ಒಟ್ಟು 1575 ಕಡೆಗಳಲ್ಲಿ , 108 ದಾಸರು , 1290 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾರು ಇಕ್ಕುವರೆಂದು ಹಾರೈಸುವೈ ಆತ್ಮ ಸೋರುತಿದೆ ಮನೆಯೆಲ್ಲ ನಾರುತಿದೆ ಸ್ಥಳವು ಪ ಒಲೆಯೊಳಗೆ ಉರಿಯಿಲ್ಲ ಜಲವಿಲ್ಲ ಬಾವಿಯೊಳು ಕಲಹ ಮಾಳ್ಪಳು ತನ್ನ ಕುಲವನಿತೆಯು ಹೊಲುಬುದಪ್ಪಿಯೆ ಇಲ್ಲಿ ಬರಬಹುದೆ ನೀನೀಗ ಫಲವುಳ್ಳ ಮನೆಗಳನು ಸೇರೆಲವೊ ಆತ್ಮ 1 ಬಾಗಿಲಿಲ್ಲದ ಮನೆಯು ಬಹಳ ಕಗ್ಗತ್ತಲೆಯು ಕೂಗುವುದು ಹುಲಿ ಕರಡಿ ಇದಿರಿನೊಳಗೆ ಬೇಗದೊಳು ಇಲ್ಲಿಂದ ಸಾಗುವುದೆ ಸೌಖ್ಯಗಳು ನಾಗಶಯನನ ಗುಡಿಯ ಸೇರೆಲವೊ ಆತ್ಮ 2 ಒಟ್ಟೆಗಡಿಗೆಯ ಒಳಗೆ ಇಟ್ಟಿರ್ದ ಬುತ್ತಿಗಳು ಕೆಟ್ಟ ಕ್ರಿಮಿಗಳು ಬಂದು ಬಹಳ ಹಳಸಿದವು ಬಟ್ಟಲಿಡುವವರಿಲ್ಲ ಮುಟ್ಟಿ ಬಳಸುವರಿಲ್ಲ ಹೊಟ್ಟೆ ತುಂಬುವುದುಂಟೆ ದುಷ್ಟರೊಳು ಆತ್ಮ 3 ಹಾಳು ಮನೆಯನು ನಿನಗೆ ತೋರಿಕೊಟ್ಟವರಾರು ಬೀಳುವುದು ಮೇಲೆ ಹದಿನಾರು ಭಿತ್ತಿಗಳು ಏಳು ಇಲ್ಲಿರಬೇಡ ಕಾಳಸರ್ಪನು ಬಂದು ಕಾಲ ಕಚ್ಚ್ಚುವನಲ್ಲೊ ಎಲೆ ದುಷ್ಟ ಆತ್ಮ 4 ಮೂರು ಮಾತನು ಮೇಲೆ ಯಾರ ಕೂಡಾಡಿದೆಯೊ ಆರು ಪಥದಲಿ ನೀನು ಮೀರಿ ನಡೆದೆ ಕೇರಿಯಾಗಿರ್ದ ಹದಿನೆಂಟು ಅಂಗಡಿಯೊಳಗೆ ಆರ ವ್ಯಾಪಾರವನು ಕೇಳಿದೈ ಆತ್ಮ 5 ಹತ್ತು ತಾಸಿನ ಮೇಲೆ ತುತ್ತು ಕೊಡುವವರಾರು ಬತ್ತುವುದು ಕೈಕಾಲು ಬಳಲಿಕೆಯೊಳು ಮತ್ತೇಳು ಮಂದಿ ತಾವತ್ತತ್ತ ಸಾರುವರು ಕರ್ತುಗಳ ನಾ ಕಾಣೆ ನೀ ಕೇಳೊ ಆತ್ಮ 6 ಎಂಟು ಮಂದಿಯು ತನಗೆ ನೆಂಟರೆಂಬಾಶೆಯೊಳು ಗಂಟ ಕಟ್ಟಿಯೆ ಮನದಿ ಮರುಗುತಿರಲು ಗಂಟಲೊಣಗಿಯೆ ವಾಯು ಕಂಠದೊಳು ಪೋಪಾಗ ನಂಟರನು ನಾ ಕಾಣೆ ಆಲಿಸೈ ಆತ್ಮ 7 ಆಯವಿಲ್ಲದ ಮನೆಯು ಛಾಯೆ ಇಲ್ಲದ ಮಡದಿ ದಾಯವಿಲ್ಲದ ಊರು ಕರಕಷ್ಟವು ಬಾಯ ಹೊಯ್ಯೆಂಬರೊಳು ನ್ಯಾಯ ಸೇರುವುದೆ ಉ- ಪಾಯದಲಿ ಸಾರೆಲೆವೊ ಸಾರಿದೆನು ಆತ್ಮ 8 ಮೂಡಗಿರಿವಾಸನೊಳು ಬೇಡಿಕೊಂಡರೆ ನಿನಗೆ ನೀಡುವನು ಧರ್ಮವನು ಧೈರ್ಯನಾಗಿ ಬೀಡುಬಿಟ್ಟಲ್ಲಿಂದ ಓಡುವುದು ಸುಖದೊಳಗೆ ಕೂಡುವುದು ವರಾಹತಿಮ್ಮಪ್ಪನೊಳು ಆತ್ಮ 9
--------------
ವರಹತಿಮ್ಮಪ್ಪ
