ಒಟ್ಟು 2665 ಕಡೆಗಳಲ್ಲಿ , 124 ದಾಸರು , 1916 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಲಿಸಯ್ಯ ಎನ್ನ ಪಾದಪದ್ಮದೋರಿ ನೀ| ಬಾಲಲೀಲೆ ದೋರ್ವೆ ಗೋಪಾಲ ಬಾಲರನ್ನನೇ ಪ ನಂದ ನಂದ ನಂದು ಓಡಿ ನಂದನೆಯಾ ಭಾವಕಾಗಿ| ಬಂದ ಬಂದು ದುರಿತವನು ಬಂದು ಬಂದು ಹರಿಸಿ| ಛಂದ ಛಂದದಿಂದ ಭಕ್ತರೈವರನು ಕಾಯ್ವೆ ಮು ಸಿಂಧು ವಾಸನೆ 1 ನಾಗನಾಗ ಶಯನ ಯನ್ನ ರಕ್ಷಿಸೆಂದು ಕರೆಯ ಕೇಳಿ| ನಾಗ ನಾಗದವನ ಬಿಟ್ಟು ಓರ್ವನೇ ಮಾರುತಿಯಾ| ವೇಗ ವೇಗದಿಂದ ಬಂದು ಪ್ರಾಣನುಳಹಿದೇ ನಿಗ| ಮಾಗ-ಮಾಗೋಚರ ಭೋಗ ಭೋಗಗನ ವ್ಯಾಪ್ತನೇ2 ಸುಂದ್ರ ಇಂದ್ರ ಚಾಪದಂತೆ ಪೊಳೆವ ಭ್ರೂಲತೆಯು|| ಪೇಂದ್ರ ಚಂದ್ರ ಧರನುತ ಮಂದ್ರಗಿರಿಧರ ಗುಣ| ಸಾಂದ್ರ ಚಂದ್ರಕುಲ ಸಿರೋಮಣೀ ವಾರಜಾಕ್ಷಯಾದ| ವೇಂದ್ರ ಇಂದ್ರನುತ ಮಹಿಪತಿ ನಂದ ನೋಡೆಯನೇ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪಾಲಿಸು ಪನ್ನಗಧರನೆ ಪ ಅಂಧಕ ಮಥನನೆ ಗಂಗಾಧರನೆ ಕುಂದೇಂದು ನಿರ್ಮಲ ಭೂತಿ ಭೂಷಿತನೆ 1 ಶಂಕರ ಭವಭಯ ಶಂಕಾವಿನಾಶ ನ್ಯಂಕುಭಾಸಿತ ಕರಪಂಕಜ ಭೂಷ 2 ಕೈಲಾಸ ವಾಸನೆ ಕಾಲಕಂಧರನೆ ಶೈಲಜಾ ಕುಚತಟ ಕುಂಕುಮ ಭಾಸ3 ಗಂಗಾಜನಕ ಪ್ರಿಯ ಅಂಗಜ ಹರಣ ತುಂಗಭುಜಗ ಚಂದ್ರ ಸಂಗಮಹಿಮ 4 ಲೀಲಾತಾಂಡವ ಗೌರೀ ಲಾಲಿತ ಹೃದಯ ಬಾಲಕ ನುತಿಪ್ರೀತ ಧೇನು ಪುರೀಶಾ 5
--------------
ಬೇಟೆರಾಯ ದೀಕ್ಷಿತರು
ಪಾಲಿಸು ಪಾಲಿಸು ಪಾರ್ವತಿ ತನಯನೆ ಫಾಲಚಂದ್ರಯುತನೆ ಕಾಲ ಸಂಭಾವನಲೋಲುಪ ವಾರಿಜಾಸ್ಯನುತನೆ ಪ ಸುಜನ ಗಜವದನಾ ಸುರಕುವಲಯ ದಿನಕರ ಧೂರ್ಜಟಿಸುತ ಗಣಪ 1 ಕಾಮಿತ ಫಲಗಳ ಪಡೆಯಲು ಸುಜನರು ನೇಮದಿ ಪೂಜಿಪರು ಸಾಮಜ ವದನನೆ ಭಕ್ತರಭೀಷ್ಟವÀ ಪ್ರೇಮದಿ ಕರುಣಿಸುತ 2 ಗಾನಲೋಲ ವರತಾಂಡವ ಪ್ರೀತನೆ ಕೋಮಲಾಂಗ ಸತತಂ ಧೇನುನಗರ ಸಂರಕ್ಷಣ ದಕ್ಷನೆ ಸಾನುರಾಗದಲನಿಶಂ 3 ಇಂದ್ರಾದಿ ದಿವಿಜರೆಲ್ಲ ಕುಂದುತ್ತ ದೈತ್ಯ ಭಯದಿಂ ಸುಂದರಿ ನಿನ್ನ ಭಜಿಸೆ ನಿಂದೆಲ್ಲರನ್ನು ಪೊರೆದೆÀ 4 ಕಮಲಾಕ್ಷಿ ವಿಮಲಪಾಣಿ ಕಮಲಾಪ್ತ ಮುಖ್ಯರಮಣೆ ಸುಮಶೋಭಮಾನವೇಣಿ ಕಮನೀಯ ದಿವ್ಯಪಾಣಿ 5 ಶಾಕಿನಿರೂಪೆ ದೇವಿ ಲೋಕೈಕ ವೀರ್ಯ ಧೈರ್ಯ ಬೇಕಾದ ವರಗಳಿತ್ತು ಶ್ರೀಕಾರ ಶಕ್ತಿಯೆನ್ನ 6 ಜ್ಞಾನವು ಮೌನ ಜಯವುಂ ಧ್ಯಾನ ಸುಮಂಗಲತ್ವಂಮಾನ ಸುಪುತ್ರ ಹಿತಮಂ ಧೇನು ಪುರೀಶೆ ಕೊಟ್ಟು 7
