ಒಟ್ಟು 3826 ಕಡೆಗಳಲ್ಲಿ , 119 ದಾಸರು , 2440 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾಗಶಯನನು ನಿನಗಾಗಿಯೆ ಬಂದಿಹೆÉ ಬಾಗಿಲ ತೆಗೆಯೆ ಭಾಮೆ ನೀ ಬಾಗಿಲ ತೆಗೆಯೆ ಭಾಮೆ ಪ. ಕೂಗುವ ನೀನ್ಯಾರೊ ಈಗ ಹೊತ್ತಲ್ಲ ಕೂಗಬೇಡ ಪೋಗೋ ನೀ ಕೂಗಬೇಡ ಪೋಗೋಅ.ಪ. ನಿಗಮ ಚೋರನ ಗೆದ್ದ ನೀರಜಾಕ್ಷನೆ ಭಾಮೆ ನಾ ನೀರಜಾಕ್ಷನೆ ಭಾಮೆ ನಾರುವ ಮೈಯನ್ನು ಎನ್ನಲ್ಲಿ ತೋರದೆ ಸಾರು ಸಾರು ನೀ ದೂರ ರಂಗ ಸಾರು ಸಾರು ನೀ ದೂರ 1 ಮಂದರ ಗಿರಿಯನು ಬೆನ್ನಲಿ ಪೊತ್ತ ಇಂದಿರೆಯರಸನೆ ಭಾಮೆ ನಾ- ನಿಂದಿರೆಯರಸನೆ ಭಾಮೆ ಇಂದು ನಿನಗೆ ತಕ್ಕ ಭಾರಗಳಿಲ್ಲವು ಸಿಂಧುವಿನೊಳು ನೀ ಪೋಗೈ ಕೃಷ್ಣ ಸಿಂಧುವಿನೊಳು ನೀ ಪೋಗೈ 2 ಧರಣಿಗೆ ಸುಖವನು ತೋರಿದ ಸೂಕರ ಪರಮಪುರುಷನೆ ಭಾಮೆ ನಾ ಪರಮ ಪುರುಷನೆ ಭಾಮೆ ವರಾಹರೂಪದ ನಿನ್ನ ಗುರುಗುರು ಶಬ್ದವ ಅರಿವಳಲ್ಲವೊ ನೀ ಪೋಗೈ ರಂಗ ಅರಿವಳಲ್ಲವೊ ನೀ ಪೋಗೈ 3 ಬಾಲನ ತಾಪವ ಕೋಪದಿ ತರಿದ ನಾರಸಿಂಹನೆ ಭಾಮೆ ನಾ ನಾರÀಸಿಂಹನೆ ಭಾಮೆ ಜ್ವಾಲೆಯ ವದನ ಕ್ರೂರ ಕಾರ್ಯಂಗಳ ಕೇಳಿ ಅಂಜುವಳಲ್ಲ ಪೋಗೈ ರಂಗ ಕೇಳಿ ಅಂಜುವಳಲ್ಲ ಪೋಗೈ 4 ವಾಸವನನುಜನೆ ವಾಮನರೂಪನೆ ನಾಶರಹಿತನೆ ಭಾಮೆ ನಾ ನಾಶರಹಿತನೆ ಭಾಮೆ ಕೂಸಿನ ರೂಪದಿ ಮೋಸವ ಮಾಡಿದಗೆ ದಾಸಿ[ಯೊ]ಬ್ಬಳು ಬೇಕೇ ರಂಗ ದಾಸಿ[ಯೊ]ಬ್ಬಳು ಬೇಕೇ 5 ತಾತನ ಮಾತಿಗೆ ತಾಯಿಯನಳಿದ ಖ್ಯಾತ ಭಾರ್ಗವನೆ ಭಾಮೆ ನಾ ಖ್ಯಾತ ಭಾರ್ಗವನೆ ಭಾಮೆ ಮಾತೆಯನಳಿದ ಘಾತಕ ನಿನಗೆ ದೂತಿಯೊಬ್ಬಳು ಬೇಕೇ ರಂಗ ದೂತಿಯೊಬ್ಬಳು ಬೇಕೇ 6 ದಶರಥನಂದನ ದಶಮುಖಭಂಜನ ಪಶುಪತಿವಂದ್ಯನೆ ಭಾಮೆ ನಾ ಪಶುಪತಿ ವಂದ್ಯನೆ ಭಾಮೆ ಹಸನಾದ ಏಕಪತ್ನೀವ್ರತದವಗೆ ಸುದತಿಯೊಬ್ಬಳು ಬೇಕೇ ರಂಗ ಸುದತಿಯೊಬ್ಬಳು ಬೇಕೇ 7 ಹದಿನಾರು ಸಾಸಿರ ನೂರೆಂಟು ಸುದತೇರ ಬದಿಯಲಿಟ್ಟವನೆ ಭಾಮೆ ನಾ ಬದಿಯಲಿಟ್ಟವನೆ ಭಾಮೆ ಹದನಕ್ಕೆ ಬಾರದ ಮಾರ್ಗಂಗಳ್ಯಾತಕ್ಕೆ ವದನ ಮುಚ್ಚಿಕೊಂಡು ಪೋಗೈ 8 ಬೌದ್ಧರಕುಲದಲ್ಲಿ ಹುಟ್ಟಿ ಅವರಂತೆ ಮುಗ್ಧರ ಮಾಡಿದೆ ಭಾಮೆ ನಾ ಮುಗ್ಧರ ಮಾಡಿದೆ ಭಾಮೆ ಶುದ್ಧಗುಣಗಳೆಲ್ಲ ಇದ್ದಲ್ಲಿಗೆಪೇಳೆ ವೃದ್ಧಳು ನಾನಲ್ಲ ಪೋಗೈ ರಂಗ ವೃದ್ಧಳು ನಾನಲ್ಲ ಪೋಗೈ 9 ವರ ತುರಗವನೇರಿ ಧರೆಯೆಲ್ಲ ಚರಿಸಿದ ದೊರೆವರ ನಾನೆ ಭಾಮೆ ಚರಿಸಿದ ದೊರೆವರ ನಾನೆ ತÀುರಗದ ಚಾಕರಿಯೊ[ಳಗಿರುವವನಿಗೆ] ತರುಣಿಯ ಭೋಗವು ಬೇಕೇ ರಂಗ ತರುಣಿಯ ಭೋಗವು ಬೇಕೇ 10 ಸರುವ ಪ್ರಾಣಿಗಳ ಉದರದೊಳಿಂಬಿಟ್ಟು ಶರಧಿಯೊಳ್ಮಲಗಿದವ ಭಾಮೆ ನಾ ಶರಧಿಯೊಳ್ಮಲಗಿದವ ಭಾಮೆ ದೊರೆ ಹಯವದನ ಚರಣಕ್ಕೆರಗುತ ತೆರೆದಳು ಬಾಗಿಲ ಭಾಮೆ ಆಗ ತೆರೆದಳು ಬಾಗಿಲ ಭಾಮೆ 11
--------------
ವಾದಿರಾಜ