ಯಾರು ಬಲ್ಲರು ವೆಂಕಟೇಶ ನಿನ್ನೊಳಿಹ ಚಾರು ಗುಣಶೀಲವೆಂಬ ವಾರಿಧಿಯ ಚಿಪ್ಪಿನೊಳು ಮೊಗೆದು ಬತ್ತಿಸುವಂಥ ವೀರನಾವನು ಜಗದೊಳು ಪ ಹದಿನಾಲ್ಕು ಲೋಕವನ್ನು, ನೀ ನಿನ್ನ ಉದರದೊಳಗಿರಿಸಿಕೊಂಡು ಉದಧಿಮಯವಾಗಿರ್ದ ಕಾಲದೊಳು ನಿನಗೊಂದು ಉದುರಿದೆಲೆಯೊಳು ನಿದ್ರೆಯಂತೆ 1 ಮಾಯೆ ಕಮಲಾಕರದೊಳು, ನಿನ್ನುದರ- ದಾಯತದಿ ತೋರಿ ನಿಲಲು ಮೋಹಿಸಲು ಆ ಕ್ಷಣದಿ ಕಾಯವಾಗಲು ಮೇಲೆ ಬಾಯಿ ನಾಲ್ಕಾಯಿತಂತೆ 2 ಅಲ್ಲಿ ತೋರಿದ ಸೊಲ್ಲನು, ಖಳನೋರ್ವ ನೆಲ್ಲವನು ಸೂರೆಗೊಳಲು ಮಲ್ಲನಾಗಿಯೆ ಜಲದಿ ಘಲ್ಲಿಸಿಯೆ ದೈತ್ಯನನು ಚೆಲ್ವಸಾರವ ಸೆಳೆದೆಯಂತೆ 3 ಅದರ ಆಧಾರದಿಂದ, ಸನಕಾದಿ- ಗುದಯವಾದುದುಯೆಲ್ಲವೂ ಮೊದಲ ಕಾಣದೆ ವೃಕ್ಷವದುರಿ ಬಿದ್ದುದ ನೋಡಿ ತುದಿಯೊಳಗೆ ಕದನವಂತೆ 4 ಒಳ ಹೊರಗೆ ನೀನೊಬ್ಬನೆ, ಹೊಳೆ ಹೊಳೆದು ಸುಳಿವ ಪರಿಯನು ಕಾಣದೆ ಮಲತಾಯಿ ಮಗನೊಳಗೆ ಕಲಹವಿಕ್ಕುವ ತೆರದಿ ಹೊಲಬುದಪ್ಪಿಯೆ ನಡೆವರಂತೆ 5 ಒಂದಿದರಿಂದೆರಡಾದುದು, ಮೂರಾಗಿ ಬಂದು ಇದಿರೊಳು ನಿಂದುದು ಒಂದು ಮಾತಿನೊಳೆರಡು ಸಂದೇಹಗಳ ತೋರಿ ಮಂದ ಬುದ್ಧಿಯ ಕೊಡುವೆಯಂತೆ 6 ಜಡವಾದ ಅಡವಿಯನ್ನು ಸಂಚರಿಸಿ ಒಡಲ ಹೊರೆವುದು ಕಡೆಯೊಳು ಎಡೆಯೊಳೊಪ್ಪಿಸಿ ಕೊಡುವಿಯಂತೆ 7 ನಂಬಿ ಬಂದವರ ನೀನು, ಮನದೊಳಗೆ ಹಂಬಲಿಸಿಕೊಂಡಿರುತಲೆ ಇಂಬಾಗಿ ಇಹಪರದಿ ಉಂಬ ಸಂಭ್ರಮವನ್ನು ಸಂಭವಿಸಿ ತೋರ್ಪೆಯಂತೆ 8 ಭೂಮಿಗೆ ವೈಕುಂಠವೆಂದು, ನಿಂತಿರುವ ಸ್ವಾಮಿಯೆನ್ನೆಡೆಗೆ ಬಂದು ಕ್ಷೇಮವನು ವರಾಹತಿಮ್ಮಪ್ಪ ಕರುಣದಿ ಕಾಮಿತಾರ್ಥವನೀಯೊ ಎಮಗೆ 9
--------------
ವರಹತಿಮ್ಮಪ್ಪ
ಯೆಂದು ಪಿಡಿಯುವಿ ಕೈಯ್ಯ ಇಂದಿರೇಶ ಚಲುವ ಕೃಷ್ಣನೆ ಪ ಮುಂದೆ ಹೋಗಲು ಬಂಧಮಾಡುತ ಕುಂದು ಅಳಿಯುತ ತಂದೆ ದಯೆತೊರಿ ಅ.ಪ ಮಂದ ನಾನಯ್ಯ ಕಂದಿ ಕುಂದಿದೆ ಭವದಿ ಕೇಳಯ್ಯ ಬಂಧು ಬಳಗವು ಯಾರು ಇಲ್ಲಯ್ಯ ನಿಂದು ಮುಂದಿನ ದಾರಿ ನಡೆಸಯ್ಯ ಜೀಯಾ ಅಂದು ಸಭೆಯೊಳು ಮಂದಗಮನೆಯ ಒಂದು ನೊಡದೆ ಬಂದು ಸಲಹಿದ ಸಿಂಧು ಶಯನಾನಂದ ಮೂರುತಿ ನಂದನಂದನ ಶ್ಯಾಮಸುಂದರ ಬಂಧು ಸರ್ವರ ಬಂಧಮೋಚಕ ಮಂದರಾದ್ರಿ ಧರನೆ ಯದುಕುಲ ಚಂದ್ರ ಶೋಭಾಸಾಂದ್ರ ಕೃಷ್ಣನೆ ಬಂದು ಚಂದದಿ ಸಲಹಿ ಎನ್ನನು 1 ಬಾಲತನದಲ್ಲಿ ಲೀಲೆಗೋಷ್ಠಿಲಿ ಮೆರೆದೆ ನಾನಲ್ಲಿ ಮೇಲೆ ಯೌವನ ಒಡನೆ ಬಂತಲ್ಲಿ ಲಲನೆ ಕೇಳಿಲಿ ಮುಳುಗಿ ಹೋದೆನು ಅಲ್ಲಿ ಮೆಲ್ಲಮೆಲ್ಲನೆ ಮುಪ್ಪು ಬಂತಲ್ಲಿ ಕಾಲಕಳೆದೆನು ಪಗಡೆ ಜೂಜಿನಲಿ ಮಲ್ಲಮರ್ದನ ಮಾತುಲಾಂತಕ ಚಲ್ವಸೂಕರ ಪುಲ್ಲಲೊಚನ ಪುಲ್ಲನಾಭನೆನಲ್ಲ ಸರ್ವರ ಬಿಂಬರೂಪನೆ ಎಲ್ಲ ಕಾಲದಿ ಎಲ್ಲಮಾಡುತ ನಿಲ್ಲದೆಜಗ ಸಾರ ಶ್ರೀ ನಲ್ಲ ನಿನ್ನಯ ಎಲ್ಲ ಬಲ್ಲವರಿಲ್ಲ ಎಲ್ಲಿಯೂ ಬುದ್ಧ ಕಲ್ಕಿಯೆ ಸೊಲ್ಲು ಲಾಲಿಸಿ ಒಲಿದು ಬಂದ ನಾರಸಿಂಹನೆ ಇಲ್ಲ ಸಮರು ಅಧಿಕರೈಯ್ಯ ಪೂರ್ಣದೇವನೆ2 ಮೂರು ತಾಪವ ಹರಿಪ ಬಗೆಯೇನೋ ವೈರಿ ಆರರ ಭರದಿ ತರಿ ನೀನೂ ಮೂರು ಋಣಗಳು ಉಳಿಯೆಗತಿಯೇನು ಮೂರು ಕರ್ಮದಿ ಬಿಡಿಸಿ ಹೊರೆಯನ್ನು ಭಕ್ತಸುರಧೇನು ಸಾರಸಜ್ಜನ ಪ್ರಾಪ್ಯ ಶುಭಗುಣ ಸಾರ ಕರುಣಾ ಪೂರ್ಣವಾರಿಧಿ ಮಾರಜನಕನೇ ಋಷಭಮಹಿದಾಸ ತೋರು ಜ್ಞಾನವ ಬಾದರಾಯಣ ಮೀರಲಾರೆನು ವಿಷಯವಾಸನೆ ಭಾರತೀಶನ ಒಡೆಯ ಕೃಷ್ಣನೆ ಭಾರ ನಿನ್ನದು ಎನ್ನ ಪೊರೆವದು ಮತ್ಸ್ಯ ವಾಮನ ಧೀರ ಧೃವನಾ ಪೊರೆದ ವರದನೆ ಬೀರಿ ಭಕ್ತಿ ಜ್ಞಾನ ವೈರಾಗ್ಯ 3 ಎನ್ನ ಯೋಗ್ಯತೆ ನೋಡಿ ಫಲವೇನು ನಿನ್ನ ಘನತೆ ತೋರಿ ಪೊರೆ ನೀನು ನಿನ್ನ ದಾಸನ ಮಾಡು ಎನ್ನನ್ನು ಅನ್ಯಹಾದಿಯ ಕಾಣೆ ನಾ ನಿನ್ನು ಬೆನ್ನು ಬಿದ್ದೆನು ಇನ್ನೂಮುನ್ನೂ ಮಾಧವ ವಿಶ್ವ ತೈಜಸ ಪ್ರಾಜ್ಞತುರಿಯ ಹಂಸ ವಿಷ್ಣುವೇ ಜ್ಞಾನ ಭೋಧಕ ಸನತ್ಕುಮಾರನೇ ಮೌನಿ ದತ್ತಾತ್ರೇಯ ಹಯಮುಖ ದೀನವತ್ಸಲ ಯಜ್ಞ ಧನ್ವಂತ್ರಿ ಶ್ರೀನಿವಾಸ ರಾಮ ಕಪಿಲನೆ ಜ್ಞಾನ ನಿಧಿ ಮುನಿ ನಾರಾಯಣನೆ ನೀನೆ ಅನಿರುದ್ಧಾದಿ ರೂಪನು ಧ್ಯಾನಗೊಚರ ಶಿಂಶುಮಾರನೆ ಸಾನುಕೂಲದಿ ನೀನೆ ವಲಿಯುತ ಕರ್ಮ ಸಂಚಯ4 ಆದಪೊದ ಮಾತು ಏಕ್ಕಯ್ಯ ಮಧ್ವರಾಯರ ಪ್ರೀಯ ಶೃತಿಗೇಯ ಮೋದದಾಯಕ ಮುಂದೆ ಸಲಹೈಯ್ಯ ಪಾದಪದ್ಮದಿ ಶರಣು ಅಲ್ಲದೆ ಏನು ಮಾಡಲಿ ಜೀಯ ಅಯ್ಯ ತಿದ್ದಿ ಮನವನು ಕದ್ದು ಅಘವನು ಒದ್ದು ಲಿಂಗವ ಶುದ್ಧಜ್ಞಾನದ ಸಾಧು ಜಯಮುನಿ ವಾಯುವಂತರ ಮಾಧವ ಶ್ರೀ ಕೃಷ್ಣವಿಠಲನೆ ಪಾದ ಮಧುಪರ ವೃಂದ ಮಧ್ಯದಿ ವೇದ ಸಮ್ಮತ ಗಾನ ಸುಧೆಯನು ಶುದ್ಧಭಕ್ತಿ ಜ್ಞಾನದೊಡಗೂಡಿ ಮೆದ್ದು ಪಾಡುತ ಕುಣಿವ ಭಾಗ್ಯವ ಮುದ್ದು ಕೃಷ್ಣನೆ ನೀನೆ ಎನಗಿತ್ತು 5
--------------
ಕೃಷ್ಣವಿಠಲದಾಸರು
ಯೇನೆಲವೊ ದೈವಾ ವೈಕುಂಠನಾಥ ನೀ ನಾರಿವೇಷವನು ಧರಿಸಿದ ಬಗೆಯೇನೊ ಪ ದೈತ್ಯರು ಎರಗಿ ದೇವತತಿಗಳು ತಲ್ಲಣಿಸೆ | ಮಿತ್ರಭಾವದಲಿವರು ಕೂಡಲಿಟ್ಟು | ಇತ್ತಂಡದ ನಡುವೆ ಸುಧೆಯ ಬಡಿಸುವೆನೆಂದು | ಮಿತ್ರವೇಷವ ಧರಿಸಿ ಸುರರ ಸಲಹಿದ ಬಗೆಯ 1 ಶಿವಗೆ ವೃಕಾಸುರನು ಬೆಂಬಿಡದೆ ತನ್ನುರಿ | ಕರವ ನೀಡುವೆನೆಂದು ಬರಲಾಗಲು || ಅವನೀಶ ಭವಹರ ಕೇಶವ ನೀನೆ ಗತಿಯೆನಲು | ಯುವತಿ ವೇಷವ ಧರಿಸಿ ಶಿವನ ಸಲಹಿದ ಬಗೆಯಾ 2 ಅಂದು ಮಾಡಿದ ಚರಿತೆ ಭಕ್ತಜನರು ಬಂದು | ಒಂದೊಂದನ ನುಡಿದರನ ಲೀಲೆಂದು | ಇಂದು ಸತಿವೇಷವನು ಧರಿಸಿ ತೋರಿದಿಯೋ ಪು ರಂದರ ದಾಸರಿಗೊಲಿದೆ ವಿಜಯವಿಠಲ ಚಲುವಾ3
