ಒಟ್ಟು 1437 ಕಡೆಗಳಲ್ಲಿ , 104 ದಾಸರು , 1187 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಕ್ಷಿಸೆನ್ನನು ಶಾರದಾಂಬೆ ನೀನುಪಕ್ಷಿವಾಹನ ಸುತ ಮನಃಪ್ರತಿಬಿಂಬೆ ಪಆದಿಮಧ್ಯಾಂತರ'ತಳೆ ಅನಾದಿ ವಸ್ತು'ನಲ್ಲಿ ಭೇದರ'ತಳೆವಾದಿಜನರಿಗಗೋಚರಳೆ ನಿನ್ನ ಪಾದವೆ ಗತಿಯೆಂದರಾದರಿಸುವಳೆ 1ಚಿದ್ರೂಪೆಯಾಗಿಪ್ಪೆ ನಿಜದಿ ಹರಿ ಮುದ್ರಿತೆಯಾಗಿ ನಾದದಿ ತೋರ್ಪೆ ಮುದದಿ ಇದ್ದು ನೀ ಚಕ್ರಸಪ್ತಕದಿ ನಾಲ್ಕ ಹೊದ್ದಿ ನಾಮವನದ ಪ್ರPಟಿಪೆ ಕ್ರಮದಿ 2ಪರವೆಂದು ನಾಭಿಯಲಿರುವೆ ಮತ್ತೆ ಮೆರೆವೆ ಹೃದಯದಲ್ಲಿ ಪಶ್ಯಂತಿ ಭಾವೆಕೊರಳಲ್ಲಿ ಬಿಡದಿರುತಿರುವೆ ಮಧ್ಯಮೆವರ ನಾಮ ವೈಖರಿುಂದ ತೋರಿಸುವೆ 3ಗೀತೆ ಭಾಗವತರೂಪಿನಲಿ ನೀನು ಮಾತೆಯಂದದಲರ್ಥಗಳನು ಪ್ರೀತಿಯಲಿ ಮಾತು ಬೋಧಿಸಿ ಪರಮನಲಿ ನಿತ್ಯ ಪ್ರೀತಿಯನುಂಟು ಮಾಡಿದೆ ಮನಸಿನಲಿ 4ಮಂದಬುದ್ಧಿಯ ನೆರೆ ಬಿಡಿಸು 'ಂದೆ ಬಂಧಿಸಿ ಬಂದಕರ್ಮವ ಕಡೆಗೊಳಿಸುತಂದೆ ಕೃಷ್ಣನ ಮುಂದೆ ನಿಲಿಸು ುನ್ನೂ ಸಂದೇಹವೇಕೆ ನೀನೇ ಬಂದು ನೆಲಸು 5ತೋರಿಸು ಮತಿಗೆ ಜ್ಞಾನವನು ಇದು ಜಾರದಂದದಲರ್ಥಗಳನು ಪ್ರೀತಿಯನುಸೇರಿ ಚಿತ್ತದಲಿನ್ನು ನೀನು ಮಂದ ಬಾರದ ಹಾಗೆ ಮಾಡೆನ್ನ ಮುಕ್ತನನು 6ಕರುಣಾಪೂರಿತದ್ಟೃುಂದ ನಿನ್ನ ಚರಣದಲಿಂಬಿಟ್ಟು ಕೊಳಲದರಿಂದನೆರೆ ಧನ್ಯನಹೆನು ನಿನ್ನಿಂದ ಕೂಡೆ ತಿರುಪತಿ ವೆಂಕಟನೊಲವದರಿಂದ 7ಓಂ ಕಮಲಾನಾಥಾಯ ನಮಃ || 2 ||ಗುರುಸ್ತುತಿಗಳು:
--------------
ತಿಮ್ಮಪ್ಪದಾಸರು
ರಕ್ಷಿಸೋ ಶ್ರೀಶ ಶ್ರೀ ಶ್ರೀನಿವಾಸ ಅಕ್ಷಯ ಗುಣಪೂರ್ಣ ಪಕ್ಷಿವಾಹನ ದೇವ ಅಕ್ಷರೇಶಾತ್ಮಕ ಮೋಕ್ಷ ದಾತನೆ ಹರಿ ಪ ರಕ್ಷಿಸೀಕ್ಷಣ ಲಕ್ಷ್ಮೀರಮಣ ಈಕ್ಷಿಸೀಗಲೆ ರಕ್ಷಿಸೆಮ್ಮನು ಕುಕ್ಷಿಯೊಳು ಜಗ ರಕ್ಷಿಸುವ ಹರಿ ಸೂಕ್ಷ್ಮ ಸ್ಥೂಲದೊಳಿರುವ ದೇವ ಅ.ಪ ಇಂದಿರೆರಮಣ ಗಜೇಂದ್ರವರದ ಹರಿ ಮಂದಹಾಸದಿ ಭಕ್ತವೃಂದವ ಪಾಲಿಪ ನಂದಕಂದನೆ ಬಂದು ರಕ್ಷಿಸು ಇಂದಿರಾ ಭೂದೇವಿ ರಮಣನೆ ಸುಂದರಾಂಗನೆ ಸುಮನ ಸರ ಹೃ- ನ್ಮಂದಿರದಿ ಶೋಭಿಸುವ ದೇವ 1 ನಂದನಕಂದ ಮುಕುಂದ ಹರೇ ಕೃಷ್ಣ ಕಂದರ್ಪ ಜನಕನೆ ಕರುಣಾನಿಧೆ ಹರಿ ಮದನ ಜನಕÀ ಸುಂದರಾಂಗ ಶ್ರೀಸುಮನಸರ ಪ್ರಿಯ ಬಂಧಮೋಚಕ ಭವವಿದೂರನೆ ಸಿಂಧುಶಯನ ಸರ್ವೇಶ ಶ್ರೀಹರಿ 2 ಕನಕ ಗರ್ಭನ ಪಿತ ಕರುಣಿಸೊ ನಿನ್ನಧ್ಯಾನ ಕನಸುಮನಸಲಿ ನಿನ್ನ ಸ್ಮರಣೆ ಎನಗಿತ್ತು ಕನಲಿಕೆಯ ಕಳೆದೆಮ್ಮ ಕ್ಷಣ ಬೆಂ- ಬಿಡದೆ ಕಾಪಾಡೆನ್ನುತ ಪ್ರಾರ್ಥಿಪೆ ಕಮಲನಾಭವಿಠ್ಠಲನೆ ಕರುಣದಿಕಮಲ ಮುಖಿಯೊಡಗೂಡಿ ಹರುಷದಿ 3
--------------
ನಿಡಗುರುಕಿ ಜೀವೂಬಾಯಿ
ರಕ್ಷೆಸೆನ್ನ ಈ ಕ್ಷಣದಲುಪೇಕ್ಷೆ ಮಾಡದೆ ಪಕ್ಷಿವಾಹನ ಪರಮಪುರುಷ ಲಕ್ಷ್ಮಿನಾಯಕ ಪ ಅಂದಂದಿಂದ ಕೈಯಹಿಡಿದು ಚಂದದಿಂದ ಎನ್ನಬಿಡದೆ ಇಂದು ನಿನ್ನ ದ್ವಂದ್ವ ಚರಣಕ್ಹೊಂದಿದ ದಾಸನು ಎಂದು 1 ಕಷ್ಟಿ ಇವನು ಎಂದು ಕರುಣ ದೃಷ್ಟಿಯನೆ ತೋರುಬೇಗ ಸೃಷ್ಟಿಗೊಡೆಯ ನಾದ ಶ್ರೀ ಕೃಷ್ಣಮೂರುತಿ ನೀನೆ ಗತಿ 2 ಇಂದು ಮಾಡಿದಂಥದೆಂಥಾ ದೋಷವೊ ಹರಿಯೆ ಇಂದು ಎನ್ನ ಬಾಧಿಸುವುದು ಏನು ಕಾರಣವೊ ಕೃಷ್ಣಾ 3 ಸಜ್ಜನರ ರಕ್ಷಕ ದೇವ ಸರ್ವಜನರ ಪೋಷಕ ನೀನೆ ದುರ್ಜನರ ಖಂಡಿಸಿದ ಮೂಜ್ಜಗ ಪಾಲಕ ನೀನೇ ಎಂದೂ 4 ಪುಂಡರೀಕವರದ ಭೂಮಂಡಲಾಧಿಪತಿಯೆನಿಸಿ ಮಹಿಮವುಳ್ಳದೇವ 5 ಭಾವಜನಯ್ಯ ಭವ ಸ್ತೋತ್ರ ಪ್ರೀಯಾ ಪೊರೆಯದಲಿರುವದು ದೇವಾ 6 ಗಂಗೆ ಜನಕ ಮಂಗಳಾಂಗ ಕರುಣಾಸಾಗರ ಘನಗಂಭೀರಾ ರಂಗ `ಹೆನ್ನವಿಠಲ' ಕೃಪಾಂಗ ದೇವೋತ್ತುಂಗ ಹರಿಯೆ7
--------------
ಹೆನ್ನೆರಂಗದಾಸರು
ರಂಗ ಬಂದ ಬೃಂದಾವನದಲಿ ನಿಂದಕೊಳಲಿನ ಧ್ವನಿ ಬಹು ಚೆಂದ ಪ ನಂದಗೋಪಿಯರ ಕಂದ ಮುಕುಂದಸುಂದರಿಯರ ಆನಂದ ಗೋವಿಂದ ಅ.ಪ ಮಂದಗಮನೇರ ಕೂಡಿ ಸರಸವನಾಡುತಇಂದಿರೆಯರಸ ನಗುತ ಕೊಳಲನೂದುತಎಂದೆಂದಿಗೂ ತನ್ನ ನಂಬಿದ ಭಕ್ತರಬಂದು ಪೊರೆವ ಗೋವಿಂದ ಮುಕುಂದ 1 ಉದಧಿ ಸಂಚಾರ ಗುಣಗಂಭೀರನವನೀತದಧಿ ಭಾಂಡಚೋರ ರುಗ್ಮಿಣಿ ಮನೋಹರಮದನ ಗೋಪಾಲನು ಭಜಿಸುವ ಭಕುತರಹೃದಯದೊಳಗೆ ನಿಂದು ಮುದವನು ಕೊಡುವ2 ಮಧುರೆಯಿಂದಲಿ ಬಂದ ಮಾವನ್ನ ಕೊಂದಕಡೆಗೋಲ ನೇಣ ಕೈಲಿ ಪಿಡಿದ ದ್ವಾರಕಾವಾಸಹಡಗಿನಿಂದಲಿ ಬಂದು ಉಡುಪಿಲಿ ನೆಲೆಸುತಬಿಡದೆ ಪೂಜೆಗೊಂಬ ಒಡೆಯ ಶ್ರೀಕೃಷ್ಣ3
--------------
ವ್ಯಾಸರಾಯರು
ರಂಗ ಬಾರ ಕುರಂಗನಯನೆ ಮಂಗಳಾಂಗನ ಕರೆದುತಾರೆ ಪ ಅಂಗ ಸಂಗ ಸುಖವನಿತ್ತು ತಂಗೀ ಮನವ ಸೆಳೆದುಕೊಂಡ ಅ.ಪ ಸಂಚಿನಿಂದ ಒಳಗೆಬಂದು ಮಂಚಕೆನ್ನ ಗಂಡನ ಕಟ್ಟಿ ಮಿಂಚಿನಂತೆ ತೋರಿಪೋದ 1 ಕಂಚುಕದೊಳಿರುವ ಪಣ್ಗಳ ವಂಚಿಸದೆ ಕೊಡುಯೆಂದೆಂಬ ಸಂಚಿತಾರ್ಥದ ಪುಣ್ಯವೆಂದು ವಿರಿಂಚಿಪಿತನು ರೋಜಪಿಡಿದ 2 ಉಲ್ಲಸದೊಳಗಾಲಿಂಗಿಸುತ ಫುಲ್ಲಲೋಚನ ಪರವಶಗೈದ 3 ಮುನಿದುನಾನು ನಿಂದಿರಲು ಕನಿಕರದಿಂದ ಕುಣಿದು ಹಾಡಿ ಮನವನುಬ್ಬಿಸಿ ತನುವಮರೆಯಿಸಿ ಇವನತೆರದೊಳೆನ್ನನಾಳ್ದ 4 ಮೊಸರ ಕಡೆದು ಬೆಣ್ಣೆತೆಗೆಯೆ ಮೆಲ್ಲನೆ ಬೆನ್ನಹಿಂದೆ ಬಂದು ಅಸಮರೂಪ ತೋರುತಾಗ ಒಸೆಯುತದನು ಕದ್ದು ಮೆದ್ದ 5 ಹೋರಿಯೆನ್ನೊಡೆ ದಾರಿಬಿಡದೆ ಓರಿಗೆಯರ ಕಂಡು ಜಾರಿದ 6 ಕೊಳಲನೂದಿ ಒಳಗೆ ಬಂದು ಲಲನೆಯೇಳೆ ಎಂದವನ 7 ನೀರಮುಳಗಿ ಭಾರಹೊತ್ತು ಕೋರೆ ಮಸೆದ ನಾರಸಿಂಹ ಬುದ್ಧ ಕಲ್ಕಿ 8 ಪಕ್ಷಿವಾಹನ ಹೆಜ್ಜಾಜಿ ಯಧ್ಯಕ್ಷ ಚನ್ನಕೇಶವದೊರೆಯೆ ರಕ್ಷಿಸೆಂದು ನಂಬಿದವರ ಪಕ್ಷನಾಗಿ ಪಾಲನೆಗೈವ 9
--------------
ಶಾಮಶರ್ಮರು
