ಒಟ್ಟು 2964 ಕಡೆಗಳಲ್ಲಿ , 122 ದಾಸರು , 2123 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಂಬಿದೆನೊ ನಿನ್ನ ಪಾದಾರವಿಂದಾ ಇಂಬು ಈವದು ಎನಗೆ ವೈಕುಂಠಪುರದೊಳಗೆ ಪ ಮಲಭಾಂಡದಲ್ಲಿ ಪೊಕ್ಕು ನೆಲೆಗಾಣದಲೆ ಸಿಕ್ಕು ಸಲೆ ಸೊರಗಿ ತಿರುಗಿದೆನೊ ಬಳಲಿ ಮರುಗಿ ಉಳಿವದಕುಪಾಯವನು ಒಂದರೆ ಕಾಣೆನೊ ಎಲೊ ಬಲುದೈವ ನೀನೆ ದಯಾಳು ಎಂದೂ 1 ಕೈವಲ್ಯ ಕೊಡುವಲ್ಲಿ ಮಂಡಲದೊಳು ಎಣಿಯಾರು ನಿನಗೆ ಭಂಡಕಾಯವ ತೆತ್ತು ಬರಲಾರೆ ನಿನ್ನ ತೊತ್ತು ನಿತ್ಯ ಎಳೆನೋಟದಲಿ ನೋಡು 2 ಯದುಕುಲಲಲಾಮ ಸುರಸಾರ್ವಭೌಮ ಮಹಿಮ ಮದನಪಿತ ಕಾಳಿಂಗಭಂಗ ರಂಗಾ ಮಧುಸೂದನ ವಿಜಯವಿಠ್ಠಲ ಲಕುಮಿನಲ್ಲಾ ಹೃದಯದೊಳು ಪೊಳೆವ ಬಲು ವಿಚಿತ್ರ ಚಲುವಾ 3
--------------
ವಿಜಯದಾಸ
ನಂಬಿದೆನೊ ರಂಗ ಗೋವಿಂದ ರಂಗ ಪ. ಇಳೆಸೃಷ್ಟಿಗಾಧಾರನೆಂಬ ಬಿರುದುಳ್ಳಡೆ ಜಗನ್ಮಯನೆ ಚಿನ್ಮಯರೂಪ ರಂಗ ನೀನಾದ್ಯಯ್ಯ ರಂಗ 1 ಸುಜನಮಂದಾರ ಸರಸಿಜಭವಪಿತ ನಿನ್ನ ಪ್ರಜೆಗಳು ಪೊಗಳುತ್ತಿಹರೆ ರಂಗ ಮುರಹರನೆ ರಂಗ 2 ಸುಜನರೊಳಗೆನ್ನ ಕುಹಕವ ಮಾಡದೆ ನಿನ್ನ ಭಜಕನೆಂದಿರಲಾಗಿ ರಂಗ ಭುಜಗೇಂದ್ರಶಯನ ಶ್ರೀರಂಗ 3 ಧಾತ್ರಿಗಾಧಾರ ಅನಾಥರಕ್ಷಕನೆ ದಯವ್ಯಾತಕೆನ್ನೊಳಿಲ್ಲ ರಂಗ ಕಡೆಹಾಯಿಸೊ ರಂಗ 4 ನೋಡೆ ಶ್ರೀ ಹರಿಯೆ ನೀನಲ್ಲದನ್ಯತ್ರ ದಾತ್ರರಿಲ್ಲವೊ ರಂಗ ಮಹಿಮ ಶ್ರೀರಂಗ 5 ಕೋಪವನು ಬಿಡು ಎನ್ನ ಕುಂದನೆಣಿಸದಿರಯ್ಯ ಆಪತ್ಬಂಧು ಶ್ರೀರಂಗ ಸಲಹಯ್ಯ ರಂಗ 6
--------------
ಹೆಳವನಕಟ್ಟೆ ಗಿರಿಯಮ್ಮ
ನಂಬಿದೇ ಗುರುವರಾ ನಂಬಿದೇಪ ನಂಬಿದೆ ಗುರುಸಾರ್ವಭೌಮಾ ತುಂಟುಮನದೊಳು ಹರಿಭಕ್ತಿ ನಿಸ್ಸೀಮಆಹಾ ಅಂಬುಜೋದ್ಭವಪಿತನ ಕಂಭದಿ ತೋರಿದ ಶಂಬರ ಕುಲದೀಪ ಪ್ರಹ್ಲಾದ ವ್ಯಾಸಮುನಿಯೇ ಅ.ಪ. ದಾಸನೆಂದಡಿಗೆ ಬಿದ್ದೆನೋ ಈಗ ದೋಷ ನಾಶಮಾಡೋ ಎನಗೆ ಬೇಗ ಆಹಾ ವಾಸುಕಿಶಯನನ ಬ್ಯಾಸರದೆ ಸ್ತುತಿಸಿ ಈಶನ ಸರ್ವತ್ರವ್ಯಾಪ್ತಿಯನರುಹಿದ ಭೂಪ 1 ಪಾತಕರೊಳಗೆ ಅಗ್ರೇಸರನಾನು ಪೂತಮಾಡುವರೊಳಗೆ ನಿಸ್ಸೀಮ ನೀನು ಆಹಾ ತಾತನಪ್ಪಣೆಯಂತೆ ವ್ಯಾಸರಾಜಾಎನಿಸಿ ಖ್ಯಾತಿಯಿಂದಲಿ ತರ್ಕತಾಂಡವರಚಿಸಿ ಮೆರೆದೇ 2 ತಾಪಸಶ್ರೇಷ್ಠ ಬ್ರಹ್ಮಣ್ಯಕುವರನಾದೆ ಗೋಪಾಲಕೃಷ್ಣನ್ನ ಕುಣಿಕುಣಿದಾಡಿಸಿ ಭೂಪನ ಕುಹಯೋಗ ಕಳೆದ ಯತಿಕುಲತಿಲಕ 3 ಮಧ್ವಶಾಸ್ತ್ರಗಳ ಮಂದರರಿಯದಿರಲು ಮುದದಿಂದ ಪದಸುಳಾದಿಗಳ ರಚಿಸಿದೆ ನೀನು ಆಹಾ ಆದರದಿಂದಲಿ ಪುರಂದರಕನಕರಿಗೆ ಸದುಪದೇಶವ ಕೊಟ್ಟು ಜಗದುದ್ಧಾರಮಾಡಿದ ಪ್ರಭುವೇ 4 ಮತ್ತೆ ಪುಟ್ಟಿದೆ ವೆಂಕಣ್ಣಭಟ್ಟ ನೆಂದೆನಿಸೀ ಮತ್ತ ಕೇಸರಿಯಂತೆ ಮಧ್ವಶಾಸ್ತ್ರದಿ ಮೆರೆದೇ ಆಹಾ ಕತ್ತಲೆ ಅದ್ವೈತವಾದಗಳಿಗೆಲ್ಲಾ ಕತ್ತಿಎನಿಸಿದ ಪರಿಮಳಾಚಾರ್ಯ ಗುರುವೇ 5 ವಿಪ್ರನು ದಿಟ್ಟತನದಿ ನಿನ್ನ ಗಂಧವ ತೇದುಕೊಡುಎನೆ ಕ್ಷಿಪ್ರದಿ ತೋರಿದೆ ನಿನ್ನ ಮಹಿಮೆಯಜಗಕೇ ಆಹಾ ಅಪ್ಪ ಶ್ರೀರಾಮರ ಪೂಜಿಸಬೇಕೆಂದು ಒಪ್ಪಿಸನ್ಯಾಸವ ರಾಘವೇಂದ್ರನಾದ 6 ಮುದದಿ ದೇಶ ದೇಶವ ಚರಿಸಿದೇ ಸಮಯದಿ ಸುಜನರಕ್ಲೇಶಗಳಳಿದೇ ಆಹಾ ಮೋದಮುನಿಯ ಗ್ರಂಥಗಳಿಗೆಲ್ಲ ಟಿಪ್ಪಣಿ ಮಾಡುತ ಬುಧರಿಗೆ ತತ್ವ ಕನ್ನಡಿ ತೋರ್ದ ಗುಣಗಣನಿಧಿಯೇ7 ಪರಿಪರಿ ಮಹಿಮೆಯ ತೋರುವ ಗುರುವೇ ಸುರತರು ಅಂದದಿ ಹರಕೆ ಗಳೀವೆ ಪ್ರಭುವೇ ಆಹಾ ಮೂರೆರಡು ಒಂದುನೂರು ವರುಷ ಪರಿಯಂತ ಸಾರಿಸಾರಿದವರ ಪೊರೆದು ಮೆರೆಯುವ ದಿವಿಜವಂದಿತ ಗುರು8 ದಯದಿಂದ ನೋಡೆನ್ನ ದೀನೋದ್ಧಾರ ಭವ ಬಿಡಿಸು ಕರುಣಾಸಾರ ಆಹಾ ಜಯತೀರ್ಥವಾಯ್ವಂತರ್ಗತ ಶ್ರೀಕೃಷ್ಣ ವಿಠಲನ ಹೃ- ದಯಮಂದಿರದಿ ತೋರೆನಗೆ ಗುರುಸಾರ್ವಭೌಮ 9
--------------
ಕೃಷ್ಣವಿಠಲದಾಸರು
ನಂಬಿದ್ಯಾ ಮನವೇ ನಂಬಿದ್ಯಾ ಪ ನಂಬಿದ್ಯ ಮನವೆ ಕೊಂಡಾಡಿದ್ಯ ಆನಂದ ತೀರ್ಥರ ಮತವೆಸತ್ಯವೆಂದು ಅ.ಪ ಇಂದಿರೆ ರಮಣನೆ ಪರದೈವವೆಂದು ಬಂಧನಾದಿ ಅಷ್ಟಕರ್ತೃತ್ವ ಆತನದೆಂದು ಕುಂದುಕೊರತೆಗಳಿಲ್ಲದ ಸರ್ವೇಶ ಶಾಶ್ವತನೆಂದು ನಂದ ಕಂದನು ಸಾನಂದ ಗುಣ ಪೂರ್ಣ ಸ್ವರತನೆಂದು 1 ನಾರಾಯಣನೆ ಸರ್ವೋತ್ತುಮನು ಎಂದು ಸಿರಿ ಅಜಶಿವರೆಲ್ಲ ಹರಿಯಕಿಂಕರರೆಂದು ಮುರವೈರಿ ಅಂತಃ ಬಹಿರ್ವ್ಯಾಪ್ತನು ಎಂದು ಶಾರಂಗ ಪಾಣಿಯೆ ಸರ್ವಾಂತರ್ಯಾಮಿಯೆಂದು 2 ಸಾಕಾರಸರ್ವೇಶ ನಿರ್ವಿಕಾರ ನೆಂದು ಓಂಕಾರ ವಾಚ್ಯನೆ ಸರ್ವಾಧಾರ ಸರ್ವಗನೆಂದು ಅಕಾರಾದಿ ಸರ್ವವರ್ಣಸ್ವರ ಶಬ್ದ ವಾಚ್ಯನುಎಂದು ಅಜ ಅಪ್ರಮೇಯನೆಂದೂ3 ವೇದಗೋಚರ ತಾವೇದಾತೀತನೆಂದು ವಿಧಿಸಿರಿ ವಂದಿತ ಸಾಕಲ್ಯದಿ ಅವಾಚ್ಯನೆಂದು ಮಧುಸೂಧನನು ಚಿನ್ಮಯ ವಪುಷನೆಂದು ಭೇದವಿಲ್ಲದ ರೂಪ ಗುಣಕ್ರಿಯ ಅವಯವನೆಂದು4 ನಾಶರಹಿತ ಕೇಶವನೊಬ್ಬ ಆರ್ತಿವರ್ಜಿತ ನೆಂದು ಕ್ಲೇಶರಹಿತ ವಾಸುದೇವನು ವಿಧಿನಿಷೇಧ ವರ್ಜಿತನೆಂದು ವಿಶ್ವೇಶ ಸರ್ವತಂತ್ರ ಸ್ವತಂತ್ರನು ಸಾರ್ವಭೌಮನು ಎಂದೂ ವಾಸುಕಿ ಶಯನನು ಲೀಲೆ ಗೋಸುಗ ವಿಹಾರಮಾಳ್ಪಾನೆಂದು5 ಪುರುಷ ಸೂಕ್ತ ಪ್ರತಿಪಾದ್ಯ ಅಪ್ರಾಕೃತನೆಂದು ವರಗಾಯತ್ರ್ಯಾದಿ ಸರ್ವಮಂತ್ರ ಪ್ರತಿಪಾದ್ಯನೆಂದು ಅಪವರ್ಗ ಗತಿದಾಯಕನೆಂದೂ ಪಾದ ಭಜನೆಯೆ ಸಾರವೆಂದೂ 6 ವಿರಂಚಿ ಜನಕನೆ ಸರ್ವತ್ರ ಸರ್ವರಲಿದ್ದು ಸರ್ವಕಾರ್ಯ ಕಾರ್ಯಗಳನು ಮಾಡಿ ಮಾಡಿಸುವನೆಂದು ಸರ್ವಜೀವರಿಗೆ ಕರ್ಮಗಳುಣಿಸಿ ತಾ ನಿರ್ಲೇಪನೆಂದೂ ಖರಾರಿರೂಪಗಳೆಲ್ಲ ಅನಾದಿ ಶುಕ್ಲಶೋಣಿತವರ್ಜಿತವೆಂದು7 ಲಕ್ಷ್ಮಿರಮಣನು ಪಕ್ಷಪಾತ ರಹಿತನೆಂದು ಪಕ್ಷಿವಾಹನನು ಕ್ಷರಾಕ್ಷರ ವಿಲಕ್ಷಣನೆಂದು ಲಕ್ಷ್ಮಣಾಗ್ರಜನು ಕುಕ್ಷಿಯೊಳಗೆ ಬ್ರಹ್ಮಾಂಡ ರಕ್ಷಿಪನೆಂದು ಇಕ್ಷು ಚಾಪನ ಪಿತನಚಿಂತಾದ್ಭುತನೆಂದು 8 ಹಂಸಾದಿ ಹದಿನೆಂಟು ರೂಪಗಳ ಧರಿಸಿ ಹೊರಗೆ ವ್ಯಾಪಿಸಿ ಕಂಸಾರಿಸಕಲವ ನಡಿಸೀನಡಿಸುತ ಸುಖದುಃಖಗಳ ಲೇಶಯೋಗ್ಯತೆ ಮೀರಗೊಡದಲೆ ಉಣಿಸುವನೆಂದು 9 ಪತಿತ ಪಾವನ ಪರಾವರೇಶ ತ್ರಿಗುಣವರ್ಜಿತನೆಂದು ಸತತ ಸ್ವಪ್ನ ಸುಷಪ್ತಿ ಜಾಗ್ರತೆ ಮೋಕ್ಷಾ ವಸ್ಥೆಗಳಲಿ ವಿಶ್ವ ತ್ವೆಜಸ ಪ್ರಾಜ್ಞ ತುರ್ಯರೂಪಾದಿಂದ ಮತಿ ಪ್ರೇರಕನಾಗಿ ಕಾದುಕೊಂಡು ಪೊರೆಯುವ ನೆಂದು10 ಸತ್ಯವತಿ ಸುತನು ಸತ್ಯ ಸಂಕಲ್ಪನೆಂದು ಆತನೆ ನಿತ್ಯಾನಿತ್ಯ ಜಗದೀಶನಂತರ್ಯಾಮೀಯೆಂದು ಮುಕ್ತಾ ಮುಕ್ತರ ನಾಥ ಮುಖ್ಯ ಬಿಂಬನು ಚತುರಾನನಾದಿಗಳಿಗೆಲ್ಲಾ ಎಂದು11 ಅನಿಲ ಜೀವೋತ್ತಮ ಹರಿಯ ಪ್ರಥಮಾಂಗ ಅಪರೋಕ್ಷ ಪ್ರಭುವು ಅಣು ಮಹದ್ಘನ ರೂಪ ಚರಿತ ಭಾರತೀಶ ವಾಣೀ ಪತಿಯ ಪದಾರ್ಹ ವಾತದೇವನು ಎಂದು 12 ಹನುಮ ಭೀಮ ಮಧ್ವ ಮೂರಾವತಾರದ ದೇವ ಅನುಪಮ ಬಲನಿಸ್ಸೀಮ ಪುರುಷತೇಜ ತೃಣ ಮೊದಲಾದ ಸರ್ವಜೀವರಲ್ಲಿದ್ದು ಅವರ ಹರಿಯಾಜ್ಞೆಯಂತೀವನೆಂದೂ 13 ದ್ವಾತ್ರಿಂಶಲ್ಲಕ್ಷಣ ಸಂಪನ್ನ ಗುರು ಮಧ್ವನೆಂದು ಆತನೇಲೋಕಕ್ಕೆಲ್ಲ ಗುರವು ಎಂದು ಈತ ಸಕಲಪೇಳಿದ ಮಾತಿಗೆ ಸರಿಯಿಲ್ಲವು ಎಂದು ಪ್ರೀತಿಯಿಂದಲಿ ಭಜಿಪ ಭಕ್ತಗೇನೆ ಮುಕ್ತಿಯೆಂದು 14 ಹರಿಯ ಮತವೆ ಹನುಮನ ಮತವು ಎಂದು ಸಿರಿ, ವಿರಂಚಿ ಪವನ ವಾಣಿ ಭಾರತೀಯರಲ್ಲಿ ಗರುಡ ಶೇಷ ಶಿವ ಶಕ್ರಾದಿಸರ್ವರೊಳಗೆ ತಾರತಮ್ಯ ಪಂಚ ಭೇದವು ಸತ್ಯವೆಂದು 15 ಭಾರತಿ ಪತಿಯದ್ವಾರವೆ ಹರಿಯು ಸ್ವೀಕರಿಪ ನೆಂದು ಮುರಾರಿಯ ಒಲುಮೆಗೆ ಜ್ಞಾನಯುತಭಕ್ತಿಯೆ ಸಾಧನವೆಂದು ಧರೆಯೊಳಗೆ ಹರಿನಾಮ ಸ್ಮರಣೆಗೆ ಸರಿಯಿಲ್ಲವು ಎಂದು ಮಾರಮಣನ ಅನುಗ್ರಹವೆ ಮೋಕ್ಷದಾಯಕ ವೆಂದು 16 ಅರಿಷಡ್ವರ್ಗಗಳಳಿಯುವುದೆ ವೈರಾಗ್ಯ ಮಾರ್ಗವೆಂದು ಗುರುವಿನ ಕರುಣವೆ ಜ್ಞಾನಕ್ಕೆ ಕಾರಣವೆಂದು ಸಾರಮಾರ್ಗಕ್ಕೆ ಸಾಧುಗಳ ಸಂಗವೆ ಮುಖ್ಯವೆಂದು ನೀರಜಾಕ್ಷಗೆ ಸರಿ ಮಿಗಿಲು ಇಲ್ಲವೆಂದು 17 ಜೀವ ಈಶಗೆ ಭೇದ ಈಶ ಜಡಕೆ ಭೇದ ವೆಂದು ಜೀವ ಜೀವಕೆ ಭೇದ ಜಡ ಜಡಕೆ ಭೇದವೆಂದು ಪರಿ ಪಂಚ ಭೇದವೆಂದು ಸಾವಧಾನದಿ ತಿಳಿದು ಜಗತ್ಸತ್ಯವೆಂದು ಧೃಡದಿ 18 ಸುರರೊಳುನರರೊಳು ಅಸುರರೊಳು ಎಲ್ಲೆಲ್ಲು ತಾರತಮ್ಯವು ಅನಾದಿಯಿಂದಲಿ ಇರುತಿಹುದೆಂದು ಸ್ವರೂಪಾನಂದಾವಿರ್ಭಾವವೆ ಮುಕ್ತಿಯೆಂದು ಅರವಿಂದನಾಭಗೆ ಸರ್ವರು ಸದಾದಾಸರೆಂದು 19 ಧನಕನಕ ವನಿತಾದಿಗಳೆಲ್ಲ ಹರಿಗೆ ಅರ್ಪಿತ ವೆಂದು ಏನೇನು ಮಾಡುವುದೆಲ್ಲ ಶ್ರೀ ಕೃಷ್ಣನ ಸೇವೆಯೆಂದು ದೀನ ಜನ ಮಂದಾರನಾಧೀನ ಸುಖದುಃಖಾಗಳೆಂದು ಏನು ಬೇಡದೆ ಹರಿಯ ಸತತನೆನೆವೋದೆ ಸಾಧನ ವೆಂದು20 ನಾಕೇಶ ಜಯತೀರ್ಥ ವಾಯ್ವೂಂತರ್ಗತನಾದ ಶ್ರೀಕೃಷ್ಣ ವಿಠಲಾನೆ ಮಮಸ್ವಾಮಿ ಸರ್ವಸ್ವವೆಂದು ಸಕಲ ಕರ್ಮಗಳರ್ಪಿಸುತ ತ್ರಿಕರಣ ಶುದ್ಧಿಯಿಂದಲಿ ಮಾಕಳತ್ರನ ಸತತ ಭಜಿಸುತ್ತಿರಬೇಕು ಎಂದು 21
--------------
ಕೃಷ್ಣವಿಠಲದಾಸರು
ನಂಬು ನಾರಾಯಣನ ನಂಬೋ ನರಹರಿಯನಂಬಿದಾ ಭಕ್ತರ ಕುಟುಂಬ ಸಾರಥಿಯ ಪ ಬಲಿ ನಂಬಿ ಪಾತಾಳಲೋಕಕರಸಾದನದೆಕುಲದ ಪ್ರಹ್ಲಾದನು ನಿಜವ ಕಂಡಕಲಿ ವಿಭೀಷಣ ನಂಬಿ ಲಂಕೆಯಲಿ ಸ್ಥಿರವಾದಛಲದ ಪಾರ್ಥನು ನಂಬಿ ವಿಶ್ವರೂಪವ ಕಂಡ1 ಅಂಬರೀಷನು ನಂಬಿ ವೈಕುಂಠವೇರಿದನುಹಂಬಲಿಸಿ ಶಶಿಧರನು ಉರಿಯ ಗೆದ್ದಕುಂಭಿನೀದೇವಿ ತಾ ಬಂಧನವ ಕಳೆದಳುಅಂಬುಜಾಕ್ಷಿ ದ್ರೌಪದಿಯು ಮಾನ ಉಳುಹಿಕೊಂಡಳು 2 ಅತಿ ಭಕುತರಿಗೆ ಮೆಚ್ಚಿ ಗತಿಮೋಕ್ಷವನಿತ್ತನುಮತಿಭ್ರಷ್ಟ ಅಜಮಿಳನ ಉದ್ಧರಿಸಿದನುಕ್ಷಿತಿಯೊಳಗೆ ಕಾಗಿನೆಲೆಯಾದಿಕೇಶವರಾಯಪತಿತ ಪಾವನ ಪರಮಪುರುಷೋತ್ತಮನನು 3
--------------
ಕನಕದಾಸ
ನಂಬುವುದು ತಾನು ಎಂತು ಸತಿಯು ಸುತರು ಮಗಳನುನಂಬಿ ಕಡೆ ಹಾಯ್ದುದುಂಟೆ ಹಾದಿಕಾರರನು ಪ ದಾರಿಕಾರರಿಗೆ ವಸತಿ ಮಳಿಗೆ ಭೇಟಿಯಲ್ಲೇದಾರಿ ಹಿಡಿದ ಬಳಿಕ ತಿರುಗಿ ಭೇಟಿಯಾಗೋದೆಲ್ಲಿದಾರ ಸುತರ ಭೇಟಿಯಿದೇ ದೇಹದೊಳಗೆ ಎಂದರಿಯೋಶರೀರವು ಬಿದ್ದ ಬಳಿಕ ಭೇಟಿ ಮುಂದೆ ಮರೆಯೋ1 ಕನಸಿನವರ ತಾನು ಈಗ ನೆನಸಲಿಕ್ಕೆ ಬಹರೆಕನಸಿನಂತೆ ತೋರುವರು ನೀನು ನಚ್ಚುವರೆಮನೆಯ ಬದುಕುಭಾಗ್ಯವೆಲ್ಲ ಮನದಿ ಜರೆದು ಬಿಡುನಿನಗೆ ಗತಿಯು ಏನು ಎಂದು ನೀನು ತಿಳಿದು ನೋಡು 2 ಹೆಗ್ಗಣವು ಜಾಗಿನೊಳಗೆ ಬಿದ್ದು ಮಿಡುಕಿದಂತೆವೆಗ್ಗಳಾಗಿ ಸಂಸಾರಕೆ ಮಾಡಿವೆಯೋ ಚಿಂತೆನುಗ್ಗು ಆದೆ ಬಯಲಭ್ರಾಂತಿ ನಿನಗೆ ವ್ಯಾಪಕಾಗಿಮುಗ್ಗುವೆ ನೀನೊಣನ ತೆರದಿ ನರಕದಲ್ಲಿ ಹೋಗಿ3 ನನ್ನ ಸಂಸಾರವೆನ್ನಬೇಡ ನೀನು ಇದನು ಈಗನನ್ನ ನನ್ನದೆಂದೆ ಹೋದ ನಿಮ್ಮಪ್ಪ ಮುಕ್ತನುಇನ್ನು ನಾಶವಿದು ಒಬ್ಬರಿಲ್ಲ ಸತ್ಯನಿನ್ನದಾರೆಂದು ಮರೆಯದಡೆ ನಿತ್ಯಾ4 ಇಂದ್ರಜಾಲ ನೋಡಲಿಕ್ಕೆ ಖರೆಯದಾಗಿ ಇಹುದುಅಂದದಾ ಪರಿಯು ಸಂಸಾರವೆ ನಿತ್ಯವಿಹುದುಬಂಧನವು ನಿನಗೆ ಇಹುದು ಗುರುವಿನ ಪಾದವಹೊಂದು ಮುಂದೆ ಚಿದಾನಂದನಹೆ ನೀನೀಗ ಎಂದು 5