--------------
ವಿಜಯದಾಸ
ಯೋಗಿ ವರ್ಯಾ ಪ ಯೋಗಿ ದಶಮತಿ ಬ್ರಾತೃ | ವಂಶ ಸಂಭೂತಾ ಅ.ಪ. ಭಾವಿ ವಾಯ್ದೆನಿಸಿದ್ದು | ಆವಿಪರು ಶೇಷಾದಿದೇವ ಸದ್ವಂದ್ಯರೆನೆ | ಶ್ರೀ ವಾದಿರಾಜಾ |ಆವ ವಂಶಾಬ್ದಿಯಲಿ | ದಿವ್ಯ ಸೋಮನು ಎನಿಸಿ |ದೈವ ವಿಭವದಿ ಮೆರೆವ | ವಿಶ್ವೋತ್ತಮಾಖ್ಯಾ 1 ವಿಭವ ನಾನೋಡ್ದೆ 2 ಸುಜನ | ವೃಂದದಲಿ ಭೋಧಿಸುತಇಂದಿಲ್ಲಿ ಸಿದ್ದಾರ್ಥಿ | ಸಂದ ಅಯ ನವಮೀ |ಮಂದಿರಕೆ ಬಂದುತವ | ನಂದ ಪದ ಪೂಜಿಸುವಸಂದು ಇತ್ತಿಹ ಗುರೂ | ಗೋವಿಂದ ಭಜಕಾ 3
--------------
ಗುರುಗೋವಿಂದವಿಠಲರು
ರಕ್ಷಿಸೋ ಶ್ರೀ ವೇದವ್ಯಾಸ | ಬದರಿನಿವಾಸ | ಆಶ್ರಿತ ಜನತೋಷ ಪ ಭೃತ್ಯ ಮತ್ಸ್ಯ | ವ್ಯಕ್ತನಾದನು ಹರಿ ಅವ್ಯಕ್ತ | ಕರೆಸಿದ ಸತ್ಯ | ವತಿಯಸುತ ಗೋಪ್ತ 1 ಕಾಲ ತಾಪ | ಬಟ್ಟರು ಜನ ಪ್ರಲಾಪ |ಶ್ರೀಪತಿ ತಾಳ್ದನು ರೂಪ | ವ್ಯಾಸ ರೂಪ | ದೋಷ ನಿರ್ಲೇಪ |ದ್ವೀಪದೊಳುದಿಸಿತೀರೂಪ | ಯಮುನಾ ಸಮೀಪ | ಪರಾಶರ ಜನೆನಿಪ 2 ಸೂತ್ರ ದಾತ | ಎನ್ನೊಳು ಪ್ರೀತ | ನಾಗು ಭಕ್ತಿ ಪ್ರದಾತ 3 ಜನಿತ | ಸಕಲ ಭಸ್ಮೀಭೂತ 4 ಭೋಗಾದಿಂ ಪ್ರಾರಬ್ಧ ಪೋಗಾಡಿದಂಥ | ಕಾರ್ಯಾಖ್ಯ ಬ್ರಹ್ಮಪ್ರಾಪ್ತ |ಯೋಗೀಜನ ಪ್ರಳಯೇಪಿ ಅಜನ ಪ್ರಾಪ್ತ | ಇತ್ಯಾದ್ಯವಸ್ಥಾದಿಯೊಳ್ಗತ |ಮಾರ್ಗಗಳು ಶೇಷ ಗರುಡಾದಿಯೋಳ್ಗತ | ಈ ಪರೀಯಿಂ ಸಮಸ್ತ |ಯೋಗೀ ಜನಂಗಳಿಗೆ ಆ ಅಜಸಮೇತ | ವಿರಜಾ ಸ್ನಾನ ಪ್ರಾಪ್ತ ||ಸ್ನಾನದಿಂದಲಿ ಲಿಂಗನಾಶ | ಮಾಡುವೆ ಶ್ರೀಶ | ಆದರವರು ನಿರ್ದೋಷ |ಅನಂತರ್ಹರಿ ಉದರ ಪ್ರವೇಶ | ಕೆಲವರು ಶ್ರೀಶ | ಆನಂದವೇ ವಪುಷ |ಜ್ಞಾನಿ ಇನ್ನಿತರರು ತದ್ದೇಶ | ದಲ್ಲಿವಾಸ | ಆನಂದಾನನುಭವ ಶ್ರೀಶ |ನಾನಾ ಪರಿಯೋಗ್ಯರ ಶ್ರೀಶ | ಪ್ರಳಯದಲ್ಲೀಶ | ಧರಿಸುವಸರ್ವೇಶ 5 ಪರಿ ಕಾರಣಂಗಳಿಂದ ನಿನ್ನ | ಇಚ್ಚಾಖ್ಯ ಆವರಣವಪಸಾರಿಸೀ |ತುಷ್ಟೀಯಿಂದಲಿ ಸ್ವಸ್ತಯೋಗ್ಯಸುಖವ | ಅಭಿವ್ಯಕ್ತಿಂಗಳಂ ಗೈಯ್ಯುವಾ |ಲಕ್ಷ್ಣ ಮುಕ್ತಿದ ಮಾಯೆ ಪತಿಯು ಆದ | ಶ್ರೀವಾಸುದೇವನ ದರ್ಶನ ||ವಾಸುದೇವನ ಕಂಡನಂತರ | ಮತಿವಂತರ | ಪೊಗಿಸುವಾಗಾರ |ಶ್ರೀಸಿತ ದ್ವೀಪಾದಿ ಆಗಾರ | ವರ ಮಂದಿರ | ವೈಕುಂಠಾಗಾರ | ಲೇಸಾಗಿ ಸ್ವಯೋಗ್ಯ ಸುಖಸಾರ | ಅತಿಪರತರ | ಅನುಭವಿಪ ವಿಸ್ತಾರ | ಆಶಾಮಾತ್ರದಿ ಸರ್ವ ಸುಖಸಾರ | ಸೃಷ್ಟ್ಯಾದಿ ಇತರ | ಇತ್ತು ತೋಷಿಪೆ ಅವರ 6 ಚಾರು ಕೌಪೀನ ಮದನ ದರ ಪೋಲ್ವಧದನ | ತುಳಸಿಯ ವನ | ಮಾಲೆಗಳ್ಹಸನ |ನಂದನಂದನ ನಿನ್ನ ಕರುಣ | ಗುಣಾಭರಣ | ತೊಡಿಸಯ್ಯ ಪ್ರಧನ 6 ಪ್ರೀಯಾ ಪ್ರೀಯ ಸರ್ವ ವಿಷಯಕೆಲ್ಲ | ನೀನೇ ಮೂಲನೆಂದು ತಿಳಿಸೋ |ಕಾಯಾ ವಾಚಕ ಮಾನಸೀಕ ಸರ್ವಾ | ಕರ್ಮಾದಿಗಳೆಲ್ಲವಾ ||ಜೀಯಾ ನಿನ್ನಯ ಚರಣಕಿತ್ತು ನಮಿಪ | ಬಿಂಬಕ್ರಿಯಾಜ್ಞಾನವಾ ||ರಾಯಾ ನೀನೆನಗಿತ್ತು ಪಾಲಿಸಯ್ಯ ಮುದದೀ | ನಿನ್ನನ್ನು ನಾ ಬೇಡುವೆ ||ತುತಿಪ ಜನರ ಸುರಧೇನು | ಕಾಮಿತವನೆ | ಕರುಣಿಪ ಕಲ್ಪದ್ರುಮನೆ |ಮತಿಗೆಟ್ಟ ಮನುಜನು ನಾನೆ | ನಿನ್ನ ಪಾದವನೆ | ನಂಬಿ ಬಂದಿಹೆ ನಾನೇ |ಹಿತದಿಂದ ನೀನೆನ್ನ ಕರವನೆ | ಪಿಡಿ ಎಂಬೆನೆ | ನಾ ಬೇಡುವೆ ನಿದನೆ |ಅತುಳ ಮಹಿಮ ಜಗದೀಶನೆ | ಮಧ್ವೇಶನೆ | ಗುರು ಗೋವಿಂದ ವಿಠಲನೆ 8
--------------
ಗುರುಗೋವಿಂದವಿಠಲರು
ರಂಗ ಬಂದಾ ನಮ್ಮ ಭಂಗಿಸಿ ಕಾಳಿಯ ಫಣಿಯಲಿಂದು ಪ ವಿಷಧರನುರಿಯಿಂದ ನಿಸಿದಿನಿ ಕುದಿಯುತಿಹ | ವಿಷಮಡುವನೆ ಪೊಕ್ಕು ಕುಶಲದಿಂದಲಿ ರಂಗ ಬಂದಾ 1 ಉರಗೇಂದ್ರ ಬಂದನದಿ ಶರೀರ ಬೆಳಿಸಿ ತನ್ನ | ಬಿರಿವಂತವನತನು ಹರಿಸಿ ಮದವಾ2 ನೂರೊಂದು ಹೆಡೆಗಳ ಚರಣದಲೊತ್ತಿ ತುಳಿದು | ಸುರರಾ ಗೀತದಿ ನೃತ್ಯ ಚರಿತವ ದೋರಿ 3 ಸತಿಯರ ಮೊರೆಕೇಳಿ ಪತಿದಾನವನೆ ಕೊಟ್ಟು | ಕ್ಷಿತಿಯೊಳು ಗೋಕುಲದುನ್ನತ ಭಾಗ್ಯದಲಿ 4 ತಂದೆ ಮಹಿಪತಿ ನಂದನ ಪ್ರಭು ಸ್ವಾ | ನಂದವ ಸುರನರ ವೃಂದಕ ಬೀರಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ರಂಗ ಬಾರೋ ರಂಗಯ್ಯ ಬಾರೋ - ನೀ ಪ ಬಾರದಿದ್ದರೆ ಎನ್ನ ಪ್ರಾಣ ಉಳಿಯದು ಅ ಅತ್ತಿಗೆ ಮೈದುನ ಬಾರೊ ಅತ್ತೆಯ ಮಗಳ ಗಂಡಅತ್ತಿಗೆ ಮೇಲತ್ತಿಗೆ ನಾದಿನಿ ಸೊಸೆಯ ಗಂಡ1 ಮಾವನ ಅಳಿಯನೆ ಬಾರೊ ಮಾವನ ಬೀಗನ ತನುಜಮಾವನ ಮಡದಿಯ ಮಗಳ ತಂಗಿಯ ಗಂಡ 2 ಅಂಬುಧಿ ಶಯನನೆ ಬಾರೊ ಆದಿ ವಸ್ತುವೆ ರಂಗಕಂಬದೊಳು ನೆಲಸಿದ ಆದಿಕೇಶವರಾಯ 3
--------------
ಕನಕದಾಸ
ರಂಗನಂಘ್ರಿಯಂಗುಷ್ಠೆ ಸಂಗೆ ಭವಭಂಗೆ ಪ ಉಪೇಂದ್ರ ಭಗವಂತ ಪಟುರೂಪ ಧರಿಸಿ ಚಂದ್ರಮಂಡಲ ಮೀರಿ ಬೆಳದಜಾಂಡವನೊಡಿಯೆ ಸಾಂದ್ರಗುಣದಿಂದ ಉದ್ಭವಿಸಿದೆ ಜನನಿ 1 ಕಮಲವನು ತೊಳಿಯಲಾವೇಗದಿಂದ ವಿಮಲಗತಿಯಲಿ ಬಂದು ಮಂದಾಕಿನಿ ಎನಿಸಿ ಸುಮನ ಸಾವನಿಯಲ್ಲಿ ಪರಿದೆ ಸ್ವರ್ಣನದಿಯೇ2 ಧ್ರುವಲೋಕಕಿಳಿದು ಅಮರಾಲಯವ ಸಾರಿದೆ ತವಕದಿಂದಲಿ ಧುಮುಕಿ ಚತುರಭಾಗವಾದೆ ಭವ ಪರಿಹರಿಸಿ ಭಾಗೀರಥಿ ಎನಿಸಿದೆ 3 ಭವದೊರೆ ಭಗೀರಥಗೆ ಒಲಿದು ಬರುತ ಜವನ ಮನಿಯ ಕೊಡ ಮಣಿಕರ್ಣಿಕೆ ನೆರದೆ4 ಅಳಕನಂದನೆ ನಿನ್ನ ಸ್ಮರಣೆ ಮಾಡಿದ ಜನಕೆ ಕುಲಕೋಟಿ ಉದ್ಧಾರ ನಿಃಸಂದೇಹಾ ಮಜ್ಜನ ಪೊಳೆವ ವೈಕುಂಠಪುರ ಅವನ ಹೃದಯದಲಿ5 ಕುಲಪ್ರವಹವಾಗಿದ್ದ ಜೀವರ ಪುಣ್ಯವನು ಹೇಳಿ ಕೇಳುವವನಾರು ಮೂಲೋಕದಿ ಸೀಲಗುಣ ಸಂಪನ್ನೆ ವರುಣನರ್ಧಾಂಗಿನಿ ಕಾಲ ಕಾಲಕೆ ನಿನ್ನ ಧ್ಯಾನದಿಂದಲ್ಲಿರಿಸು 6 ದೇಶದೇಶದಲಿಂದ ಬಂದ ಸುಜನರ ಪಾಪ ಮಾಧವ ಚಲುವ ಶ್ರೀನಿವಾಸ ಯದುಪತಿ ವಿಜಯವಿಠ್ಠಲನ ಸುತೆ ಖ್ಯಾತೇ 7
--------------
ವಿಜಯದಾಸ
ರಂಗನಾಥ ಮಾಂ ಗಂಗಾಜನಕ ತುಂಗ ಮಹಿಮ ಮಂಗಳಾಂಗ ಪಾಹಿ ಪ ತಿಂಗಳ ತೇಜದಲಿ ಪೊಳೆಯುತ ಕಂಗೊಳಿಸುವ ಮುಕುಟ ಮಂಡಿತ ಬಂಗಾರದಾಭರಣ ಭೂಷಿತ ಶೃಂಗಾರದಿ ರಥವನೇರುತ ಮಂಗಳ ವಾದ್ಯಂಗಳುಲಿಯೆ ರಂಗನಾಥ ಪ್ರತಿವರ್ಷದಿ ತುಂಗಛತ್ರ ಚಾಮರ ವ್ಯಜ- ನಂಗಳ ವಿಭವದಿ ಬರುತಿರೆ ಕಂಗಳಿಂದ ನೋಳ್ಪ ಭಕ್ತ ಜಂಗುಳಿ ಪಾಲಿಸಲೋಸುಗ ಮಂಗಳಸಿರಿ ಜಾಲಹಳ್ಳಿ ಪುರನಿಲಯ ಪೊರೆ ಎನ್ನ1 ಹಿಂದಕೆ ಮುದಗಲ್ಲು ಪುರದಿ ಬಂದಿಹ ಉಪ್ಪಾರ ಜನದಿ ಬಂದು ಗೋಣಿಯೊಳಗೆ ಮುದದಿ ನಿಂದಿಯೊ ಪದಮೆಟ್ಟೆ ಬೆಟ್ಟದಿ ಅಂದಿನ ರಾತಿಯ ಸ್ವಪ್ನದಿ ಸಂದರ್ಶನವಿತ್ತು ಪುರದಿ ಮಂದಿರಕಾರ್ಯವ ಸೂಚಿಸ- ಲಂದು ರಾಯಗೌಡನಿಂದ ಬಂಧುರದಲಿ ನಿರ್ಮಿತ ಆ- ನಂದನಿಲಯ ಮಂದಿರ ಮು ಕುಂದನಂದ ಕಂದನೆ ಮದ್ ಹೃದಯದಲಿ ಸದಾತೋರೋ2 ವಾರಿಚರ ಮಂದರಧರ ಭೂ ಚೋರಮಥನ ಘೋರರೂಪನೆ ಚಾರು ಬ್ರಹ್ಮಚಾರಿ ವಾಮನ ಶೂರ ಪರಶುರಾಮನೆ ನಮೊ ಧಾರುಣಿ ಜಾವಲ್ಲಭ ಕಂ- ಸಾರಿ ವಸನದೂರನೆ ಹಯ ವೇರಿ ದುಷ್ಟ ದಿತಿಜರ ಭಯ ದೂರ ಮಾಡಿ ಕಾವದೇವ ಧಾರುಣಿಸುರ ಪರಿಪಾಲಕ ವಾರಿಜಭವ ನುತ ಕಾರ್ಪರಾ- ಗಾರವೀರ ನಾರಸಿಂಹ ನಮಿಸುವೆನು ರಮಾರಮಣ3
--------------
ಕಾರ್ಪರ ನರಹರಿದಾಸರು
ರಂಗನಾಥನ್ನ ಈ ಕಂಗಳಿಂದಲಿ ಕಂಡು ಹಿಂಡು ಪ. ಮಂಗಳಾತ್ಮಕ ದೇವ ಮಮ ಸ್ವಾಮಿ ಸಲಹೆಂದು ಅಂಘ್ರಿಗಳಿಗೆರಗಿ ನುತಿಪೇ ಸ್ತುತಿಪೇ ಅ. ಮಾಂಡವ್ಯರಿಗೆ ವಲಿದು ಶ್ರೀನಿಕೇತನ ದೇವ ಗಂಡಕೀಶಿಲೆ ರೂಪದಲ್ಲಿ ಅಂಡಜವಾಹನನು ಉದ್ಭವಿಸಿ ಸ್ವರ್ಣಾದ್ರಿ ಎಂಬ ಸುಕ್ಷೇತ್ರದಲ್ಲೀ ಹಿಂಡುಭಕ್ತರ ಸೇವೆ ಕೈಯಕೊಳುತ ಬದಿಯಲ್ಲಿ ನಿಂದು ವಿಗ್ರಹ ರೂಪದಲ್ಲೀ ಕಂಡು ಪುಳಕಾಂಕಿತದಿ ಕರುಣ ಮೂರ್ತಿಯ ನುತಿಸಿ ಕೊಂಡಾಡಿ ದಣಿದೆ ನಿಂದೂ ಇಂದೂ 1 ಶಂಖಚಕ್ರಾಂಕಿತದ ಚತುರ್ಭಜವು ಶ್ರೀವತ್ಸ ಪಂಕಜಾಕ್ಷಿಯರುಭಯದಿ ಶಂಕೆಯಿಲ್ಲದ ಭಕ್ತರಿಗೆ ವಲಿವ ಸೌಂದರ್ಯಾ ಲಂಕಾರ ಉಡಿಗೆ ಮುದದಿ ಪಂಕಜಾಸನ ಮುಖ್ಯದಿವಿಜಗಣ ಸೇವಿತನು ಕಿಂಕರರಿಗೊಲಿವ ದಯದೀ ವಂಖಿ ಬಾಪುರಿ ತೋಳು ಕಡಗ ಕಾಲ್ಗೆಜ್ಜೆಗಳು ಕಂಕಣ ಕಿರೀಟ ನಿಟ್ಟಾ ದಿಟ್ಟಾ 2 ಆಗಮವ ಅಜಗಿತ್ತು ಸುರರಿಗಮೃತವಿತ್ತು ಭೂದೇವಿ ಭಯ ಬಿಡಿಸಿದಾ ಬೇಗ ಕಂಬದಿ ಬಂದು ಮಗುವ ರಕ್ಷಿಸಿ ಬಲಿಯ ಯಾಗದಲ್ಲಿ ಭೂ ಬೇಡಿದಾ ನೀಗಿ ಕ್ಷತ್ರಿಯ ಕುಲ ದಶಶಿರಿನ ಸಂಹರಿಸಿ ಮಾಗಧನ ಬಲವ ಮುರಿದಾ ಅಂಬರ ಕಲ್ಕಿ ಗೋಪಾಲಕೃಷ್ಣವಿಠಲಾ ಮಾಗಡಿ ತಿರುಮಲೇಶಾ ಶ್ರೀಶಾ 3
--------------
ಅಂಬಾಬಾಯಿ
ರಂಗರುಕ್ಮಿಣಿ ಸತ್ಯಭಾಮೆಗೆ ಬಂಗಾರದ ಪ ಮಂಟಪದೊಳು ಸತಿಯರೆಂಟುಮಂದಿಯು ಕೂಡಿ ಒಂಟಿಮುತ್ತೊ ್ಹಳೆವೊ ವೈಕುಂಠಪತಿಗೆ ಬ್ಯಾಗ 1 ವಾರಿಜಾಕ್ಷಿಯರ್ಹದಿನಾರುಸಾವಿರ ಮಂದಿ ಮಾರನಯ್ಯನ ಮುದ್ದು ಮಕ್ಕಳ ಸಹಿತಾಗಿ 2 ಎಡಬಲ ತೊಡೆಯಲ್ಲಿ ಮಡದಿ ರುಕ್ಮಿಣಿ ಭಾಮೆ ನಡುವೆ ಭೀಮೇಶಕೃಷ್ಣ ನಗುತ ಕುಳಿತನಾಗ 3
--------------
ಹರಪನಹಳ್ಳಿಭೀಮವ್ವ
ರತುನ ದೊರಕಿತಲ್ಲ | ಎನಗೆ ದಿವ್ಯ ರತುನ ದೊರಕಿತಲ್ಲ ಪ ರತುನ ದೊರಕಿತು ಎನ್ನ ಜನುಮ ಪ ವಿತರವಾಯಿತು ಈ ದಿನದಿ ನಾ ಯತನ ಗೈಯುತ ಬರುತಿರಲು ಪ್ರ ಯತನವಿಲ್ಲದೆ ವಿಜಯರಾಯರೆಂಬೊ ಅ.ಪ. ಪಥದಿ ನಾ ಬರುತಿರಲು ಥಳಥಳವೆಂದು ಅತಿ ಕಾಂತಿ ಝಳಪಿಸಲು ಬೆರಗಾಗುತ್ತ ಅತಿ ಚೋದ್ಯವ ಕಾಣಲು ಸೇವಿಸುತಿರೆ ಸತತ ಕರಪಿಡಿದಾದರಿಸಿ ಮನೋ ರಥವ ಪೂರೈಸುತಲಿ ದಿವ್ಯ | ಸ ನ್ಮತಿಯ ಪಾಲಿಸಿ ಮೋಕ್ಷ ಸುಪಥವ ಅತಿಶಯದಿ ತೋರುತ್ತ ಪೊರೆದ 1 ಪುತ್ಥಳಿ ಕಂಬಿಯಲ್ಲಿ ಸುಕೃತ ಮಾಲಾ ನಾನಾವಿಧ ಹವಳದಲಿ ಸೇರಿಸುತಲಿ ಪ್ರಾಣ ಪದಕವೆಂಬ ಮಾಲೆಯನು ಅನು ಮಾನವಿಲ್ಲದೆ ಕೊರಳಿಗ್ಹಾಕುತ ಗಾನದಿಂ ಕುಣಿಯುತ್ತ ಪಾಡುತ್ತ ದೀನ ಜನರುದ್ಧಾರ ಗೈಯುವ 2 ಶೋಧಿಸಿ ಗ್ರಂಥಗಳ - ಸುಳಾದಿಯ ಮೋದದಿಂದಲಿ ಬಹಳ ಕವಿತೆ ಮಾಡಿ ಸಾಧುಜನಕೆ ಸಕಾಲ ಆನಂದ ವಿತ್ತು ವಾದಿಜನರನು ಗೆದ್ದು ಬೋಧಿಸಿ ಮಾಧವ ಜಗನ್ನಾಥ ವಿಠಲನ ಪಾದ ಕಮಲಕೆ ಮಧು ಪನಂದದಿ ಸಾದರದಿ ತೋರುತ್ತ ಮೆರೆಯುವ 3
--------------
ಜಗನ್ನಾಥದಾಸರು
