ಒಟ್ಟು 2220 ಕಡೆಗಳಲ್ಲಿ , 116 ದಾಸರು , 1602 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪ್ರಾಣ ಗುರು ಜಯ ವಿಠಲ ಕಾಪಾಡು ಇವಳ ಪ ಪ್ರಣತಾರ್ತಿ ಹರನೆಂದು ಭಿನ್ನವಿಪೆ ಸತತಾ ಅ.ಪ. ಪತಿವ್ರತಾಮಣಿ ಎನಿಸಿ ಪತಿಸೇವೆಯೊಳುನಿರತೆಸತತ ಸದ್ಭಕ್ತಿ ಶ್ರೀ ಹರಿಗುರುಗಳಲ್ಲೀ |ಅತಿಶಯದಿ ಮಾಡುತಲಿ ವಿಹಿತವನು ತೊರೆಯದಲೆಕೃತಕಾರ್ಯಳಾಗಿಹಳ ಸತಿಯ ಸಲಹುವುದೂ 1 ತೈಜಸ ದಯಾಪಯೋನಿಧಿ ಹರಿಯೆಆ ಪರಿಮಳಾರ್ಯ ಯತಿರೂಪವನೆ ಕೊಂಡುಕೈ ಪಿಡಿದು ಕಾಯ್ವೆನೆಂಬಭಯ ಹಸ್ತವ ತೋರಿರೂಪವನು ಮರೆಮಾಡ್ಡೆ ಬೃಂದಾವನಾಂತ 2 ಮೋಚಕೇಚ್ಛೆಯೊಳ್ಸವ್ಯ ಸಾಚಿಗೇ ಅತಿಪ್ರೀಯಖೇಚರೋತ್ತಮ ಪ್ರಾಣಗೊಪ್ಪಿಸುತ ಇವಳಾನೀಚೋಚ್ಚತರತಮ ಜ್ಞಾನ ಸ್ಥಿರಪಡಿಸುತ್ತಪ್ರಾಚೀನ ದುಷ್ಕರ್ಮ ಪರಿಹರಿಸೊ ಹರಿಯೇ 3 ಪ್ರಣತಜನ ಪರಿಪಾಲಎನುತ ಭಿನ್ನೈಸುವೆನೊ ವೇಣುಗೋಪಾಲ 4 ಬದಿಗ ನೀನಾಗಿರಲು ಭಯವೇನೊ ಬುಧವಂದ್ಯವದಗಿ ಹೃದ್ಗುಹದೊಳಗೆ ತೋರಿತವ ರೂಪಮುದದಿಂದ ಕಳೆ ಇವಳನಾದಿ ರೋಗವನೆಂಬೆಇದನೇವೆ ಸಲಿಸೊ ಗುರು ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಪ್ರಾಣ ಸಂಕರುಷಣಭವ ಜಗತ್ರಾಣ ಮುಖ್ಯಪ್ರಾಣ ಪ ತೃಣಜೀವರಾದಿ ಜಂಗಮಜಡದೊಳು ಪೂರ್ಣನಹುದೊ ಶ್ರೀಹರಿಪ್ರೇರಣೆಯಿಂದ ಅ.ಪ ಪ್ರಾಣ ನಿನ್ನಿಂದಲೆ ಸರ್ವರತ್ರಾಣ ಪ್ರವೃತ್ತಿಯೂ ನಿನ್ನಯ ಆಣತಿಯಂತಿರ್ಪುದಯ್ಯಾ ಮುಖ್ಯ ಪ್ರಾಣನೆ ತ್ರಿವಿಧಜೀವರೊಳನವರತದಿ ನೀ ನೆಲೆಸಿ ಏನೇನು ಮಾಳ್ಪಕರ್ಮಂಗಳೆಲ್ಲವು ನಿನ್ನಿಂದೈಯ್ಯಾ ಪ್ರಾಣೋಪಾನವ್ಯಾನೋದಾನಸಮಾನರ ತ್ರಾಣ ನಿನ್ನದೊ ಮುಖ್ಯಪ್ರಾಣದೇವನೆ ಪ್ರಾಣಿಗಳಲಿ ಪಂಚಪ್ರಾಣರೂಪದಲಿಹೆ ಪ್ರಾಣಿಕಾರ್ಯಕ್ಕೆಲ್ಲ ನೀನಾಧಾರನೋ 1 ಸ್ಥೂಲಶರೀರದೊಳು ಪಾಯೂಪಸ್ಥದಿ ಸ ಕಲಮಲಗಳಾದ್ಯಪಸರಣಾದಿಗಳಿಂದ ರಕ್ಷಣೆ ಎಲ್ಲಪಾನನಿಂದಲಿ ಮಾಡಿಸಬಲ್ಲೆ ಮುಖನಾಸಿಕನೇತ್ರದಿ ಎಲ್ಲಶ್ವಾಸಾದಿಗಳಾಡಿಸಬಲ್ಲೆ ಕಾಲಕಾಲಕುಶ್ವಾಸಪ್ರಣಯದಿಂದಲಿ ಎಲ್ಲಕಾಲದೊಳು ಪ್ರಾಣನೆಂಬರೋ ಎಲ್ಲ ಜೀವರೊಳು ನಿಂತು ನಡೆವೆ ಶ್ರೀ- ನಲ್ಲನಾಜ್ಞೆಯಂತನುವರ್ತಿಸುವೆಯೊ 2 ಎಪ್ಪತ್ತೆರಡು ಸಾವಿರವಿಹ ನಾಡಿ ಒಡಗೂಡಿ ಅನುದಿನ ಇಪ್ಪ ಈ ಜಡದೇಹವನೇ ನೋಡಿ ವ್ಯಾಪಿಸಿ ವ್ಯಾನನಿಂದ ರಸಗಳಾ ನಾಡಿಗೆ ಕೊಂಡೋಡಿ ತಪ್ಪದೆ ನಾಡಿಕಾರ್ಯವನೆಲ್ಲ ಕ್ರಮದಿ ಮಾಡಿ ಒಪ್ಪೆ ಉದಾನಸುಷುಮ್ನನಾಡಿಯೊ ಒಪ್ಪಿಸುವೆ ಸುಖದುಃಖಫಲವನು ಪಾಪಪುಣ್ಯದಂತೆ ಜೀವರಿಗೆ ಲೋಕವ ಪ್ರಾಪಿಸಿಕೊಡುವಿಯೊ ಆಜ್ಞೆಯಿಂ 