ಒಟ್ಟು 4285 ಕಡೆಗಳಲ್ಲಿ , 121 ದಾಸರು , 3030 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗೋವಿಂದ ಸಲಹೆನ್ನನು - ಸದಾನಂದಗೋವಿಂದ ಸಲಹೆನ್ನನು ಪ ಗೋವಿಂದ ಸಲಹೆನ್ನ ಕುಮುದಲೋಚನ ನಿನ್ನಸೇವಕರಡಿಯ ಸೇವಕನಯ್ಯ ಗೋವಿಂದ ಅ ಅಚ್ಯುತ ಸರ್ವೋ-ತ್ತಮನೆ ಚಿನ್ಮಯ ಗೋವಿಂದ - ನಿಶ್ಚಲಭಕ್ತಿಕ್ರಮವ ಬೋಧಿಸೊ ಗೋವಿಂದ - ಪಾಪವನೆಲ್ಲಶಮನಗೊಳಿಪ ಗೋವಿಂದ - ಲಕ್ಷ್ಮೀರಮಣನಮೋ ದಶಾವತಾರಿ ಗೋವಿಂದ 1 ಮನವೆನ್ನ ಮಾತು ಕೇಳದು ಕಾಣೊ ಗೋವಿಂದಮನವ ಗೆಲ್ಲುವ ಬಲ ಎನಗಿಲ್ಲ ಗೋವಿಂದಕನಸಿನಂತಿಹ ದೇಹ ಸ್ಥಿರವಲ್ಲ ಗೋವಿಂದಬಿನುಗು ಬುದ್ಧಿಗಳ ಬಿಡಿಸಯ್ಯ ಗೋವಿಂದನೆನಹು ನಿನ್ನೊಳಗಿಟ್ಟು ನಡೆಸಯ್ಯ ಗೋವಿಂದನೆನೆವ ದಾಸರ ಮನದೊಳಗಿರ್ಪ ಗೋವಿಂದವನಜಲೋಚನ ನಾ ನಿನ್ನವನಯ್ಯ ಗೋವಿಂದಘನ ಮಹಿಮನೆ ನಿನ್ನ ಮೊರೆಹೊಕ್ಕೆ ಗೋವಿಂದಮುನಿಗಳ ಮನದೊಳು ಮಿನುಗುವ ಗೋವಿಂದನಿನಗಲ್ಲದಪಕೀರ್ತಿ ಎನಗೇನೊ ಗೋವಿಂದಜನನ ರಹಿತ ಗೋವಿಂದ - ನಿನ್ನಡಿಗಳನೆನವು ಕೊಡೊ ಗೋವಿಂದ - ದುರ್ವಿಷಯ ವಾ-ಸನೆಯ ಬಿಡಿಸೊ ಗೋವಿಂದ - ಕುತ್ಸಿತ ಕೆಟ್ಟತನವ ಬಿಡಿಸೊ ಗೋವಿಂದ - ಸದ್ಗುಣವೆಂಬಧನವ ತುಂಬಿಸೊ ಗೋವಿಂದ - ಇದಕ್ಕೆ ಬಡ-ತನವೆ ನಿನಗೆ ಗೋವಿಂದ - ಸದಾ ನಿನ್ನಘನ ಸ್ಮರಣೆ ಕೊಡು ಗೋವಿಂದ - ಸನಕಸನಂದನಾರ್ಚಿತ ಗೋವಿಂದ 2 ಕಿನ್ನರ ಸನ್ನುತ ಗೋವಿಂದ - ಅಪರಿಮಿತಕರುಣಾಸಾಗರ ಗೋವಿಂದ - ಅರಿಯದಂಥಪರಮ ಜ್ಯೋತಿಯೆ ಗೋವಿಂದ - ಗಂಗೆಯ ಪೆತ್ತಚರಣ ನಿರ್ಮಲ ಗೋವಿಂದ - ತೆತ್ತೀಸ ಕೋಟಿಸುರರ ಪೊರೆವ ಗೋವಿಂದ - ಶ್ರೀವೈಕುಂಠಪುರದೊಳಗಿಹ ಗೋವಿಂದ - ಅಚ್ಯುತಾನಂತತಿರುಪತಿ ನೆಲೆಯಾದಿ ಕೇಶವ ಗೋವಿಂದ 3
--------------
ಕನಕದಾಸ
ಗೋವಿಂದಾಷ್ಟೋತ್ತರ ನಾಮಾವಳಿ ಹೃದ್ಗತ ತಮನಾಶ ಗೋವಿಂದ | ಎನ್ನಹೃದ್ಗುಹದೊಳು ತೋರೋ ಗೋವಿಂದ ಪ ಅಲವ ಮಹಿಮ ಹರಿ ಗೋವಿಂದ | ನಮ್ಮಅಲವ ಭೋದರ ಪ್ರೀಯ ಗೋವಿಂದ ||ಆಲಯದೊಳು ನಿಲ್ಲೊ ಗೋವಿಂದ | ಹೃ-ದಾಲಯದಲಿ ತೋರೊ ಗೋವಿಂದ 1 ಇಕ್ಷುಚಾಪನ ಪಿತನೆ ಗೋವಿಂದ | ನೀನಿಕ್ಷುಧನ್ವಾರಿ ನುತ ಗೋವಿಂದ ||ಈಕ್ಷಿಸೋ ಕರುಣದಿ ಗೋವಿಂದ | ನಿ-ನ್ನೀಕ್ಷಿಸ ಲೋಶವೇನೊ ಗೋವಿಂದ 2 ಉರಗ ಶಯನನೆ ಗೋವಿಂದ | ನಮ್ಮಉರಗಾಯಿ ವೈಕುಂಠ ಗೋವಿಂದ ||ಊರೂರು ಚರಿಸಿದೆ ಗೋವಿಂದ | ನಿ-ಮ್ಮೂರಿಗೆ ಕರೆದೊಯ್ಯೊ ಗೋವಿಂದ 3 ಋಗಾದಿ ತ್ರಯಿಮಯಿ ಗೋವಿಂದ | ಹರಿಋಗ್ವಿನುತನೆ ಗುರು ಗೋವಿಂದ ||Iೂಕ್ಷ ಸದ್ವಿನುತನೆ ಗೋವಿಂದ | ಹರಿIೂಕಾರ ಪ್ರತಿಪಾದ್ಯ ಗೋವಿಂದ 4 ಏತತ್ತೆನಿಸಿಯು ಹೃದ್ಗ ಗೋವಿಂದ | ನೀ ನೇತಕೆ ಕಾಣಿಯಾಗಿಹೆ ಗೋವಿಂದ ||ಐತದಾತ್ಮ್ಯಕ ಸರ್ವ ಗೋವಿಂದ | ನೀನೈತರುವುದು ಮನಕೆ ಗೋವಿಂದ 5 ಸತಿ ಗೋವಿಂದ | ನೀನೌತು ಕೊಂಡಿಹದೇಕೊ ಗೋವಿಂದ 6 ಅಂಗಾಂಗಿ ಭಾವದಿ ಗೋವಿಂದ | ನೀನಂಗಾಂಗದಿ ಕ್ರೀಡಿಪೆ ಗೋವಿಂದ ||ಅಹರರ್ಹಮನದಲಿ ಗೋವಿಂದ | ನೀಅಹರಹರ್ವಿಹರಿಸೋ ಗೋವಿಂದ 7 ಕಪಿಲಾತ್ಮ ಶ್ರೀ ಹರಿ ಗೋವಿಂದ | ನಮ್ಮಕಪಿವರ ಪೂಜ್ಯನೆ ಗೋವಿಂದ ||ಖಪತಿಗಮನ ಗುರು ಗೋವಿಂದ | ಜಗಖರ್ಪರ ಸೀಳಿದ ಗೋವಿಂದ 8 ಗರುಡಧ್ವಜನೆ ಬಾರೋ ಗೋವಿಂದ | ಜಗಂಗರುವವ ಕಳೆಯೊ ಗೋವಿಂದ ||ಘರ್ಮಾಸ ಸಮಂತಾತು ಗೋವಿಂದ | ಸೂಕ್ತಘರ್ಮಕ್ಕೆ ವಿಷಯನೆ ಗೋವಿಂದ 9 ಓಂಕಾರ ಪ್ರತಿಪಾದ್ಯ ಗೋವಿಂದ | ಪಾ-ಙ್ತವು ಜಗವೆಲ್ಲ ಗೋವಿಂದ ||ಚರ್ಮದೊಳುದ್ಗೀಥ ಗೋವಿಂದ | ಇದ್ದುಚರ್ಮ ಲಾವಣ್ಯದ ಗೋವಿಂದ 10 ಛಂದಸ್ಸಿನಿಂಛನ್ನ ಗೋವಿಂದ | ನಾಗಿಛಂದೋಭಿಧನೆನಿಪೆ ಗೋವಿಂದ ||ಜಂಗಮ ಚರವ್ಯಾಪ್ತ ಗೋವಿಂದ | ಎಮ್ಮಜಂಗುಳಿಗಳ ಕಳೆಯೊ ಗೋವಿಂದ 11 ಝಷ ರೂಪಿ ಕಮಠನೆ ಗೋವಿಂದ | ನಮ್ಮಝಷ ಕೇತುಪಿತ ಕಾಯೊ ಗೋವಿಂದ ||ಜ್ಞಾನ ಜ್ಞೇಯ ಜ್ಞಾತೃ ಗೋವಿಂದ | ಪ್ರ-ಜ್ಞಾನ ಘನನೆನಿಪೆ ಗೋವಿಂದ 12 ಟಂಕಿ ಎಂಬುವನೆ ಗೋವಿಂದ | ನಮ್ಮಾಟಂಕವ ಕಳೆಯೋ ಗೋವಿಂದ ||ಠಕ್ಕು ಠವಳಿಗಾರ ಗೋವಿಂದ | ನಮ್ಮಠಕ್ಕಸಿ ಹಾಕದಿರು ಗೋವಿಂದ 13 ಡರಕೊ ಡರ್ಯಾಭಿಧ ಗೋವಿಂದ | ನಮ್ಮೆಡರನು ಪರಿಹರಿಸೊ ಗೋವಿಂದ ||ಢಣ ಢಣ ನಾದದಿ ಗೋವಿಂದ | ಬಲುಢಣಿರೆಂಬೊ ವಾದ್ಯದಿ ಗೋವಿಂದ 14 ಣನಾಮ ವಾಚ್ಯನೆ ಗೋವಿಂದ | ಪ್ರ-ಣಮನ ಮಾಡುವೆನೋ ಗೋವಿಂದ ||ತರುಣಾರ್ಕ ಪ್ರಭೆಯ ಗೋವಿಂದ | ನಮ್ಮತರುಣಿ ದ್ರೌಪದಿ ವರದ ಗೋವಿಂದ 15 ಥರಥರವರ್ಣನೆ ಗೋವಿಂದ | ಬಲ್ಪ್ರಮಥನ ಶೀಲನೆ ಗುರು ಗೋವಿಂದ ||ದರ ಕಂಬುಧರನೆ ಗೋವಿಂದ | ತ್ರಿ-ದಶರ ಪರಿಪಾಲ ಗೋವಿಂದ 16 ಧರ್ಮಸು ಗೋಪ್ತನೆ ಗೋವಿಂದ | ಸ-ಧ್ದರ್ಮ ನಾಮಕ ಗುರು ಗೋವಿಂದ ||ನರೆಯಣಾಭಿಧ ಗುರು ಗೋವಿಂದ | ನಮ್ಮನರಸಖನೆನಿಸಿಹೆ ಗೋವಿಂದ 17 ಪರಮ ಪುರುಷ ಗುರು ಗೋವಿಂದ | ಕಾಯೊಪರಮಾನಂದ ಪ್ರದನೆ ಗೋವಿಂದ ||ಫಲರೂಪನು ನೀನೆ ಗೋವಿಂದ | ಇದೆಫಲಿತಾರ್ಥವೊ ಗುರು ಗೋವಿಂದ 18 ಬಗೆ ಬಗೆ ಕರ್ಮಗಳ್ ಗೋವಿಂದ | ಮಾಡಿಬಗೆ ಬಗೆ ಲೀಲನೆ ಗೋವಿಂದ ||ಭರ್ಗ ರೂಪಿಯೆ ಗುರು ಗೋವಿಂದ | ನಮ್ಮಭರ್ಮ ಗರ್ಭನ ಪಿತ ಗೋವಿಂದ 19 ಮದಜನಕಮಜ್ಜದಿ ಗೋವಿಂದ | ನಮ್ಮಮದನ ಗೋಪಾಲನೆ ಗೋವಿಂದ ||ಯಜ್ಞ ಭುಗ್ಯಜ್ಞನೆ ಗೋವಿಂದ | ಮತ್ತೆಯಜ್ಞ ಸಾಧನ ನೀನೇ ಗೋವಿಂದ 20 ರಣದೊಳರ್ಜುನ ಪಾಲ ಗೋವಿಂದ | ಹಗರಣವನೆ ಕಳೆಯೊ ಗೋವಿಂದ ||ಲವಕುಶ ಪಿತನೆನಿಪೆ ಗೋವಿಂದ | ನೀನಲವಪೂರ್ಣ ಮಹಿಮ ಗೋವಿಂದ 21 ವರ್ಣಗಳ್ಧ್ವನಿಗಳು ಗೋವಿಂದ | ಸರ್ವವರ್ಣಿಪುದು ನಿನ್ನ ಗೋವಿಂದ ||ಶರೊ ಆಭಿಧ ಜೀವನ್ನ ಗೋವಿಂದ | ಮೀಟಿಶರೀರಾಖ್ಯನೆನಿಸುವೆ ಗೋವಿಂದ 22 ಷಡ್ಗುಣ ಪರಿಪೂರ್ಣ ಗೋವಿಂದ | ನೀನೆಷಡ್ವಾದಿ ಸ್ವರ ವ್ಯಾಪಿ ಗೋವಿಂದ ||ಸತ್ತಾದಿ ಪ್ರದ ರೂಪಿ ಗೋವಿಂದ | ನೀನೆಸತ್ತತ್ವ ಪ್ರತಿಪಾದ್ಯ ಗೋವಿಂದ 23 ಹರಿ ಹರಿ ಎಂದರೆ ಗೋವಿಂದ | ಪಾಪಹರಿ ಸೂವಿ ನೀನೇ ಗೋವಿಂದ ||ಳಾಳೂಕ ಆಭಿಧ ಗೋವಿಂದ | ಕಾಯೊಳಕಾರ ಪ್ರತಿಪಾದ್ಯ ಗೋವಿಂದ 24 ಕ್ಷಮಿಸೆನ್ನ ಅಪರಾಧ ಗೋವಿಂದ | ಬಲಿಕ್ಷಮೆಯನಳೆದ ಗುರು ಗೋವಿಂದ ||ಕ್ಷಮಕ್ಷಾಮಾಭಿಧ ಗುರು ಗೋವಿಂದ | ನೀಲಕ್ಷುಮಿ ಸಹ ನೆಲಸೊ ಗೋವಿಂದ 25 ಜ್ಞಾನಗಮ್ಯನೆ ಗುರು ಗೋವಿಂದ | ತತ್ವಜ್ಞಾನವ ಪಾಲಿಸೋ ಗೋವಿಂದ ||ಜ್ಞಾನಿಗೆ ಪ್ರಿಯತಮ ಗೋವಿಂದ | ನಿನಗೆಜ್ಞಾನಿ ಜನರು ಪ್ರಿಯರು ಗೋವಿಂದ 26 ಏಕ ಪಂಚಾಶತು ಗೋವಿಂದ | ವರ್ಣಏಕಾತ್ಮ ಮಾಲೇಯ ಗೋವಿಂದ ||ಲೋಕೈಕನಾಥ ಗುರು ಗೋವಿಂದ | ವಿಠಲಸ್ವೀಕರಿಸೆನ್ನ ಕಾಯೋ ಗೋವಿಂದ 27
--------------
ಗುರುಗೋವಿಂದವಿಠಲರು
ಗೌರಿ ಗಜಮುಖನ ಮಾತೆ | ಗುಣಗಣ ಭರಿತೆ ಶೌರಿ ಸಖನಂಗಸಂಗೀ ಸಂಪೂರ್ತೆ ಪ ಶುಭ ತನು ವಾರಿಜನೇತ್ರಳೆ ವೀರಸತಿಯೆ ದಯವಾರಿಧಿ ಪಾಲಿಸು ಅ.ಪ. ತುಂಗ ಮಂಗಳೇ ದೇವಿ | ಕಲಿಗೆ ಭೈರವೀ ರಂಗಾನ ನವವಿಧಿ ಭಕ್ತಿ ಸಂಗ ನೀಡುವಿ ಹಿಂಗದೆ ಪೊರಿಯೆ ತಾಯೇ | ಭಕ್ತ ಸಂಜೀವೆ ತಿಂಗಳ ಮುಖಿವರಗರಿವೆ | ನಮ್ಮ ಶಂಭುವೆ ಭಂಗಬಟ್ಟೇನು ನುಂಗುವ ಭವದೊಳು ಮಂಗಳ ಕರುಣಾಪಾಂಗದಿ ನೋಡೆನ್ನ ಭವ ಭಯ ಗಂಗೆಯ ಧರನಂಘ್ರಿ- ಭೃಂಗಳೆ ಬೋದಯಾಕಂಗಳೆ ಕರುಣಿಸು 1 ಇಂದ್ರಾದಿ ಸುರಗುರುವೆ | ದೇವ ತರುವೆ ಪರಿ ನಿನ್ನ ಬೇಡುವೆ ಕುಂದನೆಣಿಸದಲೆ ಶಿವ ಶಂಕರಿ ಕಾವೆ ಸಂದೇಹ ಕಳಿ ವಿಭುವೆ | ವೀರಜತನುವೆ ನೊಂದವನಾ ಮ್ಯಾಲ್ಹೊಂದಿಸು ಕರುಣವ ಮಂದಸ್ಮಿತೆ ಮುಕುಂದನ ಮನದಲಿ ವಂದಿಸು ಅನಿಮಿತ್ತ ಬಂಧುವೆ ರಕ್ಷಿಸು 2 ಕಸ್ತೂರಿ ಕುಂಕುಮ ಫಾಲೆ | ರನ್ನಾದ ಓಲೆ ವಸ್ತುಗಳಿಟ್ಟ ಹಿಮವಂತನ ಬಾಲೆ ಶಿಸ್ತಿನ ಶುಭ್ರಾಂಬರಧಾರೆ ವನಮಾಲೆ ಮಸ್ತಕದ ಕಿರೀಟ ವದನೆ ತಾಂಬೂಲೆ ಸಿರಿ ಹಸ್ತಗಳಿಟ್ಟೆನ್ನ ದುಸ್ತರದ ಹಾದಿಗಳಸ್ತಮಮಾಳ್ಪುದು ವಿಸ್ತರ ಮಹಿಮ ಜಯೇಶವಿಠಲ ವಸ್ತುವ ನೀಡಮ್ಮ ಹಸ್ತಿಯ ಗಮನೆ 3
