ಒಟ್ಟು 2362 ಕಡೆಗಳಲ್ಲಿ , 116 ದಾಸರು , 1873 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಮಪರುಷನೆ ಕೃಷ್ಣ ಕಣ್ತೆರದು ನೋಡೊ ಪ ಶಿರಿ ಅರಸ ದಯಸಿಂಧು ಶ್ರಾವ್ಯಮಂಗಳ ಕೀರ್ತಿ ಅ.ಪ. ದ್ವಿಜಗಮನ ವೃಜಿನಹರ ಭುಜಗತಲ್ಪನೆ ದೇವ ಅಜತಾತ ಗಜವರದ ಕುಜ ನಿವಾರಣನೆ ಭಜನೆ ಪಾಲಿಸು ಎನ್ನ ವಿಮಲ ಮನದಲಿ ನಿಂತು ಋಜು ಪುಂಗವರ ದೈವ ನಿರ್ಜರರ ಬಾಂಧವನೆ 1 ಒದ್ದವಗೆ ಶಿಕ್ಷಿಸದೆ ಬೈದವಗೆ ಗತಿ ಇತ್ತೆ ನಿರ್ದೋಷ ಗುಣಪೂರ್ಣನೆಂದು ಶ್ರುತಿ ಸಾರುತಿದೆ ನಿದ್ದೆ ಮಾಡುವಗೊಲಿದಿ ಮುಕ್ತಿಯನಿತ್ತೆ ಯುದ್ಧದಲಿ ಶರದಿಂದ ಹೊಡೆದವಗೆ ನೀನೊಲಿದೆ 2 ಶುದ್ಧ ಆನಂದಾಬ್ಧಿ ಜಯೇಶವಿಠಲನೆ ಮಧ್ವ ಮುನಿದೈವ ಸಿದ್ಧರೊಡೆಯ ಉದ್ಧವನ ಗುರು ಸುಧಾಮ ಮಿತ್ರನೆ ಮನ ತಿದ್ದಯ್ಯ ಜ್ಞಾನ ನಿನ್ನಲ್ಲಿ ನಿಲುವಂತೆ 3
--------------
ಜಯೇಶವಿಠಲ
ಪರಮಪುರುಷ ಯದುಕುಲೇಶ ಶರಧಿ ಮಂದಿರವಾಸ ಶ್ರೀಶ ಪ ಪರಮ ಹರುಷದಿಂದಲೀಗ ಉರುಟನೆಯ ಮಾಡುವೆನು ಅ.ಪ. ನೀಲಮೇಘ ವರ್ಣ ನಿನ್ನ ಬಾಲಶಶಿಯ ಪೋಲುವಂಥ ಫಾಲವನ್ನು ತೋರುಬೇಗ ಕುಂಕುಮವ ಹಚ್ಚುವೆನು 1 ವಾರಿಜಾಕ್ಷ ಮಾರಜನಕ ವಾರಿನಿಧಿ ಗಂಭೀರ ಸುಗುಣ ತೋರು ನಿನ್ನ ಚರಣಗಳನು ಅರಿಸಿನವ ಹಚ್ಚುವೆನು 2 ಸುಂದರಾಂಗ ಮಂದಹಾಸ ಕುಂದರನೆ ಸಿಂಧುಶಯನ ಕಂಧರವ ತೋರು ಬೇಗ ಗಂಧವನು ಹಚ್ಚುವೆನು 3 ಕುಸುಮ ನೇತ್ರ ಕುಸುಮಪೀಠ ಸ್ತೋತ್ರ ಪಾದ ಕುಸುಮ ಮಾಲೆ ಹಾಕುವೆನು 4 ಚಾರು ಚರಿತ ಕರಿಗಿರೀಶ ಆರತಿಯ ಬೆಳಗುವೆನು ತೋರು ತವ ಮುಖಾರವಿಂದ 5
--------------
ವರಾವಾಣಿರಾಮರಾಯದಾಸರು
ಪರಮಪ್ರೀಯಾ ದಾಸರಾಯಾ | ಸತ್ಕವಿಜನಗೇಯಾ ಪ ಸುರತರು | ಕರಿಗಿರಿ ನಿಲಯನೆಉರುಗಾಯನ ಸಂದರುಶನ ಕೊಡಿಸಯ್ಯ ಅ.