3 ಭುಕ್ತವಾದನ್ನವೆ ಮೊದಲಾದ್ದೆಲ್ಲ ತತ್ತಸ್ಥಳಗಳಿಗೊಯ್ವಪ್ರಯುಕ್ತ ಪ್ರಾಣಾಪಾನರಮಧ್ಯಪ್ರಾದೇಶವಾದ ನಾಡಿಯಲಿದ್ದ ಸಮಾನವಾಯುವಿಂ ಶಕ್ತಿಯಸಕಲಾವಯವಕೀವ ಶಕ್ತಿಯಿಲ್ಲದತ್ಯಲ್ಪಜೀವರಿಗೆ ಶಕ್ತಿಯಿತ್ತು ಜ್ಞಾನೇಂದ್ರಿಯ ವೃತ್ತಿಯ ವ್ಯಕ್ತಮಾಡಿ ಫಲವಿತ್ತು ಪೊರೆವೆಯೋ ಮುಕ್ತರೊಡೆಯನಿಗೆ ಅತ್ಯಂತ ಹಿತಕರ 4 ಪ್ರಾಣಾ ನೀ ಬಾಹ್ಯಾದಿತ್ಯನೊಳಿದ್ದು ಅಧ್ಯಾತ್ಮನೆನಿಸಿ ಕಣ್ಣೀನೊಳಾದಿತ್ಯನಲಿ ಬಂದು ಅಧಿಭೂತನೆನಿಸಿ ಕಣ್ಣೀನಭಿಮಾನಿಪ್ರಾಣನ ಸೇರಿ-ಅಧಿದೈವವೆಂದು ಎಣಿಪರೊ ಈ ವಿಧ ತ್ರಯಗತನೆಂದು ತೃಣ ಮೊದಲಾದ ಸರ್ವಜೀವರ ಪ್ರಾಣಪಂಚರೊಳು ಮುಖ್ಯಪ್ರಾಣನೆ ಫಣಿಗಿರೀಶ ಶ್ರೀ ವೆಂಕಟೇಶನ- ಪ್ಪಣೆಯಂತೆ ನೀ ನಿಯಾಮಕನಾಗಿಹೆ 5
--------------
ಉರಗಾದ್ರಿವಾಸವಿಠಲದಾಸರು
ಪ್ರಾಣದೇವ ಚಿತ್‍ಸ್ವಭಾವ | ಕಾಣೆ ನಿನಗೆಣೆ ಪ ತ್ರಿಜಗ ತ್ರಾಣ ಗುರುವರ ಅ.ಪ ಮುಖ್ಯ ಪ್ರಾಣನೆಂದು ನಿನ್ನ ಅಕ್ಕರೆಯಿಂ ರಾಮ ಕರೆಯೆ ಮಿಕ್ಕಾಮರರಿಗೀ ಭಾಗ್ಯವುಂಟೇ ಮಿಹಿರಜಾಮಾತ್ಯ 1 ಧಾರುಣಿಜೆ ರತ್ನದ ಹಾರ ನಿನ್ನ ಕೊರಲಿಗೆ ಹಾಕಿ ಪರಸಿದಳ್ 2 ರಾಗದಿ ಸತಿಸಹ ತತ್ವೋಪದೇಶವಾಗ ಕೊಟ್ಟನು 3
--------------
ಗುರುರಾಮವಿಠಲ
ಪ್ರಾಣದೇವನೆ ನಿನ್ನ ಧ್ಯಾನಿಸದೆ ಮನದಿ ಬಲು ಹೀನನಾದೆನೊ ಲೋಕದಿ ಪ ಪಾದ ಧ್ಯಾನಮಾಡುವ ಮುಖ್ಯ- ಪ್ರಾಣನೀನೆಂದು ಮನಸಾರ ಪೂಜಿಸದೆ ಶ್ರೀ ಅ.ಪ ಶರಧಿ ಬಂಧಿಸಿ ದಶಶಿರನಳಿದ ಪಾದ ಸ್ಮರಣೆ ಮಾಡುತಲಿ ನಿತ್ಯ ಧರಣಿಸುತೆಯಳ ತಂದು ಪರಮ ಸಂಭ್ರಮದಿಂದ ಮೆರೆವದೇವನ ಸ್ಮರಿಸುತ ನರರೂಪದಿಂದ ದಶರಥನ ಪುರದಲಿ ನಿಂತ ಪರಮಾತ್ಮನಿಗೆ ನಮಿಸುತ ಸುರರು ಸ್ತುತಿಸಲು ಪರಮಹರುಷದಿಂದಾಲಿಸುತ ಹರಿಯ ಮೆಚ್ಚಿಪ ನಮ್ಮ ಗುರುಪವಮಾನ ಶ್ರೀ 1 ಅಂದು ಆ ಬಕನ ಭಯದಿಂದ ಸಜ್ಜನರೆಲ್ಲ ಕುಂದಿರಲು ಭಯವ ಹರಿಸಿ ಅಂಧಕನ ಸುತನ ಬಂಧಿಸುತ ರಣದೊಳಗೆ ಯದು- ನಂದನಗೆ ಪ್ರೀತಿ ಪಡಿಸಿ ಕೊಂದು ಬಿಸುಡಲು ಜರಾಸಂಧನನು ವಸುದೇವ ಕಂದ ನೋಡುತಲಿ ಸುಖಿಸಿ ಇಂದಿರಾರಮಣ ಮುಕುಂದನನು ಪೂಜಿಸುವ ಸುಂದರ ಭೀಮ ನಿಸ್ಸೀಮನಹುದೆಂದು ಶ್ರೀ2 ಪತಿತ ಸಂಕರದಿಂದ ಮತವೆಲ್ಲ ಕೆಡಲು ಶ್ರೀ- ಪತಿಯ ಧ್ಯಾನವು ಮಾಡುತ ಯತಿ ಶಿರೋಮಣಿಯಾಗಿ ಶ್ರುತಿ ಸ್ಮøತಿಗಳಣಿ ಮಾಡಿ ಹಿತವ ಜನರಿಗೆ ತೋರುತ ಎಸೆವ ಘನಗಿರಿಯಲ್ಲಿ ಅಸದಳ ಹನುಮರೆಂ- ದೆಸೆದು ಮಿಗೆ ಶೋಭಿಸುತಲಿ ವಾರಿ ದಡದಲಿ ಕಮಲನಾಭ ವಿಠ್ಠಲನ ಸ್ಮರಿಸಿ ಧೀರ ಹನುಮಂತನಪಾರ ಮಹಿಮನೆಂದು ವನಗಿರಿಯ ಗುಹೆಗಳಲಿ ಹನುಮಂತನೆಂದೆನುತ ಎಣಿಸಲಳವಲ್ಲವೋ ಘನಪರಾಕ್ರಮಿ ಮುಖ್ಯ 3
--------------
ನಿಡಗುರುಕಿ ಜೀವೂಬಾಯಿ
ಪ್ರಾಣದೇವರ ಸ್ತೋತ್ರ ನೋಡಿದ್ಯಾ ಸೀತಮ್ಮ ನೀ ನೋಡಿದ್ಯಾ || ಪ || ನೋಡಿದ್ಯಾ ಹನುಮನಾರ್ಭಟವ - ಹಾಳುಮಾಡಿದ ಕ್ಷಣದಲಿ ವನವಾ ||ಆಹಾ|| ಝಾಡಿಸಿ ಕಿತ್ತು ಈಡ್ಯಾಡಿ ವೃಕ್ಷಂಗಳ ಕೊಂ-ಡಾಡುವ ನಿನ್ನಯ ಕೋಡಗನ್ಹರುಷವಾ || ಅ.ಪ. || ಮಾತೆ ನಿನ್ನಾಜ್ಞೆಯ ಕೊಂಡು - ಆರಭೀತಿಯಿಲ್ಲದೆ ಫಲ ಉಂಡು -ದೈತ್ಯದೂತ ಬರಲು ಭಾರಿ ಹಿಂಡೂ||ಆಹಾ||ವಾತ ಜಾತ ಬಂದ ಪಾತಕಿಗಳನೆಲ್ಲತಾ ವಕದಿ ಕೊಂದು ಭೂತಳಕ್ಹಾಕಿದಾ 1 ಸೊಕ್ಕಿ ರಾವಣನೆಂಬ ಗಂಡ - ಮಹ ಲಕುಮಿಯನೆ ಕರಕೊಂಡ - ರಾಮ ರಕ್ಕಸಾಂತಕ ಆಕೆ ಗಂಡ - ಕಪಿ-ಗಿಕ್ಕಿರೆಂದ ಯಮದಂಡ ||ಆಹಾ||ಮಿಕ್ಕ ಖಳರು ಕೂಡಿ ಲೆಕ್ಕಿಸಿ ಮಾತಾಡಿಸಿಕ್ಕರೆ ಬಿಡನೆಂದು ದಿಕ್ಕು ಪಾಲಾದ 2 ಎಷ್ಟೇಳ್ಹಲವನ ಪ್ರತಾಪ - ನೋಡುಸುಟ್ಟನೆಂಬ ಲಂಕಾ ದ್ವೀಪ - ಎಂಥಗಟ್ಟಿಗ ನೋಡೆ ನಮ್ಮಪ್ಪ ||ಆಹಾ||ಸೃಷ್ಟೀಶ ಕೇಶವ ವಿಠ್ಠಲರಾಯನ ಮುಟ್ಟಿ ಭಜಿಸಲಜ ಪಟ್ಟಾಳೆನೆಂದ್ಹೋದಾ
--------------
ಕೇಶವವಿಠ್ಠಲರು
ಪ್ರಾಣಪತಿ ಶ್ರೀನಿವಾಸ ವಿಠಲ ಪೊರೆ ಇವಳ ಪ ಆನತೇಷ್ಟ ಪ್ರದನು | ನೀನೆಂದು ಬಿನ್ನವಿಪೆಜ್ಞಾನ ಗಮ್ಯನೆ ದೇವ | ನೀನಾಗಿ ಪೊರೆಯೋ ಅ.ಪ. ಮಾನ್ಯ ಮಾನದ ಹರಿಯೆ | ಕನ್ಯೆಗಭಯದನಾಗಿಪುಣ್ಯ ಜೀವಿಯ ಸಲಹೆ | ಬಿನ್ನೈಪೆ ನಿನಗೇ |ನಿನ್ಹೊರತು ಜಗದೊಳಗೆ | ಅನ್ಯರನು ಕಾಣೆ ಕಾರುಣ್ಯ ನಿಧಿ ದಾನವಾ | ರಣ್ಯ ದಾವನಲಾ 1 ಭಾವಿಭಾರತಿ ಪತಿಯ | ಸೇವೆಯನೆ ಕೊಂಬಹಯಗ್ರೀವನೆ ನಿನ್ನ ಪದ | ತಾವರೆಯ ದಾಸ್ಯಾ |ಓದಿ ಬೇಡುತ್ತಿಹಳ | ತೀವರದಿ ಕೈ ಪಿಡಿಯೆದೇವ ನಿನ್ನಡಿಗಾನು | ಧಾವಿಸುತ ಬೇಡ್ವೇ 2 ಮಾರುತಾಂತರ್ಗತನೆ | ತಾರತಮ್ಯ ಜ್ಞಾನಮೂರೆರಡು ಭೇದಗಳ | ದಾರಿಯನೆ ತೋರೀ |ಸಾರತಮ ನೀನು ನಿ | ಸ್ಸಾರ ಜಗವೆಂತೆಂಬ ಚಾರುಮತಿಯನೆ ಇತ್ತು | ಪಾರು ಮಾಡಿವಳಾ 3 ವಿಷಯಗಳ ಅನುಭವದಿ | ಎಸೆವ ನಿನ್ನಯ ಸ್ಮರಣೆಹಸನಾಗಿ ನೀನಿತ್ತು | ಕೆಸರ ಕಳೆಯೋ |ಕುಶಲ ಕ್ಲೇಶಾದಿ ನಿ | ನ್ನೊಶವೆಂಬ ಧೃಡವಿರಲಿಬಿಸಜಾಕ್ಷ ಶ್ರೀರಾಮ | ಪ್ರಸರಿಸೋ ಜ್ಞಾನ 4 ದೇವ ದೇವೇಶ ಗುರು | ಸಾರ್ವಬೌಮರ ಪಾಲಶ್ರೀವರನೆ ಸರ್ವಜ್ಞ | ದುರ್ವಿಬಾವ್ಯಾ |ನೀವೊಲಿಯುತಿವಳಿನ್ನು | ಸಾರ್ವ ಕಾಲದಿ ಪೊರೆಯೊಗೋವಳರ ಪಾಲ ಗುರು | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಪ್ರಾಣಿ ದಿನ ಮೋಸಗಳೆಯಬ್ಯಾಡ ಧ್ರುವ ವಂದಿಸದೆ ಸಾಧು