ಒಟ್ಟು 2773 ಕಡೆಗಳಲ್ಲಿ , 112 ದಾಸರು , 1907 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೆಲೆಗೊಂಡದೇನು ಮನಮೇಗಚಲಿಸುವೆ ನೀನು ಹಲವು ವಿಷಯದೊಳು ಪಸಿಲುಕಿದ ಬಗೆುಂದ ಹೊಲಬುದಪ್ಪಿತು[ಸಲೆ]ನಿನ್ನ ನಿಜವ ನೀ ಕಾಣು ಅ.ಪಗುರುವಿನಂಘ್ರಿಗೆ ನೀನು ನಮಿಸಿ ನಿನ್ನಮರವೆಯ ಭಾವವ ಕೆಡಿಸಿಕರಣವ ನಿಲುಕಡೆಗೊಳಿಸಿ ಬಹುಕರುಣವ ನಿನ್ನೊಳಗಿರಿಸಿಪರಮಾತ್ಮನಾಗ್ಯನ್ಯ ವಿಷಯಮೊಂದಲಾಶೆಪರಿದು ಭ್ರಾಂತಿಯಲೊಂದಿದ ಸುಖವ ಸೂಸಿ 1ಮನೆಯೊಂದು ನನಗಿಹುದೆಂದು ಅಲ್ಲಿಜನರೆಡೆಗೊಳೆ ದುಃಖ ಬಂದುಅನುಭವಿಪುದು ಯುಕ್ತವೆಂದು ಅದ[ಕನು]ಕೂಲವಾಗಬೇಕೆಂದುಅನುದಿನವನು ಸಂಧಾನದಿ ನಿಂದು ಗುರು ಕೊಟ್ಟಅನುಭವ ಬಯಲಾಗಿ ಭ್ರಮೆಗೆ ನೀ ಸಂದು 2ನೀನೊದು ಕೊಡಹೇಳಿ ಕೇಳಿ ಅಲ್ಲಿಹೀನತೆಯನು ಬಹುತಾಳಿದೀನರು ನೀವೆಂದು ಪೇಳಿ ಅನುಮಾನದ ಬಲು ಬಿರುಗಾಳಿಏನೆಂಬೆ ಬೀಸಲು [ತಾ] ನದರೊಳಗಾಳಿಜ್ಞಾನಹೋುತು ಭೇದ ಬುದ್ಧಿಯ ತಾಳಿ 3ಮಾಯಕವಾಗಿರೆ ಜಗವೂ ಬಹೂಪಾಯಗಳಿಂದ್ರಜಾಲಕವೂಆಯವರಿಯದದರಿರವೂ ತನ್ನತಾಯ ಕಾಣದ ಶಿಶುತನವೂಈಯಶೇಷವು ಸ್ವಪ್ನದನುಭವವಳಿವವುಬಾಯಮಾತಿನಜ್ಞಾನ ಕಪಟ ಸಂಭ್ರಮವೂ 4ಪರಮಾತ್ಮನೊಬ್ಬನಾಗಿಹನೂ ತಾನುಪರಿ ಪರಿ ರೂಪ ತೋರುವನುಅರಿತೆ ಭೇದವನಿದ ನೀನು ಬಹುಜರೆಯುತ ಗುಣದೋಷಗಳನುಗುರುವಾಸುದೇವರೂಪಿಲಿ ನಿನ್ನ ಕರವನುತಿರುಪತಿ ವೆಂಕಟ ಪಿಡಿಯೆ ಭ್ರಾಂತೇನು 5
--------------
ತಿಮ್ಮಪ್ಪದಾಸರು
ನೇಮವಿಲ್ಲದ ಹೋಮವೇತಕೆರಾಮನಾಮವಿರದ ಮಂತ್ರವೇತಕೆ ಪ ನೀರ ಮುಣುಗಲು ಏಕೆ ನಾರಿಯಳ ಬಿಡಲೇಕೆವಾರಕೊಂದುಪವಾಸ ಮಾಡಲೇಕೆನಾರಸಿಂಹನ ದಿವ್ಯನಾಮವನು ನೆನೆದರೆಘೋರ ಪಾತಕವೆಲ್ಲ ತೊಲಗಿ ಹೋಗುವುದು 1 ಅಂಬರವ ತೊರೆಯಲೇಕೆ ತಾಂಬೂಲ ಬಿಡಲೇಕೆಡಂಭಕದ ವೃತ್ತಿಯಲಿ ಇರಲೇತಕೆಅಂಬುಜನಾಭನನು ಭಾವದಲಿ ನೆನೆದರೆಇಂಬುಂಟು ವೈಕುಂಠವೆಂಬ ಪುರದೊಳಗೆ 2 ಬಂಧದೊಳಗೆ ಬಿದ್ದು ಹರಿಯನೆ ನೆನೆಯುತಿರೆಬೆಂದು ಹೋಗುವುವು ದುರಿತಂಗಳೆಲ್ಲಬಂದ ದುಃಖಗಳೆಲ್ಲ ನಿಲ್ಲದಲೆ ಕಳೆಯುವವುಚೆಂದಾಗಿ ನೆಲೆಯಾದಿಕೇಶವನ ನೆನೆಯೆ3