--------------
ಚಿದಾನಂದ ಅವಧೂತರು
ನಮಗೆಲ್ಲಿ ಮನೆಗಳಯ್ಯ ನಾರಾಯಣ ಪ ಕಮಲ ಬ್ರಹ್ಮಾಂಡ ಕೋಟಿ ಒಡಲೊಳು ತಾಳ್ದಂಥರಮಾಧವ ನಿಮಗೆ ನೀರೊಳಗೆ ವಾಸವಾಯಿತುಅ ಜಲನಿಧಿಯನುತ್ತರಿಸಿ ಲಂಕೆಯನೈವುದಕೆಕುಲಗಿರಿಯ ಕಿತ್ತು ತಂದು ಸೇತುವೆ ಕಟ್ಟಿಸಲೆ ದೈತ್ಯನ ಕೊಂದು ಸೀತೆಯ ತಂದನಿಗೆ ಗಿರಿತಲೆಯ ಮೇಲೆ ಇಹ ಪ್ರಾಪ್ತಿಯಾಯಿತು 1 ಪೃಥ್ವಿಯ ತಲೆಯನು ಪರೆಮಾಡಿ ತಾಳಿದಳುತ್ಯಾನಮಮ್ಮನ ತಂದೆಯ ಮೆಲುವನಮೃತ್ಯುನಾಶಕನೆಂದು ಸುತ್ತಿದ್ದಾನೆಹುತ್ತಿನೊಳಗೆ ಇಹ ಪ್ರಾಪ್ತಿಯಾಯಿತು 2 ನಾಡದೇವತೆಗಳ ಸೆರೆಗಳ ಬಿಡಿಸಿಕ್ರೀಡೆಯಾಯಿತು ನಿಮ್ಮ ದಯದಿಂದಲಿರೂಢಿಯೊಳತಿ ಸೇವಕನಾದ ಗರುಡನಿಗೆಬೋಡು ಮರದ ಮೇಲೆ ಇಹ ಪ್ರಾಪ್ತಿಯಾಯಿತು 3 ಜಲನಿಧಿ ಸುತನ ಮೊಮ್ಮಗನ ಕೊಂದ ಶೂರ ನಕುಲ ಸಹದೇವ ಪಾಂಡವರೈವರುಲಲನೆ ದ್ರೌಪದಿಯೊಂದಿಗೆ ವನವಾಸ ಹೋಗಿಹೊಲದೊಳಗೆ ಇಹ ಪ್ರಾಪ್ತಿಯಾಯಿತು4 ಇಂಥಿಂಥವರಿಗೆಲ್ಲ ಮನೆಯಿಲ್ಲದಿರಲು ನ-ನ್ನಂಥವನಿಗಿನ್ನೆಲ್ಲಿ ಇರಲು ಸಾಧ್ಯಕಂತುಪಿತ ಕಾಗಿನೆಲೆಯಾದಿಕೇಶವನೆ ನಿ-ಶ್ಚಿಂತನಾಗಿ ನಿಮ್ಮ ಗುಡಿಯಲಿಪ್ಪೆನು 5
--------------
ಕನಕದಾಸ
ನಮಗೊಬ್ಹಾನೆ ತಾ ಜೀವಜೀವದ ಗೆಳೆಯ ಧ್ರುವ ಸುತ್ತಿ ಸೂಸ್ಯಾಡುತ್ಹಾನೆ ನೆತ್ತಿಯೊಳಗೆ ತುಂಬ್ಯಾನೆ ತುತ್ತುಮಾಡಿ ಉಣಿಸುತ್ಹಾನೆ ಹತ್ತಿಲೆ ತಾ ಹಾನೆ 1 ಹೊಟ್ಟೆಲೆನ್ನ ಹಿಡಿದಾನೆ ಘಟ್ಯಾಗಿ ರಕ್ಷಿಸುತಾನೆ ದೃಷ್ಟಿಸಿ ನೋಡುತ್ಹಾನೆ ಗುಟ್ಟಿನೊಳ್ಹಾನೆ 2 ತಾನೆ ಸೋತು ಬರುತ್ಹಾನೆ ಎನಗುಳ್ಳ ಸದ್ಗುರು ನಾಥ್ಹಾನೆ ಕನಗರಸಿದಾಗೊಮ್ಹಾನೆ ಮನದೊಳು ನಿಂದ್ಹಾನೆ 3 ಮಾಯದ ಸುಖ ಮರಿಸ್ಯಾನೆ ತಾಯಿ ತಂದೆ ತಾನಗ್ಹ್ಯಾನೆ ಸಾಹ್ಯ ಬಲು ಮಾಡುತ್ಹಾನೆ ಭವಭಯ ಬಿಡಿಸ್ಹ್ಯಾನೆ 4 ಮನ್ನಿಸಿ ದಯ ಬೀರುತ್ಹಾನೆ ಧನ್ಯ ಪ್ರಾಣಗೈಸುತ್ಹಾನೆ ಚಿಣ್ಣ ಮಹಿಪತಿಯ ಗುರು ತಾನೆ ಕಣ್ಣಿನೊಳ್ಹಾನೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಮಿಪೇ ನಮಿಪೇ ನಮಿಪೇ ಶ್ರೀ ಗುರುದೇವಾ ಜ್ಞಾನಬೋಧಾ ನೀಡಿ ಮನದಾ ದೀನತನ ಬಿಡಿಸಿ ನೀನೆ ಆ ಪರಮಾತ್ಮನೆನುವಾ ಸ್ವಾನುಭವ ಹಿಡಿಸಿ ಹೀನವಿಷಯಾಸಕ್ತಿಯಾ ನೀಗಿಸಿ ಎನಗಾಗಿ ಜಗದಸುಖದ ಮರುಳು ಬಿಡಿಸಿ ಸೊಗಸ ತೋರಿಸಿದಿ ಅಘವನಳಿದು ಸೊಗಸಿನೊಳಗೆ ಖಗೆಯ ನಿಲಸಿದಿ ನೀ ಬಗೆಯ ರೋಗವೆಲ್ಲವ ನೀಗಿಸಿ ಎನಗಾಗಿ
