ಒಟ್ಟು 4372 ಕಡೆಗಳಲ್ಲಿ , 120 ದಾಸರು , 2472 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜೋ ಜೋ ಜೋ ಗುಂಡ ಪರಮಪ್ರಚಂಡ ಜೋ ಜೋ ಜೋ ಗುಂಡ ಸುರಚಿರದಂಡ ಪ ಜೋ ಜೋ ಜೋ ದೊಡ್ಡ ಕರಿಯಕಲ್ಗುಂಡ ಜೋ ಜೋ ಜೋ ಮದ್ದನರೆಯಚ್ಚಗುಂಡ ಅ.ಪ ದುಂಡು ಮಲ್ಲಿಗೆಗಿಂತ ಮೃದುವಾದ ಗುಂಡಾ ಕೆಂಡ ಸಂಪಿಗೆಗಿಂತ ಚೆಲುವಾದ ಗುಂಡಾ ಪುಂಡರೀಕಕ್ಕಿಂತ ಚೆಲುವಾದ ಗುಂಡಾ ಮೊಂಡ ಮೂಕರಕಯ್ಯ ಕೋದಂಡಗುಂಡಾ 1 ಒಬ್ಬಿಟ್ಟು ಹೂರಣವರೆಯುವ ಗುಂಡಾ ತಬ್ಬಿಬ್ಬಾಡುವರನು ಕಡುಗುವಾ ಗುಂಡಾ ರುಬ್ಬಿ ರುಬ್ಬಿ ದೋಸೆ ಯೀಯುವಾ ಗುಂಡಾ ಕೊಬ್ಬಿದ ಜನವನು ದಬ್ಬುವಾ ಗುಂಡಾ 2 ಪರಿಪರಿ ಬಂಧನವರಿಯದ ಗುಂಡಾ ಉರುಳಿಸಿದಲ್ಲಿಯೇ ನಿದ್ರಿಪ ಗುಂಡಾ [ವರಭಕ್ತಾವಳಿಗೆ ಸುಖವೀವಗುಂಡಾ] 3 ನೀನಿಲ್ಲದಿರುವ ಮನೆಗಳಿಲ್ಲ ಗುಂಡಾ ನೀನಿರುವಲ್ಲಿ ತಿಂಡಿಗಳುಂಟು ಗುಂಡಾ ಕಾನನದೊಳಗಿದ್ದು ಕರಗದ ಗುಂಡಾ ಮಾನವ ಗಣಕ್ಕೆಲ್ಲಾ ಬೇಕಾದ ಗುಂಡಾ4 ಒರಳುಕಲ್ಲಿನ ಮೇಲೆ ನೇಯುವಾ ಗುಂಡಾ ತರುಣಿಯ ಕರದೊಳು ನಲಿಯುವಾ ಗುಂಡಾ ವರ ದುಕೂಲಂಗಳ ಬಯಸದ ಗುಂಡಾ ವರದ ಮಾಂಗಿರಿರಂಗನೆನಿಸುವ ಗುಂಡಾ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಜೋ ಜೋ ಜೋನಂತ ಸದ್ಗುಣಧಾಮಾ ಜೋ ಜೋ ಜೋ ಯದುವಂಶಲಲಾಮ ಜೋ ಜೋ ಸಕಲ ಮಲಾಪಹ ನಾಮ ಜೋ ಜೋ ಸಮಾಲಿಂಗಿಹ ಸತ್ಯಧಾಮ ಪ. ನಿಗಮತತಿಗಳೆಲ್ಲ ಪೊಗಳುತ್ತಲಿಹನ ನಗಚಾಪ ಪಿತನನ್ನು ನಗುತ ಪೆತ್ತವನ ಸ್ವಗತ ಭೇದಶೂನ್ಯ ಖಗಪ ವಾಹನನ ಮಗುವೆಂದು ಕೂಗುವ ಮಾರಜನಕನ 1 ಮೂರು ಗುಣಂಗಳ ಮೀರಿದ ಸಿರಿನಲ್ಲ ಚೋರತನದಿ ಬೆಣ್ಣೆ ಮೆಲುವರೆ ಬಲ್ಲ ಈರೇಳು ಭುವನವ ಮೂರಡಿ ಮಾಡಿದ ಧೀರಗೆ ತಕ್ಕ ತೊಟ್ಟಿಲ ಕಾಣೆನಲ್ಲ 2 ಜಾಗ್ರತ್ಸ್ವಪ್ನ ಸುಷುಪ್ತಿ ಭಾವಗಳು ಭೋಗಿ ಶಯನತ್ವದಧೀನವಾಗಿರಲು ವಾಗೀಶವಾಯುಗಳರ್ಚಿಪ ನಿನ್ನನು ತೂಗುವ ರಾಗವ್ಯಾವದೊ ಪೇಳೊ ರನ್ನ 3 ಆದರು ಕಲುಷಾವನೋದನ ನಿನ್ನಯ ಪಾದಕಮಲಗಳ ಪೊಗಳಿ ಪಾಡುವರ ಕಾದುಕೊಳ್ಳುವೆನೆಂಬ ವೇದ ಸಾರವನ್ನು ನೀ ದಯ ಮಾಡಿದರೋದುವೆನಿದನು 4 ನೀರೊಳಗಾಡಬ್ಯಾಡೆಂದರೆ ಕೇಳದೆ ಮಂದರ ಪೊತ್ತು ಬೇರನೆ ಕಿತ್ತಿ ಘೋರ ದೈತ್ಯನ ಸೀಳಿ ತೋರಿ ವಾಮನ ಮೂರ್ತಿ ಧಾರುಣೀಶರ ಕೊಂದ ಧೀರ ರಾಘವನೆ 5 ಚಿಕ್ಕತನದಿ ಬಹು ರಕ್ಕಸ ಕುಲವ ಧಿಕ್ಕರಿಸುತ ಕೈಗೆ ಸಿಕ್ಕದೆ ಓಡಿ ಮಕ್ಕಳಾಟಿಕೆಯಿಂದ ಫಕ್ಕನೆ ಮಾವನ ಸೊಕ್ಕ ಮುರಿದು ನೆಲ ತಿಕ್ಕಿದ ಹರಿಯೆ 6 ಘೋರ ಜರಾಸಂಧ ಸಾಲ್ವೈಕಲವ್ಯರ ಗಾರಗೆಡಿಸಿ ದ್ವಾರಕಾ ಪುರ ರಚಿಸಿ ಕೌರವನೊಶದಲಿ ಸೇರಿದ ಧರಣಿಯ ಮಾರುತಿಯಲಿ ಪ್ರೇಮದೋರಿ ಪಾಲಿಸಿರಿ 7 ಎರಡು ಹೆಂಗಳನಾಳುವುದೆ ಬಹು ಘೋರ ಎರಡೆಂಟು ಸಾವಿರ ಮತ್ತೆಂಟು ನೂರ ನೆರಹಿಕೊಂಡರೆ ನಿನಗಾಗದೆ ಭಾರ ಪರಮಾತ್ಮ ನಿನಗಿದು ಲೀಲಾವತಾರ 8 ಬತ್ತಲೆ ತಿರುಗಿದರಾಗದೆ ದೃಷ್ಟಿ ಕರವಾಳ ಮುಷ್ಟಿ ಸುತ್ತ ತಿರುಹಿ ಪಾಪಿಗಳ ಕೊಂದ ಜಟ್ಟಿಯ ನಿತ್ಯ ನಂಬಿದಪರಿಗಾನಂದ ಪುಷ್ಟಿ 9 ಅಣುಗಳಿಗೆ ಪರಮಾಣುವಾಗಿ ನಿಲುವಿ ಘನಕಿಂತ ಘನವಾಗಿದನುಜರ ಕೊಲುವಿ ಕನಡಿಲಿ ಪ್ರತಿಫಲಿಸುವ ವೋಲಿರುವಿ ಕನಲುತ ಭಕ್ತರು ನೆನೆವಲ್ಲಿ ಒಲಿವಿ 10 ಜೋಗಿ ಜನರ ಸಹವಾಸ ಬೇಡೆಂದರೆ ಪೋಗಿ ಪೋಗಿ ಅವರ ಮನದೊಳಗಿರುವಿ ಶ್ರೀ ಗುರು ಮಧ್ವಮುನಿಯ ಮೇಲೆ ಕರುಣದಿ ಸಾಗಿ ಬಂದಿರುವೀಗ ರೌಪ್ಯ ಪೀಠದಲಿ 11 ಶೃಂಗಾರ ವಾರುಧಿ ಶ್ರೀ ಕೃಷ್ಣಜೀಯ ಮಂಗಳ ದೇವಿಯ ಮೋಹಿಪಕಾಯ ಗಂಗೆಯ ಪಡದಂಗುಷ್ಠವನಿಟ್ಟಪಾಯ ರಂಗನಾಥ ಶ್ರೀ ವೆಂಕಟರಾಯ 12
--------------
ತುಪಾಕಿ ವೆಂಕಟರಮಣಾಚಾರ್ಯ
ಜೋ ಜೋ ರುಕ್ಷಿಣಿರಮಣ ಜೋ ಜೋ ಕಲ್ಯಾಣ ಜೋ ಜೋ ಗುಣಪರಿಪೂರ್ಣ ವೆಂಕಟರಮಣ ಪ. ರನ್ನ ಮಾಣಿಕದೊಜ್ರ ಚಿನ್ನ ಮಂಟಪದಿ ಘನ್ನ ನವರತ್ನದಿಂ ಮೆರೆವ ತೊಟ್ಟಿಲೊಳು ರನ್ನೆರಿಬ್ಬರ ಕೂಡಿ ನಲವಿಂದ ಕೃಷ್ಣ ಸನ್ನುತನಾಗಿ ಸುರರಿಂದ ಪವಡಿಸಿದ ಜೋ ಜೋ 1 ಕನಕಮಯ ಸರಪಳಿ ಥಳಥಳನೆ ಹೊಳೆಯೆ ಮಿನುಗುವಾಭರಣಗಳು ಝಗ ಝಗಿಸುತಿರಲು ಸನಕಾದಿ ಒಡೆಯನ ಫಣಿಪ ಹಿಂತೂಗೆ ಮುನಿವರನು ಮುಂದೆ ತಾ ಲಾಲಿ ಪಾಡಿದನು ಜೋ ಜೋ 2 ವೇದವನೆ ಕದ್ದವನ ಕೊಂದವನೆ ಜೋ ಜೋ ಸಾಧಿಸಿ ಸುಧೆ ಸುರರಿಗುಣಿಸಿದನೆ ಜೋ ಜೋ ಜಲಧಿ ಮೇದಿನಿ ತಂದೆ ಜೋ ಜೋ ಸಾಧಿಸಿ ಸುಧೆ ಸುರರಿಗುಣಿಸಿದನೆ ಜೋ ಜೋ 3 ಬಲಿಯನೊಂಚಿಸಿದಂಥ ತರಳನೆ ಜೋ ಜೋ ಕುಲವನೆ ಸವರಿದ ಬಲಶಾಲಿ ಜೋ ಜೋ ಲಲನೆ ಸೀತೆಯ ತಂದ ಶ್ರೀರಾಮ ಜೋ ಜೋ ಮೆಲಲು ಪಾಲು ಬೆಣೆÉ್ಣ ಕದ್ದವನೆ ಕೃಷ್ಣ ಜೋ ಜೋ4 ತ್ರಿಪುರ ಸತಿಯರ ವ್ರತವಳಿದೆ ಜೋ ಜೋ ಚಪಲತನದಿಂ ಹಯವನೇರಿದನೆ ಜೋ ಜೋ ಅಪರಿವಿತದವತಾರದಿಂ ಬಳಲಿ ಬಂದು ನಿಪುಣರೆಲ್ಲರು ಸ್ತುತಿಸೆ ಪವಡಿಸಿದೆ ಕೃಷ್ಣ ಜೋ ಜೋ 5 ಅರಸು ಜಯದೇವಿ ಸಂಕರ್ಷಣನೆ ಜೋ ಜೋ ಸಿರಿದೇವಿಪ್ರಿಯ ಶ್ರೀ ನರಹರಿಯೆ ಜೋ ಜೋ ವರರುಕ್ಮಿಣಿ ಸತ್ಯವರ ಕೃಷ್ಣ ಜೋ ಜೋ ಅರಸಿ ಪದ್ಮಾವತಿ ಸಹಿತ ವೆಂಕಟನೆ ಜೋ ಜೋ6 ನಾರದಾದಿಗಳೆಲ್ಲ ನರ್ತನದಿ ಪಾಡೆ ಊರ್ವಶಿ ಅಪ್ಸರರು ನೃತ್ಯವನು ಮಾಡೆ ತೋರೆ ಗಂಧರ್ವರು ಗಾನಗಳ ರಚನೆ ಸಾರಿಸಾರಿಗೆ ಭಕ್ತರೆಲ್ಲ ನುತಿಗೈಯೆ 7 ಭಕ್ತನಾದ ವಾಯು