ಒಟ್ಟು 1244 ಕಡೆಗಳಲ್ಲಿ , 86 ದಾಸರು , 932 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ಮರಿಸುವೆ ಮುರಹರನ | ಪರಮ ಪುರುಷನ ಧುರದಿ ಸುರಪ ನರನ | ಪೊರೆದ ದೇವನ ಪ ವನಜ ಸನ್ನಿಭ ಲೋಚನ | ಜನಕಜೆ ಮನ ವನಜ ಭಾಸ್ಕರ ಕೇಶವನ | ದನುಜ ಕಾಲನ 1 ಭಕುತ ಪಾಲಕ ಅಜೀತ ಮುಕುತಿ ಪ್ರದಾತ ಲಕುಮಿ ಸುರವರ ಪೂಜಿತ | ವಿಖಿನನ ಪಿತ2 ಸಾಮಜ ಪಾಲಾ ಸನ್ನುತ ಗೋಪಾಲಾ ಭೂಮಿಜೆ ಲೋಲಾ 3
--------------
ಶಾಮಸುಂದರ ವಿಠಲ
ಸ್ಮರಿಸುವೊ ಜನರಿಗೆ ಸಲಹುವ ದೊರೆಗಳಿನ್ನುಂಟೇವೆಂಕಟೇಶಾ ಪ ಕರುಣಾನಿಧಿ ಮಹಾಮಹಿಮ ನೀನೆಂದು ನಾ ನಂಬಿದೆವೆಂಕಟೇಶಾ ಅ.ಪ. ಬರಿದು ದಂಡಿಸಿ ನಿನ್ನ ಪದ ಹೊಂದುವ ಬಗೆ ತೋರೋವೆಂಕಟೇಶಾ ಬಾಧೆಯ ತಾಳದೆ ಹಾದಿಯ ತಪ್ಪಿದೆ ವೆಂಕಟೇಶಾ 1 ಮಾರಿ ಮುಸುಕಿ ಎನ್ನ ಗಾರು ಮಾಡದೆ ವೆಂಕಟೇಶಾಘೋರ ಜಾರದ ವಾರಿಧಿಯಲಿ ನಾ ಮುಳುಗಿದೆ ವೆಂಕಟೇಶಾ 2 ಪಾರುಗಾಣದೆ ನಿನ್ನ ಮರೆಹೊಕ್ಕೆನೋ ವೆಂಕಟೇಶಾನಾನಾಗಿ ನಿನ್ನ ಗಣ್ಮ್ರತಗರಿಯೊ ವೆಂಕಟೇಶಾ 3 ಚೋರರ ಬಾಧೆಗೆ ಚೀರಿ ಚೀರುತಲಿಹೆನೊ ವೆಂಕಟೇಶಾದೂರ ನೋಡದಿರು ದಾಸರ ದೂತ ವೆಂಕಟೇಶಾ 4 ಹತ್ತು ಒಂಬತ್ತು ವತ್ಸರದಿಂದ ಕುಂಭಿಯೊಳಿದ್ದೆ ವೆಂಕಟೇಶಾಇನ್ನೆಂತು ಪೊಗಳಲಿ ನಿನ್ನ ಕರುಣವು ಬಾರದೆ ವೆಂಕಟೇಶಾ 5 ಕುಂಕುಮ ಅಂಕಿತ ಪದಪಂಕಜ ಶೋಭಿತ ವೆಂಕಟೇಶಾಕಂದನೆಂದು ಪೊರೆಯದಿರೆ ಬಿರಿದುಂಟೆ ವೆಂಕಟೇಶಾ 6 ಜ್ಞಾನದಿ ನಿನ್ನ ಧ್ಯಾನಿಪಲೊಲ್ಲೆ ವೆಂಕಟೇಶಾತೇಜ ತಂದೆವರದಗೋಪಾಲವಿಠಲ ವೆಂಕಟೇಶಾ 7
--------------
ತಂದೆವರದಗೋಪಾಲವಿಠಲರು
ಸ್ವೀಕರಿಸೈ ಲೋಕನಾಥನೆ ಪ್ರಖ್ಯಾತಪ್ರಿಯನೆ ತಾಂಬೂಲವ ಪ ನೀಲವೇಣಿಯು ಜಾಲಮಾಡದೆ ಶೀಲದಿಂ ಈ ವೀಳ್ಯವ ವೇಳೆಯರಿತು ತಂದಿಹೆನು ಗೋಪಾಲಬಾಲ ತಾಂಬೂಲವ 1 ಕಮಲ ನಯನೆ ಕಮಲವದನೆ ವಿಮಲ ಮನದಲಿ ವೀಳ್ಯವ ತಾಂಬೂಲವ 2 ಗಾನಲೋಲನೆ ದೀನಪಾಲನೆ ಪ್ರಾಣನಾಥವಿಠಲನೆ ಸಾನುರಾಗದಿ ತಂದ ವೀಳ್ಯವ ಪ್ರಾಣನಾಥನೆ ಕರುಣದಿಂ3
--------------
ಬಾಗೇಪಲ್ಲಿ ಶೇಷದಾಸರು
ಹಚ್ಚಡವಗೆಯ ಬೇಕಮ್ಮಾ | ಬಹುಕೊಳೆ ಮುಚ್ಚಿ ಕೊಂಡಿಹುದು ನೋಡಮ್ಮಾ ಪ. ಸ್ವಚ್ಛವ ಮಾಡುತ ಅಚ್ಯುತನಂಘ್ರಿಗೆ ಬೆಚ್ಚಗೆ ಹೊದಿಸಲು ಇಚ್ಛೆಯ ಮಾಡುತ ಅ.