--------------
ಜಯೇಶವಿಠಲ
ಘಂಟಾನಾದವ ಕೇಳೋ ಮುಕ್ತಘಂಟಾನಾದವ ಕೇಳೋಘಂಟಾನಾದವು ಘಣ ಘಣವೆನಲುಅಂಟಿ ಕೊಳ್ಳದೆ ಲೌಕಿಕ ಸುಖಕೆ ಪ ಈಷಣ ತ್ರಯಗಳು ಎಲ್ಲವು ಕೆಟ್ಟುಪಾಶವೆಂಟನು ಎಲ್ಲವ ಸುಟ್ಟುವಾಸನೆ ಹದಿನೆಂಟನು ಕಳಚಿಟ್ಟುಕ್ಲೇಷ ಪಂಚಕಗಳು ಹುಡಿಯಿಟ್ಟು 1 ಅರಿಗಳು ಅರುವರ ತಲೆಯನೆ ಹೊಯ್ದುಕರಣ ನಾಲ್ವರ ಕಾಲನೆ ಕೊಯ್ದುಹರಿವಾ ಹತ್ತರ ನೆತ್ತಿಗೆ ಹೊಯ್ದುಮೆರೆವಾವರಣ ಏಳನೆ ಮೇದು 2 ಘಂಟಾನಾದದ ಇಂಪನಾಲಿಸುಎಂಟು ಮೂರ್ತಿಗಳೊಡೆಯನಹೆಕಂಟಕಹರ ಚಿದಾನಂದ ಬ್ರಹ್ಮವುತಾನಾಗಿಯೇ ನೀ ನಿಜ ವಿರುವೆ3
--------------
ಚಿದಾನಂದ ಅವಧೂತರು
ಘನವೇನೋ ನಿನಗಿದು ಗುಣವನದೀ | ಮಾನದ ಮಾನ್ಯ ||ಮನವ ನಿನ್ನಲಿ ನಿಲ್ಲಿಸೋ ಪ ತನುಮನ ಸಕಲ ಸಾಧನವೆಲ್ಲ ಎನಗಿತ್ತುಮನ ಆದಿ ಕರಣವ ಎನಗೊಶಪಡಿಸದೆ ಅ.ಪ. ಅಚ್ಯುತ ಮೂರ್ತಿ | ಸತತ ಎನ್ನಲ್ಲಿ ಇದ್ದುಹಿತವ ಮಾಡಿದೆ ಎನ್ನ | ಹತಭಾಗ್ಯನೆನಿಪುದು 1 ಹೀನ ಬುದ್ಧಿಯ ಕಳೆಯದೇ | ಮುನಿಜನ ವಂದ್ಯಾ |ವಾನರ ನಾನಾದೆ ಹರಿಯೇ ||ಶ್ವಾನ ಮತಿಯ ನೀಗಿ | ಧ್ಯಾನ ಸಾಧನ ನೀಡೋ |ಗಾನ ಲೋಲನೆ ನಿಧಾನ ಮಾಡಲಿ ಬೇಡ 2 ತಂದೆ ಮುದ್ದು ಮೋಹನರೂ | ಮಂದನು ಎನ್ನ |ತಂದೆ ನಿನ್ನಡಿಗ್ಹಾಕಿದರೊ ||ಇಂದಿರೆಯರಸ ಗುರು | ಗೋವಿಂದ ವಿಠಲಯ್ಯ |ಛಂದಾಗೀಯೆನ್ನ ಮನ | ಮಂದಿರದೊಳು ನಿಲ್ಲೊ 3
--------------
ಗುರುಗೋವಿಂದವಿಠಲರು
ಘಿಲ್ಲು ಘಿಲ್ಲೆನ್ನುತಲಿಘಮಕದಿಪಾಂಡವರುಫುಲ್ಲನಾಭನÀ ದಯಪಲ್ಲವನೋಡಿ ನಿಲ್ಲದಲೆ ಎಲ್ಲರೂ ಪ. ಸೂರಿ ಬಿಡವೋನೆ ದಯವನೆ1 ಸಲ್ಲು ಸಲ್ಲಿಗೆ ಲಕ್ಷ್ಮಿನಲ್ಲನ ಸ್ತುತಿಸುತಮಲ್ಲಿಗೆ ತುರುಬಿನಮಲ್ಲಿಗೆ ತುರುಬಿನ ಚಲುವಿಯರೆಲ್ಲ ಹೊರಡಲುಮಲ್ಲ ಮರ್ದನನ ಮನೆ ನೋಡ2 ಎಲ್ಲರು ಹೊರಡಲು ಹಲ್ಲಿ ಮಾತಾಡಿದವುಫುಲ್ಲನಾಭನ ದಯ ಚಲ್ಲುವುದೆನುತಲಿಫುಲ್ಲನಾಭನ ದಯ ಚಲ್ಲುವುದೆನುತಲಿವಾಲಿ ಗಂಟಿಟ್ಟ ನಕುಲನು3 ಅಂಗಳಕೆ ಬರುತಿರೆ ಮಂಗಳವಾದ್ಯಗಳಾದವುಹಂಗ ಹಾರಿದವು ಎಡಗಡೆಹಂಗ ಹಾರಿದವು ಎಡಗಡೆ ರಂಗಯ್ಯಆಲಿಂಗನವ ಕೊಡುವೋನು ನಿಜವೆಂದು 4 ತೇರಿನ ಬೀದಿಯ ದ್ವಾರದಿ ಬರುತಿರೆಕಾಗೆ ಹಾರಿದವು ಬಲಗಡೆ ಕಾಗೆ ಹಾರಿದವು ಬಲಗಡೆ ರುಕ್ಮಿಣಿಸೂರಿ ಬಿಡುವಳು ದಯವನ್ನೆ5 ರೂಢಿಗೊಡೆಯನ ಕೈಲಿ ನೀಡಿ ಮಂತ್ರಾಕ್ಷತೆನೋಡುವರು ದ್ವಿಜರು ದಯದಿಂದ ನೋಡುವರು ದ್ವಿಜರು ದಯದಿಂದ ಸತ್ಯಭಾಮಮಾಡುವಳು ಪರಮ ಕರುಣವ 6 ಅಕ್ಕಿ ತೆಂಗಿನಕಾಯಿ ಚಿಕ್ಕ ನಿಂಬೆ ಹಣ್ಣುಅಚ್ಚ ಮಲ್ಲಿಗೆ ಇದುರಿಗೆಅಚ್ಚ ಮಲ್ಲಿಗೆ ಇದುರಿಗೆ ರಮಿಯರಸುನಕ್ಕು ನುಡಿವನು ನಮಕೂಡ 7
--------------
ಗಲಗಲಿಅವ್ವನವರು
ಙÁ್ಞನವಿಲ್ಲದೆ ಬಾಳೂದೊಂದು ಸಾಧನವೆ ಗಾಣದೆತ್ತಿನಂತೆ ಕಾಣದಿಹ್ಯದೊಂದು ಗುಣವೆ ಧ್ರುವ ತನ್ನ ನÀರಿಯಲಿಲ್ಲ ಬನ್ನವಳಿಯಲಿಲ್ಲ ಕಣ್ಣದೆರೆದು ಖೂನಗಾಣಲಿಲ್ಲ ಸಣ್ಣದೊಡ್ಡರೋಳೆನೆಂದು ತಿಳಿಯಲಿಲ್ಲ ಬಣ್ಣ ಬಣ್ಣದ ಶ್ರಮ ಬಿಡುವದುಚಿತವಲ್ಲ 1 ಶಮದಮಗೊಳ್ಳಲಿಲ್ಲ ಕ್ಷಮೆಯು ಪಡೆಯಲಿಲ್ಲ ಸಮದೃಷ್ಟಿಯಲಿ ಜನವರಿಯಲಿಲ್ಲ ಸಮರಸವಾಗಿ ಸದ್ಛನವ ನೋಡಲಿಲ್ಲ ಭ್ರಮೆ ಅಳಿದು ಸದ್ಗುರುಪಾದಕೆರಗಲಿಲ್ಲ2 ಗುರು ಕೃಪೆ ಇಲ್ಲದೆ ಗುರುತಾಗುವದಲ್ಲ ಗುರುತಿಟ್ಟು ನೋಡಿಕೊಂಡವನೇ ಬಲ್ಲ ಗುರು ಭಾನುಕೋಟಿ ತೇಜನಂಘ್ರಿ ಕಂಡವನೆಬಲ್ಲ ತರಳ ಮಹಿಪತಿ ಸ್ವಾಮಿ ಸುಖ ಸೋರ್ಯಾಡುವದೆಲ್ಲ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಚಂದ್ರಹಾಸನ ಕಥೆ ಸುಜನ ತ್ರೈಭುವನೋದ್ಧಾರ ಕಾರುಣ್ಯನಿಧಿ ಹೆಳವನಕಟ್ಟೆರಂಗಯ್ಯ ನಾರಾಯಣ ಶರಣೆಂಬೆ 1 ಭಕ್ತರ ಭಾಗ್ಯನಿಧಿಯೆ ನುಡಿಸಯ್ಯ ಎನ್ನ ಜಿಹ್ವೆಯಲಿ 2 ಅಜಹರಿಸುರ ವಂದಿತನೆ ನಿಜವಾಗೊ ಮತಿಗೆ ಮಂಗಳವ 3 ಸಂಗೀತಲೋಲೆ ಸುಶೀಲೆ ಹಿಂಗದೆ ನೆಲಸೆನ್ನ ತಾಯೆ 4 ನಿತ್ಯಾನಂದ ರಜತಾಚಲವಾಸನೆ ಭಕ್ತವತ್ಸಲ ಭಾಳನೇತ್ರ ಮುಗಿದು ವಂದಿಸುವೆ 5 ಸೂರ್ಯ ಪತಿಯ ಚರಣವನ್ನು ನೆನೆವೆ ಮಂಗಳವಾಗಲೆಂದು 6 ಒರೆದಂಥ ಜೈಮಿನಿಯೊಳಗೆ ಮಾಡಿ ವರ್ಣಿಸುವೆ 7 ಸಂದೇಹ ಮಾಡುತ್ತಿರಲು ಪೇಳಿದ ಫಲುಗುಣಗೆ 8 ಮುಂದೊತ್ತಿ ರಥವ ಬೆಂಬತ್ತಿ ನಿಂದಿರಿಸಿದ ಚಂದ್ರಹಾಸ 9 ವೈಷ್ಣವಕುಲ ಶಿರೋರನ್ನ ಪರಾಕ್ರಮ ದಿಟ್ಟರಿಗಿದು ನೀತವೆಂದು 10 ನ್ನೊಡೆಯಗೆ ಪೇಳಿದರಾಗ ಕಡುಚಿಂತೆಯಲಿ ಪಾರ್ಥನಿದ್ದ 11 ದಿನಕರ ಪ್ರತಿಬಿಂಬದಂತೆ ವನಜನಾಭ ಕೃಷ್ಣ ಶರಣೆನ್ನುತ ಸುರಮುನಿ ಇಳಿದಂಬರದಿಂದ12 ಉಟ್ಟಿಹ ಕರದಿ ವೇಣುವನು ಶ್ರೇಷ್ಠÀ ಬಂದನು ಇವರೆಡೆಗೆ 13 ಆನಂದದಿಂದ ಕೇಳಿದರು 14 ಎಲ್ಲ ವೃತ್ತಾಂತವನರುಹಿ ಬಲ್ಲಿದ ತುರಗವ ಕಟ್ಟಿದ ಧೀರ ಅಲ್ಲಾರು ಎನುತ ಕೇಳಿದರು15 ಪ್ರಮುಖರಿಲ್ಲ್ಯಾರು ಪೇಳೆನುಲು ಸಮಯವಲ್ಲವು ಪೇಳೆನಲು 16 ವ್ಯಾಸಾಂಬರೀಷ ವಿಭೀಷಣಕ್ರೂರ ಪರಾಶರ ಧ್ರುವ ಪ್ರಹಲ್ಲಾದ ಈಸುಮಂದಿ ಭಕ್ತರಿಗಧಿಕನು ಚಂದ್ರಹಾಸನೆಂಬಾ ಹರಿಭಕ್ತ17 ಹೇಳಬೇಕೆನುತ ಮುನೀಶನೆಂದೆಂಬ ಕೇರಾಳದೇಶದ ರಾಜ್ಯವನು ಪ್ರಧಾನಿಯನು 18 ಭೂತಮೂಲದಲಿ ಪುಟ್ಟಿದನು ತಾತ ಕಾಲವಾಗಿ ಪೋದ 19 ಸಾಯಲಾದಳು ರಾಜಪತ್ನಿ ಸಿರಿ ಪರರಾಯರು ಬಂದು ಕಟ್ಟಿದರು20 ಬಾಲನಿರಲು ಆ ಶಿಶುವೆತ್ತಿ ನಡೆದಳು 21 ಕುಂತಳಪುರಕಾಗಿ ಬಂದು ಆ ಗ್ರಾಮದಲ್ಲಿ 22 ಎರೆದು ಪೋಷಣೆಯ ಮಾಡುವಳು ಮರುಗುತಿರ್ದಳು ಮನದೊಳಗೆ 23 ಹಾಸುವ ವಸ್ತ್ರಗಳಿಲ್ಲ ಬೇಸತ್ತು ಅಳಲುವಳೊಮ್ಮೆ 24 ನೋಡಿ ಹಿಗ್ಗುವಳು ಆಲಂಬದಲ್ಲಿರುತಿಹಳು 25 ಕಂಗಳ ಕುಡಿನೋಟವೆಸೆಯೆ ಮಂಗಳಗಾತ್ರದ ಮುದ್ದುಬಾಲಕನೆಲ್ಲರಂಗಳ- ದೊಳಗಾಡುತಿಹನು 26 ಪರಪುಟ್ಟನಾದುದ ಕಂಡು ಮಡಿಯ ಪೊದಿಸುವರು 27 ಮಾಗಾಯಿ ಮುರವಿಟ್ಟು ಮನ್ನಿಸಿ ಕೆನೆಮೊಸ- ರೋಗರವನ್ನು ಉಣಿಸುವರು ರಾಗಗಾನದಲಿ ಪಾಡುವರು 28 ಎಣ್ಣೂರಿಗೆಯನು ಕೊಡಿಸುವರು ಕೇರಿ ಕೇರಿಗಳೊಳು ಕೊಡುವರೆಲ್ಲರ ಕಾರುಣ್ಯದ ಕಂದನಾಗಿ29 ತಮ್ಮಾಲಯದೊಳು ಕರೆದೊಯ್ದು ಮಾಲೆಯನವಗೆ ಹಾಕುವರು 30 ಮಾವಿನ ಫಲಗಳನು ಮದನನಯ್ಯನ ಕಿಂಕರಗೆ 31 ಸಾಲಿಗ್ರಾಮ ಶಿಲೆಯ ಅಷ್ಟು ಜನರಿಗೆ ತೋರಿಸಿದ 32 ಪುಣ್ಯೋದಯದಿ ಸಾಲಿಗ್ರಾಮ ಶಿಲೆಯು ಲಕ್ಷ್ಮಿನಾರಾಯಣ ಮೂರುತಿಯ 33 ಕೂಡಿದ ಗೆಳೆಯರ ಕೂಡೆ ದೌಡೆಯೊಳಿಟ್ಟು ಕೊಂಡಿಹನು 34 ಮಂಡೆಗಳನು ತಗ್ಗಿಸುವನು 35 ಬೆಚ್ಚುವನಪಹರಿಸುವರೆನುತ ಬಹು ಎಚ್ಚೆತ್ತು ಪಿಡಿದಾಡುವನು ಬಾಯೊಳಗಿಡುವ 36 ಮಂದಿರದಲಿ ವಿಪ್ರರಿಗೆ ಆ- ಬಂದರು ಬುಧಜನರೆಲ್ಲ 37 ಶ್ರೇಷ್ಠರೆಲ್ಲರ ಕುಳ್ಳಿರಿಸಿ 38 ಮಂತ್ರಾಕ್ಷತೆಯನು ಮಂತ್ರಿಗಿತ್ತು ಲಕ್ಷಣವನ್ನೆ ನೋಡಿದರು 39
--------------
ಹೆಳವನಕಟ್ಟೆ ಗಿರಿಯಮ್ಮ
ಚರಣಕಮಲಯುಗಕೆ ನಮಿಪೆ ನಿರುತವನುದಿನ | ಶ್ರೀ ರಾಘವೇಂದ್ರ ಪ ಕರುಣಾಸಾಂದ್ರ ಯತಿಕುಲೇಂದ್ರ ಅ.ಪ ವೇನಮತವಿದಾರ ಸುಂದರ ಜ್ಞಾನದಾತ ಗುರುವರ | ಶ್ರೀನಾಥನ ಪದಪಂಕಜಧ್ಯಾನನಿರತ ಸುಗುಣಭರಿತ 1 ಮಧ್ವಶಾಸ್ತ್ರಪಠಿಸಿ ಬಹುಪ್ರಸಿದ್ಧಟೀಕೆ ರಚಿಸುತ | ಸದ್ವೈಷ್ಣವ ಸಿದ್ಧಾಂತವೇ ಶುದ್ಧವೆನಿಸಿ ಮೆರೆದ ಧೀರಾ 2 ನರಹರಿ ಸಿರಿರಾಮಕೃಷ್ಣ ವರವೇದವ್ಯಾಸರು | ಇರುತಿರುವರು ನಿನ್ನೊಳು ತವ ಪರಿಜನ ಸೇವೆಗಳ ಕೊಳುತ3 ವಾರಾಹಿ ಸುಕ್ಷೇತ್ರನಿಲಯ ಚಾರುಚರಿತ ಗುಣಮಯ | ಆರಾಧಿಪ ದೀನಾಳಿಗೆ ಸಾರಸೌಖ್ಯವೀವ ಕಾವ 4 ಶ್ರೀಶಕೇಶವಾಂಘ್ರಿದೂತ ದಾಸಜನನುತ | ಲೇಸಾಗಿಹ ಭೂಸುರ ಸಹವಾಸವಿತ್ತು ಕರುಣಿಸಯ್ಯ 5
--------------
ಶ್ರೀಶ ಕೇಶವದಾಸರು