--------------
ಬೇಟೆರಾಯ ದೀಕ್ಷಿತರು
ಪಾಲಿಸೆ ಎನ್ನ ನಾಮಗಿರಿಯಮ್ಮ ಹರಿಗುರುಗಳ ಕೃಪಾಬಲ ಎನ್ನಲ್ಲಿರುವಂತೆ ಪ ಕರುಣದಿ ನೋಡೆ ನಾಮಗಿರಿಯಮ್ಮ ಇಂದಿರೆ ಎನ್ನ ಸುಖಿಯನ್ನೆ ಮಾಡೆ ವಾರಿಜಮುಖಿ ನರಪಾಲಾಧಮರ ದುರ್ಮುಖವ ನೋಡಿಸದಂತೆ 1 ಸುಖಚಿದಾಕಾರೆ ಎನ್ನ ಮನೆಗೆ ದಯವಿಟ್ಟು ಬಾರೆ ನಾರೆಯರಲ್ಲಿ ಸರಿ ನಿನಗಾರೆ ಪಂಕಜನೇತ್ರೆ ಕಿಂಕರನೆಂದು ಆತಂಕ ಬಿಡಿಸೆ ತಾಯೆ 2 ಚರಣಾರವಿಂದ ಸೇವಕನಲಿ ಕೃಪೆಯಿಟ್ಟು ಮಂದಹಾಸದೆ ಬಂದು ಸುಖಬುದ್ಧಿಯಿಂದ ಇಂದಿರಾದೇವಿ ಚಂದ್ರವದನೆ ಎನ್ನ ಮಂದಿರದೊಳಗಿದ್ದು 3 ಶ್ರಿತ ಸುರಧೇನು ದೇವಿ ನೀನೆಂದು ಇಂದಿರೆ ಇಷ್ಟುಪೇಕ್ಷೆ ನಿಂಗೇನು ಕಷ್ಟಗಳೆಲ್ಲ ನಷ್ಟವಾಗುವ ಪರಿ ದೃಷ್ಟಿ ಎನ್ನೊಳಗಿಟ್ಟು 4 ನರಹರಿ ಜಾಯೆ ನಾಮಗಿರಿಯಮ್ಮ ಬಂದು ನೀ ಕಾಯೇ ಪೇಳುವುದೇನು ಸರ್ವಜ್ಞ ತಾಯೇ ವಾರಿಜಮುಖಿ ನಿಜ ವರ್ಣಾಶ್ರಮಧರ್ಮ ಚ್ಯುತಿ ಎಂದೂ ಬರದಂತೆ 5
--------------
ವಿದ್ಯಾರತ್ನಾಕರತೀರ್ಥರು
ಪಾಲಿಸೆನ್ನ ಪಾವ9ತೀಶನೆ | ಮಹಾನುಭಾವ | ನೀಲಕಂಠ ರುಂಡಮಾಲನೆ ಪ ಪಾಲಿಸೆನ್ನ ಭವದೊಳಿಂದು | ಬಾಲಚಂದ್ರಧರನೆ ಬಂದು | ಕಾಲಕಾಲ ದುರಿತಜಾಲ | ಮೂಲನಾಶಗೈದುವೊಲಿದು ಅ.ಪ. ಅಂತರಾತ್ಮನಖಿಲ ಪೋಷಣ | ಕಪಾಲಧರ ದು-| ರಂತ ಮಹಿಮ ತ್ರಿಗುಣ ಕಾರಣ || ಸಂತಸುಜನ ಚಿಂತಿತಾಥ9 | ಭವಾಬ್ಧಿ ಪೋತ | ಅಂತಕಾಂತನಖಿಲ ಭುವನ | ಕ್ರಾಂತಾನಂತ ಮಹಿಮ ದೇವ 1 ಭುಜಗಾಭರಣ ಅಜಸುರಾಚಿ9ತ | ತ್ರಿಶೂಲಧಾರ| ಸುಜನ ಬಂಧು ಮುಕ್ತಿದಾಯಕ || ತ್ರಿಜಗದೀಶ ತ್ರಿಪುರನಾಶ | ರಜತಶೈಲವಾಸ ಭಕ್ತ | ನಿಜಮನೋರಥಾಬ್ಧಿ ಚಂದ್ರ | ಭಜಿಸುವೆ ಚರಣಾರವಿಂದ 2 ಆದಿಮಧ್ಯಾಂತರಾತ್ಮನೆ | ಜಗನ್ನಿವಾಸ | ವೇದವೇದ್ಯ ಸುಜನಸೇವ್ಯನೆ || ಆದಿಮಾಯೆಯಾದಿಮೂಲ | ಆದಿಪುರುಷ ಶ್ರೀನಿವಾಸ | ಸಾದರದೊಳೆನ್ನ ಕಾಯ್ದು | ಮೋದದಿಂದ ಸಲಹೊ ದೇವ 3
--------------
ಸದಾನಂದರು
ಪಾಲಿಸೊ ಪತಿತಪಾವನ್ನಾ ನಿನ್ನ ಪಾಲಿಗೆ ಬಂದೆ ಮೋಹನ್ನಾ -ಆಹಾ ಪಾಲಾಬ್ಧಿಶಾಯಿ ಗೋಪಾಲರೊಡೆಯಾ ಲೋಕ ಪಾಲಕ ವಿನುತಾ ಗೋಪಾಲ ಫಾಲಾಕ್ಷನೆ ಪ ಬಂದೆನೊ ನಿನ್ನ ಹಂಬಲಿಸಿ ನಾನು ನೊಂದು ಸಂಸ್ಕøತಿಯಲ್ಲಿ ಸೂಸಿ ಈಸಿ ಮುಂದಣ ನೆಲೆಗಾಣೆ ಗುಣಿಸಿ ಏನೇ ನೆಂದು ಪೇಳಲೊ ವಿಸ್ತರಿಸಿ -ಆಹಾ ಮಂದರಧರ ನಿನ್ನ ಮಂದಿರದ ದಾಸಿ ಕಂದನು ನಾನೆಲೊ ಕಣ್ತೆರೆದು ನೋಡೊ 1 ಪೊಂದಿದೆ ಭಾರವವೊಹಿಸು ಪ್ರತಿ ಬಂಧಕವ ಪರಿಹರಿಸು ನಿನ ಗೊಂದಿಸುವೆ ಕೊಡು ಲೇಸು ಅತ್ಯಾ ನಂದದಲ್ಲಿ ಚಿತ್ತವಿಡಿಸು -ಆಹಾ ಇಂದಿರಾ ಮಂದಿರಾ ಸುಂದರ ಯೋಜನ ಗಂಧಿಯ ಬಸುರಿಲಿ ಬಂದ ಭವದೂರಾ 2 ನಿಂದ್ಯ ಕರ್ಮವು ಮಾಡಿದವನ ದೂತ ರಿಂದ ತರಿಸಿದೆ ತ್ರಿಭುವನಾ ಜಯ ವೆಂದು ಕೊಂಡಾಡಲು ಜವನಾ ಭೀತಿ ಯಿಂದ ಮಾಡಿದ ನಿನ್ನ ಸ್ತವನಾ -ಆಹ ಒಂದಾನಂತವಾಗಿ ದ್ವಂದ್ವಪಾಪಗಳಿಗೆ ನಿಂದಿರಬಲ್ಲವೆ ಸಂದರುಶನವಾಗೆ 3 ಕಂದುಕ ಪುಟಿ ಸೂತ ಬಳುಕಿ ದೈತ್ಯ ವೃಂದ ಮೋಹಕವಾಗಿ ಸಿಲುಕಿ ಸುರ ಸಂದೋಹಕೆ ನೀನೆ ಘಳಿಕಿ ನಿಜ ವೆಂದು ಮಾನವರಿಗೆ ಬಳಿಕಿ -ಆಹಾ ಎಂದೆಂದಿಗೆ ಸಿದ್ಧ್ದಾಗಂಧಮಾತುರ ಕಳೆ ಗುಂದದೆ ಮತಿ ಕೊಡು ನಂದಕಾನಂದ ಹಸ್ತನೆ 4 ಹಂದಿ ನಾಯಿ ನರಿ ರಾಸಾ ಜನ್ಮ ಬಂದರೆ ಎನಗದು ಹರುಷಾ ಬಹು ಮುಂದುಂಟು ರಹಸ್ಯಾ ಮನಸಾಪೇಕ್ಷಾ ಸಂದೇಹ ಮಾಡಿಸೊ ಶ್ರೀಶಾ -ಆಹಾ ಯೋನಿ ಸಂದೀದ ಕಾಲಕ್ಕು ಒಂದು ವಿಂಶತಿ ಮತ ಹೊಂದಿಸದಿರು ಹರಿ5 ಅಂಧಃಕಾರದೊಳೆನ್ನ ತಂದೆ ಇದ ರಿಂದ ನಿನಗೇನೊ ಮುಂದೆ ಲಾಭ ಬಂದಾದರೂ ಇಲ್ಲಾ ಇಂದೆ ಸುಖ ಸಾಂದ್ರ ಕಡಿಮೆನೊ ಮುಂದೆ -ಆಹಾ 6 ಇಂದಿರಾವರ ರಾಮ ಶಾಮಾ ರಾಮ ಚಂದ್ರ ಚತುರ ಸಾರ್ವಭೌಮಾ ದಿವ್ಯ ಸಿರಿ ಉರಪ್ರೇಮಾ ಮುಚ ಕುಂದ ಪಾಲಕ ನಿಸ್ಸೀಮಾ -ಆಹಾ ಇಂದ್ರಿಯಂಗಳು ತನು ಸಂಬಂಧದೆಡೆಗೆ ಪೋಪಾ ತೊಂದರೆ ಬಿಡಿಸೊ ಗೋವಿಂದ ಗೋವಳರಾಯಾ 7 ದುಂದುಭಿ ಭೇರಿಯ ರಭಸಾ ಮಹಾ ಬಂಧುರಾ ನೆರೆದ ವಿಶೇಷಾ ಮಂತ್ರಿ ಮಂದಿ ಪರಿವಾರ ಭೂಷಾ -ಆಹಾ ಬಿಂದು ಮಾತುರ ಇವು ಮುಂದಿನೈಶ್ವರ್ಯ ಸಿದ್ಧಾ ಕುಂದಗೊಡದೆ ಬೊಮ್ಮನಂದದಿ ಪಥತೋರಿ8 ಹಿಂದಣ ಬಲವನ್ನು ಕಾಣೆ ನಾನು ಅಂದು ನುಡಿದದ್ದು ಮಾಣೆ ಅನು ಬಂಧಗಳಿಗೆ ಕಾಮಧೇನೆ ಸತ್ಯ ಪತಿ ನೀನೆ -ಆಹಾ ನಂದನ ಮನೋಹಂಸಾ 9 ಸಂದಣೆ ತೊಲಗದೆಂಬಿಯಾ ಆಹಾ ಬಂದರೆ ಬರಲಿ ಎಂಬಿಯಾ ಇದೇ ಸಂದಲಿ ಅನುಗಾಲ ನ್ಯಾಯಾ ಅನು ಸಂಧಾನ ನಿನ್ನಲಿ ಪ್ರೀಯಾ -ಆಹಾ ಇಂಧನದೊಳು ವಾಯು ವ್ಯಾಪಿಸಿದದ ರಂದದಿ ಸರ್ವಾಂಗಾ ನಿಂದಿಹ ನಿರ್ದೋಷಾ 10 ಕಂದರ್ಪ ಕೋಟಿ ಲಾವಣ್ಯ ಅರ ವಿಂದ ನಯನ ಗುಣ ಗಣ್ಯ ದೀನ ಮಂದಾರ ಸತತ ತಾರುಣ್ಯ ಸರಿ ಬಂದಂತೆ ಮಾಡೊ ಕಾರುಣ್ಯ -ಆಹಾ ವಂದೆದೈವವು ನಾನೆಂದ ಮುರಾರಿಯ ಕೊಂದು ಬಿಸುಟಾಧೀರ ನಂದಕುಮಾರಕ11 ಇಂದ್ರಿಯಂಗಳ ಗಾತ್ರಾ ಪ್ರಾಣಾ ಸರ್ವ ಕುಂದಣ ಪುಟದಂತೆ ವರಣಾ ಕಂಬು ಕಂಧರ ಪೊಳಿಯಲಿ ವಚನಾ -ಆಹಾ ಸಂದರ್ಭವಾಗಿ ಏನೆಂದದೆ ಸಚ್ಛಾಸ್ತ್ರ ವೊಂದಿಬರಲಿ ಮುಕುಂದಾ ಮುದ್ದುರಂಗಾ12 ಅಂದಿಗೆ ಪೊಂಗೆಜ್ಜೆ ಮೆರೆಯೆ ತಂದೆ ಯೆಂದು ಕುಣಿಯೊ ಎನ್ನ ಧೊರಿಯೆ ವಾದ್ಯಾ ಧಿಂ ಧಿಂ ಧಿಮಿಕೆಂದು ಮೊರೆಯೆ ಮೇಲೆ ವೃಂದಾರಕ ಪುಷ್ಪಗರಿಯೆ -ಆಹಾ ಇಂದಿನ ಉತ್ಸಾಹ ಇಂದ್ರಾದ್ಯರು ಪೂತು ರೆಂದು ಪೊಗಳೆ ನಗೆಯಿಂದ ನೋಡುವದೆ 13 ಮಧ್ವರಮಣ ಪಾಪಿ ಭಕ್ತಿ ಜ್ಞಾನ ಸದ್ಧರ್ಮ ವೈರಾಗ್ಯಯುಕ್ತಿ ಕೊಡು ಭುಕ್ತಿ ಇತ್ತು ಮುದ್ರಧಾರನಾ ಮಾಡಿ ಮುಕ್ತಿ -ಆಹಾ ನಿರ್ಧಾರಮಾರ್ಗವ ಬದ್ಧದಿ ತೋರಯ್ಯಾ ಪತಿ 14 ಬಂಧೂರ ಕೀರ್ತಿ ಸಂಪನ್ನಾ ಕರಿ ಬಂಧ ವಿಮೋಚನ್ನ ನಾ ರಂದ ವರದ ಸುಪ್ರಸನ್ನಾ ಶತಾ ನಂದ ಕಾನನವಾಸಾ ಘನ್ನಾ -ಆಹಾ ಸಿಂಧುಜನಕನೆ ಪರಂಧಾಮತ್ರಯ ಸತ್ಯ ಸಂಧ ವಿಜಯವಿಠ್ಠಲೆಂದು ವದನ ಎನ್ನಾ15
--------------
ವಿಜಯದಾಸ
ಪಾಲಿಸೊ ಪರಮ ಪಾವನ್ನ ಕಮ ಲಾಲಯ ನಂಬಿದೆ ನಿನ್ನ ಆಹ ನಖ ತೇಜ ಮೂರ್ಲೋಕದರಸೆ ನೀನಾಲಯ ಬಿಡದಲೆ ಅ.ಪ ಹಿಂದೆ ಪ್ರಹ್ಲಾದನ ಮೊರೆಯ ಕೇಳಿ ಬಂದು ಕಾಯಿದೆ ಭಕ್ತ ಪ್ರಿಯ ಸುಖ ಸಂದೋಹ ಮೂರುತಿ ಆಯ ತಾಕ್ಷ ಎಂದೆಂದು ಬಿಡದಿರು ಕೈಯ ಆಹ ವೃಂದಾರ ಕೇಂದ್ರಗೆ ಬಂದ ದುರಿತಂಗಳ ಹಿಂದೆ ಮಾಡಿ ಕಾಯ್ದೆ ಇಂದಿರಾರಮಣನೆ 1 ಹರಣದಲ್ಲಿ ನಿನ್ನ ರೂಪ ತೋರಿ ಪರಿಹರಿಸೊ ಎನ್ನ ಪಾಪ ದೂರ ದಿರದಿರು ಹರಿಸಪ್ತ ದ್ವೀಪಾಧಿಪ ಸಿರಿಪತಿ ಭಕ್ತ ಸಲ್ಲಾಪ ಆಹ ಕರಣಶುದ್ಧನ ಮಾಡಿ ಕರೆಯೊ ನಿನ್ನ ಬಳಿಗೆ ನರಕಂಠೀರವ ದೇವ ಚರಣ ಆಶ್ರೈಸಿದೆ 2 ಶರಣ ಪಾಲಕನೆಂಬೊ ಬಿರುದು ಕೇಳಿ ತ್ವರಿತದಿ ಬಂದೆನೊ ಅರಿದು ಇನ್ನು ಪರಿ ಅಪರಾಧ ಜರಿದು ಪರತರನೆ ನೋಡೆನ್ನ ಕಣ್ತೆರೆದು ಆಹ ಮರಣ ಜನನಂಗಳ ತರಿದು ಬಿಸುಟು ನಿನ್ನ ಶರಣರ ಸಂಗದಲ್ಲಿರಿಸಿ ಉದ್ಧರಿಸೆನ್ನ 3 ಸಂಸಾರ ಸಾಗರ ದೊಳಗೆ ಎನ್ನ ಹಿಂಸೆ ಮಾಡುವರೇನೊ ಹೀಂಗೆ ನಾನು ಕಂಸಾರಿ ಅನ್ಯರಿಗೆ ಬಾಗೆ ಮತ್ತೆ ಸಂಶಯವಿಲ್ಲ ಮಾತಿಗೆ ಆಹ ಹಂಸ ಡಿಬಿಕರನ್ನು ಧ್ವಂಸ ಮಾಡಿದ ಶೌರಿ ಮೂರ್ತಿ ದಿವಸ ದಿವಸದಲ್ಲಿ 4 ಭವ ಶಕ್ರಾದ್ಯಮರ ಕೈಯ ನಿರುತ ತುತಿಸಿಕೊಂಬ ಧೀರ ಶುಭ ಪರಿಪೂರ್ಣ ಗುಣ ಪಾರಾವರ ಭಕ್ತ ವಾರಿನಿಧಿಗೆ ಚಂದಿರ ಆಹ ಸ್ಮರನ ಕಾಂತಿಯ ನಿರಾಕರಿಸುವ ತೇಜನೆ ಎರವು ಮಾಡದೆ ಹೃತ್ಸರಸಿಜದೊಳು ತೋರಿ 5 ಮೊದಲು ಮತ್ಸ್ಯಾವತಾರದಿ ವೇದ ವಿಧಿಗೆ ತಂದಿತ್ತ ವಿನೋದಿ ಶ ರಧಿಯೊಳು ಸುರರಿಗೋಸ್ಕರದಿ ನೀನು ಸುಧೆಯ ಸಾಧಿಸಿ ಉಣಿಸಿದೆ ಆಹ ಅದುಭೂತ ಭೂಮಿಯ ತೆಗೆದೊಯ್ದುವನ ಕೊಂಡು ಮುದದಿ ಹಿರಣ್ಯಕನುದರ ಬಗಿದ ಧೀರ 6 ಬಲಿಯ ಮನೆಗೆ ಪೋಗಿ ದಾನ ಬೇಡಿ ತುಳಿದೆ ಪಾತಾಳಕ್ಕೆ ಅವನ ಪೆತ್ತ ವಳ ಶಿರ ತರಿದ ಪ್ರವೀಣ ನಿನ್ನ ಬಲಕೆಣೆಗಾಣೆ ರಾವಣನ ಆಹ ತಲೆಯನಿಳುಹಿ ಯದುಕುಲದಿ ಜನಿಸಿ ನೀನು ಲಲನೇರ ವ್ರÀ್ರತವಳಿದಾಶ್ವಾರೂಢನೆ 7 ಮಾನಸ ಪೂಜೆಯ ನೀ ದಯದಿ ಇತ್ತು ಶ್ರೀನಾಥ ಕಳೆ ಭವವ್ಯಾಧಿ ಕಾಯೋ ಅನಾಥ ಬಂಧು ಸುಮೋದಿ ಚತುರಾ ನನಪಿತ ಕೃಪಾಂಬುಧಿ ಆಹ ತಾನೊಬ್ಬರನರಿಯೆ ದಾನ ವಿಲೋಲನೆ ಏನು ಮಾಡುವ ಸಾಧನ ನಿನ್ನದೊ ಹರಿ8 ನಿನ್ನ ಸಂಕಲ್ಪವಲ್ಲದೆ ಇನ್ನು ಅನ್ಯಥಾವಾಗಬಲ್ಲುದೆ ಹೀಂಗೆ ಚೆನ್ನಾಗಿ ನಾ ತಿಳಿಯದೆ ಮಂದ ಮಾನವನಾಗಿ ಬಾಳಿದೆ ಆಹ ಎನ್ನಪರಾಧವ ಇನ್ನು ನೀ ನೋಡದೆ ಮನ್ನಿಸಿ ಕಾಯೋ ಜಗನ್ನಾಥ ವಿಠಲ 9
--------------
ಜಗನ್ನಾಥದಾಸರು
ಪಾವನೀ ಆವಹಿ ಮಾಂ ಪ ಪಾವನಿ ಪಾತಕಾರಣ್ಯ ಮಹಾ ಪಾವಕÀ ನೀನಾದ್ಯೊ ಘನ್ನ ಆಹಾ ಆವಕಾಲದಲ್ಲಿ ಭಾವಜಜನಕನ ಸೇವೆಯೊಳಿರುವಂಥ ಭಾವ ಪಾಲಿಸೊ ದೇವ ಅ.ಪ ಪ್ರಾಣಾದಿ ಪಂಚರೂಪಕನೆ ಸುರ ಗಣ ಕರಾರ್ಚಿತ ಪಾದಯುಗನೆ ಗುಣ ಗಣನಿಧಿ ಬಾರತೀಧವನೇ ಜಗ ತ್ರಾಣ ಕಾರಣನೆ ಮಾರುತನೇ ಆಹಾ ಚಾರು ಚ ರಣ ವಂದಿಪೆ ಜಗತ್ಕಾರಣಕರ್ತನೇ 1 ಖದ್ಯೋತ ಶತ ನಿಭ ಚರಣಾ ಅನಾದ್ಯ ಹರಣ ಸದ್ಯ ವಿದ್ಯೋತ ವೇದಾಂತಾಭರಣಾ ಅನ ವಧ್ಯ ಸ್ವಭಕ್ತಾಂತಃ ಕರಣಾ ಆಹಾ ವಿದ್ಯಾರಮಣ ನೀನೆ ಸದ್ಯೋಜಾತಗೆ ಸು ವಿದ್ಯಾ ಪೇಳಿದ್ಯೋ ಪ್ರದ್ಯುಮ್ನನ ತೋರಿಸೋ 2 ಶ್ರೀನಾಥನಿಗೆ ಪ್ರತೀಕಾ ಬಾಲ ಭಾನುಕೋಟಿ ಪ್ರಕಾಶಾ ಏನು ಕರುಣಾಳೊ ಭಕ್ತಾಭಿsಲಾಷಾ ಅನು ಸಾರದಿ ಪೂರ್ತಿಪ ಈಶಾ ಆಹಾ ಹನುಮದಾದಿರೂಪ ಘನವಾಗಿ ಧರಿಸಿ ನೀ ವನಧಿ ಲಂಘಿಸಿ ಹರಿ ವನಿತೆಯ ತಂದಿತೆÀ್ತ 3 ಸೂತ್ರನಾಮಕ ಶುಭಗಾತ್ರಾ ಚಿತ್ರ ಚಂiÀರ್i ಪಿತಾಮಹಪುತ್ರಾ ಗೋತ್ರ ಧರಮುಖ ದ್ಯು ಸ್ವಕÀಲತ್ರಾ ಮಿತ್ರ ತಾಡನ ಹರ್ತ ಅರ್ಥಗಾತ್ರಾ ಆಹಾ ಸುತ್ರಾಮ ಮುಖ ತ್ರಿನೇತ್ರಾಂತ ಸುರಕೃತ ಸ್ತೋತ್ರ ಪದಾಂಬುಜ ಮದಂತ್ರದಿ ನಿಲಿಸಯ್ಯಾ 4 ಘೋಟ ಖೇಟ ಕಂಠೀರವ ವದನಾ ಭವ ಕಾಟ ತಪ್ಪಿಸಿ ಪೊರಿ ಎನ್ನಾ ಕಿಟ ಮ ರ್ಕಟ ರೂಪನೆ ನಿನ್ನಾ ಭಕ್ತ ಕೋಟಿಯೊಳಗೆ ಸೇರಿಸೆನ್ನಾ ಆಹಾ ದಿಟ್ಟ ಮಹಿಮ ಗುರು ಜಗನ್ನಾಥ ವಿಠಲನ್ನ ಮುಟ್ಟ ಭಜಿಪ ದಿವ್ಯ ದÀೃಷ್ಟಿಯ ಪಾಲಿಸೋ 5