ಸಜ್ಜನರ ಶ್ರೀಪಾದವನು ಬರುದೆ ಶೋಧವಿಯ ನೀ ಮಾಡಬ್ಯಾಡ ಅರಿಯದ ಧಮರಸಂಗ ಕೂಡಬ್ಯಾಡ ಪರನಿಂದೆ ದೂಷಣೆಯ ಮಾಡಬ್ಯಾಡ ಗುರುಹಿರಿಯರ ಮಾತು ಮೀರಬ್ಯಾಡ 1 ಏನೆಂದು ತಿಳಿಯದೆ ಜ್ಞಾನಿಗಳ ಮಹಿಮೆಯನು ಅಜ್ಞಾನತನದಲಿ ಉಳಬ್ಯಾಡ ಹೀನ ಗುಣದಲಿ ನೀ ಬಾಳಬ್ಯಾಡ ಅನ್ಯಾಯತನವೆ ನೀ ಕೇಳಬ್ಯಾಡ ನಿನ್ನ ಸ್ತುತಿ ನೀನೆವೆ ಹೇಳಬ್ಯಾಡ 2 ನಿನ್ನೊಳು ನಿನ್ನ ಸ್ಥಿತಿಗಳನು ತಿಳಿಯದೆ ಕುಂದ ನೀ ನೋಡಬ್ಯಾಡ ನಾನೆ ದೊಡ್ಡವನೆಂದು ಆಡಬ್ಯಾಡ ಮಹಿಪತಿ ನೀ ದಗಿಯ ಬೀಳಬ್ಯಾಡ ಗುರು ಆಜ್ಞೆಯಿಂದ ಕಡಿಗ್ಯಾಗಬ್ಯಾಡ ಪ್ರಾಣಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಂಟರಾಗಿ ಬಾಗಿಲ ಕಾಯೋರು ಹರಿಯವೈಕುಂಠದಿ ರಂಗನಾಯಕನರಮನೆಯ ಪ. ಸುತ್ತ ವಿರಜಾನದಿ ಮತ್ತು ನಂದನ ವನಉತ್ತಮೋತ್ತಮ ವೈಕುಂಠಉತ್ತಮೋತ್ತಮ ವೈಕುಂಠದೊಳಗಿನ್ನುಮಿಂಚಿನಂತೆ ಹೊಳೆವೊ ಮುಕ್ತರು1 ಶ್ರೀದೇವಿ ತಾನು ಮುರಹರನ ಪುರದಾಗವಿರಜಾ ತಾನೆಂದು ಕರೆಸುತವಿರಜಾ ತಾನೆಂದು ಕರೆಸುತ ನಾನಾ ಪರಿಗಿಳಿ ಕೋಗಿಲಾಗಿ ಮೆರೆವೋಳು2 ಉತ್ತರ ದಿಕ್ಕಿನಲೆಥಳ ಥಳಿಸುವ ದ್ವಾರ ಮುತ್ತು ಮಾಣಿಕ್ಯ ಅಳವಟ್ಟಮುತ್ತು ಮಾಣಿಕ್ಯ ಅಳವಟ್ಟ ಹರಿಪುರರತ್ನದ ಝಲ್ಲೆ ಬಿಗಿದಾವೆÉ 3 ರಾಜಿ ಮಾಣಿಕ ಗೋಡೆ ಗಾಜಿನ ನೆಲಗಟ್ಟುಈ ಜೋಡು ದ್ರವ್ಯ ಎಲ್ಲಿಲ್ಲ ಈ ಜೋಡು ದ್ರವ್ಯ ಎಲ್ಲಿಲ್ಲ ಇದುನಮ್ಮ ಶ್ರೀದೇವಿಯರಸನ ಅರಮನೆ 4 ಕೇಶರ ಶ್ರೀಗಂಧ ಕಲವೆಲ್ಲ ಪರಿಮಳಬಿಸÀಜನೇತ್ರನರಮನೆಯಬಿಸಜನೇತ್ರೆಯರ ಮನೆಯಿಂದ ಕುಸುಮದ ವೃಷ್ಟಿಗರೆದಾವು5 ಉತ್ತರ ಪಾಲ್ಗಡಲೊಳು ಮುತ್ತು ಮಾಣಿಕರತ್ನಪಚ್ಚ ಕರ್ಪೂರ ಸುಳಿಗಾಳಿಪಚ್ಚ ಕರ್ಪೂರ ಸುಳಿಗಾಳಿ ಇದುನಮ್ಮ ಅಚ್ಯುತಾನಂತನರಮನೆಯ6 ಕೃಷ್ಣ ರಾಮೇಶನ ವಿಶಿಷ್ಠದ ವೈಕುಂಠಸೃಷ್ಟಿ ಮಾಡಿ ರಚಿಸಿದ ಸೃಷ್ಟಿ ಮಾಡಿ ರಚಿಸಿದ ನೋಡಲು ದೃಷ್ಟಿ ಸಾಲದು ಜನರಿಗೆ7
--------------
ಗಲಗಲಿಅವ್ವನವರು
ಬಡನಡುವು ಬಾಲೆಯರ ಕೂಡಿ | ಪಾ | ಲ್ಗಡಲೋಡಿಯನೊಡನೊಡನೆ | ಬಿಡದೆ ಆಡಿದರೊ ವಸಂತ ಪ ಪಾಲ್ಗೆನೆಗಧಿಕ ಮೃದುವಸನಮಂ ಉಟ್ಟ್ಟು ನು | ಣ್ಗೂದಲು ತಿದ್ದಿ ಪಲಪು ಬೈತಲೆ ಸೊಗಸು | ತುಂಬಿ ಕುಂಕುಮ ಮಿಗೆ | ಬಲ್ಕಸ್ತುರಿಯ ತಿಲಕ | ಅರೆರೆ | ಕಾಳ್ಗತ್ತಲೆ ಮೀರಿ ತೋರುತಿರೆ ತಿರ್ತಿತಿರಗಿ | ವಾಲ್ಗಣ್ನು ನೋಟ ವೈಯಾರ ಸೋಲ್ದುರುಬು ವಿ | ಶಾಲ್ಗೊಂಚಲು ಮುತ್ತುಸುತ್ತು ಸೂಸುತಲಿರೆ ಪೇಳ್ಗಾಣೆ ಪೆಂಗಳು ಶೃಂಗರಿಸುವ ಮದವೊ 1 ಸಣ್ಮೊಗ್ಗೆ ಜಗದ ವಿಚಿತ್ರ ಕಂಚುಕವು ಮೋ | ಹನ್ಮಾಲೆ ಪದಕ ನ್ಯಾವಳ ಸರಿಗೆಸರ ಮುತ್ತು | ವಾಲೆ ಪೊಂಪುಷ್ಟ ಬುಗುಡಿ ಥೋ | ರನ್ಮುತ್ತು ನಾಸಾಮಣಿ | ಅರರೆ | ಮನ್ಮನೋಹರವಾದ ಕಡಕ ಕಂಕಣ ಮುದ್ರೆ | ಸನ್ಮೋಹನಾಂಗಿಯರು ಸರ್ವಾಭರಣವಿಟ್ಟು | ಮನ್ಮಥನ ಹಿಡಿದೇಜಿ ಕುಣಿವಂತೆ ಮುಂದೊರಿದು | ಕಣ್ಣಂಚಿನಿಂದ ಜಗವೆಲ್ಲ ಬೆಳಗುತಲಿ 2 ಕರ್ಪುರದ ವೀಳ್ಯೆಯವ ಮೆಲುತ ನಾನಾ ಬಗೆ | ಅಗರು ಶಿರಿಗಂಧ | ಸಾರ್ಪರಿಮಳ ಸಕಲ ದ್ರವ್ಯದಿಂದೋಕುಳಿಯ | ಮಾರ್ಪೆಸರು ಬಾರದಂತೆ | ಅರೆರೆ | ಕರ್ಪಾಣಿಯೊಳಗೆ ದ್ವೀಪಾಂತರದ ತರ ನಿಲುವ | ದರ್ಪಣವ ಪಿಡಿದು ಸರ್ವಾಂಗ ನೋಡಿಕೊಳುತ | ದರ್ಪ ತಗ್ಗಿಸದಲೆ | ಪೊನ್ನುಡೆಗಳ ತುಡುಕಿ ಕಂ | ದರ್ಪನಪ್ಪನ ಮೇಲೆ ಗುಪ್ಪಿರರು ಮುದದೀ 3 ಮೇಲ್ಮೇಲು ಸೊಗಸು ಚನ್ನಿಗರಾಯನಿಲ್ಲ ನಿಲೂ ನೀಲ್ಮೇಘ ವರ್ಣಾನೆ | ಕಾಲ್ದೆಗೆದು ನಮ್ಮಮ್ಮ | ತೋಳ್ಮದವ ತೀರಿಸದೆ ಪೋಗದಿರು ಭಡಭಡಾ | ಕರವ ತೆಕ್ಕೊ | ಅರೆರೆ | ತಾಳ್ಮದತಿಗತಿಯಂತೆ ಹೆಜ್ಜೆಯ ನಿಡುತ | ಸತಿ | ಜಾಲ್ಮೊಗದು ವಾರಿಧಿಯ ಥೆರೆಯಂತೆ ಮೂದಲಿಸಿ | ಆಳ್ಮಾತಿಲಿಂದ ಹೈ ಎನುತ ಚಲ್ಲಿದರೂ4 ಪೆಣ್ಗಳಿರಾ ನಿಮಗೇಕೆ ಪ್ರಬಲತನವೆಂದೆನುತ | ಅಣ್ಗದಾ ಗೋವಳರ ನಡುವೆ ವಪ್ರ್ಪಿರ್ದಸು | ವಣ್ಮಾತ್ರ ಪರಮಾತ್ಮನೀಕ್ಷಿಸಿದ ಅವರವರ | ಕಣ್ಗೊರಳ ಕುಚ ತೊಡೆಗಳ | ಅರೆರೆ | ಹೃತ್ತಾಪ ಹರಿಸುವ | ಸಿರಿ | ಸರ್ರನೆ ಓಕಳಿ ಚಲ್ಲೆ | ಸಣ್ಗೊಲ್ಲತಿಯರು ಬೆರಗಾಗಿ ಮರಳೆÀ ಹರಿಯ | ಬೆಣ್ಗಳ್ಳನೆಂದು ಮುತ್ತಿದರು ಹಾಸ್ಯದಲಿ 6 ತೋರ್ಕೈಯ ಬಚ್ಚಿಡದೆ ಪಳ್ಳಿಗನೆ ಠಕ್ಕಿಸದೆ | ಮಾರ್ಕರೆದುಕೋ ನಿನ್ನ ಗೆಳೆಯರನ ಒಂದಾಗಿ | ಸೂರ್ಕುದೇಗಂತೆ ಸರ್ವೋದ್ಧಾರಗರದ ವೈ | ಜೀರ್ಕೋಳಲಿ ತೆರವಿಲ್ಲದೆ | ಅರೆರೆ | ಅರ್ಕನರ್ಕಕೆ ವಾರಿ ಇಂಗಿ ಪೋಗುವಂತೆ | ನರ್ಕಾಂತಕನ ಕಾಯದೊಳಗೆ ಓಕುಳಿಯಡಗೆ | ಅರ್ಕಾದ್ರಿಯಂತೆ ಶಿರಿ ಕೃಷ್ಣರಾಜಿಸುತಿರೆ | ತರ್ಕೈಪ ಭರದಿಂದ ನಾರಿಯರು ಇರಲು 7 ಹಸ್ತ ಲಾಘವ ನೋಡಿ ತಲೆದೂಗಿ ನಕ್ಕು ಸ | ಮಸ್ತ ನಾರಿಯರಿಟ್ಟು ಉಟ್ಟ ಮಂಗಳವಸನ | ವಸ್ತುಗಳು ಜಿಗಳುವಂತೆ ಓಕುಳಿಯಿಂದ | ವಿಸ್ತಾರವಾಗಿ ಉಗ್ಗೆ | ಅರೆರೆ | ಕಸ್ತೂರಿಮೃಗದಂತೆ ಸುಳಿಸುಳಿಯ ನಿಂದಿರ್ದ| ಹಸ್ತಿಗಮನಿಯರೊಡನೆ ಕ್ರೀಡೆಯನು ಪರಾತ್ಪÀರ | ವಸ್ತು ಲಕುಮಿಯ ರಮಣ ಆಡುತಿರೆ ನಾಲ್ಕೈದು | ಮಸ್ತಕಾದ್ಯರು ವಿಸ್ತರಿಸಲರಿದೆನಲು 8 ಸುಕ್ಕದೆ ಕುಚಗುಳುಬ್ಬಿ ಕಕ್ಕಸವಾಗೆ ಹೆಜ್ಜೆ | ಇಕ್ಕಲಾರದೆ ವಿರಹತಾಪದಿಂದೀಕ್ಷಿಸುತ | ವಖ್ಖಣಿಸುವ ಮಾತು ಹಿಂದಾಗುತಿರೆ ಕಲೆಗ | ಳುಕ್ಕೇರಿ ಬೆವರುತಿರಲು | ಅರೆರೆ | ಅಕ್ಕಕ್ಕೊ ಎಂದು ಅಕ್ಕೋಜಗೆಗೊಳ್ಳುತ್ತ ತಾ | ರಕ್ಕಿಯಂತೆ ಕೃಷ್ಣ ಸುತ್ತ ವಲ್ದರು | ಸಕ್ಕರೆದುಟಿ ಚಲುವ ಉಡುಪನಂತೆ ವಪ್ಪೆ | ದಕ್ಕಿವನಂತೆ ಸಂತರಿಸುತಲಿ ಇಂದೂ 9 ಬೆರ್ದೋಕಳಿಯನಾಡಿ ಸರಿ ಮಿಗಿಲು ಎನಿಸಿ ಕೆಲ | ಸಾರ್ದಿರ್ದ ನಾರಿಯರ ಶಿರವ ತಡವರಿಸಿ ಶತ | ಸಾರ್ದವೆಲೆ ಉಳ್ಳ ಉಡುಗೊರೆನಿತ್ತು ಮನ್ನಿಸಿ | ಮೀರ್ದಾಭರಣವ ತೊಡಿಸಿ | ಅರೆರೆ | ಸಾರ್ದೆಗೆದು ತರ್ಕೈಸಿ ಪ್ರೀತಿಯಿಂ ಬಡಿಸಿ ಮುರ ಮರ್ದನ ವಿಜಯವಿಠ್ಠಲ ಮೆರೆದ ಗೋಕುಲ ದೊರೆ | ಸುಜನ ಜನಸಂಗಾ 10
--------------
ವಿಜಯದಾಸ
ಬಡಿ ಜಾಗಟೆ ಹೊಡಿ ನಗಾರಿ ಪಿಡಿ ತುತ್ತೂರಿಯನು ನಡಿ ಮುಂದೆ ಅಡಿ ಇಡು ಹೆದರದೆ ನುಡಿ ಹರಿಯನಾಮ ಪ. ಬಿಗಿ ನಡುವನು ಮುಗಿ ಕೈಯ್ಯನು ಒಗಿ ದುರಭಿಮಾನ ಚಿಗಿ ಭಕ್ತಿರಸ ಮುಖದಲಿ ನಗಿ ತೋರು ನಯದಿ 1 ಪರಿ ಪರಿ ಕರಿ ಕುಣಿಸು ಕಾಲ್ಕಿರಿ ಗೆಜ್ಜೆ ಭರ ಧರಿಯಲ್ಲಿ ಮೆಟ್ಟೆ 2 ಗಟ್ಟಿ ಮಾಡಿ ಮನ ತಟ್ಟಿ ಚಪ್ಪಾಳೆ ಮೆಟ್ಟಿ ಖಳರ ಎದÉಯ ಶ್ರೇಷ್ಠ ಮಧ್ವಮತ ಗುಟ್ಟು ದಾಸತ್ವವು ದುಷ್ಟರರಿಯರೆಂದು 3 ಶುದ್ಧ ಗುರುವು ತಂದೆ ಮುದ್ದುಮೋಹನರು ಉದ್ಧಾರವನೆ ಮಾಡಿ ವಿದ್ಯಾನಾಮ ಅನಿರುದ್ಧಾನಂಕಿತಗಳ ಬದ್ಧಾಗೀವರೆಂದು 4 ಕೆಟ್ಟ ಕರ್ಮಗಳ ಕಟ್ಟು ಹರಿದು ಮುಕ್ತಿ ಕೊಟ್ಟು ಪೊರೆವನೆಂದು 5
--------------
ಅಂಬಾಬಾಯಿ
ಬಂಡು ಮಾಡುವರಲ್ಲೊ ರಂಗೈಯ್ಯ ಪ ಮಡುವ ಪೊಕ್ಕೆನುಯೆಂದು ಮಡದೇರೆಲ್ಲರು ಕೂಡಿ ಬಿಡುಗಂಣನಿವನೆಂಬರೋ ರಂಗೈಯ್ಯಾ 1 ಗುಡ್ಡ ಹೊತ್ತನು ಎಂದು ಸಡ್ಡೆನು ಮಾಡದೆ ನಿನ್ನ ದೊಡ್ಡ ದೆವ್ವಯೆಂಬರೊ ರಂಗೈಯ್ಯಾ 2 ಧರಣಿ ಎತ್ತಿದೆ ಎಂದು ಪರಿಹಾಸ ಮಾಡುತ ಕೋರೆದಾಡಿಯನೆಂಬರೊ ರಂಗೈಯ್ಯಾ 3 ತರಳನ ಸಲಹಲು ಸಿರಿಗೆ ಪೇಳದೆ ಬಂದ ಉರಿಮೋರೆಯವನೆಂಬರೊ ರಂಗೈಯ್ಯಾ 4 ಕೃಪೆಯ ಮಾಡದೆ ಬಲಿಯ ತಪಭಂಗ ಮಾಡಿದ ಕಪಟ ತಿರುಕನೆಂಬರೊ ರಂಗೈಯ್ಯಾ 5 ಪಿತನ ಮಾತನು ಕೇಳಿ ಮಾತೃಹತ್ಯವಗೈದ ಪತಿತ ಹಾರುವನೆಂಬರೊ ರಂಗೈಯ್ಯಾ 6 ಸತಿಯ ರಕ್ಕಸನೊಯ್ಯೆ ಅತಿಶೋಕ ಪೊಂದಿದ ಹತಭಾಗ್ಯನಿವನೆಂಬರೊ ರಂಗೈಯ್ಯಾ 7 ನೆರೆಹೊರೆ ಹೆಂಗಳ ಸುರತದಿ ಕೂಡಿದ ಜಾರ ಚೋರನು ಎಂಬರೊ ರಂಗೈಯ್ಯಾ 8 ಬಟ್ಟೆಯಿಲ್ಲದೆ ಪೋಗಿ ನೆಟ್ಟನೆ ನಿಂತಿರ್ದ ಕೆಟ್ಟಾ ಭಂಡನಿವನೆಂಬರೊ ರಂಗೈಯ್ಯಾ 9 ಅಷ್ಟಾ ಭಾಗ್ಯವ ನೀಗಿ ಕಷ್ಟಕ್ಕೆ ಗುರಿಯಾದ ದುಷ್ಟ ರಾಹುತನೆಂಬರೊ ರಂಗೈಯ್ಯಾ 10 ಕಂದಾ ನೀ ನಿರ್ದೋಷ ರಂಗೇಶವಿಠಲ ನೆಂದು ತಿಳಿದು ದೂರುವರೊ ರಂಗೈಯ್ಯಾ 11