ರಂಗಧಾಮ ಭುಜಂಗ ಶಯನ ಮಂಗಳಾತ್ಮಕನೆ ಶ್ರೀಶನೆ ಪ ಗಂಗಾಜನಕ ಉತ್ತುಂಗ ಮಹಿಮನೆ ಸಂಗರಹಿತನೆ ಭಂಗಹರಿಪನೆ ಅ.ಪ ಶ್ರೀಶ ನಿನ್ನನು ಪ್ರಾರ್ಥಿಪರಘ ಶೋಧಿಸೆನುತ ಶ್ರೀ ಸಮೇತರಾಗಿ ಭಕ್ತರ ಪೋಷಿಸೆನ್ನುತ ವಾಸುದೇವ ಅನಂತಮಹಿಮ ಶ್ರೀಶನೆನ್ನುತ ದಾಸರೆಲ್ಲರು ಘೋಷಿಸುವರು ಶೇಷಶಯನ ರಕ್ಷಿಸೆನುತ 1 ಸಾಧುಜನ ಹೃದಯವಾಸನೆನ್ನುತ ಪೇಳ್ವರೊ ಸಾಧನ ಜೀವರಿಗೆ ಪರಮಪ್ರಿಯನೆಂಬರೊ ಮೋದತೀರ್ಥ ಸುಧಾರಸ ಸೇವಿಸಿರೆಂಬರೋ ಆದಿ ಪುರುಷ ಅನಾದಿ ಅನಂತ ಮಹಿಮನೆಂಬರೊ2 ಅಕ್ಷಯಗುಣ ಪೂರ್ಣಸರ್ವರ ರಕ್ಷಿಸೆನ್ನುತಲಿ ಲಕ್ಷ್ಮಿಪತಿಯೆ ಪ್ರಾರ್ಥಿಸುವೆನು ಈಕ್ಷಿಸೆನುತಲಿ ಪಕ್ಷಿವಾಹನವೇರಿ ಮೆರೆವ ಅದೋಕ್ಷಜನೆನುತಲಿ ನಿತ್ಯ ನಿತ್ಯದಲಿ 3 ಶೋಭಿಪ ನಿನ್ನ ರೂಪ ಹೃದಯದಲಿ ಕಾಣಲು ಶೋಭಕೃತು ಸಂವತ್ಸರದಲಿ ನಿನ್ನ ಪಾಡಲು ಶೋಭನಂಗಳನ್ನೆ ಕೊಡುವ ಸ್ವಾಮಿ ಎನ್ನಲು 4 ಕಡಲಶಯನ ಮೃಡನ ಸಖನೆ ಬಿಡದೆ ರಕ್ಷಿಸು ತಡೆಯದೆ ನಿನ್ನ ಚರಣ ಸ್ಮರಣೆ ಬಿಡದೆ ಕರುಣಿಸು ಬಿಡದಲೇ ಬಹಮನದ ತಾಪವೆಲ್ಲ ನೀಗಿಸುಕಡಲೊಡೆಯನೆ ಕಮಲನಾಭ ವಿಠ್ಠಲ ಪಾಲಿಸು 5
--------------
ನಿಡಗುರುಕಿ ಜೀವೂಬಾಯಿ
ರಂಗವಲಿದ ದಾಸರಾಯ | ಸಾಧು ಸಂಗವಿಡಿಸಿ ಕರುಣದಿ ಪಿಡಿ ಕೈಯ್ಯ ಪ ಕುಂಭಿಣಿ ಸುರನಾಥ | ನಂಬಿದೆ ನಿನ್ನ ಪಾದ ಬೆಂಬಿಡದಲೆ ಕಾಯೊ || ಕಂಬು ಕಂಧರ ಭಕ್ತಮಂದಾರ 1 ಹರಿಕಥೆ ಸುಧಾಸಾರ | ಸುರಸಗ್ರಂಥವ ಜಗದಿ | ವಿರಚಿಸಿರುವ ನಿನ್ನ || ವರ ಉಪಕಾರ | ವರ್ಣಿಸಲಪಾರ | ಪರಮೋದಾರ 2 ಸಾಮಗಾನ ವಿಲೋಲ | ಶಾಮಸುಂದರವಿಠಲ ಸ್ವಾಮಿಯ ಭಕುತಿ | ನಿ | ಅನುಜ ಸಲ್ಹಾದ ನೀಡೆನಗಲ್ಹಾದ 3
--------------
ಶಾಮಸುಂದರ ವಿಠಲ
ರಜತ ಪೀಠದ ಯಾತ್ರೆ ರಜೋತಮ ಗುಣವುಳ್ಳ | ಪ್ರಜರಿಗೆ ದೊರಕುವದೆ | ತ್ರಿಜಗದೊಳಗೆ ಮುಂದೆ | ಅಜನಾಗಿ ಬಪ್ಪಗೆ | ಭಜನೆ ಮಾಡುವಂಥ ಸುಜನರಿಗಲ್ಲದೆ ಪ ಮಂದಾಕಿನಿ ಮಿಕ್ಕಾದ ನದಿಗಳಲ್ಲಿಗೆ ಪೋಗೆ | ಮಿಂದು ನಾನಾ ಕ್ಷೇತ್ರವ ಬಂದೂ ಬಿಡದೆ ತಿರುಗಿ ವೇದ ಶಾಸ್ತ್ರಗಳು | ಚಂದದಿ ಓದಿಕೊಂಡು | ಕುಂದದೆ ವ್ರತ ಯಾಗ ಯೋಗ ಮಾಡಲೇನು | ಬಿಂದು ಮಾತ್ರ ಫಲವಿಲ್ಲ | ಸುರರು ಒಂದಾಗಿ ಒಂದಿನ | ಅಂದು ಪೀಯೂಷವ ಕರೆಯೆ ಉಂಡವರಾರು 1 ಮಾನವ | ನಾಡೊಳು ಉಡುಪಿ ಯಾತ್ರೆ ಮಾಡಿದರವಗೇನು ಲೇಶ ಸತ್ಕರ್ಮವು | ಕೂಡದು ಕೂಡದಯ್ಯಾ | ಬಿಡಾಲನಂದದಿ ತಿರುಗಿದಂತಾಗುವದು | ಕೇಡಿಗೆ ಗುರಿಯಾಗುವಾ | ಜೋಡು ಇಲ್ಲಿಗೆ ಬಂದು ತಿರುಗಿ ಪೋದರೆಯೇನು | ಆಡಲೇನದಕೆ ತಿಲಾಂಶ ಸುಖವುಂಟೆ 2 ತಮೋ ಯೋಗ್ಯ ಉಡುಪಿನ ಯಾತ್ರೆ ಮಾಡಲು | ಅಮಿತ ಬಲವಂತನಾಗಿ ಪುಟ್ಟಿ ಆಕ್ರಮಿಸಿ ಪುಣ್ಯವನೆ ಕೆಡಿಸಿ ತಮಕೆ ಸಾಧನವಾದ ಸುಖಬಟ್ಟು ಬಹುಕಾಲ | ರಮಣಿ ಮಕ್ಕಳು ಸಹಿತದಿ | ನಿತ್ಯ | ತಮಸಿನೊಳಗೆ ವಾಸಫಲ ವ್ಯರ್ಥವಾಗದು 3 ರಾಜಸ ಗುಣದಲ್ಲಿ ಈ ಯಾತ್ರೆ ಮಾಡಲು | ಭೂಷಣವನೆ ಯಿಟ್ಟು | ವಾಜಿ ಗಜವಾಗಿ ಸೌಖ್ಯ ಈ ಜಗದೊಳು ಒಟ್ಟು ಪೋಗೋದಲ್ಲದೆ ವಿ | ರಾಜಿಸುವದು ಬಲ್ಲದೇ | ರಾಜಮಂದಿರಕೆ ನವರತ್ನ ತೆತ್ತಿಸಿದಂತೆ | ಈ ಜನದ ಸುಖದ ಫಲ ವ್ಯರ್ಥವಾಗುವದು4 ಮುಕ್ತಿಯೋಗ್ಯನು ಬಂದು ಯಾತ್ರೆಯ ಮಾಡಲು | ಮುಕ್ತಿ ಉತ್ತಮ ಕುಲದಲ್ಲಿ | ವ್ಯಕ್ತನಾಗೀ | ದಿವ್ಯ ಮನದಲ್ಲಿ ವಿರುಕುತಿ | ಭಕ್ತಿಜ್ಞಾನದಲಿ ಬಾಳಿ | ಶಕ್ತನೆಂದೆನೆ ಸತತ ಶ್ರೀಮದಾರ್ಯರ | ಭಕ್ತಿಲಿ ಲೋಲಾಡುತ | ಭಕ್ತವತ್ಸಲ ವಿಜಯವಿಠ್ಠಲ ಕೃಷ್ಣಸಾರ | ಭೋಕ್ತನಲ್ಲಿಪ್ಪನು ಫಲ ವ್ಯರ್ಥವಾಗದು 5
--------------
ವಿಜಯದಾಸ
ರಥವಾನೇರಿದ ಶ್ರೀ ಹನುಮಂತ | ಭೀಮ ಬಲವಂತ ಪ ಗತ ಶೋಕನ ಪದ | ರತಿ ಇಚ್ಛಿಪರಿಗೆಹಿತದಿಂದಲಿ ಸದ್ | ಗತಿಯ ಕೊಡುವೆನೆಂದು ಅ.ಪ. ಪತಿ ಕರಿಸೆನ್ನಲು |ಪ್ರತಿ ಪ್ರತಿ ತತುವರು | ಗತ ವಿಭವದಲಿರೆಪ್ರತಿ ನಿನಗಿಲ್ಲೆಂದೆ | ನುತಲಿ ತೋರಿದ 1 ಗರ ಉದುಭವಿಸಲುಹಿತದಿಂದಲಿ ಜಗ | ಪತಿಯಾಣತಿಗಳ |ಪತಿ ಕರಿಸುತ ನೀ | ಪಾತ್ರಗ ಗರವನುಮತಿ ವಂತನೆ ಕುಡಿ | ದತಿಶಯ ತೋರಿದೆ 2 ಮೂರು - ಕೋಟಿಯ ರೂಪ - ಧರನೆ | ಮೂರ್ವಿಕ್ರಮ ಸೇವಕನೆಮೂರು ಲೋಕಂಗಳ ವ್ಯಾಪಕನೆ | ರಕ್ಕಸಾಂತಕನೆ ||ಆರು ಮೂರುಗಳು | ಎರಡೊಂದನೆ ದಶನೂರು ಮೇಲೆ ಆ | ರ್ನೂರ್ ಜಪಗಳ |ಮೂರು ಭೇದ ವಿಹ | ಜೀವರುಗಳಲಿವಾರ ವಾರಕೆ ನೀ | ಗೈಯ್ಯುವೆ ಗುರುವೇ 3 ವಿಶ್ವ ಕ ಕರ್ಮ ಸಮೂಹವಸಾಕ್ಷಾತ್ತಾಗಿ ತಾನೆ | ಗೈಯ್ಯುವೆನೆಂದು 4 ಆನನ ಕಮಲಕೆಭಾನುವೆನಿಸುತಲಿ | ದುಶ್ಯಾಸನನಗೋಣ ಮುರಿದುರದಿ | ಕೋಣನ ವಿರಚಿಸಿಶೋಣಿತ ಕುಡಿದಂತೆ | ಕಾಣುವೆನೆಂದು 5 ಚಕ್ರಧರ | ಅಂಬುಜ ನಯನನಬೆಂಬಿಡದಲೆ ನೀ | ಸಂಭಮ್ರದಲಿ ನಿನ |ಅಂಬಕದಲಿ ನಿನ | ಬಿಂಬನ ಕಾಣುತತ್ರ್ಯಂಬಕನಿಂ ಸಂ | ಭಾವನೆ ಗೊಳ್ಳುತ 6 ಮಾಘ ಶುದ್ಧವು ನವಮಿಯ ದಿನದಿ | ಪಾರ್ಥಿವ ವತ್ಸರದಿಸಾಗರ ಕಟ್ಟೆ ಯತಿ ಸಮ್ಮುಖದಿ | ಕುಳ್ಳಿರುತಲಿ ರಥದಿ ||ನಿಗಮಗಳಿಗೆ ಸಿಗ | ದಗಣಿತ ಗುಣಮಣಿಖಗವರ ಗುರು ಗೋ | ವಿಂದ ವಿಠ್ಠಲನ |ಸುಗುಣ ಗಣಂಗಳ | ಬಗೆ ಬಗೆಯಿಂದಲಿಪೊಗಳುವರಘಗಳ | ನೀಗುವೆನೆನ್ನುತ 7
--------------
ಗುರುಗೋವಿಂದವಿಠಲರು
ರವಿಸುತನ ಪ್ರಧಾನಿಯೆ ರಾ ಘವ ಕಾರ್ಯ ಧುರಂಧರಾಗಣಿತ ವಿಕ್ರಮಯಂ- ಮವಗುಣಗಳನೆಣಿಸದೆ ಕಾ ಯುವದೈ ನೀಂ ಪುಟಪರ್ತಿ ವೀರ ಹನುಮನೆ 1 ಮಾರುತನ ಕುಮಾರ ಪವಿ ಶ ರೀರ ಕಪಿವರಾಗ್ರಗಣ್ಯ ವರದಾಯಕ ನೀ ನಾರಾಧಕರಿಗೆ ಕೊಡು ದಿ ವ್ಯಾರೋಗ್ಯವ ಪುಟಪರ್ತಿ ವೀರ ಹನುಮನೆ 2 ವೈರಾಗ್ಯವು ಭಕ್ತಿ ಜ್ಞಾನವಂ ಪಾಲಿಸುವೈ ರಾರಿಳೆಯೊಳು ಪುಟಪರ್ತಿ ವೀರ ಹನುಮನೆ 3 ನೆರೆ ಪ್ರಾಣಗಳಿತ್ತೆ ಧೀರನೊಲಿಯುವಲೀ ತರಳನ ಜ್ವರಾದಿಗಳ ಪರಿ ಹರಿಸುತ ಪೊರೆ ಪುಟಪರ್ತಿ ವೀರ ಹನುಮನೆ 4 ರಾವಣನ ಗುದ್ದಿದಾತನೆ ಪಾವನ ಪರಮ ಪವಿತ್ರ ಕೃ ಪಾವನಧಿಯೇ ಪುಟಪರ್ತಿ ವೀರ ಹನುಮನೆ 5 ನರಿತನುದಿನ ಪಠಿಸುವರಿಗೆಯಾರೋಗ್ಯಸುವು ಸ್ಥಿರ ವೈರಾಗ್ಯಾಯುಗಳನು ಶ್ರೀ ಗುರುರಾಮ ವಿಠಲನು ಬಿಡದೆ ಕರುಣಿಸುತ್ತಿರುವಂ 6
--------------
ಗುರುರಾಮವಿಠಲ
