ಒಟ್ಟು 1814 ಕಡೆಗಳಲ್ಲಿ , 99 ದಾಸರು , 1349 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವನಭೋಜನ ಊರ್ವಶಿ:ಇದೀಗ ಮನವು ಇಂದಿರಾಕ್ಷಿ ಇದೀಗ ಮನವು ಪ. ಮಧುಸೂದನ ತನ್ನ ಸದನದಿಂದಲಿ ಒಮ್ಮೆ ಒದಗಿ ಪಯಣಗೈದು ಪದುಳದಿ ಮಂಡಿಪ 1 ವಾಸುದೇವ ತಂಪಾಶುಗದಿಂದಾ- ಯಾಸವ ಬಿಡಿಸಿ ಸಂತೋಷಪಡಿಸುವಂತಿದೀಗ 2 ಭಾಗವತರು ಅನುರಾಗದಿ ಕೂಡಿ ಸ- ರಾಗದಿ ಯೋಗಾರೋಗಣೆಮಾಡುವದೀಗ 3 ಸತ್ಪಾತ್ರ ವಿಯೋಗ ಸು- ಕ್ಷೇತ್ರ ಸುಧಾಮಯ ಕೀರ್ತಿಯೆಂದಿನಿಸುವ 4 ತರುಗುಲ್ಮಾವಳಿ ಸುರಮುನಿಗಳು ಕಾಣೆ ಉರು ಪಾಷಾಣವೆಲ್ಲವು ಸಚ್ಚರಿತವು 5 ರಂಭೆ : ಪೋಗಿ ಬರುವ ವನಕ್ಕಾಗಿ ನಾಗವೇಣಿ ಲೇಸಾಗಿ ಬೇಗ ನಾವು ಪ. ಭಾಗವತಾದಿ ಸಮಾಗಮವಾದರೆ ಭಾಗ್ಯವಂತೆಯರ್ನಾವಾಗಿ 1 ಹರಬ್ರಹ್ಮಾದಿ ನಿರ್ಜರರಿಗಸಾಧ್ಯವು ಹರಿಪ್ರಸಾದವೆಂದು ಸಾಗಿ ಬೇಗ 2 ನಾರಿ ನಿನ್ನ ಉಪಕಾರ ಮರೆಯೆ ನಾ ಭೂರಿ ಪುಣ್ಯವಶಳಾಗಿ 3 ಕಾಣದಿರಲು ಯೆನ್ನ ಪ್ರಾಣ ನಿಲ್ಲದು ಕಾಣೆ ಶ್ರೀನಿವಾಸನ ಭೇಟಿಗಾಗಿ 4 ಊರ್ವಶಿ :ಅಭಿಷೇಕವನು ಗೈದರಾಗ ಮನಸಿಗನುರಾಗ ಪ. ವಿಭುಧೋತ್ತಮರೆಲ್ಲರು ಕೂಡುತ್ತ ಶುಭ ಋಗ್ವೇದೋಕ್ತದಿ ನಲಿಯುತ್ತ ಅ.ಪ. ಕ್ಷೀರಾರ್ಣವದೊಳಗಾಳಿದವಂಗೆ ಕ್ಷೀರಾಬ್ಧಿಯ ದುಹಿತೆಯ ಗಂಡನಿಗೆ ನೀರಜನಾಭನ ನಿಖಿಲ ಚರಾಚರ ಪೂರಿತ ಕಲ್ಮಷದೊರಗೆ ಕ್ಷೀರದ1 ಚದುರತನದಿ ಗೊಲ್ಲರೊಳಾಡಿದಗೆ ದಧಿಪಾಲ್ ಬೆಣ್ಣೆಯ ಸವಿದುಂಡವಗೆ ಮದನಜನಕ ಮಹಿಮಾಂಬುಧಿ ಕರುಣಾ- ಸ್ಪದ ಸತ್ಯಾತ್ಮ ಸನಾಥಗೆ ದಧಿಯ 2 ಶ್ರುತಿಸ್ಮøತಿತತಿನುತ ರತಿಪತಿಪಿತಗೆ ಅತುಲಿತಗುಣ ಸೂನೃತಭಾಷಿತಗೆ ದಿತಿಸುತಹತ ಶೋಭಿತ ಮೂರುತಿ ಶಾ- ಶ್ವತವಾಶ್ರಿತ ವಾಂಛಿತಗೆ ಘೃತವ 3 ಮಧುಸೂದನ ಮಂದರಗಿರಿಧರೆಗೆ ಮೃದುವಾಕ್ಯಗೆ ಮಂಗಲಾಂಗನಿಗೆ ಪದಮಳಾಕ್ಷ ಪರಾತ್ಪರವಸ್ತು ನೀ- ರದ ಶ್ಯಾಮಲ ನಿತ್ಯಾತ್ಮಗೆ ಮಧುವಿನ 4 ಕರುಣಾಕರ ಕಮಲಜತಾತನಿಗೆ ದುರುಳ ಸುಬಾಹು ತಾಟಕಿ ಮರ್ದನಗೆ ನರಕಾಂತಕ ನಾರಾಯಣ ಸಕಲಾ- ಮರಪೂಜಿತಗೆ ಸರ್ವಾತ್ಮಗೆ ಸಕ್ಕರೆ 5 ಎಳೆತುಳಸೀವನಮಾಲಾಧರಗೆ ಫಲದಾಯಕ ಪರಬ್ರಹ್ಮರೂಪನಿಗೆ ಕಲುಷರಹಿತ ನಿರ್ಮಲಚಾರಿತ್ರ್ಯ ನಿ- ಶ್ಚಲಿತಾನಂದ ನಿತ್ಯನಿಗಳ ನೀರಿನ 6 ಕನಕಾಂಬರಧರ ಶೋಭತನಿಂಗೆ ಮನಕಾನಂದವ ಪಡಿಸುವನಿಂಗೆ ಚಿನಮಯ ಪರಿಪೂರ್ಣ ವಿಶ್ವಂಭರ ಜನಕಜಾ ವರನಿಗೆ ಕನಕಾನನೀಕದ 7 * * * ವೆಂಕಟೇಶ ಕಣ್ಣ ಮುಂದೆ ನಿಂತಿದಂತಿದೆ ಪ. ಶಿರದೊಳು ರತ್ನಕಿರೀಟದ ಝಳಕ ಮೆರೆವ ಲಲಾಟದಿ ಕಸ್ತೂರಿತಿಲಕ ವರ ಕರ್ಣಕುಂಡಲಗಳ ಮಯಕನಕ ಚೆಲುವ ಚರಾಚರಭರಿತಜ ಜನಕ1 ಕಂಬುಕಂಠದಿ ಕೌಸ್ತುಭವನಮಾಲ ಇಂಬಾಗಿಹ ಭೂಷಣ ಶುಭಲೋಲ ಸಂಭ್ರಮಿಸುವ ಮೋಹನ ಗುಣಶೀಲ ಅಂಬುಜನಾಭಾಶ್ರಿತಜನಪಾಲ 2 ಶಂಖಸುದರ್ಶನಗದಾಪದ್ಮ ಧಾರಿ ಕಂಕಣವೇಣುವಡ್ಯಾಣವಿಹಾರಿ ಬಿಂಕದ ಬಿರುದಾಂಕಿತ ಕಂಸಾರಿ ಶಂಕೆಯಿಲ್ಲದ ಭೂಷಣಾಲಂಕಾರಿ 3 ಎಡಬಲದಲಿ ಮಡದಿಯರ ವಿಲಾಸ ಕಡುಬೆಡಗಿನ ಪೀತಾಂಬರಭೂಷ ಕಡಗ ಕಾಲಗೆಜ್ಜೆ ಅಂದುಗೆಯಿಟ್ಟು ತೋಷ ಒಡೆಯ ಶ್ರೀನಾರಾಯಣ ಸರ್ವೇಶ 4 ಈ ರೀತಿಯಲಿ ಶೃಂಗಾರನಾಗುತ್ತ ಭೂರಿಭಕ್ತರ ಕಣ್ಮನಕೆ ತೋರುತ್ತ ನಾರದಾದಿ ಮುನಿವರ ಗೋಚರದ ಚಾರುಚರಣವನು ತೋರಿಸಿ ಪೊರೆದ 5 * * * ಆರೋಗಣೆಯ ಗೈದನು ಶ್ರೀರಂಗ ಸಾರಸವಾದ ಸಮಸ್ತ ವಸ್ತುಗಳ ಪ. ಧೂಪದೀಪನೈವೇದ್ಯವಿಧಾನ ಶ್ರೀಪರಮಾತ್ಮ ಮಂಗಲಗುಣಪೂರ್ಣ 1 ಸುರತರುವಿನ ಸೌಭಾಗ್ಯದ ತೆರನ ಮರಕತಮಯ ಹರಿವಾಣದೊಳಿದನ 2 ಭಕುತರ ಸೌಖ್ಯವಿನ್ನೇನೆಂಬುವೆನು ಶಕುತ ಶ್ರೀಮಾಧವ ನಿರತ ತೋರುವನು 3 * * * ಆರತಿ ಶ್ರೀನಿವಾಸಂ ಶ್ರೀವೆಂಕಟೇಶಂ ಗಾರತಿ ಶ್ರೀನಿವಾಸಂ ಪ. ಮಂಗಲಾಂಗ ನರಸಿಂಗ ಮನೋಹರ ರಂಗರಾಯ ಶ್ರೀಗಂಗಾಜನಕಗೆ 1 ಮಾಧವ ಮಧುಹರ ಮೋದಭರಿತ ಜಗ- ದಾಧಾರ ವೇಣುನಾದವಿನೋದಗೆ 2 ನಿತ್ಯನಿರಂಜನ ಸತ್ಯಸ್ವರೂಪಗೆ ಪ್ರತ್ಯಗಾತ್ಮಪರತತ್ತ್ವಸ್ವರೂಪಗೆ3 ಭೋಜನವ ಗೈದರು ಪ. ಮೂಜಗತ್ಪತಿಯ ಪ್ರಸಾದಪ್ರತಾಪದಿ ನೈಜವಾಗಿಹ ಪಾಪ ಮಾಜಿ ಹೋಗಾಡುತ್ತ1 ಜಿಹ್ವೆಗೆ ರುಚಿಕರವಪ್ಪುದ ಮಿಗಿಲಾದ ಶಾಕಪಾಕಗಳನ್ನು ಪಾತ್ರದಿ ತೆಗೆದು ಸಂತೋಷ ಬೆಡಗುಗಳ ತೋರುತ್ತ 2 ಹಪ್ಪಳ ಸಂಡಿಗೆಯು ತಪ್ಪು ಒಗರ ಶಾಲ್ಯನ್ನಗಳೆಲ್ಲವ ತಪ್ಪದೆ ಸವಿದು ಬಾಯ್ ಚಪ್ಪರಿಸಿದರಾಗ 3 ಹೋಳಿಗೆಯು ಕಾಯದ ಜಡಗಳು ಮಾಯಕವಾದವು ಆಯುರಾರೋಗ್ಯ ಸುಶ್ರೇಯ ಕಾರಣವಾಯ್ತು 4 ಸುರರು ಉರಗ ಮಾನವರೆಲ್ಲರೂ ದೊರೆಯ ಪ್ರಸಾದವು ದೊರಕಿತು ಎನುತ ವಿ- ಸ್ತರವಾದ ತೋಷದಿ ಭರದಿಂದೊದಗುತಲಿ 5 ಭೋಗವಿನ್ನಂತೆಯಿಲ್ಲಿ ರೋಗ ದುರಿತವೆಲ್ಲ ನೀಗಿತು ಎನುತನು- ರಾಗದಿ ಸವಿದುಂಡು ತೇಗಿದರೆಲ್ಲರು 6 ಪುಣ್ಯ-ಫಲದಿಂದ ದೊರಕಿತಲ್ಲೇ ನಲವಿಂದಾನತರು ಕೈ ತೊಳೆದ ನೀರಿನೊಳಿದ್ದ ಜಲಜಂತು ಸಹವು ನಿರ್ಮಲಿನವಾದವು ಕಾಣೆ 7 ಪಾವನವಾದರು ಹಿಂಡು ಉದ್ದಂಡ ಮೃಗಗಳೆಲ್ಲ &ಟಿb
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ವರವ ಕೊಡೆ ತಾಯೆ ವರವ ಕೊಡೆ ಪ. ಶರಧಿಯ ಕನ್ನೆ ನೀ ಕೇಳೈ ಸಂಪನ್ನಳೆ ಸೆರಗೊಡ್ಡಿ ಬೇಡುವೆನಮ್ಮ ವರವ ಕೊಡೆ ನೆರೆ ನಂಬಿದೆನು ನಿನ್ನ ಚರಣಕಮಲವನು ಪರಿಹರಿಸೆಮ್ಮ ದಾರಿದ್ರ್ಯ ಕಷ್ಟವ ತಾಯೆ1 ಹೊಳೆವಂಥ ಅರಸಿನ ಹೊಳೆವ ಕರಿಯ ಮಣಿ ಸ್ಥಿರವಾಗಿ ಕಟ್ಟುವಂಥ ವರವ ಕೊಡೆ ತಾಳೋಲೆ ಹೊನ್ನೋಲೆ ತೊಳೆದೊಯ್ದ ಬಿಚ್ಚೋಲೆ ಯಾವಾಗಲಿರುವಂಥ ವರವ ಕೊಡೆ 2 ಬಾಗಿಲ ತೋರಣ ಮದುವೆ ಮುಂಜಿ ನಾಮಕರಣ ಯಾವಾಗಲಾಗುವಂಥ ವರವ ಕೊಡೆ ಬಂಧುಬಳಗ ಹೆಚ್ಚಿ ಹೆಸರುಳ್ಳ ಮನೆ ಕಟ್ಟಿ ಉಂಡಿಟ್ಟಿಡುವಂಥ ವರವ ಕೊಡೆ 3 ಹಾಲ ಕರೆಯುವ ಮೇಲಾದ ಸರಳೆಮ್ಮೆ ಸಾಲಾಗಿ ಕಟ್ಟುವಂಥ ವರವ ಕೊಡೆ ಕಂಡಕಂಡವರಿಗೆ ಕರೆದು ಮೃಷ್ಟಾನ್ನವ ತಿಳಿ ನೀರು ಕೊಡುವಂಥ ವರವ ಕೊಡೆ 4 ಲಕ್ಷ್ಮೀನಾರಾಯಣನ ವಕ್ಷಸ್ಥಳದಲ್ಲಿ ಲಕ್ಷ್ಮಣವಾಗಿರುವಂಥ ಮಹಾಲಕ್ಷ್ಮಿ ಅಷ್ಟೈಶ್ವರ್ಯವು ಪುತ್ರಸಂತಾನವ ಕೊಟ್ಟು ರಕ್ಷಿಸುವವಮ್ಮ ವರವ ಕೊಡೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ವಲ್ಲೀದೇವಿಯ ವಲ್ಲಭನೆ ಬಲ್ಲಿದ ಭಕ್ತರ ಸುಲ್ಲಭನೆ ಪ. ಸಲ್ಲಲಿತ ಪಾದಪಲ್ಲವ ಭಜಿಸುವ- ರೆಲ್ಲರ ಮನಸಿನೊಳುಲ್ಲಸನೆಅ.ಪ. ವೃಂದಾರಕಮುನಿವಂದಿತನೆ ಕಂದರ್ಪಾಮಿತಸುಂದರನೆ ಸ್ಕಂದನೆ ಸಚ್ಚಿದಾನಂದನೆ ಪಾರ್ವತೀ- ನಂದನ ಸದ್ಗುಣಮಂದಿರನೆ 1 ತಾರಕದೈತ್ಯ ಸಂಹಾರಕನೆ ಸೇರಿದ ಭಕ್ತೋದ್ಧಾರಕನೆ ಮಾರಾರಿಯ ಸುಕುಮಾರನೆ ಧೀರನೆ ಚಾರು ಮಯೂರ ತುರಂಗಮನೆ2 ಲಕ್ಷುಮಿನಾರಾಯಣ ಪ್ರಿಯನೆ ರಕ್ಕಸರಿಂಗತಿದುಃಖದನೆ ಕುಕ್ಕುಟವಜ್ರಾಭಯಶಕ್ತಿಹಸ್ತನೆ ಪ್ರಖ್ಯಾತ ಪಾವಂಜಾಖ್ಯ ಪುರವರನೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ವಾಣಿ ವರದೆ ಶಾರದೆ ನಿನ್ನ ಚರಣವ ಸೇರಿದೆ ಪ. ಎನ್ನ ನಾಲಿಗೆಯೊಳ್ನೆಲಸು ಹರಿಲೀಲೆಯನ್ನು ನುಡಿಸು 1 ಅತಿರೋಹಿತ ವಿಜ್ಞಾನಿ ವೇದವ್ಯೂ ಹಕಭಿಮಾನಿ 2 ಲಕ್ಷ್ಮೀನಾರಾಯಣನ ಸೊಸೆ ಸರ್ವಾಧಾರ ಭಕ್ತಿವಿಲಾಸೆ3
--------------
ತುಪಾಕಿ ವೆಂಕಟರಮಣಾಚಾರ್ಯ
ವಾದಿಗಳೆದೆಶೂಲಾ | ಗುರುವೆ | ವಾದಿರಾಜ ಶೀಲಾ ಪ ಬೋಧಿಸಿ ದಶಮತಿ | ಬೋಧರ ಶಾಸ್ತ್ರವಐದಿಸು ಸದ್ಗತಿ | ಯಾದವೇಶನ ಪ್ರೀತಿ ಅ.ಪ. ಸೋದೆ ಪುರದಲಿರುವಾ | ವೃಂದಾವನಮೋದದಿ ದರ್ಶಿಸುವಾ ||ಸಾಧುಗಳಘನೀಗಿ | ವೇದವಿನುತ ಹರಿಪಾದವ ತೋರಿಸಿ | ಮೋದವ ಕೊಡಿಸುವ 1 ಧವಳಾಭಿದ ಗಂಗಾ | ಅಲ್ಯುದುಭವಿಸಿರ್ಪುದು ತುಂಗಾ ||ಸವನ ಮೂರಲಿ ಸ್ನಾನ ಕವಿದಿಹ ಅಜ್ಞಾನಸ್ರವಿಸಿ ಶ್ರೀಹರಿ ಜ್ಞಾನ | ಪ್ರವಹವ ಸೃಜಿಸುಪುದು 2 ಪಂಚ ವೃಂದಾವನದೀ | ಇಹ ಹರಿಪಂಚ ಸುರೂಪದಲೀ ||ಅಂಚೆಗಮನ ಹರಿ | ಮಂಚಯೋಗ್ಯ ಮುಖಪಂಚವಿಂಶತಿ ಸುರ | ವಾಂಛಿತ ಪಡೆವರು 3 ವಾಗೀಶ ಕರಜಾತಾ | ಸೇವಿತನಾರಾಯಣ ಭೂತ ||ಭೋಗಿ ಪುರೀಶನ | ರೋಗವ ಹರಿಸಿದೆಆಗಮಜ್ಞ ಗುರು | ನಾಗಶಯನ ಪ್ರಿಯ 4 ಬದರಿಯೊಳಿದ್ದವನಾ | ತರಿಸಿದಿವಿಧಿನುತ ತ್ರಿವಿಕ್ರಮನಾ ||ಮುದದಿ ನಿಲ್ಲಿಸುತ | ವಿಧವಿಧ ವೈಭವವಿಧಿಸೆ ನಿನ್ನಯ ಜನ | ಒದಗಿ ಚರಿಸುವರು 5 ಮೋದ ||ಸುಜನ ಸುರದ್ರುಮ | ಭಜಿಸೆ ಹರಿಸಿ ಭ್ರಮಅಜ ಜನಕನ ತೋರ್ವೆ || ಋಜು ಲಾತವ್ಯರೆ 4 ಪ್ರಾಕೃತ ಪದಪದ್ಯಾ | ರಚಿಸುತಅ - ಪ್ರಾಕೃತ ನಿರವದ್ಯಾ ||ಅ - ವ್ಯಾಕೃತ ಗುರು ಗೋವಿಂದ ವಿಠ್ಠಲಸ್ವೀಕೃತ ನಿಜ ಭಕ್ತ | ಪ್ರಾಕೃತ ಕಳೆವಂಥ 5
--------------
ಗುರುಗೋವಿಂದವಿಠಲರು
ವಾದಿಸಿ ಗತಿಹ್ಯದೇನಣ್ಣ ನಿಜ ಹಾದಿತಿಳಿದು ನೋಡೆಲೊ ಜಾಣ ಪ ವಾದ ಭೇದ ನೀಗಿ ಮಾಧವನ ಮಹ ಪಾದ ಮಹಿಮೆಯನು ಕಾಣಣ್ಣ ಅ.ಪ ವೇದಕೆ ನಿಲುಕದ ಮಾತಣ್ಣ ನಿನ್ನ ವಾದಕೆ ಸುಲಭರುತಿಹ್ಯದೇನ ವೇದಸ್ಮøತಿಯ ನಿಜಬೋಧನರಿದು ಯಮ ಭವ ತುಳಿಯಣ್ಣ 1 ವಾಸನೆ ಹಸನ ಮಾಡಣ್ಣ ಮನ ದಾಸೆ ದ್ವೇಷಗಳ ಕಡಿಯಣ್ಣ ಶ್ರೀಶನ ದಾಸರ ವಾಸದಿರ್ದು ಅನು ಪಾದ ಭಜಿಸಣ್ಣ2 ಹಮ್ಮು ಚುಮ್ಮುಗುಣ ನೀಗಣ್ಣ ಕಾಯ ಕರ್ಮ ಕಡಿದು ನಿರ್ಮಲಾಗಣ್ಣ ನಿರ್ಮಲಾತ್ಮ ಪರಬ್ರಹ್ಮ ಶ್ರೀರಾಮನ ಮರ್ಮ ತಿಳಿದು ಮುಕ್ತಿ ಕೂಡಣ್ಣ 3
--------------
ರಾಮದಾಸರು
ವಾಯ ದೇವರ ಮಹಿಮಾ ವರ್ಣನೆ ಮೂರವತಾರ , ಷಟ್ಪದಿ ಶ್ರೀರಮೇಶ ವಿಧೀರ ವಿಪವೃತ್ರಾರಿ ವಿನುತ ಸರ್ವಾಧಾರ ನಿರುಪಮನೆ ಸ್ವತಂತ್ರಗುಣಾರ್ಣವ ಪ್ರಭುವೇ | ಪತಿ ಓಂಕಾರ ವ್ಯಾಹೃತಿ ವಾಚ್ಯ ಸರ್ವಪ್ರೇರಕ ಬಲಸುಭಾಸಕ ಹರಿಯೆ ವಾಗ್ರಸನೆ ನಮಿಪೆ 1 ಆಪ್ತನೆಂದರೆ ಪ್ರಾಣ ಸರಿ ಪರಮಾಪ್ತ ಹರಿಯ ಯಥಾರ್ಥಜ್ಞಾನ ಪ್ರಾಪ್ತಿ ಮಾಡಿಸಿ ವಿಷ್ಣು ಕರುಣವ ಕೊಡಿಸುವನು ತಾನು | ಆಪ್ತ ನೆನ್ನೆಯಥಾರ್ಥ ಪೇಳುವ ಮತ್ತೆ ನಿಶ್ಚಯ ಜ್ಞಾನವುಳ್ಳವ ಶಕ್ತ ಕರುಣ ಪಟುತ್ವಯುತನಿರ್ವಂಚನೆಗಳಿಂದ 2 ಶಿಷ್ಯ ವಾತ್ಸಲ್ಯ ಯುತ ಗುರುಸರಿ ವಿಶ್ವ ಜನಕನ ಪ್ರಥಮ ಭಕ್ತಶ್ವಾಸಗಿಂತಲು ಬೇರೆಯವನಿಲ್ಲ ಪವಮಾನನವ | ದೋಷ ಸಂಶಯ ರಹಿತ ಹರಿ ವಿಶ್ವಾಸ ಪಾತ್ರ ವಿಶೇಷ ಮಹಿಮಸುರಾಶ್ರಯ ನಿವನು ವಂಶನೆ ನಿಸುವ ಸೂತ್ರಗಾನಮಿಪೆ 3 ಯಾವ ಜ್ಞಾನ ಬಲ ಸ್ವರೂಪ ಸುದೇವ ಕ್ರೀಡಾದಿ ಗುಣಯುತ ಭವನಾವಿಕ ಪ್ರಭು ವಾಯುವಿನಗುಣ ಚರಿತೆ ವೃಂದಗಳ | ಪಾವನ ಬಳಿತ್ಥಾದಿ ಶೃತಿಗಳು ಸಾವಧಾನದಿ ಪೊಗಳುವವೊ ಆಭಾವಿ ಬ್ರಹ್ಮನ ಮೂಲ ರೂಪವುಜ್ಞಾನ ಬಲಮಯವು 4 ಮೂಲ ರಾಮಾಯಣ ವಿಶೇಷವ ಪೇಳುವ ಹನುಮನೇ ಪ್ರಥಮ ನಿಹಖೂಳ ದಿತಿ ಜನ ಸೈನ್ಯ ಮಾರಕ ಭೀಮ ನೆರಡೆನ್ನಿ | ಶೀಲ ಸಖಗಳ ನೀವ ಶಾಸ್ತ್ರವ ಪಾಲಿಸಿದ ಗುರು ಮಧ್ವರಾಯರೆ ಮೂಲ ಮುಖ್ಯ ಪ್ರಾಣ ದೇವನ ಮೂರನೆಯ ರೂಪ 5 ಪ್ರಾಣ ನೀತ್ರಯ ರೂಪಗಳು ಸಮವೆನ್ನುವದು ಸರ್ವ ವಿಷಯದಿ ಮುಕ್ಕಣ ಪ್ರಮುಖರ ಜ್ಞಾನ ದಾತೃವಿಗಿನ್ನು ಸಮವುಂಟೆ | ಜ್ಞಾನ ವಾಚಕ ಹನುಮ ಶಬ್ದವು ಪೂರ್ಣ ಹರಿ ಸಂದೇಶವೈದನು ಜಾನಕಿಗೆ ನಿರ್ದೋಷ ವಾಕ್ಯಗಳನ್ನು ಧೀಮಂತ 6 ಪಂಚರಾತ್ರಾಗಮ ಪುರಾಣ ವಿರಂಚಿ ಜನಕನ ತೋರ್ಪವೇದವು ವಂಚಿಸದ ಇತಿಹಾಸಗಳು ಕೂಡುತಲಿ ಸಪ್ತಗಳ | ಮಿಂಚಿಸುತ ಸುಜ್ಞಾನ ಪಾಪದ ಸಂಚಯ ತರಿವ ಕಾರಣದಿ ಬಲಿವಂಚಕನ ಭಕ್ತರು ಕರೆಯುವರು ಸಪ್ತಶಿವ ವೆಂದು7 ಶಾಸ್ತ್ರ ವಚನಕೆ ಮಾತೃ ವೆಂಬರು ಸಪ್ತ್ರ ಶಿವಕರ ಮಾತೃಗಳ ಧರಿಸಿಪ್ಪ ನಿವನೆಂದು | ಖ್ಯಾತನಾಗಿಹ ಭೀಮ ನಾಮದಿ ತೀರ್ಥವೆನ್ನಲು ಶಾಸ್ತ್ರವಿದಿತವು ಮತ್ತೆ ಮಧುವೆನೆ ಸುಖವು ಮುಕ್ತಿಯನೀವ ಶಾಸ್ತ್ರವನು 8 ಇತ್ತ ದೇವನೆ ಮಧ್ವನೆಂಬರು ಸುತ್ತುತೀತ್ರಯ ನಾಮದರ್ಥವ ನಿತ್ಯ ತಿಳಿಯುತ ಪಠಿಸಿ ಪಾಡಲುವಾಯು ದೇವನನು | ಭಕ್ತ ಬಾಂಧವನಾತ ವಲಿಯುತ ತತ್ವವೇತ್ತನ ಮಾಳ್ವ ನಿಶ್ಚಯ ಭೃತ್ಯನಾನೆಂತೆಂದು ಮಧ್ವರ ಸಾರಿ ಭಜಿಸುತಿರಿ9 ಪ್ರೌಢ ಮಧ್ವಗೆ ಪೂರ್ಣ ಪ್ರಜ್ಞನೆ ಈತ ಶ್ರುತಿ ಸಿದ್ದ | ಬೀಡು ಮಾಡಿಹ ವಿದ್ಯೆ ನೂಕುತ ತೊಂಡ ನೆಂದಿವರಡಿಗೆ ಬೀಳಲು ಪಾಂಡುರಂಗನ ಬಿಚ್ಚಿ ತೋರುವ ಗೋ ಸಮುದ್ರದಲಿ10 ಏನ ಪೇಳಲಿ ಏನಪೇಳಲಿ ಜ್ಞಾನನಿಧಿ ಸರ್ವಜ್ಞ ಗುರುವರ ತಾನು ಗೈದ ಮಹೋಪಕಾರವ ಮುಕ್ತಿಯೋಗ್ಯರಿಗೆ | ಜ್ಞಾನ ಬಾಹುದೆ ಬಿಟ್ಟರೀತನ ಶೂನ್ಯವೆ ಸರಿ ಎಲ್ಲ ಆತಗೆ ಮನ್ನಿಸುವನೆ ಅನನ್ಯವನು ಹರಿ ಶರಣು ಆಚಾರ್ಯ 11 ಈತನೇ ಆನಂದ ತೀರ್ಥನು ಈತನೇ ಆಚಾರ್ಯ ನಿಶ್ಚಯ ಈತನೇ ಸರಿಮಾತರಿಶ್ವನು ವಾಯುವಿನರೂಪ | ಈತ ಚರಿಸುವ ಶಾಸ್ತ್ರವ್ಯೂಹದಿ ದೈತ್ಯರಿಂದಾಚ್ಛಾದಿತ ಗುಣಯುತ ಆತ್ಮಪೂರ್ಣಾನಂದ ದೇವನ ಶಾಸ್ತ್ರಮಥಿಸುತಲಿ 12 ಸಾರ ವೃಂದಕ್ಕೆ ಚುಚ್ಚುವನು ದುರ್ವಾದಿ ಮತಗಳ ಕೆಚ್ಚೆದೆಯವನು ಗರ್ಜಿಸುತವೇದೋಕ್ತವಾಕ್ಯಗಳ | ಹೆಚ್ಚು ಹೆಚ್ಚೇ ಸರಿಯು ವಿಷ್ಣುವು ಸ್ವಚ್ಛ ಪೂರ್ಣಾನಂದ ಸುಖಮಯ ಪೃಚ್ಛ ಪರಿವಾರ ಸರಿ ವಿಧ್ಯಾದಿಗಳು ಹರಿಗೆಂದು 13 ಕಚ್ಚಿಲತೆಗಳ ಬಿಸುಡುವಂದದಿ ನುಚ್ಚು ಮಾಡುವ ಪ್ರಶ್ನೆನೀಕವ ಅಚ್ಚನಾರಾಯಣನೆ ಪ್ರೇರಕ ನಿವಗೆ ಜನಕನಿಹ | ಮೆಚ್ಚು ಮಗ ಶ್ರೀ ಲಕ್ಷೀ ದೇವಿಗೆ ರಚ್ಚೆತನುವನು ಕಿತ್ತುವೋಡಿಸಿ ಹೆಚ್ಚಿಸುವ ಸುಜ್ಞಾನ ದೀಪವ ಹರಿಯ ಪ್ರಧಮಾಂಗ14 ಕೊಟ್ಟು ಉಂಗುರ ಸುಟ್ಟುಲಂಕೆಯ ಬಿಟ್ಟು ಕಾಮವ ಮೆಟ್ಟಿಖಳರನು ಜಟ್ಟಿ ಹನುಮನು ಪಟ್ಟ ಪುತ್ರನ ಪದವಿ ಸಾಧಿಸಿದ | ಹುಟ್ಟಿ ಕುಂತಿಲಿ ಕುಟ್ಟಿ ಕುರುಕುಲ ಇಟ್ಟು ಮನದಲಿ ದಿಟ್ಟ ಕೃಷ್ಣನ ಅಟ್ಟಿ ಹಾಸದಿ ಮೆರೆದ ಭೀಮನು ಜ್ಞಾನ ಭಾಸ್ಕರನು15 ಹುಟ್ಟು ಸಾವಿನ ಕಟ್ಟು ಬಿಡಿಸಲು ಘಟ್ಟ ದಡಿಯಲಿ ಭಟ್ಟನೆನಿಸುತ ಬಟ್ಟೆ ತವಕದಿ ಭ್ರಷ್ಟದಸ್ಯುಗಳ | ಕೆಟ್ಟ ಮತಗಳ ಸುಟ್ಟು ವಾದದಿ ಸೂತ್ರ ಭಾಷ್ಯವ ನೆಟ್ಟ ಸಂತರ ಮನದಿ ವಿಷ್ಣುವ ಶ್ರೇಷ್ಠಗುರುಮಧ್ವ16 ಏಕೆ ಭಯ ನಮಗಿನ್ನು ನಿರಯದ ಏಕೆ ಸಂಶಯ ಮುಕ್ತಿ ವಿಷಯದಿ ಏಕೆ ಕಳವಳ ಮಧ್ವರಾಯರ ಶಾಸ್ತ್ರ ಪೀಯೂಷ | ಜೋಕೆಯಿಂ ಪ್ರತಿದಿನವು ಸೇವಿಸೆ ಶ್ರೀಕಳತ್ರನು ಕೈಯ ಬಿಡುವನೆ ನಾಕಪತಿಯಿಂಬಿಟ್ಟು ಸಲಹುವ ಶಾಸ್ತ್ರಸಿದ್ಧವಿದು 17 ಹೆಚ್ಚು ಮಾತೇಕಿನ್ನು ಹರಿಮನ ಮೆಚ್ಚುಯೆನಿಸಿಹ ಮಧ್ವರಾಯರು ಬಿಚ್ಚಿತೋರಿದ ತೆರದಿ ಶೃತಿಗಳ ಭಜಿಸಿಖಳ ಜನಕೆ | ಬಚ್ಚಿಡುತ ವಿಜ್ಞಾನ ಮರ್ಮವ ನುಚ್ಚು ನೂಕುತ ದುರ್ಮತಕಿಡಿರಿ ಕಿಚ್ಚು ಕಮಲೇಶ ನೊಲಿಮೆಗೆ ಬೇರೊಂದು ಪಥವಿಲ್ಲ 18 ನಮ್ಮಹಿರಿಯರ ಖಿನ್ನನುಡಿಗಳ ನೊಮ್ಮನದಿ ನೀವೆಲ್ಲ ಕೇಳಿರಿ ರಮ್ಮೆಯರಸಗೆ ಸಮ್ಮತದ ಸಚ್ಛಾಸ್ತ್ರದರ್ಪಣವ | ಹೆಮ್ಮೆಯಿಂದಲಿ ಕೊಟ್ಟು ಬಂದೆವು ಒಮ್ಮೆಯಾದರು ನೋಡುವರೆ ಈ ನಮ್ಮ ಸಂತತಿ ಹಾ ಹರಿ ಹರೀಯೆಂಬ ಕ್ರಾಂತಿಯುತ19 ಉಣ್ಣಿರುಣ್ಣಿರಿ ಮಧ್ವಕಂದರೆ ಭವ ಹುಣ್ಣುವಳಿಯಿರಿ ಅಣ್ಣ ಪ್ರಾಣನದಯವ ಯಾಚಿಸಿಘನ್ನ ಶಾಸ್ತ್ರಾನ್ನ | ಅನ್ನ ಶೃತಿಗಳು ವಿವಿಧ ಸ್ಮøತಿಪ ಕ್ವಾನ್ನ ಪಾಯಸ ಗೀತೆ ಭಕ್ಷ್ಯಗಳೆನ್ನಿ ಬಗೆ ಬಗೆ ಸರ್ವ ಮೂಲವ ಸೂತ್ರಗಳೆ ಸಾರು 20 ತುಪ್ಪವೆನ್ನಿರಿ ನ್ಯಾಯ ಸುಧೆಯನು ಗೊಪ್ಪರಾಜರ ಗ್ರಂಥ ಹಲ್ಪವು ಅಪ್ಪರಾಯರ ವಾಣಿ ಕ್ಷೀರವು ದಾಸ ಸಾಹಿತ್ಯ | ತಪ್ಪದೆಲೆ ತಿಂಬಂಥ ತಿಂಡಿಯು ಚಪ್ಪರಿಸಿ ಭಾರತದ ಕೂಟನು ವಪ್ಪುವನು ಶ್ರೀ ಕೃಷ್ಣ ದೇವನು ಭಕ್ತ ನುಣ್ಣಲಿವ 21 ಎಂತು ಪೊಗಳಲಿ ನಿಮ್ಮ ಗುರುವರ ಹಂತ ಸುರಗಣ ವೆಲ್ಲ ನಿಮ್ಮಡಿ ನಿಂತು ಪಡೆದರು ಜ್ಞಾನ ಪ್ರಾತರ್ನಾಮಕನೆಶರಣು | ಕಂತೆ ಮತಗಳ ನಾಶಗೈದನ ನಂತ ಮಹಿಮನೆ ದೀನ ನಾನಿಹೆ ಕುಂತಿ ನಂದನ ನೀನೆ ತಿಳಸೈ ಸಕಲ ಶಾಸ್ತ್ರಾರ್ಥ 22 ಮೂರ್ತಳೆನಿಸುವ ಚಂದ್ರಮಾನಿನಿನಾಥ ಸೂರ್ಯ ನೊಳ್ ಆದಿತ್ಯ ನಾಮದಿ ನಿಂತು ದಿಕ್ಪತಿಗಳಿಗೆ ಶಕ್ತಿಗಳ | ಇತ್ತು ಸೃಷ್ಠಿಯ ಕಾರ್ಯ ವೆಸಗುವೆ ಉತ್ತರಾಯಣ ಪಗಲು ಮಾನಿಯೆ- ನಿತ್ಯ ಪ್ರೇರಿತ ನೀಪ್ರಜಾಪತಿನಾಮ ಹರಿಯಿಂದ 23 ಖ್ಯಾತ ಮೂರ್ತಾ ಮೂರ್ತ ಧಾರಕೆ ತತ್ವಪತಿಗಳ ಪೋಷತನುವಲಿ ಮೃತ್ಯುಹಾಗಶನಾಪಿಪಾಸಾಪಾನ ನಾಮಗಳ | ಎತ್ತಿ ನಡಿಸುವೆ ದೇಹ ಕಾರ್ಯವ್ರಾತ ಬಿಡಲೇನೊಂದು ನಡೆಯದು ಮಾತರಿಶ್ವನೆ ನಿಧಿಗು ಆರ್ಯುರ್ದಾತ ನೆನಿಸಿರ್ಪೆ 24 ಅನ್ನ ವಿಧಿಯಿಂ ಕೊಂಬೆ ಸಮಸರಿ ಯನ್ನ ಬ್ರಹ್ಮಗೆ ಜೀವ ಗಣತಾವುಣ್ಣಲಾರರು ನಿನ್ನ ಬಿಡೆ ಪ್ರಾಣದಿ ಪಂಚಕನೆ | ಸ್ವಪ್ನ ನಿದ್ರಾ ಸಮಯದೊಳ್ ಹರಿಯನ್ನು ಕೂಡಿರೆ ಕರಣಪರು ಘನಯಜ್ಞ ನಡಿಸಿ ಸರ್ಮರ್ಪಿಸುವೆ ನೀನೊಬ್ಬ ದೇವನಿಗೆ 25 ನಿನ್ನ ನಂಬಿದ ಭಕ್ತನಿಗೆ ಭವ ಹುಣ್ಣು ಮುಟ್ಟದು ವಿಷ್ಣು ವಲಿಯುತ ಮನ್ನಿಸುವ ಹರಿಯಾಜ್ಞೆಯಿಂಮುಕ್ತಿದನು ನೀ ಹೌದು | ವಿಶ್ವ ವಂಶನೆ ನಿನ್ನ ಮಹಿಮೆಯಗಣ್ಯ ಸಿದ್ಧವು ನಿನ್ನ ಧೊರೆ ಹರಿ ಒಬ್ಬ ಜೀವೋತ್ತುಮನೆ ಅಶರೀರ26 ಜ್ಞಾನ ಬಲ ಐಶ್ವರ್ಯಗಳು ಪರಿಪೂರ್ಣ ಸರಿ ವೈರಾಗ್ಯ ಹಾಗೆಯೆ ಪ್ರಾಣನಿನ್ನಲಿ ಕರಿಸುವೆಯೊ ಆಧ್ಯರ್ಧ ನಾಮದಲಿ | ಮಾನ್ಯ ವಿಷ್ಣುಸಹಾಯ ನಿನಗೈನ್ಯೂನ ವಿಲ್ಲವು ಯಾವ ತೆರದಲುಕಾಣೆ ಅಪಜಯ ಜೀವ ಸಾಧನೆಯೆಲ್ಲ ನಿನ್ನಿಂದ 27 ಶೇಷಗಸದಳ ನಿನ್ನ ಪೊಗಳಲು ಶೇಷ ಸರಿ ಬಡದಾಸನಹೆ ವಿಶ್ವಾಸದಿಂ ಸಂವತ್ಸರನೆ ನೀಕಾಯಬೇಕೆಂಬೆ | ಏಸು ಜನ್ಮಗಳನ್ನು ಕೊಟ್ಟರು ಶ್ವಾಸ ಪತಿತವ ಮತದಿ ಪುಟ್ಟಿಸಿ ದಾಸ ಭಾಗ್ಯವ ನೀಡು ಹರಿಯೊಳ್ ಶುದ್ಧ ಭಕ್ತಿಯುತ28 ಎರಡು ಸಹ ಮೂವತ್ತು ಲಕ್ಷಣ ವಿರುತಿಹ ಜಗದ್ಗುರುವೆ ವಿಷ್ಣುವಿಗೆರಡು ಎರಡು ಸರಿಯೆಂತೆಂದು ಸ್ಥಾಪಿಸಿ ಎರಡು ವಿದ್ಯೆಗಳಿರವು ತೊರುವ ಲೆರಡು ಸುಖಗಳ ಪಡೆಯೆಸಾಧನ ಮಾರ್ಗ ನೀಡ್ವೆಬತ 29 ಸರ್ವ ಶಕ್ತನೆ ಶರ್ವ ವಿನುತನೆ ಸರ್ವ ಸರ್ವಗ ಹಿರಿಯ ತನಯನೆ ಸರ್ವ ಜಗದಾಧಾರ ಪೋಷಕ ಸರ್ವ ತೋವರನೆ | ಸರ್ವ ಕಾಲದಿ ಸರ್ವ ದೇಶದಿ ಸರ್ವ ಗುಣದಿಂ ಹರಿಯ ಯಜಿಸುವ ಸರ್ವ ಸದ್ಗುಣ ಪೂರ್ಣ ದೋಷವಿದೂರ ಸರ್ವಜ್ಞ 30 ಹಿಂದೆ ಪೂರ್ವಜರೆಲ್ಲ ಕೂಡುತಲೊಂದು ಪಾಯವಗೈದು ಮೃತ್ಯುವತಂದು ದಿವಿಜ ವೃಂದಕೆ ಕುಂದು ವದಗಿಸಲು | ಕಂದುತಳಿಯಲ್ ನಿಖಿಲ ಸುರಗಣ ಕುಂದು ಮೃತ್ಯುವ ಗೈದು ಪುಡಿಪುಡಿ ವಂದನಾರ್ಹನು ಒಬ್ಬನೀನೇ ಯೆಂದು ಸ್ಥಾಪಿಸಿದೆ 31 ಪಾಹಿ ಅಮ ಶುಚಿ ಯೊಗ ಕ್ಷೇಮನೆ ಪಾಹಿ ಅಮರಲಲಾಮ ಅನಿಲನೆ ನಿರವದ್ಯ | ಪಾಹಿ ಸತ್ಯ ವಿಶುದ್ಧ ಸತ್ವನೆ ಪಾಹಿ ಲಕ್ಷ್ಮೀ ಪುತ್ರ ಭೃತ್ಯನೆ ಪಾಹಿ ಜೀವಗ ಬಾದರಾಯಣಪ್ರೀಯ ಮಹರಾಯ 32 ಪಾಹಿ ಹನುಮನೆ ಭೀಮ ಮಧ್ವನೆ ಪಾಹಿ ದುರ್ಮತ ಧ್ವಾಂತ ಸೂರ್ಯನೆ ಪಾಹಿ ನತಜನ ಪಾಲ ಪ್ರಾಣನೆ ಪಾಹಿ ಶ್ರೀಸುತನೆ | ಪಾಹಿ ಜಗದಾಧಾರ ಸೂತ್ರನೆ ಪಾಹಿ ಸಾಮನೆವಂಶ ದೂರನೆ ಪಾಹಿ ಹರಿಯಚ್ಛಿನ್ನ ಭಕ್ತನೆ ಪಾಹಿ ವಿಜ್ಞಾನ 33 ಪಾಹಿ ಋಜುಪತಿ ವಾಯುಕೂರ್ಮನೆ ಪಾಹಿ ಜೀವ ಲಲಾಮ ಗುಣನಿಧಿ ಪಾಹಿ ಶುಚಿ ಸರ್ವಜ್ಞ ಸಾಮಗಭಾವಿ ಶತಮೋದ | ಪಾಹಿ ಸತ್ಯನೆ ಕಲಿವಿದಾರಣ ಪಾಹಿ ಗುರು ಗೋವತ್ಸ ರೂಪಿಯೆ ಪಾಹಿ ಮಿಷ್ಣು ಪದಾಬ್ಜಮಧುಕರ ಭಾರತೀ ಕಾಂತ 34 ಪಾಹಿ ಅಮೃತನೆ ವಿಶ್ವರಜ್ಜುವೆ ಪಾಹಿ ಬೃಹತೀ ಛಂದ ಮಾನಿಯೆ ಪಾಹಿ ಹಂಸೋಪಾಸಕ ಪ್ರಭು ಆಖಣಾಶ್ಮಸಮ | ಪಾಹಿ ಸಾಯಂಖ್ಯಾತ ಜೀವಗ ಪಾಹಿ ಜಗಚೇಷ್ಠಾ ಪ್ರವರ್ತಕ ಪಾಹಿ ಅನಿಲನೆ ಶೇಷವಿಪಶಿವ ವಂದಿತಾಂಘ್ರಿಯುಗ 35 ಪಾಹಿ ಪರಿಸರ ಪಂಚ ಕೋಶಗ ಪಾಹಿ ಗುಣನಿಧಿ ಕೊವಿದೋತ್ತಮ ಪಾಹಿ ನಮಿಸುವೆ ಅಣುಮಹದ್ಘನ ರೂಪ ವಿಖ್ಯಾತ | ಪಾಹಿ ವಿಶ್ವಗ ವ್ಯಸನ ವರ್ಜಿತ ಪಾಹಿ ಹರಿಯನು ನಿತ್ಯನೋಳ್ಪನೆ ಪಾಹಿ ವಿಷ್ಣುದ್ವಾರ ಶರಣೈ ಪಾಹಿ ಹರಿ ಸಚಿವ 36 ಜಯ ಜಯವು ಶ್ರೀ ಹನುಮ ಭೀಮಗೆ ಜಯ ಜಯವು ಶ್ರೀ ಮಧ್ವರಾಯಗೆ ಜಯ ಜಯವು ತತ್ವೇಶರರಸಗೆ ಮುಖ್ಯಪ್ರಾಣನಿಗೆ | ಜಯ ಜಯವು ಜಯತೀರ್ಥ ಹೃಸ್ಥಗೆ
--------------
ಕೃಷ್ಣವಿಠಲದಾಸರು
ವಾಯುದೇವರು ನಿನ್ನ ನಂಬಿ ಬಂದೆ ಪಂಚಮುಖಿ ಪ್ರಾಣ ಅನ್ಯ ಹಂಬಲ ಬಿಡಿಸಿ ಬಿಂಬ ಮೂರುತಿ ತೋರೋ ಪ ಹಿಂದೆ ತ್ರೇತಾಯುಗದಿ ರಾಮನಾಜ್ಞೆಯ ಹೊಂದಿ ಸಿಂಧು ದಾಟಿ ಸೀತೆಗೆರಗಿ ನಿಂದು ಸುಂದರ ರಾಮ ಮುದ್ರಿಕೆಯಿತ್ತು ಲೀಲೆಯಲಿ ಕೊಂದ ರಕ್ಕಸ ಪುರವನನಲಗೆ ಇತ್ತೆ 1 ಬಂಡಿ ಅನ್ನವನುಂಡು ಭಂಡ ಬಕನಾ ಕೊಂದು ಹಿಂಡು ನೃಪರಾ ಜರಿದು ಕೊಂಡು ದ್ರೌಪದಿಯಾ ಮಂದಮತಿಗಳನಳಿದು ತಂದಿ ಸೌಂಗಂಧಿಕವ ಪುಂಡ ಕೀಚಕರಳಿದ ಪಾಂಡವಪ್ರಿಯದೂತ 2 ಮೋದತೀರ್ಥರೆನಿಸಿ ವಾದಿಗಳ ನಿಗ್ರಹಿಸಿ ಬೋಧಿಸಿ ಸುಜನರಿಗೆ ಮಾಧವನ ಗುಣವ ಸಾಧು ವಂದಿತ ಬಾದರಾಯಣರು ಇರುತಿರುವ ಬದರಿಯಲ್ಲಿರುವಿ ಶ್ರೀ ನರಹರಿಯ ತೋರೋ 3
--------------
ಪ್ರದ್ಯುಮ್ನತೀರ್ಥರು
ವಾರಣವದನ ತ್ರೈಲೋಕ್ಯಸುಮೋಹನ ವಾರಣವದನ ಪ. ವಾರಿಜಾಕ್ಷ ವರಗುಣಾಕರ ವಾರಿಜಾಕ್ಷಿ ವರದಾಯಕ ಸನ್ನುತ ನಾರದಾದಿ ಮುನಿವಂದಿತ ಪದಯುಗ ಅ.ಪ. ಸುಂದರಾಂಗ ಸುಕಲಾನ್ವಿತ ನಿಭಚರಣ ಕಟಿಶೋಭಿತ ವ್ಯಾಳಸ- ಬಂಧನಾಬ್ಧಿ ಶತಕೋಟಿಸದೃಶ ಕಿರಣ ಚಂದನಾಂಗಾರ್ಚಿತ ಸುಮನೋಹರ ಮಂದಹಾಸ ಮಹಿಮಾಂಬುಧಿಚಂದಿರ 1 ಕಂಬುಗ್ರೀವ ಕಮನೀಯ ಕರಾಂಬುರುಹ ಪಾಶಾಂಕುಶಧರ ವರ ಶಂಬರಾರಿಜಿತುತನಯ ಮಧುರಗೇಹ ಜಂಭಭೇದಿವಂದಿತ ಅತ್ರಿವಂದಿತ ಲಂಬೋದರ ವಿಘ್ನಾಂಬುಧಿ ಕುಂಭಜ 2 ಚಾರುಭಾರ ಕನ್ಯಾಪುರವರ ನಿಲಯ ಮೃಕಂಡುಜದ ಮುನಿವರ ಸಾರಮಂತ್ರಸ್ಥಾಪಿತ ಮಂಗಲ ಕೆರೆಯ ವರಕಪಿತ್ಥಫಲೋರಸಭುಂಜಿತ ಧೀರ ಲಕ್ಷ್ಮೀ ನಾರಾಯಣಸಖಸುತ 3
--------------
ತುಪಾಕಿ ವೆಂಕಟರಮಣಾಚಾರ್ಯ
ವಾರಿಜ ಮುಖಿ ವಾರಿಜಾಕ್ಷಿ ವಾರಿಜ ಗಂಧಿ ವಾರಿಸನಳಿಯನನುಓರಂತೆ ನೀ ಪೋಗಿ ಕರೆತಾರೆನ್ನಯ ಪ್ರಾಣಾಧಾರ ಕೇಶವ ಮೂರ್ತಿಯ ಪ ನಗ ವೈರಿಯಣುಗನಣ್ಣನಯ್ಯನಾಪ್ತಗೆ ಮಿಗೆ ಹುಟ್ಟಿದನ ತಮ್ಮನಸೊಗಸು ವಸ್ತ್ರಕೆ ಸೋತನ ಸುರಪುತ್ರನ ವಾಜಿಯನಿವ ವೈರಿಯ ಪಗೆಯಜಗದೊಳಗೆ ಹಾಟಿದೊಳೇರಾಟದ ವನವ... ನವನಿಂದ ನಗೆತೋರಿನಾವುನಿನಗೆಅಗಣಿತಾಭರಣವೀವೆನು ಅಂಗಜಾಗ್ನಿಯ ತಗಹ ಬಿಡಿಸೆ ತರುಣಿ 1 ಮಿಹಿರ ನಂದನನ ತಂದೆಯ ಪಗೆಯವನ ಮಾವನ ಹಿತನ ಮನೆವೆಸರಮಹಿ ವನ ಕೃತಿಗೊಡೆಯನ ಬಂಟನನುಜನ ಸಹಿಸಿ ತಮ್ಮನ ಮಿತ್ರನ ಕುಹಕದಿ ಶಾಪವಡೆದಳು ಪ್ರಸ್ತರವಾಗಿ ಗಗನ ಮಧ್ಯದೊಳಿರಲು...ಸಿ ಶಾಪವ ದನುಜ... ಕ್ಷಿತಿಯೊಳು ವಿವರಿಸುವವನ ಕರೆತಾರೆ 2 ಸುರಭೇದ ಪ್ರಥಮ ದಾಸಿಯ ಪೆಸರನ ವಾಜಿಯರಸನ ನಖವೈರಿಯಮರೆಯ ಮಾರ್ಗದಿ ಗಮಿಸುವನಾಪ್ತನ ತಾಯ ಧರಿಸಿದಾತನ ಮಿತ್ರನಪೊರೆಯ ದೆಸೆಯ ದಿಕ್ಕರಿಯ ಕೋಪದಿ ಸೀಳ್ದನರಸಿಯಣ್ಣನನೀಕ್ಷಣಕರೆತಂದೆನಗೆ ಕೂಡಿಸು ಕಾಗಿನೆಲೆಯಾದಿಕೇಶವನ 3
--------------
ಕನಕದಾಸ
ವಾರಿಜಾಸನ ವಂದ್ಯ ಚರಣಾ ಲಕ್ಷ್ಮೀ- ನಾರಾಯಣ ಎನ್ನೊಳಿರಿಸು ಸತ್ಕರುಣಾ ಪ. ಶ್ರೀರಮಣಿಯ ಕೂಡಿ ನೀನು ದಯ ದೋರಲನ್ಯರಿಗೆಂದರಂಜೆ ನಾನು ದಾರಿದ್ರ್ಯ ಭಯ ದೋಷಗಳನು ದೂರ ಹಾರಿಸಿ ಪೊರೆವ ಸಕಲ ಸುರಧೇನು1 ನಿನ್ನಂಥ ದಾತರಿನ್ನಿಲ್ಲ ಪರ- ಮೋನ್ನತ ಪದವ ಧ್ರುವನಿಗಿತ್ತಿಯಲ್ಲ ಮುನ್ನ ಕುಚೇಲನ ಸೊಲ್ಲ ಕೇಳಿ ಅನ್ಯರಿಗೊಲಿಯದ ಸಿರಿಯಿತ್ತಿಯಲ್ಲ 2 ಇಂದಿರಾವರ ವೆಂಕಟೇಶ ನೀ ಬಂದುದರಿಂದಾದುದೆನಗೆ ಸಂತೋಷ ಹೊಂದಿದೆ ನಿನ್ನನು ಶ್ರೀಶ ಪೂ- ರ್ಣೇಂದು ವದನ ಕರುಣಾರಸ ಭೂಷಾ 3
--------------
ತುಪಾಕಿ ವೆಂಕಟರಮಣಾಚಾರ್ಯ
ವಾರುಧಿಶಯನ ಪಾರಮಹಿಮ ವೋ ನಾರಾಯಣಪ ದಾರಿಗಾಣೆ ಧವಳನಯನಾ ಮೀರಿಬರುವ ದುರಿತಗಳನು ದೂರಿದ ಮಾರಿದೆ ಯಾರದು ಕೇಳವೋ 1 ಪರಮಪದ ನಿವಾಸನ್ಯಾರೊ ಸುರಮುನೀಂದ್ರ ಸುಖವ ಬೀಳೊ ಬರದೆ ಬರದೆ ಬಿರುದೆ ವರದ2 ವಾಸನೆ ನಾನಿನದಾಸನು ಪೋಷಿಸೋ 3
--------------
ಚನ್ನಪಟ್ಟಣದ ಅಹೋಬಲದಾಸರು
ವಾಸುದೇವ ಶ್ರೀ ಗೋವಿಂದ ವರದ ಶ್ರೀ ಗೋವಿಂದ 1 ಪಾಲಕ ಗೋವಿಂದ ಸಾಗರಗೃಹ ಶರಣಾಗತವಾಂಛಿತ ಭಾಗವತಪ್ರಿಯ ಗೋವಿಂದ 2 ಮಾಧವ ಗೋವಿಂದ ಪ್ರೇರಣ ಕರ್ತುವಿಚಾರಣ ಭಕ್ತೋದ್ಧಾರಣ ಶ್ರೀಹರಿ ಗೋವಿಂದ 3 ಭೂಮಂಡಲನಾಯಕ ಗೋವಿಂದ ಕರದಂಡದಳಾಕ್ಷ ಶ್ರೀ ಗೋವಿಂದ 4 ನಮೋ ನಮೋ ಗೋವಿಂದ ಮತಂಗವರದ ಶ್ರೀ ಗೋವಿಂದ 5 ಶಕ್ರಾರ್ಚಿತ ವಟುವಾಕೃತಿಧರ ಕರಚಕ್ರಾಂಕಿತ ಹರಿ ಗೋವಿಂದ ಅಕ್ರೂರವರದ ಅಖಿಳಪ್ರದ ತ್ರಿವಿಕ್ರಮರಾಯ ಶ್ರೀ ಗೋವಿಂದ 6 ಶ್ರೀ ಭಾರ್ಗವರಾಮ ಶ್ರೀ ಗೋವಿಂದ ಅಗ್ರಗಣ್ಯ ಶುಭವಿಗ್ರಹ ನೃಪಕುಲವರ್ಗವಿದಾರಣ ಗೋವಿಂದ 7 ನೂತನ ಲೀಲ ಶ್ರೀ ಗೋವಿಂದ ವಾತಜವರದ ಸಾಕೇತಾಧಿಕ ನಿರ್ಭೀತ ಶ್ರೀ ರಾಮ ಗೋವಿಂದ 8 ಕರುಣಾಲಯದೇವ ಶ್ರೀ ಗೋವಿಂದ ಕುಚೇಲವರದ ಶ್ರೀ ಗೋವಿಂದ 9 ಬುದ್ಧಾಕೃತಿಧರ ಗೋವಿಂದ ಶುದ್ಧಾತ್ಮಕ ಭವವೈದ್ಯ ವಿಬುಧಾರಾದ್ಯಚರಣ ಶ್ರೀ ಗೋವಿಂದ 10 ಸುರರಾಜಾಧಿರಾಜ ಶ್ರೀ ಗೋವಿಂದ ಪ್ರೌಢ ಶ್ರೀ ಗೋವಿಂದ 11 ಶ್ರೀ ಕಪ್ಪುಗೊರಳಪ್ರಿಯ ಗೋವಿಂದ ಸರ್ಪಾಚಲದಿಂದೊಪ್ಪಿಲ್ಲಿಯೆ ನೆಲಸಿಪ್ಪ ತಿಮ್ಮಪ್ಪ ಶ್ರೀ ಗೋವಿಂದ 12 ತಾನೆ ಭಕ್ತರ ಸನ್ಮಾನದಿ ಸಲಹಲು ತಾನೆತಂದ ಶ್ರೀ ಗೋವಿಂದ ಲಕ್ಷ್ಮೀನಾರಾಯಣ ಹರಿ ಗೋವಿಂದ 13
--------------
ತುಪಾಕಿ ವೆಂಕಟರಮಣಾಚಾರ್ಯ
