ಒಟ್ಟು 1544 ಕಡೆಗಳಲ್ಲಿ , 89 ದಾಸರು , 867 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೂಸು ಕಂಡೆವಮ್ಮ-ಅಮ್ಮ ನಿಮ್ಮ-ಕೂಸು ಕಂಡೆವಮ್ಮ ಪಕಾಸಿಗೆ ವೀಸದ ಬಡ್ಡಿ ಗಳಿಸಿಕೊಂಡು |ಶೇಷಗಿರಿಯ ಮೇಲೆ ವಾಸವಾಗಿಪ್ಪನೆ 1ವಂಚಿಸಿ ಬಲೆಯೊಳ್ ಪ್ರಪಂಚವೆಲ್ಲ ಸೆಳೆದು |ಕಂಚಿ ಪಟ್ಟಣದಿ ಮಿಂಚಾಗಿಪ್ಪನೆ 2ಗುಡ್ಡ ಬೆರಳಲ್ಲೆತ್ತಿ ದೊಡ್ಡಿ ಗೋಗಳ ಕಾಯ್ದ |ಒಡ್ಡಿಜಗನ್ನಾಥ ಗಿಡ್ಡಾಗಿಪ್ಪನೆ3ದುಡುಕು ಮಾಡಿ ಹಾಲು ಮಡಕೆಗಳನ್ನೊಡೆದು |ಹಡಗನೇರಿ ಬಂದು ಉಡುಪಿಯಲಿಪ್ಪನೆ 4ಮಂಗಳರೇಖೆ ಪದಂಗಳುಳ್ಳ ನಿಮ್ಮ |ರಂಗ ಪುರಂದರವಿಠಲ ಶ್ರೀ ಕೃಷ್ಣ 5
--------------
ಪುರಂದರದಾಸರು
ಕೃಷ್ಣ ನಿನ್ನಂಥ ಕೂಸೆಲ್ಲಿ ಕಾಣೆ ಜಗದಿ ಹೊರಗೆದೃಷ್ಟಿ ತಾಕೀತು ಹೋಗಬೇಡೆಂದು ಎಷ್ಟು ಹೇಳಲಿ ಮಗನೆ ಪ.ಗೊಲ್ಲತೀರೆಳೆ ಮಕ್ಕಳ ಗುಣವ ನೋಡಬಾರದೊಹೊಲ್ಲತನ ಬೇಡ ಮನೆ ಹೊಂದಿರೊ ಅಯ್ಯಫುಲ್ಲಲೋಚನ ನೀಯೆನ್ನ ಪ್ರಾಣದ ಪದಕವಯ್ಯಪಳ್ಳಿಯ ಗೋಪರೈದಾರೆ ಪುಟ್ಟ ನಿನ್ನ್ಯೆತ್ತ ನೋಡಲೊ 1ತರಳರಂಗಿ ಕುಲಾಯವ ತೊಟ್ಟು ನಿಂತಿಹರು ಕಂಡ್ಯಹಿರಿಯ ಗುಮ್ಮಗಂಜುವೆ ಹೆದರಿ ಕಂಡ್ಯಬರಿಮೈಯಾ ಬಿಸಿಲೊಳು ಬಾಡಿತೊ ಮಂಗಳ ಮುಖಬರಿದೆ ಬೊವ್ವ ಕಚ್ಚದೇನೊ ಬೆಟ್ಟದ ಭಾಗ್ಯನಿಧಿಯ 2ಕಂದ ಬರಲೆಂದುಣದೆ ಕುಳಿತಿಹನೊ ನಿಮ್ಮಯ್ಯಹೊಂದಳಿಗೆ ಪಾಯಸ ಹಸನಾಗಿದೆಅಂದದಿ ಸಕ್ಕರೆ ತುಪ್ಪ ಅನುಗೂಡಿಸುಣಿಸುವೆತಂದೆ ಪ್ರಸನ್ನವೆಂಕಟ ನಿನಗೆ ಹಸಿವೆ ಮರೆದೆಯೊ 3
--------------
ಪ್ರಸನ್ನವೆಂಕಟದಾಸರು
ಕೃಷ್ಣ ನಿಮ್ಮೆಲ್ಲರ ಬಿಟ್ಟನೆಒಬ್ಬ ಶ್ರೇಷ್ಠ ನಾರಿಯಮೇಲೆ ಮನಸಿಟ್ಟನೆ ಪ.ಸತ್ಯ ಸುಶೀಲಳು ಅವಳಮ್ಮಜನಕೆ ತತ್ವ ಬೋಧಿಸುವಳು ಇವಳಮ್ಮ 1ಕಾಂತೆ ಕೋಮಲ ಹೃದಯದವಳಮ್ಮಬುದ್ಧಿ ಭ್ರಾಂತಿ ಗೈಸುವವಳಿವಳಮ್ಮ 2ತಪ್ಪದೆ ಸಲಹುವಳವಳಮ್ಮಜನಕೆ ಒಪ್ಪುವ ಗುಣವ ತೋರುವಳಿವಳಮ್ಮ 3ಶ್ರೀಶನ ಬಿಡದಿಹಳವಳಮ್ಮಅತಿ ಮೋಸಗಾರುತಿಯು ಇವಳಮ್ಮ 4ಉತ್ತಮಳು ರಮಾ ಅವಳಮ್ಮಅತಿ ಕೀರ್ತಿಯ ಪಡೆದಿಹಳಿವಳಮ್ಮ 5
--------------
ಗಲಗಲಿಅವ್ವನವರು
ಕೇಳೆ ಯಶೋದೆ ನಿನ್ನ ಬಾಲಕನಾಟಗಳೂ |ಹೇಳಿಕೊಂಡರೆ ಸುಳ್ಳೇ ಕಾಣಿಸಿತಮ್ಮ ಪನೀರೊಳಾಡುವನಲ್ಲೆ, ಪೋರರ ಕೂಡಿಕೊಂಡು |ಮಾರಿಯೆಂಬೊದೇನು ಸಾರಿ ಬಾಹೊದೆ 1ಎಲ್ಲರಂತುಂಡು ಮನೆಯಲ್ಲಾಡಬಾರದೆ |ಕಲ್ಲೆತ್ತುವನೆ ಯಂಥ ಬಲ್ಲಿದನಂತೆ 2ನಿಮ್ಮ ಹಿತಾರ್ಥನಾಗಿ ಸಮ್ಮೀಸಿ ಪೇಳಿದರೆ |ಬೊಮ್ಮನ ಮಗನಂತೆ ನಮ್ಮನ್ನೇ ಬೈವ 3ಮೂರು ಕಣ್ಣವಪರನಾರೇರ ಮುಟ್ಟಲಾರ |ಊರೊಳಗಿವ ಬಲು ಮೀರಿದನಮ್ಮ 4ಸಣ್ಣವನೆನಬೇಡ ನಿನ್ನ ಮಗನಗೋಪಿ|ಅನ್ನಿಥವಾಡೆವೆಮ್ಮ ಚಿನ್ನಗಳಾಣೆ 5ಬೆಂಕಿಗಂಜದೆ ನಿರಾತಂಕದರೊಳಗಿಹ |ಮಂಕುತನವ ನೋಡೆ ಪಂಕಜನೇತ್ರೆ6ಇನ್ನೊಂದು ಮಾತು ಕೇಳೆ ಮೊನ್ನೆ ಮೊನ್ನೆ ಒಬ್ಬ |ಹೆಣ್ಣಿನ ಕೊಂದನಲ್ಲೆ ಅನ್ಯಾಯ ನೋಡೆ 7ಕಿತ್ತಿದನೊಂದು ಮರ ಮತ್ತೆರಡು ಮೂರೀದ |ಮತ್ತಗಜವ ಕೊಂದುನ್ಮತ್ತನ ನೋಡೆ 8ಸದ್ಯ ಹೋಗಲೀನಿತು ಇದ್ದೊಬ್ಬವನು | ಅಪ್ರ-ಬುದ್ಧನಾಗಬಾರದು ಬುದ್ಧಿಯ ಹೇಳೇ 9ಅಧಮರೊಡನೆನಿತ್ಯಕದನಮಾಡುವದೇಕೆ |ಮಧುಸೂದನನ್ನು ಒಳ್ಳೆ ಹದನದಲ್ಲೀಡೆ 10ಕಾಣ ಬಂದದ್ದಾಡಲು ಪ್ರಾಣೇಶ ವಿಠಲಗೆ |ಹೀನ ತೋರುವದಮ್ಮಾ ಏನನ್ನಬೇಕೆ 11