ಪ. ಆರ್ಮೂರೇಳು ನಾಲ್ಕೆಂಟು ಗ್ರಂಥ | ಅವುಗಳ ಸಾರಾರ್ಥಸಾರುತ್ತ ಭಕುತರಿಗೆ ಪುರುಷಾರ್ಥ | ಮಾರ್ಗವ ತೋರುತ್ತ ||ಚಾರು ಚರಿತ ಶ್ರೀರಮಾರಮಣನಗುಣವಾರಿಧಿಯೊಳು ಬಹು ಈಸಿದ ನಿಪುಣ 1 ಪಥ ಪುನರುದ್ಧರಿಸಿದ 2 ಪರತತ್ವ ಸಾರಾಂಬುಧಿ ಬೆಳಗುವನ ಪರಿಪರಿಕಲೆಯವನಶರಣರ ಹೃತ್ತಾಪವ ಹರಿಸುವನ | ನಿರತೈಕರೂಪನನಪರಮಾರ್ಥೇಂದು ವರೋದಯ ಕರುಣಿಸಿಧರಣಿಯ ಸುರರನು ಪೊರದೆಯೊ ಗುರುವೆ 3 ಅಂಕೀತವಿಲ್ಲದ ದೇಹಗಳೊಂದು | ನಿಷಿದ್ಧವೆಂದೂಪಂಕಜಾಕ್ಷನ ನಾಮಗಳೊಂದೊಂದು | ಬಳಸುತ ನೀನಂದೂ ಅಂಕನ ಗೈಧರಿ ಲೆಂಕತನವನಿತ್ತುಬಿಂಕದಿ ಜನ ಹೃತ್ಸಂಕಟ ಕಳೆದೀ 4 ಬಿಂಬೋಪದೇಶವೆ ತಾರಕವೆಂದೂ | ನಿಸ್ಸಂಶಯವೆಂದೂಹಂಬಾಲ ಹಚ್ಚುತ ಶರಣರಿಗೆಂದೆಂದೂ | ಕರುಣಾ ಸಿಂಧೂಬಿಂಬನು ಗುರುಗೋವಿಂದ ವಿಠಲ ಪಾದಾಂಬುಜದಲ್ಯನ ಹಂಬಲವಿರಿಸಿದೆ 5
--------------
ಗುರುಗೋವಿಂದವಿಠಲರು
ಪರಮಶಿವಶಂಕರಿಯೆ ಪ ಕರುಣಿಸು ಮಂಗಳೆಯೆ ಅ.ಪ. ಪಂಕಜನಾಭಿಯೆ ಪಂಕಜಪಾಣಿಯೆ ಪಂಕಜಲೋಚನೆಯೆ ಪಂಕಜಗಂಧಿಯೆ ಪಂಕಜವದನೆಯೆ ಶಂಕರಸುಂದರಿಯೆ 1 ಗೌರಿಯೆ ಗಿರಿಜೆಯೆ ಕಾತ್ಯಾಯನಿಯೆ ಹೈಮವತೀಶ್ವರಿಯೆ ಪಾರ್ವತಿ ಶಿವೆ ಪರಮೇಶ್ವರಿ ಶಂಕರಿ ಕಾಳಿಯೆ ಶಾಂಭವಿಯೆ 2 ಮಾಧವ ಸೋದರಿಯೆ ಭೂಧರವಾಸೆಯೆ ಶ್ರೀ ಲಲಿತಾಂಬೆಯೆ ರಾಜರಾಜೇಶ್ವರಿಯೆ 3 ನಿತ್ಯ ಕಲ್ಯಾಣಿಯೆ ಭಕ್ತವತ್ಸಲೆ ವಿಜಯೆ ನಿತ್ಯ ಸುಮಂಗಳೆಯೆ 4 ದಾನವ ಭಂಜಿನಿ ಮೌನಿಸುರಂಜಿನಿ ಭಾನುಮಂಡಲ ರುಚಿರೆ ಮಾನಿನಿ ಪಾಲಯಮಾಂ 5
--------------
ಬೇಟೆರಾಯ ದೀಕ್ಷಿತರು
ಪರಾಕು ಜೀಯ ವೆಂಕಟರಾಯ ಪರಾಕು ಸರ್ವೋದ್ವøಕ್ತ ನೀನೊಬ್ಬ ಸಾಕು ಉಕ್ತಿಯ ಕೇಳಬೇಕು ಪಾಲಿಸು ಸಾಕು ಪ. ಇಂದಿರಾವರ ದೀನ ಬಂಧು ನಿನ್ನ ಪಾದಾರ- ವಿಂದವೆ ಶರಣವೆಂದು ಹೊಂದಿದೆನಿಂದು ಮಂದ ಭಾವನೆಯ ಕುಂದು ಕ್ಷಮಿಸು ಯೆಂದು 1 ಕಾಲ ಶುಭ ಲೀಲೆಯರಸವೆಂಬ ಪಾಲ ಕುಡಿಸುತೆನ್ನನು ಪಾಲಿಸು ಪದ್ಮ ಲೋಲ ನಿನ್ನಣುಗನನ್ನು ಕೈಪಿಡಿದಿನ್ನು 2 ತಡೆಯದೆ ಸಕಲಾರ್ಥ ಕೊಡುವೆ ಶ್ರೀ ವೆಂಕಟಾದ್ರಿ ಒಡೆಯ ನೀನೊಲಿದಿರಲು ವೈರಿಗಳನ್ನು ಕೆಡವುತ ಸುಖ ಲಾಭವು ಸಿದ್ಧವಾಗಿಹವು 3
