ಒಟ್ಟು 2472 ಕಡೆಗಳಲ್ಲಿ , 109 ದಾಸರು , 1878 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಿಪರಿ ಕೊಂಡಾಡೋ ಹರಿಯನ್ನು ಮರೆದು ನೀ ಕೆಡಬೇಡೋ ಮನವೆ ಪ ಮರವೆ ಮಾಯ ನೀಗಿ ಧರೆಭೋಗ ಮೆಚ್ಚದೆ ನಿರುತ ಭಜಿಪರ ಬಿಟ್ಟು ಅರಲವಗಲ ಹರಿ ಅ.ಪ ಕರುಣಸಾಗರನು ನರಹರಿ ಚರಣದಾಸರನ್ನು ತನ್ನಯ ಹರಣಸಮಾನ ಮಾಡಿ ಕರುಣದಿಂದವರ ಇರವ ಪೂರೈಸುತ ಪೊರೆವ ಪ್ರೇಮದಿಂದ 1 ಚಿಂತೆ ಭ್ರಾಂತಿಗಳನು ಬಿಡಿಸಿ ಸಂತಸ ಕರುಣಿಸಿ ಅವರ ಅಂತರಂಗದಿರ್ದು ಅಂತರ ತಿಳಿಯಿತು ಚಿಂತಿಸಿದ್ದನ್ನಿತ್ತು ಸಂತಸದಿಂ ಕಾಯ್ವ 2 ಸಾರಿಸಾರಿಗೆ ತನ್ನ ಚರಣಸೇರಿ ಭಜಿಪರನ್ನು ಬಿಡದೆ ಆರಭಾರ ಪೊತ್ತು ಸೇರಿ ಅವರ ಬಳಿಯ ಪಾರಸಂಭ್ರಮದಿಂ ಧೀರ ನಲೀತಿಹ್ಯ 3 ಅಮಲರೂಪ ತನ್ನ ನಿರುತ ವಿಮಲಚರಣವನ್ನು ನಂಬಿದ ಸುಮನಸರಹೃದಯಕಮಲದಿ ವಾಸಿಸಿ ನಿಮಿಷಬಿಟ್ಟಗಲದೆ ಕ್ರಮದಿ ಪಾಲಿಸುವ4 ಗೂಢದಿಂದ ಸ್ಮರಿಪ ಭಕುತರ ಗಾಢಮಹಿಮೆ ಕೃಪಾದೃಷ್ಟಿಯಿಂ ಬೇಡಿದ ವರಗಳ ಕಾಡದೆ ನೀಡುತ ರೂಢಿಯೋಳ್ ಬಿಡದೆ ಕಾಪಾಡುವ ಶ್ರೀರಾಮ 5
--------------
ರಾಮದಾಸರು
ಪರಿಪಾಲಿಸು ಎನ್ನನು| ಶ್ರೀ ಜಗದಂಬ| ಪರಿಪಾಲಿಸು ಎನ್ನನು ಪ ಕರುಣಾಶರಧಿ ಶಂಕರಿ| ಕಮಲವ ಸ್ಮರಿಸಿ ಬೇಡುವೆ ಅ.ಪ ರುಧಿರಬೀಜಸಂಹಾರಿಣಿ|| ವಧಿಸಿ ಶುಂಭ ನಿಶುಂಭ ದೈತ್ಯರ|| ಮಹಿಯನು ಪೊರೆದ ಮಾತೆ1 ಲಂಬೋದರ ಜನನಿ| ಶ್ರೀ ಜಗದಂಬ| ಕÀಂಬುಕಂಧರೆ ಸುಗುಣಿ|| ರುದ್ರಾದ್ಯಮರ ವಂದಿತೆ|| ಸುಮನೋಹರೆಯೆ ಶಂಕರಿ2 ಅರುಣಾಸುರನ ವಧಿಸಿ| ಮೆರೆವ ನಂದಿನಿನದಿಯ ಮಧ್ಯದಿ ಲಾಲಿಸಿ ಪೊರೆವ ಜನನಿ 3 ದುಷ್ಟದಾನವ ಮರ್ದಿನಿ|| ನೆಷ್ಟು ಪೊಗಳಿದರೆನಗಸಾಧ್ಯವು|| ಸೌಭಾಗ್ಯದಾಯಿನಿ 4 ಶಂಕರಿ ಘನಸುಗುಣಿ|| ಗೆಲಿದು ಮೆರೆಯುವ|| ಕಿಂಕರನ ಮನದಿಷ್ಟವೀಯುತ 5
--------------
ವೆಂಕಟ್‍ರಾವ್
ಪರಿಪಾಲಿಸೈ ವರ ವೆಂಕಟೇಶ ಚರಣಾಬ್ಜಯುಗ ಸ್ಮರಣೆಯನಿತ್ತು ಪ ದುರಿತಾಧಿದೂರ ಪರತತ್ವಸಾರ ಪರಮಾತ್ಮನೆ ಪೊರೆ ಎನ್ನುತ ಕರಿರಾಜ ಮೊರೆಯಿಡುತಿರಲು ನೀ ಗರುಡನ ಏರಿ ತ್ವರೆಯಿಂದ ಬಂದೆ ಪರಮ ದಯಾಕರ ಶ್ರೀನಿವಾಸ 1 ಪಾಪಿಷ್ಠನು ಅಜಾಮಿಳನೆಂದು ಕೋಪದಿ ಯಮ ಭಟರೆಳೆಯುತಿರೆ ತಾಪಕೆ ತನ್ನ ಪುತ್ರನ ಕೂಗುತಲಿರೆ ಕೃಪೆಯಿಂದ ನಿಜಪುರಕೆ ಒಯ್ದೆ 2 ಕನಕಾಚಲನಿಧಿ ಲಕ್ಷ್ಮೀಕಾಂತ ಪ್ರಣತಾರ್ಥಿಹರ ಆನಂದಕರ ವನಜಾಸನಾದಿ ಅಮಿಷಪಾಲ ಯೋಗಿ ಮನ ಕುಮುದಲೋಲ 3
--------------
ಲಕ್ಷ್ಮೀನಾರಯಣರಾಯರು
ಪರಿಪಾಹಿ ಗುರು ರಾಘವೇಂದ್ರ ಪ ಶರಣರ ಪೊರೆಯಲು | ವರ ಮಂತ್ರಾಲಯಪುರದಲಿ ನೆಲಿಸಿಹೆ | ಕರುಣಿಗಳರಸಅ.ಪ. ಪಿತನ ಬಾಧೆಗೆ ಲವ | ವ್ಯಥೆಯನು ಪಡದಲೆರತಿಪತಿ ಪಿತನೆ ಸ | ರ್ವೋತ್ತಮನೆಂದೂರದೆ 1 ದ್ವಿತಿಯ ಯುಗದಲಿ | ದೈತ್ಯನಲ್ಲುದಿಸುತಸೀತೆಯ ರಮಣನ | ಪ್ರೀತಿಯ ಪಡೆದೆಯೋ 2 ದ್ವಾಪರದಲಿ ಪ್ರ | ತೀಪನ ಸುತನೆನಿಸೀ ಶ್ರೀಪತಿ ಕೃಷ್ಣನ | ಪ್ರೀತಿಯ ಪಡೆದೇ 3 ಇಷ್ಟವಿಲ್ಲದ ಪುಣ್ಯ | ಎಷ್ಟೂ ಗಳಿಸಿ ನೀವುಶಿಷ್ಟರ ಪಾಲಿಸೆಂದು | ಕೃಷ್ಣನ ಮೊರೆಯಿಟ್ಟೆ 4 ವ್ಯಾಸರಾಯರಾಗಿ | ಭೂಸುರ ಸುಜನರಕ್ಲೇಶವ ಹರಿಸಿದೆ | ದಾಸಕೂಟಕೆ ಹಿರಿಯಾ 5 ಶ್ರೀಶನರಹರಿ | ವ್ಯಾಸ ರಾಮಾ ಕೃಷ್ಣಈಸು ರೂಪಗಳಲ್ಲಿ | ವಾಸವು ವೃಂದಾವನದಿ 6 ಪರಿಪರಿ ವಿಧ ನಿಮ್ಮ | ಚರಣವ ಸ್ಮರಿಸುವನರರ ಮನೋರಥ | ಹರಿಯ ಕರುಣಿಪ 7 ಸರಸಿಜಾಸನ ಮುಖ | ಸುರಪ ದೇವರ್ಕಳಲ್ಲಹರಿಯನು ಚರರೆಂಬಾ | ವರಮತಿ ಪಾಲಿಸೋ8 ಭವ ಭಯ ಹರಿಸೀ 9
--------------
ಗುರುಗೋವಿಂದವಿಠಲರು
ಪರಿಭವ ತಾಪಹರಣ ಪ ದಯದಿ ಯುವತಿಯಕುಲ ಉದ್ಧಾರಣ ಜವದಿ ಕರಿಧ್ರುವಬಂಧಮೋಚನ ಯುವತಿಗಕ್ಷಯವಿತ್ತು ಒಲಿದು ಹಯವ ಪಿಡಿದು ರಥವ ನಡೆಸಿದ ಭುವನ ಬ್ರಹ್ಮಾಂಡ ಸೂತ್ರಧಾರಕ ಶಿವಸುರಾರ್ಚಿತ ಪೊರೆ ಸುಹೃದಯ ಅ.ಪ ಪತಿತಪಾವನ ಶ್ರೀಶಕೇಶವ ಸಹಸ್ರಾಕ್ಷಶಯನ ಮಾಧವ ಭೋಗ ಗರುಡಗಮನ ಪತಿತಪಾವನೆ ಇಂದಿರೆಂiÀi ಜೀವ ಜಗದಾದಿದೇವ ಯತಿತತಿನುತ ಪವಿತ್ರನಾಮ ಕ್ಷಿತಿಸುತೆಪತಿ ಪವಿತ್ರ ಮಹಿಮ ಸತಿಯರವ್ರತಹರ ಜಿತಮಹಮುಪ್ಪುರ ಕೃತ್ರಿಮ ಮುರಹರ ಮಥನಸಾಗರ ನುತಿಪರ್ಹಿತಕರ ಸುಪಥರಾಧಾರ ಹಿತದಿ ಪೊರೆಯೆನ್ನ ಕರುಣಾನಿಕರ 1 ನಿರುತ ಜನರ ಕಲ್ಪತರು ನೀನು ಭಯಭಕ್ತಿಯಿಂದ ಸ್ಮರಿಸಿ ಬೇಡ್ವರ ಪರಮಸುರಧೇನು ಸುರಗಂಗಾಜನಕ ಶರಣು ಸಜ್ಜನರಮಿತ ದಯಾ ಪರನು ವಿಶ್ವರಕ್ಷಕನು ಮರಣರಹಿತ ಮದನತಾತ ಶುಭ ಸಚ್ಚರಿತ ದುರುಳ ಸಂಹರ ಶರಣುಮಂದಾರ ಸುಗುಣರೋದ್ಧಾರ ಶರಣಭಜಕರ ವರಸುಖಕರ ಕರಣಿಸಭವನೆ ತ್ವರಿತ ಸುವರ 2 ಕುಸುಮನಯನ ಸ್ವತಂತ್ರ ಮಹಲೀಲ ದಿವಕೋಟಿ ಪ್ರಭಾಕರ ಕುಸುಮಗಾತ್ರ ಮಹತಂತ್ರ ಮಾಯಜಾಲ ಗೋವರ್ಧನೋದ್ಧಾರ ಕುಸುಮಧರ ಕುರುಕುಜನಕುಲಕಾಲ ಗೋಪಾಲಬಾಲ ಕುಸುಮನಾಭ ಕೌಸ್ತುಭಾಂಬರ ಅಸಮ ತುಲಸಿಮಾಲಾಲಂಕಾರ ಒಸೆದು ದಾಸನ ಪುಸಿಯೆಂದೆನಿಸದೆ ಹಸನುಮತಿಯಿತ್ತು ಪೋಷಿಸನುದಿನ ಎಸೆವ ತವಪಾದ ನಂಬಿ ಮರೆಬಿದ್ದ ಅಸಮದಯಾನಿಧಿ ಮಮ ಶ್ರೀರಾಮ 3
--------------
ರಾಮದಾಸರು
ಪವನಾ ಸಂಭೂತಾ ಒಲಿದೂತವಕಾದಿ ಕಾಯಬೇಕೂ |ಇವನಾರೋ ಎಂದೂ ದಾಸಿನಾ | ಮಾಡದಲೆ ಎನ್ನಾ ಪ ಹರಿವೇಷಧರನೆ ನರ |ಹರಿಭಕುತರ ಪೊರೆಯುವದಕ್ಕೇ ||ಹರಿಯಂತೆ ಒದಗುವೆಯೋ ನೀನೂ | ಹರಿದಾಸ ನಾನೂ 1 ಕಪಿಪಾ ಕಪಿಯಾಜ್ಞದಂತೇ |ಕಪಿಲನ್ನ ಪತ್ನಿಯನ್ನೂ ||ಕಪಿಗಳು ಹುಡುಕಿ ಮಿಡುಕಲು | ಕಾಯ್ದೆ ಆವಾಗಲೂ 2 ಅಜಸುತನ ಶಾಪದಿಂದ |ಅಜಗರನಾದ ವನಪಾದ ||ರಜದೀ ಪೂನೀತನ ಮಾಡಿದನೇ | ಅಜಪದವಿಗೆ ಬಹನೇ3 ಕಲಿಯುಗದಿ ಕವಿಗಳೆಲ್ಲಾ |ಕಲಿಯಾ ಬಾಧೆಗೆ ಬಳಲಿ |ಕಲಿವೈರಿ ಮುನಿಯೆಂದೆನಿಸಿದೇ | ಕಲಿಮಲವಾ ಕಳೆದೆ 4 ಗುರು ಪ್ರಾಣೇಶ ವಿಠಲಾ |ಗುರುವರನೆಂಬೊ ಜ್ಞಾನಾ ||ಗುರು ಮಧ್ವರಾಯಾ ಕರುಣಿಸೋ | ಗುರುಮತಿಯನು ಬಿಡಿಸೋ 5
--------------
ಗುರುಪ್ರಾಣೇಶವಿಠಲರು
ಪವನಾಂತರ್ಗತ ಹರಿಯ ಸ್ಮರಣೆಯಮಾಡಿ ಪ ವಿವಿಧ ಭಕುತರು ಕೂಡಿ ಹರುಷದಿ ಪ್ಲವನಾಮ ಸಂವತ್ಸರದಲಿ ಸವಿನಯದಿ ಭಜನೆಗಳ ಮಾಳ್ಪರು ಹರಿಯ ಗುಣ ಕಾರ್ಯಗಳ ಸ್ಮರಣೆಯ ಅ.ಪ ಪಕ್ಷಿವಾಹನ ಹರಿಯು ಶ್ರೀ ಲಕುಮಿದೇವಿಯ ಲೆಕ್ಕಿಸದಿಹನಂತೆ ಹೀಗಿರಲು ಬ್ರಹ್ಮನ ಪೊಕ್ಕುಳಲಿ ಪಡೆದನಂತೆ ಸೊಕ್ಕಿದ ಅಸುರರನು ಬಡಿಯಲು ಮಿಕ್ಕ ಸುರರನು ಪೊರೆಯಲೋಸುಗ ರಕ್ಕಸಾಂತಕ ಹರುಷದಿಂದಲಿ ಚೊಕ್ಕ ಸ್ತ್ರೀ ರೂಪಾದನಂತೆ 1 ಇಂದುಶೇಖರ ಕೇಳಿದ ಸ್ತ್ರೀರೂಪ ನೋಡಲು ಬಂದು ಬೇಡಿದನಂತೆ ಅದು ಕೇಳಿ ಶ್ರೀಶನು ಸುಂದರ ಸ್ತ್ರೀಯಾದನಂತೆ ನಿಂದು ನೋಡುತ ಚಂದ್ರಶೇಖರ ಮಂದಹಾಸದಿ ಪಿಡಿಪೋದನಂತೆ ಮಂದಗಮನೆಯು ಸಿಗದೆ ದೂರದಿ ನಿಂದು ಕಣ್ಮರೆಯಾದಳಂತೆ2 ವಿಸ್ಮಯವಾದನಂತೇ ಪಶುಪತಿಯ ಸಿರದಲಿ ಹಸ್ತ ನೀಡಿದನಂತೇ ಮತ್ತೆ ರಕ್ಷಕರಿಲ್ಲವೆಂದು ತತ್ತರಿಸಿ ಭಯಪಟ್ಟನಂತೆ ತಕ್ಷಣದಿ ಶ್ರೀ ಕಮಲನಾಭ ವಿಠ್ಠಲ ರಕ್ಷಿಸಿ ಪೊರೆದನಂತೆ 3
--------------
ನಿಡಗುರುಕಿ ಜೀವೂಬಾಯಿ
ಪವಮಾನ ಪಾಲಿಸೆನ್ನ ಸದ್ಗುಣಘನ್ನ ಪ ಪವಮಾನ ಪೊರಿಯೆನ್ನ ಕವಿಭಿರೀಡಿತ ನಿನ್ನ ಸ್ತವನಗೈಯುವ ಮಾನವರೊಳಧಮ ನಾನು ಪವಮಾನ ಪಾಲಿಸೆನ್ನ ಅ.ಪ ಪತಿ ಶಿವ ಮುಖ ದಿತಿಜಾರಿತತಿನುತ ಶ್ರುತಿ ಪ್ರತಿಪಾದ್ಯ ಆ ನತ ಬಂಧು ತತ್ವಾಧಿ ಪತಿಗಳೊಳುತ್ತಮ ಪ್ರಥಮಾಂಗ ಹರಿ ಪ್ರೀಯ ದ್ವಿತಿಯುಗದಲಿ ಕಪಿ - ನೀರಜ ಪತಿಯಪಾದದ್ವಯ ಅತಿಹಿತದಲಿ ಸೇವಿಸಿ ಲವಣಾರ್ಣವ ಶತಯೋಜನವ ಲಂಘಿಸಿ ರಾಕ್ಷಸಕುಲ ಹತಗೈಸಿ ಪುರದಹಿಸಿ ದೇವಿಯ ಸುವಾರುತಿಯ ತಿಳಿಸಿ ಭಾವಿದ್ರುಹಿಣನೆಂದೆನಿಸಿ 1 ಕುರುಕುಲದಲಿ ಕುಂತಿ ತರುಳನೆನಿಸೆ ಯುಧಿ ಷ್ಟರನನುಜ ವೃಕೋದರ ನಾಮದಲಿಯವ ತರಿಸಿ ಬಕಾದಿ ದುಷ್ಟರ ಶಿಕ್ಷೆಯನು ಗೈಸಿ ಹರಿಇಚ್ಛೆಯಲಿ ವನಚರಿಸಿ ಕೀಚಕನ ಸಂ ಹರಿಸಿ ದುಶ್ಯಾಸÀನಾದ್ಯರನೆಲ್ಲರಣದೊಳು ದುರುಳದುರ್ಯೋಧನನಸಾನುಜಗಣ ತ್ವರಿತಗೈಸಿ ಹನನ ವಿಜಯನಾಗಿ ಪೊರೆದೆ ಧರ್ಮಾರ್ಜುನನ ತ್ರಿಭುವನದಿ ಸರಿಗಾಣೆ ದ್ವಿಜರಿಪು ಪದುಪಂಚಾನನ 2 ಮಣಿಮಂತ ಮೊದಲಾದದನುಜರು ಹರಿದ್ವೇಷ - ವನು ಮಾಡಲೋಸುಗವನಿಯೊಳುದ್ಭವಿಸಿ ನಿ - ರ್ಗುಣರೂಪ ಕ್ರೀಯ ಬ್ರಹ್ಮನೆನುತ ಹರಿಯತಾ ನೆನಿಪ ದುರ್ಮತವನ್ನು ಘನವಾಗಿ ಪ್ರಬಲಿಸಿ ದನುಜಾರಿಯಾಙÁ್ಞದಿ ಮುನಿಮಧ್ಯ ಸತಿಯಲ್ಲಿ ಮುನಿಮಧ್ವನೆಂದೆನಿಸಿ ಜನಿಸಿ ಕುಮತವನು ಶಾಸ್ತ್ರದಿ ಖಂಡಿಸಿ ಹರಿಯೆ ಪರನೆನಿಪ ಮತವಸ್ಥಾಪಿಸಿ ಮೆರೆದೆ ಈ ಧಾರುಣಿಯೊಳು ವರದೇಶ ವಿಠಲನ ವಲಿಸೆ 3
--------------
ವರದೇಶವಿಠಲ
ಪವಮಾನ-ಪಾವನಾ ಜಗಜ್ಜೀವನ ಪ ಶಿವ ಖಗಪತಿ ಅಹಿಸುರ ವಂದಿತಪದ ಅ.ಪ ಸೇವಾ ಕೃಷ್ಣ ಸಾಧನಾ ಕಾವಕರುಣಿ ಕಿಂಪುರುಷ ಖಂಡಾಧಿಪ ಕಾವಳದೊಳು ನಿನ್ನವರನು ಕಾಯ್ದೆ ಭೂವಳಯದೊಳವಿದ್ಯೆಯನಳಿಸಿದ ಸದ್ವರ್ತನು ನೀನೆನ್ನನುದ್ಧರಿಸಯ್ಯ 1 ಶರಧಿ ಹಾರಿದೆ | ಕೌರವ ಕಲಿಯಾ ನೀ ಗದೆಯಿಂ ಛೇದಿಸಿದೆ ಧಾರುಣಿಯೊಳು ಯತಿಪುಂಗವನೆಂದೆನಿಸಿದೆ ನಿರುತದಿ ರಾಮರ ಕಾರ್ಯವ ಸಾಧಿಸಿ ವಿರಥರ ಮಾಡಿದೆ ಅತಿರಥರುಗಳ ಹರಿಸರ್ವೋತ್ತಮ ತರತÀಮ ಸತ್ತತ್ವಗ ಳರುಹಿದ ಸದ್ವರ್ತನು ನೀನೆ 2 ರಾಮಪದಕುಮುದಸೋಮ ಭೀಮಾ ರಿಪುಕುಲ ಧೂಮ ನಿಸ್ಸೀಮ ಶ್ರೀಮದಾನಂದಮುನಿ ಸಾರ್ವಭೌಮ ಭೂಮಿಜೆ ಕುರುಹ ಶ್ರೀರಾಮರಿಗರ್ಪಿಸಿ ಅ ಮಹ ಬಕ ಕೀಚಕರ ಸಂಹರಿಸಿ ತಾಮಸ ಗ್ರಂಥವನಳಿಸಿ ಜನಕೆ ಸದ್ಬೋಧೆ ಇತ್ತ ಗುರು ಪೂರ್ಣಬೋಧನೆ 3 ದ್ರೋಣಾಚಲವ ತಂದ ಪ್ರಾಣ ಎಣೆಯುಂಟೆ ಬಲದೊಳು ನೀನೆ ನಿಸ್ಸೀಮ ಕಾಣೆನೊ ಜಗದಿ ಪರಮಹಂಸರ ಪ್ರಾಣ ಪ್ರಾಣಿಗಳೊಳಗೆ ಮುಖ್ಯಪ್ರಾಣನೆಂದೆನಿಸಿದೆ ಕ್ಷೋಣಿಯೊಳು ಕುರುಸೇನೆ ಸಂಹರಿಸಿ ಕ್ಷೀಣವಾಗುತಲಿಹ ಸುಜನರ ಮನಸ ತ್ರಾಣ ಮಾಡಿ ಸತ್ಪ್ರಮಾಣಗಳಿತ್ತೆ4 ಋಜುಪುಂಗವ ದೇವಾ ಹನುಮಾ ಗಜಪುರಾಗ್ರಣಿ ಕೌರವನಿಗೆ ನೀ ಕಾಲಯಮ ಕುಲಿಶ ನಿಸ್ಸೀಮ ಅಜಪದ ಪಡೆದಿ ಶ್ರೀ ಆಂಜನೇಯನೆ ವಿಜಯಸಾರಥಿನೊಲಿಸಿ ಪೂಜಿಸಿ ಸೃಜಿಸಿ ಮರೆದೆ ಸಚ್ಛಾಸ್ತ್ರದಿಂದ ಈ ಚತುರ್ದಶಭುವನಾಚಾರ್ಯನೆನಿಸಿದೆ 5 ಖೂಳ ಅಕ್ಷಕುವರನ ಹರಿಸೆ ಖಳರ ಕಾಳೋರಗ ಬಾಧೆ ಲೆಕ್ಕಿಸದೆ ಖಳ ಭೂದೈತ್ಯರ ಬಾಧೆ ಹರಿಸಿದೆ ಬಾಲತನದಲಿ ಭಾನುಮಂಡಲ ಹಾರಿದೆ ಲೋಲತನದಿ ಸತಿಗೆ ಪೂವಿತ್ತೆ ಶೀಲಮೂರುತಿ ಮಾಯ ಜಾಲ ಹರಿಸಿ ಜಗಖ್ಯಾತನಾದೆ ಯತಿದಶಪ್ರಮತಿಯೆ 6 ಮಾರುತಿ ಧೀಮಂತಮೂರುತಿ ಭಾರತದಿ ಭೂಭಾರನಿಳುಹಿದ ಖ್ಯಾತಿ ಸಾರ ಶ್ರೀ ಬಾದರಾಯಣಗೆ ಅತಿಪ್ರೀತಿ ಅರಿಪುರ ವೈಶ್ವಾನರನಿಗರ್ಪಿಸಿ ವಾರಣಪುರದೊಳು ಅತಿರಥನೆನಿಸಿ ದುರ್ವಾದಿಮತ್ತಗಜಸಿಂಹನಾಗಿ ನೀ ನಿವ್ರ್ಯಾಜÀದ ಭಕ್ತಿಯ ಹರಿಗರ್ಪಿಸಿದೆಯೊ 7 ಹನುಮಾ ಭೀಮಾ ಆನಂದ ಮುನಿಪಾ ಆ ವಾನರಾಧಿಪಾ ಗಜಪುರಾಧಿಪ ಯತಿಪಾ ಧ್ಯಾನನಿರತ ರಾಮಪದದಿ ಮಾನಸದಲ್ಲಿ ಯದುಪತಿಯ ಪೂಜಿಸಿ ದೀನಜನರುದ್ಧಾರಮಾಡಿ ಸದ್ಬೋಧೆ ಯನಿತ್ತ ಮಧ್ವಮುನಿಯೆ 8 ರಾಮಾಲಿಂಗನ ಮಾಡಿದಾ ರೋಮ ರೋಮಕೆ ಕೋಟಿಲಿಂಗವ ಸೃಜಿಸಿದಾ ಶ್ರೀಮಧ್ಯಗೇಹಾರ್ಯಸೂನುವೆಂದೆನಿಸಿದಾ ಆ ಮಹಾರ್ಣವ ಲಂಘಿಸಿದಾ ಧೀರಾ ಭೀಮಭಯಂಕರ ದ್ರೌಪದೀಪ್ರಿಯಕರ ಈ ಮಹಿಮೆಯೊಳಾರೆಣೆಯೋ ನಿನಗೆ ನಿ ಸ್ಸೀಮನಹುದೋ ಯತಿಸಾರ್ವಭೌಮನೆ 9 ಸುರಜೇಷ್ಠಾನಸ್ತ್ರ ಮಾನಿಸಿದಾ| ಜರೆಯನ ಸೀಳಿ ನಿರಪರ ಸೆರೆಯ ಬಿಡಿಸಿದಾ ಧರೆಯೊಳ್ ಸುರಶ್ರೇಷ್ಠನೆಂದೆನಿಸಿದಾ ಭರದೊಳು ಭರತೆಗೆ ಕುಶಲವ ತಿಳಿಸಿ ಕರುಳಮತಿಯಿಂ ಸತಿಯ ಸಂತೈಸಿ ದುರುಳ ಭಾಷ್ಯಂಗಳ ತತ್ತ್ವವನಳಿಸಿದಾ ಪರಮದಯಾಂಬುನಿಧಿ ಶ್ರೀಮದಾನಂದ 10 ರಕ್ಷಕ ನೀನೆ ಸಜೀವ ಲಾಕ್ಷ್ಯಾಗಾರದ ಬಾಧೆÉಯಿಂ ರಕ್ಷಿಸಿ ಮೆರೆದಯ್ಯ ಈ ಕ್ಷಿತಿಯೊಳು ದೈತ್ಯ ಶಿಕ್ಷಕನೆನಿಸಿದೆ ತಕ್ಷಣ ಸಿಂಹಿಕೆ ಕುಕ್ಷಿಯ ಸೀಳ್ದೆ ಭಿಕ್ಷೆಯಿಂದ ನಿನ್ನವರನು ಕಾಯ್ದೆ ದಕ್ಷನಹುದೊ ನೀನಚ್ಯುತ ಪ್ರೇಕ್ಷರಿಂ ದೀಕ್ಷೆಯ ವಹಿಸಿ ಸತ್ಸಿಕ್ಷಕನಾದ್ಯೊ 11 ನೀ ರಂಜಿಸಿ ಮೆರೆದೆಯೊ ಗುರು ಮಧ್ವಾರ್ಯ ಧೀರ ಕೇಸರಿಕುವರ ಪುರುಷಾಮೃಗವ ಸಾಧಿಸಿ ತಂದ ಶೂರ ಈ ಧರಾವಲಯದಿ ತೋರಿದೆ ತತ್ವಸಾರ ತೋರಿ ಭಕ್ತಿ ಶ್ರೀರಾಮರ ಪದದಿ ಕಂ ಸಾರಿಯ ಸೇವಿಸಿ ಭಾರವನಿಳುಹಿದೆ ಸಾರಿದೆ ಹರಿಸರ್ವೋತ್ತಮ ತರತಮಭೇದವನರುಹಿದ ಪರಮದಯಾಳೊ12 ಅಂಜನೆ ಕುವರಾ ಧೀರಾ ಕುಂಜರಪುರದ ಅರಿಗಳಂಜಿಸಿದ ಶೂರ ಧರಣಿ ದುರ್ಮದಾಂಧರ ದುರ್ವಾದ ಪಂಕಜೋದ್ಭವನ ಪದವ ಪಡೆವೆ ನೀ ಅಂಜದೆ ಗದೆಯಿಂ ಕೊಂದೆ ಕುರುಪನ ಮಂಜುಳವಾಣಿಯ ಜಗಕೆ ಇತ್ತು ನೀ ರಂಜಿಸಿ ಮರೆದೆಯೊ ಗುರುಮಧ್ವಾರ್ಯ 13 ರೋಚಕ ನಾಮಕನೆನಿಸಿ ಪು ರೋಚನನ ಕಾರ್ಯವನೆಲ್ಲಾ ಕೆಡಿಸಿ ಪಾಜಕ ಕ್ಷೇತ್ರ ಪವಿತ್ರ ಮಾಡಿದೀ ಖೇಚರಮಾರ್ಗದಿ ನೆಗಹಿ ನಿ ಶಾಚರರೆÉಲ್ಲರ ಸದೆದೆ ಗದೆಯಿಂ ಸೂಚಿತ ಗ್ರಂಥ ವಿರಚಿಸಿ ಜಗಕೆ ನೀ ಗೋಚರಿಸಿದೆಯೊ ತ್ರಿಜಗಾಚಾರ್ಯ 14 ರಣದೊಳು ಘುಣಿವಿರೂಪಾನೆತ್ತಿದೆ ಬಾಣಸಿಗನೆನಿಸಿ ಮತ್ಸ್ಯದೇಶವ ಸೇರ್ದೆ ಕ್ಷೋಣಿಯೊಳು ಗುಣವಾರಿಧಿ ಎನಿಸಿದೆ ಗಣನೆ ಇಲ್ಲದೆ ಗಿರಿಯನೆಗಹಿದೆ ಹಣಿದೆ ಹಿಡಿಂಬಾಸುರನ ಸೀಳಿದೆ ಮಣಿಮಂತಾದಿ ದುರಾತ್ಮರಿಗೆ ನೀನಂತಕನೆನಿಸಿದೆ ಶಾಂತಮೂರುತಿಯೆ15 ವಿಜಯರಥಕೆ ನೀ ಕೇತುನಾಥ ವಿಜಯಸಾರಥಿಯಾ ದೂತ ವಿಜಯದಶಮಿಯೊಳ್ ಜನಿತ ಸೋಜಿಗ ತೋರಿ ಸಂಜೀವನ ತಂದೆ ಆ ಜಗಜಟ್ಟಿಗಳೆಲ್ಲರ ಸದೆದೆ ಈ ಜಗದೊಳು ಸರಿಗಾಣೆ ಜಗದೊ ಳು ಜಗದ್ಗುರುವಹುದೋ ನೀ ಗುರುಪೀಳಿಗೆಗೆ16 ಮಂಗಳಮೂರುತಿ ಮಾರುತಿ ಸೌಗಂಧಿಕ ನೆವದಿ ಮರುತನೊಳ್ ನೀ ಸೆಣೆಸಿದಿ ಶೃಂಗಾರ ಗೋಪಿನಂದನನ ಸ್ಥಾಪಿಸಿದೆ ಭಂಗಿಸಿ ವನವನು ಉಂಗುರವನು ತಂದೆ ಸಂಗರ ಹನುಮನೊಳ್ ನೀಡಿ ಮೋಹ ತೋರ್ದೆ ಅಂಗಜಪಿತನ ಇಂಗಿತವರಿತು ಭಂಗಿಸಿದೆಯೊ ದುಶ್ಯಾಸ್ತ್ರಂಗಳನು 17 ಕೇಸರಿ ಕ್ಷೇತ್ರ ಜನಿತಾಭೂಸು ರ ಸುತನ ಭೀತಿಯ ನೀ ಬಿಡಿಸಿದೆ ವಸುಮತಿಯೊಳು ಸುರಶ್ರೇಷ್ಠನೆಂದೆನಿಸಿದೆ ಕೋಸಲನಗರಾಧೀಶನ ಪ್ರೀಯ ವಾಸುದೇವಗರ್ಪಿಸಿದೆ ಅಧ್ವರ್ಯ ಶ್ರೀಶನಾಜ್ಞೆಯ ತಾ ಶಿರದಿ ಧರಿಸಿ ಪ್ರ ಕಾಶ ಮಾಡ್ದೆ ಸರ್ವಮೂಲಗ್ರಂಥವ 18 ಶ್ವಾಸನಿಯಾಮಕನೆನಿಸಿದೆ ಪ್ರ ಯಾಸವಿಲ್ಲದೆ ವನವಾಸಂಚರಿಸಿದೆ ಶ್ರೀ ವ್ಯಾಸರಿಗೆ ಅತಿಮೋದವ ಪಡಿಸಿದೆ ಶ್ರೀಶನಾಜ್ಞೆಯಲ್ಲಿ ಕೀಶನಾಗಿ ನಿಂದು ನಿಶಾಚರರೆÉಲ್ಲರ ಸದೆದೆ ಗದೆಯಿಂದ ಶ್ರೀಶನೆ ಸರ್ವೋತ್ತಮನೆಂಬ ಸತ್ಸಿದ್ಧಾಂತವ ತೋರಿದ ಸದ್ಗುಣಪೂರ್ಣ 19 ಸರ್ವಜೀವರ ತ್ರಾಣ ಪ್ರಾಣ ಗರ್ವಿಸಿದವರೊಳು ನೀ ಗರ್ವ ಹರಣ ಸರ್ವಜ್ಞಾಚಾರ್ಯ ಗುರುವರೇಣ್ಯ ಪೂರ್ವದೇವರ ಗರ್ವವನಿಳುಹಿ ಸರ್ವ ಕೌರವರ ಪಡೆಯನು ಸವರಿದೆ ಉರ್ವಿಯೊಳು ಜನಿಸಿದ ದುರ್ಮದಾಂಧರ ಗರ್ವಹರಣಮಾಡಿ ಕರುಣವ ತೋರಿದೆ 20 ಶ್ರೀರಾಮನೇಕಾಂತ ಭಕ್ತ ಶೌರಿಯ ಆಜ್ಞೆಯಿಂ ಸರ್ವಕಾರ್ಯಸಕ್ತ ಧಾರುಣಿಯೊಳು ಸಚ್ಛಾಸ್ತ್ರಕರ್ತ ಹಾರಿದೆ ಶರಧಿಯ ಅಣುಮಹದ್ರೂಪದಿ ತೋರಿದೆ ಶಕ್ತಿಯ ಗಿರಿ ತರುತೃಣವತ್ ಸಾರಿದೆ ಧರಣಿಯ ಸುರಜನುಮದಿ ನೀ ಬೀರಿದೆ ಸುಜನಕೆ ತತ್ವಾಮೃತವ 21 ಕಾಶಿ ಕಂಚುಕವ ಧರಿಸಿದೆ ಕಾಶ್ಯಪಿಯೊಳು ಕಾವಿಶಾಟಿಯ ಧರಿಸಿದೆ ಕೀಶತನದಿ ಹರಿಕಾರ್ಯವ ಸಾಧಿಸಿ ಜಗ ದೀಶಕುಲದೊಳು ಜನಿಸಿ ಮೆರೆದೆ ವೇದ ವ್ಯಾಸ ಪದಕಮಲ ಮಧುಪ ಜಗಖ್ಯಾತನಾ ದ ಶ್ರೀ ಮಧ್ವಸೂರ್ಯನೆ 22 ಸುಗ್ರೀವಗಭಯ ಕೊಡಿಸಿದಾ ಮ ಹೋಗ್ರರಾದ ದ್ವೇಷಿಗಳ ಸವರಿದಾ ಸ ಮಗ್ರ ಸಿದ್ಧಾಂತ ರಚಿಸಿದಾ ವಿಗ್ರಹದೊಳು ಧಾತಾಸ್ತ್ರವ ಮಾನಿಸಿ ಅಗ್ರಹರಿಪುಕುಲ ಕಾಲನೆಂದೆನಿಸಿ ಉಗ್ರವಾದಿಗಳ ದುರಾಗ್ರಹ ವಿಗ್ರಹ ಶೀಘ್ರದಿ ಮಾಡಿ ಅನುಗ್ರಹವಿತ್ತೇ23 ಸೋಮಕುಲದೊಳು ನೀನೆ ಅತಿ ಬಲವಂತ ಈ ಮಹಿಯೊಳು ರೌಪ್ಯಪೀಠದಿ ಜನಿತ ರಾಮಾಂಗನೆಯ ಪ್ರೇಮದ ದೂತ ಸೋಮಶೇಖರನ ಕೇದಾರಕಟ್ಟಿದ ಸ್ವಾಮಿಗೆ ಪ್ರಕೃತಿಯ ಮಾಯವ ಪೇಳ್ವ ಕೇಸರಿ ಎನಿಸಿದೆ 24 ಮಾರ್ಜಾಲರೂಪವ ಧರಿಸಿದೆ ನೀ ನರ್ಜುನಾಗ್ರಜಾದಿಗಳ ಪೊರೆದೇ ನೀ ಸರ್ಜಿಸಿ ತೋರ್ದೆ ಸತ್ಸತ್ವಗಳೆಲ್ಲ ಘರ್ಜಿಸಿ ಅರ್ಜುನನ ರಥದಲಿ ನೆಲೆಸಿದೆ ಮೂರ್ಜಗಜಟ್ಟಿಗಳೆಲ್ಲರ ಸದೆದೆ ವರ್ಜಿಸಿ ಅರಿಷಡ್ವರ್ಗಗಳೆಲ್ಲವ ದುರ್ಜಯವಾದಕೆ ಘರ್ಜನೆ ಮಾಡಿದೆ 25 ವಾಯುಕುವರ ಅಸುವರ ಕಾಯಜನಯ್ಯನ ಅತಿಪ್ರೀಯಾ ಶೂರಾ ಜೀಯಾ ನೀನಿತ್ತೆ ಸದ್ಗ್ರಂಥವಿಸ್ತಾರಾ ಕಾಯಕಭಕುತಿ ಶ್ರೀರಾಮರಿಗರ್ಪಿಸಿ ಮಾನಸದಲಿ ಯದುಪತಿಯ ಪೂಜಿಸಿ ಮಾಯಮತವ ನಿರಾಕರಿಸಿ ವಾಚದಿ ಶ್ರೀಯರಸನ ಮೆಚ್ಚಿಸಿದೆ ಯತೀಂದ್ರ 26 ವಾತಜಾತ ಹನುಮಂತ ಖ್ಯಾತ ದ್ವಾಪರದಿ ದ್ರೌಪದೀಕಾಂತ ಭೂತಳದೊಳು ಯತಿನಾಥ ಅತಿಶಾಂತ ಧತಾಜನಕ ಶ್ರೀ ವೇಂಕಟೇಶನ ಪ್ರೀತಿಪಾತ್ರ ಶ್ರೀಕೃಷ್ಣನಂಘ್ರಿಗೆ ಖ್ಯಾತನಾದೆ ಸೂತ್ರಾರ್ಥಪೇಳಿ ಕೃಪಾಪಾತ್ರನಾದೆ ಶ್ರೀ ಬಾದರಾಯಣಗೆ27
--------------
ಉರಗಾದ್ರಿವಾಸವಿಠಲದಾಸರು
ಪವಮಾನವರದ ವಿಠಲ | ಇವನ ನೀಸಲಹೋ ಪ ಭವದೊಳಗೆ ಸಂತಪ್ತ | ತವಪಾದ ಶರಣನ ಅ.ಪ. ರಾಶಿಪುಣ್ಯವು ಫಲಿಸೆ | ದಾಸದೀಕ್ಷೆಗೆ ಒಲಿದುಆಶಿಸಲು ತೈಜಸನು | ಭಾಸುರಾಂಕಿತಕೇಸೂಸಿ ತನ್ನನುಗ್ರಹದ | ಭಾಷೆ ಅಸ್ತ್ವೆಂದೆನುತಲೇಸಾಗಿ ಪೇಳಲುಪ | ದೇಶಿಸಿಹೆ ಹರಿಯೇ 1 ಕರ್ಮ | ಸಂಚಿತಾದಿಗಳು 2 ತತ್ವರೊಲಿಮೆಯ ಕೊಡಿಸು | ತತ್ವಾರ್ಥಸ್ಪುರಿಸಿವಗೆಮೃತ್ಯುವೆನೆ ಗೆಲುವಂಥ | ಪಥವನ್ನೆ ತೋರಿಕರ್ತತಾನಲ್ಲೆಂಬ | ಉತ್ಕøಷ್ಟ ಮತಿಯಿತ್ತುಎತ್ತು ಭವದಿಂ ಹರಿಯೇ | ಉತ್ತಮೋತ್ತಮನೆ 3 ಸರ್ವತ್ರ ಸರ್ವದಾ | ಶರ್ವನೊಡೆಯನೆದೇವಸರ್ವಮಂಗಳ ನಿನ್ನ | ನಾಮಸುಧೆಯನ್ನುದರ್ವಿಜೀವಿಗೆ ಉಣಿಸಿ | ಭವಕಡಲ ಪ್ಲವನೆನಿಸೊಸರ್ವಾಂತರಾತ್ಮಕನೆ | ಉದ್ದರಿಸೊ ಇವನಾ 4 ಜೀವ ಅಸ್ವಾತಂತ್ರ | ದೇವ ನಿಜಸ್ವಾತಂತ್ರಜೀವ ಜಡರುಗಳೆಲ್ಲ | ದೇವರಾಧಿನಾಈ ವಿಧದ ಸುಜ್ಞಾನ | ಆವಾಗಲೂ ಕೊಟ್ಟುದೇವಗುರು ಗೋವಿಂದ | ವಿಠಲ ಪೊರೆ ಇವನಾ 5
--------------
ಗುರುಗೋವಿಂದವಿಠಲರು
ಪವಮಾನವಿಠಲ | ಕಾಪಾಡೊ ಇವನಾ ಪ ಭುವಿ ಭವ್ಯ ಮರುತಮತ | ದೀಕ್ಷೆಯುಳ್ಳವನಾ ಅ.ಪ. ಭಾವಿಮಾರುತರ ದಿವ್ಯ | ಪಾದಗಳನಾಶ್ರಯಿಸಿದೇವ ಗುಹ್ಯವು ಎಂಬ | ಆಖ್ಯಾನ ಪಠಿಸೀಭಾವಭಕ್ತಿಯಲಿಂದ | ಪೂರಿತನು ತಾನಾಗಿಧಾವಿಸಿ ಬಂದಿಹನೊ | ಎನ್ನ ಬಳಿಗಾಗಿ1 ಗುರುವನುಗ್ರಹ ಪಡೆದು | ಗುರುದತ್ತ ಅಂಕಿತವನೆರವಿನಾ ಸಾಧನವ | ವಿರಚಿಸಲು ಮಾರ್ಗಅರಿಯದಲೆ ಪ್ರಾರ್ಥಿಸುವ | ಕರುಣಪಯೋನಿಧಿಯೇಪೊರೆಯ ಬೇಕಿವನ ಪರಿಯ | ಮರುತಾಂತರಾತ್ಮ 2 ತರತಮಜ್ಞಾನವನು | ಹರಿಗುರು ಸದ್ಭಕ್ತಿಪರಿಪರಿಯಲಿಂ ವೃದ್ಧಿ | ಗೈಸಿವಗೆ ಹರಿಯೇಗುರು ಕರುಣ ಕವಚದಿಂ | ಹರಿಯ ಸರ್ವೊತ್ತಮತೆಅರಿವಾಗಲಿವಗೆಂದು | ಪ್ರಾರ್ಥಿಸುವೆ ಹರಿಯೆ 3 ಮೂರ್ತಿ | ಕೃತಿರಮಣ ದೇವ 4 ಮಧ್ವ ರಮಣನೆ ದೇವ | ಹೃದ್ಯ ಹರಿ ನಿನಕಾಂಬಹೃದ್ಯ ಸಾಧನ ಗೈಸಿ | ಉದ್ದರಿಸೊ ಇದನಾಶುದ್ಧ ಮೂರುತಿ ಗುರು | ಗೋವಿಂದ ವಿಠಲನೆಬುದ್ಧಿಯಲಿ ನೀನಿಂತು | ಶುದ್ಧ ಮತಿ ಈಯೋ 5
--------------
ಗುರುಗೋವಿಂದವಿಠಲರು
ಪಾಂಡು ರಂಗ ವಿಠಲ | ಪೊರೆಯ ಬೇಕಿವಳ ಪ ಕುಂಡಲಿಯ ಶಯ್ಯ ಬ್ರ | ಹ್ಮಾಂಡದೊಡಿಯಾ ಅ.ಪ. ಹಸುಳೆ ತನ ಸ್ವಾಪದಲಿ | ಎಸೆವ ನಂಜುಡೇಶದರ್ಶನಾಕಾಂಕ್ಷಿಸುತ | ನುಸುಳಿ ಗುಡಿ ಪೊಗಲೂಅಸಮ ಗುರು ಸುಧೀಂದ್ರ | ಶಿಷ್ಯರನು ತಾ ತೋರಿಎಸೆವ ಸದ್ಗತಿಗೆ ಗುರು | ದರ್ಶನವೆ ಪಥವೆಂದೇ 1 ಲೀಲೆಯೊಳ್ ತೈಜಸನು | ಮಾಲೆಧರ ದಂಪತಿಯಶೀಲ ರೂಪವ ತಾಳಿ | ಬಾಲಕಿಯ ಬಯ್ದೂ |ಏಳಲನ ಮಾಡದಲೆ | ಶೀಲ ಗುರು ಬಳಿ ಪೋಗಿಬಾಲಕಿಯು ಪರಮಾನ್ನ | ಮೆಲುವಂತೆ ಮಾಡ್ಡಾ 2 ಗುರು ಹಿರಿಯರಾ ಸೇವೆ | ಹರಿಯಲ್ಲಿ ಸದ್ಭಕುತಿವರಜ್ಞಾನ ಪಾಲಿಸುತ | ಮೆರೆಸೊ ಈ ಶಿಶುವವರ ಪ್ರದಯಕನಾಗಿ | ಸರುವ ಸದ್ಧಭಿಲಾಷೆಗರೆನು ಹರ್ಷವನೀಯೋ | ಮರುತಾಂತರಾತ್ಮಾ 3 ಕಲಿಹೆಚ್ಚದಾ ಯುಗವು | ಸತಿಮಂತ್ರ ತಂತ್ರಗಳುಫಲಿಸಲಾರವು ಹರಿಯೆ | ಜಲಜನಾಭಾಚೆಲುವ ತವನಾಮ ಸ್ಮøತಿ | ಘಳಿಗೆ ಬಿಡದಲೆ ಕೊಟ್ಟುಒಲಿಯೊ ಕಾರುಣ್ಯನಿಧಿ | ಬಾಲ ಗೋಪಾಲ4 ಪಾವನದ ಅಂಕಿತವ | ಓದಿ ಸೂಚಿಸಿದಂತೆತಾವಕಳಿಗಿತ್ತಿಹೆನು | ಶ್ರೀ ವರನೆ ಹರಿಯೇ |ದೇವ ದೇವೇಶಗುರು | ಗೋವಿಂದ ವಿಠ್ಠಲನೆನೀ ವೊಲಿದು ದಾಸತ್ವ | ಭಾವ ಸಿದ್ಧಿಪುದೋ 5
--------------
ಗುರುಗೋವಿಂದವಿಠಲರು
ಪಾಥೇಯವ ಕಟ್ಟಿರೊ ವೈಕುಂಠಕೆ ಪಯಣ ಸ-ಮ್ಮತವಾದರೆ ಪ. ಮಾತಾಪಿತರುಯೆಂಬೊ ಭಕ್ತಿಚಿತ್ರಾನ್ನವಪಾರ್ಥಸೂತನ ಪಾದಪದ್ಮಪತ್ರವ ಹಾಸಿ ಅ.ಪ. ಹರಿಭಕ್ತಿಹರಿಗೋಲಿಂದ ಮೆಲ್ಲನೆ ನೀವುವಿರಜಾನದಿಯ ದಾಟಿರೊಕರಜಾಗ್ರಗಳಿಂದ ಹಿರಣ್ಯಕನನು ಸೀಳಿದಪರವಾಸುದೇವನ ದರುಶನವಾಹೋದಯ್ಯ 1 ಪ್ರಳಯದ್ಹಾವಳಿಯಿಲ್ಲವೊ ಪೇಳುವುದೇನುಚಳಿ ಮಳೆ ಬಿಸಿಲಿಲ್ಲವೊಬೆಳಸು ಬಿತ್ತಿಲ್ಲದ ಬೇಕಾದ ಸಂಪತ್ತುನಳಿನನಾಭನ ಪುರದೊಳಗೆ ನೆಲಸಿಹುದಯ್ಯ 2 ಶುದ್ಧ ಸಾತ್ವಿಕ ಪುರವು ತಾಮಸರಿಗೆ[ಪೊದ್ದಲಳವಲ್ಲವೊ]ಅಧ್ಯಾತ್ಮ ಅರ್ಜುನಗೆ ನಿರ್ಧಾರ ಪೇಳಿದತದ್ಧಾಮ ಪರಮಂ ಮಮವೆಂಬೊ ಪುರವೊ 3 ಕೂಗಳತೆಗೆ ಕೊಂಚವೊ ಹರಿಯ ಪುರನಾಗರಾಜನ ಸಾಕ್ಷಿಯೊನಾಗಶಯನನಲ್ಲಿ ನಮ್ಮ ಕಂಡರೆಹೋಗಬೇಡಿರೆಂದು ಹುಟ್ಟ ತಡೆವನೊ 4 ಬರವೆಂಬ ಮಾತಿಲ್ಲವೊ ಒಂದುಕಾಸುತೆರಿಗೆಯ ಕೊಡಬ್ಯಾಡಿರೊಪರಮಕರುಣಿ ಹಯವದನ ವೈಕುಂಠದಿಸರುವಮಾನ್ಯವನಿತ್ತು ಶರಣರ ಪೊರೆವನು 5
--------------
ವಾದಿರಾಜ
ಪಾದ ನಾ ನಂಬಿದ ಭಕುತರ ಇಂಬಾಗಿ ಪೊರೆದೆನೆಂತೆಂಬ ವಾರುತಿ ಕೇಳಿ ಪ ದೂರವಾದರೆ ತಾನು ನಾರಿಯ ಮೊರೆ ಕೇಳಿ ಚೀರಿ ಕರೆದಳೆಂದು ಶೀರಿಗಳನೆ ಇತ್ತು ಬೀರಿದನರಿಯಾ ಬಿಂಕವ ಬಿಟ್ಟು ಸೇರಿಕೊ ಹರಿಯ ದಾರಿ ಕಾಣದೆ ವನ ಸೇರಿದ ಕುವರನ್ನ ಸಾರೆಗರೆದು ಸೌಖ್ಯ ಪೂರೈಸಿದನೆಂದು 1 ಕಾಡಾನೆ ವ್ರಜದೊಳು ಕೂಡಿದ್ದ ಗಜರಾಜ ಗಾಡಾಹ ತಾಪದಿಂದ ಬಾಡಿ ನೀರಡಿಸಲು ಗೂಢ ಸರೋವರ ನೋಡಿ ನೀರನೆ ಪೊಕ್ಕು ಆಡಾಲು ಮದದಿ ನಕ್ರನು ಬಂದು ಪೀಡಿಸೆ ಭರದಿ ಮೂಢ ನಾನೆಲೊ ಕೃಷ್ಣ ಮಾಡೊ ರಕ್ಷಣೆಯನ್ನು ಪರಿ ನೋಡಿ 2 ಕಾಸು ಬಾಳದ ಸ್ತ್ರೀಯಳಿಗೆ ಆತನೆ ವಶವಾಗಿ ಹೇಸಿಕಿಲ್ಲದೆ ಅಲ್ಲಿ ತಾ ಸೂನುಗಳ ಪಡಿಯೆ ಸಹ ವಾಸರ ಕಳಿಯೆ ಕಾಲನು ಘೋರ ಪಾಶದಿ ಶಳಿಯೆ ಆ ಸಮಯದಿ ಕೊನೆ ಕೂಸನ್ನೆ ಕೂಗಲುವಾಸುದೇವವಿಠಲ ತಾ ಸಲಹಿದನೆಂದು 3
--------------
ವ್ಯಾಸತತ್ವಜ್ಞದಾಸರು
ಪಾದ ನೋಡಿದೆ ಪ ಚೆನ್ನದೇವಿಯ ಪಾದಕೆರಗಿದೆ ಮನ್ನಿಸೆಂತೆಂದವಳ ಬೇಡಿದೆ ಅ.ಪ. ಚರಣ ಯುಗಳಲಿ ಮೆರೆವ ನೂಪುರಧರಿಸಿ ಪೀಠದೊಳಿಂದಿರೆಜರದ ಶೀರೆಯನುಟ್ಟು ನಡುವೊಳುಹಿರಿದು ಒಡ್ಯಾಣದೊಳು ನಿಂದಿರೆ 1 ಕುಂಡಲ ಮೂಗು ಮುಕುರವುಪರಮ ತೇಜದ ಸೊಬಗ ತಂದಿರೆ 2 ಹೊಳೆವ ಕಂಗಳು ಹಣೆಯ ಕುಂಕುಮಥಳಿಸೆ ಸರಸಿಜ ಮಂದಿರೆಬಿಳಿಯ ಕೊಡೆಯನು ಹಿಡಿವ ತೆರದಲಿಎಳೆಯ ನಾಗವು ಹಿಂದಿರೆ 3 ಬೆರಳೊಳುಂಗುರ ಕುರುಳು ಸುಂದರಹೆರಳು ಸಿಂಗರದಿಂದಿರೆತಿರುಳು ಗಂಧದ ಸರಳ ಮೂರ್ತಿಯತರಳೆ ಎನ್ನಾಯ ಮುಂದಿರೆ 4 ಧೀರ ಭಕುತರ ಪೊರೆವುದಕೆ ಕರವೀರ ಪುರದೊಳು ಬಂದಿರೆಧಾರುಣೀಯೊಳು ಮೆರೆವ ಗದುಗಿನವೀರನಾರಾಯಣನ ಚಂದಿರೆ5
--------------
ವೀರನಾರಾಯಣ