--------------
ಶಂಕರಭಟ್ಟ ಅಗ್ನಿಹೋತ್ರಿ
ನಮಿಸುವೆನು ಭಕ್ತಿಯಲಿ ಚನ್ನಕೇಶವನೇ ಮೂರ್ತಿ ಅಜಸುರಾರ್ಚಿತನೇ ಪ ಕರಿರಾಜ ಖಲನಕ್ರ ಭಾಧೆಯಿಂ ಮರೆಹೊಗಲು ಕರಿಯನ್ನು ಸಲಹಿ ನಕ್ರಕೆ ಮೋಕ್ಷವವಿತ್ತೇ ಕರು ನೃಪತಿಯನುಜ ದ್ರೌಪದಿ ಮಾನ ಕಳೆಯುತಿರೆ ಶರಣೆಂದ ಮಾನಿನಿಗೆ ಅಕ್ಷಯವನಿತ್ತೇ 1 ಮಂದರವ ಪೊತ್ತೆ ನೀ ಸುರರಿಗಮೃತವ ನಿತ್ತೆ ಚಂದದಿಂದಜಮಿಳಗೆ ಅಂತ್ಯದಲಿ ವಲಿದೇ 2 ದಾಸಗೊಲಿಯುವಿಯಂತೆ ಭಕ್ತಜನರಿಗೆ ನಿತ್ಯ ಭಾಸವಾಗುವಿಯಂತೆ ವಿಶ್ವರೂಪದಲ್ಲಿ
--------------
ಕರ್ಕಿ ಕೇಶವದಾಸ
ನಮೋ ನಮೋ ಕಾಲಭೈರವ ಹರಿಯ ಚರಣ- ಸಮೀಪದೊಳಗಿದ್ದು ಮೆರೆವ ಪ. ಸಮೀಚೀನಜ್ಞಾನಭಕ್ತ- ಸಮೂಹವ ಕಾವ ಲಕ್ಷ್ಮೀ- ರಮಣನ ಕಾರ್ಯಮಂತ್ರಿ- ಯು ಮಾಧವನ ಸಮಾನಬಲ ಅ.ಪ. ಬೆಟ್ಟದೊಡೆಯ ಶ್ರೀನಿವಾಸನ ಪಾದಕಮಲ- ಮುಟ್ಟಿ ಭಜಿಪ ವೈರಿಮರ್ದನ ಸೃಷ್ಟಿ ಮೂರರಲ್ಲಿ ಕೀರ್ತಿ- ಪಟ್ಟ ದಿಟ್ಟ ಧೀರ ಪರಮ ನಿಷ್ಠ ಪುಷ್ಪ ತುಷ್ಟಿಪ್ರದ ಬ- ಲಿಷ್ಠ ಶ್ರೇಷ್ಠ ಭೂತಪತಿಯೆ 1 ಶ್ರೀನಿವಾಸನಾಜ್ಞೆ ಮೀರದೆ ನಡೆಸುವದೆ ಪ್ರ- ಧಾನ ಕಾರ್ಯ ನಿನ್ನದೆಂಬುದೆ ತಾನು ಕಿಂಚಿದರಿತು ಸನ್ನಿ- ಧಾನವನ್ನೋಲೈಸಿ ಬಂದೆ ದೀನಬಂಧು ಸುಗುಣಸಿಂಧು ಮಾನತ್ರಾಣವಿತ್ತು ಸಲಹೊ 2 ಅಂತರಂಗದಲ್ಲಿ ಪ್ರಾರ್ಥನೆ-ಮಾಡಿದರೆ ಸ್ವಂತ ಬಂದು ಮಾಡು ರಕ್ಷಣೆ ಅಂತ್ಯಕಾಲದಲ್ಲಿ ಹರಿಯ ಚಿಂತನೆಗೆ ವಿಘ್ನ ಬಾರ- ದಂತೆ ಕಾವ ಮಹಾ ತೇಜೋ- ಸೂರಿ 3 ಕಾಲಕಾಲದಲ್ಲಿ ಭಕ್ತರ ಮನೋಭೀಷ್ಟ ಪಾಲಿಸುವ ಚಂದ್ರಶೇಖರ ಖೂಳ ಜನರ ಗರ್ವಮುರಿವ ಶೂಲಪಾಣಿ ಸುಗುಣಶ್ರೇಣಿ ಮೂಲಪತಿಯ ಪಾದಪದ್ಮ ಮೂಲದೊಳಗೆ ನಲಿವ ಚೆಲುವ 4 ಭೂರಿ ಮಹಿಮೆಯ ಭಕ್ತರಿಂಗಾ- ಧಾರವಾಗಿ ರಾಜಿಸಿರುವೆಯ ಧೀರ ಲಕ್ಷ್ಮೀನಾರಾಯಣನ ಸೇರಿದಾನತರ್ಗೆ ಮಂ- ದಾರ ಮಹೋದಾರ ಗಂ- ಭೀರ ಧೀರ ಚಾರುಚರಿತ 5
--------------
ತುಪಾಕಿ ವೆಂಕಟರಮಣಾಚಾರ್ಯ
ನಮೋ ನಮೋ ಗುರುರಾಜ ಪ ಭಾಸುರ ಪಂಪಾ ತುಂಗಾ ತೀರವಾಸ | ಪಾಲಿಸೊ ತವದಾಸ ಅ.ಪ. ರತಿಪತಿ ಜನಕನ ವರ ಶಯ್ಯಾಂಶದಲಿ | ವಾಯ್ವಾವೇಶದಲಿ ಜನಿಸುತ ಮೋದದಲಿ ವಿತತನು ವಿಷ್ಣುವು ವಿಶ್ವದೊಳೆನುತಲಿ | ಅತಿಶಯ ಭಕ್ತಿಯಲಿ ಪಿತಗೆ ತೋರ್ದ ಪ್ರಹ್ಲಾದನೆ ಹಿತದಲ್ಲಿ | ಅವತರಿಸಿದೆ ಇಲ್ಲಿ 1 ಧರೆಯೊಳಗೆ ಪ್ರಖ್ಯಾತ ಪರಮಾತ್ಮನ ಪದಶರಣ ವ್ಯಾಸಯೋಗಿ | ಯೆನಿಸುತಲಿ ವಿರಾಗಿ ತರತಮ ಪಂಚಕ ಪ್ರಭೇದವ ಸ್ಥಾಪಿಸಲು | ದುರುಳರ ಖಂಡ್ರಿಸಲು ಪರಿಪರಿ ಶಾಸ್ತ್ರವ ಶ್ರೀ ಪಾದರಾಯರಲಿ | ಓದಿದ್ಯೊ ಭಕ್ತಿಯಲಿ 2 ಪುರಂದರ ಕನಕರಿಗೆ ಆದರದಿಂದಲಿ ಬೋಧಿಸಿ ತತ್ವವನು | ಮಾಡಿ ಪುನೀತರನು ವೇದಶಾಸ್ತ್ರ ತರ್ಕಾದಿ ಗ್ರಂಥಗಳಲಿ | ಕೋವಿದರರಸುತಲಿ ನೀ ದಯದಿಂದಲಿ ಸೇರಿಸಿ ಪರಿಷತ್ತು | ಭಾವಿಸಿ ವಿದ್ವತ್ತು 3 ಅರ್ಥಿಕಲ್ಪಿತ ವರ ಕಲ್ಪವೃಕ್ಷವಾಗಿ | ನಿತ್ಯದಿ ಮಹಯೋಗಿ ಪ್ರಥ್ಯರ್ಥಿ ಮದಕರಿ ಪಂಚವಕ್ತ್ರನಾಗಿ | ಪ್ರತ್ಯಕ್ಷದಿ ತಾಗಿ ಹೊರ ಚೆಲ್ಲುತೆ ನೀನು ಸ್ತುತ್ಯ ಕೃಷ್ಣ ಭೂಮೀಂದ್ರನ ಕುಹುಯೋಗ | ಪರಿಹರಿಸಿದೆ ಬೇಗ 4 ವ್ಯಾಸಾಂಬುಧಿಯನು ಕಟ್ಟಿ ಖ್ಯಾತನಾಗಿ | ದಾಸರ ಚನ್ನಾಗಿ ಪೋಷಿಸುತಲಿ ಶ್ರೀ ಶೇಷಗಿರಿಗೆ ಬಂದು | ಶ್ರೀಶನಲ್ಲಿ ನಿಂದು ಪಡುತ ಹನ್ನೆರಡು ವರುಷ ದೇಶ ದೇಶದಲಿ ಆಶುಗಿಯನು ನಿಲಿಸಿ | ಶಿಷ್ಯರಿಗನುಗ್ರಹಿಸಿ 5 ಕಾಶಿ ಗಧಾಧರ ವಾಜಪೇಯಿ ಲಿಂಗ | ಮಿಶ್ರರು ನರಸಿಂಗ ವಾಸುದೇವ ಪುರಿ ಈಶ್ವರ ಪಂಡಿತರ | ವಾದದಿ ಬಿಗಿವರ ಜೈಸಿ ತಂದ ಜಯ ಪತ್ರಗಳನು ಮುದದಿ | ಶ್ರೀನಿಧಿಗರ್ಪಿಸಿದಿ ಶ್ರೀಸತ್ಯಾ ರುಕ್ಮಿಣಿ ವೇಣುಗೋಪಾಲರನು | ಸ್ತುತಿಸಿ ಪಡೆದೆ ನೀನು 6 ನ್ಯಾಯಾಮೃತ ಬಿಚ್ಚಿ ಚಂದ್ರಿಕೆಯನು ತಂದೆ ಆಯದಿ ಬುಧಮನ ತಾಂಡವಾಡುವಂತೆ | ತರ್ಕತಾಂಡವವಿತ್ತೆ ಕಾಯಜಪಿತ ಶ್ರೀಕಾಂತನ ಸೇವಿಸುತ | ಸುಖಿಸುವೆ ನೀ ಸತತ 7
--------------
ಲಕ್ಷ್ಮೀನಾರಯಣರಾಯರು
ನಮೋ ನಮೋ ಜಯ ತುಂಗಭದ್ರೆ ನಮಿತರನು ಪಾಲಿಸುವ ಸದ್ಗುಣ ಸಮುದ್ರೆ ಪ ವೈರಾಚ ನಗರಿಯಲಿ ವಿಧಾರುಣಿಯ ರೋಚಕನು ಮೀರಿ ದೇವಾದಿಗಳಿಗಂಜದಿರಲು ಘೋರ ರೂಪವ ತಾಳಿ ಅವನ ಕೊಲ್ಲಲು ಹರಿಯ ಮೋರೆ ಕರಿಬೆವರಿಡಲು ಅತಿ ಹರುಷದಿಂದ 1 ರೂಢಿಯೊಳಗೆಲ್ಲ ಸಮಸ್ತ ನದಿ ಉದಕಗಳು ನೋಡಿದರು ರುಚಿಕರವಿಲ್ಲವೆಂದೂ ಸುರರು ಕೊಂಡಾಡುತಿರೆ ಈಡ್ಯಾರು ನಿನ್ನ ಮಹಿಮೆಗೆ ವರಹತನಯೇ 2 ಸಲಿಲವೇ ಹರಿಯಾದ ಶಿವ ನಿನಗೆ ಶಿಲೆಯಾದ ಬಲು ಮುನಿಗಳು ಮಳಲವಳಗಾದರೂ ಜಲಜ ಸಂಭವನು ತೃಣನಾದ ಬಳಿಕ ವಿಷ್ಣು ಕೆಲವುಕಾಲ ನಿನ್ನೊಳಗೆ ನಿಲಿಸಿದನು ತುಂಗೆ ಗಂಗೆ3 ವೇದಾದ್ರಿಯಲಿ ಜನಿಸಿ ನರಸಿಂಹ ಕ್ಷೇತ್ರದಲಿ ಭೇದವಿಲ್ಲದಲೆ ಸಂಗಮವು ಎನಿಸೀ ಆದರದಿಂದ ಹರಹರ ಪೊಂಪ ಬಲಗೊಂಡು ಮೊದಲು ಶ್ರೀ ಕೃಷ್ಣ ಬೆರದೆ ಕೂಡಲಿಯೊಳು 4 ತುಂಗೆ ತುಂಗೆ ಎಂದು ಸ್ಮರಿಸುವಾ ಜನರಿಗು ತ್ತಂಗ ಗತಿಯಾಗುವುದು ಪಾಪವಳಿದು ಮಂಗಳ ಮೂರುತಿ ವಿಜಯವಿಠ್ಠಲನ ಚರಣಂಗಳಲಿ ಇದ್ದವರ ಸತತ ಪೊರೆವುದು ದೇವಿ 5
