ಒಟ್ಟು 3729 ಕಡೆಗಳಲ್ಲಿ , 124 ದಾಸರು , 2629 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚರಣಾರಾಧಿಸೋ ಚಾರುತರ ಭೂ ವರಹ ವೇಂಕಟೇಶನಾ ಉರಗಾದ್ರಿವಾಸನಾ ವರ ಶ್ರೀನಿವಾಸನಾ ಪ ದುರಿತಕೋಟಿಯ ಹರಿವ ಸ್ವಾಮಿ ಪು ಷ್ಕರಿಣಿ ತೀರ ವಿಹಾರನಾ ಸಿರಿಮನೋಹರನಾ ಪರಮ ಉದಾರನಾ 1 ವಾಹನೋತ್ಸವದಲ್ಲಿ ಪರಿಪರಿ ಮಹಿಮೆ ಜನರಿಗೆ ದೋರ್ವನಾ ಸಹಜದಿ ಮೆರೆವನಾ ಬಹಳ ಪೂರ್ವನಾ 2 ನಡೆದು ಯಾತ್ರೆಗೆ ಬರಲು ಹಯಮೇಧ ಅಡಿಅಡಿಗೆ ಫಲ ನೀವನಾ ಬಿಡದೆವಾ ಕಾವನಾ ಮೃಡಜರ ದೇವನಾ3 ಸಕಲರಿಗೆ ನೈವೇದ್ಯನುಣಿಸುವಿ ಅಖಿಳ ಸಂಶಯ ಹಾರಸೀ ವೈಕುಂಠ ಸೇರಿಸೀ ಸ್ವಕರದಿ ತೋರಿಸೀ 4 ಇಂದು ನಮ್ಮನಿ ದೈವವಾಗಿಹ ತಂದೆ ಮಹಿಪತಿ ಪ್ರೀಯನಾ ಸುಂದರ ಕಾಯನಾ ವೃಂದಸುರ ಧ್ಯೇಯಾನಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಚಲುವಾ ಕೃಷ್ಣಾ ನಿನ್ನ ನಿಲುವು ನೋಡದೆ ದುಃಖಬಲು ಭಾರವಾಗಿಹುದೋ ಪ ಇಂದು ಮಧ್ಯಾನ್ಹ ಒಂದೇ ಮನದಿ ನಾನುನಿನ್ನ ಮಾತೇ ಚಿಂತಿಸಿಕುಂದಣ ಕೆತ್ತಿದ ಸುಂದರಾಭರಣಗಳುಇಂದು ಶೋಭಿಪ ರೂಪದಿ ನೀ ಪೊಳೆದಿ 1 ಇಂಥಾ ರೂಪವೆ ಮತ್ತೆ ಕಂತುಪಿತನೆ ತೋರೋಅಂತರಂಗದಿ ಎನ್ನಲಿ ಚಿಂತಿಸಿದೆನುಸಿರಿಕಾಂತಾ ತೋರದ ದಾರಿಭ್ರಾಂತಿಯಾಗಿದೆ ಮನಕೆ ಪೇಳದಕ್ಕೆ 2 ಕರವ ಇಂದು ಪ್ರಾರ್ಥಿಪೆ ಬೇಗಾನಂದ ಬಾಲನೆ ಸುಳಿಯೋ ನೀ ನಲಿಯೋ 3
--------------
ಇಂದಿರೇಶರು
ಚಾಮರವನು ಹಾಕಿರೆ ಕೋಮಲಾಂಗಿಯರುಶ್ರೀ ಮಹಾಮಾರುತನ ಸ್ಮರಿಸುತ ನೀವೆಲ್ಲರು ಪ. ರಾಮ ನರಹರಿ ಕೃಷ್ಣ ಶ್ರೀಮಹಿಧರಗೆಇಹ ಆಲದೆಲೆಯ ಮೇಲಿದ್ದು ಕ್ರೀಡಿಪಗೆ ಅ.ಪ. ಗೋಪಿ ಪುತ್ರಗೆ ನೀವು 1 ರಾಮ ಕುಳಿತಿರುವ ನಿಜ ಕಾಮಿನಿಯ ಸಹಿತಶ್ರೀ ಮಹೀ ಸಹಿತ ಭೂಮಿಧರನುತಾತಾಮಸರ ನಯನ ಮುನಿ ಕಾಮಿನಿವರ ಪ್ರೀತಶ್ರೀಮಲಸಹಾರ ಸಿರಿಧಾಮ ವಿಖ್ಯಾತ 2 ಸುಂದರಾಂಗಿಯರು ತ್ವರದಿಂದ ಪಾಡುತಲಿಮಂದಾಕಿನಿಯರ ಪ್ರಮುಖರಿಂದ ಸರತಿಗಳೇಮಂದಹಾಸ್ಯಗಳ ಮುಖದಿಂದ ನೋಡುತಲಿಇಂದಿರೇಶನ ಹತ್ತಿರ ಹೊಂದಿ ನಿಲ್ಲುತ್ತಲೆ3
--------------
ಇಂದಿರೇಶರು