ಪ. ಏಳು ಪದರವಿಹುದೊ | ಬಹು ಕಾಲದಿಂ ಬಾಳುತ ಬಂದಿಹುದೂ ಕಾಲಕಾಲಕೆ ಬದಲಾವಣೆ ಪೊಂದುತ ಬೀಳುತೇಳುತ ಬೆನ್ನು ಬಿಡದಿರುತಿಹುದೊ 1 ಹೊರಗಡೆ ನವ ದುರ್ಗಂಧಾ | ಒಳಗಡೆ ಇನ್ನು ಅರುಹಲಾರದ ಕಲ್ಮಷಾ ಸುರರೆಲ್ಲ ಇದಕಿನ್ನು ಸರಿ ಇಲ್ಲವೆಂಬೋರು ಮರುತಾಂತರ್ಯಾಮಿಗೆ ಸರಿತೋರುವಂದದಿ 2 ಎಪ್ಪತ್ತೆರಡು ಸಾಸಿರಾ | ನೂಲುಗಳಿಂದ ವಪ್ಪಾಗಿ ಹೊಲಿದ ಪಾರ ಕಪ್ಪು ಕೆಂಪು ಬಿಳಿ ವಪ್ಪೆ ಬಣ್ಣಗಳಿಂದ ಸರ್ಪಶಯನ ಸತತ ಸಲಹಿ ಕೊಡುವಂಥ 3 ನಿರ್ಮಲೋದಕವ್ಯಾವುದೇ | ಇದನೊಗೆಯಲು ಸಮ್ಮತ ಶಿಲೆಯಾವುದೇ ಬೊಮ್ಮನೈಯ್ಯನ ಸುಜ್ಞಾನ ಸುಕೊಳದೊಳು ವಮ್ಮನಸಿನೊಳದ್ದಿ ವದ್ದೆ ಮಾಡುತಲಿನ್ನು 4 ವ್ಯಕ್ತಿ ವೈರಾಗ್ಯ ಶಿಲೇ | ಶ್ರೀ ಹರಿಗುರು ಭಕ್ತಿ ಎರಡು ಕೈಗಳೇ ಎತ್ತಿ ವಗೆದು ಎಲ್ಲಾ ಕಶ್ಮಲ ಕಳೆಯುತ ಮತ್ತೆ ಜಾಲಾಡಿ ಹಿಂಡಿಕೆ ಮಾಡಿ ಶುಭ್ರದಿ 5 ಎತ್ತಿ ತಂದು ಕೊಡುವುತಾ | ಮತ್ತೆ ಕೊಳೆ ಹತ್ತದಂದದಿ ನೋಡುತಾ ಉತ್ತಮವಾದ ಮೈದಾನದೊಳಗೆ ಹರಹಿ ನೆತ್ತಿ ಜ್ಯೋತಿಯ ಘನ ದೀಪ್ತಿಯಲ್ಲೊಣಗಿಸು 6 ಶುದ್ಧ ಸಾತ್ವಿಕವರ್ಣದೀ | ಹೊಳೆವಂಥ ಈ ಶುದ್ಧ ಹೊದ್ದಿಕೆ ಸ್ಥಾನದೀ ಮುದ್ದುಕೃಷ್ಣನು ತನ್ನ ಪರಿವಾರ ಸಹಿತದಿ ಪೊದ್ದಿಕೊಂಡಿಪ್ಪ ಬಲು ಭದ್ರವ ಮಾಡುತ 7 ಹಿಂದೆ ಮುಂದಿನ ಭಯವೆಲ್ಲಾ | ತಪ್ಪುವುದಿನ್ನು ಸಂದೇಹಪಡಲು ಸಲ್ಲಾ ತಂದೆ ಮುದ್ದುಮೋಹನ್ನ ಗುರುಗಳು ಪೇಳಿದ ಒಂದೆ ವಾಕ್ಯವ ಆನಂದದಿ ನಂಬುತ 8 ನೂತನ ಹಚ್ಚಡವೂ | ನೂಲುಗಾರ ಜಾತಿಯರರಿಯರಿವೂ ಪ್ರೀತಿಯೋಳ್ ಗೋಪಾಲಕೃಷ್ಣವಿಠ್ಠಲ ಕೊಟ್ಟ ಖ್ಯಾತಿಯೊಳ್ ಬಾಳಿ ಶ್ರೀನಾಥನ್ನ ಪೊಂದುವೋ 9
--------------
ಅಂಬಾಬಾಯಿ
ಹರಿ ಎನ್ನು ಹರಿ ಎನ್ನು ಹರಿ ಎನ್ನು ಮನವೆ ಪ. ನಿರುತದಿ ಪೊರೆವನ ಮರೆವರೆ ಮನವೆ ಅ.ಪ. ಸರಿಯುವುದು ಆಯುಷ್ಯ ಸಂಪತ್ತು ನೋಡು ಬರುತಿದೆ ಮೃತ್ಯುವು ಕರೆಯಲು ನೋಡು ಹರಿನಾಮ ಯಮದಂಡ ಕಡಿವುದು ನೋಡು ಪರಮಪುರುಷನ ನೀ ಬಿಡದೆ ಕೊಂಡಾಡು 1 ಹರಿಯ ನಾಮಾಮೃತ ಸುಜನಕೆ ನೀಡು ಹರಿಯ ಜ್ಞಾನಾನಂದಾಂಬುಧಿಯೊಳೊಲ್ಯಾಡು ಹರಿಯ ಮೂರುತಿಯನ್ನು ಮನದಲ್ಲಿ ನೋಡು ಹರಿಭಕ್ತಿ ಮದವೇರಿ ಕುಣಿ ಕುಣಿದಾಡು 2 ಹರಿಗುರು ಸ್ಮರಣೆಯ ನಿರುತದಿ ಮಾಡು ಹರಿಭಕ್ತಿ ಲಾಂಛನ ಮೈಯಲ್ಲಿ ಮೂಡು ಹರಿದಾಸ ಸಂಪತ್ತಿನೊಳಗೆ ಓಲಾಡು ಹರಿಯ ಮನದಿ ಕಂಡು ನಲಿನಲಿದಾಡು 3 ಕಾಮಕ್ರೋಧಗಳನ್ನು ಖಂಡಿಸೀಡ್ಯಾಡು ನೇಮ ಶ್ರೀ ಗುರು ಆಜ್ಞೆಯಂದದಿ ಮಾಡು ಯಾಮ ಯಾಮಕೆ ಹರಿನಾಮವ ಪಾಡು ಶ್ರೀಮದಾನಂದತೀರ್ಥರ ಮತ ನೋಡು 4 ಶ್ರೀ ಪರಮಾತ್ಮನ ಗುಣವ ಕೊಂಡಾಡು ಶ್ರೀಪತಿ ಭಕ್ತರ ಸಂಗದಿ ಕೂಡು ಭವ ಹರ ಸ್ತುತಿ ಮಾಡು ಗೋಪಾಲಕೃಷ್ಣವಿಠ್ಠಲನ ದಯ ಬೇಡು 5
--------------
ಅಂಬಾಬಾಯಿ
