ಒಟ್ಟು 1169 ಕಡೆಗಳಲ್ಲಿ , 103 ದಾಸರು , 945 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಯೆ ಸಿರಿದೊರೆಯೆ ಅರಿಯೆ ನಿನ್ಹೊರತನ್ಯರ ಪ ಮೊರೆ ಹೊಕ್ಕಿರುವರ ದುರಿತಗಳ ಕಳೆವ ಅ.ಪ ಸೂರ್ಯ ಪ್ರಕಾಶ ಕುಮುದಾಪ್ತಮಿತ ಭಾಸ ನಾಟಕಾಧಾರ ಶ್ರೀಶ ಹಾಟಕ ಗರ್ಭತಾತ ಅಖಿಲ ಸದ್ಗುಣೋಪೇತ 1 ಮರಳಿ ಮರಳಿ ಜನನ ಮರಣಗಳೈದುತ ನರಕ ಸ್ವರ್ಗ ಭೂಲೋಕ ತಿರುಗಿ ಬಳಲುವವೋ 2 ಹಟದಿ ದುರ್ಮತಿಗಳಾರ್ಭಟಿಸುತಜ್ಞಾನದಿ ಮಟ ಮಾಯದಿ ಚರಿಸಿ ಘಟಿಪುದೇ ಗುರುರಾಮವಿಠಲ ನಿನ್ನಯ ಕರುಣ 3
--------------
ಗುರುರಾಮವಿಠಲ
ಹರಿಯೆನ್ನ ನರಜನ್ಮ ವ್ಯರ್ಥವಾಯ್ತು ಪರಮ ಭಕ್ತಿಯೊಳಿನ್ನು ಭಜಿಸುವೆನು ಕಾಯೋ ಪ ತೊಡೆಯ ಮೇಲಾಡುತಿಹ ಶಿಶುವಿನಾನುಡಿ ಕೇಳಿ ಕಡು ಮೂರ್ಖತನದಿಂದ ಭ್ರಮೆಗೊಂಡೆನೋ ಸಡಗರದಿ ಕಿವಿಗೊಟ್ಟು ಕಿಂಕಿಣಿಯ ದ್ವನಿಗಳನು ಎಡಬಿಡದೆ ಕೇಳುತಿಹ ಹರಿಣನಂತಾದೇ 1 ತೊಡೆಗÀುಹ್ಯ ಕುಚಗಳಿಗೆ ಅನುದಿನವು ನಲಿಯುತ್ತ ಮಡದಿಯರ ಅಂಗ ಸಂಗದ ನಂಬುತಾ ಒಡಲ ಶಾಂತಿಯಗೊಳಿಸೆ ಬಡಿಗೋಲು ಕೆಡಹಿಕೊಂ ದಡಗುತಿಹ ಮೂಷಕನ ತೆರದಲ್ಲಿ ಕಳೆದೇ 2 ನಿರುತದಿಂ ಪರಸತಿಯ ಲಾವಣ್ಯವನು ನೋಡಿ ಚರಿಸಿತೆನ್ನಯ ಮನವು ಅವಳ ಕೂಟಕ್ಕೇ ಉರಿವ ದೀಪವ ಕಂಡು ಕನಕ ಮಣಿಯೇಯೆಂದ ಎರಗುತಿಹ ಹುಳದಂತೆ ಹಾಳಾದೆ ಬರಿದೇ 3 ಜರಿದು ನಿಜವೃತ್ತಿಯನು ಪರದಾಸ್ಯದಲಿ ಮುಳುಗಿ ಪೊರದೆ ಹೊಟ್ಟೆಯನಾ ಪರಾನ್ನ ಭಕ್ಷದಲೀ ಹರುಷದಿಂ ಬಲೆಯತುದಿ ಮಾಂಸಕ್ಕೆ ಮೆಚ್ಚಿದಾ ಮರುಳಾ ಮೀನಿನ ಗತಿಯು ಯನಗಾಯ್ತು ನಿಜದೀ4 ನಾರಿಯರ ಜಾಲಕ್ಕೆ ಪ್ರತಿದಿನವು ಸಿಲುಕುತ್ತ ಮಾರಿಯರ ಸಾಕಿ ನಾ ಫಲವ ತಿಂದೆ ಭ್ರಮರ ಸಂಪಿಗೆಯಸಳ ಸಾರಿ ಕೊಡಲೆ ಮೃತ್ಯುವಶವಾಗುವಂತೇ 5 ಮೂರಾರು ಶತ್ರುಗಳು ತರಿದೆನ್ನ ಮನವನ್ನು ಗಾರು ಮಾಡುತಲಿಹವು ತಿಳಿಯದಾ ಹರಿಯೇ ನರಸಿಂಹನೇ ಐದು ಇಂದ್ರಿಯವ ಗೆಲಲಾರೆ ಭೂರಿ ಭಕ್ತಿಯೊಳೆರಗಿ ಮರೆಹೊಕ್ಕೆ ಕಾಯೋ 6 ಪನ್ನಗಶಯನ ಶ್ರೀ ವೇಣುಗೋಪಾಲನೆ ಚನ್ನಿಗಕೇಶವನೇ ದೂರ್ವೇಶನೇ ನಿಂನನಾ ಬಿಡಲಾರೆ ಮಾರಮಣ ಪೊರೆಯಂನ ಯೋನಿ ಜನ್ಮಕೆ ಮುಂದೆ ಬರದಂತೆ ಮಾಡೋ 7
--------------
ಕರ್ಕಿ ಕೇಶವದಾಸ