--------------
ಕನಕದಾಸ
ನೊಂದೆನಯ್ಯ ಭವದೊಳು ಸಿಂಧುಶಯನ ವೆಂಕಟೇಶ ಪ ಒಂದು ದಿನಸುಖವಿಲ್ಲ ಗೋ- ವಿಂದ ಬಹಳ ಕರುಣದಿಂದ ನಿ- ರ್ಬಂಧವನ್ನು ಕಳೆದು ಎನ್ನ ತಂದೆ ನೀನೇ ರಕ್ಷಿಸಯ್ಯ 1 ಕಪಟ ನಾಟಕ ಸೂತ್ರಧಾರಿ ಅಪರಿಮಿತ ಮಹಿಮ ಎನ್ನ ಅಪರಾಧವನು ಕ್ಷಮಿಸಿ ಮುಂದೆ ಕಪಟವಿಲ್ಲದೆ ರಕ್ಷಿಸಯ್ಯ 2 ಕಂದ ಪ್ರಹ್ಲಾದನಂತೆ ತಂದೆ ಮುನಿದಾಡುವ ತೆರದಿ ಗ- ಜೇಂದ್ರನಂತೆ ದೃಢವಿಲ್ಲ ಮಂದಮತಿಯ ರಕ್ಷಿಸಯ್ಯ 3 ನರ ಜನ್ಮದೊಳಗೆ ಪುಟ್ಟಿ ನರಕ ಭಾಜನ ತಾನಾಗಿ ದುರಿತ ಪಂಜರದೊಳಗೆ ನಾನು ಸೆರೆಯ ಬಿದ್ದೆ ರಕ್ಷಿಸಯ್ಯ 4 ಹಗಲು ದೃಷ್ಟಿ ಕಾಣದವಗೆ ಮೊಗವುಗೊಂಡು ರಾತ್ರಿಯೊಳು ಹಗೆಯ ವನದಿ ಸಿಕ್ಕಿದವನ ಅಗಲಿ ಹೋಗದೆ ರಕ್ಷಿಸಯ್ಯ 5 ಸಾವಿರ ಅಪರಾಧವನು ಜೀವಿತಾತ್ಮನೆ ಕ್ಷಮಿಸಿ ಎನ್ನ ಮೂವಿಧಿಯೊಳು ಸಿಲುಕದಂತೆ ಭಾವಿಸಿಯೆ ರಕ್ಷಿಸಯ್ಯ 6 ವರಾಹತಿಮ್ಮಪ್ಪ ಮನದ ಘೋರ ದುಃಖವನ್ನು ಕಳೆದು ಮೀರಿ ಬಂದಾಪತ್ತಿನೊಳು ಕಾರಣಿಕನೆ ರಕ್ಷಿಸಯ್ಯ 7
--------------
ವರಹತಿಮ್ಮಪ್ಪ
ನೋಡಮ್ಮಾ ಶ್ರೀ ವಾಸುದೇವನಾ ನಮ್ಮ ಬೇಡಿದಿಷ್ಟಾರ್ಧವ ನೀವನಾ ಪ ಪರ ಬ್ರಹ್ಮ ರೂಢಿಗೆ ನರಲೀಲೆಯಾಡುವ ಬಗೆಯಾಅ.ಪ ದೇವರ ಅನುಮತ ನೋಡಿದಾ ಅಂವ ದೇವಕಿ ಉದರದಿ ಮೂಡಿದಾ ಪಾವನ ಗೋಕುಲ ಮಾಡಿದಾ ಸುಖ ದೇವಿ ಯಶೋದೆಗೆ ನೀಡಿದಾ ಆವಾವ ಪರಿಯಲಿ ನೋವ ಬಗೆಯ ಬಂದು ಗಾಲಿಲ ಅಸುರರ ಜೀವನ ವಳಿದಾ 1 ಗೊಲ್ಲತೆಯರ ಮನಮೋಹಿಸಿ ಕದ್ದು ಅಲ್ಲಿಹ ಪಾಲ್ಬಣ್ಣೆ ಸೇವಿಸಿ ಬಿಲ್ಲ ಹಬ್ಬದ ನೆವತೋರಿಸಿ ಪೋಗಿ ಮಲ್ಲಚಾಣರರಾ ಭಂಗಿಸೀ ಬಲ್ಲಿದ ಕಂಸನ ಮಲ್ಲಯದ್ಧಗಳಿಂದ ಘಲ್ಲಿಸಿದನು ಜನಚಲ್ಲಿ ಬಡಿದನಾ 2 ನೀರೊಳು ಕಟ್ಟಿಸಿ ಮನೆಯನು ಬಂಗಾರದ ದ್ವಾರಕಾ ಪುರವನು ಸೇರಿಸಿ ಯದುಕುಲದವರನು ರುಕ್ಮಿ ಣೀ ರಮಣಲ್ಲಿಗೆ ಮರೆದನು ಸಾರಿದ ಶರಣರಾ ತಾರಿಸಿ ಹೋದನು ಮಹಿಪತಿ ನಂದನ ಪ್ರೀಯನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡಯ್ಯಾ ನಿತ್ಯಾತ್ಮನನ್ನು ನಿಜವಾಗಿ ನಿನ್ನೊಳಗೆ ನೀನು ನೋಡಯ್ಯಾ ನಲಿನಲಿದಾಡಯ್ಯಾ ಎರಡುದಿನಸಂಸಾರಾ ಎರವಾಗಿ ತಂದ ಶರೀರಾ ಸ್ಥಿರವಲ್ಲ ಸ್ವಾಮಿ ಗುರುಬಲ್ಲಾ ನೋಡಯ್ಯಾ 1 ಶರೀರ ಅರ್ಥಪ್ರಾಣ ಮೂರು ಗುರುಮೂರ್ತಿಗರ್ಪಿಸಿ ತೋರು ದೃಢಭಾವಾ ಆತ್ಮಸುಖವೀವಾ ನೋಡಯ್ಯಾ 2 ನರದೇಹಕ್ಕೆ ಬಂದು ನೀನು ಇರುವಂಥಾ ಸಾರ್ಥಕವೇನು ದೃಢ ಭಕ್ತಿಮಾಡಿ ಪಡೆ ಮುಕ್ತಿ ನೋಡಯ್ಯಾ3 ದೊರಕುವುದು ಪರಿಕರ ಸರ್ವಾ ಗುರುಮೂರ್ತಿ ಸಿಕ್ಕುವುದಪೂರ್ವಾ ಬಿಡಬೇಡಾ ವ್ಯರ್ಥ ಕೆಡಬೇಡಾ ನೋಡಯ್ಯಾ 4 ಭಕ್ತಿಯಲಿ ಕೈವಿಡಿದು ಹೋಗು ಭಜಿಸಿ ಜೀವನ್ಮುಕ್ತನಾಗು ಸಾರಿದೆ ಮರ್ಮವ ತೋರಿದೆ ನೋಡಯ್ಯ5 ಯುಕ್ತಿಯಲಿ ಸಾಧಿಸಲು ಬೇಕು ಇಷ್ಟೊಂದು ಸಿಕ್ಕಿದರೆ ಸಾಕು ಚಂದದಿ ಗುರುವಿಮಲಾನಂದದಿ ನೋಡಯ್ಯಾ 6
--------------
ಭಟಕಳ ಅಪ್ಪಯ್ಯ
ನೋಡಿ ದಣಿಯವೆನ್ನ ಕಂಗಳು ಈ ಸೋದೆಲಿರುವ ಈಡು ಇಲ್ಲದುತ್ಸವಂಗಳ ಬೇಡಿದವಗೀ ಧ್ವಜಬುತ್ತಿ (?) ನೀಡಿ ದಯಸೂರ್ಯಾಡುವರ ಪ ಯತಿಗಳ ಸಮೂಹವೆಷ್ಟು ಮಿತಿಯಿಲ್ಲದ ಬ್ರಾಹ್ಮಣ್ಯವೆಷ್ಟು ಮತಿಹೀನರಿಗೆ ಗತಿಯ ಕೊಡುವ ಪೃಥಿವಿಗಧಿಕ ಗುರುಗಳನ್ನು 1 ಭೂತನಾಥಗೆರಗಿ ನಿಂತು ವಾತಸುತಗೆ ಕೈಯ ಮುಗಿದು ಆತ ನಾರಾಯಣಭೂತನೆಂಬೋ ನೀತವಾದ ದೂತನಂತೆ2 ಕೊಳಲ ಕೃಷ್ಣ ಧವಳಗಂಗಾ ಹೊಳೆಯೊ ಮುತ್ತಿನ ಗದ್ದಿಗೆ ಮ್ಯಾಲೆ ಕಳೆಯು ಸುರಿವೊ ಕಮಲಪಾದ ಇಳೆಯೊಳ್ ಇಲ್ಲೀಳಿಗೆಯ ಪೂಜೆ 3 ಸನಕಾದಿ ಸುರೇಶನೆದುರು ಕಣಕ ಹ್ವಾಲಗ (ಹೋಳಿಗೆ?)ವನ್ನೆ ಮಾಡಿ ಮನಕೆ ಬಂದ ಮೃಷ್ಟಾನ್ನವನು ಜನಕೆ ತೃಪ್ತಿಬಡಿಸುತಿರಲು 4 ಸುತ್ತ ವೃಂದಾವನದ ಮಧ್ಯೆ ಉತ್ತಮರಾದ ವಾದಿರಾಜರು ಸತ್ಯವತಿಯ ಸುತರ ಎದುರು ನಿತ್ಯಾನಂದಭರಿತರಾಗಿ 5 ಸೃಷ್ಟಿಗಧಿಕಾನಂತಾಸನವು ಶ್ವೇತದ್ವೀಪ್ವೈಕುಂಠವೆಂಬೊ ಮುಕ್ತಸ್ಥಳದಲ್ವಾಸವಾದ ಲಕ್ಕುಮಿ ತ್ರಿವಿಕ್ರಮನ 6 ನೇಮನಿಷ್ಠ ಸೇವಕ ಜನಕೆ ಬೇಡಿದ ಇಷ್ಟಾರ್ಥ ಕೊಡುವೊ ಭೀಮೇಶಕೃಷ್ಣ ದಯದಿ ನೋಡಿದೆ ಹಯವದನನಂಘ್ರಿ 7