ಸಹಿತ ಪವಡಿಸಿದೆ ಜೊತ್ತಾದ ತೊಟ್ಲುಗಳು ಭೃತ್ಯರು ತೂಗೆ ಮತ್ತೆ ನಿವಿ್ಮೂರ್ವರಿಗೆ ನಿದ್ರೆ ಇನ್ನುಂಟೆ ಭಕ್ತರನು ಸಲಹಲು ಲೀಲೆ ಕೈಕೊಂಡೆ ಜೋ ಜೋ 8 ಶ್ರೀಪಾದಪದ್ಮಯುಗಳಕೆ ಎರಗಿ ನಮಿಪೆ ಗೋಪಾಲಕೃಷ್ಣವಿಠ್ಠಲನೆ ನೀ ಸಲಹೊ ಶ್ರೀ ಪದ್ಮಭವ ಭವರಿಂ ಸೇವೆ ಕೊಳುತ ಈ ಪಯೋಜ ಭವಾಂಡದೊಳು ಲೀಲೆ ತೋರ್ಪೆ ಜೋ ಜೋ9
--------------
ಅಂಬಾಬಾಯಿ
ಜೋ ಜೋ ಶ್ರೀಹರಿ ಮಲಗೊ ಜೋಗುಳ ಪಾಡಿ ಪಾಡಿ ತೂಗುವೆ ಮುದದಿಪ ಯೋಗಿಗಳರಸನೆ ಸಾಗರಶಯನನೆ ಭಾಗವತರಪ್ರಿಯ ಬಾಗಿ ಸ್ತುತಿಪರೊ ನಿನ್ನ ಅ.ಪ ಹರ ಬ್ರಹ್ಮಾದಿಗಳು ಕೂಡಿ ನಿನ್ನನು ಪರಿಪರಿ ವಿಧದಲಿ ಕೊಂಡಾಡಿ ಸುರರು ಗಂಧರ್ವರು ವರಋಷಿಗಳು ಕೂಡಿ ಪರಮ ಸಂಭ್ರಮದಿಂದ ಹರಿ ನಿನ್ನ ಸ್ತುತಿಪರು 1 ಗೋಕುಲದ ನಾರಿಯರು ಗೋವಿಂದ ನಿನಗೆ ಬೇಕಾದ ಪಾಲ್ಮೊಸರು ಜೋಕೆಯಿಂದಲಿ ಹೊಸ ಬೆಣ್ಣೆ ತಂದಿಹೆವೆಂದು ಅ- ನೇಕ ಬಗೆಯಲಿ ಸ್ತುತಿ ಮಾಡಿ ಬೇಡುತಲಿರುವರು 2 ದಿಟ್ಟ ಗೋಪಾಲ ಕಯ್ಯೊಳಗೊಂದು ಪುಟ್ಟ ಬಚ್ಚೆಯ ಪಿಡಿದು ಅಚ್ಚುತ ನಿನಗೀವೆವೆಂದು ಬಾಗಿಲೋಳ್ ನಿಂದು ಪುಟ್ಟ ಮಕ್ಕಳು ಬಾಯಿಬಿಟ್ಟು ಪ್ರಾರ್ಥಿಸುವರು 3 ಇನಕೋಟಿ ಪ್ರಭೆ ನಾಚಿಪ ಮುಖ ಕಮಲದ ದನುಜದಲ್ಲಣ ನಿನ್ನನು ಸನಕಾದಿಗಳು ಸ್ತುತಿಮಾಡಿ ಮೈ ಮರೆತರೊ ವನಿತೆಯರೋಕುಳಿಗಳನಾಡಿ ನರ್ತಿಸುವರೊ 4 ನಿದ್ರೆ ಮಾಡಿದರೆ ನೀನು ಈ ಜಗವೆಲ್ಲ ಉದ್ಧಾರವಾಗುವುದೇನು ನಿದ್ರೆ ಸಾಕೇಳೆಂದು ದುರ್ಗಾದೇವಿಯರು ಸ್ತುತಿಸೆ ಮುದ್ದು ಕೃಷ್ಣನೆ ಭಕ್ತರುದ್ಧಾರಕರ್ತನೆ5 ಹಯ ಮುಖ ಹರಿ ಮತ್ಸ್ಯನೆ ಕೂರ್ಮನೆ ವರಹ ಹಯಗ್ರೀವ ನರಸಿಂಹನೆ ಜಯವಟು ಭೃಗು ರಾಮಕೃಷ್ಣ ಬುದ್ಧನÉ ಕಲ್ಕಿ ಜಯ ನಾನಾ ರೂಪನÉ ಜಯವೆಂದು ಪೊಗಳ್ವರೊ6 ನವನೀತ ಚೋರನೆಂದು ನಾರಿಯರೆಲ್ಲ ನವವಿಧ ನುಡಿ ನುಡಿವರೊ ಭುವನ ಮೋಹನಸ್ವಾಮಿ ಸುಮನಸ ವಂದ್ಯನೆಕವಿ ಜನರಪ್ರಿಯ ಶ್ರೀ ಕಮಲನಾಭ ವಿಠ್ಠಲ 7
--------------
ನಿಡಗುರುಕಿ ಜೀವೂಬಾಯಿ
ಜೋ ಜೋ ಸುಖಸಾರ ಪ ಜೋ ಜೋ ಜೋಜೋ ದೋಷ ವಿದೂರ ಅ.ಪ ಸುಮ್ಮನೆ ಸಾಗೆಲೊ ಮುಂದೆ ನಮ್ಮ ಮಗುವು ತಾ ಮಲಗಿಹನಿಂದು ನಿಮ್ಮ ಮಂದಿಗೆ ಈ ಶಿಶುವು ಬೊಮ್ಮನು ಫಣಿಯಲಿ ಬರೆದಿಹನೇನೊ 1 ನಿದ್ರೆಯ ಸುದ್ದಿಯ ಕಾಣದ ನಾನು ನಿದ್ರೆಯ ಮಾಡುವ ಸಡಗರವೇನು ಮುದ್ದು ಮಾತುಗಳಲಿ ಫಲವೇನು ನಿದ್ರೆ ನಾ ಮಾಡಲು ಎದ್ದಿರುವರ್ಯಾರು2 ನಿದ್ರೆ ಮಾಡುವುದೆಂತು ಬೇಕಾದ ಜೋಗುಳ ಪಾಡುವೇನೊ ಏಕಮನದಿ ನೀ ಪ್ರಾಜ್ಞನ ಕೂಡೊ ದಧಿ ಕ್ಷೀರಗಳು ನಾಕು ನಿಮಿಷದಲಿ ಜೀರ್ಣವಾಗುವುವೊ 3 ಕಣ್ಣನು ಮುಚ್ಚಿದೆ ಪ್ರಾಜ್ಞ ನಾನು ಚನ್ನಾಗಿ ತಬ್ಬಿದೆ ನೋಡಮ್ಮ ಎನ್ನಯ ಕುಕ್ಷಿಯು ಬರಿದಾಯ್ತು ಇನ್ನು ಪ್ರಸನ್ನಳಾಗುಣಬಡಿಸಮ್ಮ 4
--------------
ವಿದ್ಯಾಪ್ರಸನ್ನತೀರ್ಥರು
ಜೋಗಿ ಬಂದ ಕಾಣೇ ಈತ ಮಹಾಯೋಗಿ ಬಂದ ಕಾಣೇ ಗಗನ ಮಣಿಯ ಮೀರುವ ತೇಜದ ದತ್ತ ದಿಗಂಬರ ನೆನಿಪೆ ನೋಡಮ್ಮಾ ಪ ತವೆ ಸಂಜೆ ಧಾರೆಗಳು ಹೊಳೆವ ಲೊ ಪ್ಪುವ ಕೆಂಜೆಡಿಯಗಳು ಕುವಲಯ ಶಾಮನು ಕಿರೀಟ ಕುಂಡಲದಿಂದ ಠವಠವಿಸುವ ಮೊಗದಾ ನೋಡಮ್ಮಾ 1 ಕೇಶರ ಗಂಧವನು ನುಂಪಿಟ್ಟು ತ್ರಿಸರೋಜ ಮಾಲೆಯನು ಭೂಷಿತ ದಿವ್ಯಾಂಬರ ಕಾಂಚಿ ಧಾಮದಿ ಘೋಷಿಪ ಘಂಟೆಗಳು ನೋಡಮ್ಮಾ 2 ಮೆಟ್ಟಿದ ಪಾದುಕೆಯಾ ರತನದ ಬೊಟ್ಟಿಲಿ ಜಪ ಮಾಲೆಯಾ ನೆಟ್ಟನೆ ನೆನೆವ ರುದ್ಧರಿಸಲು ತಾರಕ ಸೃಷ್ಟಿಗೆ ಗುರುವಾಗಿಹ ನೋಡಮ್ಮಾ 3 ಆದಿ ಯೋಗವನು ಪ್ರಕಟಿಸಿ ಹಾದಿಯ ತೋರುವನು ದ್ವಾದಶ ನಾದದ ಭೇದ ತೋರುವ ಶಂಖ ನೂಡುತ ನಲಿಯುತಲಿಹ ನೋಡಮ್ಮಾ 4 ಮೂರ್ತಿ ಚಿ-ಹ್ನವನು ದೋರುವಾ ಶ್ರೀ ಮನೋರಮ ದೇವನು ನೇಮದ ಮಹಿಪತಿ ನಂದನ ಪ್ರಭು ಭಕ್ತ ಕಾಮಿತಾರ್ಥವ ನೀಡುವ ನೋಡಮ್ಮಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜೋಜೋ ಜೋಜೋ ಲಾಲಿ ಗೋವಿಂದ ಜೋಜೋ ಜೋಜೋ ಲಾಲಿ ಮುಕುಂದ ಜೋಜೋ ಜೋಜೋ ಲಾಲಿ ಆನಂದ ಜೋಜೋ ಜೋಜೋ ಲಾಲಿ ಗೋಪಿಯ ಕಂದ ಪ ಚಿನ್ನದ ತೊಟ್ಳಿಗೆ ರನ್ನದ ಮಲುಕು ಕನ್ನಡಿ ಹೊಳೆವೊ ಮೇಲ್ಕಟ್ಟಿನ ಬೆಳಕು ಸ್ವರ್ಣ ಮಂಟಪದಿ ರಾಜಿಪದಿವ್ಯ ಹೊಳಪು ಕರ್ನೇರಲಂಕರಿಸಿ ನಲಿಯುವ ಕುಲುಕು ಜೋ ಜೋ1 ಅರಿಶಿನ ಕುಂಕುಮ ಗಂಧ ಪುಷ್ಪಗಳು ಸರಸೀಜಾಕ್ಷಗೆ ಮುತ್ತಿನ್ಹಾರ ಪದಕಗಳು ಸುರರೊಡೆಯಗೆ ಪಟ್ಟೆ ಪೀತಾಂಬರಗಳು ಹರುಷದಿಂದಿರಿಸಿ ನಲಿವ ಸ್ತ್ರೀಯರುಗಳು ಜೋ ಜೋ2 ಮುತ್ತೈದೆಯರೆಲ್ಲ ಬಂದು ನೆರೆದರು ಉತ್ತಮ ಸ್ವರ್ಗ ಕಲಶವ ಪೂಜಿಸುವರು ಚಿತ್ತಜನಯ್ಯನ ಎತ್ತಿಕೊಂಡಿಹರು ಜೋ ಜೋ3 ಕೇಶವನನ್ನು ತನ್ನಿ ನಾರಾಯಣನ್ನ ಮಾಧವ ಗೋವಿಂದನನ್ನ ಸಾಸಿರ ನಾಮದ ವಿಷ್ಣು ಮಧುಸೂದನನ್ನ ಸೋಸಿಲಿ ತ್ರಿವಿಕ್ರಮ ವಾಮನನ್ನ ಜೋ ಜೋ 4 ಶ್ರದ್ಧೆಯಲಿ ಶ್ರೀಧರ ಹೃಷಿಕೇಶನನ್ನ ಪದ್ಮನಾಭನ ಕೊಳ್ಳಿ ದಾಮೋದರನ್ನ ಶುದ್ಧ ಮನದಿ ಸಂಕರ್ಷಣ ವಾಸುದೇವನನ್ನ ಪ್ರದ್ಯುಮ್ನನನು ತನ್ನಿ ಅನಿರುದ್ಧನನ್ನ ಜೋ ಜೋ5 ಪುರುಷೋತ್ತಮನ ಕೊಳ್ಳಿ ಅದೋಕ್ಷಜನನ್ನ ನಾರಸಿಂಹನ ತನ್ನಿ ಅಚ್ಚುತನನ್ನ ಸರಸದಿ ಜನಾರ್ದನ ಉಪೇಂದ್ರನನ್ನ ಹರುಷದಿಂದಲಿ ಕೊಳ್ಳಿ ಹರಿ ಶ್ರೀಕೃಷ್ಣನನ್ನ ಜೋ ಜೋ 6 ಹೀಗೆಂದು ತೂಗುತ ಜೋಗುಳ ಹಾಡಿ ನಾಗವೇಣಿಯರು ಸಂಭ್ರಮದಿಂದ ಕೂಡಿ ಆಗ ಕಮಲನಾಭ ವಿಠ್ಠಲನ್ನ ನೋಡೀ ಬೇಗ ರಕ್ಷೆಗಳನಿತ್ತರು ತ್ವರೆ ಮಾಡಿ ಜೋ ಜೋ 7