ಹರಿಯೇ ಎನ್ನ | ಮರೆತಿರುವರೆ ಇದು ಸರಿಯೇ ಪಾಲಿಸು ನೀ ದೊರೆಯೇ | ತರಳತನದಿ ನಾ ಮರೆತೆನೆಂದು ನೀ ಜರೆದು ಬಿಟ್ಟರೆ ಮುಂದೆ ಪೊರೆವರಾರೈ ಶ್ರೀ ಪ ಒಡೆಯ ನೀನಾಗಿ ಸಲಹುವುದೀಗ ನಿನ್ನಯ ಪದ ಜಡಜಕೆರಗುವೆ ನಾ ಬೇಗ ಕಡು ದಾರಿದ್ರ್ಯದ ಕಡಲೊಳು ಮುಳುಗಿದೆ ತಡಿಯ ಕಾಣಿಸೋ ಜಗದೊಡೆಯ ದಯದಿ ಶ್ರೀ 1 ದುರುಳ ಬಾಧಿಸುತಿರೆ ಭರದೊಳಕ್ಷಯವಿತ್ತುದ್ಧರಿಸಲಿಲ್ಲವೆ ಶ್ರೀ 2 ಪರಮೇಷ್ಠಿ ಜನಕ ಶ್ರೀ 3 ತಂದೆ ನೀನಲ್ಲವೆ ಜಗದೀಶ ಪಾಲಿಸು ನಿನ್ನ ಕಂದನಲ್ಲವೆ ಸರ್ವೇಶ ಹಿಂದ ಮುಂದನಾನೊಂದನರಿಯೆ ದಯ ದಿಂದ ಕಾಯೋ ಮುಚುಕುಂದವರದ ಶ್ರೀ 4 ಮಂಗಲ ಪುರವಾಸ ಶ್ರೀ ವೆಂಕಟೇಶ | ಅಂಗಜ ಜನಕ ರಮೇಶ | ಮಂಗಲಾಂಗ ನಿನ್ನಂಘ್ರಿ ಸೇವಕರ ಸು-ಸಂಗವ ಪಾಲಿಸು ಗಂಗಾಜನಕ ಶ್ರೀ 5
--------------
ಅನ್ಯದಾಸರು
ಹರಿಯೇ ನಿನ್ನಯ ಭಕ್ತಿಯದರವೊಂದುಳಿದು ನಾ ಸಿರಿಯರಸನೆ ನಿನ್ನೊಳನ್ಯ ಕೇಳೆನು ರಂಗಾ ಪ ಪತಿ ಬೇಡ ಸುತೆ ಬೇಡ ಸತತ ಶ್ರೀ ಹರಿ ನಿನ್ನ ದ್ಯಾನವ ಕೊಡಲೋ 1 ಭವ ಬೇಡ ಪತಿತ ಪಾವನ ನಿನ್ನ ಸ್ತೋತ್ರವ ಕಲಿಸೋ 2 ಕರಿ ಬೇಡ ಹಣ ಬೇಡ ಮನೆ ಬೇಡ ಸಿರಿ ಚೆನ್ನಕೇಶವನ ಮಹಿಮೆಯ ತಿಳಿಸೋ 3
--------------
ಕರ್ಕಿ ಕೇಶವದಾಸ
ಹರಿಯೇ ನಿನ್ನಯ ಸಿರಿಯನು ಬಣ್ಣಿಸೆ ನರನಾದೆನಗಳವೇ ಪ ಕರುಣಾಳುವೆ ನಾಂ ಕರಗಳ ಮುಗಿವೆ ಪÀರವಾಸುದೇವ ಪರಮಾತ್ಮಾ ಅ.ಪ ಸತಿಶ್ರೀದೇವಿಯು ನುತಚತುರಾನನ ಪತಿತೋದ್ಧರೆ ಗಂಗೆಯು ಮಗಳು ಸ್ತುತಿಗೈಯುವವೇದ ತತಿಯಿಂ ನಿತ್ಯ ಭೃತ್ಯರು ಸುರಗಣ ಸರ್ವೇಶಾ 1 ಸಾಗರ ಮಧ್ಯದಿ ಭೋಗಿಯನೊರಗಿ ಯೋಗೀಜನರ ಹೃದಯದಿ ನೆಲಸಿ ಆಗಮ ಪೂಜೆಯ ರಾಗದಿ ಪಡೆವ 2 ಶಂಖಸುದರ್ಶನ ಪಂಕಜಧರಶ್ರೀ ವೆಂಕಟವರದ ಶೀರಂಗ ಕಿಂಕರ ಪಾಲಕ ಜಾಜೀಶಾ 3
--------------
ಶಾಮಶರ್ಮರು
ಹರಿವಾಯುಗಳು ಮೂರಕ್ಕರದ ದೇವ ಮೂರು ವಸ್ತುವ ಬೆರಸಿ ಮೂರು ಮೂರಾಗಿಸೆಯೆ ಪಾಲಿಸುವ ನಮ್ಮ ಎರಡು ವಸ್ತುವು ಸೇರಿ ದೇಹಕ್ಕೆ ಚಲನೆಯದು ಹರಿವಾಯುಗಳ ಒಲುಮೆ ದೇಹ ರಕ್ಷಕವು4 ಅವ್ಯಾಕೃತಾಕಾಶ ರೂಪದಲಿ ತಾನಿಹನು ವಿಶ್ವಂಭರಾತ್ಮಕನು ದೇವ ನಿಜದಿಂದ ಸೃಷ್ಟಿಗವನೇ ಮೂಲ ವಾಸುದೇವಾತ್ಮಕನು ಮಧ್ವಹೃದಯನಿವಾಸಿ ಸರ್ವಮೂಲನವ 5 ಪೃಥಿವಿಯಪ್ ತೇಜಸ್ಸು ಮೂರು ಭೂತಾಣುಗಳು ತುಂಬಿಯಾಗಸದಲ್ಲಿ ವ್ಯಾಕೃತವದಹುದು ತುಂಬಿ ವಾಯುವಿನಣುಗಳ್ ಒಂದೆಡೆಯೆ ತಾನಹುದು ವ್ಯಾಕೃತಾಕಾಶ 6 ಆಗಸದಿ ವಾಯುವಿನ ಪರಮಾಣು ಒತ್ತಡವೆ ದೃಶ್ಯವಾಯುವು ತಾನೆ ಹರಿವುದಾಗಸದಿ ದೃಶ್ಯವಾಯುವಿನ ಪರಮಾಣುವೊತ್ತಡದಿ ನಿಜ ತೇಜವುದಯಿಸುವುದದರಲ್ಲಿ ಮೂರಿಹವು 7 ತೇಜದಿಂದಲೆ ನೀರು ಜಗಕೆಯಾಧಾರವದು ನೀರಿನಿಂದಲೆ ಭೂಮಿ ಉದಯಿಸುವದದರಿಂ ಪಂಚಭೂತಂಗಳಿವು ಭೂಮಿಯಲಿ ತೋರುವವು ಪಂಚಭೂತಾತ್ಮದ ಪ್ರಕೃತಿಯಿದು ಸತ್ಯ 8 ಇವುಗಳಿಗೆ ಒಡತಿಯಾ ಪ್ರಕೃತಿದೇವಿಯು ಸತ್ಯ ಪ್ರಕೃತಿಯೆದೆಯಲ್ಲಿರುವ ದೇವರೂ ಸತ್ಯ ಪ್ರಕೃತಿ ಪುರುಷರ ಲೀಲೆ ಮಧ್ವಮತದಾ ತಿರುಳು ಮಧ್ವ ಸದ್ಗ್ರಂಥಗಳು ಸರ್ವಮೂಲಗಳು 9 ಭೂತಕೃತ್ತೂ ಅವನೆ ಭೂತಪಾಲಕನವನೆ ಭೂತಭಾವದಲಿದ್ದು ಪ್ರೇರಕನು ಅವನೆ ಆತ್ಮಾಂತರಾತ್ಮವೆಂದೆರಡು ರೂಪಗಳವಗೆ ಹೃದಯದಾಕಾಶದಲಿ ವಾಸವಾಗಿಹನು 10 ಪಂಚಭೂತಗಳು ಪಂಚೇಂದ್ರಿಯಗಳು ಪಂಚ ಕರ್ಮೇಂದ್ರಿಯಗಳ ರಚಿಸಿ ಹರಿಯು ಪಂಚಾತ್ಮಕನು ದೇವ ಪಂಚವಾಯುಗಳಿಂದ ಪಂಚತನ್ಮಾತ್ರಗಳ ಜ್ಞಾನವೊದಗಿಪನು11 ಸುಖ ರತಿ ಪ್ರೇರಕನು ತಾನಾಗಿ ಸಿರಿವರನು ಶಾರೀರ ಪುರದಲ್ಲಿ ನೆಲೆಯಾಗಿ ಇಹನು ಬೆಳಗುತ್ತ ದೇಹವನು ಬೆಳಗಿಸುವ ದೇವತೆಗ ಳವನ ಬಳಿಯಿದ್ದು ಸೇವೆಯ ಗೈಯುತಿಹರು 12 ವಿಶ್ವ ದರ್ಶನಕಾಗಿ ವಿಶ್ವಜನರೊಳು ಕಣ್ಣಿನಲ್ಲಿ ನೆಲೆನಿಂತು ವಿಶ್ವಸಾಕ್ಷಿಯು ಸೂರ್ಯನಲ್ಲಿಯೂ ತಾನಿದ್ದು ವಿಶ್ವವನು ಬೆಳಗಿಸುತ ಜ್ಞಾನವೊದಗಿಪನು 13 ಸೂರ್ಯನೊಂದೆಡೆಯಿದ್ದು ತಾನ್ ಬೆಳಗಿ ಲೋಕವನು ತನ್ನ ಕಿರಣಂಗಳಿಂ ಬೆಳಗಿಸುವ ತೆರದಿ ಕಣ್ಣು ಮೊದಲಾದಿಂದ್ರಿಯಗಳಲಿ ತಾನಿದ್ದು ಅವುಗಳನು ಬೆಳಗಿಸುತ ರಕ್ಷಿಪನು ನಮ್ಮ14 ತೈಜಸದ ದೇವನವ ತೇಜದಾರೂಪದಲಿ ಕಂಠಗತನಾಗಿದ್ದು ದೇಹದಲಿ ಬೆಳಗಿ ಹುಲಿ ಕರಡಿ ಮೊದಲಾದ ಜಂತುಗಳ ಸೃಷ್ಟಿಸುತ ಸ್ವಪ್ನಲೋಕವನು ಮಾನಸಕೆ ತೋರಿಸುವ 15 ಪ್ರಾಜ್ಞರೂಪದ ದೇವನಪ್ಪಿ ಜೀವಾತ್ಮನನು ಮಾಯೆಯಾ ಮುಸುಕಿನಿಂದಜ್ಞಾನಬರಿಸಿ ಜೀವನಿಗೆ ತೋರದುದರಿಂದ ಪ್ರಾಜ್ಞನದಾಗಿ ಜಗಕೆ ತನ್ನಯ ಮಾಯೆಯನು ತೋರಿಸುವನು 16 ನಾಲ್ಕನೆಯ ರೂಪವದು ತುರ್ಯ ನಾಮದಲಿಹುದು ಮುಕ್ತರಿಗೆ ಮಾತ್ರವೇ ತೋರುವುದು ಪೇಳ್ವೆ ಜಾಗರಾದಿಯವಸ್ಥೆಗಳ ನಾಲ್ಕು ಪೇಳಿದನು ಮಾಯಾವಿ ಪರಮಾತ್ಮನದು ಲೀಲೆಗಳಿವು 17
--------------
ನಿಡಂಬೂರು ರಾಮದಾಸ
ಹರಿಸಿರಿ ರಮಣಿಯೆ ಕರಗಳ ಮುಗಿಯುವೆ ವರಮತಿ ನೀಡೆನಗೆ ಪ ಸರಸಿಜಾಕ್ಷನ ವಕ್ಷಸ್ಥಳದಿ ನಿವಾಸಿಯೆ ನಿರುತದಿ ಹರಿಪಾದ ಸ್ಮರಣೆ ಎನಗೆ ಕೊಡು ಅ.ಪ ಮಂದರೋದ್ಧರ ಗೋವಿಂದ ಗುಣಗಳಾ- ನಂದದಿ ಸ್ತುತಿಸಿ ಹಿಗ್ಗುವ ಜನನಿ ಇಂದಿರೆ ರಮೆ ಭಾರ್ಗವಿಯೆ ನಿನ್ನಯ ಪಾದ ದ್ವಂದ್ವಕೆ ನಮಿಪೆ ಸುಗಂಧಿ ಸುಂದರಿಯೆ 1 ಪರಮಪುರುಷ ಪುರುಷೋತ್ತಮನರಸಿಯೆ ಪಾವನಿ ಜನನಿ ಸುರರು ಕಿನ್ನರರು ಕಿಂಪುರುಷರು ಸ್ತುತಿಪರು ವರ ಮಹಾಲಕ್ಷ್ಮಿ ಸುಂದರಿ ಜಯ ಜಯ ಎಂದು 2 ಗಂಗಾಜನಕ ಪಾಂಡುರಂಗ ನಿಜ ಸತಿ ಭೃಂಗಕುಂತಳೆ ಭಾಗ್ಯದ ಖಣಿಯೆ ಅಂಗಜಜನಕ ವಿಹಂಗವಾಹನನ ಪಾ- ದಂಗಳ ಸ್ಮರಣೆಲಿ ನಲಿವ ಮನವ ಕೊಡು 3 ಪಕ್ಷಿವಾಹನ ಕಮಲಾಕ್ಷನ ಮಹಿಮೆಯ ವೀಕ್ಷಿಸಿ ಮನದಿ ಹಿಗ್ಗುವ ಜನನಿ ರಾಕ್ಷಸನಾಮ ವತ್ಸರದಲಿ ಭಕುತರ ಮೋಕ್ಷದಾತನು ಸಲಹುವ ಸುಜನರನು4 ಕಮಲಸಂಭವ ಕಮಲಾಲಯೆ ಹರಿಪಾದ ಕಮಲಭೃಂಗಳೆ ಹಿರಣ್ಯಹರಿಣಿ ಕಮಲನಾಭ ವಿಠ್ಠಲನೊಡಗೂಡಿ ಹೃ- ತ್ಕಮಲದಿ ಶೋಭಿಸು ಎನುತ ಸ್ತುತಿಸುವೆನು 5
--------------
ನಿಡಗುರುಕಿ ಜೀವೂಬಾಯಿ
ಹರಿಹರರಿಬ್ಬರು ಒಲಿದು ಮಾತಾಡಲು ಕೊಳವ ಕಂಡಲ್ಲಿ ಎಲೆತೋಟ ಕೊಳವ ಕಂಡಲ್ಲಿ ಎಲೆತೋಟದೊಳಗಾಡುವ ಹೆಣ್ಣಿನ ಕಂಡು ಹರ ಮರುಳಾದ ಪ. ತೆಂಗಿನ ತಿಳಿಗೊಳ ನಿಂಬೆ ಕಿತ್ತಲೆ ಬಾಳೆ ಹೊಂಬಾಳೆ ಅಡಿಕೆ ಬನಗಳು ಹೊಂಬಾಳೆ ಅಡಿಕೆ ಬನದೊಳಗಾಡುವ ರಂಭೆಯ ಕಂಡು ಹರ ಮರುಳಾದ 1 ಅರಿಸಿನ ತಿಳಿಗೊಳ ಹಲಸು ಕಿತ್ತಲೆ ಬಾಳೆ ಬೆರಸಿ ಮಲ್ಲಿಗೆಯ ಬನದೊಳು ಬೆರಸಿ ಮಲ್ಲಿಗೆಯ ಬನದೊಳಗಾಡುವ ಸರಸಿಜಾಕ್ಷಿಯ ಕಂಡು ಹರ ಮರುಳಾದ 2 ಮೊಲ್ಲೆ ಮಲ್ಲಿಗೆ ಜಾಜಿ ಅಲ್ಲೆ ಪಾರಿಜಾತ ನಿಲ್ಲದೆ ನುಡಿವೊ ಗಿಳಿಗಳು ನಿಲ್ಲದೆ ನುಡಿವೊ ಗಿಳಿಗಳು ನುಡಿಗಳ ಚೆಲುವೆಯ ಕಂಡು ಹರ ಮರುಳಾದ 3 ಸೋಗೆ ನವಿಲುಗಳು ಗಿಳಿಹಿಂಡು ತುರುಗಳು [ಕೋಗಿಲೆ ನಲಿಯೊ ಪಂಸೆಗಳು] [ಕೋಗಿಲೆ ನಲಿಯೊ ಪಂಸೆಯೊಳಾಡುವ] ಸೊ- ಬಗಿಯ ಕಂಡು ಹರ ಮರುಳಾದ 4 ಚೆಲುವ ಚರಣಗಳು ಜಂಘೆ ಜಾನೂರು ಕಟಿ ವಳಿಪಂಙÂ್ತ ಜಠರ ವಕ್ಷಸ್ಥಳವು ವಳಿಪಂಙÂ್ತ ಜಠರ ವಕ್ಷಸ್ಥಳಗಳ ಹೆಣ್ಣಿನ ಸ್ತನವ ವರ್ಣಿಸಲಾರಿಗಳವಲ್ಲ 5 ಕಾಲುಂಗುರ ಅಕ್ಕಿ ಪಿಲ್ಯ ಜೋಡುಮೆಂಟಿಕೆಗಳು ವೀರಮುದ್ರಿಕೆಯು ಕಿರುಪಿಲ್ಯ ವೀರಮುದ್ರಿಕೆಯು ಕಿರುಪಿಲ್ಯ ನಿಟ್ಟಿದ್ದ ಬಾಲೆಯ ಕಂಡು ಹರ ಮರುಳಾದ 6 ನಡು ಬಳುಕಿ ಮುಡಿ ಸಡಲಿ ಉಡಿಗಂಟೆ ಹೊಳೆಯುತ ಕೊರಳ ಪದಕ ಹಾರ ಒಲೆಯುತ ಕೊರಳ ಪದಕ ಹಾರ ಒಲೆಯುತ ಹೆಣ್ಣಿನ ಇರವ ವರ್ಣಿಸಲಾರಿಗಳವಲ್ಲ 7 ಹಸಿರು ಕುಪ್ಪಸಗಳು ಮುಂಗೈನಗಗಳು ನಳಿತೋಳುಬಂದಿ ಬಳೆಗಳು ನಳಿತೋಳುಬಂದಿ ಬಳೆಗಳು ಹೆಣ್ಣಿನ ಥಳುಕು ವರ್ಣಿಸಲಾರಿಗಳವಲ್ಲ8 ಹಾರ ಹೀರಾವಳಿ ಕೇಯೂರ ಕಂಕಣ ತೋಳ ಭಾಪುರಿ ಭುಜಕೀರ್ತಿ ತೋಳ ಭಾಪುರಿ ಭುಜಕೀರ್ತಿನಿಟ್ಟಿಹ ಇಂದುಮುಖಿಯ ಕಂಡು ಹರ ಮರುಳಾದ 9 ಅರಳೋಲೆ ಮೂಗುತಿ ಹಣೆಯ ಹಚ್ಚೆಯ ಬೊಟ್ಟು ಕದಪು ಕನ್ನಡಿಯು ಕುಡಿಹುಬ್ಬು ಕದಪು ಕನ್ನಡಿಯು ಕುಡಿಹುಬ್ಬು ಹೆಣ್ಣಿನ ಬೆಳಕÀ ವರ್ಣಿಸೆ ಹರಗಳವಲ್ಲ 10 ನೊಸಲು ಕಸ್ತೂರಿಗಳು ಎಸೆವ ಬೈತಲೆಗಳು ಕುರುಳು ಕೂದಲುಗಳು ಕುಂತಲಗಳು ಕುರುಳು ಕೂದಲುಗಳು ಕುಂತಲಗಳು ಹೆಣ್ಣಿನ ಜಡೆಯ ವರ್ಣಿಸಲಾರಿಗಳವಲ್ಲ 11 ಕುಂಭಕುಚದ ಮೇಲೆ ಗಂಧವ ಪೂಸಿದಳೆ ಅಂದಕೆ ಹಿಡಿದಳೆ ಕಮಲವ ಅಂದಕೆ ಹಿಡಿದಳೆ ಕಮಲವ ಕಡೆಗಣ್ಣ ಚಂದ ಬಂದ್ಹರನ ಕಂಗೆಡಿಸಿತು 12 ತÉೂೀರ ಕುಚದ ಮೇಲೆ ಸಾದು ಗಂಧವ ಪೂಸಿ ಆಯಕೆ ಹಿಡಿದಳೆ ಕಮಲವ ಆಯಕೆ ಹಿಡಿದಳೆ ಕಮಲವ ಕಡೆಗಣ್ಣ ಢಾಳ ಬಂದ್ಹರನ ಕಂಗೆಡಿಸಿತು 13 ಕಕ್ಕಸ ಕುಚದಮೇಲೆ ಅಷ್ಟಹಾರಗಳು ಹೊಳೆಯೆ ಹಸ್ತಕಟ್ಟುಗಳು ಹೊಳೆಯುತ ಹಸ್ತಕಟ್ಟುಗಳು ಹೊಳೆವುತ್ತ ಹೆಣ್ಣಿನ ದೃಷ್ಟಿ ಬಂದ್ಹರನ ಕಂಗೆಡಿಸಿತು 14 ಅಮ್ಮಾಲೆ ಆಡೋಳು ಒಮ್ಮೊಮ್ಮೆ ನೋಡೋಳು ತÀನ್ನೊಳಗೆ ತಾನು ನಗುವೋಳು ತÀನ್ನೊಳಗೆ ತಾನು ನಗುವೋಳು ಬೊಮ್ಮನ ಮಗನ ಮರುಳು ಮಾಡಿ ನಡೆದಳು 15 ನೋಡಳು ನುಡಿಯಳು ಹರನ ಕೂಡೆ ಮಾತಾಡಳು ಓಡುತ್ತ ಚೆಂಡ ಹೊಯ್ವಳು ಓಡುತ್ತ ಚೆಂಡ ಹೊಯ್ವವೇಗವ ಕಂಡು ಮೂರುಕಣ್ಣವನು ಮರುಳಾದ 16 ಕೆದರಿದ ಕೆಂಜೆಡೆ ಕೊರಳ ರುದ್ರಾಕ್ಷಿ ಕರದಿ ತ್ರಿಶೂಲ ಹೊಳೆಯುತ ಕರದಿ ತ್ರಿಶೂಲ ಹೊಳೆಯುತ ಹೆಣ್ಣಿನ ನುಡಿಸುತ್ತ ಹಿಂದೆ ನಡೆದನು 17 ರೂಢಿಗೊಡೆಯನ ಕೂಡೆ ಆಡುವ ವನಿತೆ ನೋಡೆ ನೀ ಎನ್ನ ಕಡೆಗಣ್ಣ ನೋಡೆ ನೀ ಎನ್ನ ಕಡೆಗಣ್ಣ ಹೆಣ್ಣಿನ ಕಾಡುತ ಹಿಂದೆ ನಡೆದನು 18 ಪೀತಾಂಬರದ ಮುಂಜೆರಗನು ಕಾಣುತ್ತ ಸೋತೆ ಬಾರೆಂದು ಕರೆದನು ಸೋತೆ ಬಾರೆಂದು ಕರೆದ ಧ್ವನಿಯ ಕೇಳಿ ಕಾಂತೆ ಬನದೊಳು ಮರೆಯಾದಳು 19 ಮಂಗಳ ಮಹಿಮಗೆ ಅಂಜಿಕೆ ಇಲ್ಲದೆ ಗಂಗೆ ಪೊತ್ತವನ ತಿರುಗಿಸಿದ ಗಂಗೆಪೊತ್ತವನ ತಿರುಗಿಸಿದ ತನ್ನಯ ಮುಂದಣ ಅಂದವೆಲ್ಲ ಇಳುಹಿದ 20 ಸೃಷ್ಟಿಯನೆಲ್ಲ ಹೊಟ್ಟೆಯೊಳಿಂಬಿಟ್ಟು ವಟಪತ್ರ ಶಯನನಾಗಿ ಮಲಗಿದ ವಟಪತ್ರ ಶಯನನಾಗಿ ಮಲಗಿದ ಉಡುಪಿನ ಕೃಷ್ಣನೆಂದ್ಹರನು ತಿಳಿದನು 21 ಭೂಮಿಯನೆಲ್ಲ ಈರಡಿ ಮಾಡಿದ ಆಲದೆಲೆ ಮೇಲೆ ಮಲಗಿದ ಆಲದೆಲೆ ಮೇಲೆ ಮಲಗಿದ ಶ್ರೀಹಯ- ವದನನೆಂದು ಹರ ತಿಳಿದನು 22
--------------
ವಾದಿರಾಜ
ಹರಿಹರಿ ಕೊಡು ನಿನ್ನಯಚ್ಚರನು ಶರಣವಾ ಧೃಡದಲಿ ಬಂದೆನಾನು ಪ ಅವಿದ್ಯೆಮಬ್ಬಿನಲಿ ಹರಿಬಂದ ಹಾವಿನ ಪರಿಯಾಗಿ ವಿವೇಕ ಯವಿಮುಚ್ಚಿಕಂಗಾಣದೆ ಸೇವೆಗೆ ಹೊರತಾದೆ 1 ನ್ಯೂನವ ನಾಲಿಸಲು ತಪ್ಪಿಗೆ ತಾನೆಣಿಕೆಗಳಿಲ್ಲಾ ಏನರಿಯದ ಮೂಢಾ ಇವನೆಂದು ನಿನುದ್ಧರಿಸೆನ್ನಾ 2 ಎಂದೆಂದು ಪ್ರೇಮದಲಿಂದಾ ಗೆಳೆತನಾ ಛೆಂದವೆನಗ ನಿನಗ | ಎಂದೇ ಮನೆಯೊಳಿದ್ದು ಮಾತಾಡದೇ ನಿಂದುದುಚಿತವಲ್ಲ 3 ಕಡೆಗಣ್ಣಿಲಿ ನೋಡೋ ಉದಾಸೀನ ನುಡಿಯ ಮಾಡಲಿಬೇಡ | ಒಡೆಯಾ ನಿನ್ನಂಘ್ರಿಮದಾ ದಾಸರಾ ಅಡಿಗಳಾಶ್ರಯದಲಿಡೋ 4 ಕಾಲಬಿದ್ದರವು ರಾಕುಡುವರು ಕೆಳೆಲೋ ಗಾದಿಯನು ಪಾಲಿಸೋಮಹಿಪತಿ ಸುತ ಪ್ರಭು ಒಲುಮೆಯಾ ಸುಖನೀಡೋ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರುಷವಾಯಿತು ಮನಕೆ ಪ. ನಿರುತದಿ ಎನ್ನಯ ಹೃದಯದಲ್ಲೇ ನಿಂದು ಶ್ರೀ ಅನುದಿನ ಅ.ಪ. ತ್ರೇತ್ರಾಯುಗದಲಿ ಜನಿಸಿ ರಘುಪತಿಯ ದಾಸನೆಂದೆನಿಸೆ ಸೀತೆಗೆ ಉಂಗುರವಿತ್ತು ಶರಧಿಯ ಲಂಘಿಸಿ ಮಾತೆಯ ರತ್ನ ರಘುನಾಥ ಗೊಪ್ಪಿಸಿದೆಯೋ 1 ದ್ವಾಪರ ಯಗದಲಿ ಕುಂತಿಯ ಕುಮಾರನೆಂದೆನಿಸಿ ಪಾಪಿ ರಕ್ಕಸರನು ಸಂಹಾರ ಮಾಡಿ ಪ್ರಖ್ಯಾತಿಯ ಪಡೆದು ಭೀಮನೆಂದೆನಿಸಿ 2 ಮೂರನೆ ಅವತಾರದಿ ಮುನಿ ಮಧ್ವರೆಂದೆನಿಸಿ ಮಾರಮಣನ ಗುಣಗಳ ಪೊಗಳುತಲಿ ಮೂರುತಿ ರುಕ್ಮೀಣೀಶ ವಿಠಲನ ಕರುಣದಿ 3
--------------
ಗುಂಡಮ್ಮ
ಹಾನಿಯಾದ ಮೇಲೆ ಏನು ಬೆಂಬಲವಾದರಿನ್ನೇನಿನ್ನೇನು ಮಾನಹೋದ ಮೇಲೆ ದಿನವೆಷ್ಟು ಬಾಳಿದರಿನ್ನೇನಿನ್ನೇನು ಪ ಆಪತ್ತಿಗಿಲ್ಲದ ಆಪ್ತರೆಷ್ಟಿದ್ದರು ಇನ್ನೇನಿನ್ನೇನು ತಾ ಪರರಾಳದವಗ್ಹಣವು ಎಷ್ಟಿರ್ದರಿನ್ನೇನಿನ್ನೇನು ಕೋಪಿಷ್ಠನಾದವ ತಪವೆಷ್ಟು ಗೈಯಲು ಇನ್ನೇನಿನ್ನೇನು ಪಾಪಕ್ಕಂಜದನೀಗಧಿಕಾರರ್ವಿರಿನ್ನೇನಿನ್ನೇನು 1 ವನಿತೆಯ ಸೇರದ ಗಂಡ ಮನೆಯೊಳಿರ್ದರಿನ್ನೇನಿನ್ನೇನು ಒಣಗಲು ಪೈರಿಗೆ ಬಾರದ ಮಳೆ ತಾನಿನ್ನೇನಿನ್ನೇನು ಬನ್ನಬಡುವರ ಕÀಂಡು ಗಹಗಹಿಸಿ ನಕ್ಕರಿನ್ನೇನಿನ್ನೇನು ಮನ್ನಣಿಲ್ಲದ ಸಭೆ ಮಾನ್ಯರು ಪೊಕ್ಕರಿನ್ನೇನಿನ್ನೇನು 2 ಅವಮಾನ ಸಮಯಕ್ಕೆ ಒದಗದ ಗೆಳತನವಿನ್ನೇನಿನ್ನೇನು ಧವ ಸತ್ತ ಯುವತಿಯ ಕುರುಳು ಮಾರಿದರಿನ್ನೇನಿನ್ನೇನು ದಯದಾಕ್ಷಿಣ್ಯಲ್ಲದ ಅರಸನಾಳಿಕಿದ್ದರಿನ್ನೇನಿನ್ನೇನು ದಿವಮಣಿ ತನ್ನಯ ಕಿರಣಂಗಳ್ತೋರದಿರಲಿನ್ನೇನಿನ್ನೇನು 3 ಸತಿ ರೂಪಸ್ಥಳಾದರಿನ್ನೇನಿನ್ನೇನು ರೋಗ ಕಳೆಯದ ವೈದ್ಯರಾನಂಗರಿದ್ದರಿನ್ನೇನಿನ್ನೇನು ಆಗಿಬಾರದವರ ಬಾಗಿಲ ಕಾಯ್ದರಿನ್ನೇನಿನ್ನೇನು ಭೋಗಿವಿಷಕೆ ಗರುಡಮಂತ್ರನುವಾಗಲು ಇನ್ನೇನಿನ್ನೇನು 4 ಪ್ರೇಮದವರೆ ತನ್ನೊಳ್ ತಾಮಸರಾದಿರಿನ್ನೇನಿನ್ನೇನು ನೇಮಿಸಿದ್ಯೆಲ್ಲವು ಇದಿರಾಗಿ ಕೂತಮೇಲಿನ್ನೇನಿನ್ನೇನು ಕಾಮಧೇನುವೆ ಮನದಿ ಕಾಮಿತವೀಯದಿರೆ ಇನ್ನೇನಿನ್ನೇನು ಸ್ವಾಮಿ ಶ್ರೀರಾಮನ ಪ್ರೇಮ ಪಡೆಯದ ನರ ಇನ್ನೇನಿನ್ನೇನು 5
--------------
ರಾಮದಾಸರು
ಹಾಸ್ಯದ ಮಾತಿದು ಮಾನವಗೆ ವಿಷಯೇಚ್ಛೆಯ ಜೀವನವೆಂಬುದು ಶಾಶ್ವತ ಶಾಂತಿಯ ನೀಡುವ ನಿನ್ನಯ ಪದವನೆ ಮೆರೆತಿಹದು ಗುರುವೇ ಈಶ್ವರನೀತನೆಂದು ಸಾರಿತು ಶೃತಿ ಇದ ಕೇಳುತ ನಾ ಕರುಣಾ ನಿಧಿಯೇ ನಿನ್ನ ಹೊರತಿ ನ್ನನ್ಯರು ಗತಿಯಿಲ್ಲೆನ್ನುತ ನಾ ಚರಣಕಮಲಕೆ ಮೊರೆಹೊಕ್ಕೆ ಪರಮಾನಂದಾತ್ಮ ಸ್ವರೂಪದಾ ಅರಿವನು ನೀಡಿ ಪೊರೆವುದು ಎನ್ನಶಂಕರ ಗುರುದೇವಾ
--------------
ಶಂಕರಭಟ್ಟ ಅಗ್ನಿಹೋತ್ರಿ
ಹಿಗ್ಗಿದಳು ನಂದನ ಸತಿ ಮುಗ್ಧೆ ತನ್ನಯ ಸುತನ ಮುದ್ದು ಮುಖವ ನೋಡಿ ಅ.ಪ ಪಾಲು ಬೆಣ್ಣೆ ಕಳ್ಳ ತಾಳು ಕಟ್ಟುವೆ ನಿನ್ನ ಕಾಲುಗಳನೆಂದು ಕರಗಳಲಿ ಪಿಡಿದು ನೀಲಮೇಘಶ್ಯಾಮ ಶ್ರೀಲಕುಮಿಯರಸನನು ಬಾಲನೆಂದರಿತು ಆಲಿಂಗನದಿ ಮೈ ಮರೆತು1 ಅಂಬುಜೋದ್ಭವನಯ್ಯ ಅಂಬೆಗಾಲಿಡುವುದನು ನಂಬಬಹುದೇ ಮೋಹಜಾಲವಿರಲು ಸಂಭ್ರಮದಿ ಸುತನನ್ನು ಚುಂಬಿಸುತ ರಭಸದಲಿ ಮೋದ ಕಂಬನಿಯ ಸುರಿಸುತ್ತ 2 ಓರೆಗಣ್ಣಿನ ನೋಟ ನಾರಿಯರ ಪೇಚಾಟ ಮೂರು ಲೋಕಕೆ ಹರ್ಷಕರ ಮಂದಹಾಸ ಸೇರಿಸಿದ ಮುಕ್ತಗಳ ಮೀರಿ ಪೊಳೆಯುವ ದಂತ ಚಾರುಮುಖಿ ಸುತನ ಮನಸಾರ ದರುಶನದಿಂದ 3 ಭೃಂಗಗಳ ಧಿಕ್ಕರಿಪ ಮಂಗುರುಳು ಮಸ್ತಕದಿ ರಂಗಿನಾ ಕಸ್ತೂರಿತಿಲಕ ಪಣೆಯಲ್ಲಿ ಸಿಂಧು ಶ್ರೀರಂಗನ್ನ ನೋಡುತಲಿ ಅಂಗನಾಮಣಿ ಅಂತರಂಗ ಪ್ರೇಮದ ಭರದಿ 4 ತನ್ನ ಉದರದಿ ನಳಿÀನಜಾಂಡವನೆ ಪೊತ್ತಿರುವ ಉನ್ನತೋನ್ನತ ಸುಗುಣ ಜ್ಞಾನಮಯನ ತನ್ನ ಮಗನೆಂದರಿತು ಸ್ತನ್ಯಪಾನದಿ ಸುಪ್ರ ಸನ್ನಮುಖಿ ಹರುಷ ಪುಳಕಿತಳಾಗಿ ಹೆಮ್ಮೆಯಲಿ 5
--------------
ವಿದ್ಯಾಪ್ರಸನ್ನತೀರ್ಥರು
ಹಿಡಿ ಹಿಡಿರಿಂದು ಸಿಕ್ಕಿದ ಕಳ್ಳನಾ ಬಿಡಬ್ಯಾಡಿರೆಂದಿಗೆ ಹಜ್ಜೆನೆಲಿಗೆ ತಾರನಾ | ಮೈಯ್ಯ ದೋರನಾ ಪ ಹೃದಯದೋಳಗಿನಾ ಗಂಟವ ಬಿಡುತಾ ಮುದದಿಕುಳ್ಳಿರಲಲ್ಲಿ ಬಂದು ನೋಡುತಾ ಇದರ ಚಿತ್ತ ಪೇಠಾರಿಗೆ ಕೈಯ್ಯಾನೀಡುತಾ ಒದಗಿಕದ್ದೊಯ್ದತಿರಗದೆ ಧನಿ ಮಾಡುತಾಧನಿ ಮಾಡುತಾ 1 ಖೂನ ತನ್ನಯ ಬಲ್ಲಾಸಾಧುಜನವಾ ಕಾಣುತಾರ್ಜಿತ ಶೆಳೆದು ಕೊಂಡು ಧನವಾ ಏನ ಹೇಳಲಿ ಬಿಡನು ಅವರ ಪ್ರಾಣವಾ ವನವಾಕೊಂಡು ಗೋಧನವಾ 2 ಅಡದಾರಿಯಾ ನಡದು ಹೋಗಿ ಬಿದ್ದನಾ ನಡುವೆ ತೊಳಲಿಸುವನು ವಿರುದ್ಧನಾ ಹಿಡಿ ಗುರು ಮಹಿಪತಿ ಪ್ರಭು ಪ್ರಸಿದ್ಧನಾ ಬಿಡದೆ ಭಂಡಾರಕಾಯಲಿಡುವ ಪ್ರಬುದ್ಧನಾ ವಾಜಿಲಿದ್ದನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹಿತದಿಂದ ಪೊರೆಯೆನ್ನ | ವಿತತ ಮಹಿಮ ಹರಿಯೇ ಹಿತ ಅಹಿತವೆರಡನ್ನು | ಸಹಿಸುವಂತೇ ಪ ಅತಿ ದಯಾಪರನೆಂದು | ಖತಿದೂರನೆಂದೆನುತಶ್ರುತಿ ನಿಚಯ ಸಾರುತಿದೆ | ಗತಿ ಪ್ರದನೆ ದೇವಾ ಅ.ಪ. ವೇದ ವೇದ್ಯನೆ ದೇವ | ಆದ್ಯಂತ ರಹಿತನೇಕಾದುಕೋ ಎನ್ನನು | ಮೋದಗಳನಿತ್ತೂ ||ಸಾಧನ ಸುಮಾರ್ಗದಲಿ | ಹಾದಿಯನು ಕಾಣದಲೆಬಾಧೆಗೊಳಗಾಗಿಹನ | ಆದರಿಸು ದಯವನಧೀ 1 ಪ್ರಾಣಪತಿಯೇ ಎನ್ನ | ಪ್ರಾಣಗಳು ವಶವಿಲ್ಲಧ್ಯಾನ ಮಾಡುವೆನೆನ್ನ | ಮನನಿಲ್ಲಧ್ಹರಿಯೇ ||ಜ್ಞಾನ ಕರ್ಮೇದ್ರಿಗಳು | ಏನೊಂದು ನಿನ್ನಯಾಧೀನವಿರಲೂ ನಾನು | ಏನು ಮಾಡಲು ಸಾಧ್ಯ 2 ಗೋವರ್ಧನೋದ್ಧರನೆ | ಗೋವುಗಳ ಪರಿಪಾಲಕಾವ ಕರುಣೀ ನಮ್ಮ | ದೇವರ ದೇವಾ ||ಗೋವಿದಾಂಪತಿ ಗುರು | ಗೋವಿಂದ ವಿಠಲನೆನೀವೊಲಿಯದಿನ್ನಾರು | ಕಾವರನು ಕಾಣೆನಯ್ಯಾ 3
--------------
ಗುರುಗೋವಿಂದವಿಠಲರು