--------------
ಹರಪನಹಳ್ಳಿಭೀಮವ್ವ
ನೋಡಿ ನೋಡಿನೊ ರಂಗಾ ನಿನ್ನ ನೋಡಿನೊ ಆಡಲೇನಯ್ಯಾ ಪರಸತಿಯರ ಮೋಹಕ್ಕೆ ಸಿಲುಕಿ ಪ ಹೆಣ್ಣ ನಾ ಕಾಣುತ ಮನಸು ದ್ರವಿಸುವದು ದೃಢವಾಗಿ ಮುನ್ನೆ ದಾರಿದ್ರತನ ಯೆಣಿಸಿಕೊಳದೆ ಕಣ್ಣು ಹೋಗುವ ಸುದ್ದಿ ತಿಳಿಯದಲೆ ನೀಕ್ಷಿಸಿ ನಿತ್ಯ 1 ಜಲ್ಪಸಿಲ್ಪಿಗಳಿಂದ ಮಂತ್ರ ಮಾಡುವೆ ಅವಳಾ ಬಲ್ಪು ವಯ್ಯಾರ ಗುಣಗುಣಿಸಿಕೊಳುತಾ ತಲ್ಪಮಿಕ್ಕಾದ ಭೋಗದ್ರವ್ಯ ಬಯಸಿ ವಿ ಕಲ್ಪ ಸಂಕಲ್ಪದಲ್ಲಿ ಬಳುಲುವೆನುಬ್ಬಸವಳಿದು 2 ವ್ಯಾಖ್ಯಾತ ಪಂಡಿತದ್ವ್ಯಾಪಕ ಪಾಠಕ ಮಹಾ ಪ್ರಖ್ಯಾತ ವೇದವೇದಾಂತ ಪ್ರೌಢ ಸೌಖ್ಯ ಪುಸ್ತಕ ಪಾಣಿ ಜ್ಞಾನಿ ಎನಿಸಲು ಅವಳ ಆಖ್ಯಾನ ಕೇಳುತಲೆ ಕಿವಿಗೊಟ್ಟು ಲಾಲಿಸುವೆ 3 ಬೀದಿಯೊಳು ಪೋಗುವವಾಳೊಂದು ಪ್ರಯೋಜನಕೆ ಹಾದಿಯನು ಹಿಡಿದು ಸಮೀಪ ಬರಲು ಪಾದಕಾದರು ಬಿದ್ದು ಮಾತಾಡುವೆನೆಂಬೊ ಮೋದವನು ತಾಳಿ ಏಕಾಂತ ಹುಡುಕುವೆ 4 ಅಂಧಕ ಮೂಕಿ ಬಧಿರೆ ಹೀನಾಂಗ ಅವರೋತ್ತಮ ಜಾತಿ ವಿಧಿ ನಿಷೇಧವನು ಚಿಂತಿಸದೆ ತೀವರದಿಂದ ಅಧೋಗತಿಗೆ ಇಳುವೆನು ಸತ್ಕರ್ಮವನು ತೊರೆದು 5 ನೀರು ಸೀರೆವೊಗಿವಾಗ ಮೈ ತೊಳೆದು ಉಡುವಾಗ ಉರು ಕುಚ ಕಚ ನೋಳ್ಪ ಆಶೆಯಲ್ಲಿ ಮೂರು ಹತ್ತನೆ ತತ್ವ ನೆನೆನೆನೆದು ಯೋಚಿಸಿ ವಾರಿತಿಯ ಕೇಳಿ ತಲೆದೂಗುವೆನೊ ಲೇಸಾಗಿ 6 ಕಣ್ಣುಯಿದ್ದದಕೆ ಸಾರ್ಥಕವಾಗಲಿಲ್ಲ ಪ್ರ ಸನ್ನ ಮೂರುತಿ ಯೆನ್ನ ಸಾಧನವೇನೊ ಘನ್ನ ಏಲ್ಲೆಲ್ಲಿ ನಾ ನೋಡಿದರೆ ಅಲ್ಲಲ್ಲಿ ನಿನ್ನ ರೂಪವ ತೋರೊ ವಿಜಯವಿಠ್ಠಲ ಒಲಿದು 7
--------------
ವಿಜಯದಾಸ
ನೋಡಿ ಮರುಳಾಗದಿರು ಪರಸತಿಯರ ಪ ನಾಡೊಳಗೆ ಕೆಟ್ಟವರ ಪರಿಯ ನೀನರಿತು ಅ ಶತಮಖವ ಮಾಡಿ ಸುರಸಭೆಗೈದ ನಹುಷ ತಾನಾತುರದಿ ಶಚಿಗೆ ಮನಸೋತು ಭ್ರಮಿಸಿಅತಿ ಬೇಗ ಚಲಿಸೆಂದು ಬೆಸಸಲಾ ಮುನಿಯಿಂದಗತಿಗೆಟ್ಟು ಉರಗನಾಗಿದ್ದ ಪರಿಯರಿತು 1 ಸುರಪತಿಯು ಗೌತಮನ ಸತಿಗಾಗಿ ಕಪಟದಿಂಧರೆಗೆ ಮಾಯಾವೇಷ ಧರಿಸಿ ಬಂದುಪರಮ ಮುನಿಯ ಶಾಪದಿಂದಂಗದೊಳು ಸಾ-ಸಿರ ಕಣ್ಗಳಾಗಿರ್ದ ಪರಿಯ ನೀನರಿತು 2 ಸ್ಮರನ ಶರತಾಪವನು ಪರಿಹರಿಸಲರಿಯದೆದುರುಳ ಕೀಚಕನು ದ್ರೌಪದಿಯ ತುಡುಕಿಮರುತ ಸುತ ಭೀಮನಿಂದಿರುಳೊಳಗೆ ಹತನಾಗೆನರಗುರಿಯೆ ನಿನ್ನ ಪಾಡೇನು ಧರೆಯೊಳಗೆ3 ಶರಧಿ ಮಧ್ಯದೊಳಿದ್ದುದುರುಳ ದಶಶಿರನು ಜಾನಕಿಯನೊಯ್ಯೆಧುರದೊಳಗೆ ರಘುವರನ ಶರದಿಂದ ಈರೈದುಶಿರಗಳನೆ ಹೋಗಾಡಿಸಿದ ಪರಿಯನರಿತು 4 ಇಂತಿಂಥವರು ಕೆಟ್ಟು ಹೋದರೆಂಬುದನರಿತುಭ್ರಾಂತಿಯನೆ ಬಿಟ್ಟು ಭಯಭಕ್ತಿಯಿಂದಕಂತುಪಿತ ಕಾಗಿನೆಲೆಯಾದಿಕೇಶವನ ನಿ-ರಂತರದಿ ಭಜಿಸಿ ನೀ ನಿತ್ಯಸುಖಿಯಾಗು 5
--------------
ಕನಕದಾಸ
ನೋಡಿ ಶ್ರೀ ಹರಿಪೂಜಿ ಮಾಡುದು ಬಿಡಿ ಮನಕೃತ ವಾಜಿ ಧ್ರುವ ಮಂಗಳಕರಸುಖ ಕಂಗಳಗಿದಿರಿಡುತದನೇಕ ಮುಂಸಗುಡಿಯಲಿ ಮೂಡಿ ರಂಗದೋರುವ ಘನಕೌತುಕ 1 ತಾಳ ಮೃದಂಗ ಘನ ಭೇರಿ ಫಳಗುಡುತದೆ ಪರೋಪರಿ ತಿಳಿದವನಧಿಕಾರಿ ಕೇಳಲ್ಹೋಗುದು ಭವಭಯ ಹಾರಿ 2 ಹೇಳಲೆನ್ನಳವಲ್ಲ ಹೊಳೆವುತಿಹುದು ಮೂಜಗವೆಲ್ಲ ಕೇಳಿ ಸವಿಯ ಸೊಲ್ಲ ತಿಳಿದ ಮಹಿಮ ತಾನೆ ಬಲ್ಲ 3 ಅಜಪ ಸುಜಪ ಮಂತ್ರ ರಾಜಿಸುತಿಹುದು ಬಾಹ್ಯಾಂತ್ರ ತ್ರಿಜಗ ಮಾಡುವ ಪವಿತ್ರ ಸುಜನ ನೋಡುವ ಸುಚರಿತ್ರ 4 ಸ್ವಹಿತ ಸುಖದ ಸಾರ ಶ್ರೀಹರಿಪೂಜಿ ನಿರಂತರ ಮಹಿಪತಿ ಮನೋಹರ ಸಾಹ್ಯ ಸಕಲಕಿದೆ ಸಹಕಾರ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೋಡಿದೆ ವೇಂಕಟ ನಿನ್ನ ಪ ಕೊಂಡಾಡಿ ಬೇಡಿದೆ ವರವನ್ನ ಆಹಾ ರೂಢಿಯೊಳಗೆ ನಿನಗೆ ಈಡುಗಾಣೆನೊ ದೇವ ನಾಡುದೈವಗಳೆಲ್ಲ ಒಡಿಪೋದವೊ ಸ್ವಾಮಿ ಅ.ಪ ಮಣಿಗಣಮಯದ ಕಿರೀಟ, ಕಪ್ಪುವ ರಣಕುಂತಲದ ಲೋಲ್ಯಾಟ, ಯುಗತ ರಣಕುಂಡಲ ಬಹು ಮಾಟ ಅರ ಗಿಣಿ ಶÀಶಿಪೋಲ್ವ ಲಲಾಟ ಆಹಾ ಎಣೆಗಾಣೆ ಕಸ್ತೂರಿ ಮಣಿರ್ದಿಪ ಭ್ರೂಯುಗ ಕುಣಿಯುತ ಸ್ಮರಧನು ಗಣಿಸದೊ ಎಲೋದೇವಾ 1 ವಾರಿಜಯುಗಸಮನಯನ, ನಾಸ ಚಾರುಚಂಪಕ ತೆನೆ, ವದನದೊಳು ತೋರುವ ಸುಂದರರದನ ಪಂಕ್ತಿ ಸಾರಿದಾಧರ ಬಹು ಅರುಣ, ಆಹಾ ಸಾರಸಮುಖದೊಳು ಸೇರಿ ಶೋಭಿಪ ಚುಬಕ ಕೂರುಮಯುಗಕದಪು