ಒಟ್ಟು 21316 ಕಡೆಗಳಲ್ಲಿ , 137 ದಾಸರು , 8969 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗಂಡಬಿಟ್ಟ ಗೈಯಾಳಿ ಕಾಣಣ್ಣ - ಅವಳಕಂಡರೆ ಕಡೆಗಾಗಿ ದಾರಿ ಪೋಗಣ್ಣ ಪ.ಊರೊಳಗೆ ತಾನು ಪರದೇಶಿಯೊನ್ನವಳುಸಾರುತ ತಿರುಗುವಳು ಮನೆಮನೆಯಕೇರಿ - ಕೇರಿಗುಂಟ ಕಲೆಯತ ತಿರುಗುವಳುನಾರಿಯಲ್ಲವೊ ಮುಕ್ಕಾ ಮಾರಿಕಾಣ್ಣ 1ಅತ್ತೆ ಮಾವನ ಕೂಡ ಅತಿ ಮತ್ಸರವ ಮಾಡಿನೆತ್ತಿಗೆ ಮದ್ದನೆ ಊಡುವಳುಸತ್ಯರ ದೇವರ ಸತ್ಯ ನಿಜವಾದರೆಬತ್ತಲೆ ಅಡ್ಡಂಬಲೂಡೇನೆಂಬುವಳು 2ಹಲವು ಜನರೊಳು ಕಿವಿಮಾತನಾಡವಳುಹಲವು ಜನರೊಳು ಕಡಿದಾಡವಳುಹಲವು ಜನರೊಳ ಕೂಗಿ ಬೊಬ್ಬೆಯನಿಡುವಳುತಳವಾರ ಚಾವಡಿಯಲಿ ಬರಲಿ ಹೆಣ್ಣು 3ಪರಪುರುಷರ ಕೂಡಿ ಸರಸವಾಡುತ ಹೋಗಿನೆರೆದಿದ್ದ ಸಭೆಯಲಿ ಕರೆಯುವಳುಮರೆಸಿ ತನ್ನವಗುಣ ಗಾಡಿಯೆಂದು ಮೆರೆವಳುಕರಿರೂಪದವಳ ನೀ ಕೆಣಕದಿರಣ್ಣ 4ಏಸು ಗೃಹಗಳೆಂದು ಎಣಿಸಿ ನೋಡಿಬಂದುಬೇಸರದೆ ಜನಕೆ ಹೇಳುವಳುಲೇಸಾಗಿ ಪುರಂದರವಿಠಲನು ಹೇಳಿದಹೇಸಿ ತೊತ್ತನು ನೀನು ಕೆಣಕದಿರಣ್ಣ 5
--------------
ಪುರಂದರದಾಸರು
ಗಣೇಶ ಪ್ರಾರ್ಥನೆ1ಲಂಬೋದರ ಪಾಹೀ ಪಾಹೀ ಜಗದ್ಗುರು|ಶಂಭುನಂದನ ಸುರಸುತ ಪಾದಾ ಪಯೋಗೀಶಾರ್ಚಿತ ಶ್ರೀ ಪಾರ್ವತಿ ಪುತ್ರ ನತಮಿತ್ರಾ |ಆಗಸವಾಳ್ದಮೂಷಕರೂಢಾ ||ನಾಗಶಯನನಪಾದಧ್ಯಾನದಲ್ಲಿಡು ನಿತ್ಯಾ |ಶ್ರೀ ಗಣಪತಿ ನಿನ್ನ ಬಲಗೊಂಬೆ 1ಶ್ರೀವರ ಶ್ರೀರಾಮಚಂದ್ರ ಧರ್ಮರಾಯಾ |ದೇವೇಂದ್ರಾ ನಿನ್ನ ಪೂಜಿಸಿದಾರೋ ||ಕೇವಾಲಾಕಲಿದುರ್ಯೋಧನ ಪೂಜಿಸದೆ ಕೆಟ್ಟಾ |ಶ್ರೀ ವಿಘ್ನೇಶ್ವರ ನಿನ್ನ ಬಲಗೊಂಬೆ 2ದನುಜಾರ ಮೋಹೀಸೂವದಕೆ ಸಂಕಟ ಚೌತಿ |ಮನಿಸೀ ಪೂಜಿಸಿಕೊಂಬೆ ಖಳರಿಂದಾ ||ಮುನಿ ವ್ಯಾಸ ಕೃತ ಗ್ರಂಥಾರ್ಥವ ತಿಳಿದು ಬರೆದಾ |ಗಣರಾಜಾ ನಿನ್ನ ಪಾದಾ ಬಲಗೊಂಬೆ 3ಶಂಬು ಚಕ್ರಾಂಕಿತಾ ಪಾಶಧಾರನೇ ರಕ್ತ |ಅಂಬರಾದ್ವಯ ಭೂಷಾ ನಿರ್ದೋಷಾ ||ಶಂಬರಾರಿಪುಶರಾ ವಿಜತಾಮೃದ್ಭವ ಗಾತ್ರಾ |ಅಂಬಾರಾಧಿಪ ನಿನ್ನ ಬಲಗೊಂಬೆ 4(ಅಂಬೂಜಾಲಯಜಾನೆ ಬಲಗೊಂಬೆ)ಏಕವಿಂಶತಿಪುಷ್ಪಾನ ಮನ ಮೋದಕ ಪ್ರೀಯ |ನೀ ಕರುಣಿಪುದೂ ನಿನ್ನವಾನೆಂದು ||ಸಾಕು ವಿಷಯ ಸುಖಾ ಸುಜನಾರೋಳಾಡಿಸೊ |ಏಕಾದಂತನೆ ನಿನ್ನ ಬಲಗೊಂಬೆ 5ಏನು ಬೇಡುವೊದಿಲ್ಲಾ ಏನು ಮಾಡುವೊಕರ್ಮ|ಶ್ರೀನಿವಾಸನೆ ಮಾಡಿಸುವನೆಂಬೊ ||ಜ್ಞಾನಾವೆ ಯಂದೆಂದಿಗಿರಲಿ ತಾರಶಾಂತ- |ಕಾನುಜಾ ನಿನ್ನ ಬಲಗೊಂಬೆ 6ಪ್ರಾಣಸೇವಕ ಚಾಮೀಕರವರ್ಣ ಗಜಮುಖ |ಪ್ರಾಣೇಶ ವಿಠಲನಾ ಸುಕುಮಾರಾ ||ನೀನೊಲಿದೆಮಗೆ ವಿಘ್ನವ ಪರಿಹರಿಸುತ |ಪೋಣಿಸು ಸನ್ಮತೀ ಬಲಗೊಂಬೆ 7
--------------
ಪ್ರಾಣೇಶದಾಸರು
ಗಣೇಶ ಪ್ರಾರ್ಥನೆವಂದಿಪೆ ನಾ ನಿನ್ನನು ಸೊಂಡಿಲ ಗಣಪ ಧಬಂದೆನ್ನ ಸಲಹೊ ನೀನು ಪಪುಂಡರೀಕಾಕ್ಷನುದ್ದಂಡ ಪರಾಕ್ರಮಕೊಂಡಾಡಿಸುವಿ ವಕ್ರತುಂಡನೆಂಬರೊ ನಿನ್ನ ಅಪಪಾಶಾಂಕುಶಧರನೇ ವೂೀದಕಹಸ್ತಭಾಷಿಗ ನೀನಹುದೋಆಶಾಪಾಶಗಳಿಂದ ಘಾಸಿಗೊಂಡಿಹ ಮನಬೇಸರ ಕಳೆದೆಮ್ಮ ಪೋಷಿಪನನು ತೋರೊ 1ಗೌರಿಯ ವರಪುತ್ರನೆ ಪ್ರಾರ್ಥಿಸುವೆ ಶ್ರೀ-ಶೌರಿಯಪಾದಸ್ಮರಣೆಗೌರವದಿಂ ಮಾಳ್ಪ ಶೌರ್ಯ ಎನಗೆ ಕೊಟ್ಟುಮಾರಪಿತನಪಾದತೋರಿಸು ತವಕದಿ2ಅಂತರಂಗದ ಶತ್ರುಗಳಿಂದಲಿ ಮನಚಿಂತೆಗೆ ಗುರಿಗೈಸಿತೊಎಂತು ಈಭವದಾಂಟುವಂಥ ಪಥವ ಕಾಣೆಕಂತÀುಪಿತನಪಾದಚಿಂತನೆ ಕೊಡಿಸಯ್ಯ3ವಾನರನಿಕರದೊಳು ಶ್ರೇಷ್ಠನ ಪ್ರಭುವಾರಿಧಿಯನು ಬಂಧಿಸೆಆದಿಮೂರುತಿ ನಿನ್ನ ಆರಾಧಿಸಿದನೆಂಬಸೋಜಿಗಸುದ್ದಿಯು ಮೂರ್ಜಗದೊಳಗುಂಟು4ಕಮಲನಾಭವಿಠ್ಠಲ ಭಕ್ತರ ಹೃದಯಕಮಲದೊಳಗೆ ಶೋಭಿಪಮಿನುಗುವ ಮಧ್ವಮಂಟಪದೊಳು ರಾಜಿಪಸನಕಾದಿವಂದ್ಯನ ಕ್ಷಣ ಬಿಡದಲೆ ತೋರು 5
--------------
ನಿಡಗುರುಕಿ ಜೀವೂಬಾಯಿ
ಗರುಡಗಮನಬಂದನೋ-ನೋಡಿರೊ ಬೇಗಗರುಡಗಮನಬಂದನೋಪಗರುಡಗಮನಬಂದ ಧರಣಿಯಿಂದೊಪ್ಪುತಕರೆದು ಬಾರೆನ್ನುತ ವರಗಳ ಬೀರುತ ಅ.ಪಎನ್ನ ರಕ್ಷಿಪ ದೊರೆ ಇಲ್ಲಿಗೆ ತಾ ಬಂದಚಿನ್ನದೊಲ್ ಪೊಳೆವವಿಹಂಗರಥದಲಿ ||ಘನ್ನ ಮಹಿಮ ಬಂದsಚ್ಛಿನ್ನ ಮೂರುತಿ ಬಂದಸಣ್ಣ ಕೃಷ್ಣನು ಬಂದ ಬೆಣ್ಣೆಗಳ್ಳನು ಬಂದ 1ಪಕ್ಷಿವಾಹನ ಬಂದ ಲಕ್ಷ್ಮೀಪತಿಯು ಬಂದಕುಕ್ಷಿಯೊಳೀರೇಳು ಜಗವನಿಟ್ಟವ ಬಂದ ||ಸೂಕ್ಷ್ಮ-ಸ್ಥೂಲದೊಳಗಿರುವನು ತಾ ಬಂದಸಾಕ್ಷೀ ಭೂತನಾದ ಸರ್ವೇಶ್ವರ ಬಂದ 2ತಂದೆಪುರಂದರವಿಠಲರಾಯ ಬಂದಬಂದುನಿಂದುನಲಿದಾಡುತಿಹ ||ಅಂದು ಸಾಂದೀಪನ ನಂದನನ ತಂದಿತ್ತಸಿಂಧುಶಯನ ಆನಂದ ಮೂರುತಿ ಬಂದ3
--------------
ಪುರಂದರದಾಸರು
ಗಾಳಿ ಬಂದ ಕೈಯಲಿ ತೂರಿಕೊಳ್ಳಿರೊ |ನಾಲಗೆಯಿದ್ದ ಕೈಯಲಿ ನಾರಾಯಣನೆನ್ನಿರೊ ಪ.ಕದ್ದು ಹುಸಿಯನಾಡಿಅಪಾರ |ಬುದ್ದಿಯಿಂದ ಕೆಡಲು ಬೇಡಿ ||ಬುದ್ದಿವಂತರಾಗಿ - ಅನಿ |ರುದ್ಧನ ನೆನಯಿರೊ 1ನಿತ್ಯವಿಲ್ಲ ನೇಮವಿಲ್ಲ |ಮತ್ತೆ ಧಾನಧರ್ಮವಿಲ್ಲ ||ವ್ಯರ್ಥವಾಗಿ ಕೆಡದೆ - ಪುರು |ಷೋತ್ತಮನೆನ್ನಿರೊ 2ಭಕ್ತಿಕೊಡುವ ಮುಕ್ತಿಕೊಡುವ |ಮತ್ತೆ ದಾಯುಜ್ಯ ಕೊಡುವ ||ಕರ್ತೃ ಪುರಂದರವಿಠಲನ |ನಿತ್ಯನೆನೆಯಿರೊ3
--------------
ಪುರಂದರದಾಸರು