--------------
ತುಪಾಕಿ ವೆಂಕಟರಮಣಾಚಾರ್ಯ
ಪರಾಕು ಪ ಕಾಮಿತ ಫಲವೀವ ಕರುಣಾಂಬುಧಿ ಎಂದು ನಾ ಮೊರೆಹೊಕ್ಕೆನಲ್ಲೋ ರಾಮರಾಮಾ ಪ್ರಫುಲ್ಲ ಅ.ಪ. ಎಡವಿದ್ದ ಮಾತ್ರದಿ ಪೆಣ್ಣಾದ ಗೌತಮಮಡದಿಯು ನಿನ್ನವಳೇನೋಕಡುಪ್ರೀತಿಯಿಂದ ಕಾಯಿದಿ ಕರಿರಾಜನು ನಿನ್ನಒಡಲಲ್ಲಿ ಜನಿಸಿದನೇನೋನಡುಗುತ ಮಗನ ನಾರಗನೆನ್ನಲುನುಡಿ ಕೇಳಿ ಪೊರೆದೆಲ್ಲೊ ರಾಮರಾಮಾ1 ಹಿಂದ್ವೈರಿ ದೆಸೆಯಿಂದ ಬಂದ ವಿಭೀಷಣನುತಂದೆಯ ಕಡೆಯವನೇನೋಕಂದು ಕುಂದೆಣಿಸದೆ ಕಾಯಿದಿ ಘಂಟಾಕರ್ಣಾಎಂದಾ ಮಾತಿನ ಬಗೆಯೇನೋಬಂದು ಕಂಬದಿ ಶಿಶುವ ಬಾಧೆಯ ಬಿಡಿಸಿದಿ ಆಪದ್ಬಾಂಧವ ನೀನಲ್ಲೋ ರಾಮರಾಮಾ 2 ಉಲ್ಲಾಸದಿಂದ ಶಬರಿ ಉಂಡೆಂಜಲಿಗೊಡ್ಡಿದವಲ್ಲಭ ನೀನಲ್ಲವೇನೋಎಲ್ಲಿಯ ಬಲ್ಲಿದ ಪಿಡಿಯವಲಕ್ಕಿಗೆ ನೀ ಪೋಗಿವಲ್ಲ್ಯೊಡ್ಡಿದ್ದು ಮರೆತ್ಯೇನೋಎಲ್ಲಿಯ ಮಾತಿದು ಪೇಳಲಂಜುವೆ ರಂಗ ವಿ-ಠಲ ನೀನಲ್ಲೋ ರಾಮರಾಮಾ 3
--------------
ಶ್ರೀಪಾದರಾಜರು
ಪರಿ ಸಾಧನವರ್ಗವಾ ಅರಿಷಡ್ವರ್ಗವೆಂಬ ದುರ್ಗವಾ ತನ್ನಯ ದಿವ್ಯಕರುಣಾರಸವೆಂಬ ಸ್ವರ್ಗವಾ ಕರೆದಿತ್ತಾ ಪರಿವುತ್ತಾ ಪರವುತ್ತಾ ಅರಿಸುತ್ತಾ 1ಕಾಳಗತ್ತಲೆಯ ಯೂಥವಾ ಮನದೊಳಿದ್ದಕೀಳು ಬುದ್ಧಿಯಪರಾಧವಾಮೂಳ ವಾಸನೆಯ ಮುಖವಾ ವೇದಾಂತ ಸಂಮೇಳದಿಂದ ಬಹ ಸುಖವಾಪೇಳುತ್ತಾ ಸೀಳುತ್ತಾ ತಾಳುತ್ತಾ ಕೀಳುತ್ತಾ 2ಸಾರ ಸತ್ಸಂಗದ ದಾರಿಯಾ ಮುಂದುಗಾಣಿಸದಕ್ರೂರ ಕರ್ಮಂಗಳ ಪರಿಯಾ ಘೋರ ಮಾಯೆಯೆಂಬ ತೊರೆಯಾ ಗೋಪಾಲಾರ್ಯಸಾರಾನಂದವೆಂಬ ಪುರಿಯಾತೋರಿಸುತಾ ಹೀರಿಸುತಾ ಹಾರಿಸುತಾ ಸೇರಿಸುತಾ 3
--------------
ಗೋಪಾಲಾರ್ಯರು
