ಒಟ್ಟು 2739 ಕಡೆಗಳಲ್ಲಿ , 120 ದಾಸರು , 1838 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಹಿ ಪಾಹಿ ಮುಕುಂದ ಕೇಶವ ಪಾಹಿ ಮುರಹರ ಮಾಧವಾಪಾಹಿ ಗೋಕುಲವಾಸ ಪಾವನ ಪಾಹಿ ಕೃಷ್ಣ ಜನಾರ್ದನಾಪಾಹಿ ಭಕ್ತಮನೋಹರಾಕೃತೆ ಪಾಹಿ ಶ್ರೀಧರ ವಾಮನಾಪಾಹಿ ಪಂಕಜನೇತ್ರ ಜಯಜಯ ಪಾಹಿ ವೆಂಕಟನಾಯಕಾ1ಪಾರರಹಿತ ಭವಾಬ್ಭಿ ಮಧ್ಯ ವಿಹಾರವೇಷ ವಿನೋದಿನಂದಾರ ಪುತ್ರ ಧನಾಲಯಾದಿಷು ಸಾರಮತಿಮತಿದುಃಖಿನಂಕ್ರೂರ ಕ್ರೋಧಕಷಾಯ ಕಲುತ ಕರಣ ಮತ್ಯಭಿಮಾನಿನಂಶ್ರೀ ರಮಣ ವೈಕುಂಠವಲ್ಲಭ ಪಾಹಿ ವೆಂಕಟನಾಯಕಾ 2ರಕ್ಷ ರಕ್ಷ ಮಹೇಶ ಸುರಮುನಿಪಕ್ಷ ಮನ್ಮಥಶಿಕ್ಷಕಾರಕ್ಷ ರವಿಚಂದ್ರಾನಲಾಂಬಕ ರಕ್ಷ ರಜತಗಿರೀಶ್ವರಾರಕ್ಷ ರಾಕ್ಷಸಭಯನಿವಾರಕ ರಕ್ಷ ಕಾಮಿತದಾಯಕಾರಕ್ಷ ಗಜವ್ಯಾಘ್ರಾಜಿನಾಂಬರ ರಕ್ಷ ಶಿವ ಗಂಗಾಧರ 3ಕಾಮಕರಿಪದ ಮರ್ದಿತಂ ತನು ದಾಮ ಬಂಧನ ಪೀಡಿತಂತಾಮಸಂ ತ್ವತ್ಪಾದ ಸೇವಾ ನಾಮಮಾತ್ರ ವಿವರ್ಜಿತಂಭೀಮ ರವಿಜಭಯಾತುರಂ ಕುರು ಕಾಮಹರ ತವ ಸೇವಕಂವ್ಯೋಮಕೇಶ ವಿರಿಂಚಿ ವಿಬುಧಸ್ತೋಮ ಶಿವಗಂಗಾಧರ 4ವಾಸುದೇವ ವರೇಣ್ಯ ಪದ್ಮನಾಭ ಸುರೇಶ ಕ್ಲೇಶವಿಭಂಜನಭಾಸಮಾನ ಭವಾಬ್ಧಿತಾರಕ ದಾಸಪದ್ಮದಿವಾಕರದೇಶಕಾಲಾತೀತ ನಿರುಪಮ ಪಾಹಿ ವೆಂಕಟನಾಯಕಾ 5ಶರಣಜನ ಸುರಕುಜ ತವಾಮಲ ಚರಣಪಂಕಜ ಪಂಜರೇವಿರಜೆವಿಶತು ಮನಃಸ್ಥಿರಂ ಮಮ ಕುರು ತಥೈವ ಕೃಪಾಕರಪರಮಕಾರಣ ಪರತರಾತ್ಪರ ಪುರುಷ ಪ್ರಕೃತಿಪ್ರವರ್ತಕಾಸರಸಿಜೋದ್ಭವಸ್ತಂಭ ವ್ಯಾಪಕ ಪಾಹಿ ವೆಂಕಟನಾಯಕ 6ನೀಲಕಂಠ ನಿಧೀಶಮಿತ್ರ ಸುಶೀಲ ಸಾಂಬ ಮೃಗ ಫಣಿ ವರ ಕುಂಡಲಶೂಲಪಾಣಿ ಸುರಾದ್ರಿಚಾಪ ಜಟಾಲತಾಪರಿಶೋಭಿತಕೀಲಿತಾಮರವೈರಿಪುರ ನಿರ್ಮೂಲ ಶಿವಗಂಗಾಧರ 7ದೇಹಿ ದಾಸ್ಯಮನಾಮಯಂ ಹರ ದೇಹಿ ಸಾಧುಸಮಾಗಮಂದೇಹಿ ತವಚರಿತಾಮೃತಂ ಭವ ನಿತ್ಯ ನಿರೋಗತಾಂದೇಹಿ ಶಿವಗಂಗೇಶ ತಿರುಪತಿಧಾಮ ವೆಂಕಟನಾಯಕ 8ಓಂ ಯಮಳಾರ್ಜುನಭಂಜನಾಯ ನಮಃ
--------------
ತಿಮ್ಮಪ್ಪದಾಸರು
ಪಾಹಿಮಾಂ ಜಗದೀಶ ಭಕ್ತವಿಲಾಸ ಶ್ರೀ ಶ್ರೀನಿವಾಸನೆ ಹೇಳಲೊಶವಲ್ಲ ದೇವನೆ ಪ ಚಂಡಶಾಸಕ ಬಿರುದುವುಳ್ಳ ಪ್ರಚಂಡ ದೇವೋತ್ತುಂಗನೆ ಮದನ ಜನಕ ಕೋದಂಡಧರ ಶ್ರೀರಾಮನೆ 1 ವಿಕಟದಾನವ ಮೂಲ ಚ್ಛೇದನ ವಿಶ್ವರೂಪ ವಿನೋದನೆ 2 ಅಮಿತ ಮಹಿಮಾನಂದ ಹರನುತ ಕಮಲಸಂಭವ ನಯ್ಯನೆ ಸುಮನರಾದ ಸುಜನರಾ ಹೃದಯ ಕಮಲದಲಿ ನೀ ವಾಸನೆ 3 ಮಂಗಳಾಂಗ ವಿಹಂಗವಾಹನ ಮಾರಕೋಟಿ ಲಾವಣ್ಯನೆ ಅಂಗನಾಮಣಿ ಲಕುಮಿಪುರದಲಿ ಅಡಗಿಸಿಪ್ಪ ಶ್ರೀ ಲೋಲನೆ 4 ಶೌರಿ ಮಹಾಗುಣ ಶಾಂತನೆ ಕರುಣೆಸೆನ್ನನು ಕಾಯೊ ಬೇಗನೆ ವರದ `ಹೆನ್ನ ವಿಠ್ಠಲನೆ' 5
--------------
ಹೆನ್ನೆರಂಗದಾಸರು
ಪಾಹಿಮಾಂ ತೀರ್ಥಧಾಮಾ | ಪಾಹಿಮಾಂತ್ರಿಜಗಾದಿ | ಪಾಹಿಮಾಂ ತನುಜಧವ | ಹೇಹಿಮರಾಚೂಡ | ದೇಹಿ ಮನೋಭೀಷ್ಮ | ಮಹೀಶಾಯಿಸುಖ ಆಕಾಶ | ವಾಹಿನಿ ಧರಾ | ಮೋಹನ ಚರಿತ ರಜತಗೇಹ ಸಾಂಬಾ ಪ ಈಶ ಅಘನಾಶ ಸರ್ವೇಶ ಸುರಕೋಶ ಮುನಿ | ತೋಷಗಜಾಸುರ ವಿನಾಶ ಭವಪಾಶ ಹರ | ವಾಸವಾದ್ಯನುತ ನಿರ್ದೋಷ ಶ್ರೀ ಭಸಿಶಿತ | ವಿ ಭೂಷಿತ ವಿನಾಶ ರಾಮೇಶ ಶಿವಶಂಭೋ 1 ವೀರ ರಣಧೀರ ಗಂಭೀರ ಸಾಕಾರವರ | ಪ್ರಾರ ಸಂಹಾರ ಭಯ ಪೂರಿತ ಪುರಾರಿ | ಮೌ ದಾರ ಚಿರಚಿರಂಡ ಜಾರಿವಿಹಾರಿ | ಶ್ರೀ ಹೇರಂಬ ತಾತದಯ ಪಾರಾವಾರ ಶಂಭೋ 2 ದುರಿತ | ಕಾಲಹರ ಗೋಗಮನ ಭಾಲನಯನಾರ್ತಜನ | ಪಾಲ ವಿಶಾಲಾ ತ್ರಿಶೂಲಧೃತನಿರುತ ಶುಭ ಲೀಲ ಶ್ರೀ ಗುರುಕೃಷ್ಣ ಬಾಲಕ ಪ್ರಭು ಶಂಭೋ3 ಅಂಕಿತ-ಶ್ರೀಗುರುಕೃಷ್ಣ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪಾಹಿಮಾಂ ಪರಮೇಶ ಪಾಹಿಪನ್ನಗಭೂಷ ಪಾಹಿಕೈಲಾಸವಾಸ ಪ ಸ್ವಾಮಿ ಗಿರಿಜಾನಾಥ ಸಮರ ವಿಜಯ ತ್ರಿಣೇತ್ರ ಸುಜನ ವಿನುತ ಕಾಮಿತಾರ್ಥ ಪ್ರದಾತ ಕ್ಷೇಮತರ ಸುಚರಿತ್ರ ಸಾಮಗಜ ವದನ ತಾತರಾಮೇಶ ಕೇಶಪುನೀತ ಪ್ರಖ್ಯಾತ 1 ಕಾಲ ಭಾಳಾಕ್ಷಭಯ ಸಂಹಾರ ಜನಸಾರ ಶೂಲಧರ ಕರುಣಾಕರ ಶೀಲವರಗುಣ ಸುಂದರ ಹರಪಾಶ ಭಯವಶಂಕರ ಓಂಕಾರ 2 ಬಲಸಾಕಾರತ ವಿಶಾಲ ಏಕಮಯ ತ್ರಿಗುಣದಿಂದ ಖಿಲಲೋಕ ವಿಸೂತ್ರ ಜಾಲ ಸಾಕೆನ್ನ ಭವದಳಲ ಶೋಕವನು ನೀಕೇಳದೇಕೆ ಈ ಚೇಷ್ಟೆಬಹಳ ಕಾಲ ಮೂಕಾಂಬಿಕಾಂಬಲೋಲ3 ನಾಗವಾಹನ ನಮಿತನೆ ಯೋಗಮಾಯಾತೀತನೆ ಸಾಗರಾಂಬರದೊಡೆಯನೆ ಭಾಗವತ ಭಾಗಚಂದಿರಧರನೆ ಹರನೆ 4 ಧರಣಿಯೊಳಗೆ ವಿಶೇಷತರ ಗೌಜದೊಳುವಾಸ ವರಋಷಿ ಸ್ಥಾಪನೇಶ ಸರಸಕೀರ್ತಿ ವಿಲಾಸ ಸ್ಮರಹರ ಸುರಾಧ್ಯಕ್ಷ ದುರಳ ದಾನವ ವಿನಾಶ ದುರಿತಹರ ನಿರ್ದೋಶ ಧರಣಿ ಸುರಜನರಕ್ಷ ಕರಿಚರ್ಮಧರಮಹೇಶ ಉರಗರಾಜ ವಿಭೂಷವರ ಗುರು ವಿರೂಪಾಕ್ಷ ಪುರಮಥನ ಗೌತಮೇಶ 5
--------------
ಕವಿ ಪರಮದೇವದಾಸರು
ಪಿಂಗಟ ಬೇಡವ್ವಾ ಪಿಂಗಟ ಸಂಗಟ ಬರುತಾದೆ ತಡಕೊಳ್ಳೆ ಪ ಕಂಗೆಡಿಸಿ ಬಲುಜವನ ದೂತರು ಭಂಗಬಡಿಪುದನು ನೀ ತಾಳೆ ಅ.ಪ ಸುಜನರ ಕಾಲ್ಕಸ ಮಾಡಿದಿ ಕುಜನರ ಮಾತಿಗೆ ಮರುಳಾದಿ ನಿಜವರಿದ್ಹೇಳಲು ಮೋರೆ ಮುರುಕಿಸಿದಿ ಅಜಾಂತಪರಿ ನೀ ಬಳಲುವಿ ನರಕದಿ 1 ನಾಶನ ಕಾಯಕ್ಕೆ ಮೋಹಿಸಿದಿ ಹೇಸದೆ ಪಾಪಕ್ಕೆ ಗುರಿಯಾದಿ ಈಶನ ದಾಸರನು ದೂಷಣ ಗೈದಿ ಸೀಸ ಕಾಸುವ ಯಮ ಯೋನಿದ್ವಾರದಿ 2 ಉನ್ನತಧಮ ತಿಳೀಲಿಲ್ಲ ಗನ್ನಗತಕವಯ ಕಳಕೊಂಡಿ ಇನ್ನೆಲ್ಲಿ ಕ್ಷೇಮ ನಿನಗ್ಹುಚ್ಚು ಇನ್ನರ ಶ್ರೀರಾಮ ಎನ್ನೂ 3
--------------
ರಾಮದಾಸರು
ಪಿಡಿ ಎನ್ನ ಕೈಯ್ಯ ರಂಗಯ್ಯ ಪ ಪಿಡಿ ಎನ್ನ ಕೈಯ ಪಾಲ್ಗಡಲ ಶಯನ ಮೋಹ ಮಡುವಿನೋಳ್ ಬಿದ್ದು ಬಾಯ್ಬಿಡುವೆ ಬೇಗದಿ ಅ ನೀರಜನಾಭಾ ನಂಬಿದೆ ನಿನ್ನ ನೀರಪ್ರದಾಭಾ ಕಾರುÀಣ್ಯ ನಿಧಿ ಲಕ್ಷ್ಮೀನಾರಸಿಂಹನ ಪರಿ ವಾರಸಹಿತ ಈ ಶರೀರದೊಳಡಗಿರ್ದು ಘೋರತರ ಸಂಸಾರ ಪಂಕದಿ ಚಾರು ವರಿವನ ದೂರ ನೋಡುವ ರೇ ರಮಾಪತೆ ಗಾರುಮಾಡದೆ ಚಾರುವಿಮಲ ಕರಾರವಿಂದದಿ 1 ಅನಿಮಿತ್ತ ಬಂಧೋ ನೀನೇ ಗತಿ ಗುಣ ಗಣಸಿಂಧೋ ವಿಧಿ ಭವಸಂಕ್ರಂ ದನ ಮುಖ್ಯ ವೇದ ಸನ್ಮುನಿ ಗಣಾರ್ಚಿತ ಪಾದಾ ಅನುಜ ತನುಜಾಪ್ತಾನುಗ ಜನನೀ ಸದನ ಸಂ ಹನÀನ ಮೊದಲಾದಿನಿತು ಸಾಕುವ ಘನತೆ ನಿನ್ನದು ಜನುಮ ಜನುಮದಿ 2 ಶ್ರೀ ಜಗನ್ನಾಥವಿಠ್ಠಲ ದ್ವಿಜರಾಜ ವರೂಥ ಓಜಕಾಮಿಕ ಕಲ್ಪ ಭೂಜ ಭಾಸ್ಕರ ಕೋಟಿ ತೇಜ ಮನ್ಮನದಿ ವಿರಾಜಿಸು ಪ್ರತಿದಿನ ಈ ಜಗತ್ರಯ ಭಂಜನನೆ ಬಹು ಸೋಜಿಗವಲಾ ನೈಜ ನಿಜನಿ ವ್ರ್ಯಾಜದಿಂದಲಿ ನೀ ಜಯಪ್ರದ ನೈಜ ಜನರಿಗೆ ಹೇ ಜಗತ್ಪತೇ 3
--------------
ಜಗನ್ನಾಥದಾಸರು