ನಾಟಕ ರಂಗದಲಿ ನಟಶಿರೋಮಣಿಯೊಬ್ಬ ಪಟುತನದಿ ವಿಧವಿಧನ ನಟನೆಗಳ ತೋರುವನು ಪ ಅಘಟನಾಘಟನ ಶಕ್ತನ ಕಪಟನಾಟಕವು ಘಟಕರಲ್ಲದ ಜನಕೆ ಎಟುಕದಾನೋಟ ಅ.ಪ ಮುಖ್ಯಪಾತ್ರವು ನಮ್ಮ ರುಕ್ಮಿಣಿ ರಮಣನದು ಮುಖ್ಯತಾರೆಯು ಲೋಕ ಜನನಿ ಲಕುಮಿ ಇಕ್ಕಿದನು ಗೋರೂಪ ಚತುರಾನನನು ಮುದದಿ ಮುಖ್ಯಪ್ರಾಣನೆ ತುರಗ ಮುಕ್ಕಣ್ಣ ಕರುವಾದ 1 ಸುಖಸಾರನನು ಪಡೆದು ಧನ್ಯಳಾದ ಯಶೋದೆ ಬಕುಳೆಯೆ ತಾನಾದಳೀ ನಾಟಕದಲಿ ಅಕಳಂಕ ಮಹಿಮನನು ಅಗಲದಿದ್ದ ಸತಿಯು ಮುಖನೋಡಿ ಕೋಪದಲಿ ಕಲ್ಲುಗಳನೆಸೆದಳು 2 ಸರ್ವತ್ರ ವ್ಯಾಪ್ತನಿಗೆ ಇರಲು ಜಗವು ಸಿಗದೆ ಕಿರಿದ ತಾ ಹಲ್ಲುಗಳ ವರಹನಲ್ಲಿ ಹರನ ತಾತನು ತಾನು ಸ್ಮರನ ಬಾಣದಿ ನೊಂದ ಸುರಮೋಹಿನಿಯು ಇಂಥ ಕೊರವಂಜಿಯಾದಳು3 ಹುಟ್ಟಿಸುವ ಬೊಮ್ಮನನು ಪುಟ್ಟಶಿಶುವನೆ ಮಾಡಿ ಹೊಟ್ಟೆಗಿಲ್ಲದೆ ಬಹಳ ಬಾಡಿ ಇರಲು ಮೃಷ್ಟಾನ್ನವನು ಚಿನ್ನ ತಟ್ಟೆಯಲಿ ತಂದಿಡಲು ಶ್ರೇಷ್ಠವಿದು ಜನನಿಗೆನ್ನುತ ತಿಂದು ತೇಗಿದಳು 4 ಬಡುಕನೆದೆಗೊದೆಯಲವನಡಿಗಳಿಗೆ ಶರಣೆಂದ ಕಡು ಕೋಪಿ ಗೋವಳನ ಕೊಡಲಿಗೊಡ್ಡಿದ ಶಿರವ ಹಿಡಿ ಮಣ್ಣು ಪಿಂಡಗಳನಿತ್ತ ಚಂಡಾಲನಿಗೆ ಸಡಗರದಿ ಲಕುಮಿಯನೇ ಕರದಲಿತ್ತ ಪ್ರಸನ್ನ 5
--------------
ವಿದ್ಯಾಪ್ರಸನ್ನತೀರ್ಥರು
ನಾಥಾ ನಮಿಪೆ ನಿನಗೇ | ಶ್ರೀ ಬದರೀನಾಥಾ ನಮಿಪೆ ನಮಿಪೆ ನಿನಗೆ ಪ ನಾಥಾ ಜಗಕೆ ಸರ್ವಾ | ನಾಥ ಜನರ ಪಾಲಭೀತಿ ರಹಿತ ಬದರಿ | ನಾಥ ವಿಚಿತ್ರ ಶಕ್ತಾ ಅ.ಪ. ಸರ್ವ ಪ್ರಾಭವ ಶಕುತೀ | ರಕ್ಷಣ ಲಯಸರ್ವ ವಿಚಿತ್ರ ಶಕುತೀ ||ಪರ್ವ ಪರ್ವಗಳಲ್ಲಿ | ಸರ್ವಾಸ್ಥಿ ಮಜ್ಜದಲಿಸರ್ವ ದೇಹದಿ ನಿಂತು | ಸರ್ವ ಕಾರ್ಯವ ಮಾಳ್ಪೇ ||ದ್ರುತ :- ಪರ್ವತ ಸುತೆ ಪ್ರಿಯ | ಶರ್ವನೊಡೆಯಪವಮಾನನಾದಿ ಸುರ | ಸರ್ವವಂದ್ಯ ಹರಿಉರ್ವಿಲಧಿಕ ಮ | ತ್ತೋರ್ವರ ಕಾಣೆನೊದುರ್ವಿಭಾವ್ಯ ಸಮ | ಸರ್ವೋತ್ತಮನೆ 1 ಏಕಮೇವನೆ ತಪವ | ಆಚರಿಸುತ್ತಲೋಕರಕ್ಷಕ ಕಾರ್ಯಮ ||ಅನೇಕಾ | ವಿಚಿತ್ರರೂಪ | ಸಾಕಾರಿ ಪ್ರಭು ನಿ-ರ್ವಿಕಾರಿಯಾಗಿ ಆ | ನೇಕಾ ಬಗೇಲಿ ಮಾಳ್ಪೆದ್ರುತ :ನಾಕ ಜಪಿತಭುವ | ನೈಕಾರಾಧ್ಯನೆಏಕ ಗುಣದಲಿ | ಏಕದೇಶ ರಮೆಲೋಕೇಶಾದಿ ಪಿ | ನಾಕಿಗಳ್ಬಲ್ಲರೆಪ್ರಾಗ್ದೇವತೆ ಹರ | ಸಾಕುವುದೆಮ್ಮ 2 ಚಿತ್ಸುಖಮಯ ವಪುಷ | ಧೇನುಕ ಮತ್ತೆವತ್ಸಾರಿ ಗೋಪ ಹರುಷ ||ವತ್ಸರದವಗುಣ | ಕುತ್ಸಿತ ಜನ ಹರಮತ್ಸ್ಯಾದಿರೂಪ ಶಿರಿ | ವತ್ಸ ಲಾಂಛನನೇ ||ದ್ರುತ :ಮತ್ಸ್ಯ ಧ್ವಜಪ ಪುರು | ಕುತ್ಸ ಭೋಜಪ ಗೋವತ್ಸ ಧ್ವನಿಗೆ ಬಹ | ಉತ್ಸಹ ಉಳ್ಳನೆಚಿತ್ಸುಖ ಪ್ರದ ಶರ | ಣ್ವೋತ್ಸಲ ಗುರು ಗೋ-ವಿಂದ ವಿಠಲ | ಮಾಂ ಪಾಹಿ ಪಾಹೀ 3
--------------
ಗುರುಗೋವಿಂದವಿಠಲರು
ನಾನಾ ಯೋನಿಗಳೊಳು ಹೀನಜನ್ಮದಿ ಬಂದು ನಾನು ತಿರುಗಲಾರೆನೊ ಗೋಪಾಲ ಪ. ಶ್ರೀನಿವಾಸ ನಿನ್ನ ಸೇರಿದ ಬಳಿಕ ಉದಾಸೀನ ಮಾಳ್ಪರೇನೋ ಗೋಪಾಲ ಅ.