ಪರಿಪಾಲಿಸುವುದು ಎಮ್ಮನು ಪರಮಾತ್ಮನ ರಾಣಿ ಕರುಣಾಕರನ ಪಾದಸ್ಮರಣೆಯನೆ ಕೊಟ್ಟು ಪ ಅಮರೇಶ ವಂದ್ಯಳೆ ಕಮಲಾಲಯೆ ನೀಬಂದು ಶ್ರಮವಿಲ್ಲದೆಯನ್ನೆಯ ಮಮತೆಯನು ಬಿಡಿಸು 1 ವಸುದೇವಸುತನ ರಾಣಿ ಅಸುರ ಸಂಹಾರಳೇ ನಿನ್ನ ವಶವಾದ ಮೇಲೆ ಅಂಭ್ರಣಿಯೆ ನಸುನಗುತ ಈಗ 2 ಮಂದರೋದ್ಧಾರಎನ್ನ ಸಂದುಸಂದಲಿ ಕಾರ್ಯವ ನಿಂದುಮಾಡಿಸುವಂಥದನ್ನು ಚಂದದೀಬೋಧವಕೊಟ್ಟು 3 ಮಂಗಳಾಂಗಿಯೆ ನಿನ್ನ ಮುಂಗಾಣದೆಸೊರಗಿದೆ ಅಂಗಜಪಿತನ ಜಾಯೇ ಭಂಗಪಡಿಸದೆಬೇಗಾ 4 ಪದ್ಮಸಂಭವನಮಾತೆ ಮುದ್ದುಮೋಹನವಿಠಲ ಪದ ಪದ್ಮಗಳನೀನೊಲಿದು ಹೃತ್ಪದ್ಮದಲಿ ಕಾಣಿಸುತ 5
--------------
ಮುದ್ದುಮೋಹನವಿಠಲದಾಸರು
ಪರಿಭವ ತಾಪಹರಣ ಪ ದಯದಿ ಯುವತಿಯಕುಲ ಉದ್ಧಾರಣ ಜವದಿ ಕರಿಧ್ರುವಬಂಧಮೋಚನ ಯುವತಿಗಕ್ಷಯವಿತ್ತು ಒಲಿದು ಹಯವ ಪಿಡಿದು ರಥವ ನಡೆಸಿದ ಭುವನ ಬ್ರಹ್ಮಾಂಡ ಸೂತ್ರಧಾರಕ ಶಿವಸುರಾರ್ಚಿತ ಪೊರೆ ಸುಹೃದಯ ಅ.ಪ ಪತಿತಪಾವನ ಶ್ರೀಶಕೇಶವ ಸಹಸ್ರಾಕ್ಷಶಯನ ಮಾಧವ ಭೋಗ ಗರುಡಗಮನ ಪತಿತಪಾವನೆ ಇಂದಿರೆಂiÀi ಜೀವ ಜಗದಾದಿದೇವ ಯತಿತತಿನುತ ಪವಿತ್ರನಾಮ ಕ್ಷಿತಿಸುತೆಪತಿ ಪವಿತ್ರ ಮಹಿಮ ಸತಿಯರವ್ರತಹರ ಜಿತಮಹಮುಪ್ಪುರ ಕೃತ್ರಿಮ ಮುರಹರ ಮಥನಸಾಗರ ನುತಿಪರ್ಹಿತಕರ ಸುಪಥರಾಧಾರ ಹಿತದಿ ಪೊರೆಯೆನ್ನ ಕರುಣಾನಿಕರ 1 ನಿರುತ ಜನರ ಕಲ್ಪತರು ನೀನು ಭಯಭಕ್ತಿಯಿಂದ ಸ್ಮರಿಸಿ ಬೇಡ್ವರ ಪರಮಸುರಧೇನು ಸುರಗಂಗಾಜನಕ ಶರಣು ಸಜ್ಜನರಮಿತ ದಯಾ ಪರನು ವಿಶ್ವರಕ್ಷಕನು ಮರಣರಹಿತ ಮದನತಾತ ಶುಭ ಸಚ್ಚರಿತ ದುರುಳ ಸಂಹರ ಶರಣುಮಂದಾರ ಸುಗುಣರೋದ್ಧಾರ ಶರಣಭಜಕರ ವರಸುಖಕರ ಕರಣಿಸಭವನೆ ತ್ವರಿತ ಸುವರ 2 ಕುಸುಮನಯನ ಸ್ವತಂತ್ರ ಮಹಲೀಲ ದಿವಕೋಟಿ ಪ್ರಭಾಕರ ಕುಸುಮಗಾತ್ರ ಮಹತಂತ್ರ ಮಾಯಜಾಲ ಗೋವರ್ಧನೋದ್ಧಾರ ಕುಸುಮಧರ ಕುರುಕುಜನಕುಲಕಾಲ ಗೋಪಾಲಬಾಲ ಕುಸುಮನಾಭ ಕೌಸ್ತುಭಾಂಬರ ಅಸಮ ತುಲಸಿಮಾಲಾಲಂಕಾರ ಒಸೆದು ದಾಸನ ಪುಸಿಯೆಂದೆನಿಸದೆ ಹಸನುಮತಿಯಿತ್ತು ಪೋಷಿಸನುದಿನ ಎಸೆವ ತವಪಾದ ನಂಬಿ ಮರೆಬಿದ್ದ ಅಸಮದಯಾನಿಧಿ ಮಮ ಶ್ರೀರಾಮ 3
--------------
ರಾಮದಾಸರು