--------------
ಗುರುಜಗನ್ನಾಥದಾಸರು
ಪಾಶಮೋದಕ ಪರಶುಧರ ಗಿರಿಜೇಶ ಅಜಹರಿ ಪೂಜಿತ ಶ್ರೀ ಗಣನಾಯಕ 1 ಉಂಡಲಿಗೆ ಚಕ್ಕುಲಿಯ ಕರಜಿಗೆ ಮಂಡಿಗೆಯ ಪರಿಸೇವಿತ ಚಂಡ ಕಿರಣ ಪ್ರಕಾಶ ತೇಜೋದ್ಧಂಡ ಶ್ರೀ ಗಣನಾಯಕ 2 ಕುಂಡಲ ಜಾಲ ಮಣಿಗಣ ಭೂಷಿತ ಶ್ರೀ ಗಣನಾಯಕ 3 ಕರಿವದನ ಉರಗೇಂದ್ರ ಭೂಷಣ ತರಣಿ ಶಶಿ ಹರಿ ಲೋಚನ ಶ್ರೀ ಗಣನಾಯಕ4 ಮಾಡೋ ಶ್ರೀ ಗಣನಾಯಕ 5
--------------
ಕವಿ ಪರಮದೇವದಾಸರು
ಪಾಷಾಣವಲ್ಲವದು ಭೂಷಣವು ಕರಕೆ ದೋಷವಾ ದೂರಿಪುದು ತೋಷ ಜನಿಪುದು ಮನಕೆ ಪ ದಾಸಳುದಕದಿ ಜನಿಸಿ ಶ್ರೀಶನಂಕಿತ ವಹಿಸಿ ವಾಸುದೇವನ ಭಜಕರೆದೆ ಪಿರಿದು ಎನಿಸಿ ದಾಸಜನರಿದನು ನಿತ್ಯದಿ ಪಾಡಿ ಪೂಜಿಸಲು ಘಾಸಿಯಕ್ಷಯ ಲೋಕಪಥವ ಸಲೆ ಕರುಣಿಪುದು 1 ಶ್ರೀದೇವಿ ವಲ್ಲಭನು ಭೂದೇವಿ ರಮಣನು ಸಾಧುಗಳ ಪ್ರಿಯ ಶ್ರೀಗಿರಿನಿಲಯನು ಮೋದದಲಿ ಶಕ್ತ ಮೌಕ್ತಿಕ ಸ್ವರ್ಣಸರಿಯಲ್ಲ ಭೇದ ತೋರಲು ದೃಶನ್ಮಾಯಯಂತಿಹ ಸ್ವಾಮಿ 2 ಭಕ್ತರೊಳು ನಿಜದಾಸ ಯುಕ್ತ ಚಂದ್ರಹಾಸ ವಕ್ತøದೊಳ್ಗೊಳಸಿಹನು ನರಸಿಂಹದಾಸ ಮುಕ್ತಿಪಂಥ ಕಂಡನವ ಸಂದೇಹ ಬೇಡಿದಕೆ ಶಕ್ತ ನರಸಿಂಹವಿಠ್ಠಲ ಸಾಲಿಗ್ರಾಮವು 3
--------------
ನರಸಿಂಹವಿಠಲರು
ಪಾಹಿ ಪಾಹಿ ಮುಕುಂದ ಕೇಶವ ಪಾಹಿ ಮುರಹರ ಮಾಧವಾಪಾಹಿ ಗೋಕುಲವಾಸ ಪಾವನ ಪಾಹಿ ಕೃಷ್ಣ ಜನಾರ್ದನಾಪಾಹಿ ಭಕ್ತಮನೋಹರಾಕೃತೆ ಪಾಹಿ ಶ್ರೀಧರ ವಾಮನಾಪಾಹಿ ಪಂಕಜನೇತ್ರ ಜಯಜಯ ಪಾಹಿ ವೆಂಕಟನಾಯಕಾ1ಪಾರರಹಿತ ಭವಾಬ್ಭಿ ಮಧ್ಯ ವಿಹಾರವೇಷ ವಿನೋದಿನಂದಾರ ಪುತ್ರ ಧನಾಲಯಾದಿಷು ಸಾರಮತಿಮತಿದುಃಖಿನಂಕ್ರೂರ ಕ್ರೋಧಕಷಾಯ ಕಲುತ ಕರಣ ಮತ್ಯಭಿಮಾನಿನಂಶ್ರೀ ರಮಣ ವೈಕುಂಠವಲ್ಲಭ ಪಾಹಿ ವೆಂಕಟನಾಯಕಾ 2ರಕ್ಷ ರಕ್ಷ ಮಹೇಶ ಸುರಮುನಿಪಕ್ಷ ಮನ್ಮಥಶಿಕ್ಷಕಾರಕ್ಷ ರವಿಚಂದ್ರಾನಲಾಂಬಕ ರಕ್ಷ ರಜತಗಿರೀಶ್ವರಾರಕ್ಷ ರಾಕ್ಷಸಭಯನಿವಾರಕ ರಕ್ಷ ಕಾಮಿತದಾಯಕಾರಕ್ಷ ಗಜವ್ಯಾಘ್ರಾಜಿನಾಂಬರ ರಕ್ಷ ಶಿವ ಗಂಗಾಧರ 3ಕಾಮಕರಿಪದ ಮರ್ದಿತಂ ತನು ದಾಮ ಬಂಧನ ಪೀಡಿತಂತಾಮಸಂ ತ್ವತ್ಪಾದ ಸೇವಾ ನಾಮಮಾತ್ರ ವಿವರ್ಜಿತಂಭೀಮ ರವಿಜಭಯಾತುರಂ ಕುರು ಕಾಮಹರ ತವ ಸೇವಕಂವ್ಯೋಮಕೇಶ ವಿರಿಂಚಿ ವಿಬುಧಸ್ತೋಮ ಶಿವಗಂಗಾಧರ 4ವಾಸುದೇವ ವರೇಣ್ಯ ಪದ್ಮನಾಭ ಸುರೇಶ ಕ್ಲೇಶವಿಭಂಜನಭಾಸಮಾನ ಭವಾಬ್ಧಿತಾರಕ ದಾಸಪದ್ಮದಿವಾಕರದೇಶಕಾಲಾತೀತ ನಿರುಪಮ ಪಾಹಿ ವೆಂಕಟನಾಯಕಾ 5ಶರಣಜನ ಸುರಕುಜ ತವಾಮಲ ಚರಣಪಂಕಜ ಪಂಜರೇವಿರಜೆವಿಶತು ಮನಃಸ್ಥಿರಂ ಮಮ ಕುರು ತಥೈವ ಕೃಪಾಕರಪರಮಕಾರಣ ಪರತರಾತ್ಪರ ಪುರುಷ ಪ್ರಕೃತಿಪ್ರವರ್ತಕಾಸರಸಿಜೋದ್ಭವಸ್ತಂಭ ವ್ಯಾಪಕ ಪಾಹಿ ವೆಂಕಟನಾಯಕ 6ನೀಲಕಂಠ ನಿಧೀಶಮಿತ್ರ ಸುಶೀಲ ಸಾಂಬ ಮೃಗ ಫಣಿ ವರ ಕುಂಡಲಶೂಲಪಾಣಿ ಸುರಾದ್ರಿಚಾಪ ಜಟಾಲತಾಪರಿಶೋಭಿತಕೀಲಿತಾಮರವೈರಿಪುರ ನಿರ್ಮೂಲ ಶಿವಗಂಗಾಧರ 7ದೇಹಿ ದಾಸ್ಯಮನಾಮಯಂ ಹರ ದೇಹಿ ಸಾಧುಸಮಾಗಮಂದೇಹಿ ತವಚರಿತಾಮೃತಂ ಭವ ನಿತ್ಯ ನಿರೋಗತಾಂದೇಹಿ ಶಿವಗಂಗೇಶ ತಿರುಪತಿಧಾಮ ವೆಂಕಟನಾಯಕ 8ಓಂ ಯಮಳಾರ್ಜುನಭಂಜನಾಯ ನಮಃ
--------------
ತಿಮ್ಮಪ್ಪದಾಸರು
ಪಾಹಿ ಪಾಹಿ ಮೋಹನ್ನರೆ | ಲೋಹಲೊಷ್ಟ ಸಮೇಕ್ಷಣ ಪ ಪಾದ ಸೇವೆ | ವಿಹಿತದಿ ನೀಡೆನಗೆ ಅ.ಪ. ಪಾದ | ಬಂಡುಣಿಯಂದದಲೀಮಾಂಡವ್ಯರಾಗಿರುವಾಗ | ಚಂಡತಪ ಮಾಡಿದಿರಿ 1 ಗಾಣಿಗನುದರದೀ | ಜನಿಸುತ ಪೂರ್ವದೀಧನ ಬಹುಗಳಿಸುತ | ಜನುಮವ ನೂಕಿದಿರಿ2 ಗಳಿಸಿದ ಧನವನೂ | ಲಲನೆಗೂ ಪೇಳದೇಮಲಿನ ದೇಹವನೀಗಿ | ಕಳೆದಿರಿ ಪ್ರಾರಬ್ಧವ 3 ಸತಿಸುತ ಬಂಧು ಜನ | ಗತಿತಪ್ಪಿ ಭ್ರಾಂತರಾಗೀಅತಿ ಅತಿ ವ್ಯಥೆಯಿಂದ | ಪಾಥೇಯವ ಕಾಣಲಿಲ್ಲ 4 ಚಿನಿವಾರ ನೂದರದೀ | ಪುನರಪಿ ಜನಿಸಲೂಜನನಿಯು ಅನುವನು | ಕಾಣದಲೆ ಚಿಂತಿಸಿದಳ್ 5 ಆರ್ತಳಾಗುತ ಚಕ್ರ | ತೀರ್ಥವ ಪೊಗಲೂ ಬರೇಪಾರ್ಥ ಸಖನ ಭಕ್ತ | ಆರ್ತೆಯನು ತಡೆದರು 6 ಆಕೆಯ ಶಿಶು ಸಹಾ | ಸಾಕುವೆನೆನುತಲೀಶ್ರೀಕರ ವಾಕ್ಯವಿತ್ತು | ಭೀಕರವ ತಪ್ಪಿಸಿದ 7 ವಿಜಯರಾಯರು ಬಂದೂ | ನಿಜಸತಿ ಮಡುವಿನೊಳ್‍ತೇಜಸ್ಸಿನಿಂ ಮೆರೆವಂಥ | ದ್ವಿಜಸುತನರ್ಪಿಸಿದರ್ 8 ಮೋಹನ ಬಾಲನಿಗೆ | ಮೋಹನ ವಿಠಲನಾಮೋಹದಂಕಿತವಿತ್ತು | ಮಾಹಿತಾಂಘ್ರಿ ನೆನೆಸಿದರ್ 9 ಮುಂಜಿ ಮದುವೆ ಮಾಡೀ | ಹಂಜರದಿ ನಿಲಿಸುತಾಕಂಜಾಕ್ಷನಂಘ್ರಿಯನು | ಅಂಜಾದಲೆ ಭಜಿಸೆಂದರ್10 ಚಿನಿವಾರತನದಿಂದ | ಧನವನು ಗಳಿಸಿದಾಜನುಮ ಪೂರ್ವದಸ್ಮøತಿ | ಮನದೊಳು ನೆನೆದೆಯೋ11 ಗಾನವ ಮಾಡುತಲೀ | ಗಾಣಿಗತನಯರನೂಕಾಣುತಲೀ ಪೇಳಿದೆಯೊ | ಧನವಿಟ್ಟ ಸ್ಥಳವನು 12 ಗುರುಗಳ ಕರುಣಿಯಿಂ | ಹರಿದೆಯೊ ಅಪಮೃತೀನೆರೆದಿದ್ದ ಜನರುಗಳ್ | ಅರೀಯರು ಸೋಜಿಗವ 13 ಮೋದ ತೀರ್ಥರ ಮತ | ಸಾಧಿಸಿದೆ ಜಗದೊಳು14 ಪವನಾಂತರಾತ್ಮ ಗುರು | ಗೊವಿಂದ ವಿಠಲನಾಪಾವನಾ ಸ್ಮರಣೆಯಿಂ | ಭವವನು ಕಳೆದೆಯೋ 15