ಪ. ಇಂದ್ರಿಯದೊಳಿದ್ದೆನೊ ಗೋಪಾಲ ಪಿಂಡವಾದೆನೊ ಗೋಪಾಲ ಮಾಸ ನಾಲ್ಕಯಿದಾಗಲ ವಯವಂಗಳಿಂದ ಬೆಳೆವುತಿದ್ದೆನೊ ಗೋಪಾಲ 1 ನರಳಿ ಕೋಟಲೆಗೊಂಡೆನೊ ಗೋಪಾಲ ಹಿರಿದು ಚಿಂತಿಸಿದೆನೊ ಗೋಪಾಲ ಕಷ್ಟಬಡುತಿದ್ದೆನೊ ಗೋಪಾಲ ಸಂದ ಧರೆಗೆ ಪತನವಾದೆನೊ ಗೋಪಾಲ2 ಘಾಸಿಯೊಳೊರಲುವೆನೊ ಗೋಪಾಲ ಘಾಸಿಸಿ ದುಃಖಿಪೆನೊ ಗೋಪಾಲ ಬ್ಯಾಸತ್ತು ಒರಲುವೆನೊ ಗೋಪಾಲ ಶ್ವಾಸ ಎತ್ತಿದೆನೊ ಗೋಪಾಲ 3 ಬಾಲತನದಿ ಬಹುವಿಧದಾಟವ ತೋರಿ ಮೇಲನರಿಯದಿದ್ದೆನೊ ಗೋಪಾಲ ಮಾರ್ಜಾಲ ಘಾತಕನಾಗಿದ್ದೆನೊ ಗೋಪಾಲ ಕೂಳಿಗೀಡಾಗಿದ್ದೆನೊ ಗೋಪಾಲ ಪಾಳೆಯಕೀಡಾದೆನೊ ಗೋಪಾಲ 4 ಆಗಿ ಬಾಳುತಲಿದ್ದೆನೊ ಗೋಪಾಲ ನೀಗಿ ಬಾಳುತಿದ್ದೆನೊ ಗೋಪಾಲ ಬಾಧೆಗೆ ಬೆಂಡಾದೆನೊ ಗೋಪಾಲ ಆಗಲು ಪುತ್ರ ಬಾಂಧವರಿಗೋಸ್ಕರ ಭವ- ಸಾಗರ ಎತ್ತಿದೆನೊ ಗೋಪಾಲ 5 ಬಾಲ್ಯಯೌವನವಳಿದು ಜರೆ ಒದಗಿ ನಾನು ಮೇಲೇನರಿಯದಿದ್ದೆನೊ ಗೋಪಾಲ ಬೀಳುತೇಳುತಲಿದ್ದೆನೊ ಗೋಪಾಲ ಹೋದಂತಿದ್ದೆನೊ ಗೋಪಾಲ ಗೂಳಿಯಂದದಲಿದ್ದೆನೊ ಗೋಪಾಲ 6 ಬಾಳುತಲಿದ್ದೆನೊ ಗೋಪಾಲ ಗಿಷ್ಟನೆನಿಸಿಕೊಂಡೆನೋ ಮುಟ್ಟರೆನಿಸಿಕೊಂಡೆನೊ ಗೋಪಾಲ ಕೊಟ್ಟು ತಿನಿಸಿದೆನೊ ಗೋಪಾಲ7 ವೇದನೆಗೊಳುತಿದ್ದೆನೊ ಗೋಪಾಲ ಕೊಂಡದಿ ಬಿದ್ದೆನೊ ಗೋಪಾಲ ಗುಹ್ಯ ಯಾತನೆಗೊಳಗಾದೆ ಗೋಪಾಲ ಬಾಧೆಯೊಳು ಒರಲುವೆನೊ ಗೋಪಾಲ 8 ನಿನ್ನ ನೆನೆಯದಿದ್ದೆನೊ ಗೋಪಾಲ ದುಷ್ಟಬುದ್ಧಿಯೊಳಿದ್ದೆನೊ ಗೋಪಾಲ ಶ್ರೇಷ್ಠಜನ್ಮದಿ ಬಂದೆನೊ ಗೋಪಾಲ ಸೃಷ್ಟಿಯೊಳು ತುರುಗೇರಿ ಗುರು ಅಚಲಾನಂದವಿಠಲ ಸಲಹೆಂದೆನೋ ಗೋಪಾಲ 9
--------------
ಅಚಲಾನಂದದಾಸ
ನಾನು ಎಂಬೊದೆ ದೊಡ್ಡದು ನೀನೆಲ್ಲಿಹೆಯೊ ನಾನೆಲ್ಲಿ ಕಾಣಲಿ ಪ. ನಾನೆಂಬೊ ವ್ಯಾಪಾರ ನೀನೆ ಮಾಡಿಹೆ ಗಾನಲೋಲ ಸರ್ವರಂಗಲಿ ನಾನೇ ಇಹೆನೆಂದು ಅ.ಪ. ಸರ್ವರೊಳಗೆ ನಾನೆಂಬೊದೇ ಇರಲಾಗಿ ಸಾರ್ವಜನಿಕ ನೀನೆಲ್ಲಿಹೆಯೊ ಸರ್ವಧಿಕಾರಿ ನೀನೇ ಎಂಬ ವಿಬುಧರ ಸರ್ವಕಾಲದಿ ಸರ್ವ ಸುರರ ಸಹಿತಿಹೆ ನಾನು 1 ಮಿಂಚಿದ ಪಾಪವ ಮಾಡುವ ಮನುಜರ ವಂಚಕತನದಲಿ ದೇಹದೊಳಿಹೆ ನೀನು ಸಂಚಿತಾರ್ಥದ ಪುಣ್ಯವ ಗಳಿಸಿದ ಭಕ್ತರ ಮಿಂಚಿನ ಹುಳದಂತೆ ಕಂಚಿ ವರದ ಇಹೆ 2 ರಘುಪತೆ ರಾಘವನೆನುತ ಶ್ರೀ ಶ್ರೀನಿವಾಸನ ಬಗೆ ಬಗೆ ಸ್ತುತಿಸದೆ ಅಧಮರಿಗಿಲ್ಲ ಅಘಹರ ಗೋಪಿಗೆ ಮಿಗೆಯಾಟ ತೋರಿಹೆ ನಗಧರ ಅಳಗಿರಿ ಸೊಗಸಿನ ಚೆನ್ನಿಗ ನಾನು 3
--------------
ಸರಸ್ವತಿ ಬಾಯಿ
ನಾನೇನು ನಿನಗೆಂದೆನೊ ಶ್ರೀಹರಿಯೆನಾನಿನಗೇನೆಂದೆನೊ ಪ ನಾನೇನು ನಿನಗೆಂದೆ ನೀನಿಂತು ನನ್ನದುಧ್ಯಾನವ ಬಿಡಿಸಲು ಜ್ಞಾನಿಗಳರಸನೆ ಅ.ಪ. ಕರುಣಿ ನೀನೆಂತೆಂಬೋದು ನನಗೆ ಇನ್ನುಭರವಸೆ ಇಲ್ಲೆಂಬೆನೋಕರುಣಿ ನೀನಾದರೆ ಪರಿಪರಿ ಬೇಡಲುಕರುಣೆ ತೋರದೆ ಇರುವದು ಸರಿಯೇನೊ 1 ಭಕ್ತನು ನಾನಲ್ಲವೇನೊ ನಿನ್ನೊಳಗನುರಕ್ತಿ ಮಾಡುವದಿಲ್ಲೇನೋಮುಕ್ತಿ ಮಾಡಲು ಮತ್ತೆ ರಿಕ್ತ ಕರಣನೆಂಬ ಉಕ್ತಿ ಸುಳ್ಳೇನೋ2 ಸ್ಮರಿಸಲು ದುರಿತಗಳ ತರಿವನುಡಿಬರಿದೆನ್ನ ಬಗೆಗಾಯ್ತೆನೊಧರೆಯೊಳು ಗದುಗಿನ ವೀರನಾರಾಯಣಬಿರುಸು ನನ್ನ ನುಡಿ ಬರೆಯಲ್ಲವೇನೋ 3
--------------
ವೀರನಾರಾಯಣ