ರಥವನೇರಿದ ರಥಗಾತ್ರ ಪಾಣಿ | ರಥಪತಿ ದಶರಥ ಸುತ ದಶರಥ ನೃಪ ಭಾಗೀ | ರಥಿ ವಿನುತಾ ಸು | ರಥನಯ್ಯ ಮನೋರಥ ದೇವ ಪ ಕರಿ ಭಯಂಕ ಹರ ಹರಿಣಾಂಕಾ | ಕಿರಣಶತ ಧಿಕ್ಕರಿಸುವ ದೇವಾ || ವರಮಣಿ ಭಕ್ತ ವರದಾಯುದಧಿ ತುರಗವು | ಪರತರ ತಮ ತರರಸ | ಪರಮ ಮಂಗಳ ಪುರುಷ ಪ್ರಧಾನಂ | ಪ್ರವಿಷ್ಠ ಭಾ | ಸುರ ಕೀರ್ತಿಹರ ನಿರುತ ಪ್ರದರು ಸುರಪತಿ 1 ಮಣಿಪ್ರಚುರ ಮುತ್ತಿನ ಮುಕುಟ ಸು | ಫಣಿ ಕಸ್ತೂರಿ ಕಂಕಣ ಕೇಯೂರ ಕಾಂ| ಕೌಸ್ತುಭ ಸೂರ್ಯನಗೆಲ್ಲ್ಲೆ | ವನಮಾಲೆ ಹರಿಮಣಿ ಪದಕ ಪಾ | ವನ ಪೀತಾಂಬರ ಮಿನಗುವ ಕಾಂಚಿ | ಝಣ ಝಣ ಮಹಾ | ಧ್ವನಿ ಚರಣ ಭೂಷಣವಾಗಿಯೂ ಮಾ | ನಿನಿ ಕೂಡಾ 2 ಎತ್ತಿದ ಶ್ವೇತಾತಪತ್ರ ಚಾಮೀಕರ | ವಿತ್ತ ನಭ ತುಳುಕುತ್ತಲಿರೆ ಧ್ವಜ | ಮಾತ್ರ ಬಂದಾಗಿ ತೂಗುತ್ತಿರಲು | ಸುತ್ತಲು ಊದುವ ತುತ್ತುರಿ ಶಂಖ | ವತ್ತಿ ಬಾರಿಸುವ ಮತ್ತೆ ವಾದ್ಯಗಳು | ತುತ್ತಿಸುವ ಮುನಿ | ಉತ್ತಮ ಜನ ಬಾ | ಗುತ್ತ ವಡನೆ ಬರುತಿರಲು 3 ವಸು ರುದ್ರಾದಿತ್ಯ ವಸುಜನರ ಪಾ | ಲಿಸುವೆನೆಂದು ದರಶನವು ಸರಸಿಜಗದಾಧರಿಸಿಕೊಂಡು ಅಷ್ಟ ರಸ ನಾಮಕ ಹರುಷದಿಂದ | ನಸುನಗುತ ನೀಕ್ಷಿಸಿಕೊಳುಂತ ಆ | ಲಸ ಮಾಡದೆ ರಂ | ಜಿಸುವ ಲೀಲಾಮಾನಸ ವಿಗ್ರಹ ಮೆ | ಚ್ಚಿಸಿದ ಜನರ | ವಶವಾಗಿಪ್ಪ ರಾಕ್ಷಸ ರಿಪು 4 ವನಧಿ ಚಿನ್ಮಯ ಉ | ಭಯಾ ಭಯ ಹಾರೆ | ಪಯೋವಾರಿ ನಿಧಿ | ಶಯನ ಚತುರ್ಬೀದಿಯಲಿ ತಿರುಗಿ | ಪ್ರೀಯದಿಂದಲಿ ಸ | ತ್ಕ್ರಿಯವಂತ ಜಯ ಜಯ ಪ್ರದಾ | ಸಾರಥಿ ನಿ | ರಯ ವಿದೂರ ವಿಜಯವಿಠ್ಠಲ ಸಾ | ಹಾಯವಾಗುವ ಗಿರಿಯ ವೆಂಕಟರಾಯ ಬಂದಾ 5
--------------
ವಿಜಯದಾಸ
ರಮಣಿ ಕೇಳೆಲೆ ಮೋಹನ ಶುಭಕಾಯನ ಅಮರ ವಂದಿತ ರವಿಶತಕೋಟಿ ತೇಜನ ವಿಮಲ ಚರಿತ್ರದಿ ಮೆರೆವ ಶ್ರೀ ಕೃಷ್ಣನಕಮಲವದನೆ ನೀ ತೋರೆ ಪ ಬಾಯೊಳಗಿಹಳ ಗಂಡನ ನಿಜ ತಮ್ಮನತಾಯ ಪಿತನ ಮಡದಿಯ ಧರಿಸಿದನಸ್ತ್ರೀಯಳ ಸುತನ ಕೈಯಲಿ ಶಾಪಪಡೆದನದಾಯಾದಿಯ ಮಗನಸಾಯಕವದು ತೀವ್ರದಿ ಬರುತಿರೆ ಕಂಡುಮಾಯಾಪತಿ ಭೂಮಿಯನೊತ್ತಿ ತನ್ನಯಬೀಯಗನ ತಲೆಗಾಯಿದಂಥರಾಯನ ಕರೆದು ತೋರೆ 1 ನಾಲಗೆ ಎರಡರವನ ಭುಂಜಿಸುವನಮೇಲೇರಿ ಬಹನ ತಂದೆ ಇಹ ಗಿರಿಯನುಲೀಲೆಯಿಂದಲಿ ಕಿತ್ತೆತ್ತಿದ ಧೀರನಕಾಳೆಗದಲಿ ಕೊಂದನಲೋಲಲೋಚನೆಯ ಮಾತೆಯ ಪುತ್ರನಣುಗನಮೇಲು ಶಕ್ತಿಗೆ ಉರವನಾಂತು ತನ್ನವರನುಪಾಲಿಸಿದಂಥ ದಾತನಹ ದೇವನಲೋಲೆ ನೀ ಕರೆದು ತೋರೆ 2 ಉರಿಯೊಳು ಜನಿಸಿದವನ ನಿಜ ತಂಗಿಯಸೆರಗ ಪಿಡಿದ ಖಳನಣ್ಣನ ತಂಗಿಯವರನ ತಲೆಯನು ಕತ್ತರಿಸಿದ ಧೀರನಗುರುವಿನೊಳುದಿಸಿದನಶರವ ತಪ್ಪಿಸಿ ತನ್ನ ದಾಸರ್ಗೆ ಅನುದಿನಕರೆದು ವರವನಿತ್ತು ಮನ್ನಿಸಿ ಸಲಹುವಉರಗಗಿರಿಯ ವೆಂಕಟಾದಿಕೇಶವನ ಗರತಿ ನೀ ಕರೆದು ತಾರೆ 3
--------------
ಕನಕದಾಸ