ರಾಜೀವದಳನೇತ್ರ ರಾಮಚಂದ್ರನೆ ಶುಭ- ನಾಮಧೇಯನೆ ನಿನಗಾನಮಿಸುವೆನು ಪ ರಾಮರಾಕ್ಷಸಕುಲ ಭಯಂಕರ ರಾಮದಶರಥ ಪುತ್ರನೆ ವರ ಸಾಮಗಾನ ವಿಲೋಲ ಶ್ರೀವರ ರಾಮ ಭರತ ಶತ್ರುಘ್ನ ಪಾಲಕ ಅ.ಪ ಸುರರೆಲ್ಲ ನೆರೆದು ಋಷಿವರರೆಲ್ಲ ಒಂದಾಗಿ ವರ ಕ್ಷೀರಾಂಬುಧಿಯ ಸಾರುತ ವೇಗದಿ ಪರಮಾತ್ಮ ನಿನ ಕಂಡು ಪರಿಪರಿ ಸ್ಮರಿಸುತ ನೆರೆದರು ದೇವ ಗಂಧರ್ವ ನಾರದರೆಲ್ಲ ಗರುಡ ಗಮನನೆ ಉರಗಶಯನನೆ ಪರಮ ಪುರುಷನೆ ಪುಣ್ಯಚರಿತನೆ ತ್ವರದಿ ಎಮ್ಮಯ ಮೊರೆಯ ಕೇಳೆಂದು ಭರದಿ ಪ್ರಾರ್ಥನೆ ಮಾಡುತಿಹರು 1 ಖೂಳ ದೈತ್ಯರು ನಮ್ಮ ಬಾಳಗೊಡರೊ ದೇವ ಭಾಳ ವ್ಯಾಕುಲರಾಗಿ ದು:ಖಿಪೆವು ಕೇಳಿ ತಡಮಾಡದೆ ಪಾಲಿಸಿ ಸಲಹಯ್ಯ ಶ್ರೀಲೋಲ ಶ್ರೀವರ ಶ್ರೀವತ್ಸಲಾಂಛನ ಶ್ರೀಶ ಶ್ರೀ ಭೂದೇವಿ ರಮಣನೆ ಮಾತುಳಾಂತಕ ಮದನಜನಕನೆ ವಾಸುದೇವನೆ ಭಜಿಪ ಭಕ್ತರ ಸೋಸಿನಲಿ ರಕ್ಷಿಸುತ ಪೊರೆಯುವೆ 2 ಭಕ್ತವತ್ಸಲ ಸ್ವಾಮಿ ಭಕ್ತರ ಸುರಧೇನು ಯುಕ್ತ ಮಾತುಗಳಾಡಿ ಸಂತಯಿಸಿ ಸತ್ಯ ಸಂಕಲ್ಪನು ಮತ್ತವರನು ಕಳುಹಿ ಸತ್ಯಸಂಧನ ದಶರಥನುದರದಿ ಪುಟ್ಟಿ ಮತ್ತೆ ವಿಶ್ವಾಮಿತ್ರ ಬರಲು ಅರ್ಥಿಯಲಿ ಯಾಗವನೆ ನಡೆಸಲು ಸುತ್ತಿ ಬರುವ ಸುರರನೆ ಸದೆದು ಮತ್ತೆ ಯಾಗ ನಿರ್ವಿಘ್ನ ಮಾಡಿದ 3 ಸೀತಾಸ್ವಯಂವರಕ್ಕಾಗಿ ಬರುತಿರಲಾಗವರು ಗೌತಮ ಸತಿಯ ಶಾಪಹರಿಸಿ ಪಾತಕಿ ತಾಟಕಿಯನು ಕೊಂದು ಹರುಷದಿ ನಿ- ರ್ಭೀತನಾಗಿ ಮಿಥಿಲಾಪುರಕೆ ಸೇರಲು ಬಂದು ಆತ ಲಕ್ಷ್ಮಣನೊಡನೆ ಶಿವಧನು ನೀತಿಯಿಂದೆತ್ತುತಲಿ ಸೀತೆಯು ಪ್ರೀತಿಯಲಿ ವನಮಾಲೆ ಹಾಕಲು ಆಕೆಯ ಕೈಪಿಡಿದ ರಾಮನೆ 4 ರಾಮಲಕ್ಷ್ಮಣ ಭರತ ಶತ್ರುಘ್ನರಿಗೆ ಲಗ್ನ ನೇಮದಿಂದಲಿ ಮಾಡಿ ಕಳುಹಲಾಗ ಸಾಮಜವರ ಅಯೋಧ್ಯಾಪುರದಿ ಭಕ್ತ- ಸ್ತೋಮವನೆರಹಿ ರಾಜ್ಯಾಭಿಷೇಕವ ನಡಸೆ ಆ ಮಹಾಮುನಿ ಸ್ತೋಮ ಸುರಗಣ ರಾಮನಿಗೆ ಪಟ್ಟವೆನುತ ಹರುಷಿಸೆ ಆ ಮಹಾಕೈಕೆ ವರವ ಬೇಡುತ ರಾಮನಿಗೆ ವನವಾಸವೆನಲು 5 ವನವನ ಚರಿಸುತ ಘನರಕ್ಕಸರ ಕೊಂದು ವನಜಾಕ್ಷಿ ಮಾಯಾಮೃಗವೆ ಬೇಡಲು ವನಮೃಗ ಬೆನ್ನಟ್ಟಿ ತರುವೆನೆನುತ ಪೋಗಿ ಬಣಗು ರಾವಣ ಸೀತಾಹರಣವ ಮಾಡಲು ಕುರುಹು ಕಾಣದೆ ಸೀತೆಯ ವನವನದಿ ಚರಿಸುವ ಸಮಯದಲಿ ಕಪಿ ವರರ ಸೈನ್ಯವ ಕಳುಹಿ ಮುದ್ರಿಕೆ ಇತ್ತು ಜನಕ ಜಾತೆಯ ನೋಡಿ ಬರಲು 6 ಕಡಲ ಕಟ್ಟುತ ಸೈನ್ಯ ನಡಿಸಿ ಯುದ್ಧವ ಮಾಡೆ ಬಿಡದೆ ರಾವಣ ಸಹಿತೆಲ್ಲರನು ಕೊಂದು ಕಡು ಭಕ್ತನಿಗೆ ಲಂಕಾಪುರದಲಿ ಪಟ್ಟವ ಕಟ್ಟಿ ಮಡದಿ ಸಹಿತ ಪುಷ್ಪಕವನೇರಿ ಬರುತಿರೆ ಸಡಗರದಿ ಹನುಮಂತ ಭರತಗೆ ಒಡೆಯ ಬರುತಿಹನೆಂದು ಪೇಳಲು ಕಡುಹರುಷದಿ ಅಯೋಧ್ಯೆಯನಾಳಿದ ಕಡಲೊಡೆಯ ಕಮಲನಾಭ ವಿಠ್ಠಲನೆ 7 ಬಂದ ಶ್ರೀರಾಮಚಂದ್ರ ಭಾಗವತರ ಕೂಡಿಇಂದಿರೆ ಜಾನಕಿ ಸೌಮಿತ್ರಿ ಸಹಿತದಿ
--------------
ನಿಡಗುರುಕಿ ಜೀವೂಬಾಯಿ
