ಒಟ್ಟು 1893 ಕಡೆಗಳಲ್ಲಿ , 110 ದಾಸರು , 1559 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮತ್ಸ್ಯಾದಿ ದಶಾವತಾರಗಳು ಮತ್ಸ್ಯಾದ್ಯವತಾರವನು ತಾಳ್ದು ನೀ ಪರದೇವ ಮನ್ವಂತರ ಪ್ರಳಯಜಲಧಿಯನು ಪೊಕ್ಕು ಸೂರ್ಯಪುತ್ರನ ಮನುವ ದೋಣಿಯಲ್ಲಿರಿಸಿ ನೀನ್ ನೀರಾಟವಾಡಿದೆಯ ಲೀಲೆಯಿಂದಲಿ ನೀಂ 33 ಮಂದರ ಪೊಕ್ಕೆ ಕೂರ್ಮರೂಪವ ತಾಳ್ದು ಕಡಲಿನಡಿ ಸೇರಿ ದೇವತೆಗಳಿಗೆಯಮೃತ ಕಲಶವನು ತೆತ್ತು ನೀನ್ ದೈತ್ಯರನು ವಂಚಿಸಿದೆ ಮೋಹಿನಿಯದಾಗಿ34 ಸೂಕರದ ರೂಪವನು ತಾಳ್ದು ನೀನ್ ಸಿರಿವರನೆ ಚಿನ್ನ ಕಣ್ಣಿನ ದೈತ್ಯಸೇವಕನ ಕೊಂದು ದೈತ್ಯನಾತ್ಮಜ್ಯೋತಿಯನು ತನ್ನಲಿಯಿರಿಸಿ ವಾರಾಹ ರೂಪದಿಂದಲಿ ಆಟವಾಡ್ದೆ35 ಶಿಲ್ಪಿಯಿಂ ರೂಪುಗೊಂಡಿಹ ಕಂಬದಲಿಯಿದ್ದು ವಿಷ್ಣುವೇ ಪ್ರಹ್ಲಾದ ಮಗುವನುದ್ಧರಿಸೆ ನಂಬಿದೆಡೆಯೆಲ್ಲೆಲ್ಲು ಇರುವೆನೆಂಬುದ ತಿಳಿಸೆ ನರಸಿಂಹ ರೂಪವನು ತಾಳ್ದೆ ಪರಮಾತ್ಮ 36 ಇಂದ್ರಾವರಜನೊಮ್ಮೆ ವಟುವಾಮನನು ಬಂದು ಬಲಿಯ ಯಾಗದ ಸಮಯ ಮೂಹೆಜ್ಜೆ ಬೇಡೆ ರಾಜ ಕೊಡಬಯಸಲದ ಗುರು ಶುಕ್ರತಡೆದಾಗ ದಾನಿ ಬಲಿ ಕೊಟ್ಟವನು ಸಿದ್ಧಿಯನು ಪಡೆದಾ 37 ಸಂಹಾರ ಲೀಲೆಯನು ತೋರಲವ ಪರಮಾತ್ಮ ಪಿತೃವಾಕ್ಯಪಾಲನೆಗೆ ತಾಯ ತಲೆ ಕಡಿದು ಮಾತೆಯನು ಬದುಕಿಸುತ ದುಷ್ಟರಾಜರ ತರಿದು ರಾಜವಂಶವನು ನಿರ್ವಂಶ ಮಾಡಿದನು 38 ಎದೆಯೊಳಿಹ ಸೀತೆಯನು ಕಾಡೆಲ್ಲ ಹುಡುಕುತ್ತ ಜಲಧಿಗೇ ಕಟ್ಟಿ ಸೇತುವೆಯ ಸಿರಿವರನು ಕಪಿ ಸೈನ್ಯದೊಡಗೂಡಿ ಲಂಕೆಯನ್ನೈದುತ್ತ ರಾವಣನ ಕೊಂದು ಸೀತೆಯ ಮರಳಿ ತಂದೆ 39 ಇಬ್ಬರನು ತಾಯಂದಿರನು ರಮಿಸಿ ಮಗುವಾಗಿ ಪದಿನಾರು ಸಾಸಿರದ ಸತಿಯರನು ಒಲಿಸಿ ಏಕಕಾಲದಲಿ ಎಲ್ಲರನು ಮೆಚ್ಚಿಸಿದ ಹರಿ ಆನಂದರೂಪದವ ಪರಮಾತ್ಮ ನಿಜವು 40 ತಾಮಸದ ಜೀವರನಧೋಗತಿಗೆಯಿಳಿಸುತಲಿ ಬುದ್ಧ ರೂಪದಲಿ ತ್ರಿವಿಧ ಜೀವಂಗಳಿಗೆ ಯೋಗ್ಯತೆಗೆ ತಕ್ಕಂತೆ ಗತಿಯಾಗಿಸುವದೆ ನಿನ್ನ ಸಂಕಲ್ಪವದಲಾ 41 ಧರ್ಮವದು ನಶಿಸುತಲಿ ದುಷ್ಟರಾಜರು ತುಂಬೆ ಕಲಿಯುಗದ ಕೊನೆಯಲ್ಲಿ ಕಲ್ಕಿ ರೂಪದಲಿ ಅಶ್ವವನ್ನೇರುತಲಿ ದುಷ್ಟರನು ಸಂಹರಿಸಿ ಕೃತಯುಗವ ಮಾಡಿದೆಯ ಪರಮಾತ್ಮ ನೀನು 42 ಕಾಣದಾ ದೇವರಿಗೆ ಭಕ್ತಿಯಿಂ ಪೂಜಿಸಲು ಹತ್ತು ರೂಪಗಳಿವುಗಳೇ ಮುಖ್ಯವದರಿಂ ಅವತಾರ ರೂಪಗಳ ಪ್ರತಿಮೆಗಳ ಪೂಜಿಸುತ ಸರ್ವಾರ್ಥಸಿದ್ಧಿಗಳ ಪಡೆಯುವರು ಜನರು 43 ವೇದೋಕ್ತ ಪದಗಳಿಗೆ ಮುಖ್ಯಾರ್ಥ ಹರಿಯಿಹನು ಅಗ್ನ್ಯಾದಿ ನಾಮಗಳು ದೇವರಿಗೆಯಿಹವು ದೇವತೆಗಳಿಗೆಲ್ಲ ಅಗ್ರಣಿಯು ತಾನಾಗಿ ಅಗ್ನಿನಾಮವು ನಿನಗೆ ಒಪ್ಪುವುದು ಹರಿಯೆ 44 ಇಂದ್ರಿಯಂಗಳೆ ಕುದುರೆ ಬುದ್ಧಿಯೇ ಸಾರಥಿಯು ಮನವೆಂಬ ಕಡಿವಾಣ ಹಿಡಿದೋಡಿಸುವವನು ಜೀವನೇ ರಥಿಕನವ ವಿಷಯಬೇಟೆಗಳಲ್ಲಿ ಪರಮಾತ್ಮನರಿವೆಂತು ಮೂಡುವುದು ಅವಗೆ 45 ವಾಸದಿಂ ಬೆಳಗಿಸುವ ವಾಸುದೇವನು ತಾನು ವರುಣನಂತರ್ಗತನು ಶಿರದಲ್ಲಿಯಿಹನು ಸಪ್ತರಂಧ್ರಗಳಲ್ಲಿ ವಿದ್ಯುತ್ತ ಹರಿಸುತಲಿ ಜ್ಞಾನವನ್ನೊದಗಿಪನು ಶ್ರೀಕೃಷ್ಣನವನು 46 ವಿಜ್ಞಾನಿ ಭಗವಂತ ಹೃದಯ ಗುಹೆಯಲ್ಲಿಹನು ಅನಿರುದ್ಧ ಯಜ್ಞೇಶ ಮೊದಲಾದ ಪೆಸರಿಂ ಪ್ರಾಣವಾಯುಗಳ ಜೊತೆ ಪಾಕವನು ಗೈಯುತ್ತ ರಕ್ತರೂಪವ ಮಾಡಿ ಪಾಲಿಸುವ ನಮ್ಮ47 ಪ್ರಾಕೃತ ಜ್ಯೋತಿಯಾದೊಡೆ ದೇಹ ಸುಡದಿರದು ಅಪ್ರಾಕೃತ ಜ್ಯೋತಿ ಯಜ್ಞೇಶಗಿಹುದು ಭಕ್ಷ್ಯಭೋಜ್ಯಗಳೆಂಬ ಲೇಹ್ಯಪೇಯಗಳೆಂಬ ನಾಲ್ಕುವಿಧ ವಸ್ತುವಿನ ಪಾಕ ಮಾಡುವನು 48 ವಾಯುವಂತರ್ಗತನು ನೀಲರೂಪದ ದೇವ ಪ್ರದ್ಯುಮ್ನನಾಮಕನು ನಾಭಿಯಲ್ಲಿಹನು ಕಾಮರೂಪಿಯು ಅವನಪಾನಕ್ಕೆ ಒಡೆಯನವ ಪುರುಷರಿಂದಲಿ ಸೃಷ್ಟಿಗವನೆ ಕಾರಣನು 49 ಪೃಥ್ವಿವಿಯಪ್ ತೇಜಸ್ಸು ಮೂರು ದೇಹದ ಮೂಲ ಶ್ರೇಷ್ಠ ವಾಯುವು ಸೇರಿ ದೇಹಕ್ಕೆ ಚಲನೆ ಹೃದಯದಲ್ಲಾಗಸವು ಇರುವ ಕಾರಣದಿಂದ ಪಂಚಭೂತಂಗಳಿವು ದೇಹದಲ್ಲಿಹವು 50 ವಾಯುವಿನ ಜೊತೆಗೂಡಿ ದೇಹಚಾಲಕನು ಯಂತ್ರರೂಪದಲ್ಲಿದ್ದು ಯೋಗ್ಯತೆಗೆ ತಕ್ಕಂತೆ ಕಾರ್ಯವನು ಮಾಡಿಸುತ ಫಲವನ್ನು ಕೊಡುವ 51
--------------
ನಿಡಂಬೂರು ರಾಮದಾಸ
ಮದಕರಿಯ ಕವಳವಾದೆನೆಲೆ ದೇವ ಮದನಪಿತನುಳುಹದಿರೆ ಗತಿ ಯಾರು ಎನಗೆ ಪ ಪೃಥ್ವಿಯೊಳು ನೀ ಸಲಹಿದವರನನವರತ ಮತ್ತೆ ನಾನಿಂದು ಗಜದೊಡನೆ ಕಂಗೆಡುತಿರೆ ವಿ ಪತ್ತಕಡೆಗಾಣಿಸಲಶಕ್ಯವೇನಯ್ಯಾ 1 ದುರುಳಖಳ ಪ್ರಹ್ಲಾದನನಲೆಬಡಿಸುತಿರಲದನು ಪರಿಹರಿಸಲೆಲ್ಲಿಂದ ಬಂದೊದಗಿದೆ ಮೊರೆ ಇಡಲು ಕರಿಯ ಧ್ವನಿ ನಿನಗೆಂತು ಕೇಳಿತು ಶರಣಜನಬಂಧುವೇ ಬಂಧನವ ಪರಿಹರಿಸೋ 2 ಆದೊಡೇನಾಯ್ತು ನಿನ್ನಂಘ್ರಿನಂಬಿರಲು ನೀದಯದಿ ನಿನ್ನೊಳಿಂಬಿಡುವ ನೆವದೀ ಮಾಧವನೆ ಗಜವಾಗಿ ಬಂದೊದಗಿದೆಯೋ ನಾಧನ್ಯ ವೈಕುಂಠಪತಿ ಚೆನ್ನರಾಯ 3