ಚಾಮುಂಡೇಶ್ವರಿ ಪಾಲಿಸೆ ನಮ್ಮಚಾಮರಾಜೇಂದ್ರ ನೃಪಾಲನ ನಿರುತವು ಪಇಂದ್ರಾದಿ ದೇವರ್ಕಳೆಲ್ಲ ನಿನ್ನಂಘ್ರಿಯಕುಂದ ಮಂದರಾದಿ ಕುಸುಮರತ್ನಗಳನ್ನುತಂದು ಪೂಜಿಸಲಾಗ ಪರಿತುಷ್ಟಳಾಗಿ ನೀನಂದು ಕುಂದದ ವರಗಳನಿತ್ತು ಸಲ'ದೆ 1ಇಳೆಯೊಳು ಕೃಷ್ಣೇಂದ್ರ ನಿನ್ನ ಪೂಜೆಯ ಭಕ್ತಿಯಲಿ ಗೈದು ವರಪುತ್ರನನ್ನಾತ ಪಡೆದನುಒಲಿದು ನೀನಿತ್ತ ಪುತ್ರನು ಸುಖದಿಂದೀ ಭೂವಲಯವನಾಳಿಕೊಂಡಿರುವಂತೆ ವರ'ತ್ತು 2ಶರಣಾಗತಜನ ರಕ್ಷಣೆಗೈಯುತವರ ಮಹಾಬಲಗಿರಿಯೋಳು ನಿಂದು ಮೆರೆಯುವೆತರಳ ನಾರಾಯಣದಾಸನ ಬಿನ್ನಪವಕರುಣದಿಂ ಸಲಹು ವೆಂಕಟರಮಣ ಸೋದರಿ 3
--------------
ನಾರಾಯಣದಾಸರು
ಚಿಂತಯಾಮಿ ತ್ವಾಮದ್ಯಾಹಂ ಚಿಂತಯಾಮ್ಯಹಂ ಚಿಂತಿತಾರ್ಥದಂ ಭಜತಾಂ ಚಿಂತಾಮಣಿಂ ಚಿಂತಾಪಹಂ ಪ ಭಾನುನಿಭ ನಖರಾಜಂ ಜ್ಞಾನಾಶ್ರಯಪಾದಾಂಭೋಜಂ ದೀನಜನ ಭಯೋದ್ವೇಜಂ ಜಾನೂರು ಸುರುಚಿ ಭಾಜಂ 1 ಹೇಮಾಂಬರ ವಿರಾಜಿತಂ ಹೇಮಸೂತ್ರ ಸುಶೋಭಿತಂ ವ್ಯೋಮಾಲಯ ಪಾದಯುಕ್ತಂ ಕೋಮಲ ಶ್ಯಾಮಾಂಗ ದ್ಯುತಿಂ 2 ಇಂದಿರಾಶ್ರಿತ ವಕ್ಷಸಂ ಗಂಧಹಾರಮಣಿಭಾಸಂ ಮಂದರಮಾಲಾವತಂಸಂ ಕಂದರ್ಪಕೋಟಿ ವರ್ಚಸಂ 3 ಚಕ್ರಾದ್ಯಾಯುಧ ಭ್ರಾಜಿತಂ ನಕ್ರಕುಂಡಲ ಶೋಭಿತಂ ಶಕ್ರಾನನಂ ಸುವಿಸ್ಮಿತಂ ವಕ್ರಾಳಕ ತತಿ ತತಂ 4 ಕಸ್ತೂರೀ ತಿಲಕ ಫಾಲಂ ವಿಸ್ತøತಮೌಳಿ ಭಾಜಾಲಂಪ್ರಸ್ತುತ ವೆಂಕಟಶೈಲಂ ಸುಸ್ಥಿತ ಕೀರ್ತಿವಿಶಾಲಂ 5
--------------
ತಿಮ್ಮಪ್ಪದಾಸರು
ಚಿಂತಿಸೋ ಭಾರತವ ನೀ ಚಿಂತಿಸೊ ಪ. ಚಿಂತಿಸೊ ಭಾರತ ಮಹಿಮಾ | ಸಿರಿಕಾಂತನೆ ಉತ್ತಮೋತ್ತಮಾ | ಆಹಪಂಕ್ತಿಪಂಕ್ತಿಯೊಳಂತೆ | ಚಿಂತಿತ ಫಲದನಸಂಗ್ತಿ ಪೇಳುವ ಶ್ರುತಿ | ಅರ್ಥ ಭೋಧಿಪುದೆಂದು ಅ.ಪ. ಕಾಳಗ ಸರ್ವ | ಧೀಶನ ಮಹಿಮೆಯ 1 ಅಧಿಭೂತ ಅಧ್ಯಾತ್ಮ ಉಂಟು | ಮತ್ತೆಅಧಿದೈವವೆಂಬುದು ಉಂಟು | ಕೇಳುವಿದಿತವಾಗುವುದಲ್ಲ ಗಂಟು | ಗುರುಮುದದಿಂದ ಬಿಡಿಸಲೀ | ಗಂಟು | ಆಹಅದುಭುತಾರ್ಥಗಳೆಲ್ಲ | ವಿದಿತವಾಗುತ ಹರಿಹೃದಯಾಂತರಂಗನ | ನಿಧಿಧ್ಯಾಸನಕ್ಕವಕಾಶ 2 ಮೂರ್ಬಗೆ ಭಾಷೆಗಳಲ್ಲಿ | ಉಕ್ತಸಾರ ಪ್ರಮೆಯಂಗಳಲ್ಲಿ | ಹರಿ ಉ-ದಾರ ಗುಣಂಗಳು ಅಲ್ಲಿ | ಉಕ್ತಮೀರದೆ ಸ್ಪಷ್ಟತ್ವದಲ್ಲಿ | ಆಹನೇರವಾಗಿಯೆ ಪೇಳ್ದ | ಕಾರಣ ಕರೆವರುಮೂರರೊಳ ಗೊಂದು | ಸಾರಸಮಾಧ್ಯೆಂದು 3 ದರ್ಶನಾಂತರ ಸಿದ್ಧವಾದ | ವೈಷ್ಣ್ವದರ್ಶನ ಪ್ರತ್ಯುಕ್ತವಾದ | ಶೈವದರ್ಶನಾದಿ ಸಿದ್ಧವಾದ | ವಸ್ತುದರ್ಶಿತ ಶಿವನರ್ಚಿಸೀದ | ಆಹ ವಿ-ಮರ್ಶನ ಯೋಗ್ಯ ಸ | ದೃರ್ಶನ ದಿಂದಲಿದರ್ಶನ ಭಾಷೆ ದಿ | ಗ್ದರ್ಶನ ವಿದು ತಿಳಿ 4 ಶೂಲಾಟ್ಟ ಜನಪದವೆಂಬ | ಶಿವಶೂಲವು ಚತುಷ್ಪಥವೆಂಬ | ಕೇಶಶೂಲಿಗಳ್ಪ್ರಮದೇರು ಎಂಬ | ಯುಗಕಲಿಯೊಳಗಿಹರು ಎಂಬೆಂಬ | ಆಹಮೇಲಾದ ಗೂಢಾರ್ಥ | ಜಾಲಗಳೆಲ್ಲವುಓಲೈಸು ಗುಹ್ಯದ | ಭಾಷೆ ಎಂದೆನುತಲಿ 5 ಪರ ಪಾಂಡವಾದಿಗಳ್ಪೆಸರೆಂದು 6 ಸ್ವರವರ್ಣ ವಾಕ್ಯ ಭಾರತ | ಗ್ರಂಥಸರ್ವವು ಮುಖ್ಯ ಪ್ರವೃತ್ತ | ಹರಿಸರ್ವೋತ್ತಮನೆಂಬ ತತ್ವ | ಪೇಳೆಸಿರಿ ವೇದವ್ಯಾಸ ವಿರಚಿತ | ಆಹಪರಮ ಭಕ್ತರು ಪೃಥೆ | ವರ ಉದರೋದ್ಭವಧರ್ಮಾದ್ಯರ ಚರಿತೆ | ಅರುಹುವುದೆನುತಲಿ 7 ಗುಣಗಳು ಭಕ್ತ್ಯಾದಿ ದಶವು | ಇನ್ನುಕರ್ಣದಿಂ ಕೇಳ್ವುದೆಲ್ಲವು | ಹಾಗೆಗುಣಗಳು ಶೀಲ ವಿನಿಯಾವು | ಮತ್ತೆಗುಣಸುವುದು ಮೂರು ವೇದವು | ಆಹಮನು ಪದ ವಾಚ್ಯಗ | ಳೆನಿಸುವುದೀ ಪಂಚಗುಣಧರ್ಮ ವಾಚ್ಯರು | ಪಾಂಡವರೆನಿಪರು 8 ಅಭಿಮಾನಿ ಧರ್ಮಕ್ಕೆ ಎಂದು | ಮನುಅಭಿಧನು ಧರ್ಮಜನೆಂದು | ಇನ್ನುಅಭಿಮಾನಿ ಭಕ್ತ್ಯಾದಿಗೆಂದು | ಭೀಮನಭಿಧನಾಗಿಹನವ ಎಂದು | ಆಹಅಭಿಧನರ್ಜುನ ಶ್ರುತ | ಕಭಿಮಾನ ಎನುತಲಿಶುಭ ಶೀಲ ವಿನಯಕ್ಕೆ | ಅಭಿಮಾನಿಯಮಳರು 9 ಪರಿ ಪತಿ ಪರಿ ಜ್ಞಾನುಳ್ಳ | ಆ ಪೃಥೆ ಸುತರೆಲ್ಲನೀ ಪರಿಭಾವಿಸು | ಆಸ್ತೀಕರೆನುತಲಿ 10 ದ್ರುಪದಜೆ ಧರ್ಮಾದಿ ಐದು | ಜನಸುಪುಣ್ಯ ಶ್ಲೋಕರ ಕಥೆ ಇದು | ಇನ್ನುಉಪರಿಚರಾಭಿಧನೆಂದು | ವಿಷ್ಣುಸುಪ್ರತಿಪಾಧ್ಯನು ಎಂದು | ಆಹಇಪ್ಪರಿ ಮಹಿಮೆಯು | ಪೇತವು ಭಾರತಸುಪ್ರತಿಷ್ಠಿತವಿದು | ಅಬ್ಜಜಾಂಡದಲೆಂದು11 ಭಕ್ತಿವೈರಾಗ್ಯವು ಜ್ಞಾನಾ | ಮತ್ತೆಧೃತಿಯು ಸುಮೇಧಾ ಸುಪ್ರಜ್ಞಾ | ಇನ್ನುಸ್ಥಿತಿ ಬಲಯೋಗವು ಪ್ರಾಣಾ | ಭೀಮಹತ್ತು ಗುಣಾತ್ಮಕ ಮಾನಾ | ಆಹಉತ್ತಮ ಗುಣಿಪರ | ನಾತ್ಮನಾ ಅದರಿಂದತತ್ತನು ಎನಿಸೀಹ | ಪೃಥ್ವಿಪ ಭೀಮನು 12 ಮೂರ್ತಿ ಮೂರ್ತಿ | ಆಹಕರೆಸಿಹ ಶಕುನಿಯು | ಮೂರುತಿ ನಾಸ್ತಿಕ್ಯಸರ್ವದೋಷಾತ್ಮಕ | ರೆನಿಪರಂಧಜರೆಲ್ಲಾ 13 ಹರವನಾತರನು ಎಂದು | ದ್ರೌಣಿಕರೆಸುವನಹಂಕಾರನೆಂದು | ಇನ್ನುಕರಣಗಳ್ಪ್ರಾಣಾದಿ ಎಂದು | ಮತ್ತೆವರ ಸೈನ್ಯ ಪಾಪಗಳೆಂದು | ಆಹಅರಿವುದರ ಪುಣ್ಯ | ಪರವೆಂದು ಪಾಂಡವರಇರುತಿಹ ವಿಷ್ಣುವು | ಅವರ ನಿಯೋಜಕ 14 ಸರ್ವವು ಅಧ್ಯಾತ್ಮನಿಷ್ಟ | ಗ್ರಂಥದುರ್ವಿಜ್ಞೇಯ ಸರ್ವರ್ಗೆ ಎನುತ | ವ್ಯಾಸಸರ್ವಜ್ಞ ತಾನೆಲ್ಲ ಜ್ಞಾತ | ನಿಹಪೂರ್ವ ಮಾರುತ ಹರಿದೂತ | ಆಹಅರಿವ ಗುರು ಗೋವಿಂದ | ವಿಠಲಾನುಗ್ರಹದಿಂದಮರುತಾನುಗ್ರಹದಿಂದ | ಅರಿವರು ಇತರರು 15
--------------
ಗುರುಗೋವಿಂದವಿಠಲರು
ಚಿಂತೆಯ ಮಾಡದಿರು ಚದುರೆ ನಿನಗೆ ನಾನು ಕಂತುಪಿತನನು ತೋರುವೆ ಪ ಸಂತೋಷದಿಂದ ಸರ್ವಾಭರಣವಿಟ್ಟುಕೊಂಡು ನಿಂತು ಬಾಗಿಲೊಳು ನೋಡೆ ಪಾಡೆ.ಅ.ಪ ಕುಸುಮ ಹಾರವನು ಸುಖನಿಧಿಗೆಕಂದರದಿ ನೀಡಿ ನೋಡೆಸಂದೇಹ ಬಿಟ್ಟು ಬಿಗಿದಪ್ಪಿ ಮನವೊಂದಾಗಿಎಂದೆಂದಿಗಗಲದಿರೆನ್ನ ರನ್ನ 1 ಆಸನವ ಕೊಟ್ಟು ಕಮಲಾಸನನ ಪಿತಗೆ ಸವಿ-ಯೂಟಗಳನುಣ್ಣಿಸಿಲೇಸಾಗಿ ತಾಂಬೂಲ ತವಕದಲಿ ತಂದಿಟ್ಟುವಾಸನೆಗಳನೆ ತೊಟ್ಟು ಸೂಸುವ ಸುಳಿಗುರುಳುಗಳ ತಿದ್ದುತಲಿ ನಕ್ಕುಶ್ರೀಶನ್ನ ಮರೆಯ ಹೊಕ್ಕುಆ ಸಮಯದಲಿ ನಿನಗೆ ದಾಸಿ ಎನ್ನಯ ಮನದಿವಾಸವಾಗು ಬಿಡದೆ ಎನ್ನ ರನ್ನ 2 ಇಂತು ಈ ಪರಿಯಲ್ಲಿ ಶ್ರೀಕಾಂತನನು ಕೂಡಿ ಏ-ಕಾಂತದಲಿ ರತಿಯ ಮಾಡಿಸಂತೋಷವನು ಪಡಿಸಿ ಸಕಲ ಭೋಗವ ತಿಳಿಸಿಸಂತತ ಸ್ನೇಹ ಬೆಳೆಸಿಅಂತರಂಗಕ್ಕೆ ಹಚ್ಚಿ ಅವನಾಗಿ ತಾ ಮೆಚ್ಚಿಪ್ರೀತಿಯಿಂದಧರ ಕಚ್ಚಿಕಂತು ಕೇಳಿಯೊಳು ಕಡುಚೆಲ್ವ ರಂಗವಿಠಲಇಂತು ನಿನ್ನಗಲ ಕಾಣೆ-ಜಾಣೆ.3
--------------
ಶ್ರೀಪಾದರಾಜರು
ಚಿಂತೆಯಾತಕೆ ನಿನಗೆ ಎಲೆ ಪ್ರಿಯಳೆ | ಸಂತತ ತಿಳುಪುವೆನು ಭಕುತಿಯಿಂದಲಿ ಕೇಳು ಪ ಈ ಭೋಗ ನಮಗೆ ಯಾಕೆಂದು ನೀ ಕೇಳುವಿಯಾ | ಲಾಭವಲ್ಲದ ಇದು ನೋಡುವದಕೆ ಶ್ರೀ ಭೂರಮಣ ತಾನೆ ತಂದಿತ್ತ ವಿಚಿತ್ರ ವೈಭೋಗವಲ್ಲೆನೆಂದರೆ ಬಿಡದು ರಮಣೀ 1 ಹಿರಿಯರು ಈರ್ವಗೆ ಮಾಡಿದ ನಿಷ್ಠೆ ವಿ ಪರಿ ಸೌಖ್ಯವ ಹಿರಿದಾಗಿ ಕೊಟ್ಟು ನಮ್ಮನು ಪಾಲಿಸುವುದು ಬಲು ಮೊರೆಯಿಟ್ಟರೆ ಕೇಳು ಹರಿಯ ಮಹಿಮೆಗೆ ನಮೋ 2 ಕ್ಷೀರಸಾಗರದೊಳಗೆ ಓಲ್ಯಾಡುವವನ ವಿ ಚಾರಮಾಡದೆ ತಂದು ಹೃದಯಮಧ್ಯ ಸೇರಿಸುವಂದದಿ ಎನಗೆ ಇಲ್ಲಿಹ್ಯುದು ಸಂ ಸಾರದೊಳಗಿದ್ದ ಸುಖವಿನಿತುಂಟು ರಮಣೀ 3 ಸಂತಾನವಿಲ್ಲೆಂದು ಈರ್ವರೂ ಚಿಂತಿಪದ್ಯಾಕೆ ಪಿಂತೆ ಕಾಂತಾರದಲಿ ಬಾಲಮೃಗನ ಅಂತಕನ ಪುರಿಗೆ ಅಟ್ಟಿದ ದೋಷದಿಂದ ನಮ- ಗಿಂತು ತೋರಿತು ಗುಟ್ಟು ಪೇಳಬಾರದು ರಮಣೀ 4 ಈ ಜನ್ಮ ಬಂದದಕೆ ಇನ್ನಾದರೆಚ್ಚೆತ್ತು ಮಾಜಿಕೊಂಡಿದ್ದು ಜನರಂತೆ ನಡದು ಸಿರಿ ವಿಜಯವಿಠ್ಠಲನ ಸ ರೋಜ ಚರಣವನು ಪೂಜಿಸುವೆನು ರಮಣೀ 5
--------------
ವಿಜಯದಾಸ
ಚಿಂತೆಯಾತಕೆ ಮನವೆ ನಿನಗಿದು ಸತತ ಸಲ್ಲದು ಕಾಣೊ ಪುರಂದರ ದಾಸರನುದಿನ ಇಂತು ಬಗೆಯಲಿ ಪಾಲಿಸೊ ಪ ಅಗ್ರ ಬುದ್ಧಿಯ ತಾಳು ನಿನಗೆ ಸಾ ಮಗ್ರಿ ಆಲೋಚನಿ ಯಾತಕೆ ಸ ಮಗ್ರ ಸೋಪಸ್ಕರವನು ಅನುಗ್ರಹವನು ಮಾಡುತಾ ಉಗ್ರ ಮನುಜರ ಕೂಡಿಸದೆ ಪಾ ಅಂದು ಪೊಗಳಲು ಶೀಘ್ರದಲಿ ನಿಂದಿಹರೊ 1 ಹರಿಗುರುಗಳ ಸಂಕಲ್ಪ ತಪ್ಪದು ಗಿರಿಗಹ್ವರದೊಳಗಿದ್ದರು ಅದು ಬರಿದೆಯಾಗದು ಕೇಳು ಸ್ಮರಿಸಿ ಬಳಲಿ ನಲಿದಾಡಿ ಪರಿದ ಕಾಲಕೆ ಬಿಡದೆ ಅಹಿಕದ ಚರಿತೆ ಅವರಿಗೆ ಗಣಣೇನೊ2 ತೆತ್ತಗಿನ ಸ್ವಭಾವ ಆವದೊ ಎತ್ತಲಟ್ಟಿದರತ್ತ ತೊಲಗದೆ ಹೊತ್ತುಹೊತ್ತಿಗೆ ಪೋಗಿ ಬಾಗಿ ತೊತ್ತಿನಂದದಿ ಪ್ರಯೋಜನ ಹೊತ್ತು ಮೀರದೆ ಮಾಳ್ಪುದು ಧರ್ಮ ಮೊತ್ತವಲ್ಲದೆ ಇನ್ನೊಂದಿಲ್ಲವೊ ಇತ್ತ ಭಾಗ್ಯವಿತ್ತ ನಿರ್ಮಳ ಚಿತ್ತದಲಿ ಅರ್ಪಿಸುತಿರು3 ನೀನು ಮಾಡಿದ ಪುಣ್ಯಗಳಿಗೆ ತಾ ನಡದು ಬರುವುದೇ ಮರುಳೆ ನಾನಾ ಪರಿಯಲಿ ತಿಳಿದು ನೋಡು ಧ್ಯಾನದಿಂದಲಿ ದಿನಪ್ರತಿ ಜ್ಞಾನನಿಧಿ ನಿಜಗುರು ಶಿರೋಮಣಿ ಅನಂತಾನಂತ ಜನುಮದಲೀಗ ಗಾನಮಾಡಿದ ನಿಷ್ಟ ಪುಣ್ಯವು ತಾನೊಲಿದು ಫಲವಿತ್ತದೋ4 ಕಲ್ಲು ಕರಗಿಸಿ ಬೆಣ್ಣಿ ತೆಗುವಂಥ ಬಲ್ಲಿದರು ನಿನ ಗೊಲಿದಿರಲು ಎಲ ಎಲ್ಲಿ ಇಲ್ಲವೆಂಬೊ ಸೊಲ್ಲುಗಳಲ್ಲದೆ ಇದು ಸಲ್ಲದೊ ಸಕಲ ಮನೋಭೀಷ್ಟಾ ತುಲ್ಯ ವಲ್ಲಭ ಮಲ್ಲದಲ್ಲಣ ನಿಲ್ಲದಲೆ ವೊಲಿದಿಹನೊ 5 ನೂನ್ಯಪೂರ್ಣವು ಅವರನ ಕೂಡಿ ತನ್ನ್ಯೋಪಾಯವು ಯಾಕೆ ನಿನಗೆ ಕಣ್ಣೆವೆ ಇಡುವನಿತರೊಳು ಕಾರುಣ್ಯವರುಷಗರೆದು ಬಿಡುವ ದೈನ್ಯವೃತ್ತಿಯ ಬಿಡಿಸಿ ನಿಷ್ಕಾಮ ಪುಣ್ಯವನಧಿಯೊಳಿಡುವರೊ 6 ಊರ್ವಿಗೀರ್ವಾಣರಿಗೆ ಉಣಿಪುದು ಗರ್ವವನು ತಾಳದಲೆ ಚೆನ್ನಾಗಿ ಸರ್ವಬಗೆಯಲಿ ನಾನು ಎಂಬೊ ದುರ್ವಚನಗಳ ನುಡಿಯದೆ ಪೂರ್ವತನೆ ಬಯಸುತಾರಾಧಿಸು ಶರ್ವಸನ್ನುತ ವಿಜಯವಿಠ್ಠಲ ಪೂರ್ವನೆಂತ ಪ್ರಬಲನೆ7
--------------
ವಿಜಯದಾಸ
