ಒಟ್ಟು 8092 ಕಡೆಗಳಲ್ಲಿ , 130 ದಾಸರು , 4966 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಿಸು ನರಹರಿಯೇ ಸ್ಮರಣಿಯ ಕರುಣಿಸು ನರಹರಿಯೇ ಪ ಕರುಣಿಸುವದು ತವಸ್ಮರಣೆ ನಿರಂತರ ಧರಣಿ ಸುರಪ್ರಿಯ ಚರಣಕೆರಗುವೆನು ಅ.ಪ ಶರಣರ ಸುರತರುವೇ ಕರುಣಾ ಶರಧಿ ಶಿರಿಯಧೊರೆಯೆ ಸರಸಿಜ ಭವಮುಖರರಸನೆ ತವಪದ ಸರಸಿಜದಲಿ ಮನವಿರಿಸುವಂತೆ ಜವ 1 ಕಂದನನುಡಿಕೇಳಿ ಸ್ತಂಭದಿ ಬಂದಿಯೊ ವೇಗದಲಿ ವಂದಿಸುವೆನು ಭವಬಂಧ ಬಿಡಿಸಿ ಮನ ಮಂದಿರದಲಿ ತವ ಸಂದರುಶನವನು 2 ಚಾರು ಕೃಷ್ಣ ತೀರಾಕಾರ್ಪರಾ ಗಾರನೆ ಸ್ಮರಿಸುವರ ಘೋರದುರಿತ ಹರನಾರಸಿಂಹ ನಿ ನ್ನಾರಧಕರೊಳು ಸೇರಿ ಸುಖಿಸುವಂತೆ 3
--------------
ಕಾರ್ಪರ ನರಹರಿದಾಸರು
ಕರುಣಿಸು ಪ್ರಭುತಂದೆ ತರಳಂಗೆ ದಯವ ಪ ಹರಿ ನೀನೆ ಅವತರಿಸೀಪರಿಭವಶರಧಿಯ ಪರಿಹಾರಗೊಳಿಸುವ ಪರಮಪಾವನರೂಪ 1 ಅರಿವಿಟ್ಟು ಭಜಿಸುವೆ ಮರೆಯದೆ ಮಗನ್ವಚನ ಕರುಣದಿ ಆಲಿಸಿ ವರದಹಸ್ತವ ಶಿರಕೆ 2 ಹಿಂಸೆಬಿಡಿಸು ಮಹ ಸಂಸಾರದುರಿಯನ್ನು ಧ್ವಂಸಗೈಯುವ ಶರಣರಾಂಶದ ಪ್ರಸನ್ನತೆ 3 ದುರಿತ ದೂರೀಕರಿಸಿ ಪರಮಾನಂದದಲಿರುವ ಸಿರಿ 4 ಮರೆಯ ನಿನ್ನಡಿಯಿನ್ನು ಸರುವೇಶ ಮೊರೆಕೇಳಿ ಗುರುವಾಗಿ ಶ್ರೀರಾಮ ಸ್ಥಿರಮೋಕ್ಷ ಸಂಪದವ 5
--------------
ರಾಮದಾಸರು
ಕರುಣಿಸುವ ಹರಿ ನಿರಂತರವು ಮನವೆ ಪಾದ ಸ್ಮರಣಿಯನು ನೆರೆನಂಬು ಪ ಕಂದ ಪ್ರಹ್ಲಾದನ ತಂದೆ ಭಾಧಿಸಲು ಗೋ ವಿಂದ ಘನ ಸ್ತಂಭದೊಳ್ ಬಂದು ತಾಮುದದಿ ಮಂದ ದನುಜನ ಬಿಡದೆ ಕೊಂದ ಶ್ರೀವರ ಮುಚು ಕುಂದ ವರದ ಯೆಂದು ನೀ ಭಜಿಸು 1 ಛಲದಿಂದ ಮಲತಾಯಿ ಸಲೆ ಧ್ರುವನ ಕಾನನಕೆ ಕಳುಹಲಾಕ್ಷಣವೆ ಶ್ರೀ ನಳಿನನಾಭ ಒಲಿದು ಪೊರಿದನು ಮಹಾಒಳಿತೆಂದು ಅವಗೆ ನಿಶ್ಚಲ ಪದವಿಯನು ಇತ್ತ ಜಲನಿಧಿಶಯನ 2 ಅರಸು ಮುನಿಶಾಪದಲಿ ಕರಿಯಾಗಿ ಜನಿಸಿ ಮ- ಕರ ಬಾಧೆಗೆ ಶಿಲ್ಕಿ ಮೊರೆಯನಿಡಲು ತ್ವರದಿ ಪೊರದಂಥ ಹೆನ್ನೆಪುರ ಲಕ್ಷ್ಮೀನರಶಿಂಹ ಸಿರಿ ಕೃಷ್ಣಾ 3