ಗುಜ್ಜಿರುಕ್ಮಿಣಿಗೆ ನಾಚಿ ಲಜ್ಜವಗೈಯ್ಯುತಲೆಮುಂದಕ್ಕೆ ಹೆಜ್ಜೆ ಹಾಕಲೊಲ್ಲಿ ಯಾಕೆಅರ್ಜುನನ ರಾಣಿ ಮುದ್ದು ಅರ್ಜುನನ ರಾಣಿ ಪ.ಒಬ್ಬರಿಗಿಂತ ಒಬ್ಬರ ಚಲ್ವಿಕೆಗೆ ಉಬ್ಬಿಹಳುಐವರ ನಿರ್ಭಯದಿ ನಾಚಿಕೆಯ ಬಿಟ್ಟುಒಬ್ಬಳೆ ಬೆರೆದಾಳು ದ್ರೌಪತಿಒಬ್ಬಳೆ ಬೆರೆದಾಳು 1ತರುಳ ರೈವರ ಚಲ್ವಿಕೆಗೆ ಮರುಳುಗೊಂಡಳುಸಭೆಯೊಳು ಅರಳು ಮಲ್ಲಿಗೆಯ ಮಾಲೆಯನುಕೊರಳಿಗೆ ಹಾಕಿದಳುಐವರ ಕೊರಳಿಗೆ ಹಾಕಿದಳು 2ಪಂಚ ಪಾಂಡವರ ನೋಡಿ ಚಂಚಲಾಗಿಹಳುನಾಚಿ ಹಂಚಿಕೆ ಹಾಕುವಾಗಜಾಣಿ ಮಂಚದಲ್ಲಿಹಳುದ್ರೌಪತಿ ಮಂಚದಲ್ಲಿಹಳು 3ಸರಿಕ ಸರಿಕ ನಾರಿಯರೆಲ್ಲಕರವಹೊಯ್ದರುಹೊರಗೆ ಬರಲ್ಹಾಂಗೆಂದು ಹೋಗಿಒಳಗೆ ಸೇರಿದಳು ದ್ರೌಪತಿಒಳಗೆ ಸೇರಿದಳು 4ಇಂದುರಾಮೇಶನ ಮಡದಿಯರುಬಿದ್ದು ನಗುವಂತೆನಾಚಿಸೆಂದು ಸೇರಿದಳೆ ಹೋಗಿಚಂದಾಗಿ ಆಕಾಂತೆ 5
--------------
ಗಲಗಲಿಅವ್ವನವರು
ಗುಮಾನ ಆರದು ಇನ್ನ್ಯಾಕೆಹರಿನಾಮದ ಬಲವೊಂದಿರಲಿಕ್ಕೆ ಪಸ್ವಾಮಿಮಾಧವನ ಪ್ರೇಮಪಡೆದು ಮಹನಾಮಮೃತದ ಸವಿಯುತಲಿರುವರ್ಗೆ ಅ.ಪರೊಚ್ಚಿಗೆದ್ದು ಮಾಡುವುದೇನೋ ಜನಸ್ವಚ್ಛದಿ ಒಡಗೂಡಿದರೇನೋಮೆಚ್ಚಿ ಕೊಡುವಫಲ ಇವರೇನೋ ಅತಿಹುಚ್ಚ ನೆಂದರಾಗುವುದೇನೋನಿಶ್ಚಲಚಿತ್ತದಿ ಅಚ್ಯುತಾನಂತನಬಚ್ಚಿಟ್ಟು ಮನದೊಳು ಉಚ್ಚರಿಸುವರಿಗೆ 1ಸತಿಸುತರಿವರಿಂದ್ಹಿತವೇನೊ ತನ್ನಪಿತಮಾತೆ ಮುನಿದರೆ ಕೊರತೇನೋಅತಿಸಂಪತ್ತಿನಿಂದ ಗತಿಯೇನೋ ಈಕ್ಷಿತಿಜನ ಮೆಚ್ಚಲು ಬಂತೇನೋರತಿಪತಿಪಿತನಂ ಅತಿ ಗೂಢತ್ವದಿಸತತದಿ ನುತಿಸುವ ಕೃತಕೃತ್ಯರಿಗೆ 2ಭೂಮಿಪ ಕೋಪಿಸಲಂಜುವರೆ ಈತಾಮಸರಿಗೆ ತಲೆ ಬಾಗುವರೇಭೂಮಿ ದೈವಗಳ ಬೇಡಿದರೆ ಮನಕಾಮಿತವನ್ನು ಪೂರೈಸುವರೇಕಾಮಿತಾರ್ಥನೀಗಿ ಮಹಾಮಹಿಮನನೇಮದಿ ಪಠಿಪ ಶ್ರೀರಾಮದಾಸರಿಗೆ 3
--------------
ರಾಮದಾಸರು
ಗುಮ್ಮನ ಕರೆಯದಿರೆ-ಅಮ್ಮ ನೀನು |ಗುಮ್ಮನ ಕರೆಯದಿರೆ ಪಸುಮ್ಮನೆ ಇರುವೆನು ಅಮ್ಮಿಯ ಬೇಡೆನು |ಮಮ್ಮು ಉಣ್ಣುತ್ತೇನೆ ಅಮ್ಮ ಅಳುವುದಿಲ್ಲ ಅ.ಪಹೆಣ್ಣುಗಳಿರುವಲ್ಲಿಗೆ-ಹೋಗಿ ಅವರ-|ಕಣ್ಣ ಮುಚ್ಚುವುದಿಲ್ಲವೆ ||ಚಿಣ್ಣರ ಬಡಿಯೆನು ಅಣ್ಣನ ಬೈಯೆನು |ಬೆಣ್ಣೆಯ ಬೇಡೆನು ಮಣ್ಣ ತಿನ್ನುವುದಿಲ್ಲ 1ಬಾವಿಗೆ ಹೋಗೆ ಕಾಣೆ-ಅಮ್ಮ ನಾನು-|ಹಾವಿನ ಮೇಲಾಡೆ ಕಾಣೆ ||ಆವಿನ ಮೊಲೆಯೂಡೆ ಕರುಗಳನ್ನು ಬಿಡೆ |ದೇವರಂತೆ ಒಂದು ಠಾವಲಿ ಕೊಡುವೆ 2ಮಗನ ಮಾತನು ಕೇಳಬೇಡ-ಗೋಪಿದೇವಿ-|ಮುಗುಳುನಗೆಯ ನಗುತ ||ಜಗದ ಒಡೆಯ ಶ್ರೀಪುರಂದರವಿಠಲನ |ಬಿಗಿದಪ್ಪಿಕೊಂಡಳು ಮೋಹದಿಂದಾಗ 3
--------------
ಪುರಂದರದಾಸರು
ಗುರುಪದವ ನಂಬಿ ಹರಿಪದವ ಕಾಂಬೆಮರುತ ಸಂತತಿಗೆ ನಮಿಸುವೆ ನಮಿಸುವೆ ಪ.ಹರಿಪದಕೆ ಅಚ್ಛಿನ್ನ ಭಕುತಿ ಪರಿಪೂರ್ಣ ಶ್ರೀಹರಿಕಾರ್ಯದಲಿ ಧುರಂಧರನೆನಿಸುವಹರಿಭೃತ್ಯಜನಕೆ ಹಿತಕಾರಿ ಔದಾರಿ ಜಗದ್ಗುರು ಪರಮಹಂಸ ಮಧ್ವತ್ರಿರೂಪಿಯ 1ತತ್ವಸಾಗರ ತಿಮಿಂಗಿಲ ಪದ್ಮನಾಭಮುನಿಕರ್ತಮೂಲರಾಮ ಮೆಚ್ಚಿದ ನರಹರಿಯಮತ್ರ್ಯ ಮಾಯಿಜನ ತುಹಿನರವಿಭಮಾಧವಾಭಿಜÕ ಅಕ್ಷೋಭ್ಯತೀರ್ಥೆನಿಪ ಮಲ್ಲರ 2ಸುಖತೀರ್ಥಗಂಭೀರ ವಾಕ್ಯವಾರಿಧಿಚಂದ್ರಅಕಳಂಕ ಜಯವರ್ಯ ಯತಿಸಮೂಹಮಕುಟಮಣಿ ವಿದ್ಯಾಧಿರಾಜ ನಿರ್ಮಲಕಾಯಸುಕವೀಂದ್ರ ವಾಕ್ಸಿದ್ಧ ವಾಗೀಶರ 3ಗುರುಭಕುತಿ ನಿಸ್ಸೀಮ ರಾಮಚಂದ್ರಾಖ್ಯಯತಿಗುರುಆಜ್ಞಾಪಾಲ ವಿದ್ಯಾನಿಧಿಗಳದುರುವಾದಿಗಜಮೃಗಪ ರಘುನಾಥ ತೀರ್ಥಶ್ರುತಿಪರಮಾರ್ಥ ಪರಿಚರ್ಯ ರಘುವರ್ಯರ 4ವೈರಾಗ್ಯ ವೈಭವಾನ್ವಿತ ರಘೋತ್ತಮ ಮುನಿಪವೈಷ್ಣವ ತತ್ವಜÕ ವೇದವ್ಯಾಸರಕೈವಲ್ಯಮಾರ್ಗಜÕ ವಿದ್ಯಾಪತಿಯು ಹೊನ್ನಮೈಯ ಮರುತಂಶ ವಿದ್ಯಾಧೀಶರ 5ವೇದಾಮೃತಾಬ್ಧಿಯೊಳು ಮಗ್ನ ವೇದನಿಧಿಗಳಸಾಧುನಿಕರಲಲಾಮ ಸತ್ಯವ್ರತರಬಾದರಾಯಣರಾಮಪಾದರತ ಸತ್ಯನಿಧಿಮೇದಿನಿಗೆ ಕಲ್ಪತರು ಸತ್ಯನಾಥರ 6ಶ್ರೀ ಸತ್ಯನಾಥರತ್ನಾಕರಕರೋದ್ಭವಕುಮುದಅಶೇಷಯಾಚಕ ಸುಖದ ಸುಗುಣಶ್ರೀ ಸತ್ಯಾಭಿನವ ಮುನಿ ಭಾಗವತೇಢ್ಯಜÕಶಾಶ್ವತ ಪರೋಕ್ಷ ಗುರುಪದನಿಷ್ಠರ 7ದುಷ್ಟ ಪರವಾದಿ ನರಕುಲಿಶ ಜಿತಕಾಮ ತಪೋನಿಷ್ಠ ವಿದ್ಯೋನ್ನತ ವಿಚಾರಶೀಲಶಿಷ್ಟ ಜನಪಾಲಶ್ರುತಿಜಲಾಭ್ಧಿ ಕಲ್ಲೋಲಇಷ್ಟಾರ್ಥದಾತ ಸತ್ಯಾಧೀಶರ 8ಕೃಷ್ಣ ಪಾದಾಸಕ್ತ ಗುರುಕೃಪಾಸಂಯುಕ್ತಇಷ್ಟಾರ್ಥದಾತ ಸತ್ಯಾಧಿರಾಜರಸೃಷ್ಠೇಶ ಪ್ರಸನ್ನವೆಂಕಟಪತಿಯಅನವರತತುಷ್ಟೀಕರಿಸುವ ವಾಯುಮತ ಮಹಿಮರ 9
--------------
ಪ್ರಸನ್ನವೆಂಕಟದಾಸರು
ಗುರುರಾಯಾ ಗುರುರಾಯಾ |ತರಣಿಪ್ರಕಾಶ ಯತಿಪ ವರದೇಂದ್ರ ಪಬೆಂದೆನೋ ಭವದೊಳು | ತಂದೆ ನೀ ಬಹು ತ್ವರೆ ||ಯಿಂದ ಕರಪಿಡಿಯೋ |ಮಂದದಯಾಳೋ 1ಆರೆನು ಮನುಜರು | ದೂರುವ ಮಾತನು ||ಆರಿಗುಸಿರಲಿ ನಿ | ವಾರಿಸೋ ಸ್ವಾಮಿ2ನೀನೊಲಿಯಲು ಭಯ | ಕಾಣಿಸಿಕೊಂಬುದೆ ||ಹೀನ ಮತಾಟವಿ ಕೃ | ಶಾನು ಮಹಾತ್ಮ 3ಮೇದಿನಿಪರು ಬೆರ | ಗಾದರು ದಾನಕೆ ||ಮೋದಮುನಿಮತ ಮ | ಹೋದಧಿ ಚಂದ್ರ 4ಕಾಷಾಯ ವಸನಿ |ದೇಶಿಕವರಪ್ರಾ ||ಣೇಶ ವಿಠಲನವ | ರಾ ಸಲಹುವದೋ 5
--------------
ಪ್ರಾಣೇಶದಾಸರು