ಚಿತ್ತದ ಕ್ಲೇಶವ ಭಂಜಿಸಿ ವಾಸುದೇವನೆ ದಯದಿ ಹರೆ ಪ ಇಂದಿರಾವದನಾರವಿಂದ ಭಾಸ್ಕರ ಕುಂದರದನ ವದನ ಹರೆ 1 ಪಾವನ ಮೂರುತಿಯೆ ಹರೆ 2 ಚಿನ್ಮಯ ರೂಪನೆ ಬ್ರಹ್ಮಕಾರಣಗುಣ ನಿರ್ಮಲ ನಿರ್ಗುಣನೆ ಹರೆ 3 ಭೋಗಿ ಭೂಷ ನುತನೆ ಹರೆ 4 ಧ್ಯಾನವ ಗೈಯುವೆನೈ ಹರೆ 5
--------------
ಬೇಟೆರಾಯ ದೀಕ್ಷಿತರು
ಚಿಂತ್ರವೇಲಿನಿಲಯ ಭಾರತಿ ಕಾಂತನೆ ಪಿಡಿಕೈಯಾ ಪ ಅಂತರಂಗದಲಿ ಚಿಂತಿಪರಘುÀಕುಲಧ್ವಾಂತದಿವಾಕರ ಸಂತತ ಸ್ಮರಿಸುವೆಅ.ಪ ಲಂಘಿಸಿ ವಾರಿಧಿಯ ಶ್ರೀರಾಮಾಂಗುಲಿ ಮುದ್ರಿಕೆಯ ಅಂಗನಿಗೆ ಕೊಟ್ಟು ಮಂಗಳಾಂಗ ರಘು ಪುಂಗವಗೆ ಕುಶಲ ಸಂಗತಿ ತಿಳಿಸಿದ 1 ಇಂದು ಕುಲದಿ ಜನಿಸಿ ಕುಂತಿಯ ಕಂದ ಭೀಮನೆನಿಸಿ ನಿಂದು ರಣದಿಕುರು ವೃಂದವ ಮಥಿಶ್ಯಾನಂದ ಸುತನೊಲಿಮೆ ಛಂದದಿ ಪಡೆದಿಹ 2 ಮೇದಿನಿಯೊಳು ಜನಿಸಿ ಬಹುದು ರ್ವಾದಿಗಳನು ಜಯಿಸಿ ಮೋದಮುನಿಯೆನಿಸಿ ಭೇದವ ಬೋಧಿಸಿ ಸಾಧು ಜನಕೆ ಬಲು ಮೋದವ ಗರಿದಿ 3 ಶೇಷದಾಸರಿಗೊಲಿದಿ ಅವರಭಿಲಾಷೆಯ ಪೂರ್ತಿಸಿದಿ ಪೋಷಿಸೆನ್ನ ಕರುಣಾ ಸಮುದ್ರ ಭವ ಕ್ಲೇಶವ ಕಳೆಯಾ ಗಿರೀಶ ಮುಖವಿನುತ4 ಭೀತರನ್ನು ಪೊರಿವಿ ಭಜಕರ ಪಾತಕವನು ಕಳೆವಿ ಖ್ಯಾತ ಕಾರ್ಪರ ಕ್ಷೇತ್ರದಿ ನರಮೃಗ ನಾಥನ ಪರಮ ಪ್ರೀತಿಪಡೆದಿಹ 5
--------------
ಕಾರ್ಪರ ನರಹರಿದಾಸರು
ಚಿರಂಜೀವಿಯಾಗಿರೆಲೊ ಚಿಣ್ಣ ನೀನು ಪ ಪರಮ ಭಾಗವತರ ಪದಧೂಳಿ ಧರಿಸುತಲಿಅ.ಪ ಜರಿಯಬೇಡ ಹರಿಯ ಮರೆಯಬೇಡೆಂದೆಂದು ತಿರಿಯಬೇಡ ಖಳರ ಮನೆಗೆ ಪೋಗಿ ಬೆರೆಯಬೇಡ ಪರರ ಸತಿಯ ಸ್ವಪ್ನದಲೂ 1 ಲೋಕವಾರ್ತೆಯ ನಿನ್ನ ಕಿವಿಗೆ ಕೇಳಿಸಬೇಡ ಶ್ರೀ ಕಾಂತ ಚರಿತೆಯನು ಕೇಳದಿರಬೇಡ ಪಾಕವನು ಮಾಡಿ ಏಕಾಂಗಿಯಾಗುಣಬೇಡ ಭೂಕಾಂತರನುಸರಿಸಿ ಬೆಸಗೊಳ್ಳಬೇಡ 2 ಸಾಲ ಮಾಡಲಿ ಬೇಡ ಸಾಲದೆಂದೆನಬೇಡ ನಾಳೆಗೆ ಹ್ಯಾಗೆಂಬ ಚಿಂತೆ ಬೇಡ ಖೂಳ ಜನರೊಡಗೂಡಿ ಕಂಗೆಡಲಿ ಬೇಡ ನೀ ಬಾಳುವರ ಸಂಗದಲಿ ಬಾಳೆಲವೊ ಬಾಲ 3 ಕಂಡವರಿಗೆಲ್ಲ ಕೌತುಕ ತೋರಲಿ ಹೆಂಡಿರು ಮಕ್ಕಳು ಅಳಿಯ ಸೊಸೆ ಮೊಮ್ಮಕ್ಕಳು ಉಂಡುಟ್ಟು ದ್ವಿಜರ ಸಹ ಗಂಡುಗಲಿಯಾಗೋ 4 ಮಂದಮತಿಗಳ ಕೂಡೆ ಮಾತಾಡಲಿ ಬೇಡ ನಿಂದಕರ ಕಣ್ಣೆತ್ತಿ ನೋಡಬೇಡ ಇಂದಿರೆಯರಸ ಶ್ರೀ ವಿಜಯವಿಠ್ಠಲನ ಚರಣ ದ್ವಂದ್ವದಲಿ ಮಸ್ತಕವ ನೀಡದಿರಬೇಡ5
--------------
ವಿಜಯದಾಸ