--------------
ಹೆನ್ನೆರಂಗದಾಸರು
ಕರುಣಿಸುವುದು ಎನ್ನಾ ಕರಿವರದ ಕೇಶವ ಕರಪಿಡಿದು ಸುಖಪೂರ್ಣಾ ನಿನ್ನಡಿಗಳಂಬುಜ ಸ್ಮರಿಪರಲ್ಲಿಡ ಮುನ್ನಾ ಪರಿಹರಿಸು ಬನ್ನಾ ಪ ಸರಸಿಜಾಪತಿ ಸರಸಿಜೋದ್ಭವ ಹರಸುರಾಧಿಪ ವಂದ್ಯ ನಿನ್ನಯ ಎರವು ಮಾಡದೆ ತ್ವರ್ಯ ಸೌಖ್ಯವುಗರದು ಕರುಣದಿ ಅ.ಪ. ಜನನಿ ಜಠರದಿಂದ ನಿನ್ನಾಜ್ಞದಲಿ ನಾ ಜನಸಿದೆನೊ ಗೋವಿಂದಾ ಬಾಲತ್ವ ಕೆಲದಿನ ಕಳೆದೆನೊ ಮುಕುಂದಾ ಯೌವ್ವನವು ಬರುತಲೆ ವನಿತೆ ಮುಖ ಅರವಿಂದಾ ನೋಡುತಲೆ ಬಲು ಛಂದಾ ಮನವು ನಿಲ್ಲದು ಮಮತೆ ವಿಷಯದಿ ಮುನಿದು ಸಜ್ಜನರ ಸೇವಿಸಿ ಕೊನೆಯಗಾಣದೆ ಮಣಿವೆ ಅಂಘ್ರಿಗೆ ವನದಿಗಳ ವಮ್ಮನೆ (?) ನಡಿಸು ವೆಂಕಟಾ ಘನತೆ ನಿನಗಿದು ತಿಳಿದು ವೇಗದಿ ಅನುದಿನದಲಿ ಸಲಹುತಿಪ್ಪನೆ ಅನಿಮಿಷರ ಆಧಾರ ಮೂರುತಿ 1 ಮೊರೆಯ ಲಾಲಿಸು ಜೀಯಾ ಅರೆ- ಮೊರೆಯ ಮಾಡಲು ಪೊರೆವರ್ಯಾರೆಲೊ ಕಾಯಾ ಅ- ನ್ಯರನು ಕಾಣದೆಯರಗಿದೆನು ಸುರ ಸಹಾಯ ಸುರಧೇನು ಮನೆಯೊಳಗಿರಲು ವಿಠ್ಠಲರೇಯಾ ಮಾಯಾ ಬಲ ತಡದು ನಿಕ್ರವ ತರಲು ಜನರೊಳು (?) ಯರಗಿರಲು ನಿನಗೆಂದಿಗಾದರು ಅರಿದು ಅಗ್ಗಕೆ ಪೊರೆದು ಮಾನವ ಕರಿಯು ಕರೆಯಲು ಬರುವುದುಂಟೇ ಕರುಣಾಸಾಗರನೆಂಬೊ ನಿನ್ನಯ ಬಿರುದು ಉಳ್ಳದಕೊಂಡು ಸಾಧನೆ ಧರೆಯ ದುಷ್ಟರ ಬಾಧೆ ತಪ್ಪಿಸಿ ಹರುಷವನು ಅತಿಗರೆದು ನಿರುತದಿ 2 ಬಿಡೆನೊ ಕಡಲೊಡಗಾಡಿ ಬಿಂಕದಲಿ ಅದ್ರಿಯ ನಿಡಲಿ ಬೆನ್ನಲಿ ನÉೂೀಡಿ ಪಾದಗಳ ಎಳೆಯುತ ನಡೆದು ಕೋಪವ ಮಾಡಿಬಿಡು ದೈನ್ಯದಲಿ ಪೊಡವಿ ದಾನವ ಬೇಡಿ ಬಿಡೆ ನೋಡಡವಿಯೊಳ್ ಕಾಡಿನ ಮಡುವಿನೊಳು ಗಿಡವೇರಿ ಧುಮುಕಲು ಅಂಬರ ಬಿಟ್ಟು ಖಡ್ಗವ ಪಿಡಿದು ವಾಜಿಯನೇರಿದನು ಜರ ಕಡಿಯಪೋಗಲು ಕಂಡು ನಿನ್ನನು ಬಿಡೆನೊ ನಿನಗೆಂದಿಗಾದರು ಪೊಡವಿಪತಿ ಶ್ರೀದವಿಠ್ಠಲ ವಡಿಯ ನೀನೆಂತೆಂದು ನಂಬಿದೆ 3 (ಈ ನುಡಿಯ ಅರ್ಥ ಸ್ಪಷ್ಟವಾಗುತ್ತಿಲ್ಲ-ಅಶುದ್ಧ ಪ್ರತಿಯ ಕಾರಣದಿಂದ.)