--------------
ರಂಗೇಶವಿಠಲದಾಸರು
ಬಂದ ದುರಿತಗಳೆಲ್ಲ ಪರಿಹರಿಸಿ ಪೊರೆವದು ಪ ಎಷ್ಟು ಪರಿಯಲಿ ನಿನ್ನ ಎಷ್ಟು ನಾ ಮೊರೆ ಇಡಲು ಕಷ್ಟವನು ಕಳೆವ ಭರ ಕಾಣಲಿಲ್ಲ ದೃಷ್ಟಿಲಿ ನೋಡದೆ ಹೋಗಿ ದಣಿಸುವ 1 ಸಾರ್ಥಕವು ಏನು ಎನ್ನ ಸಲಹದಿರಲು ಕೀರ್ತಿವಂತನು ಎನಿಸಿಕೊಂಡು ಕಾಯದಿರೆ ಅಪಕೀರ್ತಿ ಬಾರದೆ ನಿನಗೆ ಅಧಿಕ ಜನರೊಳಗೆ 2 ಧಾರುಣಿಯೊಳಧಿಕರಿನ್ನಾರು ನಿನಗಿನ್ನು ತೋರು ಮಾರಜನಕನಾದ ಮಹಾಮಹಿಮನೆ ಧೀರ 'ಹೊನ್ನಯ್ಯ ವಿಠ್ಠಲ’ ದೀನ ರಕ್ಷಕನೆಂದು ಸಾರುತದೆ ನಿಮ್ಮ ಕೀರ್ತಿ ಸಕಲ ಲೋಕದಲಿ 3
--------------
ಹೆನ್ನೆರಂಗದಾಸರು
ಬಂದ ಶಿರಿ ರಾಘವೇಂದ್ರಮೂರುತಿ ಮನ ಮಂದಿರದೊಳಗೆ ಸರಸದಿ ಪ ಬಂದನು ಭಕುತನ ಬಂಧನ ಬಿಡಿಸ್ಯಾ - ನಂದನೀಡುತ ಮುದದಿಂದಲಿ ಭರದಿಂದಅ.ಪ ಮುದದಲಿ ಶೋಭಿಪ ವದÀನದೊಳೊಪ್ಪುವ ರದನದಿ ಶೋಭಿತನು ಉದಿಸಿದ ಎನ್ನಯ ಹೃದಯಾಂಬರದೊಳು ಸದಯ ಮೂರುತಿ ಧರನು ಆಗಾಡಿದ ಮೃದು ನುಡಿಯಾ ಅತಿ ಭಿಡಿಯಾ ಪದಸಕಿತ - ಸುಖನೀಡುತ ಇದು ಮೊದಲಾ ಗಿಹ - ಅದ್ಭುತ ಮಹಿಮೆಯ ಪದÀದಲಿ ತೋರುತ ಸದಮಲ ಮನದೊಳು 1 ಕುಣಿದಾಡುತ ಗುಣಗಳ ಗಣಿಸುವ ಭಕ್ತರ ದಣಿಸೆನೊ ಭವದೊಳಗೆ ಗಣಿಸುವೆ ದಾಸರ ಗಣದೊಳಗವನಿಗೆ ಉಣಿಸುವೆ ಪರಸುಖ ಕೊನಿಗೆ ಬೇಡಿದ ಇಷ್ಟವ ಕೊಡುವೆ ದುರಿತವ ತಡಿವೆ ಪೊರೆಯುತಾ ಬೆರೆಯುತಾ ಮಣಿಸುತಾ ತಿಳಿಸುತಾ ಕ್ಷಣ ಕ್ಷಣದಲಿ ವೀಕ್ಷಣದಿಂದಲಿ ಶÀ್ರಮ ತೃಣ ಸಮವೋ ಧಣಿ ನಾ ನಿನಗೆಂದು 2 ಧಿಟಜ್ಞಾನ - ಭಕುತಿಯ ಥಟನೆ ಕೊಡುವೊ ಉತ್ಕಟ ಮಹಿಮನೋ ನಾನು ಪಟುತರ ಎನಪದ ಚಟುಲ ನಳಿನಯುಗ ಷಟ್ಪದ ಸಮ ನೀನೋ ನಾನಾಡಿದ ನುಡಿ ಖರೆಯಾ - ಮರೆಯಾ ಕೊಂಡಾಡೆಲೋ ನೀಡೆಲೋ ಘಟಿಸುವೆ ಸಮಯಕೆ - ಧಿಟ ಗುರುಜಗನ್ನಾಥ ವಿಠಲನ ಹೃತ್ಯಂ - ಪುಟದಿ ತೋರುವೆನೆಂದು 3
--------------
ಗುರುಜಗನ್ನಾಥದಾಸರು
ಬಂದನಿಂದು ರಾಘವೇಂದ್ರನು ಆನಂದದಿಂದಲಿ ಬಂದನಿಂದು ರಾಘವೇಂದ್ರನು ಪ. ಕಂದರಾದ ಭಕ್ತ ಜನರ ಚಂದದಿಂದ ಪೊರೆವೆನೆಂದು ಅ.ಪ. ಪರಿಪರಿಯ ವೈಭವವನು ಪಡಲಿಬೇಕೆಂದು ಕರದು ತರಲು ಕರಕರಿಯ ಕರದು ಮನವ ನೋಡಬೇಕೆಂದು 1 ಕರುಣಾನಿಧಿ ಎಂದೆನಿಸಿ ನಿನಗೆ ಥರವೆ ಇದು ಎಂದು ಪರಿಪರಿಯಲಿ ಸ್ತುತಿಸುತಿರಲು ಸ್ಥಿರವಾರದಿ ಹರುಷ ತೋರಲು 2 ಬಂದ ಬುಧರಿಂದ ಪೂಜೆನಂದಗೈಸ ಬೇ ಕೆಂದು ತುಂಗಜಲವ ತರುತಿರÉ ಬಂದ ಮಾಯದಿಂದ ಹರಿಯು 3 ದ್ವಿಜರ ಹಸ್ತಜಲವ ಶ್ರೀನಿವಾಸ ಬೇಡಲು ದ್ವಿಜರು ಕೊಡಲು