ಹರಿ ಗೋಪಾಲ ವಿಠಲ | ಪೊರೆಯ ಬೇಕಿವಳಾ ಪ ದುರಿತ ದುಷ್ಕøತವೆಲ್ಲ | ದೂರ ಓಡಿಸುತಾ ಅ.ಪ. ತರಳೆ ದ್ರೌಪದಿ ವರದ | ಮರಳ್ಯಹಲ್ಯಯ ಪೊರೆದತರಳ ಪ್ರಹ್ಲಾದನನ | ಪೊರೆದ ನರಹರಿಯೇ |ವರುಷ ಐದರ ಧೃವಗೆ | ವರದನಾಗೀ | ತೋರ್ದೆಕರುಣಾಳು ನಿನ್ಹೊರತು | ಬೇರನ್ಯಕಾಣೇ 1 ಕಂಸಾರಿ ನಿನ್ನ ಪದಪಾಂಸುವನೆ ಶಿರದಿ ನಿ | ಸ್ಸಂಶಯದಿ ಧರಿಸೀಶಂಸಿಸಲು ಮಹಿಮೆ ತವ | ದಾಸ್ಯ ಪಾಲಿಸುತಿನ್ನುಹಂಸವಾಹನ ಪಿತನೆ | ವಂಶ ಉದ್ಧರಿಸೋ 2 ಕರ್ಮ ಪ್ರಾಚೀನಗಳ | ಮರ್ಮ ತಿಳಿದವರ್ಯಾರೊಕರ್ಮನಾಮಕನೆ ದು | ಷ್ಕರ್ಮ ಪರಿಹರಿಸೀ |ಪೇರ್ಮೆಯಿಂದಿವಳ ಪೊರೆ | ನಿರ್ಮಲಾತ್ಮಕ ದೇವಧರ್ಮ ಗೋಪ್ತ ಸ್ವಾಮಿ | ಬ್ರಹ್ಮಾಂಡದೊಡೆಯಾ 3 ಮಧ್ವಮತ ಸಿದ್ಧಾಂತ | ಪದ್ಧತಿಗಳರುಹೃತ್ತಶುದ್ಧಸಾಧನ ಗೈಸೊ | ಮಧ್ವಾಂತರಾತ್ಮಾಅಧ್ವಯನು ನೀನೆಂಬ | ಶುದ್ಧ ಬುದ್ಧಿಯನಿತ್ತುಉದ್ಧರಿಸೊ ಈಕೆಯನು | ಪ್ರದ್ಯುಮ್ನ ದೇವಾ 4 ಸರ್ವಜ್ಞ ಸರ್ವೇಶ | ನಿರ್ವಿಕಾರನೆ ದೇವಸರ್ವದ ತವನಾಮ | ಸ್ಮರಿಪ ಸುಖವಿತ್ತುದುರ್ವಿ ಭಾವ್ಯನೆ ದೇವ | ಅಸ್ವತಂತ್ರಳ ಕಾಯೊಗುರ್ವಂತರಾತ್ಮ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಹರಿ ಗೋರಸ ಕುಡಿವುದು ನೋಡಿರೋ |ಪರಿ ಪರಿಯ ಸಂಭ್ರಮ ಮಾಡಿರೋ ಪ ಕಾರಣ ಒರಳಲಿ ವೃತ್ತಿಗುಣದಿ ತಾ |ಇದ್ದು ಯಶೋದೆಯು ಕಟ್ಟಿರಿಸಿ ||ಸ್ತನವನುಣಿಸುತಿರಲು ನಿಜಕರ್ಮದ |ಬಲದಿ ಬಿಡಿಸಿಕೊಂಡಾಡುತಲಿ 1 ನಾ ನಾ ಎನುತಾಡುವಾ ಗೋಪಾಲರ |ನೆರೆಸುವರಂತೆ ಕುಣಿವುತಲಿ ||ನಾನಾ ದ್ವಾರಗಳಿಂದ ಧುಮುಕಿ |ಮುಚ್ಚಿದ ಮಡಿಕೆಗಳ ನೋಡುತಲಿ 2 ರಾಗ ಪೀಠದಲಿ ಮೋಹದ ಹೆಗಲಲಿ |ನಿಲ್ಲಲು ನೆಲವು ನಿಲುಕುತಿರಲು ||ಯೋಗ ರುಕ್ಮ ಘಟಿಯನಾ ಛೇದಿಸಿ |ವಿರತಿ ಗೊಲ್ಲತಿಗತಿ ಕಾಡುತಲಿ 3
--------------
ರುಕ್ಮಾಂಗದರು
ಹರಿಕಥಾಮೃತಸಾರ ಫಲಸ್ತುತಿ (33ನೆಯ ಸಂಧಿ) ಹರಿಕಥಾಮೃತಸಾರ ಶ್ರೀಮ- ದ್ಗುರುವರ ಜಗನ್ನಾಥದಾಸರ ಕರತಳಾಮಲಕವೆನೆ ಪೇಳಿದ ಸಕಲ ಸಂಧಿಗಳ ಪರಮಪಂಡಿತಾಭಿಮಾನಿಗಳು ಮ- ತ್ಸರಿಸಲೆದೆಗಿಚ್ಚಾಗಿ ತೋರುವು- ದರಸಿಕರಿಗಿದು ತೋರಿ ಪೇಳುವುದಲ್ಲ ಧರೆಯೊಳಗೆ 1 ಭಾಮಿನಿಯ ಷಟ್ಪದಿಯ ರೂಪದ- ಲೀ ಮಹಾದ್ಭುತ ಕಾವ್ಯದಾದಿಯೊ- ಳಾ ಮನೋಹರ ತರತಮಾತ್ಮಕ ನಾಂದಿಪದ್ಯಗಳ ಯಾಮಯಾಮಕೆ ಪಠಿಸುವರ ಸು- ಧಾಮಸಖ ಕೈಪಿಡಿಯಲೋಸುಗ ಪ್ರೇಮದಿಂದಲಿ ಪೇಳ್ದ ಗುರುಕಾರುಣ್ಯಕೇನೆಂಬೆ 2 ಸಾರವೆಂದರೆ ಹರಿಕಥಾಮೃತ ಸಾರವೆಂಬುವುದೆಮ್ಮ ಗುರುವರ ಸಾರಿದಲ್ಲದೆ ತಿಳಿಯೆಂದೆನುತ ಮಹೇಂದ್ರನಂದನನ ಸಾರಥಿಯ ಬಲಗೊಂಡು ಸಾರಾ- ಸಾರಗಳ ನಿರ್ಣೈಸಿ ಪೇಳ್ದನು ಸಾರ ನಡೆವ ಮಹಾತ್ಮರಿಗೆ ಸಂಸಾರವೆಲ್ಲಿಹುದೊ 3 ದಾಸವರ್ಯರ ಮುಖದಿ ನಿಂದು ರ- ಮೇಶನನು ಕೀರ್ತಿಸುವ ಮನದಭಿ- ಲಾಶೆಯಲಿ ವರ್ಣಾಭಿಮಾನಿಗಳೊಲಿದು ಪೇಳಿಸಿದ ಈ ಸುಲಕ್ಷಣ ಕಾವ್ಯದೋಳ್ ಯತಿ ಪ್ರಾಸಗಳಿಗೆ ಪ್ರಯತ್ನವಿಲ್ಲದೆ ಲೇಸುಲೇಸೆನೆ ಶ್ರಾವ್ಯಮಾದುದೆ ಕುರುಹು ಕವಿಗಳಿಗೆ 4 ಪ್ರಾಕೃತೋಕ್ತಿಗಳೆಂದು ಬರಿದೆ ಮ- ಹಾಕೃತಘ್ನರು ಜರಿವರಲ್ಲದೆ ಸ್ವೀಕೃತವ ಮಾಡದಲೆ ಬಿಡುವರೆ ಸುಜನರಾದವರು ಶ್ರೀಕೃತೀಪತಿಯಮಲಗುಣಗಳು ಈ ಕೃತಿಯೊಳುಂಟಾದ ಬಳಿಕ ಪ್ರಾಕೃತವೆ ಸಂಸ್ಕøತದ ಸಡಗರವೇನು ಸುಗುಣರಿಗೆ 5 ಶ್ರುತಿಗೆ ಶೋಭನವಾಗದೊಡೆ ಜಡ ಮತಿಗೆ ಮಂಗಳವೀಯದೊಡೆ ಶ್ರುತಿ ಸ್ಮøತಿಗೆ ಸಮ್ಮತವಲದಿದ್ದೊಡೆ ನಮ್ಮ ಗುರುರಾಯ ಮಥಿಸಿ ಮಧ್ವಾಗಮಪಯೋಬ್ಧಿಯ ಕ್ಷಿತಿಗೆ ತೋರಿಸಿ ಬ್ರಹ್ಮವಿದ್ಯಾ ರತರಿಗೀಪ್ಸಿತ ಹರಿಕಥಾಮೃತಸಾರ ಸೊಗಸುವುದು 6 ಸಕ್ತಿ ಸಲ್ಲದು ಕಾವ್ಯದೊಳು ಪುನ- ರುಕ್ತಿ ಶುಷ್ಕ ಸಮಾಸ ಪದವ್ಯತ್ಯಾಸ ಮೊದಲಾದ ಯುಕ್ತಿ ಶಾಸ್ತ್ರ ವಿರುದ್ಧ ಶಬ್ದ ವಿ- ಭಕ್ತಿ ವಿಷಮಗಳಿರಲು ಜೀವ- ನ್ಮುಕ್ತಿಯೋಗ್ಯವಿದೆಂದು ಸಿರಿಮದನಂತ ಮೆಚ್ಚುವನೆ 7 ಆಶುಕವಿಕುಲಕಲ್ಪತರು ದಿ- ಗ್ದೇಶವರಿಯಲು ರಂಗನೊಲುಮೆಯ ದಾಸಕೂಟಸ್ಥರಿಗೆರಗಿ ನಾ ಬೇಡಿಕೊಂಬುವೆನು ಈ ಸುಲಕ್ಷಣ ಹರಿಕಥಾಮೃತ ಸಾರ ದೀರ್ಘ ದ್ವೇಷಿಗಳಿಗೆರೆಯದಲೆ ಸಲಿಸುವುದೆನ್ನ ಬಿನ್ನಪವ 8 ಪ್ರಾಸಗಳ ಪೊಂದಿಸದೆ ಶಬ್ದ ಶ್ಲೇಷಗಳ ಶೋಧಿಸದೆ ದೀರ್ಘ ಹ್ರಸ್ವಗಳ ಸಲ್ಲಿಸದೆ ಷಟ್ಪದಿಗತಿಗೆ ನಿಲ್ಲಿಸದೆ ದೂಷಕರು ದಿನದಿನದಿ ಮಾಡುವ ದೂಷಣವೇ ಭೂಷಣವು ಎಂದುಪ- ದೇಶಗಮ್ಯವು ಹರಿಕಥಾಮೃತಸಾರ ಸಾಧ್ಯರಿಗೆ 9 ಅಶ್ರುತಾಗಮಭಾವ ಇದರ ಪ- ರಿಶ್ರಮವು ಬಲ್ಲವರಿಗಾನಂ- ದಾಶ್ರುಗಳ ಮಳೆಗರಿಸಿ ಮೈಮರೆಸುವ ಚಮತ್ಕøತಿಯ ಮಿಶ್ರರಿಗೆ ಮರೆಮಾಡಿ ದಿತಿಜರ ಶಸ್ತ್ರದಲಿ ಕಾಯದಿಪ್ಪರಿದರೊಳು- ಪಶ್ರುತಿಗಳು ತಪ್ಪುವುವೇ ನಿಜ ಭಕ್ತಿಯುಳ್ಳರಿಗೆ 10 ನಿಚ್ಚ ನಿಜಜನ ಮೆಚ್ಚ ಗೋಧನ ಅಚ್ಚ ಭಾಗ್ಯವು ಪೆಚ್ಚೆ ಪೇರ್ಮೆಯು ಕೆಚ್ಚ ಕೇಳ್ವನು ಮೆಚ್ಚ ಮಲಮನ ಮುಚ್ಚಲೆಂದೆನುತ ಉಚ್ಚವಿಗಳಿಗೆ ಪೊಚ್ಚ ಪೊಸದೆನ- ಲುಚ್ಚರಿಸಿದೀ ಸಚ್ಚರಿತ್ರೆಯ ನುಚ್ಚರಿಸೆ ಸಿರಿವತ್ಸಲಾಂಛನ ಮೆಚ್ಚಲೇನರಿದು 11 ಸಾಧು ಸಭೆಯೊಳು ಮೆರೆಯೆ ತತ್ವಸು- ಬೋಧವೃಷ್ಟಿಯ ಗರೆಯೆ ಕಾಮ ಕ್ರೋಧ ಬೀಜವ ಹುರಿಯೆ ಖಳರೆದೆ ಬಿರಿಯೆ ಕರಕರಿಯ ವಾದಿಗಳ ಪಲ್ಮುರಿಯೆ ಪರಮವಿ- ನೋದಿಗಳ ಮೈ ಮರೆಯಲೋಸುಗ ಹಾದಿ ತೋರಿದ ಹಿರಿಯ ಬಹು ಚಾತುರಿಯ ಹೊಸ ಪರಿಯ 12 ವ್ಯಾಸತೀರ್ಥರ ಒಲವೊ ವಿಠಲೋ- ಪಾಸಕ ಪ್ರಭುವರ್ಯ ಪುರಂದರ ದಾಸರಾಯರ ದಯವೊ ತಿಳಿಯದು ಓದಿ ಕೇಳದಲೆ ಕೇಶವನ ಗುಣಮಣಿಗಳನು ಪ್ರಾ- ಣೇಶಗರ್ಪಿಸಿ ವಾದಿರಾಜರ ಕೋಶಕೊಪ್ಪುವ ಹರಿಕಥಾಮೃತಸಾರ ಕೇಳಿದರು 13 ಹರಿಕಥಾಮೃತಸಾರ ನವರಸ ಭರಿತ ಬಹುಗಂಭೀರ ರತ್ನಾ- ಕರ ರುಚಿರ ಶೃಂಗಾರ ಸಾಲಂಕಾರ ವಿಸ್ತಾರ ಸರಸ ನರಕಂಠೀರವಾಚಾ- ಜನಿತ ಸುಕುಮಾರ ಸಾತ್ವೀ- ಕರಿಗೆ ಪರಮೋದಾರ ಮಾಡಿದ ಮರೆಯದುಪಕಾರ 14 ಅವನಿಯೊಳು ಜ್ಯೋತಿಷ್ಮತಿಯ ತೈ- ಲವನು ಪಾಮರನುಂಡು ಜೀರ್ಣಿಸ- ಲವನೆ ಪಂಡಿತನೋಕರಿಪವಿವೇಕಿಯಪ್ಪಂತೆ ಶ್ರವಣಮಂಗಳ ಹರಿಕಥಾಮೃತ ಸವಿದು ನಿರ್ಗುಣಸಾರಮಕ್ಕಿಸ- ಲವ ನಿಪುಣನೈ ಯೋಗ್ಯಗಲ್ಲದೆ ದಕ್ಕಲರಿಯದಿದು 15 ಅಕ್ಕರದೊಳೀ ಕಾವ್ಯದೊಳು ಒಂ- ದಕ್ಕರವ ಬರೆದೋದಿದವ ದೇ- ವರ್ಕಳಿಂ ದುಸ್ತ್ಯಜ್ಯನೆನಿಸಿ ಧರ್ಮಾರ್ಥಕಾಮಗಳ ಲೆಕ್ಕಿಸದೆ ಲೋಕೈಕನಾಥನ ಭಕ್ತಿಭಾಗ್ಯವ ಪಡೆದ ಜೀವ ನ್ಮುಕ್ತಗಲ್ಲದೆ ಹರಿಕತಾಮೃತಸಾರ ಸೊಗಸುವದೆ16 ಒತ್ತಿ ಬಹ ವಿಘ್ನಗಳ ತಡೆದಪ ಮೃತ್ಯುವಿಗೆ ಮರೆಮಾಡಿ ಕಾಲನ ಭೃತ್ಯರಿಗೆ ಭೀಕರವ ಪುಟ್ಟಿಸಿ ಸಕಲಸಿದ್ಧಿಗಳ ಒತ್ತಿಗೊಳಿಸಿ ವನರುಹೇಕ್ಷಣ ನೃತ್ಯಮಾಡುವನವನ ಮನೆಯೊಳು ನಿತ್ಯಮಂಗಳ ಹರಿಕಥಾಮೃತಸಾರ ಪಠಿಸುವರ 17 ಆಯುರಾರೋಗ್ಯೈಶ್ವರ್ಯ ಯಶ ಧೈರ್ಯ ಬಲ ಸಮಸಹಾಯ ಶೌರ್ಯೋ ದಾರ್ಯ ಗುಣಗಾಂಭೀರ್ಯ ಮೊದಲಾದ ಆಯತಗಳುಂಟಾಗಲೊಂದ- ಧ್ಯಾಯ ಪಠಿಸಿದ ಮಾತ್ರದಿಂ ಶ್ರವ- ಣೀಯವಲ್ಲದೆ ಹರಿಕಥಾಮೃತಸಾರ ಸುಜನರಿಗೆ 18 ಕುರುಡ ಕಂಗಳ ಪಡೆವ ಬಧಿರನಿ- ಗೆರಡುಕಿವಿ ಕೇಳ್ವಹವು ಬೆಳೆಯದ ಮುರುಡ ಮದನಾಕೃತಿಯ ತಾಳ್ವನು ಕೇಳ್ದಮಾತ್ರದಲಿ ಬರಡು ಹೈನಾಗುವುದು ಕೇಳ್ದರೆ ಕೊರಡು ಪಲ್ಲವಿಸುವುದು ಪ್ರತಿದಿನ ಹುರುಡಿಲಾದರು ಹರಿಕಥಾಮೃತಸಾರವನು ಪಠಿಸೆ 19 ನಿರ್ಜರತರಂಗಿಣಿಯೊಳನುದಿನ ಮಜ್ಜನಾದಿ ಸಮಸ್ತ ಕರ್ಮವಿ- ವರ್ಜಿತಾಶಾಪಾಶದಿಂದಲಿ ಮಾಡಿದಧಿಕಫಲ ಹೆಜ್ಜೆಹೆಜ್ಜೆಗೆ ದೊರೆಯದಿಪ್ಪವೆ ಸಜ್ಜನರು ಶಿರತೂಗುವಂದದಿ ಘರ್ಜಿಸುತಲೀ ಹರಿಕಥಾಮೃತಸಾರ ಪಠಿಸುವರ 20 ಸತಿಯರಿಗೆ ಪತಿಭಕುತಿ ಪತ್ನಿ ವ್ರತ ಪುರುಷರಿಗೆ ಹರಿಷ ನೆಲೆಗೊಂ- ಡತಿಮನೋಹರರಾಗಿ ಗುರುಹಿರಿಯರಿಗೆ ಜಗದೊಳಗೆ ಸತತ ಮಂಗಳವೀವ ಬಹು ಸು- ಕೃತಿಗಳೆನಿಸುತ ಸುಲಭದಿಂ ಸ ದ್ಗತಿಯು ಪಡೆವರು ಹರಿಕಥಾಶಮೃತಸಾರವನು ಪಠಿಸೆ 21 ಎಂತು ವರ್ಣಿಸಲೆನ್ನಳವೆ ಭಗ- ವಂತನಮಲ ಗುಣಾನುವಾದಗ- ಳೆಂತು ಪರಿಯಲಿ ಪೂರ್ಣಭೋಧರ ಮತವ ಹೊಂದಿದರ ಚಿಂತನೆಗೆ ಬಪ್ಪಂತೆ ಬಹು ದೃ- ಷ್ಟಾಂತಪೂರ್ವಕವಾಗಿ ಪೇಳ್ದ ಮ- ಹಂತರಿಗೆ ನರರೆಂದು ಬಗೆವರೆ ನಿರಯಭಾಗಿಗಳು 22 ಮಣಿಖಚಿತ ಹರಿವಾಣದಲಿ ವಾ ರಣಸುಭೋಜ್ಯ ಪದಾರ್ಥ ಕೃಷ್ಣಾ ರ್ಪಣವೆನುತರ್ಪಿಸಿದವರಿಗೋಸುಗ ನೀಡುವಂದದಲಿ ಪ್ರಣತರಿಗೆ ಪೊಂಗನಡ ವರವಾ ಙ್ಮಣಿಗಳಿಂ ವಿರಚಿಸಿದ ಶ್ರುತಿಯೊ ಳುಣಿಸಿ ನೋಡುವ ಹರಿಕಥಾಮೃತಸಾರವನುದಾರ 23 ದುಷ್ಟರೆನ್ನದೆ ದುರ್ವಿಷಯದಿಂ ಪುಷ್ಟರೆನ್ನದೆ ಪೂತಕರ್ಮ ಭ್ರಷ್ಟರೆನ್ನದೆ ಶ್ರೀದವಿಠ್ಠಲ ವೇಣುಗೋಪಾಲ ಕೃಷ್ಣ ಕೈಪಿಡಿಯುವನು ಸತ್ಯ ವಿ- ಶಿಷ್ಟ ದಾಸತ್ವವನು ಪಾಲಿಸಿ ನಿಷ್ಠೆಯಿಂದಲಿ ಹರಿಕಥಾಮೃತಸಾರ ಪಠಿಸುವರ 24
--------------
ಶ್ರೀದವಿಠಲರು
ಹರಿದಾಸರ ಸ್ತುತಿ ಆನಂದ ಸಾಗರದ ಸೌಖ್ಯವೇಂ ನುತಿಪೆ ಪ. ಆನಂದ ಶ್ರೀ ಗುರುಗಳತಿ ಕೃಪೆಯೊಳಿತ್ತ ಅ.ಪ. ಗಾನಲೋಲನ ಮಹಿಮೆ ಜ್ಞಾನ ಬೋಧನೆಯಿಂದ ನಾನಾಪ್ರಕಾರದಿಂ ವರ್ಣಿಸುತಲಿ ಮಾನಿನಿಯ ಮನದ ಶೋಕಾಗ್ನಿ ಶಾಂತಿಯಗೈಸಿ ಮಾನಸದಿ ನಲಿವಂತೆ ಮಮತೆಯೊಳು ಪೊರೆದ 1 ರಾಮಚಂದ್ರನ ಮಹಿಮೆ ನೇಮದಿಂದಲಿ ಪಠಿಸೆ ಸೋಮಕಳೆ ಪೌರ್ಣಿಮ ಸ್ಥಿರವಾರದಿ ಕಾಮಧೇನುವು ಎನುತ ಕರೆದು ಮುದವಿತ್ತು 2 ಕಲುಷ ಲಿಂಗದ ಕಳೆಯ ಕಳೆದು ಚಂದ್ರನೊಳಿಟ್ಟು ಅ- ನಿಲ ಭಾರತಿಯರ ವ್ಯಾಪಾರ ತಿಳಿಸಿ ಜಲಜಾಕ್ಷ ಗೋಪಾಲಕೃಷ್ಣವಿಠ್ಠಲ ಮನದಿ ನೆಲಸಿ ಮುಕ್ತಿಯ ಕೊಡುವ ಮಾರ್ಗ ತೋರಿದರು3
--------------
ಅಂಬಾಬಾಯಿ
ಹರಿನಿನ್ನ ಕರುಣವಿರಾಲಾವ ಭಯವು ಸ್ಮರಣಿ ಮಾತ್ರದಿ ಸಕಲದುರಿತಗಳ ಪರಿಹರಿಪ ಪ ಸಣ್ಣ ವಯದಲಿ ಶ್ರೀ ಜಗನ್ನಾಥದಾಸಾರ್ಯ ಬನ್ನ ಬಡುತಿರೆ ವ್ಯಾಧಿ ಪೀಡೆಯಿಂದ ಘನ್ನ ಕರುಣಾಭ್ದಿ ಶ್ರೀ ಗೋಪಾಲದಾಸರಾ - ಬಿನ್ನಪವನಾಲಿಸಿ ರೋಗಮೋಚನ ಗೈದ 1 ದಾಸಕುಲರತ್ನ ಪ್ರಾಣೇಶ ದಾಸಾರ್ಯರ ಆಸುವಂಶದ ತರುಳ ರೋಗದಿಂದಾ ಯಾಸ ಬಡುವದು ಕೇಳಿ, ಆಶೆಯನೆ ತೊರೆದಿಹನು ನೀ ಸಲಹ ಬೇಕಯ್ಯಾ ಕರುಣದಿಂದಲಿ ನೋಡಿ 2 ವರದೇಂದ್ರ ಗುರುವರರ ಸುರುಚಿರಾಲಯದಲ್ಲಿ ಇರಳ್ಹಗಲು ನಿಮ್ಮ ನಾಮ ಸ್ಮರಿಸುವಂಥ ಪರಿ ಪೀಡಿಸುವದುಚಿತವೇನೊ ಶ್ರೀ ಹರಿ ವಿಚಾರಿಸಿ ನೀನೆಸಿದಯದಿಂದ ನೋಡೊ 3 ವಾಸವಾದ್ಯಮರನುತ ವಾಸುದೇವನೆ ನೀನು ಈ ಸಮಯದೊಳಗಿವನ ಕರುಣದಿಂದ ಪೋಷಿಸಲು ನಿನ್ನ ಪೊಂದಿರುವ ಸದ್ಭಕ್ತರ ದಾಸನೆಂದೆನಿಸಿ ಜೀವಿಸಲಿಯನವರತ 4 ನಿನ್ನನೇ ನಂಬಿರುವೆ ನಿನ್ನನೇ ಪ್ರಾರ್ಥಿಸುವೆ ಧನ್ವಂತ್ರಿ ನೀನೆನ್ನ ಮೊರೆಯಾಲಿಸೊ ಬನ್ನ ಬಡಿಸಲು ಸಲ್ಲ ಇನ್ನು ನೀ ಕರುಣಿಪುದು ವರದೇಶವಿಠಲ 5
--------------
ವರದೇಶವಿಠಲ