--------------
ನಿಡಗುರುಕಿ ಜೀವೂಬಾಯಿ
ಜೋಜೋ ಪದುಮದಳಾಕ್ಷ ಉಪೇಂದ್ರ ಪ ಜೋಜೋ ವೇದವಂದಿತ ನಿತ್ಯಾನಂದ | ಜೋಜೋ ಆದಿಮೂರುತಿ ಶ್ರೀಗೋವಿಂದ ಅ.ಪ ಉದಿಸಿದೆ ವಸುದೇವನರಸಿಯೊಳಂದು 1 ದೇವ ರೋಹಿಣಿ ನಕ್ಷತ್ರದೊಳು ಧರೆಗಿಳಿದೆ 2 ಕೌಸ್ತುಭ ಸಕಲ ಲೋಕೇಶ ಶೋಭಿಸುವೆ ಸಂಭ್ರಮದಿ3 ಪರಿಪರಿ ಶೋಭಿಸಿ ಮೆರೆವೆ ಆನಂದ 4 ಲೀಲಾವಿನೋದವ ಮಾಳ್ಪೆ ಸಂತಸದಿ 5 ಒಂದಾಗಿ ಸುಮವೃಷ್ಟಿ ಸುರಿವ ಸಂಭ್ರಮದಿ 6 ನಾರದ ಮುನಿಪನ ವೀಣಾಗಾನಗಳು | ನಾರಿ ಲಕ್ಷ್ಮಿಯು ರತ್ನದಾರತಿಯೆತ್ತುವಳು 7 ಗಿರಿಜೇಶಪ್ರಿಯನೆ ತ್ರೈಜಗದುದ್ಧಾರಿ8 ತ್ರುವಿತ್ರುವಿ ಶಂಖಚಕ್ರಗದಾಪದ್ಮ ಹಸ್ತ 9 ತ್ರುವಿತ್ರುವಿ ಪರತರ ಪಾವನರಾಮ 10 ನಂತರ್ಯದೊಳಗಿಟ್ಟು ಪೊರೆವೆನಿನ್ನೇನು 11 ಗುರು ದಾಮೋದರ ಶ್ರೀನಿವಾಸ ಆಗಿರುವೆ 12
--------------
ಸದಾನಂದರು
ಜೋಜೋ ಶ್ರೀ ಗೋಪಾಲಕೃಷ್ಣ ಮೂರುತಿಯೆ ಪತಿ ಲೋಕ ದೊರೆಯೆ ಜೋಜೋ ಈ ಲೋಕದೊಳು ನಿನಗಿನ್ನು ಸರಿಯೆ ಜೋಜೋ ಶ್ರೀ ಗುರುಕರಾರ್ಚಿತದಿ ಬಂದ್ಹರಿಯೆ ಪ. ತಂದೆ ಮುದ್ದುಮೋಹನರು ಕೊಟ್ಟ ಅಂಕಿತದಿ ಪೊಂದಿದ್ದ ರೂಪ ಗ್ರಹದಲ್ಲಿ ಹೊಂದಿ ಮುಂದೆಂಟು ವತ್ಸರಕೆ ಎನ್ನೊಡನೆ ಬಂದಿ ತಂದೆ ಮುದ್ದುಮೋಹನರ ಕರಸ್ಪರ್ಶ ಪೊಂದಿ 1 ನಮ್ಮ ಹಿರಿಯರ ಪೂಜೆ ಒಮ್ಮೊಮ್ಮೆ ಎಂದು ಒಮ್ಮೆ ದುರುಳನು ಮುಟ್ಟೆ ಮಲಿನಾದೆನೆಂದು ನಮ್ಮ ಗುರು ಕರಸ್ಪರ್ಶದಿಂ ಪುನಃ ಬಂದು ಪತಿ ಎನ್ನ ಕರಪೂಜೆ ಬೇಕೆಂದು 2 ಘನ್ನ ಗುಣರು ನಿನ್ನ ಪೂಜಿಸಿ ಪೋಗಲಂದು ಮನೆ ಪೆಟ್ಟಿಗೆಯೊಳ್ ಸುಮ್ಮನಿರಲಾರೆನೆಂದು ಮನಕೆ ಪ್ರೇರಿಸೆ ದುರುಳರಿಗೆ ಕದ್ದು ಒಯ್ದು ಘನ ಮೂರ್ತಿಗಳು ಪೋಗೆ ನೀನೊಬ್ಬ ಬಂದು 3 ಬಹುದಿವಸ ಮಲಿನವಾಗಿರುತಿರಲು ನೀನು ಮಹಮಹಿಮೆ ಅರಿಯಲಿಲ್ಲಾಗ ನಾನಿನ್ನು ಅಹಹ ನಮ್ಮ ಗುರುಗಳೆರೆಯಲು ಜ್ಞಾನವನ್ನು ಮಹಿಯೊಳೆನ್ನ ಪೂಜೆಯನು ಬಯಸಿದೆಯೊ ನೀನು 4 ಮನದಲ್ಲಿ ಪ್ರೇರಿಸಲು ಘನವಲ್ಲವೆಂದು ಕನಸಿನಲಿ ಎನ್ನ ಹಸ್ತದೊಳ್ ಬಂದು ನಿಂದು ಸನುಮತದಿ ಹರುಷದಲಿ ನಿನ್ನ ನಾ ತಂದು ಘನ ಮಹಿಮ ಗುರುಗಳಿಗೆ ಒಪ್ಪಿಸಲು ಅಂದು 5 ಅಂತರಾತ್ಮನ ಗುರುವು ವಿಗ್ರಹದೊಳಿಟ್ಟು ಸಂತೋಷದಿಂದ ಮನಮುಟ್ಟಿ ಕೊಡಲಷ್ಟು ಅಂತಾಯ್ತು ಮಲಿನ ಕುಂದಿತು ತೇಜವೆಷ್ಟು ನಿಂತೆನ್ನ ಕೈಲಿ ಪೂಜೆಯಗೊಂಬ ಗುಟ್ಟು 6 ದಿನದಿನಕೆ ಭಜನೆ ಪೂಜೆಯನೆಗೊಂಬ ಚಂದ ಘನಭಕ್ತರನು ಪೊರೆವ ಬಿರುದು ಆನಂದ ಮುನಿಜನರ ಮೋಹಕನೆ ಸಚ್ಚಿದಾನಂದ ಎನಗೊಲಿದೆ ಗೋಪಾಲಕೃಷ್ಣ ಗೋವಿಂದ 7 ರಮೆ ಬ್ರಹ್ಮ ಸುರರಿಗೆ ಸರಿ ಪೂಜಿಸುವೆನೆ ಕಮಲಾಕ್ಷ ಅಣು ನಾನು ನಿನ್ನ ಒಲಿಸುವೆನೆ ರಮಣೀಯವಾದ ವಸ್ತುಗಳ ನಾ ತಹೆನೆ ಕ್ಷಮಿಸು ನಿನ್ನ ದಾಸಿ ನನ್ನಪರಾಧಗಳನೆ 8 ಅಂತರಂಗದಲಿಪ್ಪ ಬಿಂಬ ಮೂರುತಿಯೆ ನಿಂತು ಈ ವಿಗ್ರಹದಿ ಈ ರೀತಿ ಮೆರೆಯೆ ಸಂತೋಷ ನೋಳ್ಪರಿಗೆ ಕೊಡು ಭಕ್ತಿ ಹರಿಯೆ ಕಂತುಪಿತ ಕಮಲಾಕ್ಷ ಕಾಯೊ ಸಿರಿದೊರೆಯೆ 9 ಪೂಜ್ಯಪೂಜಕನೆಂದು ಪೂಜೆ ಮಾಡುವೆನೊ ಮೂರ್ಜಗತ್ಪತಿ ನಿನ್ನ ಲಾಲಿ ಪಾಡುವೆನೊ ಪೂಜ್ಯ ಶ್ರೀ ಗೋಪಾಲಕೃಷ್ಣವಿಠ್ಠಲ ನೀನು ಗೋಜು ಬೇಡನ್ಯರದು ಪೊರೆಯೊ ದಾಸರನು 10
--------------
ಅಂಬಾಬಾಯಿ
ಜ್ಞಾನಶೂನ್ಯಗಾತ್ಮದನುಭವವ್ಯಾಕೆ ಹೀನ ಸಂಸಾರಿಗೆ ಪರದ ಸುದ್ದ್ಯಾಕೆ ಪ ಕತ್ತೆಗೆ ಬೆಲೆಯುಳ್ಳ ಉತ್ತಮ ಜೀನ್ಯಾಕೆ ಕೃತ್ರಾಮಗೆ ಸತತ ಸತ್ಪಥದ ಬೋಧ್ಯಾಕೆ ತೊತ್ತಿಗ್ಹೋಗುವಗರಸೊತ್ತಿಗಧಿಕಾರವ್ಯಾಕೆ ಮಿಥ್ಯೆಮತಿಗ್ಯಾತಕ್ಕೆ ಉತ್ತಮರ ನೆರೆಯು 1 ನಂಬಿಗಿಲ್ಲದವಗ್ಯಾಕೆ ಗುಂಭದ ಮಾತುಗಳು ಜಂಬಕೊಚ್ಚುವವಗ್ಯಾಕೆ ಗಂಭೀರತನವು ಅಂಬುಜಾಕ್ಷನ ಚರಿತ ಡಂಭನಿಗ್ಯಾತಕ್ಕೆ ಗೊಂಬೆಯಾಟಗಾರಗ್ಯಾಕೆ ತಂಬೂರಿ ತಬಲ 2 ದಾನಧರ್ಮದ ಮಹಿಮೆ ಜೀನನಿಗೆ ಏತಕ್ಕೆ ಗೋಣು ಮುರಿವವಗ್ಯಾಕೆ ದೈನ್ಯಮಾತುಗಳು ನಾನಾ ಬಯಕೆಯುಳ್ಳ ಮಾನವಗೆ ಭಕ್ತಜನ ಪ್ರಾಣ ಶ್ರೀರಾಮ ನಿಮ್ಮ ಧ್ಯಾನವಿನ್ಯಾಕೆ 3
--------------
ರಾಮದಾಸರು
ಜ್ಞಾನಾನಂದ ಸ್ವರೂಪ ಭಾನುಕೋಟಿ ಪ್ರದೀಪ ನಾನಾದೋಷ ನೀರ್ಲೇಪ ಮೀನ ರೂಪ ಪ ಏನು ಅರಿಯದ ದೀನ ಭಕುತನಿಗೆ ಸಾನುರಾಗದಿ ಜ್ಞಾನವನೀಯೋ ಅ.ಪ ನಿಗಮಗಳೆಲ್ಲವು ಬಗೆ ಬಗೆಯಿಂದ ನಿನ್ನ ಅಗಣಿತ ಗುಣಗಳ ಪೊಗಳುತಲಿದ್ದರು ಸಿಗದ ನಿನ್ನ ನಾನು ಪೊಗಳಲಳವೆ ಪೇಳೊ ಸಿರಿಯರಸನೆ ನಿನ್ನ ಚರಣಕಮಲದಲಿ ಪರತರ ಭಕುತಿಯ ದೊರಕಿಸೆಲೊ ಸರಸಿಜ ಜನಕನೆ ಮರೆತಪರಾಧವ ಕರುಣದಿಂದಲಿ ಎನ್ನ ಕರಗಳ ಪಿಡಿಯೋ 1 ಒಂದು ದಿನವು ಸುಖ ಗಂಧವನರಿಯದೆ ಭವ ಸಿಂಧುವದನನೆ ತೊಂದರೆ ಪಡುತಿಹೆ ಸುಂದರ ವದನನೆ ತಂದೆ ಎನಗೆ ನೀನೆ ಬಂಧುವೆನಗೆ ನೀನೆ ಮಂದ ಬುದ್ಧಿಯಲಿ ನಿಂದ್ಯನಾದೆನಗೆ ಕುಂದು ಸಹಸ್ರವು ಸಂಧಿಸಿತು ಇಂದು ಮನಕೆ ಆದ ತಂದುಕೊಳ್ಳದೆಲೆ ಮಂದಹಾಸದಲಿ ಬಂದೆನ್ನ ಪೊರೆಯೋ 2 ಹಿತವೆಂದು ಭವವನು ಅತಿ ಮೋಸಹೋದೆನು ಮತಿಗೆಟ್ಟು ನಿನ್ನನು ಸ್ತುತಿಸಲಿಲ್ಲವೊ ನಾನು ಮಿತಿಮೀರುತಿರಲೆನ್ನ ಸ್ಥಿತಿಯ ನೀನರಿಯುತ ಮತಿ ಬೇರೆ ಮಾಡಿ ಮರೆತೆಯೇನೊ ಶ್ರೀಪತೆ ಕ್ಷಿತಿಯೊಳೆನಗೆ ಗತಿ ಇತರರ ಕಾಣೆನÉೂೀ ಪತಿ ನೀನಿರೆ ವಸುಮತಿಯೊಳಗೆ ಪತಿತಪಾವನನೆ ಪ್ರಸನ್ನನಾಗಿ ದಿವ್ಯ ಸತತ ಸುಖಕೆನಗೆ ಪಥವನು ತೋರೊ 3