ಸಾರಕಟಾಕ್ಷವ 2 ಕಂಧರಾಂಕಿತ ಸತ್ರಿರೇಖಾ, ಕಂಠ ಪೊಂದಿಪ್ಪೊದ್ವರ್ತುಲ ಕ್ರಮುಕ, ಕೊರಳ ಸುಂದರಕೌಸ್ತುಭಪದಕ, ಬಹು ಬಂಧುರ ಚೆÉೈತ್ರ ಸುರೇಖ ಆಹಾ ಹಿಂದೆ ಸಿಂಹÀದ ಹೆÉಗಲಿನಂದದಲೊಪ್ಪಿದ ಸ್ಕಂಧದಿ ಶೋಭಿಪ ಒಂದು ಸರಿಗೆಯನ್ನು 3 ಸ್ವನ್ನ ಏಕಾವಳಿಹಾರಾ, ಬಾ ಪುತ್ಥಳಿ ಸಿರಿಯಾಕಾರ, ಬಹು ಚನ್ನವಾಗಿಹ ನಾನಾಹಾರ, ಶುಭ್ರ ವರ್ಣ ಶೋಭಿಪ ಜನಿವಾರ ಆಹಾ ಇನ್ನು ಗುಂಡಿನಮಾಲೆ, ಘನ್ನ ಜಲಸರಪಳಿ ಉನ್ನತದಾನಘ್ರ್ಯ ರನ್ನ ಜಯಂತಿಯಾ 4 ಶಿರಿವತ್ಸಲಾಂಛನಹೃದಯ, ಸುರ ಕರಿಕರತೆರಬಾಹು ಶಿರಿಯಾ, ನಾಲ್ಕು ಕರಗಳೊಪ್ಪವವೀಪರಿಯ, ಮೇಲಿ ನ್ನೆರಡು ಹಸ್ತದಿ ಶಂಖ ಅರಿಯ ಆಹಾ ವರರತ್ನ ಮುದ್ರಿಕೆ ಧರಿಸಿದ ಬೆರಳುಳ್ಳ ಕರತೋಡ ಕಡಗಕ್ಕೆ ಸರಿಗಾಣೆ ಧರೆಯೊಳು 5 ಪರಮವೈಕುಂಠದಕಿಂತ ಈ ಧರಿತಳವದಿಕವೆನ್ನು ತಾ ಬಲ ಕರದಿಂದ ಜನಕೆ ತೋರುತಾ ಬಾಹು ಎರಡು ಆಜಾನುಪೂರಿತಾ ಆಹಾ ಸ್ವರಣರತ್ನ ಖಚಿತ ವರನಾಗಭೂಷಣ ಧರಿಸಿ ಟೊಂಕದಿ ವಾಮಕರವಿಟ್ಟು ಮೆರೆವೋದು 6 ಹಸ್ತಯುಗದಿ ತೋಡ್ಯ ಕಡಗ, ಪ್ರ ಶಸ್ತ ರತ್ನದ್ಹರಳಸಂಘ ರಚಿತ ಸಿಸ್ತಾದÀ ಉಂಗುರ ಬೆಡಗ, ಬಹು ವಿಸ್ತರಾಂತರ ಭುಜಯುಗ ಆಹಾ ಹಸ್ತಿವರದ ಸಮಸ್ತಲೋಕಕೆ ಸುಖ ವಿಸ್ತಾರ ನೀಡುತ ಸಿಸ್ತಾದ ದೇವನ 7 ಉದರ ತ್ರಿರೇಖ ರೋಮಾಳಿನಾಭಿ ಪದುಮ ಶೋಭಿಪ ಗುಂಭಸುಳಿ ಮೇಲೆ ಉದಯಾರ್ಕ ಪೋಲುವ ಕಲೆ ಇಂದ ಸದಮಲಾಂಬರಪಟಾವಳಿ ಆಹಾ ಬಿದುರಶೋಭಿüತ ಮಹಾಚÀದುರದೊಡ್ಯಾಣವು ಪದಕ ಮುತ್ತಿನ ತುದಿ ವಿಧವಿಧ ಪೊಳೆವೋದು 8 ರಂಭೆ ಪೋಲುವ ಊರುಸ್ತಂಭ, ಇಂದು ಡಿಂಬ ಭಕ್ತ ಕ ದಂಬ ಮೋಹಿಪ ವಿಡಂಬ ಆಹಾ ಅಂಬುಜಾಸನಪಿತನ ತುಂಬಿದ ಮೀನ್ಜಂಘ ನಂಬಿದ ಜನರನ್ನ ಇಂಬಾಗಿ ಸಲಹೋನಾ 9 ಪರಡೆರಡು ಮಾಣಿಕ್ಯಾವರಣ, ಪೊಳೆವ ಕಿರುಗೆಜ್ಜೆನೂಪುರಾಭರಣ ಇಟ್ಟು ಮೆರೆವೊ ಗಂಗೆಯ ಪೆತ್ತ ಚರಣ ಯುಗ ನಿರುತ ಭಜಿಪರೊಳತಿ ಕರುಣ ಆಹಾ ಮರೆಯದೆ ಮಾಡುತ ಪರಿಪರಿ ಸೌಖ್ಯವ ಕರೆದುನೀಡುವನಹಿಗಿರಿವಾಸ ಶ್ರೀಶÀನ್ನ 10 ಪೋತೇಂದು ನಖಯುತ ಬೆರಳ ಸಾಲು ದೂತತತಿಗೆ ಸುಖಗಳನಿತ್ತು ನೀತಙÁ್ಞನ ಭಕ್ತಿಗಳ ನಿತ್ಯ ಪ್ರೀತಿಪಡೆಯೆ ಮುಕ್ತಿಗಳ ಆಹಾ ವಾತಗುರುಜಗನ್ನಾಥವಿಠಲನತಿ ನಿತ್ಯ 11