ಪಾತಕಗೆ ಪರತರದ ಗುರುಬೋಧವ್ಯಾಕೆ ಸೂತಕವ ಬಿಡದವಗೆ ಪರತತ್ವವ್ಯಾಕೆ ಪ ಮಾತುತಪ್ಪಿ ನಡೆಯುವಗೆ ನೀತಿ ವಚನಗಳ್ಯಾಕೆ ಜಾತಿಲ್ಲದವನಿಗೆ ಜ್ಯೋತಿಷ್ಯವ್ಯಾಕೆ ಭೂತಬಡಿದವನಿಗೆ ಭೀತಿಯು ಯಾತಕ್ಕೆ ಆತುರಗೆ ಯಾತಕ್ಕೆ ಕೀರ್ತಿ ಅಪಕೀರ್ತಿ 1 ಮಂಗನಿಗೆ ಮಾಲ್ಯಾಕೆ ಅಂಗನೆಗಧಿಕವ್ಯಾಕೆ ಮುಂಗಾಲಿಲ್ಲದವಳಿಗೆ ಶೃಂಗಾರವ್ಯಾಕೆ ಬಂಗಾರದೊಡವ್ಯಾಕೆ ಕಾಡಡವಿನಿವಾಸಗೆ ಕಂಗಳಿಲ್ಲದವನಿಗೆ ಕರಕನ್ನಡ್ಯಾಕೆ 2 ಪತಿಗಂಜದವಳಿಗೆ ವ್ರತನೇಮಗಳು ಯಾಕೆ ಸತಿಗಂಜಿ ನಡೆಯುವಗೆ ಶಸ್ತ್ರಾಯುಧ್ಯಾಕೆ ಸುತರಿಲ್ಲದವನಿಗೆ ಅತಿಭಾಗ್ಯ ಯಾತಕ್ಕೆ ಮತಿಯಿಲ್ಲದವಗ್ಹರಿಕಥೆಕೀರ್ತನ್ಯಾಕೆ 3 ಮಾನಹೀನನಿಗೆ ಬೇರೆ ಮರಣಬರಲೇಕೆ ಅ ಜ್ಞಾನಿಗ್ಯಾತಕ್ಕೆ ಜಾಣಜನಸಂಗ ಗೋಣೆಹೊರುವವಗ್ಯಾಕೆ ವಾಹನದ ಗೋಷ್ಠಿಯು ಬಾಣ ಬತ್ತಳಿಕ್ಯಾಕೆ ಕರವಿಲ್ಲದವಗೆ 4 ಪರನಿಂದೆ ಮಾಳ್ಪನಿಗೆ ಶರಣತ್ವ ಯಾತಕ್ಕೆ ಕರುಣವಿಲ್ಲದವನಿಗೆ ಗುರುಸೇವೆ ಯಾಕೆ ಧರೆಗಧಿಕ ಶ್ರೀರಾಮಚರಣಸ್ಮರಣಿಲ್ಲದ ಪರಮಪಾಪಿಗೆ ಶಿಷ್ಟನರಜನ್ಮವ್ಯಾಕೆ 5
--------------
ರಾಮದಾಸರು
ಪಾದ ಒಮ್ಮಿಗಾದರು ನೆನೆದು ಕರ್ಮ ಪೋಪುವುದು ಎಂತೊ ಇಮ್ಮನಾವಾಗುವುದು ವ್ಯಾಮೋಹ ಸಂಗತಿಗೆ ಕಮ್ಮಗೋಲನ ಬದುಕೀಲಿ ರಂಗಾ ಪ ಹಾಳ ಹರಟಿಗೆ ಮನಾ ಹೇಳಿಸಿಕೊಳದೆವು ಬ್ಬಾಳುತನದಿಂದ ಕುಳಿತು ಕೇಳುವುದು ಕಿವಿಗೊಟ್ಟು ಅವರ ಕಿಂಕರನಾಗಿ ಹೇಳು ಇನ್ನೊಮ್ಮೆ ಎನುತಾ ಲಾಲಿಸಿ ಗತಿ ತಪ್ಪದಂತೆ ಜೋಡಿಸಿ ಮಾತು ಪೇಳುವೆನು ಕೈತಿರುವುತಾ ಶ್ರೀಲೋಲ ನಿನ್ನ ಕೀರ್ತನೆಗೆಯಿಲ್ಲದೊಂದು ಕೀಳು ವಾರ್ತೆಯ ತಾಹದೊ ಮನಸು1 ಧರೆಯನಾಳುವವನ ಸಮ್ಮುಖದಲ್ಲಿ ನಿಂದು ಕರವೆರಡು ನೊಸಲಿಗೆ ಚಾಚಿ ಕರುಣಿಸುವದೆಂದು ಮೊಗವೆತ್ತಿ ಪೊಗಳುವೆ ನಿನಗೆ ಸರಿ ಮಿಗಿಲು ಯಿಲ್ಲವೆಂದೂ ಮರಿಯದಲೆ ಸಲಹುವದು ಮಹಾತ್ಮನಹುದೆಂದು ಹರಿ ನಿಮ್ಮಯ ನಾಮವೆ ನೆನೆವೆ ನಾನೆನ್ನಲು ಮರಪು ಬಂದೊದಗಿಹದೊ ರಂಗಾ2 ಹಸಿವೆ ತೃಷೆಯಿಂದ ಉಳ್ಳವರ ಮನೆಗಳ ಕಾಯಿದು ಬಿಸಿಲು ಬೆಳದಿಂಗಳೆನ್ನದೆ ದೆಸೆಗೆಟ್ಟು ಚಾಲ್ವರಿದು ವಿಷವನುಂಡವನಂತೆ ಕುಸಿದು ಕನಿಷ್ಠನಾಗಿ ರೆಸೆದು ಹದಿನಾರು ಪಲ್ಲುಗಳು ಅವರ ಕೊರಳ ಹಿಸುಕಿ ಹಿಂಸೆಗಳ ಬಿಡಿಸಿ ಹಸನಾಗಿ ನಿನ್ನ ನಾಮಾಮೃತವನುಣದೆ ನಾ ಮುಸುರೆ ಎಂಜಲು ಸವಿದೆನೊ ರಂಗಾ 3 ಹೊನ್ನು ಹಣದ ಆಸೆಗೆ ಹಲಬರನ ಅನುಸರಿಸಿ ಅನ್ನಿಗರ ಕೊಂಡಾಡುತ ಎನ್ನಯ್ಯ ಎನ್ನೊಡಿಯ ಎನ್ನ ಸಾಕುವ ತಾತ ಎನ್ನ ಕುಲ ಉದ್ಧಾರಕಾ ನಾಕ ಬಗೆಯಿಂದ ಮರಿಯದಲೆ ಕುನ್ನಿಯಂತೆ ಕಾಯಿದೆನೊ ಪನ್ನಂಗ ಶಯನನೆ ನಿನ್ನ ಮಹಿಮೆಗಳನ್ನು ಅನ್ನದಲೆ ನರಕಿಕ್ಕಿಳಿದೇ ಸ್ವಾಮಿ 4 ಒಂದು ದಿನವಾದರೂ ಸಂತೋಷದಿಂದಲಿ ಜಿಹ್ವೆ ಇಂದಿರಾರಮಣ ಶರಣಾಗತವತ್ಸಲ ಕಂದರ್ಪನಯ್ಯ ಕಮಲಬಾಂಧವ ಕುಲಾಗ್ರಣಿ ಎಂದು ಸ್ಮರಿಸದೆ ಘೋರ ಅಂಧ ಕೂಪದಿ ಹೊರಳಿದೆ ಮಂದಮತಿಗೊಂದು ಗತಿಯಿಲ್ಲ ವಿಜಯವಿಠ್ಠಲ ತಂದೆ ನೀನೆ ಕಾವುದೋ ಹರಿಯೆ 5
--------------
ವಿಜಯದಾಸ
ಪಾದ ನನ್ನದಯ್ಯಾ ಚನ್ನಕೇಶವ ಪ ಲಕ್ಷ್ಮೀಕಾಂತ ಜಾಜಿಪುರೀಶ ನೀನೆ ಕಾಯಬೇಕಯ್ಯಾ ಅ.ಪ ಮನೆಯಾಸೆ ಬಲು ಬಾಧಿಸುತಿದೆ ತನು ಮಡದಿಮಕ್ಕಳ ಮೋಹವೆಂದಿದೆ ಮನದ ಚಪಲತೆ ಸಾಧಿಸು ತಂದೆ ಇನಿತಾಸೆ ಬಿಡಿಸು ಬುದ್ಧನಂತೆ 1 ನಿನ್ನನೆ ನೆನೆವಂತೆ ಮಾಡು ಕೇಶವನೆ ಜನ್ಮವಿದು ಸಾಕು ಕರೆಯೋ ಮಾಧವನೆ ನಿನ್ನ ಪಾದದಲಿಟ್ಟು ಪಾಲಿಸು ಮಧುಸೂದ ನನೆ ಜಾಜಿಪುರಿಯ ಕೇಶವ ಶೆಲ್ವಪಿಳ್ಳೆ 2
--------------
ನಾರಾಯಣಶರ್ಮರು
ಪಾದ ಕ್ಕೆರಗಿ ಯಾಚಿಸುತಲೆ ಮುಗಿವೆನು ಕೈಯ್ಯಾನೆರೆ ನಂಬಿದವರನು ಎರವು ಮಾಡಲು ನಿನಗೊಳತೇನಯ್ಯಾ ಪಿಡಿ ಬೇಗನೆ ಕೈಯ್ಯ ಕರದಶಿಗಳರಸನೆ ಕಾಮಿತ ಫಲದನೆ ಕರಿರಾಜನ ಭೀಕರ ಹರ ವೆಂಕಟ ಪ ಆಪಾರ ಮಹಿಮಾ ಆಪದ್ಬಂಧೋ ಆಪನ್ನರ ಪಾಲಿಪ ವ್ಯಾಪಾ ನಿನಗಲ್ಲದೆ ಮತ್ತೊಂದು ಕಾಣೆನೊ ಜಗದೀ ಭೂಪಾನೆ ಭೂಮ್ನ ಗುಣಗಣಸಿಂಧೋ ಸ್ವಾಮಿಯೆ ಎನಗಿಂದು ಪರಿಪಾಲಿಸು ಶ್ರೀಪತಿ ಅಂಜನ ಗಿರಿರಾಜ 1 ಕಲಿಯುಗದೊಳಗೀ ಪರ್ವತಕೆಲ್ಲಿ ಸರಿಗಾಣೆನು