--------------
ಪ್ರಾಣೇಶದಾಸರು
ಗುರುಸಾಕಿದ ಗೂಳಿ ಭರದಿಂದ ಬರುತಿದೆ | ಸರಿಸಿಹೋಗಲಿ ಬೇಡಿ ದುರ್ಜನರೇ || ಸರಿಸಿ ಹೋದರೆನಿಮ್ಮ ಬರು ಹೋಗುವ ಹಾದಿ |ತೆರ್ರನೆ ನಿಲ್ಲಿಸುವದು ತಿಳಿದು ನೋಡಿಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಆರು ಕೋಣಗಳನ್ನುಅರಿದುಮುಂದಡಿ ಮಾಡಿ | ಆರೆರ-ಡಾನೆಯ ಅವಚಿಕೊಂಡು | ಕೋರೆತ್ತಿಕೊಂಡು ತಾ ಕೋಪದಿಬರುವಾಗ | ಮೂರು ಮನಿಯ ದಾಟಿ ಮುಂಡಾಯಿತೊ1ಇಬ್ಬರನೊಗೆದು ಒಬ್ಬನ ಕೂಡಾ ಪೋದೀತು |ಅಬ್ಬರಿಸುತಲಾದ ಆನಂದದಿ | ಕಬ್ಬು ಬಿಟ್ಟು ಕಬ್ಬಿಣವಮೆದ್ದು ದಿಬ್ಬಿ ಗೂಡದಲಿಂದಲುಬ್ಬುತದೆ2ಮೋರೆತ್ತಿಕೊಂಡು ಮುಂದಾಡು ಮುಂದಾಡುವ ಸರ್ಪಗೆ |ಮುದ್ದು ಇಕ್ಕುತ ಬಂದು ನಿಲ್ಲುವದು | ಆರು ನೆಲೆಯೆತ್ತಿನೀರು ಕುಡಿದು ಗೊತ್ತು ಸೇರಿತಲ್ಲಿ ಪುರಿವಾಸನಲ್ಲಿ3
--------------
ಜಕ್ಕಪ್ಪಯ್ಯನವರು
ಗೋಪಿಹೇಳೆ ರಂಗಗೆ ಬುದ್ಧಿ ಪಗೋಪಿಹೇಳೆ ರಂಗಯ್ಯಗೆ ಬುದ್ಧಿ ಪುರದೊಳು |ರಾಪು ಮಾಡುವದು ವೆಗ್ಗಳವಮ್ಮ ಅ.ಪ.ಪೋರರ ಒಡಗೂಡಿ ಬಂದು ಎಲ್ಲರು ನೋಡಸೀರೆಯಸೆರಗುಪಿಡಿವರೇನೇ ||ಜಾರೆ ಹೆಂಗಳೆರಾದರೊಳ್ಳತು ತಾಂ ತಡವಲುಈ ರೀತಿಯೆ ಪತಿಯಿದ್ದವರ ಕೂಡ 1ಹಿರಿಯಣ್ಣಗಿಟ್ಟಿದ್ದ ಮೀಸಲ ತುಪ್ಪವಸುರಿದು ಗಡಿಗೆ ವಡದೋಡಿದ |ಗೋಪಿ||ಥರವೆ ನಿಮ್ಮಮ್ಮನಲ್ಲಿಗೆ ಬಾರೋ ಎಂದರೆಸೆರಗ ಕೊಸರಿಮಾನಕೊಂಬನೆ | ಗೋಪಿ 2ಕತ್ತಲೊಳಗೆ ಮಕ್ಕಳಂತೆ ಸಣ್ಣವನಾಗಿಹತ್ತಿಲಿ ಬಂದೊರಗುವನಮ್ಮ |ಗೋಪಿ||ಇತ್ತತ್ತ ಬಾ ಕಂದಯೆಂದಪ್ಪಿಕೊಳಲವಕೃತ್ಯವ ಮಾಡಿ ಓಡುವನಮ್ಮ | ಗೋಪಿ 3ಆಕಳ ಮೊಲೆಯುಂಡು ತರುವಾಯ ಕರುಬಿಟ್ಟುತಾ ಕೂಗುವನೆ ಕರಕೊಳಿರೆಂದು |ಗೋಪಿ||ಗೋಕುಲದೊಳು ಬಹು ದಿವಸವಾಯಿತು ದುಡ್ಡುತೂಕ ಕ್ಷೀರವಮಾರಕಾಣೆವೇ | ಗೋಪಿ 4ಬಚ್ಚಲೊಳಗೆ ಪ್ರಾಯದವಳು ಕುಳಿತು ಎಣ್ಣೆಹಚ್ಚಿಕೊಂಡೆರಕೊಳ್ಳುತಿದ್ದೆವೆ |ಗೋಪಿ||ಎಚ್ಚರಿಸದೆ ಬಂದು ಎದುರಿಗೆ ನಿಲ್ಲುವಹುಚ್ಚನೆ ಬಹು ಜಾಲಗಾರನು | ಗೋಪಿ 5ಪುರುಷಗೆ ಸಂಶಯ ನಮ್ಮ ಮನೆಗೆ ಕೃಷ್ಣಬರುವನೆಂಬು ಮಜ್ಜನಕೆ ಜಲ |ಗೋಪಿ||ಬೆರಸಿಟ್ಟರೆಲ್ಲವು ಚೆಲ್ಲಿ ಪೋಗುವಗಂಡಕರೆಕರೆಮಾಡುವ ಪರಿಪರಿ | ಗೋಪಿ 6ಪೋಗಲಿನಿತೂ ಮುಂದೆ ಪ್ರಾಣೇಶ ವಿಠಲಗೆಹೀಗಿರುಯೆಂದು ನೀ ಪೇಳಮ್ಮಾ |ಗೋಪಿ||ಈಗುಸುರಿದ ಮಾತು ಸರಿಬಾರದಿದ್ದರೆಸಾಗಿರೆಂದಪ್ಪಣೆ ಕೊಡಿರೆಮ್ಮ | ಗೋಪಿ 7
--------------
ಪ್ರಾಣೇಶದಾಸರು
ಚಂಡಳಹುದೋ ನೀನುಕದನಪ್ರಚಂಡಳಹುದೋ ನೀನುದಿಂಡೆಯರನ್ನು ಖಂಡಿಸಿ ತುಂಡಿಪಚಂಡವಿಕ್ರಮಮಾರ್ತಾಂಡಮಂಡಿತ ದೇವಿಪಭುಗು ಭುಗು ಭುಗಿಲೆಂದು ಮಧು ಕೈಟಭೆಂಬುವರುನೆಗೆ ನೆಗೆ ನೆಗೆಯುತ ರಣಕೆ ಬರಲು ಪೋಗಿಜಿಗಿ ಜಿಗಿ ಜಿಗಿದವರ ನೀನು ಯುದ್ಧವ ಮಾಡಿನೆಗೆದುರೆ ಖಡ್ಗವನು ಝಡಿದು ಧಗ ಧಗಧಗಿಸುವ ಚಕ್ರವನು ಇಡಲು ಶಿರವುಜಿಗಿಯೆ ಚರ್ಮವ ಸೀಳಿ ಮಾಡಿದೆ ಭೂಮಿಯ ನೀನು1ಛಟ ಛಟಾಕೃತಿಯಿಂದ ಮಹಿಷಾಸುರನ ಬಲನಟ ನಟ ನಟಿಸುತ ಪಟು ಭಟರಿದಿರಾಂತುಘಟಿಸಿ ರಣಕೆ ಬರಲು ಫಲ್ಗಳ ಕಟಕಟನೆ ಕಡಿದು ನಿಲ್ಲಲು ಅಸುರ ಬಲಸೆಟೆದು ಹಿಂದಾಗುತಲಿರಲು ಸುರಕಟಕನಿಮ್ಮನ್ನು ಹೊಗಳಿ ಕೊಂಡಾಡಲು2ಘುಡು ಘುಡು ಘುಡಿಸುತ್ತ ಮಹಿಷಾಸುರನು ಬರೆದಢ ದಢನೆ ಪೋಗಿ ಹೊಡೆದು ನಿನ್ನಯಪಾದದಡಿಯೊಳವನ ಕೆಡಹಿ ಚದುರ ಬೀಳೆ-ಕಡಿದು ಕಂಡವ ಕೊಡಹಿ ನಿಲ್ಲಲು ಸುರರೊಡೆಯ ನೆಲ್ಲರ ನೆರಹಿನಿಲ್ಲಲು ನೀನುಬಿಡದೆ ಅಭಯವಿತ್ತು ಹರುಷದಿ ವಾರಾಹಿ3ಶುಂಭನಿಶುಂಭರೆಂಬ ರಾಕ್ಷಸರುಪಟಳಅಂಬುಜಾಂಡಕೆ ರಂಭಾಟವದು ಹೆಚ್ಚೆಜಂಭಾರಿದಿವಿಜರೆಲ್ಲ ನಿಲ್ಲದೆ ದೂರಬೆಂಬಿಡದ್ಹೇಳಲೆಲ್ಲ ಕೇಳಿಯೆ ಉ-ಗ್ರಾಂಬಕಳಾಗಿ ನಿಲ್ಲೆ ಅಸುರ ಕಾದಂಬ ನಿನ್ನನುಕಂಡು ಬೆದರಿ ವೋಡಿದರೆಲ್ಲ4ಆರು ನೀನೆಂದು ಶುಂಭನ ದೂತ ವಿಚಾರಿಸೆ ಕೇಳಿಯೆ ಎಮ್ಮರಸನಿಗೆನಾರಿ ನೀ ಸತಿಯಳಾಗು ಜಾಗತ್ಯಕ್ಕೆವೀರ ಶುಂಭನ ಸೊಬಗು ಬಣ್ಣಿಸುವೊಡೆಮೂರು ಲೋಕಕೆ ಹೊರಗು ಬಾ ಎನೆ ನೀನುಚೋರಗುತ್ತರ ವಿತ್ತೆ ಹೇಳ್ವೆನೇನದ ಬೆರಗು5ಕೇಳು ಶುಂಭನ ದೂತ ಖೇಳ ಮೇಳದಿ ನಾನುಕೀಳು ಸಪ್ತದಿಯಾಡ್ದೆ ಈರೇಳು ಲೋಕದಲಿತೋಳು ಸತ್ವವು ಬಲಿದು ಸಮರದಲಿಸೋಲಿಸೆನ್ನನು ಪಿಡಿದು ಒಯ್ಯಲು ಅವರಾಳು ಆಗಿಯೆ ನಡೆದು ಬಹೆನು ಪೋಗಿಖೂಳರ ಕರೆದು ತಾ ರಣಕೆಂದು ನುಡಿದು6ಅಂಬವಚನವಶುಂಭಕೇಳಿಸುಗ್ರೀವನೆಂಬ ನಿಶಾಚರ ಶುಂಭನಲ್ಲಿಗೆ ಪೋಗಿಶಾಂಭವಿಯಾಡಿದುದ ಶಬ್ದವ ಕೇಳ-ಲಂಬುದಿಯ ನೀಂಟುವುದ ವಡಬಾನಳ-ನೆಂಬವೋಲ್ ಕೋಪವ ತಾಳ್ದು ಬರಲು ಸರ್ವಸಂಭ್ರಮದಲಿ ನೋಡಿ ಎದ್ದು ನೀ ನಿಂದುದನು7ಸರಸರನೆ ಶುಂಭಾಸುರನ ಬಲ ಬರೆ ಕಂಡುಗರಗರನೆ ಹಲ್ಲ ಕೊರೆದು ಅವನ ದಂಡಸರಕುಗೊಳ್ಳದೆ ಛೇದಿಸಿ ಸುಭಟವೀರರಿರವನೆಲ್ಲಾ ಶೋಧಿಸಿಶುಂಭನಿಶುಂಭರಶೋಣಿತಕಾರಿಸಿ ಸುರರಿಗಿತ್ತೆಸ್ಥಿರವಪ್ಪ ಸೌಭಾಗ್ಯದವರ ನೀ ಪಾಲಿಸಿದೆ8ದುಷ್ಟ ಜನರೆಲ್ಲ ಸುಟ್ಟು ಭಸ್ಮಮಾಡಿಶಿಷ್ಟ ಜನರ ಪ್ರಾಣಗುಟ್ಟು ನೀನೆಂತೆಂಬರನಟ್ಟಿ ದಟ್ಟಿಸಿದೆ ಪರಾಂಬ ಭಕ್ತರ ಅ-ಭೀಷ್ಟ ಪಾಲಿಪ ಜಗದಾಂಬ ದುರ್ಜನರಘ-ರಟ್ಟಳಹುದೇ ತ್ರಿಪುರಾಂಬ ರಕ್ಷಿಸು ಎನ್ನಶಿಷ್ಟ ಚಿದಾನಂದಅವಧೂತಬಗಳಾಂಬ9
--------------
ಚಿದಾನಂದ ಅವಧೂತರು
ಚಿತ್ತಿಟ್ಟು ನಮಿಸುವೆ ನಿಮ್ಮ ಮೂಲಚೈತ್ಯದಲಿಹ ಚೆನ್ನಿಗ ಬಲ ಹನುಮ ಪ.ಮೊದಲೆ ರಾಮರ ಭಟನಾಗಿ ಅಂದುಪದ್ಮದೇವಿಯ ಚರಣಕೆ ತಲೆಬಾಗಿಮುದದಿ ಮುದ್ರಿಕೆಯ ನೀ ಕೊಟ್ಟೆ ಬಲುಮದ ಸೊಕ್ಕಿದಸುರನ ಪುರವನೆ ಸುಟ್ಟೆಚೂಡಾಮಣಿಯ ತಂದಿಟ್ಟೆ ಬಲು ಹರುಷವ ಕೊಟ್ಟೆ 1ಕೊಬ್ಬಿದ ಕುರುಪತಿ ಬಲದಿ ಪೊಕ್ಕುಬೊಬ್ಬೆಯನಿರಿದು ಶೂರರ ಶಿರ ಹರಿದೆಆರ್ಭಟವನು ತೋರಿದೆ ಬಲುದುರ್ಬುದ್ಧ್ಯ ದುಶ್ಯಾಸನನ್ನೋಡಲ್ಬಗಿದೆ ಖಳರ ಹÀಲ್ಲುಮುರಿದೆಮಪುರಕೆ ಕಳುಹಿದೆ 2ಪರಮಪುರುಷ ಹರಿಯೆಂದು ಮಿಕ್ಕಸುರರುಈತನ ದಾಸಾಂಕಿತರಹುದೆಂದುಅರುಹಿದೆಶ್ರುತಿಇತಿಹಾಸಅಹಿಗಿರಿಯ ಪ್ರಸನ್ವೆಂಕಟೇಶನ ದಾಸ ತುಂಗಾತೀರವಾಸನೆ ಸಲಹೊ ಮುಖ್ಯೇಶ 3