ರಾಜೋಪಚಾರರಾಜೋಪಚಾರರಾಜೀವನೇತ್ರ ನೀನವಧರಿಸು ಬೇಗ ಪಸಾವಿರದ ದಳವುಳ್ಳ ಕಮಲವೊಂದಕೆ ಶಕ್ತಿಸಾವಿರದ ಮೌಕ್ತಿಕದ ಸರಗಳೊಪ್ಪಿಹವುಕಾವಿಹುದು ಸಕಲ ದೇವಾತ್ಮಕದ ಶಾರದೆಯುನಾ ವಹಿಸಿ ತುರಿಯ ಕಲಶದ ಛತ್ರವೆಂದೆಂಬ 1ಆವಗವು ಸತ್ವಾದಿ ಗುಣಗಳಿಂದೊಪ್ಪಿರುವಆವರಣ ವಿಕ್ಷೇಪ ಶಕ್ತಿಯೆಂಬೆರಡುದೇವ ನಿನ್ನುಭಯ ಪಾಶ್ರ್ವದಲೊಲವುತಿಹ ಸರ್ವಭಾವದಿಂದುಭಯ ಚಾಮರವೆರಡರಿಂದ 2ಗಂಧರ್ವ ನಗರದಿಂದೈತಂದ ನಾರಿಯರುಛಂದದಿಂ ನರ್ತಿಸುತಲಿಹರೈವರಿವರುಒಂದಾಗಿ ಬಳಿಕಿವರ ಹೊಂದಿ ಮತ್ತೈವರಿರೆಹಿಂದೆ ನಾಲ್ವರುವೆರಸಿ ನಲಿವ ನರ್ತನವೆಂಬ 3ಪರವೆಂದು ನಾಭಿಯಲಿ ಪಶ್ಯಂತಿ ಹೃದಯದಲಿಸ್ವರವಿಹುದು ಕಂಠದಲಿ ಮಧ್ಯಮಾಖ್ಯೆಯಲಿಸ್ಫುರಿಸಿ ಮುಖಕಮಲದಲಿ ವೇದಶಾಸ್ತ್ರಗಳಾಗಿಮೆರೆವ ವೈಖರಿಯೆಂಬ ಗೀತವಿದ ಕೇಳು 4ತಾಳ ಮರ್ದಳೆ ಘಂಟೆ ಭೇರಿ ಶಂಖಗಳಿಂದಮೇಲಾದ ವೀಣೆ ವೇಣುಗಳ ರವದಿಂದಲಾಲಿಸುವ ಛಿಣಿ ಛಿಣೀ ಛಿಣಿಗಳೆಂಬವರಿಂದನೀಲ ಮೇಘಧ್ವಾನ ದಶನಾದದಿಂದ 5ಪರಿಪರಿಯ ಗತಿಯುಳ್ಳ ಚಿತ್ತವೆಂಬಶ್ವವನುವರ ಸತ್ವ ಗುಣವೆಂಬ ಹಲ್ಲಣವ ಬಿಗಿದುನಿರತ ಪರಮಾತ್ಮನೀಕ್ಷಣದ ಕಡಿವಾಣವನುಪಿರಿದಾಗಿಯಳವಡಿಸಿ ಮುಂದೆ ನಿಂದಿಹುದಾಗಿ 6ಒಲವುತಿಹ ಸುಖ ದುಃಖವೆರಡು ಘಂಟೆಗಳಿಂದನೆಲನ ಸೋಕುವ ಕಾಮ ಸುಂಡಿಲದರಿಂದಫಲ ಚತುಷ್ಟಯ ಪಾದ ಮೇಲು ಮಂಟಪದಿಂದಬಲುಮೆಯಹ ಮೂಲ ಕಾರಣವೆಂಬ ಗಜವು 7ಹಿಂದೆಮುಂದರುವರೊಂದಾಗಿ ವಹಿಸಿರಲದಕೆಹೊಂದಿಸಿದ ಚೌಕಿ ಮನವೆಂಬುದದರಲ್ಲಿಮಂದ ಮೃದು ಬಹು ವಿಷಯ ಸುಖದ ಹಾಸಿಕೆ ಹಾಸಿದಂದಳವಿದನುಭವದ ಕೊಂಬಿನಿಂದೊಪ್ಪಿರುವ 8ಆರು ನೆಲೆಯುಳ್ಳ ರಥವದಕೆ ಶಕ್ತಿಗಳೆಂಬಮೂರು ಕಲಶಗಳಲ್ಲಿ ನಾಲ್ಕು ಸತ್ತಿಗೆಯುಮೂರವಸ್ಥೆಗಳದರ ತುರಿಯವೆಂಬುದೆ ನಾಲ್ಕುಮೂರುಲೋಕವನಾಳ್ವ ಮಹಿಮ ನೀ ಪ್ರತಿಗ್ರಹಿಸು 9ನುಡಿವುದೆಲ್ಲವು ವೇದ ನಡೆವುದೆಲ್ಲವು ಶಾಸ್ತ್ರಬಿಡದೆ ನಿನ್ನಾಜ್ಞೆಯೊಳಗಿರೆ ಪುರಾಣದೃಢವಾಗಿ ನಿನ್ನ ಭಜನೆಯ ಮಾಳ್ಪ ದಿವಸವದುಕಡುಪುಣ್ಯವಾದ ಪಂಚಾಂಗವೆನಿಸುವದು 10ಉದಯದಲಿ ನಿನ್ನ ಸ್ಮರಣೆಯ ಮಾಡೆ ಪುಣ್ಯತಿಥಿಒದಗಿಸುವ ಸತ್ಕರ್ಮ ವಾರವೆನಿಸುವದುಅದರಲ್ಲಿಯನುಭವವೆ ನಕ್ಷತ್ರ ನಿನ್ನಲ್ಲಿಹುದುಗೆ ಜೀವನು ಯೋಗ ಹುದುಗುವದೆ ಕರಣ 11ಸಕಲ ವೇದಂಗಳಲಿ ಪ್ರತಿಪಾದಿಸಿದ ಫಲವುವಿಕಳವಿಲ್ಲದೆ ನಿನ್ನ ನಿಮಿಷ ಧ್ಯಾನಿಸಲುಸಕಲ ತೀರ್ಥಸ್ನಾನ ದಾನ ಜಪ ತಪ ಯಜ್ಞಸಕಲವೂ ಬಹುದೆಂಬ ಸರ್ವೋಪಚಾರ 12ಸುರ ಸಿದ್ಧ ಮುನಿವೃಂದ ನಿರತ ಸೇವಿತ ಚರಣಶರಣಾಗತೋದ್ದರಣ ಶರಧಿಜಾರಮಣತಿರುಪತಿಯ ಸ್ಥಿರವಾಸ ನಿರುಪಮ ಮಹಾಕರುಣಮರೆಯೊಕ್ಕೆ ಸಲಹೆನ್ನ ಪ್ರಾಣ ವೆಂಕಟರಮಣ 13ಓಂ ಜುನೇ ನಮಃ
--------------
ತಿಮ್ಮಪ್ಪದಾಸರು
ರಾಧಾರಮಣ ವಿಠಲ ನೀನಿವಳಸಾದರದಿ ಕಾಪಾಡೊ ಹರಿಯೇ ಪ ವೇದವೇದ್ಯನೆ ಪೂರ್ಣ ಬೋಧಸನ್ನುತ ನಿನ್ನಪಾದ ಭಜಕಳ ಬಿಡದೆ ಕಾಪಾಡೊ ಹರಿಯೇಅ.