--------------
ಗುರುಜಗನ್ನಾಥದಾಸರು
ನೋಡಿದೆ ಶ್ರೀಕೃಷ್ಣನ ನೋಡಿದೆ ಪ. ನೋಡಿದೆ ಒಂಬತ್ತುಗೂಡಿನ ಕಿಟಕಿಯೊಳ್ಕೂಡಿದ ಮಂದಿಯೊಳ್ಗಾಡಿಕಾರನನಿಂದುಅ.ಪ. ನಾರಿಪುರುಷರೊಂದುಗೂಡಿ ಮುಂದೆದಾರಿಯ ಬಿಡದೆ ಹೋರ್ಯಾಡಿ ದೇಹಯಾರದಂತೆÉ ಪುಡಿಪುಡಿ ಮತ್ತೆಶ್ರೀರಮಣನ ಪಾಡಿ ಬೇಡಿ ಆಹಾ ಸುತ್ತಸೇರಿದ ಜನರಿವರ ಮಧ್ಯದಿಚಾರು ಮೌಕ್ತಿಕದ ಮಣಿಹಾರÀ ಶೃಂಗಾರನ್ನ1 ಅಂಗದೊಳಿಹ ದಿವ್ಯಾಭರಣ ಕನ-ಕಂಗಳೊಪ್ಪಿದ ರವಿಕಿರಣ ಮುನಿ-ಪುಂಗವೆ ವಂದಿಪ ಚರಣಕಮ-ಲಂಗಳ ನೆನೆವರ ಕರುಣ ಆಹಾ ಹಿಂಗದೆÉ ಪೊರೆವ ಶ್ರೀರಂಗನುತ್ಸವÀಕೆಂದುಮಂಗಲಾರತಿಯಾಗಿ ಸಂಗಡ ಪೊರಡಲು 2 ಭರದಿಂದ ಪಲ್ಲಕ್ಕಿನೇರಿ ಮಧ್ವಸರೋವರದೆಡೆಯನು ಸಾರಿ ಸುತ್ತಮೆರೆವ ದೀಪದಿಂದೀರಿ (?) ನೋಳ್ಪ ಜ-ನರಿಗೆ ಜಲಕ್ರೀಡೆ ತೋರಿ ಆಹಾಸಿರಿ ಅರಸನು ಹಯವದನನೇರಿ ಮೆರೆವ ಉಡುಪಿಯೊಳ್ಪರಿಯಾಯ ವಿನೋದವನ್ನು 3
--------------
ವಾದಿರಾಜ
ನೋಡಿದ್ಯಾ ಈ ದೇಹಕೆ ಬಂದು | ನೋಡಿದ್ಯಾ ನೋಡಿದ್ಯಾ |ನೋಡದವನ ನೀ ನೋಡುವೆ ಎಂದರೆ | ನೋಡುವಿ ಎಂದಿಗೆ ನೋಡಿದ್ಯಾ ಪ ಒಬ್ಬವರ್ಯಾರೂ ತೋರುವದಲ್ಲ | ತೋರಿಸಿಕೊಂಡರದು ತಾನಲ್ಲ | ತೋರಡಗುವದಕೆ ಮೀರಿರುವದು ಎಂದು | ಸಾರುತಿಹುದು ಶ್ರುತಿಸಾರವೆಂದು 1 ರೂಪವನ್ನು ಕಲ್ಪಿಸಲಿಲ್ಲಾ | ಚಿದ್ರೂಪವನು ಸರ್ವರೊಳೆಲ್ಲಾ | ಪಾಪ ಪುಣ್ಯಕೆ ವ್ಯಾಪಕನಾದ | ದೀಪ ಪ್ರಕಾಶನ ಬೋಧಿಪ ಬಲ್ಲಾ 2 ಕರೆದರೆ ಎತ್ತೆತ್ತ ಬಾರ ಮತ್ತೆ | ಮರೆದರೆ ಎತ್ತೆತ್ತ ಹೋಗನು ದೂರ | ಗುರು ಭವತಾರಕ ಶಿರದೊಳು ಕರವಿಟ್ಟು | ವರದ್ಹೇಳಿದ ವಸ್ತು ಪರಿಪೂರ್ಣವಾಗೆ 3
--------------
ಭಾವತರಕರು