--------------
ಬೇಲೂರು ವೈಕುಂಠದಾಸರು
ಮಂದಿರವೆಲ್ಲೆ ಹೇ ಲಲನೆ ಬಂಧನವೆಲ್ಲೆ ಪ ಅಂದು ಬಯಸಿದೆ ಇಂದು ಬಂದು ಪೇಳಿದಾ 1 ಸೃಷ್ಟಿಗೊಡೆಯಾ ಶಿಷ್ಟವಿಜಯಾ ನಿಷ್ಠೆಯನ್ನೇ ಪೂರೈಸಿ ಕಷ್ಟಹರನೆಂಬ ಬಿರುದನು ಆಂತು ಶ್ರೇಷ್ಠ ದೂತನ ಕಳುಹಿಕೊಟ್ಟನು 2 ಜ್ಞಾನ ಬುದ್ಧಿಯನಿತ್ತು ಶ್ರೀ ಪವಮಾನಪಿತ ನರಸಿಂಹವಿಠಲನು ಕೊಟ್ಟು ಸಲಹುವಾ 3
--------------
ನರಸಿಂಹವಿಠಲರು
ಮಧ್ವವರದಾ ಕೃಷ್ಣಾ ವಿಠಲ ಪೊರೆಯಿವಳ ಪ ಅಧ್ವರೇಡ್ಯನೆ | ದೇವ ಕಾರುಣ್ಯ ಮೂರ್ತೇ ಅ.ಪ. ಸುಸ್ತೇಶ ಸೂಚಿಸಿದ ಕ್ಲುಪ್ತಿಯನ್ನನುಸರಿಸಿಇತ್ತಿಹೆನು ಉಪದೇಶ ಚಿತ್ತಜನಪಿತನೆಅರ್ಥಿಯಲಿ ಮನ್ನಿಸುತ ಚಿತ್ತೈಸು ಬಿನ್ನಪವಕೃತ್ತಿವಾಸನ ತಾತ ಸ್ತುತ್ಯ ಸರ್ವೇಶ 1 ಸನ್ನುತ ಚರಣ ಸೀಮೆ ಮೀರಿದ ಮಹಿಮಭಾಮಿನಿಯ ಪೊರೆಯೆಂದು ಪ್ರಾರ್ಥಿಸುವೆ ಹರಿಯೇ2 ತರತಮದ ಸುಜ್ಞಾನ ಎರಡು ಮೂರ್ಭೇದಗಳುಅರಿವನೇ ಇತ್ತಿವಳ ಪೊರೆವುದೈ ಹರಿಯೆಮರುತ ಮತದಲ್ಲಿಹಳ ನಿರುತ ಕಾಯಲಿ ಬೇಕುಕರಿವರದ ಧೃವವರದ ತರಳೆಹಲ್ಯಯ ವರದ 3 ಪತಿಸೇವೆ ಹಿತದಿಂದ ಕೃತನಾಗಿಯಿವಳಿಂದಗತಿಗೆ ಸಾಧನವೆನಿಸೋ ಮರುತಾಂತರಾತ್ಮಹಿತ ವಹಿತವೆರಡರಲಿ ರತಿ ಸಮತೆ ಪ್ರದನಾಗಿಕೃತ ಕೃತ್ಯಳೆಂದೆನಿಸೊ | ಕೃತಿರಮಣದೇವ 4 ಜೀವ ಅಸ್ವಾತಂತ್ರ ದೇವ ನಿಜ ಸ್ವಾತಂತ್ರಜೀವ ಜಡರೂ ದೇವರಾಧೀನ ವೆಂಬಭಾವನೆ ತಿಳಿಸು ಗುರುಗೋವಿಂದ ವಿಠಲಯ್ಯಸಾವಧಾನದಿಯಿವಳ ಕೈಯನೇ ಪಿಡಿಯೋ 5
--------------
ಗುರುಗೋವಿಂದವಿಠಲರು
ಮಧ್ವಾಂತರ್ಯಾಮಿ ಶ್ರೀ ಗುರು ಬಿಂಬ ಕಾಯೊ ಪ. ಹೃದ್ವನಜದಲಿ ನೆಲಸಿ ಆಜ್ಞಾನ ಹರಿಸಿ ಅ. ಸಾಟಿ ರಹಿತನೆ ನಿನ್ನ ಮುಖ ದರ್ಶನಾ ಹಾಟಕೋದರ ಮುಖರು ಅರಿಯದಂತವನನ್ನು ಕೋಟಲೆಯಭವ ಜನರು ಅರಿವದೆಂತಯ್ಯಾ 1 ತ್ರಿವಿಧ ಜೀವರ ತೆಗೆದು ಜನ್ಮದಲಿ ತೊಡಕಿಸೀ ಕರ್ಮ ಬಲೆ ಬೀಸಿ ಪವನನೈಯ್ಯನೆ ನಿನ್ನ ಮಾಯ ಮೋಡವ ಕವಿಸಿ ಭವಣಪಡಿಸಲು ಇನ್ನು ಬಿಡುಗಡೆಯದೆಂತೋ 2 ನೀನಾಗೆ ವಲಿದು ನಿನ್ನ ಭಕ್ತರನು ಕಾಯುತಿಯೊ ಮಾನಾಭಿಮಾನದೊಡೆಯನೆ ಆರ್ತಪಾಲ ಗಾನಲೋಲನೆ ನಿನ್ನ ಧ್ಯಾನ ಮೌನವನಿತ್ತು ಮಾನಸದಿ ನಿನ್ನ ತೋರೊ ದೀನ ರಕ್ಷಕನೇ3 ಅಂಗುಟದಿ ಗಂಗೆಯನು ಪೆತ್ತ ಪಾವನಪಾದ ಶೃಂಗಾರ ವಸನ ವಡ್ಯಾಣ್ಯನಡುವೂ ಅಂಗನೆಯು ವಕ್ಷದಲಿ ಹಾರಪದಕಗಳುಲಿಯೆ ಉಂಗುರದ ಬೆರಳು ಕಂಕಣ ಕಡಗ ಪಾಣೀ 4 ಕರ್ಣಕುಂಡಲ ಕಾಂತಿ ಮುಗುಳುನಗೆ ಕುಡಿನೋಟ ರನ್ನ ತಿಲಕದ ಫಣಿಯ ಮುಂಗುರುಳ ಸೊಬಗೊ ಸ್ವರ್ಣಕಾಂತಿಯ ತೇಜ ಕಡಗೋಲ ಕೈ ಸೊಬಗು ಚನ್ನಗೊಪಾಲಕೃಷ್ಣವಿಠಲ ಉಡುಪೀಶಾ 5
--------------
ಅಂಬಾಬಾಯಿ
ಮನ ಒಲಿದೆನ್ನನು | ಪಾಲಿಸು ಜನನಿ ಪ. ಘನ ವಿದ್ಯಾದಾಯಿನಿ | ಜಲಜಾಂಬಕಿ ನೀ ಅ.ಪ ವಿದ್ಯಾವಿದಾತೆ ಬುದ್ಧಿಪ್ರದಾತೆ || ಶ್ರದ್ಧೆಯ ಬೇಡುವೆ | ಸದ್ಗುಣಭರಿತೆ 1 ಗಾನವಿಲೋಲೆ | ವಿನಮಿತಪಾಲೆ || ಜ್ಞಾನಪ್ರದಾಯಿನಿ | ಘನಗುಣಶೀಲೆ 2 ಆಡುವ ನುಡಿ ಕೈ | ಗೂಡುವ ತೆರದಲಿ || ಮಾಡೌ ಬೇಡುವೆ | ನಡಿಗಳಿಗೆರಗಿ 3 ಮನ್ಮನದಿಷ್ಟವ | ನಿತ್ತೆನ್ನ ಪೊರೆ ನೀ || ಬೊಮ್ಮನ ರಾಣಿ | ನಿತ್ಯಕಲ್ಯಾಣಿ4
--------------
ವೆಂಕಟ್‍ರಾವ್
ಮನದಣಿ ನೋಡಿದೆನೊ ಸನಕಾದಿನಮಿತ ಮನದಣಿ ನೋಡಿದೆನು ದೃಢದಿ ಪ ನಿನಗೆ ಸರಿಯಿಲ್ಲ ಭುವನತ್ರಯದಿ ಮನಕೆ ಬೇಸರವಿಲ್ಲದನುದಿನ ತನುವನಪ್ಪಿಹಿಡಿದು ಭಕುತರ ಮನದ ವರಗಳನಡೆಸಿ ಸಲಹುವ ಕನಿಕರಾರ್ಣವ ವಿಠಲ ನಿನ್ನಡಿ ಅ.ಪ ಒಂದು ದಿನ ಆ ತ್ರೇತಾಯುಗದಲ್ಲಿ ಋಷಿಗಡಣ ಕೂಡಿ ಬಂದು ನಿಮ್ಮಯ ಚರಣಸನ್ನಿಧಿಲಿ ಭಯಭಕುತಿಯಿಂದ ವಂದಿಸಾಲಿಂಗನೆಯ ಕೋರುತಲಿ ಅಭಯ ಬೇಡುತಲಿ ನಿಂದ ಋಷಿಗಳಿಗ್ಹಲವು ಪರಿಯಲಿ ತಂದೆ ನೀ ಸಮ್ಮತವ ಪೇಳಿ ಬಂದು ದ್ವಾಪರಾಂತ್ಯಯುಗದಲಿ ಒಂದು ಅರಲವ ಅಗಲದಲೆ ನಿಮ್ಮ ಪೊಂದಿ ಆಲಿಂಗನವನೀಯುವೆ ನೆಂದು ವರವಿತ್ತ ವಿಠಲ ನಿಮ್ಮಡಿ 1 ಅಪಾರಮಹಿಮಜಾಲ ಅವತರಿತಿಸಿದಿ ದ್ವಾಪರಯುಗದಿ ಬಾಲಕೃಷ್ಣ ನೀನಾಗಿ ಶ್ರೀಪತಿ ಸುಜನಪಾಲ ದನುಜಕುಲಕಾಲ ಪಾಪಸಂಹಿತ ಅಮಿತಲೀಲ ಶಾಪಪರಿಹಾರ ವೇಣುಲೋಲ ತಾಪಸೋತ್ತಮರಿಷ್ಟ ನೀಡಲು ಗೋಪಿಕಾಸ್ತ್ರೀಯರೆನಿಸಿ ಪುಟ್ಟಿಸಿ ಗೌಪ್ಯದಾಲಿಂಗನವನಿತ್ತ ಭೂಪ ಭೂಪತಿ ವಿಠಲ ನಿಮ್ಮಡಿ 2 ಸುಗುಣ ಸಂತರಹೃದಯಸಂಚಾರ ದಾಸಾನುದಾಸರು ಪೊಗಳಿ ಭಜಿಸುವ ಗಾನಪ್ರಿಯಕರ ಮೌಲಕೌಸ್ತುಭ ಜಗದಜೀವನ ಪಾವನಾಕಾರ ಪರಮಸುಖಕರ ಅಗಣಿತಾಗಣಿತಮಹಿಮಭರಿತ ಪೊಗಳಲಳವೆ ನಿಮ್ಮ ಚರಿತ ತ್ರಿ ಜಗನಾಟಕ ಸುಲಭದಲಿ ನೀ ಅಗಲದನವರತಸಮ ಈ ಕಲಿ ಯುಗದಿ ಭಕ್ತರಿಗಾಲಿಂಗನೀಯುವ ನಿಗಮಗೋಚರ ವಿಠಲ ನಿನ್ನಡಿ 3 ಮಂದಹಾಸ ಮಂದರೋದ್ಧಾರ ಸುರಕಲ್ಪಧೇನು ಇಂದಿರೆಯರ ಪ್ರಾಣ ಮನೋಹರ ಹೇ ದೀನಬಂಧು ಸುಂದರಾಂಗ ಸುಗುಣಗುಣಹಾರ ಬಂಧನಿವಾರ ಸಿಂಧುಕಲಕಿದಪಾರ ಶೂರ ಕುಂದದೆ ಮೊರೆಕಾಯ್ದ ಸುರರ ಹೊಂದಿಭಜಿಸುವ ಭಕುತಜನಕಾ ನಂದ ನೀಡುತ ಚಂದನೋಡುತ ಸಿಂಧುನಿಲಯ ಮುಕ್ಕುಂದ ಮುರಹರಿ ಅಂದಮಾದ ವಿಠಲ ನಿಮ್ಮಡಿ 4 ಸುತ್ತಮುತ್ತ ಭಕ್ತರಾಲಯವು ಹಿಂಭಾಗದಲ್ಲಿ ಸತ್ಯಭಾಮ ರುಕ್ಮಿಣೀಕಾಂತನು ಮುಂಭಾಗದಲಿ ನಿತ್ಯನಿರ್ಮಲ ಚಂದ್ರಭಾಗಿನಿಯು ನಡುಮಧ್ಯ ರಂಗವು ಭಕ್ತಗೊಲಿದು ಭೂವೈಕುಂಠವ ಸತ್ಯವೆನಿಸಿ ಮೀರಿ ಮೆರೆವ ಭಕ್ತಜನರ ಕೈಯೆತ್ತಿ ಸಾರುವ ಪೃಥ್ವಿಗಧಿಕ ಮಹ ಪಂಢರಾಪುರ ಮುಕ್ತಿ ತವರೆಂಬ ಮಂದಿರದಲ್ಲಿ ಕರ್ತುಶ್ರೀರಾಮ ವಿಠಲ ನಿನ್ನಡಿ5
--------------
ರಾಮದಾಸರು
ಮನವೆ ಸದಾ ಚಿಂತಿಸುವೆ ವನಜನಾಭನ ನಂಬದೆ ಪ ಕೊನೆಗಾಣುವದೇನೊ ಫಲವೇನೊ ಅ.ಪ ಮದಮತ್ಸರ ಕಾಮಕ್ರೋಧ ಲೋ- ಭದಿ ಮಮತಾಸ್ಪದವಾಗಿ ಮರತೋಗಿ 1 ಗುರುಹಿರಿಯರು ನೋಡಿ ವಂದಿಸದೆ ನೀ ಮರುಳಾಟಗಳಾಡಿ ಪರರನಪಹಾಸಿಸಿ ಪಾಪಿ ಇವನೆನಿಸಿ ನರಕಕ್ಕೆ ಗುರಿಯಾಗುವೆ ವೋ ಚಪಲ ಮನವೇ 2 ವೇದಮಾರ್ಗವ ಬಿಟ್ಟು ಯಾವಾಗಲು ದು- ರ್ವಾದಗಳನು ಕೊಟ್ಟು ಆದಿಯನುತಲಿ ಅನಾದಿಯನುತಲಿ ಮುದಗೂಡಿ ಅತಿಭಾಷೆಗಳಾಡಿ 3 ತತ್ವ ತಿಳಿಯಬೇಕು ಜ್ಞಾನವೆಂಬೋ ಸಂ- ಪತ್ತಿನೊಳಿರು ಸಾಕು ನಿತ್ಯಾನಿತ್ಯವಿವೇಕ ಶ್ಯೂನವಾಗಿ ನಿತ್ಯ ಕೆಡಬೇಡೆಲವೋ ಚಪಲಾ 4 ತ್ರಿವಿಧ ಜೀ- ವರೊಳಿರುವನು ಮುಕುಂದ ಗುರುರಾಮವಿಠಲ ನಿಜ ಶರಣರಿಗೆಲ್ಲ ಪರಮಪದವಿ ಈವಾ ದೇವದೇವ 5
--------------
ಗುರುರಾಮವಿಠಲ
ಮನ್ನಿಸು ಅಪರಾಧ ಮನ್ಮಥ ಜನಕನೆ ಪ ಸನ್ನುತ ಗುಣಸಂಪನ್ನ ಮಹಿಮ ತಾ ರುಣ್ಯ ಪಯೋನಿಧಿ ಬಿನ್ನಪ ಲಾಲಿಸಿ ಅ.ಪ ಅಮರ ಶಿರೋಮಣಿ | ಆಶ್ರಿತ ರಕ್ಷಾಮಣಿ ರಮಣಿ ರುಕ್ಮಿಣಿ ಮುಖಕಮಲ ಗಗನಮಣಿ ನಮಿಪೆ ಭಕ್ತರ ಚಿಂತಾಮಣಿ ತವ ಚರಣಕೆ ಮಣಿಯದೆ ಮೂಢ ಶಿಖಾಮಣಿಯಾದೆನು 1 ಕಾಮಜನಕ ಪರಿಪೂರ್ಣ ಕಾಮ | ಭಕ್ತ ಕಾಮಧೇನು ಕೋಟಿಕಾಮ ಲಾವಣ್ಯನೆ ಶ್ರೀ ಮನೋಹರ ಕೌಸ್ತುಭಮಣಿಹಾರ ನಿ ಮಣಿ ಅಧಿಕವೆ 2 ಶರಣ ಶರಣ್ಯನೆ ಶಾಶ್ವತ ಸುಖದನೆ ಪರಮ ಪುರುಷನೆ ಪಾವನಚರಿತ ಕರಿಗಿರೀಶನೆ ಕರುಣಾಭರಣನೆ ಕರಿವರದನೆ ಕರುಣವ ತೋರಿಸಿ 3
--------------
ವರಾವಾಣಿರಾಮರಾಯದಾಸರು
ಮನ್ನಿಸು ಮಾರಾರಿ ಮುದದಿಂದಲಿ ಎನ್ನ | ಯಿನ್ನು ದುರಿತಗಳನ್ನ ಹಾರಿಸಿ | ಎನ್ನನನುದಿನ ಪ ಅಮಿಶ್ರ ತತ್ವದಲಿ ಕಲಿ ವಿರಹಿತ ರುದ್ರ | ಹಮ್ಮಿನಿಂದಿತ್ತ ಸರ್ವವ ನೋಳ್ಪನೆ | ಬೊಮ್ಮನಾ ತತ್ವದಲಿ ಹೋಗಿಬರುವ ಪ್ರಬಲ್ಯ | ಉಮ್ಮೆಯರಸಾ ತಾಮಸ ಕಾರ್ಯದಧಿಪತಿ | ಒಮ್ಮೆ ಬಿಡದಲೆ ನರಹರಿಯ ನಾ | ಮಾಮ್ಮರತ ಮನದಲಿ ನೆನಸುವ ಸುಖದಿಂದಲಿ | ಅಮ್ಮಹಾ ವೈರಾಗ್ಯ ಭಾಗ್ಯವ | ಕಮ್ಮರದಿ ಕೊಡು ಕರುಣದಿಂದಲಿ 1 ನಂದಿವಾಹನ ನಾಗತಲ್ಪ ಕಲ್ಪಾಂತರ | ಚಂದಿರಮವ್ಯಾಳಿ ಚರ್ಚಕನಾಯಕ | ಕುಂದುಗೊರಳ ನೀಲಕಂಠಾಗಮನೈಯ್ಯ | ವಂದೀರೈದು ಸ್ಥಾನ ವಾಸವಾದ್ಯ || ಇಂದು ನಿನ್ನ ಪಾದದ್ವಂದ್ವ ನಂಬಿದೆ | ನಿಂದಕರ ಸಂಗತಿ ಸಂಗತಿಯಲಿಡದಲೇ | ಪೊಂದಿಸೋಮ ಜನರೊಳಗೆ ಎರ | ಡೊಂದುಪುರ ವಿನಾಶಾ ಈಶಾ 2 ನಿಖಿಳ ಶಾಂತ | ನಿಟಿಲನೇತ್ರ | ಮಂಗಳಾಂಗ ಶ್ರೀ ವಿಜಯವಿಠ್ಠಲನ | ಹಿಂಗದೆ ಮನದಲ್ಲಿ ನೆನೆಸುವರ | ಸಂಗಸುಖ ಸರ್ವದಾ ಸುಜನಪಾಲಕ | ಪೊಂಗರ್ಭಸುತ ಪತಿತ ಪಾವನ 3
--------------
ವಿಜಯದಾಸ
ಮನ್ನಿಸೊ ನೀ ಎನ್ನ ಮಧ್ವಮುನಿರನ್ನಚೆನ್ನಿಗ ಶ್ರೀಹರಿಪಾದ ಸೇವಕನೆ ಪ. ಅಂಜನೆಯ ಗರ್ಭ ಪರಿಪೂರ್ಣಚಂದ್ರಮನೆಕಂಜಪ್ರಿಯಸುತನಿಗೆ ಕಲ್ಪತರು ನೀನೆರÀಂಜಿಸುವೆ ಶ್ರೀರಾಮಚಂದ್ರನ್ನ ಸೇವಕನೆಸಂಜೀವಗಿರಿಯನು ತಂದ ಮಹಾತ್ಮನೆ 1 ಅರ್ಜುನನಿಗೆ ಅಣ್ಣನಾಗಿ ಅಖಿಲ ದಿಕ್ಕೆಲ್ಲವನುಲಜ್ಜೆಯನು ಕೆಡಿಸಿ ಷಡ್ರಥಿüಕರನು ಜರಿದೆಮೂಜಗವು ಮೆಚ್ಚಲು ಮಾಗಧನ ಸೀಳಿದೆಸಜ್ಜನಪ್ರಿಯ ಭೀಮಸೇನ ಉದಾರ2 ಕೂರ್ಮ ಸೇವಕನಾದಧೀರ ಮಧ್ವಾಚಾರ್ಯ ದೇಶದೊಳು ಮೆರೆದೆ 3
--------------
ವಾದಿರಾಜ
ಮನ್ಮಥನಯ್ಯನ ಮನದಲಿ ಸ್ಮರಿಸಿರೊ ಮನ್ಮಥ ನಾಮ ಸಂವತ್ಸರದಿ ಪ ಸುಮ್ಮನೆ ಕಾಲವ ಕಳೆಯುವದೇತಕೆ ಬ್ರಹ್ಮನಪಿತ ನಂಘ್ರಿಗಳ ಭಜಿಸುತ ಅ.ಪ ಬಂಧು ಬಳಗ ಮಂದಿಮಕ್ಕಳೆಲ್ಲರು ಕೂಡಿ ಒಂದೆ ಸ್ಥಳದಿ ಭಜನೆಯಮಾಡಿ ಇಂದಿರಾರಮಣನ ಚಂದದಿ ಪೊಗಳಲು ಬಂದ ದುರಿತಗಳ ಪೊಂದಿಸನೆಂದೆಂದು 1 ಮಾಕಮಲಾಸನ ಲೋಕದ ಜನರಿಗೆ ತಾಕಾಣಿಸಿ ಕೊಳ್ಳದೆ ಇಹನು ಶ್ರೀಕರ ಸಲಹೆಂದು ಏಕ ಭಕುತಿಯಲಿ ಲೋಕವಂದ್ಯನ ಸ್ತುತಿಗೆ ನೂಕುವ ಅಘಗಳ 2 ಅತಿಶಯದಿಂದಲಿ ಸತಿಸುತರೆಲ್ಲರು ಪತಿತಪಾವನನ ಕೊಂಡಾಡುತಲಿ ಗತಿ ನೀನಲ್ಲದೆ ಮತ್ತೆ ಹಿತರ್ಯಾರಿಲ್ಲವೆನೆ ಸತತ ಸುಕ್ಷೇಮವಿತ್ತು ಪಾಲಿಸುವಂಥ 3 ಶ್ರಮವ ಪರಿಹರಿಸೆಂದು ನಮಿಸಿಬೇಡುವ ಭಕ್ತ ಜನರನು ಸಂತೈಸುತಲಿಹನು ಹನುಮ ಭೀಮ ಮಧ್ವಮುನಿಗಳ ಸೇವಿಪ ಮನುಜರ ಮನೋರಥಗಳನೆ ಪೂರೈಸುವೊ 4 ವತ್ಸರ ಆದಿಯಲಿ ಅಕ್ಷರೇಡ್ಯನ ಪಾದ ಕ್ಷಿಪ್ರದಿಂದಲಿ ಸೇವಿಪ ನರನ ಭಕ್ತವತ್ಸಲ ತನ್ನ ಭಕ್ತರ ಸಂಗದೊಳಿಟ್ಟು ಸಂತೈಸುವ ಸತ್ಯಸಂಕಲ್ಪ ಶ್ರೀ5 ತಾಳ ತಂಬೂರಿ ಸುಸ್ವರಗಳಿಂದಲಿ ಬಹು ನೇಮದಿಂದಲಿ ಸರುವರು ಕೂಡಿ ಗಾನಲೋಲನ ಭಜನೆಯ ಮಾಡುತ ಸತ್ಯ ಸ್ವಾಮಿಯ ಗುಣಗಳ ಪೊಗಳುವ ಸುಜನರು 6 ಸಡಗರದಿಂದಲಿ ಕಡಲೊಡೆಯನ ಗುಣ ಪೊಗಳುತ ಹಿಗ್ಗುತ ಅಡಿಗಡಿಗೆ ಕಡಲ ಶಯನ ಕಮಲನಾಭ ವಿಠ್ಠಲನೆಂದು ತೊಡರು ಬಿಡಿಸುವ ಶ್ರೀ 7
--------------
ನಿಡಗುರುಕಿ ಜೀವೂಬಾಯಿ
ಮನ್ಮಥಪಿತ ವಿಠಲ ನೀನಿವಳ ಸಲಹೊ ಹರಿಯೇಮನ್ಮನೋರಥ ಭಿನ್ನಪವ ಸಲಿಸೋ ಪ ಜನ್ಮಜನ್ಮಾಂತರದ ಪುಣ್ಯ ಸಂಚಯ ಫಲಿಸಿನಿನ್ನ ದಾಸತ್ವದಲಿ ಕಾಂಕ್ಷೆ ಬಹುಯಿರಿಸೆನನ್ನೆಯಿಂದಲಿ ಪೂಜೆ ಪರಿಕರಂಗಳ ಕೊಂಡುಸ್ವಪ್ನ ಸೂಚಕದಂತೆ ನಿನ್ನರ್ಚನೆಯ ಕಾತುರಳ 1 ತರತಮದಿ ಸುಜ್ಞಾನ ಹರಿಗುರೂ ಸದ್ಭಕ್ತಿಪರಮ ವೈರಾಗ್ಯವನು ವಿಷಯಾದಿಗಳಲೀಪರತತ್ವ ಹರಿಯೆಂಬ ವರಮತಿಯ ನೀನಿತ್ತುಗುರುಮಧ್ವ ಮತದಲ್ಲಿ ಪರಮದೀಕ್ಷೆಯನೀಯೋ 2 ಪತಿ ಸುತರು ಹಿತರಲ್ಲಿ | ಗತಿದಾತ ಗುರುವಿನೊಳುಕ್ಷಿತಿರಮಣ ತವವ್ಯಾಪ್ತಿ ಮತಿಯ ಪಾಲಿಸುತಗತಿ ದೋರೊ ಸನ್ಮುಕುತಿ ಪಥವನೀ ಸಲಿಸುತ್ತಹುತವಹಕ್ಷಾಂತರ್ಗತ ಮನದಿ ನೆಲಸುತಲೀ 3 ಸಂಜೀವ ಪಿತನೇ |ನಂಜು ಸಂಸ್ಕøತಿ ಬಂಧ ಮೋಚಕೇಚ್ಛೆಯ ಮಾಡಿಅಂಜಿಕೆಯನೆ ಕಳೆಯೊ | ಕಂಜಾಕ್ಷ ಹರಿಯೇ 4 ಪಾವಮಾನಿಯ ಪ್ರೀಯ ಭಾವುಕಳ ಹೃದ್ಗತನೆನೀವೊಲಿದು ತವಸ್ಮರಣೆ ಸರ್ವದಾ ಸರ್ವತ್ರಈವುದಿವಳಿಗೆ ಎನ್ನ ಬಿನ್ನಪವ ಸಲ್ಲಿಪುದುಗೋವಿದಾಂಪತಿಯೆ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಮನ್ಮನೋಹಾರಕ ಪ ರಾಮ ದಶರಥ ರಾಮ ಮಂಗಳನಾಮ ಶ್ರೀ ರಘುರಾಮ ಗುಣಗಣಧಾಮ ಸಜ್ಜನಪ್ರೇಮ ಹೇ ಜಯ ರಾಮ ಸೀತಾರಾಮ ರಘುವರ ಅ.ಪ ಕೂಡಲು ಕೋಪದಿ ಗೌತಮಮುನಿ ತರಳೆಯ ಶಪಿಸಿರಲು ಕಲ್ಲಾಗಿ ಬಿದ್ದಿರೆ ಪಾದಗಳ ರಜದಿಂ ಸುವಾರ್ತೆಯ ಕೇಳಿ ಬಂದಿಹೆ 1 ಗಿಡ ಮರವಲೆದು ತಂದು ಫಲಮೂಲಗಳನು ಒಡೆಯ ನೀ ಬರುವೆಯೆಂದು ಕೇಳುತ ತಾನು | ಬಡವರೊಡೆಯ ನೀನೆಂದರಿತು | ಕಡುಹಿತದೊಳೆಂಜಲ ಫಲಗಳುಣಿಸಲು| ಕೇಳಿ ಬಂದಿಹೆ 2 ಛಲದಲೋಡಿಸಿ ರಾಜ್ಯದಿ ಗೆಳೆಯ ಮಾರುತಿಯಿಂದಲರಿತು ಗಳಿಸಿದ್ವಾರ್ತೆಯ ಕೇಳಿ ಬಂದಿಹೆ 3 ಸತಿ ವರಪತಿವ್ರತೆ ಸೀತೆಯ ಪರಿಪರಿಯಿಂದಲಿರದೆ ದುರುಳ ರಾವಣನ ಭಂಗಿಸಿ ಹೊರದೂಡಲವ ನರಸಿ ನಿನ್ನಯ ಪರಮ ಪಾದಾಶ್ರಯವ ಬೇಡಲು ಪೊರೆದ ವಾರ್ತೆಯ ಕೇಳಿ ಬಂದಿಹೆ4 ಪರಮಪುರುಷ ನೀನೆಂದು ನಂಬಿದೆ ಸಿರಿಯರಸ ಪ್ರಭುವು ನೀನೆಂದು ಚರಾಚರ ಗುರುವು ಪ್ರಭುವು ನೀನೆಂದು ಇಂದು ತರಣಿ ಮಣಿ ಸಾರ್ವಭೌಮನೆ ಶರಣರಘ ಕೋಟಿಗಳ ಕಳೆವನೆ ಶರಣ ಬಂದಿಹೆನೆನ್ನ ಪಾಲಿಸದಿರುವರೇ ರಘುರಾಮ ವಿಠಲ 5
--------------
ರಘುರಾಮವಿಠಲದಾಸರು
ಮರಣ ಕಾಲವ ತಿಳಿಸೋ ಮಧುಸೂದನಾ ಪ ಶರಣು ಬಂದವರ ಭಯಹರಣಾ ಅ.ಪ. ಸ್ನಾನಮಾಡಲಿಬೇಕು ಮೌನದಿಂದಿರಬೇಕು ಹರಿಜ್ಞಾನಪೂರ್ವಕ ಹರಿಯ ಧ್ಯಾನಬೇಕುನಾನಾ ವಿಷಯದ ಚಿಂತೆ ಮಾನಸದಿ ಬಿಡಬೇಕುದಾನ ಧರ್ಮಗಳನು ಮಾನಸದಿ ಮಾಡಬೇಕು 1 ಸುತ್ತಲು ಜನರುಗಳ ಹತ್ತಿರ ಕೂಡುತಲಿನಿತ್ಯ ಭಾಗವತಾದಿ ಶಾಸ್ತ್ರಗಳನುಮೃತ್ಯು ಕಾಲದಿ ಪರಿಸೆ ಶ್ರೋತ್ರದಿಂ ಕೇಳಿ ಯಮ-ಭೃತ್ಯರು ಓಡಲಿಬೇಕು ಎತ್ತಿ ಕಾಲುಗಳು 2 ಮಕ್ಕಳು ಮನೆಗಳಲಿ ಚಿಕ್ಕ ಯುವತಿಗಳಲ್ಲಿಮಿಕ್ಕಾದ ಪಶು ಕೃಷಿ ರೊಕ್ಕಗಳಲ್ಲಿಪೊಕ್ಕಿ ಮನಸಿಲಿ ವಿಷಯ ಸಿಕ್ಕಿ ತೊಡಕೆನೊ ಎನ್ನವಕ್ರವಾ ತೋರಿಸುತ ಮೆಲ್ಲ ಕೈ ಬಿಡಿಸಿನ್ನು 3 ಕಮಲ ಮಂದಹಾಸವ ತೋರೋಸಿಂಧು ಉದ್ಧರನೆ ವೃಂದಾವನೀಯೋ 4 ಸಿಂಧುವಿನ ತಟದಿ ಗೋವೃಂದದೊಳಗೆ ಚಂದದಲಿ ಕೊಳಲೂದೋ ಸುಂದರ ಮುಖ ಕಮಲಒಂದೇ ಮನದಲಿ ನೋಡಾನಂದದಲಿ ಮಾಡೋಇಂದಿರೇಶ ನಿನ್ನ ಮುಂದೆ ನಿಂತಿರುವಾನಾರಂದ ಮುನಿ ಗುರುವರ ಮಂದಸ್ಮøತಿ ನೀಡೋ 5
--------------
ಇಂದಿರೇಶರು