ನಾನೇನು ಬೇಡಿದೆನೋ ರಂಗಯ್ಯ ನೀನೆನ್ನ ನೋಡವಲ್ಲ್ಯಾಕೋ ಪ ಹಾನಿ ಮಾಡೆ ಮಹಹೀನಭವಸಾಗರ ಮಾನದಿಂ ಗೆಲಿಸೆಂದು ನಾನಿಷ್ಟೇ ಬೇಡುವೆ ಅ.ಪ ನಿಗ್ರಹಿಸಿ ಸ್ಥಿರಪದನುಗ್ರಹಿಸಿ ಪೊರೆಯೆಂದೆನೆ ಸುಗ್ರೀವನಂತೆನ್ನ ಆಗ್ರಜನ ಕೊಂದು ಕಪಿ ದುರ್ಗಕ್ಕಧಿಪತಿಯೆನಿಸೆಂದಾಗ್ರಬಟ್ಟೆನೊ ನಿನಗೆ 1 ಕುಲವ ನಿರ್ಮೂಲ ಮಾಡಿ ಇಳೆ ಪಟ್ಟಕ್ಕೆ ಸ್ಥಿರವಾಗಿ ನಿಲಿಸು ಎನಗೆಯೆಂದು ಸುಲಭದಿಂ ಬೇಡಿದೆನೆ ಒಲಿದು ಸಾರಥಿಯಾಗಿ ಕುಲದವರ ಸವರೆಂದು ನಳಿನಾಕ್ಷ ತವಪಾದದೊಳು ಬೇಡಿದೆನೇನೋ 2 ಚಿತ್ತಜಪಿತ ನಿನ್ನ ಸತ್ಯ ಬಿರುದುಗಳು ನಿತ್ಯ ನಿತ್ಯದಿ ಬಿಡದೆ ಶಕ್ತಿಯಿಂ ಪೊಗಳುವೆ ಭಕ್ತಿದಾಯಕ ನಿನ್ನ ಯುಕ್ತ್ಯಾರುಬಲ್ಲರು ಮುಕ್ತಿ ದಯಮಾಡೆಂದು ಪ್ರಾರ್ಥಿಪೆ ಶ್ರೀರಾಮ 3
--------------
ರಾಮದಾಸರು
ನಾನೊಂದು ಮಾಡಲು ತಾನೊಂದಾದಮೇಲಿನ್ನೇನಿನ್ನೇನು ದೇವರೆಂದು ನಮಿಸಲು ದೆವ್ವಾಗಿ ಬಡಿದ ಮೇಲಿನ್ನೇನಿನ್ನೇನು ಜೀವದಾಪ್ತರೆ ತನ್ನ ಕೊಲ್ಲಲೆತ್ನಿಸಿದರಿನ್ನೇನಿನ್ನೇನು 1 ತಾಯ್ತಂದೆಗಳೆ ಸುತರಿಗ್ವಿಷವನೆರೆದ ಮೇಲಿನ್ನೇನಿನ್ನೇನು ಕೈಯೊಳು ಪಿಡಿದ ಬೆತ್ತ ಹಾವಾಗಿ ಕಚ್ಚಲು ಇನ್ನೇನಿನ್ನೇನು 2 ಕಣ್ಣಿಲ್ಲದವನಿಗೆ ಮಾರ್ಗ ತಪ್ಪಿದ ಮೇಲೆನ್ನೇನಿನ್ನೇನು 3 ಹಾಲೆಂದು ಸವಿದರೆ ಹಲ್ಲು ಮುರಿದಮೇಲಿನ್ನೇನಿನ್ನೇನು ಮಾಲ್ಯೆಂದು ಧರಿಸಲು ಉರುಲು ಬಿದ್ದ ಮೇಲಿನ್ನೇನಿನ್ನೇನು 4 ಬೇಲ್ಯೆದ್ದು ಹೊಲದ ಬೆಳೆಯ ತಾ ಮೇಯಲಿನ್ನೇನಿನ್ನೇನು ಮಾಳಿಗೆ ಮನೆಯೆ ತಾ ಗಾಳಿಗೆ ಸಡಲಿದರರಿನ್ನೇನಿನ್ನೇನು 5 ಭೂಪತಿಗಳತಿನೀತಿತಪ್ಪಿದ ಮೇಲಿನ್ನೇನಿನ್ನೇನು ಪಾಪಿಗಳತಿಶಯಯಕೋಪ ತಾಳಿದ ಮೇಲಿನ್ನೇನಿನ್ನೇನು 6 ನೋಪಿದ ಗೌರಿಯೆ ಶಾಪವಿತ್ತ ಮೇಲಿನ್ನೇನಿನ್ನೇನು ದೀಪವೆ ಕಾಲಾಗ್ನಿಯಾಗಿ ಉರಿದಮೇಲಿನ್ನೇನಿನ್ನೇನು 7 ಹೂಳಿಟ್ಟ ಹಣವೆಲ್ಲ ಚೇಳಾಗ್ಹರಿದ ಮೇಲಿನ್ನೇನಿನ್ನೇನು ಅಳಿದ ಗೋವುಗಳು ಹುಲಿಯಾಗ್ಹಾರಿದ ಮೇಲಿನ್ನೇನಿನ್ನೇನು 8 ಆಳುವ ಒಡೆಯರೆ ಅಹಿತರಾದ ಮೇಲಿನ್ನೇನಿನ್ನೇನು ಬಾಳುವುದೆಂತಯ್ಯ ಶ್ರೀರಾಮ ನೀಮುನಿದರಿನ್ನೇನಿನ್ನೇನು 9
--------------
ರಾಮದಾಸರು
ನಾನೊರಲುವಾ ದನಿಯು ಕೇಳದೆ ರಂಗಾ ಭಂಗ ಪ ನಾರಿಯೊಬ್ಬಳು ಬಾಲರಿಬ್ಬರು ಕರಿಯೊಂದು ಕ್ಷೀರಾಬ್ಧಿಯೆಡೆಗೈದಿ ಬಾರೋವರೇನೋ ನಾರದನಾ ಯೆನ್ನಂಗ ಬಾರೆಂದೊಡೇನಾಯ್ತೋ ನೀರಜಾಂಬಕ ನೀನು ಪರಿದೋಡಲೇಕೋ 1 ಒಂದೆಲೆಯ ನೈವೇದ್ಯ ಒಂದು ಹಿಡಿಯವಲಕ್ಕಿ ಒಂದು ಹನಿಗೋಕ್ಷೀರ ಒಂದು ದಳ ಶ್ರೀತುಳಸಿ ಒಂದು ಫಲವರ್ಪಣಕೆ ತೇಗಲಿಲ್ಲವೆ ಸ್ವಾಮಿ ತಂದೆಯೆನ್ನಾತ್ಮನೈವೇದ್ಯ ಸಾಲದೆ ರಂಗಾ 2 ಕಾಲು ಕೈ ಕಣ್ಣು ಬೆನ್ನು ಸೋಲುವಂತಾದಾಗಾ ನೀಲಾಂಗ ನಿನ್ನ ಸೇವೆಯು ಸಾಧ್ಯವಲ್ಲ ಕಾಲ ಎಂದೊಳ್ಳಿತೈ ನಾಲಗೆಗೆ ನೋವಿಲ್ಲ ಬಾಲ ಗೋಪಾಲ ಮಾಂಗಿರಿಯ ರಂಗ ದಯಮಾಡೊ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಾನ್ಯಾಕೆ ಚಿಂತಿಸಲಿ ನಾನ್ಯಾಕೆ ಧೇನಿಸಲಿ ತಾನಾಗಿ ಶ್ರೀರಾಘವೇಂದ್ರಯತಿ ಒಲಿದ ಪ ಪೋರತನದವನು ಎರೆಡು ತೆರೆಗಳಲ್ಲಿ ದೂರಾಗಿ ಮೊರೆಯು ಅಲ್ಲವೆಂದು ಕಾರುಣ್ಯದಿಂದ ತಮ್ಮಯ ಗುರುತುಗಳ ತೋರಿ ಧೀರ ತಾ ಕರವನು ಪಿಡಿದ ಬಳಿಕ 1 ಜಗದೊಳಗೆ ಪದಾರ್ಥಗಳು ಗುಣದಿ ಭುಂಜಿಸುವಂಗೆ ಅಗದಂಕರನು ತಾನು ಬಳಿಗೆ ಬಂದು ಬಗೆಬಗೆಯಿಂದಲಿ ಸುರಸ ಪದಾರ್ಥಗಳು ಸೊಗಸಾಗಿ ಉಣಿಸಲು ಚಿಂತೆಯುಂಟೆ2 ಪೂರ್ಣಜಲ ಹರಿವ ವಾಹಿನಿ ಕಂಡು ಬೆದರುವಗೆ ಕರ್ಣಧಾರನು ತಾನೆ ಬಂದು ನಿಂದು ತೂರ್ಣದಲಿ ಕರಪಿಡಿದು ಹರಿಗೋಲ ಒಳಗಿಟ್ಟು ಫೂರ್ಣಿಸಲು ಅವನಿಗೆ ಚಿಂತೆಯುಂಟೆ 3 ತನ್ನಯ ಹಿತವು ತಾ ವಿಚಾರಿಸಲವಂಗೆ ಚನ್ನಾಗಿ ಪರಮ ಗುರು ತಾನೆ ಬಂದು ಸನ್ಮಾರ್ಗವನು ತಾನೆ ಪೇಳುವೆನೆನಲು ಇನ್ನು ಆಯಾಸವುಂಟೆ ಅವನಿಗೆ 4 ಏಸು ಜನ್ಮದಲಿ ಅರ್ಚಿಸಿದೆನೊ ನಾ ಇನ್ನು ಪಾದ ಪದುಮ ಲೇಸಾಗಿ ಈ ಸುಕೃತದಿಂದೆನ್ನ ಹರಿದಾಸ ಈ ಸುಗುಣ ಗುರುರಾಯ ಎನಗೆ ಒಲಿದ 5
--------------
ವ್ಯಾಸತತ್ವಜ್ಞದಾಸರು
ನಾರದ ಕೊರವಂಜಿ ಜಯ ಜಯ ದಯಾಕರನೆ ಹಯವದನ ಭಯಹರನೆ ಜಯ ಶೀಲಸಾಧ್ವರನೆ ಜಯ ದೀನೋದ್ಧರನೆ ಪ್ರಿಯಜನ ಮನೋಹರನೆÀ ಸುಯತಿ ಸಾಕಾರನೆ 1 ಹರಿಯೇ ಪತಿಯಾಗಬೇಕೆಂದು ರುಕುಮಿಣಿ ಪರದೇವತೆಯ ನೆನವುತಿರಲು ಕೊರವಂಜಿ ವೇಷದಿ ರುಕುಮಿಣಿದೇವಿಗೆ ಪರಮ ಹರುಷವೀವೆನೆಂದು ನಾರದ ಬಂದ 2 ಧರಣಿ ಮಂಡಲದಲ್ಲಿ ನಾರದ ಧರಿಸಿ ಕೊರವಂಜಿ ವೇಷವ ಸುರನರಾದಿಗಳೆಲ್ಲರಿಗೆ ತಾ ಪರಮ ಆಶ್ಚರ್ಯ ತೋರುತ್ತ 3 ಬಂದಳು ಕೊರವಂಜಿ ಚಂದದಿಂದಲಿ ಮಂದಹಾಸವು ತೋರುತ್ತ ಪಾದ ಧಿಂಧಿಮಿ ಧಿಮಿ- ಕೆಂದು ನಿಂದಭೀಷ್ಟವ ಪೇಳುತ 4 ಗಗನದಂತಿಹ ಮಧ್ಯವು ಸ್ತ- ನಘನ್ನ ಭಾರಕೆ ಬಗ್ಗುತ ಜಗವನೆಲ್ಲವ ಮೋಹಿಸಿ ಮೃಗ ಚಂಚಲಾಕ್ಷದಿ ನೋಡುತ 5 ಕನಕಕುಂಡಲ ಕಾಂತಿಯಿಂದಲಿ ಗಂಡಭಾಗವು ಹೊಳೆವುತ್ತ ಕನಕಕಂಕಣ ನಾದದಿಂದಲಿ ಕಯ್ಯ ತೋರಿ ಕರೆಯುತ್ತ 6 ಕುಂಕುಮಗಂಧದಿ ಮಿಂಚುವೈಯಾರಿ ಚುಂಗು ಜಾರಲು ಒಲವುತ್ತ ಕಿಂಕಿಣಿ ಸರಘಂಟೆ ಉಡಿಯೊಳು ಘಲ್ಲು ಘಲ್ಲೆಂದು ಬಂದಳು ಘಲ ಘಲ ಘಲ್ಲು ಘಲ್ಲೆಂದು ಬಂದಳು 7 ಕರೆದಾಳೆ ಸುಪಲ್ಲವ ಸುಪಾಣಿ ಕೀರವಾಣಿ ಪರಿಮಳಿಸುವ ಫಣಿವೇಣಿ 8 ಪರಿಪರಿ ಬೀದಿಯಲ್ಲಿ ನಿಂದು ಹಿಂದೂ ಮುಂದೂ ಸರಸವಾಡುತ್ತ ತಾನೆ ಬಂದು 9 ಕೊರವಂಜಿ ಯಾರೊಳಗೆ ನೋಡಿ ಕೂಡಿಯಾಡಿ ಸರಿಯಿಲ್ಲವೆಂದು ತನ್ನ ಪಾಡಿ 10 ಮನೆಮನೆಯಿಂದ ಬಂದಳು ಕೊರವಂಜಿ ತಾನು ಮನೆಮನೆಯಿಂದ ಬಂದಳು ರನ್ನವ ತೆತ್ತಿಸಿದ ಚಿನ್ನದ ದಿವ್ಯ ಬುಟ್ಟಿ ತನ್ನ ನೆತ್ತಿಯಲ್ಲಿಟ್ಟು ಬೆನ್ನಿಲಿ ಸಿಂಗಾನ ಕಟ್ಟಿ 11 ಗದ್ಯ : ಸುಗುಣಾಂಗಿಯರು ಪೇಳಲು ಮುದದಿಂದ ರುಕುಮಿಣಿದೇವಿ ತಾನೂ ಮುಗುಳು ನಗೆಯಂ ನಗುತ ಕೊರವಂಜಿಯನೆ ಅತಿಬೇಗ ಜಗವರಿಯೆ ಕರೆಯೆಂದಳು. ಶ್ರೀ ರುಗ್ಮಿಣಿ ತಾ ಬಂದಳು ಸ್ತ್ರೀಯರ ಕೂಡಿ ಚಾರುಹಾಸದಿಂದೊಪ್ಪುತ ಚೆಲ್ವ ದಿವ್ಯ ನೋಟಂಗಳಿಂದ ರಾಜಿಪ ಕಂಕಣದಿಂದ ರಮ್ಯ ನೂಪುರಗಳಿಂದ ರಾಜಚಿಹ್ನೆಗಳಿಂದ ರಾಜೀವನೇತ್ರೆ ಒಲವುತ್ತ12 ರಾಜಾಧಿರಾಜ[ರು]ಗಳಿಂದ ರಾಜಸಭೆಯಲ್ಲಿ ಪೂಜಿತಳಾದ ರಾಜಹಂಸಗ-ಮನೆಯು ಬರಲು ರಂಜಿತಳಾಗಿ ಒಲೆವುತ್ತ ಗದ್ಯ : ಆಗಲಾ ದೂತಿಕೆಯರು ಕೊರವಂಜಿಯನೆ ಅತಿ ಬೇಗ ಕರೆಯಲು ಬೇಕಾದ ವಜ್ರವೈಢೂರ್ಯ ರಾಗವಿಲಸಿತವಾದ ದ್ವಾರ ಭೂಭಾರದಿಂದೆಸೆವ ಭಾಗಧೇಯದಿಂ ರಾಜ ಸತ್ಕುಲವಾದ ದಿವ್ಯ ಮಂದಿರಕೆ ತ್ಯಾಗಿ ರುಕುಮಿದೇವಿ ನೋಡಲಾ ಶ್ರೀ- ರಾಗದಿಂ ಗಾನವಂ ಪಾಡುತ್ತ ಕೊರವಂಜಿಯು ಬಂದ ಚೆಂದ13 ಬಂದಾಳಂದದಲಿ ಬಾಗಿಲೊಳಗೆ ದಿಂಧಿಮಿಕೆನ್ನುತ 14 ಚೆಲುವ ತುರುಬಿನಿಂದಲಿ ಜಗುಳುವ ಚಲಿಸುವ ಪುಷ್ಪದಂದದಿ ನಲಿನಲಿ ನಲಿದಾಡುತ್ತ ಮಲ್ಲಿಗೆ ಝಲಝಲಝಲ ಝಲ್ಲೆಂದು ಉದುರುತ್ತ ಕಿಲಿಕಿಲಿ ಕಿಲಿ ಕಿಲಿ ಕಿಲಿಯೆಂದು ನಗುತ್ತ 15 ಗದ್ಯ :ಥಳಥಳನೆ ಹೊಳೆವುತ್ತ ನಿಗಿನಿಗೀ ಮಿಂಚುತ್ತ ರನ್ನದ ಬುಟ್ಟಿಯ ಕೊಂಕಳಲಿಟ್ಟು ಧಿಗಿಧಿಗಿಯೆಂದು ನೃತ್ಯವನ್ನಾಡುತ್ತ ಎತ್ತರದಲಿ ಪ್ರತಿಫಲಿಸುವ ಮುತ್ತಿನಹಾರ ಉರದೊಳಲ್ಲಾಡುತ ನಿಜಭಾಜ ಮಾರ್ತಾಂಡ ಮಂಡಲ ಮಂಡಿತಾ ಪ್ರಭು ಪ್ರತಿಮ ದಿಶದಿಶ ವಿಲಸಿತವಾದ ಭುಜಕೀರ್ತಿಯಿಂದೊಪ್ಪುವ ಆಕರ್ಣಾಂತ ಸುಂದರ ಇಂದೀವರದಳಾಯತ ನಯನ ನೋಟಗಳಿಂದ ಚಂಚಲಿಸುವÀ ಮಿಂಚಿನಂತೆ ಮಿಂಚುವ ಕಾಂತೀ ಸಂಚಯಾಂಚಿತ ಕಾಂಚನೋದ್ದಾಮ ಕಾಂಚೀ ಪೀತಾಂಬರಾವಲಂಬನಾಲಂಬಿತಾ ನಿತಂಬದಿಂದೊಪ್ಪುವ ಝೇಂಕರಿಸುವ ಭೃಂಗಾಂಗನಾಸ್ವಾದಿತ ಜಗುಳುವ ಜುಗುಳಿಸುವ ಪರಿಮಳಿಸುವ ಜಘನ ಪ್ರದೇಶಗಳಲ್ಲಿ ವಿವಿಧ ಪುಷ್ಪಗಳಿಂದ ಅಲಂಕೃತ ನಿತಾಂತಕಾಂತಿಕಾಂತಾ ಸುಧಾಕುಂತಳ ಸಂತತಭರದಿಂದೊಪ್ಪುವ ಪುಂಜೀಕೃತ ಮಂಜುಭಾಷಣ ಅಪರಂಜಿ ಬಳ್ಳಿಯಂತೆ ಮನೋರಂಜಿತಳಾದ ಕೊರವಂಜಿಯು ನಿಶ್ಶಂಕೆಯಿಂದ ಕಂಕಣಕ್ಷಣತೆಯಿಂದ ಕೊಂಕಳ ಬುಟ್ಟಿಯ ಪೊಂಕವಾಗಿ ತನ್ನಂಕದಲ್ಲಿಟ್ಟುಕೊಂಡು ಬೆನ್ನಸಿಂಗನ ಮುಂದಿಟ್ಟು ಚೆಂದವಾಗಿ ರುಕುಮಿಣಿ ದೇವಿಯ ಕೊಂಡಾಡಿದಳು. ಗದ್ಯ :ಅವ್ವವ್ವ ಏಯವ್ವ ಕೈಯ್ಯ ತಾರೆ ಕೈಯ್ಯ ತೋರೆ ನೀ ಉಂಡ ಊಟಗಳೆಲ್ಲ ಕಂಡ ಕನಸುಗಳೆಲ್ಲ ಭೂಮಂಡಲದೊಳಗೆ ಕಂಡ್ಹಾಗೆ ಪೇಳುವೆನವ್ವಾ. ಶಿಖಾಮಣಿ ಏನೇ ರುಕುಮಿಣಿ ನಿನ್ನ ಚೆಲುವಿಕೆಯನೇನೆಂತು ಬಣ್ಣಿಪೆ. ಮದನ ಶುಭ ಅಮಿತ ರಸಶೃಂಗಾರದಿಂದೊಪ್ಪುವ ನಿನ್ನ ಕೀರ್ತಿಯ ಕೇಳಿ ಬಂದೆನಮ್ಮಾ ಅಂಗ ವಂಗ ಕಳಿಂಗ ಕಾಶ್ಮೀರ ಕಾಂಭೋಜ ಸಿಂಧೂ ದೇಶವನೆಲ್ಲ ತಿರುಗಿ ಬಂದೆನಮ್ಮಾ 16 ಮಾಳವ ಸೌರಾಷ್ಟ್ರ ಮಗಧ ಬಾಹ್ಲೀಕಾದಿ ಚೋಳ ಮಂಡಲವನೆಲ್ಲ ಚರಿಸಿ ಬಂದೆನಮ್ಮಾ17 ಲಾಟ ಮರಾಟ ಕರ್ಣಾಟ ಸೌಮೀರಾದಿ ಅಶೇಷ ಭೂಮಿಯ ನಾನು ನೋಡಿ ಬಂದೆನಮ್ಮಾ 18 ಮಾಯಾ ಕಾಶೀ ಕಾಂಚಿ ಅವಂತಿಕಾಪುರೀ ದ್ವಾರಾವತೀ ಚೇದಿ|| ಮೆಚ್ಚಿ ಬಂದ ಕೊರವಿ ನಾನಮ್ಮ ಪುರಗಳಿಗೆ ಹೋಗಿ ನರಪತಿಗಳಿಗೆ ಸಾರಿ ಬರÀ ಹೇಳಿ ನಾ ಕಪ್ಪವ ತಂದೆ 19 ಸತ್ಯಮುಗಾ ಚೆಪ್ಪುತಾನಮ್ಮಾ ಸಂತೋಷಮುಗಾ ವಿನುವಮ್ಮ ಸತ್ಯ ಹರುಶ್ಚಂದ್ರನಿಕಿ ಚಾಲ ಚೆಪ್ಪಿತಿ 20 ಕನ್ನೆ ವಿನವೆ ನಾ ಮಾಟ ನಿನ್ನ ಕಾಲಂನೆ ನೇನಿಕ್ಕು(?) ಚಿನ್ನ ಸಿಂಗಾನೀ ತೋಡೂನೆ ಚೆಪ್ಪ್ಪೆಗಮ್ಮಾನೇ 21 ಗದ್ಯ :ಆಗ ರುಕುಮಿಣಿದೇವಿಯು ಚಿತ್ರವಿಚಿತ್ರ ಚಿತ್ತಾರ ಪ್ರತಿಮೋಲ್ಲಸಿತ ತಪ್ತ ರಜತರಂಜಿತಸ್ಫಟಿಕ ಮಣಿಗಣ ಪ್ರಚುರ ತಟಿಕ್ಕೋಟಿ ಜ್ವಾಲಾವಿಲಸಿತವಾದ ವಜ್ರಪೀಠದಲಿ ಕುಳಿತು ಚಿನ್ನದ ಮೊರಗಳಲ್ಲಿ ರನ್ನಗಳ ತಂದಿಟ್ಟುಕೊಂಡು ಕೊರವಂಜಿಯನೆ ಕುರಿತು ಒಂದು ಮಾತನಾಡಿದಳು. ವೊಲಿಸೀನ ಸೊಲ್ಮೂಲೆಲ್ಲ ವನಿತೆನೆ ನಿಂತೂ(?) 22 ಗದ್ಯ : ಆಗ ರುಕುಮಿಣಿದೇವಿಯಾಡಿದ ಮಾತ ಕೇಳಿ ಕೊರವಂಜಿಯುಯೇ-ನೆಂತೆಂದಳು. ನೆನೆಸಿಕೊ ನಿನ್ನಭೀಷ್ಟವ ಎಲೆ ದುಂಡೀ ನೆನೆಸಿಕೊ ವನಿತೆ ಶಿರೋಮಣಿಯೆ ಘನಮುದದಿಂದ ನೆನೆಸಿಕೊ 23 ರನ್ನೆ ಗುಣಸಂಪನ್ನೆ ಮೋಹನ್ನೆ ಚೆನ್ನಾಗಿ ಮುರುಹಿಯ ಮಾಡಿ ನೆನೆಸಿಕೊ 24 ಮಾಧವ ಸೇತುಮಾಧವ ವೀರರಾಘವ ಚಿದಂಬರೇಶ್ವರ ಅರುಣಾಚÀಲೇಶ್ವರ ಪಂಚನದೇಶ್ವರ ಶ್ರೀಮುಷ್ಣೇಶ್ವÀÀರ ಉಡುಪಿನ ಕೃಷ್ಣ ಮನ್ನಾರು ಕೃಷ್ಣ ಸೋದೆ ತ್ರಿವಿಕ್ರಮ ಬೇಲೂರು ಚೆನ್ನಪ್ರಸನ್ನ ವೆಂಕಟೇಶ್ವರ ಸೂರ್ಯನಾರಾಯಣ ಇವು ಮೊದಲಾದ ದೇವತೆಗಳೆಲ್ಲ ಎನ್ನ ವಾಕ್ಯದಲಿದ್ದು ಚೆನ್ನಾಗಿ ಸಹಕಾರಿಗಳಾಗಿ ಬಂದು ಪೇಳಿರಯ್ಯಾ ಮಂಗಳದ ಕೈಯ್ಯ ತೋರೇ ಎಲೆದುಂಡೀ ಕೈಯ ತೋರೆ ಕೈಯ ತೋರೆ 25 ಕೇಳೆ ರನ್ನಳೆ ಎನ್ನ ಮಾತ ಬೇಗ ಇಳೆಯರಸನಾದನು ಪ್ರಿಯ26 ಕಳಸಕುಚಯುಗಳೆ ಚಿಂತೆ ಬೇಡ ನಿನ್ನ ಕರೆದಿಂದು ಕೂಡ್ಯಾನು ರಂಗ 27 ನಾಡಿನೊಳಧಿಕನಾದ ನಾರಾಯಣನ ಪತಿ ನೀನು ಮಾಡಿ ಕೊಂಡೆನೆಂದು ಮನದಲ್ಲಿ ನೆನಸಿದೆ ಕಂಡ್ಯಾ ನಮ್ಮ ಕೃಷ್ಣ ಕುತೂಹಲದಿ 28 ಸುಂದರಶ್ಯಾಮ ಅಲ್ಲಿ ನÀಂದಾ ನಂದಾನಾಡುವಾನಂದಮುಗಾವಚ್ಚಿ ಕೂಡೇನಮ್ಮಾ 29 ಶಂಖಚಕ್ರಯುಗಲ ಪಂಕಜನಾಭುಂಡು ಪಂಕಜಮುಖೀ ನೀವು ಪ್ರಾಣಿಗ್ರಹಣಮು ಚೇಸಿ ಕೂಡೆನಮ್ಮಾ 30 ಚೆಲುವಾ ನಾ ಮಾಟಾ ನೀಕು ಪುಚ್ಚಾ ಚೆಲುವಾ ನಾ ಮಾಟ ಕಲ್ಲಗಾದು ನಾ ಕಣ್ಣೂಲಾನೂ ಪಿಲ್ಲ ವಿನುವಮ್ಮ ಪಲ್ಲವಪಾಣೀ ಚೆಲುವಾ ನಾ ಮಾಟ31 ದಮಯಂತೀಕೀನೇ ಚೆಪ್ಪಿತಿ ನಮ್ಮವೆ ಮಾಟ ಅಮರುಲಕೆಲ್ಲಾ ಅನುಮೈನವಾಡು ಚೆಪ್ಪೀ ಅಮಿತ ಬಹುಮಾನಾಮಂದೀತೀನಮ್ಮಾ ಚೆಲುವ ನಾ ಮಾಟ ಚೆಲುವ 32 ಬಂತೆ ಮನಸಿಗೆ ನಾ ಹೇಳಿದ್ದು ಚಿಂತೆ ಸಂತೋಷದಿ ನಾನಾಡಿದ ಶಾಂತ ಮಾತೆಲ್ಲ ಇದು ಪುಸಿಗಳಲ್ಲ ಬೇಗ ಬಂದಾನೋ ನಲ್ಲಾ ಆಹಾ ಆಹಾ ಬಂತೇ ಮನಸ್ಸಿಗೆ
--------------
ವಾದಿರಾಜ
ನಾರಸಿಂಹನೆ ಧೀರ | ನಂಬಿದೆನೊ ಪೊರೆಯೊ ಶ್ರೀ ರಮಾಪತಿ ವೀರ | ಕರಿಗಿರಿ ವಿಹಾರ ಪ. ಸಾರಿದೆನೊ ನಿನ್ನ ಪದವ ಅನುದಿನ ಸೇರಿಸೆನ್ನನು ಭಕ್ತಕೂಟದಿ ಗಾರು ಮಾಡುವುದುಚಿತವೇ ಹರಿ ಭವ ಸಮುದ್ರದಿ ಅ.ಪ. ತಾಪ | ನಾನಾರಿಗುಸುರಲೊ ಒಡಲ ದುಃಖವ ಭೂಪ | ನೀನಲ್ಲದಿಲ್ಲವೊ ಭವ ಶ್ರೀಪ | ತೋರದಿರು ಕೋಪ ಘುಡು ಘುಡುಸಿ ನೀ ಎನ್ನ ಬೆದರಿಸೆ ತಡೆವೆನೇ ನಿನ್ನ ಕೋಪದಗ್ನಿಗೆ ಬಿಂಕ ಎನ್ನೊಳು ತಡೆಯೊ ಎನ್ನ ದುರುಳತನಗಳ ಕಡುಕರುಣಿ ನೀನಲ್ಲವೆ ಹರಿ ಒಡಲೊಳಗೆ ಪ್ರೇರಕನು ನೀನೆ ನಡಸಿದಂದದಿ ನಡೆವೆನಲ್ಲದೆ ಒಡೆಯ ಎನ್ನ ಸ್ವತಂತ್ರವೇನೊ? 