ಒಟ್ಟು 1191 ಕಡೆಗಳಲ್ಲಿ , 98 ದಾಸರು , 989 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹನುಮನ ಬಲಗೊಂಬೆ ಹರುಷದಲೆನಮ್ಮ ತನುಮನ ಧನ ಈತಗೊಪ್ಪಿಸುತಲೆ ಪ. ರಾಣಿಗೆ ಮುದ್ರೆಯನಿಟ್ಟ ಜಾಣನೆನುತಲೆಮುಖ್ಯ ಪ್ರಾಣ ಮುಯ್ಯಾ ಗೆಲೆಸೋ ಈ ಕ್ಷಣ ಎನುತಲೆ 1 ಕೋತಿಯ ಸ್ವರೂಪನಾದ ಈತನೆನುತಲೆ ದೈತ್ಯ ಜಾತಿಯ ಸಂಹರಿಸಿ ಬಂದ ಖ್ಯಾತನೆನುತಲೆ2 ಸೀತೆಯ ಮನೆಗೆ ತಂದ ಮಹಾತ್ಮನೆನುತಲೆಈತಗೆ ಜೋಡ್ಯಾರು ಮುಂದೆ ಖ್ಯಾತನೆನುತಲೆ 3 ಕೃಷ್ಣನ ಸೇವೆಗೆ ಅತಿ ನಿಷ್ಠ ನೆನುತಲೆದುಷ್ಟ ಕೌರವರ ಕೊಂದ ಶ್ರೇಷ್ಠ ನೆನುತಲೆ 4 ಶ್ರೀಶ ರಾಮೇಶಗೆ ಮುಖ್ಯದಾಸನೆನುತಲೆ ವಾಸವಾದ ಬದರಿಯಲಿ ಮಧ್ವೇಶನೆನುತಲೆ5
--------------
ಗಲಗಲಿಅವ್ವನವರು
ಹನುಮೇಶ ವಿಠ್ಠಲನೆ ಸಲಹ ಬೇಕಿವಳಾಗುಣಪೂರ್ಣ ನಿರ್ದೋಷ ಚಿದ್ಭವನೆ ಹರಿಯೇ ಪ ನಾಗಕಾಳೀಯ ಮದ ಭಂಜನನೆ ಶಿರಿಕೃಷ್ಣನೀಗಿ ಹೃದ್ರೋಗವನು ಆಗು ಹೋಗುಗಳಾ |ನಾಗಶಯನನೆ ನೀನೆ ಮಾಳ್ಪುದನೆ ತಿಳಿಸುತ್ತಾಭೋಗ ವಿಹ ಪರಧ್ವಂಸ ಭೋಗ ತಿಳಿಸುವುದೋ1 ಮಧ್ವ ಶಾಸ್ತ್ರಜ್ಞಾನ ಉದ್ಭೋಧ ಕೊಟ್ಟಿವಳಶುದ್ಧ ತರತಮ ಭೇದ ಪಂಚಕವ ತಿಳಿಸಿ |ಅದ್ವಿತೀಯನೆ ಭಾವ ದ್ರವ್ಯ ಕ್ರಿಯಗಳು ಎಂಬಅದ್ವೈತ ತ್ರಯಜ್ಞಾನವಿತ್ತು ಪಾಲಿಪುದು 2 ಖಗವರಧ್ವಜದೇವ ಗೋವಿಂದ ಮೂರುತಿಯೆಬಗೆಬಗೆಯ ತವಲೀಲೆ ಮಿಗಿಲು ಸ್ಮøತಿಯಿತ್ತು |ಹಗರಣದ ಸಂಸಾರ ಸಾಗರವ ದಾಟಿಸುತನಿಗಮ ವೇದ್ಯನೆ ತೋರೊ ಹೃದ್ಗುಹದಿ ಹರಿಯೇ 3 ಪತಿಸೇವೆಯಿತ್ತಿವಳ ಕೃತಕಾರ್ಯಳೆಂದೆನಿಸೊಪಿತೃ ಮಾತೃ ಬಂಧುಗಳು ಹಿತ ಜನಾಂತಸ್ಥಕೃತಿ ಪತಿಯೆ ನಿನವ್ಯಾಪ್ತಿ ಮತಿಯಿತ್ತು ಪಾಲಿಸುತಹಿತದಿ ಸಾಧನಗೈಸೊ ವಾತಾತ್ಮ ಹರಿಯೇ 4 ನಿರುತ ತವ ದಾಸತ್ವ ಅರ್ಥಿಯಲಿ ಇರುವಂಥತರಳೆಯನು ಸ್ವೀಕರಿಸಿ ದಾಸಳೆಂದೆನಿಸೊಶರಣ ಜನ ವತ್ಸಲನೆ ಕರುಣಿ ಭಿನ್ನಪ ಸಲಿಸೊಮರುತಾಂತರಾತ್ಮ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಹರಕೆಯ ಮಾಡಿಕೊಳ್ಳೀ ಕೇಶವನಿಗೆ ಹರಕೆಯ ಕಟ್ಟಿಕೊಳ್ಳೀ ಪ ಹರಕೆಯ ತೀರಿಸಿಷ್ಟಾರ್ಥವ ಪಡಕೊಳ್ಳೀ ಹರುಷದಿ ಹರಿಗಾತ್ಮವರ್ಪಿಸಿಕೊಳ್ಳೀ ಅ.