ಚೈತನ್ಯವೊಂದೆ ಸತ್ಯ ಈ ಜಗವೆಲ್ಲ ಭ್ರಾಂತಿ ಮಿಥ್ಯ ಅನಿಸುವಿಕೆ ಇಲ್ಲದಿರುವಾ ಮನವಾಣಿ ಮೀರುತಿರುವಾ ಘನವಾದ ಸ್ವಪ್ರಭಾವ ಅದೆ ನೋಡು ಆತ್ಮಭಾವಾ 1 ನಿಜವಾದ ಚೇತನವದು ಅಜರಾಮರಾಗಿರುವದು ಅದೆ ನೀನು ಎಂದು ತಿಳಿಯೈ ಇದು ಎಲ್ಲ ಕನಸುಮಿಥ್ಯ 2 ಇದು ನೋಡು ಶಾಸ್ತ್ರಸಾರಾ ಇದನರಿತ ಮನುಜ ಧೀರ ಇದನೊಂದೆ ತಿಳಿದುಕೊಳ್ಳೈ ಇದು ಶಂಕರಾರ್ಯಬೋಧ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಚೌತಿಯ ದಿವಸ ರಂಭೆ : ವಾರಿಜಗಂಧಿನಿ ನೋಡಿತ್ತ ಶ್ರುತಿ- ಮೌರಿ ರಭಸದಿ ಲಕ್ಷ್ಮೀಕಾಂತ ಭೂರಿ ವೈಭವದಿ ಪೊರಟನೆತ್ತ ಯಾವ ಕಾರಣವೆಂದು ಪೇಳೆಲೆ ಸತ್ಯ 1 ಊರ್ವಶಿ : ದೇವಿ ಕೇಳೆಲೆ ಸುಮ್ಮಾನದಿಂದ ಕುಲ- ದೇವರ ಪೂಜೆಗೋಸುಗ ಬಂದ ಪಾವನಮೂರ್ತಿಯಾದುದರಿಂದ ನಮ್ಮ ಕಾವನು ಕರುಣಾಕಟಾಕ್ಷದಿಂದ2 ರಂಭೆ : ನೂತನವಾಯ್ತೆ ಕೇಳಲೆ ಜಾಣೆ ಜಗ- ನ್ನಾಥನಿಗ್ಯಾವ ಕುಲವು ಕಾಣೆ ರೀತಿಯನರುಹಬೇಕೆಲೆ ಬಾಲೆ ಸರ್ವ ಚೇತನಾತ್ಮನ ನಾಟಕದ ಲೀಲೆ3 ಊರ್ವಶಿ : ಪಾಂಡವರಾಯುಧಗಳನ್ನೆಲ್ಲ ಪೊತ್ತು- ಕೊಂಡ ಕಾರಣದಿ ಪೂಜೆಗಳೆಲ್ಲ ಕಂಡು ಪೊಗಳಲು ಕವಿಗು ಸಲ್ಲ ಇನ್ನು ಪುಂಡರೀಕಾಕ್ಷನವನೆ ಬಲ್ಲ4 ರಂಭೆ : ರಾಜವದನೆ ಪೂಜೆಯಾದ ಮೇಲೆ ಅಂ- ಭೋಜನಾಭನು ತಾಕ್ಷ್ರ್ಯನ ಮೇಲೆ ರಾಜಬೀದಿಯೊಳ್ ಬರುವದೇನೆ ಇಂಥ ಸೋಜಿಗವೇನು ಪೇಳೆಲೆ ಜಾಣೆ5 ಊರ್ವಶಿ : ಪಟಹ ಡಿಂಡಿಮವಾದ್ಯರವದಿಂದ ತಂ- ಬಟೆನಿಸ್ಸಾಳರವದಿ ಬರುವ ಚಂದ ಸಟೆಯಲ್ಲ ಕೇಳು ಕರುಣದಿಂದ ನಮ್ಮ ಕಟಕ ರಕ್ಷಿಸಲು ಬರುವ ಗೋವಿಂದ6 ರಂಭೆ : ಬಳಿಕ ಪಲ್ಲಂಕಿಯೇರಿದ ಕಾಣೆ ಜನ- ಗಲಭೆಗಳಿಂದ ಪೋಗುವದೇನೆ ನಲವಿನಿಂದಲಿ ಪೊರಟೆಲ್ಲಿಗೆನೆ ಮಹಾ- ಜಲಜನಾಭನ ಮಹಿಮೆಯ ಜಾಣೆ7 ಊರ್ವಶಿ :ಚಾಪಲನೇತ್ರೆ ಚೌತಿದಿನದಿ ಕೆರೆ- ದೀಪವೆಂದೆನುತ ಭಕ್ತರು ಮುದದಿ ಶ್ರೀಪರಮಾತ್ಮ ವಿಲಾಸದಿ ಭಕ್ತ- ರಾಪೇಕ್ಷೆಗಳನು ಸಲ್ಲಿಸುವಂದದಿ8 ರಂಭೆ : ಸೋಮಾರ್ಕಜ್ಯೋತಿಹಿಲಾಲುಗಳು ಜನ- ಸ್ತೋಮ ಜೇನುಂಡೆ ಬಿರುಸು ಮಿಗಿಲು ವ್ಯೋಮಕೇಶಗಳ ಪೊಗಳತೀರದು ಸರಿ ಭೂಮಿಯೊಳ್ ಕಾಣೆನೆಂಬಂತಾದುದು9 ಅಮಮ ಇದೇನೆ ಇಂದಿನ ಲೀಲೆ ಜನ- ರಮರಿಕೊಂಡಿಹರೇನಿದು ಬಾಲೆ ಸಮವಿಲ್ಲ ಇಂತೀ ವೈಭೋಗಕ್ಕೆಲೆ ನ- ಮ್ಮಮರಾವತಿಗಿಂತಧಿಕ ಬಾಲೆ10 ಊರ್ವಶಿ : ಸಾರ್ಥಕಾಗುವದು