1 ದುರುಳತನದಲಿ ದೈತ್ಯ | ಭೂವಲಯವೆಲ್ಲವ ಉರವಣಿಸಿ ದುಷ್ಕುತ್ಯ | ಎಸಗುತಿರೆ ದುಃಖದಿ ಸುರರು ಮೊರೆಯಿಡೆ ಸತ್ಯ | ದೃಢಮನದಿ ಭೃತ್ಯ ಕರಕರೆ ಪಿತ ಬಡಿಸುತಿರಲು ದೊರೆಯೆ ನೀ ಪೊರೆ ಎಂದು ಮೊರೆಯಿಡೆ ಸರ್ವವ್ಯಾಪಕನೆಂದು ತೋರಲು ತ್ವರಿತದಲಿ ಕಂಭದಲಿ ಬಂದು ಸರಸಿಜವು ಕಂಗೆಡುವೊ ಕಾಲದಿ ಧರಿಸಿ ತೊಡೆಯ ಮೇಲಸುರ ಕಾಯವ ಕರುಳ ಬಗೆದು ಮಾಲೆ ಧರಿಸಿ ಪೊರೆದೆಯೊ ಸ್ತುತಿ ಕೇಳಿ ಬಾಲನ 2 ಅಜಭವಾದಿಗಳೆಲ್ಲ | ಸ್ತುತಿಸಿದರೆ ಮಣಿಯದ ಭುಜಗಶಾಯಿ ಶ್ರೀ ನಲ್ಲ | ನಾ ನಿನ್ನ ಸ್ತುತಿಸಿ ಭಜಿಸಲಾಪೆನೆ ಕ್ಷುಲ್ಲ | ಮಾನವನ ಸೊಲ್ಲ ನಿಜಮನವ ನೀ ತಿಳಿದು ಸಲಹೊ ಕಮಲ ತೋರಿ ಕುಜನನಲ್ಲವೊ ಹಿರಿಯರೆನಗೆ ಪಥ ತೋರುತಿಹರೊ ರಜ ತಮವ ದೂರಟ್ಟಿ ಶುದ್ಧದಿ ಭಜಿಸುವಂದದಿ ಕೃಪೆಯ ಮಾಡಿ ಸುಜನರೆನ್ನನು ಪಾಲಿಸುತ್ತಿರೆ ನಿಜದಿ ಗೋಪಾಲಕೃಷ್ಣವಿಠ್ಠಲ3
--------------
ಅಂಬಾಬಾಯಿ
ನಾರಾಯಣ ಎನ್ನಿರೊ ನರಹರಿ ನಾರಾಯಣ ಎನ್ನಿರೊ ಪ. ನಾರದ ವಂದಿತ ನಗೆಮೊಗ ಚನ್ನಿಗ ಅ.ಪ. ಆದಿ ಪ್ರಹ್ಲಾದನ ಮೋದದಿ ಪೊರೆದನ ಸಾಧಿಸಿ ಅಂತ್ಯದಿ ಅಜಮಿಳನಂತೆ 1 ಕರುಣವ ಬೀರುತ ಕರೆದು ಮಾರುತಿಯನ್ನು ಶರಣನ ಮಾಡಿದ ನಿರುತ ಶ್ರೀರಾಮನ 2 ಮುದ್ದು ಭೀಮಾರ್ಜುನರಲ್ಲಿದ್ದು ರಣದೊಳಾಗ ತಿದ್ದಿ ತಾ ಹೃದಯದೊಳಗಿದ್ದ ಶ್ರೀ ಕೃಷ್ಣರನ್ನ 3 ಮಧ್ವಮುನಿಯೊಳಗಿದ್ದ ಮನ ಮಧ್ವಮತವ ಗೆದ್ದ ಮುದ್ದು ಮಧ್ವಪತಿಯ ನೀವು 4 ಅಖಿಳಾಂಡನಾಯಕ ಸಖನಾದ ಪಾಂಡವರಿಗೆ ನಿಖಿಳಲೋಕದ ಪ್ರಿಯ ಭಕ್ತರ ಸಖನಾಗುವ ಶ್ರೀ ಶ್ರೀನಿವಾಸನೆಂದು 5
--------------
ಸರಸ್ವತಿ ಬಾಯಿ
ನಾರಾಯಣ ಎನ್ನಿರೋ ನಾರಾಯಣ ಎನ್ನಿ ನಾರದÀಪ್ರಿಯನಿಗೆ ನಂದನ ಸುತ ಮುಕುಂದ ಮುರಾರಿಗೆ ಪ ಕೆಟ್ಟ ಅಜಮಿಳನ ಬಂದು ಕ(ಟ್ಟಲ್ಯ)ಮ ಪಾಶದಿ ತಾ ಕಂ- ಗೆಟ್ಟು ಹರಿನಾಮವ ಕರೆಯೆ ಕೊಟ್ಟ ತನ್ನ ಪಟ್ಟಣ ಪದವಿ 1 ಕಾಲಕಾಲಕೆ ಗೋಪಾಲನ ನೆನೆಯದೆ ಬಿಟ್ಟು ಕಾಲಕಳೆಯಲು ಯಮಭಟರು ಕರೆದÀು ಬಾಧಿಸದೆ ಬಿಡರು 2 ಸ್ನಾನ ಜಪ ತಪವ್ಯಾಕೆ ಮೌನ ಮಂತ್ರವ ಬಿಟ್ಟು ದಾನವಾಂತಕ ಕೃಷ್ಣನ್ನ ಧ್ಯಾನದೊಳಿಟ್ಟರಗಳಿಗೆ 3 ಲೆಕ್ಕವಿಲ್ಲದ ದೇಶ ತುಕ್ಕಿ ತಿರುಗಿದರಿಂದೆ ದುಃಖವಲ್ಲದೆ ಜ್ಞಾನ ಮುಕ್ತಿ ದೊರಕುವುದೇನು 4 ಬಿಟ್ಟು ವಿಷಯವ ಭೀಮೇಶಕೃಷ್ಣನಲ್ಲಿಟ್ಟು ಧ್ಯಾನ ಹತ್ತು ಹರಿಪುರ ಸೋಪಾನ ರಕ್ಷಿಸುವ ಖಗವಾಹನ 5
--------------
ಹರಪನಹಳ್ಳಿಭೀಮವ್ವ
ನಾರಾಯಣ ತನ್ನ ನಂಬಿದ ಭಕುತರ ಕಾರುಣ್ಯದಿ ಕಾವ ಪ ಮಾರುತಿ ಸಹಿತನಾಗಿ ತಾನೀ ಶರೀರದೊಳಿಹ ದೇವ ಅ.ಪ ಅನಿರುದ್ಧನು ತಾ ಸಕಲ ಚರಾಚರ ಸೃಷ್ಟಿಯ ಗೈವ ವನಧಿಶಯನ ಪ್ರದ್ಯಮ್ನನು ಬ್ರಹ್ಮಾಂಡವ ಪಾಲಿಸುವ ತ್ರಿನಯನನಂತರ್ಗತ ಸಂಕರ್ಷಣ ತಾನು ಲಯವನು ಗೈವ ವಾಸುದೇವ ಸುಜೀವರಿಗೆ ಮೋಕ್ಷವನೀವ 1 ನರಸಿಂಹ ರೂಪದಿ ಹರಿಯು ಭಕುತ ಪ್ರಹ್ಲಾದನ ಕಾಯ್ದ ಸಿರಿ ರಾಮನು ತಾನಾಗಿ ಬಂದು ದಶಶಿರನ ಭಂಜಿಸಿದ ದುರುಳ ಕಂಸನ ನಿಗ್ರಹಿಸಲು ಯದು ವಂಶದೊಳುದಿಸಿ ಬಂದ ಪರಾಶರಾತ್ಮಜನಾಗಿ ವರವೇದ ವಿಭಾಗವ ಗೈದ 2 ವರಾಹ ನರಹರಿರೂಪವ ತಾ ಕೊಂಡ ಇಚ್ಛೆಯಿಂದಲಿ ವಟುವಾಗಿ ಕೊಡಲಿಯ ಪಿಡಿದ ಪ್ರಚಂಡ ಸಿರಿ ಕೃಷ್ಣ ದಿಗಂಬರನಾಗಿ ಕಂಡ ಸ್ವಚ್ಛ ಅಶ್ವವೇರಿದ ರಂಗೇಶವಿಠಲ ಬಿನಗು ದೈವರ ಗಂಡ 3
--------------
ರಂಗೇಶವಿಠಲದಾಸರು