--------------
ವಿಜಯದಾಸ
ನಮೋ ನಮೋ ನಾರಾಯಣ ನಮೋ ಶ್ರುತಿ ನಾರಾಯಣ ನಮೋ ಬಾದರಾಯಣ ನರನ ಪ್ರಾಣ ಪ ಶಿವನ ಮೋದದಲಿ ಪಡೆದೆ ಶಿವರೂಪದಲಿ ನಿಂದೆ ಶಿವನೊಳಗೆ ಏರಿದೆ ಶಿವನಿಗೊಲಿದೆ ಶಿವಗೆ ನೀ ಮಗನಾದೆ ಶಿವ ತಾತನೆನೆಸಿದೆ ಶಿವನ ಮಗನಾ ಪಡೆದೆ ಶಿವನ ಕಾಯ್ದೆ1 ಶಿವಗೆ ಸಹಾಯಕನಾದೆ ಶಿವನ ಕಂಗಡಿಸಿದೆ ಶಿವನ ಧನುವನು ಮುರಿದೆ ಶಿವನೊಲಿಸಿದೆ ಶಿವನ ಜಡ ಮಾಡಿದೆ ಶಿವನ ಒಡನೆ ಬಂದೆ ಶಿವಮುನಿಗೆ ಉಣಿಸಿದೇ ಕೇಶವನೆನಿಸಿದೇ 2 ಶಿವನ ಜಡೆಯೊಳಗಿದ್ದ ಶಿವಗಂಗೆಯ ಪೆತ್ತೆ ಶಿವನ ಕೂಡಲಿ ಕಾದಿದವನ ಭಾವ ಶಿವ ಭಕ್ತನ್ನ ನಿನ್ನವನಿಂದ ಕೊಲ್ಲಿಸಿದೆ ಶಿವನ ಶೈಲವನೆತ್ತಿದವನ ವೈರಿ3 ಶಿವ ನುಂಗಿದದ ನುಂಗಿದವನ ಒಡನಾಡುವ ಶಿವ ಪರಾಶಿವ ನಿನ್ನ ಶಿವ ಬಲ್ಲನೇ ಯವೆ ಇಡುವನಿತರೊಳಗೆ ಧವಳ ಹಾಸಾ4 ಶಿವನ ಮೇಲಿದ್ದ ಸಹಭವೆ ರಮಣ ಸರ್ವದಾ ಶಿವನೊಳಗಿಳಿದ ಶಿಷ್ಯನಿವ ಹರಾತೀ ತಲ್ಪ ಶಿವ ಸಮಾನಿಕ ರೂಢ ಶಿವನ ಮನೆ ತೊಲಗಿಸುವ ಶಿವ ಬಾಂಧವಾ 5 ಶಿವನ ಧೊರಿಯೆ ಜ್ಞಾನ ಶಿವ ಹಚ್ಚುವದೆ ಕೊಡು ಶಿವಮಣಿ ಎನಿಸುವ ಸ್ತವ ಪ್ರಿಯನೇ ವಾಹನ ವೈರ ಶಿರವ ತರಿಸಿದೆ ದೇವ ಶಿವ ಪ್ರತಿಷ್ಠಿಸಿದೆ ಶಿವಗೆ ಕಾಣಿಸದಿಪ್ಪೆ6 ಶಿವನ ಸೋಲಿಸಿದವನ ಜವಗೆಡಿಸಿದೆ ಶಿವನು ಕುದರಿಯ ಹೆರವ ಅವನು ಕಾಯಿದ ಗೋವ ಶಿವನವತಾರ ಶಸ್ತ್ರವನು ಹಳಿದೆ 7 ಶಿವನಧರ್Àನಾಗಿ ದಾನವನು ಕೊಂದ ಮಹಿಮಾ ಶಿವಋಷಿ ಪೇಳಿದ ಯುವತಿ ರಮಣಾ ಶಿವನ ವೀರ್ಯವ ಧರಿಸಿದವನ ಮುಖದಲಿ ಉಂಬ ಅವರ ಬೆಂಬಲವೇ ಯಾದವಕುಲೇಶಾ 8 ಶಿವಗೆ ತ್ವಂಚ ಬಾಹುಯೆಂದು ಪೇಳಿ ಮೋಹ ದಿವಿಚಾರಿಗಳ ತಮಸಿಗೆ ಹಾಕುವೆ ಶಿವಮೂರುತಿ ನಮ್ಮ ವಿಜಯವಿಠ್ಠಲರೇಯ ಶಿವನಾಳು ಮಾಡಿ ಆಳುವ ದೈವವೇ9
--------------
ವಿಜಯದಾಸ
ನಮ್ಮ ಗಿರಿಯ ತಿಮ್ಮ ಪರಬೊಮ್ಮನಮ್ಮ ಒಮ್ಮೆ ಕಾಯೋದ(ತ?)ಮ್ಮ ಪ. ಭಂಗ ಗುಣ ತ-ರಂಗ ಜಗದೊಳಗೆ ನೀನೆ ಸರ್ವೋತ್ತುಂಗ 1 ನೋಡೋ ಎನ್ನಲ್ಲಿ ಕೃಪೆಮಾಡೋ ಕೈಯನೀಡೋ ಎನ್ನ ಪೊರೆವನೆಂಬ ಮಾತನಾಡೊ 2 ಏಳು ಎನ್ನ ಮಾತ ಕೇಳು ಕಡು ಕೃ-ಪಾಳು ನಿನ್ನ ಹದನ ಎನಗೊಲಿದು ಪೇಳು 3 ಎಂದ ಮಾತಿಗೆ ಮುಂದೆ ನಿಂದ ನೀ ಕರುಣಿ ಗೋ-ವಿಂದ ಎಂಬುದಿನ್ನು ನಿನಗೆ ಚೆಂದ 4 ಪ್ರಿಯ ಎನ್ನ ಕಾಯೊ ಜೀಯ ಮುಕ್ತ್ಯು-ಪಾಯ ಹಯವದನ ಶೇಷಗಿರಿರಾಯ5
--------------
ವಾದಿರಾಜ