ಒಟ್ಟು 2285 ಕಡೆಗಳಲ್ಲಿ , 112 ದಾಸರು , 1835 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಂಡರಿಯ ಪುರನಾಥ | ಭಕುತರ ದಾತಾ | ಅಂಡಲೆದು ಜನುಮಗಳ | ಬೆಂಡಾದೆ ಹರಿಯೇ ಪ ಸೂಕರ ಖರದ | ಹೇನು ಹಕ್ಕಿಯ ಮೃಗದಯೋನಿ ಯೋನಿಯ ಚರಿಸಿ | ಬೇನೆಗ್ವೊಳಗಾದೇಮಾನನಿಧಿ ಕಾರುಣ್ಯ | ವೇನ ಬಣ್ಣಿಪೆನಯ್ಯಮಾನವನ ಮಾಡೆನ್ನ | ನೀನಾಗಿ ಪೊರೆದೇ 1 ಕರ್ಮ ಕೋಟಿಗಳಲ್ಲಿ | ಮರ್ಮಗಳ ಮರೆತಲ್ಲಿಒಮ್ಮನದಿ ಸೂತ್ರಗಳ ತದ್ಭಾಷ್ಯಂಗಳಾ ||ಪೇರ್ಮೆಯಲಿ ನೋಡದಲೆ | ಕರ್ಮಚರಿಸಿದೆನಲ್ಲೆಭರ್ಮ ಗರ್ಭನನಯ್ಯ | ನಿರ್ಮಮನ ಮಾಡಯ್ಯ 2 ಸಕಲ ಶಾಸ್ತ್ರಾರ್ಥಗಳ | ಸಕಲ ಸಾರನೆ ಅಖಳಭಕುತ ಜನ ಸಂಸೇವ್ಯ | ಮಧ್ವಮುನಿ ವಂದ್ಯ ||ಸಕಲಾತ್ಮಕನೆ ಗುರು | ಗೋವಿಂದ ವಿಠಲಯ್ಯಸಕಲಕೂ ನೀನೇ ಚೇ | ಷ್ಟಕನೆಂದು ತಿಳಿಸೊ3
--------------
ಗುರುಗೋವಿಂದವಿಠಲರು
ಪಂಢರಿಯ ಬಿಟ್ಟಲ್ಲಿ ಹೆಂಡತಿಯ ಕರಕೊಂಡುಬಂದ ಕಾರಣ ತಿಳಿಯದೋಹೆಂಡತಿಯ ಕಾಟವೊ ಇದು ನಿನ್ನ ಆಟವೊಭಕ್ತಭೂ'ುಗೆ ಓಟವೊಪಂಢರಿಯ ಬಿಟ್ಟಿಲ್ಲಿ ಬಂದ ಕಾರಣವೇನುಪೇಶಯ್ಯ ಪಾಂಡುರಂಗಾsಚಂದ್ರಭಾಗಾ ತೀರ ಸುಂದರ ಮಂದಿರವುಇಂದಿರಾರಮಣ ನಿನಗಲ್ಲಿ 1ಅರುಣೋದಯಕೆ ನಿತ್ಯ ಪಂಚಾಮೃತದ ಸ್ನಾನನವನೀತ ಬಾು ತುಂಬಾsಜರತಾರಿ ಮುಂಡಾಸು ಭರ್ಜರಿ ನಿಲುವಂಗಿಸೊಂಪಿನಂಚಿನ ಮಡಿಯು ನನಗೆತರತರದ ಪುಷ್ಪಗಳು ಎಳೆ ತುಳಸಿ ವನಮಾಲಿಕೊರಳೊಳಗೆ ವೈಜಯಂತಿಪರಿಮಳದ ಗಂಧ ಕಸ್ತೂರಿ ಫಣಿಯಲಿಟ್ಟುವೈಭವದಿ ಪೂಜಿಸುವರು 2ಅಂದಚೆಂದದ ರತ್ನ ಮುತ್ತಿನಾಭರಣಗಳುತರತರದ ಸೊಗಸಾದ ಪಂಚಪಕ್ವಾನ್ನಗಳುಸರಿಯಾಗಿ ಮಧ್ಯಾಹ್ನ ಮಾಪೂಜೆ ನಡೆಯುವದುಭಕ್ತರಿಗೆ ಲೆಕ್ಕ'ಲ್ಲಾ sಪಾದಕ್ಕೆ ಹಣೆ ಹಚ್ಚಿ ತಿಕ್ಕುವರು ಮೇಲೆದ್ದುನಿಂತುಬಿಡುವರು ಅಲ್ಲಿ ದಬ್ಬಿದರು ಎಚ್ಚರಿಲ್ಲಾಇಂಥ ಭಕ್ತಿಯ ಭಾವ ಇನ್ನೆಲ್ಲಿಯೂ ಕಾಣೆಭಕ್ತವತ್ಸಲ 'ಠ್ಠಲಾs 3ಗೋಧೂಳಿ ಕಾಲಕ್ಕೆ ಪಾದಪೂಜೆಯು ಮಹಾಧೂಪ ದೀಪೋತ್ಸವಗಳುsಆಪಾದಮೌಳಿ ಪರ್ಯಂತ ದರ್ಶನ ಪಾದಸ್ಪರ್ಶದಾ ಆನಂದವೋsರಾತ್ರಿ ಹತ್ತಕ್ಕೆ ಶಯನೋತ್ಸವದ ವೈಭವವುನೋಡಿದವರೇ ಧನ್ಯರುsಸಚ್ಚಿದಾನಂದಮೂರ್ತಿ ಅಲ್ಲಿ ಪ್ರತ್ಯಕ್ಷಭಕ್ತರಿಗೆ ಕಾಣುತಿಹನು 4ಸತ್ಯವಾದೀ ಜಗಕೆ ಪಂಚಭೇದವು ನಿತ್ಯಸರ್ವತ್ರ ತಾರತಮ್ಯಸೃಷ್ಟ್ಯಾದಿ ಅಷ್ಟ ಕರ್ತೃತ್ವ 'ಠ್ಠಲಗುಂಟು'ಠ್ಠಲನೆ ಸವೋತ್ತಮಾsಹರಿಯು ಸರ್ವೋತ್ತಮನು ವಾಯು ಜೀವೋತ್ತಮನುಮೂಲಗುರು ಮುಖ್ಯ ಪ್ರಾಣನುಮಧ್ವಮತವೇ ಮತವು ಸಕಲಶ್ರುತಿಸಮ್ಮತವುನಿತ್ಯ ತತ್ತ್ವಜ್ಞಾನವುs 5ಅಣುರೇಣು ಪರಿಪೂರ್ಣ ಸರ್ವಗುಣ ಸಂಪನ್ನನಿರ್ದೋಷ ನಿರ್'ಕಾರಾsಸರ್ವತಂತ್ರ ಸ್ವತಂತ್ರ ಸರ್ವಾಂತರ್ಯಾ'ುಸರ್ವಜ್ಞ ಸರ್ವಸ್ವಾ'ುsಸಚ್ಚಿದಾನಂದಾತ್ಮ ಪೂರ್ಣಾತ್ಮ ಪರಮಾತ್ಮನಿತ್ಯತೃಪ್ತನು ಶ್ರೀಹರಿsನಿರ್ಗುಣ ನಿರಾಕಾರ ಅ'ುತಗುಣ ಆಕಾರತ್ರಿಗುಣವರ್ಜಿತ ತ್ರಿಧಾಮಾs 6ಕಾರ್ಯಕಾರಣ ಅಂಶಿ ಅಂಶಾವತಾರಅಂತರ್ಯಾ'ುಯಾಗಿ ಇಹನುsಪ್ರೇರ್ಯಪ್ರೇರಕನಾಗಿ ಬಾದ್ಯ ಬಾಧಕನಾಗಿವ್ಯಾಪ್ಯ ವ್ಯಾಪಕನು ತಾನುsಯಾರು ತನ್ನನೆ ನಂಬಿ ಸರ್ವಸ್ವವನು ನೀಡಿದಾಸರಾಗುವರೊ ಅವರನ್ನುsಕ್ಲೇಶಗಳ ಕಳೆದು ಭವಪಾಶ ಬಂಧವ ಬಿಡಿಸಿಶ್ರೀಶ ಕೈಪಿಡಿದು ಪೊರೆವಾs 7'ಷ್ಣು ಸರ್ವೋತ್ತಮತ್ವ ತಿಳಿಯದ ಜ್ಞಾನಶೂನ್ಯರಿಗೆಬೇಸತ್ತು ಇಲ್ಲಿ ಬಂದ್ಯಾ sಭಕ್ತ ಪ್ರಹ್ಲಾದನವತಾರ ರಾಯರು ಇಲ್ಲಿಬಂದದ್ದು ಕೇಳಿ ಬಂದ್ಯಾ sಮಧ್ವಸಿದ್ಧಾಂತ ಪದ್ಧತಿಗೆ ಅನುಸರಿಸಿಪೂಜೆಗೊಂಬಲು ಬಂದೆಯಾsಮುದ್ದುಭೂಪತಿ'ಠಲ ಬಿದ್ದೆ ನಿನಪಾದಕ್ಕೆಉದ್ಧಾರ ಮಾಡೊ ಸ್ವಾ'ು 8ಫಲಶ್ರುತಿಚಿತ್ತನಿರ್ಮಲರಾಗಿ ಭಕ್ತಿಭಾವದಿ ನಿತ್ಯ'ಠ್ಠಲಾಷ್ಟಕ ಪಠಿಸಲು'ಠ್ಠಲನು ಕೈಪಿಡಿದು ಕಷ್ಟಗಳ ಪರಿಹರಿಸಿಇಷ್ಟಾರ್ಥಗಳ ಕೊಡುವನುsಸತ್ಯ'ೀ ಮಾತಿದಕೆ ಸಾಕ್ಷಿ ಬೇಕಾದರೆಪ್ರತ್ಯಕ್ಷ ಪಾಂಡುರಂಗಾsಕಾವೇರಿ ಶ್ರೀರಂಗ ಕಂಬೆವರದರಾಜಗಲಗಲಿಯ ನರಸಿಂಗನೋs 9
--------------
ಭೂಪತಿ ವಿಠಲರು
ಪತಿ ತನಯೇ ಪ ಆರು ನಿನಗೆ ಸರಿ ಮೂರು ಲೋಕದೊಳುವೃತ್ರಾರಿಗಳಿಂದಾರಾಧಿತಳೇ ಅ.ಪ. ಅಗಜೆ ಎನ್ನ ವದನಾ | ಮಾಡಲಿ | ನಗಧ5ಗುಣಸ್ತವನಾಖಗ ವಹ ಸಖ ಶಿವ | ಮೃಗ ಪಾಣಿಯ 5iÉುಹಗಲಿರುಳಲಿ ಹರಿ ಗಾಯನ ಮಾಡಿಸೇ 1 ಮನಸಿಜಾರಿಯ ಜಾಯೇ | ಮನ್ಮನ | ಚಪಲ ಬಿಡಿಸು ತಾಯೇಕನಸಿಲಿ ಮನಸಿಲಿ ಘನ ವಿಷಯಂಗಳನೆನೆವ ಕೊಡದೆ ಹರಿ ಧ್ಯಾನವನೀಯೇ 2 ಲೋಕ ಪಾವನ ಮೂರ್ತೇ | ಪಾಲಿಸು | ಏಕದಂತನ ಮಾತೇನೋಕನೀಯ ಗುರು ಗೋವಿಂದ ವಿಠಲನಜೋಕೆಯಿಂದ ನೆನೆ ನೆನೆಯುವ ಮಾತೇ 3
--------------
ಗುರುಗೋವಿಂದವಿಠಲರು
ಪತಿ ತನುಜ ಕರುಣಿಸೋ ಹರಿ ನಿನ್ನವ ನೆನಿಸೋ | ಸಿರಿಪತಿ ತವ ನಾಮಾಮೃತ ಫಲನುಣಿಸೋ ಪ ನಿನ್ನ ದಾಸರ ಸಂಗವನುದಿನ ಬಲಿಸೋ | ಘನ ವಿಚಾರಕ ಮನವೆನ್ನ ನಿಲಿಸೋ 1 ಮಂಗಳಂಘ್ರಿಯ ಕುಂಬ ಕಂಗಳದೆರಿಸೋ | ರಂಗಭಕುತಿ ಅಂತರಂಗ ದೆಚ್ಚರಿಸೋ 2 ಜನುಮಕ ಬಹಭವ ಪರಿಹರಿಸೋ | .........................................3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪತಿತಪಾವನ ರಮಾಪತಿ ಪರಂಧಾಮಾ ಪ ಗತಿಮತಿ ನಿನ್ನ ನಾಮಾ | ಅಮೃತವು ಸೀತಾರಾಮಾ ಹಿತಪಿತ ನೀನೇ ರಾಮಾ | ತಾರಕ ನಾಮಾ ಅ.ಪ ದಶರಥ ಬಾಲಾ | ಸುರಮುನಿ ಪಾಲಾ ನಿಶಿಚರ ಶೂಲಾ | ಶ್ರೀವನಮಾಲಾ ಶಶಿಸಮ ಪಾಲಾ | ಕರುಣಾಲವಾಲಾ ಕಾಲ | ಮಾಂಗಿರಿಯ ಗೋಪಾಲಾ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಪಥ ಕೇಳಿನ್ನು ಪ ಅಂತರಂಗದಲಿ ಶಾಂತಿಯ ತಾಳಿ | ಅಂತರಾತ್ಮನು ನೀನೆನ್ನು | ಸತಿಸುತರಿಗೆ ಗತಿಯೇ ನಂಬಿದೆ | ಗತಿಯಿದ್ದದ್ದಾಗುವದೆನ್ನು | ಅತಿಶಯ ದುಷ್ಕರ್ಮಿಗಳು ನಿಂದಿಸೆ | ಕೃತ ಪೂರ್ವದ ಫಲವೆನ್ನು || ಸತತ ದ್ರವ್ಯವ ಬಯಸಿ ಗಳಿಸಿದೆ | ಗತಿಯಾಗುವದದು ಏನು ? | ಪತಿತ ಪಾವನ ರಘೂನಾಥನ | ನಾಮವ ಗುಪಿತದಿ ಜಪಿಸೊ ನೀನು 1 ಅಣ್ಣ ತಮ್ಮ ತಾಯಿ ತಂದೆ ಬಳಗದ | ಕಣ್ಣು ಮುಂದಿರಬೇಡಿನ್ನು | ಬಣ್ಣ ಬಣ್ಣ ಮಾತುಗಳಾಡಲು | ಪುಣ್ಯವು ಅದರಲಿ ಏನು ? || ಹೆಣ್ಣು ನೋಡಿ ಮನದಲಿ ಹಿಗ್ಗುವಿ | ಮಣ್ಣು ಕೂಡಿತದು ಏನು ? | ಹಣ್ಣು ಹಾಲು ಮೃಷ್ಟಾನ್ನಕಿಂತ ನೀ | ಉಣ್ಣು ಬ್ರಹ್ಮಾನಂದಾಮೃತವನ್ನು 2 ಅಂಶವುಳಿಯಬೇಕೆಂದರೆ ಈ ಜಗ- | ದಂಶವು ನನ್ನದು ಎನ್ನು | ಮಾಂಸಪಿಂಡ ಮುಖಾಂಡ ದಹನವು ಹುತಾಶನಗಾಹುತಿ ಎನ್ನು | ಕಂಸನ ತಂಗಿಯ ಮಗ ಪಾರ್ಥಗೆ ಹೇಳಿದ | ಸಂಶಯವ್ಯಾತಕೆ ಇನ್ನು | ಹಂಸ ಪರಮರ ಐಕ್ಯವ ತಿಳಿಯದೆ | ಹಂಸೋಹಂ ಎಂದರದೇನು ? 3 ನೋಡಿದುದೆಲ್ಲಾ ಪುಸಿಯೆಂದು | ಮಾಡೋ ನಿಶ್ಚಯವಿನ್ನು | ಆಡಬೇಡ ಅನೃತ ವಚನವನು | ಆಡುತಲಿರು ಸತ್ಯವನು | ಕೂಡಬೇಡ ಕಾಮಂದಿಯ ಸಂಗ | ಕೇಡು ತಪ್ಪದದಿನ್ನು | ರೂಢಿಯೊಳಗೆ ನರನಾಗಿ ಪುಟ್ಟಿ | ಮಾಡುತ ನಡಿ ಧರ್ಮವನು 4 ಮೂರ್ತಿ ಪಡಿ | ನಾದವನಾಲಿಸು ನೀನು 5
--------------
ಭಾವತರಕರು
ಪಥವ ಬಿಡು ಬಿಡು ದೇವ ಪಥದಿ ಮಲಗುವರೆಗತಿ ಚಿದಾನಂದನಿರೆ ಗತಿಗೆಡುವೆನೆ ಭಯಕೆ ಪ ಭವ ಹರಿದುನಿಲ್ಲದಲೆ ನಾನೀಗಲೈ ತರಲಿಕೆಇಲ್ಲಿ ಸರ್ವವೆ ಆಗಿ ನೀ ಬಂದು ಮಲಗಿರುವೆಸುಳ್ಳನಿತು ಸೇರದಿದು ನಿನ್ನವಗೆ ಬಿಡು ಪಥವ1 ಮನುಜ ಸಂಗವನಳಿದು ಮಹದರಣ್ಯವ ಹೊಕ್ಕುಅನಂತರದ ಪುಣ್ಯದಾಶ್ರಮವ ನೋಡಿಸನುಮತದಿ ಪೂಜೆಯನು ಮಾಳ್ಪೆನಾನೆಂದು ಬರೆಘನಸರ್ಪವಾಗಿ ನೀನಡ್ಡ ಬಿದ್ದಿಹೆ ದೇವ 2 ಸಕಲ ಸಂಗವನುಳಿದು ಸ್ವಾನುಭಾವಗಳಿಂದಅಖಿಲ ಮೃಗಗಳ ಕೂಡಿ ನಿಶ್ಚಲತೆಯಿಂದಭಕುತಿಯಲಿ ನಿನ್ನನು ಭಜಿಪೆನೆಂದೈದುತಿರೆಭಕುತನಿಗೆ ಸರ್ಪನಂತಿಹುದಿದೇನೈ ಸ್ವಾಮಿ3 ಏಕಾಂತ ಗೃಹಗಳಲಿ ಏಕಾಂತ ಸ್ಥಳಗಳಲಿಏಕಾಂತವಾಗಿ ನಿನ್ನನೆ ಪೂಜಿಸಿಏಕಾಂತ ಸರ್ವಸಾಧನವೆನುತಲೈದುತಿರೆಏಕಾಂತ ಮಾತೇಕೆ ಪಥವ ಬಿಡು ಎಲೆ ದೇವ 4 ಶುಕಗೆ ಪಂಜರದಂತೆ ಸಾಕ್ಷಿಯೆನಗಿರುತಿರಲುಅಖಿಲ ಚಿಂತೆಯ ಗಿಡುಗ ಬರಲಹುದೆಮುಕುತಿದಾಯಕ ಚಿದಾನಂದ ಗುರು ಕೇಳೆನಗೆಯುಕುತಿಯುಂಟೇ ಬೇರೆ ಬಿಡುಬಿಡಿರೆ ಬಿಡು ಪಥವ5
--------------
ಚಿದಾನಂದ ಅವಧೂತರು
ಪದಯುಗಳಂ ಪ ರಾಮಸುಂದರ ಘನ ಶ್ಯಾಮರಘೂದ್ವಹ ಅ.ಪ. ದಶರಥ ಹೃದಯಾನಂದಕರಂ ತ್ರಿದಶಗಣಚಿತ್ತಾಮೋದಕರಂ 1 ಪೂರಿತ ಕೌಶಿಕಯಜನಂ ಸಂತಾರಿತಗೌತಮ ಲಲನಾಂ 2 ಖಂಡಿತ ಶಂಕರ ಚಾಪಂ ಪರಿ-ದಂಡಿತ ಭಾರ್ಗವ ಕೋಪಂ 3 ಪಾತಕ ನಿಚಯಂ 4 ಮುನಿಜನ ಸ್ತುತಿರಚನಂ5 ಭಾರದ್ವಾಜಾರ್ಪಿತ ಭೋಜ್ಯಂ 6 ಉದ್ದಂಡ ವಿರಾಧಪಾತಕ ಹರಣಂ 7 ನಿರ್ಜಿತರಾಕ್ಷಸಷಂಡಂ8 ಧೃತಜಗದುಲ್ಲಾಸಂ 9 ವಿವಿಧಾಯುಧಜಾಲಂ 10 ಶೂರ್ಪನಖಾಂಗಂ 11 ನರವರಮುನಿಗಣ ಪರಿಪಾಲಂ12 ಮಾಯಾಮೃಗಾರ್ಪಿತ ಬಾಣವರಂ- ಜಟಾಯುಸಂಪಾದಿತ ಲೋಕವರಂ 13 ರಾವಣಹೃತ ನಿಜ ಪತ್ನೀಕಂ ಲೋಕಾವನಗತ ಕೋಪೋದ್ರೇಕಂ 14 ಬಂಧನ ಮೋಚನ ಚತುರಂ 15 ವಾತತನೂಭವ ಕೃತಸ್ತೋತ್ರಂ-ಪಂಪಾತಟಿನಿರ್ಮಿತ ಸುಕ್ಷೇತ್ರಂ16 ಶಿಕ್ಷಿತ ಸಂಕ್ರಂದನ ತನುಜಂ-ಸಂರಕ್ಷಿತ ಚಂಡ ಕಿರಣ ತನುಜಂ17 ಸೀತಾಲೋಕನ ಕೃತಕಾಮಂ-ನಿಜಧೂತಾಮೋದನ ಸುಪ್ರೇಮಂ18 ಯವನಾಲಯ ಪರಿವಾರಂ19 ಧೂತಾಹೃತ ಶುಭದೃಷ್ಟಾಂತಂ-ವಿಜ್ಞಾತನಿಜಸ್ತ್ರೀ ವೃತ್ತಾಂತಂ20 ಭೀಷಣ ಜಲನಿಧಿ ಬಂಧಕರಂ-ವಿಭೀಷಣ ಸಂರಕ್ಷಣ ಚತುರಂ21 ಶೋಷಿತ ರಾವಣ ಜಲದಿಂ-ಸಂತೋಷಿತ ದೈವತ ಪರಿಧಿಂ22 ಪಾತಕ ನಿಜ ನಾಮಾಂಕಂ 23 ಸ್ವೀಕೃತ ಸಾಕೇತವಾಸಂ-ಅಂಗೀಕೃತ ಮಾನುಷ್ಯ ವಿಲಾಸಂ24 ವಿಠಲಮತಿಶಯರುಚಿರಂ25
--------------
ಸರಗೂರು ವೆಂಕಟವರದಾರ್ಯರು
ಪದ್ಯ ಅಥಃ ಪ್ರಥÀಮೋಧ್ಯಾಯ ಪಾದ ವಾರಿಜಕೆರಗುತ ನೀರಜ ಮುಖಿ ಸರಸ್ವತಿಯಾ || ಸಾರ ಭಕ್ತಿಲಿ ಸ್ತುತಿಸಿ ಪೇಳುವೆ ಸತ್ಯ ಚಾರು ಕಥೆಯಾ ಪ ಸುರಮುಖಿವಂದಿತ ಸರಸಿಜ ಭವಪಿತ ಶರಧಿ ಕರಿವರದಾ | ಹರುಷದಿಂದಲಿ ನಿನ್ನ ಚರಿತೆ ಕೊಂಡಾಡಲು ವರವ ಪಾಲಿಸು ದಯದಿಂದ 1 ಶರನಿಧಿ ಸಂಭೂತೆ ಸುರಜೇಷ್ಟ ಸ್ಮರಮಾತೆ ಪುರಹರ ವಂದಿತೆ ಖ್ಯಾತೆ || ಸ್ಮರಿಸಿ ಬೇಡುವೆ ನಿನ್ನ ಧೊರಿಯ ವರ್ಣಿಸಲೀಗ ಗರಿಯೆ ವರವ ಸುಖದಾತೆ 2 ಹರಿಕುಲೋತ್ತುಮ ನಿನ್ನ ಸರಸಿಜ ಪದಯುಗ ನೆರೆನಂಬಿದೆನು ಮುದಿಂದ || ಹರಿಸುಚರಿತ್ರವು ಅರುಹಲು ಎನ್ನಗೆ ಸ್ಥಿರ ಬುದ್ಧಿಕೊಡು ವಾಯುಕಂದ 3 ಗಿರಿಜೇಶ ಶಚಿಪತಿ ಸುರತತಿಗೆರಗುವೆ ಪರಮ ಸುಭಕ್ತಿ ಪೂರ್ವಕದಿ || ಹರಿದಾಸ ವರ್ಗಕೆ ಶುಭನೀಡಲೆನಗೆಂದು ಶಿರಬಾಗಿ ಬೇಡುವೆ ಮನದಿ 4 ಘನತರ ನೈಮಿಷವನದೊಳು ವಾಸಿಪ ಮುನಿ ಸೂತನಲ್ಲಿಗೆ ಬಂದು | ವಿನಯದಲಿ ವಿಜ್ಞಾಪನ ಮಾಡಿಕೊಂಡರು ಶೌನಕಾದಿಗಳೆಲ್ಲ ನಿಂದು 5 ಕ್ಷಿತಿಯೊಳು ಮನದಾಸೆ ಹಿತದಿಂದ ನೀಡುವ | ವ್ರತದಾವದ್ಹೇಳಿರೆನುತ || ಅತಿ ಭಕ್ತಿಯಿಂದ ಕೇಳುವ ಮುನಿಗಳ ಕಂಡು ಕಥಿಸಿದನಾಗೆತಿ ಸೂತಾ 6 ಛಂದದಿ ಕೇಳಿರಿ ಒಂದೆ ಮನದಿ ಈಗಾ | ನಂದದಿ ನಾರದ ತಾನೂ || ಹಿಂದಕ್ಕೆ ಈತೆರ ನಂದನ ಗೋ ವಿಂದನ ಪ್ರಶ್ನೆ ಮಾಡಿದನೂ 7 ಕಾರುಣ್ಯದಿಂದಲಿ ಸಾರಸೋದ್ಭವಕು | ಮಾರ ನಾರದ ಮುನಿವರಗೆ || ಶೌರಿ ಪೇಳಿದ ಕಥೆ ಸಾಧುವೆ ಮೋದದಿ ನಿಮಗೆ 8 ವರಸುರ ಲೋಕಾದಿ ಚರಿಸುತ್ತನಾರದ | ಹರುಷದಿ ಭೂಮಿಗೆ ಬರಲು || ನರರತಿ ಕಷ್ಟದಿ ಮರುಗುವದಂ ನೋಡಿ | ಪೊರೆಟರು ಹರಿಗ್ಹೇಳಿ ಕೊಳಲು 9 ಪದುಮಜ ಸುತ ನಾರದ ಮುನಿ ವೇಗದಿ | ವಿದುಧರ ವಂದಿತನಾದ || ಯದುಪನಲ್ಲಿಗೆ ಬಂದು ಮುದಮನದಿಂದಲಿ | ವಿಧ ವಿಧದಲಿ ಸ್ತುತಿಗೈದಾ 10 ಅಗಣಿತ ಮಹಿಮನೆ ತ್ರಿಗೂಣ ವರ್ಜಿತ ತ್ರಿವಿಕ್ರಮನೆ || ಪೊಗಳುವ ತವ ಪದಯುಗಕೆರಗುತ ನಾನು ಜಗದುತ್ವತ್ತಿ ಕಾರಣನೆ 11 ಮಗಳಲ್ಲಿ ಪುಟ್ಟದಿ ಮಗನನ್ನು ಕುಟ್ಟದಿ | ಮಗನ ಮಗಳ ಮದುವ್ಯಾದಿ || ಮಗನ ಮಗನ ವರಪಡೆದಾತನ ಜೈಸಿ ಮಗನ ಮಗನ ನೀನು ತಂದಿ 12 ಸಿಂಧುಜರಿಪ್ರಸಖ ನಂದನ ಕೊಂದನ | ತಂದೆಯ ತಂದೆಯಾ ಸುತೆಯಾ || ನಂದಿನಿಯಳಿಗಾಗಿ ನೊಂದಿದಿ ನೀ ನರ ರಂದದಿ ಕವಿಗಣಗೇಯಾ 13 ಘನ್ನ ಮಹಿಮ ನಿನ್ನ ಅನಂತ ಚರಿಯವ ಬಣ್ಣಿಸ ಬಲ್ಲೆನೆ ದೇವಾ || ಪನ್ನಗರಾಜಗಾಗಣ್ಯವಾಗಿಪ್ಪುದು ಮನ್ನಿಸು ಎನ್ನ ಬಿನ್ನಪವಾ 14 ಬಾ ಮುದ್ದು ನಾರದನೆ ಬಾ ಮುನಿವರ್ಯನೆ ಬಾ ಮೂರು ಭುವನ ಸಂಚಾರಿ ನೇಮದಿಂದಲಿ ನಿನ್ನ ಕಾಮಿತ ಪೇಳೀಗ ಪ್ರೇಂದಿಂದಲಿ ವೀಣಾಧಾರಿ 15 ಮುರಹರ ನಿನ್ನಗೆ ಅರಿಯದ ವಾರ್ತೆಯು | ಧರಣಿ ತ್ರಯದಿ ಉಂಟೇನೋ || ನರರತಿ ಕಷ್ಟದಿ ಮರುಗುತಲಿಪ್ಪರು ಹರಿಪೇಳಿದಕುಪಾಯವನು 16 ಸತ್ಯಲೋಕೇಶನ ಪುತ್ರನೆ ನಿನ್ನಯ | ಉತ್ತಮ ಪ್ರಶ್ನೆಗೆ ನಾನು || ಚಿತ್ತೈಸು ಮುನಿವರ ನೀನು 17 ನಾರದ ಶ್ರೀ ಸತ್ಯನಾರಾಯಣ ವ್ರತ ಧಾರುಣಿಯೊಳಗಿನ ಜನರು ಆರು ತಮ್ಮ ಪರಿವಾರದಿಂದಲಿ ಗೈಯ್ಯೆ ಭೂರಿ ಸೌಖ್ಯದಿ ಮೆರೆವರೋ 18 ದೇವನೆ ಈ ನಿನ್ನ ಸೇವಕನಿಗೆ ಸತ್ಯ || ದೇವನೆ ವ್ರತದ ವಿಧಾನ || ಸಾವಧಾನದಿ ಪೇಳು ಭಾವ ಜಪಿತ ಏಕೋ ಭಾವದಿ ಕೇಳುವೆ ಮುನ್ನ 19 ಬುಧನುತ ನಾರದ ಘೃತಕ್ಷೀರ ಶರ್ಕರ | ಕದಳಿ ಗೋಧೂ ಮಾದಿಗಳನು || ಪದುಳದಿಂದಲಿ ಸುಪಾಕಗೈದು ಮೇಣ್ ವಿಧ ವಿಧ ಪಕ್ವಾದಿಗಳನು 20 ಪರಮ ಭಕ್ತಿಯಲಿಂದ ಪರಿವಾರ ಸಹಿತದಿ ಧರುಣಿಸುರನ ಪರಿಮುಖದಿ ತುರಧೂಳಿಕಾಲದಿ ಪರಿಪರಿ ಪೂಜಿಸಿ ಹರಿಗರ್ಪಿಸಲಿ ಬೇಕು ಮುದದಿ 21 ಈರೀತಿಗೈವರ ಕೋರಿಕೆಯನು ದಯ | ವಾರಿಧಿ ಶಾಮಸುಂದರನೂ || ನಿತ್ಯ ವಾರಿಜಸಹಿತದಿ ಸೇರಿ ತಾ ನಲಿದಾಡುತಿಹನೂ 22 ಇತಿ ಪ್ರಥಮೋಧ್ಯಾಯ ಸಂಪೂರ್ಣಂ ಅಥಃ ದ್ವಿತೀಯೋಧ್ಯಾಯಃ ಅತಿ ಮೋದದಿಂದಲಿ ಮತಿಯುತರೆ ಈಗ ಪೃಥವಿಯೊಳಗೆ | ಪೂರ್ವದಲಿ || ವ್ರತಗೈದ ಸುಗುಣರ ಇತಿಹಾಸ ನಿಮ್ಮಗೆ ಕಥಿಸುವೆ ಹಿತದಿಂದ ಕೇಳಿ 1 ಕಾಶಿಯೊಳಗೆ ಒಬ್ಬ ಭೂಸುರ ಬಡತನ ಕ್ಲೇಶದಿ ವಾಸಿಸುವದನು || ಶ್ರೀಶ ಅವನ ನೋಡಿ ಪೋಷಿಸಲು ವೃದ್ಧ ವೇಷದಿ ಮಾತನಾಡಿಸಿದನು 2 ಭೂತವಕದಿ ವಿಪ್ರನಾಥನೆ ತವ ಮುಖ ಪಾಥೋಜ ಬಾಡಿದ ಬಗೆಯಾ ಈ ತೆರ ದುಃಖದಿ ನೀ ತಿರಗುವಂಥ ಮಾತು ಪ್ರೀತಿಲಿ ಪೇಳಯ್ಯಾ 3 ಕಥಿಸುವೆ ಹೇವಿಪ್ರ ಹಿತದಿಂದ ನೀಯನ್ನ | ಸ್ಥಿತಿಯಾ ಲಾಲಿಸು ಮನದಿಂದಾ || ಗತಿಗೆಟ್ಟು ಚರಿಸುವೆ ಪೃಥಿವಿಯೊಳಗೆ ಈಗ ಅತಿ ಬಡತನ ದೆಶೆಯಿಂದಾ 4 ಶ್ರೇಷ್ಟನೆ ದಾರಿದ್ರ್ಯ ಕಷ್ಟ ತೊಲಗುವಂಥ | ಥಟ್ಟನೆ ನೀ ಪೇಳುಪಾಯಾ || ಘಟ್ಪ್ಯಾಗಿ ನಿನ್ನ ಉತ್ಕøಷ್ಟ ಪಾದಾಂಬುಜ ಮುಟ್ಟಿ ಸೇವಿಪೆ ಮಹರಾಯಾ 5 ಮಿಡುಕುತ್ತ ವಿಪ್ರನು ನುಡಿದ ಮಾತನುಕೇಳಿ | ಕಡಲಜಪತಿ ಕವಿಗೇಯಾ || ಕಡುದಯದಲಿ ಪೇಳ್ದ ಬಡತನ ಕಳೆಯುವ ಪೊಡೆವಿಯೊಳಿದ್ದ ಉಪಾಯಾ 6 ಸಾರುವೆ ಕೇಳಯ್ಯ ಮಾರಜನಕ ನಿಜ | ನಾರಾಯಣನ ಸು ವ್ರತವಾ ಆರು ಜಗದಿ ಭಕ್ತಿ ಪೂರ್ವಕ ಮಾಳ್ವರು ದಾರಿದ್ರ್ಯ ಹರಿ ದೂರಗೈವಾ 7 ಮುದುಕನ ನುಡಿಕೇಳಿ ಮುದಮನದಿಂದಲಿ ಸದನಕ್ಕೆ ದ್ವಿಜ ಬಂದು ತಾನೂ ಸುದತಿ ಸಹಿತನಾಗಿ ಸತ್ಯನಾಥಾನ ಪೂಜೆ ವಿಧ ವಿಧದಲಿ ಮಾಡಿದನೂ 8 ಹರುಷದಿ ಈ ರೀತಿ ಧರಣಿ ದೇವನು ಮಾಡೆ | ಶಿರಿಸತಿ ಸುತರಿಂದ ತಾನೂ || ಧರೆಯೊಳು ಸುಖಬಿಟ್ಟು ಪರಮ ದುರ್ಲಭವಾದ ಪಥ ಹಿಡಿದನೂ 9 ಸೂತರೆ ಅತ್ಯಂತ ಕೌತುಕವಾಗಿಹ ಧಾತ ಪಿತನ ಈ ವ್ರತವು ಭೂತಳದೊಳಗೆಂತು ಖ್ಯಾತಿಯ ಪೊಂದಿತು ಪ್ರೀತಿಲಿ ಪೇಳಿರಿ ನೀವು 10 ಸತಿಸುತ ಪರಿವಾರ ಸಹಿತಾ ಅತಿ ಹಿತದಲಿ ಮನೋರಥ ಪೂರೈಸುವ ಈ ವ್ರತ ಮಾಡುತಿರಲಾಗತ್ವರಿತಾ 11 ಚರಣನೋರ್ವನು ಶಿರದಿ ಕಾಷ್ಟಭಾರವ ಧರಿಸಿ ಮಾರಲು ಬೀದಿಗಳಲಿ ಬರುತಿರೆ ಮಾರ್ಗದಿ ಧರಣಿದೇವನೆ ಮಂ ದಿರ ಕಂಡ ಪರಮ ಮೋದದಲಿ 12 ಶ್ರೀನಿವಾಸನ ಘನಧ್ಯಾನದಿಂರ್ಚಿಪ ಕ್ಷೋಣಿ ಸುರನ ನೋಡಿ ಜವದಿ ಮಾನವ ಕೇಳಿದ ಏನಿದೆಂದೆನು ತಲಾಕ್ಷಣದಿ 13 ಶೂದ್ರನ ನುಡಿ ಕೇಳಿ ಆ ದ್ವಿಜ ಪೇಳ್ದನು ಶುದ್ಧ ಮನದಿ ಚರಣೋಧ್ಭವ ಗೈದನಿ ಶುದ್ಧನ ಪಾದಾರ್ಚನವಾ 14 ಹರುಷದಿಂದಲಿ ಸತ್ಯ ಹರಿ ಪೂಜಿಸಿದ ಶೂದ್ರ ಪರಮ ಸೌಜನ್ಯದಿ ಇದ್ದು ಕೊನೆಗೆ ಪರಿವಾರಯುತನಾಗಿ ತೆರಳಿದ ಸ್ಥಿರ ಉಳ್ಳ ಶಿರಿಶಾಮಸುಂದರನ ಪುರಿಗೆ 15 ಇತಿ ದ್ವಿತೀಯೋಧ್ಯಾಯ ಸಂಪೂರ್ಣಂ ಅಥಾಃತೃತೀಯೋಧ್ಯಾಯ ಋಷಿ ಜನಗಳೆ ಕೇಳಿ ವಸುಧಿ ತ್ರಯದಿ ಘನ ಪೆಸರಾದ ಇನ್ನೊಂದು ಕಥೆಯಾ ಉಸುರುವೆ ಕೇಳ್ವರ ವ್ಯಸನವು ಪರಿಹಾರ ಪುಸಿಯಲ್ಲಿ ಈ ನುಡಿ ಖರಿಯಾ 1 ವರ ಉಲ್ಕಮುಖನೆಂಬ ಧರಣೀಶನೋರ್ವನು ಹರುಚದಿಂದಲಿ ತನ್ನ ಹಿತದಾ ಶರಧಿ ತೀರದಿ ನಿಜ ಹರಿಯನ್ನು ಪೂಜಿಸುತಿರ್ದ 2 ಕ್ಷೋಣಿಪಾಲಕನಿದ್ದ ಆ ನದಿತೀರದಿ | ವಾಣಿಜ್ಯ ಮಧುನಾಯಕನೂ || ಸಾನುರಾಗದಿ ಬಂದು ಶ್ರೀನಿಧಿ ವ್ರತದ ವಿ ಧಾನವೇನೆಂದು ಕೇಳಿದ 3 ಭೂಮಿಪಾಲಕ ಮಧುನಾಮಕ ವೈಶ್ಯನ ಆ ಮೃದು ನುಡಿಕೇಳಿ ಜವದಿ ಕಾಮಿತದ ಸತ್ಯ ಸ್ವಾಮಿಯ ವ್ರತ್ತದಾ ನೇಮವ ಪೇಳ್ವ ಸಮ್ಮುದದಿ 4 ರಕ್ಕಸಾರಿಯ ಕಥಾ ಭಕ್ತಿಲಿ ಕೇಳುತ ಲಕ್ಕುಮಿಯುತ ಮುದದಿಂದ ಮಕ್ಕಳೆನಗಾಗಲು ಚಕ್ರಿಯ ಸುವೃತ ಅಕ್ಕರದಲಿ ಮಾಳ್ಪೆನೆಂದ 5 ಈ ರೀತಿ ಧೃಡ ಬ್ಯಾಪಾರಿಯು ತಾಗೈದು ಶೌರಿ ಪ್ರಸಾದ ಸ್ವೀಕರಿಸಿ || ಸಾರಿ ಪೇಳಿದ ತನ್ನಾಗಾರಕ್ಕೆ ಬಂದು ತಾ ನಾರಿಯ ಮುಂದೆ ವಿಸ್ತರಿಸಿ 6 ಸತಿ ಶಿರೋಮಣಿ ಲೀಲಾ ವತಿಯು ತನ್ನ ಮಂದಿರದಿ || ಪತಿ ಕರುಣದಿ ಗರ್ಭ ವತಿ ತಾನಾದಳಾಕ್ಷಣದಿ 7 ಹತ್ತನೆ ಮಾಸದ ಉತ್ತಮ ಪುತ್ರಿಯ ಪೆತ್ತಳು ಆ ನಾರಿ ತಾನೂ || ಅತ್ಯಂತ ಸನ್ಮುದ ಚಿತ್ತನಾಗಿ ಸಾಧು ಮರ್ತನು ಹರಿವ್ರತವನ್ನು 8 ಸತಿ ಲೀಲಾವತಿ ತನ್ನ ಪತಿಗಭಿವಂದಿಸಿ ನಿಂದು || ಅತಿ ಭಕ್ತಿಯಿಂದಲಿ ಕಥಿಸಿಕೊಂಡಳಲ ಯದು ಪತಿ ವ್ರತ ಮಾಡಬೇಕೆಂದು 9 ಸುದತಿಯ ನುಡಿಕೇಳಿ ಮಧುನಾಮಕ ಸಾಧು ವಿಧಿಸಿದ ಸುತೆ ಕಲಾವತಿಯಾ || ಮದುವೆಯ ಕಾಲದಿ ಉದುಪನರ್ಚಿಪೆನೆಂದು ಮುದದಿಂದ ಪೇಳ್ದನುಪಾಯಾ 10 ಪರಿಪರಿ ಸೌಖ್ಯದಿಂದಿರುತಿರೆ ವೈಶನ ತರುಳೆಗೆ ಪೂರ್ಣಯೌವನವು | ಬರಲು ಮಾಡಿದ ತಕ್ಕವರ ತಂದು ಲಗ್ನವ ಮರೆತು ಬಿಟ್ಟನು ಹರಿವ್ರತವಾ 11 ಶ್ರೀಮಂತವೈಶ್ಯನು ಪ್ರೇಮದಿಂದಲಿ ತನ್ನ ಜಾಮಾತನೊಡನೆ ವ್ಯಾಪಾರಾ ನೇಮದಿ ಗೈಯಲು ಗ್ರಾಮ ತ್ಯಜಿಸಿ ಪೋದಾ ಆ ಮಹಾಪುರ ರತ್ನಸಾರಾ&ಟಿbs
--------------
ಶಾಮಸುಂದರ ವಿಠಲ
ಪನ್ನಗಾಚಲವಾಸ-ಪ್ರಪÀನ್ನರ ಪಾಲಕ ಶ್ರೀಶಾ-ಸರ್ವೇಶಾ ಕನಕ ರತುನಮಯ ಮುಕುಟಾಧಾರ ಘನ ನವಮಣಿಮಯ ಕುಂಡಲಧರ ಇನಕೋಟಿಪ್ರಭಕೌಸ್ತುಭಹಾರ ಮನಸಿಜಧನುಸಮ ಭ್ರೂಸಮಾಕಾರ ಘನ ಚಂಪಕಗೆಣೆ ನಾಸ ಗಂಭೀರ ವನಜದಳಾಯತೇಕ್ಷಣಾಕಾರ ವನರುಹಾ ಘನ ಸ್ಮಿತ ಸುಗಂಭೀರ ಮುನಿಮಾನಸಮಂದಿರ ಸುವಿಹಾರ ಅಪ್ರಾಕೃತ ಶರೀರ ತನುಮನ ವಚನದಿ ಅನವರತದಿ ಕಿನ್ನರ ಸುರಮುನಿಗಣ ತನುಸದನದಿ ಹೃದ್ವನಜದಿ ಘನಪದ ವನರುಹ ಧೇನಿಸಿ ದೃಢಸ್ನೇಹದಿಂದಿರುವ ಕರ್ಮ ಒಪ್ಪಿಸುವ ಘನಮೋದದಿಂದಲಿರುವಾ ನುತಿಸುವಾ ಬೇಡುವಾ ಜನುಮ ಸ್ಥಿತಿ ಮೃತಿಗೆ ಬೆದರದಿರುವಾ ನಿನ್ನವರೊಳು ತನ್ನಿರವ ತೋರಿಸುಹ ಘನ್ನಪಾತಕವ ಕಳೆದುನ್ನತ ಸಾಧನವನ್ನೆ ಕೊಟ್ಟು ನನ್ನಿಯಿಂದಲೆ ಪೊರೆವಾ ತನ್ನಧಾಮದಿ ಕಾಪಿಡುವಾ 1 ಉತ್ತಮ ಮೌಕ್ತಿಕ ಸರಿಗೆ ನ್ಯಾವಳ ಒತ್ತೊತ್ತಾಗಿಹ ತ್ರಿವಳಿಯ ಮಾಲಾ ರತುನ ಪದಕದಾ ಸರದ ವಿಹಾರ ಅತಿಮನೋಹರ ಹೃದಯ ವಿಶಾಲ ಸಲೆಸಿರಿವತ್ಸ ವಕ್ಷದಿ ಲೋಲ ಸುತ್ತಿದ ಭಾಪುರಿ ಭುಜದ ವಿಸ್ತಾರ ಸಿತಾನಿಸಿತ ಉಪವೀತದಿ ಲೊಲ ದಾತಾಪಿತ ತವನಾಭಿಯ ಕಮಲ ಉತ್ತಮಕಮಲ ಕಲ್ಹಾರದ ಮಾಲ ಹಸ್ತಾಭರಣದಿ ಮೆರೆಯುತ ಪೊತ್ತಿಹ ಚಕ್ರಾಧ್ಯಾಯುಧನೆತ್ತಿ ದುರುಳೊನ್ಮತ್ತರ ಸದೆದು ತ್ವದ್ಭಕ್ತರ ಮನೋರಥ ಪೂರ್ತಿಗೈವ ಪುರುಷೋತ್ತಮ ಭವಭಯಹಾರೀ ನಿತ್ಯನೂತನವಿಹಾರೀ-ಪ್ರಣವಸ್ತನೆ ನೀ ಕಂಸಾರೀ ಪೃಥಕ್ ಪೃಥಕ್ ತದಾಕಾರೀ-ನರಹರೀ-ಶ್ರೀಹರೀ ಹೃತ್ಪುಷ್ಕರದಳ ವಿಹಾರೀ ಭಕ್ತವತ್ಸಲ ಅವ್ಯಕ್ತನೆ ಜಗದುತ್ಪತ್ತಿ ಸ್ಥಿತಿಲಯ ಕರ್ತ ವ್ಯಾಪ್ತ ನಿರ್ಲಿಪ್ತ ಸತ್ಯಸು- ಹೃತ್ತಮ ನೀನೆ ಮುರಾರೀ ಉತ್ತಮ ಸಮರಹಿತ ಶೌರೀ 2 ಪಕ್ಷಿಧ್ವಜ ಸುಖಭರಿತ ವಿಹಾರ ಕುಕ್ಷಿಯೊಳು ಅಬ್ಜಾಂಡಕೋಟಿಗಾಧಾರ ತ್ರಕ್ಷಾದ್ಯಮರನುತ ಗುಣಾಧಾರ ಸಾಕ್ಷಿಮೂರುತಿ ಸರ್ವಕಾಲಾಧಾರ ವಕ್ಷದೊಳು ಶ್ರೀವತ್ಸ ಗಂಭೀರಾ ಮು- ಮುಕ್ಷುಗಳೊಡೆಯನೆ ವೈಕುಂಠಾಗಾರ ಅಕ್ಷರಕ್ಷರರವಿಲಕ್ಷಣಧೀರ ರಕ್ಷಕ ಭಕುತಜನರುದ್ಧಾರ ದಕ್ಷಿಣಾಕ್ಷಿಕಂಠ ಹೃದಯವಿಹಾರ ರಕ್ಷಕ ತ್ರಿಜಗದಾಧ್ಯಕ್ಷ ಕರುಣಕಟಾಕ್ಷದಿ ಈ ಜಗ ವೃಕ್ಷದೊಳು ನಿರಪೇಕ್ಷನಾಗಿ ಫÀಲಭಕ್ಷಿಪ ಜೀವರ ಲಕ್ಷಕೋಟಿ ನೀ ಸಾಕ್ಷಿಯಾಗಿಹೆ ನೀ ರಕ್ಷ ಕಮಲಾಕ್ಷ ಪಕ್ಷಿವಾಹನನೆ ನಿನ್ನ ಪರೋಕ್ಷಾಪೇಕ್ಷಿಗಳಿಗೆ ನಿನ್ನ ಕ- ಟಾಕ್ಷವೀಕ್ಷಣದಿಂದ ಪ್ರತ್ಯಕ್ಷ ರಿಪುಶಿಕ್ಷ ಅಧ್ಯಕ್ಷ ಸಾಕ್ಷಿಯಾಗಿಹೆ ನೀ ರಕ್ಷಾ ಮೋಕ್ಷ ಜೀವರಿಗಪರೋಕ್ಷವನಿತ್ತು ನಿ- ಷ್ಪಕ್ಷನಾಗಿ ಜಗರಕ್ಷಿಸುತ್ತ ಸುರಪ ದಕ್ಷ ಚತು- ರಾಕ್ಷರಸ್ಥ-ನರಹರ್ಯಕ್ಷ ಶರಣಜನರ ಕಲ್ಪವೃಕ್ಷ3 ಪಟುತರಾಂಗ ಸುಕಟಿಯ ವಿಸ್ತಾರ ತೊಟ್ಟಿಹÀರತುನದ ಪಟ್ಟವಿಹಾರ ಉಟ್ಟಿಹ ಪಟ್ಟೆ ಪೀತಾಂಬರ ಧಾರಾ ಬಟ್ಟ ಜಾನುದ್ವಯ ಜಂಘಾಶೂರ ಇಟ್ಟಿಹ ಸಾಲಿಗ್ರಾಮದ ಹಾರ ದಟ್ಟವಾಗಿಹ ಕಾಲಂದಿಗೆಯ ವಿಹಾರ ಇಟ್ಟಿಹ ಬೆರಳಲಿ ರತ್ನದುಂಗುರ ಶ್ರೇಷ್ಟಪದದಿ ಧ್ವಜಚಿಹ್ನಾಕಾರ ದಿಟ್ಟಿ ನಖಾಗ್ರದಿ ತಟಿತ ಪ್ರಭಾಕರ ಪಟುತರ ಕರಪಾದ ಚಟುಲರೂಪ ಮನ- ತಟದಿ ಇಟ್ಟು ಲವತೃಟಿಯು ಬಿಡದೆ ಸುರ- ನಿತ್ಯ ಕರಪುಟದಿ ನಮಿಸಿ ಉತ್ಕಟದಿ ಗುಣಗಳ ಪಠಣದಿಂದಿರೆ ಮುದದಿ ಪಟುತರ ಭಕುತಿಯ ಭರದೀ ನಟಿಸುತ ತನು ಮರೆದಾತುರದಿ ಉ- ತ್ಕಟದಲಿ ನುತಿಸುತ ಭರದೀ ನಟಿಸುವಾ ಸ್ಮರಿಸುವಾ ಭಕುತಜನರ ಕಂಟಕವಾ ಆ ಧಿಟರು ನೀತ ಭಟರಂದು ನಿಜ ಜಠರಾಲಯದಿ ಇಂ- ಬಿಟ್ಟು ಭಕುತರ ಕಟಕಪೊರೆದು ಭವಾಬ್ಧಿಯ ಕಂಟಕ ಜಗಶಿಕ್ಷಾ 4 ಸ್ವಗತಭೇದವಿವರ್ಜಿತಶೂನ್ಯ ನಿಗಮಾತೀತ ದೇವವರೇಣ್ಯ ಬಗೆಬಗೆ ಸ್ವರ ಶಬ್ದವಾಚ್ಯವರೇಣ್ಯ ಅಗಣಿತಗುಣಗಣಪೂರ್ಣ ಸಂಪೂರ್ಣ ಯೋಗಿಗಳ್ ಪೊಗಳುವ ಸವಿತೃವರೇಣ್ಯ ಬಗೆಗಾಣರೊ ಸಾಕಲ್ಯದಿ ನಿನ್ನ ತ್ರಿಗುಣ ವಿರಹಿತನಾಗಿಹನ್ನ ನಗಜಾಧವ ಪಿಕನುತಪಾವನ್ನ ದುರ್ಗಾ ಶ್ರೀ ಭೂದೇವಿಯರಮಣ ಯುಗ ಯುಗದೊಳು ಜಗಕಾರ್ಯದಿ ಧರ್ಮ ಪ್ರಘಟ- ನೆಗೋಸುಗ ಸ್ವಗತರೂಪ ತಾ ನೆರಹಿ ಕ್ರೂರ ಪಾ- ಪೌಘರ ಮಡುಹಿ ಜಗದೇಕ ವೀರ ಮಿಗೆ ಜನಿಸಿದೆ ಜಗದೀಶಾ ಸುಗುಣ ಸಾಕಾರ ಸರ್ವೋತ್ತಮ ಶ್ರೀಶಾ ಜಗಜ್ಜಾಲ ಲೀಲಾವಿಲಾಸ ಜಗವೆಲ್ಲಾ ಈಶಾವಾಸ್ಯ ಸೃಜಿಸಿ ನೆಲೆಸೀ ಸ್ವಪ್ರಯೋಜನ ರಹಿತನೆನಿಸೀ ಖಗವರೂಥÀ ಶ್ರೀ ವೇಂಕಟೇಶ ಪನ್ನಗಗಿರಿಯೊಳು ನೆಲೆಸಿ ಜೀವರ ಯೋಗ್ಯಸಾಧನೆ ಇತ್ತು ಮನೋಭೀ-ಷ್ಟವನ್ನೆ ಸಲಿಸಿ ಉರಗಾದ್ರಿವಾಸವಿಠಲನೆನಿಸೀ 5
--------------
ಉರಗಾದ್ರಿವಾಸವಿಠಲದಾಸರು
ಪನ್ನಗಾದ್ರಿವಿಠಲ | ನನ್ನೆಯಿಂ ಸಲಹೋ ಪ ಸನ್ನುತಿಸಿ ತವ ದಾಸ್ಯ | ಪ್ರಾರ್ಥಿಸುತ್ತಿಹಳಾ ಅ.ಪ. ಮೂರ್ತಿ | ಅನಘ ತವನಾಮವನುಗುಣಿಸಿ ಇತ್ತಿಹೆ ಹರಿಯೇ | ಮುನಿ ಮೌಳಿ ವರದಾ 1 ಭವವನದಿ ಉತ್ತರಿಸೆ | ಭುವನ ಪಾದವ ವೆನಿಪತವನಾಮ ಅಮೃತವ | ಸರ್ವದಾ ಸವಿಯೇ |ಹವಣಿಸೋ ಅಭಯಾದ್ರಿ ನಿವಸಿತ ಶ್ರೀಹರಿಯೇಧ್ರುವ ವರದ ಕರಿವರದ | ಪವನಾಂತರಾತ್ಮಾ 2 ಮುಕ್ತಿಗೇ ಸೋಪಾನ | ಸತ್ಯಗವನೆ ಕೊಟ್ಟುಭಕ್ತಿ ಸುಜ್ಞಾನಗಳು | ಮತ್ತೆ ವೈರಾಗ್ಯ |ಇತ್ತು ಇವಳನು ಪೊರೆಯೆ | ಪ್ರಾರ್ಥಿಸುವೆ ಶ್ರೀಹರಿಯೇ |ಉತ್ತಮೋತ್ತಮನೆ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಪಂಪಾಪುರಾಧಿಪ ಶ್ರೀ ವಿರೂಪಾಕ್ಷ ನೀ ಪಾಲಿಪುದೆಮ್ಮನು ಪ ಶ್ವೇತ ಭಾಪುರೆ ಸುರಕುಲ ದೀಪ ಸದಾಶಿವ ಪಾದ ಸಮೀಪದ ಸೇವಕ ಅ.ಪ. ಹರಿಪಾದೋದಕ ಶಿರದಲಿ ಧರಿಸಿದ ಹರಿಕಥಾಮೃತ ಮಳೆಗರೆವೆ ನೀ ಕರುಣಿ ಸಂಕರುಷಣನ ಚರಣಾಬ್ಜ ಧೂಳಿ ಶ- ರೀರ ಲೇಪನದಿಂದ ವರ ತೇಜಯುತನೆ ಮುರಹರಗೆರಗದ ನರನಿಗೆ ನರಕವು ಸ್ಥಿರವೆಂದು ಸುರವರ ಭೇರಿ ಭೋರಿಡುತಿರೆ ನಿರುತ ಅವನ ಪದ ಮೆರೆಯದೆ ಮನಗೊಂಡೆ ಶರಣು ಅಮರನುತ ಗುರು ಶಿರೋಮಣಿಯೆ1 ದೇಶಕ್ಕೆ ದಕ್ಷಿಣ ಕಾಳಿಯೆನಿಸುವ ವಿ- ಶೇಷ ಸ್ಥಳದೊಳು ವಾಸವಾಗಿ ಅ- ದೋಷನಾಶನ ಸಂತೋಷದಿ ಗಿರಿಜೆಗೆ ಶ್ರೀಶನ ಮಂತ್ರೋಪದೇಶವ ಮಾಡಿದೆ ದಾಶರಥಿಯ ನಿಜದಾಸರೆನಿಸುವರ ಪೋಷಿಪೆ ಶಿವ ಪರಮೇಶ ಕೃಪಾಳೊ 2 ಕಂದುಗೊರಳ ಜೀಯ ಸಿಂಧೂರ ಮೊಗನಯ್ಯ ಕಂದರ್ಪಹರ ಭಕ್ತಬಾಂಧವ ಕಾಯೊ ಇಂದಿರೆರಮಣ ಗೋವಿಂದನ ಪಾದಾರ- ವಿಂದ ಭೃಂಗನೆ ಭವದಿಂದ ಕಡೆಗೆ ಮಾಡೊ ನಂದಿವಾಹನ ಎನ್ನ ಹಿಂದಣ ಕಲುಷಿತ ವೃಂದಗಳೋಡಿಸುವ ಇಂದುಧರ ಅರ- ಸಿರಿ ವಿಜಯವಿಠ್ಠಲನಕುಂದದೆ ಭಜಿಪ ಆನಂದವ ಕರುಣಿಸು 3
--------------
ವಿಜಯದಾಸ
ಪರಮ ಪಾಪಿಷ್ಠ ನಾನು ಪ ನರಹರಿಯೆ ನಿಮ್ಮ ನಾಮ ಸ್ಮರಣ ಮಾಡದಲೆ ನರಕಕ್ಕೆ ಗುರಿಯಾದೆನೋ ಹರಿಯೆ ಅ.