--------------
ಶ್ರೀದವಿಠಲರು
ಕರುಣಿಸುವುದೆನಗಿತು | ಕರಿವರದ ಕೃಷ್ಣಾ |ನಿರುತ ನಿನ್ನಯ ಸ್ಮರಣೆ | ವೆರಕವಾಗಲಿ ಮನಕೆ ಪ ಪರಸತಿಯರೊಲಿಮೆಗೇ |ಎರಗುವೀ ಮನವನ್ನು ಬರ ಸೆಳೆದು ನಿನ್ನಂಘ್ರಿ | ಸರಸಿಜದೊಳಿರಿಸೋ |ಶರಣ ವತ್ಸಲನೆಂಬೊ | ಬಿರಿದು ನಿನ್ನದು ಇರಲುಬರಿದೇಕೆ ತಡಗೈವೆ | ಮರುತಾಂತರಾತ್ಮಾ 1 ಮುದಿತನದ ತನುವಿನಲಿ | ಮದಡಾಗಿ ಮೈಮರೆವೆಹೃದಯ ಸದನದಿ ನಿನ್ನ | ಪದವ ನೋಡದಲೇಎದುರಾಳಿ ತತ್ವೇಶ | ರಧಿಕಾರ ತಪ್ಪಿಸುತಪದುಮನಾಭನೆ ನಿನ್ನ | ಪದ ತೋರೊ ಘನ್ನಾ 2 ಪುಂಡಲೀಕನಿಗೊಲಿದೆ | ಪಾಂಡವರ ಪಾಲಿಸಿದೆಪುಂಡರೀಕಾಕ್ಷ ದೃಹಿ | ಣಾಂಡಗಳ ವಡೆಯಾ |ಅಂಡಜಾಧಿಪ ತುರಗ | ಕುಂಡಲಿಯ ಶಯನ ಹೃತ್‍ಪುಂಡರೀಕದಿ ತೋರೊ | ಗುರು ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಕರುಣಿಸೆನ್ನನು ಕರುಣಾನಿಧಿಯೆ ಪ ಹರಿ ಭಜಕರಾಗ್ರಣಿಯೆ ವರಕಪಿಶಿರೋಮಣಿಯೆ ಅ.ಪ ಧರಣಿತಳದಲ್ಲಿ ಪರಿಪೂರ್ಣವಾಗೀ ಇರುವ ವಾರ್ತೆಯ ಕೇಳಿ ಹರುಷ ಮನದಲಿ ನಿನ್ನ ಚರಣ ಪಂಕಜಯುಗ್ಮ ಭರದಿ ಭಜಿಪ ಎನ್ನ 1 ದುರುಳ ದೈತ್ಯನ ಶೀಳಿ ಧರಣಿಸುರಸುತನ ನೀ ಪೊರೆದ ಕೀರುತಿ ಕೇಳಿ ತ್ವರದೀ ಪಾದ ಸರಸಿಜ್ವದಯವನ್ನು ದುರುಳ ಮಾನವ ನಾ 2 ಜನಕ ಮಾಡಿದ ಋಣವ ಹುಣಿಸೆ ಬೀಜಗಳಿಂದ ಋಣಗಳೆದ ಘನ ಮಹಿಮೆ ಕೇಳಿ ಮನದಿ ಯೋಚಿಸಿ ಚರಣವನಜ ಭಜಿಸುವ ಎನ್ನ ಋಣ ಬಿಡಿಸೊ ಗುರುಜಗನ್ನಾಥ ವಿಠಲ ಪ್ರಿಯಾ 3
--------------
ಗುರುಜಗನ್ನಾಥದಾಸರು
ಕರುಣಿಸೋ ಶಾಸ್ತ್ರಾರ್ಥ ಮದ್ಗುರು ಶ್ರೀ ವಿಷ್ಣುತೀರ್ಥಾ ಪ ಭವರೋಗ ಭೇಷಜನೆ ಬಹುಬಾಧೆ ಬಡುವೆನೊ ಭಾರತೀಶನ ಮುಖ್ಯ ಪ್ರೀತಿಪಾತ್ರಾ 1 ಶ್ರೀನಾಥ ನಿನ್ನಂಥ ದಾತರನು ನಾಕಾಣೆ ಅವನಿಯೊಳಗೆಲ್ಲ ಅರಸಿ ನೋಡಲು 2 ಪರಮ ಭಾಗವತರಿಗೆ ಮುಖ್ಯ ಹಿತಕರ್ತ ನೀನೆ ಧ್ವರಿಯೇ ಧರಿಯ ರಮಣ ತಂದೆವರದಗೋಪಾಲವಿಠಲನ ಮರಿಯೇ 3
--------------
ತಂದೆವರದಗೋಪಾಲವಿಠಲರು