ಜನ್ಮವು ಕಾಣೆ ಸಕ- ಲಾರ್ತಿ ಹರಣವಾಗ್ವದು ಜಾಣೆ ಕೀರ್ತಿತರಂಗಮಾಗಿಹುದೇನೆ ಶೇಷ- ತೀರ್ಥವೆಂದರೆ ಕೇಳಿದು ಪ್ರವೀಣೆ11 ರಂಭೆ : ಏಸು ದೊಡ್ಡಿತೆ ಕೇಳಲೆ ಬಾಲೆ ಅನಂ- ತಾಸನದಂತೆ ಮರೆವುದಲ್ಲೇ ನಾಸಿರ ದೀಪಸೋಪಾನದಲೆ ಮಹಾ- ಶೇಷನಿಹನು ಮಧ್ಯದೊಳಿಲ್ಲೇ12 ಊರ್ವಶಿ : ಕರುಣಾಕರನು ನಮ್ಮೆಲ್ಲರನು ನಿತ್ಯ ಪೊರೆಯಲೋಸುಗ ಬಂದನು ತಾನು ಸುರುಚಿರ ಮಂಟಪವೇರಿದನು ಭೂ- ಸುರರಿಂದ ವೇದಘೋಷವ ಕೇಳ್ವನು13 ದೃಷ್ಟಾಂತವಾಗಿ ಪೇಳುವದೇನೆ ಬ್ರಹ್ಮ ಸೃಷ್ಟಿಗೆ ಪೊಸತಾಗಿಹುದು ಕಾಣೆ ಕಟ್ಟಿಸಿದವನು ಪುಣ್ಯೋತ್ತಮನು ಪರ- ಮೇಷ್ಠಿ ಜನಕನ ಕೃಪೆಯಿನ್ನೇನು14 ಭಜಕರ ಮುಖದಿಂದೆಲ್ಲ ತಾನು ಭೂ- ಭುಜನಾಗಿ ನಡೆಸುವನಿದನೆಲ್ಲನು ನಿತ್ಯ ಸಾಕಾರವನು ತೋರಿ ತ್ರಿಜಗವನೆಲ್ಲ ರಕ್ಷಿಸುತಿಹನು15 ರಂಭೆ : ಬಿಡದೆ ಇನ್ನೊಂದು ಕೇಳುವೆ ನಾರಿ ಜಗ- ದೊಡೆಯ ಪೊರಡುವ ಕಾಲದಿ ಭಾರಿ ಬೆಡಿಖಂಬ ಧ್ವನಿಯು ಇದೇನೆ ಪೇಳೆ ಇಂಥ ಕಡು ಬೆಡಗನು ಉಸುರೆಲೆ ಬಾಲೆ16 ಊರ್ವಶಿ: ಜನರು ಎಲ್ಯಾದರಂಜಿದÀ ಭಯವ ತಮ್ಮ ತನುವಿಗೆ ಸೋಂಕಲದನೆಲ್ಲವ ಮನದಿ ಝುಮ್ಮೆನಿಸಿ ಬೆಚ್ಚೋಡಿಸುವ ಖಂಬ- ಧ್ವನಿಯೆಸಗಿದರು ಕೇಳಿದರಂದವ17 ತಿರುಗಿಯೇರಿದನು ಪಲ್ಲಂಕಿಯಲ್ಲಿ ಸುತ್ತು- ಬರುವನು ವೇದನಿನಾದದಲಿ ವರರತ್ನ ಖಚಿತ ಮಂಟಪದಲ್ಲಿ ನಿಂತ ನಿರವದಿ ಸುಖದಾಯಕನಲ್ಲಿ18 ಶರಣರ ಪಾಪ ಮನಕೆ ತಾರ ದುಡಿದ ವರ ಭೇರಿಗೆರೆವ ಬಿಸಿನೀರ ವರಲಕ್ಷ್ಮೀನಾರಾಯಣಧೀರ ಸುರು- ಚಿರ ಸಿಂಹಾಸನವೇರಿದ ವೀರ19
--------------
ತುಪಾಕಿ ವೆಂಕಟರಮಣಾಚಾರ್ಯ
ಚ್ಚಂದಿರವದನೆ ಶಾರದೆ ಪ ಇಂದೀವರಾಕ್ಷಿ ಶತಾನಂದನ ಪ್ರಿಯೆ ದೇವಿ ಕುಂದು ನೋಡದೆ ಶ್ರುತಿವಂದೆ ಜ್ಞಾನವ ನೀಡೆ ಅ.ಪ. ಸಿತಾಬ್ಜಾಸನೆ ಸುಖದಾಯಕಿ ಸುರ ನಾಥಾರಾಧಿತೆ ವಿಶ್ವನಾಯಕೀ ವೀತದುರಿತೆ ಶಿವ ಮಾತೆ ಸದ್ಗುಣಮಣಿ ವಾಗ್ದೇವಿ ಮಾತೆ 1 ಕೋಕಿಲವಾಣಿ ಕವಿಸೇವಿತೆ ಎನ್ನ ವಾಕು ಲಾಲಿಸೆ ಮನಿವಂದಿತೆ ತೋಕನೆಂದು ಸುವಿವೇಕ ಬುದ್ಧಿಯನಿತ್ತು ವಾಕು ಮನ್ನಿಸು ತಾಯೆ 2 ಪಾತಕಿಗಳೊಡನಾಡಿ ನಾ ನಿನ್ನ ಪೋತಾಬ್ಜಪದ ಭಜಿಸದ್ಹೋದೆ ನಾ ಪಾತಕವೆಣಿಸದೆ ಸೀತಾರಮಣ ಜಗ ನ್ನಾಥವಿಠ್ಠಲನಘ್ರಿ ಗೀತಾಮೃತವನುಣಿಸು 3
--------------
ಜಗನ್ನಾಥದಾಸರು