ಪ. ಹೊಸಮನೆಯ ಕಂಡು ಬಲು ಹಸಿದು ಭೂಸುರರು ಬರೆ ಕೊಸರಿ ಹಾಕುತ ದಬ್ಬುತ ಶಶಿಮುಖಿಯೆ ಬಾರೆಂದು ಅಸಮಸದಿ ಬಣ್ಣಿಸಿ ವಶವಾಗಿ ಅವಳೊಲಿಸುತ ದಶಮಿ ಏಕಾದಶಿ ದ್ವಾದಶೀ ದಿನತ್ರಯದಿ ಅಶನವೆರಡ್ಹೊತ್ತುಣ್ಣುತ ಘಸಘಸನೆ ತಾಂಬೂಲ ಪಶುವಿನಂದದಿ ಮೆದ್ದು ಕುಸುಮ ಗಂಧಿಯ ರಮಿಸುತ ಸತತ 1 ಕೆರೆ ಭಾವಿ ದೇವಾಲಯವ ಕೆಡಿಸಿ ದಿವ್ಯ ಹಿರಿದಾಗಿ ಮನೆ ಕಟ್ಟದೆ ನೆರೆ ನಡೆವ ಮಾರ್ಗದೊಳು ಅರವಟ್ಟಗೆಗಳನ್ನು ಧರಧರದಿ ಬಿಚ್ಚಿ ತೆಗೆದೆ ಪರಮ ಸಂಭ್ರಮದಿಂದ ಅರಳಿಯಾ ಮರ ಕಡಿಸಿ ಕೊರೆಸಿ ಬಾಗಿಲು ಮಾಡಿದೆ ಏಕ ಮಂದಿರವ ಮುಗಿಸಿ ಹರುಷ ಚಿತ್ರವ ಬರೆಸಿ ಪರಿಪರಿಯ ಸುಖ ಸಾರಿದೇ ಮೆರೆದೆ 2 ಸಾಕಲ್ಯದಿಂದ ಸಾಲಿಗ್ರಾಮದ ಅಭಿಷೇಕ ಆಕಳ ಹಾಲಲಿ ಮಾಡದೆ ನಾಕೆಂಟು ನಾಯಿಗಳ ಸಾಕಿ ಮನೆಯೊಳು ಬದುಕ ಬೇಕೆಂದು ಹಾಲು ಹೊಯ್ದೆ ಕಾಕು ಬುದ್ಧಿಗಳಿಂದ ಗುಡಿ ಗುಡಿ ನಸಿ ಪುಡಿ ಹಾಕಿ ಭಂಗಿಯಾ ಸೇದಿದೆ ಲೋಕ ನಿಂದಕ ನಾಗಿ ಪಾಪಕ್ಕೆ ಕೈ ಹಚ್ಚಿ ಅ ನೇಕ ಜೂಜುಗಳಾಡಿದೇ ಬಿಡದೆ 3 ಸ್ನಾನ ಸಂಧ್ಯಾನ ಅತಿಮೌನ ಗಾಯಿತ್ರಿ ಜಪ ಭಾನುಗಘ್ರ್ಯವನು ಕೊಡದೆ ಹೀನತ್ವ ವಹಿಸಿ ದಾನ ಧರ್ಮವ ಮಾಡದೆ ಶ್ವಾನನಂದದಿ ಚರಿಸಿದೇ ಶ್ರೀನಿವಾಸನೆ ನಿನ್ನ ಅನುಪೂರ್ವಕ ಪೂಜೆ ನಾನೊಂದು ಕ್ಷಣಮಾಡದೇ ಬೇನೆ ಬಂದಂತಾಗೆ ಹೀನ ಸಕೇಶಿಯ ಕೈಲೆ ನಾನ ವಿಧಾನ್ನ ತಿಂದೇ ನೊಂದೇ 4 ಭಾಗವತ ಕೇಳಲಿಕೆ ಆದರವೆ ಪುಟ್ಟಲಿಲ್ಲಾ ವಾದಿಗಳ ಮತವಳಿದ ಮಧ್ವ ಸಿದ್ಧಾಂತದ ಹಾದಿಗೆ ಹೋಗಲಿಲ್ಲ ಶೋಧಿಸಿದ ಚಿನ್ನಕೆ ಸಮರಾದ ವೈಷ್ಣವರ ಪಾದಕ್ಕೆ ಬೀಳಲಿಲ್ಲ ವೇದ ಬಾಹಿರನಾಗಿ ಅಪಸವ್ಯ ಮನನಾಗಿ ಓದಿಕೊಂಡೆನೋ ಇದೆಲ್ಲ ಸುಳ್ಳ 5 ಉತ್ತಮ ಬ್ರಾಹ್ಮಣರ ವೃತ್ತಿಗಳನೆ ತೆಗಸಿ ಬ್ರ ಹ್ಮಹತ್ಯಗಾರನು ಎನಿಸಿದೆ ಮತ್ತೆ ಮದುವೆ ಮುಂಜಿ ಸಮಯಕ್ಕೆ ನಾ ಪೋಗಿ ಸತ್ತ ಸುದ್ದಿಯ ಪೇಳಿದೆ ವಿತ್ತವಿದ್ದವರ ಬೆನ್ಹತ್ತಿ ದೂತರ ಕಳುಹಿ ಕುತ್ತಿಗೆಯ ನಾ ಕೊಯ್ಸಿದೆ ನಿತ್ಯ ಕಲ್ಲೊಡೆಯುತಿರೆ ಮೃತ್ಯು ದೇವತೆಯೆನಿಸಿದೆ ಬಿಡದೇ 6 ಕ್ಷಿತಿಯೊಳಗೆ ಇನ್ನಾರು ಹಿತವ ಬಯಸುವವರೆನಗೆ ಗತಿಯೇನು ಪೇಳೊ ಕೊನೆಗೆ ಸತತ ತವ ಧ್ಯಾನದಲಿ ರತನಾಗಿ ಇರುವ ಸ ನ್ಮತಿಯ ಪಾಲಿಸಯ್ಯ ಎನಗೆ ಪತಿತಪಾವನನೆಂಬ ಬಿರಿದು ಅವನಿಯ ಮೇಲೆ ಶ್ರುತಿ ಸಾರುತಿದೆಯೋ ಹೀಗೆ ಶಿತಕಂಠನುತ ಜಗನ್ನಾಥವಿಠ್ಠಲ ನಿನಗೆ ನುತಿಸದೆ ಬೆಂಡಾದೆ ಕಾಯೋ ಹರಿಯೆ 7
--------------
ಜಗನ್ನಾಥದಾಸರು
ಪರಮ ಪಾವನಕಾಯ ಗುರುರಾಯ ಜೀಯ ವರ ಭಾಗವತರ ಪ್ರಿಯ ಸುರರ ಸಹಾಯ ಪ. ಶ್ರೀ ತಂದೆ ಮುದ್ದುಮೋಹನ ದಾಸರೆಂದೆನಿಸಿ ವಾತ ಜನಕನ ಒಲಿಸಿ ವೈರಾಗ್ಯ ಧರಿಸಿ ಖ್ಯಾತಿಯನು ಪಡೆದ ಅನಾಥ ರಕ್ಷಕ ಸ್ವಾಮಿ ನೀತ ಗುರು ನಿಮ್ಮ ಪದಕೆ ನಾ ತುತಿಸಿ ನಮಿಪೆ 1 ಘನ ಅಂಶದಲಿ ನೆಲಸಿ ಅನವರತ ಸಲಹುವೊ ಮನವ ಮಾಡಿರಬಲೆ ಅಂಜಿ ಬೆದರೆ ಘನ ಜ್ಯೋತಿ ಸ್ವೀಕರಿಸಿ ತನುವಿಗಭಯ ತೋರಿ ಮನದಿ ಪದವನೆ ನಂಬೆ ರಕ್ಷಿಸಿದ ಗುರುವೆ 2 ಅಪಮೃತ್ಯು ಬಂದು ಬಹು ಅಪರಿಮಿತ ಭಯಪಡಿಸಿ ಸುಪಥ ಕಾಣದೆ ನಿಮ್ಮ ಪದವ ನಂಬಿರಲು ಸ್ವಪ್ನದಲಿ ನಿಜರೂಪ ಗುಪ್ತದಿಂದಲಿ ತೋರಿ ಆಪತ್ತು ಪರಿಹರಿಪೆನೆಂದಭಯವಿತ್ತ 3 ಪರಿಪರಿ ಅಪಮೃತ್ಯು ಪರಿಹಾರವನೆಗೈದು ಪರಮ ಹರುಷದಿ ಕಾಯ್ದು ಆಯುವನೆ ಇತ್ತು ಕರಕರೆಯ ಬಿಡಿಸಿ ಕಾಯ್ದಂಥ ಘನ ಚರಿತೆಯನು ಅರಿತು ವರ್ಣಿಸಲರಿಯೆ ಪರಮ ಪ್ರಿಯ ದೊರೆಯೆ 4 ಆಪನ್ನ ರಕ್ಷಕರೆ ಶ್ರೀ ಪತಿಯ ತೋರುವ ಘನಶಕ್ತರೆ ಕಾಪಾಡುವೋ ಕರ್ತರೆಂದು ನಾ ನಂಬಿರುವೆ ಗೋಪಾಲಕೃಷ್ಣವಿಠ್ಠಲನ ನಿಜ ಪ್ರಿಯರೆ 5
--------------
ಅಂಬಾಬಾಯಿ
ಪರಮ ಪುರಷಾ ರಾಘವ ಪಾಲಿಸೊ ಸುರಮುನಿವರ ಪೂಜಿತ ಪ ಸರಸಿಜಾಪ್ತವಂಶಾಬ್ಧಿ ಚಂದ್ರಮ ನಿನ್ನ ಹೊರತು ಪೊರೆವರನ್ಯರ ಕಾಣೆನೊ ಅ.ಪ ಆಂಜನೇಯ ಪ್ರಿಯ ಆದರಿಸೈ 1 ಮೃತ್ಯಪರಿಹರಿಸೆನುತ್ತ ಬೇಡಲು ನಿನ್ನ ಭಕ್ತಜನರಿಗಭಯ ಕೊಡುವನೆ 2 ಸಾಮಜವರದ ಮಹಾಮಹಿಮನೆ ನಮ್ಮ ಸ್ವಾಮಿ ನೀನೆ ಗುರುರಾಮ ವಿಠಲ 3
--------------
ಗುರುರಾಮವಿಠಲ