರುವೆ ವಾದಿರಾಜೇಂದ್ರಾರ್ಯ ಬಾಗುವೆ ನಾ ನಿನಗೆ ಶಿರವಾ ಪ. ಭಾಗವತರ ದುರಿತಾಘಂಗಳನೆ ಕಳೆದು ಬಂದಾ ದುರ್ವಾದಿಗಳನೆ ಮರೆದು ಸುರರೆಲ್ಲ ಇವರೆ ಮೇಲ್ ಪೂ ಮಳೆಯಗರೆದು ತುಂಬುರರು ನರದರು ಗಾನಗಳಿಂದ ಮೆರೆದು ಘಲುಘಲು ಘಲುರೆಂದು, ಅಪ್ಸರರು ನಾಟ್ಯಗಳ ಕುಣಿದು ಅ.ಪ. ಹೊದ್ದ ಕಾವೆ ಶಾಟಯಲೊಪ್ಪುವಾ ಶ್ರೀ ಮುದ್ರಿ ಗಂಧಾಕ್ಷತೆಯಿಂದಾ ಗಳದಲ್ಲಿ ಶ್ರೀ ತುಳಸಿ ಪುಷ್ಪಮಾಲೆಗಳಿಂದಾ ಝಗಝಗನೆ ಮುಖಕಮಲಳ್ಹೋಳವೋದು ಯೆಂದಾ ಋಜುಗಣದವರಹುದೆಂದು ಪೇಳುವಾನರನಿಂದಾ ಮಾಡುವವರಿಗೆ ಕ್ರಿಮಿಕೀಟಗಳು ದುರುವುವುದೇಹದಿಂದಾ ಬಂದ ಜನರಿಗ್ಹರುಷ ಬಡಿಸುವದರಿಂದಾ ಮುದದಿಂದಾ 1 ಏನುಪೇಳಲಿ ಗುರುವೆ ನಿನ್ನ ಮಹಿಮೆಯು ನೋಡಲಾಶ್ಚರ್ಯವೋ ಭೂತರಾಜರಿಂದ ಪೂಜೆಗೊಂಬುವ ಛಂದವೋ ಧಿಂ ಧಿಮಿ ಧಿಮಿಕೆಂದು ಕುಣಿದಾಡುವಾನಂದವೊ ಯಡಬಲದಿ ದ್ವಾರ ಪಾಲಕರಿರುವಾನಂದವೋ ಮುಕ್ತಿಯನೆ ಕೊಡುವಾ 2 ನಿನ್ನಂಥಾ ಕರುಣಿ ಗುರು ಇನ್ನಿಲ್ಲ ಧರೆಯೊಳು ಮನ್ನೀಸಿ ಸಲಹಯ್ಯ ಮಹರಾಯ ಘನ್ನ ಸಂಸಾರದೊಳು ಬನ್ನಪಟ್ಟು ಬಹಳ ನೊಂದೇನೀ ಕೈಪಿಡಿದು ಎಂದು ನಿಂದೀನೀ ಉದ್ಧಾರ ಮಾಡಬೇಕೆಂದು ಬಂದೀನಿ ಮಂದ ಭಾಗ್ಯ ಜೀವನ ಕುಂದುಗಳೆಣಿಸಿದಾಗೊದೊ ಇಂದು ಅಡಿಗಡಿಗೆ ನಮೋ ಬೇಡುವೆನೋ ಬಂಧೊ 3 ರುಕ್ಮಿಣಿ ಕಳುಹಿದಾ ವಾಲೆಯು ತಾನು ಶ್ರಿ ಕೃಷ್ಣಗರ್ಪಿಸಿದನು ದ್ವಿಜನು ಸಾಮಾನ್ಯವಲ್ಲವೋ ಈತ ಗುರುರಾಜನೆಂದೆನಿಸೀದಾ ದುರ್ವಾದಿಗಳು ಜಯಸೀದಾ ಪವಮಾನರಾಯನೆಂದೆನಿಸಿದಾ ಸುರರಿಗಮೃತವನುಣಿಸೀದಾ ವೃಂದಾವನ ಚಾರ್ಯರಿಂದ ಸೇವೆ ಸ್ವೀಕರಿಸೀದಾ ಸುಖವಸುರಿಸೀದಾ 4 ಸ್ವಾದೀಯಪುರದಲ್ಲಿ ಇರುವರೋ ಗುರುರಾಜರು ಅಮೃತ ಪಾನ ಬಂದ ಸೇವಕರಿಗಭೀಷ್ಟವ ಕರೆದು ತಾ ಕೊಡುವ ದ್ರಷ್ಟ ಜನರಾ ಫಲ್ಗಳ ಮುರಿವಾ ಸರ್ವೇಶನಲ್ಲದೆಂಬೋರ ಅಳಿವಾ ಮಧ್ವಮತವನ್ನುದ್ದಾರ ಮಾಡುವ ಕಾಳೀಮರ್ಧನಕೃಷ್ಣನೊಲಿವಾ 5
--------------
ಕಳಸದ ಸುಂದರಮ್ಮ
ವಾರಿಜನಯನ ಮುರಾರಿ ಕಂಸಾರಿ ಪ ಆಗಮ ಸನ್ನುತನೆ ನಾ ಭವಸಾಗರದೊಳು ಸಿಲ್ಕಿದೆನು ಧಾಮ ರೀತಿಕಾಣೆ ರಾಮ 1 ದುರಿತವಿದೂರ ಗೋಪಾಲ ಪುರುಷ ಗೋವಿಂದ 2 ಇಂದು ಕಾಪಾಡೋ ನೀನೆಂದು ಪತಿ ಸಲಹಯ್ಯ 3
--------------
ಹೆನ್ನೆರಂಗದಾಸರು
ವಾಸುದೇವ ಪ ವಾಸುದೇವ ಅ.ಪ ವಾಸುದೇವ 1 ವಾಸುದೇವ 2 ಮುರಹರ ಶರಣು ಹೊಕ್ಕೆನೊ ಕಾಯೊ ಶ್ರೀಕೃಷ್ಣ ವಾಸುದೇವಶರಣೆಂಬ ಜನರಿಗೆ ಕರುಣಿಪ ಶ್ರೀಕೃಷ್ಣ ವಾಸುದೇವ3 ವಾಸುದೇವ 4 ಶೇಷಶಯನ ನೀ ಪೋಷಿಸೊ ಶ್ರೀಕೃಷ್ಣ ವಾಸುದೇವಭಾಸುರಾಂಗನೆ ಭಕ್ತವತ್ಸಲ ಶ್ರೀಕೃಷ್ಣ ವಾಸುದೇವ5
--------------
ವ್ಯಾಸರಾಯರು
ವಾಸುದೇವ ಬಲ್ಲಭಾಸುರಾಂಗ ಶ್ರೀವಾಸುಕಿಶಯನನಸಾಸಿರ ನಾಮವ ಲೇಸಾಗಿ ಪಠಿಸದೆ ಪ ಮುರ ಮುಷ್ಟಿಕ ವೈರಿಯನಿಷ್ಠೆಯಿಂದ ನಾ ದೃಷ್ಟಿಸಿ ನೋಡದೆ 1 ಕಾಯವು ಸ್ಥಿರವಲ್ಲ ಎನ್ನೊಳುಮಾಯೆ ತುಂಬಿತಲ್ಲಪ್ರಾಯಮದದಿ ಪರಸ್ತ್ರೀಯರ ಕೊಂಡಾಡಿಕಾಯಜಜನಕನ ಗಾಯನ ಮಾಡದೆ2 ಕಂಗಳಿಂದಲಿ ನೋಡೋ ದೇವ ನಿ -ನ್ನಂಗಸಂಗವ ನೀಡೋಮಂಗಳಮಹಿಮ ಶ್ರೀರಂಗವಿಠಲ ಮುಂ-ದಂಗಬಾರದಂತೆ ನೀ ದಯಮಾಡೋ 3
--------------
ಶ್ರೀಪಾದರಾಜರು
ವಾಸುದೇವ ಹೃದಯನಮೋ ನಮೋ ನಂದಾಭ್ಯುದಯ ನಮೋ ನಮೋ ಗೋಪಿಕಾ ಪ್ರಿಯ ಪದೀನಜನಾವನಲೋಲ ದಾನವಶಿಕ್ಷಕ ಕಾಲಭಾನುಶತಾಭಜಾಲ ಶ್ರೀ ನಿಜಭೋಗವಿಶಾಲ 1ಮುರಹರ ಮುಚುಕುಂದ ಸೇವ್ಯ ಭಾವ್ಯ 2ಪರಮ ಪುರುಷ ಶ್ರೀ ರಮಣ ಶರಧಿಶಯನ ನಿರಾವರಣದುರಿತತಿಮಿರಹರಚರಣ ತಿರುಪತಿ ವೆಂಕಟರಮಣ 3ಓಂ ಇಳಾಪತಯೇ ನಮಃ
--------------
ತಿಮ್ಮಪ್ಪದಾಸರು
ವಾಸುದೇವ ನಿನ್ನ ದಾಸನಾಗಲು ಬಲು ಆಸೆಯ ಪೊಂದಿ ಸಂತೋಷದಲಿರುವೆನೊ ಪ ಈ ಸಂಸಾರದ ಮೋಸಕೆ ಸಿಲುಕೆ ನಾ ಶ್ರೀಶನ ಚರಣವ ಲೇಶ ಭಜಿಸಲಿಲ್ಲ ಪಾಶಕೆ ಸಿಲುಕದ ಸುಜನರುಗಳ ಸಹ ವಾಸವಿತ್ತು ಅವಕಾಶವ ನೀಡೊ ಅ.ಪ ಸಾರುತಲಿರುವ ಸಮೀರ ಸಮಯಗಳ ಸಾರವನರಿಯದೆ ದೂರಿದೆ ನಿನ್ನನು ಯಾರ ಕರುಣವೊ ತೋರಿತು ಮನದಲಿ ಘೋರತರದ ಅಪರಾಧಗಳೆಲ್ಲವು ಭೂರಿ ದಯದಿ ನಿನ್ನ ಚಾರು ಚರಣದಲಿ ಸೇರಿಸೊ ಮನವ 1 ಪರಿಪರಿ ವಿಧದ ಕುಶಾಸ್ತ್ರಗಳೋದಲು ಬರಿಗಾಳಿಯ ಗುದ್ದಿ ಮುರಿದವು ಕರಗಳು ಸಿರಿರಮಣನೆ ನಿನ್ನ ಪರಿಚಾರಕನೆಂಬೊ ಅರಿವಿನಿಂದಲೆ ಪರತರ ಸುಖವೆಂದು ಪರಿಪರಿಯರುಹುವ ಗುರು ಮಧ್ವರಾಯರ ವರಶಾಸ್ತ್ರಗಳಿಗೆ ಸರಿಯುಂಟೆ ಜಗದೆ 2 ಅನ್ಯಸೇವೆಗಳಲ್ಲಿ ಅನ್ಯಾಯದಿ ಕಾಲ ಮುನ್ನ ಕಳೆದುದನು ಮನ್ನಿಸೆಲೋ ಹರಿ ನಿನ್ನ ಸೇವೆಯ ಸುಖವನ್ನು ಅರಿತೆನೊ ಎನ್ನ ಮನಕೆ ಬಲವನ್ನು ಕರುಣಿಸುತ ಇನ್ನಾದರು ಚ್ಯುತಿಯನ್ನು ಪೊಂದಿಸದೆ ನಿನ್ನ ದಾಸನಲಿ ಪ್ರಸನ್ನನಾಗೆಲೊ 3
--------------
ವಿದ್ಯಾಪ್ರಸನ್ನತೀರ್ಥರು
ವಾಸುದೇವ ಹರಿ ವಿಠಲಾ | ಪೋಷಿಸುವುದಿವನಾ ಪ ನೀಸಲಹದಿರೆ ಅನ್ಯ | ಆಶ್ರಯಗಳುಂಟೇ ಅ.ಪ. ದಾಸವೃತ್ತಿಯಲಿದ್ದು | ಮೀಸಲಳಿಯದೆ ಇರುವದಾಸದೀಕ್ಷಾಂಕಿತವು | ಲೇಸು ದೊರೆಯದಲೇ |ಘಾಸಿ ಪಡುತಲಿ ಮನದಿ | ಆಶ್ರಯಿಸಿ ಎನ್ನ ಸುಪ್ತೀಶ ಸೂಚ್ಯಪರಿ ಉಪ | ದೇಶವಿತ್ತಿಹೆನೋ 1 ಒಂದೊಮ್ಮೆ ಇವನಮ್ಮ | ಬಂಧುವೆಂದೆಣಿಸಿಹನೊಇಂದಿರಾಪತಿ ಹರಿಯೆ | ಕಂದರ್ಪಜನಕಾತಂದೆತಾಯಿಯು ನೀನೆ | ಕುಂದುನೆಣಿಸದೆ ಇವನಾಛಂದದಲಿ ಸಲಹೊ ಹರಿ | ನಂದ ಮುನಿವಂದ್ಯಾ 2 ತಾರತಮ್ಯಜ್ಞಾನ ಮೂರೆರಡು ಭೇದಗಳವಾರವಾರಕೆ ತಿಳಿಸಿ | ಕಾಪಾಡೊ ಹರಿಯೇ |ಮಾರಪಿತಮುರಮೈರಿ | ವೈರಾಗ್ಯ ಭಾಗ್ಯಕ್ಕೆದಾರಿತೋರುತ ಪೊರೆಯೊ | ವಾರಿಜಾಂಬಕನೇ 3 ಉತ್ತಮಾನುಷ್ಠಾನ | ಇತ್ತು ಈತಗೆ ನೀನುಚಿತ್ತದೊಳು ವ್ಯಾಪ್ತ ಸ | ರ್ವತ್ರ ಸ್ಮøತಿಯಿತ್ತು |ಎತ್ತು ಭವವನಧಿಯಿಂ | ಕೃತ್ತಿವಾಸನ ತಾತಮತ್ತನ್ಯ ಬೇಡೆ ನಿನ | ಚಿತ್ತದೊಲ್ಲಭನೇ 4 ದೇವ ದೈತ್ಯರು ದೇಹ | ಆವಾಶಿವಿಹರೆಂಬಭಾವಗಳ ತಿಳಿಸುತ್ತ | ತೀವ್ರುಪಾಸನವಾ |ದೇವ ಇವಗಿತ್ತು ಸಂ | ಭಾವಿಪುದು ಶ್ರೀಹರಿಯೆಗೋವಿಂದಾಪತಿಯೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವಾಸುದೇವಯನ್ನ ಸಲಹೋ ವಾರಿಜಾಸನ ಈಶವಾಸವಾರ್ಚಿತ ಚರಣ ವನಜೋದರ ಭಾಸುರಾಂಗ ಕೋಟಿ ಪ್ರಭಾಕರ ಪ್ರಕಾಶ ಮಂದಹಾಸ ಕಮಲಾಚಲನಿವಾಸ ಶ್ರೀ ಜಗದೀಶ ಪ ತಾಪಸೋತ್ತಮ ಸತಿಗೆ ಕೋಪದಿಂದ ಪಾಷಾಣರೂಪವಾಗಿ ಬಿಟ್ಡೆನುತ ಶಾಪಕೊಡಲು ಕೋಪನಾಮಣಿ ಬಲು ಪ್ರಲಾಪಿಸುತ ಮನದಿ ನಿಷ್ಪಾಪರರ ನುಡಿಯಂತೆ ಧರಿಯಲಿಬಿದ್ದಿರಲು ಪಾದ ಸ್ಪರ್ಶಿಸಲಾಕ್ಷಣ ಸೀತಾಪತಿಯ ಸೇವೆಯಿಂದ ಸುಂದರಿಯಾದಳು ತ್ವರದಿ 1 ಪಾಪಗಳು ಮಾಡಿದವನಂತ್ಯ ಕಾಲದಲಿ ಸುತನ ನಾರಗೆಂದು ಕರಿಯೇ ಗತಿ ತೋರಿದಿ ಹಿತದ ಲಾಮರಾಮರೆಂಬ ನಿನ್ನ ಹರುಷದಲಿ ಪೊರೆದೆ ಕ್ಷಿತಿ ನಾಥ ಹರಿ ಮಹೋನ್ನತ ಚರಿತನೆ ಪತಿತ ಪಾವನ ಬಿರುದು ಪರಮಾತ್ಮ ನಿನಗಿರಲು ಸ್ತುತಿಸುವೆನು ಗೋವಿಂದ ಶುಭಕರ ಶ್ರೀ ಮುಕುಂದ 2 ಶರಧಿ ಗಂಭೀರ ಹಾಟಕಾಂಬರ ಶೋಭಿತ ಪುರುಷೋತ್ತಮಾನಂತ ಮುರವೈರಿ ಮುರಲೀರವ ವಿನೋದ ಗರುಡಗಮನ `ವರ ಹೆನ್ನೆಪುರನಿಲಯ' ಪರಮಪಾವನ ನೃಹರೆ ಉರಗೇಂದ್ರಶಯನ ಮಂದರಧರ ಕೃಪಾಂಬುಧೆ3
--------------
ಹೆನ್ನೆರಂಗದಾಸರು