--------------
ಗುರುಗೋವಿಂದವಿಠಲರು
ಪಾಹಿಮಾಂ ಕಾರ್ತಿಕೇಯಾ | ಪಾರ್ವತಿಯ ಕುವರಾ ಪಾಹಿಮಾಂ ಕಾರ್ತಿಕೇಯಾ ಪ ಪಾಹಿ ಕರುಣಿಯೆ ಸುಬ್ರಹ್ಮಣ್ಯ ಅ ಸುಗುಣಾಭರಿತ ಶರಜಾ ಸಚ್ಚಿದಾನಂದ ಅಗಜೆಯ ಪ್ರಿಯ ತನುಜ ನಿಗಮ- ನಿತ್ಯ ಜಗೆದೊಡೆಯ ಪರಿಶುದ್ಧ ಪಾವನ ಮೃಗಧರನ ಸುತ ಸುಬ್ರಹ್ಮಣ್ಯ | ಪಾಹಿ | 1 ಬಾಲಾರ್ಕ ಕೋಟಿ ತೇಜ ನಿತ್ಯಾನಂದ ನೀಲಗ್ರೀವನ ಸುಧ್ವಜ ಖೂಳ ತಾರಕನೆಂಬ ಕಾಲ ಸುರಾಳಿಯಂಬುಧಿ ಚಂದ್ರ ವರಮುನಿ ಜಾಲವಂದಿತ ಸುಬ್ರಹ್ಮಣ್ಯ 2 ಭೂಸುರ ಪ್ರಿಯ ಸುಬ್ರಹ್ಮಣ್ಯ 3
--------------
ಬೆಳ್ಳೆ ದಾಸಪ್ಪಯ್ಯ
ಪಾಹಿಮಾಂ ಜಗದೀಶ ಭಕ್ತವಿಲಾಸ ಶ್ರೀ ಶ್ರೀನಿವಾಸನೆ ಹೇಳಲೊಶವಲ್ಲ ದೇವನೆ ಪ ಚಂಡಶಾಸಕ ಬಿರುದುವುಳ್ಳ ಪ್ರಚಂಡ ದೇವೋತ್ತುಂಗನೆ ಮದನ ಜನಕ ಕೋದಂಡಧರ ಶ್ರೀರಾಮನೆ 1 ವಿಕಟದಾನವ ಮೂಲ ಚ್ಛೇದನ ವಿಶ್ವರೂಪ ವಿನೋದನೆ 2 ಅಮಿತ ಮಹಿಮಾನಂದ ಹರನುತ ಕಮಲಸಂಭವ ನಯ್ಯನೆ ಸುಮನರಾದ ಸುಜನರಾ ಹೃದಯ ಕಮಲದಲಿ ನೀ ವಾಸನೆ 3 ಮಂಗಳಾಂಗ ವಿಹಂಗವಾಹನ ಮಾರಕೋಟಿ ಲಾವಣ್ಯನೆ ಅಂಗನಾಮಣಿ ಲಕುಮಿಪುರದಲಿ ಅಡಗಿಸಿಪ್ಪ ಶ್ರೀ ಲೋಲನೆ 4 ಶೌರಿ ಮಹಾಗುಣ ಶಾಂತನೆ ಕರುಣೆಸೆನ್ನನು ಕಾಯೊ ಬೇಗನೆ ವರದ `ಹೆನ್ನ ವಿಠ್ಠಲನೆ' 5
--------------
ಹೆನ್ನೆರಂಗದಾಸರು
ಪಾಹಿಮಾಂ ಪರಮೇಶ ಪಾಹಿಪನ್ನಗಭೂಷ ಪಾಹಿಕೈಲಾಸವಾಸ ಪ ಸ್ವಾಮಿ ಗಿರಿಜಾನಾಥ ಸಮರ ವಿಜಯ ತ್ರಿಣೇತ್ರ ಸುಜನ ವಿನುತ ಕಾಮಿತಾರ್ಥ ಪ್ರದಾತ ಕ್ಷೇಮತರ ಸುಚರಿತ್ರ ಸಾಮಗಜ ವದನ ತಾತರಾಮೇಶ ಕೇಶಪುನೀತ ಪ್ರಖ್ಯಾತ 1 ಕಾಲ ಭಾಳಾಕ್ಷಭಯ ಸಂಹಾರ ಜನಸಾರ ಶೂಲಧರ ಕರುಣಾಕರ ಶೀಲವರಗುಣ ಸುಂದರ ಹರಪಾಶ ಭಯವಶಂಕರ ಓಂಕಾರ 2 ಬಲಸಾಕಾರತ ವಿಶಾಲ ಏಕಮಯ ತ್ರಿಗುಣದಿಂದ ಖಿಲಲೋಕ ವಿಸೂತ್ರ ಜಾಲ ಸಾಕೆನ್ನ ಭವದಳಲ ಶೋಕವನು ನೀಕೇಳದೇಕೆ ಈ ಚೇಷ್ಟೆಬಹಳ ಕಾಲ ಮೂಕಾಂಬಿಕಾಂಬಲೋಲ3 ನಾಗವಾಹನ ನಮಿತನೆ ಯೋಗಮಾಯಾತೀತನೆ ಸಾಗರಾಂಬರದೊಡೆಯನೆ ಭಾಗವತ ಭಾಗಚಂದಿರಧರನೆ ಹರನೆ 4 ಧರಣಿಯೊಳಗೆ ವಿಶೇಷತರ ಗೌಜದೊಳುವಾಸ ವರಋಷಿ ಸ್ಥಾಪನೇಶ ಸರಸಕೀರ್ತಿ ವಿಲಾಸ ಸ್ಮರಹರ ಸುರಾಧ್ಯಕ್ಷ ದುರಳ ದಾನವ ವಿನಾಶ ದುರಿತಹರ ನಿರ್ದೋಶ ಧರಣಿ ಸುರಜನರಕ್ಷ ಕರಿಚರ್ಮಧರಮಹೇಶ ಉರಗರಾಜ ವಿಭೂಷವರ ಗುರು ವಿರೂಪಾಕ್ಷ ಪುರಮಥನ ಗೌತಮೇಶ 5
--------------
ಕವಿ ಪರಮದೇವದಾಸರು