ಒಟ್ಟು 1269 ಕಡೆಗಳಲ್ಲಿ , 91 ದಾಸರು , 959 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಪ್ಪು ನೋಡದೆ ಬಂದೆಯಾ ನನ್ನ ತಂದೆಯೆಅಪ್ಪ ತಿರುವೆಂಗಳೇಶನೆ ನಿರ್ದೋಷನೆ ಪ.ಆಪಾದಮೌಳಿ ಎನ್ನೊಳುಅಘಬಹಳಶ್ರೀಪತಿ ಕ್ಷಮಿಸಿ ಕಾಯಿದೆಯ ಉದಧಿಶಯ್ಯಾ 1ಜಗದಘಹರನೆಂಬುದು ನಿನ್ನ ಬಿರುದುತ್ರಿಗುಣಾತೀತನೆ ರಾಮನೆ ಗುಣಧಾಮನೆ 2ಇನ್ನೆನ್ನ ಕಲುಷವಾರಿಸೊ ಭವತಾರಿಸೊ ಪ್ರಸನ್ನ ವೆಂಕಟರಮಣ ಭಯಶಮನ 3
--------------
ಪ್ರಸನ್ನವೆಂಕಟದಾಸರು
ತಪ್ಪುಗಳೆಲ್ಲವು ಒಪ್ಪುಗೊಳ್ಳಯ್ಯ ಶ್ರೀಚಪ್ಪರ ಶ್ರೀನಿವಾಸ ಪ.ಸರ್ಪರಾಜಗಿರಿಯಪ್ಪ ತಿಮ್ಮಪ್ಪನೆದರ್ಪಕತಾತನೆ ತಾ ಸಜ್ಜನಪ್ರೀತ ಅ.ಪ.ಮಾಧವನಿನ್ನಯ ಮಹಿಮೆ ತಿಳಿಯದಪ-ರಾಧವ ಮಾಡಿದೆ ದಾರಿದ್ರ್ಯದಬಾಧೆಯಿಂದ ತವಪಾದದರುಶನದಗಾದಿಯ ಕಾಣದಾದೆ ನಾ ದ್ರೋಹಿಯಾದೆ 1ತ್ರಾಣವಿರುವಾಗಕಾಣಿಕೆಹಾಕಿದೆದೀನದಾರಿದ್ರ್ಯದ ಹೊತ್ತಿನಲಿಮೇಣದರಿಂದಲಿ ತೆಗೆದು ತೆಗೆದು ಪಂಚಪ್ರಾಣಕ್ಕಾಹುತಿಯ ಕೊಟ್ಟೆ ಅಪರಾಧ ಪಟ್ಟೆ 2ಮಂದವಾರದಿಕ್ಕೊಂದೂಟವ ಸತ್ತ್ವದಿಂದಿರುವಾಗ ನಾ ನೇಮಗೈದೆಮಂದಭಾಗ್ಯ ಜ್ವರದಿಂದ ಪೀಡಿತನಾದ-ರಿಂದೆರಡೂಟವನೂ ಮಾಡಿದೆ ನಾನು 3ಶನಿವಾರಕ್ಕೊಂದಾಣೆಕಾಣಿಕೆಹಾಕುತ್ತಮಿನುಗುವ ಡಬ್ಬಿಯ ನಾ ಮಾಡಿದೆಎನಗೆ ದಾರಿದ್ರ್ಯವ ಕೊಟ್ಟ ಕಾರಣದಿಂದಹಣವೆಲ್ಲಗುಣನುಂಗಿತು ಪಾದಕೆ ಗೊತ್ತು4ದೊಡ್ಡದಾರಿದ್ರ್ಯದ ಗುಡ್ಡೆ ಬಿದ್ದುದರಿಂದದುಡ್ಡೆಲ್ಲ ತೆಗೆದೆ ನಾ ದಡ್ಡನಾಗಿಅಡ್ಡಬಿದ್ದು ಕೈಯೊಡ್ಡಿ ಬೇಡುವೆ ಸ್ವರ್ಣಗುಡ್ಡೆಯ ಮೇಲಿರುವ ಮಹಾನುಭಾವ 5ಭಂಡಾರದ್ರೋಹ ಬ್ರಹ್ಮಾಂಡಪಾಪಾಗ್ನಿಯುಮಂಡೆಯೊಳುರಿವುದು ಖಂಡಿತದಿಪುಂಡರೀಕಾಕ್ಷನೆ ಕರುಣಾಮೃತರಸಕುಂಡದೊಳ್ ಮೀಯಿಸಯ್ಯ ವೆಂಕಟರಾಯ 6ದೃಢಭಕ್ತಿಯನು ಕೊಟ್ಟು ಸಲಹಬೇಕಲ್ಲದೆಕೆಡುಕು ಮಾಡುವುದೇನುಜಡಜನಾಭಕಡಲಶಯನ ಲಕ್ಷ್ಮೀನಾರಾಯಣ ನ-ಮ್ಮೊಡೆಯ ಪಡುತಿರುಪತೀಶ ರವಿಕೋಟಿಭಾಸ 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ತಾರಕ್ಕ ಬಿಂದಿಗೆ ನೀರಿಗೆ ಹೋಗುವೆ |ತಾರೆ ಬಿಂದಿಗೆಯ ...................... ಪ.ತರಲಾಗದಿದ್ದರೆ ಬಲಿಯಿಟ್ಟು ಬರುವೆನು |ತಾರೆ ಬಿಂದಿಗೆಯ............... ಅಪಅಚ್ಚುತನೆಂಬುವ ಕಟ್ಟೆಯ ನೀರಿಗೆ ತಾರೆಬಿಂದಿಗೆಯ - ಅಲ್ಲಿ - |ಮತ್ಸರ ಕ್ರೋಧವೆಂಬ ಕೊಡವನು ತೊಳೆವೆನು ತಾರೆ 1ರಾಮನಾಯವೆಂಬ ಸಾರದ ನೀರಿಗೆ ತಾರೆಬಿಂದಿಗೆಯ -ಹರಿ - |ರಾಮವೆಂಬುವ ಹರಿದು ಹೋಗುವ ನೀರಿಗೆ ತಾರೆ 2ಅಜ್ಞಾನವೆಂಬ ನೀರ ಚೆಲ್ಲಿಬಂದೆನು ತಾರೆ ಬಿಂದಿಗೆಯ |ಸುಙ್ಞÕವೆಂಬುವ ನೀರಿಗೆ ಹೋಗುವೆ ತಾರೆ 3ಗೋವಿಂದನೆಂಬುವ ಗುಣವುಳ್ಳ ನೀರಿಗೆ ತಾರೆ ಬಿಂದಿಗೆಯ |ಚೆಲ್ವ ಬೆಳದಿಂಗಳೊಳು ಚಿಲುಮೆಯ ನೀರಿಗೆ ತಾರೆ 4ಬಿಂದು ಮಾಧವನ ಏರಿಯ ನೀರಿಗೆ ತಾರೆ ಬಿಂದಿಗೆಯ - ಪು -ರಂದರವಿಠಲನ ಅಭಿಷೇಕಕೆ ಬೇಕು ತಾರೆ 5
--------------
ಪುರಂದರದಾಸರು
ತುರುಕರು ಕರೆದರೆ ಉಣಬಹುದಣ್ಣ |ತುರುಕರು ಕರೆದರೆ ಉಣಬಹುದು .......... ಪ.ಕರ ಕರೆ ಚಂಚಲ ಮಾಡದಿರಣ್ಣ |ತುರುಕರು ಕರೆದರೆ ಉಣಬಹುದು ಅಪತುರುಕರುವಿಂದ ಮುಟ್ಟು ಮುಡಚಟ್ಟು ಹೋಹುದು |ತುರುಕರುವಿಂದ ಹೋಹದು ಎಂಜಲವು ||ತುರುಕರು ಕಂಡರೆಸರಕನೆ ಏಳಬೇಕು |ತುರುಕರುವಿನ ಮಂತ್ರ ಜಪಿಸಬೇಕಣ್ಣ.............. 1ತುರುಕರುವಿಂದ ಸ್ವರ್ಗ ಸ್ವಾಧೀನವಾಹುದು |ತುರುಕರುವಿಂದ ನರಕ ದೂರಪ್ಪುದು ||ತುರುಕರು ಕೂದಲ ತುರುಬಿಗೆ ಸುತ್ತಿಕೊಂಡು |ಗರತಿಯರೆಲ್ಲ ಮುತ್ತೈದೆಯರಣ್ಣ.......... 2ತುರುಕರುವಿನ ನೀರೆರಕೊಂಡ ನಮ್ಮ ದೇವ |ಉರವಕೊಂಡ ನೀರೆಲ್ಲ ಸನಕಾದಿಗೆ ||ಬೆರಕೆಯ ಮಾಡಿದ ಪುರಂದರವಿಠಲ |ಅರಿಕೆಯ ಮಾಡಿದ ಹರಿದಾಸರಿಗೆಲ್ಲ......... 3
--------------
ಪುರಂದರದಾಸರು
ತೂಗಿರೆ ರಂಗನ್ನ ತೂಗಿರೆ ಕೃಷ್ಣನತೂಗಿರೆ ಅಚ್ಯುತಾನಂತನ ಪ.ತೂಗಿರೆ ವರಗಿರಿ ಅಪ್ಪ ತಿಮ್ಮಪ್ಪನತೂಗಿರೆ ಕಾವೇರಿ ರಂಗಯ್ಯನ ಅಪಇಂದ್ರಲೋಕದೊಳುಪೇಂದ್ರ ಮಲಗಿಹನೆಬಂದೊಮ್ಮೆ ತೊಟ್ಟಿಲ ತೂಗಿರೆಮಂದಗಮನೆಯರು ಚೆಂದದಿ ಪಾಡುತನಂದನ ಕಂದನ ತೂಗಿರೆ 1ನಾಗಲೋಕದಲ್ಲಿ ನಾರಾಯಣ ಮಲಗಿಹನೆಹೋಗಿ ನೀವ್ ತೊಟ್ಟಿಲ ತೂಗಿರೆನಾಗವೇಣಿಯರು ನಾಲ್ಕು ನೇಣನು ಪಿಡಿದುಭಾಗ್ಯವಂತನೆಂದು ತೂಗಿರೆ 2ಜಲಧಿಯೊಳಾಲದ ಎಲೆಯಲ್ಲಿ ಮಲಗಿದಚೆಲುವನ ತೊಟ್ಟಿಲ ತೊಗಿರೆಸುಲಭ ದೇವರ ದೇವ ಬಲಿಬಂಧಮೋಚಕಎಳೆಯನ ತೊಟ್ಟಿಲ ತೂಗಿರೆ 3ಸೂಸುವ ಮಡುವಿನೊಳ್ ಕಾಳಿಯನ ತುಳಿದಿಟ್ಟದೋಷವಿದೂರನ ತೂಗಿರೆಸಾಸಿರ ನಾಮದ ಸರ್ವೋತ್ತಮನೆಂದುಲೇಸಾಗಿ ತೊಟ್ಟಿಲ ತೂಗಿರೆ 4ಅರಳೆಲೆ ಮಾಗಾಯಿ ಕೊರಳ ಪದಕ ಸರತರಳನ ತೊಟ್ಟಿಲ ತೂಗಿರೆಉರಗಾದ್ರಿವಾಸ ಶ್ರೀ ಪುರಂದರವಿಠಲನಹರುಷದಿ ಪಾಡುತ ತೂಗಿರೆ 5
--------------
ಪುರಂದರದಾಸರು
ದಾಸರ ನಿಂದಿಸಬೇಡಲೊ ಪ್ರಾಣಿ -ಹರಿ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ದಾಸರ ನಿಂದಿಸಬೇಡ ಪ.ಮೋಸವಾಯಿತೊ ಮನದೊಳು ಗಾಢ |ಲೇಸಾಗಿ ಇದ ತಿಳಕೊ ಮೂಢ ಅಪರಾಮನ ನಿಂದಿಸಿ ರಾವಣ ಕೆಟ್ಟ |ತಮ್ಮಗಾಯಿತು ಸ್ಥಿರಪಟ್ಟ ||ತಾಮಸದಿಂದಲಿ ಕೌರವ ಕೆಟ್ಟ |ಧರ್ಮಗೆ ರಾಜ್ಯವ ಬಿಟ್ಟ 1ಮನದೊಳಗಿನ ವಿಷಯದ ವಿಷ ಬಿಟ್ಟು |ಅನುದಿನ ಹರಿಯ ನೆನೆಯಿರಣ್ಣ ||ಸನಕಾದಿವಂದ್ಯನ ಪೂಜಿಸಿದರೆ ನೀವ್ |ಘನಪದವಿಯ ಕಾಣುವಿರಣ್ಣ2ಕನಕದಾಸನು ಕಬ್ಬಲಿಗನು ಎಂದು |ಅಣಕಿಸಿ ನುಡಿಬೇಡಿರಣ್ಣ |ಜನರಂತೆ ನರನಲ್ಲ ತುಂಬುರನೀತನು |ಜನಕಜೆರಮಣನ ಪಾದಸೇವಕನು 3ಉಡಿಯ ಒಳಗೆ ಕಿಡಿ ಬಿದ್ದರೆ ಅದು ತಾ |ಸುಡದನಕಾ ಬಿಡದಣ್ಣ ||ಬಡವನಾಗಿ ಕೆಡುಬುದ್ದಿಯ ಬಿಟ್ಟು |ನಡೆಯ ಕಂಡು ಪಡೆದುಕೊಳ್ಳಣ್ಣ 4ದೇವಕಿ ಸೆರೆಯನು ಬಿಡಿಸಿದ ದೇವನ |ಸೇವಕರು ನರರೆ ನಿಮಗವರು ||ಭಾವಜನಯ್ಯನ ಪದವ ನೆನೆದರೆ |ಪಾವನ ಮಾಡುವ ಪುರಂದರವಿಠಲ 5
--------------
ಪುರಂದರದಾಸರು
ದುರಿತಪರಿಹರಿಸು ರಂಗಾಪರಮಪಾತಕರು ಬಂದರು ನೆರೆದು ರಂಗಾಪ.ಪ್ರತ್ಯಕ್ಷ ಜೀವನ ಶವಕೆ ಯಮನ ಚಾರಕರುಮುತ್ತಿ ಕೊಲುವಂತೆ ಕಾಣಿಸುತದೆ ದಯಾಳುಕರ್ತನೀನಲ್ಲದಿನ್ನೊಬ್ಬ್ಬೊಡೆಯಕಾಲಮೃತ್ಯು ವಿನಯದೆಶೂಲನರಪಂಚವದನ1ನೀನರಸನೆನಗಾಗಿ ಇನ್ನೊಬ್ಬ ನೀಚರಿಗೆದೀನನಾಗುವುದುಚಿತೆ ಕರುಣಗುಣ ಖಣಿಯೆಮಾನನಿನ್ನದು ಅವಮಾನ ನಿನ್ನದು ಪಾಂಡವಮಾನಿನಿಯ ಸಮಯಕೊದಗಿದ ಭಕ್ತ ಬಂಧು 2ಮರೆಹೊಕ್ಕೆ ದಾಸವತ್ಸಲನೆಂಬ ಬಿರುದು ಕೇಳಿರುವೆ ತಪ್ಪಿಸಿಕೊಳಲುಬೇಡ ಭುವನೇಶಉರಗಗಿರಿವಾಸ ಪ್ರಸನ್ವೆಂಕಟೇಶ ಸಂಹರಿಸು ಅಪಕಾರಿಗಳ ಸಲಹು ಸಜ್ಜನರ 3
--------------
ಪ್ರಸನ್ನವೆಂಕಟದಾಸರು
ದೃಷ್ಟಿ ನಿನ್ನ ಪಾದದಲ್ಲಿ ನೆಡುವ ಹಾಗೆ - ಧರೆಯದುಷ್ಟ ಜನರ ಸಂಗಗಳನು ಬಿಡುವ ಹಾಗೆ ಪ.ಕೆಟ್ಟ ಮಾತ ಕಿವಿಯಿಂದ ಕೇಳದ ಹಾಗೆ ಮನವಕಟ್ಟು ಸದಾ ನಿನ್ನ ಧ್ಯಾನ ಬಿಡದ ಹಾಗೆ ಅಪದೃಷ್ಟನಾಗಿ ಕೈಯನೆತ್ತಿ ಕೊಡುವ ಹಾಗೆ ಶ್ರೀಕೃಷ್ಣ ನಿನ್ನ ಪೂಜೆಯನ್ನು ಮಾಡುವ ಹಾಗೆ ||ಭ್ರಷ್ಟನಾಗಿ ನಾಲ್ವರೊಳು ತಿರುಗದ ಹಾಗೆ ಬಲುಶಿಷ್ಟ ಜನರ ಸೇವೆಯನು ಮಾಡುವ ಹಾಗೆ 1ಪುಟ್ಟಿಸಿದ ತಾಯಿ - ತಂದೆಯಲ್ಲವೆ ನೀನು - ಒಂದುಹೊಟ್ಟೆಗಾಗಿ ದೈನ್ಯ ಪಡಬೇಕೇ ನಾನು ||ಪಟ್ಟೆ -ಪಟ್ಟಾವಳಿ ಬೇಡಲಿಲ್ಲ ನಾನು ಎನ್ನಗುಟ್ಟು ಅಭಿಮಾನಗಳ ಕಾಯೋ ನೀನು2ನಟ್ಟನಡು ನೀರೊಳೀಸಲಾರೆ ನಾನು ಎತ್ತಿಕಟ್ಟೆಯ ಸೇರಿಸಬೇಕಯ್ಯ ನೀನು ||ಬೆಟ್ಟದಷ್ಟು ಪಾಪ ಹೊತ್ತಿರುವೆ ನಾನು ಅದನುಸುಟ್ಟು ಬಿಡುಪುರಂದರ ವಿಠಲ ನೀನು3
--------------
ಪುರಂದರದಾಸರು
ದೆಕ್ಕಬುಕ್ಕ ಇಕ್ಕಬೇಕು ಅಂಬನ ಮನದಅಕ್ಕರವು ತೀರುವತನಕಪಕೊರಳಿಗೆ ಬೀಳಬೇಕು ಅಂಬನ ಎದೆಯಸೆರಗ ಹಿಡಿದು ಎಳೆಯಬೇಕು ಅಂಬನಕರುಳನೀಗ ಪೀಕಬೇಕು ಅಂಬನ ಉಟ್ಟನಿರಿಗೆ ಜಗ್ಗಿ ಬೀಳಬೇಕು ಅಂಬನ1ತೊಡೆಯ ಮೇಲೆ ಹೊರಳಬೇಕು ಅಂಬನ ಮುಸುಕಹಿಡಿದು ಎಳೆಯಬೇಕು ಅಂಬನಕಡಿಯಬೇಕು ಗಲ್ಲವನ್ನು ಅಂಬನ ಸ್ತನವಹಿಡಿದು ಕುಡಿಯ ಬೇಕು ಅಂಬನ2ಓಡಿ ಬಂದು ಅಪ್ಪಬೇಕು ಅಂಬನ ಕುದುರೆಮಾಡಿ ಹೆಗಲನೇರಬೇಕು ಅಂಬನಓಡಬೇಕು ಒಡನಮುಟ್ಟಿ ಅಂಬನ ಸಾಕ್ಷಿಗೂಢ ಚಿದಾನಂದ ಬಗಳಾಂಬನ3
--------------
ಚಿದಾನಂದ ಅವಧೂತರು
ದೇವಕಿಯುದರ ಸಂಜಾತನೆ ತ್ರುವಿಕಾವನ ಪಿತ ಕಮಲಾಕ್ಷನೆ ತ್ರುವಿಶ್ರೀ ವೈಭವಸಚ್ಚಿದಾನಂದ ತ್ರುವಿಭಾವಕಿಗೋಪಿಯ ಕಂದನೆ ತ್ರುವಿ......... ತ್ರುವಿ1ಮಧುರೆಯೊಳುದಿಸಿದ ಮಹಿಮನೆ ಜೋ ಜೋಯದುಕುಲ ತಿಲಕ ಯಾದವರಾಯ ಜೋ ಜೋ ||ಮಧುಕೈಟಭ ಮುರಮರ್ದನ ಜೋ ಜೋಚದುರನಾಗಿ ತುರುಗಳ ಕಾಯ್ದೆ ಜೋ ಜೋ 2ಗೋಕುಲಪಾಲಕ ಗೋವಿಂದ ತ್ರುವಿಶ್ರೀ ಕುಚಕುಂಕುಮಾಂಕಿತ ಕೃಷ್ಣ ತ್ರುವಿ ||ಪಾಕ ಶಾಸನ ಮುಖ್ಯ ಸುರವಂದ್ಯ ತ್ರುವಿಲೋಕವೀರೇಳ ಪೆತ್ತಾತನೆ ತ್ರುವಿ ........... ತ್ರುವಿ 3ಶ್ರುತಿಚೋರ ಸಂಹಾರಕ ದೇವ ಜೋ ಜೋಜತನದಿ ಸುರರಿಗಮೃತವಿತ್ತೆ ಜೋ ಜೋ ||ಕ್ಷಿತಿಯ ಕದ್ದೊಯ್ದನ ಸೀಳ್ದೆ ನೀ ಜೋ ಜೋಮತಿಯುತ ಬಾಲಕನತಿ ರಕ್ಷ ಜೋ ಜೋ 4ಕ್ಷಿತಿಯ ಈರಡಿಗೆಯ್ದ ವಾಮನ ತ್ರುವಿಯತಿವಂಶ ಜನನಭಾರ್ಗವರೂಪ ತ್ರುವಿ ||ಕ್ರತುವ ರಕ್ಷಕ ಕಾಕುತ್ಸ್ಥನೆ ತ್ರುವಿರತಿಪತಿಪಿತಸುರನುತ ಕೃಷ್ಣ ತ್ರುವಿ ......... ತ್ರುವಿ5ಗೋಪಿಕಾನಂದ ಮುಕುಂದನೆ ಜೋ ಜೋಭೂಪರೊಳ್ಕಾದಿ ಬಳಲಿದನೆ ಜೋ ಜೋಶ್ರೀ ಪುರುಷೋತ್ತಮ ನರಸಿಂಹ ಜೋ ಜೋಅಪಾರ ಮಹಿಮಾರ್ಣವ ದೇವ ಜೋ ಜೋ........ಜೋ ಜೋ 6ಮಣ್ಣೊಳಗಾಡಿ ನೀ ಬಂದೆಯ ತ್ರುವಿಬೆಣ್ಣೆಯ ಬೇಡೆ ಬಯ್ದೆನೆ ಕಂದ ತ್ರುವಿಕಣ್ಣ ದೃಷ್ಟಿಗೆ ಕರಗದ ಕಂದ ತ್ರುವಿಚಿಣ್ಣಸುಮ್ಮನೆ ಇರು ಶ್ರೀ ಕೃಷ್ಣ ತ್ರುವಿ ............ ತ್ರುವಿ7ತಾರಕ ಸತಿವ್ರತಹಾರಕ ಜೋ ಜೋವಾರಣ ಹಯವೇರಿ ಮೆರೆದನೆ ಜೋ ಜೋ ||ಸಾರಿದವರ ಸಂತೈಸುವ ಜೋ ಜೋಶ್ರೀ ರಮಾಕಾಂತ ಶ್ರೀ ಕೃಷ್ಣನೆ ಜೋ ಜೋ.......ಜೋ ಜೋ 8ಶರಣಾಗತ ವಜ್ರಪಂಜರ ತ್ರುವಿಕರುಣಾಕರ ಕಮಲಾಕ್ಷನೆ ತ್ರುವಿ ||ಧರಣಿಧರಶಾಯಿ ಶ್ರೀವರ ತ್ರುವಿ ||ವರದ ಶ್ರೀ ಪುರಂದರವಿಠಲನೆ ತ್ರುವಿ ........... ತ್ರುವಿ 9
--------------
ಪುರಂದರದಾಸರು
ದೇವರ ಗಿರಿಯ ಅಪ್ಪಯ್ಯನವರುದೇವದುರ್ಗಸ್ಥಳದಲ್ಲಿಹರುಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ತಿಮ್ಮಯ್ಯನ .................................................................................................................................................ಸುಮ್ಮನೇ ನರವಪು ಧರಿಸಿಹರು1ಶೇಷಶಯನ ಕೃಪೆ ಪಡೆದಿಹರು |ದಾಸ ಮುಕುಟಮಣಿಎನಿಸಿಹರು |ಕ್ಲೇಶಪಂಚಕಗಳನಳಿದಿಹರು |ತೋಷಿಸಿ ಭಕ್ತರ ಸಲಹುವರು2ವೆಂಕಟ ರಮಣಗೆ ಹೋಗುವರು |ಸಂಕಟ ಜನ ಪರಿಹರಿಸುವರು ||ಸಂಖ್ಯೆಯಿಲ್ಲದ ಅಪೂಪ ನೀಡುವರು |ಶಂಕರ ಸಖಗೆ ಬೇಕಾಗಿಹರು3
--------------
ಜಕ್ಕಪ್ಪಯ್ಯನವರು
ದೇವವರಗೆ ಹಾರ ನೀಡಿದೆÀ ಪಗೋವರ ಮನಿ ಮಹಾದೈವನಾದವಗೆ ಅಪವೇದಚೊರನ ಕೊಂದ ಶೂರಗೆಭಾರಮೇದಿನಿತಂದಿಹ ವೀರಗೆ ಮಹಬೋಧರ ವರಫೋರರೂಪನಾದವಗೆ 1ತಿರುಕರೂಪಗೆಪರಶುಧರವನಚರಗೆಖರಾಸುರ ವೈರಿಗೆ ಕಂಸಮರ್ದನಗೆ 2ನೀತಸತಿವ್ರತ ಹಾರಗೆಖಳಜಾತಿ ಜನರ ಸಂಹಾರಗೆಖ್ಯಾತ ಗುರುಜಗನ್ನಾಥ ವಿಠಲಗೆ 3
--------------
ಗುರುಜಗನ್ನಾಥದಾಸರು
ದೋಷ ಎಣಿಸದೆ ಕಾಯೊ ಜೀಯಾ ಪಕಂಡ ಕಂಡವರ ಭಜಿಸೀ -ಬೇಡಿತೋಂಡವತ್ಸಲ ಕರುಣೆ ಸಲಿಸೀಪಾದಪುಂಡರೀಕ್ಯನ್ನೊಳಗೆ ಇರಿಸಿಕಾಯೋ 1ಮಾqಬಾರದ ಕೃತ್ಯವಾ - ನಾ ಬಲುಮಾಡಿದೆಗೃಹಕೃತ್ಯವಾಬೇಡದಕಿ ಭೃತ್ಯತ್ವವಾ - ಈ ದೋಷನೋಡದಲೆ ಭಕ್ತತ್ವವಾ ನೀಡೊ 2ದೀನ ಜನಪಾಲ ನಿನ್ನಾ-ರೂಪಧ್ಯಾನ ಮಾಡಿದೆ ಬಿಡದೆ ಘನ್ನಾ-ಗತಿಎನು ಪೇಳಯ್ಯಾ ಎನಗೆ ಮುನ್ನಾ ಸ್ವಾಮಿ 3ಗುರುರಾಘವೇಂದ್ರರಾಯ - ಎನ್ನಶರಣು ಪೊಕ್ಕೆನೊ ನಿನಗೆ ನಾನಯ್ಯಾ ಕರುಣೀ 4ಮಾತ ಪಿತ ಭ್ರಾತ್ರÀ ಬಂಧೂ - ಎನಗೆದಾತನಿನ್ನ ದೂತನೆಂದೂ- ಬಂದ-ನಾಥನನು ನೀ ಕಾಯುವುದು ಪ್ರಭುವೇ 5ಕರುಣಸಾಗರನೆ ಈಗ - ತವರೂಪಶರಣು ಪೊಕ್ಕವನ ವೇಗಾ-ಭವ-ಅರಣ ದಾಟಿಸುವಂಥ ಯೋಗಾ ಪೇಳಿ 6ಹೋಗುತಿದೆ ಹೊತ್ತು ಪದುಮಾಕ್ಷ -ಹ್ಯಾಗೆಆಗುವದೊ ನಿನ್ನಅಪರೋಕ್ಷಜಾಗುಮಾಡದೆಸಲಿಸ್ಯನ್ನಪೇಕ್ಷಾ ಸ್ವಾಮಿ7ಪಾರದೋಷಗಳನ್ನೆ ತಾಳೋಘೋರಅಙ್ಞÕನ ಕೀಳೋ- ಪರಲೋಕಸೇರಿಸೆನ್ನನು ಕೃಪಾಳೋ ಸ್ವಾಮಿ 8ಎಷ್ಟು ಪೇಳಲಿ ಎನ್ನ ತಾತಾ - ಕೃಪಾ -ದೃಷ್ಟಿಯಲಿನೋಡುನಾನಿನ್ನ ಪೋತಾಧಿಟ್ಟ ನೀಗುರುಜಗನ್ನಾಥಾ- ವಿಠಲನನಿನ್ನೊಳಗೆ ತೋರೋದಾತಾಖ್ಯಾತಾ9
--------------
ಗುರುಜಗನ್ನಾಥದಾಸರು
ನಕ್ಕರಮ್ಮ ಕೆಲದೆಯರುಸಖ್ಯದಿಂದ ಕೈ ಹೊಯ್ದು ಪ.ಚಿಕ್ಕ ಸುಭದ್ರೆ ಬರೆಸಿದ ಚಿತ್ರಕ್ಕೆಅಕ್ಕಜಬಟ್ಟಾರವರುಭಾಳಅಪಶೌರಿಕೃಷ್ಣನರಸಿಯರು ಗೌರಿಯ ಕಂಡರುತೋರುತಿರೆ ಬರೆಸಿದ ಚಿತ್ರ ನೀರೆ ನೀನು ವರ್ಣಿಸಲೆಂದು 1ನಾರಿ ಬರೆಸಿದ ಗೊಂಬೆನೋಡೆ ನೀರೊಳು ಹರಿದಾಡತಾವೆಮಾರಿಸಣ್ಣದು ಮಾಡಿ ಭಾಳೆ ಭಾರಪೊತ್ತು ಭೋರ್ಯಾಡುತಾವೆ2ನಲ್ಲೆನೆಲವ ಕೆದರೋದೊಂದು ಹಲ್ಲು ತೆರೆದು ಬೇಡೋದೊಂದುಕಲ್ಲು ಮನದಿಕೊಡಲಿ ಎತ್ತಿ ನಿಲ್ಲಗೊಡದೆ ಜನನಿಯ 3ಮಡದಿಯ ಒಲ್ಲದ್ದೆÉೂಂದು ಕಿಡಿಗೇಡಿ ಪುರುಷನೊಂದುಕಡುಬತ್ತಲೆಯಾದದ್ದೊಂದು ಹಿಡಿದೇಜಿ ಏರೋದೊಂದು 4ವೀರತನವೆಲ್ಲನೀಗಿನಾರಿರೂಪ ಆದದ್ದೊಂದುಆ ರಾಮೇಶನ ಹಾಡಿಪಾಡಿ ಸಾರಿ ಸಾರಿ ಹೊಗಳೋದೊಂದು 5
--------------
ಗಲಗಲಿಅವ್ವನವರು
ನಗೆಯು ಬರುತಿದೆ - ಎನಗೆನಗೆಯು ಬರುತಿದೆ ಪ.ಜಗದೊಳಿದ್ದ ಮನುಜರೆಲ್ಲಹಗರಣಮಾಡುವುದ ನೋಡಿಅಪಪರಸತಿಯರ ಒಲುಮೆಗೊಲಿದುಹರುಷದಿಂದಅವರ ಬೆರೆದುಹರಿವ ನೀರಿನೊಳಗೆ ಮುಳುಗಿಬೆರೆಳನೆಣಿಸುವರ ಕಂಡು 1ಪತಿಯ ಸೇವೆ ಬಿಟ್ಟು,ಪರಸತಿಯ ಕೂಡೆ ಸರಸವಾಡಿಸತತ ಮೈಯ ತೊಳೆದು ಹಲವುವ್ರತವ ಮಾಡುವರ ಕಂಡು 2ಹೀನಗುಣವ ಮನದೊಳಿಟ್ಟುತಾನು ವಿಷದ ಪುಂಜನಾಗಿಮಾನಿ ಪುರಂದರವಿಠಲನಧ್ಯಾನ ಮಾಡುವವರ ಕಂಡು 3
--------------
ಪುರಂದರದಾಸರು