ಹರಿಪಾದವ ನಂಬಿರೋ | ಮನುಜರೆಲ್ಲ | ಹರಿಯಲ್ತೆ ಹರಿಗರ್ವ ಹರಿಸಿ ಗೋಕುಲದೀ | ವಿ | ಹರಿಸಿ ಹರಿಜಳಲ್ಲಿ ಹರಿಮೆಟ್ಟಿನಲಿವಂಥ ಪ ಸೋಮಜ ಭವನ ಪದಾ | ಸೇವೆಗೆ ಮೆಚ್ಚಿ | ಸೋಮ ಪುತ್ರಗೆ ನೀಡಿದಾ | ಸೋಮನಾ ಭಂಡಾರಿಯನೆ ಮಾಡಿ ದಯದಿಂದ | ಸೋಮಜಾನನಾ ಪೂರ್ಣ ಸೋಮಚಕೋರವಾ 1 ಕಮಲಾರಿ ಧರ ಸೇವ್ಯನು | ಶಂಖ ಚಕ್ರ | ಕಮಲಾಗದಾಧರನು | ಕಮಲಾಂಘ್ರೀಯನಖ ಕಮಲದಿ ಜನಿಸಿದಾ | ಕಮಲದಿ ಮೂಜಗ ಕಮಲಗತಿಯ ನೀವ 2 ಗೋಪೆಸರನ ಪಿತನ | ಉದ್ಧರಿಸಲು | ಗೋಪಾದ ತ್ರಯ ಕೃತನ | ಗೋಪಾದಿವಿನುತ ಮಹಿಪತಿಸುತ ಪ್ರಭು | ಗೋಪಕೋಟಿ ತೇಜ ಗೋಪಾಲ ನೆನಿಸುವ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿಯೆ ಸರ್ವೋತ್ತಮ ಪರದೈವವೆಂತೆಂಬ ಮರುತ ಮತವ ಸಾರಿರೊ ಪ. ಗರುವಿಕೆಯನೆ ಬಿಟ್ಟು ಪರಮತವನೆ ಸುಟ್ಟು ಹರಿಯ ಸೇವಕರಾಗಿರೊ | ಈ ಜಗದೊಳು ಅ.ಪ. ಪಂಚ ಭೇಧವ ತಿಳಿದು ಪಂಚೇಂದ್ರಿಯವ ಸೆಳೆದು ಪಂಚ ಮೂರ್ತಿಯ ಭಜಿಸಿರೊ ಪಂಚ ಸಂಸ್ಕಾರದಿ ಪಂಚಯಜ್ಞವ ರಚಿಸಿ ಪಂಚ ಮಾರ್ಗವ ಸಾರಿರೊ | ವೈರಾಗ್ಯದಿ 1 ಎಂಟು ಮದಗಳನಳಿದು ಎಂಟು ಮೂರ್ತಿಯ ತಿಳಿದು ಎಂಟು ದಳದಿ ಕಾಣಿರೊ ಎಂಟು ಕರ್ತೃತ್ವವ ಎಂಟು ತತ್ವದಿ ಮಾಳ್ಪ ಎಂಟಕ್ಷರನ ಪಾಡಿರೊ | ಕೊಂಡಾಡಿರೊ 2 ಮೂರು ಗುಣಗಳಿಂದ ಮೂರು ಮಾಳ್ಪ ಜಗವ ಮೂರು ರೂಪವ ನೆನೆಯಿರೊ ಮೂರು ಮೂರು ಭಕ್ತಿ ಮೂರು ಮಾರ್ಗದಿ ರಚಿಸಿ ಮೂರು ಲೋಕವ ಸಾರಿರೊ | ಮೂರನೆ ಗೆದ್ದು 3 ಕಂಡ ದೈವಗಳಿಗೆ ಮಂಡೆಯ ಬಾಗಿಸುತ ಬೆಂಡು ಆಗಲಿ ಬೇಡಿರೊ ಹಿಂಡು ದೈವಗಳಿಗೆ ಗಂಡ ಹರಿಯ ಭಜಿಸಿ ಗಂಡುಗಲಿಯಾಗಿರೊ | ಧೈರ್ಯವ ತಾಳಿ 4 ಗುರುಗಳಿಂದಲಿ ತತ್ವ ಸರ್ವಕಾಲದಿ ತಿಳಿದು ಉರ್ವಿಯೊಳಗೆ ಬಾಳಿರೊ ಸರ್ವಾಂತರ್ಯಾಮಿ ಶ್ರೀ ಗೋಪಾಲಕೃಷ್ಣವಿಠ್ಠಲ ಸರ್ವಬಿಂಬನೆನ್ನಿರೊ | ಮೂಲರೂಪಿ 5
--------------
ಅಂಬಾಬಾಯಿ
ಹರಿಯೆಂದು ಮನವೆ ನೀ ಸ್ಮರಿಸೋ ದೃಢದಿಂದ ಸ್ಮರಿಸಿದಾಕ್ಷಣ ಬಂದು ಒದಗುವ ಗೋವಿಂದ ಕರುಣದಿಂದಲಿ ನೋಡಿ ಹಿಂಗಿಸುವ ಭವಬಂಧ ಪರಮದಯಾನಿಧಿಯು ಶ್ರೀಹರಿ ಮುಕುಂದ 1 ಸ್ಮರಿಸಿದಾಕ್ಷಣ ಪುಣ್ಯಗತಿಗೈದಜಾಮಳ ಮರೆಯದೆ ಸ್ಮರಿಸಿದ ಧ್ರುವ ಯೈದಿದಢಳ ಹರಿಯೆಂದು ಪ್ರಹ್ಲಾದ ಪುಣ್ಯಗೈದ ಸಬಳ ಸ್ಮರಿಸಿದವರ ಕಾವ ಶ್ರೀಹರಿ ಗೋಪಾಲ 2 ಗಜ ಭಯ ಸ್ಮರಿಸಿದಾಕ್ಷಣ ಮೊರೆ ಇಟ್ಟು ದ್ರೌಪದಿಗಾಯಿದಭಿಮಾನ ಸ್ಮರಿಸಿದ ಪಾಂಡವರ ರಕ್ಷಿಸಿದ ಪ್ರಾಣ ಪರಮಭಕ್ತರ ಜೀವ ಶ್ರೀಹರಿ ನಾರಾಯಣ 3 ಹರಿನಾಮದಿಂದಾಯಿತು ಅಹಲ್ಯೋದ್ಧಾರಣ ಸ್ಮರಣೆ ಸಕಲವೆಲ್ಲ ತರಿಸಿತು ಪೂರ್ಣ ಸುರಮುನಿಜನರಿಗೆ ಇದೇ ನಿಜಭೂಷಣ ಪರಮ ವೈಷ್ಣವರಿಗೆ ಇದೇ ಜೀವ ಪ್ರಾಣ 4 ಹರಿಯೆಂದು ನೆನಿಯೋ ನೀ ಗುರು ಕೃಪೆಯಿಂದ ಸ್ಮರಿಸೊ ಮನವೆ ದೃಢಭಾವ ಭಕ್ತಿಯಿಂದ ನಿತ್ಯ ನಿಜಾನಂದ ತೋರುವ ಶ್ರೀಹರಿನಾಮ ಸುಖ ಸದಾನಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಯೆನ್ನ ನರಜನ್ಮ ವ್ಯರ್ಥವಾಯ್ತು ಪರಮ ಭಕ್ತಿಯೊಳಿನ್ನು ಭಜಿಸುವೆನು ಕಾಯೋ ಪ ತೊಡೆಯ ಮೇಲಾಡುತಿಹ ಶಿಶುವಿನಾನುಡಿ ಕೇಳಿ ಕಡು ಮೂರ್ಖತನದಿಂದ ಭ್ರಮೆಗೊಂಡೆನೋ ಸಡಗರದಿ ಕಿವಿಗೊಟ್ಟು ಕಿಂಕಿಣಿಯ ದ್ವನಿಗಳನು ಎಡಬಿಡದೆ ಕೇಳುತಿಹ ಹರಿಣನಂತಾದೇ 1 ತೊಡೆಗÀುಹ್ಯ ಕುಚಗಳಿಗೆ ಅನುದಿನವು ನಲಿಯುತ್ತ ಮಡದಿಯರ ಅಂಗ ಸಂಗದ ನಂಬುತಾ ಒಡಲ ಶಾಂತಿಯಗೊಳಿಸೆ ಬಡಿಗೋಲು ಕೆಡಹಿಕೊಂ ದಡಗುತಿಹ ಮೂಷಕನ ತೆರದಲ್ಲಿ ಕಳೆದೇ 2 ನಿರುತದಿಂ ಪರಸತಿಯ ಲಾವಣ್ಯವನು ನೋಡಿ ಚರಿಸಿತೆನ್ನಯ ಮನವು ಅವಳ ಕೂಟಕ್ಕೇ ಉರಿವ ದೀಪವ ಕಂಡು ಕನಕ ಮಣಿಯೇಯೆಂದ ಎರಗುತಿಹ ಹುಳದಂತೆ ಹಾಳಾದೆ ಬರಿದೇ 3 ಜರಿದು ನಿಜವೃತ್ತಿಯನು ಪರದಾಸ್ಯದಲಿ ಮುಳುಗಿ ಪೊರದೆ ಹೊಟ್ಟೆಯನಾ ಪರಾನ್ನ ಭಕ್ಷದಲೀ ಹರುಷದಿಂ ಬಲೆಯತುದಿ ಮಾಂಸಕ್ಕೆ ಮೆಚ್ಚಿದಾ ಮರುಳಾ ಮೀನಿನ ಗತಿಯು ಯನಗಾಯ್ತು ನಿಜದೀ4 ನಾರಿಯರ ಜಾಲಕ್ಕೆ ಪ್ರತಿದಿನವು ಸಿಲುಕುತ್ತ ಮಾರಿಯರ ಸಾಕಿ ನಾ ಫಲವ ತಿಂದೆ ಭ್ರಮರ ಸಂಪಿಗೆಯಸಳ ಸಾರಿ ಕೊಡಲೆ ಮೃತ್ಯುವಶವಾಗುವಂತೇ 5 ಮೂರಾರು ಶತ್ರುಗಳು ತರಿದೆನ್ನ ಮನವನ್ನು ಗಾರು ಮಾಡುತಲಿಹವು ತಿಳಿಯದಾ ಹರಿಯೇ ನರಸಿಂಹನೇ ಐದು ಇಂದ್ರಿಯವ ಗೆಲಲಾರೆ ಭೂರಿ ಭಕ್ತಿಯೊಳೆರಗಿ ಮರೆಹೊಕ್ಕೆ ಕಾಯೋ 6 ಪನ್ನಗಶಯನ ಶ್ರೀ ವೇಣುಗೋಪಾಲನೆ ಚನ್ನಿಗಕೇಶವನೇ ದೂರ್ವೇಶನೇ ನಿಂನನಾ ಬಿಡಲಾರೆ ಮಾರಮಣ ಪೊರೆಯಂನ ಯೋನಿ ಜನ್ಮಕೆ ಮುಂದೆ ಬರದಂತೆ ಮಾಡೋ 7
--------------
ಕರ್ಕಿ ಕೇಶವದಾಸ
ಹರಿಯೇ ಪೊರೆಯದಿಹುದು ಸರಿಯೆ | ಎನ್ನ ಮರೆತೆ ಯಾತಕೊ ನಾನರಿಯೆ ಪ ಸೂಕರ ಯೋನಿಯಲಿ ಬಂದು | ನಾನು ಮನುಜನಾಗಿ ನಿಂದಿಹೆನಿಂದು ನಿನ ಬೇಡಿಕೊಂಬೆ ದಯಸಿಂಧು | ಎನ್ನ ಪುನಹ ಪುಟ್ಟಿಸಬೇಡವೆಂದು 1 ಮನಸು ವಚನ ಕಾಯಗಳಿಂದ | ನಿನ್ನ ಅನುಚರನಾಗಿಹೆ ಮುದದಿಂದ ದನುಜಾರಿ ಬಿಡಿಸೆನ್ನ ಬಂಧ | ಭವ- ಜನಿತವಾಗಿಹ ಜಾಲದಿಂದ 2 ಹಲವು ಮಾತೇಕೊ ಮಾಲೋಲ | ಮೌನಿ ಅಲವ ಬೋಧಾರ್ಚಿತ ಗೋಪಾಲ ಕಲುಷ ರಾಸಿಗಳನೆಲ್ಲ ಕಳೆದು ಸಲಹೈಯ್ಯಾ ರಂಗೇಶವಿಠಲ 3
--------------
ರಂಗೇಶವಿಠಲದಾಸರು