--------------
ವಿದ್ಯಾಪ್ರಸನ್ನತೀರ್ಥರು
ಜ್ಞಾನಿಗಳು ತಪ್ಪುವರೆ ಕೊಟ್ಟ ವಚನ ಪ್ರಾಣಹೋದರೂ ಭಾಷೆ ಕೊನೆಗಾಣೋತನಕ ಪ ಖ್ಯಾತಿವಂತ ನಳರಾಜ ಸೋತ ರಾಜ್ಯಾಕೆಂದು ಮಾತಿಗಾಗಿಯೆ ತಾಂ ಪೋದ ವನವಾಸ ಮಾತುಳುಹಿಕೊಳ್ಳಲ್ಕೆ ಸತ್ಯವಂತ್ಹರಿಶ್ಚಂದ್ರ ನೀತಿಯಿಂ ತಾ ಕಾಯ್ದ ಸುಡುಗಾಡವ 1 ವಾಮನಮೂರುತಿಗೆ ಭೂಮಿ ಮೂರಡಿಯಂ ಭೂಮಿಪ ಬಲಿಚಕ್ರಿ ಪ್ರೇಮದಿಂದಿತ್ತಿರಲು ಸ್ವಾಮಿ ತಾಂ ಪರಿಕಿಸಲಿ ಭೂಮಿ ಈರಡಿಗೈಯೆ ಸ್ವಾಮಿ ಮಿಕ್ಕಾದಡಿಗೆ ಪ್ರೇಮದಿತ್ತ ಶಿರವ 2 ನಾರಿಗೆ ಪಿತನ್ವೊಚನ ಮೀರಲಾಗದುಯೆನುತ ನಾರಿಅನುಜರಿಂದ್ವಿಪಿನ ಸೇರಿದೆಯೊ ಶ್ರೀರಾಮ ಆರುಳಿಯ ಬಲ್ಲರೈ ಮೀರಿ ನಿಮ್ಮಾಜ್ಞೆಯನು ಭೂರಿ ಕರುಣದಿ ನೀನೆ ಪಾರುಮಾಡೆನ್ನ 3
--------------
ರಾಮದಾಸರು
ಜ್ಞಾನಿಯ ಕಾಣಲು ಧಗದಲ್ಯನಾಗುವ ಶಾಸ್ತ್ರಿಜ್ಞಾನಿಗಳು ಶಾಸ್ತ್ರಿಗೇನ ಮಾಡಿದರೋಏನಾದರೂ ಪೂರ್ವದ್ವೇಷವಿತ್ತಾದರೂತಾನು ನಿಂದಿಸಿ ಕುಲಸಹ ಕೆಡಿಸುವನು ಶಾಸ್ತ್ರಿ ಪ ದನವ ಕಾಣುವ ವದನವರಿಹುತಲಿಹದನವ ಕಾಯ್ದವಗಿಂತ ಅತ್ತಿತ್ತ ಕಡೆ ಶಾಸ್ತ್ರಿಘನ ವೇದಾಂತವನೋದಿ ಜ್ಞಾನಿಗಳ ನರರೆಂಬಎನಿತುಗರ್ವ ಅಹಮ್ಮಲಿ ತನ್ನ ತಿಳಿಯ ಶಾಸ್ತ್ರಿ 1 ಓದೋದು ವೇದಾಂತ ಓದುವನಾರೆಂದು ಅರಿಯಓದಿಹೆನೆಂಬ ಗರ್ವವು ತಲೆಗೆ ಹತ್ತಿಓದಿಯೇ ಅಲ್ಲಿ ಗೆದ್ದೆ, ಇಲ್ಲಿ ಗೆದ್ದೆ ನೆಂಬಅದನೊಬ್ಬನೆಲ್ಲೋ ಇರೆ ಆರಗೆದ್ದನು ಶಾಸ್ತ್ರಿ 2 ಸಾಧುಗಳಿಗೆ ವಂದಿಸಲಿಲ್ಲ ಸಾಧುಗಳ ಮನೆ ಹೋಗಲಿಲ್ಲಸಾಧುವು ಮುಂದೆ ಹಾಯಲು ಕುಳಿತು ಏಳದಲಿಹನುಸಾಧುವ ಕಂಡು ನಡೆಯೇನು ನುಡಿಯೇನು ಎಂಬಸಾಧುವ ಭಜಿಪಗೆ ಬಹಿಷ್ಕಾರೆಂದನು ಶಾಸ್ತ್ರಿ 3 ನಾನು ಅರಿಯೆ ನಿನಗೆ ಗತಿಯೇನು ಮತಿಯೇನುನಾನು ಎಲ್ಲಿಂದ ಬಂದೆ ಎಲ್ಲಿಗೆ ಹೋಗುವೆನಾನು ನನ್ಹೆಸರೇನು ಆರು ತಿಳಿಸುವರೆಂಬಜ್ಞಾನವಿಲ್ಲದೆ ಘಟಪದಿ ಮೆರೆದಿಹ ಶಾಸ್ತ್ರಿ 4 ನಾನೇ ಶ್ರೇಷ್ಠನೆಂದೂ ನಾನೇ ದೊಡ್ಡವನೆಂದೂನಾನು ಆರಿಹೆನೆಂಬ ಎಚ್ಚರವದು ಹೋಗಿತಾನಾದ ಚಿದಾನಂದರಾದ ಸತ್ಪುರುಷಏನೇನೋ ನಿಂದೆಯ ಮಾಡಿ ನರಕಕ್ಕಿಳಿಸುವ ಶಾಸ್ತ್ರಿ 5
--------------
ಚಿದಾನಂದ ಅವಧೂತರು