ವಾಸುದೇವ ಶ್ರೀ ಗೋವಿಂದ ವರದ ಶ್ರೀ ಗೋವಿಂದ 1 ಪಾಲಕ ಗೋವಿಂದ ಸಾಗರಗೃಹ ಶರಣಾಗತವಾಂಛಿತ ಭಾಗವತಪ್ರಿಯ ಗೋವಿಂದ 2 ಮಾಧವ ಗೋವಿಂದ ಪ್ರೇರಣ ಕರ್ತುವಿಚಾರಣ ಭಕ್ತೋದ್ಧಾರಣ ಶ್ರೀಹರಿ ಗೋವಿಂದ3 ಭೂಮಂಡಲನಾಯಕ ಗೋವಿಂದ ಕರದಂಡದಳಾಕ್ಷ ಶ್ರೀ ಗೋವಿಂದ4 ನಮೋ ನಮೋ ಗೋವಿಂದ ಮತಂಗವರದ ಶ್ರೀ ಗೋವಿಂದ 5 ಶಕ್ರಾರ್ಚಿತ ವಟುವಾಕೃತಿಧರ ಕರಚಕ್ರಾಂಕಿತ ಹರಿ ಗೋವಿಂದ ಅಕ್ರೂರವರದ ಅಖಿಳಪ್ರದ ತ್ರಿವಿಕ್ರಮರಾಯ ಶ್ರೀ ಗೋವಿಂದ 6 ಉಗ್ರಕುಠಾರ ನೃಪಾಗ್ರಣಿವಿಪಿ£ ಶ್ರೀ ಭಾರ್ಗವರಾಮ ಶ್ರೀ ಗೋವಿಂದ ಅಗ್ರಗಣ್ಯ ಶುಭವಿಗ್ರಹ ನೃಪಕುಲವರ್ಗವಿದಾರಣ ಗೋವಿಂದ7 ನೂತನ ಲೀಲ ಶ್ರೀ ಗೋವಿಂದ ವಾತಜವರದ ಸಾಕೇತಾಧಿಕ ನಿರ್ಭೀತ ಶ್ರೀ ರಾಮ ಗೋವಿಂದ 8 ಕರುಣಾಲಯದೇವ ಶ್ರೀ ಗೋವಿಂದ ಕುಚೇಲವರದ ಶ್ರೀ ಗೋವಿಂದ9 ಬುದ್ಧಾಕೃತಿಧರ ಗೋವಿಂದ ಶುದ್ಧಾತ್ಮಕ ಭವವೈದ್ಯ ವಿಬುಧಾರಾದ್ಯಚರಣ ಶ್ರೀ ಗೋವಿಂದ 10 ಸುರರಾಜಾಧಿರಾಜ ಶ್ರೀ ಗೋವಿಂದ ಪ್ರೌಢ ಶ್ರೀ ಗೋವಿಂದ11 ಶ್ರೀ ಕಪ್ಪುಗೊರಳಪ್ರಿಯ ಗೋವಿಂದ ಸರ್ಪಾಚಲದಿಂದೊಪ್ಪಿಲ್ಲಿಯೆ ನೆಲಸಿಪ್ಪ ತಿಮ್ಮಪ್ಪ ಶ್ರೀ ಗೋವಿಂದ 12 ತಾನೆ ಭಕ್ತರ ಸನ್ಮಾನದಿ ಸಲಹಲು ತಾನೆತಂದ ಶ್ರೀ ಗೋವಿಂದ ಲಕ್ಷ್ಮೀನಾರಾಯಣ ಹರಿ ಗೋವಿಂದ13
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ವಿಕ್ರಮಾ - ಪಾಹಿ - ತ್ರಿವಿಕ್ರಮಾ ಪ ವಿಕ್ರಮ ನಮಿಪೆ ನಾ ನಿನ್ನ | ನೀನುಚಕ್ರವ ಪಿಡಿದೊಂದು ದಿನ್ನ | ಆಹನಕ್ರನುದ್ದರಿಸಿದ | ಪ್ರಕ್ರಯ ನಾನರಿತುರುಕ್ರಮ ಶರಣೆಂಬೆ | ವಕ್ರ ಮನವ ಕಳೆಅ.ಪ. ಪುಟ್ಟ ರೂಪವನೆ ತಾಳುತ್ತಾ | ಬಲಿಯಇಷ್ಟಿಯೊಳವನ ಬೇಡುತ್ತಾ | ದಾನಕೊಟ್ಟೆನೆಂದವನು ಪೇಳುತ್ತಾ | ಬರೆಶಿಷ್ಟ ಶುಕ್ರನು ಬೇಡೆನ್ನುತ್ತಾ | ಆಹಕಟ್ಟಲು ಗಿಂಡೀಯ | ದಿಟ್ಟ ಶುಕ್ರನ ಕಣ್ಣಪುಟ್ಟ ದರ್ಭೆಲಿ ಚುಚ್ಚಿ ಮೆಟ್ಟಿ ನಿಂತೆಯೊ ಬಲಿಯ 1 ಥೋರ ರೂಪದೊಳು ಅಂಬರಾ | ಹಬ್ಬಿಧಾರುಣಿ ಅಳೆದ ಗಂಭೀರ | ಮತ್ತೆಮೂರನೇದಕೆ ಬಲಿಯ ಶಿರ | ವತ್ತಿಭಾರಿ ಪಾತಾಳಕ್ಕೆ ಧೀರಾ | ಆಹಪೌರೋಚನಿಯನ್ವತ್ತಿ | ದ್ವಾರವ ಕಾಯುತ್ತತೋರಿದೆ ಕರುಣವ | ಭೋರಿ ದೈವರ ಗಂಡ3 ಪಾದ ತೊಳೆದೂ | ಬಿಡೆಬ್ರಹ್ಮಾಂಡದೊಳು ತಾನು ಬಂದೂ | ಆಹಸುಮ್ಮನಸರ ಲೋಕ | ಕ್ರಮ್ಮಿಸುತಲಿ ಬರುವಅಮ್ಮಹ ಗಂಗೆ ಪೆ | ತ್ತೆಮ್ಮನುದ್ದರಿಸಿದಾ 3 ಬಾದರಾಯಣ ಬಳಿ ಭವ್ಯಾ | ನಾಗಿಮೋದ ತೀರ್ಥರಿಂದ ಸೇವ್ಯಾ | ನೀನುವಾದಿರಾಜರಿಗೊಲಿದು ತ್ವರ್ಯಾ | ಬಂದುಸ್ವಾದಿ ಪುರದಿ ನಿಂದು ಸ್ತವ್ಯಾ | ಆಹಮೋದದಿ ನೆಲೆಸುತ್ತ | ಕಾದುಕೊಂಡಿಹೆ ನಿನ್ನಪಾದವ ಪೊಗಳೂವ | ಸಾದು ಸಂತತಿಯನ್ನ 4 ಹೀನ ಮಾನವನೆಂದು ಎನ್ನಾ | ಉದಾಸೀನ ಮಾಡುವಿಯೇನೊ ಘನ್ನ | ಕೇಳೊನೀನು ತ್ರೈಭುವದಿ ಪಾವನ್ನಾ | ನೆಂದುಗಾನದೋಳ್ ತವ ಪಾದವನ್ನಾ | ಆಹಆಗಮಿಸುತ ಬಂದ | ಮಾನವನೆನ್ನನುಧೀನನೆಂದೆನಿಸಾರೆ | ಜ್ಞಾನವ ನೀಡೆನಗೇ 5 ಪ್ರತಿ ಪ್ರತಿ ವತ್ಸರದೊಳು | ಮಾಸಹತ್ತೆರಡು ಪೂರ್ಣಿಮದೊಳು | ತವರಥದೊತ್ಸವ ಕಾರ್ಯಗಳೂ | ಬಲುಹಿತದಿ ತವ ದಾಸರುಗಳೂ | ಆಹಅತಿ ವೈಭವದಿಂದ | ವಿತರಣೆಯಿಂದಲಿಪ್ರತಿಯಿಲ್ಲವೆಂದೆನ್ನೆ | ವಿಸ್ತರಿಸುವರಯ್ಯ 6 ಪರಿ ಪೊಗಳುತ ಚೆನ್ನಾ | ಆಹಗುರು ಗೋವಿಂದ ವಿಠ್ಠಲ | ಪರಮ ಪುರುಷನೆಂದಾನರ್ತನಗೈಯುತ | ನರರೇನು ಧನ್ಯರೋ7
--------------
ಗುರುಗೋವಿಂದವಿಠಲರು