ಪಿಡಿದೆತ್ತೊ ಕೈಯ್ಯಾ ಕೃಷ್ಣಯ್ಯ ಪ ಪಿಡಿದೆತ್ತೊ ಕೈಯ್ಯಾ ಪಾಲ್ಗಡಲೊಡೆಯನೆ ಭವ ಕಡಲಿನೊಳಗೆ ಬಿದ್ದು ಬಾಯ್ಬಿಡುವೆ ಬೇಗದಿ ಬಂದು ಅ.ಪ ತಾವರೆನಾಭಾ ಕಾವದÀು | ಎನ್ನ ಜೀವನಲಾಭಾ ಶ್ರೀವ್ಯಾಸಮುನಿಗೊಲಿದವ | ನೆಂದರಿತು ಬಂದೆ ಶ್ರೀವೇಣುಗೋಪಾಲಕೃಷ್ಣ | ಗೋವಳರೊಡೆಯ ಭಾವ ಭಕುತಿಗಳೊಂದನರಿಯೆನು ಹೇವವಿಲ್ಲದೆ ದಿನವ ಕಳೆದೆನು ಸಾವಧಾನವ ಮಾಡಲಾಗದು ಶ್ರೀವರನೇ ನವವಿಧ ಭಕುತಿ ನೀಡುತ 1 ಅನುಮಾನವ್ಯಾಕೆ | ನೀನೆ ಗತಿ ಎನುವೆನು ಬಲ್ಲಿ ಅನುದಿನ ಸೇವಿಪೆ ಅನಘನೆ | ಎನ್ನಘ ಗಣನೆ ಮಾಡದೆ ಮುನ್ನ ಅನುವಾಗಿ ಪಾಲಿಸೊ ಮಾನವೇದ್ಯನೆ ಮನದಿ ನಿರ ತನುದಿನದಿ ನಿನ್ನಯ ಧ್ಯಾನವಿತ್ತು ಮನೋವಿಷಾದವನಳಿಯೆ ನಿನ್ನನು ಮರೆಯೆನುಪಕೃತಿ ಸತತ ಸ್ಮರಿಸುವೆ 2 ಶ್ರೀ ನರಹರಿಯೆ ಭಕುತಜನ | ವನಜದಿನಮಣಿಯೆ ಸಾನುರಾಗದಿ ಕೇಳ್ವೆ | ಹನುಮನ ಮತದಲ್ಲಿ ಅನುಚಾದ ಜ್ಞಾನವ | ಕನಸಿನಲಿ ಮನಸಿನಲಿ ಜನನಿ ಜನಕ ತನುಜೆ ವನಿತೆಯಾ ತನುವಿನಲಿ ನೆಲೆಸಿರುವ ಭ್ರಾಂತಿಯ ಹೀನಗೈಸಿ ಮನೋಭಿಲಾಷೆಯ ಭಾರ ನಿನ್ನದು 3
--------------
ಪ್ರದ್ಯುಮ್ನತೀರ್ಥರು
ಪುಟ್ಟ ಬಾಲನೆ ಮನೆ ಕಟ್ಟೀಲಾಡೋಕೆಟ್ಟ ಗೋಪರ ಮನೀಗ್ಹೋಗಬ್ಯಾಡಾ ಪ ನಿನ್ನ ಮಗನು ಮೆದ್ದು ಬೆಣ್ಣೆ ಪಾಲ್ ಮೊಸರನೆಉಣ್ಣೀಸುತಲೆ ಬೆಕ್ಕಿಗುಂಡನಮ್ಮಸಣ್ಣ ಮಕ್ಕಳ ಕೈಯ್ಯ ಕಣ್ಣಿನಿಂದಲೆ ಕಟ್ಟಿಓಡುತಲಿಹರಮ್ಮಾ ನೋಡೆಂಬರೋ 1 ಕಂದಯ್ಯಾ ಗೋಪೆಯರ ಮಂದಿರಕ್ಹೋಗದೆಇಂದು ಹುಟ್ಟಿದ ದಿನಾ ಎರಕೋ ಕೂಸಮಂದಿರದೊಳು ವಿಪ್ರವೃಂದವ ಪೂಜಿಸಿಛಂದಛಂದದ ವಸ್ತ ತಂದಿಡುವೆ 2 ಮಂದಿ ಮಕ್ಕಳು ನೋಡು ಛಂದದಿ ತಮ್ಮನೆಮುಂದಲೆ ಊರೊಳಗಾಡೆಂಬರೊನಿಂದ ಧಾಂಧಲೆ ಭಾಳ ಬಂದು ಹೇಳುವರಲ್ಲೋಇಂದೆಲ್ಲಿ ಪೋಗದಿರಿಂದಿರೇಶಾ 3
--------------
ಇಂದಿರೇಶರು
ಪುಟ್ಟಿದೆ ಭುವಿಯೊಳು ಬಹುದಿನ ಕಳೆದೆನೊಪುಟ್ಟಿಸ ಬೇಡವೆನ್ನ ಪ ಪಟ್ಟಾಭಿರಾಮನೆ ಪರಮಘಟ್ಯಾಗಿ ನಿನ್ನ ಪಾದಗಳ ನಂಬಿದೆ ದೇವ ಅ.ಪ ಎಂಭತ್ತು ನಾಲ್ಕು ಲಕ್ಷ ಯೋನಿಯಚೀಲಗಳಲಿ ಬಂದೆನೊ ಕುಂಭಿಣಿಯೊಳು ಪುಟ್ಟಿ ಬಹು ಪಾಪಗಳ ಮಾಡಿಕುಂಭೀಪಾಕದಿ ಬೆಂದೆನೊ ಅಖಿಳ ಸುರರೊಡೆಯನೆಅರ್ತಾರ್ತಿಹರನೆಂದು ಕೇಳಿ ಬಂದೆನು ನಾನು 1 ಜನಪಾಶ ಬದ್ಧನಾದೆಮೀನು ಮಾಂಸದಾಸೆಗ್ಹೋಗಿ ಸಿಕ್ಕಿದಂತೆಮೋಸ ಹೋದೆನೊ ಬರಿದೆಏಣವು ಕಿಂಕಿಣಿಧ್ವನಿಗೆ ಮರುಳಾದಂತೆಇಳೆಯೊಳು ಮಂಕಾದೆನೊಏನೆಂಬೆ ದಾಸರಿ ಕೋಡಗದಂದದಿಕುಣಿಯುವೆ ನಾನೆಲ್ಲ ಜನಗಳ ಮುಂದೆ 2 ಕಾಯ ಪೋಷಣೆಗಾಗಿ ಹೇಯಕರ್ಮಂಗಳಕಾಲ ಕಾಲದಿ ಮಾಡ್ದೆನೊಜಾಯಾದಿಗಳ ರಕ್ಷಣೆಮಾಡೆ ಅದರಿಂದಜಾಗರೂಕನಾದೆನೊನ್ಯಾಯರಹಿತನಾಗಿ ಗುರು ಹಿರಿಯರ ಪಾದಭಜನೆ ಮಾಡದೆ ಪೋದೆನೊಕಾಯಜನೈಯನೆ ಶ್ರೀಕೃಷ್ಣರಾಯನೆಕಾಯಬೇಕೆನ್ನಪರಾಧಗಳನು ದೇವ3
--------------
ವ್ಯಾಸರಾಯರು
ಪುರಂಜನೋಪಾಖ್ಯಾನ ಲಾವಣಿ ಗೆರಗಿ ಮಹೇಶ್ವರನಾ ಶಾರದೆಯ ಸರಸಿಜಸಂಭವನಾ | ಇಂದಿರೆ ಪರಮಭಕ್ತಿಯಲಿ ಪ್ರಾರ್ಥಿಸಿ ಸತ್ಕವಿ ಕರುಣಿಪುದು ಜ್ಞಾನ | ಚರಣಗಳಿಗೆ ಬಿನ್ನೈಸುವೆನಾ 1 ಯತಿಗಣಪ್ರಾಸೊಂದಾದರು ತಿಳಿಯದು ಮತಿಹೀನನು ನಾನು | ನಾನಾಚಮ- ತ್ಕøತಿಗಳರಿಯದವನು | ಆದರೀ ಕೃತಿಯಲಿ ತಪ್ಪೇನು | ಮತಿವಂತರಾಲಿಸುವುದು ನೀವಿದನು 2 ಒಂದರೊಳಗೆ ಎರಡಾಗಿ ಎರಡರೊಳು ಹೊಂದಿ ಮೂರ್ನಾಲ್ಕೈದಾಗಿ ಆರೇಳೆಂಟೊಂಬತ್ತುಗಳಾಗಿ | ಸಕಲದೊಳು ಹೊಂದಿರುವುದುತಾಗಿ ಕುಂದಿಲ್ಲದೆ ಇರುತಿರುವ ಮಹಾತ್ಮನ ರಂದವ ಚನ್ನಾಗಿ | ತಿಳಿದು ಸುಖ ತಂದವನೇಯೋಗಿ 3 ಮೊದಲು ಮಹತ್ ಸೃಷ್ಟಿಯಲಿ ಎಲ್ಲತ- ತ್ವದಲಿ ತೋರುತಿಹುದು ಬೇರೆಬೇರಾಗಿ ಕಾಣಿಸುವುದು ಅದುಭುತವಾಗಿಹ ಅನಾದಿ ಕರ್ಮತ್ರಿ- ವಿಧದಿ ಭಾದಿಸುವುದು | ಅದರೊಳು ಬಿ- ಡದೆ ತಾ ಮುತ್ತುವುದು ಎಂದಿಗು ನಿಜವತಿ ರಹಸ್ಯವಿದು 4 ಮೊಟ್ಟೆವೊಂದು ದಶಸಾವಿರವರುಷಗ ಳಿಟ್ಟು ಜಲದಿತಾನು | ಅದಕೆ ಕೈ- ಗೊಟ್ಟು ಎಬ್ಬಿಸಿದನು | ನಾನಾ ವಿಧ ವೆಷ್ಟಿ ಸಮಷ್ಟಿಗಳೆರಡೆಂದದರೊಳು ಗುಟ್ಟಂಗಡಿಸಿದನು | ಗುರಿಯಮಾ ಡಿಟ್ಟು ಚೇತನಗಳನು | ಅನೇಕವು ಪಟ್ಟಣ ರಚಿಸಿದನು 5 ಈ ಪಟ್ಟಣಕಾರ್ ಮಂದಿ ಇರುವರತಿ ಕಾಪಾಡುವರದರೊಳು ವ್ಯಾಪಾರಗಳನು | ಬಹುವಿಧಮಾಡುವ- ರಾಪುರ ಜನರುಗಳು | ಇವರುನಡೆ ಕೋಪಿಸೆ ಹಗಲಿರುಳು 6 ಎರಡು ಮಾರ್ಗದೊಳಿರುತಿಹರೆಲ್ಲರು ಹುರುಡಿಲ್ಲವುನೋಡೆ | ಗಜಿಬಿಜಿಯು ತರತರದಲಿಮಾಡೆ | ನಮಗಿದೆ ಸ್ಥಿರವೆನ್ನುತ ಕೂಡೆ | ಪರಿಪರಿ ಬಗೆಯಲಿ ಭೇದ ಪುಟ್ಟುವುದು ಕರೆಕರೆಯಂದುಡೆ | ವಳಗೆಕೆಲ ಬರುಹರುಷದಿ ನೋಡೆ | ಯುವಶೃಂ- ಗರುವು ಇದಕೆ ಈಡೆ 7 ಇದೆತನ್ನದೆನುತೋರ್ವಳು ಮಾನಿನಿ ಚದುರತನದಿ ಬಂದು | ಊರ ಮುಂದಿರುವ ವನದಿ ನಿಂದು | ಅವಳಿಗಿರು ವುದು ಜನ ಹನ್ನೊಂದು ಚದುರೆಯೈದುತಲೆ ಸರ್ಪವಾಡಿಸುತ ಜಾಣೆಯಿರುವಳಂದು | ತಾನೊಬ್ಬನ ಇಂದು | ಸುಖದೊಳಾ- ಳ್ಬೇಕುರಾಜ್ಯವೆಂದು 8 ಅರಸನೊಬ್ಬ ವಿಜ್ಞಾತನೆಂಬ ಭೂ- ಸುರನಸಹಿತನಾನಾ | ದೇಶಗಳ ತಿರುಗುತ ಉದ್ಯಾನ | ವನದಿಕಂ- ಡನು ಆತರುಣಿಯನ ಪರಮ ಮಿತ್ರನಹ ಬ್ರಾಹ್ಮಣನ ಮರೆತು ಹರುಷದಿ ಪೊಕ್ಕುವನ | ಸ್ಮರಶರಕೆ ತರಹರಿಸುತಲಿರೆ ಮನ | ಕೇಳಿದನು ನಗುತಲಿ ನಾರಿಯನ 9 ಯಾರೆ ಹುಡುಗಿ ನೀನ್ಯಾರೆ ನಿನ್ನ ಪೆಸ- ರೇನು ಪೇಳೆ ಹೆಣ್ಣೆ | ಮಾತನಾ- ಡೆಲೆ ತಾವರೆಗಣ್ಣೆ | ನಿನ್ನ ಮೈ- ಸುಲಿದ ಬಾಳೆಯ ಹಣ್ಣೆ ಯಾರದು ಈ ಜನ ಉರಗವೇನು ವನ- ವಾರದು ಶಶಿವದನೆ | ಈ ಪುರವ- ನಾಳುವನಾವವನೆ | ಒರ್ವಳಿ- ಲ್ಲಿರುವುದಕೇನ್ಹದನೆ 10 ಎನಲು ನಸುನಗುತವನಿತೆನುಡಿದಳೀ ಜನಗಳು ನನ್ನವರು | ಇಲ್ಲಿಕಾ- ಣುವ ಪುರ ನನ್ನೂರು | ಸರ್ಪನ- ನ್ನದು ಇದಕಿನ್ನಾರು | ಅರಸರಿಲ್ಲ ನಾನೊಬ್ಬಳಿರುವೆನೀ ವನದೊಳು ನೀನ್ಯಾರು | ನಿನ್ನಕಥೆ ವಿವರಿಸೆನಗೆ ತೋರು | ಯನ್ನ ಬಳಿ- ಗಿಷ್ಟವಿರಲುಸಾರು 11 ಎಲ್ಲಿ ನೋಡೆ ಸ್ಥಳವಿಲ್ಲವೆನಗೆ ನಿ- ನೆನ್ನ ಪುಷ್ಪಶರನು | ನೀನುಪೇ- ಪರಿ ವಲ್ಲಭನನು ಮಾಡಿಕೊ ಎನ್ನನು ಬಹು ಬಲ್ಲಿಯಳೆ ನೀನು | ನಿನ್ನಸರಿ ಚಲ್ವೆಯರಾರಿನ್ನು | ಇಬ್ಬ- ರಾಳ್ವೆಯೀವೂರನ್ನು 12 ಎನಲು ಹರುಷಗೊಂಡಾಕೆ ಸಮ್ಮತಿಸಿ ಜನವೆರಗಿತಂದು | ನುಡಿದಳಾಮೊಗದ- ಲಿನಗೆತಂದು | ನಿನ್ನಮೇಲ್ ಮನಸಾಯಿತುಯಿಂದು ನಿನ್ನನು ಮಾನವೇತಕಿಂದು | ಆಳು ಜನಸಹಿತ ಪುರವ ಮುಂದು ನೀನು ನಾನಿರುವೆವಾಗಿವಂದು 13 ಸರ್ವವನ್ನು ಭವದಿ ಆದರಿಸುತತತ್ಪುರ ಮಧ್ಯ | ದೊ ಳುಪ್ಪರಿಗೆಯೇರಿ ತ್ವರದಿ | ಸರ ಸಗಳನಾಡಿ | ಬಹುತರದಿ ಮುಳುಗಿ ಸಂಸಾರವೆಂಬಶರಧಿ 14 ಅನ್ನಪಾನಾಭರಣ ಕುಸುಮ ವಿನ್ನು ಗಂಧಧೂಪ | ತಾಂಬೂಲಗಳ ಮನ್ನಣೆಯಲಿ ಭೂಪ | ಪೊಂದಿದ ಸುಖ ವನು ನಾನಾರೂಪ | ನನ್ನದು ಎನ್ನುತಲಿ ಪ್ರತಾಪ | ಶಾಲಿತಾ- ರಾಜ್ಯವಾಳಿದನಾಗುತಭೂಪ 15 ದ್ವಾರಗಳೊಂಭತ್ತಾಪುರಕಿರುವುದು ಮೂರು ಪೂರ್ವದಲ್ಲಿ | ಮೇ- ಲೆರಡು ಕಿಟಕಿಗಳಿಹವಲ್ಲಿ | ಬಿಗಿಸಿ ಕಟ್ಟಿಹುದು ಕನ್ನಡಿಯಲಿ ತೋರುವುದುತ್ತರದಕ್ಷಿಣದೊಳೆರಡು ದ್ವಾರ ಪಶ್ಚಿಮದಲಿ ಕಾರಣವದರಲ್ಲಿ 16 ಮತ್ತದರೊಳಗಾರ್ಸುತ್ತು ಕೋಟೆ ಒಂ- ಬತ್ತು ಬಾಗಿಲ ಪುರದಿ | ಅನೇಕವು ಗೊತ್ತನಾವವಿಧವಿ | ಉತ್ತಮವಹಪುರದಿ | ಮುಖ್ಯವಾ- ಗಿರುವದೆರಡು ಬೀದಿ | ದೊರೆಯಮನೆ- ಯಿರುವುದು ವಿಸ್ತರದಿ17 ಇಂತರಮನೆಯಲಿ ದೊರೆ ಕಲಿಯಾಗುತ ಕಾಂತೆಯೊಡನೆ ಸೇರಿ | ಸದಾಸು- ಸ್ವಾಂತನಾಗಿಮೀರಿ | ಸೌಖ್ಯಹೊಂ- ದುತಲಾವೈಯ್ಯಾರಿ ನಿಂತರೆ ನಿಲುವನು ಕುಳಿತರೆ ಕೂಡುವ ಮಲಗಿದರೆ ನಾರಿ | ತಾನು ಮಲಗುವಯೇಕದಿ ಸೇರಿ | ಉಂಡ- ರುಣ್ಣುವನು ಅವಳನುಸಾರಿ 18 ಮನದಿಯೋಚಿಸದನೂ | ಈಗಲೆ ಮೃಗಯಾತ್ರೆಗೆತಾನೂ | ಸೊಗಸಿಂದ ಸೈನ್ಯವ ಕೂಡುತ ಪುಂ- ಚಪ್ರಸ್ಥವನವನು | ಪೊಕ್ಕು ಅ- ಲ್ಲಿರುವಮೃಗಗಳನ್ನು | ಹೊಡೆದು ಸಂ- ತೋಷದಿ ಸುಖಿಸುವೆನು 19 ಮೂರೆರಡು ಕುದುರೆಯೈದು ಮೇಲ್ ಮೂರು ಪತಾಕಿಗಳು | ಅ- ಚ್ಚೆರಡು ಎರಡು ಕೂಬರಗಳು | ಚಕ್ರ ವೆರಡುವರೂಥಗಳೇಳು ಆರಥಕೊಪ್ಪುವದೇ- ಕರಶ್ಮಿನಾಲ್ಕೊಂದು ವಿಕ್ರಮಗಳು | ಒಬ್ಬ ಸಾರಥಿ ಎರಡು ಗತಿಗಳು | ಬಿಗಿಸಿಹುದು ಕನಕಭೂಷಣಗಳು 20 ಪುರಂಜನ ಭೂ- ಕಾಂತಕರದಿ ಧನುವ | ಪಿಡಿದುಸು- ಸ್ವಾಮತದಿಂದಲನುವಾ | ಗಿಬಹ ಹನ್ನೊಂ- ದು ತನ್ನ ಜನನ | ಸಂತಸದಲಿ ಕೂ- ಡುತ ಹೊರಡುತ ತಾ ಪೊಕ್ಕನು ಕಾನನವಾ | ಶರಗಳಿಂ- ದ್ಹೊಡದು ಮೃಗನಿವಹವಾ | ಮೇರೆಯಿಲ್ಲ- ದೆ ತಟ್ಟುತ ಭುಜವಾ 21 ಇನಿತು ಬೇಟೆಯಾಡುವ ಕಾಲದಿ ತನ್ನ ಮನದಿ ನೆನೆದು ಸತಿಯಾ | ತಕ್ಷಣವೇ ಬಂದು ಸೇರಿ ಮನೆಯ | ಕಾಣದೆ ಹುಡುಕಿದನು ಯುವತಿಯ ಮಂಚದೊಳಿಹ ಸತಿಯ | ಕಂಡುಲಾ- ಲಿಸುತ ಚಮತ್ಕøತಿಯಾ | ನುಡಿಯಲುಪ- ಚರಿಸಿದನಾಕಾಂತೆಯ 22 ನೂರುವರುಷವೀರೀತಿಯವಳೊಡನೆ ನೂರುಹನ್ನೊಂದು ಮಕ್ಕಳನ್ನು | ಪಡೆದು ಸಂ- ಸಾರದಿ ಕಾಲವನು | ಯಾರೆ- ಮೀರಿ ಹೋದುದಿನ್ನು | ಮೊಮ್ಮಕ್ಕಳ ಪಡೆದನನೇಕರನು ದೇಶತುಂಬಿಸಿದ ತನ್ನ | ವರನು 23 ಉತ್ತರ ದಕ್ಷಿಣ ಪಾಂಚಾಲಗಳಾ ಳುತ್ತಲಿವನು ತನ್ನ | ಸುತರಬೆರೆ- ಯುತ್ತಸದಾ ಚಿನ್ನ | ಬೆಳ್ಳಿ ನವ- ರತ್ನರಾಶಿಗಳನಾ | ಮತ್ತೆ ಮತ್ತೆ ಕೂಡಿ- ಸುತೈಶ್ವರ್ಯದಿ ಮತ್ತನಾ | ಗುತಲನ್ಯಾ ಚಿಂತೆಯಿಲ್ಲದೆ ನಾ | ಬಲು ಪುಣ್ಯವಂತನೆ | ನ್ನುತ್ತತಿಳಿದಿರುವನಾ 24 ಚಂಡವೇಗವೆಂಬುವರಾ ತಮ್ಮತಮ್ಮ ಹೆಂಡಿರುಗಳು ತಾವು | ಸೇರಿಮು- ನ್ನೂರರವತ್ತು ಜನವು | ಗಂಧರ್ವರು ಬಂಡೆಬ್ಬಿಸಿ ಪುರವು | ದಂಡು ಮುಂದಾಗೆ ರಿಪುಬಲವು | ಕ್ಷೀಣಗತಿ ಹೊಂದುತಲಿರೆ ಪುರವು 25 ಸ್ತ್ರೀಜಿತನಾಗಿಹಕಾರಣದಲಿಯಾ ರಾಜಪುರಂಜನಗೆ | ಯತ್ನವಿ- ಲ್ಲದೆ ತನ್ನಯಪುರಿಗೆ | ಕೇಡುಬಂ- ದರು ತೋರದು ಕೊನೆಗೆ | ಶೋಕದಿ ಮನದೊಳಗೆ | ಮಿ ಡುಕುತಲಿರಲಾನೃಪತಿಮೇಗೆ | ಮತ್ತು ಶತ್ರುಗಳುನೆರೆಯೆ ಹೀಗೆ 26 ಯವನೇಶ್ವರನೊಬ್ಬನುಭಯಪ್ರಜ್ವಾ ರಾದಿ ಸೈನಿಕರನು | ಕಾಲಕನ್ಯಾಖ್ಯ ಯುವತಿಯನ್ನು | ಕರೆದುಕೊಂ- ಡೀಪುರವ ಸೇರಿದನು | ಬವರದಿ ಗೆದ್ದನು ಭವಿಸಿದನಾ ಕನ್ಯಾಮಣಿಪಟ್ಣವನು | ಭೋಗಿಸಿದ- ಳಾಪ್ರಜ್ವಾರನನು | ಸುಡಲುಪುರಿ ಕಂಡು ಪುರಂಜನನು 27 ಕಾಲಕನ್ಯೆ ತಾ ಲೀಲೆಯಿಂದಲಿ ನೃ- ಪಾಲನ ಹತ್ತಿಗೆಯಾ | ಪಿಡಿಯೆ ಹಾ- ಹಾಯೆನಲಾರಾಯಾ | ಅಬಲತೋ- ರದು ಮುಂದೆ ಉಪಾಯ | ಬಾಲಕರನು ಪತ್ನಿಯ | ನುಕೂಗಿಬಿಡು-