ಗುರುರೂಪಸಾಕಾರ ಸಾಕಾರನೀರಡಗಿರಲವಿಕಾರಗುರುಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ನೀರಲಿ ತೋರುವ ಗುರುಳೆ | ಕರಗಲು ನೀರಹೊರತು ಏನನಲಿ ?1ಹೇಮವು ಕರಗಲು ಮುದ್ದಿ-ಯೆನಿಸಲು ಬಲ್ಲದು ಸದ್ಗುರು ಸಿದ್ಧಿ2ಕಲ್ಲೆಂದರಿಯದೆ ಪರುಷಾ |ಜರಿದರೂ ಕಲ್ಲಿಂದಾಗುವ ಹರುಷಾ3ಅವನ ಕೃಪೆಯಿಂದೆಲ್ಲಾ | ಜಗವಿದುಕೇವಲ ಬ್ರಹ್ಮವಾಯಿತಲ್ಲಾ4ಪರಬ್ರಹ್ಮವು ಜಗವಾಗೆ | ಗುರುಶಂಕರತಾನಲ್ಲದೆ ಹ್ಯಾಂಗೆ5
--------------
ಜಕ್ಕಪ್ಪಯ್ಯನವರು
ಗುರುವರದೇಂದ್ರ ದಯಾಂಬುಧೇ ಶರಣಾಗತ ವತ್ಸಲ ಈಶ |ಚರಣಕಮಲಷಟ್ಪದ ಪಾಲಿಸು ಕಾಷಾಯವಸನಭೂಷಾ ಪದುರ್ಮತಭುಜಗಕುಘರ್ಮ ವಿನಾಯಕಕರ್ಮಬದ್ಧವ್ರತಾ |ಶರ್ಮತ್ರಿಧರ ಪ್ರಿಯ ಧರ್ಮಾಸಕ್ತನೆ ನಿರ್ಮಲ ಶುಭಚರಿತಾ ||ಭರ್ಮ ಸಮಾಂಗ ಅಧರ್ಮ ಶಿಕ್ಷಕರಿಚರ್ಮಾಂಬರ ಪ್ರೀತ |ಕಿರ್ಮೀರಾರಿ ಸುಶರ್ಮ ತೀರ್ಥಸಖಕರ್ಮಂದಿಪ ನಾಥ 1ಶ್ರೀ ಮನೋರಮ ಸು ತ್ರಿಧಾಮದೇವ ಶ್ರೀರಾಮ ಪದಾಸಕ್ತಾ |ಕಾಮಿತ ಫಲದಧರಾಮರವಂದಿತ ಸ್ವಾಮಿ ನಮಿಪ ಭಕ್ತ ||ಶ್ರೀಮಂದಾರಅನಾಮಯ ಸದ್ಗುಣಧಾಮನೆ ಸುವಿರಕ್ತಾ |ಪಾಮರದೂರ ಲಲಾಮ ವದಾನ್ಯ ಮಹಾಮಹಿಮನೆ ಶಕ್ತ 2ಮಾನಿ ಪೂಜ್ಯ ಸುಜ್ಞಾನಿ ಧೀರ ಸದ್ಭಾನುಚಂದ್ರ ಭಾಸ |ದೀನ ಪೋಷಕ ನಿಜಾನುಗ ಪಾಲಕ ಕ್ಷೋಣಿಪ ನಿರ್ದೋಷ ||ಸಾನುರಾಗದಲಿ ಪೋಣಿಸುಸನ್ಮತಿಮೌನಿ ಕುಲಾಧೀಶ |ನೀನಲ್ಲದೆ ಶ್ರೀ ಪ್ರಾಣೇಶ ವಿಠ್ಠಲ ತಾನೊಲಿಯನು ಲೇಶ 3
--------------
ಪ್ರಾಣೇಶದಾಸರು
ಗುರುವಿಜಯವಿಠಲ ನಿನ್ನ ಚರಣಯುಗಳಿಗೆಹಿಂದೆ ನೀನಿವರ ಪುರಂದರದಾಸರ ಮಂದಿರದಲಿ ಸೃಜಿಸಿಆರುಮೂರೆರಡೊಂದು ಜನರು ಇವರಿಂದ ಉ-ನೀನು ನಡೆಯಲು ನಡೆದು ನೀನು ನುಡಿಯಲು ನುಡಿದುನಿನ್ನ ಸೃಷ್ಟಿಯಾದಿ ಅಷ್ಟಕರ್ತೃತ್ವಗಳು ಚೆನ್ನಾಗಿಆವದಿನ ನೀನಿವರ ಸೇವೆ ದೊರಕಿಸಿ ಎನಗೆ ಸಾವಾಸದಲ್ಲಿ ಇತ್ತುಎಂದಿನಂತಾಡಿ ನಿನ್ನ ಯೋಚಿಸುತ ಬಪ್ಪರೊಳುಇಂದುಎನಎಲ್ಲಿ ನೀನುಂಟು ಮತ್ತಲ್ಲಿ ಆವರುಂಟೆಂಬುದೆಲ್ಲ