ಪ. ದಾಸದೀಕ್ಷೆಯಲಿ ಅಭಿಲಾಷೆ ಪೊಂದಿಹಳಿವಳುಶ್ರೀತ ತವ ಪಾದಾಬ್ಜ ದಾಸ್ಯವನೆ ಇತ್ತೂನೀಸಲಹೊ ಸುಜ್ಞಾನ ಭಕುತಿ ಭಾಗ್ಯವನಿತ್ತುಶೇಷಾದಿ ದಿವಿಜೇಡ್ಯ ವಾಸುದೇವಾಖ್ಯಾ 1 ನಿತ್ಯ ಮಂಗಳ ಮೂರ್ತೇಸತ್ಯಭಾಮಾ ಪತಿಯೆ ಪ್ರತ್ಯಹರ ನಿನ್ನ ಸ್ಮøತಿಇತ್ತು ಪಾಲಿಸು ಎಂದು ಪ್ರಾರ್ಥಿಸುವೆ ನಿನ್ನಾ 2 ಆಪನ್ನ ಪರಿಪಾಲಕಾಪಾಡ ಬೇಕಿವಳ ಗೋಪಾಲ ಬಾಲಾ 3 ಪತಿಯೆ ಪರದೈವವೆಂಬುನ್ನತದ ಮತಿಯಿತ್ತುಹಿತದಿಂದ ಮಧ್ವಮತ ತತ್ವಾಮೃತವನುಣಿಸೀಕೃತ ಕಾರ್ಯಳೆಂದೆನಿಸಿ ಹೃತ್ಸರೋಜದಿ ಚರಣಶತ ಪತ್ರ ತೋರಯ್ಯ ಶ್ರುತಿವಿನುತ ಹರಿಯೆ 4 ಘೋರ ದುರಿತಾಬ್ಧಿಯನು ಪಾರಗೈಸುವ ನಿನ್ನಕಾರುಣ್ಯಕೆಣೆಯುಂಟೆ ನೀರಜಾಕ್ಷಾಚಾರುಗುಣವಂತೆ ಬಾಲೆಯನು ಉದ್ಧರಿಸುಮಾರಾರಿ ಸಖ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ರಾಮ ಜಾನಕೀರಮಣ ರಾಜೀವದಳನಯನ ಧಾಮ ನಿಧಿವಂಶ ಸೋಮನಿಗೆ ಪ ಪದುಮಶಾಲೆಯೊಳಗೆ ಪದುಮಗದ್ದುಗೆ ಹಾಕಿ ಪದುಮನಾಭನು ಬಂದು ಕುಳಿತನು ಪದುನುನಾಭನು ಬಂದು ಕುಳಿತನು ಎಡದಲ್ಲಿ ಪದುಮಾಕ್ಷಿ ಪದುಮ ಸಾಧನೆ ಲಕುಮಿ ಒಪ್ಪಿದಳು. 1 ವಾರುಣಿ ಗಿರಿಜೆ ಮೀನಕೇತನ ರಾಣಿ ಇಂದ್ರಾಣಿ ಮಿಕ್ಕಾನಲಿದಾಡುತಲಿ ಮೀನಕೇತನ ರಾಣಿ ಇಂದ್ರಾಣಿ ನಕ್ಕು ನಲಿದಾಡುತಲಿ ಆನಂದದಿ ಬಂದು ಕುಳಿತರು ತಮ್ಮ ಠಾಣೆಗೆ 2 ಚಿನ್ನದ ತಳಿಗೇಲಿ ಎಣ್ಣೆ ಅರಿಶಿಣ ಗಂಧ ಸಣ್ಣ ಕುಂಕುಮ ಜಾತಿ ಕಸ್ತೂರಿ ಪೊಂಗಳಸ ಸಣ್ಣ ಕುಂಕುಮ ಜಾತಿ ಕಸ್ತೂರಿ ಪೊಂಗಳಸ ಹೆಣ್ಣುಗಳ ಮಧ್ಯೆ ಇಳಿಸಿದರು3 ತಂದೆ ತಾತನ ಬಳಿಯ ಮಂದಾಕಿನಿ ವಾಗ್ವಿಯ- ರೊಂದಾಗಿ ಒಡಗೂಡಿ ರಂಗಯ್ಯನ ಕೈಗೆ ಒಂದಾಗಿ ಒಡಗೂಡಿ ರಂಗಯ್ಯನ ಕೈಯೊಳಗೆ ತಂದು ಅರಿಶಿಣ ಎಣ್ಣೆ ಗಂಧವಿತ್ತು4 ತಡಮಾಡಲಾಗದು ಕಡಲಶಯನ ನಿಮ್ಮ ಮಡದಿಯಂಗಕ್ಕೆ ತೊಡೆವುದೆನಲು ಮಡದಿಯಂಗಕ್ಕೆ ತೊಡೆವುದು ಎನಲಾಗಿ ಕಡು ಹರುಷದಿ ಸತಿಯಳ ನೋಡಿದನು 5 ಎನ್ನರಸಿ ಹೊನ್ನರಸಿ ಪ್ರಾಣದರಸಿ ಪಟ್ಟದರಸಿ | ಕನ್ಯೆ ಶಿರೋಮಣಿ ಪಾವನ ದೇಹಿ || ಕನ್ಯೆ ಶಿರೋಮಣಿ ಪಾವನ ದೇಹಳೆ ನಿನ್ನ | ಕನ್ನಡಿ ಮುಖವ ತೋರರಿಷಿಣವ ನಾ ಹಚ್ಚುವೆ 6 ತಂದೆ ನಂದನರಿಗೆ ಬಂಧು ಬಳಗ ಸುತ್ತ | ಹೊಂದಿದ ಜನರಿಗೆ ಹಲವರಿಗೆ || ಹೊಂದಿದ ಜನರಿಗೆ ಹಲವರಿಗೆ ಕದನ | ತಂದು ಹಾಕುವಳೆಂದು ಹಚ್ಚಿದನು 7 ತೂಗಿಸಿಕೊಂಬುವಳೆ ದೌತ್ಯಕ್ಕೆ ಸಲ್ಲುವಳೆ | ಬಾಗಿಲ ಕಾಯಿಸುವಳೆ ಬಲ್ಲಿದರ || ಬಾಗಿಲಕಾಯಿಸುವಳೆ ಬಲ್ಲಿದರನು ಬಿಡದೆ | ಸಾಗರನ ಮಗಳು ಎಂದು ತೊಡೆದನು 8 ಇಂದಿರಾದೇವಿ ಬಾ ಮಂದಿರಾಂಬುಜ ರಾಮ | ಸುಂದರ ಶ್ರೀವಾರಿ ಮಂಗಳಗಾತ್ರೆ || ಸುಂದರ ಶ್ರೀನಾರಿ ಮಂಗಳಗಾತ್ರೆ ಯೆಂದು | ಅಂಗಜ ಜನಕನು ನಗುತಲಿದ್ದ 9 ರಮಣಿಯ ದೇಹಕ್ಕೆ ಕಮಲನಾಭನು ಎದ್ದು | ವಿಮಲಕಸ್ತೂರಿ ಗಂಧವರಿಷಿಣ ಎಣ್ಣೆ || ವಿಮಲ ಕಸ್ತೂರಿ ಗಂಧವರಿಷಿಣ ಎಣ್ಣೆಯ | ಕ್ರಮದಿಂದ ಲೇಪಿಸಿ ಊಟಣಿಸಾರಿ 10 ಸಾಕಾರಗುಣವಂತಿ ತ್ರಿಲೋಕದ ಜನನಿ | ನಾಕಜವಂದಿತಳೆ ನಾಗಗಮನೆ || ನಾಕಜವಂದಿತಳೆ ನಾಗಗಮನೆ ಏಳೂ | ಶ್ರೀಕಾಂತನ ಸೇವೆಯ ಮಾಡೆಂದರು 11 ಅಂದ ಮಾತನು ಕೇಳಿ ಗಂಧ ಅರಷಿಣ ಕೊಂಡು | ನಿಂದು ಸಮ್ಮುಖದಲ್ಲಿ ರಂಗನ ನೋಡಿ | ನಿಂದು ಸಮ್ಮುಖದಲ್ಲಿ ರಂಗನ ನೋಡಿ ಹಿಗ್ಗಿ | ಚಂದ್ರವದನೆ ಪತಿಗೆ ಹಚ್ಚಿದಳು 12 ಗೋವಳರ ಎಂಜಲು ಆವಾಗ ತಿಂದವನೆ | ಮಾವನ್ನ ಕೊಂದವನೆ ಮಾಯಾಕಾರ || ಮಾವನ್ನ ಕೊಂದವನೆ ಮಾಯಾಕಾರನೆ ನಿನ್ನ | ಸೇವೆಗೆ ಶಕ್ತಳೆನುತ ಹಚ್ಚಿದಳು 13 ಬೆಣ್ಣೆ ಮೊಸರು ಕದ್ದು ಹೆಣ್ಣುಗಳ ಕೆಡಿಸಿ | ಮುನ್ನೆ ತೊತ್ತಿನ ಮಗನ ಮನಿಯ ಉಂಡ || ಮುನ್ನೆ ತೊತ್ತಿನ ಮಗನ ಮನಿಯಲುಂಡ ಹಿಂದೆ | ಹೆಣ್ಣಾಗಿ ಇದ್ದವನೆಂದು ಹಚ್ಚಿದಳು 14 ಎನ್ನರಸ ಚೆನ್ನರಸ ಪ್ರಾಣದರಸ ಪಟ್ಟಣದರಸ | ಭಿನ್ನವಖಿಳ ಜೀವಕ್ಕೆನ್ನ ಒಡೆಯ || ಭಿನ್ನವಖಿಳ ಜೀವಕ್ಕೆನ್ನ ಒಡೆಯ ಸಲಹಿಂದು | ಚೆನ್ನಾಗಿ ಅರಿಷಿಣ ಗಂಧ ಹಚ್ಚಿದಳು 15 ನಿತ್ಯ ಕಲ್ಯಾಣ ಪುರುಷೋತ್ತಮ ಸರ್ವೇಶ | ಸತ್ಯಸಂಕಲ್ಪ ಸಿದ್ಧ ಅಪ್ರಮೇಯಾ || ಸತ್ಯಸಂಕಲ್ಪ ಸಿದ್ಧ ಅಪ್ರಮೇಯನೆಂದು | ಮಿತ್ರೆ ಸರ್ವಾಂಗಕ್ಕೆ ಹಚ್ಚಿದಳು 16 ದೇವಿ ದೇವೇಶಗೆ ಈ ಉರುಟಣೆಯಿಲ್ಲ | ಆವಾವ ಬಗೆ ಎಲ್ಲ ತೋರಿಸುತ್ತ || ಆವಾವ ಬಗೆ ಎಲ್ಲ ತೋರಿ ವಧು-ವರಗಳಿಗೆ | ಹೂವು ಬಾಸಿಂಗವ ರಚಿಸಿದರು17 ಅಸುರ ವಿರೋಧಿ ವಸುದೇವನಂದನ | ಪಶುಪತಿ ರಕ್ಷಕ ಪರಮ ಪುರುಷ || ಪಶುಪತಿ ರಕ್ಷಕ ಪರಮ ಪುರುಷ ಎಂದು | ಹಸನಾಗಿ ಲೇಪಿಸಿ ಇತ್ತ ಜನರ 18 ಶೃಂಗಾರವಂತೇರು ರಂಗ ಶ್ರೀಲಕುಮಿಗೆ | ಮಂಗಳಾರತಿ ಎತ್ತಿ ಹರಸಿದರು || ಮಂಗಳಾರತಿ ಎತ್ತಿ ಹರಸಿ ದೇವರಮನೆಗೆ | ಅಂಗನೆಯಳ ಸಹಿತ ನಡೆಯೆಂದರಾಗ 17 ಎತ್ತಿಕೊಂಡನು ರಂಗ ಚಿತ್ತದ ವಲ್ಲಭೆಯ | ಮತ್ತೆ ಸುಗಂಧಿಯರು ಹೊಸ್ತಿಲೊಳಗೆ || ಮತ್ತೆ ಸುಗಂಧಿಯರು ಹೊಸ್ತಿಲೊಳಗೆ ನಿಂದು | ಪತ್ನಿಯ ಹೆಸರು ಪೇಳೆಂದರು ಆಗ 20 ಬೇಗ ಮಾರ್ಗವ ಸಾರಿ ತೂಗಲಾರನು ಇವಳ | ಸಾಗಿ ಪೋಗುವನೆಂದು ಪೇಳುತಿರಲು || ಸಾಗಿ ಪೋಗುವನೆಂದು ಪೇಳುತಿರಲು ಸ್ತ್ರೀ ಕೂಟ | ತೂಗವದೆಂತು ನಾಳೆ ನುಡಿಯೆಂದರು 21 ನಕ್ಕು ಸಂತೋಷದಲಿ ರುಕ್ಮಿಣಿ ಎಂದನು | ಅಕ್ಕಯ್ಯ ಪೇಳೆಂದು ಹೆಮ್ಮಕ್ಕಳೆಲ್ಲ || ಅಕ್ಕಯ್ಯ ಪೇಳೆಂದು ಹೆಮ್ಮಕ್ಕಳೆಲ್ಲ ಎನಲು | ಚಕ್ರಪಾಣಿ ಎಂದು ಪೇಳಿದಳು ಲಕುಮಿ 22 ಗಂಡ ಹೆಂಡತಿ ಪೋಗಿ ದಂಡ ಪ್ರಣಾಮಮಾಡಿ | ಮಂಡಲದ ಚರಿತೆ ತೋರಿದರು ಆಗ || ಮಂಡಲದ ಚರಿತೆ ತೋರಿ ವಧು-ವರಗಳಿಗೆ | ಕಂಡವರಿಗೆ ಮದುವೆಯೆನಿಸಿದರು 23 ದಂಪತಿಗಳು ಒಲಿದು ಇಂಪಾಗಿ ಉರುಟಣಿ | ಸೊಂಪಾಗಿ ಮಾಡಿದರು ಅನೇಕವಾಗಿ || ಸಂಪತ್ತು ಕೊಡುವನು ವಿಜಯವಿಠ್ಠಲರಾಯಾ 24
--------------
ವಿಜಯದಾಸ
ರಾಮ ರಘುಕುಲಾಬ್ಧಿ ಸೋಮಾ ಪ ಸಂತತ ಭಕ್ತ ಪ್ರೇಮಾ ಮಂಗಲಧಾಮಾ | ಪರಿಪೂರ್ಣ ನಿನ್ನಯ ನಾಮವೆ ಗತಿ ಎನಗೆ ಅ.ಪ. ಏಸಪರಾಧಗಳೆಣಿಸದೆ ದಯವಿಟ್ಟು | ದೋಷದೂರನ ಮಾಡೊ ಕೇಶವ ಕಮಲಾಕ್ಷಾ 1 ಪ್ರಣವಾಕಾರ ವಿಮಾನ ಮನಿಯಾಗಿಯಿಪ್ಪನೆ | ಫಣಿಶಾಯಿ ರಂಗೇಶ ಮಣಿಗಣ ಭೂಷಣನೆ2 ಇಕ್ವಾಕು ನೃಪವರದ ಸಾಕ್ಷಾತ್ತ ಪರಮಾತ್ಮಾ-| ಧ್ಯಕ್ಷ ವಿಜಯವಿಠ್ಠಲಾ ರಕ್ಷಿಸು ಬಿಡದೆನ್ನ3
--------------
ವಿಜಯದಾಸ