ಕರುಣಿಸೋ ಸ್ವಾಮಿ ನೀಪೂರ್ಣ ಸಾರಸದ್ಗತಿ ಭೂಷಣಾ ತಾರಿಸೋ ಯನ್ನ ನೀ ಪ್ರಾಣಾ ಶ್ರೀ ಹರಿ ಕಂಜಲೋಚನಾ 1 ಸ್ವಾಮಿ ನೀ ಸರ್ವ ಸಾಕ್ಷಾತಾ ಬ್ರಹ್ಮಾದಿದೇವ ವಂದಿತಾ ಮನೋಹರ ಪ್ರಖ್ಯಾತಾ ನೇಮ ನೀ ಕಾಮ ಪೂರಿತಾ 2 ಹಸ್ತಿಗೊಲಿದ ಸುದಾತಾ ವಸ್ತು ಶ್ರೀದೇವ ನಿಶ್ಚಿತಾ ನಿಸ್ತರಿಸುವಾ ಶ್ರೀನಾಥಾ ಕಸ್ತೂರಿರೇಖಾ ಶೋಭಿತಾ 3 ನೀನೆ ನಮಸ್ತ ಕಾಧಾರಾ ಶ್ರೀನಿಧಿ ಜ್ಞಾನ ಸಾಗರಾ ದೀನ ಜನರ ಮಂದಾರಾ ಪೂರ್ಣಾನಂದದಾಗರಾ 4 ಮಹಿಪತಿ ಸ್ವಾಮಿ ಶ್ರೀಪತಿ ಕಾಯೋ ನೀ ಲಕ್ಷ್ಮೀಪತಿ ಶ್ರೀ ಹರಿ ದಿವ್ಯಸುಮೂರ್ತಿ ದೋರೋ ನೀ ದಿವ್ಯಸಂಗತಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕರುಣೆ ತೋರೋ ಕಣ್ಣ ತೆರೆದು ಗುರುವು ನೀನೆ ಗತಿಯು ನೀನೆ ಪ ತ್ವರದಿ ಜಪವ ಪೂರ್ಣ ಮಾಡಿ ಕರವ ಶಿರದಲಿಡುತ ಅ.ಪ. ಸಿರಿಯ ವರನ ಪರಮ ಭಕುತ ಸಿರಿದಮಣಿಗಳಲ್ಲಿ ನೀನು ಹಿರಿಯ ಅಹುದೊ ಜಗದ ಗುರುವೆ ಪರಮ ಕರುಣಾಕರನೆ ದೇವ 1 ಹರಿಯ ಆಜ್ಞದಂತೆ ನೀನು ಸರುವ ಪ್ರಾಣಿಗಳಲಿ ನಿಂದು ಹಿರಿದು ಜಪವನಾಚರಿಸಿ ಅವರು ಅರಿಯದಂತೆ ನಿರುತ ಪೊರೆವೆ 2 ಶರಧಿ ಮಥನದಿಂದ ಬಂದ ಗರಳನಂದು ಭುವನಗಳನು ಉರುಹುತಿರಲು ಹರಿಯ ಮನವ ಅರಿತು ನೀನು ಭರದಿ ಕುಡಿದೆ 3 ಪೊಗಳಲವೆ ನಿನ್ನ ಮಹಿಮೆ ಸುಗುಣಮಣಿ ಭಾರತಿಯ ಪತಿಯೆ ಅಗಜೆಯರಸನನ್ನು ಪೆತ್ತ ನಗಧರನ ಪ್ರೀತಿ ಪಾತ್ರ 4 ಅಜನಪದಕೆ ಅರುಹನಾದೆ ದ್ವಿಜ ಫಣೀಶಾದಿಗಳ ಗುರುವೆ ಭಜನೆಗೈವೆನೆಂತು ನಿನ್ನ ತ್ರಿಜಗವಂದ್ಯ ತ್ರಿಜಗಪೂಜ್ಯ 5 ತ್ರೇತೆಯಲಿ ಅಂಜನಿಯಳ ಪೂತ ಗರ್ಭದಿಂದ ಬಂದು ಪೋತನಾದ ರವಿಜನನ್ನು ಪ್ರೀತಿಯಿಂದ ಸಲಹಿದೆಯ್ಯ 6 ಅಂದು ಕಪಿಯ ವೃಂದವೆಲ್ಲ ಬಂದು ಶರಿಧಿ ತಟದಿ ನಿಂದು ಮುಂದೆ ದಾರಿ ಕಾಣದಿರಲು ಸಿಂಧುವನ್ನು ದಾಟಿ ಬಂದೆ 7 ಮಂಗಳಾಂಗಿ ಸೀತೆಯನ್ನು ಕಂಗಳಿಂದ ನೋಡಿ ಹಿಗ್ಗಿ ಅಂಗನೆಯ ಪಾದಕೆರಗಿ ಉಂಗುರವನಿತ್ತ ಧೀರ 8 ಫಲವ ಸವಿವ ನೆವದಿ ನೀನು ನಲಿದು ವನವ ಮುರಿದು ತುಳಿದೆ ಕಲಹಕಿಳಿದು ಬಂದ ಅಕ್ಷನ ಬಲಿಯಹಾಕಿ ಕುಣಿಯುತಿರ್ದೆ9 ಕುಲಿಶಧರನ ಗೆಲಿದ ವೀರ ಜಲಜಭವನ ಶರವ ಬಿಡಲು ಛಲದಿ ನೀನು ಅದನು ತಡೆದು ಮಲೆತು ನಿಂತ ಮಹಿಮಯುತನೆ 10 ವನಜಭವ ನಾಮನ ಕೇಳಿ ಕನಲಿ ಬಂದಾ ಶರಕೆ ಸಿಲುಕಿ ದನುಜ ಸಭೆಗೆ ಬಿಜಯಮಾಡಿ ಅನುವ ತಿಳಿದು ಬಂದ ದೇವ 11 ರಕ್ಕಸನ ಲೆಕ್ಕಿಸದೆ ಧಿಕ್ಕರಿಸಿ ಮಾತನಾಡಿ ಪಕ್ಕಿರಥನ ಬಲುಮೆಯನ್ನು ಹೆಕ್ಕಳಿಸಿ ನೀ ಪೊಗಳಿ ನಿಂದೆ 12 ಉಕ್ಕಿ ಬಂದ ರೋಷದಿಂದ ರಕ್ಕಸನು ಚರರ ಕರೆದು ಇಕ್ಕಿರಿವನ ಬಾಲಕುರಿಯ ತಕ್ಕ ಶಿಕ್ಷೆ ಮಾಡಿರೆನಲು 13 ಸುಟ್ಟಬಾಲ ನೆಗಹಿಕೊಂಡು ದಿಟ್ಟ ನೀನು ಪುರವನೆಲ್ಲ ಅಟ್ಟಹಾಸದಿಂದ ಮೆರೆದೆ 14 ಶರಧಿ ಹಾರಿ ಬಂದು ಸತ್ಯಸಂಧ ರಾಮಗೆರಗಿ ಇತ್ತು ಚೂಡಾಮಣಿಯನವನಾ ಚಿತ್ತ ಹರುಷಗೈದ ಧೀರ 15 ಹರಿಯು ತನ್ನ ಬೆರಳಿನಲ್ಲಿ ಗಿರಿಯನೆತ್ತಿ ನಿಂತನೆಂದು ಸರುವ ಗಿರಿಗಳನ್ನು ನೆಗಹಿ ಶರಧಿಗೊಡ್ಡಿ ಸೇತುಗೈದೆ 16 ಸುರರಿಗಮೃತವಿತ್ತನೆಂದು ಅರಸಿ ಸಂಜಿವನವ ನೀನು ಭರದಿ ತಂದು ಒರಗಿ ಬಿದ್ದ ಹರಿಯ ವೃಂದಕೆರೆದು ಮೆರೆದೆ 17 ಮಂದರಾದ್ರಿಯನ್ನು ಒಡೆಯ ಅಂದು ಬೆನ್ನಲಿ ಪೊತ್ತು ನಿಂದು ಸಿಂಧುವನ್ನು ಗೆಲಿದನೆಂದು ಬಂದೆ ಹಾರಿ ಲಂಕಪುರಿಗೆ 18 ಧರಣಿಧವಗೆ ನೆರಳಿನಂತೆ ಕಾಲ ಚರಿಸಿ ನೀನು ಅರಸಿನಂತೆ ಬಂಟನೆಂಬ ಕರೆಯವಾರ್ತೆ ಖರೆಯಗೈದೆ 19 ಕಾಲನೇಮಿ ಯತಿಯ ರೂಪ ಜಾಲದಿಂದ ವೇಳೆ ಕಳೆಯೆ ಶೀಲವಂತ ಅವನ ಸೀಳಿ ಬಾಲದಿಂದ ನಗವ ತಂದೆ 20 ವ್ಯಾಸಮುನಿಯ ಯಂತ್ರದಲ್ಲಿ ವಾಸವೆಂದು ತೂರಿಕೊಳುತ ದಾಸ ಜನರ ಆಸೆಗಳನು ಬೇಸರಾದೆ ನೀ ಸಲಿಸುವೆ 21 ನೀನು ಒಲಿಯೆ ರಾಮನೊಲಿವ ನೀನು ಮುನಿಯೆ ರಾಮ ಮುನಿವ ನಾನು ನಿನಗೆ ಅನ್ಯನಲ್ಲ ಸೂನುವಲ್ಲೇ ತಿಳಿದು ನೋಡೊ 22 ನಿನ್ನ ನಂಬಿ ಸರಮೆಯರಸ ಪನ್ನಗಾರಿರಥನ ಒಲುಮೆ- ಯನ್ನು ಪಡೆದು ಹರುಷವಾಂತು ಧನ್ಯನಾದ ಧರೆಯೆ ಮೇಲೆ 23 ನಿನ್ನ ಜರೆದ ಅವನ ಅಣ್ಣ ತನ್ನ ಬಂಧು ದೇಶ ಕೋಶ- ವನ್ನು ನೀಗಿಕೊಂಡು ಕೊನೆಗೆ ಮಣ್ಣುಗೂಡಿ ಪೋದನಯ್ಯ 24 ದಂತಿಪುರದ ದೊರೆಯೆ ಮಡದಿ ಕುಂತಿದೇವಿ ಕುವರನಾಗಿ ಕಂತುಪಿತನ ಮತವ ತಿಳಿದು ನಿಂತು ಖಳರ ಸದೆದ ಶೂರ 25 ಏಕಚಕ್ರ ನಗರದಲ್ಲಿ ಶೋಕ ಪಡುತಲಿರ್ದ ಜನರ ಕಾಕು ಬಕನ ಏಕಮುಷ್ಠಿಯಿಂದ ಕೊಂದೆ 26 ಕೀಚಕಾರಿ ನಿನ್ನ ಮಹಿಮೆ ಯೋಚನೆಗೆ ನಿಲುಕದಯ್ಯ ಯಾಚಿಸೂತಿ ದೀನನಾಗಿ ಮಾಚದಂತೆ ಸಲಹೊ ಸ್ವಾಮಿ 27 ಜರೆಯ ಸುತನ ಗರುವ ಮುರಿದು ಭರದಿ ಅವನ ತನುವ ಸೀಳಿ ಧರಣಿಧವರ ಸೆರೆಯ ಬಿಡಿಸಿ ಪರಮ ಹರುಷಗರೆದ ಧೀರ 28 ದುರುಳ ದುಶ್ಶಾಸನನ ಅಂದು ಧುರದಿ ಕೆಡಹಿ ಉರವ ಬಗೆದು ತಿರೆಯ ಹೊರೆಯ ಹರಿಸಿದಂಥ ಸರುವ ಪುಣ್ಯ ಹರಿಗೆ ಇತ್ತೆ 29 ಮಲ್ಲಯುದ್ಧದಲ್ಲಿ ನೀನು ಖುಲ್ಲ ದುರ್ಯೋಧನನ ತೊಡೆಗ ಸುರರು ನೋಡಿ ಫುಲ್ಲ ಮಳೆಯಗರೆದರಾಗ 30 ಸೃಷ್ಟಿಕರ್ತ ಕೃಷ್ಣ ನಿನ್ನ ಇಷ್ಟದೈವವೆಂದು ಅವನ ನಿಷ್ಠೆಯಿಂದ ಭಜಿಸಿ ಇಳೆಯ ಶಿಷ್ಟ ಜನರ ಕಷ್ಟ ಕಳೆದೆ 31 ಖಲರು ನಿನ್ನ ಬಲುಮೆ ನೋಡಿ ಗೆಲುವು ತಮಗೆ ಆಗದೆಂದು ಕಲಿಯುಗದಿ ವಿಪ್ರರಾಗಿ ಇಳೆಯ ಧವನ ಹಳಿಯುತಿರಲು 32 ಜಡಜನೇತ್ರ ನಿನ್ನ ಕರೆದು ಅಡಗಿಸಿವರವಾದವೆನಲು ನಡುವೆ ಮನೆಯು ಎಂಬ ದ್ವಿಜನ ಮಡದಿ ಗರ್ಭದಿಂದ ಬಂದೆ 33 ಯತಿಯು ನೀನೆಂದೆನಿಸಿಕೊಂಡು ಚ್ಯುತಿ ರಹಿತ ಪ್ರೇಕ್ಷರಿಂದ ಶ್ರುತಿಪುರಾಣ ವೇದಮಂತ್ರ ತತಿಗಳನು ಪಠಣಗೈದೆ 34 ಹರಿಯೆ ಹರನು ಹರನೆ ಹರಿಯೆಂ- ದುರುಳ ಖಳರ ಕರೆದು ಕರೆದು ಜರೆದು ಭರದಿ ಹರಿಯೆ ಶರಣೆಂದರುಹಿ ಮೆರೆದೆ 35 ಮಾಯ ಮತವ ಧಿಕ್ಕರಿಸಿ ನ್ಯಾಯ ಶಾಸ್ತ್ರವನ್ನು ರಚಿಸಿ ಕಾಯಭವನ ಪಿತನ ಹಳಿದ ನಾಯಿಗಳನು ಬಡಿದು ನಿಂದೆ 36 ಕೃತಕಭಾಷ್ಯ ರಚಿಸಿದಂಥ ದಿತಿಜರನ್ನಾನತರ ಮಾಡಿ ಗತಿಯ ತೋರಿ ಜನಕೆ ಸತ್ಯಾ- ವತಿಯ ಸುತನ ಒಲುಮೆ ಪಡೆದೆ 37 ಮಧ್ವಮತವ ಉದ್ಧರಿಸಿ ಶುದ್ಧವಾದ ಬುದ್ಧಿಗಲಿಸಿ ಹದ್ದುವಾಹನ ಮುದ್ದುಕೃಷ್ಣನ ಶ್ರದ್ಧೆಯಿಂದ ಬದ್ಧಗೈದೆ 38 ಅಷ್ಟಮಠವ ರಚನೆ ಮಾಡಿ ಶಿಷ್ಟಜನರ ಬಾಧೆ ಕಳದೆ ತುಷ್ಟರಾದ ದ್ವಿಜರು ನಿನ್ನ ಎಷ್ಟು ಪೊಗಳಿ ತೀರದಯ್ಯ 39 ದಾನಧರ್ಮವ ಮಾಡಲಿಲ್ಲ ಜ್ಞಾನಮಾರ್ಗ ಹಿಡಿಯಲಿಲ್ಲ ದೀನತನದ ಭವಣೆಯಿಂದ ನಾನು ಮರುಗಿ ಬಂದೆನೀಗ 40 ವಚನ ಮಾರ್ಗದಲ್ಲಿ ನಿನ್ನ ಪ್ರಚನೆ ಮಾಳ್ಪೆ ಕೇಳೊ ದೇವ ರಚಿಸಲಾರೆ ನಿಯಮಗಳನು ಉಚಿತ ತೋರಿದಂತೆ ಮಾಡೊ 41 ನಾರಸಿಂಹ ರಾಮಕೃಷ್ಣ ನಾರಿ ಸತ್ಯವತಿಯ ಮಗನ ಮೂರುತಿಗಳ ಹೃದಯದಲ್ಲಿ ಸೇರಿ ಭಜಿಪ ಭಾವಿ ಬ್ರಹ್ಮ 42 ವಾಯು ಹನುಮ ಭೀಮ ಮಧ್ವ ರಾಯ ನಿನ್ನ ನಂಬಿ ಬಂದೆ ಮಾಯ ಪಾಶದಿಂದ ಬಿಡಿಸಿ ಕೃಪಣ ಬಂಧು 43 ಜನುಮ ಜನುಮದಲ್ಲಿ ನೀನೆ ಎನಗಿ ಜನನಿ ಜನಕನಾಗಿ ಕನಸು ಮನಸುನಲ್ಲಿ ನಿನ್ನ ನೆನೆಸುವಂತೆ ಮತಿಯ ನೀಡೊ 44 ತುಂಗಭದ್ರ ತೀರ ವಾಸ ಭಂಗಬಾಳನು ಹೊರೆಯಲಾರೆ ಮಂಗಳಾಂಗ ಕಳುಹೊ ಎನ್ನ ರಂಗಈಶವಿಠಲ ಪುರಿಗೆ 45
--------------
ರಂಗೇಶವಿಠಲದಾಸರು
ಕರೆತಾರಬಾರದೇನೇ ರಂಗಯ್ಯನ ಬರಲಾರೆನೆಂದರೂ ಕರವಮುಗಿದಾದರೂ ಪ ಸರಸಿಜನಾಭನ ಅರವಿಂದಚರಣಕೆ ಎರಗಿ ಎರಗಿ ಮತ್ತೆ ಕರುಣಿಸೆಂದಾದರೂ ಅ.ಪ ನೆನೆದು ಪೂಜಿಸುವರ ಮನೆಗೆ ಬರುವೆಯೆಂದು ಮುನಿಜನ ಪೇಳ್ದುದು ಸಟೆಯಹುದೇನೋ ಜನನಿಯು ಜನಕನ ಅನುಜನಗ್ರಜನ ಘನತರ ಬಂಧುವು ನೀನೆಂದುಸುರಿ 1 ನಂದನಕಂದ ಗೋವಿಂದನ ಪಾದಾರ ವಿಂದವ ಕಾಣದೆ ಜೀವಿಸಲರಿಯೆ ಎಂದು ಪೇಳುತ ಮುಚುಕುಂದಗೆ ವಂದಿಸು ಮಂದಹಾಸದಿ ಬರುವ ಮಾಂಗಿರಿರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕರೆತಾರೆ ಕರೆತಾರೆ ಕರೆತಾರೆ ಸಖಿಜರ ಜರತಾರಿ ನೀರೆ ಅವರ ಸುರತ ರಂಗಯ್ಯನ ಗುರುತದ ಮಡದಿಯರ ಕರೆ ತಾರೆ ಪ. ಸೃಷ್ಟಿಗಧಿಕವಾದ ಪಟ್ಟಾವಳಿಯ ಸೀರೆಘಟ್ಟಿ ಕಂಕಣವ ನಡುವಿಟ್ಟುಘಟ್ಟಿ ಕಂಕಣವ ನಡುವಿಟ್ಟು ತಂದೆವ ಧಿಟ್ಟ ದ್ರೌಪತಿಗೆ ಉಡುಗೊರೆ 1 ಖಡ್ಡಿ ಪೈಠಣ ಸೀರೆ ದೊಡ್ಡ ಮುತ್ತಿನ ದಂಡೆಕಡ್ಡಿ ಬಳೆ ದೋರೆ ನಡುವಿಟ್ಟುಕಡ್ಡಿ ಬಳೆ ದೋರೆ ನಡುವಿಟ್ಟು ತಂದೆವಗುಣಾಢ್ಯ ಸುಭದ್ರಾಗುಡುಗೊರೆ2 ಅತ್ತಿ ಹೂವಿನ ಸೀರೆ ಕುತನಿ ಕುಪ್ಪುಸ ಸುತ್ತು ಮುತ್ತಿನ ನೆನೆದಂಡೆ ಸುತ್ತು ಮುತ್ತಿನ ನೆನೆದಂಡೆ ತಂದೆವ ಮಿತ್ರಿ ವೃಂದಾಗೆ ಉಡುಗೊರೆ 3 ಮೋತಿ ಚೂರಿನ ಸೀರೆ ಜಾತಿ ಮುತ್ತಿನ ದಂಡೆ ನೂತನವಾದ ಚವರಿಯ ನೂತನವಾದ ಚವರಿ ರಾಗಟೆಗೊಂಡೆಯ ಕಂಠಿ ಕಾಳಿಂದಿಗೆ ಉಡುಗೊರೆ4 ಸಾರಸನ ಸೀರೆ ತೋರ ಮುತ್ತಿನ ದಂಡೆಹಾರ ಪದಕಗಳ ನಡುವಿಟ್ಟುಹಾರ ಪದಕಗಳ ನಡುವಿಟ್ಟು ತಂದೆವನಾರಿ ಲಕ್ಷಣಾಗೆ ಉಡುಗೊರೆ5 ಅಂಬುಜಾಕ್ಷಿಗೆ ತಕ್ಕ ಗೊಂಬಿ ಪೈಠಣಿಸೀರೆ ಜಂಬುದ್ವೀಪದ ನೆನಿದಂಡೆ ಜಂಬುದ್ವೀಪದ ನೆನಿದಂಡೆ ತಂದೆವಜಾಂಬವಂತಿಗೆ ಉಡುಗೊರೆ6 ಸಾವಿರಕಬೆಲಿಯಾದ ಸೇಲ್ಯಾವಲಿ ಜವಳಿವೀರ ರಾಮೇಶನ ಮನಮೆಚ್ಚಿವೀರ ರಾಮೇಶನ ಮನಮೆಚ್ಚಿ(ದ) ಹದಿನಾರು ಸಾವಿರ ನಾರಿಯರಿಗೆ ಉಡುಗೊರೆ7
--------------
ಗಲಗಲಿಅವ್ವನವರು
ಕರೆತಾರೆಲೆ ರಂಗನ ಪ ಕರೆದು ತಾರೆಲೆ ಕರುಣನಿಧಿಯನು ಕರೆದು ತಾ ಕಾಲಲ್ಲಿ ಗಂಗೆಯ ಸುರಿದ ಬಾಲ ಬ್ರಹ್ಮಚಾರಿಯ ಅ.ಪ ಮತ್ಸ್ಯಾವತಾರನನು ಮುದದಿ ಮಂದರಗಿರಿಯನೆತ್ತಿದ ಸುರರಿಗಮೃತವನಿತ್ತ ಕೂರ್ಮನ ಧರೆಯನುದ್ಧರಿಸಿದ ವರಾಹನ ತರುಣಿ ನೀನೀಗ ತಂದು ತೋರೆಲೆ 1 ಭಕ್ತ ನಿಧಿಯಾದ ನರಸಿಂಹನ ಧರೆಯ ನೀರಡಿ ಅಳೆದ ವಾಮನ ದೊರೆಯ ನಾನಿನ್ನೆಂದು ಕಾಂಬೆನೆ ಭರದಿ ಭಾರ್ಗವನಾದ ರಾಮನ ತರುಣಿ ತ್ವರಿತದಿ ತಂದು ತೋರೆಲೆ2 ದಧಿಘೃತ ಮೆದ್ದವನ ದುರುಳ ತ್ರಿಪುರರ ಗೆಲಿದ ಬೌದ್ಧನ ಸುದತಿ ನೀನೀಗ ತಂದು ತೋರೆಲೆ 3
--------------
ವ್ಯಾಸರಾಯರು
ಕರೆದೆಡೆಗೆ ತಾ ಬರುವ ಕರೆದೆಡೆಗೆ ತಾ ಬರುವ ಪ ಬರುವೆ ತರುವ ಸುಖವ ಮುರುಳೀಧರನು ಅ.ಪ ತಿಳಿಯ ಭಕುತಿಯ ಪಡೆದ ಜನರಿಗೆ ಗೆಳೆಯನಿವ ಬಲು ಸುಲಭನು ಇಳೆಯಸುರರಾದರದಿ ಕರೆಯಲು ಹರುಷದಲಿ ನಲಿನಲಿಯುತಲಿ 1 ಸದನದಲಿ ಹದನಿಲ್ಲ ಈತನಿ ಗೊದಗಿಸುವುದತಿ ಸಾಹಸ ವಿಧಿಯ ಬರಹವು ಇಲ್ಲವೆನುತಲಿ ಹೆದರದಿರಿ ಮಧುಸೂಧನನು 2 ಇದು ನನದು ಇದು ನನದು ಎನುವ ಮದದ ವಚನಕೆ ನಗುತಲಿ ಇದು ನಿನದು ಎನ್ನಲು ಪ್ರಸನ್ನನು ವಿದುರನಾಲಯ ಪೊಕ್ಕಿಹ3
--------------
ವಿದ್ಯಾಪ್ರಸನ್ನತೀರ್ಥರು
ಕರೆವರು ನಿನ್ನ ಹಸೆಗೆ ಪರಮ ಪುರುಷ ನೀನೆಂದು ಪ ಸರಸದಿಂದ ಸಿರಿಸಹಿತ ಬರಬೇಕು ನೀಂ ತ್ವರಿತದಲಿ ಅ.ಪ ನಾದದಶವಾದ್ಯಗಳು ಮೋದದಿಂದ ಮೊರೆಯಲು ವೇದಾಂತರಹಸ್ಯವೆಂಬ ವಿವಿಧ ಗೀತೆಗಳ ಪಾಡಿ 1 ತತ್ವಭಿಮಾನಿಗಳೆಂಬ ಮುತ್ತೈದೆಯರೆಲ್ಲ ಕೂಡಿ ಸೂರಿ ಜನಪ್ರಿಯನೆಂದು 2 ಎಂಟುದಳ ಪದ್ಮದೊಳು ನೆಂಟರಿಷ್ಟರೆಲ್ಲುರು ನೂ- ರೆಂಟು ಚಿತ್ರಗಳ ಬರೆದು ರಚಿಸಿ ರತ್ನ ಪೀಠವನ್ನು 3 ಧೀರ ಸಭೆಯಲ್ಲಿ ಹದಿನಾರು ನಿನ್ನಾಧೀನಗೈದು 4 ಯಾಮ ಯಾಮದಿ ಬಿಡದೆ ಕಾಮಿನೀ ಮಣಿಯರು ನಿ- ಷ್ಕಾಮ ಸುಖವೀವ ಗುರುರಾಮವಿಠಲ ಬಾರೆಂದು 5
--------------
ಗುರುರಾಮವಿಠಲ
ಕರೆವರು ಬಾ ಮನೆಗೆ ಶ್ರೀ ಕೃಷ್ಣ ಮೂರ್ಜಗಂಗಳಿಗೆ ರಾಜಾಧಿರಾಜ ಪ ರಾಜಿಸುವ ಸೋಜಿಗದ ಬಲು ಸೋಜಿಗದ ಮನೆಗೆ ಶ್ರೀ ಕೃಷ್ಣ ಅ.ಪ ಸಾರಸಲೋಚನೆ ಭೀಷ್ಮಕ ಕುವರಿ ನೂರು ವಿಧದ ಬಲು ಪರಿಮಳದ ಚಾರು ಕುಸುಮಗಳ ಹಾರವ ಪಿಡಿದು ಮಾರಜನಕ ನಿನ್ನ ಕೋರುವಳು 1 ಚಿತ್ತಜನಯ್ಯನ ಚಿತ್ತದ ರಾಣಿ ಯತ್ನದಿ ನಿನ್ನನು ಕರೆಸಿದಳು ಚಿತ್ರವಿಚಿತ್ರದ ಮುತ್ತುರತ್ನಗಳ ಉತ್ತಮ ಪೀಠಕೆ ದಯಮಾಡೊ 2 ಯದುಕುಲ ನಂದನ ನೀ ಬಾರೋ ಮಧುರಾನಾಥಾ ನೀ ಬಾರೋ ಮದಗಜಗಮನದಿ ಬಾರೊ ಪ್ರಸನ್ನ ವದನೆಯರಾರತಿ ಬೆಳಗುವರು3
--------------
ವಿದ್ಯಾಪ್ರಸನ್ನತೀರ್ಥರು