ಯೆಂದು ನೆಲಸಿದೀ ನೀನೆ ಈ ಸ್ಥಳದಲ್ಲಿ ವೈಕುಂಠಕಿಂತ ನೆಲೆಯು ವೆಗ್ಗಳವೆಂದು ನೀ ಬಲ್ಲೀ ಅದಕಾರಣ ಇಲ್ಲೀ ತಲೆಯಾಗುವರಯ್ಯಾ ಭಳಿರೆ ಕಾಂಚನ 2 ತರುಜಾತಿ ಮೃಗಪಕ್ಷಿಗಳಾಕಾರ ಮೊದಲಾದ ರೂಪದಿ | ನೂರಾರು ಕಿನ್ನರು ತಮ್ಮ ಪರಿವಾರ ಒಡಗೂಡಿ ನಿನ್ನ ಚರಣಾರಾಧನೆ ಮಾಡಿದ ವಿಸ್ತಾರ ಈ ಬಗೆ ಶೃಂಗಾರ ಸರಿಗಾಣೆನೊ ಹೇ ತಿರುಪತಿ ವೆಂಕಟ ಗಿರಿರಾಜ3 ಹದಿನಾಲ್ಕು ಲೋಕದ ಭಾಗ್ಯಗಳಲ್ಲಿ ಅಮರತತಿಗೆ ಕೊಟ್ಟ ವಿಧವೆಲ್ಲಾ ಪ್ರತ್ಯಕ್ಷವು ಪುಸಿಯಲ್ಲ ನಾನವರ ನೋಡೆ ಅಧಮಾಧಮನು ನೀನೆ ಬಲ್ಲೆಲ್ಲಾ ಎನ್ನ ಯೋಗ್ಯತಯ ಫಣಿ 4 ಸುವರ್ಣ ಮುಖರಿತೀರ ನಿವಾಸ ನವರಾತ್ರಿಯಲ್ಲೀ ಆವ ಬ್ರಹ್ಮೋತ್ಸವ ನೋಡಲು ಶ್ರೀಶ ಸಂಪದವನಿತ್ತು ಪೊ ರವಾನು ಕಲುಷದ ಭಯ ಬರಲೀಸ ಶ್ರೀನಿವಾಸ ಭೂದೇವರ ವರದ5
--------------
ವಿಜಯದಾಸ
ಪಾದವ ತೊಳೆದು ಪಾವನರಾಗಿಹರುಷದಿ ತಲೆದೂಗಿಪಾದವ ತೊಳೆದು ಪಾವನರಾಗಿಭಾವೆ ವಿನೋದದಿ ಕೃಷ್ಣನಗುತಲಿ ಪ. ಗುಜ್ಜೆಯರ ಕಾಲಿಗೆ ತಕ್ಕ ವಜ್ರಕಲ್ಲನೆಪಿಡಿದುಅರ್ಜುನನÀ ಮಡದಿ ಸುಭದ್ರಾಅರ್ಜುನನÀ ಮಡದಿ ಸುಭದ್ರಾ ಹರುಷದಿಕಂಜನೇತ್ರಿಯರ ಉಪಚರಿಸಿ 1 ಪಾದ ಕಾಲ ತೊಳೆದಳು2 ಮಂದಗಮನೆಯರಿಗೆಲ್ಲ ಗಂಧ ಕಸ್ತೂರಿಯಿಟ್ಟುಅಂದವಾಗಿದ್ದ ಅರಿಷಿಣಅಂದವಾಗಿದ್ದ ಅರಿಷಿಣ ಕುಂಕುಮದಿಂದ ಇಂದುವದನೆಯರ ಉಪಚರಿಸಿ3 ಶ್ರೀದೇವಿಯರಿಗೆ ದಿವ್ಯ ಕ್ಯಾದಿಗೆ ಮಲ್ಲಿಗೆ ಮುಡಿಸಿ ಸುಗಂಧಿ ಕೇಶರ ವೀಳ್ಯವ ಸುಗಂಧಿಕೇಶರ ವೀಳ್ಯ ಅಡಿಕೆ ಕೊಟ್ಟುಮಾಧವನ ಮಡದಿಯರ ಉಪಚರಿಸಿ4 ಪಾದ ತೊಳೆದು ಪಾವನರಾಗಿ5
--------------
ಗಲಗಲಿಅವ್ವನವರು
ಪಾರಾಯಣ ಮಾಡಿರೋ ಭವ ಪಾರಾವಾರದೊಳುತ್ತಾರಕವಿದು ನೋಡಿರೋಪ ಶರೀರನೆಚ್ಚಿರಬೇಡಿರೋ ಸಾರುವ ಮೃತ್ಯುವ ದಾರಿಗೆ ಗೋಚರ ಧಾರಿಣಿಯಲಿ ಪೇಳಿರೋ1 ಸಾಹಸ ಪಡಬೆಡಿರೋ ದೇಹಗೇಹಂಗಳನೂಹಿಸಿ ಸಂಗಡ ಬಾಹವೆಂದಿರ ಬೇಡಿರೊ2 ದೇಹರಕ್ಷಣೆಗೆಂದು ಗೇಹವನಿರ್ಮಿಸಿ ನೇಹದಿ ನಾರಿಯೊಳು ಗೇಹಿನಿಯೆಂದತಿ ಮೋಹದಿ ಕೆಡುವನು ದೇಹಿಸಂಸಾರದೊಳು3 ಮಾರಿಯಲ್ಲವೆ ಕೇಳಿರೋ ನಾರಿಯಾರಿಗೆ ಮಕ್ಕಳಾರಿಗೆ ಜೀವಿತದಾರಿಯೆಲ್ಲಿಗೆ ಪೇಳಿರೋ4 ಬಾರಳು ಕಂಚುಕನ್ನಡಿಬಾರದೀ ಸಂಚಿತ ದ್ರವ್ಯದಿ ಕೊಂಚವು ಬಾರದು ವಿಸಂಚಿಗೆ ದೇಹವಿದು5 ಹಲವು ಸಾಹಸದಿಂದ ಘಳಿಸಿದರ್ಥಗಳೆಲ್ಲ ಬಳಸಿನ ಬಾಂಧವರು ಒಲಿದುಕೊಂಡಾಡುವರು6 ಅರ್ಥವಿದ್ದವನ ಸಮರ್ಥನೀತನ ಜನ್ಮಸಾರ್ಥಕವೆಂಬುವರು ಜನ್ಮವ್ಯರ್ಥವೆಂದುಸುರುವರು 7 ರೊಕ್ಕವಿದ್ದರೆ ಕೈಲಿ ಸಕ್ಕರೆ ಮಾತಿನೊಳಕ್ಕರೆ ಪಡಿಸುವರು ರೊಕ್ಕವಿಲ್ಲದವನ ಮಕ್ಕಳು ಮಡದಿಯರು ಲೆಕ್ಕಿಸದಿರುತಿಹರು 8 ಮರಣವ ಪೊಂದುವರು ಮರಳು ಜಗಳಕೆ ತರಳರು ಚಾಚುತೆ ಕೊರಳನು ಕೊಯ್ಯುವರೋ 9 ಬಂಧುಗಳನ್ನು ಕೊಲ್ವರು ಒಂದಿಗೆ ಜನಿಸಿದರೆಂದು ನೋಡರುನಿಜ ದಂದುಗಕ್ಕೊಳಗಹರು10 ನಂಟರು ನಮಗಿವರುಂಟೆಂದು ಮೋಹದ ಗಂಟುಕಟ್ಟಿರೆ ಮನದಿ ಕಂಟಕ ಯಮಬಂದು ಗಂಟಲಬಿಗಿವಾಗ ನಂಟರಿಲ್ಲವು ಜಗದಿ11 ಅಪತ್ತುಬಂದಾಗ ಪಾಪಿಯು ಮನದನು ತಾಪದಿ ನೆನೆಯುತಿರೆ ಕಾಪಾಡುವನಾಗ ಶ್ರೀಪತಿ ಪುಲಿಗಿರಿ ಭೂಪನು ನಮ್ಮದೊರೆ12 ನೊಂದ ಗಜೇಂದ್ರನ ಕಂದ ಪ್ರಹ್ಲಾದನ ಬಂದವಿಭೀಷಣನ ಚಂದಿರಮುಖಿ ನೃಪನಂದನ ಧ್ರುವರನು ಚಂದದಿ ಸಲಹಿದನ 13 ಅಜಮಿಳಗೊಲಿದನ ಕುಜನರ ತರಿದನ ಸುಜನರನಾಳಿದನ ಭಜಕರದಾತನ ತ್ರಿಜಗಕ್ಕೆ ನಾಥನ ವಿಜಯನ ರಥಸೂತನ14 ಅಂಗಜಜನಕನ ಮಂಗಳ ಮಹಿಮನ ಗಂಗೆಯ ಪಡೆದವನ ರಂಗನ ಸುಗುಣ ತರಂಗನ ಶಂಖರಥಾಂಗವ ಪಿಡಿದಿಹಿನ15 ಖ್ಯಾತ ಪಾದಾಂಬುಜನ ವಾತನ ಮಗನೊಳು ಪ್ರೀತಿಯ ಬೆಳಸಿದ ಸೇತು ವಿಧಾತನ16 ರಾಮನ ಜಗದಭಿ ರಾಮನ ದೈತ್ಯವಿರಾಮನ ಭಜಕಜನಾ ರಾಮನ ದಶರಥರಾಮನ ಸೀತಾರಾಮನ ಗುಣಧಾಮನ17 ಪಂಕಜನೇತ್ರನ ಪರಮ ಪವಿತ್ರನ ಶಂಕರನುತಿಪಾತ್ರನ ವೆಂಕಟರಮಣನ ಕಿಂಕರ ಶರಣನ ಸಂಕಟ ಹರನಾಮನ18 ವರದ ವಿಠಲ ದೇವನ ಪೊರೆಯುವದಾನರನ 19
--------------
ಸರಗೂರು ವೆಂಕಟವರದಾರ್ಯರು