ಗುರುಗಳನ್ನು ಪೂಜೆಗೈದೆನೆಂದು ನುಡಿದ 4 ಈ ತೆರದ ಕೌತುಕವ ಶ್ರೀನಾಥ ತೋರುತ ಆ ತಕ್ಷಣದಿ ಮಾಯವಾಗೆ ರೀತಿಯಿಂದ ಪೂಜೆಗೈಯ್ಯಲು 5 ಮಂತ್ರಾಲಯದ ಮಂದಿರನಿಗೆ ಪಂಚಾ ಮೃತದಿಂದ ಸಂತೋಷದಲಿ ಪೂಜೆ ಗೈದು ಪಂಚಮೃಷ್ಟಾನ್ನ ಬಡಿಸೆ6 ಶ್ರೀನಿವಾಸ ಸಹಿತ ಶ್ರೀ ರಾಘವೇಂದ್ರರು ಸಾನುರಾಗದಿ ಸೇವೆಕೊಂಡು ನಾನಾ ವಿಧದ ಹರುಷಪಡಿಸೆ 7 ಎನ್ನ ಮನಕೆ ಹರುಷಕೊಡಲು ನಿನ್ನ ಭಜಿಸುವೆ ನಿನ್ನ ಮನಕೆ ಬಾರದಿರ್ದೊಡೆ ಮುನ್ನೆ ಪೋಗಿ ಬಾರೆಂದೆನಲು 8 ತುಂಗಮಹಿಮ ರಾಘವೇಂದ್ರರ ಮಂಗಳದ ಪುತ್ರ ಕಂಗಳೀಗೆ ತೋರಿ ಅಂತ ರಂಗದಲ್ಲಿ ಹರುಷವಿತ್ತು 9 ಶ್ರೀ ಗುರುಗಳ ಕರುಣದಿಂದ ರಾಘವೇಂದ್ರನು ಭಾಗವತರ ಪೊರೆವೆನೆಂದು ಯೋಗಿ ಶೇಷಾಂಶ ಸಹಿತ 10 ಇಂತು ರಾಘವೇಂದ್ರ ಗುರು ತಾ ಶಾಂತನಾಗುತ ಶಾಂತ ಗೋಪಾಲಕೃಷ್ಣವಿಠ್ಠಲನ ಅಂತರಂಗದಿ ತೋರ್ವೆನೆಂದು 11
--------------
ಅಂಬಾಬಾಯಿ
ಬಂದಾ ಗೋವಿಂದನು ಗೋಕುಲದಿಂದ ಆನಂದ ಮುಕುಂದನು ಪ ಅಂದಿಗೆ ಕಿರುಗೆಜ್ಜೆಯು ಘಲುಘಲುರೆನೆ ಮಂದಹಾಸನಗೆಯಿಂದಲಿ ಶ್ರೀಹರಿ ಅ.ಪ ಕರದಿ ಕಂಕಣ ವಂಕಿಯು ಹೊಳೆಯುತಲಿ ಸಿರದಿ ಕಿರೀಟ ಮುಂ- ಗುರುಳು ಮುಖ ಬೆವರಿನ ಹೊಸ ಕಾಂತಿಯಲಿ ಬೆರಳುಗಳಲಿ ಉಂಗುರ ಥಳಥಳಥಳ ಹೊಳೆಯುವ ಸೊಬಗಿನಲಿ ಕೊರಳೊಳು ಸರಿಗಿಯ ಸರ ಪರಿ ಸರ ಪದಕಗಳ್ಹೊಳೆಯುತಲಿ ಜರಿ ಪೀತಾಂಬರದ ನಡುವಿಲಿ ಕಿರು ಗೆಜ್ಜೆಗಳ್ಹೊಳೆಯುತಲಿ ತರುತುರು ತರುಣೇರು ಮರುಳಾಗುವ ತೆರ ಪರಿಪರಿ ರಾಗದಿ ಮುರಳಿಯ ನುಡಿಸಲು ಸುರರು ಪುಷ್ಪ ವೃಷ್ಟಿಯ ಸುರಿಸುತಲಿರೆ ತುರುಕರು ಮಧ್ಯದಿ ಪೊಳೆವೊ ಚಂದ್ರಮನಂತೆ1 ತುಂಬುರು ನಾರದರೆಲ್ಲರು ಕೂಡಿ ಅಂಬರದಲಿ ನೆರೆದರು ಗಂಧರ್ವಪ್ಸರ ಸ್ತ್ರೀಯರು ಕುಣಿದಾಡಿ ಪರಮಾತ್ಮನ ಸ್ತುತಿಸುತ ರಂಭೆ ಊರ್ವಶಿ ಮೇನಕೆಯರು ಕೂಡಿ ಆನಂದದಿ ನರ್ತಿಸೆ ಇಂದಿರೆ ರಮಣನ ಗುಣಗಳ ಪಾಡಿ ಅಂಬರದಲಿ ದೇವ ದುಂದುಭಿಗಳು ಮೊಳಗಲು ಕಂದರ್ಪನ ಪಿತ ಕರುಣದಿ ಭಕುತರ ಚಂದದಿ ದುರ್ಮತಿ ನಾಮ ವತ್ಸರದಲಿ ಕುಂದಿಲ್ಲದೆ ಸಲಹುವೆನೆನುತಲಿ ತ್ವರ 2 ಸೃಷ್ಟಿಗೀಶನ ಗುಣಗಳ ಪಾಡುತಲಿ ವ- ಶಿಷ್ಠರು ವಿಶ್ವಾಮಿತ್ರ ಕಶ್ಯಪ ಭಾರದ್ವಾಜ ಮುನಿಗಳು ದೇವೇಶನ ಸ್ತುತಿಸುತ ಅತ್ರಿ ಜಮದಗ್ನಿ ಜಾಬಾಲಿಗಳು ಶ್ರೀಕೃಷ್ಣನೆ ಪರನೆಂದು- ತ್ತಮ ಋಷಿಗಳು ಪೊಗಳುತಲಿರಲು ಪರಮೇಷ್ಠಿ ಪಿತನ ತ- ನ್ನಿಷ್ಟ ಭಕುತರನು ಸಲಹಲು ಕಂಕಣ ಕಟ್ಟಿಹ ಕಮಲನಾಭವಿಠ್ಠಲ ತ್ವರ ಶಿಷ್ಟರ ಸಲಹಲು ಸರಸರ ಓಡುತ 3
--------------
ನಿಡಗುರುಕಿ ಜೀವೂಬಾಯಿ