--------------
ಗುರುರಾಮವಿಠಲ
ಪುರಂದರ ದಾಸರಾಯರ ಪೋಷಿಸುವ ಸಂತೋಷದಿಂದಲಿ ಪ ಪುರಂದರಗಡಾದ ಒಳಗೆ ಹಿರಿಯ ಸಾವುಕಾರನೆನಸಿ ಪರಿಪರಿಯ ಸೌಖ್ಯಗಳ ಸುರಿಸುತ್ತ ಇರುತಿರಲು ನರಹರಿ ತ್ವರಿತದಿಂ ಬ್ರಾಹ್ಮಣನಾಗುತ್ತ ಪೋಗುತ್ತ ಯಜಮಾನ ಕಂಡು ಜರಿದು ಬ್ರಾಹ್ಮಣನ್ಹೊರಗೆ ಹಾಕಲು ಮರುದಿವಸ ಮತ್ಹೋಗಿ ನಿಂತ 1 ಭಾರಿಭಾರಿಗೆ ಸಾವುಕಾರನ ಮೋರೆಗ್ಹೊತ್ತಿ ಮೇರೆಯಿಲ್ಲದೆ ಆರು ತಿಂಗಳು ಬೆನ್ನು ಬೀಳುತ್ತ ನಾಯಕರು ಈತನ ಆರು ಅಟ್ಯಾರೆಂದು ಬೈಯುತ್ತ ಬೇಸತ್ತು ಎರಡು ಹೇರು ರೊಕ್ಕಾ ಮುಂದೆ ಸುರಿಯುತ್ತ ಅದರೊಳಗೊಂದು ಡ್ಡಾರಿಸಿಕೋ ಎಂದು ಹೇಳಲು ನಾರಾಯಣ ಬಿಟ್ಹೋದ ನಗುತ2 ಹಿತ್ತಲಾ ಬಾಗಿಲಿಗೆ ಹೋಗಿ ಮತ್ತೆ ಆತನ ಮಡದಿಗಾಗಿ ವಿತ್ತ ತಾ ಯೆನುತ ತನ ಮಗನ ಮುಂಜ್ಯೆಂ ದೆತ್ತಿ ಕರದಿಂ ಬಾಯಿ ತೆರೆಯುತ್ತ ಆ ಪ್ರಾಣಿ ನುಡಿದಳು ಎತ್ತಣ ದ್ರವ್ಯವು ತನಗೆನುತ ನಿನ್ನ ಮೂಗಿನ ಮುತ್ತಿನ ಮೂಗುತಿಯ ಕೊಡು ಎನೆ ಉತ್ತುಮಳು ತೆಗೆದಿತ್ತಳಾಕ್ಷಣ 3 ಆಕಿ ಗಂಡನ ಕಣ್ಣೆದುರಿಗೆ ಹಾಕಿದನು ತಾ ಪಾಕಿ ಕೊಡೆಯೆನುತ ಅದು ಕಂಡು ಇದು ನ ಮ್ಮಾಕಿದೆಂದು ಈತ ನುಡಿಯುತ್ತ ಅನ್ಯರದು ಯಿಂಥಾ ದ್ಯಾಕೆ ಯಿರಬಾರದೆನ್ನುತ್ತಾ ಬೆಲೆ ಹೇಳು ಎನಲು ಎಂದಾಕೆ ಹೋದನು ತಿರೂಗಿ ಬಾರದೆ 4 ತಿರುಗಿ ಬ್ರಾಹ್ಮಣ ಬಾರದಿರಲು ಕರೆದು ತನ್ನ ಹೆಂಡತಿಯ ಬರಿಯ ನಾಶಿಕವನ್ನೆ ಕಂಡುನು ಮೂಗುತಿಯ ಎಲ್ಲೆನೆ ಮುರಿದಿಹುದು ಯೆಂದಾಕೆ ಹೇಳಲು ಒಳಗ್ಹೋಗಿ ನೀ ತಾರದಿರೆ ಅರೆವೆ ನಿನ್ನಯ ಜೀವವೆಂದನು ವಿಷಕೊಂಬೆನೆಂದು ಕರದಿ ಬಟ್ಟಲು ಧರಿಸಲಾಕ್ಷಣ ತ್ವರಿತದಲಿ ಹರಿ ಅದರೊಳಾಕಿದ 5 ಪುರುಷನಾ ಕೈಕೊಳಗೆಯಿಡಲು ತರಿಸಿ ತನ್ನಲ್ಲಿದ್ದ ಪೆಟ್ಟಿಗೆಯಾ ಅದು ಕಾಣದಿರಲು ಬೆರಗಾಗಿ ನೋಡಿದನು ಮಡದಿಯ ನಿಜ ಪೇಳುಯೆನಲು ಅರಸಿ ಪೇಳ್ದಳು ಕೊಟ್ಟ ಸುದ್ದಿಯಾ ಅಭಿಮಾನಕಂಜಿ ಅರದು ವಿಷವನು ಕುಡಿವೆನಲು ಸಿರಿರಮಣಾ ಕೊಟ್ಟ ಖರಿಯಾ 6 ಬಂದಿದ್ದ ಪರಿಪಕ್ವವೆನಗೆ ನ್ನಾವ ಕಾಲಕೆ ಆಗಬೇಕೆಂದ ವೈರಾಗ್ಯಭಾವದಿ ಜೀವಿಸಿಕೊಂಡಿರುವುದೇ ಛಂದ ಹೀಗೆನುತ ಮನೆ ಧನ ಕೋವಿದರ ಕರೆದಿತ್ತ ಹರುಷದಿ ಕಾವನಯ್ಯನ ದಾಸನಾದ 7 ಲಕ್ಷ್ಮಿಪತಿಯ ಪಾದದಲ್ಲಿ ಲಕ್ಷ್ಯವಿಟ್ಟು ವ್ಯಾಸರಾಯರ ಶಿಕ್ಷೆಯಿಂದಲಿ ಅಂಕಿತವ ಕೊಳುತ ತಿರಿಪಾದ ಐದು ಲಕ್ಷಪದ ಸುಳಾದಿ ಪೇಳುತ್ತ ಪ್ರತಿದಿವಸದಲ್ಲು ಅಪರೋಕ್ಷ ಪುಟ್ಟಲು ಮೋಕ್ಷಸ್ಥಾನಕ್ಕೆ ಕರೆದೊಯ್ದು ಅ ಧೋಕ್ಷಜನು ಸಂರಕ್ಷಿಸಿದ 8 ಘೊರ ನರಕದೊಳಗೆ ಬಿದ್ದಾ ಪಾರ ಜನರು ಚೀರುತಿರಲು ದ್ಧಾರ ಮಾಡಿದ ನಾರದಾರಿವರು ಅವ ತಾರ ಮಾಡಿ ಧಾರುಣಿಯಲಿ ಮತ್ತೆ ಬಂದರು ಸರುವೋತ್ತಮ ಹರಿ ನಾರಾಯಣನೆ ಎಂದು ಸಾರಿದರು ಹೀಗೆಂದು ತಿಳಿಯಲು ಮಾರ ಜನಕ ವಿಜಯವಿಠ್ಠಲ ಆರಿಗಾದರು ಒಲಿವ ಕಾಣಿರೊ 9
--------------
ವಿಜಯದಾಸ
ಪುರಂದರದಾಸರು ಎಂತು ಪೊಗಳಲಿ ನಾನು ಪ ಕಂತುಪಿತನೇಕಾಂತ ಭಕ್ತನ ಪಂಥವನು ಪದ ಪಂಕ್ತಿಯಲಿ ತುಂಬಿಟ್ಟು ಸಲಹಿದ ದಾಸವರ್ಯರ ಅ.ಪ. ನಿತ್ಯ ನೆನೆಯುತ್ತ ಪಂಡಿತೋತ್ತಮರೊಡನೆ ಸುಖಿಸುತ್ತ ಕಂಡು ಹರಿಯನು ಮುಂದೆ ಕುಣಿಯುತ್ತ ಕುಂಡಲಿಗೆ ನಿಜ ಭೂಷಣವು ಎನಿಸುತ್ತ ಭಂಡಜನರಾ ಪುಂಡುಮಾರ್ಗವ ಕಂಡಕಂಡೆಡೆ ಖಂಡ್ರಿಸುತ ಬ್ರಹ್ಮಾಂಡ ದೊಡೆಯನ ಭಕ್ತಿ ಬಿತ್ತುತ ಹಿಂಡಿ ಮತಿಮತ ರಸವ ಕುಡಿಸಿದ ದಾಸವರ್ಯರ 1 ಮೊದಲು ಗಾಯಕ ದೇವಸಭೆಯಲ್ಲಿ ಮುದದಿ ಕಾಮುಕ ಚೇಷ್ಟೆ ನಡೆಸುತಲಿ ಪದವಿಯಿಂ ಚ್ಯುತನಾಗಿ ದಾಸಿಯಲಿ ಉದಿಸಿ ಬಂದು ಸಾಧು ಸಂಗದಲಿ ಬದಿಗೆ ತಳ್ಳುತ ಭವದ ಕೋಟಲೆ ಮುದದಿ ಜಪಿಸುತ ವಾಸುದೇವನ ಪದವಿ ಸಾಧಿಸಿ ದೇವ ಋಷಿ ತಾ ಪದುಮನಾಭನ ನೆನೆದು ನರಕವ ಬ ರಿದು ಮಾಡ್ಡ ಮಹಾನುಭಾವನ 2 ಕಾಸಿನಾಶಯವು ಮೋಸವೆಂತೆಂದು ಹೇಸಿವಿಷಯದಿ ಲೇಸು ಸಿಗದೆಂದು ಶ್ರೀಶ ಸಿಗುವನು ದಾಸಗೆಂತೆಂದು ಆಶೆಯಿಂದಲಿ ಸಾರಬೇಕೆಂದು ಓಸು ಸಂಪದ ನೂಕಿ ಭರದಿಂ ವ್ಯಾಸರಾಯರ ಶಿಷ್ಯನೆನಿಸುತ ವಾಸುದೇವನ ದಾಸನಾಗುತ ದೋಷಜ್ಞಾನವ ನಾಶಮಾಡಿದ ದೇಶ ತಿರುಗಿದ ದಾಸವರ್ಯರ 3 ಭಕ್ತಿಯಿಲ್ಲದ ಗಾನ ತಾನಿನ್ನು ಕತ್ತೆಕೂಗನುಮಾನವಿಲ್ಲೆಂದು ನಿತ್ಯದೇವನ ಗಾನ ಗೈಯಲು ಗಾತ್ರವಿದು ನಿಜವೀಣೆಯೆಂತೆಂದು ಸಪ್ತಸ್ವರಗಳ ಕ್ಲಪ್ತಮರ್ಮಗ ಳೆತ್ತಿ ತೋರುತ ಶ್ರೇಷ್ಠತರ ಸಂಗೀತ ಸೂತ್ರ ಸಂಮತ ನೀತಿ ನುಡಿದಿಹ ದಾಸವರ್ಯರ 4 ಪೊಂದಿ ಪುಸ್ತಕ ದೀಚೆ ಬರದೆಂದು ಛಂದ ಮರ್ಮವ ತಂದಿಡುವೆ ನಮ್ಮೀ ಅಂದ ಕನ್ನಡ ದೊಳಗೆ ಎಂತೆಂದು ಕಂದ ವೃತ್ತ ಸುಳಾದಿ ಪದಗಳ ಛಂದ ಭೂಷಣವೃಂದ ನೀಡುತ ನಂದದಿಂ ಕರ್ಣಾಟಮಾತೆಯ ಮುಂದೆ ತಾ ನಲಿವಂತೆ ಮಾಡಿದ ದಾಸವರ್ಯರ 5 ನಾರಿ ಮನೆ ಪರಿವಾರ ಹರಿಗೆಂದು ಸಾರವನ್ನೆ ಮುರಾರಿ ಮನೆಯೆಂದು ಚಾರು ಶ್ರುತಿಗತಸಾರ ನಡತೆಯಲಿ ಸೂರಿಯಾದವ ತೊರಬೇಕೆಂದು ನೀರಜಾಕ್ಷನ ಧೀರ ದೂತನ ಸಾರ ಮನವನು ಸಾರಿ ಸಾರುತ ದೂರ ಒಡಿಸಿ ಮೂರು ಮತಗಳ ನೇರ ಸುಖಪಥ ತೋರಿಸಿದ ಮಹರಾಯ ದಾಸರ 6 ಕರ್ಮಕೋಟಲೆಗಿಲ್ಲ ಕೊನೆಯೆಂದು ಮರ್ಮತಿಳಿಯುತ ಬಿಂಬಹೃದಯಗನ ನಿರ್ಮಮತೆಯಿಂದೆಸಗಿ ಕರ್ಮಗಳ ಕರ್ಮಪತಿಗೊಪ್ಪಿಸುತ ಸರ್ವಸ್ವ ಭರ್ಮಗರ್ಭನ ಭಕ್ತಿ ಭಾಗ್ಯದಿ ಪೇರ್ಮೆಯಿಂ ಹರಿದಾಸನೆಸಿಸುತ ಶರ್ಮ ಶಾಶ್ವತವಿತ್ತು ಸಲಹುವ ವರ್ಮ ನೀಡಿದ ವಿಶ್ವಬಾಂಧವ 7 ಇಂದಿರೇಶನು ಮುಂದೆ ಕುಣಿಯುತಿರೆ ಕುಂದುಂಟೆ ಮಹಿಮಾತಿಶಯಗಳಿಗೆ ತಂದೆ ಕೌತಕ ವೃಂದ ಮಳೆಗರೆದು ಕಂದನನು ಪೊರೆದಂದವೇನೆಂಬೆ ಬಂದು ಸತಿಸಹ ಮಂದಿರಕೆ ಗೋ ವಿಂದ ಪಾಕವಗೈದು ಬ್ರಾಹ್ಮಣ ವೃಂದಕಿಕ್ಕುತ ದಾಸರಿಗೆ ಮುದ ಮಾಧವ ಭಾಗ್ಯಕೆಣೆಯುಂಟೆ 8 ದೀನ ಹೊಲೆಯಗೆ ಪ್ರಾಣ ಬರಿಸಿದನು ಏನು ಒಲ್ಲದೆ ಹರಿಯ ಯಜಿಸಿದನು ಜ್ಞಾನ ಭಾಗ್ಯದಿ ಮುಳುಗಿ ತೇಲಿದನು ದೀನ ಜನರುದ್ಧಾರ ಮಾಡಿದನು ದಾನಿ ಜಯಮುನಿ ವಾಯು ಹೃದಯಗ ಚಿನ್ಮಯ ಶ್ರೀ ಕೃಷ್ಣವಿಠಲನ ಗಾನ ಸುಧೆಯನು ಬೀರಿಸುತ ವಿ ಜ್ಞಾನವಿತ್ತ ಮಹೋಪಕಾರಿ ವಿಶೇಷ ಮಹಿಮನ 9
--------------
ಕೃಷ್ಣವಿಠಲದಾಸರು