ನೋಡಿರೆ ನೋಡಿರೆ ನಂದನ ಕಂದನ| ಆಡುವ ಆಟದ ಘನ ಮಹಿಮೆಯನು| ರೂಢಿಲಿ ಶಿಶುವೆಂದವರ ನುಡಿ ಮಾಡುವ ಬಲುಕುಂದಾ ಪ ದುರುಳತನವ ಬಲು ಮಾಡಲೈಶೋಧೆಯು| ತರಳನ ಚರಣವ ನೆರೆ ಕಟ್ಟಿದರೆ| ಒರಳವ ನೆಳೆದೊಯ್ದಾ ಭರದಲಿ ಮರಗಳ ನಡ ಮುರಿದಾ 1 ಸಿಕ್ಕಿದ ಗೋವಳನೆನುತಲಿ ಬಾಲೇರು| ಅಕ್ಕರದಲಿ ಹಿಡಿದೆಳೆತರಲವರಾ| ಮಕ್ಕಳ ರೂಪವನು ಆಗುತೆ ಠಕ್ಕಿಸಿ ಹೋಗುವನು2 ತಂದೆ ಮಹಿಪತಿ ನಂದನ ಪ್ರಭುವಿನಾ| ನಂದನ ಲೀಲೆಯ ಹೇಳಲೆನ್ನಳವೇ| ಒಂದಲ್ಲ ಎರಡಲ್ಲ ನೆಲೆಯನು ಇಂದುಧರನೇ ಬಲ್ಲ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡಿರೈ ಜನಾ ರಂಜನೆಯಲ್ಲಿ | ನೋಡಿರೈ ಜನಾ | ಮಾಡದೆ ಹಿರಿಗುರು ಭಕ್ತಿಯ ಶೀಲದಿ | ರೂಢಿಯ ಡಂಭಕ ಹರಿದಾಡುವದು ಪ ಸಾಧು ಸಂತರ ಮನೆಯಲ್ಲಿ | ಆದರವಿಲ್ಲಾ ಮನದಲ್ಲಿ | ಮೇದಿನಿಯಲಿ ನುಡಿಸಿದ್ಧಿಯ ಹೇಳಲು | ಸಾಧಿಸಿ ಹೋಗುತ ಬಾಗುತಲಿಹುದು 1 ಚಂದನವಿಡಿದು ತೆಯ್ವಲ್ಲಿ | ಒಂದು ಬಾರದು ನೊಣವಲ್ಲಿ | ಕುಂದದೆ ಎಂಜಲ ತೊಳೆವಾಸ್ಥಳದಲ್ಲಿ | ಸಂದಿಸಿ ಮುಕುರುವ ಸಂದಲಿ ಯಂದದಿ 2 ಪರಗತಿ ಸಾಧನ ವರಿಯರು | ಬರಿದೆ ಭ್ರಾಂತಿಗೆ ಬೆರೆವರು | ಗುರುಮಹಿಪತಿಸುತ ಪ್ರಭು ಕಲ್ಪತರು | ಸೇರದೆ ಬೊಬ್ಬುಲಿ ಮರಕೆಳಗಾಡುವ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡು ಗರ್ವ ಹಿಡಿಯ ಬ್ಯಾಡಾ ಪ ಜಗದೊಳಗ ಹಿತ ಮಾಡಿಕೊ | ಸಂತರೊಳು ಕೂಡಿ ನೀ ಪ್ರಾಣಿ ಅ.ಪ ಸುರಪದ ಮದ-ಗಜವೇರಿ ಸುರಸೈನ್ಯದಿಂಬರಲು | ಕರುಣದಿಂ ದೂರ್ವಾಸ ಸರ್ವ ಕುಡಲು | ಕೊರಳಿಗಿಕ್ಕದೆ ಬಿಡಲು ಧರೆಗೆರಗುವದ ಕಂಡು | ಮೊರೆದು ಕೋಪಿಸಲು ಸಿರಿಹರದ್ಹೋಯಿತು ಪ್ರಾಣಿ 1 ನೃಪತಿ ನಹುಷನನು ಯಜ್ಞ ಅಪರಿಮಿತ ಮಾಡಿ ನಿಜ | ಉಪಬೋಗಿಸದೆ ತಾ ಸುರಪ ಪದವಿಯಾ | ವಿಪುಲ ಋಷಿಯರ ಕೂಡ ಅಪಹಾಸ ಮಾಡಲಿಕೆ | ಶಪಿಸಲಾಕ್ಷಣ ಉರಗಾಧಿಪನಾದ ಪ್ರಾಣಿ 2 ವೈರಿ ಗರ್ವ ವಿದ್ಯಕ ಹಾನಿ | ಗರ್ವದಿಂ ಕೆಡಬಹುದುರ್ವಿಯೊಳಗ | ಸರ್ವಥಾ ಬ್ಯಾಡೆಂದು ಹೊರೆಯೊ ಗುರು ಮಹಿಪತಿ | ಅರ್ವವನು ಕೊಟ್ಟೆನಗ ಸರ್ವರೊಳು ಪ್ರಾಣಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು