ಒಟ್ಟು 1330 ಕಡೆಗಳಲ್ಲಿ , 105 ದಾಸರು , 1177 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶಾಮ ಸುಂದರ ಪ್ರೇಮವÀ ತೋರೆಲೊ ಪ ತಾಮಸವಿಲ್ಲದೆ ಕಾಮಿತಗಳ ನೀಡೊ ಅ.ಪ ಹಿಂದೆ ಅಜಮಿಳ ಒಂದನರಿಯದೆ ಕಂದನನ್ನು ನಾರಾ ಎಂದು ಕರೆಯಲು ಬಂಧುವೆಂದರಿತು ಮಂದಹಾಸದಿಂದ ಬಂದು ರಕ್ಷಿಸಿದೆ ಎಂದು ಕೇಳಿರುವೆ 1 ಕ್ರೂರ ಶಾಸನ ನಾರಿ ದ್ರೌಪದಿಯ ಸೀರೆ ಸೆಳೆದು ಮಾನ ಸೂರೆಗೊಳುತಿರೆ ಸಾರಿ ಕೂಗಲು ಭೂರಿದಯವನು ತೋರಿರುವೆ ಎಂದು ಕೋರಿರುವೆ ನಿನ್ನ 2 ಮುನ್ನ ಮಾಡಿದ ಎನ್ನ ಪಾಪಗಳಿಗೆ ಖಿನ್ನನಾಗಿರುವೆ ಎನ್ನ ಮನದಲಿ ಮನ್ನಿಸುತ್ತ ಸುಪ್ರಸನ್ನನಾಗಿ ಸದಾ ಎನ್ನ ಹೃದಯ ಶುದ್ಧಿಯನ್ನೆ ಮಾಡಿ ಪೊರೆಯೊ 3
--------------
ವಿದ್ಯಾಪ್ರಸನ್ನತೀರ್ಥರು
ಶಾರದೆ ನಿನ್ನ ಪಾದವ ಆರಾಧಿಸುವೆವುವಾರಿಜ ಭವಕ್ಕೆ ಸೇರಿಸು ಹರಸು ಪ. ನಿತ್ಯ ಭಜಿಸುವೆವುಸಚ್ಚಿದಾನಂದನ ಚಿತ್ತದಿ ನಿಲ್ಲಿಸ1 ರಂಭೆ ನಮ್ಮಯ ಹೃದಯ ಅಂಬರದೊಳು ನಿಂತುಅಂಬುಜನಾಭನ ತುಂಬಿಸು ಮನದಿ2 ಅರಿಷಿಣ ಕುಂಕುಮ ಬೆರೆಸಿದ ಪರಿಮಳಸರಸದಿ ಕೈ ಕೊಂಡು ಅರಸಿಯರ ಗೆಲಿಸ 3 ಅತ್ತಿ ಹೂವಿನಸೀರೆ ಮುತ್ತಿನಾಭರಣವಅರ್ಥಿಲೆ ಕೈ ಕೊಂಡು ಮಿತ್ರೆಯರ ಗೆಲಿಸ4 ಪತಿ ಸೌಭಾಗ್ಯವ ರಚಿಸಲುಶೀಘ್ರದಿ ತೋರಿಸೆ ಕುಗ್ಗದೆ ನಮಗೆ 5 ಪತಿ ನಿತ್ಯ ರಾಮೇಶನ ತತ್ವವ ರಚಿಸುವೆ ಸತ್ಯವ ನುಡಿಸೆ ಶಾರದಾದೇವಿ6
--------------
ಗಲಗಲಿಅವ್ವನವರು
ಶಾರದೇ ಮಜ್ಜನನಿಯೆ - ಶಾರದೇ ಪ ಶಾರದೆ ಶರಣೆಂಬೆ ನಿನ್ನ | ಚರಣನೀರಜ ದ್ವಂದ್ವಕೆ ಯನ್ನ | ಆಹಕಾರುಣ್ಯದಲಿ ಹೃದಯ | ವಾರಿಜದೊಳು ಮೆರೆವಮಾರಮಣನ ದಿವ್ಯ | ಮೂರುತಿ ತೋರಿಸು ಅ.ಪ. ವಾಣಿ ನಿಲ್ಲ್ವುದು ಎನ್ನ ವದನಾ | ದಲ್ಲಿನೀ ನುಡಿಸೇ ಹರಿ ಗಾನಾ | ಕರವೀಣೆ ನುಡಿಪಂತೆ ಯೆನ್ನಾ | ದೇಹವೀಣೆ ನುಡಿಸೇ ನೀ ಮುನ್ನಾ | ಅಹವೇಣಿ ಮಾಧವನಾದ | ಶ್ರೀನಿವಾಸನ ಕಾಂಬಜ್ಞಾನಾನು ಸಂಧಾನ | ಮಾಣದೆ ಎನಗೀಯೇ 1 ಅಜ್ಞರೊಳಾಗ್ರಾಣಿ ನಾನು | ಇಂಗಿತಜ್ಞಳೆ ನಾ ಪೇಳ್ವುದೇನೂ | ಆಭಿಜ್ಞರೊಳಿರಿಸುವುದಿನ್ನೂ | ಸರ್‍ವಜ್ಞರ ಮತ ತಿಳಿಸಿನ್ನೂ | ಆಹವಿಜ್ಞಾನ ಸುಸಖ ಬ್ರಹ್ಮ | ಯಜ್ಞಾನೆ ಜಗಕೆಂಬಸುಜ್ಞಾನ ಸುಖವಿತ್ತು | ಪ್ರಾಜ್ಞನ ಕಾಣಿಸೇ 2 ವ್ರತನೇಮ ಉಪವಾಸ ಒಂದೂ | ಮಾಡಿಕೃತಕೃತ್ಯನಲ್ಲಮ್ಮ ಬಂಧೂ | ಕೃತಿಪತಿಯೆ ಎನಗೆ ಗತಿ ಎಂದೂ | ದ್ವಂದ್ವಕೃತಿಗಳ ನರ್ಪಿಪ ಸಂದೂ | ಆಹಹಿತದಿ ತಿಳಿಸಿ ಗುರು | ಗೋವಿಂದ ವಿಠಲನಸುತನಾಗಿ ಮೆರೆವಂಥ | ಚತುರಾಸ್ಯ ಪ್ರಿಯರಾಣಿ 3
--------------
ಗುರುಗೋವಿಂದವಿಠಲರು
ಶಿರಿ ಮುದ್ದು ಕೃಷ್ಣವಿಠಲ | ಪೊರೆಯ ಬೇಕಿವಳಾ ಪ ಪಾದ | ಸಾರಿ ಭಜಿಸುವಳಾ ಅ.ಪ. ಪರಿಪರಿಯ ವಿಧದಿಂದ | ತೈಜಸನೆ ನೀನಾಗಿವರಸೂ ರೂಪಗಳಿಂದ | ವಸುದೇವ ಸುತನೇತರಳೆಗತಿ ಆಶ್ಚರ್ಯ | ತೋರಿ ಅಡಗಿದೆ ದೇವಶಿರಿಮುದ್ದು ಕೃಷ್ಣನೇ | ಮರುತಂತರಾತ್ಮ 1 ಸುಪ್ತಿಯಲಿ ಗುರುಪಾದ | ಭಕ್ತಿಯಲಿ ನಮಿಸುತ್ತತೀರ್ಥವನೆ ತಕ್ಕೊಂಡು | ಧನ್ಯನಾನೆಂದುಅತ್ಯಂತ ಹರ್ಷದಲಿ | ಸ್ತೋತ್ರವನೆ ಮಾಡುತ್ತಸಕ್ತಿಯನೆ ತೋರಿಹಳು | ದಾಸಪಂಥದಲೀ 2 ಭುವನ ಪಾವನವೆನಿಪ | ಮಧ್ವಮತದಾಸಕ್ತಿಶ್ರವಣಕಾನಂದವೆನೆ | ಕವನ ಸಂಸ್ಪೂರ್ತೀಜೀವೊತ್ತಮರ ಭಕುತಿ | ವಿಷಯದಲಿ ವಿರಕ್ತಿಹವಣಿಸೋ ಶ್ರೀಹರಿಯೆ | ಭವಕರಿಗೆ ಹರಿಯ 3 ಪತಿಸುತರು ಹಿತರಲ್ಲಿ | ಮತಿಮತಾಂವರರಲ್ಲಿರತನು ಶ್ರೀಹರಿಯೆಂಬ | ಸುಜ್ಞಾನವನ್ನುಕೃತಿಪತಿಯ ಕರುಣಿಸುತ | ಸಾಧನವ ಗೈಸುವುದುಚತುರಾಸ್ಯಪಿತ ಹರಿಯೆ | ದುರಿತವನ ದಾವಾ 4 ಮಾನನಿಧಿ ಶ್ರೀಹರಿಯೆ | ಧ್ಯಾನಾನುಕೂಲಿಸುತಸಾನುರಾಗದಿ ನಿನ್ನ | ರೂಪಹೃದ್ಗುಹದೀಕಾಣಿಪಂತಸಗೊ ಗುರು | ಗೋವಿಂದ ವಿಠಲನೆಆವಾದದನ್ಯವನು | ಬೇಡ ಬಂದಿಲ್ಲ5
--------------
ಗುರುಗೋವಿಂದವಿಠಲರು
ಶಿವ ಶಿವ ನಿಮ್ಮ ನಾಮ ಅಡಿಗಡಿಗೆ ಬೇಕು ಪರಿಯಂತ ತಾನೊಂದೆ ಸಾಕು ಪ ಜಗವೆಲ್ಲ ಶಿವ ಮಯವು ಎಂದು ಕಾಣಲು ಬೇಕು ನಿಗಮ ದೂರನ ಹೃದಯ ದೊಳಗರಸಬೇಕು ಬಗೆಯರಿತು ಮಾನಸದಿ ಶಿವನ ಪೂಜಿಸಬೇಕು ನಿಗಮಾಗಮಸ್ತುತನ ಅಡಿಗೆರಗಬೇಕು 1 ಅನವರತ ಶಿವಮಂತ್ರವನು ಜಪಿಸುತಿರಬೇಕು ತನುಮನವ ವಸ್ತುವಿನೊಳಗಿರಿಸಬೇಕು ಘನ ಪರಂಜ್ಯೋತಿ ಸ್ವರೂಪವ ನರಿಯ ಬೇಕು ತನುಮಯ ಚಿದಂಬರನ ಕೂಡಬೇಕು 2 ನಾನು ನಾನೆಂದೆಂಬ ಹಮ್ಮ ಬಿಡಬೇಕು ಜ್ಞಾನಾಗ್ನಿಯಿಂದ ಜ್ಞಾನವನು ಸುಡುಲುಬೇಕು ಪವಮಾನ ಸುತ ಕೋಣೆ ಲಕ್ಷ್ಮೀಪತಿಯ ಕಡುಮಿತ್ರನಾದ ವನ ಪಾದವನು ಕೊಡಬೇಕು 3
--------------
ಕವಿ ಪರಮದೇವದಾಸರು
ಶಿವಶಿವ ಜಯಜಯ ಶಿವ ಸರ್ವೋತ್ತಮಕಾಯ ಶಿವ ದೂರಿಕೃತಮಾಯ ಶಿವಶರಣಾಗತಪ್ರಿಯ ಪ ಸನಕಾದಿ ಮುನಿಹೃದಯ ವನಜಸ್ಥಾಪಿತಸೂರ್ಯ ದನುಜ ವಿಮರ್ದನ ವೀರ್ಯ ಸುಗುಣನಿರಾಕೃತ ಕೋಪ 1 ಚಾಪ ನಿಗಮಾಗೋಚರ ರೂಪ ಜಗದಂತಃಸ್ಥಿತದೀಪ ಸುಗುಣನಿರಾಕೃತ ಕೋಪ 2 ಪರಮಪಾವನ ಕಾಮಹರ ಕಕುದ್ಗಿರಿಧಾಮವರ ಗಂಗಾಧರನಾಮ ತಿರುಪತೀಶ್ವರ ಪ್ರೇಮ 3
--------------
ತಿಮ್ಮಪ್ಪದಾಸರು
ಶೇಷಶಯನ ನಿನ್ನ ಪರಮ ಭಾಗವತರ ಸಹವಾಸದೊಳಿರಿಸು ಕಂಡ್ಯ ಎನ್ನನು ಪ ಬೇಸರಿಸದೆ ನಿನ್ನ ಹೃದಯಾಬ್ಜದೊಳಗಿರುವದಾಸರೊಳಿರಿಸು ಕಂಡ್ಯ ಎನ್ನನುಅ ತಂದೆಯೊಡಲನು ಸೀಳಿಸಿದವರೊಳು, ದೇ-ವೇಂದ್ರನ ತಲೆಗೆ ತಂದವರೊಳು, ದು-ರ್ಗಂಧ ಪೆಣ್ಣಿಗೆ ಚಂದನದ ಕಂಪನಿತ್ತಂಥಬಾಂಧವರೊಳಗಿರಿಸು ಕಂಡ್ಯ ಎನ್ನನು 1 ತೋಯಜವೆಂಬ ಪುಷ್ಪದ ಪೆಸರವರೊಳುತಾಯ ಸೊಸೆಗೆ ಮಕ್ಕಳಿತ್ತವರೊಳುಆಯದಿ ದ್ವಾದಶಿ ವ್ರತವ ಸಾಧಿಸಿದಂಥರಾಯರೊಳಿರಿಸು ಕಂಡ್ಯ ಎನ್ನನು2 ಗಿಳಿನಾಯಿ ಪೆಸರಿನವರೊಳು, ಮುಗಿಲಹೊಳೆಯ ಹೊಟ್ಟೆಲಿ ಹುಟ್ಟಿದವರೊಳುಕೆಳದಿಯ ಜರಿದು ಶ್ರೀಹರಿದಿನ ಗೆದ್ದಂಥಹಳಬರೊಳಿರಿಸು ಕಂಡ್ಯ ಎನ್ನನು3 ಅನುದಿನ ಸ್ಥಿರರಾಜ್ಯವಾಳಿದಕಿಂಕರರೊಳಿರಿಸು ಕಂಡ್ಯ ಎನ್ನನು 4 ಕಾಟಿಗೆ ಕಾಸಿಲ್ಲದವರು ರಾಯರ ಪಂಕ್ತಿಊಟವ ಬಯಸಿದಂತೆ ನಾ ಬೇಡಿದೆನಾಟಕಧರ ನೆಲೆಯಾದಿಕೇಶವ, ನಿ-ನ್ನಾಟದೊಳಿರಿಸು ಕಂಡ್ಯ ಎನ್ನನು 5
--------------
ಕನಕದಾಸ
ಶೋಭಾನವೆನ್ನಿರೆ ಶುಭಕರ ಸಾವಿತ್ರೇರು | ಪ್ರಭುಗುರು ಆತ್ಮಾ ಶ್ರೀರಾಮಗ ಪ ರಾಮರಾವಣ ಕ್ರೋಧನಿಸ್ಸೀಮ ಕುಂಭಕರ್ಣಾದಿ | ತಾಮಸದವರಾ ಮದಮುರಿದು | ತಾಮಸದವರ ಮದಮುರಿದು ಹೃದಯಕ | ಪ್ರೇಮ ಜಯೋತ್ಸವದಿಂದೈ ತಂದಾ 1 ಒಡನೆ ಶಾಂತಿ ಸೀತೆಯಾ ಬಿಡಿಸಿ ತಂದನು ಸೆರೆಯಾ | ದೃಢವಿಭೀಷಣನ ಸ್ಥಾಪಿಸಿದನಾ | ದೃಢವಿಭೀಷಣನ ಸ್ಥಾಪಿಸಿ ಆಶಾಪಾಶ | ಕಡಲ ಮಧ್ಯ ಪೂರದೊಳು ಈಗ 2 ವಿವೇಕ ಹರಿವಾನದಿ ಭಾವದಾರತಿಯೋಳು | ತೀವಿದ ಸಮ್ಯಜ್ಞಾನ ಜ್ಯೋತಿ | ತೀವಿದ ಸಮ್ಯಜ್ಞಾನಜ್ಯೋತಿಯಿಂದ | ದೇವದೇವೇಶಗ ತಿಂದೀಗ 3 ಅರಿಗಳ ಶಿಕ್ಷಿಸು ಶರಣರ ರಕ್ಷಿಸು | ಧರೆಯೊಳುಯೆಂದು ಹರಸುತ | ಧರೆಯೊಳು ಎಂದು ಹರಸುತ ಮುತ್ತಿನ | ಪರಮಶಾಶಯ ನೊಸಲೊಳಿಟ್ಟು 4 ಇಹಪರಸುಖದಾತಾ ಬಾಹ್ಯಾಂತ್ರ ಸದೋದಿತಾ ಮಹಿಪತಿಸುತ ಪ್ರಭು ರಘುನಾಥ | ಮಹಿಪತಿಸುತ ಪ್ರಭು ರಘುನಾಥ ನೆನೆವರ ಸಹಕಾರಿ ನಮ್ಮ ಸದೋದಿತ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶೌರಿ ಪ ಸರ್ವಮಂಗಳಮಯನೆ ವಿಧಿತಾತ ಮುದವೀತೊ ಅ.ಪ. ಉದ್ಧವನ ಗುರುವರ್ಯ ನಿರ್ದೋಷ ಗುಣವನಧಿ ನಿದ್ದೆ ಮಾಡುವಗೊಲಿದು ಮುಕ್ತಿ ಇತ್ತೆ ಹದ್ದುಮೀರಿ ಭವದಿ ಬಿದ್ದು ಮೊರೆ ಇಡುತಿಹೆನೊ ಹೃದ್ಧಾಮದಲಿ ನಿನ್ನ ದರುಶನವ ನೀಡೆಯ್ಯ 1 ಮನದಲ್ಲಿ ಮಹಪೂಜೆಕೊಳ್ಳಯ್ಯ ಎನ್ನಿಂದ ಪ್ರಣೀತಪಾಲಕ ಕೃಷ್ಣಪೂರ್ಣ ಪುರುಷ ತೃಣಮೊದಲು ಬ್ರಹ್ಮಾಂಡ ಸರ್ವರಲಿ ಸ್ವಾತಂತ್ರ್ಯ ಅನಿಲಾತ್ಮ ಆನಂದ ಖಣಿ ಕರುಣ ಮಾಡಯ್ಯ 2 ಕೆಸರು ಕಲ್ಕಿದಜ್ಞಾನಕಳವಡುವುದೇ ನಿನ್ನ ಅಸಮ ಮಂಗಳ ಸುಗುಣ ಶ್ರುತಿ ವಿನುತನೆ ದಶಮತಿಯ ಮನದೈವ ನೀ ಕೂತು ಮನದಲ್ಲಿ ವಿಶದ ತಿಳಿಮತಿಯಿತ್ತು ವೈಭವವ ತೋರೆನಗೆ 3 ಜೀವಜಡರಲಿ ಪೊಕ್ಕಾಡುವೆ ಬಹುಲೀಲೆ ಭಾವಸೂತ್ರದಿ ನಮ್ಮ ಕಟ್ಟಿ ಕುಣಿಸಿ ಈ ವಿಧವ ಬಲ್ಲವರ ಮೇಲಾಗಿ ಪಾಲಿಸುವಿ ತಾವೀಶರೆಂಬುವರು ಮುಳುಗುವರು ದುಃಖದಲಿ 4 ದುಷ್ಟಜನ ಸಹವಾಸ ಅಷ್ಟತತ್ವಗಳಲ್ಲಿ ವೃಷ್ಣೀಶ ಬಿಡಿಸಯ್ಯ ಬಂಧ ಕಡಿದು ಇಷ್ಟಾನಿಷ್ಟ ಜೀವರಲಿ ನಿಂತು ನಟಿಸುವ ಗುಟ್ಟುತೋರಿ ಜಯೇಶವಿಠಲನೆ ಕೃಪೆಮಾಡು 5
--------------
ಜಯೇಶವಿಠಲ
ಶೌರಿ ಸುರಸೇವ್ಯ ಸುಜನಾತ್ಮ ಸತ್ಯ ಆನಂದ ತವಸೇವೆ ನೀಡೆನಗೆ ಪ ಕೊಡು ಎನ್ನ ಕರ್ಣಕ್ಕೆ ದೃಢಮಾಡು ವಚಶ್ರವಣ ಬಿಡದೆನ್ನ ನಯನಕ್ಕೆ ಇಡು ನಿನ್ನ ದರ್ಶನವ ನುಡಿಸೆನ್ನ ವದನದಿಂ ಕಡು ಸತ್ಯವಚನವನು ಎಡಬಿಡದೆ ಜಿಹ್ವೆಕ್ಕೆ ನೀಡು ತವಧ್ಯಾನ 1 ಒದಗಿಸೈ ಕೈಗೆ ತವಪಾದಪದುಮ ಸೇವಾ ಹೃದಯಕ್ಕೆ ಕರುಣಿಸು ಸದಮಲ ಸುಶಾಂತಿ ಸದಯಾತ್ರ ನೀಡೆನ್ನ ಪಾದಕ್ಕೆ ಪುಣ್ಯಸ್ಥಳ ವಿಧವಿಧದಿ ಬೇಡ್ವೆ ನೀನು ದಯನಾಗೆನ್ನೊಳಗೆ 2 ಚಿತ್ತಕ್ಕೆ ಸ್ಥಿರನೀಡು ಸ್ವಸ್ಥತೆ ಕೊಡು ಮನಕೆ ಸತ್ಯರಿಗೆ ಮಣಿಸೆನ್ನ ಮಸ್ತಕವ ಸತತ ನಿತ್ಯ ಪರಿಪೂರ್ಣ ಮಮ ಕರ್ತ ಶ್ರೀರಾಮ ನಿನ್ನ ಭಕ್ತನೆಂದೆನಿಸೆನ್ನ ಮುಕ್ತಿ ಪಥಕ್ಹಚ್ಚು 3
--------------
ರಾಮದಾಸರು
ಶ್ರೀ ಅಕ್ಷೋಭ್ಯ ತೀರ್ಥರ ಚರಿತ್ರೆ ಅಕ್ಷೋಭ್ಯ ತೀರ್ಥಗುರು ಸಾರ್ವಭೌಮರು ಎಮ್ಮ ರಕ್ಷಿಪ ಕೃಪಾನಿಧಿಗೆ ಶರಣು ಶರಣೆಂಬೆ ಪಕ್ಷೀಶ ವಾಹನ್ನ ಲಕ್ಷ್ಮೀಶ ಕಮಲಾಕ್ಷ ವಿಷ್ಣು ಆತ್ಮಗೆ ಪ್ರಿಯ ಸತ್ತತ್ವವಾದಿ ಪ ಅಖಿಳಗುಣ ಆಧಾರ ನಿರ್ದೋಷ ಶ್ರೀರಮಣ ಜಗದಾದಿ ಮೂಲಗುರು ಅಗುರು ಶ್ರೀ ಹಂಸ ವಾಗೀಶ ಸನಕಾದಿ ದೂರ್ವಾಸಾದಿಗಳ ಪೀಳಿಗೆ ಗುರುಗಳಿಗೆ ಶರಣು ಶರಣೆಂಬೆ 1 ಅಚ್ಯುತ ಪ್ರೇಕ್ಷಾಖ್ಯ ಪುರುಷೋತ್ತಮತೀರ್ಥ ಅಚ್ಯುತ ಪ್ರೇಕ್ಷರ ಶಿಷ್ಯರೆಂದೆನಿಪ ಅಚ್ಯುತನ ಮುಖ್ಯಾಧಿಷ್ಠಾನ ಶ್ರೀಮಧ್ವ ಖಚರೇಂದ್ರ ಫಣಿಪಮೃಡ ಅಮರೇಂದ್ರವಂದ್ಯ 2 ಕರ ಅಬ್ಜಜರು ಪದ್ಮನಾಭನೃಹರಿ ಮಾಧವಾಕ್ಷೋಭ್ಯ ಈ ಮಹಾಗುರುಗಳು ಸರ್ವರಿಗು ಆನಮಿಪೆ ಸುಮನಸ ಶ್ರೇಷ್ಠರು ಮಹಿಯಲಿ ಪುಟ್ಟಿಹರು 3 ಸಾಧು ವೈದಿಕ ವೇದಾಂತ ಸತ್ತತ್ವ ಮತ ಮಧ್ವ ಮತವೇ ಅನ್ಯ ಯಾವುವೂ ಅಲ್ಲ ಎಂದು ನಿಶ್ಚೈಸಿ ಶೋಭನಭಟ್ಟಸ್ವಾಮಿ ಶಾಸ್ತ್ರಿ ಮೊದಲಾದವರು ಮಧ್ವಗೆರಗಿದರು 4 ಸೂರಿವರ ಶೋಭನ ಭಟ್ಟಾದಿಗಳಂತೆ ಸಾರಾಸಾರ ವಿವೇಕಿ ಗೋವಿಂದ ಶಾಸ್ತ್ರಿಯು ಮಹಾ ದೊಡ್ಡ ಪಂಡಿತರು ತಾನೂ ಎರಗಿ ಶರಣಾದರು ಮಧ್ವರಾಯರಲಿ 5 ಇಂಥಾ ಮಹಾತ್ಮರ ಇನ್ನೂ ಬಹು ಸಜ್ಜರನ ಉದ್ಧರಿಸಲಿಕ್ಕೇವೆ ಹರಿ ಅಜ್ಞೆಯಿಂದ ಈ ಧರೆಯಲ್ಲಿ ತೋರಿಹ ಮಧ್ವರಾಯರ ಶಾಸ್ತ್ರಿ ಬೇಡಿದರು ಸಂನ್ಯಾಸ ಕೊಡು ಎಂದು 6 ಸಚ್ಚಾಸ್ತ್ರ ಪ್ರವಚನ ಪಟು ವಿದ್ವನ್ಮಣಿಯು ನಿಶ್ಚಲ ಭಕ್ತಿಮಾನ್ ಸವೈರಾಗ್ಯ ವಿಪ್ರ ಅಚಲ ಸತ್ತತ್ವನಿಶ್ಚಯ ಜ್ಞಾನಿ ಶಾಸ್ತ್ರಿಗೆ ಅಕ್ಷೋಭ್ಯ ನಾಮನ ಇತ್ತರಾಚಾರ್ಯ 7 ಪ್ರಣವ ಮೂಲಾದಿ ಸುಮಂತ್ರ ಉಪದೇಶಿಸಿ ತನ್ನ ಮಠದಲ್ಲಿ ಅಕ್ಷೋಭ್ಯತೀರ್ಥರಿಗೆ ವನರುಹನಾಭರಿಂದ ನಾಲ್ಕನೇ ಸ್ಥಾನವ ಘನದಯದಿ ಇತ್ತರು ಆನಂದಮುನಿಯು 8 ಬದರಿಗೆ ಮೂರನೇ ಬಾರಿ ತೆರಳುವ ಪೂರ್ವ ಮಧ್ವ ಮುನಿ ನೇಮಿಸಿದ ಕ್ರಮದಿಂದಲೇವೆ ಮಾಧವ ತೀರ್ಥರು ವೇದಾಂತ ಪೀಠದಲಿ ಕುಳಿತುಜ್ವಲಿಸಿದರು 9 ಪದ್ಮನಾಭತೀರ್ಥರ ಪಾದಪದ್ಮಗಳಿಗೆ ಸದಾ ನಮೋ ನಮೋ ಎಂಬೆ ಇವರ ಪೀಳಿಗೆಯ ವಿದ್ಯಾಕುಶಲರು ಸೂರಿಗಳ ಚರಣಕ್ಕೆ ಸಂತೈಪರೆಮ್ಮ ಸದಾ ನಮೋ ಸರ್ವದಾ 10 ನರಹರಿತೀರ್ಥರು ಚರಣ ಸರಸೀರುಹದಿ ಶರಣಾದೆ ಕಾಯ್ವರು ಈ ಮಹಾನ್ ಇಹರು ವರಾಹ ತನಯಾ ಸರಿದ್ವರಾಕ್ಷೇತ್ರದಲಿ ಶ್ರೀ ವೃಂದಾವನದೊಳು ಹರಿಯ ಧ್ಯಾನಿಸುತ 11 ಮಾಧವತೀರ್ಥರ ಪಾದಪದ್ಮಗಳಿಗೆ ಸದಾನಮೋ ನಮೋ ಎಂಬೆ ಇವರ ಪೀಳಿಗೆಯ ಯತಿಗಳೂ ಭಕ್ತಿಮಾನ್ ಜ್ಞಾನಿಗಳ ಚರಣಕ್ಕೆ ಆದರದಿ ನಮಿಸುವೆ ಸದಾ ಪೊರೆವರೆಮ್ಮ 12 ಸುಲಭರು ಸುಜನರಿಗೆ ಶರಣರ ಸಲಹುವರು ಮಾಲೋಲನೊಲಿದಿಹ ಅಕ್ಷೋಭ್ಯತೀರ್ಥ ಬಲು ಖಿನ್ನ ಬ್ರಾಹ್ಮಣನು ಬ್ರಹ್ಮ ಹತ್ಯ ಮಾಡಿದವ ಕಾಲಲ್ಲಿ ಬಿದ್ದು ಶರಣಾದ ಗುರುಗಳಲಿ 13 ಗುರು ದಯಾನಿಧಿ ಅಕ್ಷೋಭ್ಯತೀರ್ಥರು ಆಗ ಶರಣಾದ ಪುರುಷನ ಪಶ್ಚಾತ್ತಾಪ ಖರೆಯೇ ಎಂಬುವುದನ್ನು ಜನರಿಗೆ ತಿಳಿಸಲು ಏರಿ ಮರ ನದಿಯಲಿ ಬೀಳೆ ಹೇಳಿದರು 14 ತನ್ನಯ ಮಹಾಪಾಪ ಕಳೆಯುವ ಗುರುಗಳು ಏನು ಹೇಳಿದರೂ ಮಾಡುವೆ ತಾನೆಂದು ಸನ್ನಮಿಸಿ ಗುರುಗಳಿಗೆ ನದಿ ಬದಿ ಮರಹತ್ತೆ ದೀನ ರಕ್ಷಕ ಗುರು ಇಳಿಯೆ ಹೇಳಿದರು 15 ವೃಕ್ಷದಿಂದಿಳಿದ ಆ ವಿಪ್ರಘಾತುಕನ ಮೇಲೆ ಅಕ್ಷೋಭ್ಯತೀರ್ಥರು ಶಂಖತೀರ್ಥವನ್ನ ಪ್ರೋಕ್ಷಿಸಿ ಆತನ ಮಹಾ ಬ್ರಹ್ಮಹತ್ಯಾ ದೋಷ ಕಳೆದರು ಪಂಕ್ತಿಯಲಿ ಸೇರಿಸಿದರು 16 ಶಂಖತೀರ್ಥದ ಮಹಿಮೆ ಅಲ್ಲಿದ್ದ ಜನರಿಗೆ ಶಂಕೆಯಲ್ಲದೆ ತಿಳಿಸಿ ಬಂದು ಬೇಡುವವರ ಡೊಂಕು ಕೊರತೆಗಳೆಲ್ಲ ನೀಗಿಸಿ ಯೋಗ್ಯದಿ ಶ್ರೀಕಾಂತನಲಿ ಭಕ್ತಿ ಪುಟ್ಟಿಸಿಹರು 17 ತಮ್ಮಲ್ಲಿ ಬೇಡುವ ಅಧಿಕಾರಿಯೋಗ್ಯರಿಗೆ ಶ್ರೀಮಧ್ವಶಾಸ್ತ್ರದ ದಾಢ್ರ್ಯ ಜ್ಞಾನ ಶ್ರೀ ಮನೋಹರನನ್ನ ಅಪರೋಕ್ಷಿಕರಿಸುವ ಸುಮಹಾ ಉಪಾಯವ ಅರುಹಿಹರು ದಯದಿ 18 ಮಧ್ವಸಿದ್ಧಾಂತ ಸ್ಥಾಪನ ಮಾತ್ರವಲ್ಲದೇ ವೇದ ವಂಚಕ ದುರ್ಮತಗಳ ಖಂಡನವ ಪೋದಕಡೆ ಮಾಡುತ್ತಾ ದಿಗ್ವಿಜಯ ಜಯಶೀಲ - ರೆಂದು ಮರ್ಯಾದೆಗಳ ಕೊಂಡಿಹರು ಜಗದಿ 19 ಅದ್ವೈತವಾದಿಯು ಶಾಂಕರ ಮಠಾಧೀಶ ವಿದ್ಯಾರಣ್ಯರು ಪ್ರಸಿದ್ಧ ಪಂಡಿತರು ಎದುರು ನಿಂತರು ಅಕ್ಷೋಭ್ಯ ತೀರ್ಥರ ಮುಂದೆ ವಾದಿಸಿದರು ಮುಳುಬಾಗಿಲು ಸಮೀಪ 20 ಶ್ವೇತಕೇತು ಉದ್ದಾಲಕರ ಸಂವಾದ ತತ್ವ ಮಸಿ ವಾಕ್ಯವೇ ವಾದದ ವಿಷಯ ವೇದಾಂತ ದೇಶಿಕರು ರಾಮಾನುಜೀಯತಿಯ ಅಧ್ಯಕ್ಷತೆಯಲ್ಲಿ ಸಭೆಯು ಕೂಡಿತ್ತು 21 ಛಾಂದೋಗ್ಯ ಉಪನಿಷತ್ತಲ್ಲಿರುವ ವಾಕ್ಯವು ಸಆತ್ಮಾ ತತ್ವಮಸಿ ಎಂಬುವಂಥಾದ್ದು ಭೇದ ಬೋಧಕವೋ ಅಭೇದ ಬೋಧಕವೋ ಎಂದು ವಾದವು ಆ ಈರ್ವರಲ್ಲಿ 22 ಆತ್ಮ ಶಬ್ದಿತ ನಿಯಾಮಕಗು ನಿಯಮ್ಯ ಜೀವನಿಗೂ ಭೇದವೇ ಬೋಧಿಸುವುದು ಆ ವಾಕ್ಯವೆಂದು ಸಿದ್ಧಾಂತ ಬಹುರೀತಿ ಸ್ಥಾಪಿಸಿದರು ಅಕ್ಷೋಭ್ಯರು ಸೋತಿತು ವಿದ್ಯಾರಣ್ಯರ ಐಕ್ಯವಾದ 23 ಅಸಿನಾತತ್ವ ಮಸಿನಾ ಪರಜೀವಪ್ರಭೇದಿನಾ ವಿದ್ಯಾರಣ್ಯ ಮಹಾರಣ್ಯಂ ಅಕ್ಷೋಭ್ಯ ಮುನಿರಚ್ಛಿನತ್ ಎಂದು ಬರೆದರು ತಮ್ಮಯ ಗ್ರಂಥದಲ್ಲಿ ಮಧ್ಯಸ್ತ ವೇದಾಂತದೇಶಿಕ ಸ್ವಾಮಿಗಳು 24 ಇಳೆಯ ಸಜ್ಜನರಿಗೆ ಜಯತೀರ್ಥರನಿತ್ತ ಮಾಲೋಲಪ್ರಿಯ ಅಕ್ಷೋಭ್ಯರ ಮಹಿಮೆ ಅಲ್ಪಮತಿ ನಾನರಿಯೆ ಇಲ್ಲಿ ಒಂದೋ ಎರಡೋ ಸ್ಥಾಲಿ ಪುಲೀಕ ನ್ಯಾಯದಲಿ ಪೇಳಿಹುದು 25 ನದಿ ದಡದಿ ಕುಳಿತಿದ್ದ ಅಕ್ಷೋಭ್ಯತೀರ್ಥರು ಎದುರಾಗಿ ನದಿಯಲ್ಲಿ ಆಚೆ ದಡದಿಂದ ಕುದುರೆ ಸವಾರನು ವರ್ಚಸ್ವಿ ಯುವಕನು ಬೆದರದೆ ಪ್ರವಾಹದಲಿ ಬರುವುದು ಕಂಡರು 26 ಕುದುರೆ ಮೇಲ್ ಆಸೀನನಾಗಿದ್ದ ಯುವಕನು ಕ್ಷುತ್‍ತೃಷಿ ಶಮನಕ್ಕೆ ಯತ್ನ ಮಾಡುತ್ತಾ ಉದಕವ ಕೈಯಿಂದ ತುಂಬಿಕೊಳ್ಳದಲೇ ಎತ್ತುಗಳು ಕುಡಿವಂತೆ ಬಾಯಿ ಹಚ್ಚಿದನು 27 ಮಾಧವ ಮಧ್ವರು ಮೊದಲೇ ಸೂಚಿಸಿದಂತೆ ಇಂದು ಆ ಕುರುಹರಿತು ಅಕ್ಷೋಭ್ಯರು ಇದು ಏನು ಪಶುವಂತೆ ಎಂದು ಧ್ವನಿಗೂಡಲು ಹಿಂದಿನ ಜನ್ಮ ಯುವಕಗೆ ನೆನಪು ಬಂತು 28 ಪಶು ಶಬ್ದ ಗುರುಮುಖದಿಂಬಂದಲಾಕ್ಷಣ ಪೂರ್ವ ಸಂಸ್ಕಾರ ಪ್ರತಿಭೆಯು ಉದಯವಾಯ್ತು ದಶಪ್ರಮತಿಗಳ ತಾನು ಎತ್ತಾಗಿ ಸೇವಿಸಿದ್ದು ಹಸನಾಗಿ ಟೀಕೆ ಬರೆಯಲಾಜÉ್ಞ ಕೊಂಡದ್ದು 29 ನಗಾರಿಸಮ ಬಲಿಯುವಕನು ಪ್ರವಾಹದ ವೇಗ ಲೆಕ್ಕಿಸದಲೇ ದಡಕೆ ತಾ ಬಂದು ಮುಗಿದುಕರ ಬಾಗಿಶಿರ ನಮಿಸಿ ಅಕ್ಷೋಭ್ಯರ ಆಗಲೇ ಸಂನ್ಯಾಸ ಕೊಡಲು ಬೇಡಿದನು 30 ಗಾಧಿ ಅರ್ಜುನ ಸಮ ಬಲರೂಪದಲಿ ತೋರ್ಪ ಈತ ರಾಯರ ಸುತನಾದರೂ ವೈರಾಗ್ಯ ಯುತ ಭಕ್ತಿಮಾನ್ ಸುಶುಭಲಕ್ಷಣನು ಎಂದು ಹರಿ ಮಧ್ವನಿಯಮಿತ ಅವಗೆ ಕೊಟ್ಟರು ಸಂನ್ಯಾಸ 31 ಶ್ರೀಯಃಪತಿಗೆ ಪ್ರಿಯತರ ಜಯತೀರ್ಥನಾಮವ ದಯಾಶೀಲ ಹೊಸಯತಿಗೆ ಇತ್ತು ಅಭಿಷೇಕ ಅಕ್ಷೋಭ್ಯ ಗುರುಮಾಡೆ ಗಗನದಿಂ ಪೂವರ್ಷ ಜಯ ಘೊಷ ಹರಡಿತು ಪರಿಮಳ ಸುಗಂಧ 32 ಶ್ರೀಮಧ್ವಾಚಾರ್ಯರು ಬೋಧಿಸಿ ತೋರಿಸಿದ ರಮಾಪತಿ ಪೂಜಾಸತ್ತತ್ವವಾದ ದುರ್ಮತ ಖಂಡನದ ರೀತಿಯ ಜಯಾರ್ಯರಿಗೆ ಸುಮ್ಮುದದಿ ಅರುಹಿದರು ಗುರುಸಾರ್ವಭೌಮ 33 ಶೀಲತಮ ಗುರುವರ್ಯ ಅಕ್ಷೋಭ್ಯತೀರ್ಥರು ಇಳೆಯಲ್ಲಿ ಮಧ್ವಮತ ಹರಿಭಕ್ತಿಯನ್ನ ಬೆಳೆಸಲು ಪ್ರತ್ಯೇಕ ಮಠವ ಸ್ಥಾಪಿಸಿದರು ತ್ರೈಲೋಕ ಭೂಷಣ ತೀರ್ಥರ ಮೊದಲ್ಮಾಡಿ34 ಆದಿ ಮಠ ಹರಿನೈದು ಸಮೀಪ ಪಟ್ಟವ ಆಳಿ ಹನ್ನೊಂದು ನೂರು ಅರವತ್ತೇಳ ಶಕವರುಷ ವದ್ಯ ಪಂಚಮಿ ಮಾರ್ಗಶಿರ ವಿಶ್ವಾವಸುವಲ್ಲಿ ಮಧ್ವ ಹೃದಯಾಬ್ಜಗನ ಪುರವ ಐದಿದರು 35 ಮತ್ತೊಂದು ಅಂಶದಲಿ ಮಳಖೇಡ ಗ್ರಾಮದಲಿ ನದಿ ತೀರದಲಿ ಹರಿಯ ಧ್ಯಾನ ಮಾಡುತ್ತಾ ಬಂದು ಬೇಡುವವರಿಷ್ಟಾರ್ಥ ಪೂರೈಸುತ ವೃಂದಾವನದಲ್ಲಿ ಕುಳಿತಿಹರು ಕರುಣಿ 36 ಶಾಶ್ವತ ಸರ್ವಾಶ್ರಯ ಗುಣಗಣಾರ್ಣವ ಅನಘ ಜೀವ ಜಡ ಭಿನ್ನ ಪರಮಾತ್ಮ ವಿಧಿತಾತ ಮಧ್ವಹೃತ್ಪದ್ಮಗ ಶ್ರೀ ಪ್ರಸನ್ನ ಶ್ರೀನಿವಾಸಗೆ ಸರ್ವದಾಪ್ರಿಯ ಅಕ್ಷೋಭ್ಯ ಗುರೋ ಶರಣು 37 ಪ || ಶ್ರೀ ಅಕ್ಷೋಭ್ಯ ತೀರ್ಥಚರಿತೆ ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಕೃಷ್ಣನಾ ಚರಣಾ ನಂಬಿ ಭಜಿಸುವುದು ಬಲು ಲೇಸು ಪ ಭಾವನೆ ದೇವಕಿ ಉದರದಿ ಬಂದಾ| ದೇವ ಹೃದಯ ಗೋಕುಲದಲಿ ಬೆಳೆದಾ| ಅವಿದ್ಯ ಪೂತನಿಯನು ಕೊಂದಾ 1 ಭವರೂಪದ ಸಗಟಾಸೂರನೊದೆದಾ| ಅವಗುಣಿಬಕ ಕೇಶಾದ್ಯರ ತರಿದಾ| ಅವಿವೇಕಿ ಕಾಳಿಂಗನ ತುಳಿದಾ 2 ಭಕ್ತಿಯ ಗೋರಸ ಕಳವಿಲಿ ಸುರಿದಾ| ಮುಕ್ತಾಂಗದ ಗೋಪೀಜನ ನೆರೆದಾ| ಸಕ್ತಿಯ ಗೋವರೋಳು ನಲಿದಾ3 ಭ್ರಾಂತಿಯ ಹಮ್ಮಿನ ಕಂಸನ ಬಡಿದಾ| ಸ್ವಾಂತ ಸುಖ ದ್ವಾರಕೆಯಲಿ ನಿಂದಾ| ಶಾಂತಿಯ ರುಕ್ಮಿಣಿ ಕೈವಿಡಿದಾ 4 ತಂದೆ ಮಹಿಪತಿ ಗುರುವಾದಾ ಕಂದುದ್ಧವನನು ತೋರಿಸಿ ಹೊರೆದಾ| ಛಂದದಿ ಪಾದುಕವಿತ್ತನು ಪದದಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶ್ರೀ ಕೃಷ್ಣವೇಣಿ ಕಲ್ಯಾಣೀ ಪಂಕಜಾಸನ ಸ್ವೀಕೃತ ಬುಧ ಶ್ರೇಣೀ ನೀ ಕೃಪೆÉಯಿಂದ ಮಹಾಕೃತು ಹರಿಯ ನಿ ಜಾಕೃತಿ ತೋರ್ದೂರಿಕೃತ ದುರಿತೇ ಪ ಸುಜನ ಮಾತೆ ಶಮಲ ಸಂಕೂಲ ನರ್ಧೂತೆ ಸುಮನಸ ಜನ ಸನ್ನುತೆ ಸನ್ಮೋದ ದಾತೆ ವಿಮಲ ಸದ್ಗುಣ ಸಂಭೃತೆ ನಮಿಸುವೆ ತ್ವತ್ಪದÀ ಕಮಲಯುಗಳಿಗನು ಪಮ ಸುಂದರೆ ಭ್ರಮೆಗೊಳಿಸುವ ದುರ್ಮಮ ಕಳೆದು |ಸೋ ತ್ತಮರ ಪದಾಬ್ಜಕೆ ಭ್ರಮರನೆನಿಸಿ ಮಾರಮಣನ ದುಹಿತ್ರೆ 1 ಮದಗಜಯಾನೆ ಪಿಕಗಾನೆ ಉಭಯಾನೆ ಮಾನಿನಿ ಮದನಾರಿ ಜಟಜಸೊನೆ ಪಾಪೌಘದಹನೆ ಮುದವ ಕೊಡು ಎಮಗೆ ನಿ ೀನೆ ಮದಡನರನು ಒಂದು ದಿನ ಮಜ್ಜನವ ವಿಧಿಸೆ ಶರೀರದಿ ಹುದುಗಿದ ಪಾಪಗಳುದುರಿಸಿ ಕಾಲನ ಸದನವ ಹೋಗಗೊಡದುದಧಿ ಮಥನ ಪದ ಪದುಮವ ತೋರ್ಪೆ 2 ನೀಲ ಪುನತ ಹೃತ್ಕುಮುದಾ ಭೇಶೇ ಅನುದಿನ ಪೂರೈಸೇ ಜನನಿಯೆನ್ನ ದುರ್ಗುಣವೆಣಿಸದೆ | ಮಾ ತನು ಲಾಲಿಸು ಸುಹೃದ್ವನರುಹದಲಿ ಶ್ರೀ ವನತೆಯರಸ ಜಗನ್ನಾಥ ವಿಠಲನ ಅನವರತ ನಿಲಿಸು ಘನ ಮಾಂಗಲ್ಯೇ 3
--------------
ಜಗನ್ನಾಥದಾಸರು
ಶ್ರೀ ಗುರು ಆತ್ಮರಾಮ ಸುರಮುನಿ ಸೇವಿತನಾಮ ಸಜ್ಜನ ಹೃದಯ ವಿಶ್ರಾಮ ಶ್ರೀಹರಿ ಸರ್ವೋತ್ತಮ 1 ದೀನೋದ್ದಾರಣ ರಾಮ ಅನಾಥ ಬಂಧು ನಿಸ್ಸೀಮ ಅನಂತ ಗುಣಮಹಿಮ ಶ್ರೀನಾಥ ಕಲ್ಪದ್ರುಮ 2 ಗುರುವರ ಪರಂಧಾಮ ಪತಿತಪಾವನ ನಾಮ ಮಹಿಪತಿ ತಾರಕರಾಮ ಸದ್ಗತಿಸುಖ ವಿಶ್ರಾಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶ್ರೀ ಗುರುವರದೇಂದ್ರರ ಸ್ತೋತ್ರಗಳು ಅಂದಣೇರಿದ ವರದೇಂದ್ರ ಮುನಿಪರ ನಿಂದು ಪಾಡುವರಫವೃಂದ ತರಿವರ ಪ ಅಂದದಿ ಭೂಸುರ ಸಂದಣಿ ಮಧ್ಯದಿ ಚಂದದಿ ಬಹು ಕರ್ಮಂದಿಗಳರಸ ಅ.ಪ ಶ್ರೀ ಮಧ್ವಮತಾಂಬುಧಿ ಸೋಮ ನಿಷ್ಕಾಮ ತಾಮಸಮತಕÀಂಜಸ್ತೋಮ ನಿಧೂಮ ಆ ಮಹಾಭಕ್ತ ಕುಮುದ ಪ್ರೇಮ ಸತ್ಕಾಮ ಕಾಮಿತ ಕಲ್ಪದ್ರುಮಗುರುಸಾರ್ವಭೌಮ ರಾಮ ಪದಾಂಬುಜ ಪ್ರೇಮದಿ ಭಜಿಸುವ ಭೂಮಿಸುರರ ಹೃತ್ತಾಮಸಹಾರಾ 1 ಉದಿತಾಕರ್À ಸಂಕಾಶ ವಿಧಿಕುಲಾಧೀಶ ಮುದದಿ ಭಜಿಸುವ ಭಕ್ತಹೃದಯನಿವಾಸ ಸದಮಲಭಕ್ತಙÁ್ಞನ ಉದಜವಿಕಾಸ ವಿಧಿಕುಲದ್ವೇಷಿ ಕುಮುದ ತತಿನಾಶ ವಿಧವಿಧದಲಿ ಹರಿಪದ ಭಜಿಸುವ ಮತಿ ವದಗಿ ಪಾಲಿಸು ಹೃದಜನಸದಯಾ 2 ಕರುಣಾನಿಧಿಯೆ ನಿನ್ನ ಚರಣ ಸೇವಕರ ಜರಮರಣಾದಿ ದೋಷತ್ವರಿತ ಪರಿಹಾರ ಶರಧಿ ವಿಹಾರ ನಿರುತದಿ ಹರಿಯನಾಮ ಸ್ಮರಿಸುವಧೀರ ವರದೇಶ ವಿಠಲನ ಕರುಣದಿ ಧರೆಯೊಳು ಮೆರೆಯುವ ಯತಿಕುಲವರಿಯ ಸುಚರಿಯಾ 3
--------------
ವರದೇಶವಿಠಲ