--------------
ಗೋಪಾಲದಾಸರು
ಗುರುವಿನ ಮರೆಯಾದಿರಮ್ಮ ಪಅಂಕಿತವನೆ ಇತ್ತಸಿರಿ ಗುರುವಿನ ನೀನುಮನದೊಳು ನೆನೆಯಬÉೀಕಮ್ಮ ತಂಗಿ ಅ.ಪಗುರುವಿನ ಮರೆತರೆ ನಿನಗೆ ಥರಥರ ನರಕಥರಥರನರಕವ ಅನುಭವಿಸಬೇಕಮ್ಮ ತಂಗೀ 1ಜ್ಞಾನಾನಂದಾತ್ಮಕನಾದ ಶ್ರೀಹರಿಯನ್ನುಗುರುವಿನದ್ವಾರಾ ನೀ ತಿಳಿ ಮಂಗಳಾಂಗಿ 2ಗುರುವೆ ತಂದೆಯು ಬಂಧು ಬಳಗಾವೆಂದು ಅಕ್ಕರೆಯಿಂದ ನೀ ನೆನೆಯಬೇಕಮ್ಮಾ 3ಗುರುವಿನ ಸೇವೆಯ ಮಾಡುತ್ತ ಗುರುಗಳಕೃಪೆಗೆ ಪಾತ್ರರಾಗಿ ಬಾಳಬೇಕಮ್ಮಾ 4ಮಂಗಳ ಮಹಿಮ ಶ್ರೀ ತಂದೆಮುದ್ದುಮೋಹನ್ನವಿಠಲ ದಾಸರೆನಿನಗೆ ಸದ್ಗುರು ಎಂದು ತಿಳಿಯಮ್ಮ ತಂಗಿಈ ಮಾತು ಪುಸಿಯಲ್ಲ ಮರೆಯಬೇಡಮ್ಮ ತಂಗೀ 5
--------------
ತಂದೆ ಮುದ್ದುಮೋಹನ ವಿಠಲರು
ಗುರುವೆ ಭಾರತಿನಾಥ | ಶರಣು ಲಾಲಿಸೋ ಮಾತ |ಹರಿಪದಾರ್ಚನೆ ಕೊಟ್ಟು ಪೊರೆಯೋ ದಯೆಯಿಟ್ಟು ಪರಾಮ ಸೇವಕನಾಗಿವಾನರಕಟಕನೆರಹಿ |ನೀಂ ಮುದದಿ ಲವಣಾಬ್ಧಿ ದಾಟಿ ಪೋಗಿ ||ಭೂಮಿ ತನುಜೆಳಿಗೆ ವಾರ್ತೆಯನೆ ಪೇಳಿ | ರಾಗಟಿಯಸ್ವಾಮಿಗರ್ಪಿಸಿದ ಬಲವಂತ ಹನುಮಂತ 1ರಾಜಸೂಯವ ಮಾಡುವದಕೆ ಮಾಗಧನ ಕೊಂದೆ |ಮಾಜಿಸಿದೆ ಕುರುಪತಿಯ ಸಂತತಿಯನು ||ಸೋಜಿಗವು ನಿನ್ನ ಲೀಲೆಯು ಆಯುಜಾತ ಬಿ |ಡೌಜ ರಕ್ಷಕ ದ್ರೌಪದೀಶ ಬಲವಂತ 2ಬುಧಮಧ್ಯಗೇಹನಲಿ ಅವತರಿಸಿ ಕುಮತಗಳ |ಬೆದರಿಸಿತ್ರಿದಶಸಪ್ತ ಗ್ರಂಥ ಮಾಡಿ ||ಸುದಯದಿಂದುತ್ತಮರಿಗಿತ್ತು ಮತವನು ನಿಲಿಸಿ |ಬದರಿಯೋಳ್ ಪ್ರಾಣೇಶ ವಿಠಲನಲ್ಲಿರುವೆ 3
--------------
ಪ್ರಾಣೇಶದಾಸರು