ಪುರಂದರದಾಸರು ಜಿಪುಣರೈ ನೀವೆಂದು ಹೇಳಿದುದು ಸುಳ್ಳಲ್ಲ ಪ ಪುರಂದರ ದಾಸಮಲ್ಲ ಅ.ಪ. ಘನತರದ ವೈರಾಗ್ಯ ತಳೆದು ದ್ವಿಜರಿಗೆಲ್ಲಧನಕನಕ ಸಂಪತ್ತು ದಾನ ಮಾಡಿದರೆಲ್ಲವನಜನಾಭನ ಸ್ತುತಿಗೆ ಶಬ್ದ ಸಂಪತ್ತೆಲ್ಲಒಸೆದು ನೀವೇ ಬಳಸಿ ನನಗೇನು ಕೊಡಲಿಲ್ಲ 1 ಖಂಜೂತನದ ಕಥೆಯನು ಹೇಳಲಾಸಲ್ಲಕಂಜನಾಭನ ಮಹಿಮೆ ಬಣ್ಣಿಸುವ ನೆವದಲ್ಲಿರಂಜನೆಯ ಶಬ್ದಗಳ ಸವಿದುಂಡೆಯಲ್ಲಿಎಂಜಲವನುಳಿದೆನಗೆ ಕಿಂಚಿತ್ತು ಬಿಡಲಿಲ್ಲ 2 ಕೃಪೆಮಾಡಿ ಕ್ಷಮಿಸುವುದು ವಿಪುಲ ಭಕ್ತಿಗಳಿಂದಜಪತಪದಿ ಕನ್ನಡದ ನಿಮ್ಮ ಭಾರತಮಲ್ಲ ಕೃಪಣವತ್ಸಲ ಗದುಗು ವೀರನಾರಾಯಣನ ಸಫಿಲ ಜ್ಞಾನವ ಗಳಿಸಿ ನಮಗೇನು ಕೊಡಲಿಲ್ಲ 3
--------------
ವೀರನಾರಾಯಣ
ಪುರಹರ ಗೌರಿವರ ಕರುಣಾಕರ ಕರುಣಿಸೆನ್ನ ಪ ಫಾಲನೇತ್ರ ಪಾಲಯ ಜಗ ನೀಲಕಂಠ ಮೇಲುಮಂದಿರ ಶೂಲಪಾಣಿ ಕಾಲಮರ್ದನ ಬಾಲನೆಂದು ಪಾಲಿಸೆನ್ನ 1 ದುರಿತರಹಿತ ಕರುಣಭರಿತ ಪರಮಚರಿತ ಸ್ಮರನ ಭಂಜಿತ ಉರಗಭೂಷ ವರಮಹೇಶ ಹರಿಯ ಪ್ರೇಮ ದೊರಕಿಸೆನಗೆ 2 ಒಡೆಯ ಶ್ರೀರಾಮನಡಿಯ ಧ್ಯಾನ ಪಿಡಿದು ಬಿಡದ ದೃಢಭಕುತಿ ಗಡನೆಕೊಡೆಲೊ ಮೃಡನೆಯಿದನು ದೃಢದಿ ಬೇಡ್ವೆ ಜಡಧಿಧರನೆ 3
--------------
ರಾಮದಾಸರು
ಪುರಾಣ ಅಕ್ಕರವುಳ್ಳ ನಮ್ಮಕ್ಕ ರುಕ್ಮಿಣಿ ಕೇಳೆ ರಕ್ಕಸಾಂತಕ ಕೃಷ್ಣ ಮತ್ತೆಲ್ಲೆ ಪೋದ 1 ಸತ್ಯಭಾಮೆಯೆ ನಿನ್ನ ಚಿತ್ತದ್ವಲ್ಲಭ ನೀರೊಳು ಪೊಕ್ಕು ವೇದವ ತಂದು ಪುತ್ರಗಿಡಹೋದ 2 ಪನ್ನಂಗಶಯನ ಲಾವಣ್ಯರೂಪನು ಎನ್ನ ಕಣ್ಣಿಗೆ ಮರೆಯಾಗಿ ಇನ್ನೆಲ್ಲೆ ಹೋದ 3 ಪತಿ ಶರಧಿಯೊಳು ಬೆನ್ನಲಿ ಗಿರಿಯೆತ್ತಿ ತನ್ನ ಭಕ್ತರಿಗೆ ಸುಧೆಯ ನೀಡಲು ಹೋದ 4 ವನಜನಾಭನ ಕಾಣದೆ ಘನಕ್ಲೇಶದಿಂದೀಗ ಮನದ ವಿರಹತಾಪವನು ಸೈರಿಸಲ್ಹ್ಯಾಗೆ 5 ಅವನಿ ಕದ್ದವನ ಸಂಹರಿಸಿ ಕೋರೆಗಳಿಂದ ಭುವನಾಧಿಪತಿಯು ಬರುವನೆ ಸತ್ಯಭಾಮೆ 6 ಹಂಬಲ ಬಿಡದರವಿಂದನೇತ್ರನ ಬಿಟ್ಟು ಸುಂದರಾಂಗನ ಕರೆತಂದು ತೋರೆನಗೆ 7 ಕಂಬದಿಂದೊಡೆದು ಕಂದನ ತಂದೀ(ದೆಯ?) ಕರುಳ್ಹಾರ ಕಂದರದಿ ಧರಿಸಿ ತಾ ಬಂದನು ಭಾಮೆ 8 ಸೃಷ್ಟಿಕರ್ತನುಯೆನ್ನ ದಿ(ದೃ?) ಷ್ಟಿಂದೆ ನೋಡದೆ ಎಷ್ಟು ಹೇಳಲೆ ಪ್ರಾಣ ಬಿಟ್ಟು ಹೋಗುವುದೆ 9 ಪುಟ್ಟ ಬ್ರಾಹ್ಮಣನಾಗಿ ದಿಟ್ಟತನದಲಿ ದಾನವ ಕೊಟ್ಟ ಬಲಿ ಪಾತಾಳಕೆ ಮೆಟ್ಟಿ ಬಾಹುವನೆ 10 ತ್ವರಿತದಿಂದಲಿ ಯಾದವರರಸು ಶ್ರೀಕಾಂತನ ಸರಸವಾಡಲೀಗ ಕರೆಸಿ ತೋರೆನಗೆ 11 ಅರಸರ ಕುಲವ ಸಂಹರಿಸಿ ಕ್ಷತ್ರೇರನೆಲ್ಲ ನಿರುತ ನಿಷ್ಠೆಯಲಿ ತಪ ಚರಿಸಿ ಬಾಹುವನೆ 12 ಹೇಮಪುತ್ಥಳಿಗೊಂಬೆ ಸಾಮಜವರದನ ಆ ಮಾಸುರರೊಡೆಯ ಮೇಘಶ್ಯಾಮನ ತೋರೆ13 ಮಾಡಿ ಯುದ್ಧವ ಲಂಕಾ ನೋಡಿ ದಶಶಿರವ ಚೆಂಡಾಡಿ ಜಾನಕಿಯ ಒಡಗೂಡಿ ಬಾಹುವನೆ 14 ವಾಸುದೇವನ ಕಾಣದೊಂದರಘಳಿಗೀಗ ನಾಲ್ಕು ಯುಗವಾಗಿ ತೋರುವುದೆನ್ನ ಮನಕೆ 15 ಶ್ರೀಶ ತಾ ಸೋಳಸಾಸಿರ ಮಂದಿ ಸತಿಯೇರ ವಿ- ಲಾಸದಿಂದಿದ್ದನೀಗಿಂದೀವರಾಕ್ಷ 16 ಸಿರಿವೊಬ್ಬಳಲ್ಲದೆ ಪರನಾರಿಯರ ಕಣ್ಣು ತೆರೆದು ನೋಡುವ ತಾ ಭೂರಮಣನೆಲ್ಲಿಹನೆ 17 ಖರೆಯವೀಮಾತು ತ್ರಿಪುರದ ಸತಿಯರ ಲಜ್ಜೆ ತೊರೆದು ಕೂಡಿದನೆಂಬೋದು ಪರಮ ಮೋಹಕವೆ18 ನಾಡೊಳಗಧಿಕಶ್ವಾರೂಢ ರುಕ್ಮಿಣೀಕಾಂತನ ನೋಡದÉನಜೀವ ನಿಲ್ಲದು ನೀರಜಾಕ್ಷಿ 19 ಬೇಡಿಕೊಂಬುವೆನೆಂ(ಯೆ?)ದು ಭೀಮೇಶಕೃಷ್ಣನ ಕೂಡಿಸುವೆನೆ ಕರೆತಂದು ಕಮಲಾಕ್ಷಿ 20
--------------
ಹರಪನಹಳ್ಳಿಭೀಮವ್ವ