--------------
ಪ್ರಸನ್ನವೆಂಕಟದಾಸರು
ಜಯದೇವ ಜಯದೇವ ಜಯ ವೆಂಕಟೇಶ |ಭಯಕೃದ್ಭಯನಾಶನ ಶೇಷಾಚಲವಾಸ ||ಜಯ||ಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಕಲಿಯುಗದಲಿ ಪ್ರತ್ಯಕ್ಷ ಭೂವೈಕುಂಠೆನಿಸಿ |ಸುಲಭವು ತೋರಿದಿ ಭಕ್ತರ ಬಯಕೆ ಪೂರೈಸಿ |ನಳಿನಸಂಭವ ಜನಕ ಸನಕಾದಿ ಪೋಷೀ |ತಿಳಿಯದು ನಿಮ್ಮಯ ಮಹಿಮೆಯು ಸಚ್ಚಿತ್ಸುಖರಾಶೀ1ಹೊಳೆವ ಶಿರದಲಿ ಕಿರೀಟಮಕರಕುಂಡಲವೂ |ಎಳೆ ತುಳಸಿ ವನಮಾಲಿ ಕೊರಳಲಿ ಶೋಭಿತವೂ |ಶ್ರೀವತ್ಸಕೌಸ್ತುಭಮಣಿರತ್ನದ ಜಡವೂ |ಥಳ ಥಳಿಪ ತೇಜಾ ಅಂಜನೀ ತನಯಾ2ಮತ್ಸ್ಯಕೂರ್ಮವರಾಹನರಹರಿ ವಾಮನನೆ |ತುಚ್ಛಮಾಡಿದಿ ಯಮಪುರ ರಾಮ ರಾಘವನೆವತ್ಸಾ ಶಿರಿ ಶಂಕರ ಆತ್ಮಜನೆ || ಜಯ3
--------------
ಜಕ್ಕಪ್ಪಯ್ಯನವರು
ಜಲಧಿತಕ್ಕದೊ ನಿನ್ನಳಿಯಗೂ ನಿನಗೂ |ಹಲವು ಬಗೆಯಿಂದಲಿ ಪರೀಕ್ಷಿಯನು ಮಾಡಿದರೆ ಪಮೊದಲೆ ತಿಳದಷ್ಟು ನಿನ್ನ ಮಹತ್ಮಿ ವರ್ಣಿಸುವೆ |ತುದಿಗಂಡು ಬಲ್ಲೆನೇ ಅಧಮ ನಾನೂ ||ಎದುರಿಗಂಬುವದಾಡಿಕೊಂಡ ಬಗೆ ಬ್ಯಾರೆಲ್ಲೀ |ಮುದದಿಂದ ದಯಮಾಡಿ ಕೇಳೊ ರತ್ನಾಕರನೇ 1ನಿನ್ನಿಂದ ಹುಟ್ಟಿಹುದು ವಿಷವು, ಗುರುವಿನ ಪತ್ನಿ |ಯನ್ನು ಸ್ವೀಕರಿಸಿದನು ನಿನ್ನ ಮಗನೂ ||ಘನ್ನತರ ಮಕರಾದಿಗಳು ನಿನ್ನ ಪರಿವಾರ |ಇನ್ನೆಷ್ಟು ಪೇಳಲಿ ಚರಿತ್ರ ಪಾರಾವಾರ 2ನಿನ ಒಡಲಿಗೆಷ್ಟಾದರನ್ನ ಸಾಕೆನಿಸದೂ |ದಣಿದು ಬಂದವರಿಗಾಶ್ರಯವು ಕಾಣೇ ||ಉಣಲಿಕ್ಕೆ ಅನ್ನೆಂಬದೆಂಟನೆ ರಸದಂತೆ |ಘನಖ್ಯಾತಿ ದೂರದಲಿ ಬಳಿಗೆ ಬರಲಿಂತಿಹದು 3ಪ್ರೀತಿಯಂ ಬಂದವರು, ಗ್ರಹಣ ವೈಧೃತಿ ವೇತೀ |ಪಾತದಲಿ ನಿನ ದರುಶನಾಗಬೇಕೂ ||ಭೂತ ಬಡದವರಂತೆ ನಿನ್ನ ಕಲ್ಲುಗಳಿಂದ |ಘಾತಿಸಲಿ ಬೇಕು ನೋಡಲ್ಕೆ ಬಹು ಸೋಜಿಗವು 4ತುಳಿದದಕೆ ಹಿಗ್ಗಿದಿಯೋ ಬಹುಮಾನಿ ನೀನೆಲವೊ |ಲಲನಿ ಹಡದೇಳು ಶಿಶುಗಳ ಕೊಂದಳೂ ||ಬಲುಭಂಟಹಿರಿಯಮಗಗರಸುತನ ಕೊಡಲಿಲ್ಲ |ಇಳಿಯೊಳಗೆ ನೀ ಮಾಡಿದನ್ನ್ಯಾಯಕೆಣಿಯುಂಟೆ 5ಸತಿಸಂಗ ಬಿಡಲೊಲ್ಲಿ ಪರ್ವಕಾಲಗಳಲ್ಲಿ |ಸುತಗೆ ಕಡಿಮೆದರಿಂದೆ ಆದಿ ಹ್ಯಾಗೊ ||ಪತಿವ್ರತಾ ಮಗಳಾದಳೊಂದೆ ಸುಗುಣದರಿಂದೆ |ಕ್ಷಿತಿಯೊಳನವರತ ಪೂಜಿಸಿಕೊಂಬಿ ಜನರಿಂದ 6ಜಾಮಾತನಿಗೆ ಇಹವು ಮುಖವು ಹತ್ತೊಂಬತ್ತು |ಆ ಮಧ್ಯ ಗಜಲಪನದಂತೆ ಒಂದೂ ||ಭೂಮಿಯೊಳಗಾಶ್ಚರ್ಯ ತಾನೆ ಮಕ್ಕಳ ಪಡೆವ |ಈ ಮಗಳು ಬಹುಸುಖವ ಬಡುವಳಿವನಿಂದಲ್ಲಿ 7ಬೆರಳು ಚೀಪುವನೋಡುಸುಳ್ಳಲ್ಲ ದಾನ |ಪುರುಷ ಬದುಕುವ ಚೋರತನದಿ ಜಾರಾ ||ತರುಣಿಯಾಗಿದ್ದ ನಿನ ಬಳಿಯಲ್ಲಿ ನೀ ಬಲ್ಲಿ |ತುರುಗಾಟವ ಕೊಡಲಿ ಕೊಂಡಡವಿಯೊಳಗಿರುವ 8ಗುರುಸ್ವಾಮಿ ಪಿತ ಬ್ರಹ್ಮ ವಂಶದ್ರೋಹಿಗಳವನ |ಪರಿವಾರ ಮಕ್ಕಳಿಗೆ ಮಾವನಾದಾ ||ಉರುಗ ಶಯನಂಡಜಾಧಿಪ ವಹನ ನೀಲಾಂಗ |ಅರಿತನೃಪಋಷಿಗಳೊಳಗೊಬ್ಬರಿಗ್ಯು ಮಗನಲ್ಲ 9ಕುಲಸೂತ್ರವಿಲ್ಲ ಒಂದೇ ರೂಪನಲ್ಲ ನಿ- |ಶ್ಚಲನಲ್ಲ ವತಿ ಕಠಿಣ ವಕ್ರವದನಾ ||ಬಲು ಕೋಪಿ ತಿರದುಂಬ ಸ್ತ್ರೀಯರಿಬ್ಬರ ಕೊಂದ |ಅಲವಜಾರನು, ಬತ್ತಲಿರುವ, ಕಲಹಕೆ ಪ್ರೀಯ 10ಕೊಟ್ಟೆಲ್ಲ ಅವನಿಗೀ ಕನ್ನಿಕಿಯ ಸವತಿಯರು |ಎಷ್ಟೋ ಮಲಸುತರಿಹರದಕೆ ದಶ ಮಡೀ ||ಸಿಟ್ಟಾಗ ಬ್ಯಾಡವನ ವಾರ್ತಿ ಕೇಳಲು ಜನರು |ಬಿಟ್ಟು ಸಂಸಾರವೆಂದಿಂದಿಗೊಲ್ಲದಿಹರೂ 11ನಿನ್ನ ಮಗಳವನಿತ್ತವನ ಮಗಳ ಮದಿವ್ಯಾದಿ |ಕನ್ಯ ವಿಕ್ರಯ ಪರಸ್ಪರವೆನಿಸಿತೂ ||ಇನ್ನೇಸೊ ನಿಮ್ಮ ನಿಮ್ಮಲ್ಲಿದ್ದ ನಡತಿಗಳು |ಅನ್ಯರಿದುಕೇಳಿಭಜಿಸರೊ ಶುದ್ಧ ಭಕುತಿಯಲೀ 12ಏನಾದರೇನು ಶ್ರೀ ಪ್ರಾಣೇಶ ವಿಠಲನಿಗೆ |ನೀನೆಗತಿನಿರ್ದೋಷ ವಸ್ತುವೆಂದೂ ||ಶ್ರೀನಳಿನಭವಮುಖರುನಿತ್ಯವಂದಿಸುತಿಹರೊ |ನೀನವನ ಮಾವನಾದಿನ್ನು ಪೂಜಿತನಲ್ಲೆ 13
--------------
ಪ್ರಾಣೇಶದಾಸರು
ಜ್ಞಾನವಿರಲೆನಗೆ ಜನುಮ ಜನುಮಶ್ರೀನಿವಾಸ ಸರ್ವೇಶ ನೀನೆಂಬ ಸುಜ್ಞಾನವಿರಲೆನಗೆ ಪ.ಸರ್ವಜಗದಲ್ಲಿ ನೀನೆ ವ್ಯಾಪ್ತ ಜಗವೆಲ್ಲಸರ್ವಕಾಲದಿ ನಿಮ್ಮಧೀನವೆಂಬಸರ್ವಜಡಚೇತನರ ಸೃಷ್ಟಾರ ದಾತಾರಹಂತಾ ನಿಯಂತಾ ನೀನೆ ಎಂಬಸರ್ವತ್ರಾವಿಷ್ಟ ಉತ್ಕøಷ್ಟ ನೀನೇ ಎಂಬಸರ್ವವಿಜ್ಞಾನ ವಿಜೆÕೀಯನೆಂಬಸರ್ವಜÕಗುರು ಹೃದಯಧಾಮ ಪೂರಣಕಾಮಶರ್ವೇಂದ್ರವಿಧಿವಿನುತಪ್ರಸನ್ವೆಂಕಟಕೃಷ್ಣ ನಿಮ್ಮ1*
--------------
ಪ್ರಸನ್ನವೆಂಕಟದಾಸರು
ಥಟ್ಟನೆ ನಡೆ ಗೋಕುಲಕಕ್ರೂರಅಸುರಾವೇಶವ ತಾಳು |ಕೃಷ್ಣನಕರತಾ ಈ ಬಗೆಯಿಂದಲಿಪೇಳ್ವೆ ಉಪಾಯವ ಕೇಳು ಪಮಲ್ಲರಕುವಲಯಪೀಡಾ ಪಥÀದೊಳು |ನಿಲ್ಲಿಸಿಹನು ಎನಬೇಡ ||ಬಿಲ್ಲು ಹಬ್ಬಕೆ ಕರೆಸಿಹನೆನ್ನು |ಕೊಲ್ಲುವದುಸರಲಿ ಬೇಡ1ನಿಮ್ಮಾವನು ನಿನ್ನ ಕಾಣದೆ ಬಳಲುವ- |ವಮ್ಮಿಮ್ಮೆಲ್ಲವು ಎನ್ನು ||ಸುಮ್ಮನೆ ಆಲಸ್ಯಾತಕೆ ಹೋಗುವ |ಘಮ್ಮನೆ ಬಾ ಬಾ ಎನ್ನು 2ಪುಷ್ಟಿ ಮಾಡಿ ಮಾತುಗಳಿಂ ಮೆಚ್ಚಿಸಿ |ನೆಟ್ಟನೆ ಬಹಪರಿಮಾಡು|ಬಿಟ್ಟರೆ ನಿನ್ನ ಶ್ರಮ ಬಲ್ಲನು ಪ್ರಾಣೇಶ |ವಿಠ್ಠಲನೆವೇ ನೋಡು 3
--------------
ಪ್ರಾಣೇಶದಾಸರು
ದೂತೆ ಕೇಳ ದ್ರೌಪತಿಯ ಖ್ಯಾತಿ ಕೇಳಿದ ಮನುಜರಿಗೆಪಾತಕದೂರಾಗೊದೆಂಬೋ ಮಾತು ನಿಜವಮ್ಮಪ.ಉಮಾಶಚಿ ಶಾಮಲಾ ಉಷೆ ತಮ್ಮ ಪತಿಗಳ ಬೆರೆದು ರಮಿಸೆಬೊಮ್ಮಕಂಡುಕೋಪಿಸಿ ಶಾಪ ಝಮ್ಮನೆ ಕೊಟ್ಟಾನು1ಪರಮಮದದ ಬಾಲೆಯರಿವರುಪರಪುರುಷನ ಬೆರೆಯಲ್ಯಾ ್ಹಂಗೆನರದೇಹ ಬರಲೆಂದು ಬೊಮ್ಮಗೆ ನಾಲ್ವರು ನುಡಿದರು 2ಚಂದಾಗಿ ನಾಲ್ವರ ದೇಹ ಒಂದೇ ಮಾಡಿ ತೋರೆ ಬೊಮ್ಮಗಬಂದವು ಮೂರು ನರದೇಹಗಳ ಲೊಂದಾಗಿರಲೆಂದು 3ತಪ್ಪು ನಮ್ಮದೆಂದು ಶಾಪ ಒಪ್ಪಿಕೊಂಡು ನಾಲ್ವರುಜಪಿಸಿ ಸಾವಿರ ವರುಷ ಗೌಪ್ಯದಿ ಭಾರತಿಯ 4ಬಂದು ಮೊರೆಯ ಪೊಕ್ಕವರ ಚಂದಾಗಿ ದೇಹದಲ್ಲಿಟ್ಟುಅನಂದದಿಂದ ವಿಪ್ರಕನ್ಯೆ ಎಂದು ಜನಿಸಿದಳು 5ಎಲ್ಲರಕರ್ಮಒಂದಾಗಿ ಎಲ್ಲೆಲ್ಲೆ ಭಿನ್ನ ತೋರದ್ಹಾಂಗೆಫುಲ್ಲನಾಭನ ದಯವ ಪಡೆದಳು ಅಲ್ಲೆ ಆ ಬಾಲೆ 6ಮುದ್ಗಲ ನೆಂತೆಂಬೊ ಋಷಿಯು ಬಿದ್ದು ನಕ್ಕ ಬ್ರಹ್ಮನ ಕಂಡುಮುದ್ದು ಮಗಳ ರಮಿಸಿದಾತಗೆ ಬುದ್ಧಿಯಿಲ್ಲವೆಂದು 7ತ್ವರೆಯಿಂದಬೊಮ್ಮಮುನಿಗೆ ಬೆರಿಯೆ ಭಾರತಿಯ ಕಂಡುಕರವಮುಗಿದು ಎರಗಿ ಮುನಿಯು ಮೊರೆಯ ಹೊಕ್ಕಾನು8ಮಾರುತನ ದೇಹದಲ್ಲೆ ಭಾರತಿಯು ರಮಿಸುವಾಗಹಾರಿತಯ್ಯ ಸ್ಮøತಿಯು ಸುಖವು ತೋರದು ನಮಗಿನ್ನು 9ಮಂದಗಮನೆಯರಿಂದಭಾರತಿಇಂದ್ರ ಸೇನಳಾಗಿ ಜನಿಸೆಬಂದ ಮರುತ ದೇಹದ ಮುನಿಯು ಚಂದದಿ ಮದುವ್ಯಾದ 10ಮರುತ ಅಕೆÉಯಿಂದ ರಮಿಸ ಮಾರುತದೇಹದ ಮುನಿಯು ಏನುಗುರುತು ಇಲ್ಲಧಾಂಗೆ ಆತ ಇರುತಲಿದ್ದನು 11ಬಾಲೆಯ ಸಂತೋಷ ಪಡಿಸಿ ಮೂಲರೂಪಕಂಡುವಾಯುಮ್ಯಾಲ ವನಕೆ ನಡೆದ ಮುನಿಯು ಆ ಕಾಲದಲೆಚ್ಚತ್ತು12ಇಂದ್ರಸೇನ ಬಂದು ಆಗ ಇಂದಿರೇಶನದಯವ ಪಡೆಯೆನಂದಿವಾಹನ ನಮ್ಮ ಪತಿಯ ವಂದಿಸೆಂದಾರು 13ಪತಿಯ ಬಯಸಿದ ಬಾಲೆಯರಿಗೆ ಚತುರ್ವಾಹ ನುಡಿದನು ಶಿವನುಅತಿಶಯ ರೋದನವ ಮಾಡೆ ಮಿತಿ ಇಲ್ಲದಲೆ ಅಂಜಿ 14ಮಂದಗಮನೆಯ ಧ್ವನಿಯಕೇಳಿ ಬಂದ ಇಂದ್ರ ಬಹಳದಯದಿಬಂದಿತೆನಗೆ ಇಂಥಕ್ಲೇಶಎಂದು ನುಡಿದಳು15ಬಂದು ವರವ ಬೇಡಿ ಪತಿಗಳ ಹೊಂದಿರೆಂದು ನಾಲ್ಕುಬಾರಿಬಂದಿತೆಮಗೆ ಇಂಥಕ್ಲೇಶಎಂದು ನುಡಿದಳು16ಇಂಥ ಅನ್ಯಾಯ ಯಾಕೆಂದು ನಿಂತ ಒಟುಗೆ ನುಡಿದ ಇಂದ್ರಭ್ರಾಂತ ನರನ ನಿಂದೆ ಶಚಿಯ ಕಾಂತೆಗೆ ಶಿವನು 17ನಾನು ಸೃಷ್ಟಿ ಮಾಡಿದವನು ನೀನು ಏನು ನುಡಿದ ಶಿವನುಮಾನವನಾಗೊ ಬೊಮ್ಮಗ ತಾನು ಆತಗೆ 18ಉಮಾ ಮೊದಲಾದವರಿಗೆಲ್ಲ ತಮ್ಮ ಪತಿಗಳ ಹೊಂದಿರೆಂದಉಮಾ ನಿಮ್ಮ ಬೆರಿಯ ಬ್ಯಾಡ ಸುಮ್ಮನೆ ಹೋಗೆಂದ 19ಎತ್ತು ಗಿರಿಯ ಕೆಳಗ ಇದ್ದ ಮತ್ತÀ ನಾಲ್ವರ ನೋಡೆಸತ್ತ ಎಂದು ತಿಳಿಯೋ ನಿನ್ನ ಚಿತ್ತಕತಾ ಎಂದು 20ಕೇಳಿದ ಬೊಮ್ಮನ ನುಡಿಯು ತಾಳಿದ ಬಾಲಿಯರು ಬೆರೆದುಬಹಳ ಪ್ರೇಮದಿಂದಭಾರತಿಇಳಿದಳು ಬಂದು21ರಾಮೇಶನಕ್ಲುಪ್ತತಿಳಿದು ಭೀಮಸೇನನಾದ ವಾಯುಕಾಮಿನಿಯರ ಸಹಿತ ದ್ರೌಪತಿ ಪ್ರೇಮದಿ ಜನಿಸಿದಳು 22
--------------
ಗಲಗಲಿಅವ್ವನವರು
ದ್ವಂದ್ವವೆ ವಸಂತದ ಹಬ್ಬದ್ವಂದ್ವವೆ ಇಹಪರದಲ್ಲಿ ಹಬ್ಬ ಪ.ದ್ವಂದ್ವಾಮೃತ ಕ್ಷೇಮಅಭಯವಸಂತದ್ವಂದ್ವ ಜೀವೇಶರ ತಿಳಿದವ ಶಾಂತದ್ವಂದ್ವದ ನಡೆನುಡಿ ಬಲ್ಲವ ಸಂತದ್ವಂದ್ವವರಿಯದನ ಗತಿಯೆ ವಸಂತ 1ದ್ವಂದ್ವ ಶೀತೋಷ್ಣ ಸಮಾನವ ಕಂಡುದ್ವಂದ್ವ ನಿಂದಾಸ್ತುತಿ ಸರಿಯಿಟ್ಟುಕೊಂಡುದ್ವಂದ್ವವಮಾನವಹಿಡಿದರೆ ಭಂಡುದ್ವಂದ್ವ ಪಕ್ಷಿಗಳ ಬಗೆಯ ಕೇಳಿಕೊಂಡು 2ಫಾಲ್ಗುಣ ಪೌರ್ಣಿಮೆ ಬಂದಿತಿಳೆಗೆಬಾಲಕರೆಲ್ಲ ನೆರೆವುದೊಂದು ‌ಘಳಿಗೆಹೋಳಿಯನಾಡುವ ಸಂಭ್ರಮದೊಳಗೆಕಾಳಗಬೇಡಿರೊ ನಿಮ್ಮ ನಿಮ್ಮೊಳಗೆ3ಅಜೆÕೈಕ್ಯ ಪ್ರತಿಪದ ಹಿಂದಾದರಿಂದಸುಜ್ಞಾನ ದ್ವಿತಿಯಕ್ಕೆ ತೋರುವ ಚಂದ್ರಒಗ್ಗೂಡಿ ಗೆಳೆಯರೊಮ್ಮತದಿಂದಲಗ್ಗೆಕಾರರು ಮುಂದೆ ನಡೆವುದೆ ಚಂದ 4ಭಕ್ತೆಂಬೊ ಪುರದಲ್ಲಿ ಒಂಬತ್ತು ಬೀದಿ ವಿರಕ್ತಿರಂಹಸ ಬ್ರಹ್ಮದ್ಹಾದಿಯ ಐದಿವ್ಯಕ್ತವಾಗುವ ವಸ್ತು ಓದಿಕೆ ಓದಿರಿಕ್ತದ ನುಡಿಗಳು ತಮಸಿನ ಹಾದಿ 5ದಿನಪತಿ ಅಡಗಿರೆ ಮಲಗದೆ ಎದ್ದುಮನೆಯವರನು ಎಚ್ಚರಿಸಬ್ಯಾಡಿ ಸದ್ದುನೆನೆವ ವಿಷಯಗೋಡೆ ಏರುತ್ತ ಬಿದ್ದುಮನೆ ಮನೋವಾರ್ತೆಯ ಕುರುಳನೆ ಕದ್ದು 6ಹಾರುವರ ಕೇರಿಯ ಹೊಗಬ್ಯಾಡಿಕೇಳಿಬೇರೂರವರ ಬಿಟ್ಟು ಬಿಡಿ ದೂರದಲ್ಲಿದೂರುವರೊಡನಾಟ ದುರ್ದೆಶೆಫಲವು ವಸ್ತುದೋರುವ ಮನೆಯೇವೆ ಸರಸ ವೆಗ್ಗಳವು 7ಧೂಳಿ ನೀರುರಿಗಾಳಿ ಬಯಲೊಳಗಾಡಿಮ್ಯಾಲೆ ಮೂರುರಿಯೊಳು ಮತಿಗುಂದಬ್ಯಾಡಿಹಾಳು ತುರುಕರ ಕೇರಿಯೊಳು ನಿಷ್ಫಲವುಜಾಲಗಾರರ ಕೇರಿ ಹೊಕ್ಕರೆ ಫಲವು 8ಹಿಂಚಾದ ಹಿರಿಯರ ಮಾತಲೆ ನಡೆದುವಂಚಕ ಮೂವರ ಸಂಗವ ಕಡಿದುಮಿಂಚುವ ಮಾನ್ಯರ ಪ್ರೀತಿಯ ಪಡೆದುಸಂಚಿತಪ್ರಾರಬ್ಧಾಗಾಮಿಯ ಒಡೆದು9ಮುಚ್ಚಿದ ಕದವೆರಡನು ಮುರಿಹೊಯ್ದುಇಚ್ಛೆ ಮೂರೆಂಬ ನಾಯಿಗಳಜಿಹ್ವೆಕೊಯ್ದುಬೆಚ್ಚದೆ ಮನೆ ಮೆಲ್ಲನೆ ಹೊಗಿರಣ್ಣಸಚ್ಚಿದ ಗೋರಸ ಸೂರ್ಯಾಡಿರಣ್ಣ 10ಏಕಾಧಿಪತಿಯಾಜÕ ಅಭಯವು ಬೇಕುನಾಕು ಝಾವಿನ ರಾತ್ರಿ ನಲವಿರಬೇಕುಪೋಕಕಳ್ಳಾರ್ವರ ಮೆಟ್ಟ್ಯಾಳಬೇಕುಭೂಕಾಂತಗೆ ಸೇವೆಯೊಪ್ಪಿಸಬೇಕು 11ರಮಣನೊಲ್ಲದ ಆರ್ವರ ಸಂಗವಿಡಿದುರಮಿಸುವ ಬುದ್ಧಿಜಾರಿಯ ಗಟ್ಟಿವಿಡಿದುಅಮಿತ ವೈರಾಗ್ಯಹಗ್ಗದಿ ಕೈಯಕಟ್ಟಿಶ್ರೀರಮಣನಂಘ್ರಿಗೆ ಒಪ್ಪಿಸಲು ಕಾರ್ಯ ಗಟ್ಟಿ 12ಎಲ್ಲೆಲ್ಲ್ಯಜ್ಞಾನಾಹಿ ವಿಷಯ ತೇಳುಗಳುಎಲ್ಲೆಲ್ಲಿ ನಿರ್ಜಲಸೃತಿಯ ಬಾವಿಗಳುಎಲ್ಲೆಲ್ಲಿನಿರಯಕಮ್ಮರಿ ಮಿಟ್ಟೆಗಳುಎಲ್ಲ ತಪ್ಪಿಸಿ ಜ್ಞಾನ ಬೆಳದಿಂಗಳೊಳು 13ವ್ಯಾಳ್ಯವರಿತು ತತ್ವಸಂಧಿಯ ಒಲಿದುಸೂಳಿ ಮದೆಂಟರ ಕೈಸೆರೆವಿಡಿದುಕಾಲಾಖ್ಯ ತಳವಾರನಾಳಿಗೆ ಕೊಟ್ಟುಮ್ಯಾಳದ ಗೆಳೆಯರು ಸಂತೋಷಪಟ್ಟು 14ಎಂಬತ್ತು ನಾಲ್ಕು ಲಕ್ಷಾಗಾರ ಹೊಗುತಡೊಂಬಿಯಿಲ್ಲದೆ ಬಂದ ಬನ್ನವಬಡುತಕುಂಭಿಣಿಸುರ ಕುಲ ಭೂಮಿಗೆ ಬಂದುದಂಭ ಮಾಡದಲೆ ಕುರುಳ ಒಯ್ಯಿರೆಂದು 15ರಾಗ ಮತ್ಸರಗೂಡಿದರ ಕುರುಳನೊಟ್ಟಿಭೂಗಗನ ಹೊಗುವ ಕಾಮವಕಟ್ಟಿಯೋಗವಾಗಿರುವ ಹುಬ್ಬಿನ ಕ್ಷೇತ್ರದಲಿಮ್ಯಾಗ ವಿಜ್ಞಾನಗ್ನಿ ಹಾಕಬೇಕಲ್ಲಿ 16ಲೋಭ ಹೋಳಿಕೆಯ ಹೋಳಿಗೆ ತುಪ್ಪ ಸವಿದುಲಾಭಕ್ಕೆ ಕುಣಿಯಲು ವೇತ್ರರು ಹೊಯ್ದುಶೋಭನ ರಸ ಬೊಬ್ಬೆಯ ಸಾಧುಹಿಂಡುತ್ರಿಭುವನಪತಿಕಾಮನಯ್ಯನ ದಂಡು17ಸ್ವರ್ಧುನಿಜನಕನ ಗುಣಗಣಕೀರ್ತಿಊಧ್ರ್ವಸ್ವರದಿ ಹಾಡಿ ಹೊಗಳುವಅರ್ಥಿನಿರ್ಧೂಮಜ್ವಾಲೆಯ ಬೆಳಗಲಿ ಸುತ್ತಿದುರ್ದೇಹಿಗಳ ಕಿವಿಧಾರೆಯ ಕಿತ್ತಿ 18ಅವಿದ್ಯ ಕಾಮ್ಯಕರ್ಮದ ಹೋಳಿ ಸುಟ್ಟುಹ್ಯಾವಿನ ಮೈಯ ಬೂದಿಯ ಮಾಡಿಬಿಟ್ಟುಕೋವಿದರ ಚಾತುರ್ಯಕೆ ಒಡಂಬಟ್ಟು ಚಿದ್ಭಾವ ಮಂದಿರದ ಬ್ರಹ್ಮಕೆ ಲಕ್ಷ್ಯವಿಟ್ಟು 19ಹಂಗಿಲೆ ಬೆಳೆದ ವೃಕ್ಷದ ಮೂಲ ಮುರಿದೂಧ್ರ್ವಾಂಗಕ್ಕೆ ಸುತ್ತುವ ಜಾಣರ ಬಿರಿದುರಂಗು ಮುತ್ತಿನ ಮೂಗುತಿ ಹೆಣ್ಣವಿಡಿದುಶೃಂಗಾರ ಚೇಷ್ಟೆಯ ಮಾಡಿರೊಜಡಿದು20ಬೆಳಗಿನ ಝಾವದಿ ಬೂದಿ ಚಲ್ಲ್ಯಾಡಿಗೆಳೆಯರು ನೆರೆವುದೊಂದೆ ತಾಣ ನೋಡಿಜಲಜಾಕ್ಷನುದ್ಯಮದಂಗಡಿಯಲ್ಲಿನಲಿವ ಸ್ವಾನಂದದೂಟವ ಬೇಡಿಕೊಳ್ಳಿ 21ತಿರುತಿರುಗಿ ಬಂದು ದಣಿದು ನೀವಿಂದುಹರಿಯ ಮೈ ಬೆವರಿನ ಹೊಳೆಯಲ್ಲಿ ಮಿಂದುಥರ ಥರದ್ಹದಿನಾರು ವರ್ಣಗಳಿಂದತರುಣ ತರಣಿಯಂತೆ ಹೊಳೆವುದು ಚಂದ 22ಆನಂದಮಯವಾಸುದೇವನ ಕಂಡುಆನಂದಪುರದಿ ಭಕ್ತಿಯ ನೆರೆಗೊಂಡುಆನಂದ ತೀರ್ಥಗುರು ಕೃಪೆಯಿಂದಸ್ವಾನಂದದೋಕುಳಿಯಾಡುವ ಚಂದ 23ಈ ವಿಧ ಅಧ್ಯಾತ್ಮ ಹೋಳಿಯ ಭೇದಭಾವುಕ ಜನರಿಗೆ ಪರಮಾಹ್ಲಾದದೇವ ಋಷಿಕುಲದೈವ ಮುಕುಂದಕಾವನು ಕರುಣಾಬ್ಧಿಕೇಳಿಗೋವಿಂದ24ವೇದನ ತಂದ ಹಯಾಸ್ಯನ ಹೋಳಿಭೂಧರಧರಿಸಿದಮರ ಕಾರ್ಯಕೇಳಿಮೇದಿನ ತರಲಡ್ಡಾದವನೊಮ್ಮೆ ಹೋಳಿ ಪ್ರಹ್ಲಾದನಿಷ್ಠೆಗೆಹರಿಉದಿಸಿದಕೇಳಿ25ನಾನೆಂಬೊ ದಾನವೇಂದ್ರನ ಮದ ಹೋಳಿಹೀನರಿಗಾಗಿ ಕೊಡಲಿ ಹೊತ್ತಕೇಳಿಜಾನಕಿ ತಂದ ದಶಾಸ್ಯನ ಹೋಳಿಮಾನಿನಿಯರಾಳ್ದ ವಿಡಂಬನಕೇಳಿ26ಸನ್ಮಾರ್ಗ ಬಿಟ್ಟ ಖಳರ ಮತಿ ಹೋಳಿಉನ್ಮತ್ತಕಲಿಯನರಸಿ ಕೊಂದಕೇಳಿಚಿನ್ಮಯಮೂರ್ತಿ ಭೂಭಾರವ ಹೋಳಿಜನ್ಮಿಸಿಬಹುದೆಲ್ಲ ಮೋಹನಕೇಳಿ27ಅನಂತದುರಿತರಾಶಿಗಳನ್ನು ಹೋಳಿಆನಂದ ಸುಖವೀವ ನೆನೆದರೆಕೇಳಿಅನಂತ ಅನವದ್ಯಗುಣ ಪರಿಪೂರ್ಣಅನಂತಾದ್ಭುತಕರ್ಮದೀನ ದಯಾರ್ಣ28ಈಪರಿವಿಜ್ಞಾನವಸಂತದಾಟಚೌಪದಿ ರತ್ನಮಾಲಿಕೆ ಮಾಡಿ ಪಾಠಶ್ರೀಪ್ರಸನ್ವೆಂಕಟ ಕಿಟಿರೂಪಿ ಕೃಷ್ಣತಾ ಪರಿಪಾಲಿಪ ಪುರುಷವರಿಷ್ಠ 29
--------------
ಪ್ರಸನ್ನವೆಂಕಟದಾಸರು
ಧನ್ಯ ಧನ್ಯ ನಂದಗೋಕುಲ ಪ.ಆ ನಂದವ್ರಜದ ಪೂರ್ವಪುಣ್ಯವೇನೊಆ ನಂದನಾ ಗೋಪಿಕಂದನಾ ಕಿಶೋರಾನಂದವೇನೊಆನಂದಮುನಿವರದನಾನಂದವೇನೊ ಅ.ಪ.ಗೋವರೆಳೆಯಮ್ರ್ಯಾಳ ನಿವಹದಲ್ಲಿನಿಂತು ರಂಗ ಕೋಹುಕ್ಕಕೋಹೊಹವಳಿ ಹಂಡಿ ಕಾಳಿ ಬಾ ಕೋಹುಕ್ಕ ಕೋಹೊಧವಳಿ ಚಿಂಚಿ ಕಪಿಲೆ ಬಾ ಕೋಹುಕ್ಕ ಕೋಹೊಗೌರಿ ಮೈಲಿ ನೀಲಿ ಬಾಯೆಂದುವಿವರಿಸಿ ಕರೆದು ತೃಣದ ಕವಳವನ್ನೀಡುವಾಆವಿನ್ನಾವ ಸಂಚಿತೊ ಪಾವÀನೆಂತೊ ಪುಲ್ಲಿನಾ 1ಅಮ್ಮೆಶೋದೆ ಕಟ್ಟಿದ ನಿರ್ಮಲ ಕಲ್ಲಿಯ ಬುತ್ತಿಡೋಹಕ್ಕಡೋಹೋತÀಮ್ಮ ಬನ್ನಿರುಣ್ಣ ಬನ್ನಿ ಡೋಹಕ್ಕಡೋಹೊನಮ್ಮ ಬುತ್ತಿ ನಿಮ್ಮ ಬುತ್ತಿ ಡೋಹಕ್ಕಡೋಹೊನಮ್ಮ ನಿಮ್ಮುಪ್ಪಿನಕಾಯಿ ಡೋಹಕ್ಕಡೋಹೊಕಮ್ಮಗಿಹುದೆಂದು ಕೊಡುವ ಒಮ್ಮೆ ಸೆಳೆದು ಮೆಲ್ಲುವಾ ಉತ್ತಮ್ಮರಾವ ಜೀವರೊ ಧರ್ಮದೊದಗೆಂತುಟೊ 2ಮಾಧವಮಂಜುಳ ಶಬ್ದದೂದುವ ಸುವರ್ಣವೇಣುನಾದಸ್ವಾದ ಲುಬ್ಧರಾದರಾ ಗೋಪಕನ್ಯೇರುನಾದಸ್ವಾದ ಲುಬ್ಧವಾದವಾ ಗೋವತ್ಸವುನಾದಸ್ವಾದ ಲುಬ್ಧವಾದವಲ್ಲಿ ವೃಕ್ಷವುಆದರಿಪ ನಾರಿಯರಗಾಧ ತಪವಲ್ಲವೆಪಾದಪ ಪಶುಗಳೆಲ್ಲ ಆ ದೇವರ್ಕಳಲ್ಲವೆ 3ತುರುವ ಮೇಯಿಸಿ ವ್ರಜಕೆ ಮರಳಿಸಿಗೋಪಾಲರೇಯ ಹೈಯಿ ಹೈಯೆಂದುತರುಬಿ ತಡೆಯಿರೆನ್ನುತ ಹೈಯಿ ಹೈಯೆಂಬಸ್ವರದಿ ಕೊಳಲನೂದುತ ಹೈಯಿ ಹೈಯೆಂದುಭರದಿಚೆಂಡು ಚಿಮ್ಮುತ ಹೈಯಿಹೈಯೆಂದುಧರೆಯ ಮೇಲಿಂಬಾಡುವ ಕರದ ದಂಡಿಗೇರುವತರಳರಾವ ಭಾಗ್ಯರೊ ಧರಣಿ ಯಾವ ಮಾನ್ಯಳೊ 4ಒಪ್ಪುವ ಗೋಧೂಳಿ ಮೈಯಲಿಪ್ಪ ಪೊಂದೊಡಿಗೆ ಚೆಲ್ವಶಾಮಲಾಮಲಾಂಗಗುಪ್ಪಾರತ್ಯೆತ್ತಿದರು ಶಾಮಲಾಮಲಾಂಗಗೆಕುಪ್ಪಿರಿವ ಕರುಗಳ ಶಾಮಲಾಮಲಾಂಗದÀರ್ಪಿನಾವ ರಂಬಿಸೆ ಶಾಮಲಾಮಲಾಂಗಕ್ಷಿಪ್ರಪಾಲ್ಗರೆದು ನಂದ ಗೋಪಾಂಗನೆಯರೀವ ನಮ್ಮಪ್ಪ ಪ್ರಸನ್ನವೆಂಕಟಾಧಿಪ್ಪನೆಂದು ಕಾಂಬೆನಾ 5
--------------
ಪ್ರಸನ್ನವೆಂಕಟದಾಸರು