ಚರಣಕೆರಗುವೆ ಕೃಷ್ಣಾ ಪರಿಹರಿಸು ಜನ್ಮವನುಶರಣಜನಬಂಧು ನೀನು ಕೃಷ್ಣಾ ಪಕರುಣನಿಧಿಯಡಿಗೊಮ್ಮೆ ಶಿರವೆರಗಿದವರು ಭವಶರಧಿಯೊಳು ಬೀಳರೆಂದೂ ಕೃಷ್ಣಾ ಅ.ಪಹಲವು ದೇಹಂಗಳಲಿ ಮಾಡಿದಘ ವೃಂದಗಳುಬಲವಂದಡವಕೆ ಲಯವು ಕೃಷ್ಣಾಜಲಜಸಂಭವ ತೊಡಗಿ ಶಲಭಾಂಕದೊಳಗೊಂದನುಳಿಯದೇ ಪ್ರಾಣಿಗಳಲಿ ಕೃಷ್ಣಾತೊಳಲಿ ಬಂದೆನು ನೀನು ನಿರ್ಮಿಸಿದ ಪರಿಯಲ್ಲಿತೊಲಗಿಸಿನ್ನೀ ಭವವನು ಕೃಷ್ಣಾನಳಿನಾಕ್ಷ ನಿನ್ನ ಪ್ರಾದಕ್ಷಿಣವು ಬಳಿಕಾಯ್ತುನಿಲಿಸೆನ್ನ ನಿನ್ನಡಿಯೊಳು ಕೃಷ್ಣಾ 1ಜನನ ಜನನಗಳಲ್ಲಿ ಕಿವಿಮುಚ್ಚಿ ತಲೆವಾಗಿನಿನಗೆರಗಿದವನಾದೆನು ಕೃಷ್ಣಾಗಣನೆುಲ್ಲದ ಜನ್ಮಗಳಲಿನಿತು ನಮಿಸಿದರೆಗಣನೆಗೊಳದಿಪ್ಪುದೇನು ಕೃಷ್ಣಾಅಣು ಮಾತ್ರದವನಾಗಿ ಘನತರದವಿದ್ಯೆಯಲಿಮನಮುಳುಗಿ ಬಹು ನೊಂದೆನೋ ಕೃಷ್ಣಾಯೆಣಿಸದಪರಾಧ ಕೋಟಿಗಳ ಭವ ಭೀತನನುಅನುಪಮನೆ ಕೊಡು ಗತಿಯನು ಕೃಷ್ಣಾ 2ಮರೆಯೊಕ್ಕವರ ಕಾಯ್ವ ಬಿರಿದು ನಿನ್ನದು ದೇವಮರೆಯೊಕ್ಕೆನೆಂದೆನೀಗ ಕೃಷ್ಣಾಮರಳಿ ನುಡಿವರೆ ಗುಣಗಳಡಿಮೆಟ್ಟುತಿವೆ ಬೇಗಸ್ಮರಣೆದೊರಕೊಳ್ಳದಾಗ ಕೃಷ್ಣಾಸೆರೆಯವನ ಬಂಧುಗಳು ಬಿಡಿಸುವರು ಕಂಡಾಗಸೆರೆಯವನಿಗುಂಟೆ ಯೋಗ ಕೃಷ್ಣಾತಿರುಪತಿವಿಹಾರಿ ದುರಿತಾರಿ ವೆಂಕಟರಮಣಕರವಿಡಿಯೆ ಸದ್ಗತಿ ಸರಾಗ ಕೃಷ್ಣಾ 3ಓಂ ವಿದುರಾಕ್ರೂರಾಯ ನಮಃ
--------------
ತಿಮ್ಮಪ್ಪದಾಸರು
ಚರಣಯುಗವ ತೋರೋ ಪ ಶರಣರ ಪೊರೆಯುವ ಕರುಣಿಗಳರಸನೆ ನಿರುತವು ನಿನ್ನನೆ ನೆರೆನಂಬಿದೆ ಹರಿ ಅ.ಪ ದಿಕ್ಕು ನೀನೆ ಎಂದು ನಂಬಿದೆನಕ್ಕರಿಂದ ಬಂದು ತಕ್ಕುದೇನು ಘನ ರಕ್ಕಸವೈರಿಯೆ 1 ಇಷ್ಟದೇವನಾರೋ ಮನಸಾಭೀಷ್ಟವ ಕೊಡುಬಾರೋ ಕೃಷ್ಣಮೂರ್ತಿ ನೀಂ ದೃಷ್ಟಿಸು ನಮ್ಮನು2 ಕೇಣವ್ಯಾಕೋ ಹರಿಯೆ ಕಣ್ಣಲಿ ಕಾಣು ಬಾರೋ ದೊರೆಯೇ ಕಾಣೆನಿನಗೆ ಸರಿ ಜಾಣತನದಿ ಹರಿ 3 ವಾರಿಧಿಕೃತಶಯನ ವಿಕಸಿತ ವಾರಿಜದಳನಯನ ಕ್ಷೀರದೊಳದ್ದುನೀ ನೀರೊಳಗದ್ದು ಕಂ ಸಾರಿ ನಿನ್ನನೆ ಸಾರಿದೆ ನರಹರಿ 4 ಧರೆಯೊಳಧಿಕವಾದ ಶ್ರೀ ಪುಲಿಗಿರಿಯೊಳು ನೆಲೆಯಾದ ವರದವಿಠಲ ದೊರೆ ದಯಾನಿಧೆ 5
--------------
ವೆಂಕಟವರದಾರ್ಯರು
ಚರಣವ ತೋರೈ ಚಲುವರಸನೇ ಚರಣವ ತೋರೈ ಪ ಸ್ಮರಣೆಮಾತ್ರದಲಿ ಮುಕುತಿಯ ಕೊಡುವ ಚರಣವ ತೋರೈ ಅ.ಪ ರಮ್ಮೆಯ ಮನಕೆ ಬೆಡಗು ತೋರುವ ಚರಣ ಬೊಮ್ಮಾದಿಗಳ ಮನಕೆ ನಿಲುಕದ ಚರಣವ ತೋರೈ ಚಿಮ್ಮಿ ರಾವಣನ ಬಲು ದೂರಗೈದ ಚರಣವ ತೋರೈ ಘಮ್ಮನೆ ಮೊಸರು ಮೆದ್ದು ಓಡುವ ಚರಣ ತೋರೈ 1 ಗೋಕುಲ ಭೂಮಿಯ ಪಾವನ ಮಾಡಿದ ಚರಣವ ತೋರೈ ಲೋಕವನೆಲ್ಲಾ ಅಡಗಿಸಿಕೊಂಡಾ ಚರಣವ ತೋರೈ ಬೇಕೆಂದು ಕುಬುಜಿಯ ಮನೆಗೆ ಪೋದ ಚರಣವ ತೋರೈ ಭವಾಬ್ಧಿ ಬತ್ತಿಸಿ ಬಿಡುವಾ ಚರಣವ ತೋರೈ 2 ಬಿಡದಲೆ ಸರ್ವಜ್ಞತೀರ್ಥರಿಗೊಲಿದಾ ಚರಣವ ತೋರೈ ಬಡವರಾಧಾರ ದಿವ್ಯಭೂಷಣವಿಟ್ಟು ಚರಣವ ತೋರೈ ಕಡು ಮುದ್ದು ಸಿರಿಕೃಷ್ಣ ವಿಜಯವಿಠ್ಠಲ ನಿನ್ನ ಚರಣವ ತೋರೈ ಪೂಜೆಯಗೊಂಬ ಚರಣವ ತೋರೈ3
--------------
ವಿಜಯದಾಸ
ಚರಣವ ನರ್ಚಿಸುವೆ ಹರಿ ನಿನ್ನ ಮರೆಯದೆ ಕೀರ್ತಿಸುವೆ ನೀನೆ ಎನ್ನರಸ ರಕ್ಷಿಸು ಎಂದು ಪ ರಕ್ಷಿಸು ಎಂದು 1 ಸುಗುಣಂಬರೀಶ ಭೂಪಗೆ ಕೊಡಲಾಕ್ಷಣ ಗಮನ ಚನ್ನಿಗನೆ ರಕ್ಷಿಸು ಎಂದು 2 ಮುಳಿದು ಗಜವ ನೆಗಳೆಳೆಯಲು ಭಯದಲಿ ನಳಿನಾಕ್ಷ ನಿನಗೆ ದೂರಲು ಬೇಗದಲಿ ಸಾರಿ ಸುಲಲಿತ ಮಹಿಮನೆಗಳ ಸೀಳಿ ಕರಿಯನು ಸಲಹಿದೆ ದೇವ ಗೋವಳನೆ ರಕ್ಷಿಸು ಎಂದು 3 ಬೇಗದಲಿ ಕಂಬದಿಬಂದು ಸದೆದು ದಾನವನ ದಾಯದಲಿ ಕಾಯ್ದು ಪದುಮಾಕ್ಷ ನರಹರಿ ಮುದದಿ ರಕ್ಷಿಸು ಎಂದು 4 ದುರುಳ ದುಶ್ಯಾಸನ ಭೂವರ ಪಾಂಡು ತನುಜರ ಅರಸಿಯ ಸೀರೆಯ ಭರದಿ ಸೆಳೆಯಲಾಗ ಮೊರೆಯಿಡಲಕ್ಷಯ ವರವನಿತ್ತು ಸಲಹಿದ ಹರಿ ಸುತ ಕೋಣೆಯ ಲಕ್ಷ್ಮೀಶ ರಕ್ಷಿಸು ಎಂದು 5
--------------
ಕವಿ ಪರಮದೇವದಾಸರು
ಚರಣವದೋರಿ ಸಲಹೋ ಮುರಾರಿ | ಧರಿಯೊಳು ಸಾರಿದವರ ಸಹಕಾರಿ ಪ ಸುರಧೇನು ನೀನು | ಕರೆದುಂಬೆ ನಾನು | ಸುರತರು ನೀನು | ಆಶ್ರಯಿಸುವೆ ನಾನು 1 ಸುರಮಣಿ ನೀನು | ಅರ್ಥಾರ್ಥಿ ನಾನು | ದೊರೆಯನ್ನ ನೀನು | ಸುಖಿಸುವೆ ನಾನು 2 ಗುರುಮಹಿಪತಿ ಪ್ರಭು | ಪರದೈವ ನೀನು |
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಚರಣವನೀಗ ಹೊಂದಬೇಡ ಕೇಡಿಗಗುರುವಿನ ಚರಣವನೀಗ ಹೊಂದಬೇಡ ಪ ಜಾರಣ ಮಾರಣ ಬೋಧಿಸಿ ಗುರುವಜೀವನ ನೀಗಲೆ ತಿನ್ನುವ ಗುರುವಕಾರಣಿಕವನೆ ನುಡಿಯುವ ಗುರುವಕಾಮಿತವನೆ ಹೇಳುವ ಗುರುವ ಕೇಡಿಗ ಗುರುವ 1 ಮಹಿಮೆ ಗಿಹಿಮೆ ತೋರುವ ಗುರುವಮರಳಿ ಜನ್ಮಕೆ ತರುವ ಗುರುವದಹಿಸಿ ಮನೆಯ ಹೋಹ ಗುರುವದಂಡಣೆಯ ಗುರುವ ಕೇಡಿಗ ಗುರುವ 2 ಹರಿದು ತಿನ್ನುವ ಮೋಸದ ಗುರುವಬರಕತವಿಲ್ಲದ ಗುರುವಕರಕೊಳ್ಳುತಲಿರುವ ಕರ್ಮಿತಾಗುರುವ ಕೇಡಿಗ ಗುರುವ 3 ಶಾಂತಿ ಶಮೆ ದಮೆಗಳು ದೊರಕದ ಗುರುವಸೈರಣೆ ಎಂದಿಗು ನಿಲುಕದ ಗುರುವಕರುಣೆಯ ತಾತೋರದ ಗುರುವ ದಯವಿಲ್ಲದಗುರುವ ಕೇಡಿಗ ಗುರುವ4 ಆಸೆಯನು ಬಿಡದಿಹ ಗುರುವಅಂಗದ ಹಸಿವನು ತಿಳಿಯದ ಗುರುವಬಾಸ ಚಿದಾನಂದನ ನರಿಯದ ಗುರುವಬ್ರಹ್ಮನಾಗದ ಕೇಡಿಗ ಗುರುವ 5
--------------
ಚಿದಾನಂದ ಅವಧೂತರು