ಜ್ಯೇಷ್ಠಾಭಿಷೇಕ ಗೀತೆ ನೋಡಿದೆ ಜ್ಯೇಷ್ಠಾಭಿಷೇಕದುತ್ಸವವ ಸೃಷ್ಟಿಯೊಳಾಶ್ಚರ್ಯವಾ ಪ. [ಒಪ್ಪುವ] ಮಿಥುನಮಾಸದ ಶುಕ್ಲಪಕ್ಷ ಚತುರ್ದಶಿಯಲ್ಲಿ ವಿಪ್ರರು ಕೂಡಿ ಸಹ್ಯೋದ್ಭವೆಯನ್ನು ತರುವೆವೆಂದೆನುತಲೆ ವಿಪ್ರರು ಪೋದ ವಿಚಿತ್ರ[ವ] ನೋಡಿದೆ 1 ಅಂದು ಗಜೇಂದ್ರನ ತಂದು ಸಿಂಗಾರ ಮಾಡಿ ಕುಂದಣದ ಛತ್ರಿ ಚಾಮರ ಬೀಸುತ್ತ ವಿಪ್ರರು ಬರುವುದ 2 ವೇದಘೋಷಗಳಿಂದ ವಿಪ್ರರು ಕೊಡಗಳ ವಿ ನೋದದಿಂದಲೆ ಪೊತ್ತು ತಾ[ಳ] ತಮ್ಮಟೆ ಭೇರಿ ನಾನಾ ವಾದ್ಯಂಗಳ ಮುಂದೆ ರಜತದಕೊಡ ಬರುವ ವೈಭೋಗವ 3 ಕರಿ ಕೊಡವನ್ನು ಇಳಿಸಲು ಅಸಮಾನ [2ನಿ2]ರಿಗಳ ಬಿಚ್ಚಿ ಹೊಸಬಟ್ಟೆಗಳ ಹಾಸಿ ಕುಶಲದಿಂದಲೆ ಹೊಲೆದು ಪೊಸದಾಗಿ ಕಟ್ಟುವತಿಶಯ[ವ] 4 ಗರ್ಭಗೃಹವು ಗಾಯಿತ್ರಿ ಮಂಟಪವನ್ನು ಶುಭ್ರವಾಗಿಯೆ ತೊಳೆದು ಘಮಘಮಿಸುವ ದಿವ್ಯ ಪರಿಮಳ ವು ಬರುವಂಥ ಗಂಧÀವ ತಳಿದರು ಅಂದು ಆಲಯಕ್ಕೆಲ್ಲ 5 ಭಕ್ತರಿಗೆ ತೊಟ್ಟಕವಚವ ಕಳೆದು ಅಭಯ ಹಸ್ತ ಪಾದವ ನಿತ್ತು ಕಸ್ತೂರಿ ಕಮ್ಮೆಣ್ಣೆ ಒತ್ತಿ ಸಂಭ್ರಮದಿಂದ ಮಿತ್ರಸಹಿತ ನಿಂದ ಭಕ್ತವತ್ಸಲ ರಂಗ 6 ಛಂದದಿ ಇಕ್ಷುರಸವು ಚೂತ ಕದಲಿ ರಸಂಗಳು ದಧಿ ತಿಂತ್ರಿಣಿ ನಿಂಬೆರಸ ಕ್ಷೀರ ಘೃತಗಳಿಂದ ಆ ನಂದದಿ ಯೆರೆದರು ಇಂದಿರೆರಮಣಗೆ 7 ಕೇಸರಿ ಪುನಗಿನ ತೈಲವನೆ ತೆಗೆದು ವಾಸುಕಿಶಯನಗೆ ಲೇಪವನು ಮಾಡಿ ಸ ಹಸ್ರಕೊಡದ ಅಭಿಷೇಕವ ಮಾಡಿದರು 8 ಪಟ್ಟುಪೀತಾಂಬರವನುಟ್ಟು ಶ್ರೀರಂಗನು ಕಳೆದ ಕವಚ ತೊಟ್ಟು ಹತ್ತುಸಾವಿರಸೇರಿನ ಅಕ್ಕಿ ಅನ್ನವ ನಿಟ್ಟು ವಿಪ್ರರು ಸುರಿದರು ವಿಸ್ತಾರವಾಗಿಯೆ9 ದಧಿ ಕದಳಿ ಫಲದಿಂದ ನೈ [ವೃಂದಕ್ಕೆ] ಕರೆಕರೆದು ಕೊಡುವ ಪರಿಯ ನಾ 10 ರಂಗನಾಯಕಿ ಪಟ್ಟದರಸಿ [ವೆರಸಿ]ನರಹರಿ ಚಕ್ರಮೂರುತಿಗೆ ಆಗ ಕಲ್ಪೋಕ್ತದಿಂದಭಿಷೇಕವ ಮಾಡೆ ಕರ್ಪೂರ ತೈಲವ [ಲೇ ಸಾಗಿ]ಹಚ್ಚಿ ಮಲಗಿದ ವೆಂಕಟರಂಗ[ನ] 11
--------------
ಯದುಗಿರಿಯಮ್ಮ
ತಗಲಿ ತಗಲದೆ ಈ ಜಗದೊಳು ಜೀವಿಸೊ ಕಮಲ ಪತ್ರದಲ್ಲಿಹ ಜಲದ ಕಣಗಳಂತೆ ಪ ತಗಲುತ ನಿರತ ಸುಖವನೀವ ಕರ್ಮಕ್ಕೆ ತಗಲದೆ ಭವದಲಿ ಬಿಗಿವ ವಿಷಯಗಳಿಗೆ ಅ.ಪ ಪರಿಪರಿ ಕ್ಷಣಿಕ ಸುಖದ ಮೋಹದೊಳತಿ ದುರಿತಗಳಿಗೆಳೆವ ದುರುಳರ ಅಗಲೆಲೋ ಹರಿದಾಸರ ಸಹವಾಸಕ್ಕೆ ತಗಲುತ್ತ ಹರಿಗುಣ ಪೊಗಳುವ ಪರಮ ಸುಖವ ಬಯಸೊ 1 ಸತಿ ಸುತರೆಲ್ಲ ಶ್ರೀಪತಿಯ ಸೇವೆಯೊಳತಿ ಹಿತ ತೋರಲು ಅವರೊಳಾಮತಿಯನು ತಗಲಿಸೊ ಕ್ಷಿತಿಯೊಳವರು ನಿನ್ನ ಭೋಗವಸ್ತುಗಳೆಂದು ಮಿತಿ ಮೀರಿರುವ ಮಮತೆಗೆ ತಗಲದಿರೊ 2 ದುರ್ಮಾರ್ಗದೊಳು ದುಷ್ಟಕರ್ಮಗಳನೆ ಮಾಡಿ ಹೆಮ್ಮೆಯಿಂದಲಿ ಪಾಪ ಫಲಗಳ ಬಯಸದೆ ಧರ್ಮದಿ ಸುಖಗಳನನುಭವಿಸುವುದಕೆ ಸಮ್ಮತಿ ಈ ಯುವ ನಮ್ಮ ಪ್ರಸನ್ನನು 3
--------------
ವಿದ್ಯಾಪ್ರಸನ್ನತೀರ್ಥರು