ಪ. ಭಜನೆಯ ಮಾಳ್ಪೆನೆಂದೂ ಕೇಶವನಿಗೆ ಭಜನೆಯರ್ಪಿಸುವೆನೆಂದೂ ಅಜಪಿತ ಶ್ರೀಹರಿದಾತನಾಗಿರುವಾಗ ಭಜಕರು ಕೊಡುವ ಭೋಜನ ಭಕ್ಷವ್ಯಾಕೇ 1 ಸ್ಮರಣೆಯ ಮಾಳ್ಪೆನೆಂದು ಕೇಶವನಿಗೆ ಸ್ಮರಣೆಯರ್ಪಿಸುವೆನೆಂದೂ ನಿತ್ಯ ತೃಪ್ತನುಯಿರೆ ಬರಿದೆ ನೈವೇದ್ಯವ ಸಲಿಸುವುದ್ಯಾಕೇ 2 ಸೇವೆಯ ಮಾಳ್ಪೆನೆಂದು ಕೇಶವನಿಗೆ ಸೇವೆಯರ್ಪಿಸುವೆನೆಂದೂ ಭಾವಜನಯ್ಯನೆ ತ್ರಿಜಗಪಾಲಕನಾಗಿ ದೇವತಾನಿರುತಿರೆ ಭವಭಯವ್ಯಾಕೇ 3 ವಂದನೆ ಮಾಳ್ಪೆನೆಂದು ಕೇಶವನಿಗೆ ವಂದನೆ ಕೊಡುವೆನೆಂದೂ ಚಂದದಿ ಹರಿತಾನೇ ಸೃಷ್ಟಿಗೀಶನುಯಿರೆ ಅಂದದಿ ಕೊಡುವ ದಾನಗಳವಾಗ್ಯಾಕೇ 4 ಆತ್ಮವ ಕೊಡುವೆನೆಂದೂ ಕೇಶವನಿಗೆ ಅತ್ಮವರ್ಪಿಸುವೆನೆಂದೂ ಸಾತ್ವಿಕ ಜನವಂದ್ಯ ದೂರ್ವಾಪುರದೊಳಿರೆ ಮತ್ಯಾಕೆ ಯೋಚನೆ ಭಕ್ತಿಯುಳ್ಳವಗೇ 5
--------------
ಕರ್ಕಿ ಕೇಶವದಾಸ
ಹರನರಾಣಿ ಉರಗವೇಣಿ ಸ್ಮರಿಪೆ ನಿನ್ನನಾ ಪ ಚರಣಸೇವೆ ಇತ್ತು ನಿರತ ಪೊರೆವುದೆಮ್ಮ ನೀಂ ಅ.ಪ ಸುರನರೋರಗವಿನುತೆ ಶೋಭನಚರಿತೆ 1 ಸರ್ವಮಂಗಳೆ ಪಾರ್ವತಿ ಮದಗರ್ಮದಿಮೆರೆವ ದು- ರ್ವಿನೀತರ ಛೇದಿಸುತ ಸುಪರ್ವರ ಪೊರೆವೆ 2 ಮನದದುವ್ರ್ಯಸವ ಬಿಡಿಸೆ ಜನನಿ ಶಂಕರಿ ವನಜನಯನೆ ಗುರುರಾಮ ವಿಠಲನ ಸೋದರಿ | ಗೌರಿ 3
--------------
ಗುರುರಾಮವಿಠಲ
ಹರಿ ನಿನ್ನ ದಾಸರ ಸೇವೆಯ ಕರುಣಿಸೆನಗೆ ಸುರಪತಿಯ ನಾನೊಲ್ಲೆನೈ ಪ ಸ್ಮರನ ಹಾವಳಿ ಬಿಡಿಸಿ ಗುರುಭಕ್ತಿಯನು ಕೊಟ್ಟು ನಿರುತವು ನಿನ್ನ ನಾ ಸ್ಮರಿಸುವಂದದಿ ಮಾಡು ಅ.ಪ ಎಷ್ಟು ಸ್ಥಿರ ಮಾಡಿದಾಗ್ಯು ಎನ್ನ ಮನ ಬಟ್ಟ ಕುಚೆಯರ ಬಲೆಗೆ ಸಿಲುಕುತಲಿ ಬಿಟ್ಟು ನಿನ್ನಯ ಧ್ಯಾನ ಕೆಟ್ಟುಪೋಗುತಲಿದೆ ದಿಟ್ಟ ನಿನ್ನ ಮಗನ ಬಲುಹಿನ್ನೆಷ್ಟೆಂದು ಪೇಳಲೊ 1 ಕುಸುಮಗಂಧಿಯರ ಓರೆನೋಟವೆಂಬ ಮಸೆದ ಕಣೆಯ ತಾನು ಪೂಡುತಲಿ ಎಸೆ ಮೋಹತಿಗೆ ನಾ ಸೈರಿಸಲಾರೆನೋ ಬಿಸಜನಾಭನೆ ನಿನ್ನ ಸುತಗೆ ಪೇಳೋ ಬುದ್ಧಿ 2 ಅಂಗನೆಯರ ಸವಿ ನುಡಿಗಳಿಗೆ ನಾ ಮರುಗಿ ಭೃಂಗದಂತವರ ಬಲೆಗೆ ಬೀಳದಂತೆ ಸಂಗ ಸುಜನರಲ್ಲಿ ಇತ್ತು ಕಾಯೊ ದೇವ ಅಂಗಜಪಿತ ಶ್ರೀ ರಂಗೇಶವಿಠಲನೇ 3
--------------
ರಂಗೇಶವಿಠಲದಾಸರು
ಹರಿ ನಿನ್ನ ನಾಮದ | ಸ್ಮರಣೆಯ ನಾನು || ನಿರುತವು ಮಾಡುವೆ | ಪೊರೆಯೆನ್ನ ನೀನು ಪ ಶರಣರ ಪೊರೆವ| ಪರಮ ಪಾವನನು | ಕರುಣಾಳು ನಿನ್ನಯ | ಶರಣನಾಗಿಹೆನುಅ.ಪ ಕರಿರಾಜಗಿತ್ತೆ ನೀ | ವರ ಮುಕ್ತಿಪಥವ || ತರಳನಿಗೊಲಿದಿತ್ತೆ | ವರಧ್ರುವಪದವ 1 ಹರಿಯನು ತೋರೆಂದು | ಗರ್ಜಿಸಿ ಜರೆದ|| ದುರುಳನ ಬಗಿಯುತ್ತ| ತರಳನಿಗೊಲಿದ 2 ಕಾಮಿತಾರ್ಥವನಿತ್ತೆ| ಪ್ರೇಮದೊಳನಿಶ 3 ಮರಣದ ಸಮಯದಿ | ಕರೆದಜಾಮಿಳಗೆ|| ಪರಮಪದವನಿತ್ತು | ಕರುಣದಿ ಪೊರೆದ 4 ಅರಿತಾದರು ಮನ| ಕ್ಕರಿಯದೆ ಗೈದ || ದುರಿತಂಗಳಿರೆ ಪರಿ| ಹರಿಸೆಂದು ಸತತ 5 ನೀನಲ್ಲದೆನ್ನನು | ಪೊರೆಯುವರಿಲ್ಲ || ನಿನ್ನ ಸೇವೆಯ ಮಾಡ | ಲರಿಯೆ ನಾನಲ್ಲ6 ಇಹಪರಸುಖವಿತ್ತು | ಮುಕ್ತಿಯನೀವ || ಮಹಿಮನೆಂದರಿತಿಹೆ | ಭಕ್ತಸಂಜೀವ 7
--------------
ವೆಂಕಟ್‍ರಾವ್
ಹರಿ ನಿಮ್ಮ ಪದಕಮಲ ನಿರುತ ಧ್ಯಾನದಿ ಎನಗೆದೊರಕಿತೀ ಗುರುಸೇವೆ ಹರಿಯೆ ಪ ಮೂರ್ತಿ ನೀನಾಗಿಕರೆಯ ಸೇರಿಸಿದೆ ಶ್ರೀಹರಿಯೆಅ ಭವ ಬಂಧನವ ಬಿಡಿಸಿಹದನಕ್ಕೆ ನಿಲ್ಲಿಸಿದೆ ಹರಿಯೆ 1 ದೊರೆತನವ ಬಿಡಿಸಿ ಸುಸ್ಥಿರ ಮಾರ್ಗ ತೋರಿಸಿದೆನರಮಾತ್ರದವನೆನದೆ ಹರಿಯೆಗರುವದೊಳಗಿಹನೆಂದು ಅರಿತು ತವದಾಸರಿಗೆಇರದೆ ಅಡಿಯಾಗಿಸಿದೆ ಹರಿಯೆ 2 ಕನಕ ದಳದಲಿ ಬಂದು ಕಲೆತನೆಂದರೆ ಫೌಜುಕನುಕುಮನುಕಾಗುವುದು ಹರಿಯೆಮೊನೆಗಾರತನವೆಂಬ ಶನಿ ಬಿಡಿಸಿ ತವಪಾದವನಜವನು ಸೇರಿಸಿದೆ ಹರಿಯೆ 3 ಮನದೊಳಗೆ ಎರಡಿಲ್ಲ ಮದದಾನೆ ಮೇಲ್ಕಡಿವಮನವ ಹಿಮ್ಮೆಟ್ಟಿಸಿದೆ ಹರಿಯೆಘನವು ತಾಮಸಾಹಂಕಾರ ದುರ್ಮತಿ ದುರಿತಕನಜವನು ಕಿತ್ತೆಸೆದೆ ಹರಿಯೆ4 ಮದರೂಪು ಬಿಡಿಸಿ ಸನ್ಮುದ ರೂಪು ಧರಿಸೆಂದುಹೃದಯದೊಳು ನೀ ನಿಂತೆ ಹರಿಯೆಇದು ರಹಸ್ಯವು ಎಂದು ಹಿತವ ಬೋಧಿಸಿ ಎನಗೆಬದುಕಿಸಿದೆ ಬದುಕಿದೆನು ಹರಿಯೆ5 ದುರದಲ್ಲಿ ನಾಲ್ಕು ದಿಕ್ಕಲಿ ಹೊಕ್ಕು ಹೊಳೆವಂಥಬಿರುದು ಬಿಂಕವ ಕಳೆದೆ ಹರಿಯೆಪರಬಲವ ಕಂಡರೆ ಉರಿದು ಬೆಂಕಿಯಹ ಮನವಸೆರೆ ಹಾಕಿ ನಿಲ್ಲಿಸಿದೆ ಹರಿಯೆ6 ಪರಮ ಮೂರ್ಖನು ನಾನು ವರ ವೀರ ವೈಷ್ಣವರಚರಣವನು ಸೇರಿಸಿದೆ ಹರಿಯೆಕರೆ ಕಳಿಸಿ ಎನ್ನಲ್ಲಿ ಅಳವಿಲ್ಲದಿಹ ನಾಮಸ್ಮರಣೆ ಜಿಹ್ವೆಗೆ ಬರೆದೆ ಹರಿಯೆ 7 ಸ್ವಾರಿ ಹೊರಡಲು ಛತ್ರ ಭೇರಿ ನಿಸ್ಸಾಳಗಳುಭೋರೆಂಬ ಭೋಂಕಾಳೆ ಹರಿಯೆಧೀರ ರಾಹುತರಾಣ್ಯ ಭಾರಿ ಪರಿವಾರದಹಂ-ಕಾರ ಭಾರವ ತೊರೆದೆ ಹರಿಯೆ8 ಪಾದ ಹರಿಯೆಆರಿಗಂಜೆನು ನಾನು ಅಧಿಕಪುರಿ ಕಾಗಿನೆಲೆಸಿರಿಯಾದಿಕೇಶವ ದೊರೆಯೆ 9
--------------
ಕನಕದಾಸ
ಹರಿ ವಿಮುಖನಾದ ಮನುಜಶ್ವಪಚ ಶ್ರೇಷ್ಠನು | ಹರಿವಲುಮೆ ಕಂಡ ನರನು ಪರಮ ಶಿಷ್ಠನು ಪ ಹರಿಯ ಕಾಣದ ಕಣ್ಣು ನೌಲಗರಿಯಾ ಕಣ್ಣವು | ಹರಿಯ ಕಥೆ ಕೇಳದ ಶ್ರವಣಾ ಬಧಿರ ಶ್ರವಣವು | ಹರಿಯ ನಿರ್ಮಾಲ್ಯ ಕೊಳದ ಘ್ರಾಣ ಲೆತ್ತಿ ಘ್ರಾಣವು | ಹರಿಗೆರಗದಂಗ ತ್ರಾಣ ಬೆಚ್ಚಿನ ತ್ರಾಣವು 1 ಹರಿಯನ್ನದ ಮುಖವು ರಾಜ ಬಿರದ ಮುಖಗಳು | ಹರಿಸೇವೆ ಮಾಡದ ಕೈಯ್ಯಾ ಕೀಲಿ ಕೈಗಳು | ಹರಿಯಾತ್ರೆ ಇಲ್ಲದ ಕಾಲು ಹೊರಸಿನ ಕಾಲ್ಗಳು | ಹರಿ ವಿಷಯ ವಿಲ್ಲದ ವಿದ್ಯೆದೊಂಬನ ವಿದ್ಯಗಳು 2 ಹರಿಗರ್ಪಣೆ ಅಲ್ಲದಯಜ್ಞ ವೇಷಿಕ ಕರ್ಮವು | ಬರುದೇ ಮೌನ ವೃತಗಳೆಲ್ಲ ಬಕನ ಧರ್ಮವು | ಹರಿಭಕ್ತಿರಹಿತ ತಪದಿ ಬಿಡದು ಜನ್ಮವು | ಗುರು ಮಹಿಪತಿಸ್ವಾಮಿ ಭೋಧಿಸಿದನು ಮರ್ಮವು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿಗುರು ಪ್ರಸನ್ನ ವಿಠಲ | ಪೊರೆಯ ಬೇಕಿವಳಾ ಪ ದುರಿತ ರಾಶಿಯ ಕಳೆದು | ಕಾಪಾಡೋ ಇವಳಾ ಅ.ಪ. ಭವ ವಂದ್ಯ | ಕೋಮಲಾಂಗನೆ ದೇವಕಾಮಿತಾರ್ಥದವನಾಗಿ | ಕಾಪಾಡ ಬೇಕೋ 1 ಬೋಧ ತಿಳಿಸುತಲೀಸಾಧನವ ಗೈಸಿ ಸ | ಮ್ಮೋದ ಕೊಡು ಇವಳೀಗೆಹೇ ದಯಾನಿಧಿ ಹರಿಯೇ | ಬಾದರಾಯಣನೇ 2 ಪತಿಸುತರೊಳು ಹರಿಯೇ | ವ್ಯಾಪ್ತಿಯನೆ ತಿಳಿಸುತ್ತಹಿತದಾದ ಸೇವೆಯಲಿ | ರತಳೆನಿಸೊ ಹರಿಯೇಹಿತವಹಿತವೆರಡನ್ನು | ಸಮತೆಯಲಿ ಉಂಬಂಥಮತಿಯ ನೀ ಕರುಣಿಸುತ | ಅತಿಹಿತದಿ ಪೊರೆಯೋ 3 ಭವವನದಿ ನವಪೋತ | ತವದಿವ್ಯಸ್ಮøತಿ ಇತ್ತುಶ್ರವಣ ಸುಖ ವದಗಿಸುತ | ಸಾಧನವ ಗೈಸೋಭುವನ ಪಾವನ ದೇವ | ತವನಾಮ ಜಪಗಳನುಸರ್ವದಾ ಕರುಣಿಸುತ | ಉದ್ಧರಿಸೋ ಇವಳಾ 4 ಪತಿ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಹರಿದಾಸಮಹತಿ ಕ್ಷಮಿಸುವುದೆಮ್ಮ ತಪ್ಪುಗಳ ಸ್ವಾಮಿಕ್ಷಮಶೀಲವೆಂಬ ದಾಸೋಹ ಬಿರುದಿನೊಳು ಪ ಸುರರು ಸಾಧುಸಮರಲ್ಲವೆಂಬ ಶ್ರುತಿ ಸರಿಬಂತು ಸ್ವಾಮಿ ಅ ಶರಧಿಯೊಳಿರುತಿರ್ಪ ಚರಜೀವಿಗಳ ಗುಣಾ-ಕರಿಸಿ ಇಷ್ಟೆಂದು ಪೇಳಲುಬಹುದುಸಿರಿವರದನ ಅಂತಃಕರಣಕೊಪ್ಪಿದ ನಿಮ್ಮಇರವ ತಿಳಿಯಲು ನರರ ವಶವೆ ಸ್ವಾಮಿ1 ಆಢಕದೊಳಗಂಬರವನೆ ಅಳೆದು ಲೆಕ್ಕಕೂಡಿದ ಮಿತಿಯ ಪೇಳಲು ಬಹುದುರೂಢಿಗೀಶನ ಸೇವೆ ಮಾಡಿದ ಮುಕ್ತರಈಡಿಲ್ಲವೆಂಬುದನಿತರರರಿವರೆ ಸ್ವಾಮಿ 2 ಈ ಶರೀರದೊಳಗಿಪ್ಪ ಕೇಶಗಳೆಲ್ಲವನುಬೇಸರಿಸದೆಣಿಸಿ ಹೇಳಲು ಬಹುದುಶೇಷಶಯನ ಕಾಗಿನೆಲೆಯಾದಿಕೇಶವದಾಸರ ಮಹಿಮೆ ಕಾಣಲಿಕಾಗದು ಸ್ವಾಮಿ 3
--------------
ಕನಕದಾಸ
ಹರಿನಾಮ ಭಜನೆಯೊಳಿರು ಇರೂ ಶ್ರೀಹರಿ ಮಹಿಮೆಯ ಭುವಿ ತೋರುರೋರು ಪ ಸಜ್ಜನರ ಸಂಗವ ಮಾಡು ಮಾಡು ದುರ್ಜನರ ಸಂಗವ ಬಿಡೂ ಬಿಡೂ ಮೂಜ್ಜಗದೊಡೆಯನ ಪಾಡು ಪಾಡು ಇನ್ನು ಮುಕುತಿಯ ಬೇಕೆಂದು ಬೇಡು ಬೇಡು 1 ಪಾದ ಹಿಡಿ ಹಿಡಿ ಮನದಿರುವ ಕಾಮ ಕ್ರೋಧ ಕಡಿ ಕಡಿ ಶರಣರ ಕೂಟದೋಳ್ ಕೂಡಿ ಕೂಡಿ ಬೇಗ ನರಹರಿ ಮೂರ್ತಿಯ ನೋಡಿನೋಡಿ 2 ರಾಮನಾಮಾಮೃತ ಕುಡಿ ಕುಡಿ ಅತಿಕಾಮುಕ ದ್ರವ್ಯವ ಬಿಡಿಬಿಡಿ ಸ್ವಾಮಿ ನಾರಾಯಣನೆಂದು ನುಡಿನುಡಿ ಬಹು ಪ್ರೇಮದಿ ಹರಿಕರುಣ ಪಡಿಪಡಿ 3 ಸಕಲಶಾಸ್ತ್ರಗಳ ನೋಡು ನೋಡು ಅದರ ಸಾರಾಂಶ ತಿಳಿದು ಆಡೂ ಆಡೂ ಪ್ರಕಟಿತ ಭಕ್ತರಿಗನ್ನ ನೀಡು ನೀಡು ಇನ್ನು ಪರಮಾತ್ಮನ ಕೊಂಡಾಡು ಆಡು 4 ನರಹರಿಯು ಕಥೆಯ ಕಿವಿಲಿ ಕೇಳುಕೇಳು ಪರಮ ಭಕ್ತರ ಪಾದಕೆ ಬೀಳು ಬೀಳು ಶ್ರೀ ಪರಬ್ರಹ್ಮನ ಸೇವೆಗೆ ಏಳು ಏಳು 5 ಯೋಗ್ಯರ ಕಂಡರೆ ಹಿಗ್ಗೂ ಹಿಗ್ಗೂ ಅತಿ ಭಾಗ್ಯರ ಕಂಡರೆ ತಗ್ಗೂ ತಗ್ಗೂ ಸುಜ್ಞಾನಿಗಳಿಗೆ ಡೊಗ್ಗು ಡೊಗ್ಗು ಇನ್ನು ಶುದ್ಧಾತ್ಮಕರೊಳು ಜಗ್ಗು ಜಗ್ಗು 6 ಸನ್ಯಾಸಿಗಳನು ಸೇರು ಸೇರು ದುಷ್ಟದುರ್ಮಾಗರ ಕಂಡು ದೂರು ದೂರು ಮರ್ಮ ಬಲ್ಲವರಲ್ಲಿ ಜಾರು ಜಾರು ಶ್ರೀ ಮಹಾ 'ಹೆನ್ನ ವಿಠ್ಠಲನ’ ‘ಸಾರೂ ಸಾರೂ’ 7
--------------
ಹೆನ್ನೆರಂಗದಾಸರು
ಹರಿಪಾದವ ನಂಬಿರೋ | ಮನುಜರೆಲ್ಲ | ಹರಿಯಲ್ತೆ ಹರಿಗರ್ವ ಹರಿಸಿ ಗೋಕುಲದೀ | ವಿ | ಹರಿಸಿ ಹರಿಜಳಲ್ಲಿ ಹರಿಮೆಟ್ಟಿನಲಿವಂಥ ಪ ಸೋಮಜ ಭವನ ಪದಾ | ಸೇವೆಗೆ ಮೆಚ್ಚಿ | ಸೋಮ ಪುತ್ರಗೆ ನೀಡಿದಾ | ಸೋಮನಾ ಭಂಡಾರಿಯನೆ ಮಾಡಿ ದಯದಿಂದ | ಸೋಮಜಾನನಾ ಪೂರ್ಣ ಸೋಮಚಕೋರವಾ 1 ಕಮಲಾರಿ ಧರ ಸೇವ್ಯನು | ಶಂಖ ಚಕ್ರ | ಕಮಲಾಗದಾಧರನು | ಕಮಲಾಂಘ್ರೀಯನಖ ಕಮಲದಿ ಜನಿಸಿದಾ | ಕಮಲದಿ ಮೂಜಗ ಕಮಲಗತಿಯ ನೀವ 2 ಗೋಪೆಸರನ ಪಿತನ | ಉದ್ಧರಿಸಲು | ಗೋಪಾದ ತ್ರಯ ಕೃತನ | ಗೋಪಾದಿವಿನುತ ಮಹಿಪತಿಸುತ ಪ್ರಭು | ಗೋಪಕೋಟಿ ತೇಜ ಗೋಪಾಲ ನೆನಿಸುವ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿಯನರಿಯದ ಜನುಮ ಧೆರೆಯೊಳಗಧಮಾಧಮ ಹರಿಯ ನೆನೆಯದ ನರನು ಪಾಮರನು ಧ್ರುವ ಹರಿಗೆ ನಮಿಸದ ಸಿರವು ತೋರುವ ಬೆಚ್ಚಿನ ತೆರವು ಹರಿಗೆ ವಂದಿಸದ್ಹಣಿಯು ಹುಳಕ ಮಣಿಯು ಹರಿಗೆ ಮುಗಿಯದ ಕೈಯು ಮುರುಕ ಕೀಲಿಯ ಕೈಯು ಹರಿ(ಯ) ಕೊಂಡಾಡುವ ನಾಲಿಗೆ ಒಡಕ ಸೊಲಿಗೆಯ 1 ಹರಿಯ ಸ್ತುತಿಸದ ಮುಖ ಚೀರುವ ಚಿಮ್ಮಡಿಯ ಮುಖವು ಹರಿಕಥೆ ಕೇಳದ ಕಿವಿಯು ಹಾಳುಗವಿಯು ಹರಿಯ ನೋಡದ ಕಣ್ಣು ತೋರುವ ನವಲ್ಗರಿಗಣ್ಣು ಹರಿಯ ಆರಾಧಿಸದ ಮನವು ಹೀನತನವು 2 ಹರಿಯ ಸೇವೆಗೊದಗದ ಕಾಲು ಮುರುಕ ಹೊರಸಿನ ಕಾಲು ಹರಿಗೆ ಮಾಡದ ಭಕ್ತಿ ಮೂಢ ಯುಕ್ತಿ ಹರಿಯೆ ಶ್ರೀಗುರುವೆಂದು ಗುರುವೆ ಪರದೈವವೆಂದು ಸಲೆಮೊರೆಹೊಕ್ಕಿಹ ಮೂಢ ಮಹಿಪತಿಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಯೆ ಚಿತ್ರಲೀಲೆಗಳನು ಅರಿಯಲಳವೇ ಸುಲಭದಿ ಪ ನಿರತ ಸೇವೆ ಮಾಡುತಿರುವ ಸಿರಿಯು ತಾನಚ್ಚರಿಯಲ್ಲಿರಲು ಅ.ಪ ಪೊಡವಿಯಲಿ ದುರಿತಗಳನ್ನು ನಡೆನುಡಿಗಳಿಂದರಿಯದಿರುವ ಹುಡುಗರಾಗಿ ನಲಿಯುವರನ್ನು ಸಿಡಿಲಿನಿಂದ ತನ್ನಡಿಗಳಿಗೆಳೆವ 1 ಕ್ಲೇಶದಿಂದ ಗಳಿತವಾದ ಹೇಸಿಗೆಯ ದೇಹದಲ್ಲಿ ಆಸೆ ತೊರೆದು ನರಳುವರಲಿ ಲೇಶ ಕರುಣ ತೋರದೆ ಇರುವ2 ಸತ್ಯ ಸಂಕಲ್ಪನೆಂದರಿತು ನಿತ್ಯನನ್ನು ನೆನೆದು ತಮ್ಮ ಕೃತ್ಯಗಳನು ರಚಿಸಿ ಮುದದಿ ತೃಪ್ತನಾಗುವ ಭಕ್ತರ ಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು
ಹರಿವಾಯುಗಳು ಮೂರಕ್ಕರದ ದೇವ ಮೂರು ವಸ್ತುವ ಬೆರಸಿ ಮೂರು ಮೂರಾಗಿಸೆಯೆ ಪಾಲಿಸುವ ನಮ್ಮ ಎರಡು ವಸ್ತುವು ಸೇರಿ ದೇಹಕ್ಕೆ ಚಲನೆಯದು ಹರಿವಾಯುಗಳ ಒಲುಮೆ ದೇಹ ರಕ್ಷಕವು4 ಅವ್ಯಾಕೃತಾಕಾಶ ರೂಪದಲಿ ತಾನಿಹನು ವಿಶ್ವಂಭರಾತ್ಮಕನು ದೇವ ನಿಜದಿಂದ ಸೃಷ್ಟಿಗವನೇ ಮೂಲ ವಾಸುದೇವಾತ್ಮಕನು ಮಧ್ವಹೃದಯನಿವಾಸಿ ಸರ್ವಮೂಲನವ 5 ಪೃಥಿವಿಯಪ್ ತೇಜಸ್ಸು ಮೂರು ಭೂತಾಣುಗಳು ತುಂಬಿಯಾಗಸದಲ್ಲಿ ವ್ಯಾಕೃತವದಹುದು ತುಂಬಿ ವಾಯುವಿನಣುಗಳ್ ಒಂದೆಡೆಯೆ ತಾನಹುದು ವ್ಯಾಕೃತಾಕಾಶ 6 ಆಗಸದಿ ವಾಯುವಿನ ಪರಮಾಣು ಒತ್ತಡವೆ ದೃಶ್ಯವಾಯುವು ತಾನೆ ಹರಿವುದಾಗಸದಿ ದೃಶ್ಯವಾಯುವಿನ ಪರಮಾಣುವೊತ್ತಡದಿ ನಿಜ ತೇಜವುದಯಿಸುವುದದರಲ್ಲಿ ಮೂರಿಹವು 7 ತೇಜದಿಂದಲೆ ನೀರು ಜಗಕೆಯಾಧಾರವದು ನೀರಿನಿಂದಲೆ ಭೂಮಿ ಉದಯಿಸುವದದರಿಂ ಪಂಚಭೂತಂಗಳಿವು ಭೂಮಿಯಲಿ ತೋರುವವು ಪಂಚಭೂತಾತ್ಮದ ಪ್ರಕೃತಿಯಿದು ಸತ್ಯ 8 ಇವುಗಳಿಗೆ ಒಡತಿಯಾ ಪ್ರಕೃತಿದೇವಿಯು ಸತ್ಯ ಪ್ರಕೃತಿಯೆದೆಯಲ್ಲಿರುವ ದೇವರೂ ಸತ್ಯ ಪ್ರಕೃತಿ ಪುರುಷರ ಲೀಲೆ ಮಧ್ವಮತದಾ ತಿರುಳು ಮಧ್ವ ಸದ್ಗ್ರಂಥಗಳು ಸರ್ವಮೂಲಗಳು 9 ಭೂತಕೃತ್ತೂ ಅವನೆ ಭೂತಪಾಲಕನವನೆ ಭೂತಭಾವದಲಿದ್ದು ಪ್ರೇರಕನು ಅವನೆ ಆತ್ಮಾಂತರಾತ್ಮವೆಂದೆರಡು ರೂಪಗಳವಗೆ ಹೃದಯದಾಕಾಶದಲಿ ವಾಸವಾಗಿಹನು 10 ಪಂಚಭೂತಗಳು ಪಂಚೇಂದ್ರಿಯಗಳು ಪಂಚ ಕರ್ಮೇಂದ್ರಿಯಗಳ ರಚಿಸಿ ಹರಿಯು ಪಂಚಾತ್ಮಕನು ದೇವ ಪಂಚವಾಯುಗಳಿಂದ ಪಂಚತನ್ಮಾತ್ರಗಳ ಜ್ಞಾನವೊದಗಿಪನು11 ಸುಖ ರತಿ ಪ್ರೇರಕನು ತಾನಾಗಿ ಸಿರಿವರನು ಶಾರೀರ ಪುರದಲ್ಲಿ ನೆಲೆಯಾಗಿ ಇಹನು ಬೆಳಗುತ್ತ ದೇಹವನು ಬೆಳಗಿಸುವ ದೇವತೆಗ ಳವನ ಬಳಿಯಿದ್ದು ಸೇವೆಯ ಗೈಯುತಿಹರು 12 ವಿಶ್ವ ದರ್ಶನಕಾಗಿ ವಿಶ್ವಜನರೊಳು ಕಣ್ಣಿನಲ್ಲಿ ನೆಲೆನಿಂತು ವಿಶ್ವಸಾಕ್ಷಿಯು ಸೂರ್ಯನಲ್ಲಿಯೂ ತಾನಿದ್ದು ವಿಶ್ವವನು ಬೆಳಗಿಸುತ ಜ್ಞಾನವೊದಗಿಪನು 13 ಸೂರ್ಯನೊಂದೆಡೆಯಿದ್ದು ತಾನ್ ಬೆಳಗಿ ಲೋಕವನು ತನ್ನ ಕಿರಣಂಗಳಿಂ ಬೆಳಗಿಸುವ ತೆರದಿ ಕಣ್ಣು ಮೊದಲಾದಿಂದ್ರಿಯಗಳಲಿ ತಾನಿದ್ದು ಅವುಗಳನು ಬೆಳಗಿಸುತ ರಕ್ಷಿಪನು ನಮ್ಮ14 ತೈಜಸದ ದೇವನವ ತೇಜದಾರೂಪದಲಿ ಕಂಠಗತನಾಗಿದ್ದು ದೇಹದಲಿ ಬೆಳಗಿ ಹುಲಿ ಕರಡಿ ಮೊದಲಾದ ಜಂತುಗಳ ಸೃಷ್ಟಿಸುತ ಸ್ವಪ್ನಲೋಕವನು ಮಾನಸಕೆ ತೋರಿಸುವ 15 ಪ್ರಾಜ್ಞರೂಪದ ದೇವನಪ್ಪಿ ಜೀವಾತ್ಮನನು ಮಾಯೆಯಾ ಮುಸುಕಿನಿಂದಜ್ಞಾನಬರಿಸಿ ಜೀವನಿಗೆ ತೋರದುದರಿಂದ ಪ್ರಾಜ್ಞನದಾಗಿ ಜಗಕೆ ತನ್ನಯ ಮಾಯೆಯನು ತೋರಿಸುವನು 16 ನಾಲ್ಕನೆಯ ರೂಪವದು ತುರ್ಯ ನಾಮದಲಿಹುದು ಮುಕ್ತರಿಗೆ ಮಾತ್ರವೇ ತೋರುವುದು ಪೇಳ್ವೆ ಜಾಗರಾದಿಯವಸ್ಥೆಗಳ ನಾಲ್ಕು ಪೇಳಿದನು ಮಾಯಾವಿ ಪರಮಾತ್ಮನದು ಲೀಲೆಗಳಿವು 17
--------------
ನಿಡಂಬೂರು ರಾಮದಾಸ