ಒಟ್ಟು 1197 ಕಡೆಗಳಲ್ಲಿ , 106 ದಾಸರು , 1046 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡೆ ಕರುಣನಿಧಿಯ | ಗಂಗೆಯ |ಮಂಡೆಯೊಳಿಟ್ಟ ದೊರೆಯ |ರುಂಡಮಾಲೆ ಸಿರಿಯ | ನೊಸಲೊಳು |ಕೆಂಡಗಣ್ಣಿನ ಬಗೆಯ | ಹರನ ಪಗಜಚರ್ಮಾಂಬರನ | ಗೌರೀ |ವರಜಗದೀಶ್ವರನ |ತ್ರಿಜಗನ್ಮೋಹಕನ | ತ್ರಿಲೋಚನ |ಭುಜಗಕುಂಡಲಧರನ | ಹರನ 1ಭಸಿತ ಭೂಷಿತ ಶಿವನ | ಭಕ್ತರ | ವಶದೊಳಗಿರುತಿಹನ |ಪಶುಪತಿಯೆನಿಸುವನ | ಧರೆಯೊಳು |ಶಶಿಶೇಖರ ಶಿವನ | ಹರನ 2ಕಪ್ಪುಗೊರಳ ಹರನ | ಕಂ | ದರ್ಪಪಿತನ ಸಖನ |ಮುಪ್ಪುರಗೆಲಿದವನ | ಮುನಿನುತ |ಸರ್ಪಭೂಷಣ ಶಿವನ | ಹರನ 3ಕಾಮಿತ ಫಲವೀವನ | ಭಕುತರ | ಪ್ರೇಮದಿಂ ಸಲಹುವನ |ರಾಮನಾಮಸ್ಮರನ ರತಿಪತಿ| ಕಾಮನ ಗೆಲಿದವನ | ಶಿವನ4ಧರೆಗೆ ದಕ್ಷಿಣ ಕಾಶೀ | ಎಂದೆನಿಸುವ |ವರಪಂಪಾವಾಸಿತಾರಕಉಪದೇಶಿ |ಪುರಂದರವಿಠಲ ಭಕ್ತರ ಪೋಷೀ | ಹರನ5
--------------
ಪುರಂದರದಾಸರು
ಕಮಲನಾಭ ವೆಂಕಟೇಶ ಭಕ್ತ ಕಲ್ಪಭೂರುಹ ಶ್ರೀಕಮಲಪ್ರಾಣೇಶಾಪವಿಮಲ ವೈಕುಂಠಪುರೀಶಾ ಶಿವಕಮಲಸಂಭವನುತ ಕರ್ಬುರನಾಶಾ ಅ.ಪನಿರುಪಮ ಸುಂದರ ಗಾತ್ರಾನಿತ್ಯಪರಿಪೂರ್ಣ ವೈಭವಪರಮಪವಿತ್ರಾಶರನಿಧಿತನಯಕಳತ್ರಾಶೇಷಪರಿಜನಕೃತಘೋರಪಾಪಾಂಧ ಮಿತ್ರಾ1ಸನಕಸನಂದನ ವಿನುತಾಶಶಿದಿನಕರಶತಕೋಟಿ ದಿವ್ಯ ಸುಚರಿತಾಜನನ ಮರಣ ಕ್ಲೇಶರಹಿತ ಶ್ರೀವನಜಸುದರ್ಶನ ವನಮಾಲ ಧರಿತ2ಜಲಜಮಿತ್ರ ವಂಶ ಭೂಷಾ ಕ್ಷಾರಜಲಧಿಬಂಧನ ಪುಣ್ಯಜನ ಪ್ರಾಣ ಶೋಷಾತುಲಸೀ ರಾಮದಾಸ ಪೋಷಾ ಶ್ರೀತುಲಸೀ ಕಾನನಹಿತ ತುಂಬುರ ತೋಷಾ 3
--------------
ತುಳಸೀರಾಮದಾಸರು
ಕರತಾರೆ ಕರತಾರೆ ಶ್ರೀನಿವಾಸನಸುರರರಸ ಸ್ವಾಮಿ ಶ್ರೀ ವೆಂಕಟೇಶನ ಪ.ಬರಹೇಳೆ ಬರಹೇಳೆ ಬೇಗ ಕರಿಗಮನೆ ರಂಗಗೆಸಿರಿರಾಣಿರಮಣ ಘನಾಂಗಗೆಅರಘಳಿಗೆ ಸರಸವಲ್ಲ ಅರಸನಿಲ್ಲದವಳೆ ಸಲ್ಲಸ್ಮರನೆಂಬೊ ಸಿರಿಕಳ್ಳ ಕರುಣ್ಯಿಲ್ಲ 1ಸುಂದರ ಸುಂದರ ಶುಭಮಂದಿರನ್ನ ದಯಾರಸಸುಂದರನ್ನ ವರಕಂಬುಕಂದರನ್ನಚೆಂದಾವರೆಗಣ್ಣವನಸಿಂಧೂರವರದನ್ನ ದೇವೇಂದ್ರಜಿತ ಪಾರಿಜಾತ ತಂದನ್ನ 2ಹೋಯಿತೆ ಹೋಯಿತೆ ಹೊನ್ನಪ್ರಾಯ ಯದುರಾಯ ಬಾರದಾಯಿತೀ ಅವಸ್ಥೆ ಹುಟ್ಟು ಹೊಂದಿಕಾಯಬೇಕೆಂದೊಮ್ಮಿಗೆ ಉದಯವಾದ ಪ್ರಸನ್ವೆಂಕಟರಾಯ ಬಂದ ಫಲಿಸಿತಾನಂದ 3
--------------
ಪ್ರಸನ್ನವೆಂಕಟದಾಸರು
ಕರುಣಿಸೆನಗೆ ಶಂಭೋ ಕರುಣಿಸಯ್ಯಾಶರಣಾರಂದದಿ ನಿನ್ನ ಮನದಿರವರಿಯೆನುಕರವಜೋಡಿಸಿ ದೇವಾ ಚರಣಕೊಂದಿಪೆನು ಪಕ್ಷೋಣಿಯೊಳ್ ಮಾರ್ಕಾಂಡೆಯಂತೆ ಪೂಜಿಸಲಾರೆಮೀನಾಕ್ಷಿಯಂತೆ ಕಾದಿ ಪರಿಸಲಾನರಿಯೇಬಾಣಾಸುರನಂತೆ ತಪಗೈಯ್ಯಲಾರೆ ನಾನುರಾವಣನಂತೆ ಸಾಮಗಾನವನರಿಯೇ 1ಶಿರದಿ ಚಂದಿರನಂತೆ ಶೋಭಿಸಲಾರೆ ಭಕ್ತಿಸ್ಥಿರವರಿಯೆನು ಭೀಮಸೇನನಂತೆಉರಗನಂದದಿ ಕೊರಳಾಭರಣವಾಗಿರಲಾರೆಗಿರಿಜೆಯಂದದಿ ನೆರೆದು ಮುದ್ದಿಸಲರಿಯೆ 2ಮಂದಾಕಿನಿಯಂತೆ ಜಡೆಯಾಲಂಕರಿಸೆನುನಂದೀಶನಂತೆ ಪೊತ್ತು ತಿರುಗಾಡಲರಿಯೆಇಂದ್ರನಂದನನಂತೆ ಭರದಿ ಮೆಚ್ಚಿಸಲಾರೆಬಂದೆನ್ನ ಸಲಹೋ ಗೋವಿಂದನ ಸಖನೆ 3
--------------
ಗೋವಿಂದದಾಸ
ಕಲಮದಾನಿ ನಾರಾಯಣರಾವ328ಎಂದಿಗೆ ಕಾಂಬೆನೊಮುರಹರಮಂದರೋದ್ಧರಅಂದುಇಂದುಎನದೇ ಮನ್ಮನಮಂದಿರದೊಳಿಂದಿರಾವರ ಪಭೋಗಿಶಯ್ಯದಿ ಯೋಗ ನಿದ್ರೆಯಲಿಜಾಗರಾದೆನೋಹರಿಜಾಗುಮಾಡದೆ ಹೃದಯ ಪದ್ಮದಿಭಾಗವತರ ಭಾಗ್ಯದ ದೇವ 1ಸಿರಿಯ ಸುರುಚಿರ ಊರುಗಳ ಮೇಲೆಚರಣಯುಗ್ಮವನಿರಿಸಿಪರಮಸುಖಕೆ ಮರಳುಗೊಂಡೆನ್ನಮರತೆಯಾದರೆಸ್ವರಮಣನಿನ್ನ 2ಸುರರುಋಷಿ ಪಿತೃ ಧರಣೀಶ ಗಂಧರುವನರರ ವರದ ಭಕ್ತಿಲಿಕರೆಪ ಸೇವೆಗೆ ಮೆಚ್ಚಿ ಎನ್ನನುತೊರೆದು ಬಿಡಲು ಸಿರಿವಿಠಲ ನಿನ್ನಎಂದಿಗೆ ಕಾಂಬೆನೊಮುರಹರ3
--------------
ಸಿರಿವಿಠಲರು
ಕಳವು ಕಲಿಸಿದೆಯಮ್ಮಗೋಪಿಕಮಲನಾಭಗೆ |ಉಳಿಸಿಕೊಂಡೆಯ ನಿಮ್ಮ ಮನೆಯ ಪಾಲು ಬೆಣ್ಣೆಯ ಪಆರೂ ಏಳದ ಮುನ್ನ ಎಬ್ಬಿಸಿ ಶೃಂಗಾರ ಮಾಡಿ |ಗೀರುಗಂಧವಹಚ್ಚಿಹಾರವ ಹಾಕಿ ||ಕೇರಿಕೇರಿ ಪಾಲು-ಬೆಣ್ಣೆ ಸೂರೆ ಮಾಡಿ ಬಾರೆನ್ನುತ |ವಾರಿಜನಾಭನ ಕಳುಹಿದೆ ವನಜನಯನನ 1ಚಿತ್ತಜನಯ್ಯನ ಕೈಗೆ ಚಿನ್ನದ ಚೆಂಡನೆ ಕೊಟ್ಟು |ಅರ್ತಿಯಿಂದ ಸಿಂಗರಿಸಿ ಆಡಿ ಬಾರೆಂದು ||ಕತ್ತಲೆ ಬೀದಿಯ ಸುತ್ತೆ ಕಸ್ತುರಿ ತಿಲಕವನಿಟ್ಟು |ನಿತ್ಯಾನಂದಗೆ ನಿಲುವುಗನ್ನಡಿಯ ತೋರಿ 2ಸಣ್ಣಮಲ್ಲಿಗೆ ಮುಡಿಸಿ ಬಣ್ಣದ ವಲ್ಲಿಯ ಹೊದಿಸಿ |ಹೆಣ್ಣುಗಳ ಒಲಿಸುವಂತೆ ಹೇಳಿ ಬುದ್ಧಿಯ ||ಹುಣ್ಣಿವೆ ವಿೂಸಲ ಹಾಲು ಉಣ್ಣು ಉಣ್ಣು ಮೆಲ್ಲೆನುತ್ತ |ಚಿಣ್ಣನ ಕಳುಹಿದೆಯಮ್ಮ ಉಣ್ಣಲಿಕ್ಕದೆ 3ವಾರಿಜಾಕ್ಷ ಮಾಡಿದಂಥ ದೂರು ಹೇಳಿದರೆ ನಿಮಗೆ |ದೂರುಬಡಕರೆಂದುಗೋಪಿಬಯ್ವೆ ನಮ್ಮನು ||ಊರು ಮಾಡಿದ ಕೊಳಗ, ತಾಯಿ ಮಾಡಿದ ಹೊಟ್ಟೆ |ವಾರಿಜನಾಭನ ಕರೆದು ಬುದ್ಧಿಯ ಹೇಳೆ 4ಹೊಟ್ಟೆಬಾಕನಿವ ಬೆಟ್ಟದೊಡೆಯಗೆ ಪ್ರಿಯ |ಇಟ್ಟುಕೊಂಡೀರೇಳುಭುವನಉದರದಲ್ಲಿಯೆ ||ಎಷ್ಟು ಹೇಳಿದರೂ ಕೇಳ ಏನು ಮಾಡಲಮ್ಮ ನಾನು |ಕಟ್ಟು ಮಾಡಿಸಲುಬೇಕು ಪುರಂದರವಿಠಲಗೆ 5
--------------
ಪುರಂದರದಾಸರು
ಕುಸುಮನಾಭನ ಮಡದಿಯರುಹೆಸರ್ಹೇಳ ಅರ್ಥಿಲಿಹಸುಳೆಯರು ಹಾಡಿ ಪಾಡಿಕುಶಲದಿಕೋಲಹೊಯ್ದುಪ.ಬಂದು ರುಕ್ಮಿಣಿ ಭಾವೆಗೆವಂದಿಸಿ ಭದ್ರೆ ದ್ರೌಪತಿಮಂದಾರಮಲ್ಲಿಗೆ ಸಂಪಿಗೆಚಂದದಿಸೂರ್ಯಾಡಿ1ಕೃಷ್ಣನರಸಿಯರು ಇಬ್ಬರುಬುಕ್ಕಿಟ್ಟುಸೂರ್ಯಾಡಿಗಟ್ಟಿ ಕಂಕಣದ ಕರದಲೆಮುಟ್ಟಿ ಆಲಂಗಿಸುತ 2ಹರದಿರುಕ್ಮಿಣಿ ಕೈಯಮರಿಯದಲೆ ಹಿಡಿದು ದ್ರೌಪತಿದೊರೆಯರ ಹೆಸರ್ಹೇಳಿಮುಂದಕೆ ಬರಬೇಕೆಂದರು 3ಸತ್ಯಭಾಮೆಯ ಕೈಯಅರ್ಥಿಲೆ ಹಿಡಿದು ದ್ರೌಪತಿಮತ್ತೆ ಪತಿಗಳ ಹೆಸರುವಿಸ್ತರಿಸೆಂದರು 4ವಾರಿಜಾಕ್ಷನಹೆಸರುನಾರಿಯರಿಬ್ಬರು ಹೇಳಿಶ್ರೀ ರಾಮೇಶನ ಮಡದಿಯರುಏರಿದರು ಆಸನವ 5
--------------
ಗಲಗಲಿಅವ್ವನವರು
ಕೂಡಲ ಮಾಣಿಕ್ಯ ಕ್ಷೇತ್ರಸ್ಥ ಭರತ ಪ್ರದ್ಯುಮ್ನ60ಶ್ರೀ ರಾಮಚಂದ್ರಾನುಜ ಭರತರಾಜಶರಣಾದೆ ತವಚರಣಯುಗಳ ತೋಯಜಕೆ ಪಉರು ಪರಾಕ್ರಮಿ ದುರ್ಗೆರಮಣ ಹರಿಚಕ್ರದಲಿಇರುವೆ ನೀ ತದ್ರೂಪದಲಿ ಸೇವಿಸುತಲಿಮಾರಶ್ರೀ ಕೃಷ್ಣಸುತ ಸ್ಕಂಧಾದಿರೂಪಿ ನೀಧೀರ ನಿನ್ನಲಿ ಕೃತೀಪತಿಯು ಪ್ರಜ್ವಲಿಪ 1ಉಡುಪಶೇಖರ ಕೊಟ್ಟ ವರಬಲದಿ ಪೌಲಸ್ತ್ಯಕಡು ಕಷ್ಟ ಕೊಡಲಾಗಸುರರುಮೊರೆಯಿಡಲುಕಡಲಶಯನನು ರಾಮ ಪ್ರಾದುರ್ಭವಿಸಲು ನೀನುಹೆಡೆರಾಜ ಅನಿರುದ್ಧಸಹ ಬಂದೆ ಬುವಿಯೊಳ್ 2ಕೇಕಯಕೆ ನೀ ಪೋಗೆ ಕೈಕೇಯಿ ವರದಿಂದರಾಕೇಂದುನಿಭಮುಖನು ನಿಷ್ಕಳ ಶ್ರೀರಾಮನನೂಕಲು ವನಕೆ ನೀ ಬಂದರಿತು ಧಿಕ್ಕರಿಸಿಏಕಾತ್ಮ ರಾಮನಲಿ ಪೋಗಿ ಬೇಡಿದೆಯೊ 3ಸ್ವೀಕರಿಸಿ ರಾಜ್ಯವಾಳೆಂದು ನೀ ಬೇಡಲುಅಖಿಲಾಂಡಕೋಟಿ ಬ್ರಹ್ಮಾಂಡಪತಿ ರಾಮನಾಕಿ ಭೂಸುರರೊಡೆಯ ಹದಿನಾಲ್ಕು ವರ್ಷಗಳುಆಗೆ ತಾ ಬರುವೆನು ಎಂದು ಪೇಳಿದನು 4ದೇವ ಶ್ರೀ ರಾಮನ ಸುಖಜ್ಞಾನಮಯಪಾದಸೇವಿಸಿ ಪ್ರೇಮಪ್ರವಾಹದಲಿ ನೀನುಬುವಿಯನು ಪವಿತ್ರ ಮಾಡುವ ಪಾದಪೀಠವನುನವವಿಧ ಭಕ್ತಿಯಲಿ ತಂದು ಪೂಜಿಸಿದೆ 5ನಂದಿಗ್ರಾಮದಲಿ ನೀ ತಪಶ್ಚರ್ಯದಲಿ ಇದ್ದುಬಂದಿಲ್ಲ ರಾಮನೆಂದಗ್ನಿ ಮುಖದಲಿ ನಿಲ್ಲೆಬಂದ ಇಕ್ಕೋ ಸ್ವಾಮಿ ರಾಮಚಂದ್ರನು ಎಂದಇಂದಿರೇಶನ ಪ್ರಥಮ ದೂತ ಶ್ರೀ ಹನುಮ 6ಅಖಿಲೇಶ ಸುಖಮಯನು ಶ್ರೀ ರಾಮಚಂದ್ರನುಸುಖ ಪೂರ್ಣ ಸೀತಾಸಮೇತ ಬರುವುದನುನೀಕೇಳಿಮುದದಲಿ1 ಮಾತೇರು ಶತ್ರುಘ್ನಭಕುತ ಪುರಜನ ಕೂಡ ಪೋದೆ ಕರೆತರಲು 7ಕಮಲೆ ಜಾನಕಿಪತಿಯ ಮೇಲೆ ಪೂಮಳೆ ಕರೆದುನಮಿಸೆ ನೀ ಭಕ್ತಿಯಲಿ ಕೃತಕೃತ್ಯ ಮನದಿಸ್ವಾಮಿ ರಾಮನು ನಿನ್ನಅಚಲಭಕ್ತಿಯ ಮೆಚ್ಚಿಪ್ರೇಮದಿಂದಲಿ ನಿನಗಾಲಿಂಗನವನಿತ್ತ 8ಸುರರ ನಗರೋಪಮವು ಸರೆಯೂ ತಟಿನಿಯಲ್ಲಿಇರುವುದು ಅಯೋಧ್ಯಾ ಆ ಪುರಿಜನರು ಎಲ್ಲಾಶ್ರೀರಾಮ ಸೀತಾಸಮೇತ ಪರಿವಾರ ಸಹಪುರಿಯೊಳು ಬರಲು ಆನಂದ ಹೊಂದಿದರು 9ಅಘದೂರ ಪೂರ್ಣಕಾಮನ ಮಂದಹಾಸವನುನರಜನರು ನೋಡಿ ಹಿಗ್ಗಿ ಘೋಷಿಸಲುಜಗಜ್ಜನ್ಮ ಸ್ಥಿತ್ಯಾದಿಕರ್ತ ಭೂಕಾಂತ ಶ್ರೀರಾಘವಗೆ ಮಾಡಿಸಿದೆ ರಾಜ್ಯಾಭಿಷೇಕ 10ಶ್ರೀ ರಾಮಭದ್ರನಿಗೆ ಯುವರಾಜನಾಗಿದ್ದುಭರತರಾಯನೆ ನೀನು ಸೇವೆ ಅರ್ಪಿಸಿದೆಸರಸಿಜೋದ್ಭವ ಲೋಕದಂತಾಯಿತೀ ಲೋಕವರವಿಷ್ಣು ಭಕ್ತಿಯು ಸೌಖ್ಯ ಎಲ್ಲೆಲ್ಲೂ11ಶರದಿಂದ ನೀನು ಗಂಧರ್ವರೂಪದಲಿದ್ದಮೂರು ಕೋಟಿ ಕ್ರೂರ ಅಸುರರನು ಕೊಂದೆಕರುಣಿಸಿ ನೀ ಎನ್ನ ಕಷ್ಟಗಳ ಪರಿಹರಿಸೊಶ್ರೀ ರಾಮಪ್ರಿಯ ಭರತ ಎನ್ನ ಗುರುಗಳ ರಾಜ 12ಶ್ರೀ ರಾಮ ಅವತಾರ ಕಾರ್ಯ ತಾ ಪೂರೈಸಿಸುರರುಮುನಿಗಣ ಮುಕ್ತಿಯೋಗ್ಯರ ಸಮೇತತೆರಳೆ ಸ್ವಧಾಮಕ್ಕೆ ಚಕ್ರ ನೀ ಚಕ್ರವನುಶ್ರೀರಾಮನಿಗೆ ದಕ್ಷಪಾಶ್ರ್ವದಲಿ ಪಿಡಿದೆ 13ಗರುಡಮೃಡಶೇಷಸ್ಥ ಭಾರತೀಪತಿ ಹೃಸ್ಥಪರಮಪೂರುಷ ಕೃತೀಪತಿಯು ಪ್ರದ್ಯುಮ್ನಹರಿರಾಮನಲಿ ಸದಾ ಭಕ್ತಿಭರಿತನೆ ಭರತವರನೀನು ಅಹಂಕಾರಿಕ ಪ್ರಾಣಾದ್ಯರಿಗೆ14ಸರಸಿಜಾಸನ ಪಿತ ಶ್ರೀ ಪ್ರಸನ್ನ ಶ್ರೀನಿವಾಸನವರಭಕ್ತ ವೃಂದ ಶಿರಮಾಣಿಕ್ಯ ಭರತಧರೆಯೊಳುತ್ತಮ ಕೂಡಲ್ ಮಾಣಿಕ್ಕವೆಂಬುವಕ್ಷೇತ್ರದಲಿ ನಿಂತು ಹರಿಭಕ್ತರನು ಪೊರೆವೆ 15
--------------
ಪ್ರಸನ್ನ ಶ್ರೀನಿವಾಸದಾಸರು
ಕೃಷ್ಣವೇಣಿ164ನಮೋ ನಮೋ ಕೃಷ್ಣವೇಣಿನಮೋ ನಮೋ ಕೃಷ್ಣವೇಣಿ ಕಲ್ಯಾಣಿ ಪ.ಈ ಜನ್ಮದಘವು ನಾನಾ ಜನ್ಮಕೃತದೋಷಆರ್ಜಿತವಾದ ಪಂಚ ಮಹಾಪಾಪವುತ್ರಿಜಗತ್ಪಾವನಿಯೆ ನಿನ್ನ ಕಂಡು ನಾ ಕಳೆದೆರಾಜಿಸುವ ದಿವ್ಯಗತಿಯೀಯೆ ಎನ್ನತಾಯೆ 1ವಿಪ್ರಮುನಿ ಸುರನರರು ಕನ್ಯಕ್ಕೆಗುರುಬರಲುಕ್ಷಿಪ್ರನೆರೆದರು ಉಭಯತೀರವಿಡಿದುಸುಪ್ರಾರ್ಥನೆಯ ಮಾಡಿ ಆನಂದದಿ ಹರಿಯನೆ ಪ್ರಸನ್ನೀಕರಿಸಿಕೊಳ್ಳುವರಮ್ಮ 2ನಿರ್ಮಳಾತ್ಮಕÉ ಗಂಗೆ ಸಂಗೆ ಗುಣೋತ್ತುಂಗೆಹಿಂಗಿಸು ಭವವ ಪಾವನತರಂಗೆಜಂಗಮ ಜಡಾತ್ಮರನುದ್ಧರಿಸುತಿಹೆ ಸದಾಮಂಗಳ ಶ್ರೀಪ್ರಸನ್ವೆಂಕಟನೊಲುಮೆಯಲ್ಲಿ 3
--------------
ಪ್ರಸನ್ನವೆಂಕಟದಾಸರು
ಕೈ ಮುಗಿದು ಬೇಡುವೆನು ಕೈಲಾಸವಾಸಾ ||ವಹಿಲದಲಿ ಸಲಹೆನ್ನ ಈಶ ಗಿರಿಜೇಶಾ ಪಅಷ್ಟ ಭಾಗ್ಯವು ನೀನೆ | ಇಷ್ಟಮಿತ್ರನು ನೀನೆ |ಹುಟ್ಟಿಸಿದ ತಾಯ್ತಂದೆ |ವಿದ್ಯೆಗುರುನೀನೆ |ಸೃಷ್ಟಿ ಮೂರಕೆ ನೀನೆ ಅಧ್ಯಕ್ಷನೆನಿಸಿರುವೆ |ರಕ್ಷಿಸೆನ್ನನು ಜಟಾಜೂಟ ನಿಟಿಲಾಕ್ಷ 1ಮಾಯಾಪಾಶದಿ ಸಿಕ್ಕಿ |ಕಾಯಸುಖವನು ಬಯಸಿ |ಆಯತಪ್ಪಿದೆ ಮುಂದುಪಾಯವೇನಿದಕೆ |ಜೀಯನೀನೆಂದೆಂಬ | ನ್ಯಾಯವರಿಯದೆ ಕೆಟ್ಟೆ |ಕಾಯೊ ದಯದಲಿ ಮೃತ್ಯು | ಬಾಯಿಗೊಪ್ಪಿಸದೆ 2ಘೋರತರ ಸಂಸಾರ ಸಾಗರದಿ ಮುಳುಮುಳುಗಿ |ಕ್ರೂರ ನಕ್ರನ ಬಾಯಿಗಾಹಾರವಾದೆ |ದಾರಿಕಾಣದೆ ಬಳಲಿ ಮಾರಹರ ನಿನ್ನಂಘ್ರಿ |ಸೇರಿದೆನು ಗೋವಿಂದದಾಸನನು ಸಲಹೋ 3
--------------
ಗೋವಿಂದದಾಸ
ಕೈಯ ತೋರೋ ಕರುಣಿಗಳರಸಾ-ಕೈಯ ತೋರೊ |ಕೈಯಲಿ ಬೆಣ್ಣೆಯ ಮುದ್ದೆಯ ನೀಡುವೆ-ಕೈಯ ಪಅಂಗುಲಿಯೊಳು ಪೊನ್ನುಂಗುರವೊಪ್ಪುವ ಕೈಯ ತೋರೊ |ಶೃಂಗಾರದಿ ಶಂಖಚಕ್ರವ ಧರಿಸಿದ ಕೈಯ ತೋರೊ ||ಅಂಗೈಯಲಿ ಧ್ವಜಪಧ್ಮವಿರಾಜಿಪ ಕೈಯ ತೋರೊ |ಅಂಗನೆಯರಉತ್ತುಂಗಕುಚದಲಿಟ್ಟ ಕೈಯ ತೋರೊ1ಬಡಬ್ರಾಹ್ಮಣನವಲಕ್ಕಿಯ ಬೇಡಿದ ಕೈಯ ತೋರೊ |ಕೊಡೆ ಮಾಡಿ ಗಿರಿಯೆತ್ತಿ ಗೋಗಳ ಕಾಯ್ದ-ಕೈಯ ತೋರೊ ||ಕಡುಹಿರಣ್ಯಾಖ್ಯನ ಒಡಲನು ಬಗೆದ-ಕೈಯ ತೋರೊ |ಧೃಡ ಪ್ರಹ್ಲಾದನ ಮಂಡೆಯೊಳಿಟ್ಟ ಕೈಯ ತೋರೊ 2ಅಲ್ಲಿ ಪೂತನಿಯ ಅಸುವನೆ ಹೀರಿದ ಕೈಯ ತೋರೊ |ಬಲ್ಲಿದಮಲ್ಲರ ಮರ್ದಿಸಿ ಬಂದ-ಕೈಯ ತೋರೊ ||ಮೆಲ್ಲನೆ ಕುಬುಜೆಯ ಡೊಂಕನೆ ತಿದ್ದಿದ ಕೈಯ ತೋರೊ |ಬಿಲ್ಲನು ಎಡಗೈಯಲಿ ಮುರಿದಿಟ್ಟ ಕೈಯ ತೋರೊ 3ಬಲಿಯನು ವಂಚಿಸಿ ದಾನವ ಬೇಡಿದ ಕೈಯ ತೋರೊ |ಫಲಪುಷ್ಪ ಪಾರಿಜಾತವ ತಂದ ಕೈಯ ತೋರೊ ||ಒಲಿದು ಪಾರ್ಥಗೆ ರಥವನು ನಡೆಸಿದ ಕೈಯ ತೋರೊ |ಮಲ್ಲಿಗೆ ಜಾಜಿಯ ತುರುಬಿಗೆ ಮುಡಿಸಿದ ಕೈಯ ತೋರೊ 4ಆಕಾಶದ ಚಂದ್ರಮನನು ಕರೆದ-ಕೈಯ ತೋರೊ |ನಾಕಪತಿಗೆ ಅಭಯವನಿತ್ತ-ಕೈಯ ತೋರೊ |ನೇಕ ಬಗೆಯಲಿ ಕೊಳಲನೂದುವ-ಕೈಯ ತೋರೊ |ಶ್ರೀಕಾಂತ ನಮ್ಮ ಪುರಂದರವಿಠಲ-ಕೈಯ ತೋರೊ 5
--------------
ಪುರಂದರದಾಸರು
ಕ್ಷಮಾ ಸಮುದ್ರ ನಿನ್ನ ಸಮಾನರಿಲ್ಲರಮಾ ಬ್ರಹ್ಮಾದಿಗಳು ಪೊಗಳೆ ಪಉಮೆಯರಸ ನಿನ್ನ ಚರಣಮಹಿಮೆ ತನ್ನತರುಣಿಯೊಡನೆ ಹಗಲಿರುಳು ಪೇಳುವ ದಿವ್ಯ ಅ.ಪಅರಿಯದೆ ಅಜಮಿಳತರಳನಾರಗನೆಂದುಮರಣ ಕಾಲದಿ ಒದರೆಸರಸೀಜಾಕ್ಷನು ತನ್ನ ಪರಿವಾರದವರೆಂದುಸಿರಿದೇವಿಯೊಳು ಪೇಳಿ ತ್ವರಿತದಿ ರಕ್ಷಿಸಿದ 1ನಕ್ರನ ಬಾಧೆಗೆ ಸಿಕ್ಕಿದ ಗಜರಾಜಚಕ್ರಪಾಣಿಯ ಭಜಿಸೆಆ ಕ್ಷಣದಿ ತನ್ನ ಚಕ್ರಕಾಙÉÕಯ ಮಾಡಿಲಕ್ಷ್ಮೀದೇವಿಗ್ಹೇಳದೆ ಪಕ್ಷಿ ಹೆಗಲೇರಿ ಬಂದ 2ಹಿರಣ್ಯಕಶ್ಯಪು ತನ್ನತರಳಪ್ರಹ್ಲಾದನಿಗೆಪರಿಪರಿ ಬಾಧೆ ಪಡಿಸೆಹರಿಯ ತೋರೆಂದು ಆರ್ಭಟಿಸಿ ನುಡಿಯೆ ದೈತ್ಯನರಮೃಗರೂಪನಾಗಿ ಭರದಿ ಕಂಬದಿ ಬಂದ3ಪತಿಗಳೈವರು ಲಕ್ಷ್ಮೀಪತಿಯ ಧ್ಯಾನದೊಳಿರೆಮತಿಹೀನನೆಳೆತರಲುಗತಿನೀನಲ್ಲದೆ ಮತ್ತೆ ಹಿತರೊಬ್ಬರಿಲ್ಲವೆನೆಅತಿಬೇಗದಿಂದ ಧರ್ಮಸತಿಗೆ ಅಕ್ಷಯವಿತ್ತ 4ಇದರಂತೆ ತರಳಧ್ರÀುವ ಒದಗಿದ ತಾಪದಿಂದಪದುಮನಾಭನÀ ಭಜಿಸೆಮುದದಿಂದಾತಗೆ ಧ್ರುವಪದವಿಯನಿತ್ತು ಕಾಯ್ದೆಪದುಮನಾಭನೆ ನಿನಗೆದುರುಂಟೆ ತ್ರಿಜಗದಿ 5ಘಣಿಶಾಯಿ ನಿನ್ನಗುಣಮಹಿಮೆಯ ಪೊಗಳಲುಅಹಿಭೂಷಣನಿಗಳವೆಕ್ಷಣ ಬಿಡದಲೆ ನಿನ್ನ ಚರಣಸೇವೆಯ ಮಾಳ್ಪಸಿರಿದೇವಿ ಅರಿಯೆನೆಂದೆನಲು ನಿನ್ನಯಗುಣ6ಕರುಣಾಸಾಗರ ದೇವ ವಿಮಲಸ್ವರೂಪನೆ ಕಮಲನಾಭ ವಿಠ್ಠಲಶರಣಜನರ ಬಹುತ್ವರದಿಂದ ಬಂದು ಕಾಯ್ದಪರಮದಯಾಳೊ ನಿನ್ನ ಚರಣಕ್ಕೆ ನಮೋ ಎಂಬೆ7
--------------
ನಿಡಗುರುಕಿ ಜೀವೂಬಾಯಿ
ಕ್ಷೀರಸಾಗರದಲೆರಡೀರೈದು ಯೋಜನದ |ಮೇರೆಯಲಿ ವರತ್ರಿಕೂಟಾದ್ರಿ ಶೃಂಗತ್ರಯದಿ |ರಾರಾಜಿಸುವ ತಾಮ್ರ-ರಜತ-ಕಾಂಚನದಿಂದನಾರಾಯಣಾಂಶದಿಂದ ||ಪಾರಿಜಾತಾಂಭೋಜ ಬಕುಳ ಮಲ್ಲಿಗೆ ಜಾಜಿ |ಸೌರಭದಲಶ್ವತ್ಥಪೂಗಪುನ್ನಾಗಜಂ |ಬೀರತರುಗುಲ್ಮಶಾಖಾಮೃಗಗಳೆಸೆವಲ್ಲಿವಾರಣೀಂದ್ರನು ಮೆರೆದನು 2ಆನೆ ಹೆಣ್ಣಾನೆ ಮರಿಯಾನೆಗಳ ಸಹಿತಲ್ಲಿ |ಕಾನನದಿ ತೊಳಲುತ್ತ ಬೇಸಗೆಯ ಬಿಸಿಲಲ್ಲಿ |ತಾನು ನೀರಡಿಸಿ ಬಂದೊಂದು ಸರಸಿಯ ತಟಕೆಪಾನಾಭಿಲಾಷೆಯಿಂದ ||ನಾನಾಪ್ರಕಾರದಿಂ ಜಲಕ್ರೀಡೆಯಾಡುತಿರ |ಲೇನಿದೆತ್ತಣ ರಭಸವೆಂದುಗ್ರಕೋಪದಿಂ |ಒತ್ತಿ ಪಿಡಿದೆಳೆಯುತಿರೆ ಎತ್ತಣದಿನೇನೆನುತ |ಮತ್ತಇಭರಾಜನೌಡೊತ್ತಿ ನೋಡುತ್ತಂಘ್ರಿ |ಎತ್ತಿ ತಂದನು ತಡಿಗೆ ಮತ್ತೆ ನಡುಮಡುವಿನೊಳುಅತ್ತಲೇ ತಿರುಗೆನೆಗಳೆ||ಇತ್ತಂಡದಿಂತು ಕಾದಿದರು ಸಾವಿರ ವರುಷ |ಉತ್ತರಿಸಿತೇನೆಂಬೆ ಮತ್ತಾ ಗಜೇದ್ರಂಗೆ |ಸತ್ತ್ವ ತಗ್ಗಿತು ತನ್ನ ಮನದೊಳಗೆ ಚಿಂತಿಸಿತುಮತ್ತಾರು ಗತಿಯೆನುತಲಿ 4ಬಂದುದಾ ಸಮಯದಲಿ ಹಿಂದೆ ಮಾಡಿದ ಪುಣ್ಯ |ದಿಂದ ದಿವ್ಯಜಾÕನ ಕಣ್ದೆರೆದು ಮನದೊಳರ |ವಿಂದನಾಭಾಚ್ಯುತ ಮುಕುಂದಮಾಧವಕೃಷ್ಣನಿಖಿಲ ಮುನಿವೃಂದವಂದ್ಯ ||ಇಂದಿರಾರಮಣ ಗೋವಿಂದ ಕೇಶವ ಭಕ್ತ |ಬಂಧು ಕರುಣಾಸಿಂಧು ತಂದೆ ನೀ ಗತಿಯೆನಗೆ |ಇಂದುಸಿಲ್ಕಿದೆನು ಬಲು ದಂದುಗದಮಾಯಾಪ್ರ-ಬಂಧಕನೆ ನೆಗಳಿನಿಂದ 5ಪರಮಾತ್ಮ ಪರಮೇಶ ಪರತತ್ತ್ವ ಪರಿಪೂಜ್ಯ |ಪರತರ ಪರಂಜೋತಿಪರಮಪಾವನಮೂರ್ತಿ |ಪರಮೇಷ್ಟಿಪರಬ್ರಹ್ಮಪರಮಪರಮಾಕಾಶ |ಪರಿಪೂರ್ಣ ಪರಮಪುರುಷ ||ನಿರುಪಮ ನಿಜಾನಂದ ನಿರ್ಲಯ ನಿರಾಕಾರ |ನಿರವಧಿಕನಿರ್ಗುಣನಿರಂಜನನಿರಾಧಾರ |ನಿರವದ್ಯನಿಸ್ಸಂಗ ನಿಶ್ಚಿಂತ ನಿಖಿಲೇಶಇರದೆ ನೀ ಸಲಹೆಂದನು 6ಇಂತೆನುತ ಮೂಚ್ರ್ಛೆಯಲಿ ಗುಪ್ತಕಂಠಸ್ವರದ |ಕಾಂತ ನಡುನೀರೊಳಗೆ ತೇಲಿ ಮುಳುಗುತಲಿರೆ ಅ- |ನೆಗಳ ಬಾಯನು ಚಕ್ರದಲಿ ಸೀಳಿ ಕರಿವರದ |ಒಗುವ ಕರಣದಲಿ ಮೈದಡಹಲ್ಕೆ ಗಜಜನ್ಮ |ತೆಗೆದುದಾಕ್ಷಣಕೆ ಮಣಿಮುಕುಟ - ಕುಂಡಲದಿಂದನಗಧರನು ಓಲೈಸಿದ ||ವಿಗಡದೇವಲ ಮುನಿಯ ಶಾಪದಲಿ ದಾರುಣಿಯೊ- |ಳಗೆ ನಕ್ರನಾಗಿ ಹೂಹೂ ಎಂಬ ಗಂಧರ್ವ |ಮಗುಳಿಪುರವನು ಕಂಡು ನಿಜಗತಿಗೆ ಐದಿದಿನುಕಮಲಾಕ್ಷಮಿಗೆ ಮೆರೆದನು 8ಮಣಿಮುಕುಟಕುಂಡಲಪದಕಹಾರ ಕಡಗಕಂ- |ಕಣ ಕೌಸ್ತು ಭೊಜ್ವ ್ಜಲಾಂಗದವೈಜಯಂತಿಭೂ- |ಷಣ ಶಂಖ-ಚಕ್ರ-ಗದೆ-ಪದ್ಮ ಧರಿಸಿಹಹಸ್ತಪಣಿಯ ಕಸ್ತುರಿ ತಿಲಕದಾ ||ಝಣಝಣಿಪ ನೂಪುರದ ದಂತಪಂಕ್ತಿಯ ಕೃಪೇ- |ಕ್ಷಣದ ಸಿರಿಮೊಗದ ಪೀತಾಂಬರದ ಮೂರುತಿಗೆ |ಮಣಿದು ಜಂiÀi ಜಯಜಯಾಎಂಬ ಸುರನರರಸಂ- |ದಣಿಯಿಂದೆಹರಿಮೆರೆದನು 9ಹರಹರಿಎನುತ್ತಂಘ್ರಿಗೆರಗಲಿಭವರನನಾ- |ದರದಿಂದಲೆತ್ತುತಲಿ ಕೇಳ್ಮಗನೆ ನೀನೆನ್ನ |ವಿರಜಶರಪರಿಧಿಯಾ ಸರವನಹಿಪತಿಯನ್ನುಪರಜನ್ಮನೀ ಲಕುಮಿಯ ||ಪರಮೇಷ್ಟಿ-ಭವರ ಮನು-ಮುನಿಗಳನು ಧರಣಿಯನು |ಆವಾವನಿದನುದಯದಲ್ಲೆದ್ದು ಭಕ್ತಿಯಲಿ |ಭಾವಶುದ್ಧಿಯಲಿ ತಾ ಹೇಳಿಕೊಳುವನೊ ಅವನ- |ಘಾವಳಿಯ ಪರಿಹರಿಸಿ ಸುಙ್ಞÕನವೀವೆ ದೇ-ಹಾವಸಾನದಲೆನುತಲಿ ||ಶ್ರೀವಾಸುದೇವನಾಜಾÕನೆಸಿ ಗಜೇಂದ್ರ ಸಹಿ- |ತಾವಿಹಂಗಾಧಿಪನನೇರಿ ವೈಕುಂಠಕ್ಕೆ |ದೇವ ಬಿಜಯಂಗೈದಪುರಂದರವಿಠಲನ
--------------
ಪುರಂದರದಾಸರು
ಗಂಗಾಧರ ದೇವ ಜಯಗೀಷ ವ್ಯಾನಂಗಾರಿ ಗಿರಿಜಾಧವ |ಮಂಗಳ ಪ್ರದನೆ ಅಮಂಗಳ ಶೀಲ | ಭುಜಂಗ ರೂಪದಿ ಪಾಂಡು |ರಂಗ ಘಾಸಿಗೆಯಾದ ಪವೈಕಾರಿಕಾಹಂಕಾರ ತತ್ವದೊಡೆಯ, ನಾಕುಮೊಗನ ಕುಮಾರ |ಶ್ರೀಕಂಠ, ಸ್ಥಾಣು, ವಿಶ್ಖೋಜನಕ, ಚಂದ್ರಶೇಖರ, ಈಶಪಿನಾಕಿಭಕ್ತವತ್ಸಲ |ಶೋಕನಾಶಕ ಶಂಭು, ಪಶುಪತಿ, ಹೇ ಕರುಣಿ, ಸದ್ಗುಣ ಸುಖಾರ್ಣವ |ಪಾಕಶಾಸನ ಪ್ರಮುಖ ವಂದ್ಯ, ವಿಶೋಕ, ಎನ್ನಭಿಲಾಷೆ ಪೂರ್ತಿಸು1ಪ್ರಾಣನಂದನ ತೈಜಸಾಹಂಕಾರಾಭಿಮಾನಿ ಶ್ರೀಶುಕದೂರ್ವಾಸ|ಕ್ಷೋಣಿಸಂಧೃತ ಧನ್ವಿ, ದಾನವಾಂತಕ, ಶೂಲಪಾಣಿ, ಪ್ರಮಥಾಧಿಪ ಬಾಣವರದಯನ್ನ |ಮಾನನಿನ್ನದು ಚಕ್ರಿ ಪದಕಂಜರೇಣುತೋರಿಸು ತವಕದಿಂದಲಿ |ದ್ರೌಣಿ, ಶಿವ, ಪ್ರಣತ ಜನ ಸುಮನಸಧೇನು, ತವ ಪದ ಸಾರ್ವೆ ಸತತ 2ತಾಮಸಾಹಂಕಾರೇಶ ಸಂಕರ್ಷಣನಾ ಮಗನೇ ಕೊಡು ಲೇಸ ರಾಮನಾಮ ಮಂತ್ರ |ಪ್ರೇಮದಿ ಜಪಿಸುವ ಸ್ವಾಮಿ, ಅನಲ,ವಹ್ನಿಸೋಮಲೋಚನ ಹರ |ವಾಮದೇವ, ಕಪರ್ದಿ,ಭವಭಯ ಭೀಮ ಶ್ರೀ ಪ್ರಾಣೇಶ ವಿಠಲನ |ಪ್ರೇಮ ಪುಟ್ಟಿಸೋ ರೌಪ್ಯ ಪರ್ವತಧಾಮ ಶ್ರೀ ವಿರೂಪಾಕ್ಷ ಗುರುವೇ 3
--------------
ಪ್ರಾಣೇಶದಾಸರು
ಗಂಗಾಪಿತ ರಾಘವ ನಂಬಿದೆ ಶ್ಯಾಮ-ಲಾಂಗ ನಿನ್ನಯ ಪಾದವ ||ಮಂಗಳೆ ರಮಣ ಭುಜಂಗಧರಾರ್ಚಿತಾ |ನಂಗಜ ಜನಕ ಪಾಲಿಸಿಂಗಡಲೊಡೆಯನೆ ಪಶಫರ, ಕಮಠ,ಕೋಲನೃಹರಿ ಬಾಲ |ನೃಪಕುಲ ಪವನ ವ್ಯಾಲ ||ವಿಪಿನಸಂಚರಾ ಕೃಷ್ಣ ವಿಪುಳಾಬುದ್ಧಕಲ್ಕಿ |ವಪುಧರ ಅನಿರುದ್ಧಕೃಪಣವತ್ಸಲ ಸ್ವರ್ಪಾ- ||ದಪನೆಹರಿಕಾಶ್ಯಪಿಯೊಳಗೆ ಸುರ ರಿಪುಹ | ಶಿವನ ಕ |ರಿಪನ ನರಪತಿ ದ್ರುಪದ ನಂದನೆಯ ಪೊರೆದೀಶ್ವರ |ಕಪಟನಾಟಕ ಕಪಿಲ ರೂಪಿ 1ಕುರು ಕುಲೋತ್ತಮನಾಗಾರದೊಳಗೆಕ್ಷೀರ|ಸುರಿದೆ ಗೋಕುಲ ವಿಹಾರ ||ವರವಿಪ್ರಜರ ತಂದೆ ಹರಚಾಪಹನನಈ |ಶರೀರವೇ ನಿನ್ನದು ಸರಿಬಂದದನು ಮಾಡೋ ||ಕರೆಕರೆಯ ಭವಶರಧಿಯೊಳು ಬಾ- |ಯ್ದೆರೆವೆ ರಕ್ಷಿಸುವರನು ಕಾಣೆನೊಬ್ಬರ ನಿನ್ನುಳಿ- ||ದುರಗ ಶಯನನೇ ಧರಿಜವಲ್ಲಭಕರುಣಿ ಕೇಶವ2ಜನನ ಮರಣ ದೂರ ಇಂದ್ರಾನುಜ |ಮುನಿ ಗೇಯಾ ಚಲಧರ ||ವನರುಹಭವಸಂಕ್ರಂದನವಂದ್ಯ ವೀತ ಆ |ವನಿ ಮುಖ ತನ್ಮಾತ್ರಾಗುಣ ಪ್ರಾಣೇಶ ವಿಠಲ ||ಪ್ರನಮಿತಾಘ ಕಕ್ಷಾನಲ ಕಂದರ್ಪನ ಪಿತನೆ |ನಿನ್ನನುಗರೊಳಗಿಡೋ ಮಣಿಯೇ ಅನ್ಯರಿ ||ಗನಘ ಪಾಲಿಪುದನವರತ ಯನ್ನನು ಬಿಡದಲೆ 3
--------------
ಪ್ರಾಣೇಶದಾಸರು