ಒಟ್ಟು 6534 ಕಡೆಗಳಲ್ಲಿ , 130 ದಾಸರು , 4232 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾವದು ಎನ್ನನುದಿನಾ ರಂಗಾ| ಕಾವದು ಕಾವದು ಎನ್ನನುದಿನಾ | ಭಾವಿಕ ಜನರ ನಿಧಾನಾ ಪ ಜಲದಲಿ ಕರಿಯಾ ಪಿಡಿದ ಮಕರಿಯಾ | ಸೀಳಿದ ಯಾದವರಾಯಾ | ಇಳೆಯೊಳು ಗಿರಿಯಾ ಧರಿಸಿದೆ ಗರಿಯಾ | ಕುಲ ಅರಿನಂದನ ಪ್ರೀಯಾ 1 ರಮಣನೆ ಸಿರಿಯಾ ಲಲನೆಗೆ ಸೀರಿಯಾ | ಸಮಯಕ ನಿತ್ತ ಅನೇಕ | ಕಮನೀಯ ಕಾಯಾ ದೇವ ನೀ ಕಾಯಾ | ಜನಕನೇ ವ್ಯಾಪ್ತ ತ್ರಿಲೋಕಾ 2 ಸರಸಿಜನಯನಾ ಸಾಸಿರ ನಯನಾ | ಸೋದರ ದೇವ ದೇವೇಶಾ | ವರಸದ್ವದನಾ ಈ ರೆರಡೊದ ನಾ | ವಂದಿತ ಚರಣಾ ಶ್ರೀಯೀಶಾ3 ಭಕುತರಬಂಧು ಕೈರವ ಬಂಧು ಶೇಖರಧೇಯ ಮುಕುಂದಾ | ಸಕಲಾಧಾರಾ ದಿನೊದ್ಧಾರಾ | ದೇವಕಿ ದೇವಿಯ ಕಂದಾ4 ಸುಜನರ ಪಕ್ಷಾ ಕುಜನ ವಿಪಕ್ಷಾ | ಶ್ರೀ ವತ್ಸಾಂಕಿತ ದೇವಾ | ಗಜವರ ವರದಾ ಯದುಕುಲ ವರದಾ | ನವಮರ್ಧನ ಜಗಜೀವಾ5 ಕಾಳಿಯ ಸರ್ಪಾ ಮದಹರ ಸರ್ಪಾ| ಶನವಾಹನ ಗೋವಿಂದಾ | ಶ್ರೀ ಲಲನೀಯಾ ಸದ್ಭಾವನೀಯಾ | ಪೂರಿತ ಪರಮಾನಂದಾ6 ಸಿಂಧು ಸಿಂಧು | ವಿಗಾಗಿಹೆ ಕುಂಭಜ ನೀನು | ಹರಣ ರಂಗಾ | ಧೀರನೇ ಭಜಕರ ಧೇನು7 ನವನೀತ ಚೋರಾ ನಿಗಮದ ಚೋರಾಂ | ತಕ ಗೋಕುಲ ವಿಹಾರಾ | ಭವ ಪರಿಹಾರಾ ಕೌಸ್ತುಭಧಾರಾ | ಮಹಿಪತಿಸುತ ಮನೋಹಾರಾ 8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾವೇರಿ ಕಲುಪಾಪಹಾರಿ ಪಾವನ ಶರೀರೆ ಶುಭತೋಷಕಾರಿ ಪ ವಾಸುದೇವ ರಂಗೇಶನಾಲಯಕೆ ನೀ ನಾವರಣಳಾಗಿಪ್ಪೆ ವಿರಜೆಯಂತೇ ದೇವ ಋಷಿ ಗಂಧರ್ವ ಪಿತೃಪ ನರವರರಿಂದ ಸೇವನೀಯಳಾಗಿ ಸರ್ವಾರ್ಥ ಪೂರೈಪೆ 1 ಜಲಚರಾನ್ವೇಷಣ ಲುಬ್ಧ ಸಾಲಿಗ್ರಾಮ ತುಲಸಿ ವೃಕ್ಷವನೆ ಕೊಡಿಸಿದ ಮಾತ್ರದೀ ಕಲುಷರಾಶಿಗಳೆಲ್ಲ ಕಳೆದು ಮುಕ್ತಿಯನಿತ್ತೆ ಸಲಿಲಮಂದಿರೆ ನಿನ್ನ ಕರುಣಕೇನೆಂಬೆ 2 ರವಿ ತುಲಾರಾಶಿಗೈದಿದ ಸಮಯದೊಳಗೊಂದು ಮಜ್ಜನ ಗೈವ ಮಾನವರಿಗೆ ಪವನಾಂತರಾತ್ಮಕನ ಪಾದಕಮಲವ ತೋರಿ ಭವಜ ರೋಗವ ಕಳೆದು ಭಾಗ್ಯವಂತರ ಮಾಳ್ಪೆ 3 ಶ್ರೀ ಪವನ ಶಿವರಿಂದ ತಾ ಪೂಜೆಗೊಳುತ ಬಹು ಪರ ಮನು ವ್ಯಾಪಿಸಿಹ ನಿನ್ನೊಳದ್ಯಾಪಿ ಸ್ವರ್ಗಸ್ಥ ಜನ ರೀ ಪೊಡವಿಯೊಳು ತವ ಸಮೀಪದಲಿ ಜನಿಸುವರು 4 ಮೂಢಮತಿ ನಾನು ಕೊಂಡಾಡ ಬಲ್ಲೆನೆ ನಿನ್ನ ಬೇಡಿಕೊಂಡೆನು ಹೃದಯ ನೀಡದೊಳಗೇ ಗೂಡ ಪದ ಶಯನ ಜಗನ್ನಾಥ ವಿಠ್ಠಲನಂಘ್ರಿ ನೋಡುವ ಸೌಭಾಗ್ಯ ದಯ ಮಾಡು ಪ್ರತಿದಿನದಲ್ಲಿ ಬ 5
--------------
ಜಗನ್ನಾಥದಾಸರು
ಕಿಂಕರರು ಗಣಪನ್ನ ಧ್ಯಾನಿಸಿ ಪ. ಪಾದ ಪಂಕಜವನೆ ನೆನೆಯುವುದು ಮನದೊಳು ಶಂಕರನ ಪ್ರಾಥಿಸುತ ಹರಿಯನಾತಂಕವಿಲ್ಲದೆ 1 ಪರಿ ಶಂಕೆಯಿಲ್ಲದೆ ಹರಿ ಮಹಿಮೆ ಪೊಗಳಲು 2 ಸರಸತಿಯ ಧ್ಯಾನಿಸಿ ನಿಮ್ಮ ಮಂಕಿನಜ್ಞಾನವನು ಕಳೆಯಲು ಪವಮಾನಗೆ ವಂದಿಸಿ 3 ಪಂಕಜಾಕ್ಷಿ ರಮಾದೇವಿ ಶ್ರೀ ಶ್ರೀನಿವಾಸನ ಪಾದ ಪಂಕಜವÀ ನೆನೆದು ಹರುಷದಿ 4 ಹರಿಕಿಂಕರು ಇರಿ ಎಂದರುಹಿದ ಪುರಂದರದಾಸರ ನೆನವೆನನುದಿನವೂ 5
--------------
ಸರಸ್ವತಿ ಬಾಯಿ
ಕುಟಿಲವನು ಕಳಿಯೋ ನಿಟಿಲ ನಯನಾ ಪ ದುರ್ವಿಷಯ ಲಂಪಟದಿ ಮುಳಿಗಿ ಘನ ಸಂಕಟಕೆ ಒಳಗಾದೆನೊ ಪ್ರಭುವೇ ಅ.ಪ. ಪಂಚಭೇದ ಜ್ಞಾನವನು ಪಂಚವಿಧ ತೋರೆಂದು ಬಿನ್ನೈಪೆ ಮಂಚಪದಯೋಗ್ಯಾ ವೈರಾಗ್ಯ 1 ಕಾಮಿನಿಯಳಾ ಇಟಕೊಂಡು ಅನ್ಯಳ ಕಾಮಿಸುವುದುಚಿತವೇ ರಾಯಾ ಕಾಮರೂಪದಿಂದೆನ್ನ ಕಡೆಗೆತ್ತಿ ಕಾಯದಿರೆ ಕಾಮಹರನೆಂಬ ಬಿರುದ್ಯಾತಕೊಕಾಮಪಿತನೇ ಕೇಳು ಕಾಲಕಾಲಕೆ ನಿನ್ನ ಕಾಲಿಗೆರಗುವಂತೆ ಮಾಡಿ 2 ಬಿಲ್ವಭಜಕನೆ ಕೇಳು ಮತ್ತೊಂದು ನಾನೊಲ್ಲೆಶಪಥ ಪೂರ್ವಕ ಪೇಳ್ವೆ ಮಿಥ್ಯಮತವೊಲ್ಲೆನೊಒಲ್ಲದ ಸುರನಿಗೆ ಚೆಲ್ವಿಯಾಗಿತ್ತು ಕಂಗೆಡಿಸಿ ಉಳಿಸಿದೆ ಬಿಲ್ಲುಗಾರನೆ ಮಗನ ಕಾಳಗದಿ ಕೆಡಹಿ ತಂದೆ-ವರದಗೋಪಾಲವಿಠಲನ ನೋಡಿ ತೋರಿದೇ 3
--------------
ತಂದೆವರದಗೋಪಾಲವಿಠಲರು
ಕುಣಿ ಕುಣಿಯಲೋ ಬಾಲಗೋಪಾಲ ಪ ಗೋಪಾಲ ನೀರದ ನೀರ ಅ.ಪ ಯಮುನಾ ತೀರದಿ ಹಿಮಕಿರಣನು ತಾ ಮಮತೆಯ ತೋರಲು ಬೆಳಗುತಿಹ ಘಮಘಮಿಸುವ ಈ ಸುಮಗಳು ಸೂಸಿರೆ ಪ್ರಮದೆಯರೆಲ್ಲರ ಪ್ರೇಮಾಂಗಣದಲಿ 1 ಗಂಧವ ಮಾರುತ ಬೀರುತಲಿರುವನು ಇಂದಿರೆ ಕೊಳಲಿನ ರೂಪದಲಿ ಚಂದದಿ ನಾದವ ತುಂಬಲು ಪರಮಾ ನಂದವು ಮಾನಸ ಮಂದಿರದಲಿ ನೀ 2 ಕಾಯವು ರೋಮಾಂಚಿತವಾಯ್ತೊ ಮಾಯಾವಾದವೊ ಮೋಹಗಳು ತಾಯಿ ಮಡಿಲು ಸೇರಿದ ಶಿಶುವಂದದಿ ಹಾಯವೆನಿಸಿತೊ ಜೀವನ ಯಾತ್ರೆಯು 3 ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ ಬಿಡಿಸೊ ಸ್ವಾಮಿ ನಿನ್ನಯ ಪಾದಯುಗಳವೆ ಕ್ಷೇಮವೆನ್ನಿಸೊ ಸಾರಾಸಾರ ವಿವೇಕದಿ ಮೋಕ್ಷದ ಕೋರಿಕೆ ಪುಟ್ಟಿಸೊ ಭವ ಪಾರ ಸೇರಿಸೋ 4 ಸಾರದ ಕರುಣಕೆ ಕಾರಣ ಬಿಂಬದ ಮೂರುತಿ ದರುಶನವು ಭಾರತಿ ರಮಣನ ಮಂಗಳಶಾಸ್ತ್ರ ವಿಚಾರವೆ ಕಾರಣವು ಭಕುತ ಜನ ಪ್ರಸನ್ನ ಲಕುಮಿರಮಣ ಎನ್ನು ತಕಿಟ ತಕಿಟ ಎಂದು 5
--------------
ವಿದ್ಯಾಪ್ರಸನ್ನತೀರ್ಥರು
ಕುಣಿಸೋ ನಾರದಾ ಎನ್ನ ಕುಣಿಸೋ ನಾರದಾ ಪ ಕುಣಿಸೋ ಎನ್ನ ಕಾಲಿಲಿಂದ ಕಣಕಣೆಂಭೊ ಗೆಜ್ಜೆಕಟ್ಟಿ ಅ.ಪ. ಮೋದ ವನವ ಚರಿಸುವಂತೆಮಾಡೋ 1 ವದನದಲ್ಲಿ ಹರಿಯ ಸ್ಮರಣೆ ಮುದದಿ ಪಾಡುತಾಲೆ ಕಥೆಯಗದಗದಾನೆ ರೋಮ ಉಬ್ಬಿ ಒದಗುವಂತೆ ಭಾಷ್ಯ ಮಾಡೋ 2 ಏಸು ಲೇಸು ವಿಷಯಗಳಲಿ ವಾಸಮಾಡದಂಥ ಇಂದಿರೇಶಸುಕಧಾರ್ಥಸಾರ ಲೇಶ ಬಂದು ಸತತ ಮಾಡೋ 3
--------------
ಇಂದಿರೇಶರು
ಕುಂದಣದ ಹಸೆಗೆ ಛಂದದಿಂದ ಬಾರೆ | ಸಿಂಧು ಕುಮಾರೆ | ಶೃಂಗಾರಮಯವಾದ ಕಂಗೊಳಿಸುವ ಬಹು ಸಹೋದರಿ 1 ಸಿಂಧುರಮಂದಗಮನೆ ಕುಂದಕುಟ್ಮಲರದನೆ ಇಂದು ಧರೆಯಲಿ ಸುರವೃಂದವಂದಿತ ಜನನಿ 2 ಕಾಮನ ಜನನಿ ಕಾಮಿತದಾಯಿನಿ ಗೋಮಿನಿರುಕ್ಮಿಣಿ ಶಾಮಸುಂದರನ ರಾಣಿ 3
--------------
ಶಾಮಸುಂದರ ವಿಠಲ
ಕುಂದಣದಾರುತಿ ತಂದು ಬೆಳಗಿರೆ ಪ ಮಂದರ ಧರಗೆ ವಂದಿಸುವರ ಭವಬಂಧ ಬಿಡಿಸುವಗೆ 1 ವಿಜಯಸಾರಥಿಗೆ ದ್ವಿಜವರ ಗಮನಗೆ ಪಂಕಜ ಭವಪಿತಗೆ 2 ಸುರಪರಿ ಪಾಲಗೆ ಶರಧಿಜ ಲೋಲಗೆ ಶರಣರ ಪೊರಿವ “ಕಾರ್ಪರ ನರಸಿಂಹಗೆ” 3
--------------
ಕಾರ್ಪರ ನರಹರಿದಾಸರು
ಕುಂದಣದಾರುತಿ ತಾರೆ ಕುಂದಣದಾರುತಿ | ಸುಂದರವದನ ಕಮಲನಾಭನಿಗೀಗ ಪ ಶೌರಿ ಸುರವಂದ್ಯಗೆ ವಾರಿಧಿಶಯನಗೆ | ಮುರವೈರಿ ಮದನಪಿತನಿಗೀಗ 1 ಮುಕ್ತಿ ಶುಭದಾತಗೆ | ಭಕ್ತರ ಪರಿಪಾಲಗೆ | ಲಕುಮೀಶಗೆ ಶುಭದಿ ಪೋಷಗೆ 2 ಶಾಮಸುಂದರಾಂಗಗೆ ಸಾಮಜೇಂದ್ರ ಪಾಲಗೆ ಸುಮನಯನ ಶಮಲದೂರಗೀಗ 3
--------------
ಶಾಮಸುಂದರ ವಿಠಲ
ಕುಂದಣಾರುತಿ ತಾರೆ ಸಖಿ | ಸಿಂಧುನಂದನೆಗಿಂದು ಮುಖಿ ಪ ವಿಧಿ ಮಾತೆಗೆ ವರದಾತೆಗೆ | ಕೃತಿಲೀಲೆ ನುತಿನೀಲೆ ರುಕ್ಮಿಣಿಗೆ 1 ಜಂಭಾರಿ ವಂದಿತೆ ಶ್ರೀರಂಬೆಗೆ ಜಗದಂಬೆಗೆ | ಸುನೀತಾಂಬೆಗೆ | ಅಂಬುಜ ಮಂದಿರ ಅಂಭ್ರಣಿಗೆ 2 ಶ್ರೀ ಶಾಮಸುಂದರನರ್ಧಾಂಗಿಗೆ ಶುಭಾಂಗಿಗೆ | ದಯಾಪಾಂಗೆಗೆ | ಭೂಸುರ ಸುಚರಿತ ಭಾರ್ಗವಿಗೆ 3
--------------
ಶಾಮಸುಂದರ ವಿಠಲ
ಕುದುರೆ ಬಂದಿದೆ ಚೆಲುವಕುದುರೆ ಬಂದಿದೆ ಪ. ಕುದುರೆ ಬಂದಿದೆ ವಾದಿರಾಜಗೆಮುದದಿ ಜ್ಞಾನ ಭಕುತಿ ಕೊಡುವ ಅ.ಪ. ಹಿಂಗಾಲಿಂ ರಕ್ಕಸರ ಒದೆವ ಕುದುರೆಮುಂಗಾಲು ಕೆದರಿ ಬಾಲವ ಬೀಸಿತಗ್ಗಿಸಿ ತಲೆಯ ಅಡಿಗಡಿಗೆಜಿಗಿದು ಹಾರಿ ಹುಂಕರಿಸುವ1 ಗರುವಿ ಮಹಲಕ್ಷ್ಮಿ ತನ್ನವರನೆಂದು ಒಲಿದು ಬರುವಉರದಿ ಶ್ರೀವತ್ಸ ಕೌಸ್ತುಭಧsÀರಿಸಿ ತಾಂ ಮೆರೆಯುವಂಥ 2 ಹಲ್ಲಣವಿಲ್ಲದೆ ನಿಲ್ವುದು ಕುದುರೆಒಲ್ಲದು ಕಡಿವಾಣ ಕುದುರೆಬೆಲ್ಲಕಡಲೆ ಮೆಲ್ಲುವ ಕುದುರೆಚೆಲುವ ಹಯವದನನೆಂಬೊ ಕುದುರೆ 3
--------------
ವಾದಿರಾಜ
ಕುಮಾರ ಗುಹಗೆ ಎಸಗೀ ಪ ವಾಹನನಿಗೆ ಧೀರಗೆ ಜಯವೆಂದು ಆರತಿ ಅ.ಪ ವೇದೋಕ್ತ ಮಂತ್ರದಿಂದ ಶರ್ಕರ ಮೊದ-ಲಾದ ದ್ರವ್ಯದಿಂದ ಸಾಧು ವಂದಿತನಿಗೆ ಭೂದೇವರಭಿಷೇಕ ಸಾದರದಲಿ ಮಾಡಿ ಮೋದದಿ ಜಯವೆಂದು ||ಆರತಿ|| 1 ಕಲಶೋದಕ ಮಂತ್ರಿಸಿ ಭೂಸುರರೆಲ್ಲ ನಲವಿಂದಲಭಿಷೇಕಿಸಿ ತಲೆಗೆ ಗಂಧಾಕ್ಷತೆ ತುಲಸಿ ಪತ್ರವು ವುಷ್ಪಗಳ ಮಾಲೆ ಇರಿಸುತ್ತ ನಲವಿಂದೆ ಜಯವೆಂದು ||ಆರತಿ|| 2 ಓಗರ ಜಂ- ಬೂಫಲ ಭಕ್ಷ್ಯವ ಶ್ರೀಪತಿ ಸಖಗೆ ಸ-ಮಾರ್ಪಿಸಿ ಜಯವೆಂದು ||ಆರತಿ|| 3 ಮೂರು ಪ್ರದಕ್ಷಿಣೆಯ ಭಕ್ತಿಯೊಳ್ ನಮ-ಸ್ಕಾರವ ಪ್ರಾರ್ಥನೆಯ ಮಾರಾರಿಸುತಗೆ ಅ-ಪಾರ ಮಹಿಮನಿಗೆ ಹಾರುವರೆಸೆಗುತೊ-ಯ್ಯಾರದಿ ಜಯವೆಂದು ||ಆರತಿ|| 4 ಮಂಗಳ ಶರಜನಿಗೇ ಗುಹಗೆ ಜಯ ಮಂಗಲ ಸ್ಕಂಧನಿಗೇ ಮಂಗಲ ಪಾವಂಜೆ ವಾಸ ಷಡ್ಶಿರನಿಗೆ ಮಂಗಲದಾಸರ ಕಾವಗೆ ಜಯವೆಂದು ||ಆರತಿ|| 5
--------------
ಬೆಳ್ಳೆ ದಾಸಪ್ಪಯ್ಯ
ಕುಲವಂತನೇ ನೀನು ಎಲೋ ಪರಮಾನಂದ ಕುಲಹೀನನೇ ನಾನು ಪೇಳೆಲವೊ ಸ್ವಾಮಿ ಪ ಹೊಲೆಯ ಪೆದ್ದಯ್ಯಗೆ ಒಲಿದವನ ಆಳಾದಿ ಕುಲದಿ ಮಾದಿಗರ್ಹರಳಯ್ಯನ ಮನೆಲುಂಡಿ ಚೆಲುವ ಕೂಸಿನ ಕೊರತೆ ಸಲಿಸಿದಿ ಬಲುಹಿತದಿ ಮಲಿನಸೀರೆಯ ನಿನ್ನ ತಲೆಗೆ ಸುತ್ತಿಕೊಂಡಿ 1 ಡೊಂಬಿತಿಯ ಗುಡಿಸಿಲಲಿ ಸಂಭ್ರಮದಿ ಮಲಗಿದಿ ಶಂಭೋ ಕುಣಿದೆಲೋ ಕುಂಬಾರಗೊಲಿದು ಸಾಂಬ ನೀ ನಡ ಪೊತ್ತು ಇಂಬು ಸುಡುಗಾಡು ನಿನಗಂಬುಧಿಧರನೆ 2 ಪುಲಿಚರ್ಮ ಹಾಸಿಕೊಂಡ್ಹೊಲಸು ಚರ್ಮುಟ್ಟಿರುವಿ ತಲೆ ಬುರುಡೆ ಕೊರಲಿಗೆ ಮಾಲೆ ಧರಿಸಿರುವಿ ಎಲೊ ದೇವ ಇನಿತಿರ್ದು ಕುಲವನೆಣಿಸುವಿ ನಿನ್ನ ಒಲವು ಬೇಡುವರಿಗೆ ಶ್ರೀರಾಮಸಖನೆ 3
--------------
ರಾಮದಾಸರು
ಕುಲವ್ಯಾವುದಯ್ಯ ಕಪಿಕುಲನೆ ನಿನಗೆ ಒಲಿದಿಹನು ಹರಿ ನಿನಗೆ ಎಂದು ಜನ ನುತಿಸುವರು ಪ. ಮರ ಹಾರುವಂಥ ಮರ್ಕಟಕುಲದಲವತರಿಸಿ ಶರಧಿ ಲಂಘಿಸುತ ದ್ವೀಪಾಂತರವಾಸಿ ದುರುಳರನು ಸಂಹರಿಸಿ ದೊರೆ ಸುತರ ಸೇವಿಸಿ ಕರದಿ ಎಂಜಲು ಕೊಂಡು ಮರವನೇರಿದನೆ 1 ಪ್ರಥಮ ಕುಲವನೆ ಬಿಟ್ಟು ದ್ವಿತೀಯ ಕುಲದೊಳಗುದಿಸಿ ಹಿತವೆ ರಕ್ಕಸಿ ಸಂಗ ಪಥದಿ ನಿನಗೆ ದಿತಿಜನಾಹುತಿ ಅನ್ನ ಗತಿಯಿಲ್ಲದಲೆ ತಿಂದು ಚತುರ ಕುಲಜನ ನೀ ನುತಿಸಿ ಹಿಗ್ಗಿದನೆ 2 ತುಳುವಂಶಜನೆ ನೀ ಲಲನೆ ಸಂಗವ ತೊರೆದು ಅಲೆದೆ ಯತಿಯಾಗಿ ಈ ಇಳೆ ಎಲ್ಲವ ಕುಲನ್ಯೂನ ಗೋಪಾಲಕೃಷ್ಣವಿಠ್ಠಲನ ಪದವ ಒಲಿಸಲೋಡಿದೆ ಆರು ಬರದಂಥ ಗಿರಿಗೆ 3
--------------
ಅಂಬಾಬಾಯಿ
ಕುಶಲಿಯಾಗಿರೈ ಯಶವಪೊಂದಿರೈ ಪ. ಕುಶಿಕತನುಜ ಯಾಗಪಾಲಕನೊಲವ ಪಡೆಯಿರೈ ಅ.ಪ. ಕಾಂತಾಪುತ್ರರಿಂ ಅನಂತ ಭಾಗ್ಯಮಂ ಶಾಂತಚಿತ್ತಮಾಂತುಧರೆಯೊಳನಂತ ಕಾಲಮುಂ 1 ವಂಶದೀಪನುಂ ಪ್ರಶಂಸನೀಯನುಂ ಕಂಸದಮನ ಭಕ್ತನುಂ ಎನಿಸಿ ಸಂತತಂ2 ಶೇಷಗಿರಿವರಂ ಪೋಷಿಸಲ್ಕೆ ತಾಂ ದೇಶಭಕ್ತರಾಗಿ ಬಾಳಿ ವಾಸಿಪಂಥದಿಂ 3
--------------
ನಂಜನಗೂಡು ತಿರುಮಲಾಂಬಾ