ಒಟ್ಟು 1446 ಕಡೆಗಳಲ್ಲಿ , 98 ದಾಸರು , 1132 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವ್ಯಗ್ರಬುದ್ಧಿಯು ನಿನಗೆ ಶ್ರೀಹರಿಯೆ ಸುಗ್ರಾಸನವು ನನಗೆ ಅಗ್ರದೈವರು ನೀನೇ ಗತಿಯೊ ಉಗ್ರತಪದಲಿ ಭಜಿಸುವಾತ್ಮಗೆ ಉಗ್ರರೂಪವ ತೋರಿ ವಿಧವಿಧಾ- ನುಗ್ರಹಿಪೆ ಅಮೃತಾನ್ನ ಭೋಜನ ಪ ಜನಿಸಲಮೃತ WಟÀವು ಸಿಂಧುವಿನೊಳು ವನಜನಾಭನೆ ವಂಚಿಸಿ ದನುಜ ಕಣಕದು ಇಲ್ಲದಾಗಿ ಅನುಮಿಷರಿಗತ್ಯಂತಮಿಕ್ಕೆ ಘನಹರುಷ ತೋರಿದೆಯು ಸುರರಿಗೆ ನಿನಗೆ ಮೆಲ್ಲಲು ಇರಿಸಲಿಲ್ಲಾ 1 ಧೀರ ದೂರ್ವಾಸ ಮುನಿ ಶಿಷ್ಯರ್ವೆರಸಿ ಹೋರಿದಾಹಾರಕ್ಕಾಗಿ ನೀರಜಾಕ್ಷಿಯು ಘೋರ ಬಂತೆಂದಾ ರಾತ್ರಿಯಲಿ ನೆನೆಯೆ ನಿನ್ನನು ಆ ರಭಸದೊಳು ಬಹುನಿಮಿಷÀದಿ ಸೂರಿ ಮಾಡ್ದೆಯೋ ಇಷ್ಟು ಭೋಜನಾ 2 ಸಖ ಸುದಾಮನು ಕಾಣಲು ಶ್ರೀಹರಿಯೆ ಭಕುತಿ ನೋಡಿ ಮೆಚ್ಚಿದಿ ಮುಕುತಿದಾಯಕ ಪರಮ ಪುರುಷನೆ ಭಕುತಿ ಭೋಜನವಿತ್ತೆನಗೆ ಸದಾ ಪ್ರಕಟ ನರಸಿಂಹವಿಠಲನೆ ಬಲು ನಿಕಟಮನ ಕೊಡು ನಿನ್ನ ಭಜಿಸುವಾ 3
--------------
ನರಸಿಂಹವಿಠಲರು
ವ್ಯರ್ಥವಾಯಿತಲ್ಲ ಜನ್ಮವು ಸಾರ್ಥಕಾಗಲಿಲ್ಲ ಪ ಅರ್ಥದಾಸೆಯಲಿ ಪೃಥ್ವಿಯೊಳಗೆ ಸುತ್ತಿಮತ್ತನಾಗಿ ಬಲು ಕೃತ್ಯಗಳನು ಮಾಡಿಅ ಹರಿಯ ನೆನಯಲಿಲ್ಲ ಹರುಷದಿ ಗರುವ ಪುಟ್ಟಿತಲ್ಲಪರಮ ಮೂಢರಲಿ ನಿರುತ ಸಂಗವ ಮಾಡಿಗುರು ಹಿರಿಯರ ದಯ ದೊರೆಯದೆ ಸುಮ್ಮನೆ1 ಏನು ಪೇಳಲೇನು ಎನಗೆ ಹೀನ ಬಿಡದು ಮುನ್ನಶ್ವಾನಗಿಂತಲು ಬಲು ಮಾನಗೆಟ್ಟು ನಾದೀನನಾಗಿ ಮನೆಮನೆಗಳ ತಿರುಗಿ 2 ಭಾಗವತರ ಪಾದಕ್ಕೊಂದಿನ ಬಾಗಿ ನಡೆಯಲಿಲ್ಲರಾಗುರಂಗು ಭಕ್ತಿ ಭಾವದೊಳುಬೀಗಿ ಚೆನ್ನಕೇಶವನನು ನೆನೆಯದೆ 3
--------------
ಕನಕದಾಸ
ವ್ಯಾಸರಾಯರ ಚರಣವನೆ ಸೇವಿಸಿ ಪ ವ್ಯಾಸರಾಯರ ಚರಣ ಸರಸಿಜದ ಸೇವೆ ಬಲು ಮೀಸಲ ಮನದಿ ಮಾಡೆ ಆಶೆಪಾಶೆಯ ತೊರೆದು ಕ್ಲೇಶವೆಲ್ಲವ ಹರಿಸಿ ಭಾಸಿಸುವ ಬಿಡದಲೇ ಹೃದ್ದೇಶ ಖೇಶದೊಳಗೇ ಅ.ಪ. ಬನ್ನೂರು ಪುರದಲ್ಲಿ ಮುನ್ನೋರ್ವ ಬ್ರಾಹ್ಮಣನಮನ್ನೆಯೋಳ್ಳುದಿಸಲೂ ಸ್ವರ್ಣ ಪಾತ್ರೆಲಿ ತರಿಸಿಘನ್ನ ಮಹಿಮನ ತಂದು ಬ್ರಹ್ಮಣ್ಯ ಯತಿವರರು ತಮ್ಮ ಆಶ್ರಮದಿ ಪೊರೆಯೆ ||ಉನ್ನತದ ಗುಡ್ಡದಲಿ ಗವಿಯ ಮನೆಯಾಗಿರಲು ಚಿಣ್ಣನಾ ತೊಟ್ಟಿಲಿನ ಮೇಲಿನ ಗವಾಕ್ಷದಿಂಚೆನ್ನಗೋವ್ ದಿನದಿನದಿ ಪಾಲ ಕರೆಯುತ ಚಿಣ್ಣನನು ತಾ ಬಲು ಸಲಹಿತು 1 ತಾಪಸೋತ್ತಮರಾದ ಶ್ರೀಪಾದರಾಯರ ಸ-ಮೀಪದೊಳು ಆ ಪರಮ ಶಾಸ್ತ್ರ ವ್ಯಾಸಂಗದೀಭಾಪು ಭಾಪನೆ ಮೆರೆದು ಭಕ್ತಿ ಸುಪಥವ ಪಿಡಿದು ಮೈ ಮರೆದು ಕುಣಿಯುತಿರುವ ||ಶ್ರೀಪಾದ ಮುನಿಪ ತಾ ಮುಚ್ಚಳವ ತೆರೆಯದಿಹ ಸಂಪುಟವ ತೆರೆಯುತ್ತ ಶ್ರೀ ಪತಿಯನೆ ನೋದುತಶ್ರೀಪ ಶ್ರೀ ವೇಣುಗೋಪಾಲ ಕೃಷ್ಣನ್ನ ಕಾಣುತ್ತ ಕುಣಿ ಕುಣಿದಾಡಿದ 2 ಶಾಲಿಗ್ರಾಮವ ಪಿಡಿದು ತಾಳವನೆ ಹಾಕುತ್ತಬಲುಭಕ್ತಿ ಭರದಿಂದ ಘಲ್ಲು ಘಲ್ಲನೆ ಕುಣಿಯೆಖುಲ್ಲ ಜನರಿದರ ವಳ ಮರ್ಮವನೆ ತಿಳಿಯದಲೆ ಗುಲ್ಲುಗುಲ್ಲೆಂದು ನಗಲೂ || ಬಲ್ಲಿದ ಶ್ರೀಪಾದರಾಯರಿದ ಕೇಳಿ ಕಂಗಳಲಿ ಗಂಬನಿ ಗಲ್ಲದಲಿ ಕೈಯಿಡುತ ಸೊಲ್ಲ ಕೇಳಿರಿ ಸುಜನರೆಲ್ಲರು ಶ್ರೀ ಕೃಷ್ಣ ನಮ್ಮ ವ್ಯಾಸರೋಶನಾದನು 3 ಸಾರಥಿ ಹರಿಯನಿಜ ಮತವ ಬೋಧಿಸುತ ನಿಜ ಜನರ ಪೊರೆಯುತ್ತಕುಜನ ಕುತ್ಸಿತ ಮಾಯಿಮತ ಜೈಸಿಅಜನನಯ್ಯನ ಪ್ರೀತಿ ಸಂಪಾದಿಸಿ ||ಸುಜನ ಪಾಲಕ ಕೃಷ್ಣರಾಜನಿಗೆ ಕುಹುಯೋಗಗಜಬಜಿಸಿ ಬರುತಿರ್ಪುದನು ನಿಜ ಮನದಿ ತಿಳಿದುಗಜವರದ ನಂಘ್ರಿಯನೆ ಭಜಿಸುತ್ತ ವಿಜಯ ಪುರಿ ಸಿಂಹಾಸನವನೇರ್ಧರ 4 ಪರಿ ಗ್ರಂಥ ರಚನೆಯಲಿ ಕಳೆಯೆ ಕಾಲವಕಲು ಮನದ ಜನರಿವರ ಬಲು ಪರಿಯ ಮಹಿಮೆಗಳನೂ ತಾವ್ ತಿಳಿಯಲೊಶವೆ 5 ಇಂಪುಗೊಳ್ಳುತ ಮನದಿ ತಂಪಿನಿಂದಲಿ ಮೆರೆವಪಂಪೆ ಸುಕ್ಷೇತ್ರದಲಿ ಬಾಂಬೊಳೆಯ ಜನಕನ್ನಸಂಪ್ರೀತಿಯನೆ ಪಡೆದಿರುವ ಯಂತ್ರ ಉದ್ಧಾರರನ ಸ್ಥಾಪಿಸುತಲಿ||ನೋಂಪಿನಿಂದಲಿ ಬ್ರಾಹ್ಮಲಕ್ಷ ಗುಂಪಿಗೆ ಉಣಿಸಿ |ಸಂಪುಲ್ಲ ಲೋಚನನ ಶಂಫಲಿಯ ಪುರಗನನುಸಾಂಪ್ರದಾಯಕದಿಂದ ಸಂಪ್ರೀತಿ ಬಡಿಸಿದರ ಪದ ಪಾಂಸುವನೆ ಸಾರಿರೋ 6 ಪರಿ ಪರಿಯ ಪೂಜೆಯನೆ ಗೈಯ್ಯುತಲಿ ||ಶ್ರೀಶನ ಸುಪೂಜಾ ವಿಧಾನವನೆ ಗೈಸುತ್ತದೋಷದೂರನ ಸೇವೆ ಮೀಸಲಳಿಯದ ಮನದಿ ಒಸೆದು ತಾವ್ ಗೈಯ್ಯುತ ಭಾಸಿಸುವ ಸತ್ಕೀರ್ತಿಯುತರಾಗಿ ಮೆರೆಯುತಿಹರ 7 ಪುರಂದರ ವಿಠಲ ದಾಸನೆಂದೂದಾಸ ಪೀಠದಿ ನಿಲಿಸಿ ದಾಸ ಕೂಟವ ರಚಿಸಿ ಸತ್ಪಂಥವನೆ ಸಾರಿದ ||ಆಶುಕವಿತೆಯ ರಚಿಸಿ ಪ್ರಾಕೃತ ಸುಭಾಷೆಯಲಿಕೇಶವನ ಗುಣಧಿಯಲಿ ಲೇಸಾಗಿ ಈಸುತಲಿದಾಸರೊಡನಾಡುತಲಿ ಮೀಸಲಾಗಿರಿಸಿ ತನು ಕೇಶವನ ಗುಣ ಪೊಗಳಿದ 8 ಜಯ ಜಯತು ಶುಭಕಾಯ ಜಯ ಜಯತು ವ್ಯಾಸಾರ್ಯಜಯ ಮಧ್ವಮುನಿ ಪ್ರೀಯ ಜಯ ಚಂದ್ರಿಕಾಚಾರ್ಯಜಯತು ವಿದ್ವದ್ದಾರ್ಯ ಜಯತು ಸುರಮುನಿ ಪ್ರೀಯ ಜಯ ಜಯತು ಯತಿವರ್ಯನೆ ||ಕಾಯಭವ ಪಿತ ಗುರೂ ಗೋವಿಂದ ವಿಠ್ಠಲಗೆಪ್ರೀಯ ಗುರು ವ್ಯಾಸಾರ್ಯ ಸ್ತೋತ್ರವನು ಭಾವ ಶುದ್ಧಿಯೊಳಾವ ಭಜಿಸುವನವಗೆ ಭವವನಧಿ ಉತ್ತರಿಸೆ ನಾವೆಯೆನಿಸುವುದಿದು 9
--------------
ಗುರುಗೋವಿಂದವಿಠಲರು
ವ್ಯಾಸರಾಯರ ಸ್ಮರಿಸಿ ಏಸು ಜನ್ಮದ ಪಾಪ ನಾಶವಾಗುವುದು ನಿಮ್ಮಾಶೆ ಸಿದ್ಧಿಸುವುದು ಲೇಸಾಗಿ ಸುಖಿಸಿ ಆನಂದ ವೈಕುಂಠದಲಿ ವಾಸವಾಗುವುದು ನಿಜ ಭಕುತಿಯಲಿ ಬಿಡದೆ ಪ ಪಿತನಿಂದ ನೊಂದು ರತಿಪಿತನ ಸ್ಮರಿಸುತ ಪ್ರತಿಬಂಧಕಗಳ ಪ್ರತಿಯಾಗಿ ಬಂದಿರಲು ಬಲು ಮತಿವಂತನಾಗಿ ಮುದದೀ ಕ್ಷಿತಿಯ ಭಾರವ ವೊಹಿಸಿ ಕೃತಭುಜ ಮುನೀಶ್ವರನ ಸ್ತುತಿಸುತಲ್ಲಿದ್ದು ಮಿತಿಕಾಲ ಹಿಂಗಳದು ಅಚ್ಯುತನ ವರದಿಂದ ಬಂದು 1 ಅಲ್ಲಿ ತ್ರಿಣಿನೇತ್ರ ಶ್ರೀ ವಲ್ಲಭನ ಶ್ರೀಪಾದ ಪಲ್ಲವಾರುಣಿ ಚಿತ್ತದಲ್ಲಿ ಪ್ರತಿದಿವಸದಲಿ ನಿಲ್ಲಿಸಿ ನಿಗಮಾರ್ಥದಿಂದ ಪೂಜಿಸುತ್ತಿದ್ದ ಬಲ್ಲ ಭಕುತಿಂದ ಸತತ ಖುಲ್ಲನಲಿ ಪುಟ್ಟಿದ ಪ್ರಲ್ಹಾದ ದೇವನು ಬಲ್ಲಿದಾನಾಗೆಲ್ಲಿ ಸಂಸಾರನುತ್ತರಿಸಿ ಮುನಿ ಮೆಲ್ಲನೇ ನಡತಂದನು2 ಬಂದ ನಾರದಗೆ ಪ್ರಲ್ಹಾದ ದೇವನು ಎರಗಿ ನಿಂದು ಕಂಗಳ ಮುಗಿದು ತ್ರಾಹಿ ತ್ರಾಹಿ ಎಂದು ಇಂದು ನಿಮ್ಮಯಾ ದರುಶನಾ ಛಂದವಾಯಿತೆನಗೆತ್ತಲಿಂದ ಬಂದಿರಿ ಇತ್ತ ಬಂದ ವಿಚಾರ ಪೇಳೆಂದು ಬಿನ್ನೈಸಲು ನಂದದಲಿ ಹಾಹಾ ಎನುತಾ 3 ವೃಕೋದರನಿಂದ ನೊಂದು ದೇಹವನು ಬಿಡುವಾಗ ಬಾ ಲ್ಹಕರಾಯನಾಗಿ ಹುಟ್ಟಿದ ಪ್ರಲ್ಹಾದನು ವೈದಿಕ ಮಾರ್ಗವನ್ನೇ ಧರಿಸಿ ಉಕುತಿಯನೇ ಸಾಧಿಸಿ ಕಲಿಯೊಳಗೆ ನಿಮ್ಮ ಪೂ ಜಕನಾಗಿಪ್ಪೆನೆಂದು ತಲೆವಾಗಲು ಇಂದು ಪ್ರಕಟವಾಯಿತು ಧರೆಯೊಳು 4 ದಿಕ್ಕುಗಳಂ ಮರದು ಧಿಗಿಧಿಗಿನೆ ಚಿಗಿದಾಡುತ್ತ ಉಕ್ಕಿದವು ಕಣ್ಣಿಂದ ಅಶ್ರು ಜಲಧಾರೆ ತಾ ಮೈಮರೆದು ದೇವಕಿ ನಂದನನ ನೆನೆದು ನಕ್ಕು ಕಿಲಿಕಿಲಿ ರಾಹಸ್ಯಗಳನುಚ್ಚರಿಸುತಾ ತಕ್ರ್ಕೈಸಿ ತಿಳುಪಿದನು ಮುಂದಣಾಗಮವೆಲ್ಲ ವೃತ್ತಾಂತ ಅಕ್ಕಟ ಅದ್ಭುತವೇನೆಂಬೆ 5 ಬನ್ನೂರು ಗ್ರಾಮದಲಿ ಜನಿಸಿದನು ಭೂಸ್ವರೂಪ ಮುನ್ನಿಲ್ಲದೇ ಬೆಳೆದು ಮುನಿ ಸುಬ್ರಾಹ್ಮಣ ರನ್ನು ಪಾಲಿಸುವ ಪರಮಾನಂದವುಳ್ಳ ಬ್ರಹ್ಮಣ್ಯತೀರ್ಥರ ಕರದಿ ಚೆನ್ನಾಗಿ ಪೋಷಿಸಿಕೊಂಡು ಉಪನೀತವಾಗಿ ಸನ್ಯಾಸಿ ಪಟ್ಟವನೆ ಧರಿಸಿ ಧರ್ಮದಲಿ ಸ ವಿದ್ಯವನೋದಿ ಧನ್ಯ ಕೀರ್ತಿಯಲಿ ಮೆರೆದಾ 6 ರಾಯಗದ್ದುಗೆನೇರಿ ಅವನಿಗೆ ಬಂದ ಮಹಾ ಕುಹುಯೋಗವ ನೂಕಿ ರಾಜ್ಯದೊಳಗೆ ಇದ್ದ ಸುವರ್ಣ ಛಾಯದಂತೆ ಕಾಂತಿಲೀ ನ್ಯಾಯಾಮೃತ ತರ್ಕ ತಾಂಡವ ಚಂದ್ರಿಕೆ ಎಂಬ ಸ್ಥಾಯವಾದರು ಪೊಂಪದಿ7 ಯಂತ್ರೋದ್ಧಾರಕನ ಪ್ರತಿಷ್ಠಿಸಿ ವಿಜಯೀಂದ್ರ ಸಂತ ವಾದಿರಾಜಗೊಲಿದು ಪುರಂದರ ಮಂತ್ರ ಸಿದ್ಧಿಯನೆ ಕೊಟ್ಟು ಭ್ರಾಂತಗೊಳಿಸುವ ಮಹಾ ಅನ್ಯಾಯ ಮತವೆಂಬ ಕಾಂತಾರ ಪಾವಕನೆ ವ್ಯಾಸಾಬ್ಧಿಯನು ಬಿಗಿದು ಚಿಂತಿತಾ ಫಲದಾಯಕ 8 ಮಧ್ವಮತವೆಂಬ ದುಗ್ಧಾಬ್ಧಿಗೆ ಪೂರ್ಣೇಂದು ಹೃದ್ವನಜದೊಳಗಿರಿಸಿ ಕೃಷ್ಣನ ಪದಾಂಬುಜವ ಚಿದ್ವಾತ್ಯದಲಿ ನಿಲಿಸಿ ಕಾವ್ಯದಲಿ ಕೊಂಡಾಡಿ ಸದ್ವೀರ ವೈಷ್ಣವರಿಗೆ ಪದ್ಧತಿಯನು ಪೇಳಿ ತವಕದಿಂದಲಿ ತಾವು ಸದ್ವೈಷ್ಣವ ಲೋಕ ಸಿರಿಮರಳೈದಿದರು ಪಾದದ್ವಯವ ಭಜಿಸುವವರೂ ಕೇಳಿ 9
--------------
ವಿಜಯದಾಸ
ವ್ಯಾಸಾ ಬದರಿ ನಿವಾಸಾ | ಎನ್ನಯ | ಕ್ಲೇಶ ನಾಶನಗೈಸು ಮೌನೀಶಾ | ಸಾಸಿರ ಮಹಿಮನೆ | ದೋಷರಹಿತ ಸುರ ಭೂಸುರ ಪರಿಪಾಲ ಶಾಶ್ವತ ವೇದ ಪ ಸತ್ಯವತಿ ವರಸೂನು ಭವತಿಮಿರ ಭಾನು | ಭೃತ್ಯವರ್ಗದ ಸುರಧೇನು | ಸತ್ಯಮೂರುತಿಯೆ ನೀನು | ಸ್ತುತಿಪೆ ನಾನು || ಹೊತ್ತು ಹೊತ್ತಿಗೆ ಸೂಸುತ್ತಿರಲೆನಗದು | ಅತ್ಯಂತ ಸುಖತರ | ಸುತ್ತವ ಸುಳಿಯೆಂದೆತ್ತಿ ಕಡೆಗೆಯಿಡು | ಎತ್ತ ನೋಡಲು ವ್ಯಾಪುತ ಸದಾಗಮ 1 ಲೋಕ ವಿಲಕ್ಷಣ ಋಷಿ | ಗುಣವಾರಿ ರಾಸಿ | ವೈಕುಂಠ ನಗರನಿವಾಸಿ | ನಾಕಾರಿಗಳ ಕುಲದ್ವೇಷಿ ಚಿತ್ರ ಸನ್ಯಾಸಿ | ಬೇಕೆಂದು ಭಜಿಪೆ ನಿಲಸಿ | ಜೋಕೆ ಮಾಡುವುದ | ನೇಕ ಪರಿಯಿಂದ | ನಿಕರ ತರಿಸದೆ | ಭೂಕಾಂತರು ನೋಡೆ | ಸಾಕಾರ ದೇವ ಕೃಪಾಕರ ಮುನಿ ದಿವಾಕರ ಭಾಸಾ2 ನಿರುತ ಎನ್ನಯ ಅರಿಷ್ಟ | ಮೆರೆವ ಉನ್ನತ ವಿಶಿಷ್ಟ | ಉರಗ ಕಿನ್ನರ ಗಂಧರ್ವರ | ಕರಕಮಲಗಳಿಂದ | ವರಪೂಜೆಗೊಂಬ | ಸಿರಿ ಅರಸನೆ ನಮ್ಮ ವಿಜಯವಿಠ್ಠಲ ಪರಾ | ಶರಸುತ ಬಲು ವಿಸ್ತರ ಜ್ಞಾನಾಂಬುಧೆ || 3
--------------
ವಿಜಯದಾಸ
ಶಕುನವೆ ಬಲು ಶಕುನವೆ ಸಖ ಕೃಷ್ಣನ ಮುದ್ದು ಮುಖವ ಕಾಂಬುವೆ ನೀಗ ಪ. ಹಾಲು ಮೊಸರಿನ ಕುಂಭ ಮೇಲಾದ ಘ್ರತÀ ಬೆಣ್ಣಿಸಾಲುಸಾಲಾಗಿ ಎದುರಾಗಿ ಇಂದೀವರಾಕ್ಷಿಸಾಲುಸಾಲಾಗಿ ಎದುರಾಗಿ ರಂಗನ ಕಾಲಿಗೆಶಿರವ ನೀಡುವಂತೆ ಇಂದೀವರಾಕ್ಷಿ 1 ಕೋಟಿ ಜನರು ಕೂಡಿ ತ್ವಾಟ ಪಟ್ಟಿಗಳದಾಟಿ ನೀಟಾದ ಹಂಸ ಗಿಳಿವಿಂಡುನೀಟಾದ ಹಂಸ ಗಿಳಿ ವಿಂಡು ನಡೆದವುಹಾಟಕಾಂಬರನ ದಯವಿದು ಇಂದೀವರಾಕ್ಷಿ 2 ಜತ್ತಾಗಿ ದ್ವಾರಕೆಯ ಹತ್ತಿರ ಬರುತಿರೆಮುತ್ತಿನ ಹೇರು ಇದುರಾಗಿ ಇಂದೀವರಾಕ್ಷಿಮುತ್ತಿನ ಹೇರು ಇದುರಾಗಿ ರಂಗಯ್ಯಹಸ್ತಲಾಘವ ಕೊಡುತಾನೆ ಇಂದೀವರಾಕ್ಷಿ3 ಸಾವಿರ ಅಂಗಡಿ ಸಾಲಾದ ಬಾಜಾರ ನೇರಳೆ ಹಣ್ಣು ಇದುರಾಗಿ ಇಂದೀವರಾಕ್ಷಿನೇರಳೆ ಹಣ್ಣು ಇದುರಾಗಿ ರಂಗಯ್ಯಮೇಲು ಕರುಣದಲಿ ಕರೆಸುವನು ಇಂದೀವರಾಕ್ಷಿ 4 ಹಸ್ತಿನಾಪುರದವರು ಸಪ್ತಪ್ರಾಕಾರ ದಾಟಿಮತ್ತೆ ಶ್ರೀಗಂಧ ಇದುರಾಗಿ ಇಂದೀವರಾಕ್ಷಿಮತ್ತೆ ಶ್ರೀಗಂಧ ಎದುರಾಗಿ ಬಲರಾಮಅರ್ಥಿಲೆ ಬಂದು ಕರೆವÀನು ಇಂದೀವರಾಕ್ಷಿ5 ವ್ಯಾಲಾಶಯನನ ಮನೆಯ ಏಳು ಬಾಗಿಲದಾಟಿಬಾಳೆಯ ಹಣ್ಣು ಇದುರಾಗ ಇಂದೀವರಾಕ್ಷಿಬಾಳೆಯ ಹಣ್ಣು ಇದುರಾಗ ರಂಗಯ್ಯಕೇಳೋನು ಕ್ಷೇಮ ಕುಶಲವ ಇಂದೀವರಾಕ್ಷಿ6 ನಾಗಶಯನನ ಮನೆಯ ಬಾಗಿಲು ಹೊಗಲಿಕ್ಕೆನಾಗಸಂಪಿಗೆಯ ಮುಡಿದವರು ಇಂದೀವರಾಕ್ಷಿನಾಗಸಂಪಿಗೆಯ ಮುಡಿದವರು ಬಂದರು ಈಗರಾಮೇಶನ ದರುಶನಕೆ ಇಂದೀವರಾಕ್ಷಿ 7
--------------
ಗಲಗಲಿಅವ್ವನವರು
ಶಂಭು ಸ್ವಯಂಭುಗಳ ಹೃದಂಬರಕಿಂದು-ಬಿಂಬದಂತಿಹ ಕಂಬುಧರನ ನಂಬು ಮನುಜಡಂಬ ಮತವ ಹಂಬಲಿಸದೆ ಪ. ಕೃದ್ಧ ಖಳರ ಗೆದ್ದು ವೇದವೇದ್ಯವೆನಿಪ ಶುದ್ಧಸುಧೆಯಉದ್ಧರಿಸಿದ ಮಧ್ವಮುನಿ ಪ್ರಸಿದ್ಧವರಗೆ ಊಧ್ರ್ವಹರಿಯಹೊದ್ದಿ ಬದುಕು ಊಧ್ರ್ವಪುಂಡ್ರ ಶ್ರೀಮುದ್ರೆಯನ್ನುಸದ್ವ್ರತಿಯಾಗು ವೃದ್ಧರಂಘ್ರಿಪದ್ಮಕೆರಗು ಕದ್ಯಕರಗದಾದ್ವವ (?) ಬಿಡು 1 ವಿತ್ತ ಪುತ್ರಮಿತ್ರರರ್ಥಿಗೆ ಸುತ್ತ ತಿರುಗುತಿರದೆತೀರ್ಥಕ್ಷೇತ್ರಯಾತ್ರೆಗಳನು ಹೊತ್ತು ಹೊತ್ತಲಿ ವರ್ತಿಸುತಿರುಭಕ್ತರೆ ನಿನ್ನ ಮಿತ್ರರು ಹರಿಭಕ್ತಿಯ ನಿನಗಿತ್ತು ಮತ್ತೆಮುಕ್ತಿಪಥವ ಹತ್ತುವ ಸಂಪತ್ತ ನಿನ್ನತ್ತ ಮಾಡು 2 ಕೋಪವ ಕಳೆ ತಾಪವ ತಾಳು ಪಾಪದ ಬಲು ಲೇಪಕಂಜುಭೂಪರ ಸೇವೆ ಆಪತ್ತಿಹುದು ತಾಪಸರ ಸಮೀಪವ ಸೇರುಶ್ರೀಪತಿ ಹಯವದನನ ಪದದೀಪದ ಬೆಳಕಿನಲಿ ವಿಷಯಕೂಪವ ಕಳೆದಾಪರಮನಲಿ ಪರಸೇವೆಲಾ [ಪೂ]ರನಾಗು 3
--------------
ವಾದಿರಾಜ
ಶರಣು ಗಿರಿಯ ತಿಮ್ಮಾ | ಶರಣು ಪುರುಷೋತ್ತಮಾ | ಶರಣು ಮಹಾ ಮಹಿಮ | ಶರಣು ಪರಬೊಮ್ಮಾ | ಪರಿಹರಿಸುವದು ಹಮ್ಮಾ ಪ ವರೇಣ್ಯ | ಭಂಗ | ಹರಿಸಿದ ಶಿರಿ ರಂಗ | ವಿಹಂಗ | ತುರಗ ತುರಗ ವದನ | ಸದನ ಕರ ಮುಗಿವೆನೈಯಾ | ಕರದ ಮಾತಿಗೆ ಜೀಯಾ | ಭರದಿಂದ ಕೊಡು ಮತಿಯಾ 1 ಪಾದದಲಿ ಪೆಣ್ಣಾ | ಮೋದದಲಿ ಪೆತ್ತ ಚಿಣ್ಣಾ | ನಾದ ಬಲು ಪಾವನ್ನಾ | ಭೇದಾರ್ಥ ಜ್ಞಾನ | ಆದರಿಸೆ ಅನುದಿನಾ | ನೀ ದಯದಲಿ ಕೊಡು | ಈ ದೇಹ ನಿನ್ನ ಬೀಡು | ಯಾದುದೆ ಇತ್ತ ನೋಡು 2 ಜಲದೊಳಗಾಡಿದೆ | ಚಲಕೆ ಬೆನ್ನ ನೀಡಿದೆ | ನೆಲ ಬಂದು ನೆಗಹಿದೆ | ಖಳನನ್ನ ಕೆಡಹಿದೆ | ಇಳಿಯ ಮೂರಡಿ ಮಾಡಿದೆ | ಕುಲವ ಕೂಡಲಲಿ ಹಾರ | ಜಾರ ಚೋರ | ಅಳಿದೆ ಮುಪ್ಪುರು ಶೂರಾ | ವಿಜಯವಿಠ್ಠಲ ಪಾರಾ | ಫಲವೀವೆ ಧರಣೀಧರಾ 3
--------------
ವಿಜಯದಾಸ
ಶಾರದೇಂದುಮುಖಿ ನೀರಜನಯನಳೆ ಬಾರೆಲೆ ಬಾಗಿಲ ತೆಗಿಯಲೆ ಭಾಮೆ ಪ ಯಾರಯ್ಯ ಬಾಗಿಲ ಹೊರಗೆ ನಿಂತಿರುವನು ಜಾರ ಪುರುಷನಂತೆ ತೋರುವೆ ನೀನು ಅ.ಪ ಜಾರನಾದರೆ ನಿಂಗೆ ಜಾರನಲ್ಲವೆ ಮೀನಾ ಕಾರ ಧರಿಸಿರುವ ಹರಿಯಲೆ ಭಾಮೆ ಮೀನನಾದರೇ ಬಲು ಮೌನದಲಿರದಂತೆ ಮಾನವರಂತೆ ಮಾತು ಯಾವುದೋ ನಿನಗೆ 1 ಮಂದರಗಿರಿಯ ಬೆನ್ನಿಂದ ಧರಿಸಿರುವ ಅಂದ ಕೂರ್ಮನಲ್ಲವೇನೆ ಭಾಮೆ ಕೂರ್ಮ ನೀನಾದರೆ ಕೂಪದೊಳಿರುವುದೆ ಧರ್ಮವೆಂಬುವುದನು ಮರೆತೆಯಾ ನೀನು 2 ನೀಲವೇಣಿಯೆ ಕೇಳೆ ಕೋಲರೂಪದಿ ಬಂದು ಕ್ಷಿತಿ ತಂದೆನೆ ಭಾಮೆ ಪೋತರೂಪನೇ ನಿಜ ಧಾತ್ರಿಯ ಭೇದಿಸಿ ಗಾತ್ರ ರಕ್ಷಣೆ ಮಾಡು ಹೋಗೆಲೊ 3 ಸ್ತಂಭ ಭೇದಿಸಿ ರಿಪು ಡಿಂಭನ ಕಾಯಲು ಜಂಭದಿ ಖಳನನು ಕೊಂದೆನೇ ಭಾಮೆ ಸ್ಥಂಭ ಭೇದಿಸಿದ ನಾ ನಂಬುವುದಿಲ್ಲವೊ ಡಂಭದಿ ಬಾಗಿಲು ಭೇದಿಸಿ ಬಾರೊ 4 ವಾಮನನೆಂದು ವಟುರೂಪದಿ ಬಂದು ಸಾರ್ವ ಭೌಮನಲ್ಲಿ ಭೂಮಿ ಬೇಡಿದೆ, ಭಾಮೆ ವಟುರೂಪನಾದರೆ ಕುಟಿಲಾಕ್ಷಿಯರಲಿಂಥ ಚಾಟುವಚನಗಳು ಯಾಕೆಲೊ 5 ದುರುಳನೃಪರ ಪರಿಹರಿಸಿದ ಭೃಗುಮುನಿ ವರಕುಲಜಾತ ಶ್ರೀ ರಾಮನೇ ಭಾಮೆ ಮುನಿವರಸುತನಾಗಿ ಸ್ವನಿಯಮಗಳ ಬಿಟ್ಟು ವನಿತೆಯರಲ್ಲಿಂಥಾ ಸರಸವೆ ನಿನಗೆ 6 ದಶರಥ ನೃಪತಿಯ ಮನೆಯೊಳವತರಿಸಿ ದಶಶಿರರನು ಕೊಂದ ರಾಮನೆ ಭಾಮೆ ಪರ ಕಾಮಿನಿಯರೊಳಿಂಥಾ ಪ್ರೇಮ ಮಾಡುವುದುಂಟೆ ಯೋಚಿಸೊ ನೀನು 7 ನೀರಜಾಕ್ಷಿ ಕೇಳೆ ಜಾರಚೋರತೆಯಲ್ಲಿ ಸಿರಿ ಕೃಷ್ಣನೇ ಭಾಮೆ ಚೋರನಾದ ಮೇಲೆ ಸೇರಿಸುವುದು ಹೇಗೆ ಭಾರಿ ಆಭರಣಗಳಿರುವುವೊ 8 ಮುಗ್ಧೆ ಕೇಳೆ ಇದಬದ್ಧವಲ್ಲದೆ ಅತಿ ಶುದ್ಧನಾದ ಬುದ್ಧರೂಪನೆ ಬುದ್ಧರೂಪನೆ ನಿನ್ನ ನಡತೆಯ ಕೇಳಲು ಶುದ್ಧಿಯು ಲೋಕಪ್ರಸಿದ್ಧವು9 ಸರಸಿಜಮುಖಿ ವರತುರಗವನೇರಿದ ನೃಪರ ಗೆಲ್ವ ಕಲ್ಕಿಯೇ ಭಾಮೆ ದುರುಳ ಜನರು ಇಲ್ಲಿ ಸೇರುವುದಿಲ್ಲವೊ ತರಳೆಯರಲಿ ದುಷ್ಟ ಕಾರ್ಯವೇ ಪೋಗೊ10 ಪರಿ ಸರಸವನಾಡುವ ನಾಮಗಿರಿ ನರಹರಿ ರೂಪ ರಮಾ ರಮೇಶರು ವಿಹರಿಪ ಬಗೆಯನು ಸ್ಮರಿಸುವ ಸುಜನರ ಪರಮಪುರುಷ ಹರಿ ಪೊರೆವುದು ನಿಜ 11
--------------
ವಿದ್ಯಾರತ್ನಾಕರತೀರ್ಥರು
ಶಿವ-ಪಾರ್ವತಿ ಅಗಜೆ ನಿನ್ನೊಗತನಕೆ ಜಗ ನಗುವುದೇ ನಗರಾಜ ಈ ಮನೆಯ ಹೊಗಿಸಿದನೆ ಅಕಟಕಟ ಪ ಹೊಟ್ಟೆಗಿಲ್ಲದೆ ಹೋಗಿ ಹಾಲಾಹಲವನುಂಡ ತೊಟ್ಟ ತೊಗಲುಡುಗೆ ತಲೆಯೋಡು ಕೈಯ ಭೂತೇಶ ಬಲು ಸಿಟ್ಟಿನವನಂಗಸಂಗ ಬಯಸಬಹುದೆ 1 ಆರುಮೊಗದವನೊಬ್ಬ ಆರ್ತಜನು ಮೊಲೆಪಾಲು ಕಾರಿ ಕಡುಮುನಿದು ಕಂಡರೆ ಸೇರರು ಊರಿಗುಪಕಾರಿ ಒಡಲಹರಕ ಗಜಮುಖನು ನಾರಿ ಮೇನಕೆ ಮಗಳು ಕಂಡು ಹಿಗ್ಗುವಳಯ್ಯ 2 ಶಿವಶಕ್ತಿ ನಿನ್ನಂಥ ಸೌಭಾಗ್ಯವಂತೆಯಳ ಭುವನದೊಳಗಾವಲ್ಲಿ ಕಾಣೆನಿನ್ನು ಕವಿಜನಗಳೇನೆಂದು ಬಣ್ಣಿಸಿದರೊ ತಿಳಿಯೆ ಭವದೂರ ಶ್ರೀದವಿಠಲರಾಯ ಬಲ್ಲ 3
--------------
ಶ್ರೀದವಿಠಲರು
ಶಿವರಗಳೆ ಉದಯದಲೆದ್ದು ಸದಾಶಿವ ಎನ್ನಿ |ಅದರಿಂದಲಿ ಸದ್ಗತಿಗಿರುವದು ಒಂದೇ ಹಾದಿ |ನಾನಾ ಗ್ರಂಥಗಳ್ಯಾತಕ ಓದೀ |ಓದಿದರೋದಲಿ ಬೇಕಧ್ಯಾತ್ಮಾ ||ಸಾಧಿಸಿ ಬರುವನು ಶಿವ ಸರ್ವೋತ್ತಮಾಸರ್ವೋತ್ತಮ ತಿಳಿದರೆ ಸಾಕು |ಅನೇಕ ಶಾಸ್ತ್ರಗಳೇತಕೆ ಬೇಕು |ಬೇಕೆಂಬೋದೇ ಬಿಡುವದೆ ಪರಮಾರ್ಥಲೋಕದ ಪರಿಯಲ್ಲಿರುವದೆ ಸ್ವಾರ್ಥ |ಸ್ವಾರ್ಥಕೆ ಪರಮಾರ್ಥಕೆ ಬಹು ದೂರಾ |ಎರಡೂ ಸಮನಿಸಿದವನೇ ಧೀರಾ ||ಧೀರ ಉದಾರಗೆ ಆರ ಹಂಗಿಲ್ಲಾ |ಸೂರೆಗೊಂಡನು ಮೂಜಗವೆಲ್ಲಾ |ಎಲ್ಲರಿಗೆ ತಾ ಬಲು ಕಿರಿದಾಗಿ |ಬಲ್ಲತನದ ಬಡಿವಾರವ3ೀಗಿನೀಗಿ ನಿಶ್ಚಿಂತ್ಯಾದರ ತ್ಯಾಗಿ ||ತ್ಯಾಗವು ಬಲಿತರೆ ಅವನೇ ಯೋಗಿಯೋಗಿಗೆ ಮೂಲಾ ಐಕ್ಯದ ಮಾಟಾ |ಬೇಗನೆ ತಿಳಿಯದು ಜೀವ ಶಿವ ಕೂಟಾ |ಕೂಟವ ತಿಳಿಯದೆ ಯಾತರ ಜ್ಞಾನಿ |ಚಾಟಕನಾದರೆ ಜ್ಞಾನಕೆ ಹಾನಿಹಾನಿಗೆ ಹಾನಿ ತಂದವ ಜಾಣಾಸ್ವಾನುಭವದಲಿದ್ದವ ಪ್ರತಿಗಾಣಾ |ಪ್ರತಿಗಾಣನು ಶಿವರತಿಯುಳ್ಳವನು |ಗತಿ ಬಯಸುವನು ಗುರು ಚರಣವನು |ಚರಣಗಳಲ್ಲಿ ವರಗಳು ಉಂಟು |ಗುರುಹಿರಿಯರಿಗೆ ಶರಣು ಹೋಗಿರಿ |ಪರಿಣಾಮದ ಘೋರಿಗೆ ಪರಿಪರಿ ಸ್ತುತಿಗಳು |ಪರಿ ಪರಿಸ್ತುತಿಗೆ ಪರಿಪರಿ ಪೂಜೀ |ಪರಿಪರಿ ಪೂಜಿಗೆ ಪರಿಪರಿ ವಾಜೀ ||ವಾಜಿ ಒಂದಾದರೆ ಸಹಜವೆ ತಾನು |ಮೂಜಗದೊಳಗಿದು ಸೋಜಿಗವೇನು |ಸೋಜಿಗವೆಂಬದು ಶ್ರಮದಲಿ ಮಾಯಾ ಕಂಟಕ ಕಾಕು ಭಂಗ ಬ್ರಹ್ಮಜ್ಞಾನ ಯೋಗಿ ಬ್ರಹ್ಮಜ್ಞಾನ ಬ್ರಹ್ಮಜ್ಞಾನ |ಸಿದ್ಧಗುರು ತ್ರಿಪುರಾಂತಕ ಧ್ಯಾನ |ಪ್ರಕಾಶ ಮುಖದಲಿ ಹೇಳಿದ ರಗಳಿ |ಶಿವ ಸಾಯೋಜ್ಯವೆ ಬೈಲನೆ ಹೊಗಳಿ ||
--------------
ನರಸಿಂಹ
ಶುಕಪಿತನ ಪದಕಂಜ ಪದುಪಾ | ಅಖಿಳ ಲೋಕದ ಗುರುವೆ ಸುಖ ತೀರ್ಥ ಮುನಿಪಾ ಪ ನಿತ್ಯ ನೈಮಿತ್ಯಗಳು | ಗತಿ ತಪ್ಪಿ ಪೋಗಿರಲು ಸರ್ವ ದೇವತೆಗಳು || ಪಥವ ಕಾಣದೆ ನೆರೆದು ಯೋಚಿಸಿ ತಮ್ಮೊಳು | ಅತಿಶಯದಿ ವೊದರಿ ಕೇಳು ಭವನದಾ | ಪತಿಯಾದ ಬೊಮ್ಮಗುಸರಿದರಂದು ಮೇಲು1 ತುತಿಸಲಾಕ್ಷಣ ಕೇಳಿ ಅಜನು ಶಿರದೂಗಿದನು | ಕೃತಭುಜರ ಸಹವಾಗಿ ಹರಿಪುರಕೆ ಸಾಗಿದನು | ನತನಾಗಿ ಶಿರಿಪತಿಯ ಪದಯುಗಕೆ ಬಾಗಿದನು | ಗತಿ ನೀನೆ ಎಂದು ಕೂಗಿದನು ಹರಿ ಕೇಳಿ | ಸತತ ನಿನ್ನನ್ನು ಕರೆದು ಪೇಳಿದವೇಗಿದನು 2 ಭೂಸುರನ ಗರ್ಭದಲಿ ಬಂದೆ ನೀನವತರಿಸಿ | ವಾಸುದೇವನೆಂಬ ನಾಮದಿಂದಲಿ ಜನಿಸೀ | ಭಾಸುರ ಕೀರ್ತಿಯಲಿ ಮೆರೆÀದೆ ಬಲು ಪಸರಿಸಿ | ದೋಷ ವರ್ಜಿತದ ಗುಣರಾಸಿ ಎನಿಸುವಾ | ಲೇಸು ಆರೈದೆರಡು ಲಕ್ಷಣ ಸಂನ್ಯಾಸಿ 3 ಪುಟ್ಟಿ ಇಳಿಯೊಳಗೆ ಸಂಕರನೆಂಬ ದುರವಾದಿ | ಜಟ್ಟಿಗನಾಗಿ ಸೋsಹಂ ಯೆಂಬ ಅತಿ ಕ್ರೋಧಿ | ಅಟ್ಟಹಾಸದಲಿ ತಿರುಗಿದನು ಬೀದಿ ಬೀದಿ | ಘಟ್ಟವಚನದಿಂದ ಕಾದಿ ಅವನ ಮುರಿ | ದೊಟ್ಟಿದೇ ವಪ್ಪದಲಿ ಮಾಯಿ ಮತಭೇದಿ 4 ಅಮೃತ | ಗ್ರಂಥ ಉತ್ತಮರಿಗೆರೆದು ಸುಖ ಬಡಿಸಿದೆ ಅತಿಶ್ಯಾಂತ | ಅತ್ಯಂತ ಮಹಿಮ ಬಲವಂತ ನಿಮಗೆ ನಾ | ಎತ್ತಿ ಕರಗಳ ಮುಗಿವೆ ತೋರು ನಿಜ ಪಂಥ 5 ಹರಿಯೆ ಪರನೆಂದು ಬೊಬ್ಬರಿದು ಎಳಹರಿ | ಮರಿಯೆ ಬಿರಿದು ಡಂಗುರವ ಹೊಯಿಸಿ | ಚರಿಸಿದ ಗುರು ದೊರೆಯೇ | ಸರಿಗಾಣೆ ನಿನಗೆಲ್ಲಿ ಮತ್ತೊಬ್ಬರನ ಕರಿಯೇ | ವರ ಬದರಿಲಿಪ್ಪ ವೈರಾಗ್ಯದ ಸಿರಿಯೇ 6 ಮುನಿಗಳೊಳಗೆ ರನ್ನ ಮುನಿದವರಿಗಿರಬೆನ್ನ | ಘನ ವಿದ್ಯಸಂಪನ್ನ ಗುಣದಲ್ಲಿ ಅಚ್ಛಿನ್ನ | ನೆನೆದವರ ಪ್ರಸನ್ನ ತನುವೆ ತಪುತ ಚಿನ್ನ | ಮಿನಗುವಂತೆಯಿಪ್ಪ ಪಾವನ್ನ ಮಧ್ವಮುನಿ | ಚಿನುಮಯ ವಿಜಯವಿಠ್ಠಲನ್ನ ಪ್ರಸನ್ನಾ7
--------------
ವಿಜಯದಾಸ
ಶುಂಠನಿಗೆ ಉಂಟೆ ವೈಕುಂಠಾ | ಬಂಟನಿಗೆ ಉಂಟೆ ಒಡತನವು ಪ ಕಳ್ಳನಿಗೆ ಉಂಟೆ ಪರರು ಒಡವೆ ಗಳಿಸಿದ ಕಷ್ಟ | ಸುಳ್ಳನಿಗೆ ಉಂಟೆ ಮಿತಿಯಾದ ಭಾಷೆ|| ಕೊಲ್ಲುವನಿಗೆ ಉಂಟೆ ದಯಾದಾಕ್ಷಿಣ್ಯದ ಮಾತು | ಕ್ಷುಲ್ಲಕನಿಗೆ ಉಂಟೆ ಗುಣ ಭಾರಿ ಬುದ್ಧಿಗಳು 1 ಉಪವಾಸಿಗೆ ಉಂಟೆ ಅನ್ನ ಆಹಾರದ ಚಿಂತೆ | ತಪಸಿಗೆ ಉಂಟೆ ಇಹದ ವ್ಯಾಕುಲ || ಕೃಪಣನಿಗೆ ಉಂಟೆ ದಾನ-ಧರ್ಮದ ಚಿಂತೆ | ಚಪಳನಾರಿಗೆ ಉಂಟೆ ತನ್ನ ಮನೆವಾರ್ತೆ 2 ರುಚಿ | ಹಾದಿ ಬಿಟ್ಟವಗುಂಟೆ ಮನದ ಧೈರ್ಯ || ವೇದನೆಬಡುವಗುಂಟೆ ಅನ್ನಿಗರ ಸಂಧಾನ | ಕ್ರೋಧದವಗುಂಟೆ ಬಲು ಶಾಂತ ನೀತಿ 3 ಕಾಮಾತುರಗೆ ಉಂಟೆ ಭವಕುರಿತ ಲಜ್ಜೆಗಳು | ನೇಮ ನಿತ್ಯಗೆ ಉಂಟೆ ಮನದರೋಗ || ಹೇಮಾತುರಗೆ ಉಂಟೆ ಗುರು ಬಾಂಧವ ಸ್ನೇಹ | ತಾಮಸಿಗೆ ಉಂಟೆ ಶುಭಕರ್ಮ ಸದ್ಭಕ್ತಿ 4 ದಾನಿಗೆ ಉಂಟೆ ಇಂದಿಗೆ ನಾಳಿಗೆಂಬೋದು | ಜ್ಞಾನಿಗೆ ಹತ್ಯಾದಿ ದೋಷ ಉಂಟೆ | ಸಿರಿ ವಿಜಯವಿಠ್ಠಲ ಸ್ವಾಮಿಯ ಧೇನಿಸುವಗುಂಟೆ ದಾರಿದ್ರ್ಯ ದುಷ್ಕರ್ಮ5
--------------
ವಿಜಯದಾಸ
ಶುದ್ಧ ಸನ್ಮಾರ್ಗ ಸರ್ವರಿಗಿದು ಒಂದೆ ಬುದ್ಧಿವಂತರು ತಿಳಿದರು ಇದರಿಂದೆ 1 ಇದರಿಂದೇವೆಂಬುದು ನಿರ್ವಾಣ ಒದರುತಲಿಹುದು ವೇದಪುರಾಣ 2 ಪುರಾಣ ಪುಣ್ಯದ ಹಾದಿಯು ನಿಜ ಸುರಮುನಿಗಳಿಗಿದು ಹೊಳೆವದು ಸಹಜ 3 ಸಹಜಾನಂದದ ಸುಖಸಾಗರ ಬಾಹ್ಯಾಂತ್ರ ಸದೋತಿತ ಸಹಕಾರ 4 ಸಹಕಾರವು ಚಿನ್ಮಯ ಚಿದ್ರೂಪ ಸೋಹ್ಯದೋರುವ ಶ್ರೀ ಗುರುಸ್ವರೂಪ 5 ಸ್ವರೂಪವೆ ಸದ್ಗೈಸುವ ಹಾದಿ ಪರಮ ವೈಷ್ಣವರ ಮೂಲಾಗ್ರದ ಆದಿ 6 ಅಧಿವೆಂಬುದು ನಿಜನಿರ್ಧಾರ ಸಾಧಿಸುದವರಿಗೆ ಸಾಕ್ಷಾತಾರ 7 ಸಾಕ್ಷಾತ್ಕಾರವೆ ಮೋಕ್ಷದಮನೆಯು ಅಕ್ಷಯ ಪದ ಅದ್ವೈತದ ಖಣಿಯ 8 ಅದ್ವೈತವೆ ಆಧ್ಮಾತ್ಮ ಸುವಿದ್ಯ ಸಿದ್ದಸಾಧಕರಿಗೆ ಆಗುವ ಸಾಧ್ಯ 9 ಸಾಧ್ಯವೆಂಬುದು ನಿಜಸಿದ್ಧಾಂತ ಭೇದಿಸಿದವರಿಗೆ ಇದು ಸನ್ಮತ 10 ಸನ್ಮತವೆ ಮತ ಸರ್ವರಿಗೆಲ್ಲ ಉನ್ಮನಲೀಹ ಮಹಾಯೋಗಿಯು ಬಲ್ಲ 11 ಬಲ್ಲೆವೆಂಬುದು ಬಲು ಅಗಾಧ ಸೊಲ್ಲಿಗೆ ಸಿಲುಕದು ಗುರುನಿಜಭೋದ 12 ಬೋಧವೆ ಸದ್ಗುರುವಿನ ದಯಕರುಣ ಸದ್ಗತಿಸುಖ ಸಾಧನದ ಸ್ಫುರಣ 13 ಸ್ಫುರಣವೆ ಬ್ರಹ್ಮಾನಂದದ ಹರುಷ ತರಣೋಪಾಯದ ಮಹಾ ಉಪದೇಶ 14 ಉಪದೇಶವೆ ನಿಜ ಉಪನಿಷದ್ವಾಕ್ಯ ಒಪ್ಪಿಡುವದು ಭೂಸ್ವರ್ಗತ್ರೈಲೋಕ್ಯ 15 ತ್ರೈಲೋಕ್ಯಕೆ ಇದು ನಿಜನಿಧಾನ ಭಯವಿಲ್ಲದ ಮಹಾಸುಖಸಾಧನ 16 ಸಾಧನದಿಂದ ಸದ್ಗತಿ ಸಂಪೂರ್ಣ ಸಾಧು ಸಜ್ಜನರಿಗೆ ಸಕಲಾಭರಣ 17 ಸಕಲಾಭರಣ ಸದ್ಗುರು ನಿಜ ಅಭಯವು ಶುಕಾದಿ ಮುನಿಗು ಕೂಡಿದ ಪ್ರಭೆಯು 18 ಪ್ರಭೆಗಾಣಲು ತೋರದು ನೆಲೆನಿಭವು ನಿಭವೆ ಮಹಾಮಂಗಳಕರ ಶುಭವು 19 ಶುಭದೋರುದು ಸದ್ಗುರು ಕೃಪೆಯಿಂದ ಭ್ರಮೆಹಾರಿತು ಮಾಯೆ ಇದರಿಂದ 20 ಇದರಿಂದೆ ಇದರಿಟ್ಟಿತು ಪುಣ್ಯ ಒದಗಿ ಕೈಗೂಡಿತು ಬಂತು ತಾರ್ಕಣ್ಯ 21 ತಾರ್ಕಣ್ಯವು ಬಂತೆನ್ನೊಳು ಪೂರ್ಣ ಸರ್ಕನೆ ದೊರೆಯಿತು ಸದ್ಗುರುಖೂನ 22 ಖೂನವೆ ಎನ್ನೊಳಗಾಯಿತು ಧ್ಯಾನ ಘನಸುಖದೋರುವ ಅನುಸಂಧಾನ 23 ಅನುಕೂಲಾದ ನಮ್ಮಯ್ಯ ಪ್ರಸಿದ್ಧ 24 ಪ್ರಸಿದ್ಧವೆ ಪ್ರತ್ಯಕ್ಷ ಪ್ರಮಾಣ ಭಾಸುತಿಹುದು ಶ್ರೀಗುರು ಶ್ರೀಚರಣ 25 ಶ್ರೀಚರಣಕೆ ಎರಗಿಹ ಮಹಿಪತಿಯು ಸೂಚನೆ ಮಾತ್ರ ಕೊಂಡಾಡಿದ ಸ್ತುತಿಯು 26
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶುದ್ಧಿ ತಿಳಿಯೋ ನಿನ್ನ ಬುದ್ಧಿ ದೈವತ್ವವನ್ನ ಧ್ರುವ ಹೊರಗೆ ನೋಡಬ್ಯಾಡ ತಿರುಗಿ ನೋಡೊ ಮೂಢ ಸೆರಗು ಬಲುಗೂಢ ಬೆರಯೊ ನಿಜಗಾಢ 1 ನಡೆ ಹೆಜ್ಜಿಮೆಟ್ಟಿ ಕೇಡಿಗ್ಯಾಗಿ ಕೆಟ್ಟ ನೋಡು ಮನಮುಟ್ಟಿ ಕೂಡು ನಿಜ ಘಟ್ಟಿ 2 ಬುದ್ಧಮುಕ್ತವೇನು ದ್ವಂದ್ವ ತಿಳಿಯೋ ನೀನು ಹೊಂದಿಹೊಳೆವನು ತಂದೆ ಸದ್ಗುರು ತಾನು 3 ಬುದ್ಧಿ ತಿಳಿಯದ್ಹೋಗಿ ಬಿದ್ಯೊ ಭವಕಾಗಿ ಶುದ್ಧಿ ಹೇಳಲಾಗಿ ಸದ್ಗುರು ನಿನಗಾಗಿ 4 ತಿಳಿದು ನಿಜಗತಿ ನೆಲೆಯಾಗೊ ಮಹಿಪತಿ ಹೊಳೆವ ವಸ್ತುನೀತಿ ಬಲಿಯೊ ನಿಜಸ್ಥಿತಿ 4
--------------
ಕಾಖಂಡಕಿ